ಮುಂಬಯಿನಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ತುರ್ತು ಭೂಸ್ಪರ್ಶ - Vistara News

ವಾಣಿಜ್ಯ

ಮುಂಬಯಿನಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ತುರ್ತು ಭೂಸ್ಪರ್ಶ

ಮುಂಬಯಿನಿಂದ ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಗುರುವಾರ ಹಾರಾಟ ಆರಂಭಿಸಿದ ಕೆಲ ನಿಮಿಷಗಳಲ್ಲಿ ತಾಂತ್ರಿಕ ದೋಷದ ಪರಿಣಾಮ ಮುಂಬಯಿನಲ್ಲಿ ಭೂಸ್ಪರ್ಶ ಮಾಡಬೇಕಾಯಿತು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಮುಂಬಯಿನಿಂದ ಗುರುವಾರ ಬೆಂಗಳೂರಿಗೆ ಹಾರಾಟ ಆರಂಭಿಸಿದ್ದ ಏರ್‌ ಇಂಡಿಯಾದ ವಿಮಾನದಲ್ಲಿ ಎಂಜಿನ್‌ ದೋಷ ಕಾಣಿಸಿದ್ದು, ತುರ್ತು ಭೂಸ್ಪರ್ಶ ಮಾಡಲಾಯಿತು.
ಏರ್‌ ಇಂಡಿಯಾದ ಎ320 ನಿಯೊ ವಿಮಾನವು ಮುಂಬಯಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 9.45ಕ್ಕೆ ಹಾರಾಟ ಆರಂಭಿಸಿದ ಕೆಲ ನಿಮಿಷಗಳಲ್ಲೇ ಒಂದು ಎಂಜಿನ್‌ ಹಠಾತ್ತನೆ ಸ್ಥಗಿತವಾಯಿತು.

ವಿಮಾನದಲ್ಲಿ ಎರಡು ಎಂಜಿನ್‌ ಇರುತ್ತದೆ. ಅದರಲ್ಲೊಂದು ಸ್ಥಗಿತವಾದ್ದರಿಂದ ಪೈಲೆಟ್‌ಗಳು ವಿಮಾನವನ್ನು ನಿಲ್ದಾಣಕ್ಕೆ ವಾಪಸ್‌ ಕರೆತಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ತನಿಖೆ ಆರಂಭಿಸಿದೆ. ಟೇಕಾಫ್‌ ಆಗುತ್ತಿದ್ದಂತೆ ಪೈಲಟ್‌ಗಳು ಎಡಬದಿಯ ಎಂಜಿನ್‌ ತೀವ್ರ ಬಿಸಿಯಾಗಿರುವ ಬಗ್ಗೆ ಅಲರ್ಟ್‌ ಸ್ವೀಕರಿಸಿದರು. ಕೂಡಲೇ ವಿಮಾನವನ್ನು ನಿಲ್ದಾಣಕ್ಕೆ ಹಿಂತಿರುಗಿಸಲು ನಿರ್ಧರಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಫ್ಯಾಷನ್

Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!

ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (radhika merchant) ಅವರನ್ನು ಇದೇ ತಿಂಗಳ 12ರಂದು ಮುಂಬಯಿನ (mumbai) ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (BKC) ಪ್ರಸಿದ್ಧ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿರುವ ಅನಂತ್ ಅಂಬಾನಿ (Anant Ambani) ಅವರ ಸಂಗ್ರಹದಲ್ಲಿರುವ ದುಬಾರಿ ವಾಚ್ ಗಳು ಯಾವುದು, ಇದರ ಬೆಲೆ ಎಷ್ಟು ಗೊತ್ತೇ?

VISTARANEWS.COM


on

By

Anant Ambani
Koo

ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (RIL) ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ಹಾಗೂ ರಿಲಾಯನ್ಸ್ ಫೌಂಡೇಶನ್ ನ (Reliance Foundation) ಸಂಸ್ಥಾಪಕಿ ನೀತಾ ಅಂಬಾನಿ (nita ambani) ಅವರ ಕೊನೆಯ ಪುತ್ರ ಅನಂತ್ ಅಂಬಾನಿ (Anant Ambani) ತಮ್ಮ ಮದುವೆಯ ಕಾರಣದಿಂದ ಕಳೆದ ಒಂದು ವರ್ಷದಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (radhika merchant) ಅವರನ್ನು ಇದೇ ತಿಂಗಳ 12ರಂದು ಮುಂಬಯಿನ (mumbai) ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (BKC) ಪ್ರಸಿದ್ಧ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಈ ನಡುವೆ ಇದೀಗ ಅನಂತ್ ಅಂಬಾನಿ ಅವರ ಸಂಗ್ರಹದಲ್ಲಿರುವ ದುಬಾರಿ ವಾಚ್ ಎಲ್ಲರ ಗಮನ ಸೆಳೆಯುತ್ತಿದೆ.

ಕ್ಯುರೇಟೆಡ್ ಮತ್ತು ಅತ್ಯದ್ಭುತ ದುಬಾರಿ ವಾಚ್ ಸಂಗ್ರಹಣೆಗಾಗಿ ಹೆಸರುವಾಸಿಯಾಗಿರುವ ಅನಂತ್ ಅಂಬಾನಿ ಅವರ ಬಳಿ ಇರುವ ಕೆಲವು ಅಸಾಧಾರಣ ವಾಚ್ ಸಂಗ್ರಹದ ಕುರಿತು ಕಿರು ಮಾಹಿತಿ ಇಲ್ಲಿದೆ.


ಪಾಟೆಕ್ ಫಿಲಿಪ್ ಗ್ರ್ಯಾಂಡ್ ಮಾಸ್ಟರ್ ಚೈಮ್

ಅನಂತ್ ಅಂಬಾನಿ ಗ್ರ್ಯಾಂಡ್ ಮಾಸ್ಟರ್ ಚೈಮ್ ಸೇರಿದಂತೆ ಪಾಟೆಕ್ ಫಿಲಿಪ್ ಅವರ ಅತ್ಯಂತ ದುಬಾರಿ ಕೈಗಡಿಯಾರಗಳಲ್ಲಿ ಎರಡನ್ನು ಹೊಂದಿದ್ದಾರೆ. ಪಾಟೆಕ್‌ ನ ಅತ್ಯಂತ ದುಬಾರಿ ಕೈಗಡಿಯಾರ ಇದಾಗಿದೆ. ಇದುವರೆಗೆ ಇದರ ಏಳು ವಾಚ್‌ಗಳನ್ನು ಮಾತ್ರ ಮಾಡಲಾಗಿದೆ. ಇದು ಇತ್ತೀಚೆಗೆ ಹರಾಜಿನಲ್ಲಿ 31 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 2.58 ಬಿಲಿಯನ್ ರೂ.ಗಳಾಗಿದೆ.


