FAME II sops Rs 500 crore for 4 e-scooter companies Subsidized assistance what is the benefit to consumersFAME II sops : ಓಲಾ ಸೇರಿ 4 ಇ-ಸ್ಕೂಟರ್‌ ಕಂಪನಿಗಳಿಗೆ 500 ಕೋಟಿ ರೂ. ಸಬ್ಸಿಡಿ, ಗ್ರಾಹಕರಿಗೆ ಏನೇನು ಲಾಭ?

ಪ್ರಮುಖ ಸುದ್ದಿ

FAME II sops : ಓಲಾ ಸೇರಿ 4 ಇ-ಸ್ಕೂಟರ್‌ ಕಂಪನಿಗಳಿಗೆ 500 ಕೋಟಿ ರೂ. ಸಬ್ಸಿಡಿ, ಗ್ರಾಹಕರಿಗೆ ಏನೇನು ಲಾಭ?

FAME II sops ಕೇಂದ್ರ ಸರ್ಕಾರ ಓಲಾ ಸೇರಿ ನಾಲ್ಕು ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ಉತ್ಪಾದನಾ ಕಂಪನಿಗಳಿಗೆ 500 ಕೋಟಿ ರೂ. ಸಬ್ಸಿಡಿ ನೀಡಲಿದೆ. ಇದರಿಂದ ಗ್ರಾಹಕರಿಗೂ ಪ್ರಯೋಜನವಾಗುವ ನಿರೀಕ್ಷೆ ಇದೆ. ವಿವರ ಇಲ್ಲಿದೆ.

VISTARANEWS.COM


on

FAME II sops Rs 500 crore for 4 e-scooter companies Subsidized assistance what is the benefit to consumers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕೇಂದ್ರ ಸರ್ಕಾರ 4 ಇ-ಸ್ಕೂಟರ್‌ ಕಂಪನಿಗಳಿಗೆ ದ್ವಿ ಚಕ್ರವಾಹನ ಉತ್ಪಾದನೆಗೆ ಸಂಬಂಧಿಸಿ 500 ಕೋಟಿ ರೂ. ನೆರವನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. (FAME II sops) ಈ ಹಿನ್ನೆಲೆಯಲ್ಲಿ ಈ ಕಂಪನಿಗಳು ಗ್ರಾಹಕರಿಗೆ ಇ-ಸ್ಕೂಟರ್‌ಗಳ ಚಾಜರ್‌ಗಳ ಮೌಲ್ಯವನ್ನು ಮರುಪಾವತಿಸಲು (reimburse) ಒಪ್ಪಿವೆ. FAME II ಸ್ಕೀಮ್‌ ಅಡಿಯಲ್ಲಿ ಓಲಾ ಎಲೆಕ್ಟ್ರಿಕ್‌, ಅಥೆರ್‌, ಟಿವಿಎಸ್‌ ಮತ್ತು ಹೀರೊ ಮೊಟೊಕಾರ್ಪ್‌ಗೆ ಸಬ್ಸಿಡಿ ಸಿಗಲಿದೆ.

ಓಲಾಗೆ ಭಾರಿ ಕೈಗಾರಿಕೆ ಸಚಿವಾಲಯದಿಂದ ಅತಿ ಹೆಚ್ಚು ಮೊತ್ತ, ಅಂದರೆ 370 ಕೋಟಿ ರೂ. ಸಿಗುವ ನಿರೀಕ್ಷೆ ಇದೆ. ಅಥೆರ್‌ಗೆ 275 ಕೋಟಿ ರೂ, ಟಿವಿಎಸ್‌ಗೆ 150 ಕೋಟಿ ರೂ, ಹೀರೊಮೊಟೊ ಕಾರ್ಪ್‌ಗೆ 28-30 ಕೋಟಿ ರೂ. ಸಬ್ಸಿಡಿ ನೆರವು ಸಿಗಲಿದೆ ಎಂದು ಮೂಲಗಳು ತಿಳಿಸಿವೆ. ಆರಂಭಿಕ ಹಂತದಲ್ಲಿ 500 ಕೋಟಿ ರೂ. ಬಿಡುಗಡೆ ಮಾಡಿದ ಬಳಿಕ 288 ಕೋಟಿ ರೂ. ಹೆಚ್ಚುವರಿ ನೆರವು ಕೂಡ ಬಿಡುಗಡೆಯಾಗಲಿದೆ.

ಅಥೆರ್‌ 95,000 ಗ್ರಾಹಕರಿಗೆ 140 ಕೋಟಿ ರೂ. ಹಣವನ್ನು ಮರು ಪಾವತಿಸಲಿದೆ. ಅಥೆರ್‌ 450X ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ಖರೀದಿಸುವವರಿಗೆ (Ather 450X ) ನೆರವು ಲಭಿಸಲಿದೆ. ಹಾಗೆಯೇ ಓಲಾ 1 ಲಕ್ಷ ಗ್ರಾಹಕರಿಗೆ ( ಓಲಾ ಎಸ್‌1 ಪ್ರೊ) ನೆರವು ನೀಡಲಿದೆ. ಕೇಂದ್ರ ಸರ್ಕಾರ ಫೇಮ್‌ II ಅಡಿಯಲ್ಲಿ ಮುಂದಿನ ಕೆಲ ವರ್ಷಗಳ ಅವಧಿಗೆ 10,000 ಕೋಟಿ ರೂ.ಗಳ ನೆರವನ್ನು ಘೋಷಿಸಿತ್ತು. ಆದರೆ ಕಂಪನಿಗಳು ಸಬ್ಸಿಡಿ ನೆರವಿನಲ್ಲಿ ವಿಳಂಬವಾಗುತ್ತಿರುವುದರ ಬಗ್ಗೆ ದೂರಿದ್ದವು. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 5000 ಕೋಟಿ ರೂ. ಬಿಲ್‌ ಚುಕ್ತಾ ಮಾಡಲು ಪರಿಶೀಲಿಸಿದೆ.

