Formal sector jobs : 2022-23ರಲ್ಲಿ ಇಪಿಎಫ್‌ಒ ಅಡಿಯಲ್ಲಿ ಫಾರ್ಮಲ್‌ ಸೆಕ್ಟರ್‌ ಉದ್ಯೋಗಿಗಳ ಸಂಖ್ಯೆ ಹೆಚ್ಚಳ - Vistara News

Latest

Formal sector jobs : 2022-23ರಲ್ಲಿ ಇಪಿಎಫ್‌ಒ ಅಡಿಯಲ್ಲಿ ಫಾರ್ಮಲ್‌ ಸೆಕ್ಟರ್‌ ಉದ್ಯೋಗಿಗಳ ಸಂಖ್ಯೆ ಹೆಚ್ಚಳ

Formal sector jobs ಇಪಿಎಫ್‌ಒ ಅಡಿಯಲ್ಲಿ ಫಾರ್ಮಲ್‌ ಸೆಕ್ಟರ್‌ ಉದ್ಯೋಗಿಗಳ ಸಂಖ್ಯೆ ಕಳೆದ 2022-23ರಲ್ಲಿ ಏರಿಕೆಯಾಗಿದೆ. ವಿವರ ಇಲ್ಲಿದೆ.

VISTARANEWS.COM


on

After RBI EPFO also blocks Paytm Payments Bank
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕಳೆದ 2022-23ರಲ್ಲಿ ಇಪಿಎಫ್‌ಒ (EPFO) ಅಡಿಯಲ್ಲಿ ಫಾರ್ಮಲ್‌ ಸೆಕ್ಟರ್‌ ವಲಯದ ಉದ್ಯೋಗಿಗಳ ಸಂಖ್ಯೆ 13% ಹೆಚ್ಚಳವಾಗಿದೆ. ಅಂದರೆ 2022-23ರಲ್ಲಿ 1.39 ಕೋಟಿಗೆ ಏರಿಕೆಯಾಗಿದೆ. ಇದು 2021-22ರಲ್ಲಿ 1.22 ಕೋಟಿಯಷ್ಟಿತ್ತು. (Formal sector jobs) ಹೀಗಿದ್ದರೂ ಮಾಸಿಕ ಸರಾಸರಿ ಏರಿಕೆಯ ಹೋಲಿಕೆಯಲ್ಲಿ ನೋಡುವುದಿದ್ದರೆ 2022ರಲ್ಲಿ 15.3 ಲಕ್ಷ ಹಾಗೂ 2023ರ ಮಾರ್ಚ್‌ನಲ್ಲಿ 13.4 ಲಕ್ಷ ಮಂದಿ ಸೇರ್ಪಡೆಯಾಗಿದ್ದಾರೆ.

2023ರ ಮಾರ್ಚ್‌ನಲ್ಲಿ ಇಪಿಎಫ್‌ಒಗೆ ಸೇರ್ಪಡೆಯಾಗಿರುವ 13.4 ಲಕ್ಷ ಕಾರ್ಮಿಕರ ಪೈಕಿ ಸುಮಾರು 7.5 ಲಕ್ಷ ಮಂದಿ ಹೊಸ ಸದಸ್ಯರಾಗಿದ್ದಾರೆ. 2.3 ಲಕ್ಷ ಮಂದಿ 18-21 ವರ್ಷ ವಯೋಮಿತಿಯವರಾಗಿದ್ದಾರೆ. 1.9 ಲಕ್ಷ ಮಂದಿ 22-25 ವರ್ಷ ವಯೋಮಿತಿಯವರಾಗಿದ್ದಾರೆ.

ಮಾರ್ಚ್‌ನಲ್ಲಿ ಇಪಿಎಫ್‌ಒಗೆ ನಿವ್ವಳ ಸೇರ್ಪಡೆಯಾದವರಲ್ಲಿ 18-25 ವರ್ಷ ವಯೋಮಿತಿಯವರು 56.6% ರಷ್ಟಿದ್ದಾರೆ ಎಂದು ಕಾರ್ಮಿಕ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. 10 ಲಕ್ಷ ಮಂದಿ ಇಪಿಎಫ್‌ಒಗೆ ಮರು ಸೇರ್ಪಡೆಯಾಗಿದ್ದಾರೆ.

ಉತ್ತರಾಖಂಡ್‌, ಉತ್ತರಪ್ರದೇಶ, ಹಿಮಾಚಲಪ್ರದೇಶ, ಜಮ್ಮು ಕಾಶ್ಮೀರ, ಮಿಜೋರಾಂ ಮತ್ತಿತರ ರಾಜ್ಯಗಳಲ್ಲಿ ಇಪಿಎಫ್‌ಒಗೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ, ಹರಿಯಾಣ ಮತ್ತು ಗುಜರಾತ್‌ನಲ್ಲಿ ಅತಿ ಹೆಚ್ಚು ಮಂದಿ ಹೊಸತಾಗಿ ಇಪಿಎಫ್‌ಒಗೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: EPF e-passbook : ಇಪಿಎಫ್‌ಒ ವೆಬ್‌ಸೈಟ್‌ನಲ್ಲಿ ಇ-ಪಾಸ್‌ಬುಕ್‌ ಮತ್ತೆ ಲಭ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Vastu Tips: ಮನೆಯಲ್ಲಿ ಚಪ್ಪಲಿ, ಶೂ ಎಲ್ಲೆಂದರಲ್ಲಿ ಇಟ್ಟು ಸಂಕಷ್ಟ ಮೈಮೇಲೆ ಎಳೆದುಕೊಳ್ಳಬೇಡಿ!

