Business Guide : ಸೇಲ್ಸ್‌ ಎಂದರೆ ಗ್ರಾಹಕರ ಜತೆ ಅತ್ಯುತ್ತಮ ಸಂಬಂಧದ ನಿರ್ಮಾಣ - Vistara News

ಮನಿ-ಗೈಡ್

Business Guide : ಸೇಲ್ಸ್‌ ಎಂದರೆ ಗ್ರಾಹಕರ ಜತೆ ಅತ್ಯುತ್ತಮ ಸಂಬಂಧದ ನಿರ್ಮಾಣ

ಸೇಲ್ಸ್‌ ಎಂದರೆ ನಿಮಗೆ ಬೇಕಾದ್ದನ್ನು ಗ್ರಾಹಕರಿಗೆ ಕೊಡುವುದಲ್ಲ, ಗ್ರಾಹಕರಿಗೆ ಬೇಕಾದ್ದನ್ನು ( Business Guide ) ನೀಡುವುದು. ಮತ್ತಷ್ಟು ಉಪಯುಕ್ತ ಸಲಹೆ ಇಲ್ಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೇಲ್ಸ್‌ ಎಂದರೆ ಯಾವುದಾದರೂ ವಸ್ತುವನ್ನು ಮಾರುವುದು ಮಾತ್ರವಲ್ಲ, ಯಾವುದೋ ಸರ್ವೀಸ್‌ ಕೊಟ್ಟು ದುಡ್ಡು ಗಳಿಸುವುದು ಮಾತ್ರವಲ್ಲ. ಅದು ಭಾವನಾತ್ಮಕ ವಿನಿಮಯಕ್ಕಿಂತಲೂ ಮಿಗಿಲಾದದ್ದು. ಇದು ಗ್ರಾಹಕರ ಸಮಸ್ಯೆಗಳಿಗೆ, ಅಗತ್ಯಗಳಿಗೆ ಸ್ಪಂದಿಸುವಂಥದ್ದು, ಇದರಿಂದಾಗಿ ಅವರಿಗೆ ಮಾಹಿತಿ ಪೂರ್ಣ ಖರೀದಿಯ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಯಾರಾದರೂ ಕಾಯಿಲೆ ಬಿದ್ದಿದ್ದಾರೆ ಎಂದು ಇಟ್ಟುಕೊಳ್ಳೋಣ. ಅವರು ಔಷಧಿ ಖರೀದಿಸುತ್ತಾರೆ. ಯಾರಾದರೂ ವಿದ್ಯಾರ್ಥಿ ಪರೀಕ್ಷೆ ಎದುರಿಸುತ್ತಿದ್ದರೆ, ಪುಸ್ತಕಗಳನ್ನು ಖರೀದಿಸುತ್ತಾರೆ. ಯಾವುದಾದರೂ ಕೋಚಿಂಗ್‌ ಸೆಂಟರ್‌ಗೆ ಹೋಗುತ್ತಾರೆ. ಹೀಗಾಗಿ ಸೇಲ್ಸ್‌ ಮಾಡುವವರು ಗ್ರಾಹಕರನ್ನು ಖರೀದಿಸುವ ನಿರ್ಧಾರ ತೆಗೆದುಕೊಳ್ಳುವಂತೆ ಮನವೊಲಿಸಬೇಕು. ಅದಕ್ಕೆ ತಕ್ಕಂತಹ ಕಮ್ಯುನಿಕೇಶನ್‌ ಮಾಡಬೇಕು.

ಬಿಸಿನೆಸ್‌ ಮಾಡುವವರು ಜನರೊಂದಿಗೆ ಆತ್ಮೀಯವಾಗಿ ಮಾತನಾಡಬೇಕು. ಅವರ ಕಷ್ಟ-ಸುಖಗಳನ್ನು ವಿಚಾರಿಸಬೇಕು. ಪ್ರೀತಿ, ಆರೈಕೆ, ಕಾಳಜಿ, ಇತರರನ್ನು ಅರ್ಥ ಮಾಡಿಕೊಳ್ಳುವಿಕೆ, ಅಗತ್ಯ ಇದ್ದಾಗ ಅವರಿಗೆ ಸಲಹೆಗಳನ್ನು ನೀಡುವುದು ಮುಖ್ಯ. ಸೇಲ್ಸ್‌ ಎಂದರೆ ನಿಮಗೆ ಬೇಕಾದ್ದನ್ನು ಗ್ರಾಹಕರಿಗೆ ಕೊಡುವುದಲ್ಲ, ಗ್ರಾಹಕರಿಗೆ ಬೇಕಾದ್ದನ್ನು ಕೊಡುವಂಥದ್ದು. ವ್ಯಾಪಾರದಲ್ಲಿ ಸಂವಹನ ಅತಿ ಮುಖ್ಯ. Sale is nothing but communication ಎನ್ನುತ್ತಾರೆ ಬಿಸಿನೆಸ್‌ ಸಲಹೆಗಾರ ಭೂಪೇಂದ್ರ ಸಿಂಗ್‌ ರಾಥೋರ್.‌ ನೀವು ಗ್ರಾಹಕರ ಅಗತ್ಯಗಳನ್ನು ಕೇಳಬೇಕು, ಅರ್ಥ ಮಾಡಿಕೊಳ್ಳಬೇಕು ಮತ್ತು ಬಾಂಧವ್ಯ ವೃದ್ಧಿಸಬೇಕು. ಆಗ ಆಟೊಮ್ಯಾಟಿಕ್‌ ಆಗಿ ಸೇಲ್ಸ್‌ ವೃದ್ಧಿಸುತ್ತದೆ.

ಸೇಲ್ಸ್‌ ವೃತ್ತಿಯಲ್ಲಿ ಇರುವವರು ದಿನ ನಿತ್ಯ ಹಲವಾರು ಜನರನ್ನು ಭೇಟಿಯಾಗುತ್ತಾರೆ. ಅವರು ನೆಟ್‌ ವರ್ಕ್‌ ಅನ್ನು ಅಭಿವೃದ್ಧಿಪಡಿಸುತ್ತಾರೆ. ಇದು ಮಹತ್ವದ್ದು. ನಿಮ್ಮನ್ನು ಬಲ್ಲವರ ಸಂಖ್ಯೆ ಹೆಚ್ಚುತ್ತಾ ಹೋಗುತ್ತದೆ. ಹೊಸ ಹೊಸ ಜನರು ನಿಮ್ಮ ನೆಟ್‌ ವರ್ಕ್‌ ವ್ಯಾಪ್ತಿಯೊಳಗೆ ಬರುತ್ತಾರೆ. ಸಂಬಂಧಗಳು ಹಾಗೆ ವೃದ್ಧಿಸುತ್ತದೆ. ಸೇಲ್ಸ್‌ನಲ್ಲಿ ಇರುವಾಗ ಜಗತ್ತನ್ನು ಹೆಚ್ಚು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ನಿಮಗೆ ಸಾಧ್ಯವಾಗುತ್ತದೆ. ಬಂಧು ಬಳಗದವರು, ಸ್ನೇಹಿತರು, ಸಹೋದ್ಯೋಗಿಗಳ ನಡುವಣ ಸಂಬಂಧ ಸುಧಾರಣೆಯ ಮಹತ್ವ ಮತ್ತು ಅಗತ್ಯ ನಿಮಗೆ ಅರ್ಥವಾಗುತ್ತದೆ. ಇದು ನಿಮ್ಮನ್ನು ಬುದ್ಧಿವಂತರನ್ನಾಗಿಸುತ್ತದೆ.

