ವಿಸ್ತಾರ Explainer: Adani Group: ಅದಾನಿ ಗ್ರೂಪ್‌ ಕಂಪನಿಗಳ ಭವಿಷ್ಯವೇನು? ಷೇರು ಮಾರುಕಟ್ಟೆ ಚೇತರಿಸುತ್ತಿದೆಯೇ? - Vistara News

EXPLAINER

ವಿಸ್ತಾರ Explainer: Adani Group: ಅದಾನಿ ಗ್ರೂಪ್‌ ಕಂಪನಿಗಳ ಭವಿಷ್ಯವೇನು? ಷೇರು ಮಾರುಕಟ್ಟೆ ಚೇತರಿಸುತ್ತಿದೆಯೇ?

ಅದಾನಿ ಗ್ರೂಪ್‌ ಷೇರುಗಳ ಭಾರಿ ಕುಸಿತದ ಬಳಿಕ ಪ್ರತಿ ದಿನ ಹೊಸ ತಿರುವುಗಳನ್ನು ಪಡೆಯುತ್ತಿದೆ. ಹೂಡಿಕೆದಾರರ ವಿಶ್ವಾಸ ಗಳಿಸಲು ಕಂಪನಿ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. (Adani Group) ಅದಾನಿ ಬಿಕ್ಕಟ್ಟಿನ ಹೊರತಾಗಿಯೂ ಭಾರತೀಯ ಷೇರು ಪೇಟೆ ಗಣನೀಯ ಚೇತರಿಕೆಯ ವಿಶ್ವಾಸದಲ್ಲಿದೆ. ಇಲ್ಲಿದೆ ವಿವರ.

VISTARANEWS.COM


on

Adani Stocks surge Adani Group shares surge market value rises to Rs 10 lakh crore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅದಾನಿ ಸಮೂಹದ ಷೇರುಗಳ ಪತನ ಭಾರತೀಯ ಕಂಪನಿಗಳ ಮೇಲಿನ ದಾಳಿಯೇ? ಇದರಿಂದ ಭಾರತದ ಆರ್ಥಿಕ ಬೆಳವಣಿಗೆ ಮತ್ತು ಸ್ಥಿರತೆಗೆ ಹೊಡೆತ ಉಂಟಾಗಲಿದೆಯಾ?

ಅದಾನಿ ಗ್ರೂಪ್‌ ಕಂಪನಿಗಳ ಷೇರುಗಳ ಬಿಕ್ಕಟ್ಟು ಅಥವಾ ಎಫ್‌ಪಿಒ ಹಿಂತೆಗೆತದ ಪರಿಣಾಮ ಭಾರತದ ಆರ್ಥಿಕತೆಯ ಮೇಲೆ ಯಾವುದೇ ನಕಾರಾತ್ಮಕ ಪ್ರಭಾವ ಆಗದು ಎಂದು ಸ್ವತಃ ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದಾರೆ. ಬಾಂಬೆ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ೫,೦೦೦ಕ್ಕೂ ಹೆಚ್ಚು ಷೇರುಗಳು ನೊಂದಣಿಯಾಗಿವೆ. ಅವುಗಳಲ್ಲಿ 3 ಸಾವಿರಕ್ಕೂ ಹೆಚ್ಚು ಷೇರುಗಳು ನಿತ್ಯ ಸಕ್ರಿಯವಾಗಿ ವಹಿವಾಟು ನಡೆಸುತ್ತಿವೆ. ಅದಾನಿ ಷೇರುಗಳ ಬಿಕ್ಕಟ್ಟಿನ ಹೊರತಾಗಿಯೂ ಭಾರತೀಯ ಷೇರು ಮಾರುಕಟ್ಟೆ ಗಣನೀಯವಾಗಿ ಚೇತರಿಸುವ ವಿಶ್ವಾಸದಲ್ಲಿದೆ ಎನ್ನುತ್ತಾರೆ ವಿಶ್ಲೇಷಕರು.

ಅದಾನಿ ಗ್ರೂಪ್‌ ವಿರುದ್ಧ ಹಿಂಡೆನ್‌ ಬರ್ಗ್‌ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಸೆಬಿ, ಸುಪ್ರೀಂಕೋರ್ಟ್‌ ಮತ್ತು ಸರ್ಕಾರದ ಮಟ್ಟದಲ್ಲಿ ಇತ್ತೀಚಿನ ಬೆಳವಣಿಗೆಗಳೇನು? ಏನಾಗಬಹುದು?

ಸೆಬಿ ಸುಪ್ರೀಂಕೋರ್ಟ್‌ಗೆ ತಿಳಿಸಿರುವ ಮಾಹಿತಿಯ ಪ್ರಕಾರ ಹಿಂಡೆನ್‌ ಬರ್ಗ್‌ ವಿರುದ್ಧದ ಆರೋಪಗಳು ಹಾಗೂ ಅದಾನಿ ಕಂಪನಿಗಳ ಷೇರುಗಳ ದಿಢೀರ್‌ ಕುಸಿತದ ಬಗ್ಗೆ ತನಿಖೆ ಆರಂಭಿಸಿದೆ. ಆದರೆ ತನಿಖೆ ಪ್ರಾಥಮಿಕ ಹಂತದಲ್ಲಿ ಇರುವುದರಿಂದ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂದು ತಿಳಿಸಿದೆ.

ಹಿಂಡೆನ್‌ ಬರ್ಗ್‌ ಉದ್ದೇಶವೇನು? ಅದಾನಿ ಗ್ರೂಪ್‌ ವಿರುದ್ಧ ಹಿಂಡೆನ್‌ ಬರ್ಗ್‌ ಮಾಡಿರುವ ಪ್ರಮುಖ ಆರೋಪವೇನು? ಭಾರತದ ಹಿತಾಸಕ್ತಿಯೇ ಅಥವಾ ಬೇರೆ ಏನಾದರೂ ವ್ಯವಹಾರದ ಉದ್ದೇಶ ಇತ್ತೇ?

ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಜನವರಿ 24ರಂದು ಅದಾನಿ ಗ್ರೂಪ್‌ ವಿರುದ್ಧ ಒಟ್ಟು 88 ಪ್ರಶ್ನೆಗಳನ್ನು ಮಾಡಿತ್ತು. ಇದಕ್ಕೆ ಅದಾನಿ ಗ್ರೂಪ್‌ ಕೆಲ ದಿನಗಳ ಬಳಿಕ 413 ಪುಟಗಳ ಉತ್ತರವನ್ನು ಕೊಟ್ಟಿತ್ತು. ಆದರೆ ಅದಾನಿ ಗ್ರೂಪ್‌ ತನ್ನ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟಿಲ್ಲ ಎಂದು ಹಿಂಡೆನ್‌ ಬರ್ಗ್‌ ಆರೋಪಿಸಿತ್ತು. ಆದರೆ ಅದಾನಿ ಕಂಪನಿಗಳ ವಿರುದ್ಧ ಶಾರ್ಟ್‌ ಸೆಲ್ಲರ್‌ ಮಾಡುತ್ತಿರುವುದಾಗಿ ತಿಳಿಸಿದೆ.

    ಅದಾನಿ ಕಂಪನಿಗಳ ಷೇರು ದರಗಳು ಈಗಲೂ ಸರಾಸರಿ 40% ಕುಸಿತದ ದರದಲ್ಲಿಯೇ ಮುಂದುವರಿದಿದೆ. ಇದರ ಚೇತರಿಗೆ ಇನ್ನೂ ಸಾಕಷ್ಟು ಕಾಲಾವಕಾಶ ಬೇಕಾಗಬಹುದು. ಹೂಡಿಕೆದಾರರಲ್ಲಿ ಆತ್ಮ ವಿಶ್ವಾಸ ಬರಬೇಕು. ಹಿಂಡೆನ್‌ ಬರ್ಗ್‌ ವರದಿಯ ಬಳಿಕ ಹೂಡಿಕೆದಾರರಲ್ಲಿ ಆತ್ಮ ವಿಶ್ವಾಸ ಮೂಡಿಸುವುದು ಹೇಗೆ ಎಂಬುದು ಅತಿ ದೊಡ್ಡ ಸವಾಲು. ಎರಡನೆಯದಾಗಿ ಎಫ್‌ಪಿಒ ಹಿಂತೆಗೆತದ ಬಳಿಕ ಕ್ಯೂ ಐಪಿ, ಪ್ರಿಫರೆನ್ಷಿಯಲ್‌ ಷೇರುಗಳ ಬಿಡುಗಡೆಯ ವಿಧಾನವನ್ನು ಅನುಸರಿಸಬೇಕಾಗಿದೆ. ಕ್ಯೂ ಐಪಿಯಲ್ಲಿ ಮಾರುಕಟ್ಟೆ ನಿಯಂತ್ರಕದ ಅನುಮತಿ ಇಲ್ಲದೆಯೂ ಷೇರುಗಳನ್ನು ಬಿಡುಗಡೆಗೊಳಿಸಿ ಹಣ ಸಂಗ್ರಹಿಸಬಹುದು.

    5. ಅದಾನಿ ಸಾಲ ಮರುಪಾವತಿಸುತ್ತಿದೆಯೇ? ಎಷ್ಟು ಸಾಲ ಇದೆ?

      ಅದಾನಿ ಗ್ರೂಪ್‌ ಇದುವರೆಗೆ ಸಾಲವನ್ನು ಸರಿಯಾಗಿ ಮರು ಪಾವತಿಸುತ್ತಲೇ ಬಂದಿದೆ. ಒಟ್ಟಾರೆಯಾಗಿ 2.26 ಲಕ್ಷ ಕೋಟಿ ರೂ. ಸಾಲವನ್ನು ಅದು ಹೊಂದಿದೆ. 29,754 ಕೋಟಿ ರೂ. ನಗದನ್ನು ಹೊಂದಿದೆ. ಹೀಗಾಗಿ 1.96 ಲಕ್ಷ ಕೋಟಿ ನಿವ್ವಳ ಸಾಲವನ್ನು ಹೊಂದಿದೆ. ಹೀಗಿದ್ದರೂ, ಹಿಂಡೆನ್‌ ಬರ್ಗ್‌ ವರದಿಯಿಂದ ಭವಿಷ್ಯದಲ್ಲಿ ಅದಾನಿ ಗ್ರೂಪ್‌ಗೆ ಹೊಸತಾಗಿ ಸಾಲ ಪಡೆಯಲು ಕಷ್ಟವಾಗಬಹುದು ಎಂದು ಮೂಡೀಸ್‌ ರೇಟಿಂಗ್‌ ಏಜೆನ್ಸಿ ಎಚ್ಚರಿಸಿದೆ. ಮತ್ತೊಂದು ಕಡೆ ಫಿಚ್‌ ರೇಟಿಂಗ್‌ ಸದ್ಯಕ್ಕೆ ಅದಾನಿ ಗ್ರೂಪ್‌ನ ರೇಟಿಂಗ್‌ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಇಲ್ಲ ಎಂದಿದೆ.

