Bilionaires : ಕಳೆದ 6 ತಿಂಗಳಿನಲ್ಲಿ ಬಿಲಿಯನೇರ್‌ಗಳ ದಿನದ ಸರಾಸರಿ ಆದಾಯ 114 ಕೋಟಿ ರೂ! - Vistara News

ವಾಣಿಜ್ಯ

Bilionaires : ಕಳೆದ 6 ತಿಂಗಳಿನಲ್ಲಿ ಬಿಲಿಯನೇರ್‌ಗಳ ದಿನದ ಸರಾಸರಿ ಆದಾಯ 114 ಕೋಟಿ ರೂ!

Bilionaires ಕಳೆದ 6 ತಿಂಗಳಿನಲ್ಲಿ ಬಿಲಿಯನೇರ್‌ಗಳ ಸಂಪತ್ತಿನಲ್ಲಿ ದಿನಕ್ಕೆ 114 ಕೋಟಿ ರೂ. ಏರಿಕೆಯಾಗಿದೆ. ಕಾರಣವೇನು? ಇಲ್ಲಿದೆ ವಿವರ.

VISTARANEWS.COM


on

Elon musk and Zukerburg
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್:‌ ಫೇಸ್‌ಬುಕ್‌ ಸ್ಥಾಪಕ ಮಾರ್ಕ್‌ ಜುಕರ್‌ಬರ್ಗ್‌, ಟೆಸ್ಲಾ ಎಲೆಕ್ಟ್ರಿಕ್‌ ಕಾರು ಕಂಪನಿಯ ಮಾಲೀಕ ಎಲಾನ್‌ ಮಸ್ಕ್‌ ಸೇರಿದಂತೆ 500 ಶ್ರೀಮಂತ ಉದ್ಯಮಿಗಳು ಕಳೆದ 6 ತಿಂಗಳಿನಲ್ಲಿ ದಿನಕ್ಕೆ ಸರಾಸರಿ 114 ಕೋಟಿ ರೂ. (14 ದಶಲಕ್ಷ ಡಾಲರ್)‌ ಗಳಿಸಿದ್ದಾರೆ ಎಂದು ಬ್ಲೂಮ್‌ ಬರ್ಗ್‌ ಬಿಲಿಯನೇರ್ಸ್‌ ಇಂಡೆಕ್ಸ್‌ ತಿಳಿಸಿದೆ. (Bilionaires) ಬ್ಲೂಮ್‌ ಬರ್ಗ್‌ ಬಿಲಿಯನೇರ್ಸ್‌ ಇಂಡೆಕ್ಸ್‌ (Bloomberg billionaires Index) ವಿಶ್ವದ ಅತಿ ಶ್ರೀಮಂತ 500 ಮಂದಿಯ ಪಟ್ಟಿಯನ್ನು ಸಿದ್ಧಪಡಿಸಿದೆ. 2023ರ ಮೊದಲಾರ್ಧದಲ್ಲಿ ಅವರ ಸಂಪತ್ತಿನಲ್ಲಿ 852 ಶತಕೋಟಿ ಡಾಲರ್‌ ( 69 ಲಕ್ಷ ಕೋಟಿ ರೂ.) ಏರಿಕೆಯಾಗಿದೆ.

ಎಲಾನ್‌ ಮಸ್ಕ್ ಕಳೆದ ಆರು ತಿಂಗಳಿನಲ್ಲಿ ಅಂದರೆ 2023ರ ಜನವರಿ-ಜೂನ್‌ ಅವಧಿಯಲ್ಲಿ ತಮ್ಮ ಸಂಪತ್ತಿಗೆ 96 ಶತಕೋಟಿ ಡಾಲರ್‌ ಮೊತ್ತವನ್ನು ಸೇರಿಸಿದ್ದಾರೆ. (7.87 ಲಕ್ಷ ಕೋಟಿ ರೂ.) ಸೇರಿಸಿದ್ದಾರೆ. ಮತ್ತೊಂದು ಕಡೆ ಅದಾನಿ ಸಮೂಹದ ಸ್ಥಾಪಕ ಗೌತಮ್‌ ಅದಾನಿ ಅವರ ಸಂಪತ್ತಿನಲ್ಲಿ 60 ಶತಕೋಟಿ ಡಾಲರ್‌ (4.92 ಲಕ್ಷ ಕೋಟಿ ರೂ.) ನಷ್ಟವಾಗಿದೆ.

ಷೇರು ಮಾರುಕಟ್ಟೆಯಲ್ಲಿ ಸೂಚ್ಯಂಕಗಳ ಚೇತರಿಕೆಯೇ ಬಿಲಿಯನೇರ್‌ಗಳ ಸಂಪತ್ತು ಹೆಚ್ಚಳಕ್ಕೆ ಕಾರಣವಾಗಿದೆ. ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಈಗ ಜಗತ್ತಿನ ಅತಿ ಶ್ರೀಮಂತ ವ್ಯಕ್ತಿ. ಸೋಮವಾರ ಟೆಸ್ಲಾ ಷೇರು ದರದಲ್ಲಿ 7% ಹೆಚ್ಚಳವಾಗಿತ್ತು. ಆದರೆ ಎಲ್ಲ ಬಿಲಿಯನೇರ್‌ಗಳೂ ಲಾಭ ಗಳಿಸಿಲ್ಲ. ಗೌತಮ್‌ ಅದಾನಿ ಅವರಿಗೆ ಅತಿ ಹೆಚ್ಚು ನಷ್ಟವಾಗಿದೆ. ಜಗತ್ತಿನ 21ನೇ ದೊಡ್ಡ ಸಿರಿವಂತ ಅವರಾಗಿದ್ದಾರೆ. ಜನವರಿ 27ರಂದು ಹಿಂಡೆನ್‌ ಬರ್ಗ್‌ ಸ್ಫೋಟಕ ವರದಿ ಬಳಿಕ ಅದಾನಿ ಕಂಪನಿಗಳ ಷೇರು ದರ ಕುಸಿದಿತ್ತು. ಇತ್ತೀಚಿನ ತಿಂಗಳುಗಳಲ್ಲಿ ಷೇರು ದರ ಚೇತರಿಸಿದೆ.

