ವಿಸ್ತಾರ Money Guide | ಅಂಚೆ ಇಲಾಖೆಯ ಕಿಸಾನ್‌ ವಿಕಾಸ್‌ ಪತ್ರದಲ್ಲಿ ನಿಮ್ಮ ಹಣ 10 ವರ್ಷದಲ್ಲಿ ಡಬಲ್ - Vistara News

ಪ್ರಮುಖ ಸುದ್ದಿ

ವಿಸ್ತಾರ Money Guide | ಅಂಚೆ ಇಲಾಖೆಯ ಕಿಸಾನ್‌ ವಿಕಾಸ್‌ ಪತ್ರದಲ್ಲಿ ನಿಮ್ಮ ಹಣ 10 ವರ್ಷದಲ್ಲಿ ಡಬಲ್

ಮುಂದಿನ ಅಕ್ಟೋಬರ್-ಡಿಸೆಂಬರ್‌ ಅವಧಿಗೆ ಕಿಸಾನ್‌ ವಿಕಾಸ ಪತ್ರ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ಪರಿಷ್ಕರಣೆ ಇದೇ ಸೆ.30ಕ್ಕೆ (ವಿಸ್ತಾರ Money Guide) ನಿರೀಕ್ಷಿಸಲಾಗಿದೆ.

VISTARANEWS.COM


on

post office
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಭಾರತದಲ್ಲಿ ಜನಪ್ರಿಯ. ಈ ವಾರ ಇವುಗಳ ಬಡ್ಡಿ ದರಗಳು ಪರಿಷ್ಕರಣೆಯಾಗುವ ನಿರೀಕ್ಷೆ ಇದೆ. ಅದರ ಪ್ರಕಾರ ಕಿಸಾನ್‌ ವಿಕಾಸ ಪತ್ರ ( Kisan Vikas Patra) ಯೋಜನೆಯೂ ಒಂದು. ಭಾರತೀಯ ಅಂಚೆ ಇಲಾಖೆ 1988ರಲ್ಲಿ ಕಿಸಾನ್‌ ವಿಕಾಸ ಪತ್ರವನ್ನು ಆರಂಭಿಸಿತು. ಪ್ರಸ್ತುತ ಇದು ವಾರ್ಷಿಕ 6.9% ಬಡ್ಡಿ ದರವನ್ನು ನೀಡುತ್ತದೆ. ಇದರ ಮೆಚ್ಯೂರಿಟಿ ಅವಧಿಯು 10 ವರ್ಷ 4 ತಿಂಗಳು. (ವಿಸ್ತಾರ Money Guide) ಈ ಅವಧಿಯಲ್ಲಿ ನಿಮ್ಮ ಹೂಡಿಕೆ ಇಮ್ಮಡಿಯಾಗುತ್ತದೆ.

ಹೂಡಿಕೆ ಹೇಗೆ? ಈ ಯೋಜನೆಯಲ್ಲಿ ಭಾರತೀಯರು ಸೇರಿಕೊಳ್ಳಬಹುದು. ಅಪ್ರಾಪ್ತರ ಪರವಾಗಿ ವಯಸ್ಕರು ಹೂಡಿಕೆ ಮಾಡಬಹುದು. ಮೂವರು ವಯಸ್ಕರು ಜಂಟಿಯಾಗಿ ಹೂಡಬಹುದು. ಅಂಚೆ ಕಚೇರಿಯಲ್ಲೂ, ಆನ್‌ಲೈನ್‌ನಲ್ಲೂ ಲಭ್ಯವಿದೆ. ಆನ್‌ಲೈನ್‌ನಲ್ಲಿ ಹೂಡಿಕೆಗೆ ಭಾರತೀಯ ಅಂಚೆಯ ವೆಬ್‌ಸೈಟ್‌ಗೆ ತೆರಳಿ ಲಾಗಿನ್‌ ಆಗಬೇಕು. ಇಂಟರ್‌ನೆಟ್‌ ಬ್ಯಾಂಕಿಂಗ್‌ ಮೂಲಕ ಆನ್‌ಲೈನ್‌ನಲ್ಲಿ ಹೂಡಬಹುದು. ವೆಬ್‌ಸೈಟಿನಲ್ಲಿ ಕಿಸಾನ್‌ ವಿಕಾಸ ಪತ್ರ ಡೌನ್‌ಲೋಡ್‌ ಮಾಡಬಹುದು. ಅದನ್ನು ಭರ್ತಿ ಮಾಡಿ ನಿಗದಿತ ದಾಖಲೆ ಸಹಿತ ಬ್ಯಾಂಕ್, ಅಂಚೆ ಕಚೇರಿಯಲ್ಲಿ ಸಲ್ಲಿಸಿ ಕೆವೈಸಿ ಪೂರ್ಣಗೊಳಿಸಬಹುದು.

ಕನಿಷ್ಠ ಹೂಡಿಕೆ ೧೦೦೦ ರೂ.

cash

ಕಿಸಾನ್‌ ವಿಕಾಸ ಪತ್ರದಲ್ಲಿ ಕನಿಷ್ಠ 1,000 ರೂ. ಹೂಡಿಕೆ ಮಾಡಬಹುದು. ಗರಿಷ್ಠ ಮಿತಿ ಇರುವುದಿಲ್ಲ. ಎಷ್ಟು ಬೇಕಾದರೂ ಹೂಡಬಹುದು. ಕಿಸಾನ್‌ ವಿಕಾಸ ಪತ್ರವನ್ನು 2014ರಲ್ಲಿ ರಿಲಾಂಚ್‌ ಮಾಡಲಾಗಿತ್ತು. ಕೆಲ ಬದಲಾವಣೆಗಳನ್ನು ಸೇರಿಸಲಾಗಿತ್ತು. 50,000 ರೂ.ಗಿಂತ ಹೆಚ್ಚು ಮೊತ್ತವನ್ನು ಹೂಡುವುದಿದ್ದರೆ ಪ್ಯಾನ್‌ ಕಾರ್ಡ್‌ ಅನ್ನು ಕಡ್ಡಾಯವಾಗಿ ಕೊಡಬೇಕಾಗುತ್ತದೆ. 10 ಲಕ್ಷ ರೂ.ಗಿಂತ ಹೆಚ್ಚು ಹೂಡುವುದಿದ್ದರೆ ಅದಕ್ಕೆ ಆದಾಯ ಮೂಲದ ಆಧಾರ ಕೊಡಬೇಕಾಗುತ್ತದೆ.

ಕಿಸಾನ್‌ ವಿಕಾಸ ಪತ್ರದಲ್ಲಿ ಆದಾಯ ತೆರಿಗೆ ಪ್ರಯೋಜನ ಸಿಗುವುದಿಲ್ಲ. ಹೀಗಿದ್ದರೂ, ಠೇವಣಿಗಳು ಟಿಡಿಎಸ್‌ನಿಂದ ( ಮೂಲದಲ್ಲಿಯೇ ತೆರಿಗೆ ಕಡಿತ-Tax deduction at source) ಮುಕ್ತವಾಗಿರುತ್ತದೆ. ಮೆಚ್ಯೂರಿಟಿ ಅವಧಿ 124 ತಿಂಗಳಾಗಿದ್ದರೂ, ಸರ್ಟಿಫಿಕೇಟ್‌ ಅನ್ನು ಬಿಡುಗಡೆಯಾದ 30 ತಿಂಗಳಿನ ಬಳಿಕ ನಗದೀಕರಿಸಬಹುದು.

ಕಿಸಾನ್‌ ವಿಕಾಸ ಪತ್ರವನ್ನು ವ್ಯಕ್ತಿಯಿಂದ ವ್ಯಕ್ತಿಗೆ ವರ್ಗಾವಣೆ ಮಾಡಬಹುದು. ಒಂದು ಅಂಚೆ ಕಚೇರಿಯಿಂದ ಮತ್ತೊಂದು ಕಚೇರಿಗೆ ವರ್ಗಾಯಿಸಬಹುದು. ಅನಿವಾಸಿ ಭಾರತೀಯರು ಕಿಸಾನ್‌ ವಿಕಾಸ ಪತ್ರವನ್ನು ಖರೀದಿಸುವಂತಿಲ್ಲ.