ವಾಸ್ತು ನಿಯಮಗಳನ್ನು (Vastu Tips) ಪಾಲಿಸುವುದು ಮನೆಯ ಸಮೃದ್ಧಿಗಾಗಿ ಒಳ್ಳೆಯದು. ಇದರಲ್ಲಿ ಕೆಲವೊಮ್ಮೆ ವೈಜ್ಞಾನಿಕ ಅಂಶಗಳು ಅಡಕವಾಗಿರುತ್ತದೆ. ಶೂ, ಚಪ್ಪಲಿಗಳನ್ನು ಇಡುವ ಬಗ್ಗೆಯೂ ವಾಸ್ತು ಶಾಸ್ತ್ರದಲ್ಲಿ ನಿಯಮಗಳಿವೆ. ಅವುಗಳನ್ನು ಅನುಸರಿಸಿದರೆ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಯಾಗುವಂತೆ ಮಾಡಬಹುದು.

VISTARANEWS.COM


on

By

Vastu Tips
Koo

ಮನೆಯ (home) ಹೊರಗೆ ಸುತ್ತಾಡಲು ಬಳಸುವ ಬೂಟು ಮತ್ತು ಚಪ್ಪಲಿಗಳನ್ನು (shoes and slippers) ಮನೆಯೊಳಗೇ ಕೊಂಡೊಯ್ಯಬಾರದು ಎನ್ನುತ್ತಾರೆ ಹಿರಿಯರು. ಅಲ್ಲದೇ ಮನೆಯ ಮೆಟ್ಟಿಲ ಬಳಿ ಚಪ್ಪಲಿ ಇಡಬಾರದು, ಅಡ್ಡಾದಿಡ್ಡಿಯಾಗಿ ಚಪ್ಪಲಿಗಳನ್ನು ಇರಿಸಬಾರದು ಎನ್ನುವ ಶಾಸ್ತ್ರವೇ (Vastu Tips) ಇದೆ. ನಾವು ಮಾಡುವ ಸಣ್ಣಪುಟ್ಟ ಅಜಾಗರೂಕತೆಗಳು ಮನೆಯ ವಾಸ್ತುವಿಗೆ ದೋಷ ಉಂಟು ಮಾಡುತ್ತದೆ. ಚಪ್ಪಲಿಯನ್ನು ಇಡುವ ವಿಚಾರದಲ್ಲೂ ಇದು ಅನ್ವಯವಾಗುತ್ತದೆ ಎನ್ನುತ್ತದೆ ವಾಸ್ತು ಶಾಸ್ತ್ರ.

ಶೂ ಮತ್ತು ಚಪ್ಪಲಿಗಳನ್ನು ಇಡಲು ವಾಸ್ತು ಸಲಹೆಗಳಿವೆ. ಬೂಟು ಮತ್ತು ಚಪ್ಪಲಿಗಳು ಅಲ್ಲೊಂದು ಇಲ್ಲೊಂದು ಬಿದ್ದಿರುವ ಮನೆಗಳಲ್ಲಿ ಎಂದಿಗೂ ಸಮೃದ್ಧಿ ಇರುವುದಿಲ್ಲ. ಇದರಿಂದ ವಾಸ್ತು ದೋಷವನ್ನು ಎದುರಿಸಬೇಕಾಗಬಹುದು ಎನ್ನುತ್ತದೆ ವಾಸ್ತುಶಾಸ್ತ್ರ.

ಅನೇಕ ಜನರು ತಮ್ಮ ಬೂಟು ಮತ್ತು ಚಪ್ಪಲಿಗಳನ್ನು ಮನೆಯಲ್ಲಿ ಎಲ್ಲಿಯಾದರೂ ತೆಗೆಯುತ್ತಾರೆ ಅಥವಾ ಅಲ್ಲೇ ಇಟ್ಟು ಬಿಡುತ್ತಾರೆ. ಇದನ್ನು ಮಾಡಲೇಬಾರದು. ಹೀಗೆ ಮಾಡುವುದು ನಿಮಗೂ, ಮನೆಗೂ ಒಳ್ಳೆಯದಲ್ಲ.

ಸುಖ, ಶಾಂತಿ, ಸಮೃದ್ಧಿಗಾಗಿ ಮನೆಯಲ್ಲಿ ವಾಸ್ತು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ಬಾರಿ ನಾವು ಚಪ್ಪಲಿಗಳನ್ನು ಇಡುವ ವಿಚಾರದಲ್ಲಿ ವಾಸ್ತು ನಿಯಮಗಳ ಏನು ಹೇಳುತ್ತವೆ ಎಂಬುದನ್ನು ತಿಳಿದುಕೊಳ್ಳೋಣ.


ಯಾವ ದಿಕ್ಕಿನಲ್ಲಿ ಇಡಬಾರದು?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಉತ್ತರ ಮತ್ತು ಪೂರ್ವ ದಿಕ್ಕಿನಲ್ಲಿ ಪಾದರಕ್ಷೆ ಮತ್ತು ಚಪ್ಪಲಿಗಳನ್ನು ಇಡಬಾರದು. ಈ ದಿಕ್ಕಿನಲ್ಲಿ ಬೂಟು ಮತ್ತು ಚಪ್ಪಲಿಗಳನ್ನು ಇಟ್ಟುಕೊಳ್ಳುವುದರಿಂದ ನಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ.

ಎಲ್ಲಿ ಇಡಬೇಕು?

ಯಾವಾಗಲೂ ಬೂಟು ಮತ್ತು ಚಪ್ಪಲಿಗಳನ್ನು ಮುಚ್ಚಿರುವ ಬೀರುಗಳಲ್ಲಿ ಇಡಬೇಕು ಎನ್ನುತ್ತದೆ ವಾಸ್ತು ನಿಯಮ. ಚಪ್ಪಲಿಗಳು ನೆಗೆಟಿವ್ ಎನರ್ಜಿಯನ್ನು ಹೆಚ್ಚಿಸುವುದರಿಂದ ತೆರೆದ ಜಾಗದಲ್ಲಿ, ಮನೆಯ ಮೆಟ್ಟಿಲುಗಳ ಬಳಿ ಇಡಬಾರದು.

