Byju Raveendran: ಕಳೆದ ವರ್ಷ ಬಿಲಿಯನೇರ್ ಆಗಿದ್ದ ಬೈಜುಸ್‌ ಮಾಲೀಕ ಈಗ ಯಾವ ಸ್ಥಿತಿಯಲ್ಲಿದ್ದಾರೆ ನೋಡಿ! - Vistara News

ವಾಣಿಜ್ಯ

Byju Raveendran: ಕಳೆದ ವರ್ಷ ಬಿಲಿಯನೇರ್ ಆಗಿದ್ದ ಬೈಜುಸ್‌ ಮಾಲೀಕ ಈಗ ಯಾವ ಸ್ಥಿತಿಯಲ್ಲಿದ್ದಾರೆ ನೋಡಿ!

Byju Raveendran: ವರ್ಷದ ಹಿಂದೆ ಬೈಜು ರವೀಂದ್ರನ್ ಅವರ ನಿವ್ವಳ ಮೌಲ್ಯ 17,545 ಕೋಟಿ ರೂ. ಆಗಿ ಹಲವಾರು ಪ್ರತಿಷ್ಠಿತ ವಿಶ್ವದ ಶ್ರೀಮಂತರ ಪಟ್ಟಿಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇತ್ತೀಚೆಗೆ ಬಿಡುಗಡೆಯಾದ ಫೋರ್ಬ್ಸ್ ಬಿಲಿಯನೇರ್ ಇಂಡೆಕ್ಸ್ 2024 ರ ಪ್ರಕಾರ ಅವರ ನಿವ್ವಳ ಮೌಲ್ಯವು ಶೂನ್ಯಕ್ಕೆ ಕುಸಿದಿದ್ದು, 2024ರ ಫೋರ್ಬ್ ಪಟ್ಟಿಯಿಂದ ಅವರನ್ನು ಕೈಬಿಡಲಾಗಿದೆ.

VISTARANEWS.COM


on

Byju Raveendran
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ವರ್ಷದ ಹಿಂದೆಯಷ್ಟೇ ಪೋರ್ಬ್ ಬಿಲಿಯನೇರ್ ( Forbes Billionaire) ಪಟ್ಟಿಗೆ ಸೇರ್ಪಡೆಯಾಗಿದ್ದ ಬೈಜು ರವೀಂದ್ರನ್ (Byju Raveendran) ಅವರ ನಿವ್ವಳ ಮೌಲ್ಯ ಶೂನ್ಯಕ್ಕೆ ಕುಸಿದಿದ್ದು, 2024ರ ಫೋರ್ಬ್ ಪಟ್ಟಿಯಿಂದ (forbes list) ಅವರನ್ನು ಕೈಬಿಡಲಾಗಿದೆ.

ಒಂದು ವರ್ಷದ ಹಿಂದೆ ಬೈಜು ರವೀಂದ್ರನ್ ಅವರ ನಿವ್ವಳ ಮೌಲ್ಯ 17,545 ಕೋಟಿ ರೂ. ಆಗಿ ಹಲವಾರು ಪ್ರತಿಷ್ಠಿತ ವಿಶ್ವದ ಶ್ರೀಮಂತರ ಪಟ್ಟಿಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇತ್ತೀಚೆಗೆ ಬಿಡುಗಡೆಯಾದ ಫೋರ್ಬ್ಸ್ ಬಿಲಿಯನೇರ್ ಇಂಡೆಕ್ಸ್ 2024ರ ಪ್ರಕಾರ ರವೀಂದ್ರನ್ ಅವರ ನಿವ್ವಳ ಮೌಲ್ಯವು ಶೂನ್ಯಕ್ಕೆ ಕುಸಿದಿದೆ.

ಭಾರತದ ಸ್ಟಾರ್ಟ್‌ ಅಪ್ ಪ್ರಗತಿಯಿಂದಾಗಿ ಅವರು ತೀವ್ರ ಸಂಕಷ್ಟ ಎದುರಿಸುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ. ಕಳೆದ ವರ್ಷದ ಪಟ್ಟಿಯಿಂದ ಬೈಜು ರವೀಂದ್ರನ್ ಸೇರಿ ಕೇವಲ ನಾಲ್ಕು ಮಂದಿಯನ್ನು ಫೋರ್ಬ್ ಬಿಲಿಯನೇರ್ ಪಟ್ಟಿಯಿಂದ ಈ ಬಾರಿ ಕೈಬಿಡಲಾಗಿದೆ.

ಇದನ್ನೂ ಓದಿ: Youngest billionaires: ಫೋರ್ಬ್ಸ್‌ ಶ್ರೀಮಂತರ ಪಟ್ಟಿಯಲ್ಲಿ ಬೆಂಗಳೂರಿನ ಕಿರಿಯ ಬಿಲಿಯನೇರ್ ಸಹೋದರರು!

ಭಾರತದಲ್ಲಿ ಬೈಜುಸ್ ಕ್ರಾಂತಿ

2011 ರಲ್ಲಿ ಸ್ಥಾಪಿತವಾದ ಬೈಜೂಸ್ 2022 ರಲ್ಲಿ 22 ಶತಕೋಟಿ ಡಾಲರ್ ನಷ್ಟು ಗರಿಷ್ಠ ಮೌಲ್ಯವನ್ನು ಹೊಂದುವ ಮೂಲಕ ಭಾರತದ ಅತ್ಯಮೂಲ್ಯವಾದ ಸ್ಟಾರ್ಟ್ಅಪ್ ಆಗಿ ವೇಗ ಕಂಡಿತ್ತು. ಬೈಜುಸ್ ನವೀನ ಕಲಿಕಾ ಅಪ್ಲಿಕೇಶನ್‌ನೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡಿತು. ಪ್ರಾಥಮಿಕ ಶಾಲೆಯಿಂದ ಎಂಬಿಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಇದು ಉಪಯುಕ್ತವಾಗಿದ್ದು, ಇತ್ತೀಚಿನ ದಿನಗಳಲ್ಲಿ ಆರ್ಥಿಕ ಸಂಕಷ್ಟ ಕಂಪೆನಿಯ ವೇಗದ ನಡಿಗೆಗೆ ತೀವ್ರ ಹೊಡೆತವನ್ನು ನೀಡಿವೆ.