ಸರ್ಕಾರ ತನ್ನ ಎಲೆಕ್ಟ್ರಿಕ್‌ ವೆಹಿಕಲ್‌ ಸಬ್ಸಿಡಿ ಯೋಜನೆಯ ಅಡಿಯಲ್ಲಿ ಎಲೆಕ್ಟ್ರಿಕ್‌ ಬಸ್‌ಗಳಿಗೆ (electric buses) ಕೂಟ ಸಬ್ಸಿಡಿ ನೆರವು ನೀಡಲು ಉದ್ದೇಶಿಸಿದೆ. ಎಲೆಕ್ಟ್ರಿಕ್‌ ತ್ರಿ ಚಕ್ರ ವಾಹನಗಳಿಗೆ ನೀಡುವ ಸಬ್ಸಿಡಿ ಯೋಜನೆಯಲ್ಲಿ 2,000 ಕೋಟಿ ರೂ. ಫಂಡ್‌ ಬಳಕೆಯಾಗಿಲ್ಲ. ಹೀಗಾಗಿ ಅದನ್ನು ಎಲೆಕ್ಟ್ರಿಕ್‌ ಬಸ್‌ಗಳಿಗೆ ನೀಡಲು ಉದ್ದೇಶಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಸಂವಿಧಾನ ತಿದ್ದುಪಡಿ ಮಾಡುವುದಾಗಿ ಘೋಷಿಸಿದ ಪ್ರಿಯಾಂಕಾ ಗಾಂಧಿ!

Lok Sabha Election 2024: ಜಾತಿ ಗಣತಿಯನ್ನು ಇಡೀ ದೇಶದಲ್ಲಿ ನಡೆಸುತ್ತೇವೆ. ಯಾವ ಸಮುದಾಯದವರು ಎಷ್ಟಿದ್ದಾರೆ ಎಂಬುದನ್ನು ತಿಳಿದುಕೊಳ್ಳುತ್ತೇವೆ. ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಪ್ರತ್ಯೇಕ ಬಜೆಟ್ ಅನ್ನು ಮಂಡಿಸುತ್ತೇವೆ. ಅಲ್ಲದೆ, ಸಂವಿಧಾನ ತಿದ್ದುಪಡಿ ಮಾಡಿ ಶೇಕಡಾ 50ರಷ್ಟು ಮೀಸಲಾತಿ ಕೊಡುತ್ತೇವೆ. ಕೃಷಿಗಾಗಿ ಹೊಸ ನೀತಿ ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

VISTARANEWS.COM


on

Lok Sabha Election 2024 Priyanka Gandhi announces constitutional amendment
Koo

ಚಿತ್ರದುರ್ಗ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಈಗ ಪ್ರಿಯಾಂಕಾ ಗಾಂಧಿ (Priyanka Gandhi) ಕರ್ನಾಟಕಕ್ಕೆ ಬಂದಿದ್ದು, ಚಿತ್ರದುರ್ಗ ಸಮಾವೇಶದಲ್ಲಿ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಈ ಮೂಲಕ ಮಹಿಳೆಯರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಸಂವಿಧಾನ ತಿದ್ದುಪಡಿ (Constitutional Amendment) ಮಾಡಿ ಶೇಕಡಾ 50ರಷ್ಟು ಮೀಸಲಾತಿ ಕೊಡುತ್ತೇವೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ನ್ಯಾಯ ಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಜಾತಿ ಗಣತಿಯನ್ನು ಇಡೀ ದೇಶದಲ್ಲಿ ನಡೆಸುತ್ತೇವೆ. ಯಾವ ಸಮುದಾಯದವರು ಎಷ್ಟಿದ್ದಾರೆ ಎಂಬುದನ್ನು ತಿಳಿದುಕೊಳ್ಳುತ್ತೇವೆ. ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಪ್ರತ್ಯೇಕ ಬಜೆಟ್ ಅನ್ನು ಮಂಡಿಸುತ್ತೇವೆ. ಅಲ್ಲದೆ, ಸಂವಿಧಾನ ತಿದ್ದುಪಡಿ ಮಾಡಿ ಶೇಕಡಾ 50ರಷ್ಟು ಮೀಸಲಾತಿ ಕೊಡುತ್ತೇವೆ. ಕೃಷಿಗಾಗಿ ಹೊಸ ನೀತಿ ಮಾಡುತ್ತೇವೆ ಎಂದು ಹೇಳಿದರು.

ಬಂಡವಾಳಶಾಹಿಗಳಿಗೆ ದೇಶದ ಆಸ್ತಿ ಮಾರಾಟ

ದೇಶದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ನಾನು ಮಾತನಾಡುತ್ತೇನೆ. ದೇಶದಲ್ಲಿ ಎರಡು ಸತ್ಯಗಳಿವೆ. ಒಂದು, ನೀವು ಬೆಲೆ ಏರಿಕೆಯಿಂದ ಕಷ್ಟ ಪಡುತ್ತಿದ್ದೀರಿ. ಮತ್ತೊಂದು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾತನಾಡುವುದಾಗಿದೆ ಎಂದು ಮಾಧ್ಯಮಗಳು ಹೇಳುತ್ತಿರುವುದು. ಆದರೆ, ದೇಶದಲ್ಲಿ ಅತಿ ಹೆಚ್ಚು ನಿರುದ್ಯೋಗ ಸಮಸ್ಯೆಗಳಿವೆ. ದೊಡ್ಡ ದೊಡ್ಡ ಮಾತುಗಳನ್ನು ಮೋದಿ ಆಡಿದ್ದರು. ಹೆಣ್ಣುಮಕ್ಕಳು ಹಬ್ಬ ಹರಿ ದಿನ ಮಾಡಲು ಕಷ್ಟ ಪಡುತ್ತಿದ್ದಾರೆ. ಬೆಲೆ ಏರಿಕೆಯಿಂದ ಕಷ್ಟಪಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲದರಲ್ಲೂ ಬೆಲೆ ಏರಿಕೆ ಆಗಿದೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸಿಗುತ್ತಿಲ್ಲ, ಜಿಎಸ್‌ಟಿಯಿಂದ ಜನ ಕಷ್ಟದಲ್ಲಿ ಇದ್ದಾರೆ. ದೇಶದ ಆಸ್ತಿಯನ್ನು ಬಂಡವಾಳಶಾಹಿಗಳಿಗೆ ಮೋದಿ ಮಾರಾಟ ಮಾಡುತ್ತಿದ್ದಾರೆ. ಅವರಿಗೆ 16 ಲಕ್ಷ ಕೋಟಿ ಸಬ್ಸಿಡಿ ಕೊಟ್ಟಿದ್ದಾರೆ. ವಿಮಾನ ನಿಲ್ದಾಣ, ಬಂದರು ಸೇರಿದಂತೆ ಎಲ್ಲವನ್ನು ಮಾರಾಟ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳ ಬಾಯಿ ಮುಚ್ಚಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ಬಿಜೆಪಿಗೆ ಚಂದಾ ಕೊಟ್ಟಿರುವ ಐಟಿ ದಾಳಿಗೊಳಪಟ್ಟ ಕಂಪನಿಗಳು

ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿದ್ದಾರೆ. ಒಬ್ಬರು ಸಿಎಂ, ಇನ್ನೊಬ್ಬರು ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿದ್ದಾರೆ. ಚುನಾವಣಾ ಬಾಂಡ್‌ಗಳ ಮೂಲಕ ಹಗರಣ ಮಾಡಿದ್ದಾರೆ. ದಾನ ಮಾಡಿದವರ ಹೆಸರು ಯಾರಿಗೂ ಗೊತ್ತಾಗುವುದಿಲ್ಲ. ಹೆಸರು ಮುಚ್ಚಿಡುವುದು ಸರಿಯಲ್ಲ, ಬಹಿರಂಗಗೊಳಿಸಿ ಎಂದು ಕೋರ್ಟ್ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಯಾರ ಬಳಿ ಚಂದಾ ವಸೂಲಿ ಮಾಡಿದ್ದಾರೆ ಎಂದು ಲಿಸ್ಟ್ ಹೊರಗೆ ಬಂದ ಮೇಲೆ ಗೊತ್ತಾಯಿತು. ಯಾವ ಕಂಪನಿಗಳ ಮೇಲೆ ದಾಳಿಯಾಗಿತ್ತೋ ಆ ಕಂಪನಿಗಳು ದಾನ ಕೊಟ್ಟಿವೆ. ಕಪ್ಪು ಹಣ ತರಲು ನೋಟು ರದ್ದು ಮಾಡಿದ್ದಾಗಿ ಹೇಳಿದ್ದರು. ಆ ಸಂದರ್ಭದಲ್ಲಿ ನೀವು ಕಷ್ಟ ಪಟ್ಟಿದ್ದೀರಿ. ಆದರೆ, ಅದೇ ಸಮಯದಲ್ಲಿ ಕಪ್ಪು ಹಣವನ್ನು ವೈಟ್ ಮಾಡಿಕೊಂಡರು. ಅವರ ತಪ್ಪು ಮುಚ್ಚಿಕೊಳ್ಳಲು ವಿಪಕ್ಷದವರು ಭ್ರಷ್ಟರು ಎಂದು ಕರೆಯುತ್ತಿದ್ದಾರೆ. ದೇಶವನ್ನು ಆರ್ಥಿಕವಾಗಿ ಹಾಳು ಮಾಡುತ್ತಿದ್ದಾರೆ. ಚುನಾವಣೆ ಬಂದಾಗ ಜಾತಿ, ಧರ್ಮದ ಬಗ್ಗೆ ಮಾತನಾಡಿ ಗಮನವನ್ನು ಬೇರೆ ಕಡೆ ಸೆಳೆಯುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದರು.

ಸಂವಿಧಾನ ಬದಲಾವಣೆ ಮಾತನಾಡುವ ಬಿಜೆಪಿ ನಾಯಕರು

ನಿಮ್ಮ ಕಷ್ಟದ ಬಗ್ಗೆ ಮಾತನಾಡದ ನರೇಂದ್ರ ಮೋದಿ ಅವರು, 400 ಹೆಚ್ಚು ಸ್ಥಾನ ಕೊಡಿ, ಒಳ್ಳೆಯ ಕೆಲಸ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಇದರ ಅರ್ಥವೇನು? ಜನರೇ ಸಾರ್ವಭೌಮರು ಎಂದು ಸಂವಿಧಾನ ಹೇಳಿದೆ. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ನಿಮ್ಮ ಹಕ್ಕುಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದರು.

ಸುಳ್ಳು ಬಿಟ್ಟರೆ ಬೇರೇನನ್ನೂ ಹೇಳಿಲ್ಲ

ದೇಶದಲ್ಲಿ ಜನರ ಕಷ್ಟಗಳು ದೊಡ್ಡದಾಗಿವೆ. ನೀವು ಎಷ್ಟು ಸಂಘರ್ಷ ಮಾಡುತ್ತಿದ್ದೀರ ಎಂಬುದು ನರೇಂದ್ರ ಮೋದಿ ಅವರಿಗೆ ಗೊತ್ತಿಲ್ಲ. ಒಂದು ಕಾಲದಲ್ಲಿ ಪ್ರಧಾನ ಮಂತ್ರಿಗಳು ನಿಮ್ಮ ಹಳ್ಳಿ, ನಿಮ್ಮ ಮನೆಗಳಿಗೆ ಬರುತ್ತಿದ್ದರು. ಒಂದು ಕಾಲದಲ್ಲಿ ದೇಶದ ನಾಯಕರು ಸೇವಾ ಮನೋಭಾವದಿಂದ ಇರುತ್ತಿದ್ದರು. ಆದರೆ, ಇಂದಿನ ನಾಯಕನ ಬಳಿ ಅಹಾಂಕರ ಕಾಣುತ್ತಿದೆ. ಮೋದಿ ಸರ್ಕಾರ ಸುಳ್ಳು ಬಿಟ್ಟರೆ ಬೇರೆ ಏನನ್ನೂ ಹೇಳಿಲ್ಲ ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಬರ ಪರಿಹಾರದ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದು ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಕಳಸಾ ಬಂಡೂರಿ ಯೋಜನೆಗೆ ಅನುಮತಿ ಕೊಟ್ಟಿಲ್ಲ. ಭದ್ರಾ ಯೋಜನೆಗೆ ಹಣ ಕೊಟ್ಟಿಲ್ಲ. ಕರ್ನಾಟಕಕ್ಕೆ ಯಾಕೆ ಮೋದಿ ಹೀಗೆ ಮಾಡುತ್ತಿದ್ದಾರೆ? ಯಾವ ರಾಜ್ಯದಲ್ಲಿ ಅವರಿಗೆ ಅಧಿಕಾರ ಇರುವುದದಿಲ್ಲವೋ ಅಲ್ಲಿ ಹಣ ಕೊಡೋದಿಲ್ಲ. ಕೇವಲ ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೆ ಮಾತ್ರ ಹಣ ಕೊಡಲಾಗುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಇಲ್ಲಿರೋದು ಗ್ಯಾರಂಟಿ ಅಲೆ ಮಾತ್ರ; ಹಸಿ ಸುಳ್ಳು ಹೇಳುತ್ತಿರುವ ಮೋದಿ, ದೇವೇಗೌಡ: ಸಿಎಂ ಸಿದ್ದರಾಮಯ್ಯ