ಸೇಲ್ಸ್‌ ಎನ್ನುವುದು ಕೇವಲ ಒಂದು ಕಲೆಯಲ್ಲ, ಕೌಶಲ ಮಾತ್ರವಲ್ಲ, ವಿಜ್ಞಾನವೂ ಹೌದು ಎಂದರೆ ನಿಮಗೆ ಅಚ್ಚರಿಯಾಗಬಹುದು. ಏಕೆಂದರೆ ಇದರಲ್ಲಿ ಹಲವು ಪ್ರಕ್ರಿಯೆಗಳು ಇವೆ. ಸೇಲ್ಸ್‌ ಎಂದರೆ ಹುಚ್ಚಾಟಿಕೆಯಲ್ಲ, ಅದಕ್ಕೂ ಅದರದ್ದೇ ಆದ ಸೂತ್ರಗಳೂ ಇವೆ. ಅದು ನಿಮಗೆ ವ್ಯಾಪಾರದಲ್ಲಿ ವಿಜ್ಞಾನವೂ ಅಡಕವಾಗಿದೆ ಎಂಬುದರ ಮೇಲೆ ನಂಬಿಕೆ ಇಡುವಂತೆ ಮಾಡುತ್ತದೆ. ಗ್ರೇಟ್‌ ಸೇಲ್ಸ್‌ ಪರ್ಸನ್ಸ್‌ ಯಾವಾಗಲೂ ಶಿಸ್ತುಬದ್ಧರಾಗಿರುತ್ತಾರೆ. ಪ್ರತಿ ದಿನ ಒಂದು ಪ್ರಕ್ರಿಯೆಯನ್ನು ಅನುಸರಿಸುತ್ತಾರೆ.

ಇದನ್ನೂ ಓದಿ: Moxy Hotels: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಕ್ಸಿ ಹೋಟೆಲ್ ಆರಂಭ!

ಸೇಲ್ಸ್‌ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರು ಜನರ ನೋವುಗಳು, ದುಮ್ಮಾನಗಳು, ಸಂಕಟಗಳನ್ನು ಅರ್ಥ ಮಾಡಿಕೊಳ್ಳಬಲ್ಲವರಾಗಿರಬೇಕು. ಅವರ ಅಗತ್ಯಗಳನ್ನು ಅರಿತುಕೊಂಡು, ಅವುಗಳನ್ನು ಬಗೆಹರಿಸಲು ತಮ್ಮ ಉತ್ಪನ್ನ ಮತ್ತು ಸೇವೆಗಳನ್ನು ಮುಂದಿಡಬೇಕು. ಗ್ರಾಹಕರ ಅಗತ್ಯಗಳನ್ನು ತಮ್ಮ ಪ್ರಾಡಕ್ಟ್‌ ನಿಜಕ್ಕೂ ಹೇಗೆ ಪರಿಹರಿಸುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಡಬೇಕು. ದೀರ್ಘಕಾಲ ರಿಲೇಶನ್‌ ಶಿಪ್‌ ಉಳಿಸಿಕೊಳ್ಳುವುದು ಎಂದರೆ ಅದು ಕಲೆ-ವಿಜ್ಞಾನಗಳ ಸಮ್ಮಿಲನವೂ ಆಗಿರುತ್ತದೆ. ಸೆಲ್ಲಿಂಗ್‌ ಎನ್ನೋದು ಪ್ರತಿಯೊಂದು ಸಂಸ್ಥೆಯ ಬೆಳವಣಿಗೆಗೂ ಬೆನ್ನೆಲೆಬು ಇದ್ದಂತೆ. ಐಟಿ ಕಂಪನಿಯೊಂದಕ್ಕೆ ಕಾರ್ಖಾನೆ ಅಥವಾ ವೇರ್‌ ಹೌಸ್‌ ಬೇಕಾಗದು. ಆದರೆ ಸೇಲ್ಸ್‌ ಪ್ರೊಫೆಷನಲ್ಸ್‌ ಬೇಕೇಬೇಕು. ಇವತ್ತು ಸ್ಪರ್ಧೆ ಇಲ್ಲದ ಮಾರುಕಟ್ಟೆ ಇಲ್ಲ. ಹೀಗಾಗಿ ಸೇಲ್ಸ್‌ ತಜ್ಞರ ಅವಶ್ಯಕತೆ ಇರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ವಾಣಿಜ್ಯ

Rule Change: ಸೆಪ್ಟೆಂಬರ್ 1ರಿಂದ ನಮ್ಮ ಮೇಲೆ ಪರಿಣಾಮ ಬೀರುವ 6 ಮುಖ್ಯ ಬದಲಾವಣೆಗಳಿವು

ಎಲ್‌ಪಿಜಿ ಮತ್ತು ಆಧಾರ್ ಕಾರ್ಡ್‌ಗೆ ಸಂಬಂಧಿಸಿ ಪ್ರತಿಯೊಬ್ಬರ ಜೇಬಿನ ಮೇಲೆ ಪರಿಣಾಮ ಬೀರುವ ಪ್ರಮುಖ ಆರು ಬದಲಾವಣೆಗಳು ಆಗಲಿವೆ. ಸೆಪ್ಟೆಂಬರ್ 1ರಿಂದ ಜಾರಿಯಾಗಲಿರುವ ಈ ನಿಯಮಗಳು (Rule Change) ಎಲ್ಲರಿಗೂ ಅನ್ವಯವಾಗುವುದು. ಆ ಬದಲಾವಣೆಗಳು ಯಾವುದು ಎನ್ನುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

VISTARANEWS.COM


on

By

Rule Change
Koo

ಸೆಪ್ಟೆಂಬರ್ 1ರಿಂದ ಎಲ್‌ಪಿಜಿ (LPG) ಮತ್ತು ಆಧಾರ್ ಕಾರ್ಡ್‌ಗೆ (Aaadhar card) ಸಂಬಂಧಿಸಿ ಆರು ದೊಡ್ಡ ಬದಲಾವಣೆಗಳು (Rule Change) ಆಗಲಿವೆ. ಇದು ಪ್ರತಿಯೊಬ್ಬರ ಜೇಬಿನ ಮೇಲೂ ಪರಿಣಾಮ ಬೀರಲಿದೆ. ಈ ಬದಲಾವಣೆಗಳು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್‌ಗಳ (LPG cylinder) ಬೆಲೆ ಮತ್ತು ಕ್ರೆಡಿಟ್ ಕಾರ್ಡ್‌ಗಳ (Credit card) ನಿಯಮಗಳನ್ನು ಒಳಗೊಂಡಿವೆ. ಅಲ್ಲದೇ ತುಟ್ಟಿಭತ್ಯೆ ಕುರಿತು ಸರ್ಕಾರಿ ನೌಕರರಿಗೆ ವಿಶೇಷ ಪ್ರಕಟಣೆಗಳು ಸೇರಿವೆ.

