Anant Radhika Wedding: ಮಗನ ಮದುವೆ ಸಂದರ್ಭದಲ್ಲಿ ಕಾಶಿಗೆ ಗೌರವ; ನೀತಾ ಅಂಬಾನಿಯ ಈ ವಿಡಿಯೊ ನೋಡಿ - Vistara News

ವಾಣಿಜ್ಯ

Anant Radhika Wedding: ಮಗನ ಮದುವೆ ಸಂದರ್ಭದಲ್ಲಿ ಕಾಶಿಗೆ ಗೌರವ; ನೀತಾ ಅಂಬಾನಿಯ ಈ ವಿಡಿಯೊ ನೋಡಿ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹದ (Anant Radhika Wedding) ಹಿಂದೂ ವಿಧಿವಿಧಾನ ಸಂಪ್ರದಾಯ ಆಚರಣೆಯಲ್ಲಿ ತೊಡಗಿರುವ ಅಂಬಾನಿ ಕುಟುಂಬ ಈ ಸಂದರ್ಭದಲ್ಲಿ ಪವಿತ್ರ ನಗರವಾದ ಕಾಶಿಯನ್ನು ಗೌರವಿಸಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಜಗತ್ತಿನೊಂದಿಗೆ ಹಂಚಿಕೊಳ್ಳಲು ಬಯಸುತ್ತೇವೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ನಮ್ಮ ಸಂಪ್ರದಾಯ ಮತ್ತು ಆಧ್ಯಾತ್ಮಿಕತೆಯ ವೈಭವಯುತ ಆಚರಣೆಯಾಗಿದೆ ಎಂದು ನೀತಾ ಅಂಬಾನಿ ಹೇಳಿದ್ದಾರೆ. ಆ ಕುರಿತ ವಿಡಿಯೊ ಇಲ್ಲಿದೆ.

VISTARANEWS.COM


on

Anant Radhika Wedding
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉದ್ಯಮಿ ಮುಖೇಶ್ ಅಂಬಾನಿ (mukesh ambani) ಮತ್ತು ನೀತಾ ಅಂಬಾನಿ (nita ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಶುಕ್ರವಾರ ದಾಂಪತ್ಯ ಜೀವನಕ್ಕೆ (Anant Radhika Wedding) ಕಾಲಿಟ್ಟಿದ್ದಾರೆ. ಅವರ ವಿವಾಹ ಪೂರ್ವ ಸಮಾರಂಭಗಳು ಮತ್ತು ಹಬ್ಬಗಳ ಅತ್ಯಂತ ವೈಭವದಿಂದ ನೆರವೇರಿದೆ. ಈ ಮದುವೆಯ ಆಚರಣೆಗಳ ಬಗ್ಗೆ ನೀತಾ ಅಂಬಾನಿ ಅವರು ಬಿಡುಗಡೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ಹಿಂದೂ ವಿಧಿವಿಧಾನ ಸಂಪ್ರದಾಯ ಆಚರಣೆಯಲ್ಲಿ ತೊಡಗಿರುವ ಅಂಬಾನಿ ಕುಟುಂಬ ಈ ಸಂದರ್ಭದಲ್ಲಿ ಪವಿತ್ರ ನಗರವಾದ ಕಾಶಿಯನ್ನು ಗೌರವಿಸಿದ್ದು, ಇದನ್ನು ವಾರಣಾಸಿಗೆ ಪವಿತ್ರ ಸಂಪರ್ಕ ಎಂದು ನೀತಾ ಅಂಬಾನಿ ಕರೆದಿದ್ದಾರೆ. ಗಂಗಾನದಿಯ ತಟದಲ್ಲಿರುವ ವಾರಣಾಸಿಯನ್ನು ಭಾರತದ ಆಧ್ಯಾತ್ಮಿಕ ಹೃದಯವೆಂದು ಪರಿಗಣಿಸಲಾಗಿದೆ. ‘ಎಟರ್ನಲ್ ಸಿಟಿ’ ಎಂದು ಕರೆಯಲ್ಪಡುವ ಇದು ಸಂಪ್ರದಾಯ ಮತ್ತು ಆಧ್ಯಾತ್ಮಿಕತೆಯು ದೈನಂದಿನ ಜೀವನದಲ್ಲಿ ಆಳವಾಗಿ ಹೆಣೆದುಕೊಂಡಿರುವ ಸ್ಥಳವಾಗಿದೆ. ಈ ಪುರಾತನ ನಗರಕ್ಕೆ ನೀತಾ ಅಂಬಾನಿಯವರ ಭೇಟಿಯು ಅದರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವಕ್ಕಾಗಿ ಅವರ ಆಳವಾದ ಗೌರವವನ್ನು ಹೇಳುತ್ತದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.


ನೀತಾ ಅಂಬಾನಿ ಅವರು ತಮ್ಮ ಭೇಟಿಯ ಸಮಯದಲ್ಲಿ ಅನಂತ್ ಮತ್ತು ರಾಧಿಕಾ ಅವರ ಆಶೀರ್ವಾದವನ್ನು ಕೋರಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದರು. ಈ ಭಕ್ತಿಯ ಕ್ರಮವು ವಿವಾಹ ಮಹೋತ್ಸವಗಳಲ್ಲಿ ವಾರಣಾಸಿಯ ಸಾರವನ್ನು ಸೇರಿಸುವ ಪೂರ್ವಭಾವಿ ಯೋಜನೆಯಾಗಿತ್ತು. ವಿವಾಹದ ಥೀಮ್ ನಗರದ ಸೌಂದರ್ಯ, ಸಕಾರಾತ್ಮಕತೆ ಮತ್ತು ಪರಿಶುದ್ಧತೆಯನ್ನು ಪ್ರತಿಬಿಂಬಿಸುತ್ತದೆ. ವಾರಣಾಸಿಯ ಚೈತನ್ಯವನ್ನು ಅದ್ಭುತ ರೀತಿಯಲ್ಲಿ ಜೀವಂತಗೊಳಿಸುತ್ತದೆ.

