EPF e-passbook facility downEPF e-passbook : UMANG ಆ್ಯಪ್‌ನಲ್ಲಿ ನಿಮ್ಮ ಪಿಎಫ್ ಪಾಸ್‌ಬುಕ್‌ ಸುಲಭವಾಗಿ ಪರಿಶೀಲಿಸಿ - Vistara News

ಪ್ರಮುಖ ಸುದ್ದಿ

EPF e-passbook : UMANG ಆ್ಯಪ್‌ನಲ್ಲಿ ನಿಮ್ಮ ಪಿಎಫ್ ಪಾಸ್‌ಬುಕ್‌ ಸುಲಭವಾಗಿ ಪರಿಶೀಲಿಸಿ

EPF e-passbook ಮೂಲಕ ನೌಕರರು ಪಿಎಫ್‌ ಖಾತೆಯ ವಿವರ ಪರಿಶೀಲಿಸಬಹುದು. ಪಿಎಫ್‌ ಬ್ಯಾಲೆನ್ಸ್‌ ಅನ್ನು ಉಮಂಗ್‌ ಆ್ಯಪ್‌ ಮೂಲಕ ನೋಡಬಹುದು. ವಿವರ ಇಲ್ಲಿದೆ.

VISTARANEWS.COM


on

After RBI EPFO also blocks Paytm Payments Bank
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೆಲವು ಬಾರಿ ತಾಂತ್ರಿಕ ಅಡಚಣೆಯ ಪರಿಣಾಮ ಇಪಿಎಫ್‌ಒ ವೆಬ್‌ ಪೋರ್ಟಲ್‌ನಲ್ಲಿ ಪಿಎಫ್‌ ಪಾಸ್‌ಬುಕ್‌ ಅನ್ನು ನೋಡಲು ಮತ್ತು ಡೌನ್‌ಲೋಡ್‌ ಮಾಡಿಕೊಳ್ಳಲು ಸಾಧ್ಯ ಆಗದಿರಬಹುದು. ಆದರೆ, (EPF e-passbook ) ಇಪಿಎಫ್‌ಒ ತನ್ನ ವೆಬ್‌ಸೈಟ್‌ನಲ್ಲಿ ಸದಸ್ಯರು UMANG ಆ್ಯಪ್‌ನಲ್ಲಿ ಇ-ಪಾಸ್‌ಬುಕ್‌ ಅನ್ನು ವೀಕ್ಷಿಸಬಹುದು. ಇದು ಹೇಗೆ ಸಾಧ್ಯ? ಇಲ್ಲಿದೆ ವಿವರ.

UMANG ಆ್ಯಪ್‌ನಲ್ಲಿ ಇಪಿಎಫ್‌ ಪಾಸ್‌ಬುಕ್‌ ಅನ್ನು ವೀಕ್ಷಿಸುವುದು ಹೀಗೆ:

Step 1 : ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ UMANG app ಅನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ ಮತ್ತು ನಿಮ್ಮ ಖಾತೆಗೆ ಲಾಗಿನ್‌ ಆಗಿ.

Step 2 : EPFO ಪದವನ್ನು ಸರ್ಚ್‌ ಬಾರ್‌ನಲ್ಲಿ ಎಂಟರ್‌ ಮಾಡಿ. ಸರ್ಚ್‌ಗೆ ಕ್ಲಿಕ್ಕಿಸಿ

Step 3 : view passbook ಸೆಲೆಕ್ಟ್‌ ಮಾಡಿ.

Step 4 : UAN ಸಂಖ್ಯೆ ನಮೂದಿಸಿ, OTP ಪ್ರಕ್ರಿಯೆ ಪೂರ್ಣಗೊಳಿಸಿ.

Step 5 : member ID ಸೆಲೆಕ್ಟ್‌ ಮಾಡಿ, ಇ-ಪಾಸ್‌ ಬುಕ್‌ ಡೌನ್‌ ಲೋಡ್‌ ಮಾಡಿ.

EPF balance ಪರಿಶೀಲಿಸಲು ಮತ್ತಷ್ಟು ವಿಧಾನಗಳು ಇಂತಿವೆ.

https://twitter.com/maapsworld/status/1244966967045509122?s=20

SMS ಕಳಿಸುವ ಮೂಲಕ EPF ಚೆಕ್‌ ಮಾಡುವುದು ಹೇಗೆ?

ನೀವು 7738299899 ಸಂಖ್ಯೆಗೆ SMS ಕಳಿಸುವ ಮೂಲಕ ಪಿಎಫ್‌ ಖಾತೆಯಲ್ಲಿನ ಬ್ಯಾಲೆನ್ಸ್‌ ಮೊತ್ತವನ್ನು ತಿಳಿದುಕೊಳ್ಳಬಹುದು. ಖಾತೆಗೆ ಇತ್ತೀಚಿನ ನಿಮ್ಮ ಕಾಂಟ್ರಿಬ್ಯೂಷನ್‌ ಎಷ್ಟೆಂಬುದನ್ನು ತಿಳಿಯಬಹುದು. ಇದಕ್ಕಾಗಿ ಈ ಮೆಸೇಜ್‌ ಅನ್ನು ಕಳಿಸಬೇಕು: EPFPHO UAN ENG

ಇದರಲ್ಲಿ ಇಂಗ್ಲಿಷ್‌ ಭಾಷೆಗೆ ENG ಬಳಸಬೇಕು. KAN ಬಳಸಿದರೆ ಕನ್ನಡ ಭಾಷೆಯಲ್ಲಿ ಲಭ್ಯ. ಇಂಗ್ಲಿಷ್‌, ಹಿಂದಿ, ಕನ್ನಡ, ಮಲಯಾಳಂ, ತಮಿಳು, ತೆಲುಗು, ಗುಜರಾತಿ, ಪಂಜಾಬಿ, ಬೆಂಗಾಲಿ, ಮರಾಠಿ ಭಾಷೆಯಲ್ಲಿ ಲಭ್ಯ. ನಿಮ್ಮ UAN ಬ್ಯಾಂಕ್‌ ಖಾತೆ ಜತೆಗೆ ಲಿಂಕ್‌ ಆಗಿರಬೇಕು.

ಮಿಸ್ಡ್‌ ಕಾಲ್‌ ಕೊಡುವ ಮೂಲಕ EPF ಬ್ಯಾಲೆನ್ಸ್‌ ತಿಳಿದುಕೊಳ್ಳುವುದು ಹೇಗೆ?

ನೀವು UAN ವೆಬ್ ಸೈಟ್‌ನಲ್ಲಿ ನೋಂದಣಿಯಾಗಿದ್ದರೆ ಹಾಗೂ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯಿಂದ 011-22901406 ಗೆ ಮಿಸ್ಡ್‌ ಕಾಲ್‌ ಕೊಡುವ ಮೂಲಕ ಪಿಎಫ್‌ ಚೆಕ್‌ ಮಾಡಬಹುದು. ಆದರೆ ನಿಮ್ಮ ಬ್ಯಾಂಕ್‌ ಖಾತೆ ವಿವರ, ಆಧಾರ್‌, ಪ್ಯಾನ್‌ ನಿಮ್ಮ ಯುಎಎನ್‌ ಜತೆ ಲಿಂಕ್‌ ಆಗಿರುವುದನ್ನು ಖಚಿತಪಡಿಸಿ. ಈ ಸೇವೆಗೆ ಶುಲ್ಕ ಇರುವುದಿಲ್ಲ.

ಏನಿದು UMANG APP ?

https://twitter.com/UmangOfficial_/status/1650733459936264192?s=20

ಒಂದೇ ಆ್ಯಪ್‌ನಲ್ಲಿ ಉದ್ಯೋಗಿಗಳ ಭವಿಷ್ಯನಿಧಿ ಸಂಘಟನೆಯ (Employees Provident Fund Organisation-EPFO) ಎಲ್ಲ ಮಾಹಿತಿಗಳನ್ನು ತಿಳಿಯಬಹುದು. ನಾನಾ ಸೇವೆಗಳನ್ನು ಪಡೆಯಬಹುದು. ಅದುವೇ UMANG APP.