ಆಡೆಮರ್ಸ್ ಪಿಗುಯೆಟ್ ರಾಯಲ್ ಓಕ್ ಕಾನ್ಸೆಪ್ಟ್ ಜಿಎಂಟಿ ಟೂರ್‌ಬಿಲ್ಲನ್

ರಾಯಲ್ ಓಕ್‌ನ 30ನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ಬಿಡುಗಡೆ ಮಾಡಲಾದ ಈ ದಪ್ಪ ಗಡಿಯಾರವು ಟೈಟಾನಿಯಂ ಕೇಸ್ ಮತ್ತು ಅಸ್ಥಿಪಂಜರ ಮಾದರಿಯ ಡಯಲ್ ಅನ್ನು ಒಳಗೊಂಡಿದೆ. ಅದರ ಸಂಕೀರ್ಣ ಕಾರ್ಯವಿಧಾನ ಮೋಡಿ ಮಾಡುವಂತಿದೆ. ಮೈ ಯ ಶಾಖ ಮತ್ತು ಜಿಎಂಟಿ ಕಾರ್ಯದೊಂದಿಗೆ ಇದು ಕಾರ್ಯ ನಿರ್ವಹಿಸುತ್ತದೆ. ಇದರ ಅಂದಾಜು ಬೆಲೆ 1.9 ಕೋಟಿ ರೂ.


ಪಾಟೆಕ್ ಫಿಲಿಪ್ ನಾಟಿಲಸ್ ಟ್ರಾವೆಲ್ ಟೈಮ್

ಪಾಟೆಕ್ ಫಿಲಿಪ್ ವಾಚ್‌ ನ ಅತ್ಯಂತ ಅಪರೂಪದ ವಾಚ್ ಇದಾಗಿದ್ದು, ಮಾಣಿಕ್ಯ, ವಜ್ರ ಬಿಳಿ ಚಿನ್ನವನ್ನು ಒಳಗೊಂಡಿದೆ. ಅತ್ಯಂತ ಐಷಾರಾಮಿ ಕೈಗಡಿಯಾರವಾದ ಇದು ಕೆಂಪು ಮಾಣಿಕ್ಯ, ಹಸಿರು ಪಚ್ಚೆಗಳಿಂದ ಅಲಂಕರಿಸಲ್ಪಟ್ಟಿದೆ. ಇದರ ಅಂದಾಜು ಬೆಲೆ 8.2 ಕೋಟಿ ರೂ.

ಇದನ್ನೂ ಓದಿ: Nita Ambani: 50-60 ಬನಾರಸಿ ಸೀರೆ ಖರೀದಿಸಿದ ನೀತಾ ಅಂಬಾನಿ: ಸೀರೆಯ ದರ ಎಷ್ಟು?


ರಿಚರ್ಡ್ ಮಿಲ್ಲೆ ಆರ್ ಎಮ್ 56-01 ಟೂರ್‌ಬಿಲ್ಲನ್

ರಿಚರ್ಡ್ ಮಿಲ್ಲೆ ಆರ್ ಎಮ್ 56-01 ಶುದ್ಧ, ಸ್ಫಟಿಕದಂತಹ ನೀಲಮಣಿಯನ್ನು ಹೊಂದಿದೆ. ಇದು ಅಸಾಧಾರಣ ಬಾಳಿಕೆ ಮತ್ತು ಸ್ಕ್ರಾಚ್ ಪ್ರತಿರೋಧವನ್ನು ಹೊಂದಿದೆ. ಹಸಿರು ನೀಲಮಣಿಯನ್ನು ಒಳಗೊಂಡಿರುವ ಇದರ ಅಂದಾಜು ಬೆಲೆ 25 ಕೋಟಿ ರೂ.


ಪಾಟೆಕ್ ಫಿಲಿಪ್ ಸ್ಕೈ ಮೂನ್ ಟೂರ್ಬಿಲ್ಲಾನ್

ಪಾಟೆಕ್ ಫಿಲಿಪ್ ರಚಿಸಿದ ಅತ್ಯಂತ ಅಪರೂಪದ ಕೈಗಡಿಯಾರಗಳಲ್ಲಿ ಸ್ಕೈ ಮೂನ್ ಟೂರ್‌ಬಿಲ್ಲನ್ ನಲ್ಲಿ ಕ್ಯಾಲೆಂಡರ್, ಚಂದ್ರನ ಚಲನೆಯ ಸೂಚಕ ಸೇರಿದಂತೆ ಹನ್ನೆರಡು ವಿಶೇಷತೆಗಳನ್ನು ಒಳಗೊಂಡಿದೆ. ಇದರ ಸಂಕೀರ್ಣ ವಿನ್ಯಾಸ ಮತ್ತು ಅಸಾಧಾರಣ ಕರಕುಶಲತೆಯು ಸ್ವಿಸ್ ವಾಚ್‌ಮೇಕಿಂಗ್ ಅನ್ನು ಅತ್ಯುತ್ತಮವಾಗಿಸಿದೆ. ಇದರ ಅಂದಾಜು ಬೆಲೆ 54 ಕೋಟಿ ರೂ.