ಆಗಸ್ಟ್ ತಿಂಗಳ ಅಂತ್ಯಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಇಂತಹ ಪರಿಸ್ಥಿತಿಯಲ್ಲಿ ಹೊಸ ತಿಂಗಳಿನಿಂದ ಅನೇಕ ದೊಡ್ಡ ಬದಲಾವಣೆಗಳು ನಡೆಯಲಿದೆ. ಇದು ಸಾಮಾನ್ಯ ಜನರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಅಂತಹ ಕೆಲವು ವಿಶೇಷ ಬದಲಾವಣೆಗಳು ಸೆಪ್ಟೆಂಬರ್ ತಿಂಗಳಿನ ಆರಂಭದಲ್ಲೇ ನಡೆಯಲಿದೆ.

Rule Change
Rule Change


ಎಲ್ ಪಿ ಜಿ ಸಿಲಿಂಡರ್ ಬೆಲೆ

ಪ್ರತಿ ತಿಂಗಳ ಮೊದಲ ದಿನಾಂಕದಂದು ಸರ್ಕಾರವು ಎಲ್‌ಪಿಜಿ ಬೆಲೆಯನ್ನು ಬದಲಾಯಿಸುತ್ತದೆ. ಅಂತೆಯೇ ಅಡುಗೆ ಅನಿಲ, ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಗಳಲ್ಲಿ ಬದಲಾವಣೆ ಸೆಪ್ಟೆಂಬರ್ ಮೊದಲ ದಿನವೇ ಕಾಣಬಹುದು. ಇಂತಹ ಪರಿಸ್ಥಿತಿಯಲ್ಲಿ ಈ ಬಾರಿಯೂ ಎಲ್ ಪಿ ಜಿ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಕಳೆದ ತಿಂಗಳು, ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ 8.50 ರೂಪಾಯಿಯಷ್ಟು ಹೆಚ್ಚಿದ್ದರೆ, ಜುಲೈನಲ್ಲಿ ಅದರ ಬೆಲೆ 30 ರೂಪಾಯಿಗಳಷ್ಟು ಕಡಿಮೆಯಾಗಿದೆ.


ಎಟಿಎಫ್, ಸಿಎನ್‌‌ಜಿ, ಪಿಎನ್‌‌ಜಿ ದರಗಳು

ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳೊಂದಿಗೆ ತೈಲ ಮಾರುಕಟ್ಟೆ ಕಂಪೆನಿಗಳು ಏರ್ ಟರ್ಬೈನ್ ಇಂಧನ (ಎಟಿಎಫ್) ಮತ್ತು ಸಿಎನ್‌ಜಿ-ಪಿಎನ್‌ಜಿ ಬೆಲೆಗಳನ್ನು ಸಹ ಪರಿಷ್ಕರಿಸುತ್ತವೆ. ಈ ಕಾರಣದಿಂದಾಗಿ ಸೆಪ್ಟೆಂಬರ್ ಮೊದಲ ದಿನಾಂಕದಂದು ಅವುಗಳ ಬೆಲೆಯಲ್ಲಿ ಬದಲಾವಣೆಗಳನ್ನು ಕಾಣಬಹುದು.

Rule Change
Rule Change


ನಕಲಿ ಕರೆಗಳಿಗೆ ಕಡಿವಾಣ

ಸೆಪ್ಟೆಂಬರ್ 1ರಿಂದ ನಕಲಿ ಕರೆ ಮತ್ತು ಸಂದೇಶಗಳಿಗೆ ಕಡಿವಾಣ ಬೀಳಲಿದೆ. ನಕಲಿ ಕರೆಗಳು ಮತ್ತು ನಕಲಿ ಸಂದೇಶಗಳಿಗೆ ಕಡಿವಾಣ ಹಾಕುವಂತೆ ಟಿಆರ್‌‌ಎಐ ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದೆ. ಇದಕ್ಕಾಗಿ ಟಿಆರ್‌‌ಎಐ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ. ಜಿಯೋ, ಏರ್‌ಟೆಲ್, ವೊಡಾಫೋನ್, ಐಡಿಯಾ, ಬಿಎಸ್‌ಎನ್‌ಎಲ್‌ನಂತಹ ಟೆಲಿಕಾಂ ಕಂಪನಿಗಳಿಗೆ ಟೆಲಿಮಾರ್ಕೆಟಿಂಗ್ ಕರೆಗಳು ಮತ್ತು 140 ಮೊಬೈಲ್ ಸಂಖ್ಯೆಗಳ ಸರಣಿಯಿಂದ ಪ್ರಾರಂಭವಾಗುವ ವಾಣಿಜ್ಯ ಸಂದೇಶಗಳನ್ನು ಬ್ಲಾಕ್‌ಚೇನ್ ಆಧಾರಿತ ಡಿಎಲ್‌ಟಿಗೆ ವರ್ಗಾಯಿಸಲು ಟಿಆರ್ ಎಐ ಕೇಳಿದೆ. ಅಂದರೆ ಸೆಪ್ಟೆಂಬರ್ 30 ರೊಳಗೆ ವಿತರಣಾ ಲೇಸರ್ ತಂತ್ರಜ್ಞಾನ ಪ್ಲಾಟ್‌ಫಾರ್ಮ್‌ಗೆ ಬದಲಾಯಿಸಲು ಟಿಆರ್‌‌ಎಐ ಕೇಳಿದೆ. ಇದು ನಕಲಿ ಕರೆಗಳನ್ನು ನಿಲ್ಲಿಸುವ ನಿರೀಕ್ಷೆಯಿದೆ.


