Anil Ambani: ಅನಿಲ್‌ ಅಂಬಾನಿಗೆ ಸೆಬಿ ಶಾಕ್‌; 5 ವರ್ಷ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ ನಿಷೇಧ, 25 ಕೋಟಿ ರೂ. ದಂಡ - Vistara News

ವಾಣಿಜ್ಯ

Anil Ambani: ಅನಿಲ್‌ ಅಂಬಾನಿಗೆ ಸೆಬಿ ಶಾಕ್‌; 5 ವರ್ಷ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ ನಿಷೇಧ, 25 ಕೋಟಿ ರೂ. ದಂಡ

Anil Ambani: ಭಾರತದ ಖ್ಯಾತ ಉದ್ಯಮಿ ಅನಿಲ್‌ ಅಂಬಾನಿ ಅವರಿಗೆ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಬಹುದೊಡ್ಡ ಶಾಕ್‌ ನೀಡಿದೆ. ಅನಿಲ್‌ ಅಂಬಾನಿ ಮತ್ತು ಅವರಿಗೆ ಸೇರಿದ 24 ಘಟಕಗಳಿಗೆ ಭಾರೀ ಮೊತ್ತದ ದಂಡ ವಿಧಿಸಿದೆ. ಜತೆಗೆ ಐದು ವರ್ಷಗಳ ಕಾಲ ಸೆಕ್ಯೂರಿಟೀಸ್‌ ಮಾರುಕಟ್ಟೆ (ಷೇರುಪೇಟೆ)ಯಿಂದ ನಿಷೇಧ ಹೇರಿದೆ. ಅನಿಲ್‌ ಅಂಬಾನಿ ಒಡೆತನದ ರಿಲಯನ್ಸ್‌ ಹೋಮ್‌ ಫೈನಾನ್ಸ್‌ ಕಂಪನಿಯಿಂದ ಹಣವನ್ನು ಬೇರೆಡೆಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣದಲ್ಲಿ ಸೆಬಿ ಈ ಮಹತ್ವದ ಆದೇಶ ನೀಡಿದೆ.

VISTARANEWS.COM


on

Anil Ambani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಭಾರತದ ಖ್ಯಾತ ಉದ್ಯಮಿ ಅನಿಲ್‌ ಅಂಬಾನಿ (Anil Ambani) ಅವರಿಗೆ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ (SEBI) ಬಹುದೊಡ್ಡ ಶಾಕ್‌ ನೀಡಿದೆ. ಅನಿಲ್‌ ಅಂಬಾನಿ ಮತ್ತು ಅವರಿಗೆ ಸೇರಿದ 24 ಘಟಕಗಳಿಗೆ ಭಾರೀ ಮೊತ್ತದ ದಂಡ ವಿಧಿಸಿದೆ. ಜತೆಗೆ ಐದು ವರ್ಷಗಳ ಕಾಲ ಸೆಕ್ಯೂರಿಟೀಸ್‌ ಮಾರುಕಟ್ಟೆ (ಷೇರುಪೇಟೆ)ಯಿಂದ ನಿಷೇಧ ಹೇರಿದೆ.

ಅನಿಲ್‌ ಅಂಬಾನಿ ಒಡೆತನದ ರಿಲಯನ್ಸ್‌ ಹೋಮ್‌ ಫೈನಾನ್ಸ್‌ (Reliance Home Finance Limited-RHFL) ಕಂಪನಿಯಿಂದ ಹಣವನ್ನು ಬೇರೆಡೆಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣದಲ್ಲಿ ಸೆಬಿ ಈ ಮಹತ್ವದ ಆದೇಶ ನೀಡಿದೆ. ಅನಿಲ್‌ ಅಂಬಾನಿಗೆ 25 ಕೋಟಿ ರೂ. ದಂಡ ವಿಧಿಸಲಾಗಿದ್ದು, ಉಳಿದವರಿಗೂ ಭಾರೀ ಮೊತ್ತದ ದಂಡ ಹಾಕಲಾಗಿದೆ. ಕ್ರಮ ಎದುರಿಸಿದವರಲ್ಲಿ ರಿಲಯನ್ಸ್‌ ಹೋಮ್‌ನ ಮಾಜಿ ಅಧಿಕಾರಿಗಳೂ ಸೇರಿದ್ದಾರೆ.

ಸೆಬಿ ಹೇಳಿದ್ದೇನು?

ಅನಿಲ್‌ ಅಂಬಾನಿ 5 ವರ್ಷಗಳ ಕಾಲ ಸೆಕ್ಯುರಿಟೀಸ್ ಮಾರುಕಟ್ಟೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಬಾರದು ಎಂದು ಸೂಚಿಸಿರುವ ಸೆಬಿ, ಯಾವುದೇ ಪಟ್ಟಿ ಮಾಡಲಾದ ಕಂಪನಿಯ ನಿರ್ದೇಶಕ ಅಥವಾ ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿ ಹುದ್ದೆ ಹೊಂದುವುದಾಗಲಿ ಅಥವಾ ಸೆಬಿಯಲ್ಲಿ ನೋಂದಾಯಿಸಲಾದ ಯಾವುದೇ ಮಧ್ಯವರ್ತಿ ಜತೆ ಸಂಪರ್ಕ ಸಾಧಿಸುವುದಾಗಲಿ ಮಾಡಬಾರದು ಎಂದು ಹೇಳಿದೆ. ಜತೆಗೆ ರಿಲಯನ್ಸ್‌ ಹೋಮ್‌ ಫೈನಾನ್ಸ್‌ ಅನ್ನೂ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ 6 ತಿಂಗಳ ಕಾಲ ನಿರ್ಬಂಧಿಸಲಾಗಿದ್ದು, 6 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಘಟಕಗಳು ಹಣವನ್ನು ದುರುಪಯೋಗಪಡಿಸಿಕೊಳ್ಳುವ ವಂಚನೆಯಲ್ಲಿ ಭಾಗಿಯಾಗಿವೆ. ಇದು ಸೆಕ್ಯುರಿಟೀಸ್ ಕಾನೂನುಗಳ ಉಲ್ಲಂಘನೆ ಮತ್ತು ಹೂಡಿಕೆದಾರರ ನಂಬಿಕೆಯ ಉಲ್ಲಂಘನೆಗೆ ಕಾರಣವಾಗುತ್ತದೆ ಎಂದು ಸೆಮಿ ತೀರ್ಮಾನಿಸಿ ಈ ನಿರ್ಧಾರ ಪ್ರಕಟಿಸಿದೆ.

