Adani stocks: 10,000 crores in 3 months by investing in Adani stocks. Rajeev Jain who made profitAdani stocks : ಅದಾನಿ ಷೇರುಗಳಲ್ಲಿ ಹೂಡಿಕೆಯಿಂದ 3 ತಿಂಗಳಲ್ಲಿ 10,000 ಕೋಟಿ ರೂ. ಲಾಭ ಗಳಿಸಿದ ರಾಜೀವ್‌ ಜೈನ್

ಪ್ರಮುಖ ಸುದ್ದಿ

Adani stocks : ಅದಾನಿ ಷೇರುಗಳಲ್ಲಿ ಹೂಡಿಕೆಯಿಂದ 3 ತಿಂಗಳಲ್ಲಿ 10,000 ಕೋಟಿ ರೂ. ಲಾಭ ಗಳಿಸಿದ ರಾಜೀವ್‌ ಜೈನ್

Adani stocks ಅದಾನಿ ಕಂಪನಿಗಳ ಷೇರುಗಳಲ್ಲಿ ಮೂರು ತಿಂಗಳ ಹಿಂದೆ 15 ಸಾವಿರ ಕೋಟಿ ರೂ. ಹೂಡಿದ್ದ ಅನಿವಾಸಿ ಭಾರತೀಯ ಉದ್ಯಮಿ ರಾಜೀವ್‌ ಜೈನ್‌ ಭರ್ಜರಿ ಲಾಭ ಗಳಿಸಿದ್ದಾರೆ. ವಿವರ ಇಲ್ಲಿದೆ.

VISTARANEWS.COM


on

Adani stocks: 10,000 crores in 3 months by investing in Adani stocks. Rajeev Jain who made profit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಹಿಂಡೆನ್‌ಬರ್ಗ್‌ ವರದಿಯ ಬಳಿಕ ಭಾರಿ ಕುಸಿತಕ್ಕೀಡಾಗಿದ್ದ ಅದಾನಿ ಗ್ರೂಪ್‌ ಕಂಪನಿಗಳ ಷೇರುಗಳಲ್ಲಿ ಮೂರು ತಿಂಗಳಿನ ಹಿಂದೆ 15,000 ಕೋಟಿ ರೂ. ಹೂಡಿದ್ದ ಅನಿವಾಸಿ ಭಾರತೀಯ ಹೂಡಿಕೆದಾರ ರಾಜೀವ್‌ ಜೈನ್‌, ಇದೀಗ ಅಂದಾಜು 10,000 ಕೋಟಿ ರೂ. ಲಾಭ ಗಳಿಸಿದ್ದಾರೆ. (Adani stocks) ರಾಜೀವ್‌ ಜೈನ್‌ ಅವರು 15,000 ಕೋಟಿ ರೂ. ಹೂಡಿದ್ದರು. ಅದರ ಮೌಲ್ಯ ಈಗ 25,000 ಕೋಟಿ ರೂ.ಗೆ ಏರಿಕೆಯಾಗಿದೆ.

ರಾಜೀವ್‌ ಜೈನ್‌ (Rajiv Jain) ಅವರ ಜಿಕ್ಯೂಜಿ ಪಾರ್ಟ್‌ನರ್ಸ್‌ (GQG Partners) ಅದಾನಿ ಕಂಪನಿಗಳಲ್ಲಿ ಹೂಡಿದ್ದ ಮೊತ್ತದ ಮೌಲ್ಯ ಕಳೆದ ಮಾರ್ಚ್‌ 2ಕ್ಕೆ 15,446 ಕೋಟಿ ರೂ. ಆಗಿತ್ತು. ಮಂಗಳವಾರ ಅದರ ಮೌಲ್ಯ 25,515 ಕೋಟಿ ರೂ. ಆಗಿತ್ತು. ಅದಾನಿ ಸಮೂಹದ ಅದಾನಿ ಎಂಟರ್‌ಪ್ರೈಸ್‌, ಅದಾನಿ ಗ್ರೀನ್‌ ಎನರ್ಜಿ, ಅದಾನಿ ಪೋರ್ಟ್ಸ್‌ ಮತ್ತು ಅದಾನಿ ಟ್ರಾನ್ಸ್‌ಮಿಶನ್‌ನಲ್ಲಿ ರಾಜೀವ್‌ ಜೈನ್‌ ಕಂಪನಿ ಹೂಡಿಕೆ ಮಾಡಿತ್ತು.‌

ಅದಾನಿ ಗ್ರೂಪ್‌ನಲ್ಲಿ ಜಿಕ್ಯೂಜಿ ಪಾರ್ಟ್‌ನರ್ಸ್‌ ತನ್ನ ಹೂಡಿಕೆಯನ್ನು 10% ತನಕ ಏರಿಸಿದೆ. ಮುಂದಿನ ಐದು ವರ್ಷಗಳಲ್ಲಿ ಅದಾನಿ ಗ್ರೂಪ್‌ನಲ್ಲಿ ಅದಾನಿ ಕುಟುಂಬದ ಬಳಿಕ ಅತಿ ದೊಡ್ಡ ಹೂಡಿಕೆದಾರರಲ್ಲಿ ಒಬ್ಬರಾಗುವುದಾಗಿ ರಾಜೀವ್‌ ಜೈನ್‌ ಹೇಳಿದ್ದಾರೆ.

