Gold Rate Today: ಚಿನ್ನ-ಬೆಳ್ಳಿ ಬೆಲೆ ಏರಿಕೆ; ಖರೀದಿಗೆ ಹೊರಟಿದ್ದರೆ ಇಂದಿನ ದರ ಇಲ್ಲಿ ಚೆಕ್​ ಮಾಡಿಕೊಳ್ಳಿ - Vistara News

ವಾಣಿಜ್ಯ

Gold Rate Today: ಚಿನ್ನ-ಬೆಳ್ಳಿ ಬೆಲೆ ಏರಿಕೆ; ಖರೀದಿಗೆ ಹೊರಟಿದ್ದರೆ ಇಂದಿನ ದರ ಇಲ್ಲಿ ಚೆಕ್​ ಮಾಡಿಕೊಳ್ಳಿ

Gold Price: 22 ಕ್ಯಾರೆಟ್​​ನ 10 ಗ್ರಾಂ​ ಚಿನ್ನದ ಬೆಲೆ ಕೋಲ್ಕತ್ತದಲ್ಲಿ 56,300 ರೂಪಾಯಿ, ಮುಂಬಯಿಯಲ್ಲಿ 56,450 ರೂ., ಚೆನ್ನೈನಲ್ಲಿ 56,300 ರೂ ಮತ್ತು ದೆಹಲಿಯಲ್ಲಿ 56,450 ರೂಪಾಯಿ ಇದೆ.

VISTARANEWS.COM


on

gold rate today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳೆದ ಮೂರು ದಿನಗಳಿಂದ ಒಂದೇ ಸಮ ಇಳಿಕೆ ಕಂಡಿದ್ದ ಬಂಗಾರ-ಬೆಳ್ಳಿ ಬೆಲೆ (Gold Silver Rate Today) ಇಂದು ಬುಲಿಯನ್ ಮಾರುಕಟ್ಟೆಯಲ್ಲಿ ಏರಿಕೆ ಕಂಡಿದೆ. 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ (Gold Rate Today) ಇಂದು ನಿನ್ನೆಗಿಂತಲೂ 550 ರೂಪಾಯಿ ಹೆಚ್ಚಿದೆ. ಹಾಗೇ, ಬೆಳ್ಳಿಯ ಬೆಲೆ ಕೆಜಿಗೆ 1000 ರೂಪಾಯಿಗಳಷ್ಟು ಏರಿಕೆಯಾಗಿದೆ. ಮಾರ್ಚ್​ನಿಂದ ಮೇ ಅಂತ್ಯದವರೆಗೆ ಭಾರತದಲ್ಲಿ ಸಾಮಾನ್ಯವಾಗಿ ಮದುವೆ- ಮತ್ತಿತರ ಸಮಾರಂಭಗಳ ಅವಧಿಯಾಗಿರುತ್ತದೆ. ಈ ವೇಳೆ ಸಹಜವಾಗಿಯೇ ಚಿನ್ನ-ಬೆಳ್ಳಿ ಒಡವೆಗಳ ಖರೀದಿಯೂ ಜೋರಾಗಿರುತ್ತದೆ. ಕಳೆದ ಕೆಲವು ದಿನಗಳಿಂದಲೂ ಒಂದೇ ಸಮ ಬೆಲೆ ಇಳಿಕೆಯಾಗುತ್ತಿದ್ದ ಕಾರಣ ಗ್ರಾಹಕರಿಗೆ ಅನುಕೂಲವಾಗಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ ಎಷ್ಟಿದೆ ಚಿನ್ನ-ಬೆಳ್ಳಿ ಬೆಲೆ?

22 ಕ್ಯಾರೆಟ್​ ಚಿನ್ನ:- 1 ಗ್ರಾಂ.-5,635 ರೂ., 8 ಗ್ರಾಂ-45,080 ರೂಪಾಯಿ, 10 ಗ್ರಾಂ-56,350 ರೂ. ಮತ್ತು 100 ಗ್ರಾಂ-5,63,500 ರೂಪಾಯಿ
24 ಕ್ಯಾರೆಟ್ ಚಿನ್ನ: 1 ಗ್ರಾಂ-6,147 ರೂಪಾಯಿ., 8 ಗ್ರಾಂ-49,176 ರೂ., 10 ಗ್ರಾಂ-61,470 ರೂ, ಮತ್ತು 100 ಗ್ರಾಂ-6,14,700 ರೂಪಾಯಿ.
ಬೆಳ್ಳಿಯ ದರ: 1 ಗ್ರಾಂ-79 ರೂಪಾಯಿ, 8 ಗ್ರಾಂ-632 ರೂ., 10 ಗ್ರಾಂ-790 ರೂ., 100 ಗ್ರಾಂ-7900 ರೂ., 1 ಕೆಜಿ-79,000 ರೂಪಾಯಿ.

