ವಿಸ್ತಾರ Explainer: ಅಮೆರಿಕಕ್ಕೆ ರಿಸೆಷನ್ ಭೀತಿ, ಭಾರತಕ್ಕೂ ಫಜೀತಿ? - Vistara News

EXPLAINER

ವಿಸ್ತಾರ Explainer: ಅಮೆರಿಕಕ್ಕೆ ರಿಸೆಷನ್ ಭೀತಿ, ಭಾರತಕ್ಕೂ ಫಜೀತಿ?

ಅಮೆರಿಕದಲ್ಲಿ ಕಳೆದ 40 ವರ್ಷಗಳಲ್ಲೇ ಗರಿಷ್ಠ ಎತ್ತರಕ್ಕೆ ಜಿಗಿದಿದೆ ಹಣದುಬ್ಬರ. ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಸಂಭವಿಸಿದರೆ ಏನಾದೀತು? ಭಾರತದ ಮೇಲೆ ಇದರ ಪರಿಣಾಮ ಏನು? ಇಲ್ಲಿದೆ ವಿಸ್ತೃತ ಮಾಹಿತಿ.

VISTARANEWS.COM


on

inflation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೇಶವ ಪ್ರಸಾದ್ ಬಿ, ಬೆಂಗಳೂರು
ಆರ್ಥಿಕ ಹಿಂಜರಿತದ ಕಡೆಗೆ ಅಮೆರಿಕ ಜಾರಿದೆಯೇ ಎಂಬ ಪ್ರಶ್ನೆ ಎದ್ದಿದೆ. ಬಿಲಿಯನೇರ್‌ ಹೂಡಿಕೆದಾರ ಲಿಯೋನ್‌ ಕೂಪರ್‌ಮ್ಯಾನ್‌ ಹೇಳುವ ಪ್ರಕಾರ, ಮುಂದಿನ ವರ್ಷ ಅಮೆರಿಕದ ಆರ್ಥಿಕತೆ ಹಿಂಜರಿತಕ್ಕೀಡಾಗಲಿದೆ. ಇದಕ್ಕೆ ಕಾರಣ ಒಟ್ಟಾರೆ ಎಕಾನಮಿಯ ಮಂದಗತಿ.

ಅಮೆರಿಕದ ಕಂಪನಿಗಳ ಆದಾಯ ಇಳಿಕೆಯಾಗಲಿದ್ದು, ಪರಿಣಾಮವಾಗಿ ಷೇರು ಸೂಚ್ಯಂಕ ಎಸ್‌ ಆಂಡ್‌ಪಿ ಶೇ. 40ರಷ್ಟು ಕುಸಿಯಲಿದೆ. ಸದ್ಯದ ಭವಿಷ್ಯದಲ್ಲಿ ಷೇರು ಪೇಟೆಯಲ್ಲಿ ಗೂಳಿಯ ಅಬ್ಬರ ಕಾಣಲು ಸಿಗಲಿಕ್ಕಿಲ್ಲ.
ಹೂಡಿಕೆದಾರರು ಈ ವರ್ಷ ಷೇರುಗಳನ್ನು ಕೈಗೆ ಸಿಕ್ಕ ಬೆಲೆಗೆ ಮಾರಾಟ ಮಾಡಲು ಆರಂಭಿಸಿದ್ದಾರೆ. ಫೆಡರಲ್‌ ರಿಸರ್ವ್‌ ಬಡ್ಡಿ ದರಗಳನ್ನು ಏರಿಸಿರುವುದು ಅವರಿಗೆ ಆರ್ಥಿಕ ಬೆಳವಣಿಗೆ ಬಗ್ಗೆ ನಂಬಿಕೆ ಹೊರಟು ಹೋಗುವಂತೆ ಮಾಡಿದೆ.‌ ಇದಕ್ಕಿಂತ ಆತಂಕದ ಸಂಗತಿ ಏನೆಂದರೆ ಪ್ರತಿ 10 ಮಂದಿ ಅಮೆರಿಕನ್ನರಲ್ಲಿ 6 ಮಂದಿ ತಮ್ಮ ಉಳಿತಾಯದ ಹಣವನ್ನು ಬೆಳೆಯಬಹುದು ಎಂಬ ನಂಬಿಕೆಯೊಂದಿಗೆ ಷೇರು ಮಾರುಕಟ್ಟೆಯಲ್ಲಿ ಹೂಡಿದ್ದಾರೆ. ಒಂದೊಮ್ಮೆ ಷೇರು ಸೂಚ್ಯಂಕ 40 ಪರ್ಸೆಂಟ್‌ ಕುಸಿದರೆ, ಉಂಟಾಗುವ ನಷ್ಟವನ್ನು ಭರಿಸಲು ಮತ್ತೆಷ್ಟು ವರ್ಷ ಕಾಯಬೇಕೇನೋ ಎಂಬ ಆತಂಕ ಕೂಪರ್‌ಮ್ಯಾನ್‌ ಅವರದ್ದು.

ಕಾರ್ಪೊರೇಟ್‌ ಕಂಪನಿಗಳ ಆದಾಯ ಕುಸಿಯಲಿದ್ದು, ಅದರ ಬೆನ್ನಲ್ಲೇ ಷೇರುಗಳು ನೆಲಕಚ್ಚಲಿವೆ ಎಂಬುದು ಮಾರುಕಟ್ಟೆ ತಜ್ಞರ ಲೆಕ್ಕಾಚಾರ. ಈ ವರ್ಷ ಅಮೆರಿಕದ ಷೇರು ಮಾರುಕಟ್ಟೆಗಳಲ್ಲಿ ಹೂಡಿಕೆದಾರರು ಕೈಗೆ ಸಿಕ್ಕ ಬೆಲೆಗೆ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಬೆಲೆ ಏರಿಕೆಯನ್ನು ಕಡಿಮೆ ಮಾಡಲು ಫೆಡರಲ್‌ ರಿಸರ್ವ್‌ ಬಡ್ಡಿ ದರ ಏರಿಸುತ್ತಿರುವುದರಿಂದ ಮಾರುಕಟ್ಟೆ ಮೇಲೆ ಯಾವ ಪರಿಣಾಮ ಬೀರಬಹುದು ಎಂಬ ಕಳವಳ ಹೂಡಿಕೆದಾರರನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ಆರ್ಥಿಕ ತಜ್ಞರ ಪ್ರಕಾರ ಅಮೆರಿಕದಲ್ಲಿ ರಿಸೆಷನ್‌ ಪಕ್ಕಾ

