ವಿಸ್ತಾರ MoneyGuide: 2022ರಲ್ಲಿ ತೆರಿಗೆ ಉಳಿತಾಯ ಮಾಡಿ ಕೊಡುವ ಉತ್ತಮ ಮ್ಯೂಚುವಲ್‌ ಫಂಡ್‌ಗಳು ಯಾವುವು? - Vistara News

ಪ್ರಮುಖ ಸುದ್ದಿ

ವಿಸ್ತಾರ MoneyGuide: 2022ರಲ್ಲಿ ತೆರಿಗೆ ಉಳಿತಾಯ ಮಾಡಿ ಕೊಡುವ ಉತ್ತಮ ಮ್ಯೂಚುವಲ್‌ ಫಂಡ್‌ಗಳು ಯಾವುವು?

ಮ್ಯೂಚುವಲ್‌ ಫಂಡ್‌ ಯೋಜನೆಗಳಲ್ಲಿ ಹೂಡಿಕೆ ಮಾಡುವುದರ ಮೂಲಕ ಆದಾಯ ತೆರಿಗೆ ಉಳಿತಾಯವನ್ನೂ ಮಾಡಬಹುದು. ಇದಕ್ಕಾಗಿಯೇ ELSS ಮ್ಯೂಚುವಲ್‌ ಫಂಡ್‌ ಯೋಜನೆಗಳಿವೆ. ಇದರ ಪ್ರಯೋಜನ ತಿಳಿಯುವುದು ಸೂಕ್ತ.

VISTARANEWS.COM


on

elss fund
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮ್ಯೂಚುವಲ್‌ ಫಂಡ್‌ಗಳಲ್ಲಿ ಹೂಡಿಕೆ ಮಾಡುವ ಮೂಲಕ ಆದಾಯ ತೆರಿಗೆಯಲ್ಲಿ ಉಳಿತಾಯವನ್ನೂ ಮಾಡಬಹುದು. ಒಂದು ಕಡೆ ಹೂಡಿಕೆಯ ಪ್ರಯೋಜನ ಸಿಕ್ಕಿದರೆ, ಮತ್ತೊಂದು ಕಡೆ ತೆರಿಗೆ ವಿಚಾರದಲ್ಲೂ ದುಡ್ಡು ಉಳಿಸಬಹುದು.

Tax saving mutual funds ಅಥವಾ Equity Linked Savings Schemes (ELSS) ಎಂಬ ಮ್ಯೂಚುವಲ್‌ ಫಂಡ್‌ ಯೋಜನೆಗಳಲ್ಲಿ ಹೂಡಿಕೆ ಮಾಡುವುದರ ಮೂಲಕ ನೀವು ಆದಾಯ ತೆರಿಗೆ ಕಾಯಿದೆಯ ಸೆಕ್ಷನ್‌ 80 ಸಿ ಅಡಿಯಲ್ಲಿ ತೆರಿಗೆ ಉಳಿತಾಯ ಮಾಡಬಹುದು. ELSS ಯೋಜನೆಗಳ ಅಡಿಯಲ್ಲಿ ನೀವು ವಾರ್ಷಿಕ ಗರಿಷ್ಠ 1.5 ಲಕ್ಷ ರೂ. ಹೂಡಿಕೆ ಮಾಡಬಹುದು. ಮತ್ತು ತೆರಿಗೆ ಉಳಿತಾಯ ಸೌಲಭ್ಯ ಪಡೆಯಬಹುದು.

ELSS ಮ್ಯೂಚುವಲ್‌ ಫಂಡ್‌ಗಳು ಷೇರುಗಳಲ್ಲಿ ಹೂಡಿಕೆ ಮಾಡುತ್ತವೆ. ಆದ್ದರಿಂದ ಅವುಗಳಲ್ಲಿ ರಿಸ್ಕ್‌ ಕೂಡ ಇರುತ್ತದೆ. ಈಕ್ವಿಟಿ ಮ್ಯೂಚುವಲ್‌ ಫಂಡ್‌ಗಳಲ್ಲಿ ಮೊದಲ ಸಲ ಹೂಡಿಕೆ ಮಾಡುತ್ತಿದ್ದರೆ ಈ ಅಂಶವನ್ನು ಗಮನಿಸುವುದು ಸೂಕ್ತ. ಸಾರ್ವಜನಿಕ ಭವಿಷ್ಯನಿಧಿ, ಅಂಚೆ ಉಳಿತಾಯ ಯೋಜನೆಗಳ ಮಾದರಿಯಲ್ಲಿ ಖಾತರಿಯ ಆದಾಯವನ್ನು ಇದು ನೀಡದು. ಹಾಗಾದರೆ ELSS ಏಕೆ ಅಗತ್ಯ?