ಅದಾನಿ ಎಂಟರ್‌ಪ್ರೈಸ್‌ ಮತ್ತು ಅದಾನಿ ಟ್ರಾನ್ಸ್‌ಮಿಶನ್‌ 21,000 ಕೋಟಿ ರೂ. ಫಂಡ್‌ ಸಂಗ್ರಹಿಸಲು ಸಿದ್ಧತೆ ಮಾಡುತ್ತಿರುವುದಾಗಿ ಇತ್ತೀಚೆಗೆ ಘೋಷಿಸಿವೆ. ಅದಾನಿ ಎಂಟರ್‌ಪ್ರೈಸ್‌ 12,500 ಕೋಟಿ ರೂ, ಹಾಗೂ ಅದಾನಿ ಟ್ರಾನ್ಸ್‌ಮಿಶನ್‌ 8,500 ಕೋಟಿ ರೂ. ಸಂಗ್ರಹಿಸಲು ಉದ್ದೇಶಿಸಿವೆ.

ಇದನ್ನೂ ಓದಿ :Adani Group : ಅದಾನಿ ಗ್ರೂಪ್‌ ಪ್ರವರ್ತಕರಿಂದ ಎಫ್‌ಐಐಗೆ 15,446 ಕೋಟಿ ರೂ. ಷೇರುಗಳ ಮಾರಾಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Amit Shah: ಬೆಂಗಳೂರಲ್ಲಿ ಅಮಿತ್‌ ಶಾ ಹವಾ; ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

Amit Shah: ಬೆಂಗಳೂರಿನಲ್ಲಿ ಬೊಮ್ಮನಹಳ್ಳಿಯ ಸ್ವಾಮಿ ವಿವೇಕಾನಂದ ಸರ್ಕಲ್‌ನಿಂದ ಸೇಂಟ್ ಫ್ರಾನ್ಸಿಸ್ ಸ್ಕೂಲ್‌ವರೆಗೆ ಅಮಿತ್‌ ಶಾ ಅವರ ರೋಡ್ ಶೋ ನಡೆಯಿತು. ಸುಮಾರು ‌3 ಕಿಲೋಮೀಟರ್‌ ದೂರ ರೋಡ್‌ ಶೋ ನಡೆಯಿತು.

VISTARANEWS.COM


on

Amit Shah
Koo

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಬಿಜೆಪಿ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಮಂಗಳವಾರ ರಾತ್ರಿ ಭರ್ಜರಿ ರೋಡ್‌ ಶೋ ಮೂಲಕ ಪ್ರಚಾರ ನಡೆಸಿದರು.

ಬೊಮ್ಮನಹಳ್ಳಿಯ ಸ್ವಾಮಿ ವಿವೇಕಾನಂದ ಸರ್ಕಲ್‌ನಲ್ಲಿ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರೋಡ್‌ ಶೋಗೆ ಚಾಲನೆ ನೀಡಲಾಯಿತು. ವಿವೇಕಾನಂದ ಸರ್ಕಲ್‌ ಬಳಿಯಿಂದ ಸೇಂಟ್ ಫ್ರಾನ್ಸಿಸ್ ಸ್ಕೂಲ್‌ವರೆಗೆ ರೋಡ್ ಶೋ ನಡೆಯಿತು. ಸುಮಾರು ‌3 ಕಿಲೋಮೀಟರ್‌ ದೂರ ನಡೆದ ರೋಡ್‌ ಶೋ ವೀಕ್ಷಿಸಲು ಸಾವಿರಾರು ಜನರು ಆಗಮಿಸಿದ್ದರು. ರೋಡ್‌ ಶೋ ಹಿನ್ನೆಲೆ ಪ್ರಚಾರ ವಾಹನ ತೆರಳುವ ಮಾರ್ಗದಲ್ಲಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿತ್ತು.

ಅಮಿತ್‌ ಶಾ ಅವರಿಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ವಿಪಕ್ಷ ನಾಯಕ ಅಶೋಕ್, ಶಾಸಕರಾದ ಸತೀಶ್ ರೆಡ್ಡಿ, ಸಿ.ಕೆ ರಾಮಮೂರ್ತಿ ಸಾಥ್‌ ನೀಡಿದರು.

ಇದನ್ನೂ ಓದಿ | HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

ರೋಡ್‌ ಶೋ ಉದ್ದಕ್ಕೂ ಪ್ರಧಾನಿ ಮೋದಿ, ಅಮಿತ್‌ ಶಾ ಪರ ಕಾರ್ಯಕರ್ತರಿಂದ ಘೋಷಣೆಗಳು ಮೊಳಗಿದವು. ಎಲ್ಲೆಲ್ಲೂ ಕೇಸರಿಯ ಕಂಪು, ರಸ್ತೆಯುದ್ದಕ್ಕೂ ಬಿಜೆಪಿ ಪಕ್ಷದ ಬಾವುಟಗಳು ಕಂಡುಬಂದವು.

