Egg prices up | ಮೊಟ್ಟೆಯ ರಫ್ತಿಗೆ ಬೇಡಿಕೆ, ದರ ಗಣನೀಯ ಏರಿಕೆ - Vistara News

ಪ್ರಮುಖ ಸುದ್ದಿ

Egg prices up | ಮೊಟ್ಟೆಯ ರಫ್ತಿಗೆ ಬೇಡಿಕೆ, ದರ ಗಣನೀಯ ಏರಿಕೆ

ಮೊಟ್ಟೆಯ ಬಳಕೆ ಮತ್ತು ಬೇಡಿಕೆ ಇತ್ತೀಚಿನ ದಿನಗಳಲ್ಲಿ ಏರಿಕೆಯಾಗಿದೆ. ಆದರೆ ಇದರ ಬೆನ್ನಲ್ಲೇ ದರ ಕೂಡ ಜಿಗಿದಿದೆ. (Egg prices up) ಇದಕ್ಕೆ ಕಾರಣಗಳೇನು? ಇಲ್ಲಿದೆ ವಿವರ.

VISTARANEWS.COM


on

eggs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೂವಪ್ಪ ಐ ಹೆಚ್.
ಬೆಂಗಳೂರು : ಮೊಟ್ಟೆಯ ರಫ್ತಿಗೆ ಬೇಡಿಕೆ ಹೆಚ್ಚಳವಾಗಿದ್ದು, ಸ್ಥಳೀಯವಾಗಿ ದರ ಏರಿಕೆಯಾಗಿದೆ. (Egg prices up) ಒಂದು ಮೊಟ್ಟೆಯ ಬೆಲೆ 5.50 ರೂ.ನಿಂದ 6.50 ರೂ.ಗೆ ದಿಢೀರ್‌ ಹೆಚ್ಚಳವಾಗಿದೆ.

ಹಬ್ಬಗಳ ಸೀಸನ್‌ ಮುಕ್ತಾಯವಾದ ಬಳಿಕ ಮೊಟ್ಟೆಗೆ ಡಿಮಾಂಡ್‌ ಕೂಡ ವೃದ್ಧಿಸಿದೆ. ಚಳಿಗಾಲದಲ್ಲಿ ಮೊಟ್ಟೆಯ ಸೇವನೆಯೂ ಸಾಮಾನ್ಯವಾಗಿ ಹೆಚ್ಚಿರುತ್ತದೆ. ಈ ಎಲ್ಲ ಕಾರಣಗಳಿಂದಾಗಿ 100 ಮೊಟ್ಟೆಯ ಸಗಟು ದರ 420 ರೂ. ಇತ್ತು. ಈಗ 555 ರೂ.ಗೆ ಏರಿಕೆಯಾಗಿದೆ.
ಶಾಪಿಂಗ್ ಮಾಲ್ ಗಳಲ್ಲಿ ಹಾಗೂ ಆನ್ ಲೈನಲ್ಲಿ ಒಂದು ಮೊಟ್ಟೆಯ ದರ 7 ರೂ. ವರೆಗೂ ವೃದ್ಧಿಸಿದೆ.
ರಾಜ್ಯದಲ್ಲಿ ಪ್ರತಿ ದಿನ 1.80 ಲಕ್ಷ ಮೊಟ್ಟೆ ಉತ್ಪಾದನೆಯಾಗುತ್ತದೆ. ಪಕ್ಕದ ತಮಿಳುನಾಡಿನಲ್ಲಿ ಒಂದು ದಿನಕ್ಕೆ 1 ಕೋಟಿಗೂ ಹೆಚ್ಚು ಉತ್ಪಾದನೆಯಾಗುತ್ತದೆ. ಬೆಂಗಳೂರಿನಲ್ಲಿ ದಿನಕ್ಕೆ 70-80 ಲಕ್ಷ ಮೊಟ್ಟೆ ಬಳಕೆಯಾಗುತ್ತಿದೆ.

ತಮಿಳುನಾಡಿನಿಂದ ಬೆಂಗಳೂರಿಗೆ ದಿನಕ್ಕೆ 40-45 ಲಕ್ಷ ಮೊಟ್ಟೆ ಪೂರೈಕೆಯಾಗುತ್ತದೆ. ಈ ಬಾರಿ ಟರ್ಕಿಯಲ್ಲಿ ಮೊಟ್ಟೆ ಉತ್ಪಾದನೆಯ ಕೊರತೆಯಾಗಿದೆ. ಹೀಗಾಗಿ ಅಮೆರಿಕ ಮತ್ತು ಕತಾರ್ ಗೆ ಭಾರತದಿಂದ ಪ್ರತಿ ದಿನ ಅಂದಾಜು 40-50 ಲಕ್ಷ ಮೊಟ್ಟೆ ರಫ್ತಾಗುತ್ತಿದೆ. ಇದು ಕೂಡ ದರ ಏರಿಕೆಗೆ ಕಾರಣವಾಗಿದೆ ಎನ್ನುತ್ತಾರೆ ಬೆಂಗಳೂರಿನ ಗಂಗೇನಹಳ್ಳಿ ಮೊಟ್ಟೆ ಘಟಕದ ವ್ಯವಸ್ಥಾಪಕ ರವೀಂದ್ರ ರೆಡ್ಡಿ.

