Best Credit Cards For Students : ವಿದ್ಯಾರ್ಥಿಗಳಿಗೆ ಬೆಸ್ಟ್‌ ಕ್ರೆಡಿಟ್‌ ಕಾರ್ಡ್‌ ಯಾವುದು? ಇಲ್ಲಿದೆ ಡಿಟೇಲ್ಸ್ Vistara News
Connect with us

ಪ್ರಮುಖ ಸುದ್ದಿ

Best Credit Cards For Students : ವಿದ್ಯಾರ್ಥಿಗಳಿಗೆ ಬೆಸ್ಟ್‌ ಕ್ರೆಡಿಟ್‌ ಕಾರ್ಡ್‌ ಯಾವುದು? ಇಲ್ಲಿದೆ ಡಿಟೇಲ್ಸ್

Best Credit Cards For Students ವಿದ್ಯಾರ್ಥಿಗಳು ಕ್ರೆಡಿಟ್‌ ಕಾರ್ಡ್‌ ಪಡೆಯುವುದು ಹೇಗೆ? ಅದನ್ನು ನಿರ್ವಹಿಸುವುದು ಹೇಗೆ? ಈ ಎಲ್ಲ ಮಾಹಿತಿಗಳಿಗೆ ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

credit cards
Koo

ವಿದ್ಯಾರ್ಥಿಗಳು ಒಂದುವೇಳೆ ಕ್ರೆಡಿಟ್‌ ಕಾರ್ಡ್‌ ಅನ್ನು ಪಡೆದುಕೊಳ್ಳುವುದು ಹೇಗೆ? ಏಕೆಂದರೆ ಅವರಿಗೆ ಆದಾಯ ಮೂಲ ಇರುವುದಿಲ್ಲ, ಹಾಗಾದರೆ ಕ್ರೆಡಿಟ್‌ ಕಾರ್ಡ್‌ ಸೌಲಭ್ಯಗಳನ್ನು ಪಡೆಯುವುದು ಹೇಗೆ? ಇದಕ್ಕೂ ಹಲವು ದಾರಿಗಳಿವೆ. ವಿಸ್ತಾರ ಮನಿ ಪ್ಲಸ್‌ನಲ್ಲಿ ಈ ಬಗ್ಗೆ ಸಕಲ ಮಾಹಿತಿ ಮತ್ತು ವಿಶ್ಲೇಷಣೆಯನ್ನು (Best Credit Cards For Students) ನೀಡಲಾಗಿದೆ.

ಕಾಲೇಜು ವಿದ್ಯಾರ್ಥಿಗಳಲ್ಲಿ ಅನೇಕ ಮಂದಿ ಕ್ರೆಡಿಟ್‌ ಕಾರ್ಡ್‌ ಪಡೆಯಲು ಹೋಗಿ ಕೈಸುಟ್ಟುಮಾಡಿಕೊಂಡಿದ್ದಾರೆ. ಮಾತ್ರವಲ್ಲದೆ ಕ್ರೆಡಿಟ್‌ ಸ್ಕೋರ್‌ ಅನ್ನೂ ಕಳೆದುಕೊಂಡಿದ್ದಾರೆ. ಪೋಷಕರು ಮಕ್ಕಳಿಗೆ ಕ್ರೆಡಿಟ್‌ ಕಾರ್ಡ್‌ ಕೊಡುವಾಗ ಯಾವೆಲ್ಲ ಎಚ್ಚರಿಕೆ ವಹಿಸಬೇಕು? ಈ ಎಲ್ಲ ಮಾಹಿತಿಗಳನ್ನು ವಿಸ್ತಾರ ನ್ಯೂಸ್‌ನ ಎಕ್ಸಿಕ್ಯುಟಿವ್‌ ಎಡಿಟರ್‌ ಆಗಿರುವ ಶರತ್‌ ಎಂ.ಎಸ್‌ ಅವರು ಈ ವಿಡಿಯೊದಲ್ಲಿ ವಿವರಿಸಿದ್ದಾರೆ.

ನಿಮಗೆ ಗೊತ್ತಿದೆಯೇ, ವಿವೇಚನಾ ರಹಿತವಾಗಿ, ಬೇಕಾಬಿಟ್ಟಿಯಾಗಿ, ಸುಮ್ಮಸುಮ್ಮನೆ ಕ್ರೆಡಿಟ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೆ, ಕ್ರೆಡಿಟ್‌ ಸ್ಕೋರ್‌ ಕುಸಿಯುತ್ತದೆ. ಹಾಗಾದರೆ ವಿದ್ಯಾರ್ಥಿಗಳಿಗೆ ಬೇಕಾದ ಅರ್ಹತೆ ಏನು ಎಂಬುದನ್ನು ಶರತ್‌ ಅವರು ವಿವರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

Monsoon Travel: ಮಲೆನಾಡಿನ ಮಳೆಹಾಡಿನ ಹೊಸತನ! ರಾಜ್ಯದ ಈ ಟಾಪ್‌ 5 ತಾಣಗಳಿಗೆ ಮಳೆಯಲ್ಲೊಮ್ಮೆ ಭೇಟಿ ಕೊಡಿ

ನೀವು ಈ ಸ್ಥಳಗಳನ್ನು ನೋಡಿರುವಿರಾದರೂ, ಮಳೆಗಾಲದಲ್ಲೊಮ್ಮೆ ಮತ್ತೊಮ್ಮೆ ಹೋಗಿ ನೋಡಿ, ಇದು ಅದೇ ಜಾಗ ಹೌದೋ ಅಲ್ಲವೋ ಎಂಬಷ್ಟು ವ್ಯತ್ಯಾಸ ನೀವು ಗುರುತಿಸುತ್ತೀರಿ. ಮಳೆಯನ್ನು ಇಷ್ಟಪಡುವ ಎಲ್ಲರೂ ಮಳೆಗಾಲದಲ್ಲಿ ಮಲೆನಾಡನ್ನು ನೋಡಬೇಕು.