ಇದನ್ನೂ ಓದಿ: Gold rate : ಚಿನ್ನದ ದರದಲ್ಲಿ 330 ರೂ. ಇಳಿಕೆ, ಪ್ರಮುಖ ನಗರಗಳಲ್ಲಿ ದರ ಎಷ್ಟು? ಇಲ್ಲಿದೆ ಡಿಟೇಲ್ಸ್

ಇನ್ನು 22 ಕ್ಯಾರೆಟ್​​ನ 10 ಗ್ರಾಂ​ ಚಿನ್ನದ ಬೆಲೆ ಕೋಲ್ಕತ್ತದಲ್ಲಿ 56,300 ರೂಪಾಯಿ, ಮುಂಬಯಿಯಲ್ಲಿ 56,450 ರೂ., ಚೆನ್ನೈನಲ್ಲಿ 56,300 ರೂ ಮತ್ತು ದೆಹಲಿಯಲ್ಲಿ 56,450 ರೂಪಾಯಿ ಇದೆ. ಒಟ್ಟಾರೆ ಭಾರತದ ಮಾರುಕಟ್ಟೆಯಲ್ಲಿ 22ಕ್ಯಾರೆಟ್​​ನ 10 ಗ್ರಾಂ ಚಿನ್ನದ ರೇಟ್​ 56,800 ರೂಪಾಯಿ. ಹಾಗೇ, 24 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ, ಕೋಲ್ಕತ್ತದಲ್ಲಿ 61,420 ರೂಪಾಯಿ., ಮುಂಬಯಿ ಮತ್ತು ಚೆನ್ನೈನಲ್ಲೂ 61,420 ರೂಪಾಯಿ ಮತ್ತು ದೆಹಲಿಯಲ್ಲಿ 61,570 ರೂಪಾಯಿ ಇದೆ. ಒಟ್ಟಾರೆ ಮಾರುಕಟ್ಟೆಯಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ಬೆಲೆ 61,960ರೂಪಾಯಿ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

ʼಹಷ್‌ ಮನಿʼ ಪ್ರಕರಣದಲ್ಲಿ ಟ್ರಂಪ್‌ ದೋಷಿ; ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಅಮೆರಿಕದ ಮಾಜಿ ಅಧ್ಯಕ್ಷರಿಗೆ ಶತಕೋಟಿ ರೂ. ನಷ್ಟ

Donald Trump: ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಸದ್ಯ ಈ ತೀರ್ಪು ಟ್ರಂಪ್‌ಗೆ ಭಾರೀ ಹಿನ್ನಡೆ ನೀಡಿದ್ದು, ಅವರ ಸಂಪತ್ತಿನ ಮೇಲೂ ಪರಿಣಾಮ ಬೀರಿದೆ. ತೀರ್ಪು ಪ್ರಕಟವಾದ ಸುಮಾರು ಗಂಟೆಯಲ್ಲಿ ಟ್ರಂಪ್ ಮೀಡಿಯಾದ ಷೇರುಗಳು ಶೇ. 9ರಷ್ಟು ಕುಸಿದು ಸುಮಾರು 500 ಮಿಲಿಯನ್ ಡಾಲರ್ (41,62,12,50,000 ರೂ.) ನಷ್ಟವಾಗಿದೆ.

VISTARANEWS.COM


on

Donald Trump
Koo

ವಾಷಿಂಗ್ಟನ್‌: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ʼಹಷ್‌ ಮನಿʼ (Hush Money) ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾರ್ಕ್‌ನ ನ್ಯಾಯಾಲಯ ತೀರ್ಪು ನೀಡಿದೆ. ಈ ಮೂಲಕ ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ (Stormy Daniels) ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಟ್ರಂಪ್‌ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಸದ್ಯ ಈ ತೀರ್ಪು ಟ್ರಂಪ್‌ಗೆ ಭಾರೀ ಹಿನ್ನಡೆ ನೀಡಿದ್ದು, ಅವರ ಸಂಪತ್ತಿನ ಮೇಲೂ ಪರಿಣಾಮ ಬೀರಿದೆ. ತೀರ್ಪು ಪ್ರಕಟವಾದ ಸುಮಾರು ಗಂಟೆಯಲ್ಲಿ ಟ್ರಂಪ್ ಮೀಡಿಯಾ (Trump Media)ದ ಷೇರುಗಳು ಶೇ. 9ರಷ್ಟು ಕುಸಿದು ಸುಮಾರು 500 ಮಿಲಿಯನ್ ಡಾಲರ್ (41,62,12,50,000 ರೂ.) ನಷ್ಟವಾಗಿದೆ. ಈ ಕಂಪನಿಯು ಟ್ರೂತ್ ಸೋಷಿಯಲ್ ಪ್ಲಾಟ್ ಫಾರ್ಮ್‌ (Truth Social platform)ನ ಮಾತೃ ಸಂಸ್ಥೆಯಾಗಿದೆ.