      ಎಲ್‌ಐಸಿ ಮತ್ತು ಎಸ್‌ಬಿಐ ಹಾಗೂ ಅದಾನಿ ಸಮೂಹದ ನಡುವಣ ವ್ಯವಹಾರಗಳೇನು? ಅದಾನಿ ಗ್ರೂಪ್‌ ಕಂಪನಿಗಳು ಒಂದು ವೇಳೆ ಸಾಲ ಮರು ಪಾವತಿಸದಿದ್ದರೆ, ಷೇರುಗಳ ದರ ಚೇತರಿಸದಿದ್ದರೆ ಇವುಗಳಿಗೆ ಭವಿಷ್ಯದಲ್ಲಿ ತೊಂದರೆ ಆಗಲಿದೆಯೇ?

      ಎಲ್‌ಐಸಿ ಬಿಡುಗಡೆಗೊಳಿಸಿರುವ ಹೇಳಿಕೆ ಪ್ರಕಾರ 35,917 ಕೋಟಿ ರೂ. ಮೌಲ್ಯದ ಷೇರುಗಳನ್ನು ಅದಾನಿ ಕಂಪನಿಗಳಲ್ಲಿ ಹಲವು ವರ್ಷಗಳಿಂದ ಖರೀದಿಸಿದೆ. ಅವುಗಳ ಮಾರುಕಟ್ಟೆ ಮೌಲ್ಯ 56,142 ಕೋಟಿ ರೂ. ಎಸ್‌ಬಿಐ 27,000 ಕೋಟಿ ರೂ. ಸಾಲವನ್ನು ಅದಾನಿ ಕಂಪನಿಗೆ ನೀಡಿದೆ.

      ಅದಾನಿ ಗ್ರೂಪ್‌ ಬಿಕ್ಕಟ್ಟಿನ ರಾಜಕೀಯ ಆಯಾಮಗಳೇನು? ಇದರಿಂದ ಮೋದಿ ಸರ್ಕಾರಕ್ಕೆ ಹಿನ್ನಡೆ ಹಾಗೂ ಪ್ರತಿಪಕ್ಷಗಳಿಗೆ ಹೊಸ ಅಸ್ತ್ರ ಸಿಗಲಿದೆಯೇ?

      ಅದಾನಿ ಗ್ರೂಪ್‌ ವಿರುದ್ಧ ಜಂಟಿ ಸಂಸದೀಯ ತನಿಖೆ ನಡೆಸಬೇಕು ಹಾಗೂ ಸಂಸತ್ತಿನಲ್ಲಿ ಅದರ ಬಗ್ಗೆ ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಆದರೆ ಅದಾನಿ ಬಿಕ್ಕಟ್ಟಿನಿಂದ ಮೋದಿಯವರ ವರ್ಚಸ್ಸಿಗೆ ಧಕ್ಕೆ ಆಗಿಲ್ಲ ಎಂದು ಇತ್ತೀಚಿನ ಸಮೀಕ್ಷೆಗಳು ತಿಳಿಸಿವೆ.

      ಷೇರು ಹೂಡಿಕೆದಾರರು ಅದಾನಿ ಸಮೂಹದ ಷೇರುಗಳ ದಿಢೀರ್‌ ಕುಸಿತದಿಂದ ಕಲಿಯಬೇಕಾದ ಪಾಠವೇನು?

      ಯಾವುದೇ ಕಂಪನಿಯ ಷೇರು ದರ ತೀವ್ರಗತಿಯಲ್ಲಿ ಏರುತ್ತಿದ್ದರೆ, ಅದರಲ್ಲಿ ಹೂಡಿಕೆಗೆ ಮುನ್ನ ಸಾಕಷ್ಟು ಅಧ್ಯಯನ ನಡೆಸಬೇಕು. ಕಂಪನಿಯ ಫಂಡಮೆಂಟಲ್‌ ಬಗ್ಗೆ ತಿಳಿದುಕೊಳ್ಳಬೇಕು. ಎರಡನೆಯದಾಗಿ ಅದಾನಿ ಸಮೂಹದ ಕಂಪನಿಗಳಲ್ಲಿ ರಿಸ್ಕ್‌ ತೆಗೆದುಕೊಂಡು ಹೂಡಿಕೆ ಮಾಡುವವರಿಗೆ ಖರೀದಿಯ ಅವಕಾಶವೂ ಸಿಕ್ಕಿದೆ.

      ಅದಾನಿ ಎಂಟರ್‌ಪ್ರೈಸಸ್‌ ಮತ್ತು ಅದಾನಿ ಪೋರ್ಟ್ಸ ಷೇರು ದರಗಳು ಏರಿಕೆ ದಾಖಲಿಸಿವೆ. ಮ್ಯೂಚುವಲ್‌ ಫಂಡ್‌ ಕಂಪನಿಗಳು ಈ ಎರಡು ಕಂಪನಿಗಳ ಷೇರುಗಳನ್ನು ಖರೀದಿಸುತ್ತಿವೆ. ಹಿಂಡೆನ್‌ ಬರ್ಗ್‌ ವರದಿಯ ಬಳಿಕ ಅದಾನಿ ಸಮೂಹದ 10 ಲಿಸ್ಟೆಡ್‌ ಕಂಪನಿಗಳ ಮಾರುಕಟ್ಟೆ ಮೌಲ್ಯದಲ್ಲಿ 75% ಏರಿಕೆಯಾಗಿದೆ. ಅದಾನಿ ಪೋರ್ಟ್‌, ಅದಾನಿ ಎಂಟರ್‌ಪ್ರೈಸಸ್‌ ಷೇರು ಏರಿದ್ದರೂ, ಇತರ ಕಂಪನಿಗಳ ಷೇರು ದರಗಳು ಇಳಿದಿವೆ.

      ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
      ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
      Continue Reading
      Click to comment

      Leave a Reply

      Your email address will not be published. Required fields are marked *

      ವಿದೇಶ

      Israel Attack: ಟೂತ್‌ಪೇಸ್ಟ್‌ನಲ್ಲಿ ವಿಷ ಬೆರೆಸಿದ ಇಸ್ರೇಲ್‌ ಗುಪ್ತದಳ! ಪ್ಯಾಲೆಸ್ತೀನ್‌ ಕಮಾಂಡರ್‌ ನರಳಿ ನರಳಿ ಸತ್ತ! ಸೇಡಿನ interesting story

      ಇಸ್ಮಾಯಿಲ್ ಹನಿಯೆಹ್ ಮತ್ತು ಫುವಾಡ್ ಶುಕರ್ ಎಂಬ ಹಮಾಸ್‌ ಉಗ್ರ ನಾಯಕರ ಮೇಲೆ ದಾಳಿ ನಡೆಸಿ ಇಸ್ರೇಲ್ (Israel Attack) ಕೊಂದು ಹಾಕಿದೆ. ಈ ಮೂಲಕ ತನ್ನ ಶತ್ರುವನ್ನು ಎಲ್ಲಿ ಬೇಕಾದರೂ ಕೊಲ್ಲಬಹುದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ. 1978ರಲ್ಲೂ ಇಂಥದ್ದೇ ಒಂದು ಘಟನೆ ನಡೆದಿತ್ತು. ಸಣ್ಣ ಸುಳಿವನ್ನೂ ಬಿಟ್ಟು ಕೊಡದ ಹಾಗೆ ಇಸ್ರೇಲ್‌ ಗುಪ್ತಚರ ದಳ ʼಮೊಸಾದ್‌ʼ ಪ್ಯಾಲೆಸ್ತೀನ್‌ ಕಮಾಂಡರ್‌ನನ್ನು ಅತ್ಯಂತ ಚಾಣಾಕ್ಷತನದಿಂದ ಕೊಂದು ಹಾಕಿತ್ತು. ಈ ಕುರಿತ ರೋಚಕ ಮಾಹಿತಿ ಇಲ್ಲಿದೆ.

      VISTARANEWS.COM


      on

      By

      Israel Attack
      Koo

      ಇಬ್ಬರು ದೊಡ್ಡ ಶತ್ರುಗಳನ್ನು ಇಸ್ರೇಲ್ (Israel Attack) ಕೇವಲ ಹನ್ನೆರಡು ಗಂಟೆಗಳ ಅವಧಿಯಲ್ಲಿ ಕೊಂದು ಹಾಕಿದೆ. ಇರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿ ಹಮಾಸ್‌ನ ಉನ್ನತ ನಾಯಕ ಇಸ್ಮಾಯಿಲ್ ಹನಿಯೆಹ್ (Ismail Haniyeh) ಮತ್ತು ಲೆಬನಾನ್ ರಾಜಧಾನಿ ಬೈರುತ್‌ನಲ್ಲಿ ಹಿಜ್ಬುಲ್ಲಾ ಕಮಾಂಡರ್ ಫುವಾಡ್ ಶುಕರ್ (Fuad Shukar) ಮೇಲೆ ವೈಮಾನಿಕ ದಾಳಿ ನಡೆಸಿ ಕೊಂದು ಹಾಕಲಾಗಿದೆ. ಈ ಎರಡೂ ಘಟನೆಗಳ ಹಿಂದೆ ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್‌ (Israel’s intelligence agency Mossad) ಕೈವಾಡ ಇರುವುದು ಅತ್ಯಂತ ಸ್ಪಷ್ಟವಾಗಿದೆ.

      ಇಸ್ರೇಲ್ ತನ್ನ ಶತ್ರುವನ್ನು ಎಲ್ಲಿ ಬೇಕಾದರೂ ಕೊಲ್ಲಬಹುದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ. 1978ರಲ್ಲೂ ಇಂಥದ್ದೇ ಒಂದು ಘಟನೆ ನಡೆದಿತ್ತು. ಸಣ್ಣ ಸುಳಿವನ್ನೂ ಬಿಟ್ಟು ಕೊಡದ ಹಾಗೆ ʼಮೊಸಾದ್‌ʼ ಪ್ಯಾಲೇಸ್ಟಿನಿಯನ್ ಕಮಾಂಡರ್ ವಾಡಿ ಹಡ್ಡಾಡ್‌ನನ್ನು (Wadie Haddad) ಟೂತ್‌ಪೇಸ್ಟ್‌ನಲ್ಲಿ ವಿಷ ಬೆರೆಸಿ ಕೊಂದು ಹಾಕಿತ್ತು!

