Inflation : ಆಹಾರ ವಸ್ತುಗಳ ಬೆಲೆ ಇಳಿಕೆ ಸನ್ನಿಹಿತ, ಮುಖ್ಯ ಆರ್ಥಿಕ ಸಲಹೆಗಾರ ವಿಶ್ವಾಸ - Vistara News

ವಾಣಿಜ್ಯ

Inflation : ಆಹಾರ ವಸ್ತುಗಳ ಬೆಲೆ ಇಳಿಕೆ ಸನ್ನಿಹಿತ, ಮುಖ್ಯ ಆರ್ಥಿಕ ಸಲಹೆಗಾರ ವಿಶ್ವಾಸ

ಜಾಗತಿಕ ಮಟ್ಟದಲ್ಲಿ ಸರಕುಗಳ ಬೆಲೆ ಇಳಿಕೆಯಾಗಿದೆ. ಆಹಾರ ವಸ್ತುಗಳ ದರ ಕೂಡ ತಗ್ಗುತ್ತಿದೆ. ಇದರ ಪರಿಣಾಮ ಹಣದುಬ್ಬರ ಕೂಡ ಕಡಿಮೆಯಾಗಲಿದೆ ಎಂದು (Inflation) ಮುಖ್ಯ ಆರ್ಥಿಕ ಸಲಹೆಗಾರರು ಹೇಳಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಈ ಹಿಂದೆ ಆರ್ಥಿಕ ಸಮೀಕ್ಷೆಯಲ್ಲಿ ಅಂದಾಜಿಸಿರುವಂತೆ ಆಹಾರ ವಸ್ತುಗಳ ಬೆಲೆ ಇಳಿಕೆಯಾಗಲಿದೆ. ಹಣದುಬ್ಬರ (Inflation) ಕೂಡ ತಗ್ಗಲಿದೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್‌ ಅವರು ತಿಳಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಸರಕುಗಳ ಬೆಲೆ ಇಳಿಕೆಯಾಗುತ್ತಿದೆ. ಆಹಾರ ವಸ್ತುಗಳ ದರ ಕೂಡ ತಗ್ಗಲಿದೆ. ಇದರ ಪರಿಣಾಮ ಹಣದುಬ್ಬರ ಕಡಿಮೆಯಾಗಲಿದೆ. ಈ ವರ್ಷ 6%ಕ್ಕಿಂತ ಕೆಳಕ್ಕೆ ಹಾಗೂ ಮುಂದಿನ ವರ್ಷ 4%ಕ್ಕೆ ಇಳಿಯಲಿದೆ. ಕಳೆದ ಕೆಲವು ತಿಂಗಳುಗಳಿಂದ ವ್ಯಾಪಾರ ಕೊರತೆ ಕೂಡ ತಗ್ಗುತ್ತಿದೆ ಎಂದು ಅವರು ಹಣಕಾಸು ಇಲಾಖೆಯ ಕಾರ್ಯಕ್ರಮದಲ್ಲಿ ಗುರುವಾರ ತಿಳಿಸಿದ್ದಾರೆ.

ಖಾಸಗಿ ಆರ್ಥಿಕ ಸಮೀಕ್ಷೆಗಳ ಪ್ರಕಾರ ಕೂಡ ವಿತ್ತೀಯ ಕೊರತೆ ಜಿಡಿಪಿಯ 2.4%ರಿಂದ 2%ಕ್ಕೆ ಇಳಿಕೆಯಾಗಲಿದೆ. ಜಾಗತಿಕ ಕಚ್ಚಾ ತೈಲ ದರ ಕೂಡ ತಗ್ಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Anant- Radhika  wedding: ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಇತ್ತೀಚೆಗೆ ಅದ್ದೂರಿಯಾಗಿ ನಡೆದಿದೆ. ಇದಕ್ಕೆ ಕೋಟ್ಯಂತರ ರೂ. ಖರ್ಚು ಮಾಡಿರುವ ಅಂಬಾನಿ ಮಗನ ಮದುವೆ ಕಾರ್ಯಕ್ರಮವನ್ನು ಎಲ್ಲಿ , ಹೇಗೆ, ಎಷ್ಟು ಬಜೆಟ್ ನಲ್ಲಿ ನಡೆಸಲಿದ್ದಾರೆ ಗೊತ್ತೇ? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

Anant-Radhika wedding
Koo

ಮುಂಬಯಿ: ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ (Nita Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ (Anant- Radhika  wedding) ಪೂರ್ವ ಕಾರ್ಯಕ್ರಮಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ (social media) ಹೆಚ್ಚು ಸದ್ದು ಮಾಡಿತ್ತು. ಈ ವರ್ಷ ಜುಲೈನಲ್ಲಿ ಇವರ ವಿವಾಹ ಲಂಡನ್‌ನಲ್ಲಿರುವ (London) ಅಂಬಾನಿ ಕುಟುಂಬದ ಸ್ಟೋಕ್ ಪಾರ್ಕ್ ಎಸ್ಟೇಟ್‌ನಲ್ಲಿ ನಡೆಯಲಿದೆ.

