Apply for ration card How to apply for a new ration cardApply for ration card : ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ಪ್ರಮುಖ ಸುದ್ದಿ

Apply for ration card : ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

Apply for ration card ಹೊಸ ರೇಷನ್‌ ಕಾರ್ಡ್‌ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಉಪಯುಕ್ತ ಮಾಹಿತಿ ಇಲ್ಲಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯಲು ಇದೂ ಒಂದು ದಾಖಲೆಯಾಗಿದೆ. ಗುರುತಿನ ಚೀಟಿಯಾಗಿಯೂ ಬಳಸಬಹುದು.

VISTARANEWS.COM


on

Ration shop
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನತೆಗೆ 5 ಬಗೆಯ ಗ್ಯಾರಂಟಿ ಸ್ಕೀಮ್‌ಗಳನ್ನು ನೀಡಲು ಪ್ರಕ್ರಿಯೆ ಆರಂಭಿಸಿದೆ. ಗೃಹಲಕ್ಷ್ಮಿ, ಯುವನಿಧಿ, ಶಕ್ತಿ, ಅನ್ನ ಭಾಗ್ಯ ಮತ್ತು ಗೃಹಜ್ಯೋತಿ ಎಂಬ ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆಯಲು ಜನತೆ ಕಾಯುತ್ತಿದ್ದಾರೆ. (Apply for ration card ) ಈ ಯೋಜನೆಗಳ ಲಾಭ ಪಡೆಯಲು ಬೇಕಿರುವ ದಾಖಲೆಗಳಲ್ಲಿ ರೇಷನ್‌ ಕಾರ್ಡ್‌ ಕೂಡ ಒಂದಾಗಿದೆ. ಹೀಗಾಗಿ ಎಪಿಎಲ್/ಬಿಪಿಎಲ್‌ ರೇಷನ್‌ ಕಾರ್ಡ್‌ ಪಡೆಯಲು ಅನೇಕ ಮಂದಿ ಆಸಕ್ತಿ ವಹಿಸಿದ್ದಾರೆ.

ಎಪಿಎಲ್‌ ಕಾರ್ಡ್‌ ಇರುವವರಿಗೂ ಕೆಲ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಘೋಷಿಸಿದೆ. ಇತ್ತೀಚಿಗೆ ಹೊಸ ಷರತ್ತುಗಳು, ಗೊಂದಲಗಳು ಸೃಷ್ಟಿಯಾಗಿದ್ದರೂ, ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಜನ ಕಾತರರಾಗಿದ್ದಾರೆ. ಮಾತ್ರವಲ್ಲದೆ ಗುರುತಿನ ಚೀಟಿಯಾಗಿಯೂ ರೇಷನ್‌ ಕಾರ್ಡ್‌ ಬಳಕೆಯಾಗುತ್ತದೆ. ( Department of Food, Civil Supplies and Consumers Affairs ) ಹೀಗಾಗಿ ರೇಷನ್‌ ಕಾರ್ಡ್‌ ಒಂದು ಬಹೂಪಯೋಗಿ ದಾಖಲೆ.

ಹಾಗಾದರೆ ಹೊಸ ರೇಷನ್‌ ಕಾರ್ಡ್‌ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಆನ್‌ಲೈನ್ ವಿಧಾನದಲ್ಲಿ ಹೊಸ ರೇಷನ್‌ ಕಾರ್ಡ್‌ ಪಡೆಯಲು ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ನೀವು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇಲಾಖೆಯ ವೆಬ್‌ಸೈಟ್‌ ವಿಳಾಸ ಹೀಗಿದೆ: https://ahara.kar.nic.in ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ವೆಬ್‌ಸೈಟ್‌ನಲ್ಲಿ ತಿಳಿಸಿರುವ ಮಾಹಿತಿಯನ್ನು ಮಾತ್ರ ಇಲ್ಲಿ ನೋಡೋಣ.

ಸಾರ್ವಜನಿಕರು ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು https://ahara.kar.nic.in ವೆಬ್‌ಸೈಟ್‌ನಲ್ಲಿ ಇ- ಸರ್ವೀಸ್‌ (e-service) ಮೆನುವನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಲಿಂಕ್‌ ಇದೆ. ಆದರೆ ಸದ್ಯಕ್ಕೆ ಆ ಲಿಂಕ್‌ ಒತ್ತಿದರೆ Service Unavailable ಎಂಬ ಸಂದೇಶ ಬರುತ್ತಿದೆ.

ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಆಧಾರ್‌ ಕಾರ್ಡ್‌ ಕಡ್ಡಾಯವಾಗಿ ಬೇಕು. ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಅರ್ಜಿ ಸಲ್ಲಿಸಬಹುದು. ಗ್ರಾಹಕರು ಬೇಕಾದ ಲಾಂಗ್ವೇಜ್‌ ಅನ್ನು ಆಯ್ಕೆ ಮಾಡಬಹುದು.

