Air India hiring : ಏರ್‌ ಇಂಡಿಯಾದಿಂದ 900 ಪೈಲಟ್‌ಗಳು, 4,200 ಸಿಬ್ಬಂದಿಗಳ ನೇಮಕ ಶೀಘ್ರ - Vistara News

ಪ್ರಮುಖ ಸುದ್ದಿ

Air India hiring : ಏರ್‌ ಇಂಡಿಯಾದಿಂದ 900 ಪೈಲಟ್‌ಗಳು, 4,200 ಸಿಬ್ಬಂದಿಗಳ ನೇಮಕ ಶೀಘ್ರ

ಏರ್‌ ಇಂಡಿಯಾ ಇತ್ತೀಚೆಗೆ ಏರ್‌ಬಸ್‌ ಮತ್ತು ಬೋಯಿಂಗ್‌ ಜತೆ (Air India hiring) ವಿಮಾನಗಳ ಖರೀದಿಗೆ ಐತಿಹಾಸಿಕ ಡೀಲ್‌ ನಡೆಸಿದ ಬೆನ್ನಲ್ಲೇ ಒಟ್ಟು 5,100 ಮಂದಿಗೆ ಪೈಲಟ್‌, ಕ್ಯಾಬಿನ್‌ ಸಿಬ್ಬಂದಿಯಾಗಿ ನೇಮಕ ಮಾಡಿಕೊಳ್ಳಲು ಸಿದ್ಧವಾಗಿದೆ.

VISTARANEWS.COM


on

Air India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಿಹಿಸುದ್ದಿ. ಟಾಟಾ ಸಮೂಹದ ಏರ್‌ ಇಂಡಿಯಾ 900 ಪೈಲಟ್‌ಗಳು ಹಾಗೂ 4,200 ಸಿಬ್ಬಂದಿಯನ್ನು ಶೀಘ್ರದಲ್ಲಿಯೇ ನೇಮಕ ಮಾಡಲಿದೆ. (Air India hiring) ಹೀಗಾಗಿ ಒಟ್ಟು 5,100 ಮಂದಿಗೆ ಏರ್‌ಲೈನ್‌ನಲ್ಲಿ ಉದ್ಯೋಗಾವಕಾಶ ಸಿಗಲಿದೆ.

ದೇಶದ ನಾನಾ ಸ್ಥಳಗಳಲ್ಲಿ ನೇಮಕಾತಿ ನಡೆಯಲಿದೆ. ಬಳಿಕ 15 ದಿನಗಳ ತರಬೇತಿ ನೀಡಲಾಗುವುದು. 2022ರ ಮೇ ಮತ್ತು 2023ರ ಫೆಬ್ರವರಿ ನಡುವೆ ಏರ್‌ ಇಂಡಿಯಾ 1900 ಕ್ಯಾಬಿನ್‌ ಸಿಬ್ಬಂದಿಯನ್ನು ನೇಮಿಸಿತ್ತು.

ಏರ್‌ ಇಂಡಿಯಾ ಮುಂದಿನ 10 ವರ್ಷಗಳಲ್ಲಿ 470 ವಿಮಾನಗಳನ್ನು ಖರೀದಿಸಲು ಏರ್‌ಬಸ್‌ ಮತ್ತು ಬೋಯಿಂಗ್‌ ಜತೆ ಇತ್ತೀಚೆಗೆ ಒಪ್ಪಂದ ಮಾಡಿಕೊಂಡಿದೆ. ಈ ವಿಮಾನ ಖರೀದಿ 840ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ. ಏರ್‌ಬಸ್‌ ಫ್ರಾನ್ಸ್‌ ಮೂಲದ ಏರ್‌ಲೈನ್‌ ಆಗಿದ್ದರೆ, ಬೋಯಿಂಗ್‌ ಅಮೆರಿಕ ಮೂಲದ ಏರ್‌ಲೈನ್‌ ಕಂಪನಿಯಾಗಿದೆ. ಏರ್‌ ಇಂಡಿಯಾವು ಏರ್‌ಬಸ್‌ನಿಂದ ಕಳೆದ 17 ವರ್ಷಗಳ ಬಳಿಕ ಮೊದಲ ಸಲ ವಿಮಾನವನ್ನು ಖರೀದಿಸುತ್ತಿದೆ. ಈ ಡೀಲ್‌ ಪರಿಣಾಮ ಅಮೆರಿಕದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಭಾರತಕ್ಕೆ ಮುಂದಿನ 15 ವರ್ಷಗಳಲ್ಲಿ 2,000 ವಿಮಾನಗಳ ಅಗತ್ಯವಿದೆ. ಏರ್‌ ಇಂಡಿಯಾದ ಐತಿಹಾಸಿಕ ವಿಮಾನಗಳ ಖರೀದಿ ಡೀಲ್‌ನ ಮೌಲ್ಯ 115 ಶತಕೋಟಿ ಡಾಲರ್‌ (೯.೪೩ ಲಕ್ಷ ಕೋಟಿ ರೂ.) ಹೀಗಾಗಿ ಭಾರತದಲ್ಲೂ ಮುಂದಿನ ದಶಕದಲ್ಲಿ ಏರ್‌ ಇಂಡಿಯಾ ಒಂದರಲ್ಲಿಯೇ ಸಾವಿರಾರು ಉದ್ಯೋಗ ಸೃಷ್ಟಿಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Jolly LLB 3: ಬರ್ತಿದೆ ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 3; ಈ ಬಾರಿ ಇದೆ ಸರ್‌ಪ್ರೈಸ್!