ಸೆನ್ಸೆಕ್ಸ್‌, ನಿಫ್ಟಿ ಮುಂದುವರಿದ ನಾಗಾಲೋಟ: ಷೇರು ಮಾರುಕಟ್ಟೆಯಲ್ಲಿ ಸೂಚ್ಯಂಕ ಸೆನ್ಸೆಕ್ಸ್‌ ಮತ್ತು ನಿಫ್ಟಿ ಮಂಗಳವಾರ ನಾಗಾಲೋಟ ಮುಂದುವರಿಸಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್‌ 274 ಅಂಕ ಚೇತರಿಸಿಕೊಂಡು 65,479ಕ್ಕೆ ದಿನದ ವಹಿವಾಟು ಮುಕ್ತಾಯಗೊಳಿಸಿತು. ನಿಫ್ಟಿ 66 ಅಂಕ ಗಳಿಸಿ 19,389ಕ್ಕೆ ಸ್ಥಿರವಾಯಿತು. ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತದ ಎಕಾನಮಿ ಪ್ರಬಲ ಬೆಳವಣಿಗೆ ಸಾಧಿಸುತ್ತಿದೆ. ಇದರ ಪರಿಣಾಮ ವಿದೇಶಿ ಸಾಂಸ್ಥಿಕ ಹೂಡಿಕೆದಾರರ ಹೂಡಿಕೆಯ ಪ್ರಮಾಣ ಹೆಚ್ಚುತ್ತಿದೆ. ಆಟೊಮೊಬೈಲ್‌, ಬ್ಯಾಂಕಿಂಗ್‌, ಹೆಲ್ತ್‌ಕೇರ್‌, ತೈಲ ಮತ್ತು ಅನಿಲ, ರಿಟೇಲ್‌, ಟೆಲಿಕಾಂ, ಲಾಜಿಸ್ಟಿಕ್ಸ್‌ ವಲಯದ ಷೇರುಗಳು ಲಾಭ ಗಳಿಸಿವೆ.

ಮೋತಿಲಾಲ್‌ ಓಸ್ವಾಲ್‌ ಸೆಕ್ಯುರಿಟೀಸ್‌ ಪ್ರಕಾರ, ಐಸಿಐಸಿಐ ಬ್ಯಾಂಕ್‌, ಐಟಿಸಿ, ಎಲ್&ಟಿ, ಟೈಟನ್‌, ಎಂ&ಎಂ, ಎಚ್‌ಸಿಎಲ್‌ ಟೆಕ್ನಾಲಜೀಸ್‌, ಅಪೊಲೊ ಹಾಸ್ಪಿಟಲ್ಸ್‌, ಅಲ್ಟ್ರಾಟೆಕ್‌ ಸಿಮೆಂಟ್‌, ಒಎನ್‌ಜಿಸಿ, ಅಶೋಕ್‌ ಲೇಲ್ಯಾಂಡ್‌, ಮೆಟ್ರೊ ಬ್ರಾಂಡ್ಸ್‌, ಎಂ&ಎಂ ಫೈನಾನ್ಷಿಯಲ್‌ ಸರ್ವೀಸ್‌, ಎಪಿಎಲ್‌ ಅಪೊಲೊ, ಗೋದ್ರೇಜ್‌ ಪ್ರಾಪರ್ಟೀಸ್‌ ಷೇರು ದರ ಲಾಭದಾಯಕವಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Stock Market : ಸೆನ್ಸೆಕ್ಸ್‌ ಮೊದಲ ಬಾರಿಗೆ 65,000ಕ್ಕೆ ಜಿಗಿತ, ನಿಫ್ಟಿ ಹೈ ಜಂಪ್

ಎಕ್ಸಿಸ್‌ ಸೆಕ್ಯುರಿಟೀಸ್‌ ಪ್ರಕಾರ ಐಸಿಐಸಿಐ ಬ್ಯಾಂಕ್‌, ಮಾರುತಿ ಸುಜುಕಿ, ಎಸ್‌ಬಿಐ, ಆರ್‌ಐಟಿಇಎಸ್‌, ಫೆಡರಲ್‌ ಬ್ಯಾಂಕ್‌, ವರುಣ್‌ ಬೇವರೇಜಸ್‌, ಅಶೋಕ್‌ ಲೇಲ್ಯಾಂಡ್‌, ಪಿಎನ್‌ಸಿ ಇನ್‌ಫ್ರಾಟೆಕ್‌, ಐಟಿಸಿ, ಆರತಿ ಡ್ರಗ್ಸ್‌, ರೆಲಾಕ್ಸೊ ಫುಟ್‌ವೇರ್ಸ್‌, ಮಹೀಂದ್ರಾ ಸಿಐಇ, ಪೊಲಿಕ್ಯಾಬ್‌ ಇಂಡಿಯಾ ಷೇರುಗಳು ಲಾಭದಾಯಕವಾಗುವ ನಿರೀಕ್ಷೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Sensex Crash: ರಾಜಕೀಯ ಅನಿಶ್ಚಿತತೆಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಲ್ &ಟಿ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಐಟಿಸಿ ಸೇರಿದಂತೆ ದೊಡ್ಡ ಸಂಸ್ಥೆಗಳ ಷೇರುಗಳು ವ್ಯಾಪಕ ಮಾರಾಟವನ್ನು ಕಂಡವು. ಈ ಪ್ರಮುಖ ಕಂಪನಿಗಳ ಸೂಚ್ಯಂಕದ ಕುಸಿತವು ಒಟ್ಟಾರೆ ಕುಸಿತ 80 ಪ್ರತಿಶತದಷ್ಟು ಪಾಲು ಹೊಂದಿದೆ. ಷೇರು ಮಾರುಕಟ್ಟೆಗಳ ಮೇಲೆ ಗಣನೀಯವಾಗಿ ಕೆಳಮುಖ ಒತ್ತಡ ಬೀರಿದೆ.

