ಕರ್ನಾಟಕಕ್ಕೆ ಸ್ವಂತ ನೀತಿ ಆಯೋಗ ರಚನೆ ಶೀಘ್ರ, ತ್ವರಿತ ಅಭಿವೃದ್ಧಿಯ ನಿರೀಕ್ಷೆ - Vistara News

ಪ್ರಮುಖ ಸುದ್ದಿ

ಕರ್ನಾಟಕಕ್ಕೆ ಸ್ವಂತ ನೀತಿ ಆಯೋಗ ರಚನೆ ಶೀಘ್ರ, ತ್ವರಿತ ಅಭಿವೃದ್ಧಿಯ ನಿರೀಕ್ಷೆ

ಕೇಂದ್ರದ ನೀತಿ ಆಯೋಗದ ಮಾದರಿಯಲ್ಲಿ ಅಸ್ತಿತ್ವಕ್ಕೆ ಬರಲಿರುವ ಕರ್ನಾಟಕ ಪರಿವರ್ತನಾ ಸಂಸ್ಥೆಯು ರಾಜ್ಯ ಬಜೆಟ್‌ ರಚನೆ ಹಾಗೂ ಯೋಜನೆಗಳ ಜಾರಿಗೆ ಸಹಕಾರ ನೀಡಲಿದೆ.

VISTARANEWS.COM


on

CM Basavaraj Bommai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕವು ನೀತಿ ಆಯೋಗದ ಮಾದರಿಯಲ್ಲಿ ರಾಜ್ಯ ಮಟ್ಟದ ಸಾರ್ವಜನಿಕ ನೀತಿ ಕುರಿತ ಸಂಸ್ಥೆಯನ್ನು ಸ್ಥಾಪಿಸಲಿದೆ. ವಾರ್ಷಿಕ ೧೫೦ ಕೋಟಿ ರೂ.ಗಳ ಬಜೆಟ್‌ ಅನ್ನು ಇದಕ್ಕೆ ಒದಗಿಸಲಾಗುವುದು.

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಸಲುವಾಗಿ ಯಾವುದಕ್ಕೆ ಆದ್ಯತೆ ನೀಡಬೇಕು ಎಂಬುದನ್ನು ಈ ನೂತನ “ಕರ್ನಾಟಕ ಪರಿವರ್ತನಾ ಸಂಸ್ಥೆ ( State Institute for Transformation of Karnataka- SITK) ಶಿಫಾರಸು ನೀಡಲಿದೆ. ರಾಜ್ಯದ ನೀತಿ ಆಯೋಗವನ್ನು ಇದು ಬದಲಿಸಲಿದೆ. ರಾಜ್ಯ ಮಟ್ಟದ ಚಿಂತನಾ ಬಳಗವಾಗಿ (Think Tank) ಆಗಿ ಇದು ಕಾರ್ಯ ನಿರ್ವಹಿಸಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಸ್ಥೆಯ ಅಧ್ಯಕ್ಷರಾಗಿ ಇರಲಿದ್ದಾರೆ.

ಕರ್ನಾಟಕ ಪರಿವರ್ತನೆ ಸಂಸ್ಥೆಯ ಸ್ವರೂಪ ಹೇಗಿರಲಿದೆ?: ಮುಖ್ಯಮಂತ್ರಿಗಳು ಅಧ್ಯಕ್ಷರಾಗಿರುತ್ತಾರೆ. ಅಭಿವೃದ್ಧಿಪರ ವಿಷಯಗಳಲ್ಲಿ ಪರಿಣತರನ್ನು ಉಪಾಧ್ಯಕ್ಷರಾಗಿ ನಾಮ ನಿರ್ದೇಶನ ಮಾಡಲಾಗುವುದು. ಒಟ್ಟು ೮ ಕ್ಷೇತ್ರಗಳ ಪರಿಣತರನ್ನು ಸಲಹೆಗಾರರಾಗಿ ನೇಮಿಸಲಾಗುವುದು. ಅವೆಂದರೆ-

೧. ಶಿಕ್ಷಣ, ೨. ಆರೋಗ್ಯ, ೩. ಕೃಷಿ ಮತ್ತು ಉದ್ಯಮ, ೪. ಗ್ರಾಮೀಣ ಮತ್ತು ನಗರಾಭಿವೃದ್ಧಿ, ೫. ವಿಜ್ಞಾನ ಮತ್ತು ತಂತ್ರಜ್ಞಾನ, ೬. ಕೌಶಲ ಅಭಿವೃದ್ಧಿ ಮತ್ತು ಉದ್ಯೋಗ, ೭. ಶುದ್ಧ ಮತ್ತು ಹಸಿರು ಇಂಧನ, ೮. ಆರ್ಥಿಕತೆ ಮತ್ತು ಹಣಕಾಸು ವಲಯದ ಸಲಹೆಗಾರರನ್ನು ನೇಮಿಸಲಾಗುವುದು. ಯೋಜನಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುತ್ತಾರೆ.