Apply for ration card  How to apply for a new ration card

ಬಳಕೆದಾರರು Non – Priority Household (NPHH) ಆಯ್ಕೆ ಮಾಡಿ NPHH ರೇಷನ್‌ ಕಾರ್ಡ್‌ಗೂ ಅರ್ಜಿ ಸಲ್ಲಿಸಬಹುದು. ಎನ್‌ಪಿಎಚ್‌ಎಚ್‌ ರೇಷನ್‌ ಕಾರ್ಡ್‌ನಲ್ಲಿ ಸಬ್ಸಿಡಿ ದರದ ಅಕ್ಕಿ, ಬೇಳೆಕಾಳು ಸಿಗುವುದಿಲ್ಲ. ಆದರೆ ರೇಷನ್‌ ಕಾರ್ಡ್‌ ಸಿಗುತ್ತದೆ. ಇದನ್ನು ಗುರುತಿನ ಚೀಟಿಯಾಗಿ ಬಳಸಬಹುದು.

ಬಳಕೆದಾರರು ಆಧಾರ್‌ ನಂಬರ್‌ ಮತ್ತು ಆಧಾರ್‌ ಜತೆಗೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ ನಮೂದಿಸಬೇಕು. ಆಧಾರ್‌ ಆಧರಿತ ಅಥೆಂಟಿಕೇಶನ್‌ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇದಕ್ಕಾಗಿ One time password to mobile number registered with the aadhar ಆಯ್ಕೆ ಕ್ಲಿಕ್ಕಿಸಬೇಕು. ನಿಮ್ಮ ಮೊಬೈಲ್‌ ನಂಬರಿಗೆ OTP ಸಿಗುತ್ತದೆ. ಒಟಿಪಿ ಮತ್ತು captcha ಪ್ರಕ್ರಿಯೆ ಪೂರ್ಣಗೊಳಿಸಿ. ಬಳಿಕ ಹೆಸರು, ಜನ್ಮ ದಿನಾಂಕ, ಲಿಂಗ ಇತ್ಯಾದಿ ಮಾಹಿತಿ ಭರ್ತಿಗೊಳಿಸಿ. ಆಧಾರ್‌ನಲ್ಲಿ ಇರುವಂತ ಇರಲಿ. ಬಳಿಕ finger print verification ಪ್ರಕ್ರಿಯೆ ಪೂರ್ಣಗೊಳಿಸಿ. ಈಗಾಗಲೇ ರೇಷನ್‌ ಕಾರ್ಡ್‌ನಲ್ಲಿ ನಿಮ್ಮ ಹೆಸರಿದ್ದರೆ ಅದನ್ನು ಡಿಲೀಟ್‌ ಮಾಡಿ ಹೊಸತಾಗಿ ಅರ್ಜಿ ಸಲ್ಲಿಸಬಹುದು. ಈಗಿನ ರೇಷನ್‌ ಕಾರ್ಡ್‌ ನಲ್ಲಿ ಹೆಸರು ಡಿಲೀಟ್ ಮಾಡದೆಯೇ ಹೊಸತಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.

Apply for ration card  How to apply for a new ration card

ಕುಟುಂಬದ ಎಲ್ಲ ಸದಸ್ಯರ ವಿವರಗಳನ್ನು ನಮೂದಿಸಿದ ಬಳಿಕ ಅರ್ಜಿಯ ಸಂಖ್ಯೆ ಸಿಗುತ್ತದೆ. ಅದನ್ನು ಬಳಸಿ ಎಡಿಟ್‌ ಮಾಡಬಹುದು. ಬಳಿಕ ರೇಷನ್‌ ಕಾರ್ಡ್‌ ಅಡ್ರೆಸ್‌ ಸಿಲೆಕ್ಟ್‌ ಮಾಡಬೇಕು. ಪಿನ್‌ ಕೋಡ್‌ ಆಧರಿಸಿ ನ್ಯಾಯ ಬೆಲೆ ಅಂಗಡಿ (Fair price shop) ಮತ್ತು ಏರಿಯಾ ಆಟೊ ಸಿಲೆಕ್ಟ್‌ ಆಗುತ್ತದೆ. ನಗರ, ವಾರ್ಡ್‌ ನಂಬರ್‌ ಅನ್ನು ಸಿಲೆಕ್ಟ್‌ ಮಾಡಬಹುದು. ಗ್ರಾಮೀಣ ಪ್ರದೇಶವಾಗಿದ್ದರೆ ಪಂಚಾಯತ್‌ ಸಿಲೆಕ್ಟ್‌ ಮಾಡಬೇಕು. ಇತರ ಎಲ್ಲ ವಿವರಗಳನ್ನು ಭರ್ತಿಗೊಳಿಸಿದ ಬಳಿಕ ಸರಿ ಎನ್ನಿಸಿದ್ದರೆ Generate RC ಬಟನ್‌ ಕ್ಲಿಕ್ಕಿಸಿ. ರೇಷನ್‌ ಕಾರ್ಡ್‌ ಪ್ರತಿಯ ಪ್ರಿಂಟ್‌ ಔಟ್‌ ಅನ್ನು print ಬಟನ್‌ ಕ್ಲಿಕ್ಕಿಸಿ ತೆಗೆದುಕೊಳ್ಳಬಹುದು.