ಕೋಳಿ ಆಹಾರ ದರ ಹೆಚ್ಚಳ: ಕೋಳಿ ಸಾಕಾಣಿಕೆಯಲ್ಲಿ ಅಗತ್ಯವಿರುವ ಆಹಾರಗಳಾದ ಸೋಯಾ ಕಡಲೆಕಾಯಿ, ಸೂರ್ಯಕಾಂತಿ, ಅಕ್ಕಿ ನುಚ್ಚಿನ ದರದಲ್ಲಿ ಶೇ. 30 ತನಕ ದರ ಏರಿಕೆಯಾಗಿದೆ. ಮುಖ್ಯವಾಗಿ ಬಳಕೆಯಾಗುವ ಮೆಕ್ಕೆಜೋಳದ ಬೆಲೆ ಪ್ರತಿ ಕ್ವಿಂಟಾಲ್‌ಗೆ 1,300 ರೂ.ಗಳಿಂದ 2,300 ರೂ.ಗೆ ಏರಿಕೆಯಾಗಿದೆ. ಕಾರ್ಮಿಕರ ವೇತನ ವೆಚ್ಚದಲ್ಲೂ ಹೆಚ್ಚಳವಾಗಿದೆ. ಒಂದು ಮೊಟ್ಟೆಯ ಉತ್ಪಾದನಾ ವೆಚ್ಚ 5 ರೂ.ಗಿಂತ ಹೆಚ್ಚಾಗುತ್ತದೆ ಎನ್ನುತ್ತಾರೆ ಮಾರುಕಟ್ಟೆ ತಜ್ಞರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉದ್ಯೋಗ

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Job Alert: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್ 27 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ನಾಳೆ (ಜೂನ್‌ 30)ವರೆಗೆ ಅವಕಾಶ ಕಲ್ಪಿಸಲಾಗಿದೆ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS​) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ (ಆರ್​ಆರ್​ಬಿ) ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್ 27 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ನಾಳೆ (ಜೂನ್‌ 30)ವರೆಗೆ ಅವಕಾಶ ಕಲ್ಪಿಸಲಾಗಿದೆ (Job Alert).

ರಾಜ್ಯದ ಅಭ್ಯರ್ಥಿಗಳಿಗೆ ಹಿಂದಿ ಅಥವಾ ಇಂಗ್ಲಿಷ್ ಜತೆಗೆ ಕಳೆದ ಬಾರಿಯಂತೆ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್ ನೀಡಿದೆ.

ಕಳೆದ ಬಾರಿ 8,622 ಹುದ್ದೆಗಳಿಗೆ ನೇಮಕ ನಡೆಸಿದ ಐಬಿಪಿಎಸ್ ಈ ಬಾರಿ 9,995 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ನಡೆಯಲಿದೆ. ರಾಜ್ಯದ ಎರಡು ಬ್ಯಾಂಕುಗಳಲ್ಲಿ 586 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಒಟ್ಟು 200 ಹುದ್ದೆಗಳು ಮತ್ತು ಆಫೀಸರ್ ಸ್ಟೇಲ್-1-386 ಹುದ್ದೆಗಳಿವೆ. ಕಳೆದ ಬಾರಿ ರಾಜ್ಯದ ಈ ಎರಡೂ ಬ್ಯಾಂಕ್‌ಗಳಲ್ಲಿ 807 ಹುದ್ದೆಗಳಿಗೆ ನೇಮಕ ನಡೆದಿತ್ತು.

ಕರ್ನಾಟಕದ ಗ್ರಾಮೀಣ ಬ್ಯಾಂಕ್‌ಗಳಲ್ಲಿರುವ ಖಾಲಿ ಇರುವ ಹುದ್ದೆಗಳ ಮೀಸಲಾತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್)
ಬ್ಯಾಂಕ್ಎಸ್​ ಸಿ(SC)ಎಸ್​ಟಿ(ST)ಒಬಿಸಿ (NCL)*EWS*ಸಾಮಾನ್ಯTOTAL
ಕರ್ನಾಟಕ ಗ್ರಾಮೀಣ ಬ್ಯಾಂಕ್167271040100
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್167271040100
ಆಫೀಸರ್ ಸ್ಕೇಲ್-I
ಕರ್ನಾಟಕ ಗ್ರಾಮೀಣ ಬ್ಯಾಂಕ್43217729116286
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್157271041100
EWS-ಆರ್ಥಿಕ ವಾಗಿ ಹಿಂದುಳಿದ ವರ್ಗ   *NCL- ಕೆನೆ ಪದರ ಹೊರತಾದ

ಈಗ ನಿಗದಿಪಡಿಸಿರುವ ಹುದ್ದೆಗಳ ಸಂಖ್ಯೆಗಳು ಹೆಚ್ಚಾಗಲೂಬಹುದು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಮೀಸಲಿಟ್ಟ ಹುದ್ದೆಗಳ ಸಂಖ್ಯೆ ಏರಿಕೆಯಾಗಲೂಬಹುದು. ಆದ್ದರಿಂದ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನಿರಾಶರಾಗಬೇಕಾಗಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಜೂನ್ 7ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ವಯೋಮಿತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ 18 ರಿಂದ 28 ವರ್ಷಗಳು. ಆಫೀಸರ್ ಸ್ಕೇಲ್-I ಹುದ್ದೆಗೆ 18 ರಿಂದ 30 ವರ್ಷಗಳು.  ಎಸ್​.ಸಿ ಮತ್ತು ಎಸ್​.ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯ ಸಡಿಲಿಕೆ ಇದೆ. 

ಶೈಕ್ಷಣಿಕ ಅರ್ಹತೆ ಮತ್ತು ಅನುಭವಗಳೇನಿರಬೇಕು?

Group“B”-ಆಫೀಸ್ ಅಸಿಸ್ಟೆಂಟ್​ ಹುದ್ದೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಥಳೀಯ ಭಾಷೆ ತಿಳಿದಿರುವುದು ಅವಶ್ಯಕ. ಕಂಪ್ಯೂಟರ್​ನಿರ್ವಹಣಾ ಜ್ಞಾನ ಹೊಂದಿರುವುದು ಕಡ್ಡಾಯ.