ಅಗ್ನಿಪಥ್‌ಗೆ ಬ್ರೇಕ್‌

ಗ್ಯಾರಂಟಿ ಯೋಜನೆಯಿಂದ ನಿಮ್ಮ ಬದುಕು ಬದಲಾಗಿಲ್ಲವಾ? ಸುಧಾರಣೆಯಾಗಿಲ್ಲವಾ ಎಂದು ಪ್ರಶ್ನಿಸಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ನ್ಯಾಯ ಪತ್ರವನ್ನು ಬಿಡುಗಡೆ ಮಾಡಿದೆ. ನಮ್ಮ ಪಕ್ಷ ಅಧಿಕಾರಿಕ್ಕೆ ಬಂದರೆ ವರ್ಷಕ್ಕೆ ಒಂದು ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ. ಕೇಂದ್ರ ಸರ್ಕಾರದ ಉದ್ಯೋಗದಲ್ಲಿ ಶೇಕಡಾ 50ರಷ್ಟನ್ನು ಮಹಿಳೆಯರಿಗೆ ಮೀಸಲಿಡುತ್ತೇವೆ. ಆರೋಗ್ಯ ವಿಮೆ, ಅಂಗನವಾಡಿ ಕಾರ್ಯಕರ್ತರ ಸಂಬಳವನ್ನು ಹೆಚ್ಚಳ ಮಾಡುತ್ತೇವೆ. ಶಿಕ್ಷಣಕ್ಕೆ ಸಾಲ ಕೊಡುತ್ತೇವೆ, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಸಾಲ ಕೊಡುತ್ತೇವೆ. ನರೇಂದ್ರ ಮೋದಿ ಸರ್ಕಾರದಲ್ಲಿ ಎಷ್ಟು ಉದ್ಯೋಗ ಖಾಲಿ ಇದೆಯೋ ಅಷ್ಟನ್ನೂ ಭರ್ತಿ ಮಾಡುತ್ತೇವೆ. ಅಗ್ನಿಪಥ್ ನಿಲ್ಲಿಸಿ ಹಿಂದಿನ ರೀತಿಯಲ್ಲಿ ನೇಮಕಾತಿ ಮಾಡುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು.

Continue Reading

ಪ್ರಮುಖ ಸುದ್ದಿ

Suresh Raina : ಧೋನಿ ನೇತೃತ್ವದಲ್ಲಿ ವಿಶ್ವ ಕಪ್ ಗೆದ್ದಿರುವುದು ಪೂರ್ವ ನಿಯೋಜಿತ; ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ ರೈನಾ!

Suresh Raina: ಆ ವಿಶ್ವಕಪ್ ಆವೃತ್ತಿಯಲ್ಲಿ ಸುರೇಶ್ ಟೀಮ್ ಇಂಡಿಯಾ ಪರ ಹೆಚ್ಚು ಪಂದ್ಯಗಳನ್ನು ಆಡಿರಲಿಲ್ಲ. ಆದರೆ ಅವರು ತಂಡದ ಭಾಗವಾಗಿದ್ದರು. ವಿಶ್ವಕಪ್ ಗೆಲುವಿನ ವೇಳೆಯಲ್ಲಿ ಘಟಿಸಿರು ಪ್ರತಿಯೊಂದು ವಿಷಯವನ್ನೂ ತಿಳಿದಿದ್ದರು. ರೈನಾ ಕಡಿಮೆ ಪಂದ್ಯಗಳನ್ನು ಆಡಿರಬಹುದು. ಆದರೆ ಆಡಿದ ಪಂದ್ಯಗಳು ಬಹಳ ಮುಖ್ಯವಾಗಿದ್ದವು.

VISTARANEWS.COM


on

Suresh Raina
Koo

ನವದೆಹಲಿ: ಎಂಎಸ್ ಧೋನಿ (MS Dhoni) ನಾಯಕತ್ವದಲ್ಲಿ ಭಾರತ ತಂಡ 2011ರ ಏಕ ದಿನ ವಿಶ್ವ ಕಪ್​ (2011 ODI World Cup) ಗೆದ್ದಿದೆ. ಆ ಟೂರ್ನಿಯಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಸುರೇಶ್ ರೈನಾ (Suresh Raina) ಕೂಡಾ ಭಾರತ ತಂಡದ ಭಾಗವಾಗಿದ್ದರು. ಅವರೀಗ ವಿಶ್ವ ಕಪ್​ ಗೆಲುವಿನ ಕುರಿತು ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ್ದು ಅದು ಪೂರ್ವ ನಿಯೋಜಿತ ಗೆಲುವು ಎಂದು ಹೇಳಿದ್ದಾರೆ. ಶ್ರೀಲಂಕಾ ವಿರುದ್ಧದ ಫೈನಲ್​​ ಫೈನಲ್ ಗೆಲುವು ಸೇರಿದಂತೆ ಇಡೀ ಪಂದ್ಯಾವಳಿಯುನ್ನು ಮೊದಲೇ ಪ್ಲ್ಯಾನ್ ಮಾಡಲಾಗಿತ್ತು ಎಂದು ಎಂದು ರೈನಾ ಇತ್ತೀಚೆಗೆ ಲಾಲಾಂಟಾಪ್ ಸಂದರ್ಶನದಲ್ಲಿ ಹೇಳಿದ್ದಾರೆ. ಮಾಜಿ ಎಡಗೈ ಬ್ಯಾಟರ್​ ಆ ಸಂದರ್ಶನದಲ್ಲಿ ಇನ್ನಷ್ಟು ಆಸಕ್ತಿದಾಯಕ ಬಹಿರಂಗಪಡಿಸಿದ್ದಾರೆ. ಅದರಲ್ಲಿ ಗಮನ ಸೆಳೆದಿರುವುದು ವಿಶ್ವ ಕಪ್ ಗೆಲುವು

ಆ ವಿಶ್ವಕಪ್ ಆವೃತ್ತಿಯಲ್ಲಿ ಸುರೇಶ್ ಟೀಮ್ ಇಂಡಿಯಾ ಪರ ಹೆಚ್ಚು ಪಂದ್ಯಗಳನ್ನು ಆಡಿರಲಿಲ್ಲ. ಆದರೆ ಅವರು ತಂಡದ ಭಾಗವಾಗಿದ್ದರು. ವಿಶ್ವಕಪ್ ಗೆಲುವಿನ ವೇಳೆಯಲ್ಲಿ ಘಟಿಸಿರು ಪ್ರತಿಯೊಂದು ವಿಷಯವನ್ನೂ ತಿಳಿದಿದ್ದರು. ರೈನಾ ಕಡಿಮೆ ಪಂದ್ಯಗಳನ್ನು ಆಡಿರಬಹುದು. ಆದರೆ ಆಡಿದ ಪಂದ್ಯಗಳು ಬಹಳ ಮುಖ್ಯವಾಗಿದ್ದವು. 50 ಓವರ್​ಗಳ ವಿಶ್ವಕಪ್​ನಲ್ಲಿ ಅವರು ವೆಸ್ಟ್ ಇಂಡೀಸ್ ವಿರುದ್ಧ ಚೆನ್ನೈನಲ್ಲಿ ಪಾದಾರ್ಪಣೆ ಮಾಡಿದ್ದರು.