      ಪ್ಯಾಲೆಸ್ತೀನ್‌ ವಿಮೋಚನೆಗಾಗಿ ಪಾಪ್ಯುಲರ್ ಫ್ರಂಟ್ ಎಂಬ ಪ್ಯಾಲೆಸ್ತೀನ್ ಸಂಘಟನೆಯ ಮುಖ್ಯಸ್ಥನಾಗಿದ್ದ ವಾಡಿ ಹಡ್ಡಾಡ್‌ನನ್ನು 1978ರಲ್ಲಿ ಕೊಲ್ಲಲಾಯಿತು. ಬಾಗ್ದಾದ್‌ನಲ್ಲಿ ಊಟ ಸೇವಿಸಿದ ಬಳಿಕ ಆತ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸಿದ್ದ. ಅನಂತರ ಅವನಿಗೆ ಹಸಿವು ಕಡಿಮೆಯಾಗಿತ್ತು. ಸುಮಾರು 25 ಪೌಂಡ್‌ಗಳಿಗಿಂತ ಹೆಚ್ಚು ತೂಕವನ್ನು ಕಳೆದುಕೊಂಡ. ಆತನ ಸ್ಥಿತಿ ಗಂಭೀರವಾದಾಗ ಇರಾನಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

      ವೈದ್ಯರು ಹೆಪಟೈಟಿಸ್ ಅನ್ನು ಶಂಕಿಸಿದರು. ಶಕ್ತಿಯುತವಾದ ಪ್ರತಿಜೀವಕಗಳನ್ನು ನೀಡಲಾಯಿತು. ಅತ್ಯುತ್ತಮ ವೈದ್ಯರು ಆತನಿಗೆ ಚಿಕಿತ್ಸೆ ನೀಡಿದರು. ಆದರೆ ಹಡ್ದಾಡ್‌ನ ಸ್ಥಿತಿ ಸುಧಾರಿಸಲಿಲ್ಲ. ಕೂದಲು ಉದುರಲಾರಂಭಿಸಿತು. ಜ್ವರ ಕಡಿಮೆಯಾಗಲೇ ಇಲ್ಲ. ವಿಷ ಉಣಿಸಿರುವ ಶಂಕೆ ವ್ಯಕ್ತವಾದರೂ ಅದು ಯಾವುದು, ಹೇಗೆ ಅದನ್ನು ನೀಡಲಾಯಿತು ಎಂಬುದನ್ನು ವೈದ್ಯರಿಗೆ ಪತ್ತೆ ಹಚ್ಚಲು ಸಾಧ್ಯವಾಗಲೇ ಇಲ್ಲ.

      ಪ್ಯಾಲೆಸ್ತೀನ್‌ ಲಿಬರೇಶನ್ ಆರ್ಗನೈಸೇಶನ್‌ನ ನಾಯಕ ಯಾಸರ್ ಅರಾಫತ್, ಪೂರ್ವ ಜರ್ಮನಿಯ ರಹಸ್ಯ ದಳವಾದ ʼಸ್ಟಾಸಿʼಯಿಂದ ಸಹಾಯ ಪಡೆಯಲು ಸಹಾಯಕರನ್ನು ಕೇಳಿದರು. ಇದು ಸೋವಿಯತ್ ರಷ್ಯಾ ಪ್ಯಾಲೆಸ್ತೀನ್‌ ಹೋರಾಟಗಾರರಿಗೆ ಸಹಾಯ ಮಾಡಿದ ಸಮಯವಾಗಿತ್ತು. ಅವರಿಗೆ ಪಾಸ್‌ಪೋರ್ಟ್‌, ಆಶ್ರಯ, ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರವನ್ನು ಒದಗಿಸಿತು.

      Israel Attack
      Israel Attack


      ಅರಾಫತ್‌ನ ಸಹಾಯಕನು ಪೂರ್ವ ಜರ್ಮನ್ ರಹಸ್ಯ ಸೇವೆ ಅಥವಾ ಸ್ಟಾಸಿಯನ್ನು ತಲುಪಿದಾಗ ಹಡ್ಡಾಡ್‌ನನ್ನು 1978ರ ಮಾರ್ಚ್ 19ರಂದು ಇರಾಕ್‌ ರಾಜಧಾನಿ ಬಾಗ್ದಾದ್‌ನಿಂದ ಪೂರ್ವ ಬರ್ಲಿನ್‌ಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಗುಪ್ತಚರ ಮತ್ತು ರಹಸ್ಯ ಸೇವೆಯ ಸಮುದಾಯದ ಸದಸ್ಯರು ಚಿಕಿತ್ಸೆ ನೀಡಿದರು. ಅದಾಗಲೇ ಎರಡು ತಿಂಗಳ ನೋವಿನಿಂದ ಒದ್ದಾಡಿದ್ದ ಹಡ್ಡಾಡ್‌ಗೆ ಏನಾಗಿದೆ ಎಂಬುದನ್ನು ಪತ್ತೆ ಹಚ್ಚಲು ಅಲ್ಲೂ ಸಾಧ್ಯವಾಗಲಿಲ್ಲ.

      ಆದರೆ ಬಾಗ್ದಾದ್‌ನಿಂದ ಏರ್‌ಲಿಫ್ಟ್‌ ಆಗುತ್ತಿರುವಾಗ ಹಡ್ಡಾಡ್‌ನ ಅಗತ್ಯ ವಸ್ತುಗಳನ್ನು ಪ್ಯಾಕ್ ಮಾಡಿದಾಗ ಅದರಲ್ಲಿ ಟೂತ್‌ಪೇಸ್ಟ್‌ನ ಟ್ಯೂಬ್ ಒಂದು ಪತ್ತೆಯಾಯಿತು. ನಲವತ್ತೊಂದು ವರ್ಷದ ಹಡ್ಡಾಡ್‌ನನ್ನು ಪೂರ್ವ ಬರ್ಲಿನ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಅದಾಗಲೇ ಆತನ ದೇಹದ ವಿವಿಧ ಭಾಗಗಳಲ್ಲಿ ರಕ್ತಸ್ರಾವವಾಗುತ್ತಿತ್ತು. ಹೃದಯದ ಸುತ್ತ ಇರುವ ಪೆರಿಕಾರ್ಡಿಯಂ, ನಾಲಿಗೆ, ಪ್ಲೆರಲ್ ಪೊರೆಗಳು, ಟಾನ್ಸಿಲ್‌, ಮೂತ್ರ, ಮಲದಲ್ಲೂ ರಕ್ತ ಸೋರಿಕೆಯಾಗಿದ್ದು ಮಾತ್ರವಲ್ಲ ಪ್ಲೇಟ್ಲೆಟ್ ಸಂಖ್ಯೆ ಅಪಾಯಕಾರಿಯಾಗಿ ಕುಸಿಯಿತು.

      ವೈದ್ಯರು ಆತನಿಗೆ ಸಾಧ್ಯವಿರುವ ಎಲ್ಲಾ ಪರೀಕ್ಷೆಗಳನ್ನು ನಡೆಸಿದರು. ಆದರೆ ಏನೂ ಫಲಿತಾಂಶ ಹೊರಬರಲಿಲ್ಲ. ಆತನಿಗೆ ಇಲಿ ವಿಷ ಅಥವಾ ಥಾಲಿಯಮ್ ನೀಡಲಾಗಿದೆ ಎಂದು ಊಹಿಸಲಾಯಿತು. ಆದರೆ ಇದಕ್ಕೂ ಸ್ಪಷ್ಟತೆ ಸಿಗಲಿಲ್ಲ. ಅಲ್ಲಿ ಆತ ತೀವ್ರವಾಗಿ ನೋವಿನಿಂದ ಒದ್ದಾಡುತ್ತಿದ್ದ. ಆತನ ಕಿರುಚಾಟ, ನರಳಾಟ ಆಸ್ಪತ್ರೆಯ ತುಂಬೆಲ್ಲ ಕೇಳುತ್ತಿತ್ತು. ವೈದ್ಯರು ಹಗಲು ರಾತ್ರಿ ಆತನನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಇಡಬೇಕಾಯಿತು.

      ಅಲ್ಲಿ ಹತ್ತು ದಿನಗಳ ಕಾಲ ತೀವ್ರ ಸಂಕಟ ಅನುಭವಿಸಿ ಮಾರ್ಚ್ 29ರಂದು ಹಡ್ಡಾಡ್‌ ಸತ್ತೇ ಹೋದ. ಅನಂತರ ಸಂಪೂರ್ಣ ಶವಪರೀಕ್ಷೆ ನಡೆಸಲಾಯಿತು. ಗುಪ್ತಚರ ಸಂಸ್ಥೆ ʼಸ್ಟಾಸಿʼಯ ಫೋರೆನ್ಸಿಕ್ ತಜ್ಞ ಪ್ರೊಫೆಸರ್ ಒಟ್ಟೊ ಪ್ರೊಕೊಪ್ ಅವರು ಈ ಕುರಿತು ಮಾಹಿತಿ ನೀಡಿ, ಹಡ್ಡಾಡ್‌ ಮೆದುಳಿನ ರಕ್ತಸ್ರಾವ ಮತ್ತು ನ್ಯುಮೋನಿಯಾದಿಂದ ಸಾವನ್ನಪ್ಪಿದ್ದಾನೆ. ಆತನನ್ನು ಹತ್ಯೆ ಮಾಡಿರುವ ಅನುಮಾನವಿದೆ ಎಂದು ಹೇಳಿದರು.

      ಇದನ್ನೂ ಓದಿ: Ismail Haniyeh Killing: ಹಮಾಸ್‌ನ ಹೊಸ ಮುಖ್ಯಸ್ಥನಾಗಿ ಖಲೀದ್‌ ಮೆಶಾಕ್‌? ಈತನ ಹಿನ್ನೆಲೆ ಏನು?

      ಟೂತ್ ಪೇಸ್ಟ್‌ನಲ್ಲಿತ್ತು ವಿಷ!