ಕ್ರೆಡಿಟ್ ಕಾರ್ಡ್ ನಿಯಮಗಳು

ಸೆಪ್ಟೆಂಬರ್ 1ರಿಂದ ಎಚ್‌ಡಿಎಫ್‌ಸಿ ಬ್ಯಾಂಕ್ ಯುಟಿಲಿಟಿ ವಹಿವಾಟುಗಳ ರಿವಾರ್ಡ್ ಪಾಯಿಂಟ್‌ಗಳ ಮಿತಿಯನ್ನು ನಿಗದಿಪಡಿಸಲಿದೆ. ಇದರ ಅಡಿಯಲ್ಲಿ ಗ್ರಾಹಕರು ಈ ವಹಿವಾಟುಗಳಲ್ಲಿ ತಿಂಗಳಿಗೆ 2,000 ಪಾಯಿಂಟ್‌ಗಳವರೆಗೆ ಮಾತ್ರ ಪಡೆಯಬಹುದು. ಸೆಪ್ಟೆಂಬರ್ 2024ರಿಂದ ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಪಾವತಿಸಬೇಕಾದ ಕನಿಷ್ಠ ಮೊತ್ತವನ್ನು ಕಡಿಮೆ ಮಾಡುತ್ತದೆ. ಪಾವತಿ ದಿನಾಂಕವನ್ನು 18 ರಿಂದ 15 ದಿನಗಳವರೆಗೆ ಕಡಿಮೆ ಮಾಡಲಾಗುತ್ತದೆ.

ಇದರ ಹೊರತಾಗಿ 2024ರ ಸೆಪ್ಟೆಂಬರ್ 1ರಿಂದ ಯುಪಿಐ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಪಾವತಿಗಳಿಗಾಗಿ ರುಪೇ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರು ಇತರ ಪಾವತಿ ಸೇವಾ ಪೂರೈಕೆದಾರರ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವಂತೆಯೇ ರಿವಾರ್ಡ್ ಪಾಯಿಂಟ್‌ಗಳನ್ನು ಪಡೆಯುತ್ತಾರೆ.

Rule Change
Rule Change


ತುಟ್ಟಿಭತ್ಯೆ

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಘೋಷಣೆಯಾಗುವ ಸಾಧ್ಯತೆ ಇದೆ. ಸರ್ಕಾರವು ನೌಕರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸುವ ನಿರೀಕ್ಷೆಯಿದೆ. ಪ್ರಸ್ತುತ, ಸರ್ಕಾರಿ ನೌಕರರಿಗೆ ಶೇ. 50ರಷ್ಟು ತುಟ್ಟಿಭತ್ಯೆ (ಡಿಎ) ನೀಡಲಾಗುತ್ತಿದ್ದು, ಶೇ. 3ರಷ್ಟು ಹೆಚ್ಚಳದ ಅನಂತರ ಅದು ಶೇ. 53 ಆಗಲಿದೆ.


ಇದನ್ನೂ ಓದಿ: UPS: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು

ಆಧಾರ್ ಕಾರ್ಡ್ ಉಚಿತ ನವೀಕರಣ

ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 14 ಎಂದು ನಿಗದಿಪಡಿಸಲಾಗಿದೆ. ಇದರ ಅನಂತರ, ಆಧಾರ್‌ಗೆ ಸಂಬಂಧಿಸಿದ ಕೆಲವು ವಿಷಯಗಳನ್ನು ಉಚಿತವಾಗಿ ನವೀಕರಿಸಲು ಸಾಧ್ಯವಾಗುವುದಿಲ್ಲ. ಸೆಪ್ಟೆಂಬರ್ 14ರ ಅನಂತರ ಆಧಾರ್ ಅನ್ನು ನವೀಕರಿಸಲು ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Continue Reading

ವಾಣಿಜ್ಯ

Unified Pension Scheme: ಏಕೀಕೃತ ಪಿಂಚಣಿ ಯೋಜನೆ; ನೌಕರರಿಗೆ ಸಿಗುವ ಟಾಪ್‌ 9 ಪ್ರಯೋಜನಗಳಿವು

ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಏಕೀಕೃತ ಪಿಂಚಣಿ ಯೋಜನೆಯನ್ನು (Unified Pension Scheme) ಅರ್ಥೈಸಿಕೊಳ್ಳಲು ನೆರವಾಗುವ ಕೆಲವು ಪ್ರಮುಖ ಅಂಶಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಹಂಚಿಕೊಂಡಿದ್ದಾರೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

VISTARANEWS.COM


on

By

Unified Pension Scheme
Koo

ನಿವೃತ್ತಿಯ ಬಳಿಕ ಸರ್ಕಾರಿ ನೌಕರರಿಗೆ (central government employees) ಆರ್ಥಿಕ ಭದ್ರತೆ ಮತ್ತು ಸ್ಥಿರತೆಯನ್ನು ಒದಗಿಸುವ ಉದ್ದೇಶದಿಂದ 23 ಲಕ್ಷ ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ʼಏಕೀಕೃತ ಪಿಂಚಣಿ ಯೋಜನೆʼಗೆ (Unified Pension Scheme) ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಯುಪಿಎಸ್‌ ವೈಶಿಷ್ಟ್ಯಗಳೇನು?

1. ಖಚಿತ ಪಿಂಚಣಿ

ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಉದ್ಯೋಗಿಗಳು ನಿವೃತ್ತಿಯ ಹಿಂದಿನ 12 ತಿಂಗಳುಗಳಲ್ಲಿ ಪಡೆದ ಸರಾಸರಿ ಮೂಲ ವೇತನದ ಶೇ. 50ರಷ್ಟು ಖಚಿತವಾದ ಪಿಂಚಣಿಯನ್ನು ಪಡೆಯುತ್ತಾರೆ. 25 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರ ಪಿಂಚಣಿಯು ಅವರ ಅವಧಿಗೆ ಅನುಗುಣವಾಗಿರುತ್ತದೆ. ಕನಿಷ್ಠ ಅರ್ಹತಾ ಸೇವಾ ಅವಧಿಯನ್ನು 10 ವರ್ಷಗಳಿಗೆ ನಿಗದಿಪಡಿಸಲಾಗಿದೆ.

2. ಖಚಿತವಾದ ಕುಟುಂಬ ಪಿಂಚಣಿ

ಅಪಘಾತದಿಂದ ನೌಕರ ಮರಣ ಹೊಂದಿದರೆ ಅವರ ಸಂಗಾತಿಯು ಅಥವಾ ಅವಲಂಬಿತರು ಕುಟುಂಬ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಮರಣದ ಮೊದಲು ಉದ್ಯೋಗಿ ಪಡೆಯುತ್ತಿದ್ದ ಪಿಂಚಣಿಯ ಶೇ. 60ರಷ್ಟು ಅವರ ಸಂಗಾತಿಗೆ ಕುಟುಂಬ ಪಿಂಚಣಿಯಾಗಿ ದೊರೆಯುತ್ತದೆ.