ಪ್ರಮುಖ ಉದ್ದೇಶಗಳೇನು?

  • ಸಂಪನ್ಮೂಲ ಅಭಿವೃದ್ಧಿಯ ಮೂಲಕ ಪ್ರಾದೇಶಿಕ ಅಸಮತೋಲನದ ನಿವಾರಣೆ. ಉತ್ತಮ ಆಡಳಿತ ಪದ್ಧತಿಯ ಅಳವಡಿಕೆ. ಆವಿಷ್ಕಾರಕ್ಕೆ ಉತ್ತೇಜನ.
  • ರಾಜ್ಯ ಬಜೆಟ್‌ ಸಿದ್ಧಪಡಿಸಲು ನೆರವಾಗುವುದು. ರಾಜ್ಯದ ಒಟ್ಟು ಆಂತರಿಕ ಉತ್ಪನ್ನವನ್ನು (Gross state domestic product-GSDP) ಹೆಚ್ಚಿಸಲು ನೆರವಾಗುವುದು.
  • ರಾಜ್ಯ, ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಯೋಜನೆಗಳನ್ನು ಬಲಪಡಿಸುವುದು.
  • ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾಗರಿಕ ಸಮಾಜ, ವೃತ್ತಿಪರರು, ಅಂತಾರಾಷ್ಟ್ರೀಯ ತಜ್ಞರ ನೆರವುಪಡೆಯುವುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

Neha Murder Case: ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ಕೊಲೆ ಪ್ರಕರಣದ ಬಗ್ಗೆ ಆರೋಪಿ ಫಯಾಜ್‌ ತಂದೆ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯಿಸಿದ್ದು, ಮಗನ ತಪ್ಪಿನಿಂದ ಊರಿಗೇ ಕೆಟ್ಟ ಹೆಸರು ಬಂದಿದೆ. ನನ್ನ ಮಗ ಫಯಾಜ್‌ಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

VISTARANEWS.COM


on

Neha Murder Case
Koo

ಹುಬ್ಬಳ್ಳಿ: ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ಕೊಲೆ ಪ್ರಕರಣ (Neha Murder Case) ದೇಶಾದ್ಯಂತ ಸದ್ದು ಮಾಡುತ್ತಿದೆ. ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್‌ ತಂದೆ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯಿಸಿದ್ದು, ಮಗನ ತಪ್ಪಿನಿಂದ ಊರಿಗೇ ಕೆಟ್ಟ ಹೆಸರು ಬಂದಿದೆ. ನನ್ನ ಮಗ ಫಯಾಜ್‌ಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

ವಿಸ್ತಾರ ನ್ಯೂಸ್‌ ಜತೆ ಮಾತನಾಡಿರುವ ಬಾಬಾ ಸಾಹೇಬ್‌ ಸುಬಾನಿ, ನನ್ನ ಮಗ ಮಾಡಿದ ತಪ್ಪಿಗೆ ನಾನು ಮುನವಳ್ಳಿ ಹಾಗೂ ರಾಜ್ಯದ ಜನರ ಬಳಿ ಕ್ಷಮೆ ಕೇಳುತ್ತೇನೆ. ನಮ್ಮನ್ನು ಮುನವಳ್ಳಿ ಜನ ಬೆಳೆಸಿದ್ದಾರೆ. ಅವರ ಋಣ ತೀರಿಸಲು ಸಾಧ್ಯವಿಲ್ಲ. ಹೀಗಾಗಿ ನಮ್ಮೂರಿನ ಜನ ನನ್ನನ್ನು ಕ್ಷಮಿಸಬೇಕು. ದಯವಿಟ್ಟು ಯಾವುದೇ ಯುವಕರು, ನನ್ನ ಮಗನ ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಬಾರದು ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ.

ನಾನು ಯಾವತ್ತೂ ಯಾರಿಗೂ ಕೆಟ್ಟದ್ದು ಮಾಡಿಲ್ಲ, ಈಗ ನನ್ನ ಮಗ ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿಬಿಟ್ಟಿದ್ದಾನೆ. ಹೀಗಾಗಿ ನನ್ನನ್ನು ಮುನವಳ್ಳಿ ಗ್ರಾಮದ ಜನರು ಕ್ಷಮಿಸಬೇಕು ಎಂದು ಕಣ್ಣೀರು ಹಾಕಿರುವ ಅವರು, ನಾನು ಸಾಯೋವರೆಗೆ ಮುನವಳ್ಳಿ ಜನರ ಸೇವೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಯಾರೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡುತ್ತಾರೋ ಅಂತಹವರಿಗೆ ಮುಂದಿನ ದಿನಗಳಲ್ಲಿ ಯಾರೂ ಅಂಥ ಕೃತ್ಯ ಮಾಡಬಾರದು, ಆ ರೀತಿಯ ಶಿಕ್ಷೆ ಆಗಬೇಕು. ಇಂತಹ ಘಟನೆಗಳಿಂದ ನಾಳಿನ ದಿನ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಲು ಜನ ಭಯಪಡುತ್ತಾರೆ. ಹೀಗಾಗಿ ನನ್ನ ಜನ್ಮಭೂಮಿ ಮುನವಳ್ಳಿ, ಅವರಿಗಾಗಿ ನಾನು ಬದುಕುತ್ತೇನೆ ಎಂದು ಹೇಳಿದ್ದಾರೆ.