ಎಲ್ಲಿ ತೆಗೆಯಬಾರದು?

ಮನೆಯ ಬಾಗಿಲಿನ ಬಳಿ ಶೂ ಮತ್ತು ಚಪ್ಪಲಿಗಳನ್ನು ಬಿಚ್ಚಿಡುವ ಅಭ್ಯಾಸ ಹೆಚ್ಚಿನವರಿಗೆ ಇದೆ. ಈ ಅಭ್ಯಾಸ ಇದ್ದರೆ ಕೂಡಲೇ ಬದಲಾಯಿಸಿಕೊಳ್ಳಿ. ವಾಸ್ತು ನಿಯಮದ ಪ್ರಕಾರ ಮನೆಯ ಬಾಗಿಲ ಬಳಿ ಶೂ, ಚಪ್ಪಲಿಗಳನ್ನು ಎಂದಿಗೂ ತೆಗೆಯಬೇಡಿ. ಹೀಗೆ ಮಾಡುವುದರಿಂದ ಕೌಟುಂಬಿಕ ಕಲಹದ ಸಾಧ್ಯತೆ ಹೆಚ್ಚುತ್ತದೆ. ಕುಟುಂಬ ಸದಸ್ಯರ ನಡುವೆ ಜಗಳಗಳು ಉಂಟಾಗಬಹುದು.

ಇದನ್ನೂ ಓದಿ: Vastu Tips: ವಾಸ್ತು ಶಾಸ್ತ್ರದ ಪ್ರಕಾರ ಪ್ರೀತಿ ಪಾತ್ರರಿಗೆ ನೀಡುವ ಉಡುಗೊರೆಗಳು ಹೀಗಿರಬೇಕು


ಶೂ ರಾಕ್ ಎಲ್ಲಿ ಇಡಬೇಕು?

ಶೂ ರಾಕ್ ಗಳನ್ನು ಯಾವಾಗಲೂ ಮನೆಯ ಹೊರಗೆ ಇಡಬೇಕು. ಮನೆಯೊಳಗೆ ಶೂ ರಾಕ್ ಗಳನ್ನು ಇಡುವುದರಿಂದ ಪತಿ-ಪತ್ನಿಯರ ನಡುವೆ ಘರ್ಷಣೆಗಳು ಹೆಚ್ಚಾಗುತ್ತವೆ.

ಹೇಗಿಡಬೇಕು?

ಶೂ ಮತ್ತು ಚಪ್ಪಲಿಗಳನ್ನು ಎಂದಿಗೂ ತಲೆಕೆಳಗಾಗಿ ಇಡಬಾರದು. ಯಾಕೆಂದರೆ ಇದು ಮನೆಯಲ್ಲಿ ರೋಗಗಳು ನೆಲೆಸುವಂತೆ ಮಾಡುತ್ತದೆ ಎನ್ನುತ್ತದೆ ವಾಸ್ತು ನಿಯಮ.

Continue Reading

ಕೃಷಿ

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ (PM Kisan Samman) ನಿಧಿ ಯೋಜನೆಯ ೧೭ನೇ ಕಂತಿನ ಹಣ ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಅನಂತರ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಿಸಾನ್ ಸಮ್ಮಾನ್ ಗಾಗಿ ಅರ್ಜಿ ಸಲ್ಲಿಸಿದ್ದರೆ ಸ್ಥಿತಿಗತಿಯನ್ನು ಒಮ್ಮೆ ಪರಿಶೀಲಿಸಿ. ಜನಸಾಮಾನ್ಯರಿಗೆ ಈ ಕುರಿತ ಸರಳ ಮಾಹಿತಿ ಇಲ್ಲಿದೆ.

VISTARANEWS.COM


on

By

PM Kisan Samman
Koo

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman) ಯೋಜನೆಯ 17ನೇ ಕಂತಿಗಾಗಿ (17th installment) ಫಲಾನುಭವಿ ರೈತರು (beneficiary farmers) ಕಾಯುತ್ತಿದ್ದು ಶೀಘ್ರದಲ್ಲೇ ಇದು ಬಿಡುಗಡೆಯಾಗಲಿದೆ. ಜೂನ್ 4ರಂದು (june) ನಡೆಯುವ ಲೋಕಸಭೆ ಚುನಾವಣೆಯ (loksabha election) ಫಲಿತಾಂಶ ಪ್ರಕಟವಾದ ಅನಂತರ ಇದು ಬಿಡುಗಡೆಯಾಗುವ ನಿರೀಕ್ಷೆ ಇದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 16ನೇ ಕಂತನ್ನು 2024ರ ಫೆಬ್ರವರಿ 28ರಂದು ಮಹಾರಾಷ್ಟ್ರದ ಯವತ್ಮಾಲ್‌ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು 9 ಕೋಟಿಗೂ ಹೆಚ್ಚು ರೈತರಿಗೆ 21,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದರು. 15 ನೇ ಕಂತಿನ ಹಣ ಕಳೆದ ನವೆಂಬರ್ ನಲ್ಲಿ ಬಿಡುಗಡೆಯಾಗಿತ್ತು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ಗಳನ್ನು ಪಡೆಯುತ್ತಾರೆ, ಇದು ವಾರ್ಷಿಕವಾಗಿ 6,000 ರೂ. ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ಏಪ್ರಿಲ್- ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್- ಮಾರ್ಚ್ ನಲ್ಲಿ ನೀಡಲಾಗುತ್ತದೆ. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಈ ಯೋಜನೆಯನ್ನು 2019 ರ ಮಧ್ಯಂತರ ಬಜೆಟ್‌ನಲ್ಲಿ ಆಗಿನ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಘೋಷಿಸಿದರು. ಕಂತುಗಳನ್ನು ಸ್ವೀಕರಿಸಲು ರೈತರು ತಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕು. ಯೋಜನೆಯ ಅಧಿಕೃತ ವೆಬ್‌ಸೈಟ್ ಪ್ರಕಾರ,ಪಿಎಂ ಕಿಸಾನ್ ನೋಂದಾಯಿತ ರೈತರಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಒಟಿಪಿ -ಆಧಾರಿತಇ-ಕೆವೈಸಿ ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ಲಭ್ಯವಿದೆ ಅಥವಾ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಗಾಗಿ ಹತ್ತಿರದ ಸಿಎಸ್ಸಿ ಕೇಂದ್ರಗಳನ್ನು ಸಂಪರ್ಕಿಸಬಹುದು.


