5 G ಸ್ಪೆಕ್ಟ್ರಮ್‌ ಹರಾಜಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ - Vistara News

ಪ್ರಮುಖ ಸುದ್ದಿ

5 G ಸ್ಪೆಕ್ಟ್ರಮ್‌ ಹರಾಜಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ, 5ಜಿ ಸ್ಪೆಕ್ಟ್ರಮ್‌ ಹರಾಜಿಗೆ ಮಂಗಳವಾರ ಅನುಮೋದಿಸಿದೆ ಎಂದು ಮೂಲಗಳು ತಿಳಿಸಿವೆ. ದೂರಸಂಪರ್ಕ ಇಲಾಖೆ ಅಧಿಸೂಚನೆ ಹೊರಡಿಸಲಿದೆ.

VISTARANEWS.COM


on

5g
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮುಂಬರುವ 5ಜಿ ಸ್ಪೆಕ್ಟ್ರಮ್‌ ಹರಾಜಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.

ಈ ಕೇಂದ್ರ ಸಚಿವ ಸಂಪುಟ ಸಭೆ ಮಂಗಳವಾರ ನಡೆದಿದೆ ಎಂದು ಮೂಲಗಳು ತಿಳಿಸಿವೆ. ದೂರಸಂಪರ್ಕ ಇಲಾಖೆ ಈ ಬಗ್ಗೆ ಅಧಿಸೂಚನೆಯನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆ ಇದೆ. ಹರಾಜು ಪ್ರಕ್ರಿಯೆಗೆ ಮಾರ್ಗದರ್ಶಿ ಬಿಡುಗಡೆಯಾಗಲಿದೆ. ಟ್ರಾಯ್‌ ಕಳೆದ ಏಪ್ರಿಲ್‌ನಲ್ಲಿ 5ಜಿ ಹರಾಜಿಗೆ ಶಿಫಾರಸು ಮಾಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Police Arrest: ಅಕ್ರಮ ಮದ್ಯ ಸಾಗಿಸಲು ಸಹಾಯ; ಸಿಕ್ಕಿ ಬಿದ್ದ ಸಿಐಡಿ ಲೇಡಿ ಆಫೀಸರ್!

Police Arrest: ಪೊಲೀಸರೆಂದರೆ ಕಳ್ಳರನ್ನು ಹಿಡಿದು ತಕ್ಕ ಶಿಕ್ಷೆ ನೀಡುತ್ತಾರೆ ಎಂಬ ನಂಬಿಕೆ ಜನರಿಗೆ. ಆದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿಯೊಂದು ನಿರ್ಮಾಣವಾಗಿದೆ. ಅದೇನೆಂದರೆ, ಗುಜರಾತ್‌ನ ಕಚ್‌ನಲ್ಲಿ ಇತ್ತೀಚೆಗೆ ಮಹಿಳಾ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸ್ ಅಧಿಕಾರಿಯೊಬ್ಬರು ಮದ್ಯವನ್ನು ಸಾಗಿಸುವ ಪ್ರಯತ್ನದಲ್ಲಿ ಕಳ್ಳಸಾಗಣೆದಾರನಿಗೆ ಸಹಾಯ ಮಾಡಿ ಸಿಕ್ಕಿಬಿದ್ದಿದ್ದಾರೆ. ಇವರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 307 ಮತ್ತು 427ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

VISTARANEWS.COM


on

Police Arrest
Koo

ಅಹಮದಾಬಾದ್: ಪೊಲೀಸ್ ಅಧಿಕಾರಿಗಳೆಂದರೆ ಕಳ್ಳತನ, ಸುಲಿಗೆ, ದರೋಡೆ ಮಾಡುವಂತಹ ದುಷ್ಟರನ್ನು ಹಿಡಿದು ಜನರಿಗೆ ನ್ಯಾಯ ಕೊಡಿಸುವವರು ಎಂಬ ಭಾವನೆ ಜನರಲ್ಲಿದೆ. ಆದರೆ ಗುಜರಾತ್‌ನ ಕಚ್‌ನಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಪೊಲೀಸ್ ವೃತ್ತಿಗೆ ಅಪಖ್ಯಾತಿ ತರುವಂತದಾಗಿದೆ. ಯಾಕೆಂದರೆ ಮಹಿಳಾ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸ್ ಅಧಿಕಾರಿಯೊಬ್ಬರು ಮದ್ಯವನ್ನು ಸಾಗಿಸುವ ಪ್ರಯತ್ನದಲ್ಲಿ ಕಳ್ಳಸಾಗಣೆದಾರನಿಗೆ ಸಹಾಯ ಮಾಡಿ ಸಿಕ್ಕಿಬಿದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ (Police arrest).