VISTARANEWS.COM


on

Edited by

western ghats in rain
Koo

ಮಳೆಗಾಲದ ಪ್ರವಾಸ ಎಂದರೆ ಮೈಮನಗಳಿಗೆ ತಾಜಾತನದ ಅನುಭೂತಿ. ಜೂನ್‌ ಬಂತೆಂದರೆ ಆಕಾಶ ಕಪ್ಪಿಟ್ಟು ಧೋ ಎಂದು ಸುರಿವ ಮಳೆಯನ್ನು ಕಾರಿನಲ್ಲಿ ತಿರುವು ಮುರುವಿನ ರಸ್ತೆಯಲ್ಲಿ ಕಾರು ಚಲಾಯಿಸುತ್ತಲೋ, ಅಥವಾ ಹೋಂ ಸ್ಟೇಯೊಂದರಲ್ಲಿ ಕೂತು, ಮಳೆಯನ್ನು ನೋಡುತ್ತಾ ಕೂರುವುದೋ ಅಥವಾ ಸುರಿದ ಮಳೆ ಬಿಟ್ಟು ಹೋದ ತಂಪಿನಲ್ಲಿ ಕಾಡಿನುದ್ದಕ್ಕೂ ಹೆಜ್ಜೆ ಹಾಕುವುದರಲ್ಲೋ ಆನಂದವಿದೆ. ಮಳೆಯನ್ನು ಪ್ರೀತಿಸುವ ಪ್ರತಿಯೊಂದು ಜೀವವೂ ಮಳೆಗಾಲದ ಪ್ರವಾಸವನ್ನು ಪ್ರೀತಿಸದೆ ಇರಲು ಸಾಧ್ಯವೇ ಇಲ್ಲ.

ಮಲೆನಾಡು ಹೆಸರೇ ಹೇಳುವಂತೆ ಮಲೆಗಳ ನಾಡು. ಇವು ಮಳೆಗಾಲದಲ್ಲಿ ಮಾತ್ರವಲ್ಲ, ಸರ್ವ ಕಾಲದಲ್ಲೂ ಹಸಿರಾಗಿ ಕಂಗೊಳಿಸುವ ಊರುಗಳು. ಇನ್ನು ಮಳೆಗಾಲ ಹೇಗಿರಬಹುದು ಎಂದು ಯಾರೂ ಕೂಡಾ ಊಹಿಸಬಹುದು. ಮಳೆಗಾಲದಲ್ಲಿ ಜಿಟಿಜಿಟಿ ಮಳೆಯ ಸದ್ದನ್ನೇ ದಿನವೂ ಕೇಳಬಹುದಾದ ಚಂದನೆಯ ಹಚ್ಚ ಹಸಿರು ಪಚ್ಚೆಪೈರಿನ ಊರುಗಳನ್ನು ಹೊಂದಿರುವ ಮಲೆನಾಡಿನಲ್ಲಿ ಸಾಕಷ್ಟು ಪ್ರವಾಸೀ ತಾಣಗಳೂ ಇವೆ. ಬಹುತೇಕ ಪ್ರವಾಸಿ ತಾಣಗಳನ್ನು ಮಳೆಗಾಲದಲ್ಲಿ ನೋಡುವ ಸೊಗಸೇ ಬೇರೆ. ನೀವು ಈ ಸ್ಥಳಗಳನ್ನು ನೋಡಿರುವಿರಾದರೂ, ಮಳೆಗಾಲದಲ್ಲೊಮ್ಮೆ ಮತ್ತೊಮ್ಮೆ ಹೋಗಿ ನೋಡಿ, ಇದು ಅದೇ ಜಾಗ ಹೌದೋ ಅಲ್ಲವೋ ಎಂಬಷ್ಟು ವ್ಯತ್ಯಾಸ ನೀವು ಗುರುತಿಸುತ್ತೀರಿ. ಮಳೆಯನ್ನು ಇಷ್ಟಪಡುವ ಎಲ್ಲರೂ ಮಳೆಗಾಲದಲ್ಲಿ ಮಲೆನಾಡನ್ನು ನೋಡಬೇಕು.