ಪರಿಶೀಲನೆ ಹೇಗೆ?

ನೋಂದಾಯಿಸಿರುವ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಲು ಅಧಿಕೃತ ವೆಬ್‌ಸೈಟ್‌ pmkisan.gov.in ಗೆ ಭೇಟಿ ನೀಡಿ. ಪುಟದ ಬಲಭಾಗದಲ್ಲಿರುವ ‘ನಿಮ್ಮ ಸ್ಥಿತಿಯನ್ನು ತಿಳಿಯಿರಿ’ ಎಂಬ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಿ ಮತ್ತು ‘ಡೇಟಾ ಪಡೆಯಿರಿ’ ಎಂಬ ಆಯ್ಕೆಯನ್ನು ಆರಿಸಿ. ಬಳಿಕ ಫಲಾನುಭವಿಯ ಸ್ಥಿತಿಯು ಪರದೆಯ ಮೇಲೆ ಬರುತ್ತದೆ.

ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಪರಿಶೀಲನೆ

ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ ‘ಫಲಾನುಭವಿಗಳ ಪಟ್ಟಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಬಳಿಕ ಡ್ರಾಪ್-ಡೌನ್‌ನಿಂದ ಆಯ್ದ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆ ಮಾಡಿ.ದ ಮೇಲೆ ‘ಗೆಟ್ ರಿಪೋರ್ಟ್’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಇದರ ಅನಂತರ, ಫಲಾನುಭವಿಗಳ ಪಟ್ಟಿಯ ವಿವರವನ್ನು ಪ್ರದರ್ಶಿಸಲಾಗುತ್ತದೆ.

ಈ ಮಾಹಿತಿಗಳನ್ನು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿಯೂ ತಿಳಿದುಕೊಳ್ಳಬಹುದು. ಸಹಾಯವಾಣಿ ಸಂಖ್ಯೆ- 155261 ಮತ್ತು 011-24300606.

ಇದನ್ನೂ ಓದಿ: PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

ಅರ್ಜಿ ಸಲ್ಲಿಸುವುದು ಹೇಗೆ?

pmkisan.gov.in ವೆಬ್ ಸೈಟ್ ಗೆ ಭೇಟಿ ನೀಡಿ, ‘ಹೊಸ ರೈತ ನೋಂದಣಿ’ ಮೇಲೆ ಕ್ಲಿಕ್ ಮಾಡಿ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾವನ್ನು ಭರ್ತಿ ಮಾಡಿ. ಅಗತ್ಯವಿರುವ ವಿವರಗಳನ್ನು ನಮೂದಿಸಿ ಮತ್ತು ‘ಹೌದು’ ಎಂದು ಕ್ಲಿಕ್ ಮಾಡಿ. ಪಿಎಂ ಕಿಸಾನ್ ಅರ್ಜಿ ನಮೂನೆ 2024 ರಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ. ಅದನ್ನು ಉಳಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.

Continue Reading

ವಾಣಿಜ್ಯ

Nita Ambani: ನೀತಾ ಅಂಬಾನಿ ಕುಡಿಯುವ ನೀರಿನ ಬಾಟಲಿಯ ಬೆಲೆ 49 ಲಕ್ಷ ರೂಪಾಯಿ!

ಜನಪ್ರಿಯ ವಿನ್ಯಾಸಕಾರರಿಂದ ಕಸ್ಟಮೈಸ್ ಮಾಡಿದ ಬಾಟಲಿಯಲ್ಲಿ 49 ಲಕ್ಷ ರೂಪಾಯಿ ಮೌಲ್ಯದ ವಿಶ್ವದ ಅತ್ಯಂತ ದುಬಾರಿ ಚಿನ್ನದ ನೀರನ್ನು ನೀತಾ ಅಂಬಾನಿ (Nita Ambani) ಕುಡಿಯುತ್ತಾರೆ ಎನ್ನಲಾಗುತ್ತದೆ. ಈ ನೀರು ಯಾಕೆ ಇಷ್ಟು ದುಬಾರಿ, ಇದರ ವಿಶೇಷತೆ ಏನು ಗೊತ್ತೇ? ವಿಶ್ವದ ಅತ್ಯಂತ ದುಬಾರಿ ನೀರಿನ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Nita Ambani
Koo

ಅಂಬಾನಿ (Ambani) ಕುಟುಂಬದ ಪ್ರತಿಯೊಬ್ಬರ ಬಗ್ಗೆಯೂ ತಿಳಿದುಕೊಂಡಷ್ಟು ಮತ್ತಷ್ಟು ತಿಳಿಯುವ ಕುತೂಹಲವಂತೂ ಇದ್ದೇ ಇದೆ. ಅದರಲ್ಲೂ ನೀತಾ ಅಂಬಾನಿ (Nita Ambani) ಅವರ ಸ್ಟೈಲಿಶ್ ಲುಕ್ (Stylish look) ಎಲ್ಲರನ್ನೂ ಮೋಡಿ ಮಾಡುತ್ತದೆ. ಅವರ ಚಪ್ಪಲಿಯಿಂದ ಹಿಡಿದು ಹಣೆಯ ಬಿಂದಿಯವರೆಗೆ ಅವರ ಕುರಿತು ಒಂದಲ್ಲ ಒಂದು ವಿಷಯಗಳು ಸದಾ ಚರ್ಚೆಯಲ್ಲಿರುತ್ತದೆ.