ಉಮಾಂಗ್‌ ಆ್ಯಪ್‌ ಮೂಲಕ ಪಿಎಫ್‌ದಾರರು ಪಿಎಫ್‌ ಬ್ಯಾಲೆನ್ಸ್‌, ವಿತ್‌ ಡ್ರಾವಲ್‌ ಕ್ಲೇಮ್‌, ಯುಎಎನ್‌ಗೆ ಕ್ಲೇಮ್‌, ಜೀವನ್‌ ಪ್ರಮಾಣ್‌ ಸರ್ಟಿಫಿಕೇಟ್‌ ಮತ್ತಿತರ ಸೇವೆಗಳನ್ನು ಪಡೆಯಬಹುದು. Unified Mobile Application for New age Governance (UMANG) ಆ್ಯಪ್‌ ಅನ್ನು ಸರ್ಕಾರವು ಡಿಜಿಟಲ್‌ ಇಂಡಿಯಾ ಅಭಿಯಾನದ ಭಾಗವಾಗಿ ಅಭಿವೃದ್ಧಿಪಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಸತ್ಯಂ ಶಿವಂ ಸುಂದರಂ

ನನ್ನ ದೇಶ ನನ್ನ ದನಿ ಅಂಕಣ: ಶತಕೋಟಿ ಹಿಂದೂಗಳ ಪರಮೇಶ್ವರ ಇನ್ನೆಷ್ಟು ಕಾಯಬೇಕು? ಕಾದಿದ್ದು ಸಾಕು. ನಮಗೆ ಮುಕ್ತಿ ದಯಪಾಲಿಸುವ ಆ ಮುಕ್ತಿನಾಥನಿಗೆ ಇನ್ನಾದರೂ ವಿಮೋಚನೆಯಾಗಲಿ.

VISTARANEWS.COM


on

varanasi nandi
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath

ನನ್ನ ದೇಶ ನನ್ನ ದನಿ: ಭಾರತವನ್ನು ತುಂಡರಿಸಲಿಚ್ಛಿಸುವ ವಿಚ್ಛಿದ್ರಕಾರೀ ಶಕ್ತಿಗಳು ವಿಜೃಂಭಿಸುತ್ತಿವೆ! ಆಸುರೀ ಶಕ್ತಿಗಳೇ ಹಾಗೆ. ನಿಜ. ಅಬ್ಬರ ಜಾಸ್ತಿ. ಸನಾತನ ಧರ್ಮದ ಬಗೆಗೆ ಅಣು ಪ್ರಮಾಣದ ಅರಿವು ಇಲ್ಲದಿದ್ದರೂ, ಆರ್ಯ-ದ್ರಾವಿಡ ಜನಾಂಗೀಯ ಸಿದ್ಧಾಂತ ಎಂಬುದು ಶತಪ್ರತಿಶತ ಅಬದ್ಧ ಎಂಬುದು ವೈಜ್ಞಾನಿಕವಾಗಿ ರುಜುವಾತಾಗಿದ್ದರೂ, ದ್ರಾವಿಡ ಪಕ್ಷದ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವವರು ನಾಲಿಗೆ ಹರಿಬಿಡುತ್ತಾರೆ. ಇನ್ನು ಕೆಲ “ಸಜ್ಜನರು” ಶ್ರೀರಾಮನ ಬಗೆಗೇ ವಿಷ ಕಾರುತ್ತಾರೆ.

ನಿಜ, ಇದು ಎಂದೆಂದಿಗೂ ಮುಗಿಯದ ಹೋರಾಟ. ಶ್ರೀರಾಮ ಜನ್ಮಭೂಮಿ ದೇವಾಲಯದ ಪುನರ್ನಿರ್ಮಾಣ, ಪ್ರಾಣ ಪ್ರತಿಷ್ಠಾಪನೆಗಳು ಒಂದು ಹಂತಕ್ಕೆ ಬರುತ್ತಿದ್ದಂತೆ ಭಾರತ-ವಿರೋಧೀ ಶಕ್ತಿಗಳಿಗೆ ಸಹಿಸಲಾರದಂತಹ ಸಂಕಟ.

ಭಾರತವನ್ನು ಜೋಡಿಸುವ ಹೆಸರಿನಲ್ಲಿ, ಜನರನ್ನು ಒಂದುಗೂಡಿಸುವ ಬದಲು, ಕೆಲವರು ಇನ್ನಷ್ಟು ವಿಭಜನೆಗೆ ಸನ್ನಾಹ ಮಾಡುತ್ತಿದ್ದಾರೆ. ಇನ್ನು ಕೆಲವರು ಉತ್ತರ ಭಾರತ – ದಕ್ಷಿಣ ಭಾರತಗಳನ್ನು ಬೇರೆ ಬೇರೆ ಮಾಡಲು ಹವಣಿಸುತ್ತಿದ್ದಾರೆ. ಕರ್ನಾಟಕದ ಕುಡಿಯುವ ನೀರನ್ನೂ ತಮಿಳುನಾಡಿಗೆ ಹರಿಸಿದವರು, ದಕ್ಷಿಣ ಭಾರತವೇ ಪ್ರತ್ಯೇಕವಾಗಬೇಕು ಎನ್ನುತ್ತಾರೆ. ಕರ್ನಾಟಕದ ಹಣ ಉತ್ತರ ಭಾರತಕ್ಕೆ ಹೋಗುತ್ತಿದೆ, ಎಂದು ಗುರುಗುಟ್ಟುವವರು ತೆರಿಗೆಯನ್ನೇ ಕಟ್ಟದ ಸಮುದಾಯಗಳಿಗೆ ತೆರಿಗೆದಾರರ ಕೋಟಿಕೋಟಿ ಹಣವನ್ನು ಸುರಿಯುತ್ತಾರೆ. ದೇವಾಲಯಗಳ ಹಣ ಸೂರೆಮಾಡಿ, ಚರ್ಚು – ಮಸೀದಿಗಳಿಗೆ ಬಹಳ ದೊಡ್ಡ ಮೊತ್ತವನ್ನು ಹಂಚಿ ಮೆರೆಯುತ್ತಿದ್ದಾರೆ.

ಸೋಮನಾಥನ, ಶ್ರೀರಾಮನ ದೇವಾಲಯಗಳ ವಿಮೋಚನೆಯಾಗಲು ಏಳೆಂಟು ದಶಕಗಳೇ ಬೇಕಾದವು. ಇದೀಗ ಮಥುರೆ – ಕಾಶಿಗಳು ಕಾಯುತ್ತಿವೆ.

ಕಾಶಿಯನ್ನು ಧ್ವಂಸ ಮಾಡಿದವನು ಬರೀ ಔರಂಗಜೇಬನಷ್ಟೇ ಅಲ್ಲ. ವಿಗ್ರಹ ಭಂಜನೆಗೇ ಕುಖ್ಯಾತನಾದ ಇಸ್ಲಾಮೀ ದಾಳಿಕೋರ ಕುತ್ಬುದ್ದೀನ್ ಐಬಕ್, ಸಾಮಾನ್ಯ ಯುಗದ ೧೧೯೪ರಲ್ಲಿ ಇದೇ ಕಾಶಿ ವಿಶ್ವನಾಥನ ದೇವಾಲಯವನ್ನು ಧ್ವಂಸ ಮಾಡಿದ. ಆ ಕಾಲದ (ಸಮಕಾಲೀನ) ಮುಸ್ಲಿಂ ಇತಿಹಾಸಕಾರ ಹಸನ್ ನಿಜಾಮಿ ದಾಖಲಿಸಿರುವಂತೆ, ಒಂದು ಸಾವಿರ ದೇವಾಲಯಗಳನ್ನು ನಾಶ ಮಾಡಿ ಲೂಟಿ ಮಾಡಿದ ಐಶ್ವರ್ಯವನ್ನು, ಈ ಐಬಕ್ ಹದಿನೆಂಟು ಒಂಟೆಗಳ ಮೇಲೆ ಮುನ್ನೂರು ಆನೆಗಳ ಮೇಲೆ ಕೊಂಡೊಯ್ದ. ಅಷ್ಟೇ ಅಲ್ಲ, ಸುಪ್ರಸಿದ್ಧ ಸಾರನಾಥ್ ಸೇರಿದಂತೆ, ಅನೇಕ ಬೌದ್ಧ ದೇವಾಲಯಗಳನ್ನೂ ಧ್ವಂಸ ಮಾಡಿದ. ಇಂದು ಸಾರನಾಥದ ಎಲ್ಲೆಡೆ ಕಾಣುವ ಧ್ವಂಸಾವಶೇಷಗಳನ್ನು ನೋಡಿದರೆ, ಮನಸ್ಸು – ನಾಲಿಗೆ – ಹೃದಯಗಳು ಕಹಿಯಾಗಿಬಿಡುತ್ತವೆ.