ಆಸಕ್ತರು ಆನ್‌ಲೈನ್/‌ ಬೆಂಗಳೂರು ಒನ್‌/ ಕರ್ನಾಟಕ ಒನ್‌/ private franchises/ ಜನಸ್ನೇಹಿ ಕೇಂದ್ರ/ ಗ್ರಾಮಪಂಚಾಯತ್/‌ POS ಶಾಪ್‌ಗಳಲ್ಲಿ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು. 70 ರೂ. ಶುಲ್ಕದಲ್ಲಿ ರೇಷನ್‌ ಕಾರ್ಡ್‌ ಅನ್ನು ಸ್ಪೀಡ್‌ ಪೋಸ್ಟ್‌ ಮೂಲಕ ಮನೆಗೆ ತರಿಸಿಕೊಳ್ಳಬಹುದು.

ಇದನ್ನೂ ಓದಿ: Congress Guarantee: ಪ್ರತಿ ವ್ಯಕ್ತಿಗೆ ಮಾಸಿಕ 10 ಕೆ.ಜಿ. ಅಕ್ಕಿ ಫ್ರೀ: ಕಾಂಗ್ರೆಸ್‌ನಿಂದ ಮೂರನೇ ಗ್ಯಾರಂಟಿ ʼಅನ್ನ ಭಾಗ್ಯʼ ಘೋಷಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Dwarakish: ಕರುನಾಡ ಕುಳ್ಳ, ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ (81) (Actor Dwarakish) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ (ಏಪ್ರಿಲ್‌ 81) ನಿಧನರಾಗಿದ್ದಾರೆ. ಇವರ ನಿಧನಕ್ಕೆ ಗಣ್ಯರು, ಸ್ಯಾಂಡಲ್‌ವುಡ್‌ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.

VISTARANEWS.COM


on

Actor Dwarakish
Koo

ಬೆಂಗಳೂರು: ಕರುನಾಡ ಕುಳ್ಳ, ಮನೋಜ್ಞ ನಟನೆಯ ಮೂಲಕ ಮನೆಮಾತಾಗಿದ್ದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ (81) (Actor Dwarakish) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ (ಏಪ್ರಿಲ್‌ 81) ನಿಧನರಾಗಿದ್ದಾರೆ. ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ದ್ವಾರಕೀಶ್‌ ಅವರ ಅಗಲಿಕೆಗೆ ಸ್ಯಾಂಡಲ್‌ವುಡ್‌ ನಟರು ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

1942ರ ಆಗಸ್ಟ್‌ 19ರಂದು ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಜನಸಿದ ಅವರು ನಟನೆಯ ಮೂಲಕವೇ ಮನೆಮಾತಾಗಿದ್ದರು. ಇವರ ತಂದೆ ಶಾಮರಾವ್‌ ಹಾಗೂ ತಾಯಿ ಜಯಮ್ಮ. ಶಾರದಾ ವಿಲಾಸ್‌ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ ಇವರು ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಮಾಡಿದರು. ಆರಂಭದಲ್ಲಿ ಸಹೋದರನ ಜತೆಗೂಡಿ ಭಾರತ್ ಆಟೋ ಸ್ಪೇರ್ ಸ್ಟೋರ್ ಪ್ರಾರಂಭಿಸಿದರು. ಆದರೆ, ಅವರ ಆಸಕ್ತಿ ಸಿನಿಮಾ ಕಡೆಗೆ ಇತ್ತು.

ಡಾ.ರಾಜಕುಮಾರ್‌ ಸೇರಿ ಹಲವು ಗಣ್ಯರೊಂದಿಗೆ ನಟಿಸಿ ಅವರು ಸೈ ಎನಿಸಿಕೊಂಡಿದ್ದರು. ಕನ್ನಡ ಸಿನಿಮಾ ಜಗತ್ತಿನ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಅವರು 1963ರಲ್ಲಿ ವೀರಸಂಕಲ್ಪ ಎಂಬ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದರು. ಅದರಲ್ಲೂ, 1966ರಲ್ಲಿ ಡಾ.ರಾಜಕುಮಾರ್‌ ಅಭಿನಯದ ಮೇಯರ್‌ ಮುತ್ತಣ್ಣ ಸಿನಿಮಾ ನಿರ್ಮಾಣ ಮಾಡಿದರು. ಅಲ್ಲಿಂದ ಡಾ.ರಾಜಕುಮಾರ್‌ ಅವರ ಜತೆ ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು.