ಸೀರೆಯಲ್ಲಿ ಮಿಂಚಿದ ವಾರಣಾಸಿಯ ಸೊಬಗು

ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಮತ್ತು ಪ್ರದರ್ಶಿಸಲು ನೀತಾ ಅಂಬಾನಿ ಅವರ ಸಮರ್ಪಣೆ ವಿವಾಹದ ಕ್ರಿಯಾಶೀಲ ಕಾರ್ಯಕ್ರಮಗಳಲ್ಲಿ ಪ್ರತಿಬಿಂಬಿಸಿದೆ. ಸ್ವದೇಶ್ ಮತ್ತು ಮನೀಶ್ ಮಲ್ಹೋತ್ರಾ ವರ್ಲ್ಡ್ ಸಹಯೋಗದೊಂದಿಗೆ ಮನೀಶ್ ಮಲ್ಹೋತ್ರಾ ವಿನ್ಯಾಸಗೊಳಿಸಿದ 28 ಚೌಕ್ ಜಾಲ್ ರಂಗಕತ್ ಸೀರೆಯನ್ನು ಅವರು ಧರಿಸಿದ್ದರು. ಸೂಕ್ಷ್ಮವಾದ ಹೂವಿನ ವಿನ್ಯಾಸಗಳು ಮತ್ತು ಝರಿ ವರ್ಣಗಳಿಂದ ಅಲಂಕರಿಸಲ್ಪಟ್ಟ ಈ ಸೀರೆಯು ಭಾರತದ ಕುಶಲಕರ್ಮಿಗಳ ಅದ್ಭುತ ಕರಕುಶಲತೆಗೆ ಸಾಕ್ಷಿಯಾಗಿದೆ.

ಅಧಿಕೃತ ರಂಗಕಟ್ ಸೀರೆಯ ರಚನೆಯು ಶ್ರಮದಾಯಕ ಪ್ರಕ್ರಿಯೆಯಾಗಿದ್ದು, ನೇಯ್ಗೆ ಮಾಡಲು ಆರು ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ. ಈ ಅಪರೂಪದ ಪೀಳಿಗೆಯ ಕರಕುಶಲತೆಯನ್ನು ಆನುವಂಶಿಕವಾಗಿ ಪಡೆದ ಆಯ್ದ ನೇಕಾರರ ಕೌಶಲ ಮತ್ತು ಸಮರ್ಪಣೆಗೆ ಇದು ಸಾಕ್ಷಿಯಾಗಿದೆ. ಇವುಗಳನ್ನು ಆಯ್ಕೆ ಮಾಡುವ ಮೂಲಕ ನೀತಾ ಅಂಬಾನಿ ಕುಶಲಕರ್ಮಿಗಳನ್ನು ಗೌರವಿಸಿದ್ದಲ್ಲದೆ, ವಾರಣಾಸಿಯ ಅನಾದಿ ಕಾಲದ ಸೊಬಗಿನ ಝರಿಯನ್ನು ಮದುವೆಗೆ ತಂದು ಜೋಡಿಸಿದ್ದಾರೆ.

ಸಾಂಸ್ಕೃತಿಕ ಪರಂಪರೆಯ ಗೌರವ

ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಜಗತ್ತಿನೊಂದಿಗೆ ಹಂಚಿಕೊಳ್ಳುವ ಅವರ ದೃಷ್ಟಿಗೆ ಅನುಗುಣವಾಗಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಸಂಪ್ರದಾಯ ಮತ್ತು ಆಧ್ಯಾತ್ಮಿಕತೆಯ ಆಚರಣೆಯಾಗಿದೆ ಎಂದು ನೀತಾ ಅಂಬಾನಿ ಹೇಳಿದ್ದಾರೆ. ವಾರಣಾಸಿಯ ಗೌರವವು ಕೇವಲ ವಿಷಯಾಧಾರಿತ ಅಂಶವಲ್ಲ. ಆದರೆ ಕುಟುಂಬದ ಆಳವಾದ ಬೇರೂರಿರುವ ಮೌಲ್ಯಗಳು ಮತ್ತು ಭಾರತದ ಸಾಂಸ್ಕೃತಿಕ ಪರಂಪರೆಯ ಗೌರವದ ಪ್ರತಿಬಿಂಬವಾಗಿದೆ ಎಂದವರು ಹೇಳಿದ್ದಾರೆ.

ವಾರಾಣಸಿ ಭೇಟಿ

ನೀತಾ ಅಂಬಾನಿ ಅವರು ಅನಂತ್ ಮತ್ತು ರಾಧಿಕಾ ಅವರ ವಿವಾಹವು ಭಾರತದ ಸಾಂಸ್ಕೃತಿಕ ಪರಂಪರೆಗೆ ಗೌರವವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ವಿವಾಹದ ಮೊದಲು ಅವರು ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಶಿವನ ಆಶೀರ್ವಾದ ಪಡೆಯಲು ವಾರಣಾಸಿಗೆ ಭೇಟಿ ನೀಡಿದ್ದರು. ಈ ಭೇಟಿಯು ಕೇವಲ ವೈಯಕ್ತಿಕ ತೀರ್ಥಯಾತ್ರೆಯಾಗಿರಲಿಲ್ಲ. ಇದು ದಂಪತಿಗಳ ಹೊಸ ಪ್ರಯಾಣಕ್ಕೆ ದೈವಿಕ ಆಶೀರ್ವಾದವನ್ನು ಆಹ್ವಾನಿಸುವ ಮಾರ್ಗವಾಗಿದೆ.