ಹೆಚ್ಚಿನ ಆದಾಯಕ್ಕಾಗಿ ELSS ಮ್ಯೂಚುವಲ್‌ ಫಂಡ್‌ಗಳಲ್ಲಿ ಹೂಡಿಕೆ ಮಾಡುವುದು ಸೂಕ್ತ. ಸಾರ್ವಜನಿಕ ಭವಿಷ್ಯನಿಧಿ, ಅಂಚೆ ಇಲಾಖೆಯ ಸಣ್ಣ ಉಳಿತಾಯ ಯೋಜನೆಗಳಿಗಿಂತ ಹೆಚ್ಚು ಆದಾಯವನ್ನು ಇವುಗಳು ನೀಡುವ ಸಾಧ್ಯತೆ ಇದೆ. ಇವುಗಳು ಷೇರುಗಳಲ್ಲಿ ಹೂಡುವುದರಿಂದ ಹಾಗೂ ಷೇರುಗಳು ಕಾಲಕ್ರಮೇಣ ಹೆಚ್ಚು ಆದಾಯ ನೀಡುವುದರಿಂದ ELSS ಕೂಡ ಹೆಚ್ಚು ಆದಾಯ ನೀಡುತ್ತದೆ. ಉದಾಹರಣೆಗೆ ELSS ಕಳೆದ 10 ವರ್ಷಗಳಲ್ಲಿ ಸರಾಸರಿ 15% ಆದಾಯ ನೀಡಿವೆ.

ಎರಡನೆಯದಾಗಿ ELSS ಯೋಜನೆಗಳಲ್ಲಿ ಲಾಕ್‌ ಇನ್‌ ಅವಧಿ ಕಡಿಮೆ. ಸೆಕ್ಷನ್‌ 80 ಸಿ ಅಡಿಯಲ್ಲಿ ತೆರಿಗೆ ಉಳಿತಾಯಕ್ಕೆ ಸಹಕರಿಸುವ ಇತರ ಬಹುತೇಕ ಯೋಜನೆಗಳು ಸರಕಾರದ ಬೆಂಬಲಿತ ಯೋಜನೆಗಳು ಹಾಗೂ ಅವುಗಳಲ್ಲಿ ಲಾಕ್‌ ಇನ್‌ ಅವಧಿ ದೀರ್ಘವಾಗಿರುತ್ತದೆ. ಉದಾಹರಣೆಗೆ ಸಾರ್ವಜನಿಕ ಭವಿಷ್ಯನಿಧಿ (PPF) 15 ವರ್ಷಗಳ ಯೋಜನೆಯಾಗಿದ್ದು, 6 ವರ್ಷಗಳ ಲಾಕ್ ಇನ್‌ ಅವಧಿಯನ್ನು ಒಳಗೊಂಡಿದೆ.‌ ಅಂದರೆ 6 ವರ್ಷಗಳ ಬಳಿಕ ಭಾಗಶಃ ಹೂಡಿಕೆ ಹಿಂತೆಗೆತ ಸಾಧ್ಯ. ಎನ್‌ಎಸ್‌ಇ 5 ವರ್ಷಗಳ ಅವಧಿಯನ್ನು ಒಳಗೊಂಡಿದೆ. ಆದ್ದರಿಂದ ನೀವು 3 ವರ್ಷಗಳ ಅವಧಿಗೆ ಹೂಡಲು ಬಯಸುವುದಿದ್ದರೆ ELSS ಆಯ್ಕೆ ಮಾಡುವುದು ಒಳಿತು. ಹೀಗಿದ್ದರೂ, ಉತ್ತಮ ಆದಾಯಕ್ಕಾಗಿ ದೀರ್ಘಕಾಲೀನವಾಗಿ ELSSಗಳಲ್ಲಿ ಹೂಡಿಕೆ ಮಾಡುವುದು ಸೂಕ್ತ. ಕನಿಷ್ಠ 5-7 ವರ್ಷ ಹೂಡಿಕೆ ಮುಂದುವರಿಸಿದರೆ ಒಳ್ಳೆಯ ಆದಾಯ ಗಳಿಸಬಹುದು ಎನ್ನುತ್ತಾರೆ ತಜ್ಞರು.

ಆರಂಭಿಕ ಹೂಡಿಕೆಯಾಗಿ ಬೆಸ್ಟ್

ಮ್ಯೂಚುವಲ್‌ ಫಂಡ್‌ಗಳಲ್ಲಿ ಆರಂಭಿಕ ಹಂತದಲ್ಲಿ ಹೂಡಿಕೆ ಮಾಡಲು ಬಯಸುವವರು ELSS ಆಯ್ಕೆ ಮಾಡುವುದು ಉತ್ತಮ. ಮೂರು ವರ್ಷಗಳ ಲಾಕ್‌ ಇನ್‌ ಅವಧಿಯಲ್ಲಿ ಷೇರು ಮಾರುಕಟ್ಟೆಯ ಏರಿಳಿತಗಳ ವಿರುದ್ಧ ಫಂಡ್‌ ಹೇಗೆ ಲಾಭದಾಯಕ ಎಂಬುದು ಗೊತ್ತಾಗುತ್ತದೆ. ಹೂಡಿಕೆಯ ಶಿಸ್ತು ರೂಪಿಸಲು ಸಹಕಾರಿ.