ವರ್ಷದ ಹಿಂದೆ ನೇಹಾ ಅವರ ತಂದೆ ನನಗೂ ಎರಡು ಬಾರಿ ಫೋನ್‌ ಮಾಡಿದ್ದರು. ನನ್ನ ಮಗಳಿಗೆ ನಿಮ್ಮ ಮಗ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಿದ್ದರು. ಅವರ ತುಂಬಾ ಒಳ್ಳೆಯವರು. ನಾವಿಬ್ಬರೂ ಪ್ರೀತಿ ಮಾಡುತ್ತಿದ್ದೇವೆ ಎಂದು ಮಗ ಹೇಳಿದ್ದ. ಆದರೆ, ನಾನು ಮಾಡಲ್ಲ ಎಂದಿದ್ದೆ. ಹೀಗಾಗಿ ಅವನು ಜಗಳ ಮಾಡಿದ್ದ. ಈಗ ಅವನು ನನ್ನ ಬಳಿ ಮಾತನಾಡಲ್ಲ. ನಮ್ಮ ದಾಂಪತ್ಯ ಜೀವನ ಸರಿಯಿಲ್ಲದ ಕಾರಣ ಅವರ ತಾಯಿ ಜತೆ ಅವನು ಪ್ರತ್ಯೇಕವಾಗಿ ವಾಸವಾಗಿದ್ದ ಎಂದು ಹೇಳಿದರು.

ಇದನ್ನೂ ಓದಿ | Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ನಾನು ಸೈನಿಕನಾಗಿ ದೇಶ ಸೇವೆ ಸಲ್ಲಿಸಬೇಕು ಅಂದುಕೊಂಡಿದ್ದೆ. ಆದರೆ, ನಮ್ಮ ತಾಯಿ ಬೇಡ ಅಂದಿದ್ದರು. ಹೀಗಾಗಿ ನನ್ನ ಮಗನನ್ನು ಸೇನೆಗೆ ಸೇರಿಸಬೇಕು ಅಂದುಕೊಂಡಿದ್ದೆ. ಆದರೆ ಅವನು ಈ ರೀತಿಯ ಕೆಲಸ ಮಾಡಿದ್ದಾನೆ ಎಂದು ತಿಳಿಸಿದರು.

Continue Reading

ಪ್ರಮುಖ ಸುದ್ದಿ

IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

IPL 2024: ಸ್ಪೆಷಲಿಸ್ಟ್ ಬ್ಯಾಟರ್​ ಅನ್ನು 8 ನೇ ಕ್ರಮಾಂಕದವರೆಗೆ ಆಡಿಸಬಹುದು. ಆದರೆ ತರಬೇತುದಾರ ಮತ್ತು ಆಟಗಾರರಿಗೆ ಇಂಪ್ಯಾಕ್ಟ್​​ ಪ್ಲೇಯರ್​ ಬಹುಶಃ ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ. ಈ ವಿಧಾನವನ್ನು ಜನರನ್ನು ರಂಜಿಸಲು ಮಾಡಲಾಗುತ್ತಿದೆ ನಿಮಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ”ಎಂದು ಪಾಂಟಿಂಗ್ ವಿವರಿಸಿದರು.

VISTARANEWS.COM


on

IPL 2024
Koo

ನವದೆಹಲಿ: ಐಪಿಎಲ್​ 2024ರಲ್ಲಿ (IPL 2024) ಜಾರಿಯಾಗಿರುವ ಇಂಪ್ಯಾಕ್ಟ್ ಪ್ಲೇಯರ್ ನಿಯಮವು ಆಲ್ರೌಂಡರ್​ಗಳ ಬೆಳವಣಿಗೆಗೆ ಅಡ್ಡಿಯಾಗಬಹುದು ಎಂದು ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಶುಕ್ರವಾರ ಹೇಳಿದ್ದಾರೆ. ಅಲ್ಲದೆ ಇದರ ಪರಿಣಾಮ ಅಭಿಮಾನಿಗಳೇ ಅರಿತುಕೊಳ್ಳಬಹುದು ಎಂದು ಹೇಳಿದ್ದಾರೆ.

