Gold Rate Today: ಬೆಂಗಳೂರಲ್ಲಿ ಹೆಚ್ಚಿದ ಬೆಳ್ಳಿ ಬೆಲೆ; ಎಷ್ಟಿದೆ ಇಂದಿನ ಬಂಗಾರದ ದರ? - Vistara News

ವಾಣಿಜ್ಯ

Gold Rate Today: ಬೆಂಗಳೂರಲ್ಲಿ ಹೆಚ್ಚಿದ ಬೆಳ್ಳಿ ಬೆಲೆ; ಎಷ್ಟಿದೆ ಇಂದಿನ ಬಂಗಾರದ ದರ?

Silver Rate: ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಏರಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ನಿನ್ನೆಗಿಂತಲೂ 175 ರೂ. ಹೆಚ್ಚಿದೆ. 1 ಗ್ರಾಂ ಬೆಳ್ಳಿ ಬೆಲೆ 75.75 ರೂಪಾಯಿ ಇದೆ.

VISTARANEWS.COM


on

Gold Rate Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿನ್ನ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಭಾರತದಲ್ಲಂತೂ ಚಿನ್ನವನ್ನು ಹೂಡಿಕೆ, ಅಲಂಕಾರಕ್ಕಾಗಿ ಯತೇಚ್ಛವಾಗಿ ಬಳಕೆ ಮಾಡುತ್ತಾರೆ. ಮದುವೆ ಸಮಾರಂಭ, ಕೆಲವು ಹಬ್ಬಗಳಲ್ಲಿ ಈ ಲೋಹಕ್ಕೆ ವಿಶೇಷ ಪ್ರಾಶಸ್ತ್ಯ ಇದೆ. ಅಷ್ಟೇ ಅಲ್ಲ, ಚಿನ್ನ ಆಪತ್ಕಾಲದ ರಕ್ಷಕ. ಕೈಯಲ್ಲಿ ಹಣವಿದ್ದಾಗ ಬಂಗಾರ ಕೊಂಡು ಇಟ್ಟುಕೊಂಡರೆ, ಅದು ಮುಂದೆ ಯಾವುದೇ ಆರ್ಥಿಕ ಸಂಕಷ್ಟದಲ್ಲಿ ನಮ್ಮ ಕೈ ಹಿಡಿಯುತ್ತದೆ ಎಂಬ ನಂಬಿಕೆ ಭಾರತೀಯರದ್ದು. ಹೀಗಾಗಿ ಚಿನ್ನವನ್ನು ಕೊಳ್ಳಲು ಜನ ಆ ಕಾಲ, ಈ ಕಾಲ ಎಂದು ನೋಡುವುದಿಲ್ಲ. ಅಂಥ ಚಿನ್ನಪ್ರಿಯರು, ಬಂಗಾರ ಖರೀದಿಸಲು ಪ್ಲ್ಯಾನ್ ಮಾಡುತ್ತಿರುವವರಿಗೆ ಇಂದು ಗುಡ್​ನ್ಯೂಸ್​ ಇದೆ. ಇಂದು ಚಿನ್ನದ ದರ (Gold Rate Today) ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.

ಗುಡ್​ ರಿಟರ್ನ್ಸ್​ ವೆಬ್​ಸೈಟ್​ ಪ್ರಕಾರ ಭಾರತದಲ್ಲಿ ಇಂದು 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 100 ರೂಪಾಯಿ ಇಳಿಕೆಯಾಗಿದೆ. ನಿನ್ನೆ 55,600 ರೂಪಾಯಿ ಇತ್ತು. ಅದು ಇಂದು 55,500 ರೂ.ಗೆ ಇಳಿಕೆಯಾಗಿದೆ. ಹಾಗೇ, 22 ಕ್ಯಾರೆಟ್​ನ 1 ಗ್ರಾಂ ಚಿನ್ನದ ಬೆಲೆ ನಿನ್ನೆಗಿಂತಲೂ 10 ರೂ. ಇಳಿಕೆಯಾಗಿದ್ದ 5,550 ರೂ. ಆಗಿದೆ. 8 ಗ್ರಾಂ.ಗೆ 44,400 ರೂ., 100 ಗ್ರಾಂ.ಗೆ 5,55,000 ರೂ. ಇದೆ. ಹಾಗೇ, ದೇಶದಲ್ಲಿ 24 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ ಕೂಡ ನಿನ್ನೆಗಿಂತಲೂ 100 ರೂ.ಕಡಿಮೆಯಾಗಿದ್ದು, 60,550 ರೂ.ಕ್ಕೆ ಮಾರಾಟವಾಗುತ್ತಿದೆ. 1 ಗ್ರಾಂ.ಗೆ 6,055ರೂ., 8 ಗ್ರಾಂ.ಗೆ 48,440 ರೂ, 100 ಗ್ರಾಂ.ಗೆ 6,05,500 ರೂಪಾಯಿ ಇದೆ. ಇನ್ನು ಇಂದು ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. 1ಗ್ರಾಂ ಬೆಳ್ಳಿ ಬೆಲೆ 74.50 ರೂ., 8 ಗ್ರಾಂ-596 ರೂ., 10 ಗ್ರಾಂ.-745 ರೂ., 100 ಗ್ರಾಂ- 7,450 ರೂ. ಮತ್ತು 1 ಕೆಜಿಗೆ 74,500 ರೂ.ಇದೆ.