ಟ್ರಂಪ್‌ ಈ ಕಂಪನಿಯಲ್ಲಿ ಶೇ. 65ರಷ್ಟು ಪಾಲು ಹೊಂದಿದ್ದಾರೆ. ಸುಮಾರು ಶೇ. 10ರಷ್ಟು ಕುಸಿತವು ಮಾಜಿ ಅಧ್ಯಕ್ಷರ ಷೇರುಗಳ ಮೌಲ್ಯದಲ್ಲಿ 532 ಮಿಲಿಯನ್ ಡಾಲರ್ ಕುಸಿತಕ್ಕೆ ಕಾರಣವಾಗುತ್ತದೆ ಎಂದು ಫೋರ್ಬ್ಸ್ ತನ್ನ ವರದಿಯಲ್ಲಿ ಬಹಿರಂಗಪಡಿಸಿದೆ. ಫೇಸ್‌ಬುಕ್‌ (Facebook) ಮತ್ತು ಎಕ್ಸ್‌ (ಹಿಂದಿನ ಟ್ವಿಟ್ಟರ್‌)ಗೆ ಸವಾಲು ಸ್ಪರ್ಧೆ ಒಡ್ಡಲು ಡೊನಾಲ್ಡ್ ಟ್ರಂಪ್ ತಮ್ಮದೇ ಹೊಸ ಸೋಷಿಯಲ್ ಮೀಡಿಯಾ ಆದ ಟ್ರೂತ್ ಸೋಷಿಯಲ್ (Truth Social) ಆರಂಭಿಸಿದ್ದರು.

2021ರಲ್ಲಿ ಅಮೆರಿಕ ಸಂಸತ್‌ ಭವನದಲ್ಲಿ ಟ್ರಂಪ್‌ ಬೆಂಬಲಿಗರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅವರಿಗೆ ಎಲ್ಲ ಸಾಮಾಜಿಕ ಜಾಲತಾಣಗಳು ನಿಷೇಧ ಹೇರಿದ್ದವು. ಹೀಗಾಗಿ ಅವರು 2021ರ ಅಕ್ಟೋಬರ್‌ನಲ್ಲಿ ಸ್ವಂತ ಸಾಮಾಜಿಕ ಜಾಲತಾಣ ಆರಂಭಿಸುವುದಾಗಿ ಘೋಷಿಸಿದ್ದರು. ಅದಂತೆ 2022ರಲ್ಲಿ ಟ್ರೂತ್ ಸೋಷಿಯಲ್ ಅಪ್ಲಿಕೇಷನ್‌ ಆರಂಭಿಸಿದ್ದರು. ಟ್ರಂಪ್‌ ಮೀಡಿಯಾ ಆ್ಯಂಡ್‌ ಟೆಕ್ನಾಲಜಿ ಗ್ರೂಪ್‌ನ ಮಾಲಿಕತ್ವದಲ್ಲಿ ಈ ಅಪ್ಲಿಕೇಷನ್‌ ಅನ್ನು ಆರಂಭಿಸಲಾಗಿತ್ತು.

ಇದನ್ನೂ ಓದಿ: Worst President: ಅಮೆರಿಕ ಇತಿಹಾಸದಲ್ಲೇ ಡೊನಾಲ್ಡ್‌ ಟ್ರಂಪ್‌ ಕೆಟ್ಟ ಅಧ್ಯಕ್ಷ; ಬೆಸ್ಟ್‌ ಯಾರು?

ಏನಿದು ಪ್ರಕರಣ?

ಟ್ರಂಪ್‌ ಅವರು ನಟಿ ಸ್ಟ್ರಾಮಿ ಡೇನಿಯಲ್ಸ್‌ಗೆ ಹಣ ಪಾವತಿಸಿದ ಆರೋಪ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಹಷ ಮನಿ ಪ್ರಕರಣ ದಾಖಲಾಗಿದೆ. ಗೋಪ್ಯತೆ ರಕ್ಷಿಸಲು ನೀಡುವ ಹಣಕ್ಕೆ ಹಷ್‌ ಮನಿ ಎಂದು ಕರೆಯಲಾಗುತ್ತದೆ. ಸ್ಟಾರ್ಮಿ ಡೇನಿಯಲ್ಸ್‌ ಜತೆಗೆ ಟ್ರಂಪ್‌ 2006ರಲ್ಲಿ ಲೈಂಗಿಕ ಸಂಬಂಧ ಹೊಂದಿದ್ದರು. 2011ರಲ್ಲಿ ಸ್ಟಾರ್ಮಿ ಈ ವಿಷಯವನ್ನು ಬಹಿರಂಗಪಡಿಸಿದ್ದರು.

2016ರಲ್ಲಿ ಟ್ರಂಪ್‌ ಚುನಾವಣಾ ಕಣಕ್ಕೆ ಇಳಿದ ವೇಳೆ ಲೈಂಗಿಕ ಸಂಪರ್ಕದ ವಿಷಯ ಬಹಿರಂಗ ಮಾಡದಂತೆ ತಮ್ಮ ವಕೀಲರ ಮೂಲಕ ಸ್ಟಾರ್ಮಿಗೆ 1 ಕೋಟಿ ರೂ. ಹಣ ನೀಡಿದ್ದರು. ಬಳಿಕ ಟ್ರಂಪ್‌ ಹಣ ನೀಡಿದ ವಿಷಯ ಬೆಳಕಿಗೆ ಬಂದು ಪ್ರಕರಣ ದಾಖಲಾಗಿತ್ತು. ಮೊದಲು ಹಣ ನೀಡಿದ ಆರೋಪವನ್ನು ನಿರಾಕರಿಸಿದ್ದ ಟ್ರಂಪ್‌ ಬಳಿಕ ಒಪ್ಪಿಕೊಂಡಿದ್ದರು. ನವೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಟ್ರಂಪ್‌ ಸ್ಪರ್ಧಿಸಲಿದ್ದಾರೆ.