222 ಪುಟಗಳ ಅಂತಿಮ ಆದೇಶದಲ್ಲಿ ಸೆಬಿಯು, ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿ ಸಹಾಯದಿಂದ ಅನಿಲ್ ಅಂಬಾನಿಯು ಆರ್‌ಎಚ್‌ಎಫ್‌ಎಲ್‌ನಿಂದ ಹಣವನ್ನು ಬೇರೆಡೆಗೆ ವರ್ಗಾಯಿಸುವ ವಂಚನೆಯ ಯೋಜನೆ ರೂಪಿಸಿದ್ದರು. ಸಾಲ ಎಂದು ಹೇಳಿ ಅವರು ತಮಗೆ ಸಂಬಂಧಿಸಿದ ಕಂಪನಿಗಳಿಗೆ ಹಣ ವರ್ಗಾಯಿಸಿಕೊಂಡಿದ್ದರು ಎಂದು ಹೇಳಿದೆ.

ಆರ್‌ಎಚ್‌ಎಫ್‌ಎಲ್‌ನ ನಿರ್ದೇಶಕರ ಮಂಡಳಿ ಸಾಲ ನೀಡುವ ಅಭ್ಯಾಸಗಳನ್ನು ತಕ್ಷಣವೇ ನಿಲ್ಲಿಸುವಂತೆ ಹೇಳಿದ್ದಲ್ಲದೆ, ಕಾರ್ಪೊರೇಟ್ ಸಾಲಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ತಿಳಿಸಿತ್ತು. ಆದರೆ ಕಂಪನಿಯ ಆಡಳಿತ ಈ ಆದೇಶಗಳನ್ನೆಲ್ಲ ನಿರ್ಲಕ್ಷಿಸಿತ್ತು. ಇದಲ್ಲದೆ ರಿಲಯನ್ಸ್ ಯೂನಿಕಾರ್ನ್ ಎಂಟರ್‌ಪ್ರೈಸಸ್, ರಿಲಯನ್ಸ್ ಎಕ್ಸ್‌ಚೇಂಜ್ ನೆಕ್ಸ್ಟ್ ಲಿಮಿಟೆಡ್, ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್, ರಿಲಯನ್ಸ್ ಕ್ಲೀನನ್ ಲಿಮಿಟೆಡ್, ರಿಲಯನ್ಸ್ ಬ್ಯುಸಿನೆಸ್ ಬ್ರಾಡ್‌ಕಾಸ್ಟ್ ನ್ಯೂಸ್ ಹೋಲ್ಡಿಂಗ್ಸ್ ಲಿಮಿಟೆಡ್ ಮತ್ತು ರಿಲಯನ್ಸ್ ಬಿಗ್ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ 21 ಘಟಕಗಳಿಗೆ ತಲಾ 25 ಕೋಟಿ ರೂ. ದಂಡ ವಿಧಿಸಲಾಗಿದೆ.

ಇದನ್ನೂ ಓದಿ: SEBI: ಅದಾನಿ ವರದಿ: ಹಿಂಡನ್‌ಬರ್ಗ್‌ಗೆ ಸೆಬಿಯಿಂದ ಶೋಕಾಸ್ ನೋಟಿಸ್

2022ರ ಫೆಬ್ರವರಿಯಲ್ಲಿ ಸೆಬಿ ಮಧ್ಯಂತರ ಆದೇಶವನ್ನು ಹೊರಡಿಸಿ ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್, ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಮತ್ತು ಅಮಿತ್ ಬಾಪ್ನಾ, ರವೀಂದ್ರ ಸುಧಾಕರ್ ಮತ್ತು ಪಿಂಕೇಶ್ ಆರ್. ಶಾ ಅವರನ್ನು ಮುಂದಿನ ಆದೇಶದವರೆಗೆ ಸೆಕ್ಯುರಿಟೀಸ್ ಮಾರುಕಟ್ಟೆಯಿಂದ ನಿರ್ಬಂಧಿಸಿತ್ತು. ಇದೀಗ ಇದೀಗ ಅಂತಿಮ ಆದೇಶ ಹೊರಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Railway Line: ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಇನ್ನೂ ಬ್ರಿಟಿಷರ ಅಧೀನದಲ್ಲಿದೆ ಈ ರೈಲು ಮಾರ್ಗ!

ಮಹಾರಾಷ್ಟ್ರದ ರೈಲು ಮಾರ್ಗವನ್ನು (Railway Line) ಬ್ರಿಟಿಷ್ ಕಂಪನಿಯೊಂದು ನಿರ್ವಹಿಸುತ್ತಿದೆ. ಭಾರತೀಯ ರೈಲ್ವೇ ಈ ರೈಲು ಮಾರ್ಗವನ್ನು ಖರೀದಿಸಲು ಹಲವಾರು ಪ್ರಯತ್ನಗಳನ್ನು ಮಾಡಿತು. ಆದರೆ ಅವು ವಿಫಲವಾಯಿತು. ಹೀಗಾಗಿ ಇನ್ನೂ ಆ ರೈಲು ಮಾರ್ಗವನ್ನು ನಿರ್ವಹಿಸುತ್ತಿರುವ ಬ್ರಿಟಿಷ್ ಕಂಪನಿಗೆ ಇತ್ತೀಚಿನ ವರ್ಷಗಳವರೆಗೂ ರಾಯಧನವನ್ನು ಪಾವತಿಸಲಾಗುತ್ತಿತ್ತು! ಈಗಲೂ ಈ ರೈಲ್ವೆ ಮಾರ್ಗ ಬ್ರಿಟಿಷ್‌ ಕಂಪನಿಯ ಸುಪರ್ದಿಯಲ್ಲೇ ಇದೆ.