ಮಾರ್ಚ್ ತಿಂಗಳ 1ರಿಂದ 3ರವರೆಗೆ ಗುಜರಾತ್‌ನ (gujart) ಜಾಮ್‌ನಗರದಲ್ಲಿ (jamnagar) ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ತಮ್ಮ ವಿವಾಹಪೂರ್ವ ಸಮಾರಂಭವನ್ನು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಿದ್ದರು. ಇದರಲ್ಲಿ ಜಾಗತಿಕ ಟೆಕ್ ಸಿಇಒಗಳು, ಬಾಲಿವುಡ್ ತಾರೆಗಳು, ಪಾಪ್ ಐಕಾನ್‌ಗಳು ಮತ್ತು ರಾಜಕಾರಣಿಗಳು ಭಾಗವಹಿಸಿದ್ದರು.

ಇಶಾ ಅಂಬಾನಿ, ಆಕಾಶ್ ಅಂಬಾನಿ, ಶ್ಲೋಕಾ ಮೆಹ್ತಾ, ಆನಂದ್ ಪಿರಾಮಲ್ ಮತ್ತು ಕೋಕಿಲಾಬೆನ್ ಅಂಬಾನಿ ಸೇರಿದಂತೆ ಇಡೀ ಅಂಬಾನಿ ವಂಶಸ್ಥರು ಮದುವೆಯ ಪೂರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!


ಒಟ್ಟು ಖರ್ಚು

ವಿವಾಹ ಪೂರ್ವ ಕಾರ್ಯಕ್ರಮಗಳಲ್ಲಿ ಅತಿಥಿಗಳನ್ನು ಪಾಪ್ ಐಕಾನ್ ರಿಹಾನ್ನಾ ಅವರು ಸತ್ಕರಿಸಿದರು. ಎರಡು ಗಂಟೆಗಳ ಕಾರ್ಯಕ್ರಮಕ್ಕಾಗಿ ಅವರು 6 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 52 ಕೋಟಿ ರೂ. ಗೂ ಹೆಚ್ಚು ಸಂಭಾವನೆ ಪಡೆದದ್ದು ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು.

ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ 3 ದಿನಗಳ ಸಮಾರಂಭಕ್ಕೆ ಸುಮಾರು 1,260 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅಡುಗೆ ಗುತ್ತಿಗೆಯವರಿಗೆ 200 ಕೋಟಿ ರೂ. ನೀಡಲಾಗಿದೆ ಎನ್ನಲಾಗಿದೆ.

ಫೋರ್ಬ್ಸ್ ಪ್ರಕಾರ 116 ಶತಕೋಟಿ ಡಾಲರ್ ಅಂದರೆ ಸುಮಾರು 9 ಲಕ್ಷ ಕೋಟಿ ರೂ. ಗೂ ಹೆಚ್ಚು ನಿವ್ವಳ ಮೌಲ್ಯದೊಂದಿಗೆ ಮುಖೇಶ್ ಅಂಬಾನಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು. ಅಂಬಾನಿ ಕುಟುಂಬವು ತಮ್ಮ ಕಿರಿಯ ಮಗನ ಮದುವೆಯ ಪೂರ್ವ ಸಂಭ್ರಮಕ್ಕಾಗಿ 1,200 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ. ಮಗನ ಮದುವೆಯನ್ನು ಅದ್ದೂರಿಯಾಗಿ ನೆರವೇರಿಸಲು ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಧಾರಾಳವಾಗಿ ಹಣ ಖರ್ಚು ಮಾಡಿದ್ದಾರೆ.


ಮದುವೆ ಖರ್ಚು ಎಷ್ಟಿರಬಹುದು?

ವರದಿಗಳ ಪ್ರಕಾರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ 1200- 1500 ಕೋಟಿ ರೂಪಾಯಿ ವೆಚ್ಚವಾಗಲಿದೆ. ದಂಪತಿಗಳು ಲಂಡನ್‌ನಲ್ಲಿ ವಿವಾಹವಾಗಲು ಸಿದ್ಧರಾಗಿದ್ದಾರೆ ಮತ್ತು ಅಬುಧಾಬಿಯಲ್ಲಿ ಸಂಗೀತ/ ಕಾಕ್‌ಟೈಲ್ ಕಾರ್ಯಕ್ರಮವನ್ನು ಸಹ ನಡೆಸಲು ಸಿದ್ಧರಾಗಿದ್ದಾರೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯ ಪೂರ್ವದಲ್ಲಿ ಹೂವಿನ ಅಲಂಕಾರವನ್ನು ಕಿಮ್ ಕಾರ್ಡಶಿಯಾನ್ ಮತ್ತು ಅವರ ಕುಟುಂಬ ನಡೆಸಿತ್ತು. ಕಾರ್ಯಕ್ರಮದ ಕೆಲಸಗಳನ್ನು ಹೆಸರುವಾಸಿಯಾದ ಜೆಫ್ ಲೀಥಮ್ ಅವರು ಮಾಡಿದ್ದಾರೆ. ಅವರು ಅಂಬಾನಿ ಮದುವೆಯಲ್ಲೂ ಅಲಂಕಾರವನ್ನು ಇವರಿಗೆ ನೀಡುವ ಸಾಧ್ಯತೆ ಇದೆ.


ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ 2023ರ ಜನವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಈ ವರ್ಷ ಜುಲೈನಲ್ಲಿ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಇದು ಈ ವರ್ಷದ ಅತಿ ದೊಡ್ಡ, ಅತ್ಯಂತ ಐಷಾರಾಮಿ ಮತ್ತು ಅತಿರಂಜಿತ ವಿವಾಹಗಳಲ್ಲಿ ಒಂದಾಗಿದೆ ಎನ್ನಲಾಗುತ್ತಿದೆ.

Continue Reading

ದೇಶ

Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Kotak Bank: ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಿಸುವುದು, ಅವರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸುವುದಕ್ಕೆ ಆರ್‌ಬಿಐ ನಿರ್ಬಂಧ ಹೇರಿರುವ ಕಾರಣ ಹಳೆಯ ಗ್ರಾಹಕರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಆರ್‌ಬಿಐ ತಿಳಿಸಿದೆ. ಆದರೆ, ಆರ್‌ಬಿಐ ನಿರ್ಬಂಧದ ಹಿನ್ನೆಲೆಯಲ್ಲಿ ಗುರುವಾರ ಕೊಟಕ್‌ ಮಹೀಂದ್ರಾ ಬ್ಯಾಂಕ್‌ನ ಷೇರುಗಳ ಮೌಲ್ಯವು ಶೇ.10ರಷ್ಟು ಕುಸಿತ ಕಂಡಿದೆ.

VISTARANEWS.COM


on

Kotak Bank
Koo

ಮುಂಬೈ: ಸುರಕ್ಷತಾ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಹೊಸ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆ ಒದಗಿಸಬಾರದು ಎಂದು ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ (Kotak Mahindra Bank) ಆರ್‌ಬಿಐ ನಿರ್ಬಂಧ ವಿಧಿಸಿದೆ. ಇದರ ಬೆನ್ನಲ್ಲೇ, ಕೊಟಕ್‌ ಮಹೀಂದ್ರಾ ಬ್ಯಾಂಕ್‌ನ ಷೇರುಗಳ (Kotak Bank Shares) ಮೌಲ್ಯವು ಗುರುವಾರ (ಏಪ್ರಿಲ್‌ 25) ಶೇ.10ರಷ್ಟು ಕುಸಿತವಾಗಿದೆ. ಇದರಿಂದ ಹೂಡಿಕೆದಾರರಿಗೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಗುರುವಾರ ಷೇರುಪೇಟೆಯಲ್ಲಿ ವಹಿವಾಟು ಆರಂಭವಾಗುತ್ತಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಷೇರುಗಳ ಮೌಲ್ಯವು ಕುಸಿಯುತ್ತ ಹೋಯಿತು. ಒಟ್ಟು ಶೇ.10ರಷ್ಟು ಮೌಲ್ಯ ಕುಸಿತ ಕಂಡಿದ್ದು, ಬಿಎಸ್‌ಇಯಲ್ಲಿ ಕೊಟಕ್‌ ಬ್ಯಾಂಕ್‌ನ ಒಂದು ಷೇರಿನ ಮೌಲ್ಯವು 1,658.75 ರೂ.ಗೆ ಕುಸಿತವಾಗಿದೆ. ಅಷ್ಟೇ ಅಲ್ಲ, ಆರ್‌ಬಿಐ ನಿರ್ಬಂಧದಿಂದ ಕೊಟಕ್‌ ಮಹಿಂದ್ರಾ ಬ್ಯಾಂಕ್‌ಗೆ ಮುಂದಿನ ದಿನಗಳಲ್ಲಿ ಭಾರಿ ನಷ್ಟವಾಗಲಿದೆ. ಬ್ಯಾಂಕ್‌ ಏಳಿಗೆ, ಹೊಸ ಗ್ರಾಹಕರನ್ನು ಸೆಳೆಯುವಲ್ಲಿಯೂ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಆರ್‌ಬಿಐ ನಿರ್ಬಂಧಕ್ಕೆ ಕಾರಣ ಏನು?