ಬೆಂಗಳೂರಿನಲ್ಲಿ ಎಷ್ಟಿದೆ ಚಿನ್ನ-ಬೆಳ್ಳಿ ದರ?

22 ಕ್ಯಾರೆಟ್​ ಚಿನ್ನ: 1 ಗ್ರಾಂ- 5,550 ರೂ., 8 ಗ್ರಾಂ-44,440 ರೂ., 10 ಗ್ರಾಂ-55,550 ರೂ., 100 ಗ್ರಾಂ-5,55,500 ರೂ.
24 ಕ್ಯಾರೆಟ್​ ಚಿನ್ನ: 1 ಗ್ರಾಂ-6,060 ರೂ., 8 ಗ್ರಾಂ-48,480 ರೂ., 10 ಗ್ರಾಂ-60,600 ರೂ., 100 ಗ್ರಾಂ-6,06,000 ರೂ.
ಬೆಳ್ಳಿ ದರ: ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಏರಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ನಿನ್ನೆಗಿಂತಲೂ 175 ರೂ. ಹೆಚ್ಚಿದೆ. 1 ಗ್ರಾಂ ಬೆಳ್ಳಿ ಬೆಲೆ 75.75 ರೂ., 8 ಗ್ರಾಂ.-606 ರೂ., 10 ಗ್ರಾಂ-757.75 ರೂ., 100 ಗ್ರಾಂ-7,575 ರೂ., 1 ಕೆಜಿ-75,750 ರೂಪಾಯಿ ಆಗಿದೆ.

ಇದನ್ನೂ ಓದಿ: Gold price today : ಚಿನ್ನದ ದರದಲ್ಲಿ ಅಲ್ಪ ಇಳಿಕೆ, ಬೆಳ್ಳಿ 400 ರೂ. ಹೆಚ್ಚಳ

22 ಕ್ಯಾರೆಟ್​ ಚಿನ್ನಕ್ಕೂ-24 ಕ್ಯಾರೆಟ್​ ಚಿನ್ನಕ್ಕೂ ಇರುವ ವ್ಯತ್ಯಾಸ

ಸಾಮಾನ್ಯವಾಗಿ 22 ಕ್ಯಾರೆಟ್​ ಚಿನ್ನಕ್ಕೂ, 24 ಕ್ಯಾರೆಟ್​ ಚಿನ್ನಕ್ಕೂ ದರದಲ್ಲಿ ವ್ಯತ್ಯಾಸ ಇರುತ್ತದೆ. 22 ಕ್ಯಾರೆಟ್​ ಚಿನ್ನಕ್ಕೆ ಸ್ವಲ್ಪ ಕಡಿಮೆ ಬೆಲೆ ಇದ್ದರೆ, 24 ಕ್ಯಾರೆಟ್​ ಬಂಗಾರಕ್ಕೆ ಬೆಲೆ ಹೆಚ್ಚಿರುತ್ತದೆ. ಆದರೆ 22 ಕ್ಯಾರೆಟ್​ಗೂ, 24 ಕ್ಯಾರೆಟ್​ಗೂ ನಡುವಿನ ವ್ಯತ್ಯಾಸದ ಅರಿವು ಅನೇಕ ಗ್ರಾಹಕರಿಗೆ ಇರುವುದಿಲ್ಲ. ಇದು ಮತ್ತೇನಲ್ಲ, 22 ಕ್ಯಾರೆಟ್​ ಎಂದರೆ ಅದರಲ್ಲಿ ಶೇ.91ರಷ್ಟು ಶುದ್ಧ ಚಿನ್ನ ಇದ್ದರೆ, 24 ಕ್ಯಾರೆಟ್​ನಲ್ಲಿ ಶೇ.99.9ರಷ್ಟು ಶುದ್ಧ ಚಿನ್ನ ಇರುತ್ತದೆ. 22 ಕ್ಯಾರೆಟ್​ ಚಿನ್ನದ ಆಭರಣಗಳಲ್ಲಿ ಇನ್ನುಳಿದ ಶೇ.9ರಷ್ಟು ಭಾಗ ತಾಮ್ರ, ಬೆಳ್ಳಿ, ಸತುವಿನ ಅಂಶ ಇರುತ್ತದೆ. 24 ಕ್ಯಾರೆಟ್​​ನ ಚಿನ್ನವನ್ನು ಅಪರಂಜಿ ಎಂದೂ ಕರೆಯಲಾಗುತ್ತದೆ, ಇದನ್ನು ಆಭರಣಗಳಲ್ಲಿ ಬಳಕೆ ಮಾಡುವುದಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪರಿಸರ

Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

Chocolate industry: ಪಶ್ಚಿಮ ಆಫ್ರಿಕಾದ ಕೋಕೋ ಮರಗಳಲ್ಲಿ ವೈರಸ್ ಹರಡುತ್ತಿದ್ದು, ಇದು ಚಾಕೊಲೇಟ್ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮೀಲಿಬಗ್‌ ವೈರಸ್ ಗಳಿಂದ ಚಿಗುರು ಊದಿಕೊಂಡಿದ್ದು, ಒಂದರಿಂದ ಇನ್ನೊಂದಕ್ಕೆ ವೇಗವಾಗಿ ಹರಡುತ್ತಿದೆ.