ಯಾವುದೇ ದೇಶದ ಆರ್ಥಿಕ ಬೆಳವಣಿಗೆ ಸತತ 6 ತಿಂಗಳು ಅಥವಾ ಎರಡು ತ್ರೈಮಾಸಿಕ ಅವಧಿಯಲ್ಲಿ ಕುಸಿದರೆ, ಅದನ್ನು ರಿಸೆಷನ್‌ ಎನ್ನುತ್ತಾರೆ. ಈ ವರ್ಷ ಮೊದಲ ಮೂರು ತಿಂಗಳುಗಳಲ್ಲಿ ಅಮೆರಿಕದ ಆರ್ಥಿಕತೆ ಸತತ ಕುಸಿದ ಪರಿಣಾಮ ರಿಸೆಷನ್‌ ಭೀತಿ ಕಾಣಿಸಿಕೊಂಡಿದೆ. ಗಾಯಕ್ಕೆ ಉಪ್ಪು ಸವರುವಂತೆ ಅಮೆರಿಕದ ರಫ್ತು ಗಣನೀಯ ಕುಸಿದಿದೆ. ರಾಜ್ಯಗಳು ಹಾಗೂ ಸ್ಥಳೀಯಾಡಳಿತಗಳಲ್ಲಿ ಸಾರ್ವಜನಿಕ ವೆಚ್ಚ ಕಡಿಮೆಯಾಗುತ್ತಿದೆ. ಇತ್ತೀಚೆಗೆ ಐಟಿ ಷೇರುಗಳೂ ಕುಸಿದಿವೆ. ಇದೆಲ್ಲವೂ ರಿಸೆಷನ್‌ ಆಗಬಹುದೇ ಎಂಬ ಆತಂಕಕ್ಕೆ ಕಾರಣವಾಗಿದೆ.
ಅಮೆರಿಕಕ್ಕೆ ರಿಸೆಷನ್‌ ಹೊಸತೇನೂ ಅಲ್ಲ. ಆದರೆ ಅಮೆರಿಕದ ಹಿಂಜರಿತ ಬಹುತೇಕ ಜಗತ್ತನ್ನು ನೇರ ಅಥವಾ ಪರೋಕ್ಷವಾಗಿ ಕಾಡುತ್ತದೆ. ಆದರೆ ಅದರ ತೀವ್ರತೆಯಲ್ಲಿ ವ್ಯತ್ಯಾಸವಿರುತ್ತದೆ. ಏಕೆಂದರೆ ಅಮೆರಿಕದ ಡಾಲರ್‌ ಜಾಗತಿಕ ಕರೆನ್ಸಿ. ಪ್ರಪಂಚದ ಬಲಾಢ್ಯ ಎಕಾನಮಿಗಳಲ್ಲಿ ಒಂದಾಗಿರುವುದರಿಂದ ಬಹುತೇಕ ರಾಷ್ಟ್ರಗಳು ಅದರ ಜತೆಗೆ ವ್ಯವಹಾರವನ್ನು, ವಾಣಿಜ್ಯ ಸಂಬಂಧವನ್ನು ಹೊಂದಿರುತ್ತದೆ.
ನಮ್ಮಲ್ಲಿ ಆರ್‌ಬಿಐ ಇರುವಂತೆ ಅಮೆರಿಕದ ಸೆಂಟ್ರಲ್‌ ಬ್ಯಾಂಕ್‌ ಆಗಿರುವ ಫೆಡರಲ್‌ ರಿಸರ್ವ್‌ ಕಳೆದ 30 ವರ್ಷದಲ್ಲೇ ಗರಿಷ್ಠ ಬಡ್ಡಿ ದರ ಏರಿಕೆ ಮಾಡಿರುವುದರಿಂದ ಸಾಲದ ಬಡ್ಡಿ ದರ ಹೆಚ್ಚಲಿದೆ. ಜನ ಗೃಹ ಸಾಲ, ವಾಹನ ಸಾಲ ಪಡೆಯುವುದನ್ನು ಕಡಿಮೆ ಮಾಡುತ್ತಾರೆ. ಆಗ ವ್ಯವಸ್ಥೆಯಲ್ಲಿ ಉತ್ಪನ್ನ ಮತ್ತು ಸೇವೆಗಳಿಗೆ ಬೇಡಿಕೆ ತಗ್ಗುತ್ತದೆ. ಬೆಲೆ ಇಳಿಯುತ್ತದೆ ಎಂಬುದು ಬಡ್ಡಿ ದರ ಏರಿಕೆ ಹಿಂದಿನ ಲೆಕ್ಕಾಚಾರ. ಹಾಗಂತ ಈ ಬಡ್ಡಿ ದರ ಇಳಿಕೆಯಿಂದ ಬೇಡಿಕೆ ಕುಸಿದು ರಿಸೆಷನ್‌ ಆಗಲಿದೆಯೇ ಎಂಬುದು ಸದ್ಯಕ್ಕೆ ಭಾರಿ ಚರ್ಚೆಯಾಗುತ್ತಿದೆ. ಫೈನಾನ್ಷಿಯಲ್‌ ಟೈಮ್ಸ್‌ ನಡೆಸಿದ ಸಮೀಕ್ಷೆಯ ಪ್ರಕಾರ ಶೇ.70ರಷ್ಟು ಆರ್ಥಿಕ ತಜ್ಞರು ಮುಂದಿನ ವರ್ಷ ಅಮೆರಿಕದಲ್ಲಿ ರಿಸೆಶನ್‌ ಪಕ್ಕಾ ಎನ್ನುತ್ತಾರೆ. ಇನ್ನು ಕೆಲವರು, ಆದರೆ ಒಳ್ಳೆಯದು ಎಂದೂ ಹೇಳುತ್ತಾರೆ.