ರೈನಾ ಚೊಚ್ಚಲ ವಿಶ್ವಕಪ್ ಆವೃತ್ತಿ

ಅಹ್ಮದಾಬಾದ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್​​ನ 2 ನೇ ಕ್ವಾರ್ಟರ್ ಫೈನಲ್​​ನಲ್ಲಿ ಸುರೇಶ್ ರೈನಾ ಎರಡನೇ ಬಾರಿಗೆ ಕಾಣಿಸಿಕೊಂಡಿದ್ದರು ಅಲ್ಲಿ ಭಾರತವು ಹಾಲಿ ಚಾಂಪಿಯನ್​ಗಳನ್ನು ಸೋಲಿಸಿತು. ನಂತರ ಅವರು ಮೊಹಾಲಿಯಲ್ಲಿ ಪಾಕಿಸ್ತಾನ ವಿರುದ್ಧ ಸೆಮಿಫೈನಲ್​​ನಲ್ಲಿ ಆಡಿದರು. ಅವರ 4ನೇ ಪಂದ್ಯವು ಮುಂಬೈನಲ್ಲಿ ನಡೆದ ಫೈನಲ್ ಆಗಿತ್ತು. ಅಲ್ಲಿ ಭಾರತೀಯರು ಶ್ರೀಲಂಕಾವನ್ನು 6 ವಿಕೆಟ್​ಗಳಿಂದ ಸೋಲಿಸಿ 1983ರ ನಂತರ ಮೊದಲ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿದರು.

ಗೆಲವು ಹೇಗೆ ಪೂರ್ವ ನಿಯೋಜಿತ ಎಂಬ ಸುರೇಶ್ ರೈನಾ ವಿವರಣೆ ಹೀಗಿದೆ

ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಅವರನ್ನು ಬೇಗ ಔಟ್ ಆದ ತಕ್ಷಣ ಡ್ರೆಸ್ಸಿಂಗ್ ಕೋಣೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು ಎಂಬುದನ್ನು ಸುರೇಶ್ ರೈನಾ ಮೊದಲು ಒಪ್ಪಿಕೊಂಡಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ 3 ನೇ ವಿಕೆಟ್​​ಗೆ ಉತ್ತಮ ಜೊತೆಯಾಟ ನೀಡಿದಾಗ ಭರವಸೆಗಳು ಉಂಟಾದವು. ಕೊಹ್ಲಿ ನಿರ್ಗಮನದ ನಂತರ ಎಂಎಸ್ ಧೋನಿ ತಮ್ಮ ಪ್ರಧಾನ ಫಾರ್ಮ್​ನಲ್ಲಿದ್ದ ಯುವರಾಜ್ ಸಿಂಗ್ ಬದಲಿಗೆ ಬ್ಯಾಟಿಂಗ್ ಮಾಡಲು ಹೊರನಡೆದಿದ್ದು ಅಚ್ಚರಿ ರೈನಾ ನೆನಪಿಸಿಕೊಂಡರು.

ಇದನ್ನೂ ಓದಿ: Virat Kohli : ವಿರಾಟ್ ಕೊಹ್ಲಿಯ 50ನೇ ಏಕದಿನ ಕ್ರಿಕೆಟ್​ ಶತಕಕ್ಕೆ ಅಂತಾರಾಷ್ಟ್ರೀಯ ಗೌರವ

ಮುರಳೀಧರನ್ ಅವರ ಸ್ಪಿನ್ ದಾಳಿಯನ್ನು ನಿಭಾಯಿಸಲು ಯೋಜಿಸಿದ ಧೋನಿ, ಎಡಗೈ ಮತ್ತು ಬಲಗೈ ಸಂಯೋಜನೆಯನ್ನು ಬಯಸಿದ್ದರು. ಅದಕ್ಕಾಗಿ ಯುವರಾಜ್ ಅವರಿಗಿಂತ ಮೊದಲು ಧೋನಿ ಬ್ಯಾಟಿಂಗ್ ಮಾಡಲು ಮುಂದಾದರು ಎಂದು ಸುರೇಶ್ ರೈನಾ ಹೇಳಿದ್ದಾರೆ. ಮ್ಯಾನ್​ ಆಫ್​​​ ದಿ ಟೂರ್ನಮೆಂಟ್​ ಪ್ರಶಸ್ತಿ ಪಡೆದ ಯುವರಾಜ್ ಅವರಿಗಿಂತ ಮುಂದೆ ಹೋಗುವ ಧೋನಿಯ ನಿರ್ಧಾರವು ಮಾಸ್ಟರ್ ಸ್ಟ್ರೋಕ್ ಆಗಿತ್ತು. ಇವೆಲ್ಲವೂ ಪೂರ್ವ ನಿಯೋಜಿತ ಎಂದರು. ಅಂದ ಹಾಗೆ ಈ ನಿಯೋಜನೆಯನ್ನು ಮಾಡಿದ್ದು ಯಾರು ಎಂದು ಕೇಳಿದ ಪ್ರಶ್ನೆಗೆ ‘ಮೇಲಿರುವ ಭಗವಂತ’ ಎಂದು ಉತ್ತರಿಸಿದ್ದಾರೆ.

“ಮೊದಲ ಎರಡು ವಿಕೆಟ್​ಗಳು ಬಿದ್ದ ನಂತರ ಡ್ರೆಸ್ಸಿಂಗ್ ರೂಮ್​​ನಲ್ಲಿ ಮೌನವಿತ್ತು. ಆದರೆ ಗೌತಮ್ ಗಂಭೀರ್​ ಮತ್ತು ವಿರಾಟ್ ನಡುವಿನ ಪಾಲುದಾರಿಕೆ (ಪಂದ್ಯವನ್ನು ಬದಲಾಯಿಸಿತು). ವಿರಾಟ್ ವಿಕೆಟ್ ಬಿದ್ದಾಗ ನಾನು ಡ್ರೆಸ್ಸಿಂಗ್ ರೂಮ್​ನಲ್ಲಿದ್ದೆ. ಧೋನಿ ಭಾಯ್ ಬ್ಯಾಟಿಂಗ್ ಮಾಡಲು ಹೊರಗೆ ಹೊರಟರು. ನಾನು ಇದ್ದಕ್ಕಿದ್ದಂತೆ ಏನಾಯಿತು ಎಂದು ನೋಡಿದಾಗ ನಾನು ಹಾಗೆ ಭಾವಿಸಿದೆ”ಎಂದು ಸುರೇಶ್ ರೈನಾ ಹೇಳಿದ್ದಾರೆ.