ಇದನ್ನೂ ಓದಿ: Blast in Bengaluru : ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಅಂಬಾನಿ ಪುತ್ರನ ಮದುವೆಗೂ ಕನೆಕ್ಷನ್‌?

ನವ ದಂಪತಿ ಒಟ್ಟಿಗೆ ತಮ್ಮ ಹೊಸ ಪ್ರಯಾಣವನ್ನು ಪ್ರಾರಂಭಿಸುವಾಗ ಕಾಶಿ ವಿಶ್ವನಾಥನ ಆಶೀರ್ವಾದ ಪಡೆದು ಮಾಡಿರುವ ಈ ಆಚರಣೆಗಳನ್ನು ಸಕಾರಾತ್ಮಕತೆ, ಬೆಳಕು ಮತ್ತು ಶುದ್ಧತೆಯ ಸೆಳವುಗಳಲ್ಲಿ ಆವರಿಸುತ್ತದೆ. ಈ ಮದುವೆಯು ಸಂಪ್ರದಾಯ, ಸಂಸ್ಕೃತಿ ಮತ್ತು ಆಧುನಿಕತೆಯ ಸುಂದರ ಸಮ್ಮಿಲನವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಹಿರಿಯರಿಗೆ ಆರೋಗ್ಯ ವಿಮೆ: ಯಾಕಾಗಿ? ಏನಿದರ ಉಪಯೋಗ?

Money Guide: ಕೆಲವೊಂದು ಸಮಯೋಚಿತ ನಿರ್ಧಾರ ತೆಗೆದುಕೊಳ್ಳುವುದಿಂದ ಆರ್ಥಿಕ ಸಮಸ್ಯೆಯಿಂದ ಪಾರಾಗಬಹುದು. ಆ ಪೈಕಿ ಆರೋಗ್ಯ ವಿಮೆ ಮಾಡಿಸುವುದು ಮುಖ್ಯವಾದುದು. ಈಗ ಕಿರಿಯರು ಮಾತ್ರವಲ್ಲ ಹಿರಿಯರಿಗೂ ಹೆಲ್ತ್‌ ಇನ್ಶೂರೆನ್ಸ್‌ ಲಭ್ಯ. ಹೆಚ್ಚುತ್ತಿರುವ ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡಲು ಮಾತ್ರವಲ್ಲ ಹಿರಿಯ ನಾಗರಿಕರಿಗೆ ಉತ್ತಮ ಚಿಕಿತ್ಸೆಯನ್ನು ಖಚಿತಪಡಿಸಲು ಆರೋಗ್ಯ ವಿಮೆ ಮಾಡಿಸಬೇಕು ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ.

VISTARANEWS.COM


on

Money Guide
Koo

ಬೆಂಗಳೂರು: ಬದಲಾದ ಜೀವನ ಶೈಲಿ, ಒತ್ತಡ ಬದುಕು ಇತ್ಯಾದಿ ಕಾರಣಗಳಿಂದ ದಿನ ಕಳೆದಂತೆ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದೆ. ಹಿರಿಯ ನಾಗರಿಕರಿಂದ ಹಿಡಿದು ಮಕ್ಕಳಿಂದ ಹಿಡಿದು ಮಕ್ಕಳ ಆರೋಗ್ಯದ ಕಡೆಗೂ ಹೆಚ್ಚು ಗಮನ ಹರಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದೇವೆ. ಅದರಲ್ಲಿಯೂ ಕೆಲವೊಮ್ಮೆ ಆದಾಯದ ಬಹುಪಾಲು ಚಿಕಿತ್ಸೆಗಾಗಿಯೇ ವ್ಯಯಿಸಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಇದೇ ಕಾರಣಕ್ಕೆ ಹಲವರು ಸೋತು ಹೈರಾಣಾಗುತ್ತಾರೆ. ಆದರೆ ನೆನಪಿರಲಿ ಕೆಲವೊಂದು ಸಮಯೋಚಿತ ನಿರ್ಧಾರ ತೆಗೆದುಕೊಳ್ಳುವುದಿಂದ ಇಂತಹ ಸಂದಿಗ್ಧ ಪರಿಸ್ಥಿತಿಯಿಂದ ಪಾರಾಗಬಹುದು. ಆ ಪೈಕಿ ಆರೋಗ್ಯ ವಿಮೆ (Health Insuranceಮಾಡಿಸುವುದು ಮುಖ್ಯವಾದುದು. ಈಗ ಕಿರಿಯರು ಮಾತ್ರವಲ್ಲ ಹಿರಿಯರಿಗೂ ಹೆಲ್ತ್‌ ಇನ್ಶೂರೆನ್ಸ್‌ ಲಭ್ಯ (Senior Health Insurance). ಈ ಬಗೆಗಿನ ಮಾಹಿತಿ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಯಾಕಾಗಿ ಅಗತ್ಯ?