VISTARANEWS.COM


on

Sensex crash
Koo

ಮುಂಬಯಿ : ಎಫ್ ಐಐ ಹೊರಹರಿವು ಮತ್ತು ಯುಎಸ್ ಬಾಂಡ್ ಹೆಚ್ಚಳದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಗಳು ಗುರುವಾರ ತೀವ್ರ ಕುಸಿತ (Sensex Crash) ಕಂಡಿವೆ. ಬಿಎಸ್ಇ (BSE) ಸೆನ್ಸೆಕ್ಸ್ 1,132 ಪಾಯಿಂಟ್ಸ್ ಕುಸಿದು 72,334 ಕ್ಕೆ ತಲುಪಿದ್ದರೆ, ನಿಫ್ಟಿ 50 370 ಪಾಯಿಂಟ್ಸ್ ಕುಸಿದು 21,932 ಕ್ಕೆ ತಲುಪಿದೆ. ಬಿಎಸ್ಇ ಸೂಚ್ಯಂಕವು ಅಂತಿಮವಾಗಿ 1,062 ಪಾಯಿಂಟ್​​ ಅಂದರೆ ಶೇಕಡಾ 1.45 ರಷ್ಟು ಕುಸಿದು 72,404 ಕ್ಕೆ ಕೊನೆಗೊಂಡಿತು. ನಿಫ್ಟಿ 50 ಕೂಡ 345 ಪಾಯಿಂಟ್ ಅಂದರೆ ಶೇಕಡಾ 1.55 ರಷ್ಟು ಕುಸಿದು 21,958 ಕ್ಕೆ ತಲುಪಿದೆ.

ಮಾರುಕಟ್ಟೆಗಳಲ್ಲಿ, ಬಿಎಸ್ಇ ಮಿಡ್​ಕ್ಯಾಪ್​ ಸೂಚ್ಯಂಕವು ಶೇಕಡಾ 2 ರಷ್ಟು ಕುಸಿದರೆ, ಬಿಎಸ್ಇ ಸ್ಮಾಲ್ ಕ್ಯಾಪ್ ಸೂಚ್ಯಂಕವು ಶೇಕಡಾ 2.4 ರಷ್ಟು ಕುಸಿದಿದೆ. “ಮಾರುಕಟ್ಟೆಯ ಕುಸಿತಕ್ಕೆ ಮುಖ್ಯವಾಗಿ ಸಾರ್ವತ್ರಿಕ ಚುನಾವಣೆಗಳ ಸುತ್ತಲಿನ ಅನಿಶ್ಚಿತತೆ ಕಾರಣವಾಗಿದೆ. ಈ ಅನಿಶ್ಚಿತತೆಯು ಭಾರತದ ಚಂಚಲತೆಯ ಮಾಪಕವಾದ ಇಂಡಿಯಾ ವಿಐಎಕ್ಸ್ ಅನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಇದು 52 ವಾರಗಳ ಗರಿಷ್ಠ 19 ಕ್ಕೆ ತಲುಪಿದೆ, ಇದು ಮಾರುಕಟ್ಟೆ ಆತಂಕವನ್ನು ಸೂಚಿಸಿದೆ. ಲಾರ್ಜ್ ಕ್ಯಾಪ್ ಕಂಪನಿಗಳ ನಾಲ್ಕನೇ ತ್ರೈಮಾಸಿಕ ಗಳಿಕೆಯ ಇಳಿಕೆಯು ಹೂಡಿಕೆದಾರರ ನಿರಾಸಕ್ತಿಗೆ ಕಾರಣವಾಗಿದೆ ಎಂದು ಷೇರು ಮಾರುಕಟ್ಟೆ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ಅನಿಶ್ಚಿತತೆಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಲ್ &ಟಿ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಐಟಿಸಿ ಸೇರಿದಂತೆ ದೊಡ್ಡ ಸಂಸ್ಥೆಗಳ ಷೇರುಗಳು ವ್ಯಾಪಕ ಮಾರಾಟವನ್ನು ಕಂಡವು. ಈ ಪ್ರಮುಖ ಕಂಪನಿಗಳ ಸೂಚ್ಯಂಕದ ಕುಸಿತವು ಒಟ್ಟಾರೆ ಕುಸಿತ 80 ಪ್ರತಿಶತದಷ್ಟು ಪಾಲು ಹೊಂದಿದೆ. ಷೇರು ಮಾರುಕಟ್ಟೆಗಳ ಮೇಲೆ ಗಣನೀಯವಾಗಿ ಕೆಳಮುಖ ಒತ್ತಡಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಮೇ ತಿಂಗಳಾದ್ಯಂತ ತಮ್ಮ ಹೂಡಿಕೆಗಳನ್ನು ಸಕ್ರಿಯವಾಗಿ ಮಾರಾಟ ಮಾಡುತ್ತಿದ್ದಾರೆ. ಒಟ್ಟು ಮಾರಾಟ 15,863.14 ಕೋಟಿ ರೂ. ಆಗಿದ್ದು ಇದು ಕೂಡ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಮೇ 8 ರಂದು ವಿದೇಶಿ ಹೂಡಿಕೆದಾರರು 6,669.10 ಕೋಟಿ ರೂ.ಗಳ ಈಕ್ವಿಟಿಗಳನ್ನು ಹಿಂತೆಗೆದುಕೊಂಡಿದ್ದಾರೆ. ವಿದೇಶಿ ಬಂಡವಾಳ ಹೂಡಿಕೆದಾರರು 2025ರ ಹಣಕಾಸು ವರ್ಷದಲ್ಲಿ ಇದುವರೆಗೆ 13,747 ಕೋಟಿ ರೂ.ಗಳ ಈಕ್ವಿಟಿಗಳನ್ನು ಹಿಂತೆಗೆದುಕೊಂಡಿದ್ದಾರೆ.

ದೇಶೀಯ ಸಾಂಸ್ಥಿಕ ಹೂಡಿಕೆದಾರರಿಂದ (ಡಿಐಐ) ಕಡಿಮೆ ಖರೀದಿ ಚಟುವಟಿಕೆಯು ಮಾರುಕಟ್ಟೆಯ ಚಂಚಲತೆಗೆ ಕಾರಣವಾಗಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ. ಕಳೆದ ಒಂದು ತಿಂಗಳಲ್ಲಿ, ನಿಫ್ಟಿ ಶೇಕಡಾ 1.5 ರಷ್ಟು ಕುಸಿದರೆ, ಶಾಂಘೈ ಕಾಂಪೊಸಿಟ್ ಶೇಕಡಾ 2.62 ಮತ್ತು ಹ್ಯಾಂಗ್ ಸೆಂಗ್ ಶೇಕಡಾ 8.8 ರಷ್ಟು ಏರಿಕೆಯಾಗಿದೆ. ಚೀನಾ ಮತ್ತು ಹಾಂಗ್ ಕಾಂಗ್ ಮಾರುಕಟ್ಟೆಗಳು ಸುಮಾರು 10 ಪಿಇಗಳೊಂದಿಗೆ ಇಳಿಕೆ ಕಂಡಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಲೋಕ ಸಭಾ ಚುನಾವಣೆಯ ಆರಂಭಿಕ ಮೂರು ಹಂತಗಳಲ್ಲಿ ಕಂಡುಬಂದ ಕಡಿಮೆ ಮತದಾನವು ಮಾರುಕಟ್ಟೆಗಳ ಆತಂಕ ಹೆಚ್ಚಿಸಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Continue Reading