Continue Reading

ದೇಶ

Reliance Industries: ಟೈಮ್ ಮ್ಯಾಗಜೀನ್‌ನ ಜಗತ್ತಿನ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌

Reliance Industries: ಅಮೆರಿಕದ ಜನಪ್ರಿಯ ನಿಯತಕಾಲಿಕ ಟೈಮ್‌ ಬಿಡುಗಡೆ ಮಾಡಿರುವ ಜಗತ್ತಿನ ಪ್ರಮುಖ 100 ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌, ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಮತ್ತು ಟಾಟಾ ಸಮೂಹವು ಸ್ಥಾನ ಪಡೆದುಕೊಂಡಿವೆ. ಟೈಮ್‌ ನಿಯತಕಾಲಿಕವು ರಿಲಯನ್ಸ್‌ ಇಂಡಸ್ಟ್ರೀಸ್‌ಗೆ ʼಭಾರತದ ಶಕ್ತಿʼ ಎನ್ನುವ ಉಪನಾಮವನ್ನು ನೀಡಿದೆ.

VISTARANEWS.COM


on

3 Indian companies have featured in Time magazines list of 100 most influential companies in the world
ರಿಲಯನ್ಸ್ ಇಂಡಸ್ಟ್ರೀಸ್‌.
Koo

ನವದೆಹಲಿ: ಅಮೆರಿಕದ ಜನಪ್ರಿಯ ನಿಯತಕಾಲಿಕ ಟೈಮ್‌ (Time magazine) ಬಿಡುಗಡೆ ಮಾಡಿರುವ ಜಗತ್ತಿನ ಪ್ರಮುಖ 100 ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ (Reliance Industries) ಸೇರಿದಂತೆ ಭಾರತದ ಮೂರು ಕಂಪನಿಗಳು ಸ್ಥಾನ ಪಡೆದುಕೊಂಡಿವೆ.

ರಿಲಯನ್ಸ್‌ ಇಂಡಸ್ಟ್ರೀಸ್‌, ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಮತ್ತು ಟಾಟಾ ಸಮೂಹವು ʼಟೈಮ್‌ʼ ಬಿಡುಗಡೆ ಮಾಡಿರುವ 100 ಕಂಪನಿಗಳಲ್ಲಿ ಸ್ಥಾನ ಪಡೆದುಕೊಂಡಿವೆ.

ಇದನ್ನೂ ಓದಿ: Modi Meditation: ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಧ್ಯಾನ ಆರಂಭಿಸಿದ ಮೋದಿ; ಹಗಲು-ರಾತ್ರಿ ಪ್ರಧಾನಿ ಮೆಡಿಟೇಷನ್

ಈ ಪಟ್ಟಿಯನ್ನು 5 ವಿಭಾಗಗಳಾಗಿ ವರ್ಗೀಕರಿಸಲಾಗಿದ್ದು, ನಾಯಕ, ಆವಿಷ್ಕಾರ, ನಾವೀನ್ಯ, ಟೈಟಾನ್‌ (ಶಕ್ತಿಶಾಲಿ) ಮತ್ತು ಪ್ರವರ್ತಕ ಎಂದು ವರ್ಗೀಕರಿಸಲಾಗಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಟಾಟಾ ಸಮೂಹವು ಟೈಟಾನ್‌ (ಶಕ್ತಿಶಾಲಿ) ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿವೆ. ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಪ್ರವರ್ತಕರ ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿದೆ.

ಟೈಮ್‌ ನಿಯತಕಾಲಿಕವು ರಿಲಯನ್ಸ್‌ ಇಂಡಸ್ಟ್ರೀಸ್‌ಗೆ ʼಭಾರತದ ಶಕ್ತಿʼ ಎನ್ನುವ ಉಪನಾಮವನ್ನು ನೀಡಿದೆ. ಜವಳಿ ಮತ್ತು ಪಾಲಿಸ್ಟರ್‌ ಉದ್ದಿಮೆಯಾಗಿ ಆರಂಭವಾದ ರಿಲಯನ್ಸ್‌ ಕಂಪನಿಯು ಇಂದು ಅತಿದೊಡ್ಡ ಮತ್ತು ಶಕ್ತಿಶಾಲಿ ಉದ್ಯಮ ಸಮೂಹವಾಗಿ ಹೊರಹೊಮ್ಮಿದೆ. ಮಾತ್ರವಲ್ಲ ದೇಶದ ಅತ್ಯಂತ ಮೌಲ್ಯಯುತ ಕಂಪನಿ ಕೂಡಾ ಆಗಿದೆ ಎಂದು ಟೈಮ್‌ ನಿಯತಕಾಲಿಕವು ರಿಲಯನ್ಸ್‌ ಇಂಡಸ್ಟ್ರೀಸ್‌ ಬಗ್ಗೆ ಬರೆದಿದೆ. ಮುಕೇಶ್‌ ಅಂಬಾನಿ ಅವರ ನಾಯಕತ್ವದಲ್ಲಿ ಕಂಪನಿಯು ಇಂಧನ, ರಿಟೇಲ್‌ ಮತ್ತು ದೂರಸಂಪರ್ಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತನ್ನ ವಹಿವಾಟನ್ನು ವಿಸ್ತರಿಸಿಕೊಂಡಿದೆ.