ಭಚೌ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ರಾತ್ರಿ, ಮದ್ಯ ಕಳ್ಳಸಾಗಣೆಯನ್ನು ತಡೆಯಲು ಕಚ್(kutch) ನ ಭಚೌ ಪೊಲೀಸ್ ಠಾಣೆ ಪ್ರದೇಶದ ಚೋಪ್ಡ್ವಾ(chopdwa) ಸೇತುವೆಯ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಬಿಳಿ ಥಾರ್ ವಾಹನವೊಂದು ಪೊಲೀಸ್ ತಪಾಸಣೆಯನ್ನು ಕಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿತು. ಮತ್ತೊಂದು ಪೊಲೀಸ್ ಬೆಂಗಾವಲು ವಾಹನ ಅವರನ್ನು ಹಿಂಬಾಲಿಸಿ ತಡೆದರು. ನಂತರ ಪೊಲೀಸರು ವಾಹನವನ್ನು ಶೋಧಿಸಿದಾಗ ಅದರಲ್ಲಿ 16 ಬಾಟಲಿ ಮದ್ಯ ಮತ್ತು ಎರಡು ಕ್ಯಾನ್ ಬಿಯರ್ ಪತ್ತೆಯಾಗಿದೆ. ನಂತರ ಅದಕ್ಕೆ ಸಂಬಂಧಿಸಿದ ವ್ಯಕ್ತಿಗಳು ಕಚ್ ಪೂರ್ವ ಸಿಐಡಿಯ ಅಧಿಕಾರಿ ನೀತಾ ಚೌಧರಿ ಮತ್ತು ಕಳ್ಳಸಾಗಣೆದಾರನನ್ನು ಯುವರಾಜ್ ಸಿಂಗ್ ಎಂದು ಪತ್ತೆ ಮಾಡಲಾಗಿದೆ. ಇವರಿಬ್ಬರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 307 ಮತ್ತು 427 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಯುವರಾಜ್ ಸಿಂಗ್ ಈ ಹಿಂದೆ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕೊಲೆ ಯತ್ನ ಸೇರಿದಂತೆ 6 ಪ್ರಕರಣಗಳಲ್ಲಿ ಬೇಕಾಗಿದ್ದಾನೆ ಎನ್ನಲಾಗಿದೆ. ಮತ್ತು ಪೊಲೀಸ್ ಅಧಿಕಾರಿ ನೀತಾ ಚೌಧರಿ ಅವರು ಪೊಲೀಸ್ ಸಮವಸ್ತ್ರದಲ್ಲಿ ನೃತ್ಯ ವೀಡಿಯೊಗಳನ್ನು ಮಾಡುವುದು ಸೇರಿದಂತೆ ತನ್ನ ಅಸಾಂಪ್ರದಾಯಿಕ ನಡವಳಿಕೆಗಾಗಿ ಅವರು ಈ ಹಿಂದೆ ವಿವಾದದಲ್ಲಿ ಸಿಲುಕಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ಈ ಹಿಂದೆ, ಗುಜರಾತ್ ನಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿದ್ದರೂ ಕೆಲವು ಪೊಲೀಸ್ ಅಧಿಕಾರಿಗಳು ಕಳ್ಳಸಾಗಾಣಿಕೆದಾರರಿಗೆ ಸಹಾಯ ಮಾಡುತ್ತಿದ್ದರು ಎಂಬುದಾಗಿ ಮಾಹಿತಿ ತಿಳಿದುಬಂದಿತ್ತು. ಅಲ್ಲದೇ ಗುಜರಾತ್‌ನ ಭೋಪಾಲ್ ಮತ್ತು ಅಹಮದಾಬಾದ್‌ನಲ್ಲಿ ನಡೆದ ಅಪಘಾತಕ್ಕೀಡಾದ ವಾಹನದಲ್ಲಿ ಮದ್ಯ ನಿಷೇಧದ ಹೊರತಾಗಿಯೂ ಹಲವಾರು ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂಬುದಾಗಿ ತಿಳಿದುಬಂದಿದೆ.