sakrebailu elephant camp

1. ಸಕ್ರೆಬೈಲು ಆನೆ ಶಿಬಿರ: ಶಿವಮೊಗ್ಗದಿಂದ 14 ಕಿಮೀ ದೂರದಲ್ಲಿರುವ ಸಕ್ರೆಬೈಲು ಆನೆ ಶಿಬಿರ ಹಲವು ಆನೆಗಳಿಗಿಗೆ ತವರು. ಇಲ್ಲಿ ತರಬೇತಿ ಪಡೆದ ಆನೆಗಳನ್ನೂ, ಆನೆ ಮರಿಗಳನ್ನೂ ನೋಡುವುದಷ್ಟೇ ಅಲ್ಲ, ಇಲ್ಲಿ ತುಂಬಿ ಹರಿವ ತುಂಗೆಯಲ್ಲಿ ಆನೆ ಸ್ನಾನ ಮಾಡುವ ಸೊಬಗನ್ನೂ ನೋಡಬಹುದು. ಮಳೆಗಾಲದಲ್ಲಿ, ಸಕ್ರೆಬೈಲು ಹಾಗೂ ಸುತ್ತಮುತ್ತಲ ಕಾಡಿನ ಪರಿಸರ ಅದ್ಭುತವಾಗಿ ಕಾಣಿಸುವುದಷ್ಟೇ ಅಲ್ಲ, ಇಲ್ಲಿಗೆ ಹೋಗುವ ದಾರಿಯೂ ಒಂದು ಅನುಭವವೇ. ರಸ್ತೆಯ ಇಕ್ಕೆಲಗಳಲ್ಲಿರುವ ಗದ್ದೆ, ಮಳೆಗಾಲ ಶುರುವಾಗುವ ಹೊತ್ತಿನಲ್ಲಿ ರೈತರು ಪೈರು ನೆಡುವ ಸಂಭ್ರಮ, ಮುಂಜಾವಿನಲ್ಲಿ ಮಂಜು ಮುಸುಕಿದ ಪ್ರಕೃತಿ ಇವೆಲ್ಲ ನೋಡುತ್ತಾ ಪ್ರವಾಸ ಮಾಡುವ ಅನುಭವವೇ ಜೀವನದ ಅತ್ಯಂತ ಸಂತಸಾಯಕ ಅನುಭವಗಳಲ್ಲೊಂದಾಗಬಹುದು.

kuppalli in rain

2. ಕುಪ್ಪಳ್ಳಿ: ನಮ್ಮ ನಾಡಗೀತೆಯನ್ನು ರಚಿಸಿದ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಅವರನ್ನು ನಾವು ಪ್ರೀತಿಯಿಂದ ಸ್ಮರಿಸಿದಾಗಲೆಲ್ಲ ನೆನಪಾಗುವುದು ಕುಪ್ಪಳ್ಳಿ. ಕುಪ್ಪಳ್ಳಿ ಕುವೆಂಪು ಅವರ ತವರು. ಕುವೆಂಪು ಕೃತಿಗಳಲ್ಲಿ ಮಲೆನಾಡಿನ ಸೊಬಗಿನ ಕುರಿತಾದ ವರ್ಣನೆಯನ್ನು ಕೇಳಿದವರಿಗೆಲ್ಲ, ಕುಪ್ಪಳ್ಳಿಯನ್ನು ನೋಡಬೇಕೆಂಬ ತವಕ ಇಲ್ಲದೆ ಇರದು. ಮಳೆಗಾಲದಲ್ಲಿ ಮಲೆನಾಡಿನ ಕುಪ್ಪಳ್ಳಿಯನ್ನು ನೋಡಲು ಸಕಾಲ. ಶಿವಮೊಗ್ಗದಿಂದ 66 ಕಿಮೀ ದೂರದಲ್ಲಿರುವ ಕುಪ್ಪಳ್ಳಿಯಲ್ಲಿ ಕುವೆಂಪು ಅವರ ಮನೆಯನ್ನೂ, ಕವಿಶೈಲವನ್ನೂ ನೋಡಿ, ಆಗುಂಬೆಯ ಸೊಬಗನ್ನೂ ಸವಿದು ಜೋಗ ಜಲಪಾತ, ಲಿಂಗನಮಕ್ಕಿ ಹಿನ್ನೀರು, ಕುಂದಾದ್ರಿ ಬೆಟ್ಟ ಇತ್ಯಾದಿಗಳನ್ನೆಲ್ಲ ನೋಡಿ ಬರಬಹುದು.

kandlavana in honnavara

3. ಹೊನ್ನಾವರ ಕಾಂಡ್ಲಾವನ: ಹೊನ್ನಾವರದ ಶರಾವತಿ ಕಾಂಡ್ಲಾವನ ಇತ್ತೀಚೆಗೆ ಭಾರೀ ಪ್ರಸಿದ್ಧಿ ಪಡೆದಿರುವ ಚಂದನೆಯ ಪ್ರವಾಸೀ ತಾಣಗಳಲ್ಲೊಂದು. ಶರಾವತಿ ಹಿನ್ನೀರಿನಲ್ಲಿ ಕಾಂಡ್ಲಾ ಮಳೆಕಾಡುಗಳನ್ನು ನೋಡಲು ನಿರ್ಮಿತವಾದ ನಡೆದು ಸಾಗಬಹುದಾದ ಮರದ ಸೇತುವೆಯ ಮೂಲಕ ಸಾಗುತ್ತಾ ಕಾಂಡ್ಲಾವನದ ಸೊಬಗನ್ನು ಸವಿಯಬಹುದು. ಶರಾವತಿ ಹಿನ್ನೀರಿನಲ್ಲಿ ಬೋಟಿಂಗ್‌ ಕೂಡಾ ಮಾಡಬಹುದು.

