ಸಾರ್ವಜನಿಕ ಬ್ಯಾಂಕ್‌ ಉದ್ಯೋಗಿಗಳಿಂದ ಜೂನ್‌ 27ರಂದು ಮುಷ್ಕರದ ಬೆದರಿಕೆ - Vistara News

ಪ್ರಮುಖ ಸುದ್ದಿ

ಸಾರ್ವಜನಿಕ ಬ್ಯಾಂಕ್‌ ಉದ್ಯೋಗಿಗಳಿಂದ ಜೂನ್‌ 27ರಂದು ಮುಷ್ಕರದ ಬೆದರಿಕೆ

ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಜೂನ್‌ 27ರಂದು ಮುಷ್ಕರ ನಡೆಸಲು ಉದ್ದೇಶಿಸಿವೆ. ಬ್ಯಾಂಕ್‌ ಸೇವೆಗಳು ಅಂದು ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.

VISTARANEWS.COM


on

bank strike
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ ಉದ್ಯೋಗಿಗಳು ಜೂನ್‌ 27ರ ಸೋಮವಾರ ಮುಷ್ಕರ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ.

ಪಿಂಚಣಿಗೆ ಸಂಬಂಧಿಸಿ ಮತ್ತು ವಾರಕ್ಕೆ 5 ದಿನಗಳ ಕೆಲಸದ ಅವಧಿಯ ಬೇಡಿಕೆ ಮುಂದಿಟ್ಟು ಸಾರ್ವಜನಿಕ ಬ್ಯಾಂಕ್‌ ಉದ್ಯೋಗಿಗಳು ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ.

ಯುನೈಟೆಡ್‌ ಫೋರಮ್‌ ಆಫ್‌ ಬ್ಯಾಂಕ್‌ ಯೂನಿಯನ್‌ (UFBU), 9 ಬ್ಯಾಂಕ್‌ ಯೂನಿಯನ್‌ಗಳ ಒಕ್ಕೂಟ ಆಲ್‌ ಇಂಡಿಯಾ ಬ್ಯಾಂಕ್‌ ಆಫೀಸರ್ಸ್‌ ಕಾನ್ಫಡರೇಷನ್‌ (AIBEA) ಮತ್ತು ನ್ಯಾಷನಲ್‌ ಆರ್ಗನೈಸೇಷನ್‌ ಆಫ್‌ ಬ್ಯಾಂಕ್‌ ವರ್ಕರ್ಸ್‌ ಮುಷ್ಕರಕ್ಕೆ ಕರೆ ನೀಡಿವೆ. ಒಟ್ಟು 7 ಲಕ್ಷ ಉದೈೋಗಿಗಳು ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ಎಐಬಿಒಸಿ ಪ್ರಧಾನ ಕಾರ್ಯದರ್ಶಿ ಸೌಮ್ಯ ದತ್ತ ತಿಳಿಸಿದ್ದಾರೆ.

ಪ್ರಮುಖ ಬೇಡಿಕೆ ಏನು?

  • ಎಲ್ಲ ಪಿಂಚಣಿದಾರರಿಗೆ ಪಿಂಚಣಿ ಪರಿಷ್ಕರಣೆ
  • ಎನ್‌ಪಿಎಸ್‌ ಬದಲಿಗೆ ಹಳೆಯ ಪಿಂಚಣಿ ಯೋಜನೆ ಜಾರಿ

ಇದನ್ನೂ ಓದಿ IDBI Privatisation: ಖಾಸಗಿ ಬ್ಯಾಂಕ್‌ ಜತೆ ಐಡಿಬಿಐ ಬ್ಯಾಂಕ್‌ ವಿಲೀನಕ್ಕೆ ಶೀಘ್ರದಲ್ಲೇ ಅನುಮತಿ ನಿರೀಕ್ಷೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Live News

Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Exit Poll 2024 Live: ಲೋಕಸಭೆ ಚುನಾವಣೆಯು ಕೊನೆಯ ಹಂತಕ್ಕೆ ಬಂದಿದೆ. ಲೋಕಸಭೆ ಚುನಾವಣೆಯ ಏಳನೇ ಹಂತದ ಮತದಾನವೂ ಮುಕ್ತಾಯಗೊಂಡಿದ್ದು, ಎಲ್ಲರ ಗಮನವೀಗ ಮತಗಟ್ಟೆ ಸಮೀಕ್ಷೆಗಳ ಮೇಲಿದೆ. ಮತಗಟ್ಟೆ ಸಮೀಕ್ಷೆಯು ಲೋಕಸಭೆ ಚುನಾವಣೆ ಫಲಿತಾಂಶದ ದಿಕ್ಸೂಚಿ ಎಂದೇ ಹೇಳಲಾಗುತ್ತದೆ. ಹಾಗಾಗಿ, ಮತಗಟ್ಟೆ ಸಮೀಕ್ಷೆಗಳ ಪಿನ್‌ ಟು ಪಿನ್‌ ಮಾಹಿತಿ ಇಲ್ಲಿ ಲಭ್ಯವಿದೆ.