VISTARANEWS.COM


on

By

Railway Line
Koo

ಭಾರತಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಭಾರತದ ಈ ಒಂದು ರೈಲು ಮಾರ್ಗ (Railway Line) ಮಾತ್ರ ಇನ್ನೂ ಬ್ರಿಟಿಷರ (British owned railway line) ನಿಯಂತ್ರಣದಲ್ಲಿದೆ! ಭಾರತೀಯ ರೈಲ್ವೇಸ್ (Indian Railways) ಅದನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ವಿಫಲವಾಗಿದೆ. ಹೀಗಾಗಿ ಈಗಲೂ ಅದಕ್ಕೆ ಬ್ರಿಟಿಷರಿಗೆ ರಾಯಧನವನ್ನು (royalty) ಪಾವತಿಸುತ್ತಿದೆ!

ಮಹಾರಾಷ್ಟ್ರದ ರೈಲು ಮಾರ್ಗವನ್ನು (maharastra railway line) ಬ್ರಿಟಿಷ್ ಕಂಪನಿಯೊಂದು ನಿರ್ವಹಿಸುತ್ತಿದೆ. ಭಾರತೀಯ ರೈಲ್ವೇ ಈ ರೈಲು ಮಾರ್ಗವನ್ನು ಖರೀದಿಸಲು ಹಲವಾರು ಪ್ರಯತ್ನಗಳನ್ನು ಮಾಡಿತು. ಆದರೆ ಅವು ವಿಫಲವಾಯಿತು. ಹೀಗಾಗಿ ಇನ್ನೂ ಆ ರೈಲು ಮಾರ್ಗವನ್ನು ಬ್ರಿಟಿಷ್ ಕಂಪನಿ, ‘ಕಿಲ್ಲಿಕ್ ನಿಕ್ಸನ್ ಆಂಡ್ ಕೋʼ ಈಗಲೂ ಸೆಂಟ್ರಲ್ ಪ್ರಾವಿನ್ಸ್ ರೈಲ್ವೆ ಕಂಪನಿಯನ್ನು ನಿರ್ವಹಿಸುತ್ತದೆ.

ಇತ್ತೀಚಿನವರೆಗೂ ರಾಯಧನ ಪಾವತಿ

ಈ ಕಂಪನಿಯು ಅಮರಾವತಿಯಿಂದ ಮಹಾರಾಷ್ಟ್ರದ ಮುರ್ತಜಾಪುರಕ್ಕೆ 190 ಕಿ.ಮೀ ರೈಲು ಮಾರ್ಗದಲ್ಲಿ ಶಕುಂತಲಾ ಎಕ್ಸ್‌ಪ್ರೆಸ್ ಅನ್ನು ಓಡಿಸುತ್ತಿತ್ತು. ಸ್ವಾತಂತ್ರ್ಯದ ಅನಂತರ ಬ್ರಿಟಿಷರು ಭಾರತವನ್ನು ತೊರೆದರು. ಆದರೆ ಬ್ರಿಟಿಷ್ ಖಾಸಗಿ ಕಂಪನಿಯು ಈ ಮಾರ್ಗದ ಮೇಲೆ ಅಧಿಕಾರವನ್ನು ಮುಂದುವರಿಸಿದೆ. ಭಾರತೀಯ ರೈಲ್ವೇಯು ಆ ಕಂಪನಿಗೆ ಇತ್ತೀಚಿನ ವರ್ಷಗಳವರೆಗೂ ಬರೋಬ್ಬರಿ 1.20 ಕೋಟಿ ರೂ. ರಾಯಧನವನ್ನು ಪಾವತಿಸುತ್ತಿತ್ತು.


ಶಕುಂತಲಾ ರೈಲ್ವೇ ಲೈನ್

ಅಮರಾವತಿಯಿಂದ ಮುರ್ತಜಾಪುರದವರೆಗಿನ 190 ಕಿ.ಮೀ ರೈಲು ಮಾರ್ಗವನ್ನು ಸ್ವಾಧೀನಪಡಿಸಿಕೊಳ್ಳಲು ಭಾರತೀಯ ರೈಲ್ವೇ ಹಲವಾರು ಪ್ರಯತ್ನಗಳನ್ನು ಮಾಡಿದೆ. ಆದರೆ ಅವರು ಯಶಸ್ವಿಯಾಗಲಿಲ್ಲ. ಶಕುಂತಲಾ ಪ್ಯಾಸೆಂಜರ್ ಎಂಬ ಒಂದು ಪ್ಯಾಸೆಂಜರ್ ರೈಲು ಮಾತ್ರ ಈ ರೈಲು ಮಾರ್ಗದಲ್ಲಿ ಓಡುತ್ತಿತ್ತು. ಅಂದಹಾಗೆ, ಶಕುಂತಲಾ ರೈಲ್ವೇ ಲೈನ್ ಈ ಮಾರ್ಗದ ಹೆಸರು. ಶಕುಂತಲಾ ಎಕ್ಸ್‌ಪ್ರೆಸ್ ಅಚಲಪುರ ಮತ್ತು ಯವತ್ಮಾಲ್ ನಡುವಿನ 17 ನಿಲ್ದಾಣಗಳಲ್ಲಿ ನಿಲ್ಲುತ್ತಿತ್ತು. ಈ ರೈಲು ಸುಮಾರು 70 ವರ್ಷಗಳ ಕಾಲ ಸ್ಟೀಮ್ ಎಂಜಿನ್‌ನಲ್ಲಿ ಓಡಿದೆ.

