Budget 2023: ಬಜೆಟ್‌ನಲ್ಲಿ ಮಧ್ಯಮ ವರ್ಗದ ಜನತೆಗೆ ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳದ ಕೊಡುಗೆ ಸಂಭವ - Vistara News

ಪ್ರಮುಖ ಸುದ್ದಿ

Budget 2023: ಬಜೆಟ್‌ನಲ್ಲಿ ಮಧ್ಯಮ ವರ್ಗದ ಜನತೆಗೆ ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳದ ಕೊಡುಗೆ ಸಂಭವ

ಕೇಂದ್ರ ಮುಂಗಡಪತ್ರದಲ್ಲಿ ಮಧ್ಯಮ ವರ್ಗದ ಜನತೆ ಹಲವು ತೆರಿಗೆ ವಿನಾಯಿತಿಗಳನ್ನು ನಿರೀಕ್ಷಿಸುತ್ತಿದ್ದಾರೆ. ಆದರೆ ಅದು ಈಡೇರಲಿದೆಯೇ ಎಂಬುದಕ್ಕೆ ಫೆ.1ರ (Budget 2023) ತನಕ ಕಾಯಬೇಕು.

VISTARANEWS.COM


on

middle class
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಫೆಬ್ರವರಿ ೧ ರಂದು 2023-24 ಸಾಲಿನ ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, (Budget 2023) ಮಧ್ಯಮ ವರ್ಗದ ಜನತೆ ಆದಾಯ ತೆರಿಗೆ ವಿನಾಯಿತಿಯ ಮಿತಿ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ.

2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ನಡೆಯಲಿರುವ ಕೊನೆಯ ಪೂರ್ಣಪ್ರಮಾಣದ ಚುನಾವಣೆ ಇದಾಗಿರುವುದರಿಂದ, ಜನಪ್ರಿಯ ಬಜೆಟ್‌ ಅನ್ನು ಮಧ್ಯಮ ವರ್ಗದ ಜನತೆ ನಿರೀಕ್ಷಿಸುತ್ತಿದ್ದಾರೆ. ಹಾಗೂ ಆದಾಯ ತೆರಿಗೆ ಕಾಯಿದೆಯ ಸೆಕ್ಷನ್‌ 80 ಸಿ, ಸೆಕ್ಷನ್‌ 80ಡಿ ಮತ್ತು ಸೆಕ್ಷನ್‌ 87ಎ ಇತ್ಯಾದಿಗಳ ಅಡಿಯಲ್ಲಿ ಕೆಲವು ತೆರಿಗೆ ವಿನಾಯಿತಿಗಳನ್ನು ನಿರೀಕ್ಷಿಸುತ್ತಿದ್ದಾರೆ.

ಕೇಂದ್ರ ಬಜೆಟ್‌ ಪರಿಣಾಮ ಮಧ್ಯಮ ವರ್ಗದ ಜನತೆಗೆ ಕೈಯಲ್ಲಿ ಹೆಚ್ಚು ಹಣ ಉಳಿತಾಯವಾಗುವಂತಾದರೆ, ಅವರ ಅಗತ್ಯ ಖರ್ಚು ವೆಚ್ಚಗಳಿಗೆ ಸಹಾಯಕವಾಗುತ್ತದೆ ಎನ್ನುತ್ತಾರೆ ಆರ್ಥಿಕ ತಜ್ಞರಾದ ಅರ್ಚಿತ್‌ ಗುಪ್ತಾ. ಕೋವಿಡ್-ಬಿಕ್ಕಟ್ಟು, ಹಣದುಬ್ಬರ ಹೆಚ್ಚಳ, ರಷ್ಯಾ-ಉಕ್ರೇನ್‌ ಸಮರ, ಉದ್ಯೋಗ ಕಡಿತ ಇತ್ಯಾದಿಗಳ ಪರಿಣಾಮ ಮಧ್ಯಮ ವರ್ಗದ ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ಅನಿಶ್ಚಿತತೆ ಎದುರಿಸುತ್ತಿದ್ದಾರೆ. ಹೀಗಾಗಿ ಅವರ ಹಿತಾಸಕ್ತಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಆದಾಯ ತೆರಿಗೆ ವಿನಾಯಿತಿ ಮಿತಿ ಏರಿಕೆ?

tax return

ಆದಾಯ ತೆರಿಗೆ ವಿನಾಯಿತಿಯ ಮಿತಿಯನ್ನು ಈಗಿಮ ವಾರ್ಷಿಕ 2 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಏರಿಕೆ ಮಾಡಬೇಕು. ಸೆಕ್ಷನ್‌ 87 ಎ ಅಡಿಯಲ್ಲಿ ರಿಬೇಟ್‌ ಪಡೆಯುವವರಿಗೆ ಇದರಿಂದ ಪರಿಣಾಮವಾಗದು. ಹೀಗಿದ್ದರೂ, ಅವರು ಐಟಿಆರ್‌ ಸಲ್ಲಿಸುವುದು ಕಡ್ಡಾಯವಾಗಿದೆ. ಆದ್ದರಿಂದ ಸಣ್ಣ ತೆರಿಗೆದಾರರಿಗೆ ಸಹಕರಿಸಲು ಆದಾಯ ತೆರಿಗೆ ಮಿತಿಯನ್ನು 2 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಏರಿಸುವುದು ಸೂಕ್ತ ಎನ್ನುತ್ತಾರೆ ತಜ್ಞರು.