ಪಾಂಟಿಂಗ್ ಆರಂಭದಿಂದಲೂ ಇಂಪ್ಯಾಕ್ಟ್ ಪ್ಲೇಯರ್​ ವ್ಯವಸ್ಥೆಯ ಪ್ರತಿಪಾದಕರಾಗಿರಲಿಲ್ಲ. ಇತ್ತೀಚಿನ ಯೂಟ್ಯೂಬ್ ಪಾಡ್​ಕಾಸ್ಟ್​​ನಲ್ಲಿ ರೋಹಿತ್ ಶರ್ಮಾ ಅವರು “ನಿಯಮದ ಅಭಿಮಾನಿಯಲ್ಲ” ಎಂದು ಹೇಳಿದ್ದರು. ಅಲ್ಲಿ.ದ ನಂತರ ಈ ಚರ್ಚೆಯು ವೇಗ ಪಡೆದುಕೊಂಡಿದೆ. ಏಕೆಂದರೆ ಇದು ಭಾರತೀಯ ಆಲ್​ರೌಂಡರ್​ಗಳ ಅಭಿವೃದ್ಧಿಗೆ ಧಕ್ಕೆ ತರುತ್ತದೆ ಎಂದು ಪಾಟಿಂಗ್ ಹೇಳಿದ್ದಾರೆ. . “ನೋಡಿ, ರೋಹಿತ್ ಶರ್ಮಾ ಅವರಿಂದ ಕೆಲವು ನಿಜವಾಗಿಯೂ ಆಸಕ್ತಿದಾಯಕ ನೀಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಈ ಇಂಪ್ಯಾಕ್ಟ್ ಪ್ಲೇಯರ್ ಆಲ್ರೌಂಡರ್​ಗಳನ್ನು ಆಟದಿಂದ ಸ್ವಲ್ಪ ಹೊರಗಿಡುತ್ತಿದೆ” ಎಂದು ಪಾಂಟಿಂಗ್ ಹೇಳಿದ್ದಾರೆ.

ಸ್ಪೆಷಲಿಸ್ಟ್ ಬ್ಯಾಟರ್​ ಅನ್ನು 8 ನೇ ಕ್ರಮಾಂಕದವರೆಗೆ ಆಡಿಸಬಹುದು. ಆದರೆ ತರಬೇತುದಾರ ಮತ್ತು ಆಟಗಾರರಿಗೆ ಇಂಪ್ಯಾಕ್ಟ್​​ ಪ್ಲೇಯರ್​ ಬಹುಶಃ ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ. ಈ ವಿಧಾನವನ್ನು ಜನರನ್ನು ರಂಜಿಸಲು ಮಾಡಲಾಗುತ್ತಿದೆ ನಿಮಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ”ಎಂದು ಪಾಂಟಿಂಗ್ ವಿವರಿಸಿದರು.

ಟಿ20 ಆಟವು ಮನರಂಜನಾ ಪ್ಯಾಕೇಜ್ ಆಗಿದೆ. ಪ್ರಭಾವಶಾಲಿ ಆಟಗಾರನ ಬಗ್ಗೆ ಪ್ರೇಕ್ಷಕರು ಏನು ಯೋಚಿಸುತ್ತಾರೆ ಎಂದು ಕೇಳುವುದು ಉತ್ತಮ. ಏಕೆಂದರೆ ತಂಡಗಳು ಬಹಳಷ್ಟು ಪಂದ್ಯಗಳಲ್ಲಿ 220 ರಿಂದ 250 ರವರೆಗೆ ಗಳಿಸುತ್ತಿವೆ ಎಂಬ ಅಂಶವನ್ನು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ. ಆದರೆ ಆಟಗಾರರ ಬೆಳವಣಿಗೆಗೆ ಅಡ್ಡಿಯಾಗಲಿದೆ ಎಂದು ಹೇಳಿದರು. ಪ್ರೇಕ್ಷಕರು ಅದನ್ನು ಹೆಚ್ಚು ಇಷ್ಟಪಡದಿದ್ದರೆ. ಹಳೆಯ ಮಾದರಿಗೆ ಹಿಂದಿರುಗಬೇಕ ಎಂದು ಹೇಳಿದ್ದಾರೆ.

ವಾರ್ನರ್ ಶೇ.85ರಿಂದ 90ರಷ್ಟು ಫಿಟ್

ಬೆರಳಿನ ಗಾಯದಿಂದಾಗಿ ಕಳೆದ ಪಂದ್ಯದಿಂದ ಹೊರಗುಳಿದಿದ್ದ ಡೇವಿಡ್ ವಾರ್ನರ್, ನೆಟ್ಸ್​​ನಲ್ಲಿ ಬ್ಯಾಟಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಥ್ರೋಡೌನ್​ಗಳನ್ಉ ಎದುರಿಸುವಾಗ ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಪಾಂಟಿಂಗ್ ಅವರು ಸುಮಾರು 85 ರಿಂದ 90% ಫಿಟ್ ಆಗಿದ್ದಾರೆ ಎಂದು ಪಾಂಟಿಂಗ್ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

“ಡೇವಿಡ್ ಆಟದ ದಿನದಂದು ಫಿಟ್ನೆಸ್ ಪರೀಕ್ಷೆಯನ್ನು ಮಾಡಿದ್ದಾರೆ. ಒಂದೆರಡು ದಿನಗಳ ಹಿಂದೆ ಅವನಿಗೆ ಬಹುಶಃ 85 ಅಥವಾ 90% ಆಗಿದ್ದಾರೆ. ಇನ್ನೂ ಹೆಚ್ಚಿನ ಸುಧಾರಣೆಯಾಗಲಿದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಪಾಂಟಿಂಗ್ ಹೇಳಿದ್ದಾರೆ.