ತನ್ನದೇ ಆದ ಶೈಲಿ ಮತ್ತು ಸೊಬಗಿಗೆ ಹೆಸರುವಾಸಿಯಾಗಿರುವ ನೀತಾ ಅಂಬಾನಿ ಈಗ ಮತ್ತೆ ಚರ್ಚೆಯಲ್ಲಿರುವುದು ಅವರ ವಿಶಿಷ್ಟವಾದ ಬಾಟಲಿಯ ನೀರಿನಿಂದ (water bottle). ನೀರಲ್ಲಿ ಅಂತಹ ವಿಶೇಷತೆ ಏನಿದೆ ಎಂಬ ಪ್ರಶ್ನೆ ಕಾಡಬಹುದು. ಆದರೆ ಇದು ಅಂತಿಂತ ನೀರಲ್ಲ ವಿಶ್ವದ ಅತ್ಯಂತ ದುಬಾರಿ ನೀರು (costliest gold water).

ಜನಪ್ರಿಯ ಡಿಸೈನರ್ ಫರ್ನಾಂಡೋ ಅಲ್ಟಾಮಿರಾನೊ ವಿನ್ಯಾಸಗೊಳಿಸಿದ ಕಸ್ಟಮೈಸ್ ಮಾಡಿದ ಬಾಟಲಿಯಲ್ಲಿ ನೀತಾ ಅಂಬಾನಿ ನೀರು ಕುಡಿಯುತ್ತಾರೆ. ಇದು ವಿಶ್ವದ ಅತ್ಯಂತ ದುಬಾರಿ ನೀರು. ಏಕೆಂದರೆ ಈ ಚಿನ್ನದ ಬಾಟಲಿಯ ಬೆಲೆಯೇ 49 ಲಕ್ಷ ರೂಪಾಯಿಯಂತೆ!


ಅಕ್ವಾ ಡಿ ಕ್ರಿಸ್ಟಾಲೊ ಟ್ರಿಬ್ಯೂಟೊ ಎ ಮೊಡಿಗ್ಲಿಯಾನಿ ಬ್ರಾಂಡ್ ನ 49 ಲಕ್ಷ ರೂಪಾಯಿಗಳ ಈ ನೀರನ್ನು ನೀತಾ ಅಂಬಾನಿ ಕುಡಿಯುತ್ತಾರೆ ಎಂದು ಹೇಳಲಾಗುತ್ತದೆ. ಇದು ವಿಶ್ವದ ಅತ್ಯಂತ ದುಬಾರಿ ನೀರು ಎನ್ನಲಾಗುತ್ತದೆ. ಚಿನ್ನದಂತಹ ನೀರಿನ ಬಾಟಲಿಯನ್ನು ಹಿಡಿದಿರುವ ಮಾರ್ಫ್ ಮಾಡಿದ ಚಿತ್ರವನ್ನು ಆಧರಿಸಿ ಈ ಸುದ್ದಿಯನ್ನು ಆಂಗ್ಲ ಮಾಧ್ಯಮವೊಂದು ಪ್ರಕಟಿಸಿದೆ. 2015ರ ಐಪಿಎಲ್ ಪಂದ್ಯದ ಸಮಯದಲ್ಲಿ ಮೂಲ ಫೋಟೋದಲ್ಲಿ ನೀತಾ ಅಂಬಾನಿ ಸಾಮಾನ್ಯ ನೀರಿನ ಬಾಟಲಿಯನ್ನು ಹಿಡಿದುಕೊಂಡಿದ್ದಾರೆ. ಅದೇ ಚಿತ್ರವನ್ನು ಚಿನ್ನದ ಬಾಟಲಿಗೆ ರೂಪಾಂತರಿಸಿ ಪ್ರಕಟಿಸಲಾಗಿದೆ. ಈ ಬ್ರಾಂಡ್ ನ ನೀರು ವಿಶ್ವದಲ್ಲೇ ಅತ್ಯಂತ ದುಬಾರಿ ಎನ್ನುವುದು ನಿಜ. ಆದರೆ ನೀತಾ ಅಂಬಾನಿ ಎಷ್ಟು ಪ್ರಮಾಣದಲ್ಲಿ ಅದನ್ನು ಕುಡಿಯುತ್ತಾರೆ ಎನ್ನುವುದು ಖಚಿತವಾಗಿಲ್ಲ.

ನೀರಿನ ವಿಶೇಷ ಏನು?

ತ್ವಚೆಯನ್ನು ಯೌವನವಾಗಿಡಲು ಚಿನ್ನದ ಕಣಗಳು ಪರಿಣಾಮಕಾರಿಯಾಗಿ ಕೆಲಸ ಮಾಡುವುದರಿಂದ ಯುವ ಮತ್ತು ಕ್ರಿಯಾತ್ಮಕವಾಗಿ ಕಾಣಲು ನೀತಾ ಅಂಬಾನಿ ಈ ಚಿನ್ನದ ನೀರನ್ನು ಕುಡಿಯುತ್ತಾರೆ ಎಂದು ಹೇಳಲಾಗುತ್ತದೆ.


ಏಕೆ ದುಬಾರಿ?

ವಿಶ್ವದ ಅತ್ಯಂತ ದುಬಾರಿ ಚಿನ್ನದ ನೀರಿನ ಬಗ್ಗೆ ತಿಳಿದುಕೊಳ್ಳಬೇಕಾಗಿರುವ ಹಲವು ಪ್ರಮುಖ ವಿಷಯಗಳಿವೆ.