vikram sampath

ಭಾರತೀಯರು ತಮ್ಮ ಹೋರಾಟವನ್ನು ಎಂದಿಗೂ ನಿಲ್ಲಿಸಿದವರಲ್ಲ. ಇಂದಿಗೂ ನಿಲ್ಲಿಸಬೇಕಿಲ್ಲ. ಸಾ|| ಯುಗದ ೧೨೧೨ರಲ್ಲಿ ಬಂಗಾಳದ ಸೇನ್ ವಂಶದ ರಾಜ ವಿಶ್ವರೂಪನು, ಕಾಶಿಗೆ ಬಂದು, ವಿಶ್ವನಾಥನ ದೇವಾಲಯದ ತಾಣದಲ್ಲಿಯೇ “ಈ ನಗರವು ವಿಶ್ವೇಶ್ವರನದು” ಎಂದು ಬರೆಸಿದ ಕಂಬವೊಂದನ್ನು ಸ್ಥಾಪಿಸಿದ. ಪೂರ್ವ ಭಾರತದ ರಾಜರೂ ದೇವಾಲಯ ಪುನರ್-ಸ್ಥಾಪನೆಯ ಈ ಹೋರಾಟದಲ್ಲಿ ಕೈಜೋಡಿಸಿದರು. ಗುಜರಾತ್ ಪ್ರಾಂತದ ವ್ಯಾಪಾರಿ ಸೇಠ್ ವಸ್ತುಪಾಲನು ೧೨೩೦ರಲ್ಲಿ ಒಂದು ಲಕ್ಷ ಸ್ವರ್ಣ ವರಹಗಳನ್ನು ಅರ್ಪಿಸಿ ಪುನರ್ನಿರ್ಮಾಣಕ್ಕೆ ಚಾಲನೆ ನೀಡಿದ. ಈ ನಿರ್ಮಾಣ ಕಾರ್ಯಕ್ಕೆ ಕನಿಷ್ಠ ನಲವತ್ತು ಐವತ್ತು ವರ್ಷಗಳು ಬೇಕಾದವು.

ಪೂರ್ವ-ಪಶ್ಚಿಮ, ಉತ್ತರ – ದಕ್ಷಿಣ ಎಂದು ಮತ್ತೆ ಮತ್ತೆ ನಮ್ಮ ದೇಶವನ್ನು ವಿಚ್ಛೇದಿಸುವ, ತುಂಡು ತುಂಡು ಮಾಡುವ ಉದ್ದೇಶದ ದೇಶದ್ರೋಹಿಗಳು ಈ ಎಲ್ಲ ಐತಿಹಾಸಿಕ ಸಂಗತಿಗಳನ್ನೂ ಅಧ್ಯಯನ ಮಾಡಬೇಕಿದೆ. ಜಾತಿ, ವರ್ಣ, ಪ್ರಾಂತ, ಭಾಷೆಗಳ ಮೇಲೆ ಜನರನ್ನು ಒಡೆದು ಆಳುವ ದುರ್ಬುದ್ಧಿಜೀವಿಗಳನ್ನು ನಮ್ಮ ಜನ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿದೆ.

ಅದೊಂದು ದುರ್ಭರ ಕಾಲ. ಇಸ್ಲಾಮೀ ದುರಾಡಳಿತಕ್ಕೆ ಕಾಶಿಯ ಪ್ರಾಂತ್ಯ ಸಿಲುಕಿತ್ತು. ತಮ್ಮ ದೇಶದಲ್ಲಿಯೇ ಕಾಫಿರರೆನಿಸಿಕೊಂಡ ದೌರ್ಭಾಗ್ಯದ ಹಿಂದೂಗಳು ಅತ್ಯಂತ ಅವಮಾನಕಾರವಾದ ಜಿಜಿಯಾ ತೆರಿಗೆಯನ್ನು ತೆರಬೇಕಿತ್ತು. ಅದೂ ತುಂಬಾ ಹೀನಾಯವಾಗಿ. ಜಿಜಿಯಾ ಕಿತ್ತುಕೊಳ್ಳುವ ಲೂಟಿಕೋರನು ಕುದುರೆಯ ಮೇಲೆ ಕುಳಿತು ದರ್ಪದಿಂದ ವಸೂಲಿ ಮಾಡುತ್ತಿದ್ದ. ತೆರಿಗೆದಾರರು ದೈನ್ಯದಿಂದ ಬರಿಗಾಲಲ್ಲಿ ಹೋಗಿ, ಜೀಹುಜೂರ್ ಸಲ್ಲಿಸಿ ಜಿಜಿಯಾ ತೆರಬೇಕಿತ್ತು. ಆದರೇನು. ಹಿಂದೂಗಳ ಧರ್ಮಶ್ರದ್ಧೆ ಅನುಪಮವಾದುದು. ಕಾಶಿಯ ವಿಶ್ವನಾಥನ ದರ್ಶನ ಮಾಡುವುದನ್ನು ಎಂದಿಗೂ ನಿಲ್ಲಿಸಲಿಲ್ಲ. ನಮ್ಮ ಕರ್ನಾಟಕದ ಹೊಯ್ಸಳರ ಮೂರನೆಯ ವೀರನರಸಿಂಹನು ಕಾಶಿಯ ಯಾತ್ರಿಕರು ಈ ತೆರಿಗೆ ಪಾವತಿಸಲು ನೆರವಾಗಲು, ಹೆಬ್ಬಾಳೆ ಎಂಬ ಗ್ರಾಮದ ಪೂರ್ಣ ಆದಾಯವನ್ನೇ ಮೀಸಲಾಗಿಟ್ಟಿದ್ದ. ಇತ್ತೀಚಿನ ಉತ್ಖನನದಲ್ಲಿ ವೀರನರಸಿಂಹನ ಶಿಲಾಶಾಸನವೊಂದು ಬೆಳಕಿಗೆ ಬಂದಿರುವುದನ್ನು ನಾವಿಲ್ಲಿ ಸ್ಮರಿಸಬಹುದು. ಪಕ್ಕದ ಆಂಧ್ರದ ತೆಲುಗು ಕವಿ ಶ್ರೀನಾಥನು ವಿಜಯನಗರದ ಆಸ್ಥಾನ ಕವಿ. ಅವನು ಕಾಶಿ ಖಂಡವನ್ನು ತೆಲುಗಿಗೆ ಅನುವಾದಿಸಿದ್ದಾನೆ. ಭಾಷೆಯ ಹೆಸರಿನಲ್ಲಿ ಭಾರತೀಯರನ್ನು ಒಡೆದು ಆಳುವ ದ್ರೋಹಿಗಳಿಗೆ, ಅವರ ಕೊರಳಪಟ್ಟಿ ಹಿಡಿದು ನಮ್ಮ ಜನ ಈ ಅಂಶವನ್ನು ತಿಳಿಸಬೇಕಿದೆ, ಪ್ರಶ್ನಿಸಬೇಕಿದೆ.