Group“A”-Officers-ಆಫೀಸರ್ ಸ್ಕೇಲ್-I (ಸಹಾಯಕ ವ್ಯವಸ್ಥಾಪಕ)

ಯಾವುದೇ ವಿಷಯದಲ್ಲಿ ಪದವಿ. ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ, ಕೃಷಿ ಎಂಜಿನಿಯರಿಂಗ್, ಮೀನುಗಾರಿಕೆ, ಕೃಷಿ ಮಾರುಕಟ್ಟೆ ಮತ್ತು ಸಹಕಾರ, ಮಾಹಿತಿ ತಂತ್ರಜ್ಞಾನ, ನಿರ್ವಹಣೆ, ಕಾನೂನು, ಅರ್ಥಶಾಸ್ತ್ರ ಅಥವಾ ಲೆಕ್ಕಶಾಸ್ತ್ರದಲ್ಲಿ ಪದವಿ ಹೊಂದಿರುವವರಿಗೆ ಆದ್ಯತೆ. ಆದರೆ ಸ್ಥಳೀಯ ಭಾಷೆ ತಿಳಿದಿರಬೇಕಾದುದು ಅವಶ್ಯಕ. ಕಂಪ್ಯೂಟರ್ ನಿರ್ವಹಣಾ ಜ್ಞಾನ ಕಡ್ಡಾಯ.

ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಸ್ಟೇಲ್-1ಕ್ಕೆ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಹೊಂದಿರುವುದು ಅವಶ್ಯ. 8ನೇ ತರಗತಿಯವರೆಗೆ ಅಥವಾ ಅದಕ್ಕೂ ಮೇಲ್ಪಟ್ಟು ಸ್ಥಳೀಯ ಭಾಷೆಯ ಮಾಧ್ಯಮದಲ್ಲಿ ಓದಿದವವರನ್ನು ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಪಡೆದ ಅಭ್ಯರ್ಥಿ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಯು ಸ್ಥಳೀಯ ಭಾಷೆಯನ್ನು ಸರಿಯಾಗಿ ತಿಳಿದಿಲ್ಲ ಎಂಬುದು ಆಯ್ಕೆಯ ಸಂದರ್ಭದಲ್ಲಿ ಗಮನಕ್ಕೆ ಬಂದಲ್ಲಿ, ಅಂತಹ ಅಭ್ಯರ್ಥಿಗಳಿಗೆ ಭಾಷೆಯನ್ನು ಕಲಿತುಕೊಳ್ಳಲು 6 ತಿಂಗಳ ಕಾಲಾವಕಾಶ ನೀಡಲಾಗುತ್ತದೆ.

ಇತ್ತ ಗಮನಿಸಿ

ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆ, ಎರಡಕ್ಕೂ ಅರ್ಜಿ ಸಲ್ಲಿಸಬಹುದು.

ಕ್ರೆಡಿಟ್ ಇತಿಹಾಸ

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಬ್ಯಾಂಕ್ ​ಖಾತೆ ಹೊಂದಿದ್ದರೆ, ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸವನ್ನು ಹೊಂದಿರಬೇಕು ಮತ್ತು ಬ್ಯಾಂಕ್ ಹುದ್ದೆಗೆ ನೇಮಕವಾಗುವ ಸಮಯದಲ್ಲಿ ಕನಿಷ್ಠ CIBIL ಸ್ಕೋರ್  ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತಪಡಿಸಿ ಕೊಳ್ಳಬೇಕು.
  • ಸೇರುವ ದಿನಾಂಕದ ಮೊದಲು CIBIL ಸ್ಥಿತಿಯನ್ನು ನವೀಕರಿಸದಿದ್ದರೆ, ಮೊದಲು ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ NOC ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ / ರದ್ದುಗೊಳಿಸಲಾಗುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹850 ಹಾಗೂ ಎಸ್​ಸಿ/ಎಸ್​ಟಿ/ ಅಂಗವಿಕಲರು / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹175 ಶುಲ್ಕ ನಿಗದಿಪಡಿಸಲಾಗಿದೆ. ಆನ್​ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಪರೀಕ್ಷಾ ಪೂರ್ವ ತರಬೇತಿ(PRE-EXAMINATION TRAINING (PET)

ಎಸ್ಸಿ/ಎಸ್ಟಿ/ ಅಲ್ಪಸಂಖ್ಯಾತ ಅಭ್ಯರ್ಥಿಗಳು / ಮಾಜಿ ಸೈನಿಕರು / ವಿಶೇಷಚೇತನ ಅಭ್ಯರ್ಥಿಗಳಿಗೆ ಐಬಿಪಿಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ತರಬೇತಿ ಪಡೆಯಬಹುದು. ಈ ತರಬೇತಿ ಪಡೆಯುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅದಕ್ಕಾಗಿ ಮೀಸಲಿಟ್ಟ ಕಾಲಂನಲ್ಲಿ ನಮೂದಿಸಬೇಕು. ಇದರ ಖರ್ಚು ಮೆಚ್ಚಗಳನ್ನು ಅಭ್ಯರ್ಥಿಗಳೇ ಭರಿಸಬೇಕಾಗುತ್ತದೆ. ರಾಜ್ಯದಲ್ಲಿ ಧಾರವಾಡದಲ್ಲಿ ಮಾತ್ರ ತರಬೇತಿ ನೀಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು,ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

ಮುಖ್ಯ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಮತ್ತು ಉಡುಪಿ(ಮಂಗಳೂರು ಹೊರತು ಪಡಿಸಿ)

ಈ ಬಾರಿಯ ಬದಲಾವಣೆಗಳೇನು?