Jolly LLB 3: ಜಾಲಿ ಎಲ್‌ಎಲ್‌ಬಿ 3 ಸಿನಿಮಾ ಶೂಟಿಂಗ್‌ ಆರಂಭವಾಗಿರುವ ಕುರಿತು ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಾರಿ ಅರ್ಷದ್‌ ವಾರ್ಸಿ ಹಾಗೂ ಅಕ್ಷಯ್‌ ಕುಮಾರ್‌ ಅವರು ಪಾರ್ಟ್‌ 3ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸಿನಿಮಾ ಬಿಡುಗಡೆ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

VISTARANEWS.COM


on

Jolly LLB 3
Koo

ಮುಂಬೈ: ಅರ್ಷದ್‌ ವಾರ್ಸಿ ನಟನೆಯ ಜಾಲಿ ಎಲ್‌ಎಲ್‌ಬಿ (Jolly LLB) ಹಾಗೂ ಅಕ್ಷಯ್‌ ಕುಮಾರ್‌ (Askhay Kumar) ಅಭಿನಯದ ಜಾಲಿ ಎಲ್‌ಎಲ್‌ಬಿ 2 (Jolly LLB 2) ಸಿನಿಮಾಗಳು ಸೂಪರ್‌ ಹಿಟ್‌ ಆಗಿದ್ದವು. ಕೋರ್ಟ್‌ ಡ್ರಾಮಾ ಜಾನರ್‌ನ ಈ ಸಿನಿಮಾಗಳು ಕಾಮಿಡಿ ದಿಸೆಯಲ್ಲೂ ಜನರ ಮನಸೂರೆಗೊಳಿಸಿದ್ದವು. ಸೌರಭ್‌ ಶುಕ್ಲಾ ಅವರ ಮನೋಜ್ಞ ನಟನೆಯೂ ಮೆಚ್ಚುಗೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ, ನಟ ಅಕ್ಷಯ್‌ ಕುಮಾರ್‌ ಅವರು ಜಾಲಿ ಎಲ್‌ಎಲ್‌ಬಿ 3 (Jolly LLB 3) ಸಿನಿಮಾ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ.

ಹೌದು, ಜಾಲಿ ಎಲ್‌ಎಲ್‌ಬಿ 3 ಸಿನಿಮಾ ಶೂಟಿಂಗ್‌ ಶುರುವಾಗಿರುವ ಕುರಿತು ಅಕ್ಷಯ್‌ ಕುಮಾರ್‌ ಅವರು ವಿಡಿಯೊ ಸಮೇತ ಮಾಹಿತಿ ನೀಡಿದ್ದಾರೆ. “ಈಗ ಅಸಲಿ ಯಾರು, ನಕಲಿ ಯಾರು ಎಂಬುದು ಗೊತ್ತಿಲ್ಲ. ಆದರೆ, ಇದು ನಿಮಗೆ ಅತ್ಯುತ್ತಮ ಸಿನಿ ಪಯಣ ಆಗಲಿದೆ. ನನ್ನ ಅಪ್‌ಡೇಟ್‌ಗಳಿಗಾಗಿ ಕಾಯುತ್ತಿರಿ. ಜೈ ಮಹಾಕಾಳ್”‌ ಎಂಬುದಾಗಿ ಅಕ್ಷಯ್‌ ಕುಮಾರ್‌ ಅವರು ವಿಡಿಯೊ ಜತೆಗೆ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಕ್ಷಯ್‌ ಕುಮಾರ್‌ ಘೋಷಣೆ ಬಳಿಕ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸಿನಿ ಪ್ರೇಮಿಗಳಿಗೆ ಸರ್‌ಪ್ರೈಸ್‌

ಜಾಲಿ ಎಲ್‌ಎಲ್‌ಬಿ ಸಿನಿಮಾದಲ್ಲಿ ಅಭಿಮಾನಿಗಳಿಗೆ ಅಕ್ಷಯ್‌ ಕುಮಾರ್‌ ಸರ್‌ಪ್ರೈಸ್‌ ನೀಡಿದ್ದಾರೆ. ಜಾಲಿ ಎಲ್‌ಎಲ್‌ಬಿ ಸರಣಿಯ ಮೊದಲ ಸಿನಿಮಾದಲ್ಲಿ ಅರ್ಷದ್‌ ವಾರ್ಸಿ ಅವರು ಹೀರೊ ಆಗಿದ್ದರೆ, ಎರಡನೇ ಸಿನಿಮಾದಲ್ಲಿ ಅಕ್ಷಯ್‌ ಕುಮಾರ್‌ ಹೀರೊ ಆಗಿದ್ದರು. ಆದರೆ, ಮೂರನೇ ಭಾಗದಲ್ಲಿ ಅಕ್ಷಯ್‌ ಕುಮಾರ್‌ ಹಾಗೂ ಅರ್ಷದ್‌ ವಾರ್ಸಿ ಇಬ್ಬರೂ ಇದ್ದಾರೆ. ಎಂದಿನಂತೆ ಸೌರಭ್‌ ಶುಕ್ಲಾ ಅವರು ನ್ಯಾಯಾಧೀಶರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಸಿನಿಮಾಗೆ ಯಾರು ನಾಯಕಿ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಅಕ್ಷಯ್‌ ಕುಮಾರ್‌ ಹಾಗೂ ಅರ್ಷದ್‌ ವಾರ್ಸಿ ಅವರು ಇದಕ್ಕೂ ಮೊದಲು ಎರಡು ಸಿನಿಮಾಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. 2002ರಲ್ಲಿ ಬಿಡುಗಡೆಯಾದ ಜಾನಿ ದುಷ್ಮನ್: ಏಕ್‌ ಅನೋಖಿ ಕಹಾನಿ ಹಾಗೂ 2022ರಲ್ಲಿ ಬಿಡುಗಡೆಯಾದ ಬಚ್ಚನ್‌ ಪಾಂಡೆ ಸಿನಿಮಾದಲ್ಲಿ ಇಬ್ಬರೂ ಜತೆಯಾಗಿ ನಟಿಸಿದ್ದರು. ಅರ್ಷದ್‌ ವಾರ್ಸಿ ಅವರ ಜಾಲಿ ಎಲ್‌ಎಲ್‌ಬಿ 2013ರಲ್ಲಿ ಬಿಡುಗಡೆಯಾಗಿತ್ತು. ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 2 ಸಿನಿಮಾ 2017ರಲ್ಲಿ ಬಿಡುಗಡೆಯಾಗಿ ಮೆಚ್ಚುಗೆಗೆ ಪಾತ್ರವಾಗಿತ್ತು.