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಗ್ರಾಹಕರು ಆನ್‌ಲೈನ್‌ ಮೂಲಕ ವಹಿವಾಟು ನಡೆಸಲು ಬ್ಯಾಂಕ್‌ ಸರಿಯಾದ ಸುರಕ್ಷತೆ ಒದಗಿಸಿಲ್ಲ. 2022 ಹಾಗೂ 2023ರಲ್ಲಿ ಐಟಿ ಪರಿಶೀಲನೆ ಕುರಿತು ಆರ್‌ಬಿಐ ಆತಂಕ ವ್ಯಕ್ತಪಡಿಸಿದರೂ ಸುರಕ್ಷತೆ ನೀಡುವಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ವಿಫಲವಾಗಿದೆ. ಬ್ಯಾಂಕ್‌ನ ಐಟಿ ಮೂಲ ಸೌಕರ್ಯ, ಐಟಿ ನಿರ್ವಹಣೆ, ಪ್ಯಾಚ್‌ ಮತ್ತು ಚೇಂಜ್‌ ಮ್ಯಾನೇಜ್‌ಮೆಂಟ್‌, ಬಳಕೆದಾರರ ಅನುಮತಿ ನಿರ್ವಹಣೆ, ವೆಂಡರ್‌ ರಿಸ್ಕ್‌ ಮ್ಯಾನೇಜ್‌ಮೆಂಟ್, ಡೇಟಾ ಸೆಕ್ಯುರಿಟಿ ಸೇರಿ ಹಲವು ಸುರಕ್ಷತೆಗಳನ್ನು ಒದಗಿಸುವಲ್ಲಿ ಬ್ಯಾಂಕ್‌ ವಿಫಲವಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಇದೇ ಕಾರಣಕ್ಕಾಗಿ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Continue Reading

ದೇಶ

Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

Samsung: ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ್ಯ ಹೆಚ್ಚಿಸಲು ವಿನ್ಯಾಸ ಮಾಡಲಾದ ರಾಷ್ಟ್ರೀಯ ಕೌಶಲ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಷನ್ ಕ್ಯಾಂಪಸ್ ನ ಎರಡನೇ ಆವೃತ್ತಿಯನ್ನು ಸ್ಯಾಮ್‌ಸಂಗ್ ಇಂಡಿಯಾ ಪ್ರಾರಂಭಿಸಿದೆ.

VISTARANEWS.COM


on

Samsung India launched the 2nd edition of Samsung Innovation Campus
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆದ ಸ್ಯಾಮ್‌ಸಂಗ್ (Samsung) ಎಐ, ಐಒಟಿ, ಬಿಗ್ ಡೇಟಾ, ಮತ್ತು ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ಮುಂತಾದ ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ ಹೆಚ್ಚಿಸಲು ವಿನ್ಯಾಸ ಮಾಡಲಾದ ತನ್ನ ರಾಷ್ಟ್ರೀಯ ಕೌಶಲ್ಯ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಿದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಕಾರ್ಯಕ್ರಮವು 18-25 ವರ್ಷ ವಯಸ್ಸಿನ ಯುವಜನತೆಗೆ ಭವಿಷ್ಯದ ತಂತ್ರಜ್ಞಾನಗಳ ಕೌಶಲ ಒದಗಿಸುವ ಮತ್ತು ಆ ಮೂಲಕ ಅವರಿಗೆ ಉದ್ಯೋಗಾವಕಾಶ ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಯುವಜನತೆಗೆ ಸರಿಯಾದ ಅವಕಾಶಗಳನ್ನು ಸೃಷ್ಟಿ ಮಾಡಲು ರೂಪಿಸಲಾಗಿರುವ ಭಾರತ ಸರ್ಕಾರದ ಸ್ಕಿಲ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾದಂತಹ ಉಪಕ್ರಮಗಳನ್ನು ಬೆಂಬಲಿಸಲು ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Sachin Tendulkar Birthday: ಎಐ ತಂತ್ರಜ್ಞಾನದ ಮೂಲಕ ತೆಂಡೂಲ್ಕರ್​ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಐಸಿಸಿ

ಭಾರತದಾದ್ಯಂತ ಇರುವ 3,500 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ತಿಳುವಳಿಕೆ ಒಪ್ಪಂದಕ್ಕೆ ಈ ವಾರದ ಆರಂಭದಲ್ಲಿ ಸ್ಯಾಮ್‌ಸಂಗ್ ಮತ್ತು ಎಲೆಕ್ಟ್ರಾನಿಕ್ಸ್ ಸೆಕ್ಟರ್ ಸ್ಕಿಲ್ಸ್ ಕೌನ್ಸಿಲ್ ಆಫ್ ಇಂಡಿಯಾ (ಇಎಸ್‌ಎಸ್‌ಸಿಐ) ನಡುವೆ ಸಹಿ ಮಾಡಲಾಗಿದೆ.