ಇದನ್ನೂ ಓದಿ: Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

ಭಾರತದ ಅತಿದೊಡ್ಡ ಡಿಜಿಟಲ್‌ ಸೇವಾ ಪೂರೈಕೆದಾರ ಮತ್ತು ದೂರಸಂಪರ್ಕ ಕಂಪನಿ ಜಿಯೊ ಪ್ಲಾಟ್‌ಫಾರಂ 2021ರಲ್ಲಿ ಈ ಪಟ್ಟಿಗೆ ಸೇರಿಕೊಂಡಿತು. ರಿಲಯನ್ಸ್‌ ಮತ್ತು ಡಿಸ್ನಿ ನಡುವಿನ 8.5 ಬಿಲಿಯನ್‌ ಡಾಲರ್‌ ಒಪ್ಪಂದದ ಬಗ್ಗೆಯೂ ಟೈಮ್‌ ನಿಯತಕಾಲಿಕ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

Continue Reading

ದೇಶ

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Reserve Bank of India : ಸಹಕಾರಿ ಬ್ಯಾಂಕುಗಳು ಸೇರಿದಂತೆ ಬ್ಯಾಂಕುಗಳು ತಮ್ಮ ಖಾತೆಗಳಲ್ಲಿ 10 ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳವರೆಗೆ ಯಾರೂ ಕ್ಲೇಮ್ ಮಾಡದೇ ಇರುವ ಖಾತೆಯಲ್ಲಿನ ದುಡ್ಡನ್ನು ಆರ್​ಬಿಯ ಠೇವಣಿ ಶಿಕ್ಷಣ ಮತ್ತು ಜಾಗೃತಿ (ಡಿಇಎ) ನಿಧಿಗೆ ವರ್ಗಾಯಿಸುತ್ತವೆ.

VISTARANEWS.COM


on

Reserve Bank of India
Koo

ನವದೆಹಲಿ: ಬ್ಯಾಂಕುಗಳಲ್ಲಿ ಯಾರೂ ಕ್ಲೈಮ್ ಮಾಡದ (ವಾಪಸ್ ಪಡೆಯದ) ಠೇವಣಿಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26ರಷ್ಟು ಏರಿಕೆ ಕಂಡು 2024 ರ ಮಾರ್ಚ್ ಅಂತ್ಯದ ವೇಳೆಗೆ 78,213 ಕೋಟಿ ರೂ.ಗೆ ತಲುಪಿದೆ ಎಂದು ರಿಸರ್ವ್​ ಬ್ಯಾಂಕ್​ ಆಫ್ ಇಂಡಿಯಾ (Reserve Bank of India) ವಾರ್ಷಿಕ ವರದಿ ತಿಳಿಸಿದೆ. ಅದೇ ರೀತಿ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿಯು ಮಾರ್ಚ್ 2023 ರ ಅಂತ್ಯದ ವೇಳೆಗೆ 62,225 ಕೋಟಿ ರೂಪಾಯಿಗೆ ಏರಿದೆ ಎಂದು ಅದು ಹೇಳಿದೆ.

ಸಹಕಾರಿ ಬ್ಯಾಂಕುಗಳು ಸೇರಿದಂತೆ ಬ್ಯಾಂಕುಗಳು ತಮ್ಮ ಖಾತೆಗಳಲ್ಲಿ 10 ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳವರೆಗೆ ಯಾರೂ ಕ್ಲೇಮ್ ಮಾಡದೇ ಇರುವ ಖಾತೆಯಲ್ಲಿನ ದುಡ್ಡನ್ನು ಆರ್​ಬಿಯ ಠೇವಣಿ ಶಿಕ್ಷಣ ಮತ್ತು ಜಾಗೃತಿ (ಡಿಇಎ) ನಿಧಿಗೆ ವರ್ಗಾಯಿಸುತ್ತವೆ.

ಖಾತೆದಾರರಿಗೆ ಸಹಾಯ ಮಾಡುವ ಕ್ರಮವಾಗಿ ಮತ್ತು ನಿಷ್ಕ್ರಿಯ ಖಾತೆಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಈ ವರ್ಷದ ಆರಂಭದಲ್ಲಿ ಖಾತೆಗಳು ಮತ್ತು ಠೇವಣಿಗಳನ್ನು ನಿಷ್ಕ್ರಿಯ ಖಾತೆಗಳು ಮತ್ತು ಕ್ಲೈಮ್ ಮಾಡದ ಠೇವಣಿಗಳು ಎಂದು ವರ್ಗೀಕರಿಸಲು ಬ್ಯಾಂಕುಗಳು ಜಾರಿಗೆ ತರಬೇಕಾದ ಕ್ರಮಗಳ ಬಗ್ಗೆ ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದನ್ನು ಸಂದರ್ಭಕ್ಕೆ ತಕ್ಕಂತೆ ಅನುಸರಿಬಹುದಾಗಿದೆ.