Continue Reading

ಪ್ರಮುಖ ಸುದ್ದಿ

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Public Sector Banks :ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ. ಎಲ್ಒಸಿಗಳ (ಸುಸ್ತಿದಾರರ ವಿರುದ್ಧ ಬ್ಯಾಂಕುಗಳು ಹೊರಡಿಸಿದ) ಮೇಲೆ ಬ್ಯೂರೋ ಆಫ್ ಇಮಿಗ್ರೇಷನ್ ಕಾರ್ಯನಿರ್ವಹಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

VISTARANEWS.COM


on

Public Sector Banks
Koo

ಮುಂಬೈ: ವಿದೇಶದಲ್ಲಿರುವ ಸುಸ್ತಿ ಸಾಲಗಾರರ ವಿರುದ್ಧ ಲುಕ್ ಔಟ್ ನೋಟಿಸ್​ (LOC) ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ (Public Sector Banks) ಕಾನೂನಿನಲ್ಲಿ ಅಧಿಕಾರವಿಲ್ಲ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹೈಕೋರ್ಟ್​ ತೀರ್ಪಿನಿಂದಾಗಿ ಸಾಲ ಕಟ್ಟದೇ ವಿದೇಶಗಳಲ್ಲಿ ವಾಸವಿರುವವರಿಗೆ ನೀಡಲಾಗಿರುವ ಎಲ್ಲ ನೋಟಿಸ್​ಗಳು ರದ್ದಾಗಲಿವೆ.

ಸುಸ್ತಿ ಸಾಲಗಾರರ ವಿರುದ್ಧ ಲುಕ್​ಔಟ್​ ನೋಟಿಸ್​ ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕುಗಳ ಅಧ್ಯಕ್ಷರಿಗೆ ಅಧಿಕಾರ ನೀಡುವಂಥ ಕೇಂದ್ರ ಸರ್ಕಾರ ಹೊರಡಿಸಿದ ಕಚೇರಿ ಜ್ಞಾಪಕ ಪತ್ರದ ಷರತ್ತು ಅಸಂವಿಧಾನಿಕ ಎಂದು ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಮಾಧವ್ ಜಾಮ್ದಾರ್ ಅವರ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ವಕೀಲ ಆದಿತ್ಯ ಠಕ್ಕರ್ ಅವರು ಹೈಕೋರ್ಟ್ ಆದೇಶವನ್ನು ತಡೆಹಿಡಿಯಬೇಕೆಂದು ಕೋರಿದರು. ಆದರೆ ನ್ಯಾಯಪೀಠ ನಿರಾಕರಿಸಿತು.

ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ. ಎಲ್ಒಸಿಗಳ (ಸುಸ್ತಿದಾರರ ವಿರುದ್ಧ ಬ್ಯಾಂಕುಗಳು ಹೊರಡಿಸಿದ) ಮೇಲೆ ಬ್ಯೂರೋ ಆಫ್ ಇಮಿಗ್ರೇಷನ್ ಕಾರ್ಯನಿರ್ವಹಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಯಾವುದೇ ಸುಸ್ತಿದಾರರ ವಿರುದ್ಧ ನ್ಯಾಯಮಂಡಳಿ ಅಥವಾ ಕ್ರಿಮಿನಲ್ ನ್ಯಾಯಾಲಯವು ವಿದೇಶಕ್ಕೆ ಪ್ರಯಾಣಿಸದಂತೆ ನಿರ್ಬಂಧಿಸುವ ಆದೇಶಗಳ ಮೇಲೆ ತನ್ನ ತೀರ್ಪು ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : Diamond Smuggling : ನೂಡಲ್ಸ್​ ಪ್ಯಾaಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

ಕೇಂದ್ರವು ಹೊರಡಿಸಿದ ಕಚೇರಿ ಜ್ಞಾಪಕ ಪತ್ರವು ಸಂವಿಧಾನಕ್ಕೆ ವಿರುದ್ಧವಾಗಿಲ್ಲವಾದರೂ, ಎಲ್ಒಸಿ ಹೊರಡಿಸಲು ಸಾರ್ವಜನಿಕ ವಲಯದ ಬ್ಯಾಂಕಿನ ಅಧ್ಯಕ್ಷರಿಗೆ ಅಧಿಕಾರ ನೀಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಕೇಂದ್ರದ ಕಚೇರಿ ಜ್ಞಾಪಕ ಪತ್ರವು 2018 ರಲ್ಲಿ ಮಾಡಿದ ತಿದ್ದುಪಡಿಯಲ್ಲಿ, “ಭಾರತದ ಆರ್ಥಿಕ ಹಿತದೃಷ್ಟಿಯಿಂದ” ಎಲ್ಒಸಿಗಳನ್ನು ನೀಡಲು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಅಧಿಕಾರ ನೀಡಿತ್ತು.