ಇಸ್ಲಾಮೀ ದಾಳಿಯ ಅಮಾನುಷ ಹೊಡೆತಕ್ಕೆ ಸಿಲುಕಿ ಕಾಶಿಯ ಅನೇಕ ವಿದ್ವಾಂಸರು – ಪಂಡಿತರು ದಕ್ಷಿಣ ಭಾರತದ ಅನೇಕ ಪ್ರಾಂತಗಳಿಗೆ ವಲಸೆ ಬಂದರು. ಭಟ್ಟ, ಶೇಷ, ಧರ್ಮಾಧಿಕಾರಿ ಮೊದಲಾದ ಉಪನಾಮಗಳ ಈ ವಿದ್ವಾಂಸರು, ಮತ್ತೆ ಕಾಶಿಗೆ ಹಿಂತಿರುಗಿ ಅಲ್ಲಿಯ ವಿದ್ವತ್-ಪುನರುತ್ಥಾನಕ್ಕೆ ಶ್ರಮಿಸಿದರು. ಕೆಲವು ಮೂರ್ಖರು ಶಿವಾಜಿ ಮಹಾರಾಜರಿಗೆ ಪಟ್ಟಾಭಿಷೇಕ ಮಾಡಲು ನಿರಾಕರಿಸಿದಾಗ, ಕಾಶಿಯಿಂದ ಬಂದ ಗಾಗಾ ಭಟ್ಟರು ಈ ಪಟ್ಟಾಭಿಷೇಕವನ್ನು ನಿರ್ವಹಿಸಿದುದು ಇತಿಹಾಸವೇ ಆಗಿದೆ. ವಿಶೇಷವೆಂದರೆ, ಅಂತಹ ವಲಸೆಯ ಋತ್ವಿಕರಾದ ದೀಕ್ಷಿತರೇ ಶ್ರೀರಾಮ ಜನ್ಮಭೂಮಿ ದೇವಾಲಯದ ಇತ್ತೀಚಿನ ಪ್ರಾಣಪ್ರತಿಷ್ಠೆಯ ಸೂತ್ರಧಾರರಾಗಿದ್ದುದು ಗಮನಿಸಬೇಕಾದುದು.

೧೪ನೆಯ ಶತಮಾನದಲ್ಲಿ ಜೌನಪುರದ ನವಾಬ ಮತ್ತೆ ಕಾಶಿಯ ದೇವಾಲಯವನ್ನು ಧ್ವಂಸ ಮಾಡಿದ. ಮತ್ತೆ ನಿರ್ಮಿಸಲ್ಪಟ್ಟ ದೇವಾಲಯವನ್ನು ಸಿಕಂದರ್ ಲೋಧಿಯು ನೆಲಸಮ ಮಾಡಿದ. ಯಾರಪ್ಪಾ, ಈ ಲೋಧಿ ಎನ್ನುವಿರೋ? ದೆಹಲಿಯಲ್ಲಿ ಲೋಧಿ ಎಸ್ಟೇಟ್, ಲೋಧಿ ರೋಡ್, ಲೋಧಿ ಕಾಲೋನಿ ಇತ್ಯಾದಿ ಇತ್ಯಾದಿ ಇವೆಯಲ್ಲಾ, ಆ ಲೋಧಿ ವಂಶದವನೇ ಈತ. ಭಾರತದ ರಾಜಧಾನಿಯಲ್ಲಿ ಅಕ್ಬರ್ ರೋಡ್, ಬಾಬರ್ ರೋಡ್, ಔರಂಗಜೇಬ್ ರೋಡ್, ಮೊದಲಾದವನ್ನು ಹೆಸರಿಸಿದವರು, ಹಾಗೆ ಹೆಸರಿಸಿ ಧನ್ಯರಾದವರು ಮತ್ತು ಬ್ರಿಟಿಷರಿಗೆ ಪ್ರೀತಿಪಾತ್ರರಾಗಿ ಅವರಿಂದ ಅಧಿಕಾರ ಹಸ್ತಾಂತರ ಪಡೆದವರೇ. ಇಂದು ಆ ದಾಳಿಕೋರರ ಹೆಸರುಗಳನ್ನು ಬದಲಾಯಿಸಬೇಕೆಂದರೆ ಅಡ್ಡಗಾಲು ಹಾಕುತ್ತಿರುವವರೂ ಈ ಬ್ರಿಟಿಷ್ ಪ್ರೀತಿಪಾತ್ರರ ವಂಶೀಕರೇ!

ಲೋಧಿಯ ಅನಂತರ ಹಿಂದೂಗಳು ಮತ್ತೆ ಕಾಶಿಯ ವಿಶ್ವನಾಥನ ದೇವಾಲಯದ ಮರು-ನಿರ್ಮಾಣಕ್ಕೆ, ನಾರಾಯಣ ಭಟ್ಟರ ನೇತೃತ್ವದಲ್ಲಿ ರಾಜಾ ತೋಡರಮಲ್ ಸಹಾಯ ಪಡೆದರು.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಇತಿಹಾಸದ ಸಂಕ್ರಮಣ ಕಾಲದಲ್ಲಿ ಹಿಂದೂಗಳ ಸಹಾಯ ನಿರೀಕ್ಷಿಸಿದ್ದ ಪರ್ಷಿಯನ್ನರು

ಔರಂಗಜೇಬನು ಇಸ್ಲಾಮಿನ ಕಡುನಿಷ್ಠ ಅನುಯಾಯಿ. ತನ್ನ ಮತಶ್ರದ್ಧೆಗೆ ಅನುಸಾರವಾಗಿ ಮಥುರೆ – ಕಾಶಿಗಳೂ ಸೇರಿದಂತೆ, ಅಕ್ಷರಶಃ ಸಾವಿರಾರು ದೇವಾಲಯಗಳನ್ನು ಧ್ವಂಸ ಮಾಡಿದ. ಆ ಅವಧಿಯಲ್ಲಿ ಮತ್ತು ಅನಂತರದಲ್ಲಿ ಅನೇಕ ಮರಾಠಾ ರಾಜರು, ಈ ಹಿಂದೂ ದೇವಾಲಯಗಳನ್ನು ಹಿಂಪಡೆಯಲು ಶ್ರಮಿಸಿದರೂ ಅದೇಕೋ ಸಾಧ್ಯವೇ ಆಗಲಿಲ್ಲ. ಮಲ್ಹಾರ್ ರಾವ್ ಹೋಳ್ಕರ್ ಸಹ ಕಾಶಿಯನ್ನು ಪಡೆಯಲು ಯತ್ನಿಸಿದರು. ಅದೂ ಸಾಧ್ಯವಾಗಲಿಲ್ಲ. ವಿಶೇಷವೆಂದರೆ, ಅವರ ಸೊಸೆ ಅಹಲ್ಯಾಬಾಯಿ ಹೋಳ್ಕರ್ ಅವರು ಮೂಲ ಕಾಶಿ ದೇವಾಲಯದ ಪಕ್ಕದಲ್ಲಿ ಹೊಸದೊಂದು ದೇವಾಲಯವನ್ನೇ ನಿರ್ಮಿಸಿದರು. ಅದೇ ಇಂದು ನಮ್ಮ ನಡುವೆ ಇರುವ ದೇವಾಲಯ. ಹಿಮಾಲಯದಿಂದ ಮೊದಲ್ಗೊಂಡು ನಮ್ಮ ಗೋಕರ್ಣವೂ ಸೇರಿದಂತೆ, ಇಡೀ ಭಾರತದಲ್ಲಿ ಅಹಲ್ಯಾಬಾಯಿ ಅವರು ಅನೇಕ ದೇವಾಲಯಗಳನ್ನು ನಿರ್ಮಿಸಿದರು, ಜೀರ್ಣೋದ್ಧಾರ ಮಾಡಿಸಿದರು. ಪ್ರತಿಕೂಲ ವಾತಾವರಣದಲ್ಲಿಯೂ ಅವರ ಈ ಸಾಹಸವು ಸನಾತನ ಧರ್ಮದ ಪುನರುತ್ಥಾನದ ಅಪೂರ್ವ ಘಟ್ಟವಾಗಿದೆ. ಕನ್ನಡ, ಮರಾಠೀ, ತೆಲುಗು, ತಮಿಳು ಎಂದೆಲ್ಲಾ ಭೇದ ಮಾಡಿ ಹೊಸ ಹೊಸ ವಿಚ್ಛಿದ್ರಕಾರೀ ಸಿದ್ಧಾಂತಗಳನ್ನು ಹೆಣೆಯುವ ದ್ರೋಹಿ ಅಕಾಡೆಮಿಷಿಯನ್ನರು ಈ ಸಂಗತಿಗಳನ್ನು ಅಪ್ಪಿತಪ್ಪಿ ಉಲ್ಲೇಖಿಸುವುದಿಲ್ಲ. ೧೮೩೫ರಲ್ಲಿ ಪಂಜಾಬಿನ ಸಿಂಹ, ಸಿಖ್ ದೊರೆ ರಣಜಿತ್ ಸಿಂಹರು ಕಾಶಿ ವಿಶ್ವನಾಥನ ಈ ದೇವಾಲಯದ ಗೋಪುರಕ್ಕೆ ಒಂದು ಟನ್ ತೂಕದ ಚಿನ್ನದ ತಗಡುಗಳನ್ನು ಹೊದಿಸುವ ಸೇವೆ ಸಲ್ಲಿಸಿದರು. ಹಿಂದೂಗಳ – ಸಿಖ್ಖರ ನಡುವೆ ಖಲಿಸ್ತಾನವನ್ನು ಹುಟ್ಟುಹಾಕಿದ ಬೆಳೆಸಿದ ದೇಶದ್ರೋಹಿಗಳಿಗೆ, ಜನರೇ ಈ ಅಂಶವನ್ನು ತಿಳಿಸಬೇಕಿದೆ.