ಅಮೆರಿಕದಲ್ಲಿ 40 ವರ್ಷದಲ್ಲೇ ಅತಿ ಹೆಚ್ಚಿನ ಬೆಲೆ ಏರಿಕೆ

ಜಗತ್ತಿನ ನಂ.1 ಎಕಾನಮಿ ಎನ್ನಿಸಿರುವ ಅಮೆರಿಕದಲ್ಲೇ ಈಗ ದಿನ ನಿತ್ಯದ ಹಾಲು, ಮೊಟ್ಟೆ, ತರಕಾರಿ, ಅಡುಗೆ ಅನಿಲ, ಆಸ್ಪತ್ರೆ ಖರ್ಚು, ರೆಫ್ರಿಜರೇಟರ್‌ನಿಂದ ಕಾರು, ಮನೆ, ಸೈಟು, ಫ್ಲ್ಯಾಟ್‌ ಎಲ್ಲದರ ದರ ಭಾರಿ ದುಬಾರಿಯಾಗಿ ಜನ ತತ್ತರಿಸಿದ್ದಾರೆ. ಕೋವಿಡ್‌ ಬಿಕ್ಕಟ್ಟು ಶುರುವಾದಂದಿನಿಂದ ನಿಧಾನವಾಗಿ ಮಂದಗತಿಗೆ ತಿರುಗಿದ ಎಕಾನಮಿ, ಕಳೆದೊಂದು ವರ್ಷದಿಂದೀಚೆಗೆ, ಕಳೆದ ಹಲವಾರು ದಶಕಗಳಲ್ಲೇ ಕಂಡರಿಯದಂತೆ ಕುಸಿಯುತ್ತಿದೆ.
ಕಳೆದ ಕೆಲವು ತಿಂಗಳಿನಿಂದ ಅಮೆರಿಕದಿಂದ ಬರುತ್ತಿರುವ ಸುದ್ದಿಗಳಂತೂ, ಇಡೀ ಜಗತ್ತಿನ ಕಳವಳವನ್ನು ಹೆಚ್ಚಿಸಿದೆ. ಮೇನಲ್ಲಿ ಹಣದುಬ್ಬರ ಅಥವಾ ಬೆಲೆ ಏರಿಕೆ 8.6%ಕ್ಕೆ ಹೆಚ್ಚಳವಾಗಿದೆ. ಇದು 40 ವರ್ಷಗಳಲ್ಲಿಯೇ ಗರಿಷ್ಠ ಪ್ರಮಾಣವಾಗಿದೆ. ಏಪ್ರಿಲ್-ಮೇ ಒಂದರಲ್ಲಿಯೇ ಹಣದುಬ್ಬರ 1 ಪರ್ಸೆಂಟ್‌ ಏರಿತ್ತು. ಜನರ ಕೈಯಲ್ಲಿ ದುಡ್ಡು ನಿಲ್ಲುತ್ತಿಲ್ಲ. ಹೀಗಾಗಿ ಹೆಚ್ಚುತ್ತಿರುವ ಬೆಲೆ ಏರಿಕೆಯನ್ನು ನಿಯಂತ್ರಿಸಲು ಅಮೆರಿಕದ ಸೆಂಟ್ರಲ್‌ ಬ್ಯಾಂಕ್‌ ಫೆಡರಲ್‌ ರಿಸರ್ವ್‌ ಬಡ್ಡಿ ದರಗಳನ್ನು ಕಳೆದ 30 ವರ್ಷದಲ್ಲೇ ಹೆಚ್ಚಿನ ಮಟ್ಟಕ್ಕೆ ಏರಿಸಿದೆ. ಕಳೆದ ಮಾರ್ಚ್‌ನಿಂದ ಬಡ್ಡಿ ದರ ಏರಿಕೆಯ ಅಸ್ತ್ರವನ್ನು ಅದು ಪ್ರಯೋಗಿಸಿದೆ.
ಭಾರತದಲ್ಲಿ ಆರ್‌ಬಿಐ ಹಣಕಾಸು ನೀತಿಗಳನ್ನು ಜಾರಿಗೊಳಿಸುವಂತೆ, ಅಮೆರಿಕದಲ್ಲಿ ಫೆಡರಲ್‌ ರಿಸರ್ವ್‌ ಕಾರ್ಯನಿರ್ವಹಿಸುತ್ತದೆ. ಬಡ್ಡಿ ದರಗಳನ್ನು ಏರಿಸುವ ಅದರ ನಿರ್ಧಾರದಿಂದ ಎಕಾನಮಿ ಚುರುಕಾಗಬಹುದೇ ಅಥವಾ ರಿಸೆಷನ್‌ಗೆ ಕಾರಣವಾಗಬಹುದೇ ಎಂಬ ಚರ್ಚೆ ಈಗ ನಡೆಯುತ್ತಿದೆ. ಬಡ್ಡಿ ದರದ ತೀವ್ರ ಏರಿಕೆಯಿಂದ ಬೇಡಿಕೆ ಕುಸಿದು ಆರ್ಥಿಕ ಚಟುವಟಿಕೆಗಳು ಕುಸಿದರೆ ರಿಸೆಶನ್‌ ಆಗಬಹುದು ಎಂಬ ವಾದ ಹೂಡಿಕೆದಾರರ ವಲಯದಲ್ಲಿದೆ. ಬಡ್ಡಿ ದರ ಏರಿಕೆಯಾದಾಗ ಕಾರ್ಪೊರೇಟ್‌ ಕಂಪನಿಗಳೂ ಸಾಲ ತೆಗೆದು ಹೂಡಿಕೆ ಮಾಡುವುದಿಲ್ಲ. ಹೂಡಿಕೆಯ ನಿರ್ಧಾರಗಳನ್ನು ಮುಂದೂಡುತ್ತವೆ.