Continue Reading

ದೇಶ

Good News For Farmers: ಬಿಸಿಲಿನ ಝಳಕ್ಕೆ ಬಸವಳಿದ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಈ ತಿಂಗಳು ಉತ್ತಮ ವರ್ಷಧಾರೆ

Good News For Farmers: ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ. ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಖಾರಿಫ್ ಬೆಳೆಗಳ ಬಿತ್ತನೆಗೆ ಸಜ್ಜಾಗುತ್ತಿರುವ ರೈತರಿಗೆ ಇದು ಶುಭ ಸುದ್ದಿ ಎನಿಸಿಕೊಂಡಿದೆ. ಐಎಂಡಿಯ ಮಾಸಿಕ ಮುನ್ಸೂಚನೆಯ ಪ್ರಕಾರ ಜುಲೈಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ.

VISTARANEWS.COM


on

Good News For Farmers
Koo

ನವದೆಹಲಿ: ದಾಖಲೆಯ ಬಿಸಿಲಿನಿಂದ ಬಸವಳಿದ ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ (India Meteorological Department) ಶುಭ ಸುದ್ದಿಯೊಂದನ್ನು ನೀಡಿದೆ (Good News For Farmers). ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ವರ್ಷದ ಜೂನ್‌ನಲ್ಲಿ 123 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಅಧಿಕ ತಾಪಮಾನ ದಾಖಲಾಗಿತ್ತು. ಇದೀಗ ಐಎಂಡಿಯ ವರದಿ ಕೃಷಿಕರಿಗೆ ತುಸು ಸಮಾಧಾನ ತಂದಿದೆ.

ಖಾರಿಫ್ ಬೆಳೆಗಳ ಬಿತ್ತನೆಗೆ (ವಿಶೇಷವಾಗಿ ಭತ್ತದಂತಹ ಹೆಚ್ಚಿನ ನೀರಿನ ಆವಶ್ಯಕತೆಯಿರುವ ಬೆಳೆ) ಸಜ್ಜಾಗುತ್ತಿರುವ ರೈತರಿಗೆ ಇದು ಶುಭ ಸುದ್ದಿ ಎನಿಸಿಕೊಂಡಿದೆ. ಮಳೆಯ ಕೊರತೆಯು ಜೂನ್‌ನಲ್ಲಿ ಸುಮಾರು ಶೇ. 32.6ಕ್ಕೆ ತಲುಪಿದ್ದರಿಂದ ವಾಯುವ್ಯ ಭಾರತದಲ್ಲಿ ಕಳೆದ ತಿಂಗಳು ಶುಷ್ಕ ವಾತಾವರಣ ಕಂಡು ಬಂದಿತ್ತು. ಹೀಗಾಗಿ ಈ ಪ್ರದೇಶವು ತೀವ್ರವಾದ ಶಾಖದ ಅಲೆಗಳಿಂದ ಸುಟ್ಟು ಹೋಗಿತ್ತು. ಅಲ್ಲದೆ 123 ವರ್ಷಗಳಲ್ಲಿ ಅತ್ಯಂತ ಬೆಚ್ಚಗಿನ ಜೂನ್ ಎನಿಸಿಕೊಂಡಿತ್ತು. ಸರಾಸರಿ ಮಾಸಿಕ ತಾಪಮಾನವು ಸಾಮಾನ್ಯಕ್ಕಿಂತ ಸುಮಾರು 1.65 ಡಿಗ್ರಿ ಹೆಚ್ಚು ದಾಖಲಾಗಿತ್ತು.

ಐಎಂಡಿಯ ಮಾಸಿಕ ಮುನ್ಸೂಚನೆಯ ಪ್ರಕಾರ ಜುಲೈಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ. ಜತೆಗೆ ಈ ಪ್ರದೇಶದಲ್ಲಿ ಪ್ರವಾಹ ಉಂಟಾಗಬಹುದಾದಷ್ಟು ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಹರಿಯಾಣ, ಉತ್ತರಾಖಂಡಕ್ಕೆ ಎಚ್ಚರಿಕೆ

ಐಎಂಡಿ ಡಿಜಿ ಡಾ.ಎಂ.ಮೊಹಾಪಾತ್ರ ಅವರ ಪ್ರಕಾರ ಜುಲೈನಲ್ಲಿ ಸುರಿಯುವ ಧಾರಾಕಾರ ಮಳೆಯು ಪಶ್ಚಿಮ ಹಿಮಾಲಯದ ರಾಜ್ಯಗಳಾದ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಬೆಟ್ಟದ ತಪ್ಪಲಿನ ರಾಜ್ಯಗಳಲ್ಲಿ ನದಿ ಪ್ರವಾಹಕ್ಕೆ ಕಾರಣವಾಗಬಹುದು.