VISTARANEWS.COM


on

By

Chocolate industry
Koo

ನವದೆಹಲಿ: ಚಾಕೊಲೇಟ್‌ನಲ್ಲಿ ಬಳಸುವ ಪ್ರಮುಖ ಸಾಮಗ್ರಿಯಾದ ಕೋಕೋ (cacao) ಮರಗಳಲ್ಲಿ ವೈರಸ್ (virus) ಕಾಣಿಸಿಕೊಂಡಿದ್ದು, ಇದು ಚಾಕೊಲೇಟ್ ಉತ್ಪಾದನೆ ಮೇಲೆ ಬಹುದೊಡ್ದ ಹೊಡೆತ ಬೀಳುವ ಸಾಧ್ಯತೆ ಇದೆ. ಇದರಿಂದ ಚಾಕೊಲೇಟ್‌ಗಳು ಮತ್ತಷ್ಟು ದುಬಾರಿಯಾಗಬಹುದು.

ಪ್ರಸ್ತುತ ಪಶ್ಚಿಮ ಆಫ್ರಿಕಾದ (West Africa) ಕೋಕೋ ಮರಗಳಲ್ಲಿ ವೈರಸ್ ಹರಡುತ್ತಿದ್ದು, ಇದು ಚಾಕೊಲೇಟ್ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮೀಲಿಬಗ್‌ (mealybugs) ವೈರಸ್ ಗಳಿಂದ ಚಿಗುರು ಊದಿಕೊಂಡಿದ್ದು, ಒಂದರಿಂದ ಇನ್ನೊಂದಕ್ಕೆ ವೇಗವಾಗಿ ಹರಡುತ್ತಿದೆ. ಇದು ಬಿಸಿ ವಾತಾವರಣದಲ್ಲಿ ಹೆಚ್ಚು ತೀವ್ರವಾಗಿ ಬೆಳೆಯುತ್ತಿದೆ.

ಈ ವೈರಸ್ ಭೂಮಿಯ ಮೇಲಿರುವ ಪರಿಸರ ವಿನಾಶಕಾರಿ ಜೀವಿ ಎನ್ನಲಾಗುತ್ತದೆ. ಇದು ಘಾನಾದಲ್ಲಿ 50,000 ಹೆಕ್ಟೇರ್ ಕೋಕೋ ಫಾರ್ಮ್‌ಗಳನ್ನು ನಾಶಪಡಿಸಿದೆ. ಇದು ವಿಶ್ವದ ಎರಡನೇ ಅತಿದೊಡ್ಡ ಚಾಕೊಲೇಟ್ ಉತ್ಪಾದಕ ದೇಶ. ಇದು ಜಾಗತಿಕ ಚಾಕೊಲೇಟ್ ಪೂರೈಕೆಯ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ: Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

ಯುಎಸ್ ಮತ್ತು ಘಾನಾದ ವಿಶ್ವವಿದ್ಯಾನಿಲಯಗಳ ವಿಜ್ಞಾನಿಗಳು ವೈರಸ್ ಹರಡುವುದನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರಪಂಚದ ಚಾಕೊಲೇಟ್‌ಗಳನ್ನು ಉಳಿಸಲು ಹೊಸ ಮಾರ್ಗವನ್ನು ಈಗಾಗಲೇ ಕಂಡುಹಿಡಿದಿದ್ದರೂ ಇದು ಚಾಕೊಲೇಟ್ ನ ಜಾಗತಿಕ ಪೂರೈಕೆ ಸರಪಳಿಗೆ ಅಡ್ಡಿಯಾಗುವ ಸಾಧ್ಯತೆ ಇದೆ.


ಚಾಕೊಲೇಟ್ ಪೂರೈಕೆ ಮೇಲೆ ಪರಿಣಾಮ

ಪ್ರಪಂಚದ ಶೇ. 50ರಷ್ಟು ಚಾಕೊಲೇಟ್‌ಗಳು ಘಾನಾ ಮತ್ತು ಐವರಿ ಕೋಸ್ಟ್‌ನಿಂದ ಬರುತ್ತವೆ. ಈ ಪ್ರದೇಶಗಳಲ್ಲಿನ ಕೋಕೋ ಮರಗಳ ಚಿಗುರು ವೈರಸ್ ನಿಂದ ನಾಶವಾಗಿವೆ. ಕೊಲಂಬಿಯಾದಲ್ಲಿ ರೈತರು ಒಡೆದು ಸಿಪ್ಪೆ ಸುಲಿದಿದ್ದರೂ ಕೋಕೋ ಮರಗಳ ಎಲೆ, ಮೊಗ್ಗು ಮತ್ತು ಹೂವುಗಳನ್ನು ತಿನ್ನುವ ಮೀಲಿಬಗ್ಸ್ ಎಂದು ಕರೆಯಲ್ಪಡುವ ಸಣ್ಣ ಕೀಟಗಳಿಂದ ವೈರಸ್ ಹರಡುತ್ತದೆ. ಘಾನಾವು 254 ಮಿಲಿಯನ್ ಮರಗಳನ್ನು ಹೊಂದಿದೆ ಮತ್ತು ಐವರಿ ಕೋಸ್ಟ್‌ನಲ್ಲಿ ಶೇ. 20ರಷ್ಟು ಬೆಳೆ ಸೋಂಕಿಗೆ ಒಳಗಾಗಿದೆ.

ಚಾಕೊಲೇಟ್‌ ಹೇಗೆ ತಯಾರಿಸಲಾಗುತ್ತದೆ?