VISTARANEWS.COM


on

Exit Poll Live 2024
Koo

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ, ದೇಶದ ಭವಿಷ್ಯಕ್ಕೆ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯು (Lok Sabha Election 2024) ಮುಕ್ತಾಯಗೊಂಡಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತಗಟ್ಟೆ ಸಮೀಕ್ಷೆಯ ವರದಿಗಳು ಲಭ್ಯವಾಗಲಿವೆ. ಚುನಾವಣೆ ಫಲಿತಾಂಶ ಏನಾಗಬಹುದು? ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರಗಳು ಸಿಗಬಹುದು? ಯಾರು ದೇಶದ ಪ್ರಧಾನಿಯಾಗಬಹುದು ಎಂಬುದಕ್ಕೆ ಮತಗಟ್ಟೆ ಸಮೀಕ್ಷೆಯು ದಿಕ್ಸೂಚಿಯಾಗಿದೆ. ಹಾಗಾಗಿ, ಚುನಾವಣೋತ್ತರ ಸಮೀಕ್ಷೆಯು ಫಲಿತಾಂಶದಷ್ಟೇ ಕುತೂಹಲ ಕೆರಳಿಸಿದೆ. ಈ ಮತಗಟ್ಟೆ ಸಮೀಕ್ಷೆಯ ಕ್ಷಣಕ್ಷಣದ (Exit Poll 2024 Live) ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

Continue Reading

ಪ್ರಮುಖ ಸುದ್ದಿ

Rohit Sharma : ಹಿರಿಯರಿರುವ ತಂಡಕ್ಕಿಂತ ಕಿರಿಯರ ತಂಡವೇ ಬೆಸ್ಟ್​ ಎಂದ ರೋಹಿತ್ ಶರ್ಮಾ; ಯಾಕೆ ಗೊತ್ತಾ?

Rohit Sharma :ಒಲಿ ಪೋಪ್ ಅವರನ್ನು ಔಟ್​ ಮಾಡುವಾಗ ಅವರ ಚಲನೆಯನ್ನು ಮೊದಲು ಗಮನಿಸಿದ್ದು ಯಾರು ಎಂಬ ಪ್ರಶ್ನೆ ಎದ್ದಿತ್ತು. ಪೋಪ್ ಅವರನ್ನು ಔಟ್ ಮಾಡುವ ಮೊದಲು ವಿಕೆಟ್​ ಹಿಂದಿನಿಂದ ಬಂದ ಧ್ವನಿ ಜುರೆಲ್ ಅವರದ್ದು ಎಂದು ಹೇಳಲಾಗಿತ್ತು. ಆದರೆ, ಸರ್ಫರಾಜ್ ಇದಕ್ಕೆ ವ್ಯತಿರಿಕ್ತವಾಗಿ, ಲೆಗ್ ಸ್ಲಿಪ್​ನಲ್ಲಿ ನಿಂತಿದ್ದ ನಾನೇ ಎಚ್ಚರಿಸಿದ್ದೆ ಎಂದು ಹೇಳಿದ್ದರು.

VISTARANEWS.COM


on

Rohit Sharma
Koo

ಬೆಂಗಳೂರು: ಮೂರು ತಿಂಗಳ ಹಿಂದೆ ನಡೆದ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 4-1 ಮುನ್ನಡೆ ಸಾಧಿಸಿತ್ತು. ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಶಮಿ ಅವರಂತಹ ಹಿರಿಯ ಆಟಗಾರರು ವಿವಿಧ ಕಾರಣಗಳಿಂದಾಗಿ ಅಲಭ್ಯರಾಗಿದ್ದರಿಂದ ಸರಣಿಯಲ್ಲಿ ಸಾಕಷ್ಟು ಯುವ ಆಟಗಾರರು ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಸರಣಿಯ ಸಮಯದಲ್ಲಿ ವಿಕೆಟ್ ಕೀಪಿಂಗ್ ಕರ್ತವ್ಯಗಳಿಗಾಗಿ ಧ್ರುವ್ ಜುರೆಲ್ ಅವರನ್ನು ಕ್ರಮವಾಗಿ ಮೂರು, ನಾಲ್ಕನೇ ಮತ್ತು ಐದನೇ ಪಂದ್ಯಕ್ಕೆ ಆಯ್ಕೆಯಾಗಿದ್ದರು. ಆದರೆ, ರೋಹಿತ್ ಶರ್ಮಾ (Rohit Sharma) ನೇತೃತ್ವದ ಬಳಗ ಸರಣಿಯನ್ನು ಸುಲಭವಾಗಿ ವಶಕ್ಕೆ ತೆಗೆದುಕೊಂಡಿತ್ತು.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್ ಅವರ ನಡುವೆ ನಡೆದ ಸ್ಟಂಪಿಂಗ್​ ವಿಚಾರದ ನಡುವಿನ ಚರ್ಚೆ ವ್ಯಾಪಕ ಗಮನ ಸೆಳೆದಿತ್ತು. ಕುಲ್ದೀಪ್ ಯಾದವ್ ಬೌಲಿಂಗ್​ನಲ್ಲಿ ಒಲಿ ಪೋಪ್ ಅವರನ್ನು ಔಟ್​ ಮಾಡುವಾಗ ಅವರ ಚಲನೆಯನ್ನು ಮೊದಲು ಗಮನಿಸಿದ್ದು ಯಾರು ಎಂಬ ಪ್ರಶ್ನೆ ಎದ್ದಿತ್ತು. ಪೋಪ್ ಅವರನ್ನು ಔಟ್ ಮಾಡುವ ಮೊದಲು ವಿಕೆಟ್​ ಹಿಂದಿನಿಂದ ಬಂದ ಧ್ವನಿ ಜುರೆಲ್ ಅವರದ್ದು ಎಂದು ಹೇಳಲಾಗಿತ್ತು. ಆದರೆ, ಸರ್ಫರಾಜ್ ಇದಕ್ಕೆ ವ್ಯತಿರಿಕ್ತವಾಗಿ, ಲೆಗ್ ಸ್ಲಿಪ್​ನಲ್ಲಿ ನಿಂತಿದ್ದ ನಾನೇ ಎಚ್ಚರಿಸಿದ್ದೆ ಎಂದು ಹೇಳಿದ್ದರು.