ವಯಸ್ಸಾದವರಲ್ಲಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳ ಹೊರತಾಗಿಯೂ ಭಾರತದಲ್ಲಿನ ಬಹುಪಾಲು ಹಿರಿಯ ನಾಗರಿಕರು ಆರೋಗ್ಯ ವಿಮೆ ಹೊಂದಿಲ್ಲ. ಆರೋಗ್ಯ ಸೇವೆಗಳ ವೆಚ್ಚಗಳು ಏರುತ್ತಲೇ ಇದ್ದರೂ ಹೆಚ್ಚಿನ ಸಂಖ್ಯೆಯ ಹಿರಿಯ ನಾಗರಿಕರು ಹೆಲ್ತ್‌ ಇನ್ಶೂರೆನ್ಸ್‌ ಮಾಡಿಸಿಲ್ಲ ಎನ್ನುವ ಕಳವಳಕಾರಿ ಅಂಶ ಬಹಿರಂಗಗೊಂಡಿದೆ. ಜನಗಣತಿ ವರದಿಗಳ ಪ್ರಕಾರ ಭಾರತದಲ್ಲಿ ಪ್ರಸ್ತುತ 13.8 ಕೋಟಿಗೂ ಹೆಚ್ಚು ವೃದ್ಧರಿದ್ದಾರೆ. 2031ರ ವೇಳೆಗೆ ಈ ಸಂಖ್ಯೆ ಸುಮಾರು 19 ಕೋಟಿಗೆ ತಲುಪಲಿದೆ. ಹೀಗಾಗಿ ಹಿರಿಯ ನಾಗರಿಕರ ಆರೋಗ್ಯಕ್ಕಾಗಿ ಈಗಿನಿಂದಲೇ ಯೋಜನೆ ರೂಪಿಸುವುದು ಅಗತ್ಯ. ಹೆಚ್ಚುತ್ತಿರುವ ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡಲು ಮಾತ್ರವಲ್ಲ ಹಿರಿಯ ನಾಗರಿಕರಿಗೆ ಉತ್ತಮ ಚಿಕಿತ್ಸೆಯನ್ನು ಖಚಿತಪಡಿಸಲು ಆರೋಗ್ಯ ವಿಮೆ ಮಾಡಿಸಬೇಕಾಗಿದೆ.

ಹಿರಿಯ ನಾಗರಿಕರ ಆರೋಗ್ಯ ವಿಮೆಯಲ್ಲಿನ ವಿಧಗಳು

ಫ್ಯಾಮಿಲಿ ಫ್ಲೋಟರ್ ಯೋಜನೆ: ಹಿರಿಯರು ಸೇರಿದಂತೆ ಇಡೀ ಕುಟುಂಬವನ್ನು ಒಳಗೊಂಡಿರುವ ಒಂದೇ ಪಾಲಿಸಿ.

ವೈಯಕ್ತಿಕ ಯೋಜನೆ: ಹಿರಿಯರ ಆರೋಗ್ಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಅವರ ಹೆಸರಿನಲ್ಲಿ ಮಾಡಿಸುವ ಪಾಲಿಸಿ.

ಹಿರಿಯ ನಾಗರಿಕರ ಆರೋಗ್ಯ ಯೋಜನೆ: ವೃದ್ಧರ ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗಾಗಿ ಜಾರಿಯಲ್ಲಿರುವ ಪಾಲಿಸಿ. ಮೊದಲೇ ಅಸ್ತಿತ್ವದಲ್ಲಿರುವ ಆರೋಗ್ಯ ಸಮಸ್ಯೆಯನ್ನು ಇದು ಒಳಗೊಂಡಿರುತ್ತದೆ.

ಗಂಭೀರ ಆರೋಗ್ಯ ಸಮಸ್ಯೆಯಿಂದ ರಕ್ಷಣೆ: ಕ್ಯಾನ್ಸರ್, ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ನಿರ್ದಿಷ್ಟ ಗಂಭೀರ ಕಾಯಿಲೆಗಳಿಗೆ ಮಾಡಿಬಹುದಾದ ವಿಮೆ.

ವೈಯಕ್ತಿಕ ಅಪಘಾತ(ಪಿಎ)ದಿಂದ ರಕ್ಷಣೆ: ಆಕಸ್ಮಿಕವಾಗಿ ಉಂಟಾಗುವ ಗಾಯಗಳು, ಸಾವು, ಅಂಗವೈಕಲ್ಯ ಮತ್ತು ಅನಾರೋಗ್ಯದ ವೈದ್ಯಕೀಯ ವೆಚ್ಚಗಳಿಗೆ ಮಾಡಿಸಬಹುದಾದ ಪಾಲಿಸಿ.

ಆರೈಕೆ ಯೋಜನೆ: ಒಟ್ಟಾರೆ ಆರೋಗ್ಯ, ನಿಯಮಿತ ತಪಾಸಣೆ, ಲಸಿಕೆಗಳ ಅಗತ್ಯಕ್ಕಾಗಿ ಮಾಡಿಸಬಹುದಾದ ವಿಮಾ ಯೋಜನೆ.

ಆರೋಗ್ಯ ಸಂಜೀವಿನಿ ಯೋಜನೆ: ಹಿರಿಯರು ಮಾತ್ರವಲ್ಲ ಎಲ್ಲ ವಯಸ್ಸಿನವರಿಗೆ ಸರಳೀಕೃತ ಆಯ್ಕೆ.

ಹೊಸ ನಿಯಮ ಏನು ಹೇಳುತ್ತದೆ?

ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ಇತ್ತೀಚೆಗೆ ಹಿರಿಯರ ಆರೋಗ್ಯ ವಿಮೆಯಲ್ಲಿ ಹಲವಾರು ಸುಧಾರಣೆಗಳನ್ನು ಪರಿಚಯಿಸಿದೆ. ಆರೋಗ್ಯ ವಿಮಾ ಪಾಲಿಸಿಯನ್ನು ಖರೀದಿಸಲು ಒಬ್ಬ ವ್ಯಕ್ತಿಗೆ ಇದ್ದ 65 ವರ್ಷಗಳ ಮಿತಿಯನ್ನು ತೆಗೆದುಹಾಕಿದೆ. ಆರೋಗ್ಯ ವಿಮೆಯ ಕಾಯುವ ಅವಧಿಯನ್ನು (Waiting period) 48 ತಿಂಗಳಿಂದ 36ಕ್ಕೆ ಇಳಿಸಲಾಗಿದೆ. ನಿರ್ಧಿಷ್ಟ ಕಾಯಿಲೆಗಳಿಗೆ ಕಾಯುವ ಅವಧಿಯನ್ನು 8ರಿಂದ 5 ವರ್ಷಗಳಿಗೆ ಕಡಿಮೆ ಮಾಡಲಾಗಿದೆ. 

ಭವಿಷ್ಯದ ಭರವಸೆ

ಒಟ್ಟಿನಲ್ಲಿ ಹಲವು ಸುಧಾರಣೆಗಳ ಮೂಲಕ ಹಿರಿಯರ ಆರೋಗ್ಯ ವಿಮೆಯ ಭವಿಷ್ಯದ ಭರವಸೆಯಾಗಿ ಗೋಚರಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಉದ್ಯಮವು ವಿಕಸನಗೊಳ್ಳುತ್ತಲೇ ಇರುವುದರಿಂದ ಮುಂದೆ ನಾವು ಹೆಚ್ಚು ಸೂಕ್ತವಾದ ಯೋಜನೆ, ವರ್ಧಿತ ವ್ಯಾಪ್ತಿಯ ಆಯ್ಕೆಗಳನ್ನು ನಿರೀಕ್ಷಿಸಬಹುದು. ಜತೆಗೆ ವಿಮಾ ಪೂರೈಕೆದಾರರು ಹಿರಿಯರ ವೈವಿಧ್ಯಮಯ ಆರೋಗ್ಯ ಅಗತ್ಯಗಳನ್ನು ಪೂರೈಸುವ ಹೊಸ ಪಾಲಿಸಿಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆಯಿದೆ ಎಂದು ಹಲವರು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: Health Insurance: ಆರೋಗ್ಯ ವಿಮೆ ಖರೀದಿಗೆ ಇನ್ನು ವಯಸ್ಸಿನ ನಿರ್ಬಂಧ ಇಲ್ಲ; ಹೊಸ ಬದಲಾವಣೆ ಏನೇನು?

Continue Reading

ಚಿನ್ನದ ದರ

Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಆಭರಣ ಕೊಂಡುಕೊಳ್ಳುವ ಮುನ್ನ ದರ ಗಮನಿಸಿ

Gold Rate Today:  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 16) ಏರಿಕೆಯಾಗಿದೆ. ಸೋಮವಾರ ದರ ಇಳಿಕೆಯಾಗಿ ಗ್ರಾಹಕರು ಸಮಾಧಾನದ ನಿಟ್ಟುಸಿರು ಬಿಡುವಷ್ಟರಲ್ಲಿ ಇಂದು ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 38 ಹೆಚ್ಚಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 16) ಏರಿಕೆಯಾಗಿದೆ (Gold Rate Today). ಸೋಮವಾರ ದರ ಇಳಿಕೆಯಾಗಿ ಗ್ರಾಹಕರು ಸಮಾಧಾನದ ನಿಟ್ಟುಸಿರು ಬಿಡುವಷ್ಟರಲ್ಲಿ ಇಂದು ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 38 ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,785 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,402 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,280 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,850 ಮತ್ತು ₹ 6,78,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,216 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 74,020 ಮತ್ತು ₹ 7,40,200 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,800 ₹ 7,417
ಮುಂಬೈ₹ 6,785 ₹ 7,402
ಬೆಂಗಳೂರು₹ 6,785 ₹ 7,402
ಚೆನ್ನೈ₹ 6,830 ₹ 7,451

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 94.25 ಹಾಗೂ 8 ಗ್ರಾಂಗೆ ₹ 754 ಇದೆ. 10 ಗ್ರಾಂಗೆ ₹ 942.50 ಹಾಗೂ 1 ಕಿಲೋಗ್ರಾಂಗೆ ₹ 94,250 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: One Nation One Rate: ಚಿನ್ನಕ್ಕೆ ದೇಶಾದ್ಯಂತ ಒಂದೇ ದರ! ಹೊಸ ನಿಯಮ ಶೀಘ್ರ ಜಾರಿ ಸಾಧ್ಯತೆ

    Continue Reading

    ವಾಣಿಜ್ಯ

    Anant Radhika Wedding: ನಮ್ಮಿಂದ ಏನಾದರು ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ; ನೀತಾ ಅಂಬಾನಿ ವಿನಮ್ರ ಮನವಿ!

    ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ (Anant Radhika Wedding) ಪ್ರಯುಕ್ತ ನೀತಾ ಅಂಬಾನಿಯವರು ಪಾಪರಾಜಿಗಳಿಗೆ ಧನ್ಯವಾದ ಹೇಳಲು ಮತ್ತು ಸೋಮವಾರದ ವಿಶೇಷ ಆಚರಣೆಗೆ ಅವರನ್ನು ಸ್ವಾಗತಿಸಿದ್ದು ಇದನ್ನು ಸಾಮಾಜಿಕ ಜಾಲತಾಣದಲ್ಲಿ ನೆಟಿಜನ್‌ಗಳು ಶ್ಲಾಘಿಸಿದ್ದಾರೆ. ನೀತಾ ಅಂಬಾನಿ ಅವರ ಹೇಳಿಕೆಯ ವಿಡಿಯೊ ಇಲ್ಲಿದೆ.