ಮಾರ್ಚ್ 2022ರ ಹಣಕಾಸಿನ ವರ್ಷದಲ್ಲಿ ಬೈಜು 1 ಬಿಲಿಯನ್‌ ಡಾಲರ್ ಗಿಂತಲೂ ಹೆಚ್ಚಿನ ನಿವ್ವಳ ನಷ್ಟವನ್ನು ಬಹಿರಂಗಪಡಿಸಿದ ಬಳಿಕ ಪ್ರಮುಖ ಹೂಡಿಕೆದಾರರು ಹಿಂದೆ ಸರಿದದ್ದು ಮಾರುಕಟ್ಟೆಯಲ್ಲಿ ತೀವ್ರ ಕುಸಿತವನ್ನು ಕಂಡಿತು.

ಇಡಿ ನೊಟೀಸ್

ಮಾರುಕಟ್ಟೆಯಲ್ಲಿ ತೀವ್ರ ಟೀಕೆಗಳನ್ನು ಎದುರಿಸಿದ ಬೈಜು ರವೀಂದ್ರನ್ ಕಂಪನಿಯ ಷೇರುದಾರರು ಕಳೆದ ತಿಂಗಳು ಸಿಇಒ ಹುದ್ದೆಯಿಂದ ಕೆಳಗಿಳಿಸಲು ಮತ ಹಾಕಿದ್ದಾರೆ.
ಬೈಜು ಅವರ ವಿದೇಶಿ ಹೂಡಿಕೆಯು ಜಾರಿ ನಿರ್ದೇಶನಾಲಯದ ಕಣ್ಣಿಗೆ ಬಿದ್ದಿದ್ದು, ಅದರ ಸಂಸ್ಥಾಪಕರ ವಿರುದ್ಧ ಲುಕ್‌ಔಟ್ ನೊಟೀಸ್ ಜಾರಿಗೊಳಿಸಲಾಗಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಯಡಿ 9,362 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಹಣಕಾಸು ವರ್ಗಾವಣೆ ಸಂಬಂಧಿಸಿ ಬೈಜು ಅವರ ಮಾತೃ ಸಂಸ್ಥೆ ಥಿಂಕ್ ಆಂಡ್ ಲರ್ನ್‌ಗೆ ಇಡಿ ನೊಟೀಸ್ ಜಾರಿ ಗೊಳಿಸಿದೆ.

ಭಾರತದ 200 ಬಿಲಿಯನೇರ್‌ಗಳು

ವಿಶ್ವದ ಫೋರ್ಬ್ ಪಟ್ಟಿಯಲ್ಲಿ ಈ ಬಾರಿ ಭಾರತದ 200 ಬಿಲಿಯನೇರ್‌ಗಳು ಸೇರಿದ್ದಾರೆ. ಇವರು ಒಟ್ಟು 954 ಶತಕೋಟಿ ಡಾಲರ್ ಮೌಲ್ಯದ ಸಂಪತ್ತನ್ನು ಹೊಂದಿದ್ದಾರೆ. ಕಳೆದ ವರ್ಷ 675 ಶತಕೋಟಿ ಡಾಲರ್ ಇದ್ದ ಒಟ್ಟು ಸಂಪತ್ತಿನ ಮೌಲ್ಯದಲ್ಲಿ ಶೇ. 40ರಷ್ಟು ಹೆಚ್ಚಳವಾಗಿದೆ.

ಮುಖೇಶ್ ಅಂಬಾನಿ ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿದ್ದು, ಇವರ ಸಂಪತ್ತು 116 ಬಿಲಿಯನ್ ಡಾಲರ್, ಗೌತಮ್ ಅದಾನಿ 17ನೇ ಶ್ರೀಮಂತ ವ್ಯಕ್ತಿಯಾಗಿದ್ದು ಇವರ ಸಂಪತ್ತಿನ ಒಟ್ಟು ಮೌಲ್ಯ 84 ಬಿಲಿಯನ್ ಡಾಲರ್ .

ಯುಎಸ್ ಅತಿ ಹೆಚ್ಚು ಬಿಲಿಯನೇರ್‌ಗಳನ್ನು ಹೊಂದಿದ ರಾಷ್ಟ್ರವಾಗಿದ್ದು, ಎರಡನೇ ಸ್ಥಾನದಲ್ಲಿ ಚೀನಾ ಇದೆ. ಭಾರತ 200 ಬಿಲಿಯನೇರ್‌ಗಳು ಫೋರ್ಬ್ ಪಟ್ಟಿಗೆ ಸೇರಿದ್ದರಿಂದ ಅತಿ ಶ್ರೀಮಂತರನ್ನು ಹೊಂದಿರುವ ಮೂರನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಕಳೆದ ವರ್ಷ ಭಾರತದ 169 ಬಿಲಿಯನೇರ್‌ಗಳು ಫೋರ್ಬ್ ಪಟ್ಟಿಯಲ್ಲಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

RBI Dividend: ಕೇಂದ್ರ ಸರ್ಕಾರಕ್ಕೆ 2023-24ನೇ ಸಾಲಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್ ದಾಖಲೆಯ 2.11 ಲಕ್ಷ ಕೋಟಿ ರೂ. ಡೆವಿಡೆಂಡ್‌ (ಲಾಭಾಂಶ) ನೀಡಲು ಒಪ್ಪಿಗೆ ನೀಡಿರುವುದು ಕೂಡ ಷೇರು ಮಾರುಕಟ್ಟೆಯ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. 2022-23ರಲ್ಲಿ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 87 ಸಾವಿರ ಕೋಟಿ ರೂ. ನೀಡಿತ್ತು. ಆದರೆ, ಅದು ಎರಡು ಪಟ್ಟು ಜಾಸ್ತಿಯಾಗಿರುವುದರಿಂದ ಹೊಸ ಸರ್ಕಾರಕ್ಕೆ ಭಾರಿ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

RBI Dividend
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದಿದ್ದು, ಇನ್ನೆರಡು ತಿಂಗಳು ಬಾಕಿ ಇವೆ. ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಇನ್ನೆರಡು ಹಂತದ ಮತದಾನಕ್ಕೆ ಅಬ್ಬರದ ಪ್ರಚಾರ ನಡೆಯುತ್ತಿದೆ. ಇದರ ಬೆನ್ನಲ್ಲೇ, ಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ (Reserve Bank Of India) ಮಹತ್ವದ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 2023-24ನೇ ಸಾಲಿನಲ್ಲಿ 2.11 ಲಕ್ಷ ಕೋಟಿ ರೂ. ಡಿವಿಡೆಂಡ್‌ (Dividend) (ಲಾಭಾಂಶ) ನೀಡುವುದಾಗಿ ಘೋಷಣೆ ಮಾಡಿದೆ.