ಇದನ್ನೂ ಓದಿ: Akshay Kumar: ತೆಲುಗು ಚಿತ್ರಕ್ಕೆ ಎಂಟ್ರಿ ಕೊಟ್ಟ ಅಕ್ಷಯ್‌ ಕುಮಾರ್‌; ಜತೆಗಿರಲಿದ್ದಾರೆ ಶಿವಣ್ಣ!

Continue Reading

ಕರ್ನಾಟಕ

Karnataka legislative council: ವಿಧಾನ ಪರಿಷತ್‌ನ 6 ಕ್ಷೇತ್ರಗಳಿಗೆ ಜೂ.3 ಎಲೆಕ್ಷನ್;‌ ಜೂ. 6ಕ್ಕೆ ಫಲಿತಾಂಶ

Karnataka legislative council: ಜೂನ್ 3ರಂದು ವಿಧಾನ ಪರಿಷತ್‌ನ ಆರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ. ಈ ಆರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಂದಿನಿಂದಲೇ ಅನುಷ್ಠಾನಕ್ಕೆ ಬರುವಂತೆ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅದರ ಅನುಸಾರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

VISTARANEWS.COM


on

six seats of Karnataka Legislative Council Elections to be held on June 3
Koo

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ (Karnataka legislative council) 6 ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಚುನಾವಣೆಗೆ ದಿನಾಂಕವನ್ನು ನಿಗದಿ ಮಾಡಿ ಆದೇಶಿಸಲಾಗಿದೆ. ಹಾಲಿ ಸದಸ್ಯರ ಅವಧಿ ಜೂನ್ 21ಕ್ಕೆ ಮುಕ್ತಾಯ ಆಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಹೀಗಾಗಿ ಜೂನ್‌ 3ಕ್ಕೆ ಈ ಆರೂ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಜೂನ್ 3ರಂದು ವಿಧಾನ ಪರಿಷತ್‌ನ ಆರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.

3 ಪದವೀಧರ ಮತ್ತು 3 ಶಿಕ್ಷಕರ ಕ್ಷೇತ್ರದ ಚುನಾವಣೆ

  • ಈಶಾನ್ಯ ಪದವೀಧರ ಕ್ಷೇತ್ರ
    ನೈರುತ್ಯ ಪದವೀಧರ ಕ್ಷೇತ್ರ
    ಬೆಂಗಳೂರು ಪದವೀಧರ ಕ್ಷೇತ್ರ
  • ಆಗ್ನೇಯ ಶಿಕ್ಷಕರ ಕ್ಷೇತ್ರ
    ನೈರುತ್ಯ ಶಿಕ್ಷಕರ ಕ್ಷೇತ್ರ
    ದಕ್ಷಿಣ ಶಿಕ್ಷಕರ ಕ್ಷೇತ್ರ

ನಾಮಪತ್ರ ಸಲ್ಲಿಕೆಗೆ ಮೇ 16 ಕೊನೇ ದಿನ

ವಿಧಾನ ಪರಿಷತ್ತಿನ ಆರು ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಒಂದು ವೇಳೆ ನಾಮಪತ್ರದಲ್ಲಿ ದೋಷಗಳು ಕಂಡುಬಂದಲ್ಲಿ ಚುನಾವಣಾ ಆಯೋಗವು ಅಂತಹ ನಾಮಪತ್ರವನ್ನು ತಿರಸ್ಕೃತ ಮಾಡಲಾಗಿದೆ. ನಾಮಪತ್ರವನ್ನು ಹಿಂಪಡೆಯಲು ಮೇ 20 ಕೊನೆಯ ದಿನ ಎಂದು ಚುನಾವಣಾ ಆಯೋಗವು ಅಧಿಸೂಚನೆಯಲ್ಲಿ ತಿಳಿಸಿದೆ. ಜೂನ್ 3ರಂದು ಮತದಾನ ನಡೆದು, ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ.