ಇದನ್ನೂ ಓದಿ: Radhika Merchant : ಅನಂತ್​​ ಅಂಬಾನಿ- ರಾಧಿಕಾ ಮರ್ಚೆಂಟ್​ ವಿವಾಹದ ಸ್ಥಳ ಬಹಿರಂಗ; ಇಲ್ಲಿದೆ ವಿವರ

ಖಾತೆಗಳ ನಿಯಮಿತ ಪರಿಶೀಲನೆ, ಅಂಥ ಖಾತೆಗಳ ಮೂಲಕ ವಂಚನೆ ತಡೆಗಟ್ಟುವ ಕ್ರಮಗಳು, ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಕುಂದುಕೊರತೆ ಪರಿಹಾರ ಕಾರ್ಯವಿಧಾನ, ಖಾತೆಗಳನ್ನು ಮರು ಸಕ್ರಿಯಗೊಳಿಸಲು ಅವರ ನಾಮನಿರ್ದೇಶಿತರು ಅಥವಾ ಕಾನೂನುಬದ್ಧ ವಾರಸುದಾರರು ಸೇರಿದಂತೆ ನಿಷ್ಕ್ರಿಯ ಖಾತೆಗಳು ಅಥವಾ ಕ್ಲೈಮ್ ಮಾಡದ ಠೇವಣಿಗಳ ಗ್ರಾಹಕರನ್ನು ಪತ್ತೆಹಚ್ಚಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಸೂಚಿಸಲಾಗಿತ್ತು. ಕ್ಲೇಮ್​ಗಳ ಇತ್ಯರ್ಥ ಅಥವಾ ಖಾತೆ ಮುಚ್ಚಲು ಅನುಸರಿಸಬೇಕಾದ ಪ್ರಕ್ರಿಯೆಗಳಿಗೆ ಆರ್​ಸಿಬಿ ಬ್ಯಾಂಕುಗಳಿಗೆ ಸಲಹೆ ನೀಡಿದೆ.

ಈ ಸೂಚನೆಗಳು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಕ್ಲೈಮ್ ಮಾಡದ ಠೇವಣಿಗಳ ಪ್ರಮಾಣವನ್ನು ಕಡಿಮೆ ಮಾಡಲು ಮತ್ತು ಅಂತಹ ಠೇವಣಿಗಳನ್ನು ಅವುಗಳ ನಿಜವಾದ ಮಾಲೀಕರು / ಹಕ್ಕುದಾರರಿಗೆ ಹಿಂದಿರುಗಿಸಲು ಬ್ಯಾಂಕುಗಳು ಮತ್ತು ರಿಸರ್ವ್ ಬ್ಯಾಂಕ್ ಕೈಗೊಂಡ ಪ್ರಯತ್ನಗಳು ಮತ್ತು ಉಪಕ್ರಮಗಳಿಗೆ ಪೂರಕವಾಗಿತ್ತು. ಪರಿಷ್ಕೃತ ಸೂಚನೆಗಳು ಎಲ್ಲಾ ವಾಣಿಜ್ಯ ಬ್ಯಾಂಕುಗಳು (ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಸೇರಿದಂತೆ) ಮತ್ತು ಎಲ್ಲಾ ಸಹಕಾರಿ ಬ್ಯಾಂಕುಗಳಿಗೆ ಅನ್ವಯಿಸುತ್ತವೆ ಮತ್ತು ಏಪ್ರಿಲ್ 1, 2024 ರಿಂದ ಜಾರಿಗೆ ಬಂದಿವೆ.

Continue Reading

ಮನಿ-ಗೈಡ್

Health Insurance: ಕ್ಯಾಶ್​ಲೆಸ್​ ಕ್ಲೈಮ್‌ ಗಳಿಗೆ ಆಸ್ಪತ್ರೆಯಲ್ಲಿ ಇನ್ನು ಹೆಚ್ಚು ಹೊತ್ತು ಕಾಯಬೇಕಿಲ್ಲ; ಇಲ್ಲಿದೆ ಹೊಸ ನಿಯಮ

ಮೂರು ಗಂಟೆಗಳ ಒಳಗೆ ಆಸ್ಪತ್ರಗಳಲ್ಲಿ ನಗದು ರಹಿತ ಆರೋಗ್ಯ ವಿಮಾ (Health Insurance) ಕ್ಲೈಮ್ ಗಳನ್ನು ಸಲ್ಲಿಸಬೇಕು ಎಂದು ಐಆರ್ ಡಿಐಎ ಸೂಚಿಸಿದೆ. ಹಿಂದಿನ 55 ಆದೇಶಗಳನ್ನು ರದ್ದುಗೊಳಿಸಿ ಒಂದು ಸಮಗ್ರ ಆದೇಶವನ್ನು ಹೊರಡಿಸಲಾಗಿದೆ. ಇದರಲ್ಲಿ ಮಾಡಿರುವ ಬದಲಾವಣೆಗಳು ಇಂತಿವೆ.