“ಮುನ್ಸೂಚನೆಯ ಪ್ರಕಾರ ಭಾರೀ ಮಳೆಯಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮೇಘಸ್ಫೋಟ, ಭಾರಿ ಮಳೆಯಿಂದ ಭೂಕುಸಿತದಂತಹ ಅಪಾಯ ಎದುರಾಗುವ ಸಾಧ್ಯತೆ ಇದೆ. ಮಧ್ಯ ಭಾರತದ ಕೆಲವು ಭಾಗಗಳಲ್ಲಿ, ಗೋದಾವರಿ, ಮಹಾನದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆಯಿರುವುದರಿಂದ ಸ್ಥಳೀಯರು ಎಚ್ಚರಿಕೆ ವಹಿಸಬೇಕುʼʼ ಎಂದು ಅವರು ತಿಳಿಸಿದ್ದಾರೆ.

ಆದಾಗ್ಯೂ, ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಬಹುದು. ಇದರ ಹೊರತಾಗಿ ಉತ್ತರ ಪ್ರದೇಶದ ಕೆಲವು ಭಾಗಗಳಾದ ಗೋರಖ್ಪುರ, ಬಿಹಾರದ ಪಶ್ಚಿಮ ಜಿಲ್ಲೆಗಳು, ಜಾರ್ಖಂಡ್, ಮುಂತಾದ ಕೆಲವು ಭಾಗಗಳು ಮತ್ತು ಲಡಾಖ್‌ನಲ್ಲಿಯೂ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಊಹಿಸಿದೆ.

ಜೂನ್‌ನಲ್ಲಿ ಮಳೆ ಕೊರತೆ

ಭಾರತವು ಜೂನ್‌ನಲ್ಲಿ ಸುಮಾರು ಶೇ. 10.9ರಷ್ಟು ಮಳೆ ಕೊರತೆಯನ್ನು ದಾಖಲಿಸಿದೆ. ವಾಯುವ್ಯ ಭಾರತದಲ್ಲಿ ಇದರ ಪ್ರಮಾಣ ಹೆಚ್ಚು (ಶೇ. 32.6). ಮಧ್ಯ ಭಾರತ, ಪೂರ್ವ ಮತ್ತು ಈಶಾನ್ಯ ಭಾರತ (ಸುಮಾರು ಶೇ. 13)ದಲ್ಲಿಯೂ ಮಳೆ ಕೊರತೆ ಕಂಡು ಬಂದಿದೆ. ಸದ್ಯ ನೈಋತ್ಯ ಮಾನ್ಸೂನ್ ವೇಗ ಪಡೆದುಕೊಂಡಿದ್ದು, ಮತ್ತು ಮುಂದಿನ ಎರಡು-ಮೂರು ದಿನಗಳಲ್ಲಿ ಭಾರತವನ್ನು ಆವರಿಸಲಿದೆ ಎಂದು ಐಎಂಡಿ ತಿಳಿಸಿದೆ.

ಮಳೆಯ ಕೊರತೆಯು ಕಳೆದ ಕೆಲವು ದಿನಗಳಲ್ಲಿ ಉತ್ತರ ಭಾರತದ ಹಲವೆಡೆ ತಾಪಮಾನ ಹೆಚ್ಚಳಕ್ಕೆ ಮತ್ತು ತೀವ್ರವಾದ ಶಾಖದ ಅಲೆಗಳಿಗೆ ಕಾರಣವಾಗಿತ್ತು. ಹವಾಮಾನ ಇಲಾಖೆಯ ಪ್ರಕಾರ ಈ ಬೇಸಿಗೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಸುಮಾರು 20ರಿಂದ 38 ದಿನಗಳವರೆಗೆ ಉಷ್ಣಗಾಳಿ ಬೀಸಿದೆ.