ಕಳೆದ 2020-21ರಿಂದ ಪಿಪಿಎಫ್‌, ಸುಕನ್ಯಾ ಸಮೃದ್ಧಿ, ಹಿರಿಯ ನಾಗರಿಕರ ಉಳಿತಾಯ ಯೋಜನೆ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳು ಯಥಾಸ್ಥಿತಿಯಲ್ಲಿ ಇತ್ತು. ಆದರೆ ಈಗ ನಿಶ್ಚಿತ ಠೇವಣಿಗಳ ಬಡ್ಡಿ ದರಗಳು ಏರಿಕೆಯಾಗಿವೆ. ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಕೂಡ ಏರಿಕೆಯಾಗುವ ನಿರೀಕ್ಷೆ ಇದೆ. ( 2022 ಅಕ್ಟೋಬರ್-ಡಿಸೆಂಬರ್‌ ಅವಧಿಗೆ)

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ತ್ರೈಮಾಸಿಕ ಆಧಾರದಲ್ಲಿ ಪರಿಷ್ಕರಣೆ ಮಾಡಲಾಗುತ್ತದೆ. ಸರ್ಕಾರಿ ಸಾಲಪತ್ರಗಳ ಬಡ್ಡಿಯ ಆಧಾರದಲ್ಲಿ ಇವುಗಳನ್ನು ನಿರ್ಧರಿಸಲಾಗುತ್ತದೆ.

ಇದನ್ನೂ ಓದಿ:ವಿಸ್ತಾರ Money Guide | ನಿಮ್ಮ ಡೆಬಿಟ್‌, ಕ್ರೆಡಿಟ್ ಕಾರ್ಡ್‌ ಸುರಕ್ಷತೆಗೆ ಆರ್‌ಬಿಐ ಟೋಕನ್‌ ಶೀಘ್ರ, ಏನಿದು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

Modi in Karnataka: ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆ ಬಜೆಟ್ ಕಡಿತ ಮಾಡಲಾಗುತ್ತಿದೆ. ಅಭಿವೃದ್ಧಿ ಗೌಣವಾಗಿದೆ. ಎಲ್ಲೆಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡುತ್ತಿಲ್ಲ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಆಗುತ್ತಿದೆ. ಭಜನೆ ಮಾಡಿದರೂ ಹಲ್ಲೆ ಮಾಡಲಾಗುತ್ತಿದೆ. ಬೀದಿಗಳಲ್ಲಿ ಬಾಂಬ್‌ ಸ್ಫೋಟಗೊಳ್ಳುತ್ತಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

VISTARANEWS.COM


on

Modi in Karnataka Govt turns tax city Bengaluru into tanker city and attacks girls too PM Narendra Modi
Koo

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress Government) ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ ಬೆಂಗಳೂರಿನ ಪರಿಸ್ಥಿತಿಯನ್ನು ಹಾಳು ಮಾಡಿದೆ. ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಕ್ರೋಶವನ್ನು ಹೊರಹಾಕಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡ ಮೋದಿ (Modi in Karnataka) ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆ ಬಜೆಟ್ ಕಡಿತ ಮಾಡಲಾಗುತ್ತಿದೆ. ಅಭಿವೃದ್ಧಿ ಗೌಣವಾಗಿದೆ. ಎಲ್ಲೆಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡುತ್ತಿಲ್ಲ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಹಲ್ಲೆ ಆಗುತ್ತಿದೆ. ಭಜನೆ ಮಾಡಿದರೂ ಹಲ್ಲೆ ಮಾಡಲಾಗುತ್ತಿದೆ. ಬೀದಿಗಳಲ್ಲಿ ಬಾಂಬ್‌ ಸ್ಫೋಟಗೊಳ್ಳುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ನಾವು ಅಧಿಕಾರಕ್ಕೆ ಬರುವಾಗ ಭಾರತವು ಆರ್ಥಿಕವಾಗಿ ಭಾರಿ ಹಿಂದಿತ್ತು. ಈಗ ಜಾಗತಿಕವಾಗಿ ಆರ್ಥಿಕ ಪ್ರಗತಿಯಲ್ಲಿ 5ನೇ ಸ್ಥಾನದಲ್ಲಿದ್ದೇವೆ. ಇದಕ್ಕೆ ಕಾರಣವಾಗಿದ್ದು, ನಿಮ್ಮ ಮತ. ಕಳೆದ 10 ವರ್ಷದಲ್ಲಿ ಭಾರತವು ಸಾಕಷ್ಟು ಸುಧಾರಣೆಯನ್ನು ಕಂಡಿದ್ದಲ್ಲದೆ, ಆರ್ಥಿಕ ಕ್ರಾಂತಿಯಾಗಿದೆ. ಈಗ ಭಾರತವು ಹಿಂಬಾಲಿಸುವ ದೇಶವಾಗಿ ಉಳಿದಿಲ್ಲ. 2014 ಹಾಗೂ 2019ರಲ್ಲಿ ಪೂರ್ಣ ಬಹುಮತಗಳೊಂದಿಗೆ ಭರ್ಜರಿ ಗೆಲುವನ್ನು ನಮಗೆ ಕೊಟ್ಟಿದ್ದೀರಿ. ಈ ಬಾರಿಯೂ ಅಂಥದ್ದೇ ಗೆಲುವನ್ನು ನೀವು ಕೊಡುತ್ತೀರಿ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೀವೀಗ ಎನ್‌ಡಿಎ ಹಾಗೂ ಇಂಡಿಯಾ ಅಲೆಯನ್ಸ್‌ ಪ್ರಚಾರಗಳನ್ನು ನೋಡಿದ್ದೀರಿ. ಆದರೆ, ಇಂಡಿ ಅಲೆಯನ್ಸ್‌ನವರು ಸುಳ್ಳು ಆರೋಪವನ್ನು ಮಾಡುತ್ತಲೇ ಬರುತ್ತಿದ್ದಾರೆ. ಆದರೆ, ನಿಮ್ಮ ಮೋದಿ ಉದ್ದೇಶ ಏನು? ಭಾರತವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದೇ ನನ್ನ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಡಿಮೆ ವೆಚ್ಚದಲ್ಲಿ ಸಿಗುತ್ತಿದೆ 1 GB ಡೇಟಾ

ನಾವು ನಮ್ಮ ಕೆಲಸ ಹಾಗೂ ಟ್ರ್ಯಾಕ್‌ ರೆಕಾರ್ಡ್‌ ಇಟ್ಟುಕೊಂಡು ಮತ ಕೇಳುತ್ತಿದ್ದೇವೆ. ನಮ್ಮ ಸರ್ಕಾರ ರೇರಾ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ. ಇದರಿಂದ ಸಾಮಾನ್ಯರಿಗೆ ಆಗುತ್ತಿದ್ದ ಅನ್ಯಾಯವನ್ನು ತಡೆದಿದ್ದೇವೆ. 2014ಕ್ಕಿಂತ ಮೊದಲು ನಿಮಗೆ 2.5 ಲಕ್ಷ ರೂಪಾಯಿ ಇದ್ದರೂ ನೀವು ತೆರಿಗೆ ಕಟ್ಟಬೇಕಿತ್ತು. ಆದರೆ, ಇಂದು ನೀವು 7 ಲಕ್ಷದ ವರೆಗೆ ಆದಾಯ ಹೊಂದಿದರೂ ಒಂದು ರೂಪಾಯಿ ಟ್ಯಾಕ್ಸ್‌ ಕಟ್ಟುತ್ತಿಲ್ಲ. ಇನ್ನು ಜಿಎಸ್‌ಟಿ ಜಾರಿಯಿಂದ ಪರೋಕ್ಷ ತೆರಿಗೆ ಕಟ್ಟುವುದು ತಪ್ಪಿದೆ. ಇದೆಲ್ಲವೂ ಸಾಧ್ಯವಾಗಿದ್ದು ನಮ್ಮ ಸರ್ಕಾರದಿಂದ ಮಾತ್ರ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಎಲ್‌ಇಡಿ ಬಲ್ಬ್‌ ಅಂದು 400 ರೂಪಾಯಿ ಇತ್ತು. ಆದರೆ, ಇಂದು ನಾವದನ್ನು 40 ರೂಪಾಯಿವರೆಗೆ ಇಳಿಸಿದ್ದೇವೆ. ಇಂದು ಈ ಬಲ್ಬ್‌ಗಳು ಅದೆಷ್ಟೋ ಮಧ್ಯಮ ವರ್ಗದ ಮನೆಯಲ್ಲಿ ಉರಿಯುತ್ತಿದೆ. ಅವರಿಗೆ ಪ್ರಕಾಶಮಾನವಾದ ಬೆಳಕಿನ ಜತೆಗೆ ವಿದ್ಯುತ್‌ ಬಿಲ್‌ನಲ್ಲಿಯೂ ಉಳಿತಾಯ ಆಗುತ್ತಿದೆ. 20 ಸಾವಿರ ಕೋಟಿ ರೂಪಾಯಿ ಪ್ರತಿ ವರ್ಷ ಉಳಿತಾಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಡಿಮೆ ವೆಚ್ಚದಲ್ಲಿ ಸಿಗುತ್ತಿದೆ ಡೇಟಾ

