Gold price today : ಬಂಗಾರದ ದರದಲ್ಲಿ 430 ರೂ. ಇಳಿಕೆ, ಖರೀದಿಸುವವರು ಗಮನಿಸಿ - Vistara News

ಪ್ರಮುಖ ಸುದ್ದಿ

Gold price today : ಬಂಗಾರದ ದರದಲ್ಲಿ 430 ರೂ. ಇಳಿಕೆ, ಖರೀದಿಸುವವರು ಗಮನಿಸಿ

ಬಂಗಾರದ ದರದಲ್ಲಿ 430 ರೂ. ಇಳಿಕೆಯಾಗಿದ್ದು, 52,050 ರೂ.ಗೆ ತಗ್ಗಿದೆ. ಹೀಗಿದ್ದರೂ ಈ ವರ್ಷ (Gold price today) ಬಂಗಾರದ ದರ ಜಿಗಿಯುವ ನಿರೀಕ್ಷೆ ಇದೆ.

VISTARANEWS.COM


on

gold rate in bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಂಗಾರದ ದರದಲ್ಲಿ ಶುಕ್ರವಾರ 430 ರೂ. ಇಳಿಕೆಯಾಗಿದೆ. ಪ್ರತಿ 10 ಗ್ರಾಮ್‌ನ ೨೪ ಕ್ಯಾರಟ್‌ ಚಿನ್ನದ ದರ 56,780 ರೂ.ಗೆ ಇಳಿಕೆಯಾಗಿದೆ. ಆಭರಣ ಚಿನ್ನ ಅಥವಾ 22 ಕ್ಯಾರಟ್‌ ಬಂಗಾರದ ದರದಲ್ಲಿ 400 ರೂ. ಇಳಿಕೆಯಾಗಿದ್ದು, 52,050 ರೂ.ಗೆ ತಗ್ಗಿದೆ. ಕಳೆದ ನಾಲ್ಕು ದಿನಗಳಲ್ಲಿ ಒಟ್ಟು 500 ರೂ. ಇಳಿಕೆ ಆಗಿರುವುದನ್ನು ಖರೀದಿದಾರರು ಹಾಗೂ ಹೂಡಿಕೆದಾರರು ಗಮನಿಸಬಹುದು. ಹೀಗಿದ್ದರೂ ಈ ವರ್ಷ ಒಟ್ಟಾರೆಯಾಗಿ ಬಂಗಾರ ತುಟ್ಟಿಯಾಗುವ ನಿರೀಕ್ಷೆಯೇ ಇದೆ. ಕಳೆದ 30 ದಿನಗಳಲ್ಲಿ ಬಂಗಾರದ ಸರಾಸರಿ ದರ 57,403 ರೂ ಇತ್ತು. ಕಳೆದ 10 ದಿನಗಳಲ್ಲಿ ಸರಾಸರಿ 57,351 ರೂ.ಗೆ ಇಳಿದಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್‌ (28 ಗ್ರಾಮ್)‌ ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1950 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ಈ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 62,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

gold

ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್‌ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್.‌ 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು. ‌