Continue Reading

ಮನಿ-ಗೈಡ್

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವ ಪ್ರಕ್ರಿಯೆಯು ಸ್ವಲ್ಪ ಸಂಕೀರ್ಣ ಮತ್ತು ಸವಾಲಿನದ್ದಾಗಿರಬಹುದು. ತೆರಿಗೆದಾರರು ತಮ್ಮ ಐಟಿಆರ್ (ITR Filing) ಅನ್ನು ಸಲ್ಲಿಸುವಾಗ ತಿಳಿದಿರಬೇಕಾದ ಮತ್ತು ಗಮನ ಹರಿಸಬೇಕಾದ ಕೆಲವು ಪ್ರಮುಖ ವಿಷಯಗಳಿವೆ. ಆದಾಯ ತೆರಿಗೆ ರಿಟರ್ನ್‌ ಸಲ್ಲಿಸುವ ಮೊದಲು ಈ ಮಹತ್ವದ ಸಂಗತಿಗಳನ್ನು ತಿಳಿದುಕೊಂಡಿರಿ.

VISTARANEWS.COM


on

By

ITR Filing
Koo

ಆದಾಯ ತೆರಿಗೆ ರಿಟರ್ನ್ (ITR Filing) ಸಲ್ಲಿಸುವ ಮೊದಲು ತಿಳಿದುಕೊಳ್ಳಬೇಕಾದ ಹಲವಾರು ಸಂಗತಿಗಳಿವೆ. ಆದಾಯ ತೆರಿಗೆಯು (Income tax) ಜನರು ಮತ್ತು ಸಂಸ್ಥೆಗಳು ಗಳಿಸುವ ಆದಾಯ ಮತ್ತು ಲಾಭದ ಮೇಲೆ ಪಾವತಿಸುವ ತೆರಿಗೆಯಾಗಿದೆ. ಆದಾಯ ತೆರಿಗೆ ರಿಟರ್ನ್ (ITR) ಅನ್ನು ಸಲ್ಲಿಸುವುದು ತೆರಿಗೆದಾರರು ಮಾಡಲೇಬೇಕಾದ ವಾರ್ಷಿಕ ಆಥಿಕ ಕಾರ್ಯವಾಗಿದೆ.

ಭಾರತದಲ್ಲಿ (India) ತೆರಿಗೆದಾರರು (taxpayer) ತಮ್ಮ ಆದಾಯ ಮತ್ತು ತೆರಿಗೆಗಳ ವಾರ್ಷಿಕ ಲೆಕ್ಕಾಚಾರವನ್ನು ಸಲ್ಲಿಸುವ ಮೂಲಕ ಸರ್ಕಾರಕ್ಕೆ ವರದಿ ಮಾಡಬೇಕಾಗುತ್ತದೆ. ಪಾರದರ್ಶಕತೆ, ಹೊಣೆಗಾರಿಕೆ ಮತ್ತು ರಾಷ್ಟ್ರದ ಆರ್ಥಿಕ ವ್ಯವಸ್ಥೆಯ ಸರಿಯಾದ ಕಾರ್ಯನಿರ್ವಹಣೆಗೆ ಇದು ಅತ್ಯಮೂಲ್ಯವಾಗಿದೆ. 2023– 24ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ. ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವ ಪ್ರಕ್ರಿಯೆಯು ಸ್ವಲ್ಪ ಸಂಕೀರ್ಣ ಮತ್ತು ಸವಾಲಿನದ್ದಾಗಿರಬಹುದು. ತೆರಿಗೆದಾರರು ತಮ್ಮ ಐಟಿಆರ್ ಅನ್ನು ಸಲ್ಲಿಸುವಾಗ ತಿಳಿದಿರಬೇಕಾದ ಮತ್ತು ಗಮನ ಹರಿಸಬೇಕಾದ ಕೆಲವು ಪ್ರಮುಖ ವಿಷಯಗಳಿವೆ.

ಗಡುವು ತಿಳಿದಿರಿ

ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವ ಮೊದಲು ಎಲ್ಲಾ ತೆರಿಗೆದಾರರು ಗಮನಿಸಬೇಕಾದ ಮೊದಲ ಮತ್ತು ಪ್ರಮುಖ ವಿಷಯವೆಂದರೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಸಾಮಾನ್ಯವಾಗಿ ಪ್ರತಿ ಹಣಕಾಸು ವರ್ಷದ ಜುಲೈ 31 ಕೊನೆಯ ದಿನವಾಗಿದೆ. ಈ ವರ್ಷ ಆದಾಯ ತೆರಿಗೆ ಇಲಾಖೆಯು 2023-24ಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ತೆರಿಗೆ ಪದ್ಧತಿಯನ್ನು ಅರ್ಥಮಾಡಿಕೊಳ್ಳಿ

ತೆರಿಗೆದಾರರು ಈಗ ಹಳೆಯ ತೆರಿಗೆ ಪದ್ಧತಿ ಮತ್ತು ಬಜೆಟ್ 2020ರಲ್ಲಿ ಪರಿಚಯಿಸಲಾದ ಹೊಸ ತೆರಿಗೆ ಪದ್ಧತಿಯ ನಡುವೆ ಆಯ್ಕೆ ಮಾಡಿಕೊಳ್ಳುವ ಆಯ್ಕೆಯನ್ನು ಹೊಂದಿದ್ದಾರೆ. ಎರಡೂ ತನ್ನದೇ ಆದ ಸಾಧಕ-ಬಾಧಕಗಳನ್ನು ಹೊಂದಿವೆ. ಹೊಸ ಪದ್ದತಿಯು ಕಡಿಮೆ ತೆರಿಗೆ ದರಗಳನ್ನು ನೀಡುತ್ತದೆ. ಆದರೆ ಕೆಲವು ವಿಷಯಗಳ ಮೇಲೆ ಕಡಿತ ಮತ್ತು ವಿನಾಯಿತಿಗಳನ್ನು ಮಿತಿಗೊಳಿಸುತ್ತದೆ.

ಹಳೆಯ ಪದ್ದತಿಯು ತುಲನಾತ್ಮಕವಾಗಿ ಹೆಚ್ಚಿನ ತೆರಿಗೆ ದರಗಳನ್ನು ಹೊಂದಿದೆ. ಆದರೆ ಕಡಿತ ಮತ್ತು ತೆರಿಗೆ ಪ್ರಯೋಜನಗಳನ್ನು ಕ್ಲೈಮ್ ಮಾಡುವ ಮೂಲಕ ಹಣವನ್ನು ಉಳಿಸಲು ಜನರಿಗೆ ಅವಕಾಶ ನೀಡುತ್ತದೆ. ಒಬ್ಬರ ಪರಿಸ್ಥಿತಿಗೆ ಅನುಗುಣವಾಗಿ ಯಾವ ಪದ್ಧತಿ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂಬುದನ್ನು ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿಕೊಳ್ಳಬೇಕು.