ಎನ್‌ಡಿಎ ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಡಿಜಿಟಲ್‌ಗೆ ದಾಖಲೆ ರೂಪದಲ್ಲಿ ಹಣವನ್ನು ಹೂಡಿಕೆ ಮಾಡಿದೆ. ಎಲೆಕ್ಟ್ರಿಕ್ ವೆಹಿಕಲ್ ಬರುವುದಕ್ಕೆ ನಾವು ಕಾರಣ. ಭಾರತದಲ್ಲಿ ಆಗಿರುವ ಡಿಜಿಟಲ್‌ ಕ್ರಾಂತಿಯಲ್ಲಿ ಬೆಂಗಳೂರಿಗರ ಕೊಡುಗೆ ಇದೆ. ಬೆಂಗಳೂರು ಡಿಜಿಟಲ್‌ ಹಬ್‌ ಆಗಿದೆ. ಈ ಮೊದಲು 1 GB ಡೇಟಾ 250 ರೂಪಾಯಿ ಆಸುಪಾಸಿನಲ್ಲಿತ್ತು. ಇಂದು ಅದೇ 1 GB ಡೇಟಾಗೆ 10 ರೂಪಾಯಿ ಆಸುಪಾಸು ಆಗಿದೆ. ನಾವು ನಿಮಗೆ ಕಡಿಮೆ ವೆಚ್ಚದಲ್ಲಿ ಡೇಟಾ ಕೊಡುತ್ತಿದೆ. ಮೊಬೈಲ್ ಬಿಲ್ ಈಗ 500 ರೂಪಾಯಿಗಿಂತ ಕಡಿಮೆ ಬರುತ್ತಿದೆ. ಇದರಿಂದ ಮಾಸಿಕವಾಗಿ ಐದಾರು ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ನಮ್ಮ ಸರ್ಕಾರವು ಡೇಟಾ ಸುರಕ್ಷತೆಗೆ ಬಲವಾದ ಕಾನೂನು ತಂದಿದೆ. ಎಂದು ನರೇಂದ್ರ ಮೋದಿ ಹೇಳಿದರು.

70 ವರ್ಷ ಮೇಲ್ಪಟ್ಟವರಿಗೂ ಆಯುಷ್ಮಾನ್‌ ಭಾರತ್‌

ಮಧ್ಯಮ ಮತ್ತು ಬಡತನ ರೇಖೆ ಕೆಳಗೆ ಇರುವವರಿಗೆ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ನೀಡಿದ್ದೇವೆ. ಇದನ್ನು 70 ವರ್ಷ ಮೇಲ್ಪಟ್ಟವರಿಗೂ ವಿಸ್ತರಣೆ ಮಾಡಲು ಮುಂದಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಬುಲೆಟ್ ಟೈನ್ ತಂದು ಸಮಯ ಉಳಿಸಿದ್ದೇವೆ

ಈ ಮೊದಲು ಕಾಂಗ್ರೆಸ್ ಮಾಫಿಯಾ ಮಾಡೋದರಲ್ಲಿ ಲೀನವಾಗಿತ್ತು. ಭ್ರಷ್ಟಾಚಾರ ಮಾಡುವುದರಲ್ಲಿ ತಲ್ಲೀನವಾಗಿದೆ. ಆದರೆ, ನಾವು 70 ಕಿ.ಮೀ. ವರೆಗೆ ನಮ್ಮ ಮೇಟ್ರೋ ಯೋಜನೆಗೆ ಚಾಲನೆ ನೀಡಿದ್ದೇವೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ವಿದೇಶಗಳಲ್ಲೂ ಚರ್ಚೆ ಆಗುತ್ತಿದೆ. ಬುಲೆಟ್ ಟೈನ್ ಅನ್ನು ತಂದು ನಿಮ್ಮ ಸಮಯವನ್ನು ಉಳಿಸಿದ್ದೇವೆ. ಇದರಿಂದ ಬೆಂಗಳೂರಿಗೆ ಬಂದು ಕೆಲಸ ಮಾಡುವವರಿಗೆ ಅನುಕೂಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ಸರ್ಕಾರದ ಸಾಧನೆಗಳ ಮಾಹಿತಿ ನೀಡಿದರು.

ದೊಡ್ಡ ದೊಡ್ಡ ಪ್ರಾಜೆಕ್ಟ್‌ ಪಡೆಯುತ್ತಿರುವ ಎಚ್‌ಎಎಲ್‌

ಕಾಂಗ್ರೆಸ್ ಎಚ್‌ಎಎಲ್ ವಿಚಾರದಲ್ಲಿ ಏನೆಲ್ಲ ಆರೋಪ ಮಾಡಿತ್ತು? ಮೋದಿ ಹೆಸರು ಕೆಡಿಸಲು ಕಾಂಗ್ರೆಸ್ ಮುಂದಾಗಿತ್ತು. ಅದೇ ಎಚ್‌ಎ‌ಎಲ್ ಈಗ ಅನೇಕ ಸಾಧನೆ ಮಾಡಿದೆ. ರಾಜ್ಯದಲ್ಲಿ ದೊಡ್ಡ ಹೆಲಿಕಾಪ್ಟರ್ ನಿರ್ಮಾಣ ಕೈಗಾರಿಕೆಯನ್ನು ಎಚ್ಎಎಲ್ ಸ್ಥಾಪಿಸಿದೆ. ಎಚ್‌ಎಎಲ್‌ ಇಂದು ಹೆಚ್ಚು ಹೆಚ್ಚು ಪ್ರಾಜೆಕ್ಟ್‌ಗಳನ್ನು ಪಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಿ

ಮೆಟ್ರೋ, ಕೋಚ್‌, ರೈಲು ಬೋಗಿಗಳನ್ನು ರಫ್ತು ಮಾಡುತ್ತಿದ್ದೇವೆ. ಮೊದಲ ಹಂತದ ಮಿಸೈಲ್‌ ಅನ್ನು ಫಿಲಿಪ್ಪೀನ್ಸ್‌ಗೆ ಕಳಿಸಿದ್ದೇವೆ. ಅಮೆರಿಕದ ಬಳಿಕ ಬೋಯಿಂಗ್‌ ಕರ್ನಾಟಕದಲ್ಲಿ ನಿರ್ಮಾಣ ಆಗುತ್ತಿದೆ. ಕಾಂಗ್ರೆಸ್‌ ಡಿಜಿಟಲ್‌ ಇಂಡಿಯಾವನ್ನು ವಿರೋಧ ಮಾಡಿತ್ತು. ಕೊರೊನಾ ವ್ಯಾಕ್ಸಿನ್‌ ಬಗ್ಗೆ ವ್ಯಂಗ್ಯ ಮಾಡಿತ್ತು. ಇಂದು ನಿಮ್ಮ ನರೇಂದ್ರ ಮೋದಿ ದೇಶದಲ್ಲಿ 6 G ತರಲು ಪ್ರಯತ್ನ ಮಾಡುತ್ತಿದ್ದರೆ, ಕಾಂಗ್ರೆಸ್‌ ಮೋದಿಯನ್ನು ಇಳಿಸುತ್ತೇನೆ ಎಂದು ಹೊರಟಿದೆ. ಇದಕ್ಕೆ ನೀವು ತಕ್ಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಇದನ್ನೂ ಓದಿ: Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

ನಾನು ನನ್ನ ಭಾಷಣವನ್ನು ಕನ್ನಡದಲ್ಲಿ ಅನುವಾದಿಸಿ ಟ್ವಿಟರ್‌ನಲ್ಲಿ ಅಪ್ಲೋಡ್‌ ಮಾಡುತ್ತಿದ್ದೇನೆ. ಇದಕ್ಕೆ ಕಾರಣವಾಗಿದ್ದು, AI ತಂತ್ರಜ್ಞಾನವಾಗಿದೆ ಎಂದು ಮೋದಿ ತಿಳಿಸಿದರು. ನನ್ನ ಒಂದು ವೈಯಕ್ತಿಕ ಕೆಲಸವನ್ನು ಮಾಡಿಕೊಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಎಲ್ಲರ ಮನೆಗೆ ಹೋಗಿ ಮೋದಿ ನಿಮಗೆ ಪ್ರಣಾಮವನ್ನು ಸಲ್ಲಿಸಲು ಹೇಳಿದ್ದಾರೆ ಎಂಬುದನ್ನು ಹೇಳಿ ಎಂದು ಕೇಳಿಕೊಂಡರು.