      ಹಡ್ಡಾಡ್‌ನ ಸಾವು ಸಹಜ ಎಂದು ಕಾಣುವಂತೆ ಮಾಡಲು ಆತ ಬಳಸುತ್ತಿದ್ದ ಟೂತ್ ಪೇಸ್ಟ್ ಅನ್ನೇ ಅಸ್ರ್ರವಾಗಿ ಬಳಸಲಾಗಿತ್ತು. ಹಡ್ಡಾಡ್ ನಿತ್ಯ ಬಳಸುವ ಟೂತ್ ಪೇಸ್ಟ್ ಅನ್ನು ವಿಷಕಾರಿ ಟೂತ್ ಪೇಸ್ಟ್ ನೊಂದಿಗೆ ಬದಲಾಯಿಸಲಾಗಿತ್ತು! ಆತನ ಮರಣದ ಬಳಿಕ ಪರೀಕ್ಷೆ ಮಾಡಿದ ಟೂತ್ ಪೇಸ್ಟ್ ಟ್ಯೂಬ್‌ನಲ್ಲಿ ವಿಷ ಕಂಡು ಬಂದಿತ್ತು. ಟೆಲ್ ಅವೀವ್‌ನ ಆಗ್ನೇಯ ಭಾಗದಲ್ಲಿರುವ ನೆಸ್ ಜಿಯೋನಾದಲ್ಲಿರುವ ಇಸ್ರೇಲ್ ಇನ್‌ಸ್ಟಿಟ್ಯೂಟ್ ಫಾರ್ ಬಯೋಲಾಜಿಕಲ್ ರಿಸರ್ಚ್‌ನಲ್ಲಿ ಈ ವಿಷವನ್ನು ಅಭಿವೃದ್ಧಿಪಡಿಸಲಾಗಿತ್ತು. ಹಡ್ಡಾಡ್‌ ಹಲ್ಲುಜ್ಜುತ್ತಿದ್ದಾಗ ಈ ವಿಷವು ಅವನ ದೇಹವನ್ನು ಪ್ರವೇಶಿಸುತ್ತಿತ್ತು. ಇದು ನಿಧಾನವಾಗಿ ನಿರ್ಣಾಯಕ ಮಟ್ಟ ತಲುಪಿದಾಗ ಆತನ ಜೀವಕ್ಕೆ ಮಾರಕವಾಯಿತು. ಹೀಗೆ ಅತ್ಯಂತ ಚಾಣಾಕ್ಷತನದಿಂದ ಇಸ್ರೇಲ್‌ ಗುಪ್ತಚರ ದಳವು ತನ್ನ ವೈರಿ ʼಉಗ್ರ ನಾಯಕʼನನ್ನು ಕೊಂದು ಹಾಕಿತ್ತು!

      Continue Reading

      ಆರೋಗ್ಯ

      In Vitro Fertilization: ಐವಿಎಫ್ ವಿಧಾನದಿಂದ ಮಕ್ಕಳಾಗುವುದು ಹೇಗೆ? ಇದಕ್ಕೆ ಎಷ್ಟು ವೆಚ್ಚವಾಗುತ್ತದೆ?

      ಬಂಜೆತನದ ಸಮಸ್ಯೆಗಳನ್ನು ಎದುರಿಸುತ್ತಿರುವ ಪೋಷಕರಾಗ ಬಯಸುವ ದಂಪತಿಗೆ ಐವಿಎಫ್ (In Vitro Fertilization) ಆಶಾಕಿರಣವಾಗಿದೆ. ಆದರೆ ಚಿಕಿತ್ಸೆಯ ದುಬಾರಿ ವೆಚ್ಚದಿಂದಾಗಿ ಇದು ಕೇವಲ ಶ್ರೀಮಂತರ ಕೈಗೆ ಮಾತ್ರ ಎಟಕುವಂತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇದಕ್ಕೆ ಬೇಡಿಕೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಬೇಡಿಕೆ ಪಡೆಯಲಿದೆ. ಸಾಕಷ್ಟು ದಂಪತಿ ಈ ವಿಧಾನದಿಂದ ಮಕ್ಕಳನ್ನು ಪಡೆಯುತ್ತಿದ್ದಾರೆ. ಏನಿದು ಐವಿಎಫ್? ಈ ಕುರಿತ ಸರಳ ಮಾಹಿತಿ ಇಲ್ಲಿದೆ.

      VISTARANEWS.COM


      on

      By

      In Vitro Fertilization
      Koo

      ತಾಯಿಯಾಗಬೇಕು (Motherhood) ಎನ್ನುವ ಕನಸು ಎಲ್ಲ ಮಹಿಳೆಯರಲ್ಲೂ ಇರುತ್ತದೆ. ಆದರೆ ಕೆಲವು ತೊಂದೆರೆಗಳಿಂದ ಕೆಲವು ಮಹಿಳೆಯರಿಗೆ ಈ ಸೌಭಾಗ್ಯ ಪ್ರಾಪ್ತವಾಗುವುದಿಲ್ಲ. ಆದರೆ ಈಗ ಬೆಳೆದಿರುವ ತಂತ್ರಜ್ಞಾನ ಬಂಜೆತನದ (Infertility) ಸವಾಲುಗಳನ್ನು ಎದುರಿಸುತ್ತಿರುವ ಮಹಿಳೆಯರಿಗೆ ಆಶಾಕಿರಣವಾಗಿದೆ. ಇನ್ ವಿಟ್ರೋ ಫರ್ಟಿಲೈಸೇಶನ್ (In Vitro Fertilization) ಇತ್ತೀಚಿನ ದಿನಗಳಲ್ಲಿ ಪೋಷಕರಾಗ ಬಯಸುವ ದಂಪತಿಗೆ ವರದಾನವಾಗಿದೆ.

      ಗರ್ಭಧಾರಣೆಯ ತೊಂದರೆಗಳನ್ನು ಎದುರಿಸುತ್ತಿರುವವರಿಗೆ ವೈದ್ಯಕೀಯ ತಂತ್ರಜ್ಞಾನದಲ್ಲಿ ನಡೆದಿರುವ ಈ ಬೆಳವಣಿಗೆಯು ಜಾಗತಿಕ ಮರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯನ್ನು ಸೃಷ್ಟಿಸಿದೆ. ಜಾಗತಿಕವಾಗಿ ಐವಿಎಫ್ ಮಾರುಕಟ್ಟೆಯು 2026 ರ ವೇಳೆಗೆ 36.2 ಶತಕೋಟಿ ಡಾಲರ್ ತಲುಪುವ ನಿರೀಕ್ಷೆಯಿದೆ.

      ಇತ್ತೀಚಿನ ದಿನಗಳಲ್ಲಿ ಭಾರತದಲ್ಲೂ ಐವಿಎಫ್ ವಲಯವು ಗಮನಾರ್ಹವಾಗಿ ಬೆಳವಣಿಗೆ ಕಾಣುತ್ತಿದೆ. ಭಾರತದಲ್ಲಿ ಐವಿಎಫ್ ಚಿಕಿತ್ಸೆಗೆ ಕನಿಷ್ಠ ಸರಾಸರಿ 2 ಲಕ್ಷ ರೂ. ನಿಂದ 6 ಲಕ್ಷ ರೂ. ವರೆಗೆ ವೆಚ್ಚವಾಗುತ್ತದೆ. ಆದರೆ ಆಸ್ಪತ್ರೆಯ ಖ್ಯಾತಿ, ವೈದ್ಯರ ಅರ್ಹತೆ ಮತ್ತು ಬಂಜೆತನದ ತೀವ್ರತೆಯಂತಹ ಅಂಶಗಳ ಆಧಾರದ ಮೇಲೆ ಬದಲಾಗುತ್ತದೆ.

      ಭಾರತದಲ್ಲಿ ಪ್ರಸ್ತುತ ಈ ಚಿಕಿತ್ಸೆಗೆ ಗರಿಷ್ಠ ಸರಿಸುಮಾರು 5- 6 ಲಕ್ಷ ರೂ. ವೆಚ್ಚವಾಗುತ್ತಿದ್ದು, ಇದರ ಮಾರುಕಟ್ಟೆ ಮೌಲ್ಯವು 2030 ರ ವೇಳೆಗೆ 66.37 ಕೋಟಿ ರೂ. ಗಿಂತಲೂ ಹೆಚ್ಚಾಗುವ ಸಾಧ್ಯತೆ ಇದೆ.

      In Vitro Fertilization
      In Vitro Fertilization


      ಭಾರತದಲ್ಲಿ ಯಶಸ್ಸಿನ ಪ್ರಮಾಣ ಎಷ್ಟು?

      ಪ್ರಸ್ತುತ ಭಾರತದಲ್ಲಿ ಇದರ ಯಶಸ್ಸಿನ ಪ್ರಮಾಣ ಸುಧಾರಿಸುತ್ತಿದೆ. ಪೋಷಕರ ವಯಸ್ಸನ್ನು ಆಧರಿಸಿ ಜನನ ದರಗಳು ಶೇ. 30ರಿಂದ ಶೇ. 35ರಷ್ಟಿದೆ.

      ಐವಿಎಫ್ ಎಂದರೇನು?

      ಐವಿಎಫ್ ಅಥವಾ ಇನ್ ವಿಟ್ರೊ ಫರ್ಟಿಲೈಸೇಶನ್ ಬಂಜೆತನದಿಂದ ಹೋರಾಡುತ್ತಿರುವ ವ್ಯಕ್ತಿಗಳು ಅಥವಾ ದಂಪತಿ ಮಗುವನ್ನು ಪಡೆಯಲು ಸಹಾಯ ಮಾಡುವ ವೈದ್ಯಕೀಯ ವಿಧಾನವಾಗಿದೆ. ಇದು ಮಹಿಳೆಯ ಅಂಡಾಶಯದಿಂದ ಮೊಟ್ಟೆಗಳನ್ನು ಪಡೆದು ಪ್ರಯೋಗಾಲಯದ ವ್ಯವಸ್ಥೆಯಲ್ಲಿ ವೀರ್ಯದೊಂದಿಗೆ ಅವುಗಳನ್ನು ಫಲವತ್ತಾಗಿಸಿ ಅನಂತರ ಭ್ರೂಣವನ್ನಾಗಿ ಮಾಡಿ ಗರ್ಭಾಶಯಕ್ಕೆ ವರ್ಗಾಯಿಸಲಾಗುತ್ತದೆ. ಈ ಪ್ರಕ್ರಿಯೆಯು ವಿವಿಧ ಫಲವತ್ತತೆಯ ಅಡೆತಡೆಗಳನ್ನು ತಡೆಯುತ್ತದೆ.

      ಹೇಗಿರುತ್ತದೆ ಐವಿಎಫ್ ಪ್ರಕ್ರಿಯೆ?