ಈ ಬಾರಿ ಅರ್ಜಿ ಸಲ್ಲಿಸುವಾಗ ಪರೀಕ್ಷೆಗೆ ಅಭ್ಯರ್ಥಿಗಳು ತರುವ ಗುರುತಿನ ಪತ್ರದ (ಐಡಿ ಪ್ರೂಫ್​) ಸಂಖ್ಯೆ ನೀಡುವುದು ಕಡ್ಡಾಯ. ಆ ಸಂಖ್ಯೆ ಅಭ್ಯರ್ಥಿ ಸಲ್ಲಿಸಿದ ಅರ್ಜಿಯಲ್ಲಿರುವ ಹೆಸರಿನೊಂದಿಗೆ ಹೊಂದಾಣಿಕೆಯಾಗಬೇಕು. ಈ ಬಾರಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷಾ ಸ್ಥಳದಲ್ಲಿ ಸಂಗ್ರಹಿಸಲಾಗುವುದಿಲ್ಲ. ಬದಲಿಗೆ, ಇದನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದ ಧೃಡಪಡಿಸಿಕೊಳ್ಳಬೇಕು. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಯ ಪ್ರವೇಶ ಪತ್ರದೊಂದಿಗೆ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ದೃಢೀಕರಣಗೊಂಡ ಪ್ರವೇಶ ಪತ್ರವನ್ನೂ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು

  • ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಎರಡಕ್ಕೂ ಅರ್ಜಿ ಸಲ್ಲಿಸಬಹುದು.ಆದರೆ ಆಫೀಸರ್ ಕೇಡರ್​ನಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು.
  • ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಯು ತನ್ನ ಕೈ ಬರಹದ ಪ್ರಮಾಣಪತ್ರವನ್ನು ಸ್ಕ್ಯಾನ್ ಮಾಡಿ   ಅರ್ಜಿಯೊಂದಿಗೆ ಅಪ್ ಲೋಡ್ ಮಾಡಬೇಕು. ಕ್ಯಾಪಿಟಲ್ ಲೆಟರ್ಸ್​ನಲ್ಲಿ ಬರೆದ ಡಿಕ್ಲರೇಷನ್ ಮತ್ತು ಸಹಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
  • ಅರ್ಜಿ ಸಲ್ಲಿಕೆ, ಅಧಿಸೂಚನೆ ಕುರಿತ ಹೆಚ್ಚಿನ ಮಾಹಿತಿಗಾಗಿ www.ibps.in/ಜಾಲತಾಣಕ್ಕೆ ಭೇಟಿ ನೀಡಿ.
  • ನೀವು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕೆಂದಿದ್ದರೆ ಇ-ಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ಹೊಂದಿರಬೇಕಾಗಿರುವುದು ಕಡ್ಡಾಯ. ಆದ್ದರಿಂದ ಇ-ಮೇಲ್ ಅಕೌಂಟ್ ಇಲ್ಲದಿದ್ದರೆ ಅರ್ಜಿ ಸಲ್ಲಿಸುವ ಮುನ್ನವೇ ಕ್ರಿಯೇಟ್ ಮಾಡಿಕೊಳ್ಳಿ. ಹಾಗೆಯೇ ಅರ್ಜಿಯಲ್ಲಿ ನಮೂದಿಸಿದ ಇ-ಮೇಲ್ ಐ.ಡಿ.ಯನ್ನು ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಿ.
  • ಅರ್ಜಿ ಸಲ್ಲಿಸುವಾಗ ಒಂದೇ ಬಾರಿಗೆ ಎಲ್ಲ ಮಾಹಿತಿಯನ್ನು ತುಂಬಬೇಕೆಂಬ ನಿಯಮವೇನಿಲ್ಲ. ಡೇಟಾ ಸೇವ್ ಮಾಡಿ ಎಲ್ಲ ಮಾಹಿತಿಯನ್ನು ತುಂಬಿದ ನಂತರವೇ final submit ಬಟನ್ ಒತ್ತಿ.

ಇತ್ತ ಗಮನಿಸಿ

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 27, 2024
  • ಪೂರ್ವಭಾವಿ ಪರೀಕ್ಷೆ ತರಬೇತಿಗೆ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳುವುದು: ಜುಲೈ
  • ಪೂರ್ವಭಾವಿ ಪರೀಕ್ಷೆಗೆ ತರಬೇತಿ: ಜುಲೈ 22-27
  • ಪೂರ್ವಭಾವಿ ಪರೀಕ್ಷೆಗೆ ಪ್ರವೇಶಪತ್ರ ಲಭ್ಯ ಜುಲೈ/ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆ: ಆಗಸ್ಟ್, 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಆಗಸ್ಟ್/ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆ ನಡೆಯುವುದು ಸೆಪ್ಟೆಂಬರ್ / ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಫಲಿತಾಂಶ ಅಕ್ಟೋಬರ್, 2024
  • ಸಂದರ್ಶನ ನಡೆಯುವುದು: ನವೆಂಬರ್, 2024
  • ನೇಮಕ ಶಿಫಾರಸು: ಜನವರಿ, 2025

ಆಯ್ಕೆ ಹೇಗೆ?

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ​ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೂರು ಹಂತಗಳಲ್ಲಿ ಪರೀಕ್ಷೆ(ಪೂರ್ವ ಭಾವಿ/ ಮುಖ್ಯ ಪರೀಕ್ಷೆ/ ಸಂದರ್ಶನ-ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ) ನಡೆಸಲಾಗುತ್ತದೆ. ಪರೀಕ್ಷೆಯ ಸ್ವರೂಪ ಹೇಗಿರುತ್ತದೆ ಎಂಬ ವಿವರಣೆ ಇಲ್ಲಿದೆ.