ನೀತಿ ಸಂಹಿತೆ ಜಾರಿ

ಈ ಆರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಂದಿನಿಂದಲೇ ಅನುಷ್ಠಾನಕ್ಕೆ ಬರುವಂತೆ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅದರ ಅನುಸಾರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಅವಧಿ ಪೂರೈಸುತ್ತಿರುವ ಪರಿಷತ್‌ ಸದಸ್ಯರು ಇವರು

ಈಶಾನ್ಯ ಪದವೀಧರ ಕ್ಷೇತ್ರ – ಡಾ. ಚಂದ್ರಶೇಖರ್‌ ಬಿ. ಪಾಟೀಲ್
ನೈರುತ್ಯ ಪದವೀಧರ ಕ್ಷೇತ್ರ‌ – ಆಯನೂರು ಮಂಜುನಾಥ್ (2023ರ ಏಪ್ರಿಲ್‌ 19ಕ್ಕೆ ರಾಜೀನಾಮೆ)
ಬೆಂಗಳೂರು ಪದವೀಧರ ಕ್ಷೇತ್ರ‌ – ಎ. ದೇವೇಗೌಡ

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

ಆಗ್ನೇಯ ಶಿಕ್ಷಕರ ಕ್ಷೇತ್ರ – ವೈ.ಎ. ನಾರಾಯಣಸ್ವಾಮಿ
ನೈರುತ್ಯ ಶಿಕ್ಷಕರ ಕ್ಷೇತ್ರ – ಎಸ್.ಎಲ್.‌ ಭೋಜೇಗೌಡ
ದಕ್ಷಿಣ ಶಿಕ್ಷಕರ ಕ್ಷೇತ್ರ – ಮರಿತಿಬ್ಬೇಗೌಡ (2024ರ ಮಾರ್ಚ್‌ 21ಕ್ಕೆ ರಾಜೀನಾಮೆ)

Continue Reading

ಪ್ರಮುಖ ಸುದ್ದಿ

T20 World Cup : ವಿಶ್ವ ಕಪ್​ ತಂಡದಿಂದ ಅರ್ಶ್​​ದೀಪ್​ ಕೈಬಿಡಲು ಆಗ್ರಹ; ಏನಾಯಿತು ಅವರಿಗೆ?

T20 World Cup: ನಾಯಕ ರುತುರಾಜ್ ಗಾಯಕ್ವಾಡ್ ಅವರ ಅರ್ಧಶತಕದ ನೆರವಿನಿಂದ ಸಿಎಸ್​ಕೆ ಮೊದಲ ಇನಿಂಗ್ಸ್​ನ 20 ಓವರ್​ಗಳಲ್ಲಿ 162 ರನ್ ಗಳಿಸಿತು. ಆದಾಗ್ಯೂ ಬ್ಯಾಟರ್​ಗಳ ದುಃಸ್ವಪ್ನ ಹೊಂದಿದ್ದ ಪಿಚ್​ನಲ್ಲಿ ಪಿಬಿಕೆಎಸ್​​ನ ಮುಂಚೂಣಿ ಬೌಲರ್ ಅರ್ಶ್​ದೀಪ್​ ಸಿಂಗ್​ 4 ಓವರ್​ಗಳ ಸ್ಪೆಲ್​ನಲ್ಲಿ 52 ರನ್​ಗಳನ್ನು ಬಿಟ್ಟುಕೊಟ್ಟರು. ಅವರ 13.00 ಎಕಾನಮಿ ಪಿಬಿಎಸ್​ಕೆ ಬೌಲರ್​ಗಳಲ್ಲಿ ಅತ್ಯಧಿಕವಾಗಿತ್ತು.

VISTARANEWS.COM


on

T20 World Cup
Koo

ಬೆಂಗಳೂರು: ಮುಂಬರುವ ಟಿ 20 ವಿಶ್ವಕಪ್ (T20 World Cup) ಆಡಲಿರುವ ಭಾರತ ತಂಡಕ್ಕೆ ಆಯ್ಕೆಯಾದ ಒಂದು ದಿನದ ನಂತರ ಐಪಿಎಲ್​ನ ಪಂಜಾಬ್​ ಕಿಂಗ್ಸ್ ತಂಡ ಬೌಲರ್​ ಅರ್ಶ್​ದೀಪ್​ ಸಿಂಗ್​ ಚೆನ್ನೈ ವಿರುದ್ಧ ದುಬಾರಿ ಬೌಲಿಂಗ್​ ದಾಳಿ ನಡೆಸಿದ್ದಾರೆ. ತಮ್ಮ 4 ಓವರ್​ಗಳ ಸ್ಪೆಲ್​ನಲ್ಲಿ 52 ರನ್ ನೀಡಿದ್ದಾರೆ. ಚೆನ್ನೈ ಬ್ಯಾಟರ್​ಗಳು ಸ್ಪರ್ಧಾತ್ಮಕ ಮೊತ್ತ ಗಳಿಸಲು ಹೆಣಗಾಡಿದ ಹೊರತಾಗಿಯೂ ಅವರು ಹೆಚ್ಚು ರನ್​ ನೀಡಿದ್ದಾರೆ. ಇದು ಅವರ ಬೌಲಿಂಗ್​ ದಾಳಿಯ ಬಗ್ಗೆ ಟೀಕೆಗಳು ಎದುರಾಗಿವೆ. ಅವರನ್ನು ವಿಶ್ವ ಕಪ್ ತಂಡದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಚೆನ್ನೈನಲ್ಲಿ ಇಂದು ಸಿಎಸ್​ಕೆ ವಿರುದ್ಧ ಪಂಜಾಬ್ ಕಿಂಗ್ಸ್​ ಮೊದಲು ಬೌಲಿಂಗ್ ಮಾಡಿತ್ತು. ಚೆಪಾಕ್​​ನ ನಿಧಾನಗತಿಯ ಟ್ರ್ಯಾಕ್​ನಲ್ಲಿ ಆತಿಥೇಯರು ಬ್ಯಾಟಿಂಗ್​ನಲ್ಇ ಹೆಣಗಾಡಿದರು. ಹೀಗಾಗಿ ಪಂಜಾಬ್​ ತಂಡದ ನಿರ್ಧಾರ ಉತ್ತಮ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಅರ್ಶ್​ದೀಪ್​ ಬೌಲಿಂಗ್​ ಉತ್ತಮವಾಗಿರಲಿಲ್ಲ.