ಮನಿ-ಗೈಡ್

Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Money Guide: ರಾಷ್ಟ್ರೀಯ ಪಿಂಚಣಿ ಯೋಜನೆ (NPS) ದೇಶದಲ್ಲಿರುವ ಅತ್ಯುತ್ತಮ ನಿವೃತ್ತಿ ಯೋಜನೆ ಎನಿಸಿಕೊಂಡಿದೆ. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಆದರೆ ಕೆಲವೊಮ್ಮೆ ಅನೇಕ ಕಾರಣಗಳಿಂದ ಎನ್‌ಪಿಎಸ್‌ ಖಾತೆ ನಿಷ್ಕ್ರೀಯವಾಗುತ್ತದೆ. ಇದನ್ನು ಹೇಗೆ ಸರಿಪಡಿಸಬಹುದು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ಪ್ರತಿಯೊಬ್ಬ ಉದ್ಯೋಗಿಯೂ ಕೆಲಸಕ್ಕೆ ಸೇರಿದಾಗಿನಿಂದಲೇ ನಿವೃತ್ತಿ ಜೀವನಕ್ಕಾಗಿ ಯೋಜನೆ ರೂಪಿಸುವುದು ಅಗತ್ಯ. ಅದಕ್ಕಾಗಿ ಈಗಲೇ ಒಂದಷ್ಟು ಮೊತ್ತವನ್ನು ಕೂಡಿಡಲು ಆರಂಭಿಸಬೇಕು ಎಂದು ಸಲಹೆ ನೀಡುತ್ತಾರೆ ಆರ್ಥಿಕ ತಜ್ಞರು. ಇದಕ್ಕಾಗಿ ದೇಶದಲ್ಲಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ಈ ಪೈಕಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (NPS) ಕೂಡ ಒಂದು. ಎನ್‌ಪಿಎಸ್‌ ಅನ್ನು ನಿವೃತ್ತಿಗೆ ಉತ್ತಮ ಯೋಜನೆ ಎಂದು ಪರಿಗಣಿಸಲಾಗುತ್ತದೆ. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಆದರೆ ಕೆಲವೊಮ್ಮೆ ಅನೇಕ ಕಾರಣಗಳಿಂದ ಎನ್‌ಪಿಎಸ್‌ ಖಾತೆ ನಿಷ್ಕ್ರೀಯವಾಗುತ್ತದೆ. ಇದಕ್ಕೆ ಕಾರಣವೇನು? ಇದನ್ನು ಹೇಗೆ ಸರಿಪಡಿಸಬಹುದು? ಮುಂತಾದ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Money Guide).

ಸ್ಥಗಿತಗೊಂಡ ಎನ್‌ಪಿಎಸ್‌ ಖಾತೆಯನ್ನು ಸಕ್ರಿಯಗೊಳಿಸಲು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಕೆಲವೊಂದು ಮಾರ್ಗಸೂಚಿಗಳನ್ನು ನೀಡಿದೆ. ಈ ಕುರಿತಾದ ವಿವರ ಇಲ್ಲಿದೆ.

ಯಾಕಾಗಿ ಖಾತೆ ಸ್ಥಗಿತಗೊಳ್ಳುತ್ತದೆ?

ಕನಿಷ್ಠ ಪಾವತಿಯ ಕೊರತೆ: ಟೈರ್ 1 ಎನ್‌ಪಿಎಸ್‌ ಖಾತೆಗಳಿಗೆ ವಾರ್ಷಿಕ ಕನಿಷ್ಠ 1,000 ರೂ. ಹೂಡಿಕೆ ಮಾಡಬೇಕಾಗುತ್ತದೆ. ಒಂದು ವರ್ಷದೊಳಗೆ ಈ ನಿಯಮ ಪಾಲಿಸದಿದ್ದರೆ ನಿಮ್ಮ ಖಾತೆಯನ್ನು ಸ್ಥಗಿತಗೊಳಿಸಲಾಗುತ್ತದೆ. ಟೈರ್ 1 ಸ್ಥಗಿತಗೊಂಡರೆ ಟೈರ್ 2 ಖಾತೆಗಳು ಸಹ ನಿಷ್ಕ್ರಿಯವಾಗುತ್ತವೆ.

ಅಪೂರ್ಣ ಕೆವೈಸಿ ಪ್ರಕ್ರಿಯೆ: ಎನ್‌ಪಿಎಸ್‌ ಖಾತೆಗಳಿಗೆ ಕೆವೈಸಿ (Know Your Customer) ಅಪ್‌ಡೇಟ್‌ ಮಾಡುವುದು ಕಡ್ಡಾಯಗೊಳಿಸಲಾಗಿದೆ. ನೋಂದಣಿ ವೇಳೆ ಅಪೂರ್ಣ ಮಾಹಿತಿ ನೀಡಿದ್ದರೆ ಅಥವಾ ಸೂಕ್ತ ದಾಖಲೆ ಒದಗಿಸದಿದ್ದರೆ ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಳ್ಳುತ್ತದೆ.

ದಾಖಲಾತಿ ನಮೂನೆ ಸಲ್ಲಿಕೆಯ ವಿಳಂಬ: ತಾಂತ್ರಿಕ ದೋಷ ಅಥವಾ ಕೇಂದ್ರ ರೆಕಾರ್ಡ್ ಕೀಪಿಂಗ್ ಏಜೆನ್ಸಿಗೆ (CRA) ದಾಖಲಾತಿ ನಮೂನೆಯನ್ನು ಸಲ್ಲಿಸುವಲ್ಲಿನ ವಿಳಂಬವು ಖಾತೆ ಸ್ಥಗಿತಗೊಳಿಸಲು ಕಾರಣವಾಗಬಹುದು.