ಉಷ್ಣವಲಯದ ಹವಾಮಾನದಲ್ಲಿ ಬೆಳೆಯುವ ಕೋಕೋ ಬೀನ್ಸ್‌ನಿಂದ ಚಾಕೊಲೇಟ್‌ಗಳನ್ನು ತಯಾರಿಸಲಾಗುತ್ತದೆ. ಅವುಗಳನ್ನು ಹುದುಗಿಸಿ, ಒಣಗಿಸಿ ಮತ್ತು ಹುರಿದು ಮಾಡಿದ ಪುಡಿಯನ್ನು ಹಾಲು ಮತ್ತು ಸಕ್ಕರೆಯೊಂದಿಗೆ ಬೆರೆಸಿ ಚಾಕೊಲೇಟ್ ತಯಾರಿಸಲಾಗುತ್ತದೆ.

2022ರಲ್ಲಿ ಐವರಿ ಕೋಸ್ಟ್ 2.2 ಮಿಲಿಯನ್ ಟನ್ ಕೋಕೋವನ್ನು ಉತ್ಪಾದಿಸಿತು ಮತ್ತು ಘಾನಾ 1.1 ಮಿಲಿಯನ್ ಉತ್ಪಾದಿಸಿತು. ಪ್ರಪಂಚದ ಅತಿದೊಡ್ಡ ಉತ್ಪಾದಕ ಇಂಡೋನೇಷ್ಯಾವು 2022 ರಲ್ಲಿ 6,67,000 ಟನ್‌ಗಳನ್ನು ಉತ್ಪಾದಿಸಿದೆ.

ಬೆಚ್ಚಗಿನ ತಾಪಮಾನವು ಮೀಲಿಬಗ್ ಗೆ ಹೆಚ್ಚು ಪೂರಕವಾಗಿರುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆ ಇದೆ. ಆರ್ಲಿಂಗ್ಟನ್‌ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾನಿಲಯದ ತಜ್ಞರ ಪ್ರಕಾರ, ಈ ವೈರಸ್ ಪ್ರಪಂಚದ ಚಾಕೊಲೇಟ್ ಪೂರೈಕೆಗೆ ಅಪಾಯವನ್ನುಂಟು ಮಾಡುತ್ತದೆ.

ವೈರಸ್ ಅನ್ನು ನಿಲ್ಲಿಸಬಹುದೇ?

ಕೀಟನಾಶಕಗಳಿಂದ ಮೀಲಿಬಗ್‌ಗಳ ವಿರುದ್ಧ ಹೋರಾಡಲು ಸಾಧ್ಯವಿಲ್ಲ. ಸೋಂಕಿತ ಮರಗಳನ್ನು ಕಡಿಯುವುದು ಮತ್ತು ನಿರೋಧಕ ಮರಗಳನ್ನು ನೆಡುವುದು ಸುಲಭ ಮತ್ತು ಅಗ್ಗದ ಮಾರ್ಗವಾಗಿದೆ. ರೈತರು ಮರಗಳಿಗೆ ಲಸಿಕೆಯನ್ನೂ ನೀಡಬಹುದು. ಆದರೆ ಇದು ದುಬಾರಿಯಾಗಿರುವುದರಿಂದ ಇದು ಮರಗಳಿಂದ ಉತ್ಪತ್ತಿಯಾಗುವ ಕೋಕೋ ಮೇಲೆ ಪರಿಣಾಮವನ್ನು ಬೀರುತ್ತದೆ.

ದೂರದೂರ ಮರಗಳನ್ನು ನೆಡುವುದರಿಂದ ವೈರಸ್ ಹರಡುವುದನ್ನು ತಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ ಸಂಶೋಧಕರು. ಆದರೆ ಇದು ಇನ್ನೂ ಪ್ರಯೋಗ ಹಂತದಲ್ಲಿದೆ. ಇದು ರೈತರಿಗೆ ತಮ್ಮ ಬೆಳೆಯನ್ನು ರಕ್ಷಿಸಲು ಸಹಾಯ ಮಾಡುವ ಸಾಧ್ಯತೆಯಿದೆ.


ಮೀಲಿಬಗ್‌ನಿಂದ ಮಾತ್ರ ತೊಂದರೆಯೇ?

ಈ ಹಿಂದೆ ಕಪ್ಪು ಪಾಡ್ ರೋಗವು ಚಾಕೊಲೇಟ್ ಉತ್ಪನ್ನಗಳ ಮೇಲೆ ಪರಿಣಾಮ ಬೀರಿತ್ತು. ಈ ರೋಗವು ಕೋಕೋ ಬೀಜಗಳನ್ನು ಕಪ್ಪು ಅಥವಾ ಕಂದು ಬಣ್ಣಕ್ಕೆ ತಿರುಗಿಸುತ್ತದೆ. ಇದು 2022 ರಲ್ಲಿ ವಿಶ್ವದ ವಾರ್ಷಿಕ ಕೋಕೋ ಬೆಳೆಗಳಲ್ಲಿ ಶೇ. 30ರಷ್ಟನ್ನು ನಾಶಪಡಿಸಿತು. ಈ ಪ್ರದೇಶದಲ್ಲಿ ಉಂಟಾದ ಭಾರೀ ಮಳೆಯಿಂದಾಗಿ ರೋಗವನ್ನು ಮತ್ತಷ್ಟು ಉಲ್ಬಣವಾಗಿತ್ತು. ಏಕೆಂದರೆ ಸೋಂಕು ತೇವಾಂಶವುಳ್ಳ ಸ್ಥಿತಿಯಲ್ಲಿ ಹೆಚ್ಚು ವೇಗವಾಗಿ ಬೆಳೆಯುತ್ತದೆ ಮತ್ತು ಹರಡುತ್ತದೆ.