2022ರಲ್ಲಿ ಹೂಡಿಕೆಗೆ ಪರಿಶೀಲಿಸಬಹುದಾದ ELSS ಮ್ಯೂಚುವಲ್‌ ಫಂಡ್‌ ಯೋಜನೆಗಳು

  • ಎಕ್ಸಿಸ್‌ ಲಾಂಗ್‌ ಟರ್ಮ್‌ ಈಕ್ವಿಟಿ ಫಂಡ್‌
  • ಕೆನರಾ ರೊಬೆಕೊ ಈಕ್ವಿಟಿ ಟ್ಯಾಕ್ಸ್‌ ಸೇವರ್‌ ಫಂಡ್‌
  • ಮಿರಾಯ್‌ ಅಸೆಟ್‌ ಟ್ಯಾಕ್ಸ್‌ ಸೇವರ್‌ ಫಂಡ್‌
  • ಇನ್ವೆಸ್ಕೊ ಇಂಡಿಯಾ ಟ್ಯಾಕ್ಸ್‌ ಪ್ಲಾನ್‌ ಫಂಡ್‌
  • ಡಿಎಸ್‌ಪಿ ಟ್ಯಾಕ್ಸ್‌ ಸೇವರ್‌ ಫಂಡ್
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್;‌ ಇಂದು ಏರಿಕೆಯಾಗದ ಬೆಲೆ

Gold Rate Today: ಶನಿವಾರ ಒಂದೇ ದಿನ ಗ್ರಾಂ ಚಿನ್ನದ ಬೆಲೆಯು 67 ರೂಪಾಯಿ ಜಾಸ್ತಿಯಾಗಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿತ್ತು. ಭಾನುವಾರ ಇನ್ನಷ್ಟು ಏರಿಕೆಯಾಗುವ ಭೀತಿ ಇತ್ತು. ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯು ನಾಲ್ಕು ಬಾರಿ ಏರಿಕೆ ಕಂಡರೆ, ಎರಡು ಬಾರಿ ಮಾತ್ರ ಇಳಿಕೆ ಕಂಡಿತ್ತು. ಭಾನುವಾರ ಬೆಳ್ಳಿಯ ಬೆಲೆಯಲ್ಲೂ ಯಾವುದೇ ವ್ಯತ್ಯಾಸ ಆಗಿಲ್ಲ. ಬೆಂಗಳೂರಿನಲ್ಲಿ ಇಂದು ಒಂದು ಗ್ರಾಂ ಬೆಳ್ಳಿಯ ಬೆಲೆಯು 90.30 ರೂ. ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಶನಿವಾರ (ಜೂನ್‌ 15) ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಭಾನುವಾರ (ಜೂನ್‌ 16) ಯಥಾಸ್ಥಿತಿ ಕಾಯ್ದುಕೊಂಡಿರುವುದು ಗ್ರಾಹಕರಿಗೆ ತುಸು ರಿಲೀಫ್‌ ತಂದಿದೆ. ಬೆಂಗಳೂರಿನಲ್ಲಿ ಇಂದು (Gold Rate Today) 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 6,650 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 7,255 ರೂ. ಇದೆ. ಚಿನ್ನದ ಬೆಲೆ ಏರಿಕೆ ಕಾಣದ ಹಿನ್ನೆಲೆಯಲ್ಲಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾನುವಾರ ಚಿನ್ನ ಖರೀದಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಒಂದೇ ದಿನ ಗ್ರಾಂ ಚಿನ್ನದ ಬೆಲೆಯು 67 ರೂಪಾಯಿ ಜಾಸ್ತಿಯಾಗಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿತ್ತು. ಭಾನುವಾರ ಇನ್ನಷ್ಟು ಏರಿಕೆಯಾಗುವ ಭೀತಿ ಇತ್ತು. ಕಳೆದ 10 ದಿನಗಳಲ್ಲಿ ಚಿನ್ನದ ಬೆಲೆಯು ನಾಲ್ಕು ಬಾರಿ ಏರಿಕೆ ಕಂಡರೆ, ಎರಡು ಬಾರಿ ಮಾತ್ರ ಇಳಿಕೆ ಕಂಡಿತ್ತು. ಇನ್ನು ನಾಲ್ಕು ಬಾರಿ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿರಲಿಲ್ಲ. ಭಾನುವಾರ ಬೆಳ್ಳಿಯ ಬೆಲೆಯಲ್ಲೂ ಯಾವುದೇ ವ್ಯತ್ಯಾಸ ಆಗಿಲ್ಲ. ಬೆಂಗಳೂರಿನಲ್ಲಿ ಇಂದು ಒಂದು ಗ್ರಾಂ ಬೆಳ್ಳಿಯ ಬೆಲೆಯು 90.30 ರೂ. ಇದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,665 ₹ 7,270
ಮುಂಬೈ₹ 6,650 ₹ 7,255
ಬೆಂಗಳೂರು₹ 6,650₹ 7,255
ಚೆನ್ನೈ₹ 6,705 ₹ 7,315