VISTARANEWS.COM


on

By

Health Insurance
Koo

ಬೆಂಗಳೂರು: ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು (IRDAI) ಆರೋಗ್ಯ ವಿಮಾ ಪಾಲಿಸಿಗಳ (Health Insurance) ಮಾನದಂಡಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಿದೆ. 55 ಸುತ್ತೋಲೆಗಳನ್ನು ರದ್ದುಗೊಳಿಸಿ ಆರೋಗ್ಯ ವಿಮಾ ಉತ್ಪನ್ನಗಳ ಕುರಿತು ಸಮಗ್ರವಾಗಿ ಒಂದು ಸುತ್ತೋಲೆ ಪ್ರಕಟಿಸಿದೆ. ಪ್ರಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ (hospital discharge) ವಿನಂತಿ ಸ್ವೀಕರಿಸಿದ ಕ್ಯಾಶ್​ಲೆಸ್​ ಕ್ಲೈಮ್ ಗಳನ್ನು ಮೂರು ಗಂಟೆಗಳ ಒಳಗೆ ಇತ್ಯರ್ಥಗೊಳಿಸಬೇಕು ಐಆರ್ ಡಿಎಐ ಸೂಚಿಸಿದೆ.

ಯಾವುದೇ ಸಂದರ್ಭದಲ್ಲಿ ಪಾಲಿಸಿದಾರರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಹೆಚ್ಚು ಕಾಯುವಂತೆ ಮಾಡಬಾರದು. ಮೂರು ಗಂಟೆಗಳಿಗಿಂತ ಹೆಚ್ಚು ವಿಳಂಬವಾದರೆ ಆಸ್ಪತ್ರೆಯಿಂದ ವಿಧಿಸಲಾದ ಹೆಚ್ಚುವರಿ ಮೊತ್ತವನ್ನು ವಿಮಾದಾರರು ಭರಿಸಬೇಕಾಗುತ್ತೆ ಎಂದು ಕಂಪನಿ ತಿಳಿಸಿದೆ. ತುರ್ತು ಸಂದರ್ಭಗಳಲ್ಲಿ ಬರುವ ನಗದು ರಹಿತ ವಿನಂತಿಯನ್ನು ವಿಮಾದಾರರು ತಕ್ಷಣವೇ ನಿರ್ಧರಿಸಬೇಕು ಎಂದು ಐಆರ್ ಡಿ ಎಐ ಹೇಳಿದೆ.

2024ರ ಜುಲೈ 31ರೊಳಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲು ವಿಮಾದಾರರಿಗೆ ಆದೇಶಿಸಿರುವ ಐಆರ್ ಡಿಎಐ ನಗದು ಕ್ಯಾಶ್​ಲೆಸ್​​ ವಿನಂತಿಗಳನ್ನು ಸ್ವೀಕರಿಸಲು ವಿಮಾದಾರರು ಆಸ್ಪತ್ರೆಯಲ್ಲಿ ಹೆಲ್ಪ್​ ಡೆಸ್ಕ್‌ಗಳನ್ನು ಸಹ ವ್ಯವಸ್ಥೆಗೊಳಿಸಬಹುದು ಎಂದು ಹೇಳಿದೆ.


ಇತರ ಕೆಲವು ಬದಲಾವಣೆಗಳು ?

ಲಭ್ಯವಿರುವ ಉತ್ಪನ್ನಗಳ ಮೂಲಕ ಪಾಲಿಸಿದಾರರಿಗೆ ವಿಮಾ ಕಂಪನಿಗಳು ವ್ಯಾಪಕ ಆಯ್ಕೆಗಳನ್ನು ಒದಗಿಸಬೇಕು ಎಂದು ಐಆರ್ ಡಿಎಐ ಹೇಳಿದೆ. ಅದೇ ಉದ್ದೇಶವನ್ನು ಪೂರೈಸಲು, ವಿಮಾದಾರರು ಎಲ್ಲಾ ವಯಸ್ಸಿನವರು, ಪ್ರದೇಶಗಳು, ಔದ್ಯೋಗಿಕ ವಿಭಾಗಗಳು, ವೈದ್ಯಕೀಯ ಪರಿಸ್ಥಿತಿಗಳು/ ಚಿಕಿತ್ಸೆಗಳು, ಎಲ್ಲಾ ರೀತಿಯ ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣೆ ಒದಗಿಸುವವರಿಗೆ ವೈವಿಧ್ಯಮಯ ವಿಮಾ ಉತ್ಪನ್ನಗಳನ್ನು ಒದಗಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: Health Insurance Benefits : ಉದ್ಯೋಗಿಗಳ ಆರೋಗ್ಯ ವಿಮೆ ಏಕೆ ಮಹತ್ವಪೂರ್ಣ? ಇಲ್ಲಿದೆ ಡಿಟೇಲ್ಸ್