ಈ ನೀರಿನ ಬಾಟಲಿಯು 24 ಕ್ಯಾರಟ್ ಚಿನ್ನದಿಂದ ಮುಚ್ಚಲ್ಪಟ್ಟಿದೆ. ಫಿಜಿ ಮತ್ತು ಫ್ರಾನ್ಸ್‌ನ ನೈಸರ್ಗಿಕ ಬುಗ್ಗೆಯಿಂದ ನೀರನ್ನು ಸಂಗ್ರಹಿಸಲಾಗುತ್ತದೆ. ಐಸ್‌ಲ್ಯಾಂಡ್‌ನ ಹಿಮನದಿ ನೀರು 23 ಕ್ಯಾರಟ್ ಚಿನ್ನದ ಧೂಳನ್ನು ಹೊಂದಿರುತ್ತದೆ.

ದುಬಾರಿ ಫೋನ್ ಬಳಕೆ

ಐಷಾರಾಮಿ ಜೀವನಕ್ಕೆ ಹೆಸರುವಾಸಿಯಾಗಿರುವ ನೀತಾ ಅಂಬಾನಿ ಅತ್ಯಂತ ದುಬಾರಿ ಕಸ್ಟಮೈಸ್ ಮಾಡಿದ ಮೊಬೈಲ್ ಫೋನ್ ಗಳನ್ನು ಬಳಸುತ್ತಾರೆ. ಇತ್ತೀಚೆಗೆ, ಅವರು ಮಹತ್ವದ ಕಾರ್ಯಕ್ರಮವೊಂದರಲ್ಲಿ ಐಫೋನ್ 15 ಪ್ರೊ ಮ್ಯಾಕ್ಸ್ ಅನ್ನು ಹೊತ್ತೊಯ್ದಿದ್ದಾರೆ.

ಇದನ್ನೂ ಓದಿ: Forbes World Billionaires List: ವಿಶ್ವದ ಶ್ರೀಮಂತ ಮಹಿಳೆಯರು; ಭಾರತದ ಸಾವಿತ್ರಿ ಜಿಂದಾಲ್‌ಗೆ ಎಷ್ಟನೇ ಸ್ಥಾನ?

ನೀತಾ ಅಂಬಾನಿ ಅವರು ಫಾಲ್ಕನ್ ಸೂಪರ್ನೋವಾ ಐಫೋನ್ 6 ಪಿಂಕ್ ಡೈಮಂಡ್ ಅನ್ನು ಬಳಸುತ್ತಾರೆ, ಇದು ವಿಶ್ವದ ಅತ್ಯಂತ ದುಬಾರಿ ಫೋನ್‌ಗಳಲ್ಲಿ ಒಂದಾಗಿದೆ. ಈ ಕಸ್ಟಮ್ ವಿನ್ಯಾಸದ ಫೋನ್ ಹಿಂಭಾಗದಲ್ಲಿ ದೊಡ್ಡ ಗುಲಾಬಿ ವಜ್ರವನ್ನು ಹೊಂದಿದೆ ಮತ್ತು ಪ್ಲಾಟಿನಂನಲ್ಲಿ ಸುತ್ತುವರಿಯಲ್ಪಟ್ಟಿದೆ. ಇದರ ಬೆಲೆ ಸುಮಾರು 300 ಕೋಟಿ ರೂ. ಎನ್ನಲಾಗುತ್ತದೆ.

Continue Reading

ವಿಜ್ಞಾನ

Headless Chicken: ತಲೆ ಕತ್ತರಿಸಿದರೂ ಈ ಕೋಳಿ 18 ತಿಂಗಳು ಬದುಕಿತ್ತು! ಸಾಯುವ ಮೊದಲು ಮಾಲೀಕನನ್ನು ಶ್ರೀಮಂತಗೊಳಿಸಿತು!

ಪವಾಡಗಳ ಬಗ್ಗೆ ನಾವು ಸಾಕಷ್ಟು ಬಾರಿ ಕೇಳಿರುತ್ತೇವೆ. ಇಲ್ಲಿ ನಡೆದಿರುವ ಪವಾಡ ಮಾತ್ರ ನಂಬಲು ಅಸಾಧ್ಯವಾಗಿರುವುದು. ಇದನ್ನು ಕೇಳಿ ಎಲ್ಲರೂ ಇದು ಖಂಡಿತಾ ಸಾಧ್ಯವಿಲ್ಲ ಎಂದುಕೊಂಡರೆ ನಿಮ್ಮ ಊಹೆ ತಪ್ಪು. ಯಾಕೆಂದರೆ ಇದು ನಿಜವಾಗಿಯೂ ನಡೆದಿದೆ. ತಲೆಯನ್ನೇ ಕಳೆದುಕೊಂಡ ಕೋಳಿ (Headless Chicken) 18 ತಿಂಗಳ ಕಾಲ ಬದುಕಿದೆ. ಇದು ಈಗ ವಿಜ್ಞಾನಕ್ಕೂ ಸವಾಲಾಗಿ ಕಾಣುತ್ತಿದೆ.

VISTARANEWS.COM


on

By

Headless Chicken
Koo

ಪವಾಡಗಳು (Miracle) ಜೀವನದ (life) ಭಾಗವಾಗಿದೆ. ವಿಜ್ಞಾನದ (science) ಪ್ರಶ್ನೆಗೂ ನಿಲುಕದ ಕೆಲವೊಂದು ಸಂಗತಿಗಳು ಘಟಿಸುತ್ತವೆ. ಯಾರ ಬಳಿಯೂ ಉತ್ತರವಿರುವುದಿಲ್ಲ. ಈ ವಿಷಯಗಳನ್ನು ಅಲೌಕಿಕ (supernatural) ವಿದ್ಯಮಾನದ ಭಾಗವೆಂದೇ ಪರಿಗಣಿಸಲಾಗುತ್ತದೆ. ಇದರಲ್ಲಿ ಈ ಕೋಳಿಯೂ (Headless Chicken) ಒಂದು. ಇದು ಊಹೆಗೂ ನಿಲುಕದಂತಿದೆ. ನಂಬಲು ಕಷ್ಟ ಮತ್ತು ಆಶ್ಚರ್ಯಕರವಾಗಿದೆ.