3. ಖಚಿತವಾದ ಕನಿಷ್ಠ ಪಿಂಚಣಿ

ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನೌಕರರಿಗೆ ನಿವೃತ್ತಿಯ ಅನಂತರ ತಿಂಗಳಿಗೆ 10,000 ರೂ. ಕನಿಷ್ಠ ಪಿಂಚಣಿಯ ಖಾತರಿ ಇದೆ.

4. ಹಣದುಬ್ಬರ ಸೂಚ್ಯಂಕ

ಖಚಿತ ಮತ್ತು ಕುಟುಂಬ ಪಿಂಚಣಿ ಎರಡೂ ಹಣದುಬ್ಬರ ಸೂಚ್ಯಂಕಕ್ಕೆ ಒಳಪಟ್ಟಿರುತ್ತವೆ. ಈ ಹೊಂದಾಣಿಕೆಯು ಪಿಂಚಣಿಗಳು ಹಣದುಬ್ಬರಕ್ಕೆ ಅನುಗುಣವಾಗಿರುವುದನ್ನು ಖಚಿತಪಡಿಸುತ್ತದೆ.

5. ದರ ಏರಿಕೆ ಪರಿಹಾರ

ಸೇವೆಯಲ್ಲಿರುವ ಉದ್ಯೋಗಿಗಳಂತೆಯೇ ಯುಪಿಎಸ್ ಅಡಿಯಲ್ಲಿ ನಿವೃತ್ತರಾದ ಕೈಗಾರಿಕಾ ಕಾರ್ಮಿಕರಿಗೆ (AICPI-IW) ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ದರ ಏರಿಕೆ ಪರಿಹಾರವನ್ನು ಪಡೆಯುತ್ತಾರೆ.


6. ನಿವೃತ್ತಿಯ ಮೇಲೆ ಒಟ್ಟು ಮೊತ್ತ

ಗ್ರಾಚ್ಯುಟಿ ಜೊತೆಗೆ ಉದ್ಯೋಗಿಗಳು ನಿವೃತ್ತಿಯ ಸಮಯದಲ್ಲಿ ಒಂದು ದೊಡ್ಡ ಮೊತ್ತದ ಪಾವತಿಯನ್ನು ಸ್ವೀಕರಿಸುತ್ತಾರೆ. ಈ ಪಾವತಿಯು ವೇತನ ಮತ್ತು ತುಟ್ಟಿ ಭತ್ಯೆ ಸೇರಿ ನಿವೃತ್ತಿಯ ದಿನಾಂಕ ಪೂರ್ಣಗೊಂಡ ಪ್ರತಿ ಆರು ತಿಂಗಳ ಸೇವೆಗೆ ಉದ್ಯೋಗಿಯ ಮಾಸಿಕ ವೇತನದ 1/10 ಭಾಗವಾಗಿರುತ್ತದೆ. ಈ ಒಟ್ಟು ಮೊತ್ತದ ಪಾವತಿಯು ಖಚಿತವಾದ ಪಿಂಚಣಿಯ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ.

7. ಸರ್ಕಾರದ ಕೊಡುಗೆ

ಈ ಪಿಂಚಣಿ ಯೋಜನೆಯಡಿ ಸರ್ಕಾರವು ತನ್ನ ಕೊಡುಗೆಯನ್ನು ಶೇ. 14ರಿಂದ ಶೇ.18.5ಕ್ಕೆ ಹೆಚ್ಚಿಸುತ್ತಿದೆ. ಆದರೆ ನೌಕರರ ಕೈಯಿಂದ ಈಗಿರುವ ಪ್ರಮಾಣದಷ್ಟೇ ಹಣ ಈ ಯೋಜನೆಗೆ ಸಂದಾಯವಾಗುತ್ತದೆ. ಹಾಗಾಗಿ ಇದರಿಂದ ನೌಕರರಿಗೆ ಹೆಚ್ಚು ಪ್ರಯೋಜನ ಸಿಗುವಂತಾಗುತ್ತದೆ.


8. ನಿವೃತ್ತಿ ಹೊಂದಿದವರಿಗೂ ಅನ್ವಯ

ಏಕೀಕೃತ ಪಿಂಚಣಿ ಯೋಜನೆಯ ನಿಬಂಧನೆಗಳು ರಾಷ್ಟ್ರೀಯ ಪಿಂಚಣಿ ಯೋಜನೆ ಹೊಂದಿರುವ ಹಿಂದಿನ ನಿವೃತ್ತರಿಗೆ ಅಂದರೆ ಈಗಾಗಲೇ ನಿವೃತ್ತಿ ಹೊಂದಿದವರಿಗೂ ಅನ್ವಯಿಸುತ್ತದೆ. ಹಿಂದಿನ ಅವಧಿಯ ಬಾಕಿಯನ್ನು ಪಿಪಿಎಫ್ ದರಗಳಲ್ಲಿ ಬಡ್ಡಿಯೊಂದಿಗೆ ಪಾವತಿಸಲಾಗುತ್ತದೆ.

ಇದನ್ನೂ ಓದಿ: Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

9. ಏಕೀಕೃತ ಪಿಂಚಣಿ ಯೋಜನೆಗೆ ಸೇರುವ ಆಯ್ಕೆ

ಅಸ್ತಿತ್ವದಲ್ಲಿರುವ ಎನ್‌ಪಿಎಸ್, ವಿಆರ್‌ಎಸ್ ಜೊತೆಗೆ ಎನ್‌ಪಿಎಸ್ ಜೊತೆಗೆ ಭವಿಷ್ಯದ ಉದ್ಯೋಗಿಗಳು ಯುಪಿಎಸ್‌ಗೆ ಸೇರುವ ಆಯ್ಕೆಯನ್ನು ಹೊಂದಿರುತ್ತಾರೆ. ಈ ಆಯ್ಕೆಯನ್ನು ಒಮ್ಮೆ ಮಾಡಿಕೊಂಡರೆ ಅದೇ ಅಂತಿಮವಾಗಿರುತ್ತದೆ. ಕೇಂದ್ರ ಸರ್ಕಾರದಿಂದ ಯುಪಿಎಸ್ ಅನ್ನು ಜಾರಿಗೊಳಿಸಲಾಗುತ್ತಿದೆ. ಇದನ್ನು ರಾಜ್ಯ ಸರ್ಕಾರಗಳೂ ಅಳವಡಿಸಿಕೊಳ್ಳಬಹುದಾಗಿದೆ. ಆದರೆ ಕೇಂದ್ರದಂತೆ ರಾಜ್ಯ ಸರ್ಕಾರವೂ ಹೆಚ್ಚುವರಿ ಮೊತ್ತ ಪಾವತಿಸಬೇಕಾಗುತ್ತದೆ.