ಈ ಎಲ್ಲಾ ಗದ್ದಲಗಳ ನಡುವೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿಕೆಟ್ ಪಡೆದ ಆಟಗಾರ ಯಾರು ಬಹಿರಂಗಪಡಿಸಿದ್ದಾರೆ. ಚೆಂಡನ್ನು ಎಸೆಯುವ ಮೊಲದೇ ಔಟ್ ಆಗಿದ್ದನ್ನು ನಿರೀಕ್ಷಿಸಿದ್ದಕ್ಕಾಗಿ ಅವರು ಸರ್ಫರಾಜ್ ಅವರನ್ನು ಶ್ಲಾಘಿಸಿದ್ದರು. ಹೀಗಾಗಿ ವಿಕೆಟ್ ಕೀಪರ್ ಜುರೆಲ್ ಅವರನ್ನು ರೆಡಿಯಾಗಿ ಇರುವಂಥೆ ಎಚ್ಚರಿಸಿದರು. ಈ ಎಲ್ಲ ಸಂದರ್ಭಗಳನ್ನು ಉಲ್ಲೇಖಿಸಿದ ರೋಹಿತ್ ಶರ್ಮಾ. ಭಾರತೀಯ ತಂಡದ ಯುವ ಬ್ಯಾಚ್​ನೊಂದಿಗೆ ಆಡುವುದನ್ನು ಇಷ್ಟಪಡುತ್ತೇನೆ ಎಂದು ಅವರು ಹೇಳಿದ್ದರು. ವಿಶೇಷವೆಂದರೆ ಆ ರೆಡ್-ಬಾಲ್ ಸರಣಿಯಲ್ಲಿ ಆಶ್ಚರ್ಯಕರ ಸಂಖ್ಯೆಯ ಐದು ಆಟಗಾರರು ಭಾರತಕ್ಕಾಗಿ ಪಾದಾರ್ಪಣೆ ಮಾಡಿದ್ದರು.

ಇದನ್ನೂ ಓದಿ: Cristiano Ronaldo: ಕಿಂಗ್ಸ್ ಕಪ್ ಫೈನಲ್​ನಲ್ಲಿ ಸೋಲು; ಬಿಕ್ಕಿ ಬಿಕ್ಕಿ ಅತ್ತ ಕ್ರಿಸ್ಟಿಯಾನೊ ರೊನಾಲ್ಡೊ

ಅಂದಹಾಗೆ, ಆ ಸ್ಟಂಪಿಂಗ್ ಅದ್ಭುತವಾಗಿತ್ತು. ಅದನ್ನು ನಿರೀಕ್ಷಿಸಿದವರ ಸರ್ಫರಾಜ್ ಖಾನ್. ನಾನು ಅವನನ್ನು ಸ್ವಲ್ಪ ಮುಂದೆ ನಿಲ್ಲಿಸಿದ್ದೆ, ಸರ್ಫರಾಜ್​ ಆಗ ಹೇಳಿದ್ದರು ‘ಈಗ, ಅವರು ಕ್ರೀಸ್ ನಿಂದ ಹೊರಹೋಗುತ್ತಾರೆ. ಸ್ಟಂಪಿಂಗ್ ಗೆ ಸಿದ್ಧರಾಗಿರಿ ಎಂದು ಹೇಳಿದ್ದರು. ಈ ರೀತಿಯ ಎಲ್ಲ ಭಾವನೆಗಳೊಂದಿಗೆ ಹುಡುಗರೊಂದಿಗೆ ಆಡುವುದನ್ನು ನಾನು ಸಂಪೂರ್ಣವಾಗಿ ಆನಂದಿಸಿದೆ. ಭವಿಷ್ಯದಲ್ಲಿ ನಾವು ಖುಷಿಯಿಂದ ಆಡುತ್ತೇವೆ ಎಂದು ಆಶಿಸುತ್ತೇವೆ, “ಎಂದು ಶರ್ಮಾ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಹೇಳಿದ್ದಾರೆ.