    VISTARANEWS.COM


    on

    By

    Anant Radhika Wedding
    Koo

    ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ (Anant Radhika Wedding) ನೀತಾ ಅಂಬಾನಿ (nita ambani) ವೈಯಕ್ತಿಕವಾಗಿ (ಮಾಧ್ಯಮ ಛಾಯಾಗ್ರಾಹಕರು) ಪಾಪರಾಜಿಗಳನ್ನು (paparazzi) ಆಹ್ವಾನಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಇದು ಈಗ ಸಾಕಷ್ಟು ಮಂದಿಯ ಗಮನ ಸೆಳೆದಿದೆ.

    ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ ಪ್ರಯುಕ್ತ ನಡೆದ ಮಂಗಲ್ ಉತ್ಸವ ಅಥವಾ ಅದ್ಧೂರಿ ವಿವಾಹದ ಆರತಕ್ಷತೆಯಲ್ಲಿ ಸಾಕಷ್ಟು ಗಣ್ಯರು ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ಎ.ಆರ್. ರೆಹಮಾನ್ ಮತ್ತು ಶ್ರೇಯಾ ಘೋಷಾಲ್ ಅವರಿಬ್ಬರ ಸಂಗೀತ ಕಛೇರಿಯನ್ನು ನಡೆಸಿಕೊಟ್ಟರು. ಧೀರೂಬಾಯಿ ಅಂಬಾನಿಯವರ ಜೀವನವನ್ನು ಆಧರಿಸಿದ ಸಂಗೀತ ಕಾರ್ಯಕ್ರಮದ ವಿಡಿಯೋಗಳನ್ನು ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

    ಈ ನಡುವೆ ನೀತಾ ಅಂಬಾನಿಯವರು ಪಾಪರಾಜಿಗಳಿಗೆ ಧನ್ಯವಾದ ಹೇಳಲು ಮತ್ತು ಸೋಮವಾರದ ವಿಶೇಷ ಆಚರಣೆಗೆ ಅವರನ್ನು ಸ್ವಾಗತಿಸಿದ್ದು ಇದನ್ನು ಸಾಮಾಜಿಕ ಜಾಲತಾಣದಲ್ಲಿ ನೆಟಿಜನ್‌ಗಳು ಶ್ಲಾಘಿಸಿದ್ದಾರೆ.


    ಈ ವಿಡಿಯೋದಲ್ಲಿ ನೀತಾ ಅಂಬಾನಿ, ನಿಮ್ಮ ತಾಳ್ಮೆ ಮತ್ತು ತಿಳುವಳಿಕೆಗೆ ಧನ್ಯವಾದಗಳು. ಯಾವುದಾದರೂ ತಪ್ಪಾಗಿದ್ದರೆ ದಯವಿಟ್ಟು ನಮ್ಮನ್ನು ಕ್ಷಮಿಸಿ. ಯಾಕೆಂದರೆ ನಮ್ಮದು ಈಗ ಮದುವೆ ನಡೆಯುತ್ತಿರುವ ಮನೆ. ನಾಳೆ ನಮ್ಮ ಅತಿಥಿಗಳಾಗಿ ಬನ್ನಿ, ನೀವೆಲ್ಲರೂ ಆಹ್ವಾನವನ್ನು ಸ್ವೀಕರಿಸಿದ್ದೀರಿ. ನಮ್ಮ ಅತಿಥಿಗಳಾಗಿ ನಾಳೆ ನಿಮ್ಮನ್ನು ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ. ದಯವಿಟ್ಟು ನಿಮ್ಮ ಕುಟುಂಬಗಳೊಂದಿಗೆ ಬನ್ನಿ ಎಂದು ಪಾಪರಾಜಿಗಳನ್ನು ಆಮಂತ್ರಿಸಿದರು.

    ಇದನ್ನೂ ಓದಿ: Anant Ambani Wedding: ಕೌಟುಂಬಿಕ ಮುನಿಸು ಮರೆತು ವರನೊಂದಿಗೆ ಜತೆಯಾಗಿ ಹೆಜ್ಜೆ ಹಾಕಿದ ಮುಖೇಶ್ ಅಂಬಾನಿ-ಅನಿಲ್ ಅಂಬಾನಿ

    ಈ ಕಾರ್ಯಕ್ರಮದ ಮೂಲಕ ಅವರು ಪಾಪರಾಜಿಗಳ ಮನ ಗೆದ್ದಿರುವುದು ಮಾತ್ರವಲ್ಲ ಅವರ ವಿನಮ್ರಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

    ಜುಲೈ 12 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅದ್ಧೂರಿ ವಿವಾಹದ ವಿಧಿವಿಧಾನಗಳ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಸಮಾರಂಭಕ್ಕೆ ಸಾಕ್ಷಿಯಾಗಲು ಪ್ರಪಂಚದಾದ್ಯಂತದ ಹಲವಾರು ಅತಿಥಿಗಳು ಸಾಕ್ಷಿಯಾಗಿದ್ದರು. ಕಿಮ್, ಕ್ಲೋಯ್ ಕಾರ್ಡಶಿಯಾನ್, ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್, ಮತ್ತು ಜಾನ್ ಸೆನಾ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ರಾಜಕಾರಣಿಗಳು ಹಾಗೂ ಖ್ಯಾತನಾಮರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಂಬಯಿಗೆ ಆಗಮಿಸಿದ್ದರು.