ಇದೀಗ ಒಂದು ಪವಾಡ ಪ್ರಕರಣವೊಂದು ವರದಿಯಾಗಿದೆ. ಇದರಲ್ಲಿ ‘ಮೈಕ್’ ಎಂಬ ಕೋಳಿ (Miracle Mike) ತನ್ನ ಉಳಿದ 18 ತಿಂಗಳ ಸುದೀರ್ಘ ಜೀವನವನ್ನು ತಲೆಯಿಲ್ಲದೇ ಕಳೆದಿದೆ.

1945 ರ ಸೆಪ್ಟೆಂಬರ್‌ನಲ್ಲಿ ಯುನೈಟೆಡ್ ಸ್ಟೇಟ್ಸ್‌ನ (United States) ಕೊಲೊರಾಡೋದ (Colorado) ಫ್ರೂಟಾದಲ್ಲಿ ವಾಸಿಸುತ್ತಿದ್ದ ಓಲ್ಸೆನ್ ಕುಟುಂಬವು ಸಂಜೆಯ ಊಟಕ್ಕಾಗಿ ಚಿಕನ್ ತಯಾರಿಸಲು ಯೋಚನೆ ಮಾಡುತ್ತಿತ್ತು. ಅದಕ್ಕಾಗಿ ರೈತ ಲಾಯ್ಡ್ ಓಲ್ಸೆನ್ ಮನೆಗೆ ತಾಜಾ ಮಾಂಸವನ್ನು ತರಲು ಹೊಲಕ್ಕೆ ಹೋಗುತ್ತಾನೆ.

ಅಲ್ಲಿ ಆತ ‘ಮೈಕ್’ ಎಂದು ಗುರುತಿಸಲ್ಪಟ್ಟ ಐದೂವರೆ ತಿಂಗಳ ಗಂಡು ವಯಾಂಡೊಟ್ಟೆ ಕೋಳಿಯನ್ನು ಎತ್ತಿಕೊಂಡು ತರುತ್ತಾನೆ. ಅದನ್ನು ಎಷ್ಟೇ ಕೊಲ್ಲಲು ಪ್ರಯತ್ನಿಸಿದರೂ ಆತನಿಗೆ ಅದು ಸಾಧ್ಯವಾಗಲಿಲ್ಲ. ತಲೆಯನ್ನೇ ಕತ್ತರಿಸಿದರೂ ಅದು ಉಸಿರು ಚೆಲ್ಲಲಿಲ್ಲ. ಅದೊಂದು ಅಭೂತಪೂರ್ವ ಘಟನೆಯಾಗಿದ್ದು, ವಿಶ್ವವೇ ಬೆರಗಾಗುವಂತೆ ಮಾಡಿತು.


18 ತಿಂಗಳು ಹೇಗೆ ಬದುಕಿತು?

ಲಾಯ್ಡ್ ಕೋಳಿಯ ಶಿರಚ್ಛೇದ ಮಾಡಿದ. ಕತ್ತಿಯ ಏಟು ಅದರ ತಲೆಯ ಹೆಚ್ಚಿನ ಭಾಗಗಳನ್ನು ಕತ್ತರಿಸಿದರೂ ಅದು ಕುತ್ತಿಗೆ ಮತ್ತು ಗಂಟಲಿಗೆ ಸಂಬಂಧಿಸಿದ ಕಂಠನಾಳವನ್ನು ಸೀಳುವಲ್ಲಿ ವಿಫಲವಾಯಿತು. ಹೀಗಾಗಿ ಅದು ಬದುಕುಳಿಯಿತು. ಒಂದು ಕಿವಿ ಮತ್ತು ಮೆದುಳಿನ ಹೆಚ್ಚಿನ ಕಾಂಡವು ಹಾನಿಗೊಳಗಾದರೂ ಅದು ಸಾಯಲಿಲ್ಲ. ರಕ್ತ ವೇಗವಾಗಿ ಹೆಪ್ಪುಗಟ್ಟಿದ್ದರಿಂದ ಅತಿಯಾದ ರಕ್ತದ ನಷ್ಟವಾಗಲಿಲ್ಲ.

ಬಳಿಕ ಲಾಯ್ಡ್ ಮೈಕ್‌ ಗೆ ಹೊಸ ಜೀವನ ನೀಡಲು ಮುಂದಾದ. ಕೋಳಿಯನ್ನು ಮನೆಗೆ ತಂದು ಸಂಪೂರ್ಣ ಆರೈಕೆ ಮಾಡಲು ನಿರ್ಧರಿಸಿದರು.

ಲಾಯ್ಡ್ ಅದಕ್ಕೆ ಹಾಲು ಮತ್ತು ನೀರಿನ ಮಿಶ್ರಣವನ್ನು ಒಳಗೊಂಡಿರುವ ಆಹಾರವನ್ನು ತಯಾರಿಸಿದ. ಐಡ್ರಾಪರ್ ಮೂಲಕ ಅದಕ್ಕೆ ಆಹಾರವನ್ನು ನೀಡಿದ. ಕೆಲವು ಹುಳು ಮತ್ತು ಜೋಳವನ್ನು ನೀಡಿದನು.

ಮೈಕ್ ಗಳಿಸಿದ ಖ್ಯಾತಿ

ಈ ಘಟನೆಯು ಜಗತ್ತಿಗೇ ಸುದ್ದಿಯಾಗುವಷ್ಟು ವಿಸ್ಮಯಕಾರಿಯಾಗಿತ್ತು. ಮೈಕ್ ಭಾರೀ ಜನಮನಗೆದ್ದಿತು ಮತ್ತು ಸಂಶೋಧನೆಯ ವಿಷಯವಾಯಿತು.