Continue Reading

ದೇಶ

Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

Lok Sabha Election: ಛತ್ತೀಸ್‌ಗಢದ ಪುವರ್ತಿ ಗ್ರಾಮದಲ್ಲಿ 352 ಮತದಾರರಿದ್ದಾರೆ. ಗ್ರಾಮಕ್ಕೆ ತೆರಳಿದ ಚುನಾವಣೆ ಅಧಿಕಾರಿಗಳು ಮತದಾನಕ್ಕಾಗಿ ಎಲ್ಲ ವ್ಯವಸ್ಥೆ ಮಾಡಿದ್ದರು. ಮತಗಟ್ಟೆ ಬಳಿ ಭದ್ರತಾ ಸಿಬ್ಬಂದಿಯು ಸಕಲ ರೀತಿಯಲ್ಲಿ ಭದ್ರತೆ ಒದಗಿಸಿದ್ದರು. ಇಷ್ಟಾದರೂ ಗ್ರಾಮದ ಒಬ್ಬನೇ ಒಬ್ಬ ಮತದಾರ ಹಕ್ಕು ಚಲಾಯಿಸಿಲ್ಲ ಎಂದು ಚುನಾವಣೆ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಮಾವೋವಾದಿ ನಾಯಕನ ಭಯದಿಂದಾಗಿ ಜನ ಮತದಾನ ಮಾಡಿಲ್ಲ ಎಂದು ತಿಳಿದುಬಂದಿದೆ.

VISTARANEWS.COM


on

Lok Sabha Election
Koo

ರಾಯ್‌ಪುರ: ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಶುಕ್ರವಾರ (ಏಪ್ರಿಲ್‌ 19) ಮುಕ್ತಾಯಗೊಂಡಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, ಶೇ.60ರಷ್ಟು ಮತದಾನ ದಾಖಲಾಗಿದೆ. ಕೆಲವು ಪ್ರದೇಶಗಳು ಹೊರತುಪಡಿಸಿ ಎಲ್ಲೆಡೆ ಶಾಂತಿಯುತವಾಗಿಯೇ ಮತದಾನ ನಡೆದಿದೆ. ಆದರೆ, ಛತ್ತೀಸ್‌ಗಢದ ಬಸ್ತಾರ್‌ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಪುವರ್ತಿ ಎಂಬ ಗ್ರಾಮದಲ್ಲಿ (Puvarti Village) ಮಾತ್ರ ಶುಕ್ರವಾರ ಒಬ್ಬರೇ ಒಬ್ಬರು ಮತದಾನ ಮಾಡಿಲ್ಲ. ಇದು ಮಾವೋವಾದಿಯೊಬ್ಬನ ಊರಾಗಿದ್ದು, ಆತನ ಭಯದಿಂದಾಗಿಒಬ್ಬರೂ ಮತದಾನ ಮಾಡಲ್ಲ ಎಂದು ತಿಳಿದುಬಂದಿದೆ.

ಹೌದು, ಪುವರ್ತಿ ಗ್ರಾಮವು ನಕ್ಸಲ್‌ ನಾಯಕ ಹಿದ್ಮಾ ಎಂಬಾತನ ಹುಟ್ಟೂರಾಗಿದೆ. ಇಡೀ ಬಸ್ತಾರ್‌ ವ್ಯಾಪ್ತಿಯಲ್ಲಿ ಹಿದ್ಮಾನ ಪ್ರಭಾವ ಇದೆ. ಈತನ ಭಯವು ಜನರಲ್ಲಿ ಹೆಚ್ಚು ಕಾಡುತ್ತಿದೆ.‌ ಬಸ್ತಾರ್‌ ಪ್ರದೇಶದಲ್ಲಿಯೇ ಎಲ್ಲಿಯೇ ಮಾವೋವಾದಿಗಳ ದಾಳಿಯಾಗಲಿ, ಭದ್ರತಾ ಸಿಬ್ಬಂದಿ ಸೇರಿ ಸಾರ್ವಜನಿಕರ ಹತ್ಯೆಯಾಗಲಿ, ಆಗೆಲ್ಲ ಹಿದ್ಮಾನ ಹೆಸರೇ ಮುನ್ನೆಲೆಗೆ ಬರುತ್ತದೆ. ಈತನೇ ದಾಳಿಯ ರೂವಾರಿ ಎಂಬುದು ಜನರ ದೃಢ ನಂಬಿಕೆಯಾಗಿರುತ್ತದೆ. ಇದೇ ಕಾರಣಕ್ಕಾಗಿ, ಪುವರ್ತಿ ಗ್ರಾಮದಲ್ಲಿ ಶುಕ್ರವಾರ ಮತದಾನಕ್ಕೆ ಸಕಲ ವ್ಯವಸ್ಥೆ ಮಾಡಿದರೂ, ಭದ್ರತಾ ಸಿಬ್ಬಂದಿಯು ಹೆಚ್ಚು ಭದ್ರತೆ ಒದಗಿಸಿದರೂ ಯಾರೊಬ್ಬರೂ ಮತದಾನ ಮಾಡದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡ ಅಣಕವಾಗಿದೆ.

ಕೆಲವೆಡೆ ಇವಿಎಂ ದೋಷ

ತಮಿಳುನಾಡು, ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಸ್ಸಾಂನ ಕೆಲವು ಬೂತ್ ಗಳಲ್ಲಿ ಸಣ್ಣ ಪ್ರಮಾಣದ ಇವಿಎಂ ದೋಷಗಳು ವರದಿಯಾಗಿವೆ. ಪಶ್ಚಿಮ ಬಂಗಾಳದಲ್ಲಿ ಸಂಜೆ 5 ಗಂಟೆಯವರೆಗೆ ಶೇಕಡಾ 77.57, ಅಸ್ಸಾಂನಲ್ಲಿ ಶೇಕಡಾ 70.77 ಮತ್ತು ಮೇಘಾಲಯದಲ್ಲಿ ಶೇಕಡಾ 69.91 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

Lok sabha election-2024

ಪಶ್ಚಿಮ ಬಂಗಾಳದಲ್ಲಿ ಹಿಂಸಾಸಾರ

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಕ್ಷೇತ್ರದಲ್ಲಿ ಹಿಂಸಾಚಾರ ನಡೆದಿದೆ. ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘರ್ಷಣೆ ನಡೆಸಿದ್ದು, ಮತದಾನ ಹಿಂಸಾಚಾರ, ಮತದಾರರ ಬೆದರಿಕೆ ಮತ್ತು ಚುನಾವಣಾ ಏಜೆಂಟರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಕ್ರಮವಾಗಿ 80 ಮತ್ತು 39 ದೂರುಗಳನ್ನು ದಾಖಲಾಗಿವೆ. ಸಂಘರ್ಷ ಪೀಡಿತ ಮಣಿಪುರದಲ್ಲಿ ಸಂಜೆ 5 ಗಂಟೆಯವರೆಗೆ ಶೇ.67.46ರಷ್ಟು ಮತದಾನವಾಗಿದೆ.

ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಥೊಂಗ್ಜು ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯರು ಮತ್ತು ಅಪರಿಚಿತ ವ್ಯಕ್ತಿಗಳ ನಡುವೆ ವಾಗ್ವಾದ ನಡೆದಿದೆ. ಛತ್ತೀಸ್​ಗಢದ ನಕ್ಸಲ್ ಪೀಡಿತ ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 63.41 ರಷ್ಟು ಮತದಾರರು ಮತ ಚಲಾಯಿಸಿದ್ದಾರೆ. ಅಲ್ಲಿ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಿಆರ್​ಪಿಎಫ್​ ಜವಾನ ಗಾಯಗೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಐಇಡಿ ಸ್ಫೋಟ ಸಂಭವಿಸಿದೆ.