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪ ಸ್ )/ ಸ್ಕೇಲ್–I ಅಧಿಕಾರಿ ಪೂರ್ವ ಭಾವಿ ಪರೀಕ್ಷೆ:

ಕ್ರ.ಸಂ.ಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ
1ತಾರ್ಕಿಕ  ಪರೀಕ್ಷೆ (Reasoning)    ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದರೊಂದು ಭಾಷೆಯ ಆಯ್ಕೆ4040      ಸಂಯೋಜಿತ ಸಮಯ;45 ನಿಮಿಷಗಳು
2ಸಂಖ್ಯಾತ್ಮಕ ಸಾಮರ್ಥ್ಯ  (Numerical Ability)/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ (Quantitative Aptitude)  40  40
 ಒಟ್ಟು 8080 

ಮುಖ್ಯ ಪರೀಕ್ಷೆ

(ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ )/ಸ್ಕೇಲ್–I ಅಧಿಕಾರಿ):

ಕ್ರ .ಸಂಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ  
1ತಾರ್ಕಿಕ ಪರೀಕ್ಷೆಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050    2 ಗಂಟೆಗಳ ಸಂಯೋಜಿತ ಸಮಯ
2ಕಂಪ್ಯೂಟರ್ ಜ್ಞಾನ4020
3ಸಾಮಾನ್ಯ ಅರಿವು (General Awareness)4040
4a*ಆಂಗ್ಲ ಭಾಷೆಇಂಗ್ಲಿಷ್4040
5b*ಹಿಂದಿ ಭಾಷೆಹಿಂದಿ4040
6ಸಂಖ್ಯಾತ್ಮಕ ಸಾಮರ್ಥ್ಯ/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಟೆಸ್ಟ್ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050
 ಒಟ್ಟು 200200 
(*ಅಭ್ಯರ್ಥಿಗಳು 4 a ಅಥವಾ 4 b ಆಯ್ಕೆ ಮಾಡಬಹುದು)

ಕರ್ನಾಟಕದ ಅಭ್ಯರ್ಥಿಗಳು ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದ ರೊಂದು ಭಾಷೆಯ ಆಯ್ಕೆ ಮಾಡಿಕೊಳ್ಳಬಹುದು. ಆನ್ಲೈ ನ್ ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆಯನ್ನು ಆಯ್ಕೆ ಮಾಡಿಕೊಂಡಿರಬೇಕು. ಅದೇ ಭಾಷೆಯಲ್ಲೇ ಪರೀಕ್ಷೆ ಬರೆಯಬೇಕು (ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ).

ಗಮನಿಸಿ

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ ) ಪರೀಕ್ಷೆ ಬರೆಯುವವರು ಗಣಿತಕ್ಕೆ ಸಂಬಂಧಿಸಿದಂತೆ ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆ ಬರೆಯಬೇಕು ಹಾಗೂ ಅಧಿಕಾರಿ ಸ್ಕೇಲ್-I ಹುದ್ದೆಗಾಗಿ ಪರೀಕ್ಷೆ ಬರೆಯುವವರು ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆ ಬರೆಯಬೇಕು.

ಕ್ಲಿಷ್ಟತೆಯ ಮಟ್ಟ

ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಳೀಕರಣ, ಸಂಖ್ಯಾ ಸರಣಿ, ಅಂಕಗಣಿತದ ಪ್ರಶ್ನೆಗಳು, ಬೀಜಗಣಿತದ ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆ ಮೂಲಕ ಅಭ್ಯರ್ಥಿಗೆ ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಆ ಪ್ರಶ್ನೆಗಳಲ್ಲಿ ತಾರ್ಕಿಕ ಅಂಶವಿರುವುದಿಲ್ಲ.

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ವಿಷಯದಲ್ಲಿ ತಾರ್ಕಿಕ ಅರ್ಹತೆ ಮತ್ತು ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಇದು ಎರಡೂ ವಿಷಯಗಳ ಸಂಯೋಜನೆ. ಇದರಲ್ಲಿ ಪ್ರಶ್ನೆಗಳು ತುಂಬಾ ಕಠಿಣವಾಗಿರುವುದಿಲ್ಲ, ಆದರೆ ಇವುಗಳನ್ನು ಬಿಡಿಸಲು ಹೆಚ್ಚು ಅಭ್ಯಾಸ ಮಾಡಿರಬೇಕು. ಆದ್ದರಿಂದ ನೀವು ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ಸಮಯವನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ಅರಿಯುವಿರಿ. ಆದರೆ ಚಕ್ರ ಬಡ್ಡಿ(compound interest) ಕುರಿತ ಪ್ರಶ್ನೆಗಳು ಬಿಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಅವುಗಳನ್ನು ವಿಭಾಗದ ಕೊನೆಯಲ್ಲಿ ಬಿಡಿಸಬೇಕು.