Continue Reading

ಶಿಕ್ಷಣ

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

CET 2024 Exam: ಗುರುವಾರ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ಸಂಬಂಧ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಇಎ, ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ (ಏಪ್ರಿಲ್‌ 24) ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡುವುದಾಗಿ ಹೇಳಿದೆ. ಈಗ ಎರಡನೇ ದಿನವೂ ಇದೇ ಗೊಂದಲವಾಗಿದೆ. ಹೀಗಾಗಿ ಈ ಎರಡೂ ಸಮಸ್ಯೆಗಳ ಬಗ್ಗೆ ಬುಧವಾರ ಚರ್ಚೆ ನಡೆಸಲಾಗುತ್ತದೆ.

VISTARANEWS.COM


on

Day 2 of CET 2024 Exam 26 out of syllabus question KEA asks to raise objections by April 27
Koo

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ಗುರುವಾರ ನಡೆದಿದ್ದ ಮೊದಲ ದಿನದ ಸಿಇಟಿ-2024 ಪರೀಕ್ಷೆಯಲ್ಲಿ (CET 2024 exam) ಗಣಿತ ಹಾಗೂ ಜೀವಶಾಸ್ತ್ರದ ವಿಷಯದಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿತ್ತು. ಈಗ ಎರಡನೇ ದಿನದ ಪರೀಕ್ಷೆಯಲ್ಲಿಯೂ ಈ ಸಮಸ್ಯೆ ಪುನರಾವರ್ತನೆಯಾಗಿದೆ. ಭೌತಶಾಸ್ತ್ರದಲ್ಲಿ 8 ಹಾಗೂ ರಸಾಯನಶಾಸ್ತ್ರ ವಿಷಯದಲ್ಲಿ 18 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲಾಗಿದೆ. ಇದು ವಿದ್ಯಾರ್ಥಿಗಳ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಗುರುವಾರ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ಸಂಬಂಧ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಇಎ, ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ (ಏಪ್ರಿಲ್‌ 24) ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡುವುದಾಗಿ ಹೇಳಿದೆ. ಈಗ ಎರಡನೇ ದಿನವೂ ಇದೇ ಗೊಂದಲವಾಗಿದೆ. ಹೀಗಾಗಿ ಈ ಎರಡೂ ಸಮಸ್ಯೆಗಳ ಬಗ್ಗೆ ಬುಧವಾರ ಚರ್ಚೆ ನಡೆಸಲಾಗುತ್ತದೆ.

ಏಪ್ರಿಲ್‌ 27ರವರೆಗೆ ಆಕ್ಷೇಪಣೆ ಸಲ್ಲಿಕೆಗೆ KEA ಅವಕಾಶ

ಈ ಬಾರಿ ಸಿಇಟಿಯಲ್ಲಿ ನೋಂದಣಿ ಮಾಡಿಕೊಂಡಿದ್ದ 3,49,637 ವಿದ್ಯಾರ್ಥಿಗಳ ಪೈಕಿ ಶೇ.92ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಅಲ್ಲದೆ, ಈಗ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳ ಬಗ್ಗೆ‌ ಆಕ್ಷೇಪಣೆಗಳು ಇದ್ದರೆ, ಇದೇ ಏಪ್ರಿಲ್ 27ರೊಳಗೆ ‌ದೂರು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿನ ಯಾವುದೇ ಪ್ರಶ್ನೆಗಳ ಬಗ್ಗೆ ಆಕ್ಷೇಪಣೆಗಳು ಇದ್ದರೆ, ವಿಷಯ, ವರ್ಷನ್‌ ಕೋಡ್, ಪ್ರಶ್ನೆ ಸಂಖ್ಯೆಗಳನ್ನು ನಮೂದಿಸಿ keaugcet24@gmail.com ಗೆ ಇ – ಮೇಲ್‌ ಮೂಲಕ ಸಂಜೆ 5.30ರ ಒಳಗೆ ದೂರು ಸಲ್ಲಿಸಲು ಕೆಇಎ ಸೂಚಿಸಿದೆ. ಇದಕ್ಕೆ ತಜ್ಞರ ಸಮಿತಿಯು ಪರಿಶೀಲಿಸಿ ಸೂಕ್ತ ಪರಿಹಾರವನ್ನು ನೀಡಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು

ಜೀವಶಾಸ್ತ್ರದ 11 ಪ್ರಶ್ನೆಗಳು ಹಾಗೂ ಗಣಿತದ 9 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ಕೆಇಎಗೆ ದೂರು ನೀಡಿದ್ದಾರೆ. ಇವುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಪಠ್ಯಪುಸ್ತಕದಲ್ಲಿ ಇಲ್ಲದ ಪ್ರಶ್ನೆಗಳು ಬಂದಿವೆ. ಒಟ್ಟು 14 ಮಾರ್ಕ್ಸ್ ಔಟ್ ಆಫ್ ಸಿಲೆಬಸ್ ಬಂದಿದೆ ಎಂದು ಗುರುವಾರ ವಿದ್ಯಾರ್ಥಿಗಳು ಆರೋಪ ಮಾಡಿದ್ದರು. ಈಗ 11 ಮಾರ್ಕ್ಸ್ ಬಗ್ಗೆ ದೂರಿದ್ದಾರೆ.

ಕೆಇಎ ಹೇಳೋದೇನು?

ಗ್ರೇಸ್ ಮಾರ್ಕ್ಸ್ ನೀಡುವ ಬಗ್ಗೆ ಕೆಇಎ ಈವರೆಗೆ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು. ನಂತರ ಗ್ರೇಸ್ ಮಾರ್ಕ್ಸ್ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ವಿಸ್ತಾರ ನ್ಯೂಸ್‌ಗೆ ಕೆಇಎ ಮಂಡಳಿ ಮಾಹಿತಿ ನೀಡಿದೆ. ಈ ಸಮಿತಿ ರಚನೆಯಾದ ಬಳಿಕ ಅಧ್ಯಯನ ಮಾಡಿ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗುವುದು.

ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದಿರುವ ವಿದ್ಯಾರ್ಥಿಗಳು

ಈ ವರ್ಷ ಸಿಇಟಿ ಪರೀಕ್ಷೆಗೆ ದಾಖಲೆಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಹಿಂದೆ ಯಾವತ್ತೂ ಇಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿರಲಿಲ್ಲ. ರಾಜ್ಯದಲ್ಲಿ 737 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ 167 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಯನ್ನು ನಡೆಸಲಾಗಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಭೇಟಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಗುರುವಾರ ಮಲ್ಲೇಶ್ವರಂ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಶುಕ್ರವಾರ ನಡೆಯುವ ಪರೀಕ್ಷೆಗೂ ಬಿಗಿ ಭದ್ರತೆ ಇರಲಿದೆ ಎಂದು ಹೇಳಿದ್ದರು.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೋಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ.

ಇದನ್ನೂ ಓದಿ: Neha Murder Case: ಐಸಿಸ್‌ ಮಾದರಿಯಲ್ಲಿ ನೇಹಾಗೆ ಚಾಕು ಇರಿತ; ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ಮಾತನಾಡಿ, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದ್ದಾರೆ.

Continue Reading

ಕ್ರೀಡೆ

IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

IPL 2024: ಕೊನೆಯ ಓವರ್ ಎಸೆಯುವ ಮೊದಲು, ಮಧ್ವಾಲ್ ತಮ್ಮ ಮೊದಲ ಮೂರು ಓವರ್​ಗಳಲ್ಲಿ 44 ರನ್​ ಬಿಟ್ಟುಕೊಟ್ಟಿದ್ದರು. ವಿಕೆಟ್ ಪಡೆದಿರಲಿಲ್ಲ. ರೊಮಾರಿಯೊ ಶೆಫರ್ಡ್​ಗೆ ಚೆಂಡನ್ನು ನೀಡುವ ಆಯ್ಕೆಯನ್ನು ಹಾರ್ದಿಕ್ ಹೊಂದಿದ್ದರು. ಆದರೆ, ರೋಹಿತ್​​ ಮಧ್ವಾಲ್ ಅವರನ್ನು ಆಯ್ಕೆ ಮಾಡಿದರು. ಬರೋಡಾ ಆಲ್​ರೌಂಡರ್​ ಬೌಲಿಂಗ್​ಗೆ ಮೊದಲು ರೋಹಿತ್ ಜತೆ ಸುದೀರ್ಘ ಚರ್ಚೆ ನಡೆಸಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ರೋಮಾಂಚಕ ಐಪಿಎಲ್​ 2024ರ (IPL 2024) ಪಂದ್ಯದ ಕೊನೆಯ ಓವರ್​​ನಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ತಮ್ಮ ತಂಡಕ್ಕೆ ಫೀಲ್ಡ್​ ಸೆಟ್ ಮಾಡುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಹಾಲಿ ನಾಯಕ ಪಾಂಡ್ಯ ಇದ್ದ ಹೊರತಾಗಿಯೂ ಅವರು ಬೌಲರ್​ ಜತೆ ಸೇರಿಕೊಂಡು ಫೀಲ್ಡ್​ ಸೆಟ್ ಮಾಡುವ ವಿಡಿಯೊ ವೈರಲ್ ಆಗಿದೆ ಯುವ ಬೌಲರ್ ಕೂಡ ಪಾಂಡ್ಯನ ಮಾತುಗಳಿಗೆ ಕಿಮ್ಮತ್ತು ಕೊಡದೇ ಕೇವಲ ರೋಹಿತ್​ ಮಾತುಗಳನ್ನು ಮಾತ್ರ ಕೇಳಿಸಿಕೊಳ್ಳುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ.