ಇದನ್ನೂ ಓದಿ: Rain Effect : ಭಾರಿ ಮಳೆ ಎಫೆಕ್ಟ್‌; ಈ ಹೆದ್ದಾರಿ ಮಾರ್ಗದಲ್ಲಿ ನಾಳೆಯಿಂದ 1 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ!

Continue Reading

ರಾಜಕೀಯ

Parliament Sessions: ಲೋಕಸಭೆಯಲ್ಲಿ ಇಂದು ಮೋದಿ ಭಾಷಣ; ರಾಹುಲ್‌ ಗಾಂಧಿ ಆರೋಪಗಳಿಗೆ ಪ್ರಧಾನಿ ಉತ್ತರವೇನು? ಇಲ್ಲಿದೆ Live

Parliament Sessions: 18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ. ಈ ಬಾರಿ ಪ್ರತಿಪಕ್ಷ ಬಹಳಷ್ಟು ಬಹಳಷ್ಟು ಪ್ರಬಲವಾಗಿರುವುದರಿಂದ ಕಾವೇರಿದ ಚರ್ಚೆ ನಡೆಯುತ್ತಿದೆ. ಇಂದು (ಜುಲೈ 2) ನರೇಂದ್ರ ಮೋದಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಆರೋಪಗಳಿಗೆ ಉತ್ತರ ನೀಡಲಿದ್ದಾರೆ. ಅಧಿವೇಶನದ ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ.

VISTARANEWS.COM


on

Parliament Sessions
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ (Parliament Sessions). ಈ ಬಾರಿ ಪ್ರತಿಪಕ್ಷ ಬಹಳಷ್ಟು ಬಹಳಷ್ಟು ಪ್ರಬಲವಾಗಿರುವುದರಿಂದ ಕಾವೇರಿದ ಚರ್ಚೆ ನಡೆಯುತ್ತಿದೆ. ಸೋಮವಾರ ಪ್ರತಿಪಕ್ಷಗಳ ನಾಯಕ ರಾಹುಲ್‌ ಗಾಂಧಿ (Rahul Gandhi) ಸರ್ಕಾರದ ಬೆವರಿಳಿಸಿದ್ದಾರೆ. ನೀಟ್‌ (NEET) ವಿವಾದ ಚರ್ಚೆ ನಡೆಸಬೇಕೆಂಬ ಬೇಡಿಕೆ ಮುಂದಿಟ್ಟು ಅವರು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಇಂದು (ಜುಲೈ 2) ನರೇಂದ್ರ ಮೋದಿ (Narendra Modi) ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಆರೋಪಗಳಿಗೆ ಉತ್ತರ ನೀಡಲಿದ್ದಾರೆ.

ಪ್ರತಿಪಕ್ಷಗಳ ನಾಯಕನಾದ ಬಳಿಕ ರಾಹುಲ್‌ ಗಾಂಧಿ ಸೋಮವಾರ ಮೊದಲ ಬಾರಿ ಲೋಕಸಭೆಯಲ್ಲಿ ಮಾತನಾಡಿದ್ದು, ಇಂದು ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಮೋದಿ ಉತ್ತರವನ್ನು ನೀಡಲಿದ್ದಾರೆ.

ಸಂಸತ್ತಿನಲ್ಲಿ ಭಾಷಣ ಮಾಡುವ ಮೊದಲು, ಮೋದಿ ಬೆಳಿಗ್ಗೆ 9:30ಕ್ಕೆ ಎನ್‌ಡಿಎ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ಬಳಿಕ ಆಡಳಿತಾರೂಢ ಬಣದ ಸಂಸದರನ್ನುದ್ದೇಶಿಸಿ ಮೋದಿ ನಡೆಸುವ ಮೊದಲ ಭಾಷಣ ಇದಾಗಿರಲಿದೆ. 2014ರ ನಂತರ ಮೊದಲ ಬಾರಿಗೆ ಬಿಜೆಪಿ ಬಹುಮತ ಕಳೆದುಕೊಂಡಿರುವುದರಿಂದ ಮತ್ತು ಆಡಳಿತ ನಡೆಸಲು ಮಿತ್ರಪಕ್ಷಗಳನ್ನು ಅವಲಂಬಿಸಬೇಕಿರುವಿದರಿಂದ ಈ ಬೆಳವಣಿಗೆ ಮಹತ್ವವನ್ನು ಪಡೆದುಕೊಂಡಿದೆ. 543 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದರೆ, ಮಿತ್ರಪಕ್ಷಗಳು 53 ಸ್ಥಾನಗಳಲ್ಲಿ ಜಯಗಳಿಸಿವೆ.

ಆರಂಭದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯನ್ನು ಶುಕ್ರವಾರ ನಿಗದಿಪಡಿಸಲಾಗಿತ್ತು. ಆದರೆ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ಪ್ರತಿಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ರಾಹುಲ್‌ ಗಾಂಧಿ ವಾಗ್ದಾಳಿ

ಸೋಮವಾರ ರಾಹುಲ್‌ ಗಾಂಧಿ ವಿವಿಧ ವಿಚಾರಗಳನ್ನು ಕೈಗೆತ್ತಿಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಕ್ಸಮರಕ್ಕೆ ಸಜ್ಜಾಗಿಯೇ ಬಂದಿದ್ದ ರಾಹುಲ್‌ ಗಾಂಧಿ, ಹಲವು ವಿಚಾರಗಳನ್ನು ಪ್ರಸ್ತಾಪಿಸಿ ನೇರವಾಗಿ ತಿವಿದರು. ಇದರಿಂದ ಸದನ ರಣರಂಗವಾಗಿತ್ತು. ʼʼಅಗ್ನಿಪಥ್ ಯೋಜನೆಯು ಪ್ರಧಾನಿ ಮೋದಿಯ ಕೂಸು. ಆದರೆ ಸಶಸ್ತ್ರ ಪಡೆಗಳದ್ದಲ್ಲ. ನಮ್ಮ ಸರ್ಕಾರ ಬಂದಾಗ ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುತ್ತೇವೆ. ಏಕೆಂದರೆ ಇದು ಸಶಸ್ತ್ರ ಪಡೆಗಳು ಮತ್ತು ದೇಶಭಕ್ತಿಗೆ ವಿರುದ್ಧವಾಗಿದೆ. ಬಿಜೆಪಿಯ ನೀತಿಗಳು, ರಾಜಕಾರಣವು ಮಣಿಪುರವನ್ನು ಭಸ್ಮ ಮಾಡಿದೆ, ನಾಗರಿಕ ಯುದ್ಧಕ್ಕೆ ನೂಕಿದೆ. ಆದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಈವರೆಗೂ ಭೇಟಿ ನೀಡಿಲ್ಲ. ನೀಟ್‌ ಅಕ್ರಮದಿಂದ ಕೋಟ್ಯಂತರ ವಿದ್ಯಾರ್ಥಿಗಳಿಗೆ ತೊಂದರೆ ಎದುರಾಗಿದೆʼʼ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು.

ಬಿಜೆಪಿಯು ಸಂವಿಧಾನ ಮತ್ತು ಭಾರತದ ಮೂಲಭೂತ ಕಲ್ಪನೆಯ ಮೇಲೆ ವ್ಯವಸ್ಥಿತ ದಾಳಿಗಳನ್ನು ನಡೆಸುತ್ತಿದೆ ಎಂದು ದೂರಿದ್ದ ಅವರು, ʼʼಆಡಳಿತ ಪಕ್ಷವು ಪ್ರಸ್ತಾಪಿಸಿದ ವಿಚಾರಗಳನ್ನು ಲಕ್ಷಾಂತರ ಜನರು ವಿರೋಧಿಸಿದ್ದಾರೆ. ಪ್ರಧಾನಿ ಮೋದಿಯವರ ಆದೇಶದ ಮೇರೆಗೆ ನನ್ನ ಮೇಲೆ ದಾಳಿ ನಡೆದಿದೆ. 20ಕ್ಕೂ ಹೆಚ್ಚು ಪ್ರಕರಣಗಳು ನನ್ನ ವಿರುದ್ಧ ದಾಖಲಾಗಿವೆ. ನನ್ನ ಮನೆಯನ್ನು ಕಿತ್ತುಕೊಳ್ಳಲಾಯಿತು, ಇ.ಡಿ 55 ಗಂಟೆಗಳ ವಿಚಾರಣೆ ನಡೆಸಿತುʼʼ ಎಂದು ಹೇಳಿದ್ದರು.