ಯಾವ ತೆರಿಗೆ ವರ್ಗಕ್ಕೆ ಸೇರುತ್ತೀರಿ?

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ತೆರಿಗೆ ವರ್ಗಕ್ಕೆ ಸೇರುತ್ತೀರಿ ಎಂಬುದನ್ನು ತಿಳಿದುಕೊಂಡಿರಬೇಕು. ತೆರಿಗೆಯ ಆದಾಯವನ್ನು ತಿಳಿದುಕೊಳ್ಳುವುದು ತೆರಿಗೆ ಹೊಣೆಗಾರಿಕೆಯನ್ನು ನಿರ್ಧರಿಸಲು ಸಹಾಯ ಮಾಡುತ್ತದೆ, ಇದು ಭರ್ತಿ ಮಾಡಲು ಅರ್ಹವಾದ ಕಡಿತಗಳನ್ನು ಕ್ಲೈಮ್ ಮಾಡಲು ಮತ್ತು ಅದಕ್ಕೆ ಅನುಗುಣವಾಗಿ ಹಣಕಾಸು ಮತ್ತು ಹೂಡಿಕೆಗಳನ್ನು ಯೋಜಿಸಲು ಆದಾಯ ತೆರಿಗೆ ರಿಟರ್ನ್ ಅನ್ನು ಸಮರ್ಥ ಮತ್ತು ದೋಷ-ಮುಕ್ತ ರೀತಿಯಲ್ಲಿ ಸಲ್ಲಿಸುವುದನ್ನು ಖಚಿತಪಡಿಸುತ್ತದೆ.

ಅಗತ್ಯವಿರುವ ದಾಖಲೆಗಳನ್ನು ಪರಿಶೀಲಿಸಿ

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ವೇಳೆ ದಾಖಲೆಗಳನ್ನು ಪರಿಶೀಲಿಸುವುದು ಬಹುಮುಖ್ಯವಾಗಿದೆ. ಆದಾಯ ತೆರಿಗೆ ಇಲಾಖೆಯು ತೆರಿಗೆದಾರರು ತಮ್ಮ ಆದಾಯ, ಕಡಿತಗಳು ಮತ್ತು ತೆರಿಗೆ ಪಾವತಿಗಳನ್ನು ದೃಢೀಕರಿಸಲು ವಿವಿಧ ದಾಖಲೆಗಳನ್ನು ಸಲ್ಲಿಸಬೇಕು. ಆದ್ದರಿಂದ ಆದಾಯ ತೆರಿಗೆ ರಿಟರ್ನ್ ಫೈಲಿಂಗ್ ಪ್ರಕ್ರಿಯೆಯು ಹೆಚ್ಚು ಸುವ್ಯವಸ್ಥಿತ ಮತ್ತು ಡಿಜಿಟೈಸ್ ಆಗಿರುವುದರಿಂದ ಡಿಜಿಟಲ್ ಸಾಧನದಲ್ಲಿ ಅಗತ್ಯ ದಾಖಲೆಗಳನ್ನು ಸಂಘಟಿಸುವುದು ಮತ್ತು ಉಳಿಸುವುದು ಫೈಲಿಂಗ್ ಪ್ರಕ್ರಿಯೆಯನ್ನು ವೇಗವಾಗಿ ಮತ್ತು ಹೆಚ್ಚು ನಿಖರವಾಗಿ ಮಾಡಲು ಸಹಾಯ ಮಾಡುತ್ತದೆ.


ಸರಿಯಾದ ಐಟಿಆರ್ ಅರ್ಜಿಯನ್ನು ಆಯ್ಕೆ ಮಾಡಿ

ಆದಾಯದ ಮೂಲ ಮತ್ತು ಒಟ್ಟು ಆದಾಯದ ಆಧಾರದ ಮೇಲೆ ಅನ್ವಯವಾಗುವ ಐಟಿಆರ್ ಫಾರ್ಮ್ ಅನ್ನು ಗುರುತಿಸುವುದು ಮತ್ತು ಆಯ್ಕೆ ಮಾಡುವುದು ಮುಖ್ಯವಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ತೆರಿಗೆದಾರರಿಂದ ಆರಂಭಿಕ ರಿಟರ್ನ್ ಫೈಲಿಂಗ್ ಅನ್ನು ಉತ್ತೇಜಿಸಲು ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಐಟಿಆರ್ ಫಾರ್ಮ್‌ಗಳು ಲಭ್ಯವಾಗುವಂತೆ ಮಾಡಿತು.

ಐಟಿಆರ್-1 ಆದಾಯದ ಮೂಲ ಸಂಬಳವಾಗಿದ್ದು, ಮನೆ ಆಸ್ತಿ ಮತ್ತು ಇತರ ಮೂಲಗಳಿಂದ ಬಡ್ಡಿ, ಲಾಭಂಶ ಸೇರಿ ಒಟ್ಟು 50 ಲಕ್ಷ ರೂ. ಆದಾಯವಿದ್ದವರು ಇದರಲ್ಲಿ ಅರ್ಜಿ ಸಲ್ಲಿಸಬೇಕು.

ಐಟಿಆರ್ -2 ಬಂಡವಾಳ ಅಥವಾ ವಿದೇಶಿ ಆಸ್ತಿಗಳಿಂದ ಆದಾಯದ ಮೂಲ ಹೊಂದಿರುವ ಹಿಂದೂ ಅವಿಭಜಿತ ಕುಟುಂಬಗಳು ಇದರಲ್ಲಿ ಅರ್ಜಿ ಸಲ್ಲಿಸಬೇಕು.

ಐಟಿಆರ್- 3 ವ್ಯಾಪಾರ ಅಥವಾ ಸ್ವಯಂ ವೃತ್ತಿಯಿಂದ ಆದಾಯ ಹೊಂದಿರುವ ವ್ಯಕ್ತಿಗಳು, ಐಟಿಆರ್- 4 ವ್ಯಾಪಾರ ಅಥವಾ ಸ್ವಂತ ವೃತ್ತಿಯಿಂದ ಆದಾಯ ಹೊಂದಿರುವವರು ಇದರಲ್ಲಿ ಅರ್ಜಿ ಸಲ್ಲಿಸಬಹುದು.