ನಾಯಕ ರುತುರಾಜ್ ಗಾಯಕ್ವಾಡ್ ಅವರ ಅರ್ಧಶತಕದ ನೆರವಿನಿಂದ ಸಿಎಸ್​ಕೆ ಮೊದಲ ಇನಿಂಗ್ಸ್​ನ 20 ಓವರ್​ಗಳಲ್ಲಿ 162 ರನ್ ಗಳಿಸಿತು. ಆದಾಗ್ಯೂ ಬ್ಯಾಟರ್​ಗಳ ದುಃಸ್ವಪ್ನ ಹೊಂದಿದ್ದ ಪಿಚ್​ನಲ್ಲಿ ಪಿಬಿಕೆಎಸ್​​ನ ಮುಂಚೂಣಿ ಬೌಲರ್ ಅರ್ಶ್​ದೀಪ್​ ಸಿಂಗ್​ 4 ಓವರ್​ಗಳ ಸ್ಪೆಲ್​ನಲ್ಲಿ 52 ರನ್​ಗಳನ್ನು ಬಿಟ್ಟುಕೊಟ್ಟರು. ಅವರ 13.00 ಎಕಾನಮಿ ಪಿಬಿಎಸ್​ಕೆ ಬೌಲರ್​ಗಳಲ್ಲಿ ಅತ್ಯಧಿಕವಾಗಿತ್ತು.

ಇದನ್ನೂ ಓದಿ: Deepak Chahar : ಸಹೋದರನನ್ನು ಗೇಲಿ ಮಾಡಿದವರಿಗೆ ತಿರುಗೇಟು ಕೊಟ್ಟ ದೀಪಕ್ ಚಾಹರ್​ ಸಹೋದರಿ!

ಕುತೂಹಲಕಾರಿ ಸಂಗತಿಯೆಂದರೆ ಮುಂಬರುವ ಮೆಗಾ ಟಿ 20 ವಿಶ್ವಕಪ್ ಈವೆಂಟ್​​ನಿಂದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರೊಂದಿಗೆ ಅಂತಿಮ 15 ಸದಸ್ಯರ ತಂಡದಲ್ಲಿ ಅರ್ಶ್​​ದೀಪ್​ ಸಿಂಗ್​ ಸ್ಥಾನ ಪಡೆದುಕೊಂಡಿದ್ದಾರೆ. ಆದರೆ ಈಗ ಅವರ ಬೌಲಿಂಗ್​ ದಾಳಿ ಎಷ್ಟು ಪರಿಣಾಮಕಾರಿ ಎಂಬುದೇ ಅನುಮಾನ ಶುರುವಾಗಿದೆ.

ಕಿಡಿಕಾರಿದ ಅಭಿಮಾನಿಗಳು

ಅರ್ಶ್​ದೀಪ್​ ಅವರ ಕಳಪೆ ಪ್ರದರ್ಶನ ಮತ್ತು ಬೌಲರ್ ಸ್ನೇಹಿ ಪಿಚ್​​ನಲ್ಲಿ ಅರ್ಶ್​​ದೀಪ್​ ಅವರ ಪ್ರಯತ್ನಗಳ ಕೊರತೆಯು ಅಭಿಮಾನಿಗಳನ್ನು ಗೊಂದಲಕ್ಕೀಡು ಮಾಡಿದೆ. ಈ ಬಗ್ಗೆ ಚಿಂತೆಗೀಡು ಮಾಡಿತು. ಅನೇಕರು ಅವರ ಆಯ್ಕೆಯನ್ನು ಪ್ರಶ್ನಿಸಿದ್ದಾರೆ. ಕೆಲವರು ಸಿಎಸ್ಕೆ ದಂತಕಥೆ ಎಂಎಸ್ ಧೋನಿಗೆ ಹೆಚ್ಚುವರಿ ರನ್​ಗಳನ್ನು ನೀಡಿದಕ್ಕಾಗಿ ಟ್ರೋಲ್ ಮಾಡಿದ್ದಾರೆ.

ಅರ್ಶ್​ದೀಪ್​ ಸಿಂಗ್ 2022 ರಲ್ಲಿ ಪಾದಾರ್ಪಣೆ ಮಾಡಿದಾಗಿನಿಂದ ರಾಷ್ಟ್ರೀಯ ತಂಡದಲ್ಲಿದ್ದಾರೆ. ಆದಾಗ್ಯೂ, ಮೊಹಮ್ಮದ್ ಶಮಿ ಹಿಮ್ಮಡಿ ಗಾಯದಿಂದ ಬಳಲುತ್ತಿರುವುದರಿಂದ, ಭಾರತವು ವೇಗದ ಬೌಲಿಂಗ್ ಆಯ್ಕೆಗಳ ಕೊರತೆಯನ್ನು ಎದುರಿಸಿದೆ. ಹೀಗಾಗಿ ಎಡಗೈ ವೇಗಿಗೆ ಅವಕಾಶ ಸಿಕ್ಕಿದೆ. ಐಪಿಎಲ್ 2024 ಋತುವಿನಲ್ಲಿ ಎಡಗೈ ವೇಗದ ಬೌಲರ್ನ ಪ್ರಶ್ನಾರ್ಹ ಫಾರ್ಮ್ ಖಂಡಿತವಾಗಿಯೂ ಟಿ 20 ವಿಶ್ವಕಪ್ ಹತ್ತಿರವಾಗುತ್ತಿದ್ದಂತೆ ಅಭಿಮಾನಿಗಳನ್ನು ಚಿಂತೆಗೀಡು ಮಾಡುತ್ತದೆ.