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ, ಸಂಭವನೀಯತೆ, ಕ್ರಮಪಲ್ಲಟನೆ ಮತ್ತು ಸಂಯೋಜನೆ, ಡೇಟಾ ಸಮರ್ಪಕತೆ ಸರಾಸರಿ, ಶೇಕಡಾವಾರು, ಗುಣಾಕಾರ, ಭಾಗಾಕಾರ, ವರ್ಗ ಮೂಲಗಳು, A.P, G.P ಸೇರಿದಂತೆ ಸಂಖ್ಯಾ ಲೆಕ್ಕಾಚಾರದ ಪ್ರಶ್ನೆಗಳ ವಿಷಯದ ಮೇಲೆ ಪ್ರಶ್ನೆಗಳಿರುತ್ತವೆ. ಸರಳ ಮತ್ತು ಚಕ್ರ ಬಡ್ಡಿ, ಲಾಭ/ನಷ್ಟ ಕುರಿತ ಪ್ರಶ್ನೆಗಳೂ ಇರುತ್ತವೆ. ಕೆಲಸದ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳು ಉದಾ: 3 ಜನರು ಒಂದು ಕೆಲಸವನ್ನು 5 ದಿನಗಳಲ್ಲಿ ಮಾಡಿದರೆ 7 ಜನರು ಆ ಕೆಲಸವನ್ನು ಮಾಡಲು ಎಷ್ಟು ಸಮಯ ತೆಗೆದುಕೊಳ್ಳುತ್ತಾರೆ ಇಂಥವೂ ಇರುತ್ತವೆ.

ಇದನ್ನೂ ಓದಿ: Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ

ಋಣಾತ್ಮಕ ಮೌಲ್ಯಮಾಪನ ಇದೆ

ವಸ್ತುನಿಷ್ಠ ಮಾದರಿಯ ಪರೀಕ್ಷೆಗಳಲ್ಲಿಋಣಾತ್ಮಕ ಮೌಲ್ಯಮಾಪನ ಇದೆ. ಒಂದು ತಪ್ಪು ಉತ್ತರಕ್ಕೆ, ಅದಕ್ಕೆ ನಿಗದಿಪಡಿಸಿದ ಅಂಕಗಳಲ್ಲಿ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪ್ರಶ್ನೆ ಖಾಲಿ ಬಿಟ್ಟರೆ, ಯಾವುದೇ ಅಂಕ ಕಳೆಯುವುದಿಲ್ಲ.ಎಲ್ಲ ಹಂತದ ಋಣಾತ್ಮಕ ಮೌಲ್ಯಮಾಪನದಲ್ಲೂ ಇದೇ ನಿಯಮ ಅನ್ವಯಿಸುತ್ತದೆ.

ಆಯ್ಕೆ ವಿಧಾನ

ಹುದ್ದೆಗಳಿಗೆ ಆಯ್ಕೆ ಮಾಡುವಾಗ ಮುಖ್ಯ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು. ಪ್ರತಿ ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಆಧರಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ತಯಾರಿಸಲಾಗುತ್ತದೆ.

  • ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ-ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಗಳನ್ನು ಮಾತ್ರ  ಅಂತಿಮ ಮೆರಿಟ್ ಪಟ್ಟಿಗಾಗಿ ಪರಿಗಣಿಸಲಾಗುತ್ತದೆ. ಈ ಹುದ್ದೆಯ ನೇಮಕ ಪ್ರಕ್ರಿಯೆಯಲ್ಲಿ ಸಂದರ್ಶನ ಇರುವುದಿಲ್ಲ.
  • ಅಧಿಕಾರಿಗಳ ಹುದ್ದೆಗೆ ಸ್ಕೇಲ್-I ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕವನ್ನು ಪರಿಗಣಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಸಂದರ್ಶನ

ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ (ಸ್ಕೇಲ್ I) ಆಫೀಸರ್ಸ್ ಸ್ಕೇಲ್-I ಹುದ್ದೆಗೆ ಮುಖ್ಯ ಪರೀಕ್ಷೆಯಲ್ಲಿ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ನಿಗದಿಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಸಾಮಾನ್ಯ ವರ್ಗಕ್ಕೆ ಶೇ40. ಎಸ್.ಸಿ/ಎಸ್.ಟಿ/ಒಬಿಸಿ/ಅಂಗವಿಕಲ ಅಭ್ಯರ್ಥಿಗಳಿಗೆ ಶೇ 35.

ಇದನ್ನೂ ಓದಿ: Job Alert: ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Continue Reading

ಕರ್ನಾಟಕ

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

Shivamogga News: ಶಿವಮೊಗ್ಗದಿಂದ ಹಾವೇರಿ ಕಡೆ ಆಂಬುಲೆನ್ಸ್‌ ತೆರಳುತ್ತಿತ್ತು. ಇದೇ ವೇಳೆ ಶಿಕಾರಿಪುರ ಕಡೆಯಿಂದ ಜೋಗದ ಕಡೆ ತೆರಳುತ್ತಿದ್ದ ಬೈಕ್‌, ತರಲಘಟ್ಟ ಗ್ರಾಮದ ಬಳಿ ಆಂಬುಲೆನ್ಸ್‌ಗೆ ಡಿಕ್ಕಿಯಾಗಿದೆ. ಮೃತರನ್ನು ಜೋಗದ ನಿವಾಸಿಗಳು ಎಂಬುದಾಗಿ ಗುರುತಿಸಲಾಗಿದೆ.