Continue Reading

ದೇಶ

Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

Tech Mahindra: ಐಟಿ ಸೇವೆಗಳಿಗೆ ಹೆಸರುವಾಸಿಯಾಗಿರುವ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದದಲ್ಲಿ 661 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೇ, 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಟೆಕ್‌ ಮಹೀಂದ್ರಾ ತೀರ್ಮಾನಿಸಿದೆ. ಇದು ಫ್ರೆಶರ್‌ಗಳಿಗೆ ಭಾರಿ ಅನುಕೂಲವಾಗಲಿದೆ.

VISTARANEWS.COM


on

Tech Mahindra
Koo

ನವದೆಹಲಿ: ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ.40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ, ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

“ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. ನಾಲ್ಕನೇ ತ್ರೈಮಾಸಿಕದಲ್ಲಿ ಟೆಕ್‌ ಮಹೀಂದ್ರಾ ನಿವ್ವಳ ಲಾಭದ ಪ್ರಮಾಣವು 709.47 ಕೋಟಿ ರೂ. ಇರಲಿದೆ ಎಂಬುದಾಗಿ ಮನಿಕಂಟ್ರೋಲ್‌ (Moneycontrol) ಅಂದಾಜಿಸಿತ್ತು.

6 ಸಾವಿರ ಫ್ರೆಶರ್‌ಗಳ ನೇಮಕ

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

50 ಸಾವಿರ ನೌಕರರಿಗೆ ಎಐ ತರಬೇತಿ

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ. ಇನ್ನು, ಟೆಕ್‌ ಟೆಕ್‌ ಮಹೀಂದ್ರಾ ಕಂಪನಿಯ ವಾರ್ಷಿಕ ಲಾಭವೂ ಶೇ.6.2ರಷ್ಟು ಅಂದರೆ, 12,871 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೂ ಉದ್ಯೋಗ ಸೃಷ್ಟಿ ಸೇರಿ ಹಲವು ಯೋಜನೆಗಳಿಗೆ ಟೆಕ್‌ ಮಹೀಂದ್ರಾ ಚಾಲನೆ ನೀಡುತ್ತಿದೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

Continue Reading

ಮನಿ-ಗೈಡ್

Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

Money Guide: ನಿಮ್ಮ ಪ್ಯಾನ್‌ ನಂಬರ್‌ ಇನ್ನೂ ಆಧಾರ್‌ನೊಂದಿಗೆ ಲಿಂಕ್‌ ಆಗಿಲ್ಲವೆ? ಹಾಗಾದರೆ ಮೇ 31ರೊಳಗೆ ಮಾಡಲೇಬೇಕು. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ನಿಮ್ಮ ಪ್ಯಾನ್‌ ನಂಬರ್‌ (Permanent Account Number) ಅನ್ನು ಆಧಾರ್‌ (Aadhaar)ನೊಂದಿಗೆ ಇನ್ನೂ ಲಿಂಕ್‌ ಮಾಡಿಲ್ಲವೆ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇಬೇಕು. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ (Income tax) ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ನಿಮ್ಮ ಗೊಂದಲಕ್ಕೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಹೀಗೆ ಲಿಂಕ್‌ ಮಾಡಿ

ಪ್ಯಾನ್‌ ಮತ್ತು ಆಧಾರ್‌ ಅನ್ನು ಹಲವು ವಿಧಗಳ ಮೂಲಕ ಲಿಂಕ್‌ ಮಾಡಬಹುದು. ಮೊದಲೇ ಹೇಳಿದಂತೆ ಇದಕ್ಕಾಗಿ ಆನ್‌ಲೈನ್‌ ಮತ್ತು ಆಫ್‌ಲೈನ್‌ ಮಾರ್ಗಗಳನ್ನು ಬಳಸಬಹುದು.

ಇನ್‌ಕಂ ಟ್ಯಾಕ್ಸ್‌ ಡಿಪಾರ್ಟ್‌ಮೆಂಟ್‌ ಪೋರ್ಟಲ್‌ ಮೂಲಕ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳಲಿದ್ದು, ಅಲ್ಲಿ ಪ್ಯಾನ್‌, ಆಧಾರ್‌ ನಂಬರ್‌ ನಮೂದಿಸಿ. ಜತೆಗೆ ಇತರ ಅಗತ್ಯ ಮಾಹಿತಿಯನ್ನು ನೀಡಿ.

ಎಸ್‌ಎಂಎಸ್‌ ಮೂಲಕ

  • UIDPAN 10-ಅಂಕಿಗಳ ಪ್ಯಾನ್‌ ಕಾರ್ಡ್‌ ನಂಬರ್‌, 12-ಅಂಕಿಗಳ ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಒಂದು ಸ್ಪೇಸ್‌ ಕೊಟ್ಟು 567678 ಅಥವಾ 56161ಗೆ ಎಸ್‌ಎಂಎಸ್‌ ಕಳುಹಿಸಿ.
  • ಬಳಿಕ ಪ್ಯಾನ್-ಆಧಾರ್ ಲಿಂಕ್ ಸ್ಥಿತಿಯನ್ನು ಎಸ್ಎಂಎಸ್ ನಿಮಗೆ ತಿಳಿಸಲಾಗುತ್ತದೆ. ಗಮನಿಸಿ ಜನ್ಮ ದಿನಾಂಕವು ಎರಡೂ ದಾಖಲೆಗಳಲ್ಲಿ ಹೊಂದಿಕೆಯಾದರೆ ಮಾತ್ರ ಆಧಾರ್ ಮತ್ತು ಪ್ಯಾನ್ ಅನ್ನು ಲಿಂಕ್ ಮಾಡಲಾಗುತ್ತದೆ.