ಪಂದ್ಯವನ್ನು ಮುಂಬಯಿ ತಂಡ ಬಹುತೇಕ ಕಳೆದುಕೊಳ್ಳುವ ಹಂತದಲ್ಲಿ ಇತ್ತು. ಆದರೆ, ಕೊನೇ ಹಂತದಲ್ಲಿ ಗೆಲುವು ಲಭಿಸಿತು. ಮುಲ್ಲಾನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 193 ರನ್​ಗಳ ಗುರಿ ಬೆನ್ನತ್ತಿದ ಕಿಂಗ್ಸ್ ಎರಡನೇ ಓವರ್​​ನಲ್ಲಿ 4 ವಿಕೆಟ್ ನಷ್ಟಕ್ಕೆ 14 ರನ್ ಗಳಿಸಿತ್ತು. ಆದರೆ ಅಶುತೋಷ್ ಶರ್ಮಾ 28 ಎಸೆತಗಳಲ್ಲಿ 61 ರನ್ ಗಳಿಸಿ ಗೆಲುವು ಸಾಧಿಸುವ ಭರವಸೆ ಮೂಡಿಸಿದರು. ಕೊನೆಯ ಓವರ್​ನಲ್ಲಿ ಆತಿಥೇಯರಿಗೆ ಗೆಲ್ಲಲು 12 ರನ್​ಗಳ ಅವಶ್ಯಕತೆಯಿತ್ತು. ಆದರೆ ಕೇವಲ ಒಂದು ವಿಕೆಟ್ ಮಾತ್ರ ಉಳಿದಿತ್ತು. ಮುಂಬೈ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಜವಾಬ್ದಾರಿಯನ್ನು ಬೌಲರ್​​ ಆಕಾಶ್ ಮಧ್ವಾಲ್ ಅವರಿಗೆ ನೀಡಲಾಯಿತು.

ಕೊನೆಯ ಓವರ್ ಎಸೆಯುವ ಮೊದಲು, ಮಧ್ವಾಲ್ ತಮ್ಮ ಮೊದಲ ಮೂರು ಓವರ್​ಗಳಲ್ಲಿ 44 ರನ್​ ಬಿಟ್ಟುಕೊಟ್ಟಿದ್ದರು. ವಿಕೆಟ್ ಪಡೆದಿರಲಿಲ್ಲ. ರೊಮಾರಿಯೊ ಶೆಫರ್ಡ್​ಗೆ ಚೆಂಡನ್ನು ನೀಡುವ ಆಯ್ಕೆಯನ್ನು ಹಾರ್ದಿಕ್ ಹೊಂದಿದ್ದರು. ಆದರೆ, ರೋಹಿತ್​​ ಮಧ್ವಾಲ್ ಅವರನ್ನು ಆಯ್ಕೆ ಮಾಡಿದರು. ಬರೋಡಾ ಆಲ್​ರೌಂಡರ್​ ಬೌಲಿಂಗ್​ಗೆ ಮೊದಲು ರೋಹಿತ್ ಜತೆ ಸುದೀರ್ಘ ಚರ್ಚೆ ನಡೆಸಿದ್ದರು. ಆದರೆ, ನಾಯಕ ಪಾಂಡ್ಯನ ಬಳಿ ಒಂದೇ ಒಂದು ಮಾತು ಆಡಿರಲಿಲ್ಲ. ಮಾಜಿ ನಾಯಕ ಹಾಗೂ ಬೌಲರ್ ಫೀಲ್ಡ್​ ಸೆಟ್ ಮಾಡುವಾಗ ಪಾಂಡ್ಯ ಪೆಚ್ಚು ಮೋರೆ ಹಾಕಿ ನೋಡುತ್ತಿದ್ದರು.

ಇದನ್ನೂ ಓದಿ: Royal Challenges Bangalore : ಬೆಂಗಳೂರಿನ ಮೂರು ಕೆರೆಗಳನ್ನೂ ಅಭಿವೃದ್ಧಿ ಮಾಡಿದ ಆರ್​ಸಿಬಿ

ರೋಹಿತ್ ಶರ್ಮಾ ಅವರ ನಾಯಕತ್ವದ ಕೌಶಲ್ಯಗಳ ಬಗ್ಗೆ ಮುಕ್ತವಾಗಿ ಮೆಚ್ಚುಗೆ ವ್ಯಕ್ತಪಡಿಸಿರುವ ಆಕಾಶ್ ಮಧ್ವಾಲ್, ಮೈದಾನದ ಫೀಲ್ಡ್​ ಸೆಟಿಂಗ್​ನಲ್ಲಿ ಅವರ ನೆರವು ಕೇಳಿದ್ದಾರೆ. ಕೊನೆಯಲ್ಲಿ, ಹಾರ್ದಿಕ್ ರೋಹಿತ್​ ಹೇಳಿದ್ದನ್ನೇ ಒಪ್ಪಿಕೊಂಡರು.