ಜೂನ್‌ 4ರಂದು ನೂತನ ಸರ್ಕಾರ ರಚನೆಯಾಗಲಿದೆ. ವಿತ್ತೀಯ ಕೊರತೆ ನೀಗಿಸುವ ದಿಸೆಯಲ್ಲಿ ಆರ್‌ಬಿಐನ 2.11 ಲಕ್ಷ ಕೋಟಿ ರೂ. ಹೊಸ ಸರ್ಕಾರಕ್ಕೆ ವರದಾನವಾಗಲಿದೆ. ಅದರಲ್ಲೂ, ಆರ್‌ಬಿಐ ಇತಿಹಾಸದಲ್ಲಿಯೇ ದಾಖಲೆ ಮೊತ್ತದ ಡಿವಿಡೆಂಡ್‌ಅನ್ನು ಕೇಂದ್ರ ಸರ್ಕಾರಕ್ಕೆ ನೀಡುವುದಾಗಿ ಘೋಷಿಸಿರುವುದು ಹೊಸ ಸರ್ಕಾರಕ್ಕೆ ಭಾರಿ ಅನುಕೂಲವಾಗಲಿವೆ. ಇದು ದೇಶದ ಒಟ್ಟು ಜಿಡಿಪಿಯ ಶೇ.4ರಷ್ಟು ಮೊತ್ತವಾಗಿದೆ ಎಂದು ತಿಳಿದುಬಂದಿದೆ.

ಷೇರು ಪೇಟೆ ಲಯಕ್ಕೂ ಇದೇ ಕಾರಣ

ಕೇಂದ್ರ ಸರ್ಕಾರಕ್ಕೆ 2023-24ನೇ ಸಾಲಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್ ದಾಖಲೆಯ 2.11 ಲಕ್ಷ ಕೋಟಿ ರೂ. ಡೆವಿಡೆಂಡ್‌ (ಲಾಭಾಂಶ) ನೀಡಲು ಒಪ್ಪಿಗೆ ನೀಡಿರುವುದು ಕೂಡ ಷೇರು ಮಾರುಕಟ್ಟೆಯ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. 2022-23ರಲ್ಲಿ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 87 ಸಾವಿರ ಕೋಟಿ ರೂ. ನೀಡಿತ್ತು. ಆದರೆ, ಅದು ಎರಡು ಪಟ್ಟು ಜಾಸ್ತಿಯಾಗಿರುವುದರಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣ ಸಿಗುತ್ತದೆ. ಆ ಹಣವು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ವಿನಿಯೋಗವಾಗುತ್ತದೆ. ಇದರಿಂದ ಷೇರು ಪೇಟೆಯಲ್ಲಿ ಲಾಭ ಗಳಿಸಬಹುದು ಎಂಬ ಕಾರಣದಿಂದ ಹೂಡಿಕೆ ಜಾಸ್ತಿಯಾಗಿದೆ. ಗುರುವಾರವೂ ಸಾರ್ವಜನಿಕ ವಲಯದ ಸಂಸ್ಥೆಗಳು ಲಾಭ ಗಳಿಸಿರುವುದು ಈ ಮಾತಿಗೆ ಪುಷ್ಟಿ ನೀಡುವಂತಿದೆ.

“ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಮಹತ್ವದ ಸುಧಾರಣೆ ತಂದಿದೆ. ಆರ್ಥಿಕ ಶಿಸ್ತು, ವಿತ್ತೀಯ ಪ್ರಕ್ರಿಯೆಗಳಲ್ಲಿ ಸುಧಾರಣಾ ಕ್ರಮಗಳನ್ನು ಅನುಸರಿಸಿಕೊಂಡಿದೆ. ಇದರಿಂದಾಗಿ ಭಾರತದ ಷೇರು ಮಾರುಕಟ್ಟೆಯು ಕಳೆದ ಒಂದು ದಶಕದಲ್ಲಿ ಗಣನೀಯ ಏಳಿಗೆ ಕಂಡಿದೆ. 10 ವರ್ಷಗಳ ಹಿಂದೆ ಸೆನ್ಸೆಕ್ಸ್‌ 25 ಸಾವಿರ ಪಾಯಿಂಟ್ಸ್‌ ಹೊಂದಿತ್ತು. ಆದರೀಗ, ಸೆನ್ಸೆಕ್ಸ್‌ 75 ಸಾವಿರ ಪಾಯಿಂಟ್ಸ್‌ಗೆ ಏರಿಕೆಯಾಗಿದೆ. ಈಕ್ವಿಟಿ ಮಾರುಕಟ್ಟೆಯ ಮೌಲ್ಯವು ಕೆಲ ದಿನಗಳ ಹಿಂಷ್ಟೇ 5 ಲಕ್ಷ ಕೋಟಿ ಡಾಲರ್‌ ಆಗಿದೆ. ಹಾಗಾಗಿ, ಜೂನ್‌ 4ರಂದು ಷೇರು ಮಾರುಕಟ್ಟೆಯು ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading

ಕರ್ನಾಟಕ

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

ಕಳೆದೊಂದು ವಾರದಿಂದ (Arecanut Price) ಅಡಿಕೆ ಇಳಿಮುಖದ ಧಾರಣೆಯ ಕಡೆಗೆ ವಾಲಿದೆ. ಚುನಾವಣೆಯ ಪಲಿತಾಂಶ ಮತ್ತು ಪೂರ್ಣ ಪ್ರಮಾಣದ ನೀತಿ ಸಂಹಿತೆ ತೆರವು ಕಾಣುವವರೆಗೆ ಬಹುಶಃ ಅಡಿಕೆ ಧಾರಣೆ ದೊಡ್ಡ ಮಟ್ಟದ ಏರಿಳಿತವನ್ನು ಕಾಣಲಿಕ್ಕಿಲ್ಲ. ಹಾಗಂತ ಅಡಿಕೆ ತೋಟದ ಉಪ ಬೆಳೆಗಳ ಧಾರಣೆ ಏರುತ್ತಿದೆ. ಈ ಕುರಿತ ನಿಖರ ವಿಶ್ಲೇಷಣೆ ಇಲ್ಲಿದೆ.