ಪ್ರತಿಪಕ್ಷಗಳ, ರಾಹುಲ್‌ ಗಾಂಧಿ ಅವರ ಈ ಎಲ್ಲ ಆರೋಪಗಳಿಗೆ ನರೇಂದ್ರ ಮೋದಿ ಅವರು ಇಂದು ಯಾವ ರೀತಿ ಉತ್ತರಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Parliament Sessions: ಮೋದಿ ಆತ್ಮದ ಜೊತೆ ಪರಮಾತ್ಮನ ಸಂವಹನ; ರಾಹುಲ್‌ ಗಾಂಧಿ ವ್ಯಂಗ್ಯ

Continue Reading

Latest

Viral Video: ರಸ್ತೆ ಮೇಲೆಯೇ ಮಹಿಳೆಯ ವಶೀಕರಣ! 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

Viral Video: ಪತಿಗೆ ಟಿಫಿನ್ ನೀಡಿ ಹಿಂದಿರುಗುತ್ತಿದ್ದ ಮಹಿಳೆಯನ್ನು ರಾಜಸ್ಥಾನದ ಉದಯಪುರ ಬೀದಿಯಲ್ಲಿ ಹಾಡುಹಗಲೇ ಸಂಮೋಹನಗೊಳಿಸಿ ಆಕೆಯಿಂದ 4.5 ಲಕ್ಷ ಮೌಲ್ಯದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಲಾಗಿದೆ.ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು. ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದ್ದಾರೆ. ಮುಂದೇನಾಯಿತು? ಈ ಸುದ್ದಿ ಓದಿ.

VISTARANEWS.COM


on

Koo

ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣ ಹೆಚ್ಚು ನಡೆಯುತ್ತಿದ್ದು, ಹಾಡಹಗಲಿನಲ್ಲೇ ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಳ್ಳರು ದರೋಡೆ ಶುರು ಮಾಡಿದ್ದಾರೆ. ಇದೀಗ ಇಂತಹದೊಂದು ಘಟನೆ ರಾಜಸ್ಥಾನದ ಉದಯಪುರ ಬೀದಿಯಲ್ಲಿ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ವೈರಲ್ (Viral Video )ಆಗಿದೆ.

ಜೂನ್ 28ರಂದು ಪತಿಗೆ ಟಿಫಿನ್ ನೀಡಿ ಹಿಂದಿರುಗುತ್ತಿದ್ದ ಮಹಿಳೆಯನ್ನು ರಾಜಸ್ಥಾನದ ಉದಯಪುರ ಬೀದಿಯಲ್ಲಿ ಹಾಡಹಗಲೇ ಸಂಮೋಹನಗೊಳಿಸಿ ಆಕೆಯಿಂದ 4.5 ಲಕ್ಷ ಮೌಲ್ಯದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಲಾಗಿದೆ. ಸಂತ್ರಸ್ತೆಯನ್ನು ರೇಖಾ ಜೈನ್ ಎಂದು ಗುರುತಿಸಲಾಗಿದೆ. ಇಡೀ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ವಿಡಿಯೊದಲ್ಲಿ ಮಹಿಳೆ ದೆಹಲಿ ಗೇಟ್ ಜಂಕ್ಷನ್ ಬಳಿಯ ವಾಚ್‌ಶಾಪ್ ಹೊರಗಿನ ಬೀದಿಯಲ್ಲಿ ನಡೆದುಹೋಗುವಾಗ ಇಬ್ಬರು ವ್ಯಕ್ತಿಗಳು ಅವಳನ್ನು ತಡೆದರು. ಅವರು ಆಕೆಯ ಬಳಿ ಕೆಲವು ಪ್ರಶ್ನೆಗಳನ್ನು ಕೇಳುತ್ತಿದ್ದರೂ ಮತ್ತು ರೇಖಾ ಅದಕ್ಕೆ ಉತ್ತರಿಸುತ್ತಿದ್ದರು. ನಂತರ ಅವಳು ತನ್ನ ಪರ್ಸ್‌ನಿಂದ 50 ರೂಪಾಯಿಗಳನ್ನು ತೆಗೆದುಕೊಂಡು ಅವರಿಗೆ ನೀಡಿದಳು.

ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು. ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದ್ದಾರೆ. ಈ ವೇಳೆ ಅವರು ತಮ್ಮ ಬಳಿ ಇದ್ದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ರೇಖಾ ಪ್ರಜ್ಞೆ ಬಂದ ಬಳಿಕ ತನ್ನ ಪತಿಗೆ ವಿಚಾರ ತಿಳಿಸಿದ್ದು, ಇಬ್ಬರು ಸೇರಿ ನಗರದ ಸೂರಜ್ಪೋಲ್ ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ರೇಖಾ, ಆರೋಪಿಗಳು ತಾನು ನಂಬಿದ ದೇವರ ಬಗ್ಗೆ ಕೇಳಿದ್ದು, ಅದಕ್ಕೆ ಆಕೆ ಭಗವಾನ್ ಮಹಾವೀರ ಸ್ವಾಮಿಯ ಬಗ್ಗೆ ಪ್ರಸ್ತಾಪಿಸಿದಾಗ, ಆಕೆಯ ಬಳಿ ಹಣ ಕೇಳಿದ್ದಾರೆ. ಅವಳು ತನ್ನ ಪರ್ಸ್‌ನಿಂದ 50 ರೂಪಾಯಿಗಳನ್ನು ತೆಗೆದುಕೊಂಡು ಅದನ್ನು ಧಾರ್ಮಿಕ ಕಾರಣಕ್ಕಾಗಿ ಎಂದು ಭಾವಿಸಿ ಅವರಿಗೆ ನೀಡಿದಳು. ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು.

ಇದನ್ನೂ ಓದಿ: ಶಿಕ್ಷಣ ತಜ್ಞ ಡಾ ಎಂ ಆರ್ ಜಯರಾಮ್‌ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದರು ಎಂಬುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿವನ್ನು ಪರೀಕ್ಷಿಸಿದಾಗ ರೇಖಾ ಪೊಲೀಸರಿಗೆ ನೀಡಿದ ವಿವರಗಳು ಸಿಸಿಟಿವಿ ದೃಶ್ಯಾವಳಿಗಳಿಂದ ದೃಢಪಟ್ಟಿವೆ. ಪೊಲೀಸರು ಈಗ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Continue Reading
Advertisement
Highest Collection Movie
ಸಿನಿಮಾ4 mins ago

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Narendra Modi
ರಾಜಕೀಯ5 mins ago

Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

theft Case
ಕ್ರೈಂ11 mins ago

Theft case : ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೆಲಸಗಾರ; ರಾಯಚೂರಲ್ಲಿ ಬೀಡುಬಿಟ್ಟ ಮಂಕಿ ಕ್ಯಾಪ್‌ ಗ್ಯಾಂಗ್‌!

AR Rahman
ಕ್ರೀಡೆ21 mins ago

AR Rahman: ಹಾಡಿನ ಮೂಲಕ ಟೀಮ್​ ಇಂಡಿಯಾಕ್ಕೆ ‘ಜೈ ಹೋ’ ಎಂದ ಎಆರ್ ರೆಹಮಾನ್

Press Day celebration Programme in hosapete
ವಿಜಯನಗರ21 mins ago

Press Day: ಹೊಸಪೇಟೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ

Police Arrest
Latest23 mins ago

Police Arrest: ಅಕ್ರಮ ಮದ್ಯ ಸಾಗಿಸಲು ಸಹಾಯ; ಸಿಕ್ಕಿ ಬಿದ್ದ ಸಿಐಡಿ ಲೇಡಿ ಆಫೀಸರ್!

Turbulence
ದೇಶ28 mins ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಲಗೇಜ್‌ ಕಂಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ ವ್ಯಕ್ತಿ-ವಿಡಿಯೋ ಇದೆ

Shraddha Nrityarnava special dance festival in Bengaluru
ಕರ್ನಾಟಕ28 mins ago

Bengaluru News: ಕಲಾ ರಸಿಕರ ಮನಸೂರೆಗೊಳಿಸಿದ ‘ಶ್ರದ್ಧಾ ನೃತ್ಯಾರ್ಣವʼ ವಿಶೇಷ ನೃತ್ಯೋತ್ಸವ

Yuva Sambhrama 2024 programme for 3 days from July 12 in Bengaluru
ಕರ್ನಾಟಕ29 mins ago

Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

Rohit Sharma
ಕ್ರೀಡೆ43 mins ago

Rohit Sharma: ಪಿಚ್​ ಮಣ್ಣು ತಿಂದಿದ್ದೇಕೆ?; ಪ್ರತಿಕ್ರಿಯಿಸಿದ ರೋಹಿತ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