ಅತಿ ಹೆಚ್ಚು ಚಿನ್ನ ಖರೀದಿಸುವ ಚೀನಾದಲ್ಲಿ ಕೂಡ ಜನವರಿಯಲ್ಲಿ ದರ ಏರಿಕೆ ಉಂಟಾಗಿದೆ. ಚೀನಾದಲ್ಲಿ ಆರ್ಥಿಕ ಚಟುವಟಿಕೆಗಳು ಚೇತರಿಸುತ್ತಿದ್ದು, ಬಂಗಾರಕ್ಕೆ ಬೇಡಿಕೆ ಕೂಡ ಜಿಗಿಯುವ ಸಾಧ್ಯತೆ ಇದೆ. ಅಲ್ಲಿನ ಸರ್ಕಾರ ಕೂಡ ಚಿನನದ ಉಳಿತಾಯ, ಬಳಕೆಗೆ ಉತ್ತೇಜನ ನೀಡುತ್ತಿರುವುದರಿಂದ ಬೇಡಿಕೆ ಹೆಚ್ಚಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ನ ಇತ್ತೀಚಿನ ವರದಿ ತಿಳಿಸಿದೆ. ಅಮೆರಿಕ, ಯುರೋಪ್‌ ಮೊದಲಾದ ಕಡೆಗಳಲ್ಲಿ ಜನವರಿಯಲ್ಲಿ ಚಿನ್ನದ ಇಟಿಎಫ್‌ಗಳಲ್ಲಿ ಹೂಡಿಕೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಸಾಂಸ್ಥಿಕ ಹಾಗೂ ವೈಯಕ್ತಿಕ ಹೂಡಿಕೆದಾರರು ತಮ್ಮ ಹೂಡಿಕೆಯ ಕಾರ್ಯತಂತ್ರಗಳಲ್ಲಿ ಚಿನ್ನಕ್ಕೂ ಆದ್ಯತೆ ನೀಡುತ್ತಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಜಗತ್ತಿನಾದ್ಯಂತ ಸೆಂಟ್ರಲ್‌ ಬ್ಯಾಂಕ್‌ಗಳು 28 ಟನ್‌ ಚಿನ್ನವನ್ನು ಖರೀದಿಸಿವೆ. ನವೆಂಬರ್‌ಗೆ ಹೋಲಿಸಿದರೆ ಇಳಿಕೆ ಕಂಡು ಬಂದಿದೆ. ಆದರೆ ಚೀನಾದ ಸೆಂಟ್ರಲ್‌ ಬ್ಯಾಂಕ್‌ ಪೀಪಲ್ಸ್‌ ಬ್ಯಾಂಕ್‌ ಆಫ್‌ ಚೀನಾ ಡಿಸೆಂಬರ್‌ನಲ್ಲಿ ತನ್ನ ಚಿನ್ನದ ದಾಸ್ತಾನನ್ನು ಹೆಚ್ಚಳ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಹಣದುಬ್ಬರ ಎದುರಿಸಲು ಬಂಗಾರದ ಹೂಡಿಕೆ ಸೂಕ್ತ ಎಂಬ ಭಾವನೆ ಮೂಡುತ್ತಿದೆ. ಇದು ಕೂಡ ಬೇಡಿಕೆ ಹೆಚ್ಚಲು ಕಾರಣವಾಗಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ವರದಿ ತಿಳಿಸಿದೆ. ಆಧುನಿಕ ತಂತ್ರಜ್ಞಾನದ ನೆರವಿನಿಂದ ಚಿನ್ನದ ಗಣಿಗಾರಿಕೆ ಕೂಡ ಸಾಕಷ್ಟು ಸುಧಾರಿಸಿದೆ. ಹೆಚ್ಚು ಜವಾಬ್ದಾರಿಯುತ ಗಣಿಗಾರಿಕೆ ಮುಂದುವರಿದಿದೆ ಎಂದು ವರದಿ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

IPL 2024: ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 192 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 19.1 ಓವರ್​ಗಳಲ್ಲಿ 183 ರನ್​ಗೆ ಆಲ್​ಔಟ್​ ಆಗಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಮಲ್ಲಾನ್​ಪುರ: ಅಶುತೋಷ್​ ಶರ್ಮಾ (61 ರನ್​, 28 ಎಸೆತ, 2 ಫೋರ್​, 7 ಸಿಕ್ಸರ್​), ಶಶಾಂಕ್ ಸಿಂಗ್​ (25 ಎಸೆತ, 41 ರನ್​, 2 ಫೋರ್​, 3 ಸಿಕ್ಸರ್​ ಮಧ್ಯಮ ಕ್ರಮಾಂಕದಲ್ಲಿ ದಿಟ್ಟ ಹೋರಾಟ ನಡೆಸಿದ ಹೊರತಾಗಿಯೂ ಅಗ್ರ ಕ್ರಮಾಂಕದ ಬ್ಯಾಟರ್​ಗಳ ತೀವ್ರ ವೈಫಲ್ಯದ ಹಿನ್ನೆಲೆಯಲ್ಲಿ ಪಂಜಾಬ್ ಕಿಂಗ್ಸ್​ ತಂಡ ಐಪಿಎಲ್​ 2024ನೇ (IPL 2024) ಆವೃತ್ತಿಯಲ್ಲಿ ಮತ್ತೊಂದು ಸೋಲಿಗೆ ಒಳಗಾಗಿದೆ. ಮುಂಬಯಿ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ 9 ರನ್​ಗಳ ವಿರೋಚಿತ ಸೋಲಿಗೆ ಒಳಗಾಗಿದೆ. ಪಂಜಾಬ್ ತಂಡಕ್ಕೆ ಇದು ಐದನೇ ಸೋಲಾಗಿದೆ. ಇದೇ ವೇಳೆ ಮುಂಬಯಿ ತಂಡ ಮತ್ತೆ ಗೆಲುವಿನ ಹಳಿಗೆ ಮರಳಿದೆ. ಆಡಿರುವ ಏಳು ಪಂದ್ಯಗಳಲ್ಲಿ ಮುಂಬಯಿಗೆ ದೊರೆತ ಮೂರನೇ ಗೆಲುವು ಇದು.