1985ರಲ್ಲಿ ಸಿನಿಮಾ ನಿರ್ದೇಶನಕ್ಕೆ ಕಾಲಿಟ್ಟ ದ್ವಾರಕೀಶ್‌ ಅವರು ಅಲ್ಲೂ ಯಶಸ್ವಿಯಾದರು. ಡಾ.ವಿಷ್ಣುವರ್ಧನ್‌ ಅಭಿನಯದ ನೀ ಬರೆದ ಕಾದಂಬರ್‌ ಸೂಪರ್‌ ಹಿಟ್‌ ಆಯಿತು. ಕಿಟ್ಟು-ಪುಟ್ಟು, ಸಿಂಗಾಪುರದಲ್ಲಿ ರಾಜಕುಳ್ಳ, ಭಾಗ್ಯವಂತರು, ಗುರು ಶಿಷ್ಯರು, ಪೆದ್ದ-ಗೆದ್ದ, ಆಪ್ತಮಿತ್ರ ಸೇರಿದಂತೆ ಹಲವು ಹಿಟ್‌ ಚಿತ್ರಗಳನ್ನು ಕೊಟ್ಟ ಹೆಗ್ಗಳಿಕೆ ದ್ವಾರಕೀಶ್‌ ಅವರದ್ದಾಗಿದೆ. ಚೌಕ ಇವರ ಕೊನೆಯ ಸಿನಿಮಾ ಆಗಿದೆ. ʼದ್ವಾರಕೀಶ್‌ ಚಿತ್ರʼ ಇವರ ನಿರ್ಮಾಣ ಸಂಸ್ಥೆಯಾಗಿತ್ತು. ಇವರು ಸುಮಾರು 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು.

19 ಸಿನಿಮಾಗಳ ನಿರ್ದೇಶನ

ಡಾ.ವಿಷ್ಣುವರ್ಧನ್‌ ಹಾಗೂ ದ್ವಾರಕೀಶ್‌ ಜೋಡಿಯು ರಾಜ್ಯಾದ್ಯಂತ ಮೋಡಿ ಮಾಡಿತು. ಈ ಜೋಡಿಯು ಕಳ್ಳ-ಕುಳ್ಳ ಎಂದೇ ಖ್ಯಾತಿಯಾಯಿತು. ನೀ ಬರೆದ ಕಾದಂಬರಿ ಮೂಲಕ ನಿರ್ದೇಶನಕ್ಕೆ ಕಾಲಿಟ್ಟ ದ್ವಾರಕೀಶ್‌ ಅವರು 19 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಾಯರು ಬಂದರು ಮಾವನ ಮನೆಗೆ ಡಾನ್ಸ್‌ ರಾಜ ಡಾನ್ಸ್‌, ಶ್ರುತಿ ಹಾಕಿದ ಹೆಜ್ಜೆ ನಿರ್ದೇಶನ ಮಾಡಿದ ಪ್ರಮುಖ ಚಿತ್ರಗಳಾಗಿವೆ. ಕನ್ನಡದ ಜತೆಗೆ ಹಿಂದಿ, ತಮಿಳು, ತೆಲುಗು ಸಿನಿಮಾಗಳನ್ನೂ ನಿರ್ಮಾಣ ಮಾಡಿದ ಕೀರ್ತಿ ಇವರದ್ದು. ಇವರು 52 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

ಇದನ್ನೂ ಓದಿ: Meera Jasmine: ʻಮೌರ್ಯʼ, ʻಅರಸುʼ ಖ್ಯಾತಿ ನಟಿಯ ತಂದೆ ಇನ್ನಿಲ್ಲ

Continue Reading

ಪ್ರಮುಖ ಸುದ್ದಿ

BSP List: ವಾರಾಣಸಿಯಲ್ಲಿ ಮೋದಿ ವಿರುದ್ಧ ಬಿಎಸ್‌ಪಿ ಅಭ್ಯರ್ಥಿ ಯಾರು? ಗ್ಯಾಂಗ್‌ಸ್ಟರ್‌ ಪತ್ನಿಗೂ ಟಿಕೆಟ್!

BSP List: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಯಾವತಿ ನೇತೃತ್ವದ ಬಿಎಸ್‌ಪಿಯು 11 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ ಅವರ ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಇದರ ಬೆನ್ನಲ್ಲೇ, ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಪತ್ನಿಗೂ ಮಾಯಾವತಿ ಅವರು ಟಿಕೆಟ್‌ ನೀಡಿದ್ದಾರೆ.