“ಧೋನಿ ಭಾಯ್ ತೆಗೆದುಕೊಂಡ ಎಲ್ಲಾ ನಿರ್ಧಾರಗಳು ಮಾಸ್ಟರ್ ಸ್ಟ್ರೋಕ್​ಗಳಾಗಿದ್ದವು. ಏಕೆಂದರೆ ಆ ಸಮಯದಲ್ಲಿ ಸಿಎಸ್​ಕೆ ಪರ ಆಡುತ್ತಿದ್ದ ಮುರಳೀಧರನ್ ಎದುರಾಳಿ ತಂಡದಲ್ಲಿದೆ. ಆದ್ದರಿಂದ ಯುವಿ ಪ್ರಧಾನ ಫಾರ್ಮ್​ನಲ್ಲಿದ್ದರೂ ಅವರು ಎಡ-ಬಲ ಸಂಯೋಜನೆಯನ್ನು ಹೊಂದಲು ಬಯಸಿದರು ಎಂದು ಹೇಳಿದ್ದಾರೆ.

ಇಡಿ ಟೂರ್ನಿಯಲ್ಲಿ ಕಾಲಕಾಲಕ್ಕೆ ಬದಲಾವಣೆ ಮಾಡಲಾಗಿದೆ. ಆಟಗಾರರನ್ನು ಬಳಸಿಕೊಳ್ಳಲಾಗಿದೆ. ಆದ್ದರಿಂದ ವಿಶ್ವಕಪ್ ಸ್ಕ್ರಿಪ್ಟ್ ಮಾಡಲಾಗಿದೆ ಎಂದು ನನಗೆ ಅನಿಸಿತು. ಏನಾಗುತ್ತಿದೆಯೋ ಅದು ಖಂಡಿತವಾಗಿಯೂ ಸಂಭವಿಸುತ್ತದೆ ಮತ್ತು ಅದನ್ನು ಮೇಲಿನ ಭಗವಂತ ಬರೆದಿದ್ದಾನೆ”ಎಂದು ರೈನಾ ಮುಕ್ತಾಯಗೊಳಿಸಿದರು.

Continue Reading

ದೇಶ

Diamond Smuggling : ನೂಡಲ್ಸ್​ ಪ್ಯಾಕೆಟ್​​ನಲ್ಲಿ ಸಿಕ್ಕಿತು 6.46 ಕೋಟಿ ರೂಪಾಯಿ ಮೌಲ್ಯದ ವಜ್ರ!

Dimond Smuggling: ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

dimond smuggling
Koo

ಮುಂಬೈ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ನೂಡಲ್ಸ್ ಪ್ಯಾಕೆಟ್​ಗಳಲ್ಲಿ ಹುದುಗಿಸಿಟ್ಟಿದದ ವಜ್ರಗಳ ಹರಳುಗಳು (Diamond Smuggling) ಪತ್ತೆಯಾಗಿವೆ. ಅದರ ಮೌಲ್ಯ 6.48 ಕೋಟಿ ರೂಪಾಯಿ ಎಂದು ಮೌಲ್ಯ ಮಾಪನ ಮಾಡಲಾಗಿದೆ. ಅರೋಪಿ ಸಮೇತ ಅಧಿಕಾರಿಗಳು ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯನ್ನು ವಿವರಿಸಿದ ಅಧಿಕಾರಿಯೊಬ್ಬರು ಮುಂಬೈನಿಂದ ಬ್ಯಾಂಕಾಕ್​​ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ತಡೆಯಲಾಯಿತು. ಈ ವೇಳೆ ಆತನ ಟ್ರಾಲಿ ಬ್ಯಾಗ್​ನಲ್ಲಿ ನೂಡಲ್ಸ್ ಪ್ಯಾಕೆಟ್​ಗಳಿದ್ದವು. ಅದರಲ್ಲಿ ಅಡಗಿಸಿಟ್ಟಿದ್ದ ವಜ್ರಗಳಿದ್ದು/ ಅವುಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂತು ಎಂದು ಹೇಳಿದ್ದಾರೆ.

ಅದೇ ರೀತಿ ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿರುವುದು ಗೊತ್ತಾಯಿತು ಎಂದು ಅವರು ಹೇಳಿದ್ದಾರೆ.

ದುಬೈ ಮತ್ತು ಅಬುಧಾಬಿಯಿಂದ ತಲಾ ಇಬ್ಬರು, ಬಹ್ರೇನ್, ದೋಹಾ, ರಿಯಾದ್, ಮಸ್ಕತ್, ಬ್ಯಾಂಕಾಕ್ ಮತ್ತು ಸಿಂಗಾಪುರದಿಂದ ತಲಾ ಒಬ್ಬರು ಸೇರಿದಂತೆ ಕನಿಷ್ಠ 10 ಭಾರತೀಯ ಪ್ರಜೆಗಳನ್ನು ತಡೆದು 4.04 ಕೋಟಿ ಮೌಲ್ಯದ 6.199 ಕೆ.ಜಿ ಚಿನ್ನ ಸಾಗಿಸುತ್ತಿರುವುದು ಕಂಡುಬಂದಿದೆ. ಅವರಲ್ಲಿ ಮೂವರನ್ನು ನಂತರ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ರೆಸ್ಟೊರೆಂಟ್ ಮಾಲೀಕನ ನೆರವು

ಇದೇ ರೀತಿಯ ಘಟನೆಯಲ್ಲಿ, ಮುಂಬೈ ವಿಮಾನ ನಿಲ್ದಾಣದಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಹೊರತರಲು ಸಹಾಯ ಮಾಡಿದ್ದ ಆರೋಪದ ಮೇಲೆ ಅಲ್ಲಿನ ಫಾಸ್ಟ್ ಫುಡ್ ರೆಸ್ಟೋರೆಂಟ್ 38 ವರ್ಷದ ಉದ್ಯೋಗಿಯನ್ನು ಮುಂಬೈ ಕಸ್ಟಮ್ಸ್​ನ ಏರ್ ಇಂಟೆಲಿಜೆನ್ಸ್ ಯುನಿಟ್ ಬಂಧಿಸಿದೆ. ಸುಮಾರು 1.86 ಕೋಟಿ ಮೌಲ್ಯದ 6 ಅಂಡಾಕಾರದ ಚಿನ್ನದ ಕ್ಯಾಪ್ಸೂಲ್ಸ್​ನಲ್ಲಿ ತನ್ನ ಬೆಲ್ಟ್​​ನಲ್ಲಿ ಅಡಗಿಸಿಟ್ಟಿರುವುದು ಕಂಡುಬಂದಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಇದನ್ನೂ ಓದಿ: Fraud Case : ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ ಹಾಗೂ ಇನ್ಫಾರ್ಮರ್