ವೈಯಕ್ತಿಕ ಮತ್ತು ಬ್ಯಾಂಕ್ ಖಾತೆ ವಿವರ ಪರಿಶೀಲಿಸಿ

ಐಟಿಆರ್ ಅನ್ನು ಸಲ್ಲಿಸುವ ಮೊದಲು ತೆರಿಗೆ ಮರುಪಾವತಿ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಪ್ಪಿಸಲು ತೆರಿಗೆದಾರರು ತಮ್ಮ ವೈಯಕ್ತಿಕ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಪರಿಶೀಲಿಸಬೇಕು. ಹೆಸರು, ವಿಳಾಸ, ಇಮೇಲ್ ಮತ್ತು ಪಾನ್ ನಂತಹ ವಿವರಗಳನ್ನು ಲಿಂಕ್ ಮಾಡಲಾಗಿದೆ ಮತ್ತು ತೆರಿಗೆ ರಿಟರ್ನ್‌ನಲ್ಲಿ ನಿಖರವಾಗಿ ನಮೂದಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ.

ಸರಿಯಾದ ಮೌಲ್ಯಮಾಪನ ವರ್ಷವನ್ನು ಆಯ್ಕೆ ಮಾಡಿ

ತೆರಿಗೆ ರಿಟರ್ನ್‌ನಲ್ಲಿ ಸರಿಯಾದ ಮೌಲ್ಯಮಾಪನ ವರ್ಷವನ್ನು ನಮೂದಿಸಿ. ಇದರಲ್ಲಿ ತಪ್ಪುಗಳಾದರೆ ಹೆಚ್ಚು ತೆರಿಗೆ ಮತ್ತು ಅನಗತ್ಯ ದಂಡಗಳಿಗೆ ಕಾರಣವಾಗಬಹುದು.

ಫಾರ್ಮ್ 16ರಲ್ಲಿ ವಿವರಗಳನ್ನು ಪರಿಶೀಲಿಸಿ

ಫಾರ್ಮ್ 16ರಲ್ಲಿನ ಸಂಬಳದ ಭಾಗಗಳು, ಟಿಡಿಎಸ್ ಕಡಿತ ಮತ್ತು ತೆರಿಗೆ-ಉಳಿತಾಯ ಹೂಡಿಕೆಗಳಂತಹ ವಿವರಗಳು ಸರಿಯಾಗಿವೆಯೇ ಎಂದು ಮುಂಚಿತವಾಗಿ ಖಚಿತಪಡಿಸಿಕೊಳ್ಳಿ. ಪೇ ಸ್ಲಿಪ್‌ ಮತ್ತು ಹೂಡಿಕೆ ಹೇಳಿಕೆಗಳೊಂದಿಗೆ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡಿ. ಯಾವುದೇ ವ್ಯತ್ಯಾಸಗಳನ್ನು ಸರಿಪಡಿಸಲು ಉದ್ಯೋಗದಾತರಿಗೆ ವರದಿ ಮಾಡಬೇಕು.

ಹಣಕಾಸು ವರ್ಷದಲ್ಲಿ ಒಬ್ಬರು ಬಹು ಉದ್ಯೋಗದಾತರನ್ನು ಹೊಂದಿದ್ದರೆ ರಿಟರ್ನ್ ಸಲ್ಲಿಸುವ ಮೊದಲು ನಿಮ್ಮ ಎಲ್ಲಾ ಫಾರ್ಮ್ 16ರಿಂದ ಆದಾಯವನ್ನು ಒಟ್ಟುಗೂಡಿಸಿರುವುದು ಖಚಿತಪಡಿಸಿಕೊಳ್ಳಿ. ಸರಿಯಾದ ಕಡಿತಗಳನ್ನು ಕ್ಲೈಮ್ ಮಾಡಲು ಮತ್ತು ಒಟ್ಟು ಆದಾಯವನ್ನು ನಿಖರವಾಗಿ ವರದಿ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಇದನ್ನೂ ಓದಿ: New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

ನಿಖರ ವರದಿ ಖಚಿತಪಡಿಸಿ

ಫಾರ್ಮ್ 26ಎಎಸ್ (ತೆರಿಗೆ ಕ್ರೆಡಿಟ್ ಸ್ಟೇಟ್‌ಮೆಂಟ್) ಮತ್ತು ಎಐಎಸ್ /ಟಿಐಎಸ್ (ವಾರ್ಷಿಕ ಮಾಹಿತಿ ಹೇಳಿಕೆ/ತೆರಿಗೆ ಮಾಹಿತಿ ಹೇಳಿಕೆ) ನಲ್ಲಿ ಲಭ್ಯವಿರುವ ಮಾಹಿತಿಯೊಂದಿಗೆ ಒಟ್ಟು ಆದಾಯವನ್ನು ಸಂಪೂರ್ಣವಾಗಿ ಸಮನ್ವಯಗೊಳಿಸಿ. ಯಾಕೆಂದರೆ ಇದು ಯಾವುದೇ ವ್ಯತ್ಯಾಸಗಳನ್ನು ಗುರುತಿಸಲು ಮತ್ತು ಎಲ್ಲಾ ಆದಾಯ ಮೂಲಗಳನ್ನು ನಿಖರವಾಗಿ ವರದಿ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ.