ರಷ್ಯಾ ವಿರುದ್ಧದ ನಿರ್ಬಂಧಗಳ ಎಫೆಕ್ಟ್

ಉಕ್ರೇನ್‌ ವಿರುದ್ಧ ದಾಳಿ ನಡೆಸುತ್ತಿರುವ ರಷ್ಯಾದ ವಿರುದ್ಧ ಅಮೆರಿಕ ಅನೇಕ ನಿರ್ಬಂಧಗಳನ್ನು ವಿಧಿಸಿದೆ. ಅಮೆರಿಕದ ಕಂಪನಿಗಳು ರಷ್ಯಾಕ್ಕೆ ರಫ್ತು ಮಾಡಬಾರದು, ರಷ್ಯಾದಿಂದ ತೈಲ ಖರೀದಿಸಬಾರದು ಎಂಬ ನಿರ್ಬಂಧಗಳೂ ಇವೆ. ಇದರ ಪರಿಣಾಮ ಅಮೆರಿಕದ ಕಂಪನಿಗಳಿಗೆ ಉತ್ಪಾದನೆಯ ಖರ್ಚು ವೆಚ್ಚಗಳು ಜಾಸ್ತಿಯಾಗಿವೆ. ರಷ್ಯಾದಿಂದ ಅಮೆರಿಕಕ್ಕೆ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಉಂಟಾಗಿದೆ. ಕೃಷಿ ಉತ್ಪನ್ನಗಳ ಅಭಾವಕ್ಕೆ ಇದು ಕಾರಣವಾಗಿದೆ. ತರಕಾರಿಗಳ ಬೆಲೆ ಗಗನಕ್ಕೇರಿದೆ. ಹವಾಮಾನ ವೈಪರೀತ್ಯವೂ ಕಷ್ಟವನ್ನು ಹೆಚ್ಚಿಸಿದೆ.
ರಷ್ಯಾ ಮತ್ತು ಉಕ್ರೇನ್‌ ಸಂಘರ್ಷದ ಪರಿಣಾಮಗಳು ಕಚ್ಚಾ ತೈಲ ಮತ್ತು ದಿನ ನಿತ್ಯ ಬಳಕೆಯ ವಸ್ತುಗಳ ದರಗಳನ್ನು, ಕಚ್ಚಾ ವಸ್ತುಗಳ ಬೆಲೆಯನ್ನು ಗಗನಕ್ಕೇರುವಂತೆ ಮಾಡಿವೆ. ಉದಾಹರಣೆಗೆ ಆಹಾರ ವಸ್ತುಗಳ ದರ ಏಪ್ರಿಲ್-ಮೇ ನಡುವೆ 10% ಏರಿಕೆಯಾಗಿದೆ. ಇಂಧನ ದರ 34% ಜಿಗಿದಿದೆ. ಪ್ರತಿ ತಿಂಗಳೂ ಇದೇ ರೀತಿ ಬೆಲೆಗಳು ಏರಿದರೆ ಹೇಗೆ ಎಂಬುದು ಅಲ್ಲಿನ ಜನರ ಆತಂಕವಾಗಿದೆ.

ನೇರವಾಗಿ ದುಡ್ಡು ಹಂಚಿತ್ತು ಅಮೆರಿಕ ಸರಕಾರ

ಕೋವಿಡ್‌ ಬಿಕ್ಕಟ್ಟಿನಿಂದ ಅಮೆರಿಕ ಕೂಡ ಕಂಗೆಟ್ಟಿತ್ತು. ಇಂಥ ಸಂದರ್ಭ ಫೆಡರಲ್‌ ರಿಸರ್ವ್‌ 3 ಲಕ್ಷ ಕೋಟಿ ಡಾಲರ್‌ ನೋಟುಗಳನ್ನು ಮುದ್ರಿಸಿತು. ಬೈಡೆನ್‌ ಸರಕಾರ ಜನತೆಗೆ ನೆರವಾಗುವ ಉದ್ದೇಶದಿಂದ ಕಳೆದ ವರ್ಷ 1.9 ಲಕ್ಷ ಕೋಟಿ ಡಾಲರ್‌ ಪ್ಯಾಕೇಜನ್ನು ಘೋಷಿಸಿತು. ಜನರ ಬ್ಯಾಂಕ್‌ ಖಾತೆಗೆ ದುಡ್ಡು ಜಮೆ ಮಾಡಲಾಯಿತು. ನೇರ ನಗದನ್ನು ಹೆಚ್ಚಿಸಲಾಯಿತು. ಫೆಡರಲ್‌ ರಿಸರ್ವ್‌ ಹೇಗೂ 3 ಲಕ್ಷ ಕೋಟಿ ಡಾಲರ್‌ ನೋಟುಗಳನ್ನು ಮುದ್ರಿಸಿಟ್ಟಿತ್ತು. ಇದರ ಪರಿಣಾಮ ಜನರ ಆದಾಯದಲ್ಲಿ ವರ್ಷದೊಳಗೆ ಮೂರರಿಂದ ನಾಲ್ಕು ಪರ್ಸೆಂಟ್‌ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಯಿತು. ಆದರೆ ನಿಜಕ್ಕೂ ಉಂಟಾಗಿದ್ದು ದೊಡ್ಡ ಬ್ಲಂಡರ್. ನೋಟುಗಳನ್ನು ಪ್ರಿಂಟ್‌ ಹಾಕುವುದು ಮತ್ತು ವಿತರಿಸುವುದು ದೊಡ್ಡದಲ್ಲ, ಆದರೆ ಅದಕ್ಕೆ ತಕ್ಕಂತೆ ಉತ್ಪಾದನೆ, ಪೂರೈಕೆಯ ಚಟುವಟಿಕೆಗಳು ಚುರುಕಾಗಬೇಕು. ಅಮೆರಿಕದಲ್ಲಿ ಅದು ನಡೆಯಲಿಲ್ಲ. ಇದರ ಪರಿಣಾಮ ಉಂಟಾಗಿದ್ದು, 40 ವರ್ಷಗಳಲ್ಲೇ ಕಂಡರಿಯದ ಹಣದುಬ್ಬರ.

ರಿಸೆಷನ್‌ ಆತಂಕ ಬೇಡ ಎನ್ನುತ್ತಿದ್ದಾರೆ ಜೊ ಬೈಡೆನ್

ಬೆಲೆ ಏರಿಕೆ ಆಗಿರುವುದು ನಿಜ, ಆರ್ಥಿಕತೆಯಲ್ಲಿ ಕೆಲವು ತೊಂದರೆಗಳಿರುವುದೂ ಹೌದು. ಆದರೆ ಬೇರೆ ದೇಶಗಳಿಗೆ ಹೋಲಿಸಿದರೆ ನಾವೇ ವಾಸಿ. ಆರ್ಥಿಕ ಹಿಂಜರಿತ ಆಗಲಿದೆ ಎಂದು ನನಗೆ ಅನ್ನಿಸುತ್ತಿಲ್ಲ ಎನ್ನುತ್ತಾರೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್.‌
ಇಂಧನ ಪೂರೈಕೆಯಲ್ಲಿನ ಕೊರತೆಯಿಂದ ದೇಶದ ಜನತೆಗೆ ಸಂಕಷ್ಟವಾಗಿದೆ. ಇದನ್ನು ಬಗೆಹರಿಸಲು ಸರ್ಕಾರ ಯತ್ನಿಸುತ್ತಿದೆ ಎಂಬುದು ಜೋ ಬೈಡೆನ್‌ ಅವರ ಸಮರ್ಥನೆ.