ಶತಕೋಟಿ ಹಿಂದೂಗಳ ಪರಮೇಶ್ವರ ಇನ್ನೆಷ್ಟು ಕಾಯಬೇಕು? ಕಾದಿದ್ದು ಸಾಕು. ನಮಗೆ ಮುಕ್ತಿ ದಯಪಾಲಿಸುವ ಆ ಮುಕ್ತಿನಾಥನಿಗೆ ಇನ್ನಾದರೂ ವಿಮೋಚನೆಯಾಗಲಿ. ಶೀಘ್ರವಾಗಿ ನಂದಿಯ ಪ್ರತೀಕ್ಷೆಗೆ ಒಂದು ಸಕಾರಾತ್ಮಕ ಅಂತ್ಯ ದೊರೆಯಲಿ. ಸತ್ಯಂ ಶಿವಂ ಸುಂದರಂ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಶತಮಾನದಾಚೆಗೆ ವಿಸ್ತರಿಸಿದ ಪ್ರತಿಭೆ ಪ್ರೊ || ಎಲ್.ಎಸ್. ಶೇಷಗಿರಿರಾವ್

Continue Reading

ಸ್ಫೂರ್ತಿ ಕತೆ

Raja Marga Column : ಭಾವನೆಗಳೇ ಇಲ್ಲದ ರೋಬೋಟ್‌ನಂಥ ಮನುಷ್ಯರ ಜತೆ ಬದುಕೋದಾದರೂ ಹೇಗೆ?

Raja Marga Column : ಯಾವ ಭಾವನೆಗಳೂ ಇಲ್ಲದೆ ಯಂತ್ರದಂತೆ ಬದುಕುವವರ ಜತೆ ಬದುಕೋದಾದರೂ ಹೇಗೆ? ನಿಮ್ಮ ನಡುವೆಯೂ ಇಂಥವರು ಇದ್ದಾರಾ? ಒಮ್ಮೆ ಚೆಕ್‌ ಮಾಡಿ.

VISTARANEWS.COM


on

Raja Marga human robots
Koo
RAJA MARGA COLUMN Rajendra Bhat

Raja Marga Column : ಕಳೆದ ಮೂವತ್ತು ವರ್ಷಗಳಿಂದ ಸಾವಿರಾರು ಮಾನವೀಯ ಸಂಬಂಧಗಳ (Human Relationships) ಬಗ್ಗೆ ತರಬೇತಿಯ ಕಾರ್ಯಗಾರಗಳನ್ನು (Training WorkShops) ನಡೆಸುತ್ತಾ ಬಂದ ನನಗೆ ತುಂಬಾ ಆಶ್ಚರ್ಯ ಮತ್ತು ಆಘಾತ ತಂದು ಕೊಟ್ಟ ಒಂದು ಸಂಬಂಧದ ಬಗ್ಗೆ ಇವತ್ತು ನಾನು ಬರೆಯಬೇಕು. ಇಂತಹವರು ನಿಮ್ಮ ನಡುವೆ ಇದ್ದರೂ ಇರಬಹುದು. ಒಂದು ನಿಜವಾದ ಉದಾಹರಣೆಯಿಂದ ಇಂದು ನನ್ನ ಲೇಖನ ಆರಂಭಿಸುವೆ.

ಆ ಕುಟುಂಬ ತುಂಬಾನೇ ವಿಚಿತ್ರ ಆಗಿತ್ತು!

ನಮ್ಮ ಊರಿನಲ್ಲಿ ಮಧ್ಯಮ ವರ್ಗದ ಒಂದು ವಿಚಿತ್ರವಾದ ಕುಟುಂಬ ಇತ್ತು. ಆ ಕುಟುಂಬದಲ್ಲಿ ಮಾತುಕತೆ ನಿಂತು ಹೋಗಿ ಎಷ್ಟೋ ವರ್ಷ ಆಗಿತ್ತು! ಹೆಂಡತಿ ಏನಾದರೂ ಗಂಡನಿಗೆ ಹೇಳಬೇಕು ಅನ್ನಿಸಿದಾಗ ಮಕ್ಕಳ ಮೂಲಕ ಹೇಳುವ ಅಭ್ಯಾಸವನ್ನು ಮಾಡಿಕೊಂಡಿದ್ದರು. ಗಂಡನು ಹೆಂಡತಿಯ ಜೊತೆಗೆ ಮಾತಾಡುವಾಗ ಗೋಡೆಗೆ ಮುಖ ಮಾಡಿ ಉತ್ತರಿಸುತ್ತಾನೆ! ಅವರ ಮನೆಯಲ್ಲಿ ಹಬ್ಬ, ಹರಿದಿನ, ಉತ್ಸವಗಳ ಆಚರಣೆಗಳು ಇಲ್ಲದೆ ಎಷ್ಟೋ ವರ್ಷಗಳೇ ಆಗಿ ಹೋಗಿದ್ದವು! ಅವರ ಮನೆಗೆ ನೆಂಟರು, ಆಪ್ತರು ಬರುವುದನ್ನು ಬಿಟ್ಟಿದ್ದರು.

Raja Marga human robots1

ಅವರ ನಾಲ್ಕು ಮಕ್ಕಳು ಮನೆಯಲ್ಲಿ ಅಂತರ್ಮುಖಿಗಳು! ಹೊರಗೆ ಬಂದರೆ ಅವರೆಲ್ಲರೂ ನ್ಯಾಚುರಲ್. ಈ ಬಗ್ಗೆ ಗಂಡನನ್ನು ಮಾತನಾಡಿಸಿದಾಗ ಅವರ ಉತ್ತರ ನನಗೆ ಶಾಕ್ ನೀಡಿತ್ತು.
“ನನಗೆ ಅವಳು ಇಷ್ಟ ಇರಲಿಲ್ಲ. ನಮ್ಮ ಹೆತ್ತವರು ಬಲವಂತ ಆಗಿ ನಮಗೆ ಮದುವೆ ಮಾಡಿದ್ದರು. ನಾನು ಗಂಡನಾಗಿ ನನ್ನ ಕರ್ತವ್ಯ ಮಾತ್ರ ಮಾಡುತ್ತಿದ್ದೇನೆ!”

ಅಂದ ಹಾಗೆ ಅವರ ಕರ್ತವ್ಯದ ಫಲವಾಗಿ ನಾಲ್ಕು ಮಕ್ಕಳು ಹುಟ್ಟಿದ್ದಾರೆ! ಆ ಮಕ್ಕಳೂ ಮನೆಯಲ್ಲಿ ಒಂದು ಮಾತು ಆಡುತ್ತಿರಲಿಲ್ಲ! ಇತ್ತೀಚೆಗೆ ಗಂಡ ತೀರಿಕೊಂಡರು. ಮಕ್ಕಳು, ಹೆಂಡತಿ ಯಾರೂ ಕಣ್ಣೀರು ಹಾಕಲೇ ಇಲ್ಲ! ಮಕ್ಕಳು ತಮ್ಮ ತಂದೆಯ ಉತ್ತರಕ್ರಿಯೆಯನ್ನು ಮಾಡಿ ತಮ್ಮ ಕರ್ತವ್ಯ ಮುಗಿಸಿದರು!

ಇದು ನಮಗೆಲ್ಲಾ ಬಹಳವೇ ಎಕ್ಸ್‌ಟ್ರೀಮ್‌ ಆದ ಕುಟುಂಬ ಅನ್ನಿಸಬಹುದು. ಆದರೆ ನಮ್ಮ ಸುತ್ತ ಹೀಗೆ ಭಾವನೆಗಳೇ ಇಲ್ಲದೆ ಯಾಂತ್ರಿಕ ಆಗಿ ಬದುಕುವವರು (Mechanical life) ತುಂಬಾ ಮಂದಿ ಇದ್ದಾರೆ.