Continue Reading

ಮನಿ-ಗೈಡ್

Sukanya Samriddhi Yojana: ಸುಕನ್ಯಾ ಸಮೃದ್ಧಿ ಯೋಜನೆ; ನಿಮ್ಮ ಮಗಳು 71 ಲಕ್ಷ ರೂ. ಪಡೆಯಲು ಸಾಧ್ಯ!

ಸುಕನ್ಯಾ ಸಮೃದ್ಧಿ ಯೋಜನೆಯನ್ನು (Sukanya Samriddhi Yojana) ಕೇಂದ್ರ ಸರ್ಕಾರ ಹೆಣ್ಣುಮಕ್ಕಳಿಗಾಗಿ ಮಾಡಿರುವ ಯೋಜನೆಯಾಗಿದೆ. ದೇಶದ ಯಾವುದೇ ನಾಗರಿಕರು ತಮ್ಮ 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಗಳಿಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಬಹುದು. ಇದರ ಅಡಿಯಲ್ಲಿ ಹೂಡಿಕೆ ಮಾಡಿದರೆ ಮಗಳಿಗೆ 21 ವರ್ಷವಾದಾಗ ಅವಳನ್ನು ಲಕ್ಷಾಧಿಪತಿಯನ್ನಾಗಿ ಮಾಡಬಹುದು. ಅದು ಹೇಗೆ ಎನ್ನುವ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Sukanya Samriddhi Yojana
Koo

ಹಣವನ್ನು ತ್ವರಿತವಾಗಿ ಹೆಚ್ಚಿಸಬೇಕು ಎನ್ನುವ ಯೋಚನೆ ಇದ್ದರೆ ಅದನ್ನು ಬ್ಯಾಂಕ್ ನಲ್ಲಿ ಸುಮ್ಮನೆ ಇರಿಸುವ ಬದಲು ಪೋಸ್ಟ್ ಆಫೀಸ್ ನ (post office) ವಿವಿಧ ಯೋಜನೆಗಳಲ್ಲಿ ಒಂದಾದ ಸುಕನ್ಯಾ ಸಮೃದ್ಧಿ ಯೋಜನೆಯಂತಹ (Sukanya Samriddhi Yojana) ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಉತ್ತಮ ಆಯ್ಕೆ. ಇತ್ತೀಚಿನ ದಿನಗಳಲ್ಲಿ ಷೇರು ಮಾರುಕಟ್ಟೆ (share market), ಮ್ಯೂಚುವಲ್ ಫಂಡ್‌ಗಳಂತಹ (mutual fund) ಯೋಜನೆಗಳಲ್ಲಿ ಹೂಡಿಕೆದಾರರ ಸಂಖ್ಯೆ ವೇಗವಾಗಿ ಹೆಚ್ಚುತ್ತಿರುವುದು ಇದೇ ಕಾರಣಕ್ಕೆ.

ಹೂಡಿಕೆ ಮಾಡಲು ಜೊತೆಗೆ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದಾರೆ ಅನೇಕ ಸರ್ಕಾರಿ ಯೋಜನೆಗಳಿವೆ. ಭಾರತ ಸರ್ಕಾರವು ಮಕ್ಕಳ ಭವಿಷ್ಯದ ಮೇಲೆ ಕೇಂದ್ರೀಕೃತವಾಗಿರುವ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಇದು ಉತ್ತಮ ಆದಾಯವನ್ನು ನೀಡುತ್ತದೆ. ಇಲ್ಲಿ ಅಂತಹ ಒಂದು ಸರ್ಕಾರಿ ಯೋಜನೆಯ ಬಗ್ಗೆ ತಿಳಿಸುತ್ತೇವೆ.

ಕೇಂದ್ರ ಸರ್ಕಾರದ ಈ ಯೋಜನೆಯು ಹೆಣ್ಣುಮಕ್ಕಳ ಮೇಲೆ ಕೇಂದ್ರೀಕೃತವಾಗಿದೆ. ದೇಶದ ಯಾವುದೇ ನಾಗರಿಕರು ತಮ್ಮ 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಗಳಿಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಬಹುದು. ಇದು ಸುಕನ್ಯಾ ಸಮೃದ್ಧಿ ಯೋಜನೆ. ಇದರ ಅಡಿಯಲ್ಲಿ ಯಾರಾದರೂ ವಾರ್ಷಿಕವಾಗಿ ಕನಿಷ್ಠ 250 ರೂ. ನಿಂದ ಗರಿಷ್ಠ 1.5 ಲಕ್ಷ ರೂ. ವರೆಗೆ ಠೇವಣಿ ಮಾಡಬಹುದು.

ಬಡ್ಡಿ ದರ

ಸುಕನ್ಯಾ ಸಮೃದ್ಧಿ ಯೋಜನೆಯ ದೊಡ್ಡ ವೈಶಿಷ್ಟ್ಯವೆಂದರೆ ದೇಶಾದ್ಯಂತ ನಡೆಯುತ್ತಿರುವ ಸರ್ಕಾರಿ ಯೋಜನೆಗಳಲ್ಲಿ ಇದು ಹೆಚ್ಚಿನ ಬಡ್ಡಿಯನ್ನು ನೀಡುವ ಯೋಜನೆಗಳಲ್ಲಿ ಒಂದಾಗಿದೆ. ಖಾತೆದಾರರಿಗೆ ಪ್ರತಿ ವರ್ಷ ಶೇ. 8.2 ದರದಲ್ಲಿ ಬಡ್ಡಿಯನ್ನು ನೀಡಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ವರ್ಷಗಳವರೆಗೆ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ಮಗಳಿಗಾಗಿ 71 ಲಕ್ಷಕ್ಕಿಂತ ಹೆಚ್ಚಿನ ಮೊತ್ತವನ್ನು ಸಿದ್ಧಪಡಿಸಬಹುದು.

Sukanya Samriddhi Yojana
Sukanya Samriddhi Yojana


ಸುಕನ್ಯಾ ಸಮೃದ್ಧಿ ಯೋಜನೆ ಎಂದರೇನು?

ಕೇಂದ್ರ ಸರ್ಕಾರ ಆರಂಭಿಸಿರುವ ಈ ಯೋಜನೆಯಡಿ ಯಾವುದೇ ಭಾರತೀಯ ಪ್ರಜೆ ತಮ್ಮ ಮಗಳ ಹೆಸರಿನಲ್ಲಿ ಈ ಯೋಜನೆಯನ್ನು ಆರಂಭಿಸಬಹುದು. ಈ ಯೋಜನೆಗೆ ಅರ್ಹರಾಗಲು ಮಗಳ ವಯಸ್ಸು 0 ರಿಂದ 10 ವರ್ಷಗಳ ನಡುವೆ ಇರಬೇಕು. ಈ ಯೋಜನೆಯನ್ನು ಅಂಚೆ ಕಚೇರಿಯ ಯಾವುದೇ ಶಾಖೆಯಲ್ಲಿ ತೆರೆಯಬಹುದು. ಈ ಯೋಜನೆಯಡಿಯಲ್ಲಿ, ನೀವು ಒಟ್ಟು 15 ವರ್ಷಗಳವರೆಗೆ ಹೂಡಿಕೆ ಮಾಡಬಹುದು. ಅದರ ಅನಂತರ 21 ವರ್ಷಗಳು ಪೂರ್ಣಗೊಂಡ ತಕ್ಷಣ ಪೂರ್ಣ ಮೊತ್ತವನ್ನು ಮುಕ್ತಾಯದ ಮೇಲೆ ನೀಡಲಾಗುತ್ತದೆ.