ಒಬ್ಬ ವ್ಯಕ್ತಿಯ ನಿರ್ಗಮನವು ದೇಶದ ಆರ್ಥಿಕ ಹಿತಾಸಕ್ತಿಗೆ ಹಾನಿಕಾರಕವಾಗಿದ್ದರೆ ಅವನು/ ಅವಳು ವಿದೇಶಕ್ಕೆ ಪ್ರಯಾಣಿಸುವುದನ್ನು ನಿರ್ಬಂಧಿಸುತ್ತದೆ ಎಂದು ಹೇಳಿತ್ತು “ಭಾರತದ ಆರ್ಥಿಕ ಹಿತಾಸಕ್ತಿ” ಎಂಬ ಪದಗಳನ್ನು ಯಾವುದೇ ಬ್ಯಾಂಕಿನ “ಆರ್ಥಿಕ ಹಿತಾಸಕ್ತಿಗಳೊಂದಿಗೆ” ತುಲನೆ ಮಾಡುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

Continue Reading

ಪ್ರಮುಖ ಸುದ್ದಿ

Look between H and L : ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೆಂಡ್​ ಆದ H ಮತ್ತು L; ಏನಿದರ ಗಮ್ಮತ್ತು?

Look between H and L : ನಿಮ್ಮ ಕೀಬೋರ್ಡ್​​ನಲ್ಲಿ ಎಚ್ ಮತ್ತು ಎಲ್ ನಡುವೆ ನೋಡಿ” ಟ್ರೆಂಡ್ ಕೂಡ ಗೊಂದಲ ಸೃಷ್ಟಿಸಿತು. ಯಾಕೆಂದರೆ ಸ್ವಿಗ್ಗಿ, ಯೂಟ್ಯೂಬ್, ಬ್ಲಿಂಕಿಟ್ ಮತ್ತು ಇತರ ಬ್ರಾಂಡ್​ಗಳು ಕೂಡ ತಮ್ಮದೂ ಇರಲಿ ಎಂದು ಪೋಸ್ಟ್​​ ಮಾಡಿದವು. ಹೀಗಾಗಿ ವಿಷಯವೇನೆಂದು ತಿಳಿದುಕೊಳ್ಳುವುದು ಅಗತ್ಯ.

VISTARANEWS.COM


on

ook between H and L
Koo

ಬೆಂಗಳೂರು: ಮೇಣದ ಅರಮನೆಗೆ ಬೆಂಕಿ ಹಿಡಿದಷ್ಟೇ ವೇಗವಾಗಿ ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೆಂಡ್ ಗಳು ಸೃಷ್ಟಿಯಾಗುತ್ತವೆ. ವ್ಯಕ್ತಿಯೊಬ್ಬರು ಶೇರ್ ಮಾಡುವ ಯಾವುದೊ ಒಂದು ಕಾನ್ಸೆಪ್ಟ್​ ಬೆಳೆಬೆಳೆದು ವಿಶ್ವ ವ್ಯಾಪಿಯಾಗುತ್ತದೆ. ಆ ವಿಷಯಕ್ಕೆ ತಲೆ, ಕಾಲು ಮತ್ತು ಬಾಲಗಳೂ ಸೇರಿಕೊಳ್ಳುತ್ತವೆ. ಮುಂದೆ ಅದು ಎಲ್ಲರ ಮನಸ್ಸನ್ನೂ ಗೆಲ್ಲುವ ಸೋಶಿಯಲ್​ ಮೀಡಿಯಾ ಟ್ರೆಂಡ್ ಆಗಿ ಉಳಿಯುತ್ತದೆ. ಅಂತೆಯೇ ಮಂಗಳವಾರ (ಏಪ್ರಿಲ್ 23ರಂದು) ಸೋಶಿಯಲ್​ ಮೀಟಿಯಾ ವೇದಿಕೆಯಾಗಿರುವ ಎಕ್ಸ್​​ನಲ್ಲಿ ಎಚ್​​ ಮತ್ತು ಎಲ್ ಮಧ್ಯೆ ನೋಡಿ (Look between H and L) ಟ್ರೆಂಡ್​ ಕಿಡಿ ಹಚ್ಚಿತ್ತು. ಎಲ್ಲಿ ನೋಡಿದರೂ ಇದೇ ರೀತಿಯ ಪೋಸ್ಟ್​ಗಳು ಕಾಣಿಸುತ್ತಿದ್ದವು. ಆರಂಭದಲ್ಲಿ ಪೋಸ್ಟ್​​ ನೋಡಿ ಗಾಬರಿ ಬಿದ್ದಿದ್ದರು ಹಲವರು. ಅರ್ಥ ಮಾಡಿಕೊಂಡ ಬಳಿಕ ಅದು ದೊಡ್ಡ ವಿನೋದವಾಗಿ ಮಾರ್ಪಾಡಾಯಿತು.