ಇಲ್ಲಿನ ಮಹಾರಾಜಾ ಯಾದವೀಂದ್ರ ಸಿಂಗ್​ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 192 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 19.1 ಓವರ್​ಗಳಲ್ಲಿ 183 ರನ್​ಗೆ ಆಲ್​ಔಟ್​ ಆಗಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: Preity Zinta : ರೋಹಿತ್​ ಶರ್ಮಾಗಾಗಿ ಪ್ರಾಣ ಪಣಕ್ಕಿಡಲು ಸಿದ್ಧ; ಪ್ರೀತಿ ಜಿಂಟಾ ಹೇಳಿಕೆ ಸಿಕ್ಕಾಪಟ್ಟೆ ವೈರಲ್​

ಮೊದಲು ಬ್ಯಾಟ್ ಮಾಡಿದ ಮುಂಬಯಿ ಪರ ಸೂರ್ಯಕುಮಾರ್​ ಅರ್ಧ ಶತಕ (78 ರನ್​) ಬಾರಿಸಿದರು. ಆದರೆ ಅವರ ಸ್ಕೋರ್ ಹೆಚ್ಚು ವೇಗವಾಗಿರಲಿಲ್ಲ. ರೋಹಿತ್ ಶರ್ಮಾ 36 ರನ್ ಬಾರಿಸಿದರೆ ತಿಲಕ್ ವರ್ಮಾ 34 ರನ್​ ಗಳಿಸಿದರು. ಹಾರ್ದಿಕ್ ಪಾಂಡ್ಯ 10 ರನ್ ಗೆ ಸೀಮಿತಗೊಂಡರೆ ಟಿಮ್ ಡೇವಿಡ್​ 14 ರನ್ ಬಾರಿಸಿದರು. ಆರಂಭಿಕ ಆಟಗಾರ ಇಶಾನ್ ಕಿಶನ್​ 8 ರನ್ ಬಾರಿಸಿ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಎದುರಿಸಿದರು.

ಅಶುತೋಷ್​ ಮಿಂಚಿನ ಬ್ಯಾಟಿಂಗ್

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಪಂಜಾಬ್ ತಂಡ ಆರಂಭ ಹೀನಾಯವಾಗಿತ್ತು. 14 ರನ್​ಗಳಿಗೆ ಪ್ರಮುಖ 4 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಕರ್ರನ್​ 6 ರನ್ ಬಾರಿಸಿದರೆ, ಪ್ರಭ್​ಸಿಮ್ರಾನ್ ಸಿಂಗ್ ಶೂನ್ಯಕ್ಕೆ ಔಟಾದರು. ರೀಲಿ ರೊಸ್ಸೊ ಹಾಗೂ ಲಿಯಾಮ್ ಲಿವಿಂಗ್​ಸ್ಟನ್​ ತಲಾ ಒಂದು ರನ್ ಬಾರಿಸಿ ಔಟಾದರು. ಹರ್ಪ್ರೀತ್ ಸಿಂಗ್​ 13 ರನ್​ಗೆ ಸೀಮಿತಗೊಂಡರು. ಈ ವೇಳೆ ಶಶಾಂಕ್ ಸಿಂಗ್ ವಿಕೆಟ್​ ಪತನವಾಗುವುದನ್ನು ತಪ್ಪಿಸಿ 41 ರನ್ ಬಾರಿಸಿದರು. ಆದರೆ ಸ್ಫೋಟಕ ಬ್ಯಾಟರ್​ ಜಿತೇಶ್ ಶರ್ಮಾ 9 ರನ್​ಗೆ ಸೀಮಿತಗೊಂಡರು.