ಪ್ರಿಯ ಬಿಸಿಸಿಐ, ದಯವಿಟ್ಟು ಅರ್ಷ್ದೀಪ್ ಸಿಂಗ್ ಧೋನಿಗೆ ಈ ಕೊನೆಯ ಓವರ್ ಅನ್ನು ಪರಿಶೀಲಿಸಬಹುದೇ? ಅವರು ಉದ್ದೇಶಪೂರ್ವಕವಾಗಿ ಧೋನಿಯ ಆಫ್ ಸ್ಟಂಪ್​​ಗೆ ಹೊರಗೆ ಇಡೀ ಓವರ್ ಎಸೆದಿದ್ದಾರೆ. ಇದು ಧೋನಿಗೆ ಸಿಕ್ಸರ್ ಎಸೆಯಲು ನೆರವು ನೀಡಿತು ಎಂದು ಸನ್ನಿ ಎಂಬ ಅಭಿಮಾನಿ ಹೇಳಿದ್ದಾರೆ.

Continue Reading

ಕ್ರೈಂ

Prajwal Revanna Case: ಜರ್ಮನಿಯಿಂದ ದುಬೈಗೆ ಹಾರಿದ ಪ್ರಜ್ವಲ್‌ ರೇವಣ್ಣ! ತನಿಖೆ ದಿಕ್ಕು ತಪ್ಪಿಸಿ, ದಿನ ದೂಡಲು ತಂತ್ರ?

Prajwal Revanna Case: ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ ಹಿನ್ನೆಲೆಯಲ್ಲಿ ಲೈಂಗಿಕ ಹಗರಣದ ಪ್ರಮುಖ ಆರೋಪಿ ಪ್ರಜ್ವಲ್‌ ರೇವಣ್ಣ ದುಬೈಗೆ ಹಾರಿರುವ ಶಂಕೆಯನ್ನು ಎಸ್ಐಟಿ ಅಧಿಕಾರಿಗಳು ವ್ಯಕ್ತಪಡಿಸಿದ್ದರು. ಆದರೆ, ಪ್ರಜ್ವಲ್‌ ಬುಧವಾರ (ಮೇ 1) ರಾತ್ರಿಯೇ ಜರ್ಮನಿಯಿಂದ ದುಬೈಗೆ ಬಂದಿಳಿದಿದ್ದಾರೆ. ಎಮಿರೇಟ್ಸ್‌ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದ ಪ್ರಜ್ವಲ್‌ ಅಲ್ಲದೆ, ಪ್ರಜ್ವಲ್ ಹಾಗೂ ಆಪ್ತರ ಮೊಬೈಲ್ ಲೊಕೇಶನ್‌ ಅನ್ನು ಸಹ ಎಸ್ಐಟಿ ಅಧಿಕಾರಿಗಳು ಪತ್ತೆ ಹಚ್ಚುತ್ತಲೇ ಇದ್ದಾರೆ. ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ್ದರಿಂದ ಮತ್ತಷ್ಟು ಸಮಯಾವಕಾಶವನ್ನು ಪಡೆದುಕೊಳ್ಳುವ ಸಲುವಾಗಿ ದುಬೈಗೆ ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಅಲ್ಲಿಂದ ಯಾವಾಗ ಬೇಕಿದ್ದರೂ ಬೆಂಗಳೂರಿಗೆ ಬಂದಿಳಿಯಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

VISTARANEWS.COM


on

Prajwal Revanna Case Prajwal arrives in Dubai from Germany
Koo

ಬೆಂಗಳೂರು: ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅವರಿಗೆ ಎಸ್ಐಟಿ ಲುಕ್ ಔಟ್ ನೋಟಿಸ್‌ ನೀಡಿದ ಬೆನ್ನಲ್ಲೇ ಅವರು ಜರ್ಮನಿಯಿಂದ ದುಬೈಗೆ ಹೋಗಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅಲರ್ಟ್‌ ಆಗಿದ್ದಾರೆ. ಹೀಗಾಗಿ ಒಂದು ಕಡೆ ಇರದೇ ಸ್ಥಳ ಬದಲಾವಣೆ ಮಾಡುತ್ತಿದ್ದಾರೆ.

ಆದರೆ, ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ ಹಿನ್ನೆಲೆಯಲ್ಲಿ ಲೈಂಗಿಕ ಹಗರಣದ ಪ್ರಮುಖ ಆರೋಪಿ ಪ್ರಜ್ವಲ್‌ ರೇವಣ್ಣ ದುಬೈಗೆ ಹಾರಿರುವ ಶಂಕೆಯನ್ನು ಎಸ್ಐಟಿ ಅಧಿಕಾರಿಗಳು ವ್ಯಕ್ತಪಡಿಸಿದ್ದರು. ಆದರೆ, ಪ್ರಜ್ವಲ್‌ ಬುಧವಾರ (ಮೇ 1) ರಾತ್ರಿಯೇ ಜರ್ಮನಿಯಿಂದ ದುಬೈಗೆ ಬಂದಿಳಿದಿದ್ದಾರೆ. ಎಮಿರೇಟ್ಸ್‌ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದ ಪ್ರಜ್ವಲ್‌ ಅಲ್ಲದೆ, ಪ್ರಜ್ವಲ್ ಹಾಗೂ ಆಪ್ತರ ಮೊಬೈಲ್ ಲೊಕೇಶನ್‌ ಅನ್ನು ಸಹ ಎಸ್ಐಟಿ ಅಧಿಕಾರಿಗಳು ಪತ್ತೆ ಹಚ್ಚುತ್ತಲೇ ಇದ್ದಾರೆ.