ಐಪಿಎಲ್​ನಲ್ಲಿ ಒಂದಾದ ರೋಹಿತ್ ಶರ್ಮಾ

ಐಪಿಎಲ್​​ನ 17 ನೇ ಋತುವಿಗೆ ಮುಂಚಿತವಾಗಿ ಭಾರತದ ನಾಯಕ ಮುಂಬೈ ಇಂಡಿಯನ್ಸ್ (ಎಂಐ) ಗಾಗಿ ತಮ್ಮ ಕರ್ತವ್ಯಗಳನ್ನು ವಹಿಸಿಕೊಂಡಿದ್ದಾರೆ. ಆದರೆ ನಾಯಕನಾಗಿ ಅಲ್ಲ. ಅವರ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಯಶಸ್ವಿ ಫ್ರಾಂಚೈಸಿಯ ನಾಯಕರನ್ನಾಗಿ ನೇಮಿಸಲಾಯಿತು. ಪಾಂಡ್ಯ ಅವರನ್ನು ಗುಜರಾತ್ ಟೈಟಾನ್ಸ್ (ಜಿಟಿ) ಮುಂಬೈ ಇಂಡಿಯನ್ಸ್ 15 ಕೋಟಿ ರೂ.ಗೆ ಖರೀದಿಸಿದ ನಂತರ ಈ ಬದಲಾವಣೆ ಮಾಡಲಾಗಿದೆ. ಭಾರತೀಯ ಆಲ್ರೌಂಡರ್ ಗುಜರಾತ್ ತಂಡಕ್ಕೆ 2022 ರಲ್ಲಿ ಐಪಿಎಲ್ ಟ್ರೋಫಿ ಗೆಲ್ಲಿಸಿಕೊಟ್ಟಿದ್ದರು. 2023 ರಲ್ಲಿ ಫೈನಲ್ ತಲುಪುವಲ್ಲಿ ಯಶಸ್ವಿಯಾದರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​ಕೆ) ವಿರುದ್ಧ ಸೋತಿದ್ದರು.

ಆದಾಗ್ಯೂ, ರೋಹಿತ್ ಶರ್ಮಾ ಮುಂಬೈ ತಂಡವನ್ನು ಐದು ಚಾಂಪಿಯನ್ಶಿಪ್ ಪ್ರಶಸ್ತಿಗಳಿಗೆ ಮುನ್ನಡೆಸಿದ ಅಪೇಕ್ಷಣೀಯ ದಾಖಲೆಯನ್ನು ಹೊಂದಿದ್ದಾರೆ, ನಾಯಕನಾಗಿ ಅಷ್ಟೇ ಸಂಖ್ಯೆಯ ಪ್ರಶಸ್ತಿಗಳನ್ನು ಹೊಂದಿರುವ ಎಂಎಸ್ ಧೋನಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ನಂತರ, ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ ಜೂನ್ನಿಂದ ಪ್ರಾರಂಭವಾಗಲಿರುವ ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಏಸ್ ಬ್ಯಾಟ್ಸ್ಮನ್ ಭಾರತೀಯ ತಂಡವನ್ನು ಮುನ್ನಡೆಸಲಿದ್ದಾರೆ.

Continue Reading

ದೇಶ

Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

Exit Poll 2024: ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗೆ ಎರಡು ಗಂಟೆ ಅಷ್ಟೇ ಬಾಕಿ ಉಳಿದಿವೆ. ಎಕ್ಸಿಟ್‌ ಪೋಲ್‌ಗಾಗಿ ದೇಶಕ್ಕೆ ದೇಶವೇ ಕಾಯುತ್ತಿದೆ. ಇದರ ಮಧ್ಯೆಯೇ, ಇದುವರೆಗೆ ಮುಂಬೈ ಸಟ್ಟಾ ಬಜಾರ್‌, ಫಲೋಡಿ ಸಟ್ಟಾ ಬಜಾರ್‌, ಪರಿಣತ ಪ್ರಶಾಂತ್‌ ಕಿಶೋರ್‌ ಸೇರಿ ಹಲವರು ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಬಹುಮತ ಸಿಗಬಹುದು ಎಂಬ ಸಮೀಕ್ಷಾ ವರದಿಯನ್ನು ಪ್ರಕಟಿಸಿವೆ. ತಜ್ಞರು ಅವರ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.