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

Gold Rate Today

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Continue Reading

ವಾಣಿಜ್ಯ

PMAY: ಸ್ವಂತ ಮನೆ ಹೊಂದುವ ನಿಮ್ಮ ಕನಸು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮೂಲಕ ನನಸು; ಹೀಗೆ ಅಪ್ಲೈ ಮಾಡಿ

PMAY: ಮಧ್ಯಮ ಮತ್ತು ಬಡ ವರ್ಗದ ಕುಟುಂಬದವರ ಸ್ವಂತ ಸೂರಿನ ಕನಸು ನನಸು ಮಾಡಲೆಂದೇ ಸರ್ಕಾರ ಜಾರಿಗೆ ತಂದ ಯೋಜನೆ ಪಿಎಂಎವೈ (ಪ್ರಧಾನ ಮಂತ್ರಿ ಆವಾಸ್ ಯೋಜನೆ). ಈ ಯೋಜನೆ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶದ ಬಡವರಿಗಾಗಿ ಮನೆ ನಿರ್ಮಿಸಿ ಕೊಡುತ್ತಿದೆ. ಹಾಗಾದರೆ ಏನಿದು ಯೋಜನೆ? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ವಿವರ ಇಲ್ಲಿದೆ.

VISTARANEWS.COM


on

PMAY
Koo

ಬೆಂಗಳೂರು: ಸ್ವಂತ ಮನೆ ಹೊಂದಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಆದರೆ ಈ ದುಬಾರಿ ದುನಿಯಾದಲ್ಲಿ ಸ್ವಂತದ್ದೊಂದು ಸೂರು ಕಟ್ಟಿಕೊಳ್ಳುವ ಆಸೆ ದುಬಾರಿಯೇ ಸರಿ. ಅದರಲ್ಲಿಯೂ ಮಧ್ಯಮ ಮತ್ತು ಬಡ ವರ್ಗದ ಕುಟುಂಬದವರಂತೂ ಇದಕ್ಕಾಗಿ ಜೀವಮಾನವಿಡೀ ದುಡಿದಿದ್ದನ್ನು ಮೀಸಲಿಡಬೇಕಾದ ಸ್ಥಿತಿ ಇದೆ. ಆದರೆ ಗೊತ್ತಿರಲಿ ಇಂತಹವರಿಗೆಂದೇ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana-PMAY) ಜಾರಿಗೆ ತಂದಿದೆ. ಅಂದರೆ ಕೇಂದ್ರ ಸರ್ಕಾರ ಈ ಯೋಜನೆ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶದ ಬಡವರಿಗಾಗಿ ಮನೆ ನಿರ್ಮಿಸಿ ಕೊಡುತ್ತಿದೆ. ಹಾಗಾದರೆ ಏನಿದು ಯೋಜನೆ? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ವಿವರ ಇಲ್ಲಿದೆ (How To Apply For PMAY).

ಏನಿದು ಯೋಜನೆ?

ದೇಶದ ಎಲ್ಲರಿಗೂ ಸೂರು ಒದಗಿಸಬೇಕು ಎನ್ನುವ ಗುರಿಯೊಂದಿಗೆ ಕೇಂದ್ರ ಸರ್ಕಾರ 2015-16ರಲ್ಲಿ ಈ ಯೋಜನೆಯನ್ನು ಪರಿಚಯಿಸಿದೆ. ಈ ಮೂಲಕ ನಗರ ಮತ್ತು ಗ್ರಾಮೀಣದ ಪ್ರದೇಶದ ಬಡ ಜನರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಹೊಂದಿರುವ ಮನೆ ನಿರ್ಮಿಸಿ ಕೊಡಲಾಗುತ್ತದೆ. ಈ ಯೋಜನೆಯಡಿ ವಾರ್ಷಿಕ ಶೇ. 6.50ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ. 10 ವರ್ಷಗಳಲ್ಲಿ ಈ ಯೋಜನೆ ಮೂಲಕ ಸುಮಾರು 4.21 ಮನೆಗಳನ್ನು ನಿರ್ಮಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರ 3 ಕೋಟಿ ಮನೆಗಳನ್ನು ನಿರ್ಮಿಸಿ ಕೊಡುವ ತೀರ್ಮಾನವನ್ನು ಈಗಾಗಲೇ ಪ್ರಕಟಿಸಿದೆ. ಮೊದಲ ಸಂಪುಟ ಸಭೆಯಲ್ಲಿಯೇ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮನೆಯಲ್ಲಿ ಏನಿರಲಿದೆ?