ಇದನ್ನೂ ಓದಿ: Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Continue Reading

ಪ್ರಮುಖ ಸುದ್ದಿ

Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ

Trust Of The Nation 2024: ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 61% ಜನರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಗ್ಗೆ ತುಂಬಾ ಸಂತೋಷವಾಗಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಅಭಿಪ್ರಾಯಗಳನ್ನು ಭಾರತದಾದ್ಯಂತ ವಿವಿಧ ಜನ ಸಮುದಾಯ ಮತ್ತು ವೃತ್ತಿಪರ ಗುಂಪುಗಳಿಂದ ಸಂಗ್ರಹಿಸಲಾಗಿದೆ. ಹೀಗಾಗಿ ಅಭಿಪ್ರಾಯಗಳು ಬಹುತೇಕ ಜನರ ಇಂಗಿತದ ಪ್ರತಿಫಲನವಾಗಿದೆ.

VISTARANEWS.COM


on

Trust Of The Nation 2024
Koo

ನವದೆಹಲಿ: 2024 ರ ಲೋಕಸಭಾ ಚುನಾವಣೆಯ (Lok Sabha Election) ಮೊದಲ ಹಂತ ಏಪ್ರಿಲ್​ 19ರಂದು ನಡೆದಿದೆ. ಇನ್ನೂ ಆರು ಹಂತಗಳ ಮತದಾನ ಪ್ರಕ್ರಿಯೆ ಬಾಕಿ ಉಳಿದಿದೆ. ಮತದಾನ ಜಾತ್ರೆಯ ಹಿನ್ನೆಲೆಯಲ್ಲಿ ಸ್ಥಳೀಯ ಭಾಷೆಗಳ ಕಂಟೆಂಟ್​ ಡಿಸ್ಕವರಿ ಫ್ಲ್ಯಾಟ್​ಫಾರ್ಮ್​ “ಡೈಲಿಹಂಟ್’ (Trust Of The Nation 2024) ನಡೆಸಿದ “ಟ್ರಸ್ಟ್ ಆಫ್ ದಿ ನೇಷನ್” ಸಮೀಕ್ಷೆಯು ಭಾರತದ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬುದನ್ನು ಬಹಿರಂಗ ಮಾಡಿದೆ. 77 ಲಕ್ಷಕ್ಕೂ ಹೆಚ್ಚು ಮತದಾರರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು ಭಾರತದ ಉತ್ತಮ ನಾಯಕತ್ವ, ಸಮರ್ಥ ಆರ್ಥಿಕ ನಿರ್ವಹಣೆ ಮತ್ತು ಪ್ರಸ್ತುತ ಸರ್ಕಾರದ ಒಟ್ಟಾರೆ ಕಾರ್ಯಕ್ಷಮತೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳ ಇಲ್ಲ ವ್ಯಕ್ತಗೊಂಡಿವೆ. ಈ ಸಮೀಕ್ಷೆಯ ಸಮಗ್ರ ವಿವರ ಈ ಕೆಳಗೆ ನೀಡಲಾಗಿದೆ.

ಸರ್ಕಾರ ಮತ್ತು ಪ್ರಧಾನಿ ಮೋದಿ ನಾಯಕತ್ವಕ್ಕೆ ಜನರ ಮೆಚ್ಚುಗೆ

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 61% ಜನರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಗ್ಗೆ ತುಂಬ ಸಂತೋಷವಾಗಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಅಭಿಪ್ರಾಯಗಳನ್ನು ಭಾರತದಾದ್ಯಂತ ವಿವಿಧ ಜನ ಸಮುದಾಯ ಮತ್ತು ವೃತ್ತಿಪರ ಗುಂಪುಗಳಿಂದ ಸಂಗ್ರಹಿಸಲಾಗಿದೆ. ಹೀಗಾಗಿ ಅಭಿಪ್ರಾಯಗಳು ಬಹುತೇಕ ಜನರ ಇಂಗಿತದ ಪ್ರತಿಫಲನವಾಗಿದೆ. ಕೆಲವು ಪ್ರದೇಶಗಳಲ್ಲಿ ಗೃಹಿಣಿಯರು ಮತ್ತು ಉದ್ಯಮಿಗಳ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತಗೊಂಡಿವೆ.

ಈ ಬಾರಿಯ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ?

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಶೇ.63ರಷ್ಟು ಮಂದಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ವಿವರವಾದ ಅಂಕಿ ಅಂಶಗಳು ಪಿಎಂ ಮೋದಿಯವರನ್ನು ಭಾರತದ ಬಹುತೇಕ ರಾಜ್ಯಗಳ ಜನರು ತಮ್ಮ ನೆಚ್ಚಿನ ನಾಯಕ ಎಂದು ಒಪ್ಪಿಕೊಂಡಿದ್ದಾರೆ. ಈ ವಿಚಾರದಲ್ಲಿ ತಮಿಳುನಾಡು ಮತ್ತು ಕೇರಳದಲ್ಲಿ ವ್ಯತಿರಿಕ್ತ ಅಭಿಪ್ರಾಯಗಳು ಮೂಡಿ ಬಂದಿವೆ.

ಪ್ರಧಾನಿ ಮೋದಿಯ ಆರ್ಥಿಕ ಪ್ರಗತಿ ಯೋಜನೆಗೆ ಜನರ ಮೆಚ್ಚುಗೆ

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸರ್ಕಾರವು ಆರ್ಥಿಕತೆಯನ್ನು ನಿರ್ವಹಿಸಿದ ರೀತಿಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ, 60% ರಷ್ಟು ಜನರು ದೇಶದ ಆರ್ಥಿಕ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆಯು ನಡೆದ ಬಹುತೇಕ ಸ್ಥಳಗಳಲ್ಲಿ ಈ ಅಭಿಪ್ರಾಯವೇ ದೊರಕಿದೆ. ಆದರೂ ದಕ್ಷಿಣದ ಕೆಲವು ರಾಜ್ಯಗಳು ಅದೇ ಉತ್ಸಾಹವನ್ನು ತೋರಿಸಿಲ್ಲ. ಇದು ಪ್ರಾದೇಶಿಕ ಆರ್ಥಿಕ ಅಸಮಾನತೆಯ ಕೂಗು ವ್ಯಕ್ತಗೊಂಡಿದೆ.

‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’: ಮತ್ತೆ ಬೇಕು ಮೋದಿ

ಶೇ.64ರಷ್ಟು ಮಂದಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಿ ಮುಂದುವರಿಯಬೇಕು ಎಂದು ಬಯಸಿದ್ದಾರೆ. ಯುವ ಮತದಾರರಿಂದ ಹಿಡಿದು ನಿವೃತ್ತರ ತನಕ ಪ್ರಧಾನಿ ಮೋದಿಯವರ ವಿಶಾಲ ಆಕರ್ಷಣೆಯನ್ನು ಪ್ರದರ್ಶಿಸಿದೆ. ಇದು ರಾಷ್ಟ್ರೀಯ ನಾಯಕರಾಗಿ ಅವರ ಶಕ್ತಿಯನ್ನು ಹೇಳಿದೆ.

ವಿದೇಶಾಂಗ ನೀತಿ ನಿರ್ಧಾರಗಳಿಗೆ ರಾಷ್ಟ್ರದ ಒಮ್ಮತ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪಾಲಿಸುತ್ತಿರುವ ವಿದೇಶಾಂಗ ನೀತಿಗೆ ಸಮೀಕ್ಷೆಯಲ್ಲಿ ಗಣನೀಯ ಬೆಂಬಲ ದೊರೆತಿದೆ. ಅಂತಾರಾಷ್ಟ್ರೀಯ ವ್ಯವಹಾರಗಳನ್ನು ನಿರ್ವಹಿಸುವಲ್ಲಿ ಸರ್ಕಾರದ ಕಾರ್ಯಕ್ಷಮತೆ ಉತ್ತಮವಾಗಿದೆ ಎಂದು 64% ಜನರು ರೇಟಿಂಗ್ ನೀಡಿದ್ದಾರೆ. ಇದು ಸರ್ಕಾರದ ರಾಜತಾಂತ್ರಿಕ ಕಾರ್ಯತಂತ್ರಗಳು ಮತ್ತು ಅಂತಾರಾಷ್ಟ್ರೀಯ ಸಂಬಂಧಗಳಿಗೆ ವ್ಯಾಪಕ ಬೆಂಬಲ ದೊರಕಿದೆ

ರಾಷ್ಟ್ರೀಯ ಬಿಕ್ಕಟ್ಟುಗಳ ಸ್ಪಂದನೆಗೂ ಶಹಬ್ಬಾಸ್​

ರಾಷ್ಟ್ರೀಯ ಬಿಕ್ಕಟ್ಟಿನ ಸಮಯದಲ್ಲಿ ಪ್ರಧಾನಿ ಮೋದಿಯವರ ನಾಯಕತ್ವವನ್ನು ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಹೆಚ್ಚಿನವರು ಶ್ಲಾಘಿಸಿದ್ದಾರೆ. 63.6% ಜನರು ತುಂಬಾ ಸಂತೋಷವಾಗಿದ್ದಾರೆ. ಪ್ರಕ್ಷುಬ್ಧ ಸಮಯದಲ್ಲಿ ಪಿಎಂ ಮೋದಿಯವರ ಆಡಳಿತದ ಚಾತುರ್ಯವನ್ನು ಸಮೀಕ್ಷೆಯಲ್ಲಿ ಪಾಲ್ಗೊಂಡವರು ಶಹಬ್ಬಾಸ್ ಎಂದಿದ್ದಾರೆ.

ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಆಭಾರಿ

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಅರ್ಧಕ್ಕಿಂತ ಹೆಚ್ಚು, ಅಂದರೆ 53.9% ಕ್ಕಿಂತ ಹೆಚ್ಚು, ಸರ್ಕಾರ ಕೈಗೊಂಡ ಕಲ್ಯಾಣ ಯೋಜನೆಗಳು ಮತ್ತು ಜನಪರ ಚಟುವಟಿಕೆಗಳಿಂದ ಸಂತೋಷವಾಗಿದ್ದಾರೆ. ನಿವೃತ್ತ ವ್ಯಕ್ತಿಗಳು ಮತ್ತು ವಿದ್ಯಾರ್ಥಿಗಳು ನೀಡಿರುವ ಬೆಂಬಲ ಗಮನಾರ್ಹವಾಗಿ ಹೆಚ್ಚಾಗಿದೆ, ಎರಡೂ ಗುಂಪುಗಳು ಸುಮಾರು 59% ತೃಪ್ತಿ ಮಟ್ಟವನ್ನು ತೋರಿಸಿವೆ. ಈ ಗುಂಪುಗಳಿಗೆ ನೇರವಾಗಿ ಪ್ರಯೋಜನವಾಗುವ ನಿರ್ದಿಷ್ಟ ಕಾರ್ಯಕ್ರಮಗಳ ಪರಿಣಾಮ ಇದು. ಉದಾಹರಣೆಗೆ; ವಯಸ್ಸಾದವರಿಗೆ ಪಿಂಚಣಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಬ್ಸಿಡಿಗಳು.

ಮೋದಿಯ ಭ್ರಷ್ಟಾಚಾರ ವಿರೋಧಿ ಕ್ರಮ

ಮೋದಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸರ್ಕಾರದ ಕ್ರಮಕ್ಕೆ ಶೇ.63.5ರಷ್ಟು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಜನಸಂಖ್ಯಾ ದೃಷ್ಟಿಕೋನದಿಂದ, ವಿದ್ಯಾರ್ಥಿಗಳು (59%) ಮತ್ತು ನಿವೃತ್ತ (59%) ವ್ಯಕ್ತಿಗಳು ಉದ್ಯಮಿಗಳು ಹೆಚ್ಚು ಸಂತೋಷ ವ್ಯಕ್ತಪಡಿಸಿದ್ದಾರೆ.

ಕಠಿಣ ಪರಿಶ್ರಮಿ ಮತ್ತು ಪ್ರಾಮಾಣಿಕ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರ ಗುಣ ಲಕ್ಷಣಗಳ ಬಗ್ಗೆಯೂ ಪ್ರಶ್ನೆ ಕೇಳಲಾಗಿತ್ತು. ಪ್ರಮುಖವಾಗಿ ಅವರ ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮಕ್ಕೆ ಬೆಂಬಲ ದೊರಕಿದೆ. ಶೇ.41ರಷ್ಟು ಮಂದಿ ಅವರ ಈ ಗುಣವನ್ನು ಮೆಚ್ಚಿದ್ದಾರೆ. ನಿವೃತ್ತರು ಮತ್ತು ವಿದ್ಯಾರ್ಥಿಗಳಲ್ಲಿ ಈ ಮೆಚ್ಚುಗೆ ವಿಶೇಷವಾಗಿ ವ್ಯಕ್ತಗೊಂಡಿದೆ. ಕ್ರಮವಾಗಿ 47% ಮತ್ತು 43% ಜನರು ಪ್ರಧಾನಿ ಮೋದಿಯವರ ಸಮಗ್ರತೆ ಮತ್ತು ಶ್ರದ್ಧೆಯನ್ನು ಶ್ಲಾಘಿಸಿದ್ದಾರೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವ ಮತದಾರರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟವರು ಪ್ರಧಾನಿಯ ಈ ವ್ಯಕ್ತಿತ್ವದ ಬಗ್ಗೆ ಹೆಚ್ಚಿನ ಮೆಚ್ಚುಗೆ ತೋರಿದ್ದಾರೆ. ಅವರ ಪಾರದರ್ಶಕ ಮನಸ್ಸು ಮತ್ತು ಶ್ರಮದ ನೀತಿಯನ್ನು ಎತ್ತಿಹಿಡಿದಿದ್ದಾರೆ.

ಸಮೀಕ್ಷೆಯ ಅಂತಿಮ ಹೇಳಿಕೆ ಹೀಗಿದೆ

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ, ವಿಶೇಷವಾಗಿ ಆರ್ಥಿಕ ನಿರ್ವಹಣೆ, ವಿದೇಶಾಂಗ ನೀತಿ ಮತ್ತು ಬಿಕ್ಕಟ್ಟು ನಿರ್ವಹಣೆ ಬಗ್ಗೆ ಅತಿ ಹೆಚ್ಚು ಮೆಚ್ಚುಗೆ ಶುರುವಾಗಿದೆ. ಮೋದಿಯ ಆಡಳಿತದ ಬಗ್ಗೆ ತುಂಬಾ ಆಶಾವಾದಿಯಾಗಿರುವವರ ಪ್ರಮಾಣವೇ ಹೆಚ್ಚಿದೆ. ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮಿ ಎಂದು ಪರಿಗಣಿಸಲ್ಪಟ್ಟ ನಾಯಕನಾಗಿ ಪ್ರಧಾನಿ ಮೋದಿಯವರು ಭಾರತೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೋದಿ ನೇತೃತ್ವದಲ್ಲಿ ಭಾರತವು ಸಂಕೀರ್ಣ ದೇಶೀಯ ಮತ್ತು ಅಂತಾರರಾಷ್ಟ್ರೀಯ ಸಮಸ್ಯೆಗಳನ್ನು ನಿರ್ವಹಣೆ ಮಾಡಿರುವುದು ಕೂಡ ಜನ ಮೆಚ್ಚುಗೆ ಗಳಿಸಿದೆ.

Continue Reading

Lok Sabha Election 2024

Modi in Karnataka: ಬೆಂಗಳೂರಲ್ಲಿ ಮೋದಿ ಸಮಾವೇಶ; ಇಲ್ಲಿದೆ LIVE ವಿಡಿಯೊ

Modi in Karnataka: ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿರುವ ಬೃಹತ್ ಪ್ರಚಾರ ರ‍್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಇಲ್ಲಿ ಲೈವ್‌ ವಿಡಿಯೊವನ್ನು ವೀಕ್ಷಿಸಬಹುದು.

VISTARANEWS.COM


on

Modi in Karnataka PM Modi to address rally in Bengaluru Here live video
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕರ್ನಾಟಕಕ್ಕೆ (Modi in Karnataka) ಆಗಮಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶವನ್ನು ಪೂರ್ಣಗೊಳಿಸಿ, ಬೆಂಗಳೂರಿನತ್ತ ಮುಖ ಮಾಡಿದ್ದಾರೆ.

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌?