ಇದಕ್ಕೆ ಪೂರಕವಾಗಿ ಕೆಲ ಆರ್ಥಿಕ ತಜ್ಞರೂ ತಮ್ಮ ವಾದವನ್ನು ಮುಂದಿಡುತ್ತಾರೆ. ಅಮೆರಿಕದಲ್ಲಿ ಕೋವಿಡ್‌ ಬಿಕ್ಕಟ್ಟಿನ ಸಂದರ್ಭ ನಷ್ಟವಾಗಿದ್ದ ಉದ್ಯೋಗಗಳೆಲ್ಲ 2022ರ ವೇಳೆಗೆ ಭರ್ತಿಯಾಗಿದೆ. ಉದ್ಯೋಗ ಸೃಷ್ಟಿ ಚುರುಕಾಗಿದೆ. ಗ್ರಾಹಕರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಖರ್ಚು ಮಾಡುತ್ತಾರೆ. ಮಾರುಕಟ್ಟೆಯಲ್ಲಿ ಬೇಡಿಕೆಗೆ ಕೊರತೆ ಇಲ್ಲ. ಕಾರ್ಪೊರೇಟ್‌ ಕಂಪನಿಗಳಲ್ಲಿ ಸಂಬಳ ಹೆಚ್ಚುತ್ತಿದೆ ಎಂಬ ವಾದವೂ ಇದೆ.

ಭಾರತದ ಮೇಲೆ ಪರಿಣಾಮವೇನು?

ಪ್ರತಿ ಸಲವೂ ಜಾಗತಿಕ ಆರ್ಥಿಕ ಬಿಕ್ಕಟ್ಟು ಉಂಟಾದಾಗಲೆಲ್ಲ ಭಾರತದ ಐಟಿ ಕ್ಷೇತ್ರಕ್ಕೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬ ಚರ್ಚೆ ಸಾಮಾನ್ಯ. ಅದರಲ್ಲೂ ಅಮೆರಿಕದಲ್ಲಿ ನಡೆಯುವ ವಿದ್ಯಮಾನಗಳಿಗೂ, ಭಾರತದ ಐಟಿ ವಲಯಕ್ಕೂ ಹೋಲಿಸುವುದು ಹೆಚ್ಚು. ಇದಕ್ಕೆ ಕಾರಣವೂ ಇದೆ. ಭಾರತದ ಐಟಿ ಕಂಪನಿಗಳ ಆದಾಯದಲ್ಲಿ 40ರಿಂದ 78 ಪರ್ಸೆಂಟ್‌ ಪಾಲು ಅಮೆರಿಕದಿಂದ ಬರುತ್ತದೆ. ಟಿಸಿಎಸ್‌, ಇನ್ಫೋಸಿಸ್‌, ವಿಪ್ರೊ, ಎಚ್‌ಸಿಎಲ್‌ ಟೆಕ್ನಾಲಜೀಸ್‌, ಟೆಕ್‌ ಮಹೀಂದ್ರಾದ ಬಹುಪಾಲು ಆದಾಯ ಅಮೆರಿಕದ ಗ್ರಾಹಕರಿಂದ ಸಿಗುತ್ತದೆ. ಹೀಗಾಗಿಯೇ ಅಮೆರಿಕದ ಬಿಕ್ಕಟ್ಟು ಪ್ರಭಾವ ಬೀರಬಹುದೇ ಎಂಬ ಪ್ರಶ್ನೆ ಕಾಡುತ್ತಿದೆ. ಸಾಲದ್ದಕ್ಕೆ ಜೆಪಿ ಮೋರ್ಗಾನ್‌ ಸಂಸ್ಥೆಯೂ ತನ್ನ ಇತ್ತೀಚಿನ ವರದಿಯಲ್ಲಿ ಐಟಿ ವಲಯ ಒತ್ತಡದಲ್ಲಿದೆ. ಮುಂಬರುವ ದಿನಗಳಲ್ಲಿ ಆದಾಯಕ್ಕೆ ಹೊಡೆತ ಬೀಳಬಹುದು ಎಂದು ಎಚ್ಚರಿಸಿದೆ.
ಆದರೆ ಭಾರತದ ಐಟಿ ಉದ್ದಿಮೆ ಈಗ ಪ್ರಬುದ್ಧವಾಗಿದ್ದು, ಯಾವುದೇ ಬಾಹ್ಯ ಒತ್ತಡಗಳನ್ನು ನಿಭಾಯಿಸಬಲ್ಲುದು ಎನ್ನುತ್ತಾರೆ ಅಸೊಚೆಮ್‌ನ ಮಾಜಿ ಅಧ್ಯಕ್ಷ ಸಂಪತ್‌ ರಾಮನ್.‌