ಡೀಸೆಲ್ ಎಂಜಿನ್

1994ರಲ್ಲಿ ಶಕುಂತಲಾ ಪ್ಯಾಸೆಂಜರ್ ರೈಲಿಗೆ ಡೀಸೆಲ್ ಎಂಜಿನ್ ಅಳವಡಿಸಲಾಗಿತ್ತು. ಅನಂತರ ಅನಿರೀಕ್ಷಿತ ಕಾರಣಗಳಿಂದ ರೈಲನ್ನು ನಿಲ್ಲಿಸಲಾಗಿತ್ತು. ಇದನ್ನು ಪುನರಾರಂಭಿಸಬೇಕು ಎಂಬುದು ಸ್ಥಳೀಯರ ಆಗ್ರಹ. 5 ಬೋಗಿಗಳಿರುವ ಈ ರೈಲು ಪ್ರತಿದಿನ 800 ರಿಂದ 1,000 ಪ್ರಯಾಣಿಕರನ್ನು ಅವರವರ ಸ್ಥಳಗಳಿಗೆ ಸಾಗಿಸುತ್ತಿತ್ತು. ಭಾರತೀಯ ರೈಲ್ವೆಯನ್ನು 1951ರಲ್ಲಿ ರಾಷ್ಟ್ರೀಕರಣಗೊಳಿಸಲಾಯಿತು. ಆದರೆ ಈ ರೈಲು ಮಾರ್ಗವು ಭಾರತ ಸರ್ಕಾರದ ವ್ಯಾಪ್ತಿಗೆ ಬರಲಿಲ್ಲ.

1.20 ಕೋಟಿ ರೂ. ರಾಯಧನ

ಅಮರಾವತಿ- ಮುರ್ತಜಾಪುರ ರೈಲು ಮಾರ್ಗವನ್ನು ಬಳಸುವುದಕ್ಕಾಗಿ ಭಾರತೀಯ ರೈಲ್ವೇಯು ಇಂಗ್ಲೆಂಡ್ ಕಂಪನಿಗೆ 1.20 ಕೋಟಿ ರೂ.ಗಳ ರಾಯಧನವನ್ನು ಪಾವತಿಸುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಹಲವಾರು ವರದಿಗಳು ಹೇಳುತ್ತವೆ. ಈಗ ರಾಯಲ್ಟಿ ನೀಡಲಾಗುತ್ತಿಲ್ಲ ಎನ್ನಲಾಗಿದೆ.

Railway Line
Railway Line


ಹತ್ತಿ ಸಾಗಿಸಲು ನಿರ್ಮಾಣ

ಮಹಾರಾಷ್ಟ್ರದ ಅಮರಾವತಿಯಲ್ಲಿ ಹತ್ತಿಯನ್ನು ಬೆಳೆಯಲಾಗುತ್ತದೆ. ಅಮರಾವತಿಯಿಂದ ಮಂಬಯಿ ಬಂದರಿಗೆ ಹತ್ತಿಯನ್ನು ಸಾಗಿಸಲು ಬ್ರಿಟಿಷರು ಈ ರೈಲು ಮಾರ್ಗವನ್ನು ನಿರ್ಮಿಸಿದರು. ಈ ರೈಲು ಮಾರ್ಗವನ್ನು ನಿರ್ಮಿಸಲು ಸೆಂಟ್ರಲ್ ಪ್ರಾವಿನ್ಸ್ ರೈಲ್ವೇ ಕಂಪೆನಿ (CPRC) ಬ್ರಿಟನ್‌ನ ಕಿಲಿಕ್ ನಿಕ್ಸನ್ ಆಂಡ್ ಕಂ ಅನ್ನು ಸ್ಥಾಪಿಸಿತು.

ಇದನ್ನೂ ಓದಿ: PM Modi Ukraine Visit: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ- ಝೆಲೆನ್ಸ್ಕಿಗೆ ಆತ್ಮೀಯ ಅಪ್ಪುಗೆ

ನಿರ್ಮಾಣ ಕಾರ್ಯ

ಈ ರೈಲು ಮಾರ್ಗದ ನಿರ್ಮಾಣವು 1903ರಲ್ಲಿ ಪ್ರಾರಂಭವಾಯಿತು ಮತ್ತು 1916ರಲ್ಲಿ ಪೂರ್ಣಗೊಂಡಿತು. ಭಾರತವು 1947ರಲ್ಲಿ ಸ್ವಾತಂತ್ರ್ಯ ಪಡೆದಾಗ, ಭಾರತೀಯ ರೈಲ್ವೇ ಈ ಕಂಪನಿಯೊಂದಿಗೆ ಸುದೀರ್ಘ ವರ್ಷಗಳ ಒಪ್ಪಂದ ಮಾಡಿಕೊಂಡಿತ್ತು. ಹಾಗಾಗಿ ಈ ಮಾರ್ಗವನ್ನು ಬಳಸುವುದಕ್ಕಾಗಿ ಪ್ರತಿ ವರ್ಷ ಬ್ರಿಟಿಷ್‌ ಕಂಪನಿಗೆ ರಾಯಲ್ಟಿ ಪಾವತಿಸಬೇಕಾಗಿತ್ತು.