ಆಧಾರ್-ಪ್ಯಾನ್‌ ಲಿಂಕ್‌ ಆಗಿದ್ಯಾ ಎನ್ನುವುದನ್ನು ಪರಿಶೀಲಿಸುವ ವಿಧಾನ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar Status’ ಆಪ್ಶನ್‌ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಪ್ಯಾನ್‌ ಮತ್ತು ಆಧಾರ್‌ ನಂಬರ್‌ ನಮೂದಿಸಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ಬಳಿಕ ‘View Link Aadhaar Status’ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಆಗ ಒಂದು ವೇಳೆ ಲಿಂಕ್‌ ಆಗಿದ್ದರೆ ನಿಮ್ಮ ಪ್ಯಾನ್‌ (ಪ್ಯಾನ್‌ ನಂಬರ್‌) ಆಧಾರ್‌ ನಂಬರ್‌ (ಆಧಾರ್‌ ನಂಬರ್‌ನ ಅಂಕಿ)ನೊಂದಿಗೆ ಲಿಂಕ್‌ ಆಗಿದೆ ಎನ್ನುವ ಸಂದೇಶ ಮೂಡುತ್ತದೆ.

ಕಡ್ಡಾಯ ಯಾಕೆ?

ನಕಲಿ ಪ್ಯಾನ್‌ ಕಾರ್ಡ್‌ಗಳನ್ನು ತಡೆಗಟ್ಟಲು, ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ಜಾರಿಗೆ ತರುವ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆಯು ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡುವುದನ್ನು ಕಡ್ಡಾಯಗೊಳಿಸಿದೆ. ಹೀಗಾಗಿ ಇದುವರೆಗೆ ಲಿಂಕ್‌ ಮಾಡದಿದ್ದರೆ ಕೂಡಲೇ ಮಾಡಿಸಿ. ಕೊನೆಯ ಕ್ಷಣದ ಗೊಂದಲಗಳನ್ನು ತಪ್ಪಿಸಲು ಅಂತಿಮ ದಿನಾಂಕದವರೆಗೆ ಕಾಯುವ ಬದಲು ಕೂಡಲೇ ಲಿಂಕ್‌ ಮಾಡಿ ಎಂದು ತಜ್ಞರು ಸಲಹೆ ನೀಡುತ್ತಾರೆ.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Continue Reading

ದೇಶ

Tata Motors: ಟಾಟಾ ಮೋಟಾರ್ಸ್‌ನಿಂದ ಹೊಸ ಮೈಲುಗಲ್ಲು; 333 ಪೇಟೆಂಟ್‌ಗಳಿಗೆ ಅನುಮೋದನೆ

Tata Motors: ಟಾಟಾ ಮೋಟರ್ಸ್ ಕಂಪನಿಯು ದಾಖಲೆಯ ಅತ್ಯಧಿಕ 333 ಪೇಟೆಂಟ್‌ಗಳಿಗೆ ಅನುಮೋದನೆ ಪಡೆದುಕೊಂಡಿದ್ದು, ಇಲ್ಲಿಯವರೆಗೆ ಒಟ್ಟು 850ಕ್ಕೂ ಹೆಚ್ಚು ಪೇಟೆಂಟ್‌ಗಳಿಗೆ ಅನುಮೋದನೆ ಪಡೆದಂತಾಗಿದೆ. ಹೊಸ ಹೊಸ ಉತ್ಪನ್ನಗಳು, ಪ್ರಕ್ರಿಯೆ ನಾವೀನ್ಯತೆಗಳು, ಕನೆಕ್ಟಿವಿಟಿ, ಎಲೆಕ್ಟ್ರಿಫಿಕೇಶನ್, ಸಸ್ಟೇನೇಬಿಲಿಟಿ ಅಂಡ್ ಸೇಫ್ಟಿ (CESS) ಯಂತಹ ಪ್ರಮುಖ ಆಟೋಮೋಟಿವ್ ಟ್ರೆಂಡ್‌ಗಳಲ್ಲಿನ ಸವಾಲುಗಳನ್ನು ಎದುರಿಸುವ ಪರಿಹಾರಗಳನ್ನು ಕಂಡುಕೊಳ್ಳುವ ಕುರಿತಾದ ವಿಸ್ತಾರವಾದ ಕ್ಷೇತ್ರಗಳಲ್ಲಿ ಆವಿಷ್ಕಾರ ತರುವ ನಿಟ್ಟಿನಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಗಿದೆ.