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಧಾನಿ; ಕಿಸಾನ್‌ ಸಮ್ಮಾನ್‌ ಪ್ರಸ್ತಾಪ

ಕಾಂಗ್ರೆಸ್‌ ರೈತರಿಗೆ ಯಾವ ರೀತಿಯ ಮೋಸ ಮಾಡುತ್ತದೆ ಎನ್ನುವುದಕ್ಕೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರವೇ ಸಾಕ್ಷಿ. ನಾವು ರೈತರ ಬಗ್ಗೆ ಕಳಕಳಿಯಿಂದ ಯೋಜನೆಯಿಂದ ಕಿಸಾನ್‌ ಸಮ್ಮಾನ್‌ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಇದಕ್ಕೆ ಈ ಹಿಂದಿನ ಸರ್ಕಾರವು ಕೇಂದ್ರ ಸರ್ಕಾರ ಕೊಡುತ್ತಿದ್ದ 6 ಸಾವಿರ ರೂಪಾಯಿ ಜತೆಗೆ 4 ಸಾವಿರ ರೂಪಾಯಿಯನ್ನು ಕೊಡುತ್ತಲಿತ್ತು. ಆದರೆ, ಈ ಸರ್ಕಾರ ಅದನ್ನು ನಿಲ್ಲಿಸಿದೆ. ಹೀಗಾಗಿ ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಚಿಕ್ಕಬಳ್ಳಾಪುರದಲ್ಲಿ ಶನಿವಾರ (ಏಪ್ರಿಲ್‌ 20) ಏರ್ಪಡಿಸಲಾಗಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್‌ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಪರವಾಗಿ ಮತಯಾಚಿಸಿದರು.

ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿ

ಈ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 150 ಅಮೃತ ಸರೋವರ ಯೋಜನೆ ಮಾಡಲಾಗಿದೆ. 2.70 ಲಕ್ಷ ಕುಟುಂಬಕ್ಕೆ ಕುಡಿಯುವ ನೀರನ್ನು ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಆದರೆ, ಕಾಂಗ್ರೆಸ್‌ ಸರ್ಕಾರವು ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಇಂಥ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತೀರಿ ಎಂಬುದಾಗಿ ಭಾವಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ರೇಷ್ಮೆ ಉದ್ಯಮಕ್ಕೆ ಉತ್ತೇಜನ ನೀಡಲಾಗಿತ್ತು. 1,300 ಕೋಟಿ ರೂಪಾಯಿ ಸಹಾಯಧನ ನೀಡಲಾಗಿದೆ. ಶಿಡ್ಲಘಟ್ಟದಲ್ಲಿ ರೇಷ್ಮೆ ಉದ್ಯಮಕ್ಕೆ ಸಹಾಯ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ಕರ್ನಾಟಕದ ಕಮಿಟ್ಮೆಂಟ್‌ ಗೊತ್ತಾಗುತ್ತಿದೆ

ಸಂತ ಕೈವಾರ ತಾತಯ್ಯ, ಸರ್.ಎಂ ವಿಶ್ವೇಶ್ವರಯ್ಯ, ಈ ಮಣ್ಣಿನಲ್ಲಿ ಜನರ ದರ್ಶನ ನನ್ನ ಸೌಭಾಗ್ಯ ಎಂದು ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಉತ್ಸಾಹ ಹೆಚ್ಚಾಗಿದೆ. ಆ ಉತ್ಸಾಹ ನನಗೆ ಕಾಣುತ್ತಿದೆ. ಯುವಕರಿಗೆ ಪ್ರೇರಣೆ ಸಿಗಲಿದೆ. ನನಗೆ ಭಾಷೆ ಅರ್ಥ ಆಗಲ್ಲ. ಆದರೆ, ಕರ್ನಾಟಕದ ಕಮಿಟ್ಮೆಂಟ್‌ ಗೊತ್ತಾಗುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ನನ್ನ ಹೃದಯದಿಂದ ಅಭಾರಿಯಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ದೇವೇಗೌಡರು ಇಂಡಿ ಮೈತ್ರಿ ಬಗ್ಗೆ ಹೇಳಿದ್ದಾರೆ. ಇಂಡಿ ಮೈತ್ರಿಯಲ್ಲಿ ನಾಯಕರಿಲ್ಲ, ಭವಿಷ್ಯದ ಬಗ್ಗೆ ಚಿಂತನೆಯೇ ಅವರಲ್ಲಿ ಇಲ್ಲ. ಅವರ ಇತಿಹಾಸ ಕೇವಲ ಹಗರಣ ಮಾತ್ರ ಎಂದು ಗುಡುಗಿದರು.

ದೇಶದ ಬಗ್ಗೆ 24×7 ಕೆಲಸ

ದೇಶದ ಜನತೆಗೆ ನನ್ನ ಕೆಲಸದ ಬಗ್ಗೆ ತಿಳಿಸಿದ್ದೇನೆ. ನಾನು ನಿಮ್ಮ ನಡುವೆ ನಮ್ಮ ರಿಪೋರ್ಟ್‌ ಕಾರ್ಡ್ ಹಿಡಿದು ಆಶೀರ್ವಾದ ಪಡೆಯಲು ಬಂದಿದ್ದೇನೆ. ನಾನು ಎಲ್ಲರನ್ನೂ ಪರಿವಾರ ಅಂತ ತಿಳಿದಿದ್ದೇನೆ. ನಿಮ್ಮ ಕನಸು, ಮೋದಿಯ ಸಂಕಲ್ಪವಾಗಿದೆ. ಪ್ರತಿ ಕ್ಷಣದಲ್ಲೂ ನಿಮ್ಮ ಹಾಗೂ ದೇಶದ ಬಗ್ಗೆ 24×7 ಕೆಲಸ ಮಾಡಲು ಬಂದಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು.

ಮುಂದಿನ ಐದು ವರ್ಷವೂ ಉಚಿತ ರೇಷನ್

ದೇಶದ ಜನ ಎಂದೂ ಉಚಿತ ರೇಷನ್ ಸಿಗುತ್ತದೆ ಅಂತ ಅನ್ನಿಸಿರಲಿಲ್ಲ. ನಿಮ್ಮ ಮೋದಿ ಅದನ್ನು ಈಡೇರಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರದ ಎಂಟು ಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ರೇಷನ್ ಕೊಡುತ್ತಿದ್ದೇವೆ. ಇದೇ ರೀತಿ ಮುಂದಿನ ಐದು ವರ್ಷವೂ ಉಚಿತ ಅಕ್ಕಿ ನಿಮಗೆ ಸಿಗಲಿದೆ. ಕರ್ನಾಟಕದ ಲಕ್ಷಾಂತರ ಜನರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮಂದಿ ಆಯುಷ್ಮಾನ್ ಯೋಜನೆ ಮೂಲಕ ಐದು ಲಕ್ಷ ರೂಪಾಯಿವರೆಗೂ ಚಿಕಿತ್ಸೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ‌

25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆ

ಮೋದಿ ಸರ್ಕಾರದ ಯೋಜನೆ ಮೂಲಕ ಕೋಟ್ಯಂತರ ಮಂದಿ ಲಾಭ ಪಡೆದಿದ್ದಾರೆ. ಎಸ್‌ಸಿ, ಎಸ್‌ಟಿ, ಒಬಿಸಿ ಕುಟುಂಬದವರಿಗೆ ಭರಪೂರ ಯೋಜನೆ ನೀಡಲಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಮೊದಲು ಕೊಳಗೇರಿಯಲ್ಲಿ ವಾಸ ಮಾಡುವಂತಾಗಿತ್ತು. ವಿದ್ಯುತ್, ನೀರು ಕೂಡ ಸಿಗುತ್ತಿರಲಿಲ್ಲ. ಜನರೂ ಹಿಂದಿನ ಸರ್ಕಾರದ ಮೇಲೆ ಭರವಸೆ ಕೂಡ ಬಿಟ್ಟುಬಿಟ್ಟಿದ್ದರು. ಆದರೆ, ನಿಮ್ಮ ಭರವಸೆಯನ್ನು ಮೋದಿ ಗ್ಯಾರಂಟಿ ನಿಜ ಮಾಡಿದೆ. 25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇನ್ನೈದು ವರ್ಷದಲ್ಲಿ ಸೂರಿಲ್ಲದವರಿಗೆ ಮನೆ

ಹಿಂದಿನ ಹತ್ತು ವರ್ಷಗಳಲ್ಲಿ ಚಿಕ್ಕಬಳ್ಳಾಪುರದಲ್ಲಿ 14 ಕೋಲಾರ 24 ಸಾವಿರ ಮನೆ ನಿರ್ಮಾಣ ಮಾಡಿ ನೀಡಲಾಗಿದೆ. ಮೋದಿ ಸರ್ಕಾರ ಹೊಸ ಮನೆಗಳ ನಿರ್ಮಾಣ ಮಾಡುವ ಭರವಸೆ ನೀಡಿದೆ. ಯಾರಿಗೆ ಈವರೆಗೆ ಮನೆ ಸಿಕ್ಕಿಲ್ಲವೋ ಅವರಿಗೆ ಮುಂದಿನ ಐದು ವರ್ಷಗಳಲ್ಲಿ ಖಂಡಿತವಾಗಿಯೂ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.