VISTARANEWS.COM


on

arecanut price
Koo

| ಅರವಿಂದ ಸಿಗದಾಳ್, ಮೇಲುಕೊಪ್ಪ

ಕಳೆದ ತಿಂಗಳು ಏರಿಕೆ ಗ್ರಾಫ್ (Arecanut Price) ಕಂಡು ರೈತರಲ್ಲಿ ಸಂತಸ ಮೂಡಿಸಿದ ಶಿವಮೊಗ್ಗ ಅಡಿಕೆ ಧಾರಣೆ, ಮೇ ತಿಂಗಳಿನ ಪ್ರಾರಂಭದಲ್ಲಿ ಮತ್ತೊಂದು ಸಣ್ಣ ಮೊತ್ತದ ಏರಿಕೆ ದಾಖಲಿಸಿ, ಕಳೆದೊಂದು ವಾರದಿಂದ ಇಳಿಮುಖದ ಧಾರಣೆಯ ಕಡೆಗೆ ವಾಲಿದೆ. ಚುನಾವಣೆಯ ಪಲಿತಾಂಶ ಮತ್ತು ಪೂರ್ಣ ಪ್ರಮಾಣದ ನೀತಿ ಸಂಹಿತೆ ತೆರವು ಕಾಣುವವರೆಗೆ ಬಹುಶಃ ಅಡಿಕೆ ಧಾರಣೆ ದೊಡ್ಡ ಮಟ್ಟದ ಏರಿಳಿತವನ್ನು ಕಾಣಲಿಕ್ಕಿಲ್ಲ. ಆದರೆ
ಕಳೆದ ವಾರ ಅಂದರೆ 14.05.2024ರಂದು ಗರಿಷ್ಠ ₹ 54,596 ದಾಖಲಿಸಿದ್ದ ರಾಶಿ ಇಡಿ ಧಾರಣೆ, ದಿನ ದಿನವೂ ಇಳಿಯುತ್ತ, ಇವತ್ತು ₹ 53,009 ಬಂದು ನಿಂತಿದೆ. ಸರಿ ಸುಮಾರು ₹ 1,500 ದರ ‘ಅಡಿಕೆ ರಾಶಿ ಇಡಿ’ಯಲ್ಲಿ ಕೊರತೆ ಕಾಣಿಸಿದೆ.

ಅಡಿಕೆ ರಾಶಿ ಇಡಿಯಲ್ಲಿ ₹1,500 ಇಳಿಮುಖವಾಗಿದ್ದರೆ, ಅಡಿಕೆ ಬೆಟ್ಟೆ ಧಾರಣೆಯಲ್ಲಿ ಕೇವಲ ₹.500 ಮಾತ್ರ ಇಳಿಕೆಯಾಗಿದ್ದು, ಆಲ್‌ಮೋಸ್ಟ್ ಸ್ಥಿರತೆಯನ್ನೇ ಉಳಿಸಿಕೊಂಡಿದೆ. ಇದೇ ಸಮಯದಲ್ಲಿ ಅಡಿಕೆ ಮಾರುಕಟ್ಟೆಗೆ ಬರುತ್ತಿರುವ ಆವಕವೂ (ಪೂರೈಕೆ) ಗಣನೀಯವಾಗಿ ಅತ್ತ-ಇತ್ತ ಆಗುತ್ತಿರುವುದು ಕಂಡು ಬಂದಿದೆ. ಅಡಿಕೆ ಆವಕ ಏರಿಳಿಕೆ ಆಗುತ್ತಿದ್ದರೂ, ಅಡಿಕೆ ಧಾರಣೆ ಮಾತ್ರ ಇಳಿಯುತ್ತಿರುವುದು ಒಂದು ವಿಶೇಷ.

ಶಿವಮೊಗ್ಗ APMC ದಾಖಲೆಗಳ ಪ್ರಕಾರ ಹೆಚ್ಚು ವ್ಯಾಪಾರವಾಗುವ ‘ರಾಶಿ ಇಡಿ ಅಡಿಕೆ’ ಆವಕದ ‘ಏರಿಳಿಕೆ’ ಹೀಗಿದೆ:
ದಿನಾಂಕ 14.05.2024 – 15,921 ಕ್ವಿಂಟಾಲ್
ದಿನಾಂಕ 15.05.2024 – 5,435 ಕ್ವಿಂಟಾಲ್
ದಿನಾಂಕ 16.05.2024 – 14,464ಕ್ವಿಂಟಾಲ್
ದಿನಾಂಕ 20.05.2024 – 3231 ಕ್ವಿಂಟಾಲ್
ದಿನಾಂಕ 21.05.2024 – 11,538 ಕ್ವಿಂಟಾಲ್
ರಾಶಿ ಇಡಿ ಧಾರಣೆ 53,009ಕ್ಕೆ ಇಳಿಕೆಯಾದಾಗ, ಗೊರಬಲು ಅಡಿಕೆ ₹.38,800 ಸನಿಹದಲ್ಲಿದೆ.

ಸಿಪ್ಪೆ ಗೋಟು ದರ ಏರಿಕೆ

ಈ ಎಲ್ಲ ವೆರೈಟಿಗಳ ಧಾರಣೆಯ ಇಳಿಕೆ ಕಾಣುತ್ತಿರುವಾಗ, ಸಿಪ್ಪೆ ಗೋಟು ದರ ಮಾತ್ರ ಸಣ್ಣ ಮಟ್ಟದ ಏರಿಕೆಯನ್ನು ದಾಖಲಿಸಿದೆ. APMC ಮಂಡಿ ಮತ್ತು ಸೊಸೈಟಿಗಳಲ್ಲಿ ಸಿಪ್ಪೆ ಗೋಟು ಅಡಿಕೆ ವ್ಯವಹಾರ ಬಹಳ ಕಮ್ಮಿ ಮತ್ತು ನಗದು ಮಾರುಕಟ್ಟೆಯಲ್ಲೇ ಹೆಚ್ಚಾಗಿ ಸಿಪ್ಪೆ ಗೋಟು ಅಡಿಕೆ ವ್ಯಾಪಾರ ಕಾಣುವುದು.