77 ರನ್​ಗೆ 6 ವಿಕೆಟ್​ಕಳೆದುಕೊಂಡ ಪಂಜಾಬ್​ 100 ರನ್ ಒಳಗೆ ಆಲ್​ಔಟ್ ಆಗುವುದಾಗಿ ಭಾವಿಸಲಾಗಿತ್ತು. ಆದರೆ ಅಶುತೋಷ್​ ಸ್ಟೈಲಿಶ್​ ಬೌಂಡರಿ ಹಾಗೂ ಸಿಕ್ಸರ್​ಗಳ ಮೂಲಕ ಪಂದ್ಯದ ಗತಿಯನ್ನು ಬದಲಾಯಿಸಿದರು. ಪಂಜಾಬ್ ಗೆಲ್ಲುತ್ತದೆ ಎಂಬ ಹಂತಕ್ಕೆ ಹೋಯಿತು. ಈ ವೇಳೆ ಅಶುತೋಷ್​ ಔಟಾದರು. ಜತೆಗೆ ಹರ್ಪ್ರೀತ್ ಬ್ರಾರ್ ಕೂಡ ಔಟಾದರು. ಕೊನೆಯಲ್ಲಿ ರಬಾಡ ಗೆಲ್ಲಿಸುವರೆಂಬ ಆಶಾಭಾವ ಉಂಟಾಗಿತ್ತು. ಆದರೆ ಅವರು ರನ್ಔಟ್ ಆದರು.

ಮುಂಬಯಿ ಪರ ಬುಮ್ರಾ ಹಾಗೂ ಕೋಜಿ ತಲಾ 3 ವಿಕೆಟ್​ ಉರುಳಿಸಿದರು.

Continue Reading

ದೇಶ

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Physical Abuse : ಅವರು ತಂಗಿದ್ದ ಕ್ಯಾಂಪ್​ನಲ್ಲಿ ನಡೆದ ಘಟನೆಯ ಭೀಕರತೆಯನ್ನು ವಿವರಿಸಲಾಗಿದೆ. ಸ್ಥಳವನ್ನು ವೀಡಿಯೊ ಬಹಿರಂಗಪಡಿಸಿದೆ. ದಂಪತಿ ಹಗಲು ಹೊತ್ತಿನಲ್ಲಿ ತಾವು ಭೇಟಿಯಾದ ವ್ಯಕ್ತಿಗಳೊಂದಿಗಿನ ನಡೆಸಿದ ಸಂಭಾಷಣೆಯನ್ನೂ ಬಹಿರಂಗ ಮಾಡಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯನ್ನು ಅತ್ಯಾಚಾರ ಮಾಡಿದವರಾಗಿದ್ದಾರೆ.

VISTARANEWS.COM


on

Physical Abuse
Koo

ರಾಂಚಿ: ಜಾರ್ಖಂಡ್​ನ ದುಮ್ಕಾ ಜಿಲ್ಲೆಯಲ್ಲಿ ಸ್ಪೇನ್​ನಿಂದ ಬಂದಿದ್ದ ಪ್ರವಾಸಿ ಮಹಿಳೆಯೊಬ್ಬಳ ಮೇಲೆ ಏಳು ಜನರು ಸಾಮೂಹಿಕ ಅತ್ಯಾಚಾರ (Physical Abuse) ಎಸಗಿದ ಭಯಾನಕ ಘಟನೆ ನಡೆದಿದೆ. ಈ ಘಟನೆ ಮಾರ್ಚ್​ನಲ್ಲಿ ನಡೆದಿದೆ. ಮಹಿಳೆ ಹಾಗೂ ಆಕೆಯ ಪತಿ ಆಘಾತಕಾರಿ ಘಟನೆಗ ಮತ್ತು ನಂತರದ ವಿವರಗಳನ್ನು ದಾಖಲಿಸುವ ವೀಡಿಯೊವೊಂದನ್ನು ತಮ್ಮ ದೇಶಕ್ಕೆ ಮರಳಿದ ಬಳಿಕ ಬಿಡುಗಡೆ ಮಾಡಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ವಿವರ ನೀಡಿದ್ದು, ಭಾರತದಲ್ಲಿ ಆಗಿರುವ ಕಹಿಘಟನೆಯನ್ನು ವಿವರಿಸಿದ್ದಾರೆ.

ವಿಡಿಯೊದ ಆರಂಭದಲ್ಲಿ ದಂಪತಿ “ಈ ಸುದೀರ್ಘ ಅಧ್ಯಾಯದ ನಂತರ ನಾವು ಈ ಅಹಿತಕರ ಹಂತವನ್ನು ದಾಟಿದ್ದೇವೆ. ಮತ್ತೆ ನಮ್ಮ ಪ್ರವಾಸ ಆರಂಭಿಸುತ್ತೇವೆ. ಆದರೆ ನಮಗಿದು ಮರುಹುಟ್ಟು. ನಾವು ಇದುವರೆಗೆ ಪಡೆದ ಈ ವಿರಾಮಕ್ಕೆ ಕಾರಣವಿದೆ ಎಂದು ಹೇಳಿ ಭಾರತದಲ್ಲಿ ಆದ ಘಟನೆಗಳನ್ನು ವಿವರಿಸಿದ್ದಾರೆ. ಅಲ್ಲದೆ, ಇಂದಿನಿಂದ ನಾವು ವಾರಕ್ಕೊಮ್ಮೆ ನಮ್ಮ ವೀಡಿಯೊಗಳನ್ನು ಪೋಸ್ಟ್ ಮಾಡುವುದನ್ನು ಮುಂದುವರಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಅವರಿಬ್ಬರೂ ಯೂಟ್ಯೂಬರ್​ಗಳಾಗಿದ್ದು ಬೈಕ್​ ಮೂಲಕ ಹಲವು ದೇಶಗಳನ್ನು ಸುತ್ತುತ್ತಿರುತ್ತಾರೆ.