ಈ ವರ್ಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ ಒದಗಿಸುವುದರ ಜತೆಗೆ ಇನ್ನೂ ಹೆಚ್ಚಿನ ಆಸಕ್ತಿಕರ ಅಂಶಗಳು ಸೇರ್ಪಡೆಗೊಂಡಿವೆ. ಪ್ರತಿ ಕ್ಷೇತ್ರದಲ್ಲಿ ರಾಷ್ಟ್ರೀಯ ಟಾಪರ್‌ ಸ್ಥಾನ ಪಡೆಯುವವರು ದೆಹಲಿ/ಎನ್‌ಸಿಆರ್‌ನಲ್ಲಿರುವ ಸ್ಯಾಮ್‌ಸಂಗ್ ಘಟಕಗಳಿಗೆ ಭೇಟಿ ನೀಡುವ ಅವಕಾಶ ಪಡೆಯುತ್ತಾರೆ. ಜತೆಗೆ ರೂ. 1 ಲಕ್ಷದ ನಗದು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಈ ಘಟಕಗಳಿಗೆ ಭೇಟಿ ನೀಡುವ ವಿದ್ಯಾರ್ಥಿಗಳು ಸ್ಯಾಮ್‌ಸಂಗ್‌ನ ನಾಯಕತ್ವದ ತಂಡಗಳೊಂದಿಗೆ ಸಂವಹನ ನಡೆಸುವ ಮತ್ತು ಅವರಿಂದ ಮಾರ್ಗದರ್ಶನ ಪಡೆಯುವ ಅವಕಾಶ ಹೊಂದಲಿದ್ದಾರೆ. ರಾಷ್ಟ್ರ ಮಟ್ಟದ ಕೋರ್ಸ್ ಟಾಪರ್‌ಗಳು ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ವಾಚ್‌ಗಳಂತಹ ಅತ್ಯಾಕರ್ಷಕ ಸ್ಯಾಮ್‌ಸಂಗ್ ಉತ್ಪನ್ನಗಳನ್ನು ಸಹ ಪಡೆಯಲಿದ್ದಾರೆ.

ಈ ಕುರಿತು ಮಾತನಾಡಿದ ಸ್ಯಾಮ್‌ಸಂಗ್ ನೈಋತ್ಯ ಏಷ್ಯಾದ ಅಧ್ಯಕ್ಷ ಮತ್ತು ಸಿಇಓ ಜೆಬಿ ಪಾರ್ಕ್, ಸ್ಯಾಮ್‌ಸಂಗ್ ಭಾರತದಲ್ಲಿ ಕಳೆದ 28 ವರ್ಷಗಳಿಂದ ತನ್ನ ಅಸ್ತಿತ್ವ ಹೊಂದಿದ್ದು, ಈ ಎಲ್ಲಾ ವರ್ಷಗಳಲ್ಲಿ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಿದೆ. ನಮ್ಮ ದೃಷ್ಟಿಕೋನವು ಯುವಜನರಿಗೆ ಕೌಶಲ್ಯ ಒದಗಿಸುವ ಮತ್ತು ಅವರಿಗೆ ವೃತ್ತಿಪರ ಬೆಳವಣಿಗೆಯ ಅವಕಾಶಗಳನ್ನು ಒದಗಿಸಿ ಅವರನ್ನು ಸಬಲೀಕರಣಗೊಳಿಸುವ ಭಾರತ ಸರ್ಕಾರದ ಉದ್ದೇಶಗಳೊಂದಿಗೆ ಸರಿಯಾಗಿ ಹೊಂದಿಕೆಯಾಗುತ್ತದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಮೂಲಕ, ನಾವು ಯುವಜನತೆಯ ಕೌಶಲ್ಯವನ್ನು ವೃದ್ಧಿಸುವ ಕೌಶಲ್ಯ ಆಧಾರಿತ ಕಲಿಕೆಯ ವೇದಿಕೆಯನ್ನು ನಿರ್ಮಿಸುತ್ತಿದ್ದೇವೆ. ಅದರಿಂದ ಯುವಕರು ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ ಮತ್ತು ಅರ್ಥಪೂರ್ಣ ಬದಲಾವಣೆ ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

ಇಎಸ್‌ಎಸ್‌ಸಿಐ ಸಂಸ್ಥೆಯು ಕೌಶಲಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಉದ್ಯಮ ಸಂಘಗಳಿಂದ ಉತ್ತೇಜಿಸಲ್ಪಟ್ಟ ರಾಷ್ಟ್ರೀಯ ಮಟ್ಟದ ಕೌಶಲ ಒದಗಿಸುವ ಸಂಸ್ಥೆಯಾಗಿದೆ ಮತ್ತು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ಅಡಿಯಲ್ಲಿ ಸೆಕ್ಟರ್ ಸ್ಕಿಲ್ ಕೌನ್ಸಿಲ್ (ವಲಯ ಕೌಶಲ್ಯ ಮಂಡಳಿ) ಆಗಿ ಕಾರ್ಯನಿರ್ವಹಿಸುತ್ತದೆ. ಇದು ತನ್ನ ರಾಷ್ಟ್ರವ್ಯಾಪಿ ಇರುವ ಅನುಮೋದಿತ ತರಬೇತಿ ಮತ್ತು ಶಿಕ್ಷಣ ಪಾಲುದಾರರ ನೆಟ್‌ವರ್ಕ್ ಮೂಲಕ ಸ್ಥಳೀಯ ಮಟ್ಟದಲ್ಲಿ ತರಬೇತಿಯನ್ನು ನೀಡುತ್ತದೆ. ಇಎಸ್‌ಎಸ್‌ಸಿಐ ಸಂಸ್ಥೆಯು ಭಾರತದ ಸಣ್ಣ ಪಟ್ಟಣಗಳಲ್ಲಿ ಎಲ್ಲೆಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನ ಶಿಕ್ಷಣದ ಲಭ್ಯತೆ ಇಲ್ಲವೋ ಅಲ್ಲೆಲ್ಲಾ ಯುವಜನತೆಗೆ ಕೋರ್ಸ್‌ಗಳನ್ನು ಒದಗಿಸುವ ಅವಕಾಶಗಳನ್ನು ಕೂಡ ಎದುರು ನೋಡುತ್ತದೆ.