ಪ್ರತೀ ವರ್ಷವೂ ನಗದು ಮಾರುಕಟ್ಟೆಯಲ್ಲಿ ಮೇ 15 ರ ನಂತರ ಸಿಪ್ಪೆ ಗೋಟು ಅಡಿಕೆ ಚೇತರಿಕೆ ಕಾಣುವುದು ಎಂದು ನಂಬಿಕೆ ಮತ್ತು ವಾಡಿಕೆಯಾಗಿದೆ. ಅದರಂತೆ ಮೇ 15 ರಿಂದ ಸಿಪ್ಪೆ ಗೋಟು ಅಡಿಕೆ ಏರಿಕೆಯೊಂದಿಗೆ ₹.19,000 ದಲ್ಲಿ ವ್ಯಾಪಾರ ನೆಡೆಯುತ್ತಿದೆ ಎಂದು ವರದಿಯಾಗಿದೆ. (ಸಿಪ್ಪೆ ಗೋಟಿನ ಅಡಿಕೆಗೆ ಬಿಲ್ಲ ಇರುವುದಿಲ್ಲ. ಅಧಿಕೃತವಾಗಿ APMC ಯಲ್ಲಿ ಇದರ ವ್ಯವಹಾರ ಕಡಿಮೆ ಇರುವುದರಿಂದ, ವ್ಯಾಪಾರಸ್ತರು/ಏಜಂಟರು ನೇರವಾಗಿ ರೈತರ ಅಂಗಳದಲ್ಲೇ ಖರೀಧಿ ಮಾಡುವುದರಿಂದ ವ್ಯಾವಹಾರಿಕ ದಾಖಲೆಗಳು ಎಲ್ಲಾ ಕಡೆ ಇರುವುದು ಕಮ್ಮಿ.)
ಸಿಪ್ಪೆ ಗೋಟು ದರ ಇನ್ನಷ್ಟು ಏರುವ ನಿರೀಕ್ಷೆಯಿದ್ದು, ಸದ್ಯದಲ್ಲೇ ಓಪನ್ ನಗದು ಮಾರುಕಟ್ಟೆಯಲ್ಲಿ ₹.20,000 ದಾಟುವ ನಿರೀಕ್ಷೆ ರೈತರದು.

ಅಡಿಕೆ ಬೆಳೆಗಾರರ ನಿರೀಕ್ಷೆ ಮತ್ತು ಅಭಿಪ್ರಾಯ ಪ್ರಕಾರ, ಎಲ್ಲಾ ವೆರೈಟಿ ಅಡಿಕೆಗಳ (ಹಸ, ಬೆಟ್ಟೆ, ಇಡಿ, ಗೊರಬಲು, ಸಿಪ್ಪೆ ಗೋಟು) ಧಾರಣೆಗಳು ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಮೇಲೆ, ವ್ಯಾಪಾರ ವಹಿವಾಟು ತೀವ್ರತೆ ಪಡೆದು, ಧಾರಣೆ ಗ್ರಾಫ್ ಮೇಲ್ಮುಖವಾಗಲಿದೆ ಎಂದು ಅಂದಾಜಿಸಲಾಗುತ್ತಿದೆ.

ಉಪ ಬೆಳೆ ಧಾರಣೆ ಏರಿಕೆ

ಅಡಿಕೆ ಬೆಲೇ ಏರಿಳಿತವಾಗುವ ಸಮಯದಲ್ಲಿ, ಅಡಿಕೆಯ ತೋಟದಲ್ಲಿನ ಉಪ ಬೆಳೆಯಾದ ಕಾಳು ಮೆಣಸು ಧಾರಣೆ ಗಣನೀಯವಾಗಿ ಏರುತ್ತಿದ್ದು, ಕಳೆದ ವಾರ ₹.56,500 (ಕ್ವಿಂಟಾಲಿಗೆ) ಇದ್ದ ದರ, ಇವತ್ತು ₹.60,000 ದಾಟಿದೆ. ವಿಯಟ್ಣಾಮ್‌ನಲ್ಲಿ ಕಾಳು ಮೆಣಸು ಬೆಳೆ ತೀವ್ರ ಕುಸಿತ ಕಂಡ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದ್ದು, ಭಾರತದ ಕಾಳು ಮೆಣಸಿಗೆ ಜಾಕ್ ಪಾಟ್ ಧಾರಣೆ ಸಿಗಲಿದೆ ಎಂದು ಜಾಲತಾಣಗಳಲ್ಲಿ ಚರ್ಚೆ ಆಗುತ್ತಿದೆ. ಬಹುಶಃ ಎಲ್ಲ ಧಾರಣೆಗಳ ಗಣನೀಯ ಏರಿಳಿತಗಳಿಗೂ ಚಾಲನೆ ಸಿಗುವುದು ಜೂನ್ ನಾಲ್ಕರ ನಂತರ? ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್ಕಿ ಬಾರ್ ₹ 60,000 ಪಾರ್’ ಆಗಲಿದೆಯಾ? ಕಾದು ನೋಡಬೇಕು!

ಇದನ್ನೂ ಓದಿ: Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

Continue Reading

ದೇಶ

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

Share Market: ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಇದು ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಗೆ ಹಿಡಿದ ಕನ್ನಡಿ ಎಂದೇ ವಿಶ್ಲೇಷಿಸಲಾಗುತಿದೆ.