VISTARANEWS.COM


on

Exit Poll 2024
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಕ್ತಾಯದ ಹಂತಕ್ಕೆ ಬಂದಿದೆ. ಶನಿವಾರ (ಜೂನ್‌ 1) ಲೋಕಸಭೆ ಚುನಾವಣೆಯ ಕೊನೆಯ ಅಥವಾ 7ನೇ ಹಂತದ ಮತದಾನ ಮುಕ್ತಾಯವಾಗಲಿದ್ದು, ಇಂದು ಸಂಜೆಯೇ ಮತಗಟ್ಟೆ ಸಮೀಕ್ಷೆಗಳು ಹೊರಬೀಳಲಿವೆ. ಲೋಕಸಭೆ ಚುನಾವಣೆ ಫಲಿತಾಂಶ (Lok Sabha Election Results 2024) ಏನಾಗಬಹುದು, ಯಾವ ಪಕ್ಷಕ್ಕೆ ಹೆಚ್ಚು ಕ್ಷೇತ್ರ ಸಿಗಬಹುದು ಎಂಬುದಕ್ಕೆ ಮತಗಟ್ಟೆ ಸಮೀಕ್ಷೆಗಳು ದಿಕ್ಸೂಚಿಯಾಗಿರುವ ಕಾರಣ ಎಲ್ಲರ ಗಮನ ವರದಿಗಳ ಮೇಲಿದೆ. ಇನ್ನು ಇದುವರೆಗೆ ಫಲೋಡಿ ಸಟ್ಟಾ ಬಜಾರ್‌, ಮುಂಬೈ ಸಟ್ಟಾ ಬಜಾರ್‌, ಚುನಾವಣಾ ತಜ್ಞರಾದ ಪ್ರಶಾಂತ್‌ ಕಿಶೋರ್‌, ಯೋಗೇಂದ್ರ ಯಾದವ್‌ ಸೇರಿ ಹಲವು ಸಮೀಕ್ಷಾ ವರದಿಗಳು, ಅಭಿಪ್ರಾಯಗಳು ಏನಾಗಿದ್ದವು? ಈ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ‌

ಫಲೋಡಿ ಸಟ್ಟಾ ಬಜಾರ್‌ ವರದಿ ಇಲ್ಲಿದೆ

ಫಲೋಡಿ ಸಟ್ಟಾ ಬಜಾರ್‌ ಕೂಡ ಲೋಕಸಭೆ ಚುನಾವಣೆ ಕುರಿತು ಹಲವು ಸಮೀಕ್ಷೆ ವರದಿಗಳನ್ನು ನೀಡಿದೆ. ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

Modi In Karnataka

ರಾಮಮಂದಿರ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 63-65 ಕ್ಷೇತ್ರಗಳು ಲಭಿಸಲಿವೆ ಎಂಬುದಾಗಿ ಸಮೀಕ್ಷೆ ತಿಳಿಸಿದೆ. ಇನ್ನು, ಗುಜರಾತ್‌ 25, ಮಧ್ಯಪ್ರದೇಶ 28-29, ದೆಹಲಿ 5-6, ಪಂಜಾಬ್‌ 2-3, ಹಿಮಾಚಲ ಪ್ರದೇಶ 4, ಛತ್ತೀಸ್‌ಗಢ 10-11, ಉತ್ತರಾಖಂಡ 5, ಬಿಹಾರ 28-29, ತೆಲಂಗಾಣ 8-9, ಜಾರ್ಖಂಡ್‌ 10-11 ಸೀಟುಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ಕಳೆದ ಬಾರಿಗಿಂತ ಹೆಚ್ಚಿನ ಕ್ಷೇತ್ರಗಳು ಬರಲಿವೆ. ಬಿಹಾರ, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಲಿವೆ ಎಂದು ವರದಿ ತಿಳಿಸಿದೆ.

Bharat Jodo Yatra By Rahul Gandhi

ಮುಂಬೈ ಸಟ್ಟಾ ಬಜಾರ್

ಮುಂಬೈ ಸಟ್ಟಾ ಬಜಾರ್‌ ವರದಿ ಪ್ರಕಾರ, ಚುನಾವಣೆಯಲ್ಲಿ ಬಿಜೆಪಿಯು 295-305 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ ಈ ಬಾರಿ 55-65 ಕ್ಷೇತ್ರಗಳಲ್ಲಿ ಮಾತ್ರ ಜಯಿಸಲಿದೆ. ಇನ್ನು, ರಾಮಮಂದಿರ ಕಾರಣದಿಂದ ಬಿಜೆಪಿಗೆ ಪ್ರಮುಖವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 64-66 ಕ್ಷೇತ್ರಗಳು ಲಭಿಸಲಿವೆ ಎಂದು ವರದಿ ತಿಳಿಸಿದೆ. ಇದಕ್ಕೂ ಮೊದಲು ಮುಂಬೈ ಸಟ್ಟಾ ಬಜಾರ್‌ ಸಮೀಕ್ಷೆಯು ಬಿಜೆಪಿ 270-280 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದರೆ, ಕಾಂಗ್ರೆಸ್‌ 70-80 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂದು ತಿಳಿಸಿತ್ತು.