ಸರ್ಕಾರ ನಿರ್ಮಿಸಿ ಕೊಡುವ ಈ ಮನೆ ಅಗತ್ಯ ಮೂಲ ಸೌಕರ್ಯಗಳನ್ನು ಒಳಗೊಂಡಿರುತ್ತದೆ. ಶೌಚಾಲಯ, ಎಲ್‌ಪಿಜಿ ಕನೆಕ್ಷನ್‌, ವಿದ್ಯುತ್‌ ಸಂಪರ್ಕ ಮತ್ತು ನೀರಿನ ಸೌಲಭ್ಯ ಹೊಂದಿರುತ್ತದೆ. ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ನಗರ ಮತ್ತು ಗ್ರಾಮೀಣ ಎನ್ನುವ ಎರಡು ವಿಧವಿದೆ.

ಈ ಯೋಜನೆಯನ್ನು ಫಲಾನುಭವಿಗಳ ವಾರ್ಷಿಕ ಆದಾಯದ ಆಧಾರದಲ್ಲಿ 4 ವರ್ಗಗಳನ್ನಾಗಿ ವಿಂಗಡಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ವರ್ಗ (EWS)- 3 ಲಕ್ಷ ರೂ.ವರೆಗೆ ಆದಾಯ
ಕಡಿಮೆ ಆದಾಯದ ಗುಂಪು (LIG): 3 ಲಕ್ಷ ರೂ.- 6 ರೂ. ಆದಾಯ
ಮಧ್ಯಮ ಆದಾಯದ ಗುಂಪು-1 (MIG-1): 6 ಲಕ್ಷ ರೂ.- 12 ರೂ. ಆದಾಯ
ಮಧ್ಯಮ ಆದಾಯದ ಗುಂಪು-1 (MIG-2): 12 ಲಕ್ಷ ರೂ.- 18 ರೂ. ಆದಾಯ

ಯಾರೆಲ್ಲ ಅರ್ಹರು?

  • ಫಲಾನುಭವಿ ಭಾರತದ ನಿವಾಸಿಯಾಗಿರಬೇಕು.
  • ಫಲಾನುಭವಿ ಶಾಶ್ವತ ಮನೆ ಹೊಂದಿರಬಾರದು.
  • ಫಲಾನುಭವಿ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
  • ಫಲಾನುಭವಿಯ ಹೆಸರು ಪಡಿತರ ಚೀಟಿ ಅಥವಾ ಪಿಬಿಎಲ್ ಪಟ್ಟಿಯಲ್ಲಿರಬೇಕು.
  • ಫಲಾನುಭವಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿರಬೇಕು. ಅಲ್ಲದೆ ಯಾವುದೇ ಮಾನ್ಯ ಗುರುತಿನ ಚೀಟಿಯನ್ನು ಹೊಂದಿರಬೇಕು (ಅಧಾರ್‌ ಕಾರ್ಡ್‌, ಲೈಸನ್ಸ್‌ ಇತ್ಯಾದಿ).
  • ಫಲಾನುಭವಿಯ ಕುಟುಂಬದವರು ಸರ್ಕಾರಿ ಉದ್ಯೋಗದಲ್ಲಿ ಇರಬಾರದು.

ಯೋಜನೆ ವೈಶಿಷ್ಟ್ಯ

  • ಈ ಯೋಜನೆ ದೇಶದ ಎಲ್ಲ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಅನ್ವಯವಾಗುತ್ತದೆ
  • ಈ ಯೋಜನೆಯಡಿ, ಎಲ್ಲ ಫಲಾನುಭವಿಗಳಿಗೆ ವಾರ್ಷಿಕ ಶೇ. 6.50 ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ಲಭ್ಯ.
  • ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮೀಸಲು.
  • ಗೃಹ ನಿರ್ಮಾಣದಲ್ಲಿ ಸುಸ್ಥಿರ, ಪರಿಸರ ಸ್ನೇಹಿ ತಂತ್ರಜ್ಞಾನ ಬಳಕೆ.
  • ಮನೆ ಅಗತ್ಯ ಮೂಲ ಸೌಕರ್ಯ ಹೊಂದಿದ್ದು, ಹೆಚ್ಚುವರಿ ಕಾಮಗಾರಿ ಬೇಕಾದರೆ ಕೈಗೊಳ್ಳಬಹುದಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ https://pmaymis.gov.in/ಗೆ ಭೇಟಿ ನೀಡಿ
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಹೋಮ್‌ಪೇಜ್‌ನಲ್ಲಿ ಕಂಡು ಬರುವ PM Awas Yojana ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.