Continue Reading

ದೇಶ

Air India: ನಿಯಮ ಉಲ್ಲಂಘನೆ: ಏರ್‌ ಇಂಡಿಯಾಕ್ಕೆ ಬಿತ್ತು ಬರೋಬ್ಬರಿ 90 ಲಕ್ಷ ರೂ. ದಂಡ

Air India: ನಾಗರಿಕ ವಿಮಾನಯಾನ ನಿರ್ದೇಶನಾಲಯವು ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಗೆ ಬರೋಬ್ಬರಿ 90 ಲಕ್ಷ ರೂ. ದಂಡ ವಿಧಿಸಿದೆ. ಅರ್ಹತೆ ಹೊಂದಿರದ ಸಿಬ್ಬಂದಿಯೊಂದಿಗೆ ವಿಮಾನಗಳನ್ನು ನಿರ್ವಹಿಸಿದ್ದಕ್ಕಾಗಿ ಈ ದಂಡ ವಿಧಿಸಲಾಗಿದೆ. ಜತೆಗೆ ಏರ್ ಇಂಡಿಯಾದ ನಿರ್ದೇಶಕರ ಕಾರ್ಯಾಚರಣೆ ಮತ್ತು ನಿರ್ದೇಶಕರ ತರಬೇತಿ ಸಂಸ್ಥೆಗೂ ನಾಗರಿಕ ವಿಮಾನಯಾನ ನಿಯಂತ್ರಕ ಕ್ರಮವಾಗಿ 6 ಲಕ್ಷ ರೂ. ಮತ್ತು 3 ಲಕ್ಷ ರೂ. ದಂಡ ವಿಧಿಸಿದೆ.

VISTARANEWS.COM


on

Air India
Koo

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯವು (Directorate General of Civil Aviation-DGCA) ಏರ್‌ ಇಂಡಿಯಾ (Air India) ವಿಮಾನಯಾನ ಸಂಸ್ಥೆಗೆ ಬರೋಬ್ಬರಿ 90 ಲಕ್ಷ ರೂ. ದಂಡ ವಿಧಿಸಿದೆ. ಅರ್ಹತೆ ಹೊಂದಿರದ ಸಿಬ್ಬಂದಿಯೊಂದಿಗೆ ವಿಮಾನಗಳನ್ನು ನಿರ್ವಹಿಸಿದ್ದಕ್ಕಾಗಿ ಈ ದಂಡ ವಿಧಿಸಲಾಗಿದೆ. ಜತೆಗೆ ಏರ್ ಇಂಡಿಯಾದ ನಿರ್ದೇಶಕರ ಕಾರ್ಯಾಚರಣೆ ಮತ್ತು ನಿರ್ದೇಶಕರ ತರಬೇತಿ ಸಂಸ್ಥೆಗೂ ನಾಗರಿಕ ವಿಮಾನಯಾನ ನಿಯಂತ್ರಕ ಕ್ರಮವಾಗಿ 6 ಲಕ್ಷ ರೂ. ಮತ್ತು 3 ಲಕ್ಷ ರೂ. ದಂಡ ವಿಧಿಸಿದೆ.

ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಪೈಲಟ್‌ಗೆ ಸೂಚಿಸಲಾಗಿದೆ ಎಂದು ಡಿಜಿಸಿಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ. “ಏರ್ ಇಂಡಿಯಾ ವಿಮಾನ ತರಬೇತಿ ಹೊಂದಿರದ ಲೈನ್ ಕ್ಯಾಪ್ಟನ್ ಮತ್ತು ನಾನ್-ಲೈನ್-ರಿಲೀಸ್ಡ್‌ ಫಸ್ಟ್‌ ಆಫೀಸರ್‌ಗಳೊಂದಿಗೆ ಕಾರ್ಯ ನಿರ್ವಹಿಸಿದೆ. ಇದು ಸ್ಪಷ್ಟವಾದ ಸುರಕ್ಷತಾ ಮಾನದಂಡದ ಉಲ್ಲಂಘನೆ ಎನ್ನುವುದು ಗಮನಕ್ಕೆ ಬಂದಿದೆ. ಹೀಗಾಗಿ ದಂಡ ವಿಧಿಸಲಾಗಿದೆʼʼ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ವಿವರಿಸಿದೆ.

ಜುಲೈ 10ರಂದು ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ ಸಲ್ಲಿಸಿದ ಸ್ವಯಂಪ್ರೇರಿತ ವರದಿಯ ಮೂಲಕ ಈ ಘಟನೆ ಗಮನಕ್ಕೆ ಬಂದ ನಂತರ ಸಂಬಂಧಪಟ್ಟ ಅಧಿಕಾರಿಗಳು ದಾಖಲೆಗಳು ಮತ್ತು ವೇಳಾಪಟ್ಟಿ ಸೌಲಭ್ಯದ ಸ್ಥಳ ಪರಿಶೀಲನೆ ಸೇರಿದಂತೆ ಕಾರ್ಯಾಚರಣೆಗಳ ತನಿಖೆ ನಡೆಸಿತು. “ತನಿಖೆಯ ಆಧಾರದ ಮೇಲೆ, ಹಲವಾರು ಪೋಸ್ಟ್ ಹೋಲ್ಡರ್‌ಗಳು ಮತ್ತು ಸಿಬ್ಬಂದಿಯಿಂದ ನಿಯಂತ್ರಕದ ಅನೇಕ ನಿಬಂಧನೆಗಳ ಉಲ್ಲಂಘನೆಯಾಗಿದೆ ಎನ್ನುವುದು ತಿಳಿದು ಬಂತು. ಈ ನಿರ್ಲಕ್ಷ್ಯ ಸುರಕ್ಷತೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ” ಎಂದು ಪ್ರಕಟಣೆ ತಿಳಿಸಿದೆ.