ನಿರ್ಗಮನ ಪ್ರದೇಶದಲ್ಲಿ ಚಿನ್ನವನ್ನು ಸ್ವೀಕರಿಸುವುದು ಮತ್ತು ಅದನ್ನು ಹೊರಗಿನ ದಂಧೆಯ ಸದಸ್ಯರಿಗೆ ಹಸ್ತಾಂತರಿಸುವುದು ಅವನ ಪಾತ್ರವಾಗಿತ್ತು. ಅವರು ಬಾಂದ್ರಾ ಟಿ ಜಂಕ್ಷನ್ನಲ್ಲಿ ನೂರುಲ್ ಹಸನ್ ಜೆ ಮತ್ತು ಕಲಂದರ್ ಅಝರುದ್ದೀನ್ ಎಂಬುವರಿಗೆ ಸರಕುಗಳನ್ನು ಹಸ್ತಾಂತರಿಸಬೇಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಸ್ಜಿದ್ ಬಂದರ್ ನ ಹೋಟೆಲ್ ಸ್ಟಾರ್ ನಲ್ಲಿ ತಂಗಿದ್ದ ನೂರುಲ್ ಮತ್ತು ಕಲಂದರ್ ಅವರು ಮೊಹಮ್ಮದ್ ಅಲಿ ರಸ್ತೆಯ ಆಂಥೋನಿ ಎಂಬುವರಿಗೆ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅವರು ಪ್ರತಿ ವಿತರಣೆಗೆ 3 ಲಕ್ಷ ರೂ.ಗಳನ್ನು ಪಡೆದರು, ಅದರಲ್ಲಿ 1.8 ಲಕ್ಷ ರೂ.ಗಳನ್ನು ಕಳ್ಳಸಾಗಣೆಗೆ ಸಹಾಯ ಮಾಡಿದ್ದಕ್ಕಾಗಿ ಪಾಂಡಿಯನ್ ಗೆ ಪಾವತಿಸುತ್ತಿದ್ದರು.

Continue Reading

ಕರ್ನಾಟಕ

Lok Sabha Election 2024: ಇಲ್ಲಿರೋದು ಗ್ಯಾರಂಟಿ ಅಲೆ ಮಾತ್ರ; ಹಸಿ ಸುಳ್ಳು ಹೇಳುತ್ತಿರುವ ಮೋದಿ, ದೇವೇಗೌಡ: ಸಿಎಂ ಸಿದ್ದರಾಮಯ್ಯ

Lok Sabha Election 2024: ಮೋದಿಗೆ ರೈತರ ಸಾಲ ಮನ್ನಾ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಬಂಡವಾಳಶಾಹಿಗಳ ಸಾಲಮನ್ನಾ ಮಾಡಿದ್ದಾರೆ. ಮೋದಿ ಯಾರ ಪರ ಎಂಬುದನ್ನು ಇದರಿಂದಲೇ ನೀವು ಅರ್ಥ ಮಾಡಿಕೊಳ್ಳಬೇಕು. ಅಚ್ಚೇ ದಿನ ಆಯೇಗಾ ಅಂದ್ರು ಬಂತಾ? ಡೀಸೆಲ್ ಬೆಲೆಯು ಆಗ ಎಷ್ಟಿತ್ತು? ಈಗ ಎಷ್ಟಾಗಿದೆ? ಅಂದು ಈ ಗ್ಯಾಸ್ ಬೆಲೆ, ಪೆಟ್ರೋಲ್ ಬೆಲೆ ಎಷ್ಟಿತ್ತು? ಇಂದು ಎಷ್ಟಾಗಿದೆ? ಅಚ್ಚೇ ದಿನ ಬರಲೇ ಇಲ್ಲ. ಕರ್ನಾಟಕಕ್ಕೆ ಮೋದಿಯವರ ಕೊಡುಗೆ ಏನೆಂದರೆ ಚೊಂಬು ಎಂದು ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.

VISTARANEWS.COM


on

Lok Sabha Election 2024 Only a guaranteed wave in Karnataka says Cm Siddaramaiah
Koo

ಚಿತ್ರದುರ್ಗ: ಚುನಾವಣೆ (Lok Sabha Election 2024) ಸಂದರ್ಭದಲ್ಲಿ ಮಾತ್ರ ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ನೆನಪಾಗುತ್ತದೆ. ಕರ್ನಾಟಕ ರಾಜ್ಯ ಭೀಕರ ಬರಗಾಲವನ್ನು ಎದುರಿಸುತ್ತಿದೆ. ಪ್ರವಾಹ ಬಂದಾಗ, ಬರಗಾಲ ಬಂದಾಗ ರಾಜ್ಯಕ್ಕೆ ಬಂದು ಜನರ ಕಷ್ಟ ಕೇಳಲಿಲ್ಲ. ಈಗ ಮತ ಕೇಳಲು ನರೇಂದ್ರ ಮೋದಿ (PM Narendra Modi), ಅಮಿತ್ ಶಾ (Amit Shah) ಬಂದಿದ್ದಾರೆ. ಕರ್ನಾಟಕದಲ್ಲಿ ಮೋದಿ (Modi wave in Karnataka) ಅಲೆಯಿಲ್ಲ. ಏಕೆಂದರೆ ಅವರ ಸುಳ್ಳು ಜನರಿಗೆ ಅರ್ಥವಾಗಿದೆ. ಕರ್ನಾಟಕದಲ್ಲಿ ಗ್ಯಾರಂಟಿಗಳ ಅಲೆಯಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Devegowda) ಅವರು ಹಸೀ ಸುಳ್ಳು ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್ ನ್ಯಾಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹೊಂದಿದೆ. ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಿದ್ದಾರೆ. ಹತ್ತು ವರ್ಷಗಳಲ್ಲಿ ದಲಿತರು, ಹಿಂದುಳಿದವರು, ಮಹಿಳೆಯರು, ಬಡವರ ಪರವಾಗಿ ಅವರು ಏನೂ ಮಾಡಿಲ್ಲ. ಆರ್ಥಿಕ ಶಕ್ತಿ ತುಂಬುವಲ್ಲಿ ವಿಫಲರಾಗಿದ್ದಾರೆ. 2014ರಲ್ಲಿ‌ ಮೋದಿಯವರು ಅನೇಕ ಭರವಸೆ ಕೊಟ್ಟಿದ್ದರು. ಆದರೆ ಯಾವುದನ್ನೂ ಈಡೇರಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