manjarabad port in sakaleshpura

4. ಮಂಜರಾಬಾದ್‌ ಕೋಟೆ: ಕನ್ನಡದ ಹಲವು ಸಿನಿಮಾಗಳ ಹಾಡುಗಳಲ್ಲಿ ಬಂದು ಹೋಗಿರುವ ಈ ಕೋಟೆಯನ್ನು ಮಳೆಗಾಲದಲ್ಲಿ ನೋಡುವುದೇ ಸೊಗಸು. ೧೭೯೨ರಲ್ಲಿ ಟಿಪ್ಪು ಸುಲ್ತಾನ್‌ ಕಟ್ಟಿಸಿದ ಈ ಕೋಟೆ ನಕ್ಷತ್ರಾಕಾರದಲ್ಲಿರುವುದರಿಂದ ಗಮನ ಸೆಳೆಯುತ್ತದೆ. ಸಕಲೇಶಪುರಿಂದ ೬ ಕಿಮೀ ದೂರದಲ್ಲಿರುವ ಈ ಕೋಟೆ ಮಳೆಗಾಲದಲ್ಲಿ ನೋಡಲೇಬೇಕಾದ ಸುಂದರ ತಾಣ.

dandeli kali river in rain

5. ದಾಂಡೇಲಿ: ಮಳೆಗಾಲದಲ್ಲಿ ನೋಡಲೇಬೇಕಾದ ಇನ್ನೊಂದು ಅದ್ಭುತ ಸ್ಥಳ ಎಂದರೆ ಅದು ಉತ್ತರಕನ್ನಡ ಜಿಲ್ಲೆಯಲ್ಲಿರುವ ದಾಂಡೇಲಿ. ಕಾಳೀ ನದೀ ತೀರದಲ್ಲಿರುವ ದಾಂಡೇಲಿಯನ್ನು ಮಳೆಗಾಲದಲ್ಲಿ ನೋಡುವುದೇ ಚಂದ. ದಟ್ಟ ಕಾಡು, ಸದಾ ಸುರಿವ ಮಳೆ, ಅಪರೂಪದ ಪಕ್ಷಿಸಂಕುಲ ಎಲ್ಲವೂ ದಾಂಡೇಲಿಯನ್ನು ಅಪೂರ್ವವನ್ನಾಗಿ ಮಾಡಿವೆ. ಇಲ್ಲಿ ತಿರುಗಾಡುವ ಮೂಲಕ ನೀವು ಈವರೆಗೆ ಕಂಡಿರದ ಮಳೆಯನ್ನೂ ಅನುಭವಿಸಬಹುದು, ಅಷ್ಟೇ ಅಲ್ಲ, ಅದೃಷ್ಟ ಮಾಡಿದ್ದರೆ, ಹಾರ್ನ್‌ಬಿಲ್‌ ಪಕ್ಷಿಯನ್ನೂ ಕಾಣಬಹುದು!

ಇದನ್ನೂ ಓದಿ: Monsoon Travel: ಮಳೆ ಇಷ್ಟಪಡುವ ಮಂದಿ ಮಳೆಗಾಲದಲ್ಲಿ ಈ ಬೆಟ್ಟದೂರುಗಳಿಗೆ ಹೋಗಬೇಕು!

Continue Reading

ಆರೋಗ್ಯ

Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!

Chamarajanagar oxygen tragedy: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 2021ರಲ್ಲಿ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್‌ ಕೊರತೆಯಾಗಿ ಮೇ 2ರಂದು 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌, ಈ ಪ್ರಕರಣವನ್ನು ತನಿಖೆಗೆ ಆಗ್ರಹಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.

VISTARANEWS.COM


on

Edited by

Chamarajanagar oxygen tragedy and Dinesh Gundu Rao
Koo

ಬೆಂಗಳೂರು: ‌ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಹಾಗೂ ಕೋವಿಡ್‌ (Covid 19) ಸಂದರ್ಭದಲ್ಲಿ ನಡೆದ ಕೆಲವು ಸಂಗತಿಗಳ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ 2021ರಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ (Chamarajanagar oxygen tragedy) ಪ್ರಕರಣದ ಮರು ತನಿಖೆಗೆ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಾತನಾಡಿ, ಈ ಘಟನೆಯು ಎರಡು ಇಲಾಖೆಗೆ ಒಳಪಡುತ್ತದೆ. ಹಾಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ (Health Department) ಸಮನ್ವಯತೆ ಇರುವುದರಿಂದ ತನಿಖೆಯನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ಈ ಹಿಂದಿನ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ, ಆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಹೊಸ ಸರ್ಕಾರ ಬಂದಿರುವುದರಿಂದ ನಾವು ಮರು ತನಿಖೆಗೆ ನಿರ್ಧಾರ ಮಾಡಿದ್ದೇವೆ. ಮರು ತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ. ಅದಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ ಎಂದು ತಿಳಿಸಿದರು.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್‌ ಕೊರತೆಯಾಗಿ 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಈ ಬಗ್ಗೆ ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌, ಈ ಪ್ರಕರಣವನ್ನು ತನಿಖೆಗೆ ಆದೇಶಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.

ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್!‌ 90 ರೂಪಾಯಿ ಮಿನಿಮಮ್ ಚಾರ್ಜ್‌ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?

ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕ ಆಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆಯಾಗಿದೆ. ನಾನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ. ಇದು ಮುಖ್ಯಮಂತ್ರಿಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರೂ ಕೆಲಸ ಮಾಡಬೇಕು. ದಕ್ಷಿಣ ಕನ್ನಡದಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಬೇಕಿದೆ. ಅಲ್ಲಿ ಶಾಂತಿ ಸೌಹರ್ದತೆ ನೆಲೆಸಬೇಕಿದೆ. ಅ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕೋವಿಡ್ ಅವಧಿಯ ಟೆಂಡರ್‌ಗಳ ಮರು ಪರಿಶೀಲನೆ ಮಾಡಾಗುತ್ತದೆ. ಅನುಮಾನ ಬಂದ ಟೆಂಡರ್‌ಗಳ ತನಿಖೆ ಮಾಡುತ್ತೇವೆ. ಹೆಚ್ಚು ಬಿಡ್ ಮಾಡಿರುವ ಟೆಂಡರ್‌ಗಳನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಈ ಹಿಂದೆ ಕರೆಯಲಾಗಿದ್ದ 108 ಆಂಬ್ಯುಲೆನ್ಸ್ ಟೆಂಡರ್ ಮತ್ತು ಡಯಾಲಿಸಿಸ್ ಟೆಂಡರ್ ಅನ್ನು ರದ್ದುಪಡಿಸಿದ್ದು, ಮರು ಟೆಂಡರ್ ಕರೆಯುತ್ತೇವೆ. ಜಿವಿಕೆ ಮೇಲೆ ಆರೋಪ ಬಂದಿರುವ ಕಾರಣ ಈ ಕ್ರಮ ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಟೆಂಡರ್ ‌ಕರೆಯುತ್ತೇವೆ ಎಂದು ಹೇಳಿದರು.

ಅಧಿಕಾರಿಗಳಿಗೆ ತರಾಟೆ

ಆರೋಗ್ಯ ಇಲಾಖೆಯಲ್ಲಿ ಅಧಿಕಾರಿಗಳ ಜತೆ ಸಭೆ ಮುಂದುವರಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ಸಚಿವ ದಿನೇಶ್‌ ಗುಂಡೂರಾವ್‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಗಳಲ್ಲಿ ಸಾವಾದರೆ ನಾನು ಸಹಿಸೋದಿಲ್ಲ. ಯಾರದ್ದೇ ತಪ್ಪು ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ಈ ವಿಚಾರವಾಗಿ ಯಾವುದೇ ರಾಜಕೀಯ ಒತ್ತಡ ತಂದರೂ ಪ್ರಯೋಜನ ಇಲ್ಲ. ರಾಜಕೀಯ ಒತ್ತಡ ತಂದರೆ ಅದರ ಮುಂದಿನ ಪರಿಣಾಮವನ್ನು ನೀವೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್‌ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!

ಈ ಹಿಂದೆ ಡಯಾಬಿಟಿಕ್ ಸಮೀಕ್ಷೆ ನಡೆಸಲಾಗಿತ್ತು. ಈ ವೇಳೆ ಜಿರೋ ಡಯಾಬಿಟಿಕ್ ಎಂದು ಯಾದಗಿರಿ ಜಿಲ್ಲೆಯಲ್ಲಿ ವರದಿ ನೀಡಲಾಗಿದೆ. ಆದರೆ, ಇಂತಹ ತಪ್ಪು ಮಾಹಿತಿಗಳನ್ನು ಕೊಡಬಾರದು ಎಂದು ಇದೇ ವೇಳೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದರು.

Continue Reading

ಕರ್ನಾಟಕ

Manja Thread: ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರ ತೆಗೆಯಿತು ಅಮಾಯಕನ ಪ್ರಾಣ!

Manja Thread: ಇದುವರೆಗೂ ಪಕ್ಷಿಗಳ ಪ್ರಾಣ ತೆಗೆಯುತ್ತಿದ್ದ ಗಾಳಿಪಟದ ಮಾಂಜಾ ದಾರ, ಈಗ ಅಮಾಯಕ ಯುವಕನ ಪ್ರಾಣವನ್ನೇ ತೆಗೆದುಬಿಟ್ಟಿದೆ. ಸತತ ಆರು ದಿನಗಳ ಜೀವನ್ಮರಣ ಹೋರಾಟ ನಡೆಸಿ, ನರಳಾಡಿ ಪ್ರಾಣ ಬಿಟ್ಟಿದ್ದಾನೆ.

VISTARANEWS.COM


on

Edited by

Manja Thread dead person
ರವಿ ಮೃತ ದುರ್ದೈವಿ
Koo

ಗದಗ: ಕಳೆದ ಜೂ.4ರಂದು ಕಾರ ಹುಣ್ಣಿಮೆ ವೇಳೆ ಹಾರಿಸಿದ ಗಾಳಿಪಟದ ಚೈನೀಸ್‌ ಮಾಂಜಾ ದಾರವು (Manja Thread) ಸವಾರನ ಕುತ್ತಿಗೆ ಸಿಲುಕಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿ ರವಿ ಮೃತ ದುರ್ದೈವಿ.

ಉತ್ತರ‌ ಕರ್ನಾಟಕದಲ್ಲಿ ಕಾರ ಹುಣ್ಣಿಮೆ ವೇಳೆ ಗಾಳಿಪಟ ಹಾರಿಸುವ ಪರಿಪಾಠ ಇದೆ. ಆದರೆ ಇದೆ ಸಂಭ್ರಮವು ಬೈಕ್‌ ಸವಾರರಿಗೆ ಸಂಚಕಾರ ತಂದೊಡ್ಡಿದೆ. ಗದಗ ನಗರದ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ರವಿ, ಬೈಕ್‌ನಲ್ಲಿ ಹೋಗುವಾಗ ಗಾಳಿಪಟದ ದಾರ ಕತ್ತು ಸೀಳಿತ್ತು. ರಕ್ತದ ಮಡುವಿನಲ್ಲೇ ಸ್ಥಳೀಯರು ಆಟೋ ಮೂಲಕ ರವಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹರಿತವಾದ ದಾರವು ರವಿಯ ಕತ್ತನ್ನು ಬಲವಾಗಿ ಸೀಳಿದ್ದರಿಂದ, ಆರು ದಿನ ಬಳಿಕ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