ಈ ಕುರಿತು ಇಎಸ್‌ಎಸ್‌ಸಿಐ ಚೀಫ್ ಆಫರೇಟಿಂಗ್ ಆಫೀಸರ್ (Officiating CEO) ಡಾ. ಅಭಿಲಾಷಾ ಗೌರ್ ಮಾತನಾಡಿ, ದೇಶದಲ್ಲಿ ಕೌಶಲ ಒದಗಿಸುವ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಸಿಎಸ್‌ಆರ್‌ ಉಪಕ್ರಮಕ್ಕಾಗಿ ಸ್ಯಾಮ್‌ಸಂಗ್ ಜತೆಗೆ ಪಾಲುದಾರಿಕೆ ಹೊಂದಲು ಇಎಸ್‌ಎಸ್‌ಸಿಐ ಸಂತೋಷ ಪಡುತ್ತದೆ. ನಮ್ಮ ಉದ್ದೇಶಕ್ಕೆ ಅನುಗುಣವಾಗಿ ರಾಷ್ಟ್ರದ ಯುವಜನರಿಗೆ ಅದರಲ್ಲೂ ವಿಶೇಷವಾಗಿ ಕಡಿಮೆ ಸವಲತ್ತು ಹೊಂದಿರುವ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಕೌಶಲ ಮತ್ತು ಅಗತ್ಯ ಜ್ಞಾನವನ್ನು ಒದಗಿಸಲು ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ ಅನ್ನು ವಿನ್ಯಾಸಗೊಳಿಸಲಾಗಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ ಒದಗಿಸುತ್ತದೆ ಮತ್ತು ಅವರನ್ನು ಉದ್ಯೋಗಕ್ಕೆ ಸಿದ್ಧಗೊಳಿಸುತ್ತದೆ ಎಂಬ ಭರವಸೆ ನಮಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ದಾಖಲಾದ ಯುವಜನತೆ ತರಗತಿ ಮೂಲಕ ಮತ್ತು ಆನ್‌ಲೈನ್ ತರಬೇತಿ ಪಡೆಯುತ್ತಾರೆ ಹಾಗೂ ಎಐ, ಐಒಟಿ, ಬಿಗ್ ಡೇಟಾ ಮತ್ತು ಕೋಡಿಂಗ್ ಆಂಡ್ ಪ್ರೋಗ್ರಾಮಿಂಗ್‌ನಲ್ಲಿ ತಮ್ಮ ಆಯ್ದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್ ಅನ್ನು ಪೂರ್ಣಗೊಳಿಸುತ್ತಾರೆ.

ಅವರ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ಸಾಫ್ಟ್ ಸ್ಕಿಲ್ಸ್ ತರಬೇತಿಯನ್ನೂ ನೀಡಲಾಗುವುದು. ಭಾಗವಹಿಸುವವರು ಭಾರತದಾದ್ಯಂತ ಇರುವ ಇಎಸ್‌ಎಸ್‌ಸಿಐಯ ತರಬೇತಿದಾರರು ಮತ್ತು ಶಿಕ್ಷಣ ಪಾಲುದಾರರ ಮೂಲಕ ಸಿದ್ಧಗೊಳಿಸಲಾಗುತ್ತದೆ. ಈ ಕಾರ್ಯಕ್ರಮವು ಆಫ್‌ಲೈನ್ ಮತ್ತು ಆನ್‌ಲೈನ್ ಕಲಿಕೆ, ಹ್ಯಾಕಥಾನ್‌ಗಳು ಮತ್ತು ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್‌ಗಳು ಮತ್ತು ಸ್ಯಾಮ್‌ಸಂಗ್ ಉದ್ಯೋಗಿಗಳು ಒದಗಿಸುವ ಪರಿಣಿತ ಮಾರ್ಗದರ್ಶನವನ್ನು ಒಳಗೊಂಡಿರುತ್ತದೆ.

ಈ ಕಾರ್ಯಕ್ರಮವು ನಾಲ್ಕು ರಾಜ್ಯಗಳಲ್ಲಿ ಎಂಟು ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಯುತ್ತದೆ. ದೇಶದ ಉತ್ತರ ಭಾಗದಲ್ಲಿ, ದೆಹಲಿ ಎನ್‌ಸಿಆರ್‌ನಲ್ಲಿರುವ ಎರಡು ಕೇಂದ್ರಗಳ ಜತೆಗೆ ಲಕ್ನೋ ಮತ್ತು ಗೋರಖ್‌ಪುರದಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ದಕ್ಷಿಣ ಭಾರತದಲ್ಲಿ, ತಮಿಳುನಾಡಿನ ಚೆನ್ನೈ ಮತ್ತು ಶ್ರೀಪೆರಂಬದೂರಿನಲ್ಲಿ 2 ಕೇಂದ್ರಗಳು ಮತ್ತು ಕರ್ನಾಟಕದ ಬೆಂಗಳೂರಿನಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೆ ಉಸೇನ್‌ ಬೋಲ್ಟ್ ಬ್ರ್ಯಾಂಡ್‌ ಅಂಬಾಸಿಡರ್