ಆನ್‌ಲೈನ್‌ ಮೂಲಕ ಹೀಗೆ ಸಕ್ರಿಯಗೊಳಿಸಿ

ಕನಿಷ್ಠ ಕೊಡುಗೆ ಪಾವತಿಸಿ / ದಂಡ ಕಟ್ಟಿ: ಎನ್‌ಪಿಎಸ್‌ ಅಕೌಂಟ್‌ಗೆ ಲಾಗಿನ್‌ ಆಗಿ Contribution ವಿಭಾಗಕ್ಕೆ ತೆರಳಿ. ನಿಮ್ಮ ಖಾತೆ ಸ್ಥಗಿತಗೊಂಡ ಅವಧಿಯಿಂದ ತೊಡಗಿ ಇದುವರೆಗೆ ತಿಂಗಳಿಗೆ ಕನಿಷ್ಠ 500 ರೂ. ಪಾವತಿಸಿ. ಹೆಚ್ಚುವರಿಯಾಗಿ 100 ರೂ. ದಂಡವನ್ನೂ ಕಟ್ಟಿ.

ದೃಢೀಕರಣ ಮತ್ತು ಖಾತೆ ಪುನರುಜ್ಜೀವನ: ಆನ್‌ಲೈನ್‌ ಪಾವತಿಯನ್ನು ಯಶಸ್ವಿಯಾಗಿ ಮಾಡಿದ ನಂತರ ಇಮೇಲ್ ಅಕೌಂಟ್‌ಗೆ ದೃಢೀಕರಣದ ಸಂದೇಶ ಬರುತ್ತದೆ. ಬಳಿಕ ಪಿಎಫ್‌ಆರ್‌ಡಿಎ ನಿಮ್ಮ ಖಾತೆಯನ್ನು ಪರಿಶೀಲಿಸಿ ಕೆಲವೇ ದಿನಗಳಲ್ಲಿ ಅದನ್ನು ಮತ್ತೆ ಸಕ್ರಿಯಗೊಳಿಸುತ್ತದೆ.

ಆಫ್‌ಲೈನ್‌ ಮೂಲಕ ಸಕ್ರಿಯಗೊಳಿಸುವ ವಿಧಾನ

ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ: ದಂಡ ಸಹಿತ ಬಾಕಿ ಇರುವ ಮೊತ್ತವನ್ನು ಪಾವತಿಸಿ. ಬಳಿಕ ಎನ್‌ಪಿಎಸ್‌ ವೆಬ್‌ಸೈಟ್‌ನಿಂದ UOS-S10-A ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿ. ಅದನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ ಪ್ಯಾನ್‌ ಕಾರ್ಡ್‌ ಪ್ರತಿಯನ್ನು ಲಗತ್ತಿಸಿ. ಇದನ್ನು ನಿಮ್ಮ ಪಿಒಪಿ ಶಾಖೆ (ಬ್ಯಾಂಕ್ ಅಥವಾ ನಿಯೋಜಿತ ಏಜೆನ್ಸಿ)ಗೆ ನೀಡಿ. ಪಿಒಪಿ ನಿಮ್ಮ ಮನವಿಯನ್ನು ಪರಿಶೀಲಿಸಿ ಪಿಎಫ್‌ಆರ್‌ಡಿಎಗೆ ಕಳುಹಿಸುತ್ತದೆ. ಕೆಲವೇ ದಿನಗಳಲ್ಲಿ ಖಾತೆ ಸಕ್ರಿಯಗೊಂಡಿರುವ ಬಗ್ಗೆ ಎಸ್‌ಎಂಎಸ್‌ ಅಥವಾ ಇಮೇಲ್‌ಗೆ ಮಾಹಿತಿ ರವಾನೆಯಾಗುತ್ತದೆ.

ಆಧಾರ್ ದೃಢೀಕರಣ ಕಡ್ಡಾಯ

ದೇಶಾದ್ಯಂತ ಆನ್‌ಲೈನ್‌ ವಂಚನೆ ಪ್ರಕರಣಗಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ ಖಾತೆಗಳ ಲಾಗಿನ್ ಪ್ರಕ್ರಿಯೆಯಲ್ಲಿ ಬದಲಾವಣೆ ತಂದಿದೆ. ಏಪ್ರಿಲ್ 1ರಿಂದ ಹೊಸ ನಿಯಮ- ಕಡ್ಡಾಯ ಆಧಾರ್ ಅಥೆಂಟಿಕೇಷನ್‌ ಜಾರಿಗೆ ಬಂದಿದೆ.  

ಇದನ್ನೂ ಓದಿ: Money Guide: ಗಮನಿಸಿ; ಏ. 1ರಿಂದ ಎನ್‌ಪಿಎಸ್ ವಹಿವಾಟಿಗೆ ಆಧಾರ್ ದೃಢೀಕರಣ ಕಡ್ಡಾಯ: ಏನಿದು ಹೊಸ ನಿಯಮ ? ಯಾಕಾಗಿ ?

Continue Reading

ದೇಶ

Air India Express: 30 ಸಿಬ್ಬಂದಿಯನ್ನು ವಜಾಗೊಳಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌; ಇಂದು 74 ವಿಮಾನಗಳ ಹಾರಾಟ ರದ್ದು

Air India Express: ಸಾಮೂಹಿಕ ಅನಾರೋಗ್ಯದ ರಜೆ ಹಾಕಿರುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ನ 30 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ ರಜೆ ಹಾಕಿರುವ ಹಿನ್ನೆಲೆಯಲ್ಲಿ ಹಲವು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಹಾರಾಟ ರದ್ದಾಗಿವೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಅನೇಕ ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ. ಸಿಬ್ಬಂದಿ ಕೊರತೆಯಿಂದ ಗುರುವಾರ ಸುಮಾರು 74 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಬುಧವಾರ ಸುಮಾರು 86 ವಿಮಾನಗಳ ಹಾರಾಟ ರದ್ದಾಗಿತ್ತು.

VISTARANEWS.COM


on

Air India Express
Koo

ನವದೆಹಲಿ: ಸಾಮೂಹಿಕ ಅನಾರೋಗ್ಯದ ರಜೆ (Sick Leave) ಹಾಕಿರುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ (Air India Express) ವಿಮಾನದ 30 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ ರಜೆ ಹಾಕಿರುವ ಹಿನ್ನೆಲೆಯಲ್ಲಿ ಹಲವು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಹಾರಾಟ ರದ್ದಾಗಿವೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಅನೇಕ ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ. ಇಂದು ಸಂಜೆ 4 ಗಂಟೆಯೊಳಗೆ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಆಗಮಿಸದಿದ್ದರೆ ಶಿಸ್ತು ಕ್ರಮ ನಡೆಸಲಾಗುವುದು ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಕೊರತೆಯಿಂದ ಗುರುವಾರ ಸುಮಾರು 74 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಬುಧವಾರ ಟಾಟಾ ಸಮೂಹದ ಒಡೆತನದಲ್ಲಿರುವ ಏರ್ ಇಂಡಿಯಾದ ಅಂಗಸಂಸ್ಥೆಯಾದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ ಸುಮಾರು 86 ವಿಮಾನಗಳ ಹಾರಾಟ ರದ್ದಾಗಿತ್ತು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದರು.