ಇತ್ತೀಚೆಗೆ ಐಟಿ ಕಂಪನಿಗಳ ಷೇರು ದರಗಳಲ್ಲಿ ಕುಸಿತಕ್ಕೀಡಾಗಿದ್ದರೂ, ಇಂಥ ಏರಿಳಿತಗಳನ್ನು ಉದ್ದಿಮೆ ತಾಳಿಕೊಳ್ಳಲಿದೆ ಎನ್ನುತ್ತಾರೆ ತಜ್ಞರು. ಕೋವಿಡ್‌ ಸಂದರ್ಭದಲ್ಲೂ ಐಟಿ ಕಂಪನಿಗಳ ಭವಿಷ್ಯದ ಬಗ್ಗೆ ಊಹಾಪೋಹಗಳು ಉಂಟಾಗಿತ್ತು. ಆದರೆ ಕೋವಿಡ್‌ ಲಾಕ್‌ ಡೌನ್‌ ನಡುವೆಯೂ ಟೆಕ್ಕಿಗಳು ಮನೆಯಿಂದಲೇ ಕೆಲಸ ಮುಂದುವರಿಸಿದ್ದರು. ಈ ಅವಧಿಯಲ್ಲಿ ಬಹುತೇಕ ಉದ್ದಿಮೆಗಳು ಡಿಜಿಟಲೀಕರಣಕ್ಕೆ ತಮ್ಮನ್ನು ಒಡ್ಡಿಕೊಂಡ ಪರಿಣಾಮ ಐಟಿ ವಲಯಕ್ಕೆ ನಿರೀಕ್ಷೆ ಮೀರಿ ಬೇಡಿಕೆ ವೃದ್ಧಿಸಿತು. ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಯಿತು. ಈಗಲೂ ಅದೇ ಟ್ರೆಂಡ್‌ ಮುಂದುವರಿದಿದೆ.
ಆದರೆ ಭಾರತವು ಅಮೆರಿಕಕ್ಕೆ ಐಟಿ ಹೊರತುಪಡಿಸಿ ಇತರ ಅನೇಕ ಉತ್ಪನ್ನಗಳನ್ನು ರಫ್ತು ಮಾಡುತ್ತದೆ. ಅದರಲ್ಲಿ ಜವಳಿ ಉತ್ಪನ್ನಗಳು, ಎಂಜಿನಿಯರಿಂಗ್‌, ಔಷಧ, ಅಮೂಲ್ಯ ಶಿಲೆಗಳು, ಯಂತ್ರೋಪಕರಣಗಳು, ಎಲೆಕ್ಟ್ರಿಕಲ್‌, ಎಲೆಕ್ಟ್ರಾನಿಕ್‌ ಸಾಧನಗಳು, ಸಾವಯವ ರಾಸಾಯನಿಕಗಳು, ಸಾಗರೋತ್ಪನ್ನಗಳು, ಪ್ಲಾಸ್ಟಿಕ್‌, ಪೀಠೋಪಕರಣಗಳು, ರಬ್ಬರ್‌, ಅಲ್ಯುಮಿನಿಯಂ, ಕಬ್ಬಿಣ ಮತ್ತು ಉಕ್ಕು, ಪಾದರಕ್ಷೆ, ಸೌಂದರ್ಯವರ್ಧಕಗಳು, ಕಾಫಿ,ಚಹಾ, ಏರ್‌ಕ್ರಾಫ್ಟ್‌, ಸ್ಪೇಸ್‌ ಕ್ರಾಫ್ಟ್‌, ಗ್ಲಾಸ್‌, ತೈಲಬೀಜಗಳು, ಹತ್ತಿ, ಅನೇಕ ಉದ್ದಿಮೆಗಳಿಗೆ ಬೇಕಾಗುವ ಕಚ್ಚಾ ವಸ್ತುಗಳನ್ನು ಭಾರತ ರಫ್ತು ಮಾಡುತ್ತದೆ. ಐಟಿ ಒಂದು ಭಾಗ ಮಾತ್ರ. ಇವುಗಳ ಹಿತಾಸಕ್ತಿಗೆ ಅಮೆರಿಕದ ಪರಿಸ್ಥಿತಿ ಚೆನ್ನಾಗಿರುವುದು ಮುಖ್ಯ. 2021ರಲ್ಲಿ ಎರಡೂ ರಾಷ್ಟ್ರಗಳ ದ್ವಿಪಕ್ಷೀಯ ಸರಕು ವ್ಯಾಪಾರ ದಾಖಲೆಯ 100 ಬಿಲಿಯನ್‌ ಡಾಲರ್‌, ಅಂದರೆ ಅಂದಾಜು 7.8 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿತ್ತು. ಹೀಗಾಗಿ ಬಡ್ಡಿ ದರ ಏರಿಕೆ ಪರಿಣಾಮ ಭಾರತದ ಉತ್ಪನ್ನಗಳಿಗೆ ಅಮೆರಿಕದಲ್ಲಿ ಬೇಡಿಕೆ ಕ್ಷೀಣಿಸಿದರೆ ಮಾತ್ರ ಕಷ್ಟವಾದೀತು. ಎರಡನೆಯದಾಗಿ ಭಾರತದಲ್ಲಿ ಅಮೆರಿಕದ ಹೂಡಿಕೆ ಕಡಿಮೆಯಾದರೆ ಸವಾಲಾದೀತು. ಆದರೆ ಭಾರತ ಮೇಕ್‌ ಇನ್‌ ಇಂಡಿಯಾ ಅಭಿಯಾನ, ಪಿಎಲ್‌ಐ ಸ್ಕೀಮ್‌ ಅಡಿ ದೇಶಿ ಉತ್ಪಾದನೆಗೆ ಒತ್ತು ನೀಡುತ್ತಿದೆ, ಹೀಗಾಗಿ ವಿದೇಶಿ ಹೂಡಿಕೆಯ ಒಳಹರಿವು ಉಂಟಾಗುತ್ತಿದೆ ಎನ್ನುತ್ತಾರೆ ತಜ್ಞರು.