ಪಂಜಾಬ್ ವಿರುದ್ಧ ಮುಂಬೈಗೆ ಗೆಲುವು

ಪಂಜಾಬ್ ಕಿಂಗ್ಸ್ ಇನ್ನಿಂಗ್ಸ್ ಮುಗಿಸಲು ಮುಂಬೈ ಇಂಡಿಯನ್ಸ್​​ 20 ನೇ ಓವರ್​ನಲ್ಲಿ ಕೇವಲ ಒಂದು ವಿಕೆಟ್​​ ಅಗತ್ಯವಿತ್ತು. ಕಗಿಸೊ ರಬಾಡ ಎರಡು ರನ್​ ಗಳಿಸುವ ಯೋಜನೆಯಲ್ಲಿ ಓಡಿದರು. ಅವರು ರನ್​ಔಟ್ ಆದರು. ಈ ಪಂದ್ಯವನ್ನು ಹಾರ್ದಿಕ್ ಬಳಗ 9 ರನ್ ಗಳಿಂದ ಗೆದ್ದುಕೊಂಡಿತು. 4 ಓವರ್​ಗಳಲ್ಲಿ 21 ರನ್​ಗೆ 3 ವಿಕೆಟ್ ಕಬಳಿಸಿದ ಜಸ್ಪ್ರೀತ್ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮತ್ತೊಂದು ಗಮನಾರ್ಹ ಪ್ರದರ್ಶನದಲ್ಲಿ, ದಕ್ಷಿಣ ಆಫ್ರಿಕಾದ ಜೆರಾಲ್ಡ್ ಕೊಟ್ಜೆ ಕೂಡ ಬುಮ್ರಾಗೆ ಉತ್ತಮ ಬೆಂಬಲ ನೀಡಿ 3 ವಿಕೆಟ್ ಪಡೆದರು. ಐಪಿಎಲ್ 2024 ರ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ಇನ್ನು ರಾಜಸ್ಥಾನ್ ರಾಯಲ್ಸ್ (ಆರ್​ಆರ್​ ವಿರುದ್ಧ ಆಡಲಿದೆ.

Continue Reading
Advertisement
Chikkaballapur Lok Sabha Constituency Congress candidate Raksha Ramaiah election campaign in Yalahanka
ಬೆಂಗಳೂರು12 mins ago

Lok Sabha Election 2024: ಬಿಜೆಪಿ ಆಡಳಿತದಲ್ಲಿ ಶೇ. 5ರಷ್ಟೂ ಉದ್ಯೋಗ ಸೃಷ್ಟಿಯಾಗಿಲ್ಲ: ರಕ್ಷಾ ರಾಮಯ್ಯ

kaalnadige Jatha programme in Uttara kannada
ಉತ್ತರ ಕನ್ನಡ36 mins ago

Lok Sabha Election 2024: ಉ.ಕ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನದ ಗುರಿ; ಡಿಸಿ

Bangalore Rural Lok Sabha Constituency Congress candidate D K Suresh Election campaign
ಬೆಂಗಳೂರು ಗ್ರಾಮಾಂತರ38 mins ago

Lok Sabha Election 2024: ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ: ಡಿ.ಕೆ. ಸುರೇಶ್

Neha Murder Case
ಕರ್ನಾಟಕ39 mins ago

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

IPL 2024
ಪ್ರಮುಖ ಸುದ್ದಿ42 mins ago

IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

Lok Sabha Election 2024
Lok Sabha Election 202444 mins ago

Lok Sabha Election 2024: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ; ಕಾರಣ ಇದು

Day 2 of CET 2024 Exam 26 out of syllabus question KEA asks to raise objections by April 27
ಶಿಕ್ಷಣ1 hour ago

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

Maldives Tourism
ವಿದೇಶ1 hour ago

Maldives Tourism: ಪರಿಣಾಮ ಬೀರಿದ ಮಾಲ್ಡೀವ್ಸ್ ಬಹಿಷ್ಕಾರದ ಕೂಗು; ಭೇಟಿ ನೀಡುವ ಭಾರತೀಯರ ಸಂಖ್ಯೆಯಲ್ಲಿ ಭಾರೀ ಕುಸಿತ

IPL 2024
ಕ್ರೀಡೆ2 hours ago

IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

Party symbols
ರಾಜಕೀಯ2 hours ago

Party Symbols: ವಿವಿಧ ಪಕ್ಷಗಳ ಚುನಾವಣಾ ಚಿಹ್ನೆ ಹಿಂದೆ ಹೇಗಿತ್ತು, ಈಗ ಏನಾಗಿದೆ? ಸಂಗ್ರಹಯೋಗ್ಯ ಮಾಹಿತಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ6 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ17 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