ಯಾಂತ್ರಿಕವಾಗಿ ಬದುಕುವವರು!

ಅವರ ಜೀವನದಲ್ಲಿ ಸಂತಸ, ದುಃಖ, ಸಂಭ್ರಮ, ಪ್ರೀತಿ, ಮಮತೆ ಮೊದಲಾದ ಯಾವ ಭಾವನೆಗಳೂ ಇರುವುದಿಲ್ಲ.
ಯಾರಿಂದಲಾದರೂ ಒಂದು ಸಣ್ಣ ಉಪಕಾರ ಆಯಿತು ಅಂತಾದರೆ ಒಂದು ಥ್ಯಾಂಕ್ಸ್ ಬಿಸಾಡಿ ಅವರು ತಮ್ಮ ಕರ್ತವ್ಯ ಮುಗಿಸುತ್ತಾರೆ! ತಮ್ಮ ಗೆಳೆಯರು, ಓರಗೆಯವರು, ಒಡಹುಟ್ಟಿದವರು, ಹೆಂಡತಿ, ಮಕ್ಕಳು ಎಲ್ಲರ ಬಗ್ಗೆಯೂ ಅವರದ್ದು ನಿರ್ಲಿಪ್ತ ಭಾವ! ಬೇರೆ ಬೇರೆ ಸಂದರ್ಭದಲ್ಲಿ ಇಂತಹ ಜನರು ಆಡುವ ಮಾತುಗಳನ್ನು ಕೇಳಿ.

Raja Marga Column : ನೂರು ಮಂದಿ – ನೂರು ಮಾತು!

1. ಶಿಕ್ಷಕಿ – ನಾನು ನನ್ನ ಪಾಠ ಮುಗಿಸಿದ್ದೇನೆ. ಇನ್ನು ಏನಿದ್ದರೂ ಮಕ್ಕಳು ಓದಿಕೊಳ್ಳಬೇಕು!
2. ಪೋಷಕರು – ಅಷ್ಟು ಖರ್ಚು ಮಾಡಿ ಫೀಸ್ ತುಂಬಿಸಿ ಮಗನನ್ನು ದೊಡ್ಡ ಶಾಲೆಗೆ ಸೇರಿಸಿದ್ದೇವೆ. ಹಾಗಿರುವಾಗ ಮಾರ್ಕ್ಸ್ ತೆಗೆಯಲು ಏನು ಅಡ್ಡಿ?
3. ಗಂಡ ಹೆಂಡತಿಗೆ – ನಾನು ದುಡಿದು ಸುಸ್ತಾಗಿ ಮನೆಯ ಹೊಣೆಯನ್ನು ಹೊತ್ತಿಲ್ಲವಾ? ನಿನಗೆ ಮಕ್ಕಳ ಜವಾಬ್ದಾರಿ ಹೊರಲು ಏನು ಅಡ್ಡಿ?

Raja Marga Column robotic teacher

4. ಹೆಂಡತಿ ಗಂಡನಿಗೆ – ನಾನು ನನ್ನ ತವರ ಮನೆ, ಅಪ್ಪ ಅಮ್ಮ ಎಲ್ಲಾ ಬಿಟ್ಟು ನಿಮ್ಮನ್ನು ನಂಬಿ ನಿಮ್ಮ ಹಿಂದೆ ಬಂದಿಲ್ಲವೇ? ನೀವು ತಾನೇ ನನ್ನನ್ನು ನೋಡಿಕೊಳ್ಳಬೇಕು!
5. ಸೋದರಿಯರು – ಹಿರಿಯಣ್ಣ ಆಗಿ ಹುಟ್ಟಿದ ಮೇಲೆ ತಂಗಿಯರ ಮದುವೆ ಮಾಡಬೇಕು ಅಲ್ವಾ? ನಾವೇನು ಸಿಕ್ಕವರ ಜೊತೆಗೆ ಓಡಿ ಹೋಗುವುದಾ?

Raja Marga Column husaband and wife

6. ಬೆಳೆದ ಮಕ್ಕಳು – ಎಲ್ಲರ ಹಾಗೆ ನಮ್ಮ ಅಪ್ಪ, ಅಮ್ಮ ನಮಗಾಗಿ ಏನೂ ಆಸ್ತಿ ಮಾಡಿಲ್ಲ. ಮತ್ತೆ ನಮ್ಮನ್ನು ಯಾಕೆ ಹುಟ್ಟಿಸಬೇಕಿತ್ತು?
7. ಗೆಳೆಯ – ಅವಳು ನನಗೆ ನಿನ್ನೆ ಒಂದು ಗಿಫ್ಟ್ ತಂದು ಕೊಟ್ಟಳು. ಒಂದು ಥ್ಯಾಂಕ್ಸ್ ಬಿಸಾಡಿ ಕಳುಹಿಸಿದೆ.

8. ವಿದ್ಯಾರ್ಥಿ – ನಮ್ಮ ಶಿಕ್ಷಕರು ಏನು ಧರ್ಮಕ್ಕೆ ಪಾಠ ಮಾಡ್ತಾರ? ಅವರಿಗೆ ಸಂಬಳ ಕೊಟ್ಟಿಲ್ಲವ? ಮತ್ತೆ ಯಾಕೆ ನಾವು ಅವರಿಗೆ ಋಣಿ ಆಗಿರಬೇಕು?
9. ಹದಿಹರೆಯದ ಹುಡುಗ/ ಹುಡುಗಿ – ಅಪ್ಪ ಅಮ್ಮ ನಮ್ಮನ್ನು ಚೆನ್ನಾಗಿ ನೋಡಿಕೊಳ್ಳಬೇಕು ಅಲ್ವಾ? ಅವರ ಕಷ್ಟ ಹೇಳುತ್ತಾ ಕೂತರೆ ನಾವು ಕೇಳುತ್ತಾ ಇರಬೇಕಾ?

Raja Marga Column Robotic Doctor

10. ವೈದ್ಯ – ನಾನು ನನ್ನ ಡ್ಯುಟಿ ಸರಿಯಾಗಿ ಮಾಡ್ತಾ ಇದ್ದೇನೆ. ಬದುಕಿಸುವುದು ನಮ್ಮ ಕೈಯ್ಯಲ್ಲಿ ಇಲ್ಲ!11. ಅವನು – ಸಣ್ಣ ಸಣ್ಣ ಕಾರಣಕ್ಕೆ ಅವನು ಅಳೋದು ಯಾಕೆ? ಅವನು ಗಂಡು ಹುಡುಗ ತಾನೇ?
11. ಅವಳು – ನಾವು ಹೆಣ್ಣು ಮಕ್ಕಳು ಸ್ಟ್ರಾಂಗ್ ಆಗಬೇಕು. ಅಳೋ ಸೀನೇ ಇಲ್ಲ!

12. ನಾವು – ಆಚೆಯ ಮನೆಯ ಹುಡುಗ ಸೆಕೆಂಡ್ ಕ್ಲಾಸ್ ಪಾಸ್ ಅಂತೆ. ಅದಕ್ಕೆಲ್ಲ ಅವರ ಸಂಭ್ರಮ ಜಾಸ್ತಿ ಆಯ್ತಲ್ಲವಾ?
13. ಹೆಂಡತಿ – ತುಂಬಾ ಪ್ರೀತಿಯಿಂದ ಅಡಿಗೆ ಮಾಡಿ ನನ್ನ ಗಂಡನಿಗೆ ಬಡಿಸುತ್ತೇನೆ. ಅವನು ಊಟ ಮಾಡುವಾಗ ಹತ್ತಿರ ಕೂರುತ್ತೇನೆ. ಗಬ ಗಬ ನುಂಗಿ ಎದ್ದು ಹೋಗುತ್ತಾನೆ. ಒಂದು ಒಳ್ಳೆಯ ಮಾತು ಇಲ್ಲ! ನನಗೆ ಸಾಕಾಗಿ ಹೋಗಿದೆ!