Manja Thread Effected

ಕಾಳಸಂತೆಯಲ್ಲಿ ಸಿಗ್ತಿದೆ ಅಪಾಯಕಾರಿ ದಾರ

ರಾಜ್ಯದಲ್ಲಿ ಚೈನೀಸ್ ಮಾಂಜಾ ದಾರ ಮಾರಾಟವು ನಿಷೇಧ ಇದ್ದರೂ, ಗದಗ ಜಿಲ್ಲೆಯಲ್ಲಿ ಮಾತ್ರ ಇದಕ್ಕೆ ಕಡಿವಾಣ ಬಿದ್ದಿಲ್ಲ. ಕಾಳಸಂತೆಗಳಲ್ಲಿ ಈ ಅಪಾಯಕಾರಿ ದಾರ ಮಾರಾಟವಾಗುತ್ತಿದೆ. ಗದಗ ಬೆಟಗೇರಿ ಅವಳಿ ನಗರದಲ್ಲಿ ಕಳೆದ ಭಾನುವಾರ (ಜೂ.4) ಕಾರ ಹುಣ್ಣಿಮೆಯ ದಿನದಂದು ಹಾರಿಸಿದ ಗಾಳಿಪಟದ ದಾರದಿಂದಾಗಿ ರೈಲ್ವೆ ಪೊಲೀಸ್ ಸೇರಿ ನಾಲ್ಕೈದು‌ ಜನರಿಗೆ ಗಾಯವಾಗಿತ್ತು. ಬೈಕ್‌ನಲ್ಲಿ ಹೋಗುವಾಗ ಕತ್ತು, ಕೈ-ಕಾಲುಗಳಿಗೆ ಹರಿತವಾದ ದಾರದಿಂದ ಗಾಯಗಳಾಗಿತ್ತು. ಈ ರೀತಿಯ ಅವಘಡಗಳು ನಡೆಯುತ್ತಿದ್ದರೂ, ಸಂಬಂಧಪಟ್ಟವರು ಗಪ್ ಚುಪ್ ಆಗಿದ್ದಾರೆ.

ಇದನ್ನೂ ಓದಿ: Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್‌ ವಾಪಸ್‌; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್‌

ಅಪಾಯಕಾರಿ ಮಾಂಜಾ ದಾರಕ್ಕೆ ಕಡಿವಾಣ ಹಾಕುವಂತೆ ವಿಸ್ತಾರ ನ್ಯೂಸ್ ಸುದ್ದಿ ಬಿತ್ತರಿಸಿತ್ತು. ಆದರೆ ಅಧಿಕಾರಿ ವರ್ಗ ಮಾತ್ರ ಕೈ ಕಟ್ಟಿ ಕುಳಿತು ನಿರ್ಲಕ್ಷ್ಯತನ ತೋರಿತ್ತು. ಇದರ ಪರಿಣಾಮ ಈಗ ಕಾರ ಹುಣ್ಣಿಮೆ ವೇಳೆ ಮಾಂಜಾ ದಾರದಲ್ಲಿ ಗಾಳಿಪಟ ಹಾರಿಸಿದ ಕಾರಣದಿಂದಾಗಿ ಸವಾರರು ಗಂಭೀರ ಗಾಯಗೊಂಡಿದ್ದರು. ಅದರಲ್ಲಿ ಒಬ್ಬ ಸವಾರ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 15 ದಿನಗಳ ಹಿಂದಷ್ಟೇ ಚೈನೀಸ್‌ ಮಾಂಜಾ ದಾರ ಮಾರಾಟವನ್ನು ತಡೆಯುವಂತೆ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ‌ ಮಾಡಿದ್ದರು. ‌ಆದರೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯತನ ತೋರಿಸಿದ್ದಾರೆಂದು ಕಿಡಿಕಾರಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ತಂತ್ರಜ್ಞಾನ

Aadhaar Services: ಆನ್‌ಲೈನ್ ಮೂಲಕ ಆಧಾರ್ ‘ಲಾಕ್’ ಮತ್ತು ‘ಅನ್‌ಲಾಕ್’ ಮಾಡುವುದು ಹೇಗೆ?

Aadhaar Services: ಸರ್ಕಾರಿ ಸೇವೆಗಳನ್ನು ಪಡೆಯಲು, ವಿಳಾಸ ಮತ್ತು ಗುರುತು ದೃಢೀಕರಣಕ್ಕೆ ಆಧಾರ್ ಅತ್ಯಗತ್ಯ ಸರ್ಕಾರಿ ಗುರುತಿನ ಪತ್ರವಾಗಿದೆ.