ಒಟ್ಟು ಆದಾಯತೆರಿಗೆಯ ಪ್ರಮಾಣ
ವಾರ್ಷಿಕ 5 ಲಕ್ಷ ರೂ.ಇಲ್ಲ(ರಿಬೇಟ್‌ ಲಭ್ಯ)
5ರಿಂದ 7.5 ಲಕ್ಷ ರೂ.5%
7.5 ಲಕ್ಷ ರೂ.ಗಳಿಂದ 10 ಲಕ್ಷ ರೂ.10%
10 ಲಕ್ಷ ರೂ.ಗಳಿಂದ 12.5 ಲಕ್ಷ ರೂ.15%
12.5 ಲಕ್ಷ ರೂ.ಗಳಿಂದ 15 ಲಕ್ಷ ರೂ.20%
15 ಲಕ್ಷ ರೂ.ಗಳಿಂದ 20 ಲಕ್ಷ ರೂ.25%
20 ಲಕ್ಷ ರೂ. ಮೇಲ್ಪಟ್ಟು30%

ಸೆಕ್ಷನ್‌ 80 ಸಿ ಅಡಿಯಲ್ಲಿ ಮಿತಿ ಹೆಚ್ಚಳ?

ಆದಾಯ ತೆರಿಗೆ ಕಾಯಿದೆಯ ಸೆಕ್ಷನ್‌ 80 ಸಿ ಅಡಿಯಲ್ಲಿ ಈಗ 1.5 ಲಕ್ಷ ರೂ. ಹೂಡಿಕೆಗೆ ಆದಾಯ ತೆರಿಗೆ ವಿನಾಯಿತಿ ಸಿಗುತ್ತದೆ. ಕಳೆದ ದಶಕದಿಂದ ಇದು ಬದಲಾಗಿಲ್ಲ. ಹೀಗಾಗಿ ಇದನ್ನು ಏರಿಸುವ ಮೂಲಕ ಉಳಿತಾಯ ಮತ್ತು ಹೂಡಿಕೆಗೆ ಸಹಕರಿಸಬೇಕು ಎಂದು ತಜ್ಞರು ಒತ್ತಾಯಿಸಿದ್ದಾರೆ.

ಸೆಕ್ಷನ್‌ 80 ಡಿ ಅಡಿಯಲ್ಲಿ ಮಿತಿ ವಿಸ್ತರಣೆ?

ಮಧ್ಯಮ ವರ್ಗದ ಜನತೆ ಜನ ಜೀವನದ ಗುಣಮಟ್ಟ ವೃದ್ಧಿಯನ್ನು ನಿರೀಕ್ಷಿಸುತ್ತಿದೆ. ಕೋವಿಡ್‌ ಬಿಕ್ಕಟ್ಟಿನ ಬಳಿಕ ವೈದ್ಯಕೀಯ ವೆಚ್ಚಗಳು ಏರಿಕೆಯಾಗಿವೆ. ಹೀಗಾಗಿ ಆದಾಯ ತೆರಿಗೆ ಸೆಕ್ಷಮ್‌ 80 ಡಿ ಅಡಿಯಲ್ಲಿ ಆರೋಗ್ಯ ವೆಚ್ಚಗಳಿಗೆ ತೆರಿಗೆ ವಿನಾಯಿತಿಯನ್ನು ಬಯಸುತ್ತಿದ್ದಾರೆ.

ಗೃಹ ಖರೀದಿದಾರರಿಗೆ ರಿಲೀಫ್?

home loan

ಸ್ವಂತ ಮನೆ ನಿರ್ಮಿಸುವುದು ಎಂದರೆ ಮಧ್ಯಮ ವರ್ಗದ ಜನತೆಗೆ ಈಗಲೂ ಲಕ್ಸುರಿ. ಈ ಹೊರೆಯನ್ನು ಇಳಿಸಲು ಗೃಹ ಸಾಲದ ಬಡ್ಡಿಯ ಮೇಲಿನ ತೆರಿಗೆ ಕಡಿತ ಮಿತಿಯನ್ನು ಈಗಿನ 2 ಲಕ್ಷ ರೂ.ಗಳಿಂದ ವಿಸ್ತರಿಸಬೇಕು ಎಂಬ ಒತ್ತಾಯ ಇದೆ.

ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಮಿತಿ ಏರಿಕೆ:

ಈ ಹಿಂದೆ 2018-19ರಲ್ಲಿ ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಅನ್ನು ಪರಿಚಯಿಸಲಾಗಿತ್ತು. ಇಂಧನ ಮತ್ತು ವೈದ್ಯಕೀಯ ವೆಚ್ಚಗಳು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಇದನ್ನು ಈಗಿನ 50,000 ರೂ.ಗಳಿಂದ 1 ಲಕ್ಷ ರೂ.ಗೆ ಏರಿಸಬೇಕು ಎಂಬ ನಿರೀಕ್ಷೆ ಇದೆ.

ನಾನೂ ಮಧ್ಯಮ ವರ್ಗದಿಂದ ಬಂದವಳು: ನಿರ್ಮಲಾ ಸೀತಾರಾಮನ್

Nirmala Sitharaman and Income Tax

ನಾನೂ ಮಧ್ಯಮ ವರ್ಗದ ಕುಟುಂಬದಿಂದ ಬಂದವಳು. ಆದ್ದರಿಂದ ಅವರ ಕಷ್ಟಗಳು ಮನವರಿಕೆಯಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ನಮ್ಮ ಸರ್ಕಾರ 5 ಲಕ್ಷ ರೂ.ಗಿಂತ ಕಡಿಮೆ ವಾರ್ಷಿಕ ಆದಾಯ ಇರುವವರಿಗೆ ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ ಎಂದಿದ್ದರು.

ಮೂವರಲ್ಲಿ ಒಬ್ಬರು ಮಿಡ್ಲ್‌ ಕ್ಲಾಸ್:

ಭಾರತದಲ್ಲಿ ಪ್ರತಿ ಮೂವರಲ್ಲಿ ಒಬ್ಬರು ಮಧ್ಯಮ ವರ್ಗದ ಆದಾಯ ಇರುವ ಜನರಾಗಿದ್ದು, ಈ ಸಂಖ್ಯೆ ಮುಂದಿನ 25 ವರ್ಷಗಳಲ್ಲಿ ಇಮ್ಮಡಿಯಾಗಲಿದೆ. ಹೀಗಾಗಿ ಈ ವರ್ಗದ ಜನರ ಹಿತಾಸಕ್ತಿಯನ್ನು ಬಜೆಟ್‌ ಪರಿಗಣಿಸಬೇಕಾಗುತ್ತದೆ ಎನ್ನುತ್ತಾರೆ ಹಣಕಾಸು ತಜ್ಞರು.

ಉಳಿತಾಯ ಇಳಿಕೆ: 2021-22ರಲ್ಲಿ ಮಧ್ಯಮ ವರ್ಗದ ಜನರ ಆದಾಯದಲ್ಲಿ ಇಳಿಕೆಯಾಗಿದೆ. ಹೆಚ್ಚುತ್ತಿರುವ ಹಣದುಬ್ಬರ ಅವರ ಉಳಿತಾಯವನ್ನು ಕರಗಿಸುತ್ತಿದೆ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾದರಿಯಲ್ಲಿ ನಗರ ಉದ್ಯೋಗ ಖಾತರಿ ಯೋಜನೆಯ ಅವಶ್ಯಕತೆ ಇದೆ ಎನ್ನುತ್ತಾರೆ ತಜ್ಞರು.

ಸಾಮೂಹಿಕ ಉದ್ಯೋಗ ಕಡಿತ: ಮಧ್ಯಮ ವರ್ಗದ ಜನತೆ ಆರ್ಥಿಕ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸಬಲ್ಲರು. ಆದರೆ ಅವರಿಗೆ ಈಗ ಉದ್ಯೋಗ ಕಡಿತದ ಭೀತಿಯೂ ಆವರಿಸಿದೆ. ಆದ್ದರಿಂದ ಈ ಸಮಸ್ಯೆ ಬಗೆಹರಿಸಲು ಬಜೆಟ್‌ ಆದ್ಯತೆ ನೀಡಬೇಕು ಎಂಬ ಒತ್ತಾಯವೂ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

IPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿಯ ಐಪಿಎಲ್​ನಲ್ಲಿ ಮರೆಯಲಾಗದ ಕೆಟ್ಟ ಅಭಿಯಾನವನ್ನು ಕಂಡಿದೆ. ಆಡಿರುವ 9 ಪಂದ್ಯಗಳಲ್ಲಿ 2ರಲ್ಲಿ ಗೆಲುವು ಸಾಧಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಆದಾಗ್ಯೂ, ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಗೆಲುವಿನ ನಂತರ ಆರ್​ಸಿಬಿ ಜಿಟಿ ವಿರುದ್ಧದ ಪಂದ್ಯವನ್ನು ಆತ್ಮವಿಶ್ವಾಸದಿಂದ ಎದುರಿಸುವ ಗುರಿಯನ್ನು ಹೊಂದಿದೆ.