ಕಾರ್ಯಕ್ರಮವು ಏಪ್ರಿಲ್ 2024 ರಲ್ಲಿ ಪ್ರಾರಂಭವಾಗಲಿದೆ ಮತ್ತು ವಿಶೇಷವಾಗಿ ವಿನ್ಯಾಸಗೊಳಿಸಲಾದ ಆರು ತಿಂಗಳ ಕೋರ್ಸ್ ಅಕ್ಟೋಬರ್ 2024ರಲ್ಲಿ ಕೊನೆಗೊಳ್ಳುತ್ತದೆ. ನವೆಂಬರ್ 2024ರಲ್ಲಿ ಕೋರ್ಸ್ ಟಾಪರ್‌ಗಳ ಹೆಸರನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದೆ.

Continue Reading

ದೇಶ

Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Kotak Bank: ನಿಯಮಗಳ ಪಾಲನೆಯ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ಗೆ ಹಲವು ನಿರ್ಬಂಧ ವಿಧಿಸಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ ಈಗ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಕೂಡ ಹಲವು ನಿರ್ಬಂಧ ವಿಧಿಸಿದೆ. ಅದರಲ್ಲೂ, ಹೊಸ ಗ್ರಾಹಕರಿಗೆ ನೂತನ ಕ್ರೆಡಿಟ್‌ ಕಾರ್ಡ್‌ಗಳನ್ನು ವಿತರಿಸುವುದು ಪ್ರಮುಖ ನಿರ್ಬಂಧವಾಗಿದೆ. ಹಾಗಾದರೆ, ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರು ಏನು ಮಾಡಬೇಕು? ಅವರಿಗೆ ಏನು ಪರಿಣಾಮ ಬೀರಲಿದೆ? ಇಲ್ಲಿದೆ ಮಾಹಿತಿ.

VISTARANEWS.COM


on

Kotak Bank
Koo

ಮುಂಬೈ: ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ (Kotak Bank) ಆರ್‌ಬಿಐ (RBI) ಶಾಕ್‌ ನೀಡಿದೆ. ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಟ್‌ ವಿತರಣೆ ಮಾಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌, ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು ಎಂಬುದು ಸೇರಿ ಹಲವು ನಿರ್ಬಂಧಗಳನ್ನು ವಿಧಿಸಿದೆ. ಇದರಿಂದಾಗಿ ಬ್ಯಾಂಕ್‌ಗೆ ಭಾರಿ ನಷ್ಟವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ಗಳನ್ನು (Kotak Mahindra Bank Credit Cards) ಹೊಂದಿದವರ ಮೇಲೆ ಏನು ಪರಿಣಾಮ ಆಗಲಿದೆ? ಅವರಿಗೆ ಮೊಬೈಲ್‌ ಬ್ಯಾಂಕಿಂಗ್‌, ಆನ್‌ಲೈನ್‌ ಸೇವೆ ಇರಲಿದೆಯೇ? ಈ ಕುರಿತು ಆರ್‌ಬಿಐ ಹೇಳಿದ್ದೇನು? ಇಲ್ಲಿದೆ ಮಾಹಿತಿ.

ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಿಸುವುದು, ಅವರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸುವುದಕ್ಕೆ ಆರ್‌ಬಿಐ ನಿರ್ಬಂಧ ಹೇರಿರುವ ಕಾರಣ ಹಳೆಯ ಗ್ರಾಹಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರು, ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕ್‌ ಸೌಲಭ್ಯ ಹೊಂದಿರುವವರು ಸೇವೆಗಳನ್ನು ಪಡೆಯಬಹುದಾಗಿದೆ. ಹಾಗಾಗಿ, ಹಳೆಯ ಗ್ರಾಹಕರಿಗೆ ಆರ್‌ಬಿಐ ಆದೇಶದಿಂದ ಯಾವುದೇ ತೊಂದರೆ ಆಗುವುದಿಲ್ಲ.

ಹೊಸ ಗ್ರಾಹಕರಿಗೆ ಮಾತ್ರ ಆರ್‌ಬಿಐ ನಿರ್ಬಂಧಗಳು ಅನ್ವಯವಾಗುತ್ತವೆ ಎಂದು ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ತಿಳಿಸಿದೆ. “ಈಗಾಗಲೇ ಆನ್‌ಲೈನ್‌, ಮೊಬೈಲ್‌ ಬ್ಯಾಂಕಿಂಗ್‌ ಸೌಲಭ್ಯಗಳನ್ನು ಹೊಂದಿರುವ ಗ್ರಾಹಕರಿಗೆ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಸೇವೆಗಳನ್ನು ಮುಂದುವರಿಸಬಹುದು. ಈಗಾಗಲೇ ಕ್ರೆಡಿಟ್‌ ಕಾರ್ಡ್‌ ಹೊಂದಿರುವ ಹಳೆಯ ಗ್ರಾಹಕರಿಗೂ ಸೇವೆಗಳನ್ನು ಮುಂದುವರಿಸಲು ಯಾವುದೇ ನಿರ್ಬಂಧವಿಲ್ಲ” ಎಂದು ಆರ್‌ಬಿಐ ಪ್ರಕಟಣೆ ತಿಳಿಸಿದೆ. ಈ ಕುರಿತು ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಸ್ಪಷ್ಟನೆ ನೀಡಿದ್ದು, “ಹಳೆಯ ಗ್ರಾಹಕರಿಗೆ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ” ಎಂದು ತಿಳಿಸಿದೆ.