ಅವರು ತಂಗಿದ್ದ ಕ್ಯಾಂಪ್​ನಲ್ಲಿ ನಡೆದ ಘಟನೆಯ ಭೀಕರತೆಯನ್ನು ವಿವರಿಸಲಾಗಿದೆ. ಸ್ಥಳದಲ್ಲಿದ್ದ ವೇಳೆ ಚಿತ್ರೀಕರಿಸಿದ ವೀಡಿಯೊ ಬಹಿರಂಗಪಡಿಸಿದ್ದಾರೆ. ದಂಪತಿ ಹಗಲು ಹೊತ್ತಿನಲ್ಲಿ ತಾವು ಭೇಟಿಯಾದ ವ್ಯಕ್ತಿಗಳೊಂದಿಗಿನ ನಡೆಸಿದ ಸಂಭಾಷಣೆಯನ್ನೂ ಬಹಿರಂಗ ಮಾಡಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯನ್ನು ಅತ್ಯಾಚಾರ ಮಾಡಿದವರಾಗಿದ್ದಾರೆ.

ದಂಪತಿ ಅತ್ಯಾಚಾರ ಮಾಡಿದವರಲ್ಲಿ ಒಬ್ಬನ ಗುರುತನ್ನು ಬಹಿರಂಗಪಡಿಸಿದ್ದಾರೆ. ಮಹಿಳೆ ಕಡಲೆಕಾಯಿ ತಿನ್ನುತ್ತಿದ್ದಾಗ ಆ ವ್ಯಕ್ತಿ ಮಾತನಾಡಿಸಿದ್ದ. ಅಲ್ಲದೆ ಅವರ ಜತೆ ಅನುಚಿತವಾಗಿ ವರ್ತಿಸಿದ್ದ. ಬಳಿಕ ದಂಪತಿ ಆ ಪ್ರದೇಶವನ್ನು ತೊರೆದು ಕೆಲವು ಗಂಟೆಗಳ ನಂತರ ತಮ್ಮ ಕ್ಯಾಂಪ್​ಗೆ ಮರಳಿದ್ದರು. ಅವರು ತಂಗಿದ್ದ ಜಾಗ ನಿರ್ಜನವಾಗಿತ್ತು. ಆ ಬಳಿಕ ಅವರು ‘ತಮ್ಮ ಜೀವನದ ಭಯಾನಕ 3 ಗಂಟೆಗಳನ್ನು’ ನೆನಪಿಸಿಕೊಂಡಿದ್ದಾರೆ. “ರಾತ್ರಿ 8 ಗಂಟೆಗೆ ಪ್ರಾರಂಭವಾದ ತೊಂದರೆ ರಾತ್ರಿ 11 ಗಂಟೆಗೆ ಕೊನೆಗೊಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

“ನಾನು ಏನು ಮಾಡಬೇಕೆಂದು ಆ ವೇಳೆ ನನಗೆ ತಿಳಿಯಲಿಲ್ಲ. ಪತ್ನಿ ಪೊದೆಯ ಮಧ್ಯೆ ಬಿದ್ದಿದ್ದಳು. ನಾನು ಎದ್ದು ಅವಳ ಬಳಿ ಓಡಿದೆ ಎಂದು ಪತಿ ವಿಡಿಯೊದಲ್ಲಿ ಹೇಳಿದ್ದಾರೆ. ನಂತರ ಇಬ್ಬರೂ ಆಸ್ಪತ್ರೆಗೆ ತೆರಳಿದೆವು ಏಳು ಜನರು ಅವಳ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿದ್ದರು. ಅವರು ಅವಳನ್ನು ಹೊಡೆದಿದ್ದರು.. ಅವರು ನನಗೂ ಹೆಲ್ಮೆಟ್​ನಿಂದ ಹಲವು ಬಾರಿ ಹೊಡಿದಿದ್ದಾರೆ. ಕಲ್ಲುಗಳಿಂದ ಹಲ್ಲೆ ನಡೆಸಿದರು” ಎಂದು ಸಂತ್ರಸ್ತೆಯ ಪತಿ ಹೇಳಿದ್ದಾರೆ.