ಎಸ್‌ಸಿ ಸಮುದಾಯದವರನ್ನು ರಾಷ್ಟ್ರಪತಿ ಮಾಡಿದ್ದು ಎನ್‌ಡಿಎ

2014ರಲ್ಲಿ ಎನ್‌ಡಿಎ ಸರ್ಕಾರ ಬಂದ ಬಳಿಕ ಎಸ್‌ಸಿ ಸಮುದಾಯದವರನ್ನು ರಾಷ್ಟ್ರಪತಿ ಮಾಡುವ ಮೂಲಕ ಮೊದಲ ಪ್ರಜೆಯನ್ನು ಆಯ್ಕೆ ಮಾಡಿತು. ಹಿಂದುಳಿದ ಸಮುದಾಯದ ಮಹಿಳೆಯನ್ನು ರಾಷ್ಟ್ರಪತಿ ಮಾಡಲಾಗಿದೆ ಎಂದು ಎನ್‌ಡಿಎ ಸರ್ಕಾರ ಕೈಗೊಂಡ ಕ್ರಮಗಳು, ನಿರ್ಧಾರಗಳ ಬಗ್ಗೆ ಪ್ರಧಾನಿ ಮೋದಿ ವಿವರಿಸಿದರು.

ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 10ರಿಂದ 20 ಲಕ್ಷ ರೂಪಾಯಿ ವರೆಗೂ ಸಾಲ

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮೂಲಕ ಎಲ್ಲರನ್ನೂ ಜತೆಗೆ ತೆಗೆದುಕೊಂಡು ಹೋಗುವ ಕೆಲಸ ಮಾಡಲಾಗಿದೆ. ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ‌ ಒತ್ತು ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ದಾಖಲಾತಿ ಹೆಚ್ಚಾಗಿದೆ. ಗ್ಯಾರಂಟಿ ಇಲ್ಲದೆ, ಮುದ್ರಾ ಲೋನ್ ಮೂಲಕ ಸಾಲ ನೀಡಲಾಗಿದೆ. ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 10ರಿಂದ 20 ಲಕ್ಷ ರೂಪಾಯಿ ವರೆಗೂ ಸಾಲ ನೀಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ಒಂದು ಕೋಟಿ ಮಹಿಳೆಯರನ್ನು ಲಕ್ಷಪತಿಯರನ್ನಾಗಿ ಮಾಡಿದ್ದೇವೆ

ಇಂದು ಇಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತಾಯಂದಿರು ಬಂದಿದ್ದಾರೆ. ನಿಮ್ಮ ಕಷ್ಟವನ್ನು ಮೋದಿ ನೋಡಿದ್ದಾರೆ. ದೇಶದ ಅನೇಕರು ಮೋದಿಯನ್ನು ಅಧಿಕಾರದಿಂದ ಕೆಳಗೆ ಇಳಿಸಲು ಪ್ರಯತ್ನ ಮಾಡಿದ್ದಾರೆ. ಆದರೆ, ತಾಯಂದಿರ ಆಶೀರ್ವಾದ ಇದೆ. ನಿಮ್ಮೆಲ್ಲರ ಆಶೀರ್ವಾದಿಂದ ನಾನು ಎದುರಿಸುತ್ತೇನೆ. ಪ್ರತಿ ತಾಯಂದಿರ ಸೇವೆ ಮಾಡುವುದು ಮೋದಿ ಗ್ಯಾರಂಟಿಯಾಗಿದೆ. ಒಂದು ಕೋಟಿ ಮಹಿಳೆಯರನ್ನು ಲಕ್ಷಪತಿಯರನ್ನಾಗಿ ತಯಾರು ಮಾಡಲಾಗಿದೆ. ಮೂರು ಕೋಟಿ ಮಹಿಳೆಯರ ವಾರ್ಷಿಕ ಆದಾಯ ಲಕ್ಷ‌ ರೂಪಾಯಿ ಮೀರಲಿದೆ. ಎನ್‌ಡಿಎ ಸರ್ಕಾರದಿಂದ ಡ್ರೋನ್ ಪೈಲೆಟ್ ಟ್ರೈನಿಂಗ್ ಕೊಡಲಾಗುತ್ತಿದೆ. ಯುವತಿಯರು ಡ್ರೋನ್ ಮೂಲಕ ಸಾಧನೆ ಮಾಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಈ ನೆಲದಲ್ಲಿ ಮಾವು, ಪಶುಪಾಲನೆ ನಡೆಯುತ್ತಿದೆ. ಎನ್‌ಡಿಎ ಸರ್ಕಾರ ಹಳ್ಳಿಗಳ ಅಭಿವೃದ್ಧಿಗೆ ಶ್ರಮ ವಹಿಸುತ್ತಿದೆ. ನಮ್ಮ ಜತೆ ದೇವೇಗೌಡರಂತಹ ಹಿರಿಯ ರಾಜಕಾರಣಿ ಇದ್ದಾರೆ. ಅಂಥವರ ಮಾರ್ಗದರ್ಶನ ನಮಗಿದೆ. ಪಶು ಪಾಲನೆ ಮಾಡುವವರಿಗೂ ಕಿಸಾನ್ ಕಾರ್ಡ್ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೋಲಾರ ಸಂಸದ ಮುನಿಸ್ವಾಮಿ, ಯಲಹಂಕ ಶಾಸಕರಾದ ವಿಶ್ವನಾಥ್, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕ ವೈ. ಸಂಪಂಗಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Continue Reading
Advertisement
Modi in Karnataka Govt turns tax city Bengaluru into tanker city and attacks girls too PM Narendra Modi
ಕರ್ನಾಟಕ34 mins ago

Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

Kalki 2898 AD
ಸಿನಿಮಾ36 mins ago

Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼ ಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

Lok Sabha Election
ದೇಶ45 mins ago

Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

Ashutosh Sharma
ಕ್ರೀಡೆ45 mins ago

Ashutosh Sharma: ಖಿನ್ನತೆಗೆ ಒಳಗಾಗಿದ್ದ ಬಿಗ್​ ಹಿಟ್ಟರ್​ ಅಶುತೋಷ್‌ ಶರ್ಮ; ಕ್ರಿಕೆಟ್​ ಜರ್ನಿಯೇ ರೋಚಕ

DK Shivakumar
ಕರ್ನಾಟಕ46 mins ago

DK Shivakumar: ಮತಯಾಚನೆ ವೇಳೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಎಫ್‌ಐಆರ್‌

Karnataka Weather Forecast
ಮಳೆ1 hour ago

Karnataka Weather : ಎತ್ತಿನ ಬಂಡಿಯಲ್ಲಿ ಬರುವಾಗ ಸಿಡಿಲು ಬಡಿದು ಬಾಲಕ ಸಾವು; ಭಾರಿ ಮಳೆಗೆ ನಲುಗಿದ ಜನರು

Trust Of The Nation 2024
ಪ್ರಮುಖ ಸುದ್ದಿ1 hour ago

Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ

Modi in Karnataka PM Modi to address rally in Bengaluru Here live video
Lok Sabha Election 20242 hours ago

Modi in Karnataka: ಬೆಂಗಳೂರಲ್ಲಿ ಮೋದಿ ಸಮಾವೇಶ; ಇಲ್ಲಿದೆ LIVE ವಿಡಿಯೊ

Narendra Modi
ದೇಶ2 hours ago

Narendra Modi: ಅಮೇಥಿಯಂತೆ ವಯನಾಡಿನಲ್ಲೂ ರಾಹುಲ್‌ ಗಾಂಧಿಗೆ ಸೋಲು; ಮೋದಿ ಭವಿಷ್ಯ!

Horseshoe Septum Ring Fashion
ಫ್ಯಾಷನ್2 hours ago

Horseshoe Septum Ring Fashion: ಅಲ್ಟ್ರಾ ಮಾಡರ್ನ್‌ ಸ್ಟೈಲಿಂಗ್‌ ಪ್ರಿಯರ ಮನಗೆದ್ದ ಹಾರ್ಸ್‌ ಶೂ ಸೆಪ್ಟಮ್‌ ರಿಂಗ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ2 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20245 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ6 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ7 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