ಹಲವು ಆರೋಗ್ಯ ವಿಮಾ ಪಾಲಿಸಿಗಳನ್ನು ಹೊಂದಿರುವ ಪಾಲಿಸಿದಾರನು ಸ್ವೀಕಾರಾರ್ಹ ಕ್ಲೈಮ್ ಮೊತ್ತವನ್ನು ಪಡೆಯುವ ಪಾಲಿಸಿ ಆಯ್ಕೆಯನ್ನು ಹೊಸ ಸುತ್ತೋಲೆಯಲ್ಲಿ ಪಡೆಯುತ್ತಾನೆ. ವಿಮಾದಾರರು ಪ್ರತಿ ಪಾಲಿಸಿ ಡಾಕ್ಯುಮೆಂಟ್ ಜೊತೆಗೆ ಗ್ರಾಹಕರ ಮಾಹಿತಿ ಶೀಟ್​​ (CIS) ಒದಗಿಸಬೇಕಾಗುತ್ತದೆ. ಪಾಲಿಸಿ ಅವಧಿಯಲ್ಲಿ ಯಾವುದೇ ಕ್ಲೈಮ್‌ಗಳು ಮಾಡದಿದ್ದರೆ ವಿಮಾ ಮೊತ್ತವನ್ನು ಹೆಚ್ಚಿಸುವ ಅಥವಾ ಪ್ರೀಮಿಯಂ ಮೊತ್ತವನ್ನು ರಿಯಾಯಿತಿ ಮಾಡಬೇಕಾಗುತ್ತದೆ.

ಒಂದು ವೇಳೆ ಪಾಲಿಸಿದಾರರು, ಚಾಲ್ತಿಯಲ್ಲಿರು ಪಾಲಿಸಿಯನ್ನು ಯಾವುದೇ ಸಮಯದಲ್ಲಿ ರದ್ದುಮಾಡಲು ಬಯಸಿದರೆ ಅವಧಿ ಪ್ರೀಮಿಯಂ/ ಅನುಪಾತದ ಪ್ರೀಮಿಯಂನ ಮರುಪಾವತಿ ಮಾಡಬೇಕಾಗುತ್ತದೆ.

ರೋಗಿಯನ್ನು ದಾಖಲಿಸುವ ಮೊದಲು ವಿಮಾ ಕಂಪನಿಯು ಆಸ್ಪತ್ರೆಯ ಟಿಪಿಎ ಡೆಸ್ಕ್‌ಗೆ ಪೂರ್ವ-ಅನುಮೋದನೆಯನ್ನು ಒದಗಿಸಿದ ಮೇಲೂ ಶೇ.43ರಷ್ಟು ವಿಮಾ ಪಾಲಿಸಿದಾರರು ತಮ್ಮ “ಆರೋಗ್ಯ ವಿಮೆ” ಕ್ಲೈಮ್‌ಗಳನ್ನು ಪಡೆಯಲು ತೊಂದರೆಗಳನ್ನು ಎದುರಿಸಿದ್ದಾರೆ ಎಂದು ಸಮೀಕ್ಷೆಯೊಂದರಲ್ಲಿ ತಿಳಿದು ಬಂದಿದೆ. ಕೆಲವು ಪ್ರಕರಣಗಳಲ್ಲಿ, ರೋಗಿಯು ಡಿಸ್ಚಾರ್ಜ್‌ಗೆ ಸಿದ್ಧವಾದ ಅನಂತರ 10- 12 ಗಂಟೆಗಳ ಬಳಿಕ ಕ್ಲೇಮ್​ ನೀಡಲಾಗಿದೆ.

Continue Reading
Advertisement
Kannada Serials TRP Colors Kannada serials not in top 5 Shravani Subramanya is back on track
ಕಿರುತೆರೆ2 mins ago

Kannada Serials TRP: ಟಾಪ್‌ 5ನಲ್ಲಿಲ್ಲ ಕಲರ್ಸ್‌ ಕನ್ನಡ ಧಾರಾವಾಹಿಗಳು: ಟ್ರ್ಯಾಕ್‌ಗೆ ಮರಳಿದ ʻಶ್ರಾವಣಿ ಸುಬ್ರಮಣ್ಯʼ!

theft Case
ಕ್ರೈಂ5 mins ago

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

bhavani revanna sit notice
ಕ್ರೈಂ8 mins ago

Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ!

Gold Smuggling
ದೇಶ14 mins ago

Gold Smuggling: ಗುದನಾಳದಲ್ಲಿ 1ಕೆಜಿ ಚಿನ್ನ; ಕೇರಳದಲ್ಲಿ ಗಗನಸಖಿ ಅರೆಸ್ಟ್‌

prajwal Revanna Case
ಪ್ರಮುಖ ಸುದ್ದಿ14 mins ago

Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

India women’s squad
ಕ್ರೀಡೆ22 mins ago

India women’s squad: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ; ತಂಡಕ್ಕೆ ಮರಳಿದ ಪ್ರಿಯಾ ಪೂನಿಯಾ

Maharaja trailer released Vijay Sethupathi has a secret
ಟಾಲಿವುಡ್24 mins ago

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರದ ʻಮಹಾರಾಜʼ ಟ್ರೈಲರ್‌ ಔಟ್‌: ಫ್ಯಾನ್ಸ್‌ ಫಿದಾ!

Huligemma Temple Road Accident
ಕೊಪ್ಪಳ41 mins ago

Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

Viral Video
ವೈರಲ್ ನ್ಯೂಸ್53 mins ago

Viral Video: ಬೆಂಕಿ ದುರಂತ ಸ್ಥಳದಲ್ಲಿ ಜಮಾಯಿಸಿದ್ದ ಜನ; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

back benchers Movie Kannada song
ಸ್ಯಾಂಡಲ್ ವುಡ್57 mins ago

Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ22 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