VISTARANEWS.COM


on

Tata Motors gets approval for 333 patents
Koo

ಬೆಂಗಳೂರು: ಭಾರತದ ಮುಂಚೂಣಿಯಲ್ಲಿರುವ ಆಟೋಮೋಬೈಲ್ ಕಂಪನಿ ಟಾಟಾ ಮೋಟಾರ್ಸ್ (Tata Motors) ಇಂಟೆಲೆಕ್ಚುವಲ್ ಪ್ರಾಪರ್ಟಿ ರೈಟ್ಸ್ (IPR)ನಲ್ಲಿ ಮತ್ತೊಂದು ಮಹತ್ವದ ಹೊಸ ಮೈಲುಗಲ್ಲು ಸ್ಥಾಪಿಸಿದೆ.

2024ನೇ ಹಣಕಾಸು ಸಾಲಿನಲ್ಲಿ ಸಂಸ್ಥೆಯು ದಾಖಲೆಯ 222 ಪೇಟೆಂಟ್‌ಗಳು ಮತ್ತು 117 ಡಿಸೈನ್ ಅರ್ಜಿಗಳನ್ನು ಸಲ್ಲಿಸಿದೆ. ಇದು ಸಂಸ್ಥೆಯ ಇತಿಹಾಸದಲ್ಲೇ ಅತ್ಯಧಿಕ ಎನಿಸಿದೆ. ಹೊಸ ಹೊಸ ಉತ್ಪನ್ನಗಳು, ಪ್ರಕ್ರಿಯೆ ನಾವೀನ್ಯತೆಗಳು, ಕನೆಕ್ಟಿವಿಟಿ, ಎಲೆಕ್ಟ್ರಿಫಿಕೇಶನ್, ಸಸ್ಟೇನೇಬಿಲಿಟಿ ಅಂಡ್ ಸೇಫ್ಟಿ (CESS) ಯಂತಹ ಪ್ರಮುಖ ಆಟೋಮೋಟಿವ್ ಟ್ರೆಂಡ್‌ಗಳಲ್ಲಿನ ಸವಾಲುಗಳನ್ನು ಎದುರಿಸುವ ಪರಿಹಾರಗಳನ್ನು ಕಂಡುಕೊಳ್ಳುವ ಕುರಿತಾದ ವಿಸ್ತಾರವಾದ ಕ್ಷೇತ್ರಗಳಲ್ಲಿ ಆವಿಷ್ಕಾರ ತರುವ ನಿಟ್ಟಿನಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಗಿದೆ.

ಇದನ್ನೂ ಓದಿ: Lok Sabha Election 2024: ಆರತಕ್ಷತೆಯಲ್ಲಿ ವಧು-ವರರಿಂದ ಮತದಾನ ಜಾಗೃತಿ

ಇದಲ್ಲದೇ, ಪವರ್ ಟ್ರೇನ್, ಬಾಡಿ & ಟ್ರಿಮ್, ಸಸ್ಪೆನ್ಷನ್, ಬ್ರೇಕ್ಸ್, ಎಚ್‌.ವಿ.ಎ.ಸಿ. (HVAC) ಮತ್ತು ಮಾಲಿನ್ಯ ನಿಯಂತ್ರಣ ಸೇರಿದಂತೆ ವಿವಿಧ ವಾಹನ ಸಿಸ್ಟಂಗಳನ್ನೂ ಈ ಅರ್ಜಿಗಳು ಒಳಗೊಂಡಿವೆ. ಇದೇ ವೇಳೆ ಟಾಟಾ ಮೋಟರ್ಸ್ ದಾಖಲೆಯ ಅತ್ಯಧಿಕ 333 ಪೇಟೆಂಟ್‌ಗಳಿಗೆ ಅನುಮೋದನೆ ಪಡೆದುಕೊಂಡಿರುವುದು ಹೆಗ್ಗಳಿಕೆಯಾಗಿದೆ. ಈ ಮೂಲಕ ಟಾಟಾ ಮೋಟರ್ಸ್ ಇಲ್ಲಿವರೆಗೆ ಒಟ್ಟು 850ಕ್ಕೂ ಹೆಚ್ಚು ಪೇಟೆಂಟ್‌ಗಳಿಗೆ ಅನುಮೋದನೆ ಪಡೆದಂತಾಗಿದೆ.

ಇದು ಎಂಜಿನಿಯರಿಂಗ್ ಪರಿಣತಿ, ಕ್ಲೀನ್ ಪವರ್‌ಟ್ರೇನ್‌ಗಳು, ವಿನ್ಯಾಸ ಸಂಪರ್ಕ ಮತ್ತು ಸ್ಮಾರ್ಟ್ ಸುರಕ್ಷತೆ ವೈಶಿಷ್ಟ್ಯಗಳಿಗೆ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಈ ಮೂಲಕ ನೈಜ-ವಿಶ್ವದ ಅಗತ್ಯತೆಗಳಿಗೆ ಅನುಗುಣವಾಗಿ ನಾವೀನ್ಯತೆಗಳನ್ನು ಅಳವಡಿಕೆ ಮಾಡುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗ್ರಾಹಕರ ಹಿತರಕ್ಷಣೆ ಮತ್ತು ಪರಿಸರ ರಕ್ಷಣೆಗೆ ಹೆಚ್ಚು ಆದ್ಯತೆ ನೀಡುತ್ತಿರುವ ಟಾಟಾ ಮೋಟರ್ಸ್, ಇದಕ್ಕೆ ಪೂರಕವಾಗಿ ಉದ್ದೇಶಿತ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದೆ. ಇದರ ಪರಿಣಾಮ ಕಂಪನಿಯು ಕಾರ್ಯದಕ್ಷತೆ, ಹಸಿರು ಮತ್ತು ಸುರಕ್ಷಿತ ವಾಹನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ.