ಈಗಲೂ ಅಮೆರಿಕ ಸೂಪರ್‌ ಪವರ್‌

ಶೀತಲ ಸಮರದ ಕಾಲಘಟ್ಟದಲ್ಲಿ ಬ್ರಿಟಿಷ್‌ ಸಾಮ್ರಾಜ್ಯ ಪತನವಾಯಿತು. ಅಮೆರಿಕ ಮತ್ತು ಸೋವಿಯತ್‌ ಒಕ್ಕೂಟ ಕಣದಲ್ಲಿ ಉಳಿಯಿತು. ಶೀತಲಸಮರ ಅಂತ್ಯವಾಗುವ ಹೊತ್ತಿಗೆ 1991ರಲ್ಲಿ ಸೋವಿಯತ್‌ ಒಕ್ಕೂಟ ವಿಸರ್ಜನೆಯಾಯಿತು. ಅಮೆರಿಕ ವಿಶ್ವದ ಏಕೈಕ ಸೂಪರ್‌ ಪವರ್‌ ಆಯಿತು. ಈಗಲೂ ಜಾಗತಿಕ ಮಟ್ಟದಲ್ಲಿ ಅಮೆರಿಕ ತನ್ನ ಪ್ರಭಾವವನ್ನು ಹೊಂದಿದೆ. ಜಗತ್ತಿನಲ್ಲಿ ಅತಿ ದೊಡ್ಡ ಮಿಲಿಟರಿ ಬಜೆಟ್‌ ಅನ್ನು ಇದು ಒಳಗೊಂಡಿದೆ. ಅತಿ ಹೆಚ್ಚು ಶಸ್ತ್ರಾಸ್ತ್ರಗಳನ್ನು ಹಲವು ದೇಶಗಳಿಗೆ ರಫ್ತು ಮಾಡುತ್ತದೆ. ಇದಕ್ಕಾಗಿಯೇ ಜಗತ್ತಿನ ಒಂದಿಲ್ಲೊಂದು ಕಡೆಗಳಲ್ಲಿ ಸಂಘರ್ಷಗಳಿಗೆ ಕುಮ್ಮಕ್ಕು ನೀಡುತ್ತದೆ ಎಂಬ ಆರೋಪವೂ ಅಮೆರಿಕದ ಮೇಲಿದೆ. ಮಾಹಿತಿ ತಂತ್ರಜ್ಞಾನ, ಆಟೊಮೊಬೈಲ್‌, ಬಾಹ್ಯಾಕಾಶ, ಪರಮಾಣು ಇಂಧನ ಹಾಗೂ ಉತ್ಪಾದನೆಯಲ್ಲಿ ಅಮೆರಿಕ ಮುಂಚೂಣಿಯಲ್ಲಿದೆ.
ಈಗಲೂ ಅಮೆರಿಕ ಸೂಪರ್‌ ಪವರ್‌ ಆಗಿದೆ. ಜನ ಅಂದುಕೊಂಡಷ್ಟು ದುರ್ಬಲವಾಗಿಲ್ಲ. ರಿಸೆಶನ್‌ ಆಗಲಿದೆ ಎಂದು ಗ್ರಹಿಸುವುದು ಕಷ್ಟ ಎನ್ನುತ್ತಾರೆ ಹೂಡಿಕೆದಾರ ಕೆವಿನ್‌ ಒಲಿಯರಿ. ಅದಕ್ಕೆ ಎರಡು ಕಾರಣಗಳನ್ನೂ ಅವರು ವಿವರಿಸುತ್ತಾರೆ. ಮೊದಲನೆಯದಾಗಿ ಕಳೆದ ಕೆಲ ವರ್ಷಗಳಲ್ಲಿ ಅಮೆರಿಕದ ಆರ್ಥಿಕತೆಗೆ 4.5 ಲಕ್ಷ ಕೋಟಿ ಡಾಲರ್ ಹಣವನ್ನು ಸೇರಿಸಲಾಗಿದೆ. ಗ್ರಾಹಕರು ಮತ್ತು ಬಿಸಿನೆಸ್‌ ವಲಯಕ್ಕೂ ಭರಪೂರ ಹಣ ನೀಡಲಾಗಿದೆ. ಈ ಹಣದಿಂದ ಗ್ರಾಹಕರು ತಮಗೆ ಬೇಕಾದ್ದನ್ನು ಖರೀದಿಸುತ್ತಿದ್ದಾರೆ. ಎರಡನೆಯದಾಗಿ ತಂತ್ರಜ್ಞಾನದ ಪರಿಣಾಮ ಉತ್ಪಾದನೆ ಗಣನೀಯವಾಗಿ ಸುಧಾರಿಸಿದೆ. ಹೀಗಾಗಿ ರಿಸೆಶನ್‌ ಉಂಟಾಗದು ಎನ್ನುತ್ತಾರೆ ಅವರು.
ಹೀಗಾಗಿ ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಆಗಲಿದೆಯೇ ಎಂಬುದನ್ನು ಗ್ರಹಿಸುವುದು ಕಷ್ಟ. ಆದರೆ ಹಣದುಬ್ಬರ ಕಳೆದ 40 ವರ್ಷಗಳಲ್ಲಿಯೇ ಕಂಡರಿಯದ ಮಟ್ಟಕ್ಕೇರಿದ್ದು, ಅಮೆರಿಕದ ಪ್ರಜೆಗಳನ್ನು ಕಂಗೆಡಿಸಿರುವುದಂತೂ ವಾಸ್ತವ. ಈ ಬಿಕ್ಕಟ್ಟು ಎಲ್ಲಿಗೆ ಬಂದು ನಿಲ್ಲುತ್ತದೆ ಎಂದು ಕಾದು ನೋಡಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

Dubai Airport: ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

VISTARANEWS.COM


on

Dubai Airport
Koo

ನವದೆಹಲಿ: 2.92 ಲಕ್ಷ ಕೋಟಿ ರೂಪಾಯಿ (35 ಬಿಲಿಯನ್ ಡಾಲರ್) ವೆಚ್ಚದಲ್ಲಿ 400 ಗೇಟ್ ಗಳು ಮತ್ತು ಐದು ಸಮಾನಾಂತರ ರನ್ ವೇಗಳಿರುವ ವಿಶ್ವದ ಅತ್ಯಂತ ದೊಡ್ಡ ಏರ್​ಪೋರ್ಟ್​​ ನಿರ್ಮಾಣ (Dubai Airport) ಮಾಡುವುದಾಗಿ ದುಬೈ ಆಡಳಿತ ಭಾನುವಾರ ಪ್ರಕಟಿಸಿದೆ. ಅದಕ್ಕೆ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಎಂದು ಹೆಸರಿಡುವುದಾಗಿ ಹೇಳಿದೆ.

“ಇಂದು, ನಾವು ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್​ಗಳ ವಿನ್ಯಾಸಗಳನ್ನು ಅನುಮೋದಿಸಿದ್ದೇವೆ. ದುಬೈ ಏವಿಯೇಷನ್ ಕಾರ್ಪೊರೇಷನ್​​ನ ಕಾರ್ಯತಂತ್ರದ ಭಾಗವಾಗಿ 128 ಬಿಲಿಯನ್ ಡಾಲರ್ ವೆಚ್ಚದಲ್ಲಿ ಕಟ್ಟಡದ ನಿರ್ಮಾಣವನ್ನು ಪ್ರಾರಂಭಿಸಿದ್ದೇವೆ” ಎಂದು ದುಬೈ ಆಡಳಿತಗಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಪ್ರಕಟಿಸಿದ್ದಾರೆ.

“ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ. ಮುಂಬರುವ ವರ್ಷಗಳಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಲ್ಲಾ ಕಾರ್ಯಾಚರಣೆಗಳನ್ನು ಅದಕ್ಕೆ ವರ್ಗಾಯಿಸಲಾಗುವುದು” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಈ ವಿಮಾನ ನಿಲ್ದಾಣ ವಿಶ್ವದ ಅತಿ ದೊಡ್ಡ ನಿಲ್ದಾಣವಾಗುವ ವೇಳೆ ಅಲ್ಲಿ ಇರಬಹುದಾದ ಕೆಲವೊಂದು ಸೌಲಭ್ಯಗಳು ಹಾಗೂ ಇನ್ನಿತರ ಮಾಹಿತಿಗಳ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ಆ ಕುರಿತು ಇಲ್ಲಿದೆ ಸಂಕ್ಷಿಪ್ತ ವಿವರ ಇಲ್ಲಿದೆ.