ದುಬೈಗೆ ಹೋಗಿದ್ದು ಏಕೆ?

ಎಸ್‌ಐಟಿ ಈಗಾಗಲೇ ಪ್ರಜ್ವಲ್‌ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ ಮಾಡಿದೆ. ಅಲ್ಲದೆ, ಸಮಯಾವಕಾಶ ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿಯನ್ನೂ ತಿರಸ್ಕರಿಸಿದೆ. ಈಗ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ್ದರಿಂದ ಮತ್ತಷ್ಟು ಸಮಯಾವಕಾಶವನ್ನು ಪಡೆದುಕೊಳ್ಳುವ ಸಲುವಾಗಿ ದುಬೈಗೆ ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಅಲ್ಲಿಂದ ಯಾವಾಗ ಬೇಕಿದ್ದರೂ ಬೆಂಗಳೂರಿಗೆ ಬಂದಿಳಿಯಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

ಹಾಸನದ ಅಶ್ಲೀಲ ವೀಡಿಯೋ (Obscene video) ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕರ್ನಾಟಕ ಸರ್ಕಾರದಿಂದ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ.

ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಎಸ್‌ಐಟಿ (SIT) A2 ಆಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ತನಿಖೆಗೊಳಪಡಿಸುವುದು ಅಗತ್ಯವಾಗಿದ್ದು, ಅವರನ್ನು ಜರ್ಮನಿಯಿಂದ ಕರೆತರಬೇಕಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್‌ ವಿಭಾಗಕ್ಕೆ ಲುಕೌಟ್‌ ನೋಟೀಸ್‌ ಸರ್ವ್‌ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣಗಳ ಇಮಿಗ್ರೇಷನ್‍ಗೆ ಎಸ್‍ಐಟಿ ಅಧಿಕಾರಿಗಳು ಲುಕೌಟ್‌ ನೋಟಿಸ್ ನೀಡಿದ್ದಾರೆ ಎನ್ನಲಾಗಿದ್ದು, ಆ ಮೂಲಕ ಪ್ರಜ್ವಲ್‌ ರೇವಣ್ಣ ಕಾಣಿಸಿಕೊಂಡ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಈ ನಡುವೆ ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ. ಅವರು ಎಸ್‍ಐಟಿ ಮುಖ್ಯಸ್ಥ ರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಇದರಲ್ಲಿ ಪ್ರಜ್ವಲ್ ಅವರು ಮೇ 15ರಂದು ಭಾರತಕ್ಕೆ ವಾಪಸ್ಸು ಬರುವ ಬಗ್ಗೆ ಮಾಹಿತಿ ದೊರಕಿದೆ. ಆದರೆ ಲುಫ್ತಾನ್ಸಾ ಏರ್ಲೈನ್ಸ್‌ನಲ್ಲಿ ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ಬೆಂಗಳೂರಿಗೆ ಪ್ರಜ್ವಲ್‌ ಬುಕ್‌ ಮಾಡಿದ ಟಿಕೆಟ್‌ನ ಪ್ರತಿ ಲಭ್ಯವಾಗಿದ್ದು, ಮೇ 15ರಂದು ಬುಕ್‌ ಮಾಡಿದ್ದಾರೆ.

ಏನಿದು ಲುಕ್ಔಟ್‌ ನೋಟಿಸ್?

ತಲೆಮರೆಸಿಕೊಂಡಿರುವ ಅಥವಾ ಕಾನೂನು ಜಾರಿ ಸಂಸ್ಥೆಗಳಿಗೆ ಬೇಕಾಗಿರುವ ವ್ಯಕ್ತಿಯು ದೇಶವನ್ನು ತೊರೆಯಲು ಸಾಧ್ಯವಾಗದಂತೆ ಖಚಿತಪಡಿಸಿಕೊಳ್ಳಲು ಎಲ್ಒಸಿ ನೀಡಲಾಗುತ್ತದೆ. ಇದನ್ನು ಹೆಚ್ಚಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿನ ವಲಸೆ ತಪಾಸಣಾ ಕೇಂದ್ರಗಳಲ್ಲಿ ತಪಾಸಣೆಗೆ ಬಳಸಲಾಗುತ್ತದೆ. ಆದರೆ, ಪ್ರಜ್ವಲ್‌ ಈಗಾಗಲೇ ಜರ್ಮನಿಯಲ್ಲಿದ್ದು, ವಿಮಾನ ನಿಲ್ದಾಣದಲ್ಲಿ ಮರಳುವ ಹೊತ್ತಿಗೆ ಬಂಧಿಸಲು ಚಿಂತಿಸಲಾಗಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಈ ಮೂಲಕ ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ಸೃಷ್ಟಿಸುವ ತಂತ್ರ ಇದೆಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಏಪ್ರಿಲ್ 27-28ರಂದು ರಾತ್ರೋರಾತ್ರಿ ಬೆಂಗಳೂರಿನಿಂದ ಜರ್ಮನಿಗೆ ತೆರಳಿದ್ದಾರೆ. ಆಪಾದಿತ ಲೈಂಗಿಕ ಹಗರಣದ ತನಿಖೆಗೆ ಎಸ್‌ಐಟಿಯನ್ನು ಸ್ಥಾಪಿಸುವ ಕೆಲವೇ ಗಂಟೆಗಳ ಮೊದಲು ಅವರು ಪರಾರಿಯಾಗಿದ್ದಾರೆ. ಮೇ 1ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಮಧ್ಯ ಪ್ರವೇಶಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕೇಂದ್ರ ಸರ್ಕಾರದ ಕಚೇರಿಗಳನ್ನು ಬಳಸಿಕೊಂಡು ಪರಾರಿಯಾದ ಸಂಸದರನ್ನು ಭಾರತಕ್ಕೆ ಕರೆತರಲು ಖಚಿತಪಡಿಸಿಕೊಳ್ಳುವಂತೆ ಕೋರಿದ್ದರು.