VISTARANEWS.COM


on

BSP Candidates List
Koo

ಲಖನೌ: ದೇಶದ ಹಲವು ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನಕ್ಕೆ ಮೂರು ದಿನ ಬಾಕಿ ಇರುವಾಗಲೇ ಬಹುಜನ ಸಮಾಜ ಪಕ್ಷವು (BSP List) 11 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲೂ, ವಾರಾಣಸಿಯಲ್ಲಿ (Varanasi) ನರೇಂದ್ರ ಮೋದಿ ಅವರ ವಿರುದ್ಧ ಅಥರ್‌ ಜಮಾಲ್‌ ಲರಿ (Athar Jamal Lari) ಅವರನ್ನು ಮಾಯಾವತಿ (Mayawati) ಅವರು ಕಣಕ್ಕಿಳಿಸಿದ್ದಾರೆ. ಮತ್ತೊಂದೆಡೆ, ಕೊಲೆ, ಸುಲಿಗೆ, ಅಪಹರಣ ಸೇರಿ ಹಲವು ಪ್ರಕರಣಗಳ ಆರೋಪಿ, ಜೈಲುಪಾಲಾಗಿರುವ ಗ್ಯಾಂಗ್‌ಸ್ಟರ್‌ ಧನಂಜಯ್‌ ಸಿಂಗ್‌ ಪತ್ನಿಗೂ ಬಿಎಸ್‌ಪಿ ಟಿಕೆಟ್‌ ಘೋಷಿಸಿದೆ.

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಈಗ ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಗ್ಯಾಂಗ್‌ಸ್ಟರ್‌ ಪತ್ನಿಗೆ ಟಿಕೆಟ್‌

ಉತ್ತರ ಪ್ರದೇಶದ ಜೌನ್‌ಪುರ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್‌ಪಿಯು ಗ್ಯಾಂಗ್‌ಸ್ಟರ್‌ ಧನಂಜಯ್‌ ಸಿಂಗ್‌ ಪತ್ನಿ ಶ್ರೀಕಲಾ ಸಿಂಗ್‌ ಅವರಿಗೆ ಟಿಕೆಟ್‌ ನೀಡಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ. ಇನ್ನು, ಮೈನ್‌ಪುರಿಯಲ್ಲಿ ಅಭ್ಯರ್ಥಿಯನ್ನು ಬದಲಾಯಿಸಿರುವ ಬಿಎಸ್‌ಪಿಯು, ಶಿವಪ್ರಸಾದ್‌ ಯಾದವ್‌ ಅವರಿಗೆ ಮಣೆ ಹಾಕಿದೆ. ಬರೇಲಿಯಲ್ಲಿ ಛೋಟಾಲಾಲ್‌ ಗಂಗ್ವಾರ್‌, ಬಂಡಾದಲ್ಲಿ ಮಯಾಂಕ್‌ ದ್ವಿವೇದಿ, ಘಾಜಿಪುರದಲ್ಲಿ ಉಮೇಶ್‌ ಕುಮಾರ್‌ ಸಿಂಗ್‌ ಸೇರಿ 11 ಕ್ಷೇತ್ರಗಳಲ್ಲಿ ಬಿಎಸ್‌ಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ

ಯಾರೀತ ಧನಂಜಯ್‌ ಸಿಂಗ್‌?

ಧನಂಜಯ್‌ ಸಿಂಗ್‌ ಉತ್ತರ ಪ್ರದೇಶ ಕಂಡ ಕುಖ್ಯಾತ ಗ್ಯಾಂಗ್‌ಸ್ಟರ್‌ಗಳಲ್ಲಿ ಒಬ್ಬನಾಗಿದ್ದಾನೆ. ಈತನ ವಿರುದ್ಧ 1991ರಿಂದ 2023ರ ಅವಧಿಯಲ್ಲಿ ದೆಹಲಿ, ಜೌನ್‌ಪುರ ಹಾಗೂ ಲಖನೌನಲ್ಲಿ ಕೊಲೆ, ಸುಲಿಗೆ, ಅಪಹರಣ, ಗಲಭೆ, ಅಪರಾಧಕ್ಕೆ ಪ್ರಚೋದನೆ ಸೇರಿ 46 ಪ್ರಕರಣಗಳು ದಾಖಲಾಗಿವೆ. ಇಂತಹ ಗ್ಯಾಂಗ್‌ಸ್ಟರ್‌ ಒಮ್ಮೆ ಶಾಸಕ ಹಾಗೂ ಒಮ್ಮೆ ಸಂಸದನಾಗಿ (ಜೌನ್‌ಪುರ ಕ್ಷೇತ್ರದ ಸಂಸದ) ಆಯ್ಕೆಯಾಗಿದ್ದ ಎಂಬುದೇ ವ್ಯವಸ್ಥೆಯ ಘೋರ ಅಣಕವಾಗಿದೆ. ನಮಾಮಿ ಗಂಗೆ ಯೋಜನೆಯ ಮ್ಯಾನೇಜರ್‌ ಒಬ್ಬರನ್ನು ಅಪಹರಿಸಿದ ಪ್ರಕರಣದಲ್ಲಿ ಇತ್ತೀಚೆಗೆ ಈತನಿಗೆ ನ್ಯಾಯಾಲಯವು 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: Lok Sabah Election : ಉತ್ತರ ದಿಲ್ಲಿಯಿಂದ ಕಾಂಗ್ರೆಸ್​ ಟಿಕೆಟ್ ಪಡೆದ ಕನ್ಹಯ್ಯ ಕುಮಾರ್​​