Continue Reading

ಪ್ರಮುಖ ಸುದ್ದಿ

GST Collection : ಜೂನ್​ನಲ್ಲಿ 1.74 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ, ಶೇಕಡಾ 8 ಏರಿಕೆ

VISTARANEWS.COM


on

GST Collection
Koo

ನವದೆಹಲಿ: 2024-25ನೇ ಹಣಕಾಸು ವರ್ಷದ ಜೂನ್​​ನಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು (GST Collection) 1.74 ಲಕ್ಷ ಕೋಟಿ ರೂಪಾಯಿ ಆಗಿದ್ದು ಶೇಕಡಾ 8 ರಷ್ಟು ಏರಿಕೆಯಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಆದಾಗ್ಯೂ, ಮಾಸಿಕ ಜಿಎಸ್ಟಿ ಸಂಗ್ರಹದ ದತ್ತಾಂಶದ ಅಧಿಕೃತ ಬಿಡುಗಡೆಯನ್ನು ಸರ್ಕಾರ ನಿಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಹಣಕಾಸು ವರ್ಷದ ಮೂರು ತಿಂಗಳಲ್ಲಿ (ಏಪ್ರಿಲ್-ಜೂನ್) ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ​) ಸಂಗ್ರಹವು 5.57 ಲಕ್ಷ ಕೋಟಿ ರೂ.ಗಳಷ್ಟಿದೆ ಎಂದು ಮೂಲಗಳು ತಿಳಿಸಿವೆ.

ಜೂನ್​​ನ ಸಂಗ್ರಹವು ಮೇ 2024 ರಲ್ಲಿ ಸಂಗ್ರಹಿಸಿದ 1.73 ಲಕ್ಷ ಕೋಟಿ ರೂ.ಗಿಂತ ಹೆಚ್ಚಾಗಿದೆ. ಇದು ಜೂನ್ 2023 ರಲ್ಲಿ ಸಂಗ್ರಹಿಸಿದ 1.61 ಲಕ್ಷ ಕೋಟಿ ರೂ.ಗಿಂತ ಶೇಕಡಾ 8 ರಷ್ಟು ಹೆಚ್ಚಾಗಿದೆ. ಕೇಂದ್ರ ಜಿಎಸ್ಟಿ (ಸಿಜಿಎಸ್​ಟಿ) ಗೆ 39,586 ಕೋಟಿ ರೂ., ರಾಜ್ಯ ಜಿಎಸ್ಟಿ (ಎಸ್ಜಿಎಸ್ಟಿ) ಗೆ 33,548 ಕೋಟಿ ರೂ. ಜಿಎಸ್ಟಿ ಸಂಗ್ರಹವು ಏಪ್ರಿಲ್​​ನಲ್ಲಿ ದಾಖಲೆಯ ಗರಿಷ್ಠ 2.10 ಲಕ್ಷ ಕೋಟಿ ರೂ.ಗೆ ತಲುಪಿತ್ತು.

ತೆರಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಹೇಳಿಕೆ ಬಿಡುಗಡೆ ಮಾಡುವುದಿಲ್ಲ ಎಂದು ಮೂಲಗಳು ತಿಳಿಸಿವೆ. ತೆರಿಗೆ ಪಾಲುದಾರ ಸೌರಭ್ ಅಗರ್ವಾಲ್ ಮಾತನಾಡಿ, ಈ ದೃಢ ಕಾರ್ಯಕ್ಷಮತೆಯು ಉತ್ಸಾಹಭರಿತ ಆರ್ಥಿಕತೆಯನ್ನು ಪ್ರತಿಬಿಂಬಿಸುತ್ತದೆ. ಸಮಯೋಚಿತ ಲೆಕ್ಕಪರಿಶೋಧನೆ, ಪರಿಶೀಲನಾ ಕ್ರಮಗಳು ಮತ್ತು ಇಲಾಖೆಯ ಪರಿಣಾಮಕಾರಿ ಜಾರಿ ಇವೆಲ್ಲವೂ ಈ ಜಿಎಸ್​ಟಿ ಸಂಗ್ರಹ ಹೆಚ್ಚಳಕ್ಕೆ ಕಾರಣವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Maharashtra Politics : ವಿಧಾನ ಪರಿಷತ್​ನಲ್ಲಿ ಬಿಜೆಪಿಯನ್ನು ಸೋಲಿಸಿದ ಉದ್ಧವ್​ ಠಾಕ್ರೆಯ ಶಿವಸೇನೆ

“ಸಂಗ್ರಹದಲ್ಲಿನ ಗಮನಾರ್ಹ ಏರಿಕೆಯು ಜಿಎಸ್ಟಿ ಸುಧಾರಣೆಗಳ ಮುಂದಿನ ನಿರೀಕ್ಷೆಗಳನ್ನು ಹೆಚ್ಚಿಸುತ್ತದೆ. ಈ ಸುಧಾರಣೆಗಳು ಬಂಡವಾಳದ ಅಡೆತಡೆಗಳನ್ನು ಪರಿಹರಿಸಬಹುದು. ತೆರಿಗೆ ದರಗಳನ್ನು ಸುಗಮಗೊಳಿಸಬಹುದು, ನಿರ್ಬಂಧಗಳನ್ನು ಸರಾಗಗೊಳಿಸಬಹುದು. ಅಸ್ತಿತ್ವದಲ್ಲಿರುವ ಸವಾಲುಗಳನ್ನು ನಿಭಾಯಿಸಲು ಪರಿಹಾರಗಳನ್ನು ಜಾರಿಗೆ ತರಬಹುದು ಎಂದು ಅಗರ್ವಾಲ್ ಹೇಳಿದ್ದಾರೆ.

Continue Reading

ಕರ್ನಾಟಕ

Foreign Investment: ರಾಜ್ಯದಲ್ಲಿ ವಾಹನ ಬಿಡಿಭಾಗ ತಯಾರಿಕೆ; ಬಂಡವಾಳ ಹೂಡಿಕೆಗೆ ದ.ಕೊರಿಯಾ ಒಲವು

Foreign Investment: ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಸೋಮವಾರ ಸೋಲ್‌ನಲ್ಲಿ ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌, ಎಚ್‌ಎಲ್‌ ಮಾಂಡೊ ಕಾರ್ಪೊರೇಷನ್‌, ನಿಫ್ಕೊ, ಡಿಎನ್‌ ಸೊಲುಷನ್ಸ್‌ ಮತ್ತು ಹುಂಡೈ ಮೋಟರ್ಸ್‌ನ ಮುಖ್ಯಸ್ಥರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು.