30ಕ್ಕೂ ಹೆಚ್ಚು ಸಿಬ್ಬಂದಿಗೆ ನೀಡಲಾದ ವಜಾ ಪತ್ರದಲ್ಲಿ, ಸಾಮೂಹಿಕ ರಜೆಯು ʼಯಾವುದೇ ಸಮರ್ಥನೀಯ ಕಾರಣವಿಲ್ಲದೆ ಪೂರ್ವ ನಿಯೋಜಿತ ಮತ್ತು ಸಂಘಟಿತ ಕೆಲಸದಿಂದ ದೂರವಿರುವುದನ್ನು ಸ್ಪಷ್ಟವಾಗಿ ಸೂಚಿಸುತ್ತದೆʼ ಎಂದು ಉಲ್ಲೇಖಿಸಲಾಗಿದೆ. “ನಿಮ್ಮ ಪ್ರತಿಭಟನೆ ಕಾರಣದಿಂದ ಹೆಚ್ಚಿನ ಸಂಖ್ಯೆಯ ವಿಮಾನಗಳನ್ನು ರದ್ದುಗೊಳಿಸಬೇಕಾಯಿತು. ಇದು ಕಂಪನಿಯ ಪ್ರಯಾಣಿಕರಿಗೆ ಭಾರಿ ಅನಾನುಕೂಲತೆಯನ್ನು ಉಂಟು ಮಾಡಿದೆ. ನಿಮ್ಮ ಕೃತ್ಯವು ಸಾರ್ವಜನಿಕ ಹಿತಾಸಕ್ತಿಯನ್ನು ವಿರುದ್ಧವಾಗಿದೆ. ಜತೆಗೆ ಕಂಪನಿಗೆ ಗಂಭೀರ ವಿತ್ತೀಯ ನಷ್ಟವನ್ನು ಉಂಟು ಮಾಡಿದೆʼʼ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಚೆನ್ನೈಯಿಂದ ಕೋಲ್ಕತ್ತಾ, ಚೆನ್ನೈಯಿಂದ ಸಿಂಗಾಪುರ, ತಿರುಚ್ಚಿಯಿಂದ ಸಿಂಗಾಪುರ ಮತ್ತು ಜೈಪುರದಿಂದ ಮುಂಬೈಗೆ ತೆರಳು ವಿಮಾನಗಳು ರದ್ದಾಗಿವೆ ಎಂದು ಮೂಲಗಳು ತಿಳಿಸಿವೆ.

ಪ್ರತಿಭಟನೆಗೆ ಕಾರಣವೇನು?

ಟಾಟಾ ಗ್ರೂಪ್‌ ಜತೆಗೆ ಏರ್‌ ಇಂಡಿಯಾ ವಿಲೀನಗೊಂಡ ಬಳಿಕ ಸಿಬ್ಬಂದಿ ನಡುವೆ ತಾರತಮ್ಯ ಸಮಸ್ಯೆ ಉಂಟಾಗಿತ್ತು. ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ ಕೆಲವೊಂದು ಸಿಬ್ಬಂದಿಗೆ ಕೆಲದರ್ಜೆಯ ನೌಕರಿಯನ್ನು ನೀಡಲಾಗುತ್ತಿದೆ. ಪರಿಹಾರ ಪ್ಯಾಕೇಜ್‌ನ ಪ್ರಮುಖ ಭಾಗಗಳನ್ನು ಮಾರ್ಪಡಿಸಲಾಗಿದೆ ಅಥವಾ ತೆಗೆದು ಹಾಕಲಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಬಲವಂತವಾಗಿ ಬಾಯಿಮುಚ್ಚಿಸಲಾಗುತ್ತಿದೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ವಿಮಾನಯಾನ ಸಂಸ್ಥೆಯು ಪ್ರಸ್ತುತ ಎಐಎಕ್ಸ್ ಕನೆಕ್ಟ್ (ಹಿಂದಿನ ಏರ್ ಏಷ್ಯಾ ಇಂಡಿಯಾ) ಅನ್ನು ತನ್ನೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಯಲ್ಲಿದೆ. ಪೈಲಟ್ ಸಮಸ್ಯೆಗಳಿಂದಾಗಿ ಟಾಟಾ ಗ್ರೂಪ್ ಪೂರ್ಣ-ಸೇವಾ ವಾಹಕ ವಿಸ್ತಾರಾ ರದ್ದಾಗಿರುವ ಬೆನ್ನಲ್ಲೇ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಈ ಬಿಕ್ಕಟ್ಟು ಆರಂಭವಾಗಿದೆ. ಏರ್ ಇಂಡಿಯಾದೊಂದಿಗೆ ವಿಲೀನಗೊಳ್ಳುವ ಪ್ರಕ್ರಿಯೆ ಬಗ್ಗೆ ವಿಸ್ತಾರಾದಲ್ಲಿದ್ದ ಪೈಲಟ್‌ಗಳಲ್ಲೂ ಅಸಮಾಧಾನವು ಭುಗಿಲೆದ್ದಿತ್ತು. ಹೊಸ ಒಪ್ಪಂದಗಳನ್ನು ಅನುಸರಿಸಿ, ಪೈಲಟ್‌ಗಳು ವಿಮಾನಗಳನ್ನು ನಿರ್ವಹಿಸುವ ರೋಸ್ಟರ್‌ಗಳು ಮತ್ತು ಅವರ ವೇತನ ಪ್ಯಾಕೇಜ್‌ಗಳ ಅಂಶಗಳ ಬಗ್ಗೆ ಕಳವಳಗಳಿವೆ. ಈ ಎಲ್ಲ ಕಾರಣಗಳಿಂದ ಏರ್‌ ಇಂಡಿಯಾ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Air India | ಏರ್‌ ಇಂಡಿಯಾದಲ್ಲಿ ವಿಸ್ತಾರ, ಏರ್‌ ಏಷ್ಯಾ, ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಲೀನ ಶೀಘ್ರ

Continue Reading

ಧಾರ್ಮಿಕ

Akshaya Tritiya 2024: ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಯೊಂದೇ ಅಲ್ಲ! ಹೀಗೆ ಮಾಡಿಯೂ ಸಮೃದ್ಧಿ ಹೊಂದಬಹುದು!