VISTARANEWS.COM


on

Edited by

Lock and unlock of aadhar services through online
Koo

ಬೆಂಗಳೂರು: ಕರ್ನಾಟಕದಲ್ಲಿ ಈಗ ಗ್ಯಾರಂಟಿಗಳ ಭರಾಟೆ. ಈ ಗ್ಯಾರಂಟಿ ಸೇವೆಗಳನ್ನು ಪಡೆಯಲು ಇತರ ಅಧಿಕೃತ ದಾಖಲೆಗಳ ಜತೆಗೆ ಆಧಾರ್ ಕೂಡ ಕಡ್ಡಾಯವಾಗಿಬೇಕು. ಹಾಗಾಗಿ, ಆಧಾರ್ ಮಾಡಿಸಿಕೊಳ್ಳಲು ಜನರು ಮುಗಿ ಬೀಳುತ್ತಿರುವ ವರದಿಗಳಾಗುತ್ತಿವೆ. ಗ್ಯಾರಂಟಿ ಮಾತ್ರವಲ್ಲದೇ ಕೇಂದ್ರವಾಗಲೀ, ರಾಜ್ಯ ಸರ್ಕಾರದ ಸೇವೆಗಳನ್ನು ಪಡೆಯಲು, ನಿಮ್ಮ ಅಧಿಕೃತ ವಿಳಾಸವನ್ನು ದೃಢೀಕರಿಸಲು ಈ ಆಧಾರ್ (Aadhaar Services) ಬೇಕೇ ಬೇಕು. ಆದರೆ, ಆಧಾರ್ ಮಾಹಿತಿ ಕಳುವಾದರೆ ಎಂಬ ಆತಂಕ ಇದ್ದೇ ಇರುತ್ತದೆ. ಬಳಕೆದಾರರಿಗೆ ಅಂಥದೊಂದು ಅನುಮಾನ ಮೂಡಿದರೆ, ನಿಮ್ಮ ಆಧಾರ್ ಸೇವೆಯನ್ನು ಲಾಕ್ (Lock) ಮಾಡಬಹುದು, ಅಗತ್ಯ ಎನಿಸಿದಾಗಿ ಮತ್ತೆ ಅನ್‌ಲಾಕ್ (Unlock) ಮಾಡಬಹುದು. ಅಂಥದೊಂದು ಅವಕಾಶವನ್ನು ಯುಐಡಿಎಐ ನೀಡಿದೆ.

ಬಳಕೆದಾರರ ಆಧಾರ್ ಸಂಖ್ಯೆಯ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ನಿವಾಸಿಗಳಿಗೆ ನಿಯಂತ್ರಣವನ್ನು ಒದಗಿಸಲು ಆಧಾರ್ ಸಂಖ್ಯೆಗಳನ್ನು ಲಾಕ್ ಮಾಡಲು ಮತ್ತು ಅನ್ಲಾಕ್ ಮಾಡಲು ಯುಐಡಿಎಐ ವ್ಯವಸ್ಥೆಯನ್ನು ಒದಗಿಸಿದೆ. ಬಳಕೆದಾರರು ಯುಐಡಿಎಐ ಜಾಲತಾಣ (www.myaadhaar.uidai.gov.in) ಅಥವಾ ಎಂಆಧಾರ್ (mAadhaar) ಆ್ಯಪ್ ಮೂಲಕ ಆಧಾರ್ ಲಾಕ್ ಮಾಡಬಹುದಾಗಿದೆ.

ಆಧಾರ್ ಹೇಗೆ ಲಾಕ್ ಮಾಡುವುದು?

ಎಸ್ಸೆಮ್ಮೆಸ್ ಮೂಲಕ: GVID ಟೈಪ್ ಮಾಡಿ ನಿಮ್ಮ ನಾಲ್ಕು ಅಥಾ ಎಂಟು ಅಂಕಿಗಳ ಯುಐಡಿ ನಂಬರ್ ಟೈಪ್ ಮಾಡಿ ಮತ್ತು ಅದನ್ನು 1947ಕೆ ಸೆಂಡ್ ಮಾಡಿದೆ. ಉದಾಹರಣೆ: GVID 7893 SMS to 1947

ವೆಬ್‌ಸೈಟ್ ಮೂಲಕ: ಯುಐಡಿಎಐ ವೆಬ್‌ಸೈಟ್ (https://resident.uidai.gov.in/aadhaar-lockunlock)ಗೆ ಭೇಟಿ ನೀಡಿ. ಹೋಮ್‌ಪುಟದಲ್ಲಿರುವ ಮೈ ಆಧಾರ್ ಸೆಕ್ಷನ್‌ನಲ್ಲಿರುವ ಲಾಕ್ ಆಧಾರ್ (Lock Aadhaar) ಮೇಲೆ ಕ್ಲಿಕ್ ಮಾಡಿ. ಬಳಿಕ ಯುಐಡಿ ಲಾಕ್ ಆಪ್ಷನ್ ಸೆಲೆಕ್ಟ್ ಮಾಡಿ. ಯುಐಡಿ ನಂಬರ್, ಹೆಸರು ಇತ್ಯಾದಿ ಮಾಹಿತಿಯನ್ನು ನಮೂದಿಸಿ. ಸೆಂಡ್ ಸೆಕ್ಯೂರಿಟಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ನಂಬರ್‌ಗೆ ಬರುವ ಸೆಕ್ಯೂರಿಟಿ ಕೋಡ್ ಎಂಟರ್ ಮಾಡಿ. ಆಗ ನಿಮ್ಮ ಆಧಾರ್ ಯಶಸ್ವಿಯಾಗಿ ಲಾಕ್ ಆಗುತ್ತದೆ.

ಆಧಾರ್ ಅನ್‌ಲಾಕ್ ಮಾಡುವುದು ಹೇಗೆ?

ಎಸ್ಸೆಮ್ಮೆಸ್ ಮೂಲಕ: RVID ಅಂತಾ ಟೈಪ್ ಮಾಡಿ ಸ್ಪೇಸ್ ಬಿಟ್ಟು ನಾಲ್ಕು ಅಥವಾ 8 ಅಂಕಿಗಳ ಯುಐಡಿ ನಂಬರ್ ಟೈಪ್ ಮಾಡಿ, 1947 ನಂಬರ್‌ಗೆ ಸೆಂಡ್ ಮಾಡಿ.