ಹಲವಾರು ನಿಯತಕಾಲಿಕೆಗಳಿಗೆ ಇದನ್ನು ವರದಿ ಮಾಡಿತ್ತು. ಅನೇಕ ಪತ್ರಿಕೆಗಳಿಗೆ ಇದು ಮುಖಪುಟದ ವಿಷಯವಾಯಿತು. ಮೈಕ್ ಅನ್ನು 25 ಸೆಂಟ್ಸ್ ವೆಚ್ಚದಲ್ಲಿ ಸಾರ್ವಜನಿಕರಿಗೆ ಪ್ರದರ್ಶನಕ್ಕೆ ಇಡಲಾಯಿತು.

“ಮೈಕ್ ದಿ ಹೆಡ್‌ಲೆಸ್ ಚಿಕನ್ ಡೇ” ಅನ್ನು 1999 ರಿಂದ ಕೊಲೊರಾಡೋದ ಫ್ರೂಟಾದಲ್ಲಿ ಪ್ರತಿ ಮೇ ತಿಂಗಳ ಮೂರನೇ ವಾರಾಂತ್ಯದಲ್ಲಿ ಆಚರಿಸಲಾಗುತ್ತದೆ.

ಇದನ್ನೂ ಓದಿ: Dream Of Retired Couple: ನಿರಂತರ ಮೂರೂವರೆ ವರ್ಷಗಳ ನೌಕಾಯಾನಕ್ಕಾಗಿ ತಮ್ಮದೆಲ್ಲವನ್ನೂ ಮಾರಿದ ದಂಪತಿ!

ಮೈಕ್ ನಿಂದ ಕೋಳಿ ಮಾಲೀಕ ತಿಂಗಳಿಗೆ ಸುಮಾರು 45,000 ಡಾಲರ್ ಆದಾಯ ಗಳಿಸಿದ. ಈ ಅದ್ಭುತ ಕೋಳಿ ಮೌಲ್ಯ ಆಗ 10,000 ಡಾಲರ್ ಆಗಿತ್ತು.

ಸಾವು ಹೇಗಾಯಿತು?

1947ರ ಮಾರ್ಚ್ ನಲ್ಲಿ ಜೋಳದ ತುಂಡು ಮೈಕ್ ನ ಗಂಟಲಲ್ಲಿ ಸಿಲುಕಿದ ನಂತರ ಅದು ಸಾವನ್ನಪ್ಪಿತು. ಪ್ರವಾಸದಿಂದ ಹಿಂದಿರುಗುವಾಗ ಲಾಯ್ಡ್ ಶುಚಿಗೊಳಿಸುವ ಸಿರಿಂಜ್‌ಗಳನ್ನು ಬಿಟ್ಟು ಬಂದಿದ್ದರಿಂದ ಮೈಕ್ ನನ್ನು ಬದುಕಿಸಲು ವಿಫಲರಾದರು.

Continue Reading
Advertisement
Assault Case in Shivamogga
ಕ್ರೈಂ5 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Team India Dream 11
ಕ್ರಿಕೆಟ್6 mins ago

Team India T20 World Cup: ಚಿಂಟುವಿನ ಆಸೆ ನೆರವೇರಿಸಲು ಟೀಮ್​ ಇಂಡಿಯಾ ಜತೆ ನ್ಯೂಯಾರ್ಕ್​ಗೆ ತೆರಳಿದ ತಾಯಿ

Shiva Rajkumar support Tamil Movie Non Voilance Cinema
ಸ್ಯಾಂಡಲ್ ವುಡ್12 mins ago

Shiva Rajkumar: ತಮಿಳಿನ ‘ನಾನ್ ವೈಲೆನ್ಸ್’ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್: ಫಸ್ಟ್ ಲುಕ್ ಔಟ್‌!

Narendra Modi
Lok Sabha Election 202412 mins ago

Narendra Modi: ಲೋಕಸಭಾ ಚುನಾವಣೆ ಫಲಿತಾಂಶದ 6 ತಿಂಗಳ ಬಳಿಕ ‘ರಾಜಕೀಯ ಭೂಕಂಪ’; ಮೋದಿನ ಮಾತಿನ ಮರ್ಮವೇನು?

Valmiki Corporation Scam
ಪ್ರಮುಖ ಸುದ್ದಿ15 mins ago

Valmiki Corporation Scam: ಹಗರಣದ ಆರೋಪಿ ಜೊತೆಗೆ ಸಚಿವ ನಾಗೇಂದ್ರ ಕ್ಲೋಸ್‌? ಫೋಟೋ ಬಿಡುಗಡೆ ಮಾಡಿದ ಬಿಜೆಪಿ

Mansoon
ದೇಶ24 mins ago

Monsoon: ವಾಡಿಕೆಗಿಂತ ಮುನ್ನವೇ ಲಗ್ಗೆ ಇಟ್ಟ ಮಾನ್ಸೂನ್‌; ಕೇರಳದಲ್ಲಿ ಮುಂಗಾರು ಆರಂಭ

Ravichandran Birthday Premaloka 2 update
ಸ್ಯಾಂಡಲ್ ವುಡ್36 mins ago

Ravichandran Birthday: `ಪ್ರೇಮಲೋಕ 2’ಬಗ್ಗೆ ಅಪ್‌ಡೇಟ್‌ ಹಂಚಿಕೊಂಡ ‘ಕ್ರೇಜಿ ಸ್ಟಾರ್’ ರವಿಚಂದ್ರನ್‌!

cylinder blast in Bengaluru
ಕ್ರೈಂ55 mins ago

Fire Accident : ಗಾಢ ನಿದ್ರೆಯಲ್ಲಿರುವಾಗಲೇ ಸಿಲಿಂಡರ್‌ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಐವರು ಗಂಭೀರ

T20 World Cup 2007
ಕ್ರಿಕೆಟ್1 hour ago

T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

Gold Rate Today
ಚಿನ್ನದ ದರ1 hour ago

Gold Rate Today: ತುಸು ಇಳಿಕೆ ಕಂಡ ಚಿನ್ನದ ಬೆಲೆ; ಇಲ್ಲಿದೆ ದರದ ವಿವರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ5 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