      ಐವಿಎಫ್ ಪ್ರಕ್ರಿಯೆಯು ಹಲವಾರು ಹಂತಗಳನ್ನು ಹೊಂದಿರುತ್ತದೆ. ಪ್ರತಿಯೊಂದು ಹಂತವೂ ಚಿಕಿತ್ಸೆಯ ಯಶಸ್ಸಿಗೆ ನಿರ್ಣಾಯಕವಾಗಿರುತ್ತದೆ. ಆರಂಭಿಕ ಹಾರ್ಮೋನ್ ಪ್ರಚೋದನೆಯಿಂದ ಅಂತಿಮ ಗರ್ಭಧಾರಣೆಯ ಪರೀಕ್ಷೆಯವರೆಗೆ ಪೋಷಕರಾಗಬೇಕು ಎಂದು ಬಯಸುವ ದಂಪತಿ ಅದನ್ನು ಅರ್ಥಮಾಡಿಕೊಳ್ಳುವುದು, ತಾಳ್ಮೆಯಿಂದ ಕಾಯುವುದು ಬಹುಮುಖ್ಯವಾಗಿರುತ್ತದೆ.

      ಇದರಲ್ಲಿ ಮುಖ್ಯವಾಗಿ ಆರಂಭಿಕ ಸಮಾಲೋಚನೆ, ರೋಗನಿರ್ಣಯ ಪರೀಕ್ಷೆಗಳು, ಚಿಕಿತ್ಸೆಯ ಯೋಜನೆ, ಅಂಡಾಶಯದ ಪ್ರಚೋದನೆ, ಟ್ರಿಗ್ಗರ್ ಚುಚ್ಚುಮದ್ದು, ಮೊಟ್ಟೆ ಮರುಪಡೆಯುವಿಕೆ, ವೀರ್ಯಾಣು ಸಂಗ್ರಹ, ಫಲೀಕರಣ, ಭ್ರೂಣ ಬೆಳವಣಿಗೆ, ಪೂರ್ವನಿಯೋಜಿತ ಜೆನೆಟಿಕ್ ಟೆಸ್ಟಿಂಗ್ (PGT), ಪ್ರೆಗ್ನೆನ್ಸಿ ಟೆಸ್ಟ್ ಮೊದಲಾದವುಗಳನ್ನು ಮಾಡಲಾಗುತ್ತದೆ. ಈ ಪ್ರಕ್ರಿಯೆಯ ಉದ್ದಕ್ಕೂ ವೈದ್ಯಕೀಯ ತಂಡವು ಮಾರ್ಗದರ್ಶನ ಮತ್ತು ಬೆಂಬಲವನ್ನು ಒದಗಿಸುತ್ತದೆ. ಐವಿಎಫ್ ನ ಸಂಕೀರ್ಣವೆಂದು ತೋರುತ್ತದೆಯಾದರೂ ತಜ್ಞರು ಇದನ್ನು ಪೋಷಕರಾಗ ಬಯಸುವ ದಂಪತಿಗೆ ಸಾಧ್ಯವಾದಷ್ಟು ಸುಲಭವಾಗುವಂತೆ, ಅರ್ಥವಾಗುವಂತೆ ವಿವರಿಸುತ್ತಾರೆ.

      In Vitro Fertilization
      In Vitro Fertilization


      ತಿಳಿದಿರಲಿ

      ಐವಿಎಫ್ ಪ್ರಕ್ರಿಯೆಗೆ ಒಳಗಾಗ ಬಯಸುವವರು ಐವಿಎಫ್ ಪ್ರಕ್ರಿಯೆ, ಸಂಭಾವ್ಯ ಅಪಾಯಗಳು ಮತ್ತು ಯಶಸ್ಸಿನ ದರಗಳನ್ನು ಮೊದಲು ತಿಳಿದುಕೊಳ್ಳಬೇಕು. ಇದಕ್ಕಾಗಿ ತಜ್ಞರನ್ನು ಸಂಪರ್ಕಿಸಿ.

      ಸರಿಯಾದ ಚಿಕಿತ್ಸೆ ಎಲ್ಲಿ ದೊರೆಯುತ್ತದೆ ಎಂಬುದನ್ನು ವಿಶ್ವಾಸಾರ್ಹ ಮೂಲಗಳಿಂದ ತಿಳಿದುಕೊಳ್ಳಿ. ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವುದು ಬಹುಮುಖ್ಯವಾಗಿದೆ.

      ವೈದ್ಯರು ಸೂಚಿಸುವ ಔಷಧಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಿ. ಅಗತ್ಯವಿದ್ದಾಗ ಭಾವನಾತ್ಮಕವಾಗಿ ಬೆಂಬಲ ಪಡೆಯಲು ಸಿದ್ದರಾಗಿರಿ.

      ಇದನ್ನೂ ಓದಿ: Ear Infections During Monsoon: ಮಳೆಗಾಲದಲ್ಲಿ ಕಾಡುವ ಕಿವಿನೋವಿನಿಂದ ಮುಕ್ತರಾಗಲು ಸರಳ ಉಪಾಯ ಇಲ್ಲಿದೆ

      ನಿರ್ಲಕ್ಷಿಸಬೇಡಿ

      ಐವಿಎಫ್ ಚಿಕಿತ್ಸೆಯ ಕುರಿತು ಏನೇ ಸವಾಲುಗಳಿದ್ದರೂ ತಜ್ಞರೊಂದಿಗೆ ಮುಕ್ತವಾಗಿ ಚರ್ಚಿಸಿ. ಯಾವುದೇ ಭಾವನೆಗಳನ್ನು ಮನದೊಳಗೆ ಇಟ್ಟುಕೊಳ್ಳಬೇಡಿ. ನಿಗ್ರಹಿಸಬೇಡಿ.

      ಚಿಕಿತ್ಸೆಯ ಸಮಯದಲ್ಲಿ ದೇಹದ ಮೇಲೆ ಹೆಚ್ಚಿನ ಒತ್ತಡ ಹೇರಬೇಡಿ. ಶ್ರಮದಾಯಕ ವ್ಯಾಯಾಮ ಅಥವಾ ಚಟುವಟಿಕೆಗಳನ್ನು ತಪ್ಪಿಸಿ.

      ಚಿಕಿತ್ಸೆಯ ವೇಳೆ ಉಂಟಾಗುವ ಅಡ್ಡ ಪರಿಣಾಮಗಳ ಬಗ್ಗೆ ತಕ್ಷಣವೇ ವೈದ್ಯರ ಗಮನಕ್ಕೆ ತನ್ನಿ.

      ಸಕಾರಾತ್ಮಕ ಮನಸ್ಥಿತಿಯಲ್ಲಿ ಈ ಚಿಕಿತ್ಸೆ ಪಡೆಯಲು ಸಿದ್ಧರಾಗಿ. ಪ್ರತಿಯೊಂದು ಹಂತದಲ್ಲೂ ಭರವಸೆ ಇಟ್ಟಿರಿ.

      ಎಷ್ಟು ವೆಚ್ಚವಾಗುತ್ತದೆ?

      ಈ ವಿಧಾನದಿಂದ ಮಕ್ಕಳನ್ನು ಪಡೆಯಲು ಭಾರತದ ಆಸ್ಪತ್ರೆಗಳಲ್ಲಿ ಸುಮಾರು 1 ಲಕ್ಷ ರೂ.ನಿಂದ 5 ಲಕ್ಷ ರೂ.ವರೆಗೂ ಶುಲ್ಕ ವಿಧಿಸಲಾಗುತ್ತದೆ. ಈ ವೆಚ್ವ ನುರಿತ ವೈದ್ಯರು ಮತ್ತು ಆಸ್ಪತ್ರೆಯ ಸೌಲಭ್ಯವನ್ನು ಆಧರಿಸಿದೆ.

      Continue Reading

      ವಿದೇಶ

      Israel v/s Hamas: ಇಸ್ರೇಲ್‌‌ ಮುಂದಿನ ಟಾರ್ಗೆಟ್ ಯಾರು? ಇಲ್ಲಿದೆ ಹಮಾಸ್ ‘ಉಗ್ರ’ ನಾಯಕರ ಹಿಟ್‌ ಲಿಸ್ಟ್!

      ಇರಾನ್‌ನ ನೂತನ ಅಧ್ಯಕ್ಷ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಹತ್ಯೆಯಾದ ಹಮಾಸ್ ಉಗ್ರ ನಾಯಕ ಇಸ್ಮಾಯಿಲ್‌ ಹನಿಯೆಹ್‌ ಬಳಿಕ ಇಸ್ರೇಲ್ (Israel v/s Hamas) ಇನ್ನು ಯಾರ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಈಗಾಗಲೇ ಇಸ್ರೇಲ್
      ಹಿಟ್‌ ಲಿಸ್ಟ್‌ನಲ್ಲಿರುವ ಹಮಾಸ್ ಉಗ್ರ ನಾಯಕರು ಯಾರು ಗೊತ್ತೇ? ಇಲ್ಲಿದೆ ವಿವರ.

      VISTARANEWS.COM


      on

      By

      Israel v/s Hamas
      Koo

      ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ (Ismail Haniyeh) ಹತ್ಯೆ ಸುದ್ದಿ ಪ್ರಪಂಚದಾದ್ಯಂತ ಸಂಚಲನ ಉಂಟು ಮಾಡಿರುವ ಬೆನ್ನಲ್ಲೇ ಇಸ್ರೇಲ್ (Israel v/s Hamas) ಮುಂದಿನ ಟಾರ್ಗೆಟ್ (israel next target) ಯಾರನ್ನು ಮಾಡಿರಬಹುದು ಎನ್ನುವ ಕುರಿತು ಚರ್ಚೆ ಶುರುವಾಗಿದೆ. ಇರಾನಿನ ಹೊಸ ಅಧ್ಯಕ್ಷ (Iran new president) ಮಸೌದ್ ಪೆಜೆಶ್ಕಿಯಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ ಅನಂತರ ಇರಾನ್ ರಾಜಧಾನಿಯಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಹನಿಯೆಹ್ ಮತ್ತು ಅವರ ಅಂಗರಕ್ಷಕನನ್ನು ಕೊಲ್ಲಲಾಗಿದೆ.