ನಂತರ ಅವರು ಪೊಲೀಸ್ ರಕ್ಷಣೆ ಪಡೆದು ಮೂರು ದಿನಗಳ ಕಾಲ ಇದ್ದರು. ನಾವು ಮುಂದುವರಿಯಲಿದ್ದೇವೆ, ವಿಧಿ ನಮಗೆ ಎರಡನೇ ಅವಕಾಶವನ್ನು ನೀಡಿದೆ. ನಾವು ಸಾವನ್ನು ಹತ್ತಿರದಿಂದ ನೋಡಿದ್ದೇವೆ ಎಂದು ಅವರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಾರ್ಖಂಡ್ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಇದಲ್ಲದೆ, ಸಂತ್ರಸ್ತೆಯ ಪತಿಗೆ ಪೊಲೀಸರು 10 ಲಕ್ಷ ರೂ.ಗಳ ಪರಿಹಾರವನ್ನು ಸಹ ನೀಡಿದ್ದಾರೆ.

Continue Reading

ದೇಶ

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Amanatullah Khan: ದೆಹಲಿ ಅಬಕಾರಿ ನೀತಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ಒಂದು ತಿಂಗಳೊಳಗೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಅರೆಸ್ಟ್‌ ಮಾಡಲಾಗಿದೆ. ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಶಾಸಕರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Amanatullah Khan
Koo

ನವದೆಹಲಿ: ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ (AAP)ಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ದೆಹಲಿ ಅಬಕಾರಿ ನೀತಿ ಹಗರಣ (Delhi Liquor Scam)ದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಿದ ಒಂದು ತಿಂಗಳೊಳಗೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ (Amanatullah Khan) ಅವರನ್ನು ಜಾರಿ ನಿರ್ದೇಶನಾಲಯ (Enforcement Directorate) ವಶಕ್ಕೆ ತೆಗೆದುಕೊಂಡಿದೆ. ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ (Waqf Board-linked money laundering case) ಸಂಬಂಧಿಸಿದಂತೆ ಶಾಸಕರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?

ದೆಹಲಿ ವಕ್ಫ್ ಬೋರ್ಡ್ ಹಗರಣದಲ್ಲಿನ ಅಕ್ರಮ ಹಣ ವರ್ಗಾವಣೆ ಹಾಗೂ ಅಕ್ರಮ ನೇಮಕಾತಿ ಕುರಿತು ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳು ಇದೀಗ ಆಪ್ ನಾಯಕನನ್ನು ಬಂಧಿಸಿದೆ. ಸತತ 9 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇ.ಡಿ ಅಧಿಕಾರಿಗಳು ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧನಕ್ಕೂ ಮುನ್ನ ಖಾನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೊ ಸಂದೇಶವನ್ನು ಪೋಸ್ಟ್ ಮಾಡಿದ್ದು ಅದರಲ್ಲಿ, ʼʼಜೈಲಿನಲ್ಲಿರುವ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಾಕ್ಷಿ ಹೇಳಲು ಏಜೆನ್ಸಿ ಬಯಸಿದೆʼʼ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಶಾಸಕರ ನಿವಾಸದ ಮೇಲೆ ದಾಳಿ ನಡೆಸಿದ್ದ ಇ.ಡಿ ದೆಹಲಿ ವಕ್ಫ್ ಮಂಡಳಿಯಲ್ಲಿ ಸಿಬ್ಬಂದಿಯನ್ನು ಅಕ್ರಮವಾಗಿ ನೇಮಕ ಮಾಡುವ ಮೂಲಕ ಖಾನ್ ಅಪಾರ ಪ್ರಮಾಣದ ಹಣವನ್ನು ನಗದು ರೂಪದಲ್ಲಿ ಗಳಿಸಿದ್ದಾರೆ ಮತ್ತು ತಮ್ಮ ಸಹವರ್ತಿಗಳ ಹೆಸರಿನಲ್ಲಿ ಸ್ಥಿರಾಸ್ತಿಗಳನ್ನು ಖರೀದಿಸಲು ಹೂಡಿಕೆ ಮಾಡಿದ್ದಾರೆ ಎಂದು ಹೇಳಿತ್ತು. ಇ.ಡಿ ಅಧಿಕಾರಿಗಳ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಖಾನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಕುರಿತು ಮಧ್ಯಪ್ರವೇಶಿಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಬಳಿಕ ಇ.ಡಿ ಅಧಿಕಾರಿಗಳು ಖಾನ್ ಅವರ ವಿಚಾರಣೆ ನಡೆಸಿದ್ದರು. ಹಲವು ಗಂಟೆಗಳ ಕಾಲ ವಿಚಾರಣೆ ಮುಂದುವರಿದಿತ್ತು. ಕೊನೆಗೆ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲಾಗಿದೆ.