VISTARANEWS.COM


on

IPL 2024
Koo

ಅಹಮದಾಬಾದ್​​: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 45ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್​ ತಂಡವನ್ನು ಎದುರಿಸಲಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಈವರೆಗೆ 9 ಪಂದ್ಯಗಳನ್ನು ಆಡಿರುವ ಗುಜರಾತ್ 4 ಗೆಲುವು ಹಾಗೂ 5 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ತಂಡವು ಋತುವಿನ ಐದನೇ ಗೆಲುವನ್ನು ದಾಖಲಿಸುವ ಮತ್ತು ಪ್ಲೇಆಪ್​ ರೇಸ್​ನಲ್ಲಿ ಉಳಿಯುವ ಗುರಿ ಹೊಂದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿಯ ಐಪಿಎಲ್​ನಲ್ಲಿ ಮರೆಯಲಾಗದ ಕೆಟ್ಟ ಅಭಿಯಾನವನ್ನು ಕಂಡಿದೆ. ಆಡಿರುವ 9 ಪಂದ್ಯಗಳಲ್ಲಿ 2ರಲ್ಲಿ ಗೆಲುವು ಸಾಧಿಸಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಆದಾಗ್ಯೂ, ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಗೆಲುವಿನ ನಂತರ ಆರ್​ಸಿಬಿ ಜಿಟಿ ವಿರುದ್ಧದ ಪಂದ್ಯವನ್ನು ಆತ್ಮವಿಶ್ವಾಸದಿಂದ ಎದುರಿಸುವ ಗುರಿಯನ್ನು ಹೊಂದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಹಿಂದಿನ ಪಂದ್ಯಕ್ಕಿಂತ ಯಾವುದೇ ಬದಲಾವಣೆಯಿಲ್ಲದ ತಂಡವನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಈ ಸರಣಿಯೊಂದಿಗೆ ತಂಡವು ಆರು ಪಂದ್ಯಗಳ ಸೋಲಿನ ಸರಣಿಯನ್ನು ಮುರಿಯುವಲ್ಲಿ ಯಶಸ್ವಿಯಾಯಿತು. ಜಿಟಿಯನ್ನು ಎದುರಿಸಲು ಅಹಮದಾಬಾದ್​ಗೆ ಪ್ರಯಾಣಿಸುವಾಗ ಮತ್ತೊಮ್ಮೆ ಅದೇ ಫಲಿತಾಂಶವನ್ನು ಎದುರಿಸಬಹುದು.

ಗುಜರಾತ್ ಟೈಟಾನ್ಸ್ ಕಳೆದ ಬಾರಿಯಂತೆಯೇ ಕಣಕ್ಕಿಳಿಯುವ ಸಾಧ್ಯತೆ ಇದೆ. ಸಾಯಿ ಸುದರ್ಶನ್ ಪ್ರಭಾವಶಾಲಿ ಆಟಗಾರನಾಗಿ ಬರುವುದರಿಂದ ಮತ್ತು ವೃದ್ಧಿಮಾನ್ ಸಹಾ, ಶುಭಮನ್ ಗಿಲ್ ಮತ್ತು ಕೇನ್ ವಿಲಿಯಮ್ಸನ್ ಅವರಂತಹ ಆಟಗಾರರು ಅಗ್ರ ಕ್ರಮಾಂಕದಲ್ಲಿ ಇರುವುದರಿಂದ ಮತ್ತೊಂದು ಗೆಲುವಿಗೆ ಶ್ರಮಿಸಬಹುದು.

ಪಿಚ್ ರಿಪೋರ್ಟ್


ಅಹಮದಾಬಾದ್​​ನ ನರೇಂದ್ರ ಮೋದಿ ಕ್ರೀಡಾಂಗಣವು ಬ್ಯಾಟರ್​​ಗಳಿಗೆ ಆದ್ಯತೆ ನೀಡುವ ಕ್ರೀಡಾಂಗಣವಾಗಿದೆ. ಆದಾಗ್ಯೂ, ಬೌನ್ಸ್ ಮತ್ತು ವೇಗದೊಂದಿಗೆ, ಬೌಲರ್ಗಳು ಮೇಲ್ಮೈಯಿಂದ ಸ್ವಲ್ಪ ಸಹಾಯವನ್ನು ಪಡೆಯಬಹುದು. ಅಹ್ಮದಾಬಾದ್ನಲ್ಲಿ ಸಮನಾಗಿ ಹೊಂದಿಕೆಯಾಗುವ ಮುಖಾಮುಖಿ ನಡೆಯಬಹುದು, ಮತ್ತು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡುವುದು ಸೂಕ್ತ ನಿರ್ಧಾರವೆಂದು ಸಾಬೀತುಪಡಿಸಬಹುದು.