ಜುಲೈ 22ರಂದು ನೀಡಲಾದ ಶೋಕಾಸ್ ನೋಟಿಸ್‌ಗಳ ಮೂಲಕ ತಮ್ಮ ನಿಲುವನ್ನು ವಿವರಿಸಲು ವಿಮಾನದ ಕಮಾಂಡರ್ ಮತ್ತು ಏರ್‌ಲೈನ್‌ನ ಪೋಸ್ಟ್ ಹೋಲ್ಡರ್‌ಗಳಿಗೆ ಅವಕಾಶ ನೀಡಲಾಗಿತ್ತು ಎಂದು ಡಿಜಿಸಿಎ ತಿಳಿಸಿದೆ. ಅದಾಗ್ಯೂ ಅವರು ನೀಡಿದ ಉತ್ತರ ತೃಪ್ತಿಕರವಾಗಿರಲಿಲ್ಲ. ಹೀಗಾಗಿ ಡಿಜಿಸಿಎ ಅಸ್ತಿತ್ವದಲ್ಲಿರುವ ನಿಯಮಗಳು / ನಿಬಂಧನೆಗಳ ಪ್ರಕಾರ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಅದರ ಭಾಗವಾಗಿ 99 ಲಕ್ಷ ರೂ. ದಂಡವನ್ನು ವಿಧಿಸಿದೆ. ನಿಯಮ ಉಲ್ಲಂಘನೆಗಾಗಿ ಡಿಜಿಸಿಎ ಏರ್ ಇಂಡಿಯಾಗೆ 90 ಲಕ್ಷ ರೂ., ವಿಮಾನಯಾನ ಕಾರ್ಯಾಚರಣೆ ನಿರ್ದೇಶಕರಿಗೆ 6 ಲಕ್ಷ ರೂ., ವಾಹಕದ ತರಬೇತಿ ನಿರ್ದೇಶಕರಿಗೆ 3 ಲಕ್ಷ ರೂ.ಗಳ ದಂಡ ವಿಧಿಸಿದೆ.

ಇದನ್ನೂ ಓದಿ: Air India: 180 ಉದ್ಯೋಗಿಗಳನ್ನು ವಜಾಗೊಳಿಸಿದ ಏರ್‌ ಇಂಡಿಯಾ; ನೀಡಿದ ಕಾರಣ ಇಲ್ಲಿವೆ

ಏರ್‌ ಇಂಡಿಯಾಕ್ಕೆ 1.10 ಕೋಟಿ ರೂ. ದಂಡ

ನವದೆಹಲಿ: ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಏರ್‌ ಇಂಡಿಯಾ ಕಂಪನಿಗೆ ಕೆಲವು ತಿಂಗಳ ಹಿಂದೆಯಷ್ಟೇ ಬರೋಬ್ಬರಿ 1.10 ಕೋಟಿ ರೂ. ದಂಡ ವಿಧಿಸಲಾಗಿತ್ತು. ಬೋಯಿಂಗ್ ಬಿ 777 ವಿಮಾನಗಳ ಕಾರ್ಯಾಚರಣೆ ವೇಳೆ ಆಮ್ಲಜನಕಕ್ಕೆ ಸಂಬಂಧಿಸಿದ ನಿಯಮಗಳು ಮತ್ತು ಸುರಕ್ಷತಾ ಕೈಪಿಡಿಗಳನ್ನು ಅನುಸರಿಸದ ಕಾರಣ ಈ ದಂಡ ವಿಧಿಸಲಾಗಿತ್ತು. ಮುಂಬೈ / ಬೆಂಗಳೂರು-ಸ್ಯಾನ್ ಫ್ರಾನ್ಸಿಸ್ಕೋ ಮಧ್ಯೆ ಸಂಚರಿಸುವ ಬೋಯಿಂಗ್ ಬಿ 777 ವಿಮಾನದಲ್ಲಿ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಲಾಗಿದೆ ಎಂದು ಮೇಲೆ ಏರ್ ಇಂಡಿಯಾ ವಿರುದ್ಧ ವಿಮಾನಯಾನ ಸಂಸ್ಥೆಯ ಉದ್ಯೋಗಿಯಿಂದ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

Continue Reading

ಚಿನ್ನದ ದರ

Gold Rate Today: ಆಭರಣ ಪ್ರಿಯರಿಗೆ ಗೋಲ್ಡನ್‌ ಟೈಮ್‌; ಚಿನ್ನದ ದರ ಇಂದು ಕೂಡ ಇಳಿಮುಖ

Gold Rate Today: ಸತತವಾಗಿ ಏರಿಕೆಯಾಗಿದ್ದ ಚಿನ್ನದ ದರ ಕಳೆದ ಮೂರು ದಿನಗಳಿಂದ ಇಳಿಕೆ ಕಾಣುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಆಗಸ್ಟ್‌ 23) 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 20 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 22 ಕಡಿಮೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,660 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,265 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ಸತತವಾಗಿ ಏರಿಕೆಯಾಗಿದ್ದ ಚಿನ್ನದ ದರ ಕಳೆದ ಮೂರು ದಿನಗಳಿಂದ ಇಳಿಕೆ ಕಾಣುತ್ತಿದೆ (Gold Rate Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಆಗಸ್ಟ್‌ 23) 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 20 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 22 ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,660 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,265 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,280 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,600 ಮತ್ತು ₹ 6,66,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 58,120 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 72,650 ಮತ್ತು ₹ 7,26,500 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,660 ₹ 7,265
ಮುಂಬೈ₹ 6,660 ₹ 7,265
ಬೆಂಗಳೂರು₹ 6,660 ₹ 7,265
ಚೆನ್ನೈ₹ 6,660 ₹ 7,265

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿಯೂ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 82 ಹಾಗೂ 8 ಗ್ರಾಂಗೆ ₹ 656 ಇದೆ. 10 ಗ್ರಾಂ ₹ 820 ಹಾಗೂ 1 ಕಿಲೋಗ್ರಾಂ ₹ 82,000 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Kaun Banega Crorepati: ಕೌನ್ ಬನೇಗಾ ಕರೋಡ್‌‌ಪತಿ ವಿಜೇತರು ತೆರಿಗೆ ಎಷ್ಟು ಕಟ್ಟಬೇಕು?

Continue Reading

ದೇಶ

Richest Village: ಗುಜರಾತ್‌ನಲ್ಲಿದೆ ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ! ಇಲ್ಲಿಯ ಜನ ಇಟ್ಟಿರುವ ಫಿಕ್ಸೆಡ್‌ ಡಿಪಾಸಿಟ್‌ ಮೌಲ್ಯ 7,000 ಕೋಟಿ ರೂ!

ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮವೊಂದು (Richest Village) ಗುಜರಾತ್‌ನಲ್ಲಿದೆ. ಅದರ ಸಮೃದ್ಧಿಯ ಹಿಂದಿನ ಕಾರಣ ಅಚ್ಚರಿಯನ್ನು ಉಂಟು ಮಾಡುತ್ತದೆ. ಇಲ್ಲಿನ ನಿವಾಸಿಗಳು ಕನಿಷ್ಠ 7,000 ಕೋಟಿ ರೂ. ಮೌಲ್ಯದ ಸ್ಥಿರ ಠೇವಣಿಗಳನ್ನು ಹೊಂದಿದ್ದಾರೆ. ಇದು ಅವರು ಎಷ್ಟು ಶ್ರೀಮಂತರು ಎಂಬುದರ ಒಂದು ಸಣ್ಣ ನೋಟವಷ್ಟೇ! ಈ ಕುರಿತ ಕುತೂಹಲಕರ ವರದಿ ಇಲ್ಲಿದೆ.

VISTARANEWS.COM


on

By

Richest Village
Koo

ಗುಜರಾತ್ (Gujarat) ಭಾರತದ ಪ್ರಮುಖ ವ್ಯಾಪಾರ ತಾಣಗಳಲ್ಲಿ ಒಂದಾಗಿದ್ದು, ಇದು ದೇಶಕ್ಕೆ ಕೆಲವು ಉನ್ನತ ಕೈಗಾರಿಕೋದ್ಯಮಿಗಳನ್ನು ನೀಡಿದೆ. ಆದರೆ ಸಮೃದ್ಧಿ ಕೇವಲ ನಗರಗಳಿಗೆ ಸೀಮಿತವಾಗಿಲ್ಲ. ಇಲ್ಲಿರುವ ಪುಟ್ಟ ಗ್ರಾಮವೊಂದು ಏಷ್ಯಾದ ಶ್ರೀಮಂತ (richest village in Asia) ಗ್ರಾಮವಾಗಿ (Richest Village) ಗುರುತಿಸಿಕೊಂಡಿದೆ.

ಕಛ್‌ನಲ್ಲಿರುವ ಮಾಧಾಪರ್ ಅನ್ನು ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ ಎಂದು ಕರೆಯಲಾಗುತ್ತದೆ. ಯಾಕೆಂದರೆ ಇಲ್ಲಿ ಆರ್ಥಿಕ ಸಮೃದ್ಧಿಗೇನೂ ಕೊರತೆಯಿಲ್ಲ. ಭುಜ್‌ನ ಹೊರವಲಯದಲ್ಲಿರುವ ಈ ಗ್ರಾಮದ ನಿವಾಸಿಗಳು 7,000 ಕೋಟಿ ರೂ. ಮೌಲ್ಯದ ಸ್ಥಿರ ಠೇವಣಿಗಳನ್ನು ಹೊಂದಿದ್ದಾರೆ. ಇದು ಅವರು ಎಷ್ಟು ಶ್ರೀಮಂತರು ಎಂಬುದನ್ನು ಹೇಳುತ್ತದೆ.

ಮಾಧಾಪರ್‌ನಲ್ಲಿ ಪಟೇಲ್ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಇವರ ಜನಸಂಖ್ಯೆಯು ಸುಮಾರು 32,000 ಎಂದು ಅಂದಾಜಿಸಲಾಗಿದೆ. ಇದು 2011 ರಲ್ಲಿ 17,000 ಆಗಿತ್ತು.

ಈ ಹಳ್ಳಿಯು ಹೆಚ್ ಡಿಎಫ್ ಸಿ ಬ್ಯಾಂಕ್, ಎಸ್‌ಬಿಐ, ಪಿಎನ್‌ಬಿ, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಮುಂತಾದ ಪ್ರಮುಖ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳನ್ನು ಒಳಗೊಂಡಂತೆ 17 ಬ್ಯಾಂಕ್‌ಗಳನ್ನು ಹೊಂದಿದೆ. ಇದು ಒಂದೇ ಹಳ್ಳಿಗೆ ಅಸಾಮಾನ್ಯವಾಗಿದೆ. ಅದರ ಹೊರತಾಗಿಯೂ ಹೆಚ್ಚಿನ ಬ್ಯಾಂಕ್‌ಗಳು ಇಲ್ಲಿ ತಮ್ಮ ಶಾಖೆಗಳನ್ನು ತೆರೆಯಲು ಆಸಕ್ತಿ ಹೊಂದಿವೆ.


ಗ್ರಾಮದ ಈ ಏಳಿಗೆಯ ಹಿಂದಿನ ಕಾರಣವೆಂದರೆ ಅನಿವಾಸಿ ಭಾರತೀಯ ಕುಟುಂಬಗಳು. ಅವರು ಸ್ಥಳೀಯ ಬ್ಯಾಂಕು ಮತ್ತು ಅಂಚೆ ಕಚೇರಿಗಳಲ್ಲಿ ಪ್ರತಿ ವರ್ಷ ಕೋಟಿ ರೂ. ಗಳನ್ನು ಠೇವಣಿ ಮಾಡುತ್ತಾರೆ. ಗ್ರಾಮವು ಸುಮಾರು 20,000 ಮನೆಗಳನ್ನು ಹೊಂದಿದೆ. ಆದರೆ ಸುಮಾರು 1,200 ಕುಟುಂಬಗಳು ವಿದೇಶದಲ್ಲಿ ಅದರಲ್ಲೂ ಹೆಚ್ಚಾಗಿ ಆಫ್ರಿಕನ್ ದೇಶಗಳಲ್ಲಿ ವಾಸಿಸುತ್ತಿವೆ.