      ಇಸ್ರೇಲ್ ನಿಯಂತ್ರಿತ ಗೋಲನ್ ಹೈಟ್ಸ್‌ನಲ್ಲಿ 12 ಯುವಕರು ಕೊಲೆಯಾಗಿ ವಾರ ಕಳೆಯುವಷ್ಟರಲ್ಲಿ ನಡೆದ ರಾಕೆಟ್ ದಾಳಿ ನಡೆಸಿ ಹೆಜ್ಬೊಲ್ಲಾ ಕಮಾಂಡರ್ ಫೌದ್ ಶುಕುರ್‌ನನ್ನು ಕೊಂದಿರುವುದಾಗಿ ಇಸ್ರೇಲ್ ಹೇಳುತ್ತಿದ್ದಂತೆಯೇ, ಹನಿಯೆಹ್ ಮೇಲೂ ದಾಳಿ ನಡೆದಿದೆ. ಇಸ್ರೇಲ್ ಈಗ ಹಮಾಸ್ ಉಗ್ರರ ಹೆಡೆಮುರಿ ಕಟ್ಟಲು ಸಂಪೂರ್ಣ ಸಜ್ಜಾದಂತೆ ಕಾಣುತ್ತಿದೆ. ಹಾಗಾದರೆ ಮುಂದೆ ಇಸ್ರೇಲ್ ಯಾರನ್ನು ಟಾರ್ಗೆಟ್ ಮಾಡಿರಬಹುದು ಎನ್ನುವ ಮಾಹಿತಿ ಇಲ್ಲಿದೆ.

      Israel v/s Hamas
      Israel v/s Hamas


      ಯಾಹ್ಯಾ ಸಿನ್ವಾರ್

      ಗಾಜಾದಲ್ಲಿ ಹಮಾಸ್ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿರುವ 62 ವರ್ಷದ ಸಿನ್ವಾರ್ ಇಸ್ರೇಲ್ ಮೇಲೆ ಅಕ್ಟೋಬರ್ 7ರಂದು ನಡೆದ ದಾಳಿಯ ಪ್ರಮುಖ ರೂವಾರಿ. ಸಿನ್ವಾರ್ 1962ರ ಅಕ್ಟೋಬರ್ 29ರಂದು ಖಾನ್ ಯೂನಿಸ್ ನಿರಾಶ್ರಿತರ ಶಿಬಿರದಲ್ಲಿ ಜನಿಸಿದ್ದ. 1980ರ ದಶಕದಲ್ಲಿ ಸಿನ್ವಾರ್ ಗಾಜಾದ ಇಸ್ಲಾಮಿಕ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದ. ಬಳಿಕ ಈತ ಹಮಾಸ್‌ನ ಭದ್ರತಾ ಸೇವೆಯಾದ ಮಜ್ದ್ ಅನ್ನು ಸ್ಥಾಪಿಸಿದ.

      1988ರಲ್ಲಿ ಪ್ಯಾಲೆಸ್ಟೀನಿಯಾದವರ ಹತ್ಯೆಯ ಅಪರಾಧಿ ಎಂದು ಪರಿಗಣಿಸಿ ಸಿನ್ವಾರ್‌ಗೆ ನಾಲ್ಕು ಜೀವಾವಧಿ ಶಿಕ್ಷೆಯನ್ನು ವಿಧಿಸಲಾಯಿತು. 2011ರಲ್ಲಿ ಜೈಲಿನಿಂದ ಬಿಡುಗಡೆಯಾದ ಬಳಿಕ ಹಮಾಸ್‌ನ ಭದ್ರತಾ ಪಡೆಯ ಉನ್ನತ ಶ್ರೇಣಿಯನ್ನು ಸೇರಿಕೊಂಡ. 2015ರಲ್ಲಿ ಅಮೆರಿಕ ಈತನನ್ನು ‘ಅಂತಾರಾಷ್ಟ್ರೀಯ ಭಯೋತ್ಪಾದಕ’ ಎಂದು ಘೋಷಿಸಿತು.

      Israel v/s Hamas
      Israel v/s Hamas


      ಮೊಹಮ್ಮದ್ ಡೀಫ್

      ಹಮಾಸ್‌ನ ಮಿಲಿಟರಿ ವಿಭಾಗ ಇಜ್ ಅಲ್-ದಿನ್ ಅಲ್-ಕಸ್ಸಾಮ್ ಬ್ರಿಗೇಡ್‌ಗಳ ಮುಖ್ಯಸ್ಥನಾಗಿರುವ ಡೀಫ್ ಮೇಲೆ ಇಸ್ರೇಲ್ ನಲ್ಲಿ ಅನೇಕ ಬಾರಿ ದಾಳಿ ನಡೆಸಲಾಗಿದ್ದರೂ ಬದುಕಿ ಉಳಿದಿದ್ದಾನೆ. ಪ್ಯಾಲೆಸ್ಟೀನಿಯರ ವಿರುದ್ಧದ ಅಪರಾಧಗಳನ್ನು ನಿಲ್ಲಿಸಲು, ನಿಂದನೆ ಮತ್ತು ಚಿತ್ರಹಿಂಸೆಗೊಳಗಾದ ಕೈದಿಗಳನ್ನು ಬಿಡುಗಡೆ ಮಾಡಲು, ಪ್ಯಾಲೇಸ್ಟಿನಿಯನ್ ಭೂಮಿಯನ್ನು ವಶಪಡಿಸಿಕೊಳ್ಳುವುದನ್ನು ನಿಲ್ಲಿಸಲು ಹಮಾಸ್ ಇಸ್ರೇಲ್‌ಗೆ ಪದೇಪದೇ ಎಚ್ಚರಿಸುತ್ತಿದೆ ಎಂದು ಡೀಫ್ ಇತ್ತೀಚೆಗೆ ತನ್ನ ಧ್ವನಿ ಮುದ್ರಣವನ್ನು ಬಿಡುಗಡೆ ಮಾಡಿದ್ದ.

      ಹಲವು ದಾಳಿಯಲ್ಲಿ ಡೀಫ್ ಮತ್ತು ಸಿನ್ವಾರ್ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಯಾಹ್ಯಾ ಸಿನ್ವಾರ್‌ನಂತೆ ಡೀಫ್ ಖಾನ್ ಯೂನಿಸ್ ನಿರಾಶ್ರಿತರ ಶಿಬಿರದಲ್ಲಿ ಜನಿಸಿದ್ದ. ಈತನ ಮೊದಲ ಹೆಸರು ಮೊಹಮ್ಮದ್ ಮಸ್ರಿ. ಹಮಾಸ್‌ಗೆ ಸೇರಿದ ಅನಂತರ ಮೊಹಮ್ಮದ್ ಡೀಫ್ ಎಂಬ ಹೆಸರನ್ನು ಪಡೆದ. ಡೀಫ್‌ನನ್ನು 1989ರಲ್ಲಿ ಇಸ್ರೇಲ್ ಬಂಧಿಸಿತ್ತು. ಸುಮಾರು 16 ತಿಂಗಳ ಕಾಲ ಜೈಲಿನಲ್ಲಿದ್ದು ಹೊರ ಬಂದ ಬಳಿಕ ಸುರಂಗಗಳ ಜಾಲವನ್ನು ಮತ್ತು ಅದರ ಬಾಂಬ್ ತಯಾರಿಕೆಯ ಪರಿಣತಿ ಪಡೆದ. ದಶಕಗಳಿಂದ ಇಸ್ರೇಲ್‌ನ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾನೆ. 2000ರಲ್ಲಿ ಇಸ್ರೇಲ್‌ನಲ್ಲಿ ಬಂಧನಕ್ಕೆ ಒಳಗಾದರೂ ಬಳಿಕ ತಪ್ಪಿಸಿಕೊಂಡಿದ್ದ.

      ಇಸ್ರೇಲ್‌ ನಡೆಸಿದ ಒಂದು ದಾಳಿಯಲ್ಲಿ ಆತ ಕಣ್ಣು ಕಳೆದುಕೊಂಡಿದ್ದು, ಒಂದು ಕಾಲಿಗೂ ಗಂಭೀರ ಗಾಯವಾಗಿತ್ತು ಎಂದು ಹಮಾಸ್ ಮೂಲಗಳು ತಿಳಿಸಿದ್ದವು. 2014ರ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಆತನ ಪತ್ನಿ, 7 ತಿಂಗಳ ಮಗ ಮತ್ತು 3 ವರ್ಷದ ಮಗಳು ಸಾವನ್ನಪ್ಪಿದ್ದರು.

      Israel v/s Hamas
      Israel v/s Hamas


      ಖಲೀದ್ ಮಶಾಲ್

      ಹಮಾಸ್‌ನ ಸಂಸ್ಥಾಪಕರಲ್ಲಿ ಒಬ್ಬನಾಗಿರುವ ಮಶಾಲ್, 1956ರಲ್ಲಿ ವೆಸ್ಟ್ ಬ್ಯಾಂಕ್‌ನ ಸಿಲ್ವಾಡ್‌ನಲ್ಲಿ ಜನಿಸಿದ. ಬಳಿಕ ಆತನ ಕುಟುಂಬ ಕುವೈತ್‌ಗೆ ಸ್ಥಳಾಂತರಗೊಂಡಿತು. ಮಶಾಲ್ ಪದವಿ ಪಡೆದ ಬಳಿಕ ಕುವೈತ್‌ನಲ್ಲಿಯೇ ಇದ್ದ. ಅಲ್ಲಿ ಆತ ಗಾಜಾ ಮತ್ತು ವೆಸ್ಟ್ ಬ್ಯಾಂಕ್‌ನಲ್ಲಿ ಸಾಮಾಜಿಕ ಸೇವೆಗಳನ್ನು ಆಯೋಜಿಸಲು ಹಣವನ್ನು ಸಂಗ್ರಹಿಸಿದ.

      1996ರಲ್ಲಿ ಹಮಾಸ್ ರಾಜಕೀಯ ಬ್ಯೂರೋ ಮುಖ್ಯಸ್ಥನಾಗಿ ಆಯ್ಕೆಯಾದ ಮಶಾಲ್, ಹಮಾಸ್‌ನ ಆತ್ಮಹತ್ಯಾ ಬಾಂಬ್ ದಾಳಿಗೆ ಪ್ರತೀಕಾರವಾಗಿ ಪ್ರಧಾನಿ ಬೆಂಜಮಿನ್ ನೆತನ್ಯಾಹು 1997ರಲ್ಲಿ ಮಶಾಲ್‌ನ ಹತ್ಯೆ ಮಾಡಲು ಅನುಮೋದನೆ ನೀಡಿದರು. ಮಶಾಲ್ 2017ರವರೆಗೂ ಹಮಾಸ್‌ನ ಮುಖ್ಯಸ್ಥನಾಗಿದ್ದ. ಹಮಾಸ್‌ನ ಪ್ರಮುಖ ಒತ್ತೆಯಾಳು ಸಂಧಾನಕಾರರಲ್ಲಿ ಒಬ್ಬನಾಗಿರುವ ಮಶಾಲ್ ಪ್ರಸ್ತುತ ಕತಾರ್‌ನಲ್ಲಿ ವಾಸಿಸುತ್ತಿದ್ದಾನೆ.