ಆರ್‌ಬಿಐ ನಿರ್ಬಂಧಕ್ಕೆ ಕಾರಣ ಏನು?

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಗ್ರಾಹಕರು ಆನ್‌ಲೈನ್‌ ಮೂಲಕ ವಹಿವಾಟು ನಡೆಸಲು ಬ್ಯಾಂಕ್‌ ಸರಿಯಾದ ಸುರಕ್ಷತೆ ಒದಗಿಸಿಲ್ಲ. 2022 ಹಾಗೂ 2023ರಲ್ಲಿ ಐಟಿ ಪರಿಶೀಲನೆ ಕುರಿತು ಆರ್‌ಬಿಐ ಆತಂಕ ವ್ಯಕ್ತಪಡಿಸಿದರೂ ಸುರಕ್ಷತೆ ನೀಡುವಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ವಿಫಲವಾಗಿದೆ. ಬ್ಯಾಂಕ್‌ನ ಐಟಿ ಮೂಲ ಸೌಕರ್ಯ, ಐಟಿ ನಿರ್ವಹಣೆ, ಪ್ಯಾಚ್‌ ಮತ್ತು ಚೇಂಜ್‌ ಮ್ಯಾನೇಜ್‌ಮೆಂಟ್‌, ಬಳಕೆದಾರರ ಅನುಮತಿ ನಿರ್ವಹಣೆ, ವೆಂಡರ್‌ ರಿಸ್ಕ್‌ ಮ್ಯಾನೇಜ್‌ಮೆಂಟ್, ಡೇಟಾ ಸೆಕ್ಯುರಿಟಿ ಸೇರಿ ಹಲವು ಸುರಕ್ಷತೆಗಳನ್ನು ಒದಗಿಸುವಲ್ಲಿ ಬ್ಯಾಂಕ್‌ ವಿಫಲವಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಇದೇ ಕಾರಣಕ್ಕಾಗಿ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Kotak Mahindra Bank: ಹೊಸ ಕ್ರೆಡಿಟ್ ಕಾರ್ಡ್ ನೀಡದಂತೆ ಕೊಟಕ್‌ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ; ಕಾರಣ ಇಲ್ಲಿದೆ

Continue Reading
Advertisement
World Malaria Day
ಆರೋಗ್ಯ38 mins ago

World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

supreme court wealth redistribution
ಪ್ರಮುಖ ಸುದ್ದಿ44 mins ago

ವಿಸ್ತಾರ Explainer: Wealth redistribution: ನಿಮ್ಮ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬಹುದಾ? ಸುಪ್ರೀಂ ಕೋರ್ಟ್ ಮುಂದಿದೆ ಕೇಸ್‌

Lok Sabha Election 2024 BJP rejects Sam Pitroda statement
Lok Sabha Election 202447 mins ago

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Anant-Radhika wedding
ವಾಣಿಜ್ಯ52 mins ago

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Ballari Lok Sabha constituency Congress candidate e Tukaram election campaign at apmc market
ಬಳ್ಳಾರಿ59 mins ago

Lok Sabha Election 2024: ತಾಯಿ ನಾನು ನಿಮ್ಮ ಮಗನಂತೆ, ಮತ ನೀಡಿ ಗೆಲ್ಲಿಸಿ ಎಂದ ಈ. ತುಕಾರಾಂ

Rahul Gandhi
ದೇಶ1 hour ago

Rahul Gandhi: ಅಮೇಥಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಖಚಿತ; ಸ್ಮೃತಿ ಇರಾನಿಗೆ ಕೈ ನಾಯಕ ಸವಾಲು!

DC vs GT
ಕ್ರೀಡೆ1 hour ago

DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

Heeramandi Premiere Farida Jalal rare public appearance
ಬಾಲಿವುಡ್1 hour ago

Heeramandi Premiere: ʻಹೀರಾಮಂಡಿʼ ಪ್ರೀಮಿಯರ್‌ನಲ್ಲಿ ಅಪರೂಪವಾಗಿ ಕಂಡ ʻಕಭಿ ಖುಷಿ ಕಭಿ ಗಮ್ʼ ಸಿನಿಮಾ ನಟಿ!

Murder case In davanagere
ದಾವಣಗೆರೆ1 hour ago

Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!

Election Commission
ದೇಶ2 hours ago

ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ2 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20244 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