ಮಧ್ಯ ಆಫ್ರಿಕಾದಲ್ಲಿನ ನಿರ್ಮಾಣ ವ್ಯವಹಾರಗಳಲ್ಲಿ ಗುಜರಾತಿಗಳು ಹೆಚ್ಚು ಪ್ರಾಬಲ್ಯ ಹೊಂದಿದ್ದಾರೆ. ಈ ಪ್ರದೇಶ ದೊಡ್ಡ ವಲಸಿಗ ಜನಸಂಖ್ಯೆಯ ಭಾಗವಾಗಿದೆ. ಅನೇಕರು ಯುಕೆ, ಆಸ್ಟ್ರೇಲಿಯಾ, ಅಮೆರಿಕ ಮತ್ತು ನ್ಯೂಜಿಲೆಂಡ್‌ನಲ್ಲಿಯೂ ವಾಸಿಸುತ್ತಿದ್ದಾರೆ.

ಅನೇಕ ಗ್ರಾಮಸ್ಥರು ವಿದೇಶದಲ್ಲಿ ವಾಸಿಸುತ್ತಿದ್ದರೂ, ಅಲ್ಲೇ ಕೆಲಸ ಮಾಡಿಕೊಂಡಿದ್ದರೂ ಅವರು ತಮ್ಮ ಗ್ರಾಮದೊಂದಿಗೆ ನಂಟು ಹೊಂದಿದ್ದಾರೆ ಮತ್ತು ಅವರು ವಾಸಿಸುವ ಸ್ಥಳಕ್ಕಿಂತ ಹೆಚ್ಚಾಗಿ ತಮ್ಮ ಹಣವನ್ನು ಇಲ್ಲಿನ ಬ್ಯಾಂಕ್‌ಗಳಲ್ಲಿ ಇಡಲು ಬಯಸುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪಾರುಲ್ಬೆನ್ ಕಾರ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: Job market: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ; ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಮುಂದಾದ ಶೇ. 72ರಷ್ಟು ಕಂಪನಿಗಳು!

ಗ್ರಾಮದ ಬ್ಯಾಂಕ್ ಗಳಲ್ಲಿ ಅಪಾರ ಠೇವಣಿ ಇಡುವುದರಿಂದ ಗ್ರಾಮ ಸಮೃದ್ಧಿಯಾಗಿದೆ. ನೀರು, ನೈರ್ಮಲ್ಯ ಮತ್ತು ರಸ್ತೆಯಂತಹ ಎಲ್ಲಾ ಮೂಲ ಸೌಕರ್ಯಗಳನ್ನು ಹೊಂದಿದೆ. ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳು, ಕೆರೆಗಳು ಮತ್ತು ದೇವಾಲಯಗಳು ಬಂಗಲೆಗಳಿವೆ ಎನ್ನುತ್ತಾರೆ ಗ್ರಾಮದ ರಾಷ್ಟ್ರೀಕೃತ ಬ್ಯಾಂಕ್‌ನ ಸ್ಥಳೀಯ ಶಾಖಾ ವ್ಯವಸ್ಥಾಪಕರು.

Continue Reading
Advertisement
Bomb threat to Wonderla Amusement Park in Urdu
ರಾಮನಗರ1 min ago

Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

Railway Line
ವಾಣಿಜ್ಯ3 mins ago

Railway Line: ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಇನ್ನೂ ಬ್ರಿಟಿಷರ ಅಧೀನದಲ್ಲಿದೆ ಈ ರೈಲು ಮಾರ್ಗ!

Kannada New Movie
ಬೆಂಗಳೂರು12 mins ago

Kannada New Movie: ಪ್ರಜ್ವಲ್ ದೇವರಾಜ್-ಅದಿತಿ‌ ಪ್ರಭುದೇವ ಅಭಿನಯದ ʼಮಾಫಿಯಾʼ ಚಿತ್ರ ಸದ್ಯದಲ್ಲೇ ತೆರೆಗೆ

Viral Video
Latest15 mins ago

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

Viral News
ವೈರಲ್ ನ್ಯೂಸ್20 mins ago

Viral News: ಹೆಂಡ್ತಿ ತವರಿಗೆ ಹೋಗ್ತಿದ್ದಂತೆ ಪ್ರೇಯಸಿ ಜೊತೆ ಲವ್ವಿಡವ್ವಿ- ಸ್ಕೂಲ್‌ ಮೇಸ್ಟ್ರನ್ನು ರೆಡ್‌ಹ್ಯಾಂಡಾಗಿ ಹಿಡಿದು ಅಲ್ಲೇ ಮದ್ವೆ

Kannada New Movie
ಬೆಂಗಳೂರು27 mins ago

Kannada New Movie: ಐವರು ನಿರ್ದೇಶಕರ 5 ಕಥೆಗಳ ʼಬಿಟಿಎಸ್ʼ ಚಿತ್ರದ ಟ್ರೇಲರ್ ರಿಲೀಸ್‌; ಹೊಸ ಪ್ರಯತ್ನಕ್ಕೆ ರಾಜ್ ಬಿ ಶೆಟ್ಟಿ ಸಾಥ್‌

Prajwal Revanna Case
ಕರ್ನಾಟಕ27 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Here are 4 ideas for krishna janmashtami photoshoot
ಶ್ರೀ ಕೃಷ್ಣ ಜನ್ಮಾಷ್ಟಮಿ29 mins ago

Krishna janmastami: ಕೃಷ್ಣ ಜನ್ಮಾಷ್ಟಮಿಯ ಫೋಟೋಶೂಟ್‌‌ಗೆ ಇಲ್ಲಿದೆ 4 ಐಡಿಯಾ

Air India
ದೇಶ38 mins ago

Air India: ನಿಯಮ ಉಲ್ಲಂಘನೆ: ಏರ್‌ ಇಂಡಿಯಾಕ್ಕೆ ಬಿತ್ತು ಬರೋಬ್ಬರಿ 90 ಲಕ್ಷ ರೂ. ದಂಡ

Viral Video
Latest38 mins ago

Viral Video: ಬೇಟೆಯಾಡಲು ಗೋಡೆ ಹತ್ತಿದ ದೈತ್ಯ ಹೆಬ್ಬಾವು; ಗಾಬರಿಗೊಳಿಸುವ ವಿಡಿಯೊ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