ಸೋಶಿಯಲ್​ ಮೀಡಿಯಾಗಳಲ್ಲಿ ಆಗಾಗ್ಗೆ ಮೀಮ್ ಗಳು, ವೀಡಿಯೊಗಳು ಮತ್ತು ನೆಟ್ಟಿಗರು ಹಂಚಿಕೊಳ್ಳುವ ವಿಷಯಗಳು ಸಮೃದ್ಧವಾಗಿರುತ್ತವೆ. ಆದಾಗ್ಯೂ, ಈ ಕೆಲವು ಸಂಗತಿಗಳ ಅರ್ಥದ ಬಗ್ಗೆ ತಿಳಿದಿಲ್ಲದ ಬಹಳಷ್ಟು ಜನರಿಗೆ ಇದೇನು ಅನಿಸುವುದು ಸಹಜ. ಅಂತೆಯೇ “ನಿಮ್ಮ ಕೀಬೋರ್ಡ್​​ನಲ್ಲಿ ಎಚ್ ಮತ್ತು ಎಲ್ ನಡುವೆ ನೋಡಿ” ಟ್ರೆಂಡ್ ಕೂಡ ಗೊಂದಲ ಸೃಷ್ಟಿಸಿತು. ಯಾಕೆಂದರೆ ಸ್ವಿಗ್ಗಿ, ಯೂಟ್ಯೂಬ್, ಬ್ಲಿಂಕಿಟ್ ಮತ್ತು ಇತರ ಬ್ರಾಂಡ್​ಗಳು ಕೂಡ ತಮ್ಮದೂ ಇರಲಿ ಎಂದು ಪೋಸ್ಟ್​​ ಮಾಡಿದವು. ಹೀಗಾಗಿ ವಿಷಯವೇನೆಂದು ತಿಳಿದುಕೊಳ್ಳುವುದು ಅಗತ್ಯ.

ಏನಿದು Look between H and L?

ನಿಮ್ಮ ಕಂಪ್ಯೂಟರ್ ಅಥವಾ ಮೊಬೈಲ್ ಕಿ ಪ್ಯಾಡ್​ನಲ್ಲಿ ಇಂಗ್ಲಿಷ್​ನ H ಮತ್ತು L ನಡುವೆ J ಮತ್ತು K ಇದೆ. ಹಾಗಾದರೆ ಜೆ.ಕೆ ಎಂದರೇನು? ಇಂಗ್ಲಿಷ್​ನಲ್ಲಿ Just Kidding ( ಕೇವಲ ತಮಾಷೆಗಾಗಿ) ಎಂಬ ಮಾತಿದೆ. ಅದನ್ನು ನೇರವಾಗಿ ಹೇಳುವ ಬದಲು Look between H and L ಟ್ರೆಂಡ್​ ಸೃಷ್ಟಿ ಮಾಡಲಾಗಿದೆ. ಅಂದ ಹಾಗೆ ಇದಕ್ಕೂ ಒಂದು ಕಾರಣವಿದೆ. ಇತ್ತೀಚೆಗೆ ಮಲಯಾಳಂನಲ್ಲಿ ‘ಪ್ರೇಮಾಲು’ ಎಂಬ ಸಿನಿಮಾ ಬಿಡುಗಡೆಯಾಗಿತ್ತು. ಅದು ಈಗ ಒಟಿಟಿಯಲ್ಲೂ ಲಭ್ಯ. ಅದಲ್ಲಿ ಭಗ್ನ ಪ್ರೇಮಿ ಹಾಗೂ ಐಟಿ ಕಂಪನಿಯೊಂದರ ಪ್ರಾಜೆಕ್ಟ್​ ಮ್ಯಾನೇಜರ್​ ಆದಿ ಎಂಬ ಪಾತ್ರವನ್ನು Just Kidding ಅನ್ನು ಪದೇ ಪದೆ ಬಳಸುತ್ತಾನೆ. ಗಂಭೀರವಾದ ವಿಷಯವನ್ನು ಹೇಳಿ just kidding ಎಂದು ಹೇಳುತ್ತಿದ್ದಾನೆ.

ಇದನ್ನೂ ಓದಿ: Virat kohli : ಅಂಪೈರ್​ಗಳ ಕೈ ಕುಲುಕಲೂ ನಿರಾಕರಿಸಿದ್ದ ವಿರಾಟ್​ ಕೊಹ್ಲಿ; ವಿಡಿಯೊ ಇದೆ

ಇದೇ ವೇಳೆ Look Between T and O ಟ್ರೆಂಡ್​ ಕೂಡ ಆಗಿದೆ. ಇದು 2021ರಲ್ಲಿ ಆರಂಭಗೊಂಡಿತು. 4Chan ಎಂಬ ಚಿತ್ರ ಆಧಾರಿತ ವೆಬ್​​ ಸರಣಿಯದ್ದಾಗಿದೆ. ಕೀಬೋರ್ಡ್​​ನಲ್ಲಿ T ಮತ್ತು O ನಡುವಿನ Y, U ಮತ್ತು I ಅಕ್ಷರಗಳಿವೆ. ಇದು ಅನಿಮೆ ಸರಣಿಯ ಪಾತ್ರವಾದ Yui ಹೆಸರಾಗಿದೆ. ಇದು ತಮ್ಮ ಪ್ರೌಢ ಶಾಲೆಯ ಸಂಗೀತ ಕ್ಲಬ್ ಮೂಲಕ ಬ್ಯಾಂಡ್ ನುಡಿಸುವು ಹುಡುಗಿಯ ಕುರಿತದ್ದು.