ಆಫ್‌ಲೈನ್‌ ಮೂಲಕವೂ ನೀವು ಅರ್ಜಿ ಸಲ್ಲಿಬಹುದು. ಇದಕ್ಕಾಗಿ ನೀವು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (Common Service Center) ಭೇಟಿ ನೀಡಿ. ಹೆಚ್ಚಿನ ಮಾಹಿತಿಗಾಗಿ 1800-11-3377, 1800-11-3388 ನಂಬರ್‌ಗೆ ಕರೆ ಮಾಡಿ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು

  • ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆ.
  • ಅರ್ಜಿದಾರರ ಫೋಟೊ
  • ಫಲಾನುಭವಿಯ ಜಾಬ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಸಂಖ್ಯೆ.
  • ಬ್ಯಾಂಕ್ ಪಾಸ್‌ಬುಕ್.
  • ಸ್ವಚ್ಛ ಭಾರತ್ ಮಿಷನ್ (SBM) ನೋಂದಣಿ ಸಂಖ್ಯೆ.
  • ಮೊಬೈಲ್ ನಂಬರ್.

ಇದನ್ನೂ ಓದಿ: Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

Continue Reading

ಕರ್ನಾಟಕ

Foeticide: ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

Foeticide: ಕಿತ್ತೂರು ಪಟ್ಟಣದಲ್ಲಿ ಭ್ರೂಣ ಲಿಂಗ ಪತ್ತೆ, ಭ್ರೂಣಗಳನ್ನು ಹತ್ಯೆ ಕೃತ್ಯದಲ್ಲಿ ತೊಡಗಿರುವ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ಗೆ ರೋಹಿತ್‌ ಕುಪ್ಪಸಗೌಡರ್‌ ಹಲವು ವರ್ಷಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ತಿಗಡೊಳ್ಳಿ ಗ್ರಾಮದ ಬಳಿ ಇರುವ ಫಾರ್ಮ್‌ಹೌಸ್‌ನಲ್ಲಿ ಭ್ರೂಣಗಳನ್ನು ಹೂಳುವುದೇ ರೋಹಿತ್‌ ಕುಪ್ಪಸಗೌಡರ ಕೆಲಸವಾಗಿತ್ತು ಎಂದು ತಿಳಿದುಬಂದಿದೆ.

VISTARANEWS.COM


on

Foeticide
Koo

ಬೆಳಗಾವಿ: ಬೆಂಗಳೂರು ಹಾಗೂ ಮಂಡ್ಯದಲ್ಲಿ ಕೆಲ ತಿಂಗಳ ಹಿಂದೆ ಹೆಣ್ಣು ಭ್ರೂಣಹತ್ಯೆಯ ಬೃಹತ್‌ ಜಾಲವೊಂದು ಪತ್ತೆಯಾದ ಬೆನ್ನಲ್ಲೇ ಬೆಳಗಾವಿ (Belagavi) ಜಿಲ್ಲೆಯಲ್ಲೂ ನಕಲಿ ವೈದ್ಯನು ಭ್ರೂಣ ಹತ್ಯೆ (Foeticide) ಮಾಡಿರುವ ಪ್ರಕರಣವು ಬಯಲಾಗಿದೆ. ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ ಎಂಬಾತನು ಭ್ರೂಣಹತ್ಯೆ ಮಾಡಿದ್ದು, ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಭ್ರೂಣದ ಶವವೊಂದು ಪತ್ತೆಯಾಗಿದೆ. ಇನ್ನಷ್ಟು ಭ್ರೂಣಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ನ ಸಹಾಯಕನಾಗಿರುವ ರೋಹಿತ್ ಕುಪ್ಪಸಗೌಡರ್ ಎಂಬಾತನನ್ನು ಕರೆದುಕೊಂಡು ಹೋಗಿರುವ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ನಕಲಿ ವೈದ್ಯನ ಜಮೀನಿನಲ್ಲಿ ಭ್ರೂಣದ ಶವ ಪತ್ತೆಯಾಗಿದೆ. ಡಿಎಚ್ಒ ಡಾ.ಮಹೇಶ ಕೋಣಿ, ಎಸಿ ಪ್ರಭಾವತಿ ಫಕೀರಪುರ, ಡಿಎಎಸ್‌ಪಿ ರವಿ ನಾಯ್ಕ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಭ್ರೂಣಗಳನ್ನು ಹೂಳುತ್ತಿದ್ದ ರೋಹಿತ್‌ ಕುಪ್ಪಸಗೌಡರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆತ ತೋರಿಸಿದ ಜಾಗದಲ್ಲಿ ಶೋಧ ನಡೆಸಲಾಗುತ್ತಿದೆ.

ಫಾರ್ಮ್‌ಹೌಸ್‌ನಲ್ಲಿ ಭ್ರೂಣ ಹೂತಿದ್ದ ಜಾಗ.