VISTARANEWS.COM


on

Share Market
Koo

ಮುಂಬೈ: “ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶ ಪ್ರಕಟವಾಗುವ ಜೂನ್‌ 4ರಂದು ಭಾರತದ ಷೇರು ಮಾರುಕಟ್ಟೆಯು (Share Market) ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೂಡ ಇದೇ ಮಾತು ಹೇಳಿದ್ದಾರೆ. ಇದರ ಮಧ್ಯೆಯೇ, ಗುರುವಾರ (ಮೇ 23) ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಯ ಸಂಕೇತವಾಗಿಯೇ ಷೇರು ಮಾರುಕಟ್ಟೆಯು ದಾಖಲೆ ಬರೆದಿದೆ ಎಂದೇ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

“ನಿಫ್ಟಿಯು ದಾಖಲೆಯ ಏರಿಕೆ ಕಾಣುವ ಮೂಲಕ ಚುನಾವಣೆ ನಂತರದಲ್ಲಿ ದೇಶದಲ್ಲಿ ರಾಜಕೀಯ ಸ್ಥಿರತೆ ಇರುತ್ತದೆ ಎಂಬ ಸಂದೇಶ ರವಾನಿಸಿದೆ. ಅತಿ ಹೆಚ್ಚಿನ ಹಣ ಹೂಡಿಕೆ ಮಾಡುವವರು ಸೇರಿ ಎಲ್ಲರಿಗೂ ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ” ಎಂದು ಜಿಯೋಜೀತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಮುಖ್ಯ ಹೂಡಿಕೆ ರಣತಂತ್ರಗಾರ ವಿ.ಕೆ.ವಿಜಯ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ, ಸಾರ್ವತ್ರಿಕ ಚುನಾವಣೆ ಫಲಿತಾಂಶದ ದಿನ ಷೇರು ಪೇಟೆಯಲ್ಲಿ ಲವಲವಿಕೆ ಇದ್ದೇ ಇರುತ್ತದೆ. ಆದರೆ, ಜೂನ್‌ 4ರಂದು ಇತಿಹಾಸ ಸೃಷ್ಟಿಯಾಗುತ್ತದೆ ಎಂದು ಹೇಳುತ್ತಿರುವುದು ಹೂಡಿಕೆದಾರರ ಖುಷಿ ಹೆಚ್ಚಿಸಿದೆ.

Share Market

ಕೇಂದ್ರಕ್ಕೆ ಆರ್‌ಬಿಐ ಲಾಭಾಂಶದ ಕೊಡುಗೆ

ಕೇಂದ್ರ ಸರ್ಕಾರಕ್ಕೆ 2023-24ನೇ ಸಾಲಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್ ದಾಖಲೆಯ 2.10 ಲಕ್ಷ ಕೋಟಿ ರೂ. ಡೆವಿಡೆಂಡ್‌ (ಲಾಭಾಂಶ) ನೀಡಲು ಒಪ್ಪಿಗೆ ನೀಡಿರುವುದು ಕೂಡ ಷೇರು ಮಾರುಕಟ್ಟೆಯ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. 2022-23ರಲ್ಲಿ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 87 ಸಾವಿರ ಕೋಟಿ ರೂ. ನೀಡಿತ್ತು. ಆದರೆ, ಅದು ಎರಡು ಪಟ್ಟು ಜಾಸ್ತಿಯಾಗಿರುವುದರಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣ ಸಿಗುತ್ತದೆ. ಆ ಹಣವು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ವಿನಿಯೋಗವಾಗುತ್ತದೆ. ಇದರಿಂದ ಷೇರು ಪೇಟೆಯಲ್ಲಿ ಲಾಭ ಗಳಿಸಬಹುದು ಎಂಬ ಕಾರಣದಿಂದ ಹೂಡಿಕೆ ಜಾಸ್ತಿಯಾಗಿದೆ. ಗುರುವಾರವೂ ಸಾರ್ವಜನಿಕ ವಲಯದ ಸಂಸ್ಥೆಗಳು ಲಾಭ ಗಳಿಸಿರುವುದು ಈ ಮಾತಿಗೆ ಪುಷ್ಟಿ ನೀಡುವಂತಿದೆ.

ಷೇರು ಮಾರುಕಟ್ಟೆ ಬಗ್ಗೆ ಮೋದಿ ಹೇಳಿದ್ದೇನು?

“ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಮಹತ್ವದ ಸುಧಾರಣೆ ತಂದಿದೆ. ಆರ್ಥಿಕ ಶಿಸ್ತು, ವಿತ್ತೀಯ ಪ್ರಕ್ರಿಯೆಗಳಲ್ಲಿ ಸುಧಾರಣಾ ಕ್ರಮಗಳನ್ನು ಅನುಸರಿಸಿಕೊಂಡಿದೆ. ಇದರಿಂದಾಗಿ ಭಾರತದ ಷೇರು ಮಾರುಕಟ್ಟೆಯು ಕಳೆದ ಒಂದು ದಶಕದಲ್ಲಿ ಗಣನೀಯ ಏಳಿಗೆ ಕಂಡಿದೆ. 10 ವರ್ಷಗಳ ಹಿಂದೆ ಸೆನ್ಸೆಕ್ಸ್‌ 25 ಸಾವಿರ ಪಾಯಿಂಟ್ಸ್‌ ಹೊಂದಿತ್ತು. ಆದರೀಗ, ಸೆನ್ಸೆಕ್ಸ್‌ 75 ಸಾವಿರ ಪಾಯಿಂಟ್ಸ್‌ಗೆ ಏರಿಕೆಯಾಗಿದೆ. ಈಕ್ವಿಟಿ ಮಾರುಕಟ್ಟೆಯ ಮೌಲ್ಯವು ಕೆಲ ದಿನಗಳ ಹಿಂಷ್ಟೇ 5 ಲಕ್ಷ ಕೋಟಿ ಡಾಲರ್‌ ಆಗಿದೆ. ಹಾಗಾಗಿ, ಜೂನ್‌ 4ರಂದು ಷೇರು ಮಾರುಕಟ್ಟೆಯು ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading

ಮನಿ-ಗೈಡ್

Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

Money Guide: ಭವಿಷ್ಯಕ್ಕಾಗಿ ಹೂಡಿಕೆ ಮಾಡಬೇಕು ಎನ್ನುವುದು ಬಹುತೇಕರ ಆಗ್ರಹ. ಆದರೆ ಯಾವ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಉತ್ತಮ ಎನ್ನವ ಬಗ್ಗೆ ಗೊಂದಲ ಮೂಡುತ್ತದೆ. ಇಲ್ಲಿ ನಾವು ನಿಮಗೆ ಪರಿಚಯಿಸುವ ಯೋಜನೆ ಸರ್ಕಾರಿ ಬೆಂಬಲಿತ ಪ್ಲಾನ್‌ ಆಗಿದ್ದು, ಇಲ್ಲಿ ಹೂಡಿಕೆ ಮಾಡುವುದರಿಂದ ಯಾವುದೇ ಆತಂಕವಿಲ್ಲ. ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು 1 ಕೋಟಿ ರೂ.ಗಿಂತ ಹೆಚ್ಚು ಸಂಗ್ರಹಿಸಬಹುದು. ಹಾಗಾದರೆ ಇದು ಯಾವ ಯೋಜನೆ? ಯಾರೆಲ್ಲ ಹೂಡಿಕೆ ಮಾಡಬಹುದು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ, ದುಬಾರಿ ಜೀವನ ಶೈಲಿಯಿಂದಾಗಿ ಹಣಕಾಸಿನ ವಿಚಾರದಲ್ಲಿ ಎಲ್ಲರೂ ಎಚ್ಚರಿಕೆ ವಹಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಉಳಿತಾಯ ಮಾಡುವತ್ತ ಗಮನ ಹರಿಸಬೇಕು ಎನ್ನುವುದು ಆರ್ಥಿಕ ತಜ್ಞರ ಸಲಹೆ. ಹಾಗಾದರೆ ಉಳಿತಾಯ, ನಿವೃತ್ತಿ ಯೋಜನೆಗಳಲ್ಲಿ ಹೂಡಿಕೆ ಮಾಡುವುದಾದರೆ ಯಾವುದು ಉತ್ತಮ? ಎನ್ನುವ ಪ್ರಶ್ನೆ ಸಹಜವಾಗಿ ಎದುರಾಗುತ್ತದೆ. ಇದಕ್ಕೆ ತಜ್ಞರು ನೀಡುವ ಉತ್ತರ ಸಾರ್ವಜನಿಕ ಭವಿಷ್ಯ ನಿಧಿ (Public Provident Fund). ಇದು ಕೇಂದ್ರ ಸರ್ಕಾರ ಬೆಂಬಲಿತ ಪ್ಲಾನ್‌ ಆಗಿದ್ದು, ಸಣ್ಣ ಹೂಡಿಕೆದಾರರು ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಸರ್ಕಾರಿ ಬೆಂಬಲಿತ ಪ್ಲಾನ್‌ ಆದ ಕಾರಣ ಇಲ್ಲಿ ಹೂಡಿಕೆ ಮಾಡುವುದು ಅಪಾಯಕಾರಿ ಅಲ್ಲ ಎನ್ನುವುದು ಬಹು ದೊಡ್ಡ ಪ್ಲಸ್‌ ಪಾಯಿಂಟ್‌. ಪಿಪಿಎಫ್‌ ಖಾತೆ ತೆರೆಯುವವರಿಗೆ ವಾರ್ಷಿಕ ಶೇ. 7.1ರಷ್ಟು ಬಡ್ಡಿ ದೊರೆಯಲಿದೆ. ಅಲ್ಲದೆ ಈ ಹೂಡಿಕೆಯ ಮೂಲಕ ಸಾಲವನ್ನೂ ಪಡೆಯಬಹುದು. ಜತೆಗೆ ತೆರಿಗೆ ವಿನಾಯಿತಿಯೂ ಲಭಿಸುತ್ತದೆ. ವಿಶೇಷ ಎಂದರೆ ನಿಯತಕಾಲಿಕ ಹೂಡಿಕೆಗಳು ಮತ್ತು ಸಂಯೋಜನೆಯ ಮೂಲಕ ನೀವು ಪಿಪಿಎಫ್‌ನಿಂದ 1 ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ಸಂಗ್ರಹಿಸಬಹುದು. ಅದು ಹೇಗೆ ಎನ್ನುವ ವಿವರ ಇಲ್ಲಿದೆ (Money Guide).

1 ಕೋಟಿ ರೂ. ಪಡೆಯುವ ವಿಧಾನ

ಹೂಡಿಕೆ ಅವಧಿಒಟ್ಟು ಪಿಪಿಎಫ್‌
ಹೂಡಿಕೆ
ಒಟ್ಟು ಬಡ್ಡಿಮೆಚ್ಯೂರಿಟಿ ಮೊತ್ತ
15 ವರ್ಷ1.5 ಲಕ್ಷ ರೂ.18.18 ಲಕ್ಷ ರೂ.40.68 ಲಕ್ಷ ರೂ.
20 ವರ್ಷ1.5 ಲಕ್ಷ ರೂ.36.58 ಲಕ್ಷ ರೂ.66.58 ಲಕ್ಷ ರೂ.
30 ವರ್ಷ1.5 ಲಕ್ಷ ರೂ.1.09 ಕೋಟಿ ರೂ.1.54 ಕೋಟಿ ರೂ.

ವಿವಿಧ ಅವಧಿಗಳಲ್ಲಿ ವಾರ್ಷಿಕವಾಗಿ 1.5 ಲಕ್ಷ ರೂ. ಹೂಡಿಕೆ ಮಾಡುವ ಮೂಲಕ ನಿಮ್ಮ ಮೆಚ್ಯೂರಿಟಿ ಮೊತ್ತವು 40 ಲಕ್ಷ ರೂ.ಯಿಂದ 1.5 ಕೋಟಿ ರೂ.ಗೆ ಹೇಗೆ ಬೆಳೆಯಬಹುದು ಎಂಬುದನ್ನು ಮೇಲಿನ ಉದಾಹರಣೆ ವಿವರಿಸುತ್ತದೆ.

ತೆರಿಗೆ ವಿನಾಯಿತಿ

ಇನ್ನು ಸೆಕ್ಷನ್‌ 80 ಸಿ ಅಡಿಯಲ್ಲಿ 1.5 ಲಕ್ಷ ರೂ. ತನಕ ತೆರಿಗೆ ವಿನಾಯಿತಿ ಸಿಗಲಿದೆ. ಅಂದರೆ ಯೋಜನೆಯಲ್ಲಿ ಮಾಡಿದ ಸಂಪೂರ್ಣ ಹೂಡಿಕೆಯ ಮೇಲೆ ತೆರಿಗೆ ವಿನಾಯಿತಿಯ ಪ್ರಯೋಜನವನ್ನು ನೀವು ಪಡೆಯುತ್ತೀರಿ. ಇದಲ್ಲದೆ, ಹೂಡಿಕೆಯಿಂದ ಪಡೆದ ಬಡ್ಡಿಗೂ ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. ಅಲ್ಲದೆ ಯೋಜನೆ ಮುಕ್ತಾಯವಾದ ಬಳಿಕ ಪಡೆದಯುವ ಮೊತ್ತವೂ ತೆರಿಗೆಮುಕ್ತವಾಗಿರುತ್ತದೆ.