ಅಮಾನತುಲ್ಲಾ ಖಾನ್‌ ಬಂಧನಕ್ಕೂ ಮುನ್ನ ಆಪ್‌ ಸಂಸದ ಸಂಜಯ್ ಸಿಂಗ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮೋದಿ ಸರ್ಕಾರ ಆಪರೇಷನ್ ಕಮಲದಲ್ಲಿ ಸಂಪೂರ್ಣವಾಗಿ ಭಾಗಿಯಾಗಿದೆ ಮತ್ತು ಸಚಿವರು ಮತ್ತು ಶಾಸಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಅವರನ್ನು ಬಂಧಿಸಲಾಗುತ್ತಿದೆ ಎಂದು ಆರೋಪಿಸಿದ್ದರು. “ಅಮಾನತುಲ್ಲಾ ಖಾನ್‌ ವಿರುದ್ಧ ಆಧಾರರಹಿತ ಪ್ರಕರಣ ದಾಖಲಿಸುವ ಮೂಲಕ ಅವರನ್ನು ಬಂಧಿಸಲು ಇ.ಡಿ ಸಿದ್ಧತೆ ನಡೆಸುತ್ತಿದೆ. ಸರ್ವಾಧಿಕಾರ ಶೀಘ್ರದಲ್ಲೇ ಕೊನೆಗೊಳ್ಳುತ್ತದೆ. ನಾನು ಅವರ ಕುಟುಂಬವನ್ನು ಭೇಟಿಯಾಗಲಿದ್ದೇನೆ” ಎಂದು ಸಿಂಗ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ಅಮಾನತುಲ್ಲಾ ಖಾನ್‌ ದೆಹಲಿ ವಕ್ಫ್ ಬೋರ್ಡ್ ಮುಖ್ಯಸ್ಥರಾಗಿದ್ದ ವೇಳೆ ಭಾರಿ ಹಗರಣ ನಡೆಸಿದ್ದಾರೆ ಎನ್ನುವ ಆರೋಪದಡಿಯಲ್ಲಿ ತನಿಖೆ ನಡೆಯುತ್ತಿದೆ. ಅಮಾನತುಲ್ಲಾ ಖಾನ್‌ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಆಪ್ ಸಚಿವೆ ಆತೀಷಿ ಹಾಗೂ ನಾಯಕ ಸಂಜಯ್ ಸಿಂಗ್ ಅಮಾನತುಲ್ಲಾ ಖಾನ್‌ ಮನೆಗೆ ತೆರಳಿದ್ದಾರೆ.

ಇದನ್ನೂ ಓದಿ: Arvind Kejriwal : ಅಬಕಾರಿ ಲಂಚ ಪ್ರಕರಣದಲ್ಲಿ ಡೆಲ್ಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಅರೆಸ್ಟ್​​

Continue Reading

ಪ್ರಮುಖ ಸುದ್ದಿ

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Moral policing: ಈರಜ್ಜನ ಹಟ್ಟಿ ನಿವಾಸಿ ಉಮೇಶ್ (25) ಹಲ್ಲೆಗೆ ಒಳಗಾದವರು. ಅವರ ಮರ್ಮಾಂಗ ಸೇರಿದಂತೆ ಹಲವೆಡೆ ಮಾರಕ ಹಲ್ಲೆಯನ್ನು ನಡೆಸಲಾಗಿದೆ. ಉಮೇಶ್ ಹಾಗೂ ಅವರು ಡ್ರಾಪ್ ಮಾಡಿದ ಮುಸ್ಲಿಂ ಯುವತಿ ಒಂದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅಂತೆಯೇ ಅವರು ಬೈಕ್​ನಲ್ಲಿ ಜತೆಯಾಗಿ ಹೋಗುತ್ತಿದ್ದಾಗ ಪುಂಡರ ಗುಂಪು ನಗರದ SJM ಕಾಲೇಜು ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿದೆ.