VISTARANEWS.COM


on

Manufacturing of auto parts in the state Increased propensity for capital investment
Koo

ಬೆಂಗಳೂರು: ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ (Foreign Investment) ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಸೋಮವಾರ ಸೋಲ್‌ನಲ್ಲಿ ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌, ಎಚ್‌ಎಲ್‌ ಮಾಂಡೊ ಕಾರ್ಪೊರೇಷನ್‌, ನಿಫ್ಕೊ, ಡಿಎನ್‌ ಸೊಲುಷನ್ಸ್‌ ಮತ್ತು ಹುಂಡೈ ಮೋಟರ್ಸ್‌ನ ಮುಖ್ಯಸ್ಥರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು.

ಜಪಾನಿನ ಐದು ದಿನಗಳ ಯಶಸ್ವಿ ಭೇಟಿ ಪೂರ್ಣಗೊಳಿಸಿ ದಕ್ಷಿಣ ಕೊರಿಯಾಕ್ಕೆ ತೆರಳಿರುವ ನಿಯೋಗವು ಈ ತಿಂಗಳ 5 ರವರೆಗೆ ಅಲ್ಲಿನ ಬಹುರಾಷ್ಟ್ರೀಯ ಕಂಪನಿಗಳ ಜತೆ ಸಮಾಲೋಚನೆ ನಡೆಸಿ ಬಂಡವಾಳ ಹೂಡಿಕೆ ಆಕರ್ಷಿಸಲಿದೆ.

ರಾಜ್ಯದಲ್ಲಿ ವಾಹನ ಬಿಡಿಭಾಗ, ಜವಳಿ ಉತ್ಪನ್ನ, ನವೀಕರಿಸಬಹುದಾದ ಇಂಧನ, ಮಷಿನ್‌ಟೂಲ್ಸ್‌ ತಯಾರಿಕಾ ವಲಯಗಳಲ್ಲಿ ಬಂಡವಾಳ ಹೂಡಿಕೆ ಹೆಚ್ಚಿಸಲು, ವಹಿವಾಟು ವಿಸ್ತರಿಸಲು ದಕ್ಷಿಣ ಕೊರಿಯಾದ ಈ ಬಹುರಾಷ್ಟ್ರೀಯ ಕಂಪನಿಗಳು ತೀವ್ರ ಆಸಕ್ತಿ ವ್ಯಕ್ತಪಡಿಸಿವೆ.

ಇದನ್ನೂ ಓದಿ: Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

ರಾಜ್ಯದಲ್ಲಿ ವಿದ್ಯುತ್‌ಚಾಲಿತ ವಾಹನಗಳ (ಇವಿ) ಮಾರುಕಟ್ಟೆಯು ವ್ಯಾಪಕವಾಗಿ ವಿಸ್ತರಣೆ ಆಗುತ್ತಿರುವುದು ಮತ್ತು ಭಾರತದಲ್ಲಿನ ತಯಾರಿಕಾ ಘಟಕಗಳಲ್ಲಿ ʼಇವಿʼಗಳನ್ನು ತಯಾರಿಸುವ ಬಗ್ಗೆ ಹುಂಡೈ ಮುಖ್ಯಸ್ಥರ ಜತೆಗಿನ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.

ರಾಜ್ಯದಲ್ಲಿ ಕೈಗಾರಿಕಾ ಅಶಾಂತಿ (ಕಾರ್ಮಿಕರ ವಿವಾದಗಳು) ಕಡಿಮೆ ಪ್ರಮಾಣದಲ್ಲಿ ಇರುವುದು ಮತ್ತು ಪೂರೈಕೆ ಸರಪಣಿಯಲ್ಲಿ ಸ್ಥಿರತೆ ಇರುವುದನ್ನು ಸಚಿವರು ಹುಂಡೈ ಕಂಪನಿಯ ಪ್ರಮುಖರ ಗಮನಕ್ಕೆ ತಂದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ವಾಹನಗಳ ಪ್ಲಾಸ್ಟಿಕ್‌ ಬಿಡಿಭಾಗ ತಯಾರಿಸುವ ಘಟಕ ಸ್ಥಾಪಿಸಲಿರುವ ನಿಫ್ಕೊ ಕೊರಿಯಾ ಕಂಪನಿಗೆ ಅಗತ್ಯವಾದ ಭೂಮಿ ಸ್ವಾಧೀನ ಮತ್ತು ಇತರ ಅನುಮೋದನೆಗಳಿಗೆ ರಾಜ್ಯ ಸರ್ಕಾರ ತ್ವರಿತವಾಗಿ ಸ್ಪಂದಿಸಲಿದೆ. ಕಾರ್ಖಾನೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.

ರಾಜ್ಯದಲ್ಲಿ ಫೈಬರ್‌ ಆಪ್ಟಿಕ್‌ ಅಳವಡಿಕೆ ಯೋಜನೆಗಳು ಮತ್ತು ವಿದ್ಯುತ್‌ಚಾಲಿತ ವಾಹನಗಳ (ಇವಿ) ಬಳಕೆ ಹೆಚ್ಚಿಸುವ ಕ್ಷೇತ್ರಗಳಲ್ಲಿ ವಹಿವಾಟು ನಡೆಸಲು ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌ ಇಂಗಿತ ವ್ಯಕ್ತಪಡಿಸಿದೆ.

ಕಂಪನಿಯ ಉಪಾಧ್ಯಕ್ಷ ಹಾಂಗ್‌ ಸಂಗ್‌ ಅಹ್ನ್‌ ಅವರು ರಾಜ್ಯದ ನಿಯೋಗದ ಜತೆಗಿನ ಮಾತುಕತೆಯಲ್ಲಿ ಭಾಗಿಯಾಗಿದ್ದರು. ಟೈರ್‌ ಕೋರ್ಡ್ಸ್‌ ತಯಾರಿಕೆಗೆ ಭಾರತವನ್ನು ಪ್ರಮುಖ ನೆಲೆಯನ್ನಾಗಿ ಅಭಿವೃದ್ಧಿಪಡಿಸಲು ಕಂಪನಿಯ ಉದ್ದೇಶಿಸಿದೆ. ಭಾರತದಲ್ಲಿ ಪರಿಸರ ಸ್ನೇಹಿ ಸರಕುಗಳು ಹಾಗೂ ಸುಧಾರಿತ ಜವಳಿ ಉತ್ಪನ್ನಗಳನ್ನು ತಯಾರಿಸುವ ವಹಿವಾಟು ವಿಸ್ತರಿಸುವ ಅವಕಾಶಗಳನ್ನು ಕಂಪನಿಯು ಪರಿಶೀಲಿಸುತ್ತಿದೆ.