ವಿಶೇಷ ನಿಯಮಗಳು

ಸರ್ಕಾರವು ಪ್ರತಿ ತ್ರೈಮಾಸಿಕದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಗೆ ನೀಡುವ ಬಡ್ಡಿಯನ್ನು ಪರಿಷ್ಕರಿಸುತ್ತದೆ. ಬಡ್ಡಿಯ ಹೆಚ್ಚಳ ಅಥವಾ ಇಳಿಕೆಯು ಮುಕ್ತಾಯದ ಮೇಲೆ ಸ್ವೀಕರಿಸಿದ ಮೊತ್ತದ ಮೇಲೆ ಪರಿಣಾಮ ಬೀರುತ್ತದೆ. ಸುಕನ್ಯಾ ಸಮೃದ್ಧಿ ಖಾತೆಯಲ್ಲಿ ಹೂಡಿಕೆ ಮಾಡಿದ ಮೊತ್ತವನ್ನು ಪ್ರತಿ ವರ್ಷ ಏಪ್ರಿಲ್ 5 ರ ಮೊದಲು ಠೇವಣಿ ಮಾಡಬೇಕು. ಇದರಿಂದ ಮಗಳು ಗರಿಷ್ಠ ಬಡ್ಡಿ ಪಡೆಯಬಹುದು.

ಖಾತೆಯನ್ನು ತೆರೆಯುವ ಸಮಯದಲ್ಲಿ ಮಗಳಿಗೆ ಒಂದು ವರ್ಷವೂ ಆಗದೇ ಇದ್ದರೆ ಖಾತೆಯು 21 ವರ್ಷಗಳನ್ನು ಪೂರೈಸಿದಾಗ ಮಗಳು ಮೆಚ್ಯೂರಿಟಿ ಮೊತ್ತವನ್ನು ಪಡೆಯುತ್ತಾಳೆ. ಇದರ ಅರ್ಥ ಮಗಳು 21 ವರ್ಷಕ್ಕೆ ಬಂದಾಗ ಅಲ್ಲ. ಖಾತೆಯನ್ನು ತೆರೆದು 21 ವರ್ಷ ಪೂರ್ಣಗೊಂಡಾಗ.

ಇದನ್ನೂ ಓದಿ Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

71 ಲಕ್ಷ ಹೇಗೆ ಸಿಗುತ್ತದೆ?

ಈ ಯೋಜನೆಯಡಿಯಲ್ಲಿ ವಾರ್ಷಿಕವಾಗಿ 1.5 ಲಕ್ಷ ರೂಪಾಯಿಗಳನ್ನು 15 ವರ್ಷಗಳವರೆಗೆ ಠೇವಣಿ ಮಾಡಬಹುದು. ಅದರ ಮೇಲೆ ನಿಮಗೆ ಗರಿಷ್ಠ ಪ್ರಯೋಜನವನ್ನು ನೀಡಲಾಗುತ್ತದೆ. ಈ ಮೊತ್ತವನ್ನು 15 ವರ್ಷಗಳವರೆಗೆ ಠೇವಣಿ ಮಾಡಿದರೆ ಒಟ್ಟು 22,50,000 ರೂ. ಮುಕ್ತಾಯದ ಅನಂತರ 71,82,119 ರೂ. ಗಳನ್ನು ಪಡೆಯಬಹುದು. ಇದರಲ್ಲಿ ಬಡ್ಡಿಯಿಂದ ಪಡೆದ ಒಟ್ಟು ಮೊತ್ತ 49,32,119 ರೂ. ಮೆಚ್ಯೂರಿಟಿಯಲ್ಲಿ ಪಡೆದ ಈ ಮೊತ್ತದ ಮೇಲೆ ಯಾವುದೇ ತೆರಿಗೆ ಇರುವುದಿಲ್ಲ.

Continue Reading

ಮನಿ-ಗೈಡ್

Recurring Deposit: ಸಣ್ಣ, ಆರಂಭಿಕ ಹೂಡಿಕೆದಾರರಿಗೆ ಸೂಕ್ತ ಪೋಸ್ಟ್ ಆಫೀಸ್‌ನ ಆರ್‌ಡಿ; ಏನಿದರ ಲಾಭ?

ಪೋಸ್ಟ್ ಆಫೀಸ್‌ನಲ್ಲಿರುವ ಆರ್‌ಡಿ (Recurring Deposit) ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರು ತೆರೆಯಬಹುದಾದ ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯಾಗಿದೆ. ಈ ಉಳಿತಾಯ ಯೋಜನೆಯಲ್ಲಿ ಹಣಕಾಸಿನ ಅವಶ್ಯಕತೆಗಳಿಗೆ ಸಾಕಷ್ಟು ಹಣವನ್ನು ಸಂಗ್ರಹಿಸಬಹುದು. ಮಾತ್ರವಲ್ಲದೆ ಇನ್ನೂ ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ಈ ಯೋಜನೆಯ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Recurring Deposit
Koo

ಪ್ರತಿಯೊಬ್ಬರಿಗೂ ದೊಡ್ಡ ಪ್ರಮಾಣದಲ್ಲಿ ಹಣವನ್ನು ಹೂಡಿಕೆ (investment) ಮಾಡುವುದು ಸಾಧ್ಯವಿಲ್ಲ. ವಿಶೇಷವಾಗಿ ಉದ್ಯೋಗಕ್ಕೆ ಇತ್ತೀಚೆಗಷ್ಟೇ ಸೇರಿದವರು, ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರಿಗಾಗಿ (small investors or beginners) ಸಹಾಯ ಮಾಡಲು ಕೇಂದ್ರ ಸರ್ಕಾರವು (Indian Govt) ಉಳಿತಾಯ ಯೋಜನೆಯೊಂದನ್ನು (Recurring Deposit) ಪರಿಚಯಿಸಿದೆ.