Raja Marga Column meals

14. ಗಂಡ – ಅವಳ ಹುಟ್ಟಿದ ಹಬ್ಬಕ್ಕೆ ಅಂತ ಒಂದು ಒಳ್ಳೆಯ ಸೀರೆ ತಂದು ಕೊಟ್ಟೆ. ಮಾತಿಲ್ಲ ಕತೆಯಿಲ್ಲ. ಒಂದು ಥ್ಯಾಂಕ್ಸ್ ಕೂಡ ಇಲ್ಲ.
15. ಮಕ್ಕಳು ಪೋಷಕರ ಬಗ್ಗೆ – ಕಷ್ಟಪಟ್ಟು ಓದಿ ಪರೀಕ್ಷೆ ಬರೆದು ಎಷ್ಟು ಮಾರ್ಕ್ಸ್ ಬಂದರೂ ಕಣ್ಣು ಮುಚ್ಚಿ ಸಹಿ ಮಾಡುತ್ತಾರೆ. ಒಂದು ಮೆಚ್ಚುಗೆಯ ಮಾತಿಲ್ಲ! ಹಾಗಿರುವಾಗ ನಾವ್ಯಾಕೆ ಓದಬೇಕು?

Raja Marga Column neglect about Children

Raja Marga Column : ಇವರಿಗೆ ಇಡೀ ವರ್ಷವೂ ಸೂತಕದ ದಿನಗಳು!

ಇಂತಹ ವ್ಯಕ್ತಿಗಳು ನಿತ್ಯ ಸೂತಕದ ಮನಸ್ಥಿತಿಯವರು. ಜೀವನದ ಸಣ್ಣ ಸಣ್ಣ ಖುಷಿಯನ್ನು ಅವರು ಎಂಜಾಯ್ ಮಾಡೋದೇ ಇಲ್ಲ! ದೊಡ್ಡ ಸಾಧನೆ ಅವರು ಮಾಡುವುದೂ ಇಲ್ಲ!

ಇಂಥ ಉಸಿರುಕಟ್ಟುವ ಮೈಂಡ್ ಸೆಟ್ ವ್ಯಕ್ತಿಗಳು ನಮ್ಮ ಸುತ್ತ ಮುತ್ತ ಇದ್ದರೆ ನಾವು ಬದುಕುವುದು ಹೇಗೆ? ಇವರು ತಮ್ಮ ಕರ್ತವ್ಯಗಳನ್ನು ಸರಿಯಾಗಿ ಮಾಡುತ್ತಾರೊ ಇಲ್ಲವೋ ಗೊತ್ತಿಲ್ಲ, ಆದರೆ ಬೇರೆಯವರ ಕರ್ತವ್ಯಗಳ ಬಗ್ಗೆ ಪದೇ ಪದೇ ನೆನಪಿಸುತ್ತಾರೆ!

ಇದನ್ನೂ ಓದಿ : Raja Marga Column : ಬ್ಯುಸಿನೆಸ್‌ಗೆ ಬುದ್ಧಿವಂತಿಕೆ ಬೇಕಿಲ್ಲ, ಈ 5 ಅಂಶಗಳಿದ್ದರೆ ಸಾಕು!

ರೋಬೋಟಿಗೂ ಇವರಿಗೂ ಏನಾದರೂ ವ್ಯತ್ಯಾಸವು ಇದೆಯಾ?

ನಿರ್ಭಾವುಕರಾದ, ನೂರಕ್ಕೆ ನೂರರಷ್ಟು ನಿರ್ಲಿಪ್ತರಾದ, ಜೀವನ ಇಡೀ ಕರ್ತವ್ಯ ಎಂದು ಬಾಯಿ ಬಡಿದುಕೊಳ್ಳುವ, ಜೀವನದ ಸಣ್ಣ ಸಣ್ಣ ಖುಷಿಗಳನ್ನು ಸೆಲೆಬ್ರೇಟ್ ಮಾಡಲೂ ಕಂಜೂಸ್ ಮಾಡುವ, ನಕ್ಕರೆ ಮುತ್ತು ಉದುರಿಹೋದೀತು ಎಂದು ಭಾವಿಸುವ, ತಾವು ಸದಾ ಅಂತರ್ಮುಖಿಗಳಾಗಿ ಒಳಗೊಳಗೇ ಸುಖಿಸುವ, ಮಕ್ಕಳಿಗೆ ಸಲಿಗೆ ಕೊಟ್ಟರೆ ತಲೆಯ ಮೇಲೆ ಬಂದು ಕೂರುತ್ತಾರೆ ಎಂದು ಯೋಚನೆ ಮಾಡುವ ಹೆತ್ತವರು, ಮಕ್ಕಳನ್ನು ಹತ್ತಿರಕ್ಕೆ ಕರೆದು ಪ್ರೀತಿಯಿಂದ ಮಾತಾಡಿಸಿದರೆ ನಿಯಂತ್ರಣ ತಪ್ಪುತ್ತಾರೆ ಎಂದು ಭಾವಿಸುವ ಶಿಕ್ಷಕರು….ಇಂತಹವರು ನಮ್ಮ ನಡುವೆ ಖಂಡಿತವಾಗಿಯೂ ಇದ್ದಾರೆ. ಇಂತಹವರಿಗೂ ರೋಬೋಟಿಗೂ ಏನಾದರೂ ವ್ಯತ್ಯಾಸ (Human robots) ಇದೆಯಾ?

Continue Reading

ದೇಶ

CAA: ಸಿಎಎ ವಿರೋಧಿಸಿ ಸಲ್ಲಿಸಿದ 230ಕ್ಕೂ ಅಧಿಕ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ

ಕೇಂದ್ರವು ಸಿಎಎ (CAA) ಅಡಿಯಲ್ಲಿ ನಿಯಮಗಳನ್ನು ಹೊರಡಿಸಿದ ಒಂದು ದಿನದ ನಂತರ, ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನಿಯಮಗಳ ಅನುಷ್ಠಾನಕ್ಕೆ ತಡೆಯಾಜ್ಞೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

VISTARANEWS.COM


on

Supreme Court
Koo

ಹೊಸದಿಲ್ಲಿ: ಪೌರತ್ವ (ತಿದ್ದುಪಡಿ) ಕಾಯಿದೆಯ (Citizenship amendment Act – CAA) ಸಾಂವಿಧಾನಿಕ ಸಿಂಧುತ್ವವನ್ನು ಹಾಗೂ ಕೋರ್ಟ್‌ ನಿರ್ಧರಿಸುವವರೆಗೆ ಪೌರತ್ವ ತಿದ್ದುಪಡಿ ಕಾಯಿದೆಯ ಅನುಷ್ಠಾನವನ್ನು ತಡೆಯಲು ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾದ 230ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ (Supreme court) ಕೈಗೆತ್ತಿಕೊಳ್ಳಲಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಪರವಾಗಿ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಸಲ್ಲಿಕೆಗಳನ್ನು ಗಮನಿಸಿದೆ. ಒಮ್ಮೆ ವಲಸಿಗ ಹಿಂದೂಗಳಿಗೆ ಭಾರತೀಯ ಪೌರತ್ವವನ್ನು ನೀಡಿದರೆ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂಬ ಕಾರಣದಿಂದ ಶೀಘ್ರ ವಿಚಾರಣೆಗಾಗಿ ಒತ್ತಾಯಿಸಲಾಗಿದೆ.

ಸಿಎಎ ಕಾಯಿದೆಯನ್ನು 2019ರಲ್ಲಿ ಸಂಸತ್ತು ಅಂಗೀಕರಿಸಿದೆ. ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಡಿಸೆಂಬರ್ 31, 2014ರ ಮೊದಲು ವಲಸೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುವ ಉದ್ದೇಶವನ್ನು ಹೊಂದಿದೆ.

ಕೇಂದ್ರವು ಸಿಎಎ ಅಡಿಯಲ್ಲಿ ನಿಯಮಗಳನ್ನು ಹೊರಡಿಸಿದ ಒಂದು ದಿನದ ನಂತರ, ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನಿಯಮಗಳ ಅನುಷ್ಠಾನಕ್ಕೆ ತಡೆಯಾಜ್ಞೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಕಾನೂನನ್ನು ತಡೆಹಿಡಿಯಬೇಕು; ಈ ಕಾನೂನಿನ ಪ್ರಯೋಜನದಿಂದ ವಂಚಿತರಾಗುವ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದೆ.