Lok Sabha Election 2024 Only a guaranteed wave in Karnataka says Cm Siddaramaiah

ಈ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಒಂದಾಗಿದ್ದಾರೆ. ಸೋಲುವ ಭಯದಿಂದ ಈ ಇಬ್ಬರೂ ಒಂದಾಗಿದ್ದಾರೆ. ಸ್ವತಂತ್ರವಾಗಿ ಸ್ಪರ್ಧೆ ಮಾಡಿದರೆ ಸೋಲುತ್ತೇವೆ ಎಂದು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಪೈಪೋಟಿ ಮೇಲೆ ಸುಳ್ಳು

ಈ ಮೊದಲು ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಹೇಳಿದ್ದರು. ಆದರೆ ಈಗ ಕೋಮುವಾದಿ ಬಿಜೆಪಿ ಪಕ್ಷದ ಜತೆಗೆ ಸೇರಿಕೊಂಡಿದ್ದಾರೆ. ಮನಮೋಹನ್ ಸಿಂಗ್ ಖಾಲಿ ಚೊಂಬು ಕೊಟ್ಟಿದ್ದರು, ಮೋದಿ ಅದನ್ನು ಅಕ್ಷಯ ಪಾತ್ರೆ ಮಾಡಿಟ್ಟಿದಾರೆ. ಮೋದಿ, ದೇವೇಗೌಡರು ಪೈಪೋಟಿ ಮೇಲೆ ಸುಳ್ಳು ಹೇಳುತ್ತಿದ್ದಾರೆ. ಹಸಿ ಸುಳ್ಳುಗಳನ್ನು ಹೇಳುತ್ತಿದ್ದಾರೆ‌ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಇದನ್ನೂ ಓದಿ: CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ

ರೈತರ ಸಾಲ ಮನ್ನಾ ಮಾಡದ ಮೋದಿ

ಮೋದಿಗೆ ರೈತರ ಸಾಲ ಮನ್ನಾ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಬಂಡವಾಳಶಾಹಿಗಳ ಸಾಲಮನ್ನಾ ಮಾಡಿದ್ದಾರೆ. ಮೋದಿ ಯಾರ ಪರ ಎಂಬುದನ್ನು ಇದರಿಂದಲೇ ನೀವು ಅರ್ಥ ಮಾಡಿಕೊಳ್ಳಬೇಕು. ಅಚ್ಚೇ ದಿನ ಆಯೇಗಾ ಅಂದ್ರು ಬಂತಾ? ಡೀಸೆಲ್ ಬೆಲೆಯು ಆಗ ಎಷ್ಟಿತ್ತು? ಈಗ ಎಷ್ಟಾಗಿದೆ? ಅಂದು ಈ ಗ್ಯಾಸ್ ಬೆಲೆ, ಪೆಟ್ರೋಲ್ ಬೆಲೆ ಎಷ್ಟಿತ್ತು? ಇಂದು ಎಷ್ಟಾಗಿದೆ? ಅಚ್ಚೇ ದಿನ ಬರಲೇ ಇಲ್ಲ. ಕರ್ನಾಟಕಕ್ಕೆ ಮೋದಿಯವರ ಕೊಡುಗೆ ಏನೆಂದರೆ ಚೊಂಬು ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ

ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುತ್ತಾರೆ ಎಂದು ಬಿಜೆಪಿಯವರು ಪ್ರಚಾರ ಮಾಡುತ್ತಿದ್ದಾರೆ. ನಾವು ಬಿಜೆಪಿಯವರು ಅಲ್ಲ, 2028ರವರೆಗೆ ನಮಗೆ ಆಶೀರ್ವಾದ ಮಾಡಿದ್ದಾರೆ. ಅಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಇದೇ ಏಪ್ರಿಲ್‌ 26ರಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ನೀವು ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಚ್ಚು ಬಹುಮತದಿಂದ ಗೆಲ್ಲಿಸಿಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

Continue Reading
Advertisement
Lok Sabha Election 2024 Priyanka Gandhi announces constitutional amendment
Lok Sabha Election 20244 mins ago

Lok Sabha Election 2024: ಸಂವಿಧಾನ ತಿದ್ದುಪಡಿ ಮಾಡುವುದಾಗಿ ಘೋಷಿಸಿದ ಪ್ರಿಯಾಂಕಾ ಗಾಂಧಿ!

Lok Sabha Election 2024
Lok Sabha Election 20245 mins ago

Lok Sabha Election 2024: ಸೂರತ್‌ನಲ್ಲಿ ಕಮಲ ಪಡೆಯ ಗೆಲುವಿಗೆ ಪರೋಕ್ಷ ಕಾರಣಕರ್ತರಾದ ಕಾಂಗ್ರೆಸ್‌ ಅಭ್ಯರ್ಥಿ ಬಿಜೆಪಿ ಸೇರ್ಪಡೆ?

Latest32 mins ago

Voter ID: ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

Road Accident
ಕರ್ನಾಟಕ33 mins ago

Road Accident: ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು; ಅಪಘಾತದ ಬಳಿಕ ಹೊತ್ತಿ ಉರಿದ ಬಸ್

Himanta Biswa Sarma
ರಾಜಕೀಯ37 mins ago

Himanta Biswa Sarma: ಕಾಂಗ್ರೆಸ್ ಪ್ರಣಾಳಿಕೆ ಪಾಕಿಸ್ತಾನದ ಜನರಿಗೆ ಹೆಚ್ಚು ಸೂಕ್ತ: ಹಿಮಂತ ಬಿಸ್ವಾ ಶರ್ಮಾ

Dungarees Fashion In Summer
ಫ್ಯಾಷನ್37 mins ago

Dungarees Fashion In Summer: ಬೇಸಿಗೆ ಸೀಸನ್‌ನಲ್ಲಿ ಹೀಗಿರಲಿ ಲೈಟ್‌ವೈಟ್‌ ಡಂಗ್ರೀಸ್‌ ಕಾಂಬಿನೇಷನ್‌

Voting awareness programme in Shira
ತುಮಕೂರು40 mins ago

Lok Sabha Election 2024: ಶಿರಾದಲ್ಲಿ ಕ್ಯಾಂಡಲ್‌ ಹಿಡಿದು ಮತದಾನ ಜಾಗೃತಿ

Suresh Raina
ಪ್ರಮುಖ ಸುದ್ದಿ40 mins ago

Suresh Raina : ಧೋನಿ ನೇತೃತ್ವದಲ್ಲಿ ವಿಶ್ವ ಕಪ್ ಗೆದ್ದಿರುವುದು ಪೂರ್ವ ನಿಯೋಜಿತ; ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ ರೈನಾ!

Karnataka Weather Forecast
ಮಳೆ44 mins ago

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Bridge Collapse
ದೇಶ55 mins ago

Bridge Collapse: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