ತನಿಖೆಗೆ ಅಗತ್ಯವಾದಾಗ ಪ್ರಜ್ವಲ್‌ ಭಾರತಕ್ಕೆ ಮರಳಲಿದ್ದಾನೆ ಎಂದು ಎಚ್‌ ಡಿ ರೇವಣ್ಣ ಹೇಳಿದ್ದಾರೆ. A1 ಆಗಿರುವ ರೇವಣ್ಣ ಅವರೂ ಎಸ್‌ಐಟಿ ಮುಂದೆ ತನಿಖೆಗೆ ಒಳಗಾಗಬೇಕಿದೆ. ಅವರಿಗೂ ನೋಟಿಸ್‌ ಜಾರಿ ಮಾಡಲಾಗಿದೆ. ಇಂದು ಅಥವಾ ನಾಳೆ ಅವರು ತನಿಖೆಗೆ ಹಾಜರಾಗುವ ನಿರೀಕ್ಷೆ ಇದೆ.

Continue Reading
Advertisement
Jolly LLB 3
ಸಿನಿಮಾ5 seconds ago

Jolly LLB 3: ಬರ್ತಿದೆ ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 3; ಈ ಬಾರಿ ಇದೆ ಸರ್‌ಪ್ರೈಸ್!

Davanagere lok sabha constituency bjp candidate gayatri siddeshwar election campaign in harapanahalli
ರಾಜಕೀಯ2 mins ago

Lok Sabha Election: ಹರಪನಹಳ್ಳಿಯಲ್ಲಿ ರೋಡ್‌ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್

MLC Chalavadi Narayanaswamy latest Statement in Hubballi
ಹುಬ್ಬಳ್ಳಿ3 mins ago

Lok Sabha Election: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ಛಲವಾದಿ ನಾರಾಯಣಸ್ವಾಮಿ

Mega Shetty
ಫ್ಯಾಷನ್12 mins ago

Mega Shetty: ದಾವಣಿ-ಲಂಗದಲ್ಲಿ ನಟಿ ಮೇಘಾ ಶೆಟ್ಟಿಯಂತೆ ನೀವೂ ಕಾಣಬೇಕೆ? ಈ ಟಿಪ್ಸ್ ಪಾಲಿಸಿ!

six seats of Karnataka Legislative Council Elections to be held on June 3
ಕರ್ನಾಟಕ13 mins ago

Karnataka legislative council: ವಿಧಾನ ಪರಿಷತ್‌ನ 6 ಕ್ಷೇತ್ರಗಳಿಗೆ ಜೂ.3 ಎಲೆಕ್ಷನ್;‌ ಜೂ. 6ಕ್ಕೆ ಫಲಿತಾಂಶ

Deepika Padukone
ಬಾಲಿವುಡ್16 mins ago

Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

Sania Mirza
ಕ್ರೀಡೆ23 mins ago

Sania Mirza: ಹೇಳಲು ತುಂಬಾ ಇದೆ, ಆದರೂ ಮೌನವಾಗಿದ್ದೇನೆ; ಸಾನಿಯಾ ಮಿರ್ಜಾ ಪೋಸ್ಟ್​ನ ಅರ್ಥವೇನು?

T20 World Cup
ಪ್ರಮುಖ ಸುದ್ದಿ35 mins ago

T20 World Cup : ವಿಶ್ವ ಕಪ್​ ತಂಡದಿಂದ ಅರ್ಶ್​​ದೀಪ್​ ಕೈಬಿಡಲು ಆಗ್ರಹ; ಏನಾಯಿತು ಅವರಿಗೆ?

Viral News
ವೈರಲ್ ನ್ಯೂಸ್45 mins ago

Viral News: ದೂರದ ಇಂಗ್ಲೆಂಡ್‌ನಲ್ಲಿಯೂ ಕೇರಳ ಕಲರವ; ನೆಟ್ಟಿಗರ ಗಮನ ಸೆಳೆದ ವಿಡಿಯೊ ಇಲ್ಲಿದೆ

Prajwal Revanna Case Prajwal arrives in Dubai from Germany
ಕ್ರೈಂ47 mins ago

Prajwal Revanna Case: ಜರ್ಮನಿಯಿಂದ ದುಬೈಗೆ ಹಾರಿದ ಪ್ರಜ್ವಲ್‌ ರೇವಣ್ಣ! ತನಿಖೆ ದಿಕ್ಕು ತಪ್ಪಿಸಿ, ದಿನ ದೂಡಲು ತಂತ್ರ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