ಇದನ್ನೂ ಓದಿ: Aadhaar card : ಆಧಾರ್‌ ಜತೆ ನಿಮ್ಮ ಇ-ಮೇಲ್‌, ಮೊಬೈಲ್‌ ಲಿಂಕ್‌ ಆಗಿದೆಯೇ ? ಹೀಗೆ ಖಾತರಿಪಡಿಸಿಕೊಳ್ಳಿ

ವೆಬ್‌ಸೈಟ್ ಮೂಲಕ ಹೀಗೆ ಮಾಡಿ: ಇಲ್ಲಿ ಕೂಡ ಸೇನ್ ಲಾಕ್ ಮಾಡುವ ಪ್ರಕ್ರಿಯೇ ಫಾಲೋ ಮಾಡಬೇಕು. ಮೊದಲಿಗೆ ಯುಐಡಿಎಐಗೆ ಹೋಗಿ. ಬಳಿಕ ಅನ್‌ಲಾಕ್ ಆಯ್ಕೆಯ ಸೆಲೆಕ್ಟ ಮಾಡಿ. ಹೊಸ ವಿಐಡಿ ಮತ್ತುಸೆಕ್ಯೂರಿಟಿ ಕೋಡ್ ಎಂಟರ್ ಮಾಡಿ. ಸೆಂಡ್ ಒಟಿಪಿ ಬಟನ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿಯನ್ನು ನಮೂದಿಸಿ. ಆಗ ನಿಮ್ಮ ಆಧಾರ್ ನಂಬರ್ ಯಶಸ್ವಿಯಾಗಿ ಅನ್‌ಲಾಕ್ ಆಗುತ್ತದೆ.

ತಂತ್ರಜ್ಞಾನದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading
Advertisement
western ghats in rain
ಪ್ರಮುಖ ಸುದ್ದಿ25 seconds ago

Monsoon Travel: ಮಲೆನಾಡಿನ ಮಳೆಹಾಡಿನ ಹೊಸತನ! ರಾಜ್ಯದ ಈ ಟಾಪ್‌ 5 ತಾಣಗಳಿಗೆ ಮಳೆಯಲ್ಲೊಮ್ಮೆ ಭೇಟಿ ಕೊಡಿ

Monsoon Fashion 2023
ಫ್ಯಾಷನ್44 mins ago

Monsoon Fashion 2023: ಫ್ಯಾಷನ್‌ ಲೋಕಕ್ಕೆ ಲಗ್ಗೆ ಇಟ್ಟ ಮಾನ್ಸೂನ್‌ ಸೀಸನ್‌ ವೈಬ್ರೆಂಟ್‌ ಔಟ್‌ಫಿಟ್ಸ್!

Chamarajanagar oxygen tragedy and Dinesh Gundu Rao
ಆರೋಗ್ಯ47 mins ago

Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!

Manja Thread dead person
ಕರ್ನಾಟಕ49 mins ago

Manja Thread: ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರ ತೆಗೆಯಿತು ಅಮಾಯಕನ ಪ್ರಾಣ!

Lock and unlock of aadhar services through online
ತಂತ್ರಜ್ಞಾನ53 mins ago

Aadhaar Services: ಆನ್‌ಲೈನ್ ಮೂಲಕ ಆಧಾರ್ ‘ಲಾಕ್’ ಮತ್ತು ‘ಅನ್‌ಲಾಕ್’ ಮಾಡುವುದು ಹೇಗೆ?

Gujarat High Court On Termination Of Pregnancy
ದೇಶ1 hour ago

17 ವರ್ಷದ ಹೆಣ್ಣುಮಕ್ಕಳು ಮಗು ಹೆರುವ ಕಾಲವಿತ್ತು; ರೇಪ್‌ ಸಂತ್ರಸ್ತೆಯ ಗರ್ಭಪಾತ ಬೇಡವೆಂದ ಹೈಕೋರ್ಟ್

Virat Kohli troll
ಕ್ರಿಕೆಟ್1 hour ago

WTC Final 2023: ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಆಡು; ಔಟಾದ ಬಳಿಕ ಊಟದ ಜತೆ ಬೈಗುಳ ತಿಂದ ಕೊಹ್ಲಿ

Appeals to CM not to increase liquor prices
ಕರ್ನಾಟಕ2 hours ago

Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್‌ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!

A new country is ready in just Rs 15 lakh and the name is Slowjamastan
ಪ್ರಮುಖ ಸುದ್ದಿ2 hours ago

New Country: ಕೇವಲ 15 ಲಕ್ಷ ರೂ.ನಲ್ಲಿ ರೆಡಿ ಆಯ್ತು ಹೊಸ ದೇಶ, ಹೆಸರು ಸ್ಲೋಜಾಮ್‌ಸ್ತಾನ!

water issuse
ಉಡುಪಿ2 hours ago

Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್‌ ವಾಪಸ್‌; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್‌

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ12 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Cancellation of tenders for 108 ambulances and Dinesh Gundu rao
ಆರೋಗ್ಯ4 hours ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ5 hours ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ5 hours ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ6 hours ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ21 hours ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ22 hours ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ1 day ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ2 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ2 days ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ3 days ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

ಟ್ರೆಂಡಿಂಗ್‌

error: Content is protected !!