    Continue Reading

    ದೇಶ

    Anant Ambani Wedding: ಮಗನ ಮದುವೆಯಲ್ಲಿ ರಿಲಯನ್ಸ್ ಉದ್ಯೋಗಿಗಳಿಗೂ ಭರ್ಜರಿ ಔತಣ ನೀಡಿದ ಮುಖೇಶ್ ಅಂಬಾನಿ

    Anant Ambani Wedding: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂಬಾನಿ ಕುಟುಂಬ 4 ದಿನಗಳ ಕಾಲ ವೈಭವದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸೋಮವಾರ ತೆರೆ ಬಿದ್ದಿದ್ದು, ಕೊನೆಯ ದಿನ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಪಾಲ್ಗೊಂಡಿದ್ದರು.

    VISTARANEWS.COM


    on

    Anant Ambani Wedding
    Koo

    ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani Wedding) ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂಬಾನಿ ಕುಟುಂಬ 4 ದಿನಗಳ ಕಾಲ ವೈಭವದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸೋಮವಾರ ತೆರೆ ಬಿದ್ದಿದೆ. ಕೊನೆಯ ದಿನವಾದ ಸೋಮವಾರ ಜಿಯೋ ವರ್ಲ್ಡ್ ಡ್ರೈವ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳು, ರಿಲಯನ್ಸ್ ಉದ್ಯೋಗಿಗಳು ಮತ್ತು ಅಂಬಾನಿ ಕುಟುಂಬದ ಸಿಬ್ಬಂದಿಗೆ ವಿಶೇಷ ಸಮಾರಂಭ ಆಯೋಜಿಸಲಾಗಿತ್ತು.

    ಮಾಧ್ಯಮಗಳು ಮತ್ತು ರಿಲಯನ್ಸ್‌ ಸಿಬ್ಬಂದಿಗೆಂದು ವಿಶೇಷವಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಪಾಲ್ಗೊಂಡಿದ್ದರು. ಅಕ್ಷಯ್‌ ಕುಮಾರ್‌ ಅವರಿಗೆ ಕೋವಿಡ್ ಬಾಧಿಸಿದ್ದ ಹಿನ್ನೆಲೆಯಲ್ಲಿ ಅವರು ಮದುವೆಯಲ್ಲಿ ಪಾಲ್ಗೊಂಡಿರಲಿಲ್ಲ. ಹೀಗಾಗಿ ಸೋಮವಾರ ಅವರು ಸಮಾರಂಭದಕ್ಕೆ ಪತ್ನಿ ಟ್ವಿಂಕಲ್‌ ಖನ್ನಾ ಜತೆಗೆ ಆಗಮಿಸಿದ ವಧು-ವರರಿಗೆ ಶುಭಾಶಯ ತಿಳಿಸಿದ್ದರು.

    ಯಾರೆಲ್ಲ ಭಾಗಿ?

    ಅಂಬಾನಿ ಆಸ್ತಿಗಳ ಹೌಸ್ ಕೀಪಿಂಗ್, ಸೆಕ್ಯುರಿಟಿ, ಸೆಕ್ರೆಟರಿಯಲ್‌ ಮತ್ತು ನಿರ್ವಹಣಾ ವಿಭಾಗಗಳ ಉದ್ಯೋಗಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಸಾವಿರಾರು ಕಾರ್ಮಿಕರು ಮತ್ತು ಅವರ ಕುಟುಂಬಗಳ ಜತೆಗೆ ಮಾಧ್ಯಮ ಪ್ರತಿನಿಧಿಗಳೂ ಪಾಲ್ಗೊಂಡಿದ್ದರು. ಈ ಮೂಲಕ ಅನಂತ್‌-ರಾಧಿಕಾ ಮದುವೆಯ ಆಚರಣೆಗೆ ತೆರೆ ಎಳೆಯಲಾಗಿದೆ.

    ಗಣ್ಯರ ದಂಡೇ ಉಪಸ್ಥಿತಿ

    ಸಮಾರಂಭಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಿ ಮದುಮಕ್ಕಳನ್ನು ಆಶೀರ್ವದಿಸಿದ್ದರು. ಜತೆಗೆ ನಟ-ನಟಿಯರು, ಕ್ರಿಕೆಟಿಗರು, ಬೇರೆ ದೇಶಗಳ ನಾಯಕರಿಂದ ಹಿಡಿದು ಸಾವಿರಾರು ಗಣ್ಯರು, ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಮಹೇಂದ್ರ ಸಿಂಗ್‌ ಧೋನಿ, ಅಮಿತಾಭ್‌ ಬಚ್ಚನ್‌, ಯಶ್‌, ದೀಪಿಕಾ ಪಡುಕೋಣೆ, ಆಲಿಯಾ ಭಟ್‌, ರಣವೀರ್‌ ಸಿಂಗ್‌, ರಣಬೀರ್‌ ಕಪೂರ್‌, ಅನನ್ಯಾ ಪಾಂಡೆ, ರಜನಿಕಾಂತ್‌, ಮಹೇಶ್‌ ಬಾಬು, ಹಾರ್ದಿಕ್‌ ಪಾಂಡ್ಯ, ಐಶ್ವರ್ಯಾ ರೈ, ದಿಶಾ ಪಟಾಣಿ, ನಯನತಾರಾ, ವಿಘ್ನೇಶ್‌ ಶಿವನ್‌, ಜೆನಿಲಿಯಾ, ರಿತೇಶ್‌ ದೇಶ್‌ಮುಖ್‌, ಮಾಧುರಿ ದೀಕ್ಷಿತ್‌, ಶಾರುಖ್‌ ಖಾನ್‌, ಸಲ್ಮಾನ್‌ ಖಾನ್‌, ಸೂರ್ಯ, ಜ್ಯೋತಿಕಾ, ರಶ್ಮಿಕಾ ಮಂದಣ್ಣ, ಪ್ರಿಯಾಂಕಾ ಚೋಪ್ರಾ, ಬ್ರಿಟನ್‌ ಮಾಜಿ ಪ್ರಧಾನಿಗಳಾದ ಬೋರಿಸ್‌ ಜಾನ್ಸನ್‌, ಟೋನಿ ಬ್ಲೇರ್‌ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.