      Israel v/s Hamas
      Israel v/s Hamas


      ಮಹಮೂದ್ ಜಹರ್

      ಹಮಾಸ್‌ನ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬನಾಗಿದ್ದಾನೆ. 1945ರಲ್ಲಿ ಗಾಜಾ ನಗರದ ಬಳಿ ಜನಿಸಿದ ಜಹರ್ ತಂದೆ ಪ್ಯಾಲೇಸ್ಟಿನಿಯನ್ ಮತ್ತು ತಾಯಿ ಈಜಿಪ್ಟಿನವನು. ಗಾಜಾದಲ್ಲಿ ವೈದ್ಯನಾಗಿದ್ದ ಆತನ ರಾಜಕೀಯ ದೃಷ್ಟಿಕೋನದಿಂದ ಕೆಲಸದಿಂದ ವಜಾಗೊಳಿಸಲಾಗಿತ್ತು. 1988ರಲ್ಲಿ ಹಮಾಸ್ ಸ್ಥಾಪನೆಯ ಅನಂತರ ಜಹರ್‌ನನ್ನು ಇಸ್ರೇಲ್ ಜೈಲಿನಲ್ಲಿರಿಸಿತ್ತು. 1992ರಲ್ಲಿ ಲೆಬನಾನ್‌ಗೆ ಗಡೀಪಾರು ಮಾಡಲಾಯಿತು. ಗಾಜಾಕ್ಕೆ ಹಿಂದಿರುಗಿದ ಬಳಿಕ ಈತನ ಮೇಲೆ ಹತ್ಯೆ ಯತ್ನವೂ ನಡೆದಿದ್ದು, ಒಂದು ಸಂದರ್ಭದಲ್ಲಿ ಆತನ ಹಿರಿಯ ಮಗ ಮೃತಪಟ್ಟಿದ್ದಾನೆ.

      ಇದನ್ನೂ ಓದಿ: Ismail Haniyeh: ಒಸಾಮಾ ರೀತಿಯೇ ಹಮಾಸ್‌ನ ಇಸ್ಮಾಯಿಲ್‌ ಹನಿಯೇಹ್‌ನನ್ನು ಕೊಂದ ಇಸ್ರೇಲ್;‌ ಆಪರೇಷನ್‌ನ ಡಿಟೇಲ್ಸ್‌ ಇಲ್ಲಿದೆ

      2008ರಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯಲ್ಲಿ ಹಮಾಸ್‌ನ ಮಿಲಿಟರಿ ವಿಭಾಗದ ಸದಸ್ಯರಾದ ಈತನ ಇನ್ನೊಬ್ಬ ಮಗನೂ ಸಾವನ್ನಪ್ಪಿದ್ದಾನೆ. 2006 ರಲ್ಲಿ ಜಹರ್ ಪ್ಯಾಲೇಸ್ಟಿನಿಯನ್ ಲೆಜಿಸ್ಲೇಟಿವ್ ಕೌನ್ಸಿಲ್ (PLC) ಗೆ ಆಯ್ಕೆಯಾಗಿದ್ದು, ಬಳಿಕ ಆತನನ್ನು ವಿದೇಶಾಂಗ ಸಚಿವನನ್ನಾಗಿ ನೇಮಿಸಲಾಯಿತು.

      ಹಮಾಸ್‌ನ ಇವಿಷ್ಟು ಉಗ್ರ ನಾಯಕರು ಇಸ್ರೇಲ್‌ನ ಹಿಟ್‌ ಲಿಸ್ಟ್‌ನಲ್ಲಿದ್ದಾರೆ. ಇವರ ಮೇಲೆ ಯಾವಾಗ ಬೇಕಾದರೂ ದಾಳಿ ನಡೆಯಬಹುದು.

      Continue Reading

      EXPLAINER

      Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

      Wayanad Landslide Explainer: ಕೇರಳದಲ್ಲಿ ತಜ್ಞರ ಎಚ್ಚರಿಕೆ, ವರದಿಗಳ ಹೊರತಾಗಿಯೂ ಪ್ರಕೃತಿ, ನಿಸರ್ಗದ ಮೇಲೆ ಮನುಷ್ಯ ವಿಕೃತಿ, ಕೈಗಾರೀಕರಣ, ಅರಣ್ಯ ನಾಶ, ಬೆಟ್ಟದಲ್ಲಿ ಕಲ್ಲುಗಳನ್ನು ತೆಗೆದು ಕೃಷಿ ಚಟುವಟಿಕೆಗಳನ್ನು ಕೈಗೊಂಡು ಪರಿಸರವನ್ನು, ಭೂಮಿಯನ್ನು ಹಾಳು ಮಾಡಲಾಗಿದೆ. ಇಂತಹ ಹಲವು ಕಾರಣಗಳಿಂದಾಗಿಯೇ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತಗಳಿಂದಾಗಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

      VISTARANEWS.COM


      on

      Wayanad Landslide
      Koo

      ತಿರುವನಂತಪುರಂ: ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ (ಜುಲೈ 30) ಸಂಭವಿಸಿದ ಭೀಕರ ಭೂಕುಸಿತಗಳಿಗೆ (Wayanad Landslide Explainer) ಜನ ನಲುಗಿ ಹೋಗಿದ್ದಾರೆ. ಸಾವಿನ ಸಂಖ್ಯೆ 100 ದಾಟಿದೆ. ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ. ಮೆಪ್ಪಾಡಿ (Meppadi) ವ್ಯಾಪ್ತಿಯ ಪ್ರದೇಶಗಳು ಮಸಣಗಳ ರೀತಿ ಭಾಸವಾಗುತ್ತಿವೆ. ಎಲ್ಲಿ ನೋಡಿದರೂ ನೀರು, ಕೆಸರು, ಭೂಮಿ ಕುಸಿದ ದೃಶ್ಯಗಳೇ ಕಣ್ಣಿಗೆ ರಾಚುತ್ತಿವೆ. ಮಕ್ಕಳು, ಮಹಿಳೆಯರ ಶವಗಳನ್ನು ನೋಡಿದಾಗ ಮನಸ್ಸು ಕಲ್ಲವಿಲಗೊಳ್ಳುತ್ತದೆ. ಆದರೆ, ಕೇರಳದಲ್ಲಿ (Kerala Rains) ಪ್ರತಿ ಭಾರಿ ಮಳೆಯಾದಾಗಲೂ ಭೂಮಿ ಕುಸಿಯುತ್ತದೆ. ಹೀಗೆ ಕುಸಿದಾಗಲೆಲ್ಲ, ದುರಂತ ಸಂಭವಿಸಿದಾಗಲೆಲ್ಲ ಮನುಷ್ಯನೇ, ಆತನ ದುರಾಸೆಯೇ ಇದಕ್ಕೆಲ್ಲ ಕಾರಣ ಎಂಬ ಕಟು ಸತ್ಯವು ಕಾಣಿಸುತ್ತದೆ.

      ಹೌದು, ಕೇರಳದ ಭೂಮಿಯ ಕುರಿತು, ಅಲ್ಲಿನ ಪರಿಸರದ ಕುರಿತು, ಭೂಕುಸಿತದ ಸಾಧ್ಯತೆಗಳ ಕುರಿತು ತಜ್ಞರು ದಶಕಕ್ಕಿಂತ ಹೆಚ್ಚು ಅವಧಿಯಿಂದಲೂ ಎಚ್ಚರಿಸುತ್ತಲೇ ಇದ್ದಾರೆ. ಆದರೆ, ಪ್ರಕೃತಿ, ನಿಸರ್ಗದ ಮೇಲೆ ಮನುಷ್ಯ ವಿಕೃತಿ, ಕೈಗಾರೀಕರಣ, ಅರಣ್ಯ ನಾಶ, ಬೆಟ್ಟದಲ್ಲಿ ಕಲ್ಲುಗಳನ್ನು ತೆಗೆದು ಕೃಷಿ ಚಟುವಟಿಕೆಗಳನ್ನು ಕೈಗೊಂಡು ಪರಿಸರವನ್ನು, ಭೂಮಿಯನ್ನು ಹಾಳು ಮಾಡಲಾಗಿದೆ. ಇದೆಲ್ಲದರ ಪರಿಣಾಮವೇ, ಕೇರಳದಲ್ಲಿ ಒಂದು ದಿನ ಜೋರು ಮಳೆ ಬಂದರೂ ಭೂಮಿ ಕುಸಿಯುವಂತಾಗಿದೆ, ನೆಮ್ಮದಿ ಕಸಿಯುವಂತಾಗಿದೆ.

      ವಯನಾಡು ಭೂಸಿತಕ್ಕೆ ಪ್ರಮುಖ ಕಾರಣಗಳು

      • ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ಸಣ್ಣ ಚರಂಡಿಗಳನ್ನು ನಿರ್ಮಿಸಲಾಗಿದ್ದು, ಮಳೆಗಾಲದಲ್ಲಿ ಇವು ಬ್ಲಾಕ್‌ ಆಗಿ, ನೀರು ನಿಂತು, ಭೂಮಿಯನ್ನು ಮೆತ್ತಗಾಗಿಸುತ್ತಿದೆ.
      • ಭೂಮಿಯ ಫಲವತ್ತತೆ ಕಡಿಮೆಗೊಳಿಸಿ, ಗಟ್ಟಿತನವನ್ನು ಕುಂಠಿತಗೊಳಿಸುವ ಶುಂಠಿ ಬೆಳೆಯನ್ನು ಅಧಿಕವಾಗಿ ಬೆಳೆಯುವುದು
      • ಅರಣ್ಯ ನಾಶ, ಗುಡ್ಡಗಾಡು, ಅರಣ್ಯ ಪ್ರದೇಶಗಳಲ್ಲಿ ಕೈಗಾರಿಕಾ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವುದು
      • ಬೆಟ್ಟಗಳ ಕಲ್ಲುಗಳನ್ನು ತೆರವುಗೊಳಿಸಿ, ಭೂಮಿಯನ್ನು ಹದಗೊಳಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವುದು
      • ಗಿರಿ ಪ್ರದೇಶಗಳಲ್ಲಿ ಬೆಟ್ಟವನ್ನು ಅಗೆದು ಮನೆಗಳು ಹಾಗೂ ರೆಸಾರ್ಟ್‌ಗಳನ್ನು ನಿರ್ಮಿಸಿರುವುದು
      • ಪ್ರವಾಸೋದ್ಯಮ, ಸಂಪರ್ಕದ ದೃಷ್ಟಿಯಿಂದ ಗುಡ್ಡಗಾಡು ಪ್ರದೇಶಗಳಲ್ಲಿ ಕಿಲೋಮೀಟರ್‌ಗಟ್ಟಲೆ ರಸ್ತೆಗಳ ನಿರ್ಮಾಣ ಮಾಡಿರುವುದು
      • ನದಿಗಳ ಹರಿವು, ವ್ಯಾಪ್ತಿಯನ್ನು ಹೆಚ್ಚಿಸದಿರುವುದು, ಭಾರಿ ಮಳೆಯಾದರೆ ನೀರು ಸರಾಗವಾಗಿ ಹರಿಯಲು ಕ್ರಮ ತೆಗೆದುಕೊಳ್ಳದಿರುವುದು