VISTARANEWS.COM


on

Moral policing
Koo

ಚಿತ್ರದುರ್ಗ: ಜತೆಗೆ ಕೆಲಸ ಮಾಡುವ ಮುಸ್ಲಿಂ ಯುವತಿಯೊಬ್ಬಳನ್ನು ಬೈಕ್​ನಲ್ಲಿ ಡ್ರಾಪ್ ಮಾಡಿರುವುದನ್ನು ಆಕ್ಷೇಪಿಸಿ ಮುಸ್ಲಿಂ ಯುವಕರ ಗುಂಪು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ನೈತಿಕ ಪೊಲೀಸ್​ಗಿರಿ (Moral policing) ಪ್ರದರ್ಶಿಸಿದ ಪ್ರಕರಣ ಚಿತ್ರದುರ್ಗದಲ್ಲಿ ವರದಿಯಾಗಿದೆ. ಈ ಬಗ್ಗೆ ವಿರೋಧ ವ್ಯಕ್ತಗೊಂಡಿದ್ದು ನೈತಿಕ ಪೊಲೀಸ್​ಗಿರಿ ಪ್ರದರ್ಶಿಸಿದವರನ್ನು ಶಿಕ್ಷಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ.

ಈರಜ್ಜನ ಹಟ್ಟಿ ನಿವಾಸಿ ಉಮೇಶ್ (25) ಹಲ್ಲೆಗೆ ಒಳಗಾದವರು. ಅವರ ಮರ್ಮಾಂಗ ಸೇರಿದಂತೆ ಹಲವೆಡೆ ಮಾರಕ ಹಲ್ಲೆಯನ್ನು ನಡೆಸಲಾಗಿದೆ. ಉಮೇಶ್ ಹಾಗೂ ಅವರು ಡ್ರಾಪ್ ಮಾಡಿದ ಮುಸ್ಲಿಂ ಯುವತಿ ಒಂದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅಂತೆಯೇ ಅವರು ಬೈಕ್​ನಲ್ಲಿ ಜತೆಯಾಗಿ ಹೋಗುತ್ತಿದ್ದಾಗ ಪುಂಡರ ಗುಂಪು ನಗರದ SJM ಕಾಲೇಜು ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಿದೆ.

ಉಮೇಶ್ ನ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸತತವಾಗಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ತೆಲೆ, ಮರ್ಮಾಂಗ ಭಾಗಕ್ಕೆ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಮೇಶ್​ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ

ಕಾರ್ಪೋರೇಟರ್‌ ಮಗಳ ಕೊಲೆ; ಪ್ರೀತಿಸಲು ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಫಯಾಜ್‌!

ಹುಬ್ಬಳ್ಳಿ: ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿಯೊಬ್ಬ ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ವೊಬ್ಬರ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದಾನೆ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ.

ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿಯಾಗಿದ್ದಾಳೆ. ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ. ಫೈಜಲ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ.
ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಿದ್ದಾರೆ.

Continue Reading
Advertisement
Steet Food
ಆಹಾರ/ಅಡುಗೆ19 mins ago

ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

IPL 2024
ಪ್ರಮುಖ ಸುದ್ದಿ30 mins ago

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

Physical Abuse
ದೇಶ53 mins ago

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Amanatullah Khan
ದೇಶ1 hour ago

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Moral policing
ಪ್ರಮುಖ ಸುದ್ದಿ2 hours ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Rishab Shetty
ಸಿನಿಮಾ2 hours ago

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಕಾಂಗ್ರೆಸ್​​ಗೆ ಹಿನ್ನಡೆಯಾದರೆ ಸಿದ್ದರಾಮಯ್ಯ ಸ್ಥಾನಕ್ಕೆಕಂಟಕ​​​; ಚರ್ಚೆ ಹುಟ್ಟು ಹಾಕಿದ ಬೈರತಿ ಸುರೇಶ್​ ಹೇಳಿಕೆ

Hubli Murder Case
ಪ್ರಮುಖ ಸುದ್ದಿ2 hours ago

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

congress workers meeting in kudligi
ವಿಜಯನಗರ3 hours ago

Lok Sabha Election 2024: ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಗೆಲ್ಲಿಸಲು ಸಂತೋಷ್‌ ಲಾಡ್‌ ಮನವಿ

Indian Railways
ದೇಶ3 hours ago

Indian Railways: ಹಿರಿಯ ನಾಗರಿಕ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಲೋವರ್ ಬರ್ತ್ ಕಾಯ್ದಿರಿಸುವಿಕೆಗೆ ಹೊಸ ನಿಯಮ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