ಬಹಳಷ್ಟು ಜನರು ಈ ಟ್ರೆಂಡ್​ ತಮ್ಮ ಪ್ರತಿಕ್ರಿಯೆಗಳನ್ನು ಸಹ ವ್ಯಕ್ತಪಡಿಸಿದರು. ಕೆಲವರು ಅದರ ಬಗ್ಗೆ ಗೊಂದಲಕ್ಕೊಳಗಾಗಿದ್ದರೆ ಇತರರು ಇದು “ಕಿರಿಕಿರಿ” ಎಂದು ಎಂದೂ ಕಾಮೆಂಟ್​ ಮಾಡಿದ್ದಾರೆ.

Continue Reading

ಕರ್ನಾಟಕ

Lok Sabha Election 2024: ಬೆಂಗಳೂರಲ್ಲಿ ನಾಳೆಯಿಂದ ಏ.26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ; ಮದ್ಯ ಮಾರಾಟವೂ ಬಂದ್‌

Lok Sabha Election 2024: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಏ.24ರ ಸಂಜೆ 6 ಗಂಟೆಯಿಂದ ಏ.26ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ (Lok Sabha Election 2024) ನಡೆಯುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಏ.24ರ ಸಂಜೆ 6 ಗಂಟೆಯಿಂದ ಏ.26ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಅಲ್ಲದೇ ಮದ್ಯ ಮಾರಾಟಕ್ಕೂ ನಿಷೇಧ ವಿಧಿಸಲಾಗಿದೆ.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಬುಧವಾರ ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜತೆಗೆ 5 ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ. ನಿಷೇಧಾಜ್ಞೆಯು ಏಪ್ರಿಲ್ 26ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿರಲಿದೆ. ಈ ವೇಳೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನ 5 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 13 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 11 ಸಿಆರ್‌ಪಿಎಫ್, 14 ಕೆಎಸ್‌ಆರ್‌ಪಿ ಹಾಗೂ 40 ಸಿಎಆರ್ ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Lok Sabha Election 2024: ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

ಬೆಂಗಳೂರು: ಲೋಕಸಭಾ ಚುನಾವಣೆ- 2024ರ (Lok Sabha election 2024) ಅಂಗವಾಗಿ ರಾಜ್ಯದಲ್ಲಿ (karnataka) ಏಪ್ರಿಲ್ 26ರಂದು ಮತದಾನ (voting) ನಡೆಯಲಿದ್ದು, ಈ ಸಂದರ್ಭದಲ್ಲಿ ಮತದಾರರ ಗುರುತು ಚೀಟಿಯನ್ನು (voter id) ಪ್ರತಿಯೊಬ್ಬ ಅರ್ಹ ಮತದಾರನೂ ಹೊಂದಿರಲೇಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ (Voter ID) ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ.

ಮತದಾರರ ಗುರುತು ಚೀಟಿಯು ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಮತದಾರನ ಗುರುತು, ವಾಸಸ್ಥಳ, ಜನನ ಮತ್ತು ಇತರ ವಿವರಗಳನ್ನು ದೃಢೀಕರಿಸುವ ಇದು ಮಹತ್ವದ ಅಧಿಕೃತ ದಾಖಲೆಗಳಲ್ಲಿ ಒಂದಾಗಿದೆ.
ಮತದಾನವು ನಮ್ಮ ಮೂಲಭೂತ ಹಕ್ಕು ಮಾತ್ರವಲ್ಲ ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಜವಾಬ್ದಾರಿಯಾಗಿದೆ. ಇದಕ್ಕಾಗಿ ವೋಟರ್ ಐಡಿ ಬಹಳ ಮುಖ್ಯವಾದ ದಾಖಲೆಯಾಗಿದೆ. ಯಾಕೆಂದರೆ ಅದನ್ನು ಹೊಂದಿರುವವರ ಗುರುತು ಮತ್ತು ವಿವರಗಳನ್ನು ಪರಿಶೀಲಿಸಲು ಸಹಕಾರಿಯಾಗುತ್ತದೆ.

ಇದನ್ನೂ ಓದಿ: Voter Slip by Mobile: ಮತಪಟ್ಟಿಯಲ್ಲಿ ಹೆಸರು ಪರಿಶೀಲನೆ, ವೋಟರ್ ಸ್ಲಿಪ್ ಡೌನ್‌ಲೋಡ್‌ ಮೊಬೈಲ್‌ನಲ್ಲೇ ಮಾಡಿ!

ಯಾರು ಅರ್ಹರು?