ಕಿತ್ತೂರು ಪಟ್ಟಣದಲ್ಲಿ ಭ್ರೂಣ ಲಿಂಗ ಪತ್ತೆ, ಭ್ರೂಣಗಳನ್ನು ಹತ್ಯೆ ಕೃತ್ಯದಲ್ಲಿ ತೊಡಗಿರುವ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ಗೆ ರೋಹಿತ್‌ ಕುಪ್ಪಸಗೌಡರ್‌ ಹಲವು ವರ್ಷಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ತಿಗಡೊಳ್ಳಿ ಗ್ರಾಮದ ಬಳಿ ಇರುವ ಫಾರ್ಮ್‌ಹೌಸ್‌ನಲ್ಲಿ ಭ್ರೂಣಗಳನ್ನು ಹೂಳುವುದೇ ರೋಹಿತ್‌ ಕುಪ್ಪಸಗೌಡರ ಕೆಲಸವಾಗಿತ್ತು ಎಂದು ತಿಳಿದುಬಂದಿದೆ. ಈತನನ್ನು ಫಾರ್ಮ್‌ಹೌಸ್‌ಗೆ ಕರೆದುಕೊಂಡು ಹೋಗಿರುವ ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ. ರೋಹಿತ್‌ ತೋರಿಸಿದ ಜಾಗದಲ್ಲಿಯೇ ಒಂದು ಭ್ರೂಣ ಪತ್ತೆಯಾಗಿರುವ ಕಾರಣ ಇನ್ನಷ್ಟು ಭ್ರೂಣಗಳು ಇರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಬ್ದುಲ್‌ ಗಫಾರ್‌ ಲಾಡಖಾನ್‌ ಹಿಂದೆ ಯಾರಿದ್ದಾರೆ? ಜಾಲದಲ್ಲಿ ಯಾರೆಲ್ಲ ತೊಡಗಿಸಿಕೊಂಡಿದ್ದಾರೆ? ಫಾರ್ಮ್‌ಹೌಸ್‌ ಸೇರಿ ಇನ್ನೂ ಹಲವು ಪ್ರದೇಶಗಳಲ್ಲಿ ಭ್ರೂಣಗಳನ್ನು ಹೂಳಲಾಗಿದೆಯೇ ಎಂಬುದು ಸೇರಿ ಹತ್ತಾರು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬಾಗಲಕೋಟೆಯಲ್ಲೂ ಭ್ರೂಣ ಹತ್ಯೆ ಪ್ರಕರಣಗಳು ಬಯಲಾಗಿದ್ದವು.

ಇದನ್ನೂ ಓದಿ: Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು?

Continue Reading

ಕ್ರೀಡೆ

SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

SCO vs AUS: ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

VISTARANEWS.COM


on

SCO vs AUS
Koo

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯಾ): ಸೂಪರ್​-8 ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಸ್ಕಾಟ್ಲೆಂಡ್(SCO vs AUS)​ ತಂಡ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

ಇಲ್ಲಿನ ಸೇಂಟ್‌ ಲೂಸಿಯಾದ ಡ್ಯಾರೆನ್​ ಶಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 180 ರನ್​ಗಳ ಬೃಹತ್​ ಮೊತ್ತ ಪೇರಿಸಿತು. ಈ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 19.4 ಓವರ್​ಗಳಲ್ಲಿ 5 ವಿಕೆಟ್​ಗೆ 186 ರನ್​ ಬಾರಿಸಿ ಗೆಲುವು ದಾಖಲಿಸಿತು. ಆಸೀಸ್​ ಬ್ಯಾಟಿಂಗ್​ ಸರದಿಯಲ್ಲಿ ಆರಂಭಿಕ ಆಟಗಾರ ಟ್ರಾವಿಸ್​ ಹೆಡ್​(68) ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್​ ಮಾರ್ಕಸ್​ ಸ್ಟೋಯಿನಿಸ್​(59) ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಟಿಮ್​ ಡೇವಿಡ್​ ಅಜೇಯ 24 ರನ್​ ಬಾರಿಸಿದರು. ಡೇವಿಡ್​ ವಾರ್ನರ್​(1) ಮತ್ತು ನಾಯಕ ಮಿಚೆಲ್​ ಮಾರ್ಷ್(8) ಮತ್ತೆ ವಿಫಲರಾದರು.​

ಪಂದ್ಯದ ತಿರುವು


17 ಓವರ್​ ತನಕ ಪಂದ್ಯ ಸ್ಕಾಟ್ಲೆಂಡ್ ತಂಡದ ಪರ ಇತ್ತು. ಆದರೆ 18ನೇ ಓವರ್​ನಲ್ಲಿ ಪಂದ್ಯದ ಚಿತ್ರಣವೇ ಬದಲಾಯಿತು. ಬ್ರಾಡ್ ವೀಲ್ ಓವರ್​ನಲ್ಲಿ ಕ್ಯಾಮರೂನ್​ ಗ್ರೀನ್​ ಹ್ಯಾಟ್ರಿಕ್​ ಬೌಂಡರಿ ಬಾರಿಸಿ ಒಟ್ಟು 13 ರನ್​ ಕಸಿದರು. ಇದಕ್ಕೂ ಮುನ್ನ 2 ಓವರ್​ ನಡೆಸಿ ಒಂದು ಮೇಡನ್​ ಸಹಿತ ವಿಕೆಟ್ ಕಿತ್ತಿದ್ದ ಬ್ರಾಡ್ ವೀಲ್ ಈ ಓವರ್​ನಲ್ಲಿ ದುಬಾರಿಯಾದರು. ಇದು ಸ್ಕಾಟ್ಲೆಂಡ್​ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು. ಒಂದೊಮ್ಮೆ ಈ ಓವರ್​ ಕಂಟ್ರೋಲ್​ ಆಗುತ್ತಿದ್ದರೆ ಸ್ಕಾಟ್ಲೆಂಡ್​ಗೆ ಗೆಲುವಿನ ಅವಕಾಶ ಇರುತ್ತಿತ್ತು.