ಇದು ಕೇಂದ್ರ ಸರ್ಕಾರದಿಂದ ನಿಯಂತ್ರಿಸಲ್ಪಟ್ಟಿರುವುದರಿಂದ ಹೂಡಿಕೆ ಮಾಡಲು ಸುರಕ್ಷಿತ ಆಯ್ಕೆಯಾಗಿದೆ. ಹಾಗಾದರೆ ಈ ಉಳಿತಾಯ ಯೋಜನೆ ಯಾವುದು, ಅದರ ವಿಶೇಷತೆಗಳು ಏನು ಎಂಬುದನ್ನು ನೋಡೋಣ.
ಪೋಸ್ಟ್ ಆಫೀಸ್‌ನಲ್ಲಿರುವ ಆರ್ ಡಿ ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರು ತೆರೆಯಬಹುದಾದ ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯಾಗಿದೆ.

ಆರ್ ಡಿ ಯೋಜನೆ

ಈ ಉಳಿತಾಯ ಯೋಜನೆಯು ನಿರ್ದಿಷ್ಟವಾಗಿ ಸಣ್ಣ ಹೂಡಿಕೆದಾರರಿಗಾಗಿ ಮಾಡಲ್ಪಟ್ಟಿದೆ. ಇದರಿಂದ ಅವರು ತಮ್ಮ ಹಣಕಾಸಿನ ಅವಶ್ಯಕತೆಗಳಿಗೆ ಸಾಕಷ್ಟು ಹಣವನ್ನು ಸಂಗ್ರಹಿಸಬಹುದು. ಇದಲ್ಲದೆ, ಠೇವಣಿಯ ಮೇಲೆ ಯಾವುದೇ ಗರಿಷ್ಠ ಮಿತಿಯಿಲ್ಲ.

ಯೋಜನೆ ಅವಧಿ ಎಷ್ಟು?

ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯು 5 ವರ್ಷಗಳ ಮೆಚುರಿಟಿ ಅವಧಿಯ ಸಣ್ಣ ಉಳಿತಾಯ ಯೋಜನೆಯಾಗಿದೆ. ಈ ಉಳಿತಾಯ ಯೋಜನೆಯೊಂದಿಗೆ ಮಾಸಿಕ ಆಧಾರದ ಮೇಲೆ ಹೂಡಿಕೆ ಮಾಡಬಹುದು. ಇದಲ್ಲದೆ ಈ ಯೋಜನೆಯು ಒಬ್ಬ ವ್ಯಕ್ತಿಗೆ ಏಕ ಮತ್ತು ಜಂಟಿ ಖಾತೆಯನ್ನು ತೆರೆಯಲು ಅನುಮತಿಸುತ್ತದೆ.


ಹೂಡಿಕೆ ಹೇಗೆ?

ತಿಂಗಳಿಗೆ ಕನಿಷ್ಠ 100 ರೂ.ನಿಂದ ಹೂಡಿಕೆಯನ್ನು ಪ್ರಾರಂಭಿಸಬಹುದು. ಯಾವುದೇ ಗರಿಷ್ಠ ಮಿತಿ ಇಲ್ಲದಿರುವುದರಿಂದ ಎಷ್ಟು ಸಾಧ್ಯವೋ ಅಷ್ಟು ಹೂಡಿಕೆ ಮಾಡಬಹುದು. ಆದರೆ ಕ್ಯಾಲೆಂಡರ್ ತಿಂಗಳ 15ರಂದು ಖಾತೆಯನ್ನು ತೆರೆದರೆ ತಿಂಗಳ 15ನೇ ದಿನದವರೆಗೆ ಠೇವಣಿ ಮಾಡಬೇಕು ಎಂಬುದನ್ನು ಗಮನಿಸಬೇಕು. ಕ್ಯಾಲೆಂಡರ್ ತಿಂಗಳ 16ನೇ ದಿನ ಮತ್ತು ಕೊನೆಯ ಕೆಲಸದ ದಿನದ ನಡುವೆ ಖಾತೆಯನ್ನು ತೆರೆದರೆ, ಅನಂತರದ ಠೇವಣಿ ತಿಂಗಳ ಕೊನೆಯ ಕೆಲಸದ ದಿನದವರೆಗೆ ಮಾಡಲಾಗುತ್ತದೆ.

ಖಾತೆಯ ಬಡ್ಡಿ ದರ

ಈ ಉಳಿತಾಯ ಯೋಜನೆಯು ವಾರ್ಷಿಕ ಶೇ. 6.7ರಷ್ಟು ಬಡ್ಡಿ ದರವನ್ನು ನೀಡುತ್ತದೆ. ಐದು ವರ್ಷಗಳವರೆಗೆ 10,000 ರೂ. ಮಾಸಿಕ ಹೂಡಿಕೆಯೊಂದಿಗೆ 7 ಲಕ್ಷ ರೂ.ಗಳಿಗಿಂತ ಹೆಚ್ಚಿನ ಲಾಭವನ್ನು ಪಡೆಯಬಹುದು.

ಇದನ್ನೂ ಓದಿ: Anil Ambani: ಅನಿಲ್‌ ಅಂಬಾನಿಗೆ ಸೆಬಿ ಶಾಕ್‌; 5 ವರ್ಷ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ ನಿಷೇಧ, 25 ಕೋಟಿ ರೂ. ದಂಡ

ಯಾರು ಅರ್ಜಿ ಸಲ್ಲಿಸಬಹುದು?

ಯಾವುದೇ ಒಬ್ಬ ವಯಸ್ಕ, ಅಪ್ರಾಪ್ತ ವಯಸ್ಕ, ಅಸ್ವಸ್ಥ ಮನಸ್ಸಿನ ವ್ಯಕ್ತಿಯ ಪರವಾಗಿ ಪೋಷಕರು, 10 ವರ್ಷಕ್ಕಿಂತ ಮೇಲ್ಪಟ್ಟ ಅಪ್ರಾಪ್ತರು ತಮ್ಮ ಹೆಸರಿನಲ್ಲಿ ಈ ಖಾತೆಯನ್ನು ತೆರೆಯಬಹುದು. ಇದರ ಹೊರತಾಗಿ ಈ ಯೋಜನೆಯು ಹೂಡಿಕೆದಾರರಿಗೆ ಜಂಟಿ ಖಾತೆಯನ್ನು ತೆರೆಯಲು ಅವಕಾಶವಿದೆ. ಇದಲ್ಲದೆ ಬಹು ಖಾತೆಗಳನ್ನು ತೆರೆಯಲು ಅವಕಾಶವಿದೆ.

Continue Reading
Advertisement
Dina bhavishya
ಭವಿಷ್ಯ5 ಗಂಟೆಗಳು ago

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

Gosavi samaj lathicharged Sri Ram Sene calls for bandh in Lakshmeshwara town on October 19
ಗದಗ20 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು22 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ23 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು1 ದಿನ ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ1 ದಿನ ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ1 ದಿನ ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ3 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು3 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