    ಇದನ್ನೂ ಓದಿ: ಧೋನಿಯಿಂದ ರಜನಿಕಾಂತ್‌ವರೆಗೆ; ಅನಂತ್‌ ಅಂಬಾನಿ ಮದುವೆಯಲ್ಲಿ ಪಾಲ್ಗೊಂಡ ಗಣ್ಯರ ಫೋಟೊ, ವಿಡಿಯೊಗಳು ಇಲ್ಲಿವೆ

    5 ಸಾವಿರ ಕೋಟಿ ರೂ. ಖರ್ಚು

    ಅದ್ಧೂರಿ ವಿವಾಹ ಸಮಾರಂಭಕ್ಕೆ ಅಂದಾಜು ವೆಚ್ಚ 4,000ರಿಂದ 5000 ಕೋಟಿ ರೂ. ಎನ್ನಲಾಗಿದೆ. ಇದು ಅವರ ನಿವ್ವಳ ಆದಾಯದ ಶೇ. 0.5ರಷ್ಟು ಮಾತ್ರ! ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಅವರ ನಿವ್ವಳ ಆದಾಯ ಮೌಲ್ಯವು 7.65 ಲಕ್ಷ ಕೋಟಿ ರೂ. ಮಾರ್ಚ್‌ನಲ್ಲಿ ಮದುವೆಯ ಪೂರ್ವಭಾವಿ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿತ್ತು. ಅಂಬಾನಿ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಜಾಗತಿಕ ಗಾಯನ ಐಕಾನ್‌ಗಳಾದ ಜಸ್ಟಿನ್ ಬೀಬರ್, ರಿಹಾನ್ನಾ, ದಿಲ್ಜಿತ್ ದೋಸಾಂಜ್ ಸೇರಿದಂತೆ ಹಾಲಿವುಡ್‌-ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು.

    Continue Reading
    Advertisement
    Ambani Video
    ಪ್ರಮುಖ ಸುದ್ದಿ5 mins ago

    Ambani Video: 3 ವರ್ಷದ ಅಂಬಾನಿ ಮೊಮ್ಮಗ ವೇದಿಕೆ ಮೇಲೆ ಜಾರಿ ಬಿದ್ದ, ಆದರೆ ಜನರ ಹೃದಯ ಗೆದ್ದ!

    Money Guide
    ಮನಿ-ಗೈಡ್5 mins ago

    Money Guide: ಹಿರಿಯರಿಗೆ ಆರೋಗ್ಯ ವಿಮೆ: ಯಾಕಾಗಿ? ಏನಿದರ ಉಪಯೋಗ?

    Muharram 2024 Man dies in fire during
    ರಾಯಚೂರು15 mins ago

    Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

    hit and run case
    ದೇಶ17 mins ago

    Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

    Assembly Session
    ಕರ್ನಾಟಕ23 mins ago

    Assembly Session: ವಾಲ್ಮೀಕಿ ನಿಗಮ ಅಕ್ರಮ ದಲಿತರಿಗೆ ಮಾಡಿರೋ ಅನ್ಯಾಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    Paris Olympics 2024
    ಪ್ರಮುಖ ಸುದ್ದಿ40 mins ago

    Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

    BMTC staff commits suicide at headquarters
    ಬೆಂಗಳೂರು57 mins ago

    BMTC staff : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ

    ಪ್ರಮುಖ ಸುದ್ದಿ1 hour ago

    Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

    Pooja Khedkar
    ಪ್ರಮುಖ ಸುದ್ದಿ1 hour ago

    Pooja Khedkar: ಐಎಎಸ್‌ಗಾಗಿ ನಕಲಿ ಜಾತಿ, ಕಡಿಮೆ ವಯಸ್ಸು, ದರ್ಪ; ಪೂಜಾ ಖೇಡ್ಕರ್‌ ಕಳ್ಳಾಟ ಒಂದೆರಡಲ್ಲ!

    Viral Video
    Latest1 hour ago

    Viral Video : ಡ್ಯಾನ್ಸ್‌ ಆಯ್ತು, ಹೊಡೆದಾಟವಾಯ್ತು, ಈಗ ಹುಡುಗಿಯರ ಮೇಕಪ್‌ಗೂ ಸಾಕ್ಷಿಯಾಯ್ತು ದೆಹಲಿ ಮೆಟ್ರೊ! ವಿಡಿಯೊ ನೋಡಿ

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ9 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Karnataka Rain
    ಮಳೆ4 hours ago

    Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

    karnataka Rain
    ಮಳೆ5 hours ago

    Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

    karnataka Weather Forecast
    ಮಳೆ23 hours ago

    Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    karnataka Rain
    ಮಳೆ1 day ago

    Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

    karnataka weather Forecast
    ಮಳೆ1 day ago

    Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

    Karnataka Rain
    ಮಳೆ2 days ago

    Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

    karnataka Rain
    ಮಳೆ2 days ago

    Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

    haveri News
    ಹಾವೇರಿ2 days ago

    Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

    karnataka Rain
    ಮಳೆ2 days ago

    Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

    karnataka Weather Forecast
    ಮಳೆ3 days ago

    Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

    ಟ್ರೆಂಡಿಂಗ್‌