ಇದನ್ನೂ ಓದಿ T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ಬಿರುಸಿನ ಆಟಕ್ಕೆ ಒತ್ತು ನೀಡಿ ದೊಡ್ಡ ಮೊತ್ತವನ್ನು ಕಲೆಹಾಕಿತು. ಆರಂಭಿಕ ಆಟಗಾರ ಜಾರ್ಜ್ ಮುನ್ಸಿ ಆರಂಭದಿಂದಲೇ ಆಸೀಸ್​ ಬೌಲರ್​ಗಳ ಮೇಲೆರಗಿ ಮೂರು ಸಿಕ್ಸರ್ ಮತ್ತು 2 ಸಿಕ್ಸರ್​ ನೆರವಿನಿಂದ 35 ರನ್​ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ವಿಕೆಟ್​ ಪತನದ ಬಳಿಕ ಬಂದ ಬ್ರಾಂಡನ್ ಮೆಕ್‌ಮುಲ್ಲೆನ್ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ ಗಮನಸೆಳೆದರು. ಕೇವಲ 34 ಎಸೆತಗಳಿಂದ 60 ರನ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇವರ ಈ ಸೊಗಸಾದ ಬ್ಯಾಟಿಂಗ್​ ವೇಳೆ ಬರೋಬ್ಬರಿ 6 ಸಿಕ್ಸರ್​ ಮತ್ತು 2 ಬೌಂಡರಿ ಸಿಡಿಯಿತು. ಇವರಿಗೆ ಮತ್ತೊಂದು ತುದಿಯಲ್ಲಿ ನಾಯಕ ರಿಚಿ ಬೆರಿಂಗ್ಟನ್ ಕೂಡ ಉತ್ತಮ ಸಾಥ್​ ನೀಡಿದರು. ಬೆರಿಂಗ್ಟನ್ 31 ಎಸೆತಗಳಿಂದ 42 ರನ್​ ಬಾರಿಸಿ ಅಜೇಯರಾಗಿ ಉಳಿದರು. ಆದರೆ ಪಂದ್ಯ ಸೋತ ಕಾರಣ ಇವರ ಬ್ಯಾಟಿಂಗ್​ ಸಾಹಸ ವ್ಯರ್ಥಗೊಂಡಿತು. ಆಸೀಸ್​ ಪರ ಗ್ಲೆನ್​ ಮ್ಯಾಕ್ಸ್​ವೆಲ್​ 44 ರನ್​ ವೆಚ್ಚದಲ್ಲಿ 2 ವಿಕೆಟ್​ ಕಿತ್ತರು.

Continue Reading
Advertisement
Actor Darshan case pavithra Gowda manager Arrest
ಸ್ಯಾಂಡಲ್ ವುಡ್9 mins ago

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌

Gold Rate Today
ಚಿನ್ನದ ದರ15 mins ago

Gold Rate Today: ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್;‌ ಇಂದು ಏರಿಕೆಯಾಗದ ಬೆಲೆ

Tata Motors SUV Tata Nexon 7th Anniversary Benefit up to Rs 1 lakh for customers
ವಾಣಿಜ್ಯ26 mins ago

Tata Motors: ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವ; ಗ್ರಾಹಕರಿಗೆ 1 ಲಕ್ಷ ರೂ.ವರೆಗೆ ಉಳಿತಾಯ!

murder case
ಚಿಕ್ಕಬಳ್ಳಾಪುರ28 mins ago

Murder Case : ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

David Wiese Retirement
ಕ್ರೀಡೆ48 mins ago

David Wiese Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಡೇವಿಡ್ ವೈಸ್

Money Guide
ಮನಿ-ಗೈಡ್55 mins ago

Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ

PMAY
ವಾಣಿಜ್ಯ55 mins ago

PMAY: ಸ್ವಂತ ಮನೆ ಹೊಂದುವ ನಿಮ್ಮ ಕನಸು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮೂಲಕ ನನಸು; ಹೀಗೆ ಅಪ್ಲೈ ಮಾಡಿ

Bahaddur movie is re released on June 21
ಕರ್ನಾಟಕ57 mins ago

Bahaddur Movie: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ “ಬಹದ್ದೂರ್”!

Darshan Arrested renuka shed like hell more murders here
ಸ್ಯಾಂಡಲ್ ವುಡ್1 hour ago

Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

Foeticide
ಕರ್ನಾಟಕ1 hour ago

Foeticide: ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ21 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