ಪ್ರಶಾಂತ್‌ ಕಿಶೋರ್

ಚುನಾವಣೆ ತಜ್ಞ, ರಾಜಕೀಯ ಪರಿಣತರಾದ ಪ್ರಶಾಂತ್‌ ಕಿಶೋರ್‌ ಅವರು ಕೂಡ ದೇಶದಲ್ಲಿ ಮೋದಿ ಹ್ಯಾಟ್ರಿಕ್‌ ಗಳಿಸಲಿದ್ದಾರೆ ಎಂದು ಹೇಳಿದ್ದಾರೆ. “ದೇಶದಲ್ಲಿ ನರೇಂದ್ರ ಮೋದಿ ಅವರ ವರ್ಚಸ್ಸು ಕಡಿಮೆಯಾದರೂ ಜನಕ್ಕೆ ಅವರ ಮೇಲೆ ಸಿಟ್ಟಿಲ್ಲ. ಹಾಗಾಗಿ, ಬಿಜೆಪಿ 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ” ಎಂದು ತಿಳಿಸಿದ್ದಾರೆ. ಹಾಗೆಯೇ, ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

prashant kishor

ಯೋಗೇಂದ್ರ ಯಾದವ್

ಬಿಜೆಪಿಯು ಮತ್ತೊಂದು ಸಾರ್ವತ್ರಿಕ ಚುನಾವಣೆಯ ವಿಜಯವನ್ನು ಪಡೆಯುತ್ತದೆ ಎಂದು ಚುನಾವಣಾ ರಣತಂತ್ರಗಾರ ಯೋಗೇಂದ್ರ ಯಾದವ್‌ ಅವರು ಭವಿಷ್ಯ ನುಡಿದಿದ್ದಾರೆ. ಭಾರತೀಯ ಜನತಾ ಪಕ್ಷದ ಪರವಾಗಿ ತಮ್ಮ ಭವಿಷ್ಯವಾಣಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ಯಾದವ್‌ ಅಚ್ಚರಿ ಮೂಡಿಸಿದ್ದಾರೆ. ಯಾದವ್ ಪ್ರಕಾರ ಬಿಜೆಪಿ 240-260 ಸ್ಥಾನಗಳನ್ನು ಮತ್ತು ಅದರ ಮಿತ್ರಪಕ್ಷಗಳು 34-45 ಸ್ಥಾನಗಳನ್ನು ಗೆಲ್ಲಬಹುದು. ಅಂದರೆ ಎನ್‌ಡಿಎ (NDA) ಒಟ್ಟು 275 ಮತ್ತು 305 ಸ್ಥಾನಗಳ ನಡುವೆ ಸುಳಿದಾಡಬಹುದು.

ಅಮೆರಿಕ ರಾಜಕೀಯ ತಜ್ಞ ಇಯಾನ್‌ ಬ್ರೆಮ್ಮರ್

ಬಿಜೆಪಿ 295ರಿಂದ 315 ಸ್ಥಾನಗಳನ್ನು ಗೆಲ್ಲಬಹುದು ಎಂದು ಅಮೆರಿಕದ ರಾಜಕೀಯ ತಜ್ಞ ಇಯಾನ್ ಬ್ರೆಮ್ಮರ್ ತಿಳಿಸಿದ್ದಾರೆ. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 303 ಲೋಕಸಭಾ ಸ್ಥಾನಗಳನ್ನು ಗೆದ್ದು, ಹಿಂದಿ ಹೃದಯ ರಾಜ್ಯಗಳಲ್ಲಿ ʼಮೋದಿ ಅಲೆ’ಯ ಮೇಲೆ ಸವಾರಿ ಮಾಡಿತ್ತು. 370 ಸೀಟುಗಳನ್ನು ಗೆಲ್ಲಬೇಕಾದರೆ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಪಕ್ಷಕ್ಕೆ ಭರ್ಜರಿ ಜಯಗಳಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: Modi Meditation: ಕನ್ಯಾಕುಮಾರಿಯಲ್ಲಿ ಧ್ಯಾನಾಸಕ್ತ ಪ್ರಧಾನಿ ಮೋದಿಯಿಂದ ಸೂರ್ಯ ವಂದನೆ; ವಿಡಿಯೊ ನೋಡಿ

Continue Reading

ಪ್ರಮುಖ ಸುದ್ದಿ

Lok Sabha Election 2024: ಈಗಲೂ ಹೇಳ್ತೇನೆ ಕೇಳಿ, ಬಿಜೆಪಿಯೇ ಗೆಲ್ಲೋದು! ಎಕ್ಸಿಟ್ ಪೋಲ್‌ಗೆ ಮೊದಲು ಪ್ರಶಾಂತ್ ಕಿಶೋರ್ ಫೈನಲ್ ಲೆಕ್ಕಾಚಾರ ಹೀಗಿದೆ!

Lok Sabha Election 2024: ಮತ್ತೊಮ್ಮೆ ಬಿಜೆಪಿ 303 ಸ್ಥಾನಗಳನ್ನು ಗೆಲ್ಲಬಹುದು ಎಂದು ಪ್ರಶಾಂತ್‌ ಕಿಶೋರ್‌ ಅವರು ಮತ್ತೆ ಭವಿಷ್ಯ ನುಡಿದಿದ್ದಾರೆ. ಇದು 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಗೆದ್ದಿರುವ ಸ್ಥಾನಗಳ ಸಂಖ್ಯೆ ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು.