‘ಅಕ್ಷಯ’ ಎಂಬ ಹೆಸರಿನ ಅರ್ಥ ಶಾಶ್ವತ ಮತ್ತು ‘ತೃತೀಯ’ ಎಂದರೆ ಮೂರನೇ ಚಂದ್ರನ ದಿನವನ್ನು ಸೂಚಿಸುತ್ತದೆ. ಅಕ್ಷಯ ತೃತೀಯದಂದು ವಿಷ್ಣು ದೇವರು ಆರನೇ ಅವತಾರವಾದ ಪರಶುರಾಮನ ರೂಪದಲ್ಲಿ ಅವತರಿಸಿದನೆಂದು ನಂಬಲಾಗಿದೆ. ಈ ದಿನದಂದು ಗಂಗಾ ದೇವಿಯು ಸ್ವರ್ಗದಿಂದ ಭೂಮಿಗೆ ಇಳಿದಳು ಎಂದೂ ಹೇಳಲಾಗುತ್ತದೆ. ಅಕ್ಷಯ ತೃತೀಯ ದಿನ ಆಚರಿಬಹುದಾದ ಹಲವು ಸಂಪ್ರದಾಯಗಳಿವೆ. ಈ ಬಗ್ಗೆ ಅರಿತುಕೊಂಡು ನೀವು, ಕುಟುಂಬದೊಂದಿಗೆ ಅಕ್ಷಯ ತೃತಿಯವನ್ನು (Akshaya Tritiya 2024) ಆಚರಿಸಿ.

VISTARANEWS.COM


on

By

Akshaya Tritiya 2024
Koo

ಪವಿತ್ರ ಯುಗ ಮತ್ತು ಸತ್ಯ ಯುಗದ ಆರಂಭವನ್ನು ಸೂಚಿಸುವ ಅಕ್ಷಯ ತೃತೀಯ (Akshaya Tritiya 2024) ವೈಶಾಖ ಮಾಸದ ಮೂರನೇ ಚಂದ್ರನ ದಿನ ಅಕ್ಷಯ ತೃತೀಯವನ್ನು ಆಚರಿಸಲಾಗುತ್ತದೆ. ಈ ದಿನವು ಹಿಂದೂ (hindu) ಸಂಸ್ಕೃತಿಯಲ್ಲಿ (culture) ಬಹಳ ಮಹತ್ವವನ್ನು ಹೊಂದಿದೆ. ಹೀಗಾಗಿ ಈ ದಿನ ಹೊಸ ಉದ್ಯಮಗಳನ್ನು ಪ್ರಾರಂಭಿಸಲು, ಹೂಡಿಕೆ ಮಾಡಲು, ಚಿನ್ನ (gold) ಅಥವಾ ಆಸ್ತಿಯನ್ನು (property) ಖರೀದಿಸಲು, ಮದುವೆ ಅಥವಾ ಇತರ ಶುಭ ಸಂದರ್ಭಗಳಿಗೆ ಉತ್ತಮ ಸಮಯ ಎಂದೇ ಪರಿಗಣಿಸಲಾಗಿದೆ.

‘ಅಕ್ಷಯ’ ಎಂಬ ಹೆಸರಿನ ಅರ್ಥ ಶಾಶ್ವತ ಮತ್ತು ‘ತೃತೀಯ’ ಎಂದರೆ ಮೂರನೇ ಚಂದ್ರನ ದಿನವನ್ನು ಸೂಚಿಸುತ್ತದೆ. ಹಿಂದೂ ಪುರಾಣಗಳ ಪ್ರಕಾರ ಅಕ್ಷಯ ತೃತೀಯದಂದು ವಿಷ್ಣು ದೇವರು ಆರನೇ ಅವತಾರವಾದ ಪರಶುರಾಮನ ರೂಪದಲ್ಲಿ ಅವತರಿಸಿದನೆಂದು ನಂಬಲಾಗಿದೆ. ಈ ದಿನದಂದು ಗಂಗಾ ದೇವಿಯು ಸ್ವರ್ಗದಿಂದ ಭೂಮಿಗೆ ಇಳಿದಳು ಎಂದೂ ಹೇಳಲಾಗುತ್ತದೆ.

ಅಕ್ಷಯ ತೃತಿಯವನ್ನು ಪವಿತ್ರ ನದಿಗಳಲ್ಲಿ ವಿಶೇಷವಾಗಿ ಗಂಗಾದಲ್ಲಿ ಸ್ನಾನ ಮಾಡಲು ಮತ್ತು ಸಮೃದ್ಧಿ ಹಾಗೂ ಯೋಗಕ್ಷೇಮಕ್ಕಾಗಿ ಆಶೀರ್ವಾದವನ್ನು ಪಡೆಯಲು ಮಂಗಳಕರ ದಿನವೆಂದು ಪರಿಗಣಿಸಲಾಗಿದೆ. ಅಕ್ಷಯ ತೃತೀಯ 2024 ಅನ್ನು ಮೇ 10 ರಂದು ಶುಕ್ರವಾರ ಆಚರಿಸಲಾಗುತ್ತಿದೆ.

ಅಕ್ಷಯ ತೃತೀಯವನ್ನು ಸರಿಯಾದ ರೀತಿಯಲ್ಲಿ ಆಚರಿಸಲು ಅನುಸರಿಸಬೇಕಾದ ಕೆಲವು ಪ್ರಮುಖ ಆಚರಣೆಗಳಿವೆ. ಅವುಗಳ ಪರಿಚಯ ಇಲ್ಲಿದೆ.


ಚಿನ್ನ ಖರೀದಿಸಿ

ಅಕ್ಷಯ ತೃತೀಯದಲ್ಲಿ ಹೆಚ್ಚಿನ ಜನರು ಅನುಸರಿಸುವ ಪ್ರಮುಖ ಸಂಪ್ರದಾಯವೆಂದರೆ ಚಿನ್ನ ಖರೀದಿ. ಈ ದಿನದಂದು ಚಿನ್ನವನ್ನು ಖರೀದಿಸುವುದು ಸಮೃದ್ಧಿ ಮತ್ತು ಅದೃಷ್ಟವನ್ನು ಸ್ವಾಗತಿಸುತ್ತದೆ ಎಂಬ ನಂಬಿಕೆ ಇದೆ. ಜನರು ಈ ದಿನದಂದು ಚಿನ್ನದ ಆಭರಣಗಳು, ನಾಣ್ಯಗಳಲ್ಲಿ ಹೂಡಿಕೆ ಮಾಡುತ್ತಾರೆ.