VISTARANEWS.COM


on

Shivamogga News
Koo

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಶುಕ್ರವಾರ (ಜೂನ್‌ 28) ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಬುಲೆನ್ಸ್‌ ಹಾಗೂ ಬೈಕ್‌ ಡಿಕ್ಕಿಯಾಗಿದ್ದು, ಮೂವರು ಬೈಕ್‌ ಸವಾರರು ಮೃತಪಟ್ಟಿದ್ದಾರೆ. ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಎಂಬುದಾಗಿ ಗುರುತಿಸಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಬೈಕ್‌, ಸವಾರನ ನಿಯಂತ್ರಣ ತಪ್ಪಿ ಆಂಬುಲೆನ್ಸ್‌ಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ತಡರಾತ್ರಿ ಶಿವಮೊಗ್ಗದಿಂದ ಹಾವೇರಿ ಕಡೆ ಆಂಬುಲೆನ್ಸ್‌ ತೆರಳುತ್ತಿತ್ತು. ಇದೇ ವೇಳೆ ಶಿಕಾರಿಪುರ ಕಡೆಯಿಂದ ಜೋಗದ ಕಡೆ ತೆರಳುತ್ತಿದ್ದ ಬೈಕ್‌, ತರಲಘಟ್ಟ ಗ್ರಾಮದ ಬಳಿ ಆಂಬುಲೆನ್ಸ್‌ಗೆ ಡಿಕ್ಕಿಯಾಗಿದೆ. ಮೃತರನ್ನು ಜೋಗದ ನಿವಾಸಿಗಳು ಎಂಬುದಾಗಿ ಗುರುತಿಸಲಾಗಿದೆ. ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಜಿರೆಯಲ್ಲಿ ಅಪಘಾತ; ಉದ್ಯಮಿ ಪುತ್ರನ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಜಿರೆ ಉದ್ಯಮಿ ಎಂ.ಆರ್‌.ನಾಯಕ್‌ ಅವರ ಪುತ್ರ ಪ್ರಜ್ವಲ್‌ ಮೃತಪಟ್ಟಿದ್ದಾರೆ. ಉಜಿರೆ ಬಳಿಕ ಕಾರು ವೇಗವಾಗಿ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ್ದು, ಡಿವೈಡರ್‌ ಮೇಲೇರಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದೆ. ಶನಿವಾರ (ಜೂನ್‌ 6) ಬೆಳಗ್ಗೆ ಅಪಘಾತ ಸಂಭವಿಸಿದ್ದು, ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಘಟನೆ ನಡೆದಿದೆ.

ಹಾವೇರಿ ಬಳಿ ಶುಕ್ರವಾರ (ಜೂನ್‌ 28) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದ 13 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಶವಗಳನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಸಂಬಂಧಿಕರು, ಗ್ರಾಮಸ್ಥರು ಆಗ್ರಹಿಸಿದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

ಇದನ್ನೂ ಓದಿ: Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

Continue Reading

ಕ್ರೀಡೆ

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

IND vs SA Final: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಂಡಿತ್ತು.

VISTARANEWS.COM


on

IND vs SA Final
Koo

ಬಾರ್ಬಡೋಸ್​: ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿಯ(IND vs SA Final) ಲೀಗ್​, ಸೂಪರ್-8 ಮತ್ತು ನಾಕೌಟ್​ ಪಂದ್ಯಗಳಿಗೆ ಮಳೆಯಿಂದ ಅಡಚಣೆ ಉಂಟಾಗಿತ್ತು. ಇದೀಗ ಇಂದು ನಡೆಯುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಫೈನಲ್​ ಪಂದ್ಯಕ್ಕೂ ಭಾರೀ ಮಳೆ ಭೀತಿ ಎದುರಾಗಿದೆ.

ಫೈನಲ್​ ಪಂದ್ಯಕ್ಕೂ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಒಂದೊಮ್ಮೆ ನಿಗದಿತ ದಿನ ಪಂದ್ಯ ನಡೆಯದೇ ಇದ್ದರೆ, ಮೀಸಲು ದಿನಕ್ಕೆ ಮುಂದುವರಿಯಲಿದೆ. ಸೂಪರ್​ 8 ಹಂತದಲ್ಲಿ ಮತ್ತು ಸೆಮಿಫೈನಲ್​ ಪಂದ್ಯ ಮಳೆಯಿಂದ ಮೀಸಲು ದಿನವೂ ಫಲಿತಾಂಶ ಕಾಣದಿದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಥಾನ ಮುಂದಿನ ಹಂತಕ್ಕೇರುತ್ತದೆ. ಆದರೆ ಫೈನಲ್​ ಪಂದ್ಯಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ.

ಮುಖಾಮುಖಿ


ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೆ 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 14 ಪಂದ್ಯ ಗೆದ್ದರೆ, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಂಡಿತ್ತು.

ಜಂಟಿ ವಿಜೇತರ ಘೋಷಣೆ


ಒಂದು ವೇಳೆ ಫೈನಲ್‌(T20 World Cup 2024) ಪಂದ್ಯ ಮೀಸಲು ದಿನದಲ್ಲಿಯೂ ನಡೆಯದೇ ಹೋದರೆ, ಆಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ. 2002ರಲ್ಲಿ ಶ್ರೀಲಂಕಾದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಮಳೆಯಿಂದ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಭಾರತ ಮತ್ತು ಆತಿಥೇಯ ಶ್ರೀಲಂಕಾ ಎರಡು ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಲಾಗಿತ್ತು.

ಕೊಲಂಬೊದಲ್ಲಿ ನಡೆದಿದ್ದ ಆ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಶ್ರೀಲಂಕಾ 5 ವಿಕೆಟ್​ಗೆ 244 ರನ್ ಗಳಿಸಿತು. ಭಾರತ ವಿಕೆಟ್ ನಷ್ಟವಿಲ್ಲದೆ 14 ರನ್ ಗಳಿದ ವೇಳೆ ಜೋರಾಗಿ ಮಳೆ ಸುರಿಯಿತು. ಮಳೆ ಬಿಡುವು ನೀಡದೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಯಿತು. ಇದೀಗ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಪಂದ್ಯ ಕೂಡ ಪೂರ್ಣ ಫಲಿತಾಂಶ ಕಾಣದಿದ್ದರೆ ಇತ್ತಂಡಗಳು ಕೂಡ ಜಂಟಿ ಚಾಂಪಿಯನ್​ ಎನಿಸಿಕೊಳ್ಳಲಿದೆ. ಭಾರತ 2ನೇ ಕಪ್​ ಗೆದ್ದರೆ, ದಕ್ಷಿಣ ಆಫ್ರಿಕಾ ಚೊಚ್ಚಲ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿದಂತಾಗುತ್ತದೆ.