ಭಾರತದ ಚುನಾವಣಾ ಆಯೋಗದ ಪ್ರಕಾರ ನಾಗರಿಕರು ಈ ಕೆಳಗಿನ ಷರತ್ತುಗಳ ಅಡಿಯಲ್ಲಿ ಮತದಾರರಾಗಲು ಅರ್ಹರಾಗಿರುತ್ತಾರೆ. 18 ವರ್ಷ ವಯಸ್ಸಿನ ಪ್ರತಿಯೊಬ್ಬ ನಾಗರಿಕರು ಯಾವುದಾದರೂ ನಿರ್ಧಿಷ್ಟ ಕಾರಣದಿಂದ ಅನರ್ಹಗೊಳಿಸದ ಹೊರತು ಮತದಾರರ ಗುರುತು ಚೀಟಿ ಪಡೆಯಲು ದಾಖಲಾತಿ ನಡೆಸಲು ಅರ್ಹರಾಗಿರುತ್ತಾರೆ.
ಅರ್ಹ ಮತದಾರನ ಸಾಮಾನ್ಯ ನಿವಾಸದ ಸ್ಥಳದಲ್ಲಿ ಮಾತ್ರ ನೋಂದಣಿ ಮಾಡಿಸಬಹುದು ಹಾಗೂ ಒಂದೇ ಸ್ಥಳದಲ್ಲಿ ಮಾತ್ರ ನೋಂದಣಿ ಸಾಧ್ಯ.


ಸಾಗರೋತ್ತರ ಭಾರತೀಯರ ಪಾಸ್‌ಪೋರ್ಟ್‌ನಲ್ಲಿನೀಡಿರುವ ವಿಳಾಸದಲ್ಲಿ ಸಾಮಾನ್ಯವಾಗಿ ವಾಸಿಸುತ್ತಾರೆ ಎಂದು ಪರಿಗಣಿಸಲಾಗುತ್ತದೆ. ಆದರೆ ಮತದಾರರು ತಮ್ಮ ಮನೆಯ ವಿಳಾಸದಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಾರೆ ಎಂದು ಪರಿಗಣಿಸಲಾಗುವುದು.

ವೋಟರ್ ಐಡಿ ಇಲ್ಲದೆ ಮತ ಚಲಾಯಿಸಬಹುದೇ?

ಭಾರತೀಯ ಚುನಾವಣಾ ಆಯೋಗದ ಪ್ರಕಾರ ಮತಗಟ್ಟೆಗಳಲ್ಲಿ ಮತದಾರರ ಗುರುತಿನ ಅಗತ್ಯವಿದೆ. ಮತ ಚಲಾಯಿಸಲು ಚುನಾವಣಾ ಆಯೋಗ ನೀಡಿದ ಮತದಾರರ ಗುರುತಿನ ಚೀಟಿ ಅಥವಾ ಅಧಿಕೃತ ಗುರುತಿನ ಯಾವುದೇ ಒಂದು ದಾಖಲೆಯನ್ನು ಒದಗಿಸಬೇಕು.

ಭಾರತೀಯ ಚುನಾವಣಾ ಆಯೋಗ (ಇಸಿಐ) ನೀಡಿದ ಸೂಚನೆಗಳ ಪ್ರಕಾರ ಮತದಾರರ ಗುರುತಿನ ಚೀಟಿ ಇಲ್ಲದೆಯೂ ಚುನಾವಣೆಯಲ್ಲಿ ಮತ ಚಲಾಯಿಸಬಹುದು. ಅಧಿಕೃತ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರೆಗೆ ಮತ ಚಲಾಯಿಸಲು ಮತದಾರರು ಅರ್ಹನಾಗಿರುತ್ತಾರೆ.

ಹೆಸರಿದೆಯೇ ಪರಿಶೀಲಿಸಿ

ಮತದಾನ ಪ್ರಕ್ರಿಯೆಯಲ್ಲಿ (ಇಸಿಐ) ಪಾಲ್ಗೊಳ್ಳುವ ಮೊದಲು ಭಾರತದ ಚುನಾವಣಾ ಆಯೋಗದ ಅಧಿಕೃತ ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂದು ಪರಿಶೀಲಿಸಬೇಕು. ಮತಪತ್ರವನ್ನು ಚಲಾಯಿಸುವ ಮೊದಲು ಈ ಪಟ್ಟಿಯನ್ನು ಪರಿಶೀಲಿಸುವುದು ನಿರ್ಣಾಯಕವಾಗಿದೆ ಏಕೆಂದರೆ ಅದರಲ್ಲಿ ನೀವು ಮತ ಚಲಾಯಿಸುವ ಅರ್ಹತೆಯನ್ನು ದೃಢೀಕರಿಸುತ್ತದೆ.

ಮತದಾರರ ಗುರುತಿನ ಚೀಟಿಯನ್ನು ಹೊಂದಿಲ್ಲದಿದ್ದರೆ ಚುನಾವಣಾ ಆಯೋಗವು ಗೊತ್ತುಪಡಿಸಿದ ಪರ್ಯಾಯ ದಾಖಲೆಗಳನ್ನು ಮತದಾರರು ಬಳಸಬಹುದು.

ಇತರ ದಾಖಲೆ ಯಾವುದು?

ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಗುರುತಿಗಾಗಿ ಎಪಿಕ್ ಅಥವಾ ಮತದಾರರ ಐಡಿ ಹೊಂದಿಲ್ಲದಿದ್ದರೆ ಸಾರ್ವತ್ರಿಕ ಚುನಾವಣೆಯ ವೇಳೆ ವೋಟರ್ ಐಡಿ ಇಲ್ಲದೆಯೇ ಮತವನ್ನು ಚಲಾಯಿಸಲು ಬಳಸಬಹುದಾದ ದಾಖಲೆಗಳು ಇಂತಿವೆ.

ಆಧಾರ್ ಕಾರ್ಡ್, MNREGA ಜಾಬ್ ಕಾರ್ಡ್, ಬ್ಯಾಂಕ್/ ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌ಗಳು, ಕಾರ್ಮಿಕ ಸಚಿವಾಲಯದ ಯೋಜನೆಯಡಿ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಿಗೆ, ಪ್ಯಾನ್ ಕಾರ್ಡ್, NPR ಅಡಿಯಲ್ಲಿ RGI ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್ ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ಕೇಂದ್ರ/ ರಾಜ್ಯ ಸರ್ಕಾರ/ ಪಿಎಸ್‌ಯು/ ಪಬ್ಲಿಕ್ ಲಿಮಿಟೆಡ್ ಕಂಪೆನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿಗಳು/ ಎಂಎಲ್‌ಎಗಳು/ ಎಂಎಲ್‌ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು, ವಿಶಿಷ್ಟ ಅಂಗವೈಕಲ್ಯ ಐಡಿ (UDID) ಕಾರ್ಡ್ ಗಳನ್ನು ದಾಖಲೆಯಾಗಿ ಮತದಾನದ ವೇಳೆ ಗುರುತು ಚೀಟಿಯಾಗಿ ಮತದಾನ ಕೇಂದ್ರದಲ್ಲಿ ತೋರಿಸಬಹುದಾಗಿದೆ.

ನೋಂದಣಿ ಸ್ಥಿತಿ ಪರಿಶೀಲನೆ ಹೇಗೆ?

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಕಾಣಿಸಿಕೊಂಡರೆ ಮಾತ್ರ ಮತ ಚಲಾಯಿಸಬಹುದು. ಪಟ್ಟಿಯಲ್ಲಿ ಹೆಸರು ಇದೆಯೇ, ಇಲ್ಲವೇ ಎಂಬುದನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ ಸೈಟ್ ನಲ್ಲಿ https://electoralsearch.eci.gov.in ಗೆ ಲಾಗಿನ್ ಆಗಿ ನೋಡಬಹುದು. ಅಲ್ಲದೇ ಮತದಾರರ ಸಹಾಯವಾಣಿ 1950ಕ್ಕೆ ಕರೆಯೂ ಪರಿಶೀಲನೆ ನಡೆಸಬಹುದಾಗಿದೆ.

Continue Reading
Advertisement
DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
ರಾಮನಗರ11 mins ago

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Priyanka Gandhi
ಕರ್ನಾಟಕ17 mins ago

Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Lok Sabha Election 2024
Lok Sabha Election 202447 mins ago

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Amit Shah
ಕರ್ನಾಟಕ52 mins ago

Amit Shah: ಬೆಂಗಳೂರಲ್ಲಿ ಅಮಿತ್‌ ಶಾ ಹವಾ; ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

Public Sector Banks
ಪ್ರಮುಖ ಸುದ್ದಿ2 hours ago

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Union Minister Pralhad Joshi visit Sri Nuggikeri Anjaneya Swamy Temple in dharwad
ಕರ್ನಾಟಕ2 hours ago

Pralhad Joshi: ಸಚಿವ ಪ್ರಲ್ಹಾದ್‌ ಜೋಶಿಗೆ ಶ್ರೀ ಆಂಜನೇಯ ಸ್ವಾಮಿಯ ಆಶೀರ್ವಾದ; ತಾವರೆ ಹೂ ರೂಪದಲ್ಲಿ ಪ್ರಸಾದ!

Kanguva Budget
ಸಿನಿಮಾ2 hours ago

Kanguva Budget: ಭಾರಿ ಸದ್ದು ಮಾಡುತ್ತಿರುವ ಕಂಗುವ ಚಿತ್ರದ ಬಜೆಟ್ ಎಷ್ಟು ಗೊತ್ತೇ?

ook between H and L
ಪ್ರಮುಖ ಸುದ್ದಿ2 hours ago

Look between H and L : ಸೋಶಿಯಲ್​ ಮೀಡಿಯಾಗಳಲ್ಲಿ ಟ್ರೆಂಡ್​ ಆದ H ಮತ್ತು L; ಏನಿದರ ಗಮ್ಮತ್ತು?

Lok Sabha Election-2024
ರಾಜಕೀಯ2 hours ago

Lok Sabha Election 2024: ಬಿಜೆಪಿ, ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳ ಯಾವವು? ಇಲ್ಲಿದೆ ಅಂತಿಮ ಚಿತ್ರಣ

Neha Murder Case How can a mobile photo be leaked when accused Fayaz is in jail
ಹುಬ್ಬಳ್ಳಿ3 hours ago

Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