Continue Reading

ದೇಶ

Boat Capsize: ಕಾಶ್ಮೀರದಲ್ಲಿ ಮುಳುಗಿದ ದೋಣಿ; ನಾಲ್ವರು ಶಾಲಾ ಮಕ್ಕಳು ಜಲಸಮಾಧಿ

Boat Capsize: ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ಮಂಗಳವಾರ ಬೆಳಗ್ಗೆ ದೋಣಿ ದುರಂತ ಸಂಭವಿಸಿದೆ. ಮಕ್ಕಳು, ಮಹಿಳೆಯರು ಸೇರಿ ಹಲವರು ಮಂದಿ ದೋಣಿಯಲ್ಲಿ ಸಂಚರಿಸುವಾಗ ಅದು ಮಗುಚಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ರಕ್ಷಣಾ ಕಾರ್ಯಾಚರಣೆಯು ಭರದಿಂದ ಸಾಗಿದೆ.

VISTARANEWS.COM


on

Boat Capsize
Koo

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ಜೇಲಂ ನದಿಯಲ್ಲಿ (Jhelum River) ಮಂಗಳವಾರ (ಏಪ್ರಿಲ್‌ 16) ಬೆಳಗ್ಗೆ ದೋಣಿಯೊಂದು ಮುಳುಗಿದ್ದು (Boat Capsize), ನಾಲ್ವರು ಶಾಲಾ ಮಕ್ಕಳು ಸೇರಿ ಹಲವರು ಮಂದಿ ಜಲಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಮಕ್ಕಳು ಸೇರಿ ಹಲವರು ಮಂದಿ ಸಂಚರಿಸುತ್ತಿದ್ದರು. ಇದೇ ವೇಳೆ ದೋಣಿಯು ಮಗುಚಿದೆ. ಹಲವು ಮಂದಿ ನೀರಿನಲ್ಲಿ ಮುಳುಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ (SDRF) ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ನಾಲ್ವರು ಶಾಲಾ ಮಕ್ಕಳು ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಇದುವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿದೆ. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿಂದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ಹಡಗು ಮಗುಚಿದೆ.

ಅಗತ್ಯಕ್ಕಿಂತ ಹೆಚ್ಚಿನ ಜನ ದೋಣಿಯಲ್ಲಿದ್ದ ಕಾರಣ ದುರಂತ ಸಂಭವಿಸಿದೆಯೋ, ನೀರಿನ ಸೆಳವಿಗೆ ಸಿಲುಕಿ ಮಗುಚಿದೆಯೋ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣೆಗೆ ಸ್ಥಳೀಯರೂ ನೆರವು ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಹಡಗು ಮುಳುಗಿ 94 ಜನರ ದುರ್ಮರಣ, 26 ಮಂದಿ ನಾಪತ್ತೆ; ಕಾಲರಾ ಭೀತಿ ತೆಗೆಯಿತು ಪ್ರಾಣ!

Continue Reading

ಪ್ರಮುಖ ಸುದ್ದಿ

Right To Sleep: ನಿದ್ದೆ ಮನುಷ್ಯನ ಹಕ್ಕು, ಯಾರೂ ಕಸಿಯುವಂತಿಲ್ಲ ಎಂದು ಹೈಕೋರ್ಟ್‌ ಆದೇಶ!

Right To Sleep: ಮಹಾರಾಷ್ಟ್ರದಲ್ಲಿ ಇ.ಡಿ ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ತಡೆ (PMLA) ಕಾಯ್ದೆ ಅಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಿ, ರಾತ್ರಿಯಿಡೀ ವಿಚಾರಣೆ ನಡೆಸಿದ್ದರು. ನನ್ನ ನಿದ್ದೆಗೆ ಭಂಗವುಂಟಾಗಿದೆ, ಕಾನೂನುಬಾಹಿರವಾಗಿ ಬಂಧಿಸಲಾಗಿದೆ ಎಂಬುದಾಗಿ ಆರೋಪಿಯು ಕೋರ್ಟ್‌ ಮೊರೆ ಹೋಗಿದ್ದರು. ಹಾಗಾಗಿ ನ್ಯಾಯಾಲಯವು, ನಿದ್ದೆಯ ಮಹತ್ವವನ್ನು ತಿಳಿಸಿ, ವಿಚಾರಣೆ, ದಾಳಿಗೆ ಸಮಯ ನಿಗದಿ ಮಾಡಿಕೊಳ್ಳಿ ಎಂಬುದಾಗಿ ಇ.ಡಿ ಅಧಿಕಾರಿಗಳಿಗೆ ಸೂಚಿಸಿದೆ. ಕೋರ್ಟ್‌ ಸೂಚನೆಯ ಸಾರಾಂಶ ಇಲ್ಲಿದೆ.