ಸಾಲ ಪಡೆಯಲಿರುವ ಅರ್ಹತೆ

ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ನಲ್ಲಿ ನೀವು ಮಾಡುವ ಇನ್ವೆಸ್ಟ್‌ಮೆಂಟ್‌ ಮೇಲೆ ಸಾಲ ಪಡೆಯಬಹುದು. ಖಾತೆ ತೆರೆದ 3-6ನೇ ವರ್ಷದಲ್ಲಿ ಸಾಲ ಪಡೆಯಲು ನೀವು ಅರ್ಹರಾಗಿರುತ್ತೀರಿ. ಇಂಥ ಸಾಲದ ಗರಿಷ್ಠ ಅವಧಿ 36 ತಿಂಗಳು. ಅಕೌಂಟ್‌ನಲ್ಲಿರುವ ಮೊತ್ತದ 25% ಅಥವಾ ಕಡಿಮೆ ಮೊತ್ತವನ್ನು ಮಾತ್ರ ಸಾಲಕ್ಕಾಗಿ ಕ್ಲೈಮ್‌ ಮಾಡಿಕೊಳ್ಳಬಹುದು.‌

ಯಾರೆಲ್ಲ ತೆರೆಯಬಹುದು?

ಭಾರತೀಯ ನಾಗರಿಕರು ಪಿಪಿಎಫ್‌ ಖಾತೆಯನ್ನು ತೆರೆಯಬಹುದು. ಅಪ್ರಾಪ್ತ ವಯಸ್ಕರ ಹೆಸರಿನಲ್ಲಿಯೂ ಖಾತೆ ತೆರೆಯುವ ಸೌಕರ್ಯವಿದೆ. ಅನಿವಾಸಿ ಭಾರತೀಯರು ಹೊಸ ಪಿಪಿಎಫ್‌ ಅಕೌಂಟ್‌ ತೆರೆಯುವಂತಿಲ್ಲ. ಹೀಗಿದ್ದರೂ ಈಗಾಗಲೇ ಇದ್ದರೆ ಅದು ಪೂರ್ಣವಾಗುವ ತನಕ ಸಕ್ರಿಯವಾಗಿರುತ್ತದೆ. ಆದರೆ 5 ವರ್ಷಗಳ ಹೆಚ್ಚುವರಿ ಅವಧಿ ಇರುವುದಿಲ್ಲ. ಈ ಯೋಜನೆಯಲ್ಲಿ ನೀವು ವರ್ಷಕ್ಕೆ ಕನಿಷ್ಠ 500 ರೂ ಮತ್ತು ಗರಿಷ್ಠ 1.5 ಲಕ್ಷ ರೂ.ಗಳನ್ನು ಹೂಡಿಕೆ ಮಾಡಬಹುದು. ಒಂದು ಹಣಕಾಸು ವರ್ಷದಲ್ಲಿ ನೀವು ಗರಿಷ್ಠ 12 ಕಂತುಗಳಲ್ಲಿ ಹಣವನ್ನು ಠೇವಣಿ ಇಡುವ ಸೌಲಭ್ಯವೂ ಇದೆ. ಆಫ್‌ಲೈನ್‌ ಹಾಗೂ ಆನ್‌ಲೈನ್‌ ವಿಧಾನದಲ್ಲಿ ಪಿಪಿಎಫ್‌ ಖಾತೆಯನ್ನು ತೆರೆಯಬಹುದು. 

ಇದನ್ನೂ ಓದಿ: Money Guide: ತೆರಿಗೆ ವಿನಾಯಿತಿ ಪಡೆಯಬೇಕೆ? ಮಾ. 31ರೊಳಗೆ ಪಿಪಿಎಫ್‌ನಲ್ಲಿ ಹೂಡಿಕೆ ಮಾಡಿ

Continue Reading
Advertisement
Phalodi Satta Bazar
ದೇಶ11 mins ago

Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

Sara Tendulkar
ಕ್ರಿಕೆಟ್18 mins ago

Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

Liquor ban
ಕರ್ನಾಟಕ43 mins ago

Liquor ban: ಜೂ. 1ರಿಂದ ಐದು ದಿನ ಮದ್ಯ ಮಾರಾಟ ನಿಷೇಧ; ಖರೀದಿಗೆ ಮುಗಿಬಿದ್ದ ಎಣ್ಣೆ ಪ್ರಿಯರು!

Narendra Modi
ದೇಶ46 mins ago

Narendra Modi: 2047ರವರೆಗೆ ದೇಶಕ್ಕಾಗಿ ನನ್ನ ಸೇವೆ; ಇದು ದೇವರ ಆದೇಶ ಎಂದ ಮೋದಿ

HD Kumaraswamy slams CM Siddaramaiah about devegowda statement
ರಾಜಕೀಯ51 mins ago

HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

Former DGP Arrested
ಕ್ರೈಂ1 hour ago

Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ಕ್ರೈಂ1 hour ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಗೆ ಲಷ್ಕರ್–ಎ–ತಯ್ಬಾ ಜತೆ ಲಿಂಕ್‌!

CSK vs RC
ಕ್ರೀಡೆ1 hour ago

CSK vs RCB: ಮತ್ತೆ ಆರ್​ಸಿಬಿ, ಕೊಹ್ಲಿಯ ಬಗ್ಗೆ ಕಿಡಿಕಾರಿದ ಚೆನ್ನೈ ತಂಡದ ಮಾಜಿ ಆಟಗಾರ

BSNL network problem in Hosanagara The lawyer decided to climb the tower and protest
ಕರ್ನಾಟಕ1 hour ago

Hosanagara News: ಹೊಸನಗರದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ; ಟವರ್‌ ಏರಿ ಪ್ರತಿಭಟನೆಗೆ ಮುಂದಾದ ವಕೀಲ!

union minister pralhad joshi spoke in North East Graduate Constituency Electoral Convention at ballari
ಕರ್ನಾಟಕ1 hour ago

MLC Election: ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ; ಸಚಿವ ಪ್ರಲ್ಹಾದ್‌ ಜೋಶಿ ವ್ಯಾಖ್ಯಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