Continue Reading

ಕರ್ನಾಟಕ

Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

Actor Darshan: ಶನಿವಾರ ಬೆಳಗ್ಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು (Parappana Agrahara) ಸೇರಿರುವ ನಟ ದರ್ಶನ್‌ (Actor Darshan) ಅವರಿಗೆ ಜೈಲಿನ ಮೆನು ಪ್ರಕಾರವೇ ಊಟ ನೀಡಲಾಗುತ್ತಿದೆ. ಅದರಂತೆ, ಶುಕ್ರವಾರ (ಜೂನ್‌ 28) ರಾತ್ರಿ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌, ಮುದ್ದೆ ಹಾಗೂ ಅನ್ನವನ್ನು ನೀಡಲಾಗಿದೆ. ಜೈಲಿನ ಅನ್ನ-ಸಾಂಬಾರ್‌ ತಿಂದು ಬಸವಳಿದಿದ್ದ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌ ನೀಡಿರುವುದು ತುಸು ಸಮಾಧಾನ ತಂದಿದೆ. ಮುದ್ದೆ, ಚಿಕನ್‌ ಸಾಂಬಾರ್‌ ಸೇವಿಸಿದ ದರ್ಶನ್‌ ತಡವಾಗಿ ನಿದ್ದೆಗೆ ಜಾರಿದರು ಎಂದು ತಿಳಿದುಬಂದಿದೆ.

ಶನಿವಾರ (ಜೂನ್‌ 29) ಬೆಳಗ್ಗೆ 6 ಗಂಟೆಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಇದರ ಮಧ್ಯೆಯೇ, ನಟ ದರ್ಶನ್‌ ಅವರನ್ನು ನೋಡಲು ಜೈಲಿನಲ್ಲಿರುವ ಕೈದಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಕೂಡ ತಿಳಿದುಬಂದಿದೆ.

Actor Darshan

6106 ಸ್ಟಿಕ್ಕರ್‌ಗಳಿಗೆ ಡಿಮ್ಯಾಂಡ್

ʻʻಡಿ 6106ʼʼಎಂದು ಒಬ್ಬ ಅಭಿಮಾನಿ ಕೈ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ದರ್ಶನ್ ಕೈದಿ ನಂಬರ್‌ನಲ್ಲಿಯೇ ಮೊಬೈಲ್ ಕವರ್‌ ಕೂಡ ಬಂದಿದೆ. ಬೈಕ್,ಆಟೋಗಳ ಹಿಂದೆ ಕೂಡ ಇದೇ ಕೈದಿ ನಂಬರ್ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ತಮ್ಮ ವಾಹನಗಳಿಗೆ ಈ ರೀತಿಯ ಸ್ಟಿಕ್ಕರ್‌ವನ್ನು ನೂರಾರು ಫ್ಯಾನ್ಸ್‌ ಹಾಕಿಕೊಂಡು ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡುತ್ತಿದ್ದಾರೆ. ಕೈದಿ ನಂಬರ್ 6106 ಸೋಶಿಯಲ್ ಮೀಡಿಯಾಗಳಲ್ಲಿ ಮತ್ತೆ ಟ್ರೆಂಡಿಂಗ್ ಆಗುತ್ತಿದೆ.

ಸದ್ಯ ಈಗ ಕೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಇದೆ ಎನ್ನಲಾಗಿದ್ದು ವಿಭಿನ್ನ ಬಣ್ಣ, ವಿನ್ಯಾಸದಲ್ಲಿ ದರ್ಶನ್ ಫ್ಯಾನ್ಸ್ ಇದನ್ನು ಮಾಡಿಸಿಕೊಂಡು ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ.ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇತ್ತೀಚೆಗೆ ಅವರ ವಿಶೇಷ ಚೇತನ ಅಭಿಮಾನಿಯೊಬ್ಬರು ಅವರನ್ನು ನೋಡಲು ಬಂದಿದ್ದರು. ಈ ಘಟನೆಯ ನಂತರ ಅಭಿಮಾನಿಗಳಿಗೆ ನಟ ದರ್ಶನ್ ಮನವಿ ಮಾಡಿದ್ದು ಜೈಲಿನಿಂದಲೇ ನಟ ದರ್ಶನ್ ಮನವಿ ತಿಳಿಸಿದ್ದಾರೆ.

ಇದನ್ನೂ ಓದಿ: Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

Continue Reading
Advertisement
Job Alert
ಉದ್ಯೋಗ25 mins ago

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Kannada New Movie Kenda in premier In world wide
ಸ್ಯಾಂಡಲ್ ವುಡ್29 mins ago

Kannada New Movie: ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ `ಕೆಂಡ’!

Orange Peel Benefits
ಆರೋಗ್ಯ30 mins ago

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Shivamogga News
ಕರ್ನಾಟಕ30 mins ago

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

IND vs SA Final
ಕ್ರೀಡೆ32 mins ago

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

Kalki 2898 AD box office day 2 prediction Prabhas
ಟಾಲಿವುಡ್42 mins ago

Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

US Presidential Election
ವಿದೇಶ57 mins ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

IND vs SA Final
ಕ್ರೀಡೆ60 mins ago

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

Sadhguru Jaggi Vasudev
ಆರೋಗ್ಯ60 mins ago

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Kannada New Movie niveditha Shivarajkumar frefly cinema sudharani join
ಸಿನಿಮಾ1 hour ago

Kannada New Movie: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