      13 ವರ್ಷಗಳ ಹಿಂದೆಯೇ ಗಾಡ್ಗೀಳ್‌ ವರದಿ ಎಚ್ಚರಿಕೆ

      ಮಾಧವ ಗಾಡ್ಗೀಳ್‌ ವರದಿ 2011ರಲ್ಲಿಯೇ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿಯು (WGEEP) ರಚಿಸಿದ ವರದಿಯಲ್ಲಿ ಕೇರಳದ ಇಡುಕ್ಕಿ ಹಾಗೂ ವಯನಾಡು ಕುರಿತು ಮಹತ್ವವದ ಎಚ್ಚರಿಕೆ ನೀಡಿತ್ತು. ಎರಡೂ ಜಿಲ್ಲೆಗಳು ಪರಿಸರ ಸೂಕ್ಷ್ಮ ವಲಯಗಳು ಎಂದು ಉಲ್ಲೇಖಿಸಿತ್ತು. ಎರಡೂ ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಅರಣ್ಯೇತರ ಚಟುವಟಿಕೆಗಳು, ಅರಣ್ಯ ನಾಶ, ಕಂಪನಿ, ಕಚೇರಿಗಳನ್ನು ನಿರ್ಮಾಣ ಮಾಡಬಾರದು ಎಂದು ಎಚ್ಚರಿಸಿತ್ತು.

      ಕೇರಳದ ಶೇ.13ರಷ್ಟು ಭೂಮಿ ದುರ್ಬಲ

      ಕೇರಳದ ಇಡುಕ್ಕಿ, ಪಾಲಕ್ಕಾಡ್‌, ಮಲಪ್ಪುರಂ, ಪಥಣಂತಿಟ್ಟ ಹಾಗೂ ವಯನಾಡು ಜಿಲ್ಲೆಗಳನ್ನು ಅತಿ ದುರ್ಬಲ ಪ್ರದೇಶಗಳು ಎಂಬುದಾಗಿ ಇತ್ತೀಚಿನ ವರದಿಗಳು ತಿಳಿಸಿವೆ. ಕೇರಳದ ಪಶು ಸಂಗೋಪನೆ ಹಾಗೂ ಸಮುದ್ರ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧ್ಯಯನದ ಪ್ರಕಾರ, ಕೇರಳದಲ್ಲಿ 2018ರ ಬಳಿಕ ಭೂಕುಸಿತಗಳ ಪ್ರಮಾಣವು ಶೇ.3.46ರಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

      ಹವಾಮಾನ ವೈಪರೀತ್ಯ, ಕೇರಳ ಮತ್ತು ಸಾವು

      ಭಾರಿ ಮಳೆ, ಭೂಕುಸಿತ, ಪ್ರವಾಹ, ಸಿಡಿಲು ಸೇರಿ ಹವಾಮಾನ ವೈಪರೀತ್ಯದಿಂದ ಕೇರಳದಲ್ಲಿ ಸಾವಿರಾರು ಜನ ಮೃತಪಟ್ಟಿದ್ದಾರೆ. ಕೇರಳದಲ್ಲಿ 2018ರಲ್ಲಿ ಉಂಟಾದ ಪ್ರವಾಹದಲ್ಲಿ ಕೇವಲ 3 ದಿನಗಳಲ್ಲಿಯೇ 483 ಜನ ಮೃತಪಟ್ಟಿದ್ದರು. ದೇವರ ನಾಡಿನಲ್ಲಿ 1961ರಿಂದ 2016ರ ಅವಧಿಯಲ್ಲಿ ಭೂಕುಸಿತದಿಂದಾಗಿಯೇ 295 ಮಂದಿ ಮೃತಪಟ್ಟಿದ್ದರು. 2019 ಹಾಗೂ 2020ರಲ್ಲಿಯೇ ಹವಾಮಾನ ವೈಪರೀತ್ಯಕ್ಕೆ 100ಕ್ಕೂ ಅಧಿಕ ಜನ ಬಲಿಯಾಗಿದ್ದರು.

      ಇದನ್ನೂ ಓದಿ: Shiradi Landslide: ಕೇರಳದ ಬೆನ್ನಿಗೇ ಶಿರಾಡಿ ಘಾಟಿಯಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರುಗಳು, ಟ್ಯಾಂಕರ್‌

      Continue Reading
      Advertisement
      Kupwara Encounter
      ದೇಶ8 mins ago

      ಕಾಶ್ಮೀರದಲ್ಲಿ ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ ಆಪ್ತನ ಹತ್ಯೆ; ಈತ ಪಾಕ್‌ ಕಮಾಂಡೋ ಕೂಡ ಹೌದು!

      PV Sindhu
      ಪ್ರಮುಖ ಸುದ್ದಿ19 mins ago

      PV Sindhu : ಪಿವಿ ಸಿಂಧು ಹ್ಯಾಟ್ರಿಕ್​ ಒಲಿಂಪಿಕ್ಸ್​ ಪದಕದ ಕನಸು ಭಗ್ನ, 16ನೇ ಸುತ್ತಿನಲ್ಲಿ ಸೋಲು

      Prajwal Revanna
      ಕರ್ನಾಟಕ29 mins ago

      Prajwal Revanna: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಅಸಲಿ; ಎಫ್‌ಎಸ್‌ಎಲ್‌ ವರದಿ ಬಹಿರಂಗ, ಎಸ್‌ಐಟಿ ತನಿಖೆಗೆ ಬಲ!

      MS Dhoni
      ಪ್ರಮುಖ ಸುದ್ದಿ38 mins ago

      MS Dhoni : ಧೋನಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿಯಮವನ್ನೇ ಬದಲಾಯಿಸಲು ಕೋರಿದ ಚೆನ್ನೈ ಸೂಪರ್ ಕಿಂಗ್ಸ್​

      Kabini dam not cracked no need to worry says DCM DK Shivakumar
      ಕರ್ನಾಟಕ1 hour ago

      Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಬೇಡ; ಡಿ.ಕೆ.ಶಿವಕುಮಾರ್ ಸ್ಪಷ್ಟನೆ

      Blood Cancer
      ಆರೋಗ್ಯ2 hours ago

      Blood Cancer: ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್‌ರನ್ನು ಬಲಿ ಪಡೆದ ರಕ್ತದ ಕ್ಯಾನ್ಸರ್‌ಗೆ ಏನು ಕಾರಣ? ಇದರ ಲಕ್ಷಣಗಳೇನು?

      Kerala Floods
      ಪ್ರಮುಖ ಸುದ್ದಿ2 hours ago

      Kerala Floods : ಬಾನೆಟ್​ ಎತ್ತರಕ್ಕೆ ತುಂಬಿದ್ದ ಪ್ರವಾಹದ ನೀರಿನಲ್ಲಿ ಸಾಗಿ ಕುಟುಂಬವೊಂದನ್ನು ರಕ್ಷಿಸಿದ ಮಹೀಂದ್ರಾ ಬೊಲೆರೊ! video ಇದೆ

      DK Shivakumar
      ಕರ್ನಾಟಕ2 hours ago

      DK Shivakumar: ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಪ್ರಶ್ನೆಗಳ ಸವಾಲು, ಹೆಜ್ಜೆಗೆ ಒಂದು ಪ್ರಶ್ನೆ ಎಂದ ಡಿಕೆಶಿ

      Paris Olympics 202
      ಪ್ರಮುಖ ಸುದ್ದಿ2 hours ago

      Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಗಸ್ಟ್​​ 2ರಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಯ ವಿವರ ಇಲ್ಲಿದೆ

      Former minister B Sriramulu alleged that the Congress government is not interested in the construction of the Kampli bridge
      ಬಳ್ಳಾರಿ2 hours ago

      Ballari News: ಕಂಪ್ಲಿ ಸೇತುವೆ ನಿರ್ಮಿಸಲು ಆಸಕ್ತಿ ವಹಿಸದ ಕಾಂಗ್ರೆಸ್ ಸರ್ಕಾರ; ಶ್ರೀರಾಮುಲು ಆರೋಪ

      Sharmitha Gowda in bikini
      ಕಿರುತೆರೆ10 months ago

      Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

      Kannada Serials
      ಕಿರುತೆರೆ10 months ago

      Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

      Bigg Boss- Saregamapa 20 average TRP
      ಕಿರುತೆರೆ10 months ago

      Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

      Kannada Serials
      ಕಿರುತೆರೆ10 months ago

      Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

      galipata neetu
      ಕಿರುತೆರೆ8 months ago

      Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

      Kannada Serials
      ಕಿರುತೆರೆ10 months ago

      Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

      Bigg Boss' dominates TRP; Sita Rama fell to the sixth position
      ಕಿರುತೆರೆ9 months ago

      Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

      geetha serial Dhanush gowda engagement
      ಕಿರುತೆರೆ8 months ago

      Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

      varun
      ಕಿರುತೆರೆ9 months ago

      Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

      Kannada Serials
      ಕಿರುತೆರೆ11 months ago

      Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

      karnataka Rain
      ಮಳೆ10 hours ago

      Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

      Karnataka Rain
      ಮಳೆ11 hours ago

      Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

      karnataka Rain
      ಮಳೆ11 hours ago

      Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

      karnataka Rain
      ಮಳೆ2 days ago

      Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

      Karnataka Rain
      ಮಳೆ2 days ago

      Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

      Bharachukki falls
      ಚಾಮರಾಜನಗರ2 days ago

      Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

      karnataka Rain
      ಮಳೆ3 days ago

      Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

      Elephant combing Makna elephant captured near Bannerghatta
      ಬೆಂಗಳೂರು ಗ್ರಾಮಾಂತರ3 days ago

      Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

      karnataka rain
      ಮಳೆ3 days ago

      Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

      Tungabhadra Dam
      ಕೊಪ್ಪಳ4 days ago

      Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

      ಟ್ರೆಂಡಿಂಗ್‌