ಇದನ್ನೂ ಓದಿ: IPL 2024 : ಕೆಕೆಆರ್​ ತಂಡವನ್ನು ಸೋಲಿಸಿ ವಿಶೇಷ ಭಕ್ಷ್ಯ ಸವಿದ ಪಂಜಾಬ್ ಆಟಗಾರರು, ಇಲ್ಲಿದೆ ವಿಡಿಯೊ

ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕಿ), ಕೇನ್ ವಿಲಿಯಮ್ಸನ್, ಅಜ್ಮತುಲ್ಲಾ ಒಮರ್​ಜೈ , ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿ ಶ್ರೀನಿವಾಸನ್ ಸಾಯಿ ಕಿಶೋರ್, ನೂರ್ ಅಹ್ಮದ್, ಸಂದೀಪ್ ವಾರಿಯರ್, ಮೋಹಿತ್ ಶರ್ಮಾ.

ರಾಯಲ್ ಚಾಲೆಂಜರ್ಸ್ ಬೆಂಗಳೂರು
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೊಮ್ರೊರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಸಿರಾಜ್.

ಇತ್ತಂಡಗಳ ಮುಖಾಮುಖಿ

ಆಡಿದ ಪಂದ್ಯಗಳು- 3
ಗುಜರಾತ್ ಟೈಟಾನ್ಸ್ ಗೆ ಜಯ- 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು- 1

ಪಂದ್ಯದ ವಿವರ

ಐಪಿಎಲ್ 2024: 45ನೇ ಪಂದ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್
ದಿನಾಂಕ ಭಾನುವಾರ, ಏಪ್ರಿಲ್ 28, ಪಂದ್ಯ 45
ಸಮಯ: ಮಧ್ಯಾಹ್ನ 3:30
ಪ್ರಸಾರ ಮತ್ತು ಲೈವ್ ಸ್ಟ್ರೀಮಿಂಗ್ ವಿವರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್, ಜಿಯೋ ಸಿನೆಮಾ ಅಪ್ಲಿಕೇಶನ್ ಮತ್ತು ವೆಬ್​ಸೈಟ್​

Continue Reading

ಪ್ರಮುಖ ಸುದ್ದಿ

ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಏಪ್ರಿಲ್‌ 29ರಂದು ಮರು ಮತದಾನ ನಡೆಸಲು ಚುನಾವಣೆ ಆಯೋಗ ಆದೇಶಿಸಿದೆ. ಏಪ್ರಿಲ್‌ 26ರಂದು ಮತಗಟ್ಟೆಯಲ್ಲಿ ಗಲಾಟೆ ನಡೆದು, ಇವಿಎಂ ಧ್ವಂಸಗೊಳಿಸಿದ ಕಾರಣ ಮತದಾನ ನಡೆದಿರಲಿಲ್ಲ. ಹಾಗಾಗಿ, ಮರು ಮತದಾನ ಘೋಷಿಸಲಾಗಿದೆ.

VISTARANEWS.COM


on

Chamarajanagar
Koo

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಶುಕ್ರವಾರ (ಏಪ್ರಿಲ್‌ 26) ಗಲಾಟೆ ನಡೆದು, ಚುನಾವಣೆ ಮತಯಂತ್ರವನ್ನು (EVM) ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು (Election Commission) ಏಪ್ರಿಲ್‌ 29ರಂದು ಮರು ಮತದಾನ ನಡೆಸಲು ತೀರ್ಮಾನಿಸಿದೆ. ಕ್ಷೇತ್ರ ಚುನಾವಣಾಧಿಕಾರಿಗಳ ಬಳಿ ವರದಿ ಪಡೆದ ಚುನಾವಣಾ ಆಯೋಗವು, ಮರು ಮತದಾನ (Re-election) ನಡೆಸಲು ತೀರ್ಮಾನಿಸಿದೆ. ಹಾಗಾಗಿ, ಸೋಮವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ ನಡೆಯಲಿದೆ.

ಮತಯಂತ್ರ ಧ್ವಂಸ ಮಾಡಿದ ಗ್ರಾಮಸ್ಥರು

ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದರು. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿತ್ತು. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿತ್ತು. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದರು. ಇದರಿಂದಾಗಿ ಚುನಾವಣೆ ನಡೆದಿರಲಿಲ್ಲ.

ಲಾಠಿ ಚಾರ್ಚ್‌; ಹಲವರಿಗೆ ಗಾಯ

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಗಿತ್ತು. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದರು. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿದ್ದವು. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ.

ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸಿಕೆರೆ ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕಾರ ಮಾಡಲಾಗಿದೆ. ಪಡಸಲನತ್ತ ಗ್ರಾಮದಲ್ಲಿ 85 ಮತದಾರರ ಪೈಕಿ ಕೇವಲ ಇಬ್ಬರು ಮತದಾನ ಮಾಡಿದ್ದಾರೆ. ಉಳಿದಂತೆ ಮತಗಟ್ಟೆಗಳತ್ತ ಯಾರೊಬ್ಬರೂ ಸುಳಿದಿಲ್ಲ. ಎಷ್ಟೇ ಬಾರಿ ಮನವಿ ಮಾಡಿದರೂ ಈ ಗ್ರಾಮಗಳಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸಿಲ್ಲ. ಚುನಾವಣೆ ಬಂದಾಗ ಮಾತ್ರ ಈ ರಾಜಕಾರಣಿಗಳಿಗೆ ನಮ್ಮ ನೆನಪಾಗುತ್ತದೆ. ಅದಾದ ಬಳಿಕ ನಮ್ಮನ್ನು ಕೇಳುವವರೇ ಇಲ್ಲ ಎಂದು ಆರೋಪಿಸಿ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳ ಗ್ರಾಮಸ್ಥರು ಮತದಾನವನ್ನು ಬಹಿಷ್ಕಾರ ಮಾಡಿದ್ದರು. ಇದೇ ವೇಳೆ ಗಲಾಟೆ ನಡೆದಿತ್ತು.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

Continue Reading

ಉದ್ಯೋಗ

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 506 ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (Central Armed Police Forces)ಗಳಲ್ಲಿನ ಅಸಿಸ್ಟಂಟ್‌ ಕಮಾಂಡೆಂಟ್‌ಗಳು (ಎ ಹುದ್ದೆಗಳು) ಹುದ್ದೆ ಇದಾಗಿದೆ. ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF), ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (CRPF), ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (CISF), ಇಂಡೋ-ಟಿಬೆಟಿಯನ್ ಬಾರ್ಡರ್‌ ಪೋಲೀಸ್‌ (ITBP) ಮತ್ತು ಸಶಸ್ತ್ರ ಸೀಮಾ ಬಲ್‌ (SSB)ಗಳಲ್ಲಿ 506 ಹುದ್ದೆಗಳಿವೆ (UPSC CAPF Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ

ಗಡಿ ಭದ್ರತಾ ಪಡೆ (ಬಿಎಸ್ಎಫ್)-186, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌)- 120, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)- 100, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)- 58, ಸಶಸ್ತ್ರ ಸೀಮಾ ಬಲ್ (ಎಸ್ಎಸ್‌ಬಿ)- 42 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (Physical Efficiency Test) ಅಥವಾ ದೈಹಿಕ ಮಾಪನ ಪರೀಕ್ಷೆ (Physical Measurement Test), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್‌ 4ರಂದು ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.

UPSC CAPF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್‌ ನಂಬರ್‌, ಇ ಮೇಲ್‌ ಐಡಿ ನಮೂದಿಸಿ.
  • ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಿಸಿ ಲಾಗಿನ್‌ ಆಗಿ.
  • ವಿವರಗಳನ್ನು ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್‌ ಫಾರಂ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading

ಹುಬ್ಬಳ್ಳಿ

Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿಯಾಗಿ ನಿಂತ ನಾಯಕ ಪ್ರಲ್ಹಾದ್ ಜೋಶಿ ಎಂದ ಯತ್ನಾಳ್

Lok Sabha Election 2024: ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಾರ್ಟಿ ಲಿಂಗಾಯತರ ಪ್ರಬಲ ವಿರೋಧಿ. ಬೆಳಗಾವಿ ಅಧಿವೇಶನದಲ್ಲಿ ಲಿಂಗಾಯತ ಮೀಸಲಾತಿ ಬಗ್ಗೆ ಚರ್ಚಿಸಲು ಅವಕಾಶ ಕೊಡಲೇ ಇಲ್ಲ ಇವರು ಎಂದು ಮಾಜಿ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

VISTARANEWS.COM


on

Vijayapur MLA Basanagowda Patil Yatnal latest statement in Dharwad
Koo

ಹುಬ್ಬಳ್ಳಿ: ಪ್ರಲ್ಹಾದ್‌ ಜೋಶಿ (Pralhad Joshi) ಯಾವತ್ತೂ ಲಿಂಗಾಯತ ಪರ ಗಟ್ಟಿ ನಿಂತಿದ್ದಾರೆ. ಅಪಪ್ರಚಾರಕ್ಕೆಲ್ಲ ಕಿವಿಗೊಡಬೇಡಿ ಎಂದು ಮಾಜಿ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಲಿಂಗಾಯತ-ವೀರಶೈವ ಸಮುದಾಯಕ್ಕೆ ಕರೆ (Lok Sabha Election 2024) ನೀಡಿದರು.