ಸಾಮರ್ಥ್ಯ ಎಷ್ಟು?


ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಹೆಚ್ಚು ಸಾಮರ್ಥ್ಯ ಹೊಂದಿರುವ ವಿಮಾನ ನಿಲ್ದಾಣವಾಗಲಿದೆ. ವಾರ್ಷಿಕವಾಗಿ 2.6 ಕೋಟಿ (260 ಮಿಲಿಯನ್) ಪ್ರಯಾಣಿಕರು ಈ ವಿಮಾನದ ಮೂಲಕ ಪ್ರಯಾಣ ಮಾಡಲಿದ್ದಾರೆ.

ಗಾತ್ರ ಎಷ್ಟು?
ಇದು ಪ್ರಸ್ತುತ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

ಮೂಲಸೌಕರ್ಯ ಹೇಗಿರುತ್ತದೆ?

ವಿಮಾನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣವು 400 ವಿಮಾನ ಗೇಟ್ ಗಳನ್ನು ಹೊಂದಿರುತ್ತದೆ. ಏಕಕಾಲಕ್ಕೆ ಇಲ್ಲಿ ಅಷ್ಟೊಂದು ವಿಮಾನಗಳು ಪ್ರವೇಶಿಸಬಹುದು.

ರನ್ ವೇಗಳು ಎಷ್ಟು?

ವಿಮಾನಗಳ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಇದು ಐದು ಸಮಾನಾಂತರ ರನ್ ವೇಗಳನ್ನು ಹೊಂದಿರುತ್ತದೆ. ಒಂದೇ ಬದಿಯಲ್ಲಿ ಅಷ್ಟೊಂದು ವಿಮಾನಗಳು ಏಕಕಾಲಕ್ಕೆ ಟೇಕ್​ಆಫ್​ ಅಥವಾ ಲ್ಯಾಂಡಿಂಗ್ ಆಗಬಹುದು.

ಹೊಸತೇನು?

ಈ ವಿಮಾನ ನಿಲ್ದಾಣದಲಲಿ ಹೊಸ ವಾಯುಯಾನ ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ ಎಂದು ಅವರು ಹೇಳದಿ್ದಾರೆ. ಇದು ವಾಯುಯಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಎಂದು ಹೇಲಾಗಿದೆ.

ವೆಚ್ಚ ಎಷ್ಟು?

ಈ ಯೋಜನೆಗೆ ಸುಮಾರು 2.9 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ.

ಮುಗಿಯುವುದು ಯಾವಾಗ?

ವರ್ಷಕ್ಕೆ 150 ಮಿಲಿಯನ್ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯವಿರುವ ಮೊದಲ ಹಂತವು 10 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದುವರಿದ ಭಾಗವು ಆ ಬಳಿಕ ಸಾಗಲಿದೆ.

ಇದನ್ನೂ ಓದಿ: Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

ಲಾಜಿಸ್ಟಿಕ್ಸ್ ಮತ್ತು ವಾಯು ಸಾರಿಗೆ ಕ್ಷೇತ್ರಗಳಲ್ಲಿ ವಿಶ್ವದ ಪ್ರಮುಖ ಕಂಪನಿಗಳಿಗೆ ಆತಿಥ್ಯ ವಹಿಸುವ “ದುಬೈ ದಕ್ಷಿಣದ ವಿಮಾನ ನಿಲ್ದಾಣದ ಸುತ್ತಲೂ” ಅವರು ಇಡೀ ನಗರವನ್ನು ನಿರ್ಮಿಸುತ್ತಿದ್ದಾರೆ. ಒಂದು ಮಿಲಿಯನ್ ಜನರಿಗೆ ಉಳಿದುಕೊಳ್ಳುವುದಕ್ಕೂ ಅವಕಾಶ ಮಾಡಿಕೊಡುತ್ತೇವೆ ಎಂದು ಆಡಳಿತಗಾರ ಹೇಳಿದ್ದರೆ.

“ನಾವು ಭವಿಷ್ಯದ ಪೀಳಿಗೆಗಾಗಿ ಹೊಸ ಯೋಜನೆಯನ್ನು ನಿರ್ಮಿಸುತ್ತಿದ್ದೇವೆ ನಮ್ಮ ಮಕ್ಕಳು ಮತ್ತು ಅವರ ಮಕ್ಕಳಿಗೆ ನಿರಂತರ ಮತ್ತು ಸ್ಥಿರ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಿದ್ದೇವೆ. ದುಬೈ ವಿಶ್ವದ ವಿಮಾನ ನಿಲ್ದಾಣ, ಅದರ ಬಂದರು, ಅದರ ನಗರ ಕೇಂದ್ರ ಮತ್ತು ಅದರ ಹೊಸ ಜಾಗತಿಕ ಕೇಂದ್ರವಾಗಲಿದೆ.

Continue Reading

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading
Advertisement
Mureder Case
ಪ್ರಮುಖ ಸುದ್ದಿ21 mins ago

Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

Akshaya Tritiya Bala Rama Silver Idol gift from Sri Sai Gold Palace in bengaluru
ಬೆಂಗಳೂರು2 hours ago

Sri Sai Gold Palace: ಅಕ್ಷಯ ತೃತೀಯ; ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹ ಉಡುಗೊರೆ

IPL 2024
ಪ್ರಮುಖ ಸುದ್ದಿ3 hours ago

IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Padma Awards 2024
ಪ್ರಮುಖ ಸುದ್ದಿ3 hours ago

Padma Awards 2024 : ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Prajwal Revanna Case
ಪ್ರಮುಖ ಸುದ್ದಿ4 hours ago

Prajwal Revanna Case : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಕೇಸ್​ ದಾಖಲು

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ5 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

T20 World Cup 2024
ಪ್ರಮುಖ ಸುದ್ದಿ5 hours ago

T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ಉತ್ತರ ಕನ್ನಡ5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Yallapur Vishwadarshana Group of institutions performed well in SSLC Result 2024
ಉತ್ತರ ಕನ್ನಡ5 hours ago

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

women's Cricket team
ಕ್ರೀಡೆ5 hours ago

Womens Cricket Team : ಬಾಂಗ್ಲಾ ವಿರುದ್ಧ 5-0 ಕ್ಲೀನ್​ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ5 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ6 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ7 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ13 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ13 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ14 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು14 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ14 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು16 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

ಟ್ರೆಂಡಿಂಗ್‌