VISTARANEWS.COM


on

Right To Sleep
Koo

ಮುಂಬೈ: ‘ನಿದ್ದೆಯೇ ಬುದ್ಧಿಯ ಮೂಲ’ ಎನ್ನುತ್ತಾರೆ. ಬೆಳಗ್ಗೆ 2 ಗಂಟೆ ಬೇಗ ಎದ್ದರೆ ದಿನವಿಡೀ ಆಕಳಿಕೆ, ಬೇಸರ, ಕೆಲಸದಲ್ಲಿ ನಿರಾಸಕ್ತಿ ಮೂಡುತ್ತದೆ. ಸತತವಾಗಿ ನಿದ್ದೆ (Sleeping) ಇಲ್ಲದಿದ್ದರೆ ಮನುಷ್ಯ ಹುಚ್ಚನಾಗುತ್ತಾನೆ ಎಂದು ಕೂಡ ಹೇಳುತ್ತಾರೆ. ಈಗ ಬಾಂಬೆ ಹೈಕೋರ್ಟ್‌ (Bombay High Court) ಕೂಡ ಇದನ್ನೇ ಉಚ್ಚರಿಸಿದೆ. “ನಿದ್ದೆ ಮನುಷ್ಯನ ಹಕ್ಕು (Right To Sleep) ಹಾಗೂ ಮೂಲಭೂತ ಅವಶ್ಯಕತೆಯಾಗಿದೆ. ಯಾರೂ ಇದನ್ನು ಕಸಿಯಬಾರದು” ಎಂಬುದಾಗಿ ಅರ್ಜಿಯೊಂದರ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಯೊಬ್ಬರನ್ನು ರಾತ್ರಿಯಿಡೀ ವಿಚಾರಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ರೇವತಿ ಮೊಹಿತೆ ಹಾಗೂ ಮಂಜೂಷ ದೇಶಪಾಂಡೆ ಅವರು ಈ ಮೇಲಿನಂತೆ ಆದೇಶ ಹೊರಡಿಸಿದ್ದಾರೆ. “ಇ.ಡಿ ಅಧಿಕಾರಿಗಳು ಯಾರನ್ನೇ ಆಗಲಿ ವಿಚಾರಣೆ ನಡೆಸಲು, ಸಮನ್ಸ್‌ ನೀಡಲು, ಅವರ ಮನೆಗೆ ದಾಳಿ ನಡೆಸಿ ಪರಿಶೀಲನೆ ಮಾಡಲು, ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ನಿಯಮಿತ ಸಮಯವನ್ನು ನಿಗದಿಪಡಿಸಿಕೊಳ್ಳಬೇಕು” ಎಂದು ಕೂಡ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.

“ನಿದ್ದೆ ಮನುಷ್ಯನ ಹಕ್ಕಾಗಿದೆ. ಅದೊಂದು ಸಾಮಾನ್ಯ ಅವಶ್ಯಕತೆಯಾಗಿದೆ. ಯಾರಾದರೂ ಮನುಷ್ಯನ ನಿದ್ದೆಯ ಹಕ್ಕನ್ನು ಕಸಿದುಕೊಂಡರೆ, ಆತನ ನಿದ್ದೆಗೆ ಭಂಗ ಮಾಡಿದರೆ ಅದು ಮನುಷ್ಯನ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅದರಲ್ಲೂ, ಇ.ಡಿ ಅಧಿಕಾರಿಗಳು ಹೊತ್ತಲ್ಲದ ಹೊತ್ತಲ್ಲಿ ದಾಳಿ ನಡೆಸಿ, ವಿಚಾರಣೆ ಮಾಡಿದರೆ ಖಂಡಿತವಾಗಿಯೂ ಅವರ ನಿದ್ದೆಗೆ ಭಂಗವುಂಟಾಗುತ್ತದೆ. ಯಾವುದೇ ವ್ಯಕ್ತಿಗೆ ಸರಿಯಾದ ನಿದ್ದೆ ಇಲ್ಲದಿದ್ದರೆ ಆತನ ಮಾನಸಿಕ, ದೈಹಿಕ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತದೆ” ಎಂದು ನ್ಯಾಯಾಲಯವು ಸ್ಪಷ್ಟಪಡಿಸಿತು.

ಏನಿದು ಪ್ರಕರಣ?