VISTARANEWS.COM


on

prashant kishor
Koo

ಹೊಸದಿಲ್ಲಿ: ಎಕ್ಸಿಟ್ ಪೋಲ್ 2024ರ (Exit poll 2024) ಫಲಿತಾಂಶಗಳ ಬಿಡುಗಡೆಗೆ ಕೆಲವೇ ಗಂಟೆಗಳ ಮೊದಲು, ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಗೆಲುವು ಖಚಿತ ಎಂದು ಚುನಾವಣಾ ವ್ಯೂಹಚತುರ ಪ್ರಶಾಂತ್ ಕಿಶೋರ್ (Prashant Kishor) ಪುನರುಚ್ಚರಿಸಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಭಾರತೀಯ ಜನತಾ ಪಾರ್ಟಿ (BJP) ನೇತೃತ್ವದ ಎನ್‌ಡಿಎ (NDA) ಕಾರ್ಯಕ್ಷಮತೆಯ ಬಗ್ಗೆ ತಮ್ಮ ಭವಿಷ್ಯವನ್ನು ಮತ್ತೆ ಒತ್ತಿ ಹೇಳಿದ್ದಾರೆ.

ಮತ್ತೊಮ್ಮೆ ಬಿಜೆಪಿ 303 ಸ್ಥಾನಗಳನ್ನು ಗೆಲ್ಲಬಹುದು ಎಂದು ಅವರು ಭವಿಷ್ಯ ನುಡಿದಿದ್ದಾರೆ. ಇದು 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಗೆದ್ದಿರುವ ಸ್ಥಾನಗಳ ಸಂಖ್ಯೆ ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು. “ನನ್ನ ಅಂದಾಜಿನ ಪ್ರಕಾರ, ಬಿಜೆಪಿ ಹಿಂದಿನ ಅಥವಾ ಸ್ವಲ್ಪ ಹೆಚ್ಚಿನ ಸಂಖ್ಯೆಗಳೊಂದಿಗೆ ಅಧಿಕಾರಕ್ಕೆ ಹಿಂತಿರುಗಲಿದೆ. ಪಶ್ಚಿಮ ಮತ್ತು ಉತ್ತರ ಭಾರತದಲ್ಲಿ ಸ್ಥಾನಗಳ ಸಂಖ್ಯೆಯಲ್ಲಿ ಗಮನಾರ್ಹ ಬದಲಾವಣೆ ಆಗದು. ಆದರೆ ಭಾರತದ ಪೂರ್ವ ಮತ್ತು ದಕ್ಷಿಣ ಪ್ರದೇಶಗಳಿಂದ ಪಕ್ಷವು ಸಾಕಷ್ಟು ಬೆಂಬಲ ಗಳಿಸಲಿದೆ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಜೂನ್ 1ರ ಶನಿವಾರ ಸಾರ್ವತ್ರಿಕ ಚುನಾವಣೆಯ 7ನೇ ಹಂತದ ಮತದಾನದ ಮುಕ್ತಾಯದ ನಂತರ, ಹಲವಾರು ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ ವಾಹಿನಿಗಳು, ಚುನಾವಣಾ ಸಮೀಕ್ಷೆ ಏಜೆನ್ಸಿಗಳೊಂದಿಗೆ ತಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಸಂಜೆ 6.30ರ ಸುಮಾರಿಗೆ ಬಿಡುಗಡೆ ಮಾಡಲು ಸಿದ್ಧವಾಗಿವೆ.

ಪ್ರಶಾಂತ್ ಕಿಶೋರ್ ಅವರು ಪೂರ್ವ ಮತ್ತು ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿಜೆಪಿಯ ಸ್ಥಾನಗಳ ಸಂಖ್ಯೆ ಮತ್ತು ಮತ ಹಂಚಿಕೆಯಲ್ಲಿ ಸಂಭಾವ್ಯ ಏರಿಕೆಯನ್ನು ಸೂಚಿಸಿದ್ದಾರೆ. ತೆಲಂಗಾಣ, ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡುಗಳಲ್ಲಿ ತನ್ನ ಅಸ್ತಿತ್ವವನ್ನು ಪಕ್ಷ ಹೆಚ್ಚಿಸಿಕೊಂಡಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಬಗ್ಗೆ ಯಾವುದೇ ಗಮನಾರ್ಹ ಅತೃಪ್ತಿ ಇಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಪರ್ಯಾಯಕ್ಕಾಗಿ ಬಲವಾದ ಬೇಡಿಕೆ ಇಲ್ಲ ಎಂದು ರಾಜಕೀಯ ತಂತ್ರಜ್ಞ ಪಿಕೆ ಈ ಹಿಂದೆ ಹೇಳಿಕೊಂಡಿದ್ದರು. ಕೇಸರಿ ಪಕ್ಷದ ಸ್ಥಾನಗಳ ಸಂಖ್ಯೆ 2019ರ ಲೆಕ್ಕಾಚಾರಕ್ಕೆ (303) ಹತ್ತಿರವಾಗಬಹುದು ಅಥವಾ ಮೀರಬಹುದು ಎಂದು ಭವಿಷ್ಯ ನುಡಿದಿದ್ದರು.