ಧಾರವಾಡದ ಮೊರಬದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪರ ರೋಡ್ ಶೋ, ಮತಯಾಚನೆ ನಡೆಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಹಿಂದೆ ರಾಮಕೃಷ್ಣ ಹೆಗಡೆ, ಅನಂತ ಕುಮಾರ್ ಈಗ ಪ್ರಲ್ಹಾದ್‌ ಜೋಶಿ ಅವರು ಲಿಂಗಾಯತರ ಪರ ಗಟ್ಟಿಯಾಗಿ ನಿಂತವರಾಗಿದ್ದಾರೆ. ಕೆಲವರು ಏನೇನೋ ಅಪಪ್ರಚಾರ ಮಾಡುತ್ತಾರೆ. ಅಂಥದ್ದಕ್ಕೆ ಲಿಂಗಾಯತ, ವೀರಶೈವ ಸಮಾಜದವರು ಕಿವಿಗೊಡಬಾರದು ಎಂದು ಹೇಳಿದರು.

ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಬೊಮ್ಮಾಯಿ ಅವರ ಅವಧಿಯಲ್ಲಿ ನಡೆದ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವೇಳೆ ಕೇಂದ್ರದ ಮಟ್ಟದಲ್ಲಿ ಸಚಿವ ಪ್ರಲ್ಹಾದ್‌ ಜೋಶಿ ಸಹ ಪ್ರಯತ್ನ ನಡೆಸಿದರು. ಅದರ ಪರಿಣಾಮ ಕೊನೆಗೆ 2ಡಿ ಸೃಷ್ಟಿಸಿ ಅವಕಾಶ ಕಲ್ಪಿಸಲು ಕೇಂದ್ರದ ವರಿಷ್ಠರು ಸಮ್ಮತಿಸಿದ್ದರು ಎಂದು ಯತ್ನಾಳ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ,ಕಾಂಗ್ರೆಸ್ ಪಾರ್ಟಿ ಲಿಂಗಾಯತರ ಪ್ರಬಲ ವಿರೋಧಿ

ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಾರ್ಟಿ ಲಿಂಗಾಯತರ ಪ್ರಬಲ ವಿರೋಧಿ. ಬೆಳಗಾವಿ ಅಧಿವೇಶನದಲ್ಲಿ ಲಿಂಗಾಯತ ಮೀಸಲಾತಿ ಬಗ್ಗೆ ಚರ್ಚಿಸಲು ಅವಕಾಶ ಕೊಡಲೇ ಇಲ್ಲ ಇವರು ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದರು.

ಸಿಎಂ ಭೇಟಿಗೂ ಸಿಗಲಿಲ್ಲ

ಪ್ರವರ್ಗ 2ಡಿ ಬಗ್ಗೆ ಮಾತನಾಡಲು ಸಿಎಂ ಭೇಟಿಗೆ ಸಮಯ ಕೇಳಿದರೆ ಕೊನೆಗೂ ಕೊಡಲಿಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷ ಮತ್ತು ಸಿಎಂ ಲಿಂಗಾಯತ ವಿರೋಧಿ ಆಗಿದ್ದಾರೆ. ಅವಕಾಶ ಸಿಗಲ್ಲ ಬಿಡಿ ಎಂದು ಆ ಪಕ್ಷದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ನನಗೆ ಹೇಳಿದ್ರು ಎಂದೂ ಇದೇ ವೇಳೆ ತಿಳಿಸಿದರು.

ಕಿತ್ತೂರು ಚೆನ್ನಮ್ಮ ಪ್ರತಿಮೆ ಮುಂದೆ ಆಣೆ ಮಾಡುವೆ

ಸಿಎಂ ಸಿದ್ದರಾಮಯ್ಯ ಮತ್ತು ತಮ್ಮ ಪಕ್ಷ ಲಿಂಗಾಯತ ವಿರೋಧಿ ಎಂಬುದನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಬಗ್ಗೆ ಬೇಕಿದ್ದರೆ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಮುಂದೆ ಪ್ರಮಾಣ ಮಾಡಿ ಹೇಳುತ್ತೇನೆ ಎಂದೂ ಯತ್ನಾಳ್ ಸವಾಲು ಹಾಕಿದರು.

ಪಂಚಮಸಾಲಿ ಸಿಎಂ ನಿರ್ಣಯ

ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮಾಜದ ನಾಯಕರನ್ನು ಸಿಎಂ ಮಾಡುವ ನಿರ್ಣಯ ಆಗುತ್ತದೆ. ಆ ಕಾಲ ಬರುತ್ತದೆ ಸ್ವಲ್ಪ ಕಾಯಿರಿ ಎಂದು ಯತ್ನಾಳ್ ಸೂಚ್ಯವಾಗಿ ಹೇಳಿದರು.

ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

ಬಿಜೆಪಿ ಸರ್ಕಾರ ಇದ್ದಾಗ ಯಾರಿಗೂ ಅನ್ಯಾಯ ಆಗದಂತೆ ವರ್ಗೀಕರಣ ಮಾಡಿತ್ತು. 2ಡಿ ಸೃಷ್ಟಿಸಿ ಅದರಲ್ಲಿ ವೀರಶೈವ, ಪಂಚಮಸಾಲಿ ಲಿಂಗಾಯತ ಎಂದು ಸ್ಪಷ್ಟವಾಗಿ ಬರೆದಿದೆ. ಶೇ.7ರಷ್ಟು ಮೀಸಲಾತಿ ಕಲ್ಪಿಸಿದ್ದಾಗಿ ಅವರು ತಿಳಿಸಿದರು.

ಮುಸ್ಲಿಂರಿಗೆ 2ಎ, 2ಬಿ ಅಲ್ಲದೇ, ಪ್ರವರ್ಗ 1 ರಲ್ಲಿ ಶೇ.10 ರಷ್ಟು ಮೀಸಲಾತಿ ಇತ್ತು. ಆದರೆ, ಪಂಚಮಸಾಲಿ, ಒಕ್ಕಲಿಗ, ಜಂಗಮ, ಬಣಜಿಗರಲ್ಲಿಯೂ ಬಡವರಿದ್ದಾರೆ. ಹಾಗಾಗಿ ಯಾರಿಗೂ ಅನ್ಯಾಯವಾಗದಂತೆ ಬೊಮ್ಮಾಯಿ ಸಿಎಂ ಆಗಿದ್ದಾಗ ಮೀಸಲಾತಿ ಹಂಚಿಕೆ ಮಾಡಲಾಗಿತ್ತು ಎಂದರು.

ಇದನ್ನೂ ಓದಿ: Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

ಈಗ ಸಿಎಂ ಸಿದ್ದರಾಮಯ್ಯ ಒಬಿಸಿ, ದಲಿತರ ಮೀಸಲಾತಿ ಕಿತ್ತು ಮುಸ್ಲಿಂರಿಗೆ ಕೊಡಲು ಹೊರಟಿದ್ದಾರೆ ಎಂದು ಯತ್ನಾಳ್ ಆರೋಪಿಸಿದರು.

Continue Reading
Advertisement
Murder case in Belgavi
ಬೆಳಗಾವಿ8 mins ago

Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

IPL 2024
ಪ್ರಮುಖ ಸುದ್ದಿ27 mins ago

IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

Chamarajanagar
ಪ್ರಮುಖ ಸುದ್ದಿ30 mins ago

ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

Film Festival
ಬೆಂಗಳೂರು34 mins ago

Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

Parineeti Chopra talks about initial struggles in the Industry
ಬಾಲಿವುಡ್34 mins ago

Parineeti Chopra: ವೃತ್ತಿ ಜೀವನದ ಆರಂಭಿಕ ದಿನಗಳನ್ನು ನೆನೆದು ಭಾವುಕರಾದ ಪರಿಣಿತಿ ಚೋಪ್ರಾ!

Cotton Saree Fashion Roopa Malali, Chandrayaan - 3 ISRO Deputy Project Director
ಫ್ಯಾಷನ್45 mins ago

Cotton Saree Fashion: ಕಾಟನ್ ಸೀರೆ ಫ್ಯಾಷನ್ ಕುರಿತು ಚಂದ್ರಯಾನ 3 ಖ್ಯಾತಿಯ ಇಸ್ರೋ ರೂಪಾ ವ್ಯಾಖ್ಯಾನ ಹೀಗಿದೆ!

Job Alert
ಉದ್ಯೋಗ51 mins ago

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

English Speaking Practice
ತಂತ್ರಜ್ಞಾನ58 mins ago

English Speaking Practice: ಸರಳ, ಸುಲಭವಾಗಿ ಇಂಗ್ಲಿಷ್ ಮಾತನಾಡಬೇಕೇ?; ಗೂಗಲ್​​ನಲ್ಲಿದೆ ‘ಸ್ಪೀಕಿಂಗ್ ಪ್ರಾಕ್ಟೀಸ್’

Vijayapur MLA Basanagowda Patil Yatnal latest statement in Dharwad
ಹುಬ್ಬಳ್ಳಿ59 mins ago

Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿಯಾಗಿ ನಿಂತ ನಾಯಕ ಪ್ರಲ್ಹಾದ್ ಜೋಶಿ ಎಂದ ಯತ್ನಾಳ್

Congress government notice to The Rulers: Power of Constitution hero
ಸಿನಿಮಾ1 hour ago

The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20241 hour ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ6 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ13 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