ಮಹಾರಾಷ್ಟ್ರದ ಗಾಂಧಿಧಾಮ ನಿವಾಸಿಯಾದ ರಾಮ್‌ ಕೋಟುಮಲ್‌ (64) ಎಂಬುವರನ್ನು ಇ.ಡಿ ಅಧಿಕಾರಿಗಳು 2023ರ ಆಗಸ್ಟ್‌ನಲ್ಲಿ ಬಂಧಿಸಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಅವರನ್ನು ಬಂಧಿಸಿದ್ದರು. ಇ.ಡಿ ಅಧಿಕಾರಿಗಳು ರಾತ್ರಿಯಿಡೀ ಅವರನ್ನು ವಿಚಾರಣೆ ನಡೆಸಿದ್ದರು. ಆರೋಪಿಯು ಶೌಚಾಲಯಕ್ಕೆ ಹೋದರೆ, ಅಲ್ಲಿಯೂ ಅವರಿಗೆ ತೊಂದರೆ ಕೊಟ್ಟಿದ್ದರು. ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುವ ರಾಮ್‌ ಕೋಟುಮಲ್‌ ಅವರ ಬಂಧನವೇ ಕಾನೂನುಬಾಹಿರವಾಗಿದೆ ಎಂಬುದಾಗಿ ಅವರ ಪರ ವಕೀಲರು ಕೋರ್ಟ್‌ನಲ್ಲಿ ವಾದ ಮಂಡಿಸಿದರು. ಆಗ ನ್ಯಾಯಾಲಯವು ಇ.ಡಿ ಅಧಿಕಾರಿಗಳಿಗೆ ಸಮಯ ನಿಗದಿಪಡಿಸಿಕೊಳ್ಳುವಂತೆ ಸೂಚಿಸಿತ್ತು.

ಇದನ್ನೂ ಓದಿ: Robbery Case : ನಿದ್ದೆಗೆ ಜಾರಿದ ಮಾಲೀಕನ ಕೈ-ಕಾಲು ಕಟ್ಟಿ, ಮನೆಯನ್ನೇ ಲೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್‌!

Continue Reading
Advertisement
NEET PG-2024
ಶಿಕ್ಷಣ4 mins ago

NEET PG-2024: ನೀಟ್‌ ಪಿಜಿ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ; ಇಲ್ಲಿದೆ ನೋಂದಣಿ ಮಾಹಿತಿ

Auto Fare in Bengaluru
ಬೆಂಗಳೂರು6 mins ago

Auto Fare : ಮೆಜೆಸ್ಟಿಕ್‌ ಟು ಲಾಲ್‌ಬಾಗ್‌ಗೆ ಆಟೋ ಚಾರ್ಜ್‌ 400 ರೂ; ಸೆಕೆಂಡ್‌ಗೆ 5ರೂ ಏರಿಕೆಗೆ ಪ್ರಯಾಣಿಕ ಕಕ್ಕಾಬಿಕ್ಕಿ

Dinesh Karthik
ಕ್ರೀಡೆ11 mins ago

Dinesh Karthik: ಕಾರ್ತಿಕ್​ಗೆ ಟಿ20 ವಿಶ್ವಕಪ್​ನಲ್ಲಿ ಅವಕಾಶ ನೀಡಿ; ದಿಗ್ಗಜ ಕ್ರಿಕೆಟಿಗರ ಒತ್ತಾಯ

gold rate today tapasi
ಚಿನ್ನದ ದರ14 mins ago

Gold Rate Today: ಏರಿಕೆಯಲ್ಲಿ ದಾಖಲೆ ಬರೆಯುತ್ತಲೇ ಇದೆ ಚಿನ್ನದ ದರ! ಇಂದಿನ ಬೆಲೆ ₹74,130 !

Actor Dwarakish
ಪ್ರಮುಖ ಸುದ್ದಿ21 mins ago

Actor Dwarakish: ಕರುನಾಡ ಕುಳ್ಳ, ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

Theft Case in Bengaluru
ಬೆಂಗಳೂರು39 mins ago

Theft Case : ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

actor prakash Rai
ವೈರಲ್ ನ್ಯೂಸ್1 hour ago

Actor Prakash Rai: “ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ; ನಿರ್ದಿಗಂತಕ್ಕೆ ಹಣದ ಹೊಳೆ!” ಸಿಡಿದೆದ್ದ ಜೆಡಿಎಸ್‌ನಿಂದ ನಟ ಪ್ರಕಾಶ್‌ ರೈಗೆ ಚಾಟಿ

IPL 2024
ಕ್ರೀಡೆ1 hour ago

IPL 2024: ಸ್ಟ್ರೈಕ್ ರೇಟ್​ ಮೂಲಕ ನೂತನ ದಾಖಲೆ ಬರೆದ ಅಬ್ದುಲ್​ ಸಮದ್

Breast Cancer
ಲೈಫ್‌ಸ್ಟೈಲ್1 hour ago

Breast Cancer: ಮಹಿಳೆಯರೇ ಹುಷಾರ್‌; 2040ರ ವೇಳೆಗೆ ಸ್ತನ ಕ್ಯಾನ್ಸರ್‌ಗೆ 10 ಲಕ್ಷ ಜನ ಬಲಿಯಾಗಲಿದ್ದಾರಂತೆ!

BSP Candidates List
ಪ್ರಮುಖ ಸುದ್ದಿ1 hour ago

BSP List: ವಾರಾಣಸಿಯಲ್ಲಿ ಮೋದಿ ವಿರುದ್ಧ ಬಿಎಸ್‌ಪಿ ಅಭ್ಯರ್ಥಿ ಯಾರು? ಗ್ಯಾಂಗ್‌ಸ್ಟರ್‌ ಪತ್ನಿಗೂ ಟಿಕೆಟ್!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ7 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 202424 hours ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