“ನಾವು ಕೆಲವು ಮೂಲಭೂತ ಅಂಶಗಳನ್ನು ನೋಡಬೇಕು. ಅಧಿಕಾರದಲ್ಲಿರುವ ಸರ್ಕಾರ ಮತ್ತು ಅದರ ನಾಯಕನ ವಿರುದ್ಧ ಕೋಪವಿದ್ದರೆ, ಪರ್ಯಾಯವಿದೆಯೇ ಎಂಬುದನ್ನು ಲೆಕ್ಕಿಸದೆ, ಜನರು ಅವರ ವಿರುದ್ಧ ಮತ ಹಾಕುವ ಸಾಧ್ಯತೆಯಿದೆ. ಆದರೆ ಇಲ್ಲಿಯವರೆಗೆ ಅಂಥ ಅಲೆಯನ್ನು ನಾವು ಕಂಡಿಲ್ಲ. ಮೋದಿಜಿ ವಿರುದ್ಧ ವ್ಯಾಪಕವಾದ ನಿರಾಶೆ, ಈಡೇರದ ಆಕಾಂಕ್ಷೆಗಳು ಇರಬಹುದು, ಆದರೆ ವ್ಯಾಪಕವಾದ ಕೋಪವನ್ನು ನಾವು ಕೇಳಿಲ್ಲ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಶನಿವಾರದ ಮತದಾನದೊಂದಿಗೆ, ಏಪ್ರಿಲ್ 19ರಂದು ಪ್ರಾರಂಭವಾದ ಮ್ಯಾರಥಾನ್ ಸರಣಿ ಮತದಾನದ ಪ್ರಕ್ರಿಯೆ ಮುಗಿಯುತ್ತಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ಅಸೆಂಬ್ಲಿಗಳು ಸಹ ಚುನಾವಣೆಗೆ ಹೋಗಿವೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಜೂನ್ 2ರಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ.

ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜವಾಬ್ದಾರಿಯಿಂದ ಮತ್ತು ಹೆಮ್ಮೆಯಿಂದ ಮತ ಚಲಾಯಿಸುವಂತೆ ಚುನಾವಣಾ ಆಯೋಗ ಕರೆ ನೀಡಿದೆ. ಸಾರ್ವತ್ರಿಕ ಚುನಾವಣೆಯ ಮೊದಲ ಆರು ಹಂತಗಳಲ್ಲಿ ಕ್ರಮವಾಗಿ ಶೇ.66.14, ಶೇ.66.71, ಶೇ.65.68, ಶೇ.69.16, ಶೇ.62.2, ಮತ್ತು ಶೇ.63.36ರಷ್ಟು ಮತದಾನವಾಗಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ, ದೂರದರ್ಶನ ಚಾನೆಲ್‌ಗಳು ಮತ್ತು ಸುದ್ದಿವಾಹಿನಿಗಳು ಸಂಜೆ 6.30ರ ನಂತರ ಎಕ್ಸಿಟ್ ಪೋಲ್ ಡೇಟಾವನ್ನು ಮತ್ತು ಅದರ ಫಲಿತಾಂಶಗಳನ್ನು ಪ್ರಕಟಿಸಲಿವೆ.

ಇದನ್ನೂ ಓದಿ: Lok Sabha Election: ಪ್ರಶಾಂತ್‌ ಕಿಶೋರ್‌ ಬಳಿಕ ಯೋಗೇಂದ್ರ ಯಾದವ್‌ ಕೂಡ ಮೋದಿ ಮತ್ತೊಮ್ಮೆ ಪ್ರಧಾನಿ ಖಚಿತ ಅಂತಿದ್ದಾರೆ!

Continue Reading
Advertisement
Exit Poll Live 2024
Live News1 min ago

Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Shah Rukh Khan shooting for King in Spain
ಬಾಲಿವುಡ್13 mins ago

Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

Liquor ban
ಬೆಂಗಳೂರು22 mins ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

IPL 2025 Mega Auction
ಕ್ರೀಡೆ25 mins ago

IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

Rohit Sharma
ಪ್ರಮುಖ ಸುದ್ದಿ29 mins ago

Rohit Sharma : ಹಿರಿಯರಿರುವ ತಂಡಕ್ಕಿಂತ ಕಿರಿಯರ ತಂಡವೇ ಬೆಸ್ಟ್​ ಎಂದ ರೋಹಿತ್ ಶರ್ಮಾ; ಯಾಕೆ ಗೊತ್ತಾ?

Exit Poll 2024
ದೇಶ41 mins ago

Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

POK
ವಿದೇಶ41 mins ago

POK: ಪಿಒಕೆ ತನ್ನ ಭಾಗವಲ್ಲ ಎಂದು ಅಧಿಕೃತವಾಗಿಯೇ ಒಪ್ಪಿಕೊಂಡ ಪಾಕಿಸ್ತಾನ!

Kichcha Sudeep joined hands with Sandesh
ಸ್ಯಾಂಡಲ್ ವುಡ್49 mins ago

Kiccha Sudeep: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Prajwal Revanna Case
ಕರ್ನಾಟಕ1 hour ago

Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

Cow Smuggling
ಕ್ರೈಂ2 hours ago

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು22 mins ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