ಚಾರಿಟಿ

ಅಕ್ಷಯ ತೃತೀಯದ ಪ್ರಮುಖ ಅಂಶವೆಂದರೆ ದಾನ. ಈ ದಿನದಂದು ಅಗತ್ಯವಿರುವವರಿಗೆ ದಾನ ನೀಡುವುದು ಆಶೀರ್ವಾದ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಂಬಲಾಗಿದೆ. ಅನೇಕ ಜನರು ಆಹಾರ, ಬಟ್ಟೆ, ಹಣ ಅಥವಾ ಇತರ ರೀತಿಯ ದಾನವನ್ನು ಹಿಂದುಳಿದವರಿಗೆ ದಾನ ಮಾಡುತ್ತಾರೆ. ಈ ಅಭ್ಯಾಸವು ನಿರ್ಗತಿಕರಿಗೆ ಸಹಾಯ ಮಾಡುವುದಲ್ಲದೆ ಸಹಾನುಭೂತಿ ಮತ್ತು ಸಹಾನುಭೂತಿಯ ಭಾವವನ್ನು ಬೆಳೆಸುತ್ತದೆ.


ಮರಗಳನ್ನು ನೆಡುವುದು

ಇದು ಪ್ರಕೃತಿಗೆ ಮರಳಿ ನೀಡುವ ಮತ್ತು ಗ್ರಹಕ್ಕೆ ಹಸಿರು ಭವಿಷ್ಯವನ್ನು ಖಾತ್ರಿಪಡಿಸುವ ಒಂದು ಮಾರ್ಗವಾಗಿದೆ. ಇತ್ತೀಚಿನ ವರ್ಷಗಳಲ್ಲಿ, ಜನರು ಪರಿಸರ ಸುಸ್ಥಿರತೆಯ ಬಗ್ಗೆ ಹೆಚ್ಚು ಮಾತನಾಡುತ್ತಿದ್ದಾರೆ. ಅಕ್ಷಯ ತೃತೀಯವು ಹೆಚ್ಚು ಮರಗಳನ್ನು ನೆಡಲು ಮತ್ತು ಹಸಿರು ವಾತಾವರಣವನ್ನು ನಿರ್ಮಿಸಲು ಉತ್ತಮ ಅವಕಾಶವಾಗಿದೆ. ಮರಗಳನ್ನು ನೆಡುವ ಮೂಲಕ ನಾವು ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯನ್ನು ತಡೆಯಬಹುದು.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಉಪವಾಸ

ಅಕ್ಷಯ ತೃತೀಯಕ್ಕೆ ಸಂಬಂಧಿಸಿದ ಇತರ ಪ್ರಮುಖ ಆಚರಣೆಗಳು ಉಪವಾಸ, ದೇವಾಲಯಗಳಿಗೆ ಭೇಟಿ ನೀಡುವುದು ಮತ್ತು ಪೂಜೆಗಳು ಮತ್ತು ಪ್ರಾರ್ಥನೆಗಳನ್ನು ಮಾಡುತ್ತೇವೆ. ಸ್ವೀಕರಿಸಿದ ಎಲ್ಲಾ ಆಶೀರ್ವಾದಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಮತ್ತು ನಿರಂತರ ಮಾರ್ಗದರ್ಶನ ಮತ್ತು ರಕ್ಷಣೆಯನ್ನು ಪಡೆಯಲು ಈ ದಿನ ಸೂಕ್ತವಾಗಿದೆ. ಅನೇಕ ಜನರು ಇಡೀ ದಿನ ಉಪವಾಸ ಮಾಡುತ್ತಾರೆ ಮತ್ತು ಮನೆಯಲ್ಲಿ ಪೂಜೆಗಳನ್ನು ನಡೆಸುತ್ತಾರೆ. ಹೀಗೆ ಮಾಡುವ ಮೂಲಕವೂ ಜೀವನದಲ್ಲಿ ಸಮೃದ್ಧಿ, ನೆಮ್ಮದಿ ಹೊಂದಬಹುದು.

Continue Reading
Advertisement
Maldives anti-India stance
ಪ್ರಮುಖ ಸುದ್ದಿ17 mins ago

Maldives anti-India stance : ಭಾರತ ವಿರೋಧಿ ಕ್ರಮಕ್ಕೆ ಪಶ್ಚಾತಾಪ ವ್ಯಕ್ತಪಡಿಸಿದ ಮಾಲ್ಡೀವ್ಸ್​​

Self Harming Guest lecturer hangs herself to death
ಕರ್ನಾಟಕ38 mins ago

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

karnataka weather Forecast
ಮಳೆ43 mins ago

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Dog bite
Latest52 mins ago

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Toxic Shawarma
ಆರೋಗ್ಯ1 hour ago

Toxic Shawarma: ಚಿಕನ್‌ ಶವರ್ಮಾ ತಿಂದರೆ ಸಾಯುತ್ತಾರೆಯೆ? ಏನು ಕಾರಣ?

Sensex crash
ಪ್ರಮುಖ ಸುದ್ದಿ1 hour ago

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Dietary Guidelines
ಆರೋಗ್ಯ1 hour ago

Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

Bananas mangoes crops and houses damaged due to heavy rain in Gangavathi
ಮಳೆ2 hours ago

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

New fashion Trend
ಫ್ಯಾಷನ್2 hours ago

New Fashion Trend: ಕ್ವೀನ್‌ ಲುಕ್‌ ನೀಡುವ ಡಿಸೈನರ್‌ ಪರ್ಲ್ ಶೈಲಿಯ ಹೆಡ್‌ಬ್ಯಾಂಡ್‌

Akshattadigi Amavasya Devotees darshan of Sri Guru Kottureswara Swamy
ವಿಜಯನಗರ2 hours ago

Vijayanagara News: ಅಕ್ಷತ್ತದಿಗಿ ಅಮವಾಸ್ಯೆ; ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ6 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ6 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ7 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು9 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