ಇದನ್ನೂ ಓದಿ: Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

ರಾಜ್ಯದಲ್ಲಿನ ನವೀಕರಿಸಬಹುದಾದ ಇಂಧನ ವಲಯದಲ್ಲಿನ ಭವಿಷ್ಯದ ವಿಸ್ತರಣೆ ಬಗ್ಗೆ ಸೌರಕೋಶಗಳ ಸೆಮಿಕಂಡಕ್ಟರ್‌ ತಯಾರಿಸುವ ಒಸಿಐ ಹೋಲ್ಡಿಂಗ್ಸ್‌ ಕಂಪನಿ ಜೊತೆ ಸಚಿವರು ಮಾತುಕತೆ ನಡೆಸಿದರು.

ಸೌರಶಕ್ತಿ ಫಲಕಗಳನ್ನು ತಯಾರಿಸುವ ಯೋಜನೆಗಳಿಗೆ ರಾಜ್ಯ ಸರ್ಕಾರವು ಕೊಡಮಾಡುತ್ತಿರುವ ಉತ್ತೇಜನಗಳನ್ನು ನಿಯೋಗವು ಕಂಪನಿಯ ಪ್ರಮುಖರಿಗೆ ಮನವರಿಕೆ ಮಾಡಿಕೊಟ್ಟಿತು.

ವಾಹನ ಬಿಡಿಭಾಗ ತಯಾರಿಸುವ ಎಚ್‌ಎಲ್‌ ಮಂಡೊ ಕಾರ್ಪೊರೇಷನ್ನಿನ ಸಿಎಫ್‌ಒ ಲೀ ಚುಲ್‌ ಮತ್ತು ನಿರ್ದೇಶಕ ಕಿಮ್‌ ಇವುನ್‌ ಸಂಗ್‌ ಅವರನ್ನು ರಾಜ್ಯದ ನಿಯೋಗವು ಭೇಟಿಯಾಗಿತ್ತು.

ಇದನ್ನೂ ಓದಿ: Kannada New Movie: ಪ್ರವೀಣ್ ತೇಜ್ ಅಭಿನಯದ ʼಜಿಗರ್ ಚಿತ್ರ ಜುಲೈ 5ರಂದು ಬಿಡುಗಡೆ

ಬೆಂಗಳೂರಿನಲ್ಲಿ ತಯಾರಿಕಾ ಘಟಕ ಹೊಂದಿರುವ ಕಂಪನಿಯು ರಾಜ್ಯದಲ್ಲಿ ಇನ್ನಷ್ಟು ಬಂಡವಾಳ ಹೂಡಿಕೆ ಮಾಡಲು ಉತ್ಸುಕತೆ ತೋರಿದೆ. ವಿದ್ಯುತ್‌ಚಾಲಿತ ಸೇರಿದಂತೆ ರಾಜ್ಯದಲ್ಲಿನ ಒಟ್ಟಾರೆ ವಾಹನ ಉದ್ಯಮ ಕ್ಷೇತ್ರದಲ್ಲಿನ ಅನುಕೂಲತೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರಾಜ್ಯದ ನಿಯೋಗವು ಆಹ್ವಾನ ನೀಡಿದೆ. ಮಷೀನ್‌ಟೂಲ್ಸ್‌ ತಯಾರಿಕಾ ಕಂಪನಿ ಡಿಎನ್‌ ಸೊಲುಷನ್ಸ್‌, ಬೆಂಗಳೂರು ಬಳಿ 25 ಎಕರೆ ಪ್ರದೇಶದಲ್ಲಿ ತನ್ನ ತಯಾರಿಕಾ ಘಟಕ ಆರಂಭಿಸಲಿದೆ.

Continue Reading
Advertisement
Latest7 mins ago

Viral Video: ರಸ್ತೆ ಮೇಲೆಯೇ ಮಹಿಳೆಯ ವಶೀಕರಣ! 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

Kalki 2898 AD
ಸಿನಿಮಾ8 mins ago

Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

Anant Ambani
ಫ್ಯಾಷನ್14 mins ago

Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!

Team India Coach
ಕ್ರೀಡೆ20 mins ago

Team India Coach: ಟೀಮ್​ ಇಂಡಿಯಾ ಕೋಚ್​ ಆಯ್ಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಜಯ್‌ ಶಾ

kannada marathi row
ಪ್ರಮುಖ ಸುದ್ದಿ36 mins ago

Kannada- Marathi Row: ಮಹಾರಾಷ್ಟ್ರ ಸದನದಲ್ಲಿ ಕನ್ನಡ ಪರ ದನಿ, ಗಡಿಯಲ್ಲಿ ಮರಾಠಿ ದಬ್ಬಾಳಿಕೆಗೆ ಪ್ರತಿಭಟನೆ

Food for Concentration
ಆರೋಗ್ಯ50 mins ago

Food for Concentration: ಈ ಆಹಾರಗಳ ಸೇವನೆಯಿಂದ ನಿಮ್ಮ ಏಕಾಗ್ರತೆ ಶಕ್ತಿಯೇ ಕುಂಠಿತವಾಗಬಹುದು!

Grand Marriage
Latest50 mins ago

Grand Marriage: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ರಾಜಮಾರ್ಗ ಅಂಕಣ virat kohli rohit sharma
ಅಂಕಣ1 hour ago

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್ ಫೈನಲ್; ಒಂದು ಪಂದ್ಯ – ಹಲವು ಪಾಠ

niranjana ನನ್ನ ದೇಶ ನನ್ನ ದನಿ ಅಂಕಣ
ಅಂಕಣ1 hour ago

ನನ್ನ ದೇಶ ನನ್ನ ದನಿ: ಜಗತ್ತಿನ ಇತಿಹಾಸ ಕನ್ನಡದಲ್ಲಿ ತರಲು ಆಸೆಪಟ್ಟಿದ್ದ ನಿರಂಜನ

dengue fever hassan girl death
ಕ್ರೈಂ2 hours ago

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