IUML ಜೊತೆಗೆ, ಇತರ ಪಕ್ಷಗಳು ಮತ್ತು ವ್ಯಕ್ತಿಗಳಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (DYFI), ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಾ, ಅಸ್ಸಾಂನ ಕಾಂಗ್ರೆಸ್ ಸಂಸದ ಅಬ್ದುಲ್ ಖಲೀಕ್ ಮತ್ತು ಇತರರು ಸಹ ಅರ್ಜಿಗಳನ್ನು ಸಲ್ಲಿಸಿದ್ದಾರೆ.

2019ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ CAA ಅನ್ನು ಪ್ರಶ್ನಿಸಿದ ಆರಂಭಿಕ ಪಕ್ಷಗಳಲ್ಲಿ ಒಂದಾದ IUML, ನಿರ್ದಿಷ್ಟ ದೇಶಗಳಿಂದ ಬಂದ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ನೀಡುವ ಈ ಕಾನೂನು ʼವೇಗದ ಪ್ರಕ್ರಿಯೆʼಯನ್ನು ಸ್ಥಾಪಿಸುತ್ತಿದೆ. ಇದು ಕೇವಲ ಧಾರ್ಮಿಕ ಗುರುತನ್ನು ಆಧರಿಸಿ ತಾರತಮ್ಯಪೂರಿತವಾದ ಆಡಳಿತವನ್ನು ಜಾರಿಗೊಳಿಸುತ್ತದೆ ಎಂದು ವಾದಿಸಿದೆ.

ಕೇಂದ್ರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅರ್ಜಿದಾರರ ನಿಲುವನ್ನು ನಿರಾಕರಿಸಿದ್ದಾರೆ. “ಯಾವುದೇ ಅರ್ಜಿದಾರರಿಗೆ ಪೌರತ್ವ ನೀಡುವಿಕೆಯನ್ನು ಪ್ರಶ್ನಿಸಲು ಯಾವುದೇ ಅಧಿಕಾರವಿಲ್ಲ” ಎಂದು ಹೇಳಿದ್ದಾರೆ. ಸಿಎಎ ವಿರುದ್ಧ 237 ಅರ್ಜಿಗಳು ಬಾಕಿ ಉಳಿದಿದ್ದು, ನಿಯಮಗಳ ಅನುಷ್ಠಾನಕ್ಕೆ ತಡೆ ಕೋರಿ ನಾಲ್ಕು ಮಧ್ಯಂತರ ಅರ್ಜಿಗಳಿವೆ.

ಇದನ್ನೂ ಓದಿ: CAA: ಸಿಎಎ ತಡೆ ಕೋರಿದ ಅರ್ಜಿಗಳು ಮಾ.19ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

dina Bhavishya
Koo

ಚಂದ್ರನು ಕಟಕ ರಾಶಿಯಿಂದ ಮಂಗಳವಾರ ಮಧ್ಯಾಹ್ನ 03:32ಕ್ಕೆ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ ಹಾಗೂ ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಮೇಷ ರಾಶಿಯವರು ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ವೃಷಭ ರಾಶಿಯವರು ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ಆದರೆ ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ಮಿಥುನ ರಾಶಿಯವರು ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗ್ಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವಿರಿ. ಕೋಪದಿಂದ ಏನನ್ನು ಸಾಧಿಸಲಾಗದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-03-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ.
ತಿಥಿ: ದಶಮಿ 24:21 ವಾರ: ಮಂಗಳವಾರ
ನಕ್ಷತ್ರ: ಪುನರ್ವಸು 20:08 ಯೋಗ: ಶೋಭನ 16:35
ಕರಣ: ತೈತುಲ 11:30 ಅಮೃತ ಕಾಲ: ಸಂಜೆ 05:34ರಿಂದ 07:18 ರವರೆಗೆ
ದಿನದ ವಿಶೇಷ: ನಂಜನಗೂಡಿನ ಶ್ರೀಕಂಠಮುಡಿ ಉತ್ಸವ, ಚನ್ನಬಸವೇಶ್ವರ ರಥ

ಸೂರ್ಯೋದಯ : 6:24   ಸೂರ್ಯಾಸ್ತ : 06:30

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ:ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ. ಆಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ಆದರೆ ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಿರಲಿದೆ. ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗ್ಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವಿರಿ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಹಣದ ಹರಿವು ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿ ಸಿಗುವುದು. ಹೊಸ ಭರವಸೆಯ ಅವಕಾಶಗಳು ಹುಡುಕಿಕೊಂಡು ಬರಲಿದೆ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಫಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಇರಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಸಾಧಾರಣ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ಇರಲಿದೆ. ಆರೋಗ್ಯ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಅನಿರೀಕ್ಷಿತ ಪ್ರಯಾಣ ಬೆಳೆಸುವಿರಿ. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ ಇದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಆಹಾರದ ಕ್ರಮದಿಂದ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಅಮೂಲ್ಯ ವಸ್ತುಗಳ ಬಗ್ಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
varanasi nandi
ಅಂಕಣ7 mins ago

ನನ್ನ ದೇಶ ನನ್ನ ದನಿ ಅಂಕಣ: ಸತ್ಯಂ ಶಿವಂ ಸುಂದರಂ

Raja Marga human robots
ಸ್ಫೂರ್ತಿ ಕತೆ22 mins ago

Raja Marga Column : ಭಾವನೆಗಳೇ ಇಲ್ಲದ ರೋಬೋಟ್‌ನಂಥ ಮನುಷ್ಯರ ಜತೆ ಬದುಕೋದಾದರೂ ಹೇಗೆ?

Supreme Court
ದೇಶ29 mins ago

CAA: ಸಿಎಎ ವಿರೋಧಿಸಿ ಸಲ್ಲಿಸಿದ 230ಕ್ಕೂ ಅಧಿಕ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ

Fruits and Vegetables Spilling from Paper Bag
ಆರೋಗ್ಯ47 mins ago

Health Tips: ಈ ಹಣ್ಣು ಮತ್ತು ತರಕಾರಿಗಳನ್ನು ಎಂದಿಗೂ ಜೊತೆಯಾಗಿ ಇಡಲೇಬಾರದು!

Rain alert issued for Ramanagara and Kalaburagi Rising temperature in coastal areas
ಮಳೆ1 hour ago

Karnataka Weather : ರಾಜ್ಯದಲ್ಲಿಂದು ಬಿಸಿಲು, ಮಳೆ, ಗಾಳಿ ಒಟ್ಟೊಟ್ಟಿಗೆ ದಾಳಿ

dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Ukrainian minister
ದೇಶ7 hours ago

Ukrainian Minister: ಶೀಘ್ರ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೊ ಕುಲೆಬಾ ಭಾರತಕ್ಕೆ ಭೇಟಿ; ಉದ್ದೇಶವೇನು?

Techie couple assaulted over parking issue in Bengaluru
ಕರ್ನಾಟಕ8 hours ago

Assault Case: ಬೆಂಗಳೂರಲ್ಲಿ ಪಾರ್ಕಿಂಗ್‌ ವಿಚಾರಕ್ಕೆ ಟೆಕ್ಕಿ ದಂಪತಿ ಮೇಲೆ ಹಲ್ಲೆ

Banaglore incident
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ಬೆಂಗಳೂರು ರೌಡಿಗಳ ಸಾಮ್ರಾಜ್ಯ ಆಗದಿರಲಿ

Sarfaraz Khan
ಪ್ರಮುಖ ಸುದ್ದಿ8 hours ago

Sarfaraz Khan : ಬಿಸಿಸಿಐ ಕೇಂದ್ರ ಗುತ್ತಿಗೆಗೆ ಸರ್ಫರಾಜ್ ಖಾನ್, ಧ್ರುವ್ ಜುರೆಲ್​ ಸೇರ್ಪಡೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು14 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ4 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

Different Danny Filed Case Against Ravi Varma
ಬೆಂಗಳೂರು5 days ago

Different Danny : ಫೈಟ್‌ ಮಾಸ್ಟರ್ಸ್‌ ಫೈರ್‌ ಫೈಟಿಂಗ್‌; ರವಿವರ್ಮ ವಿರುದ್ಧ ಡಿಫರೆಂಟ್‌ ಡ್ಯಾನಿ ಸಮರ

ಟ್ರೆಂಡಿಂಗ್‌