ಇದನ್ನೂ ಓದಿ: World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

ಈ ಮೂಲಕ ಬಳಕೆದಾರರು ಮತ್ತು ಉದ್ಯಮದ ಪರಿವರ್ತನೆಗೆ ಪ್ರಯೋಜನವಾಗುವಂತೆ ಕಾರ್ಯನಿರ್ವಹಿಸುತ್ತಿದೆ. 2024 ನೇ ಹಣಕಾಸು ಸಾಲಿನಲ್ಲಿ ಟಾಟಾ ಮೋಟರ್ಸ್ ತನ್ನ ಇಂಟಲೆಕ್ಚುವಲ್ ಪ್ರಾಪರ್ಟಿ ರೈಟ್ಸ್ (IPR) ಪರಿಣತಿಗಾಗಿ ಐದು ಪ್ರತಿಷ್ಠಿತ ಪ್ರಶಸ್ತಿಗಳನ್ನು ಹಾಗೂ ಜಾಗತಿಕ ಮಾನ್ಯತೆಯನ್ನು ಗಳಿಸಿದೆ.

ಇದನ್ನೂ ಓದಿ: DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

ಈ ಕುರಿತು ಮಾತನಾಡಿದ ಟಾಟಾ ಮೋಟರ್ಸ್‌ನ ಅಧ್ಯಕ್ಷ & ಚೀಫ್ ಟೆಕ್ನಾಲಾಜಿ ಆಫೀಸರ್ ರಾಜೇಂದ್ರ ಪೇಟ್ಕರ್, ಟಾಟಾ ಮೋಟರ್ಸ್‌ ದಾಖಲೆ ಸಂಖ್ಯೆಯ ಪೇಟೆಂಟ್‌ಗಳನ್ನು ಸಲ್ಲಿಸಿ ಮತ್ತು ಮಂಜೂರು ಪಡೆಯುವುದರೊಂದಿಗೆ ನಾವು ಆಟೋಮೋಟಿವ್ ಶ್ರೇಷ್ಠತೆಯನ್ನು ಮರುವ್ಯಾಖ್ಯಾನಿಸುವುದನ್ನು ಮುಂದುವರಿಸುತ್ತೇವೆ. ನಮ್ಮ ಅತ್ಯಾಧುನಿಕ ತಂತ್ರಜ್ಞಾನಗಳು, ಹಸಿರು ವಾಹನಗಳು ಮತ್ತು ಗ್ರಾಹಕ ಕೇಂದ್ರಿತ ವಿಧಾನವು ನಮ್ಮನ್ನು ಉದ್ಯಮದಲ್ಲಿ ಮುಂಚೂಣಿಯಲ್ಲಿರಿಸಿದೆ. ಚಲನಶೀಲತೆ ವಿಕಸನಗೊಳಿಸುವ ನಿಟ್ಟಿನಲ್ಲಿ ಟಾಟಾ ಮೋಟರ್ಸ್ ಮುಂಚೂಣಿಯಲ್ಲಿದೆ. ಈ ಮೂಲಕ ಎಲ್ಲರಿಗೂ ಸ್ಮಾರ್ಟ್, ಹೆಚ್ಚು ಸಂಪರ್ಕದ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ದಾಪುಗಾಲು ಇಟ್ಟಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Lok Sabha Election 2024 2 villagers who boycotted voting cast their votes in evening
ಕರ್ನಾಟಕ9 mins ago

Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

Modi in Karnataka stay in Belagavi tomorrow and Huge gatherings at five places
Lok Sabha Election 202439 mins ago

Modi in Karnataka: ನಾಳೆ ರಾಜ್ಯಕ್ಕೆ ಮೋದಿ, ಬೆಳಗಾವಿಯಲ್ಲಿ ವಾಸ್ತವ್ಯ; 2 ದಿನ ಪ್ರವಾಸ, 5 ಕಡೆ ಬೃಹತ್‌ ಸಮಾವೇಶ

BJP National President JP Nadda Election campaign in Surapura
ಕರ್ನಾಟಕ47 mins ago

Lok Sabha Election 2024: ದೇಶದ ರಕ್ಷಣೆಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಿ: ಜೆ.ಪಿ.ನಡ್ಡಾ

deepfake
ತಂತ್ರಜ್ಞಾನ55 mins ago

Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

Lok Sabha Election 2024 Bjp workers clash in Chikmagalur
Lok Sabha Election 20241 hour ago

Lok Sabha Election 2024: ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

lok sabha election
ಪ್ರಮುಖ ಸುದ್ದಿ2 hours ago

Lok Sabha Election : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ; ದಾಖಲೆ ಪ್ರಮಾಣದಲ್ಲಿ ಮತ ಚಲಾವಣೆ

Karnataka weather Forecast
ಮಳೆ2 hours ago

Karnataka Weather : ಹಾಟ್‌ ಸಿಟಿಯಾದ ಬೆಂಗಳೂರು; ಇನ್ನು 3 ದಿನಗಳು ಈ ಜಿಲ್ಲೆಗಳು ಕಾದ ಕೆಂಡ

Lok Sabha Election 2024
ಕರ್ನಾಟಕ2 hours ago

Lok Sabha Election 2024: ಸಂಜೆ 5 ಗಂಟೆವರೆಗೆ ಶೇ.63.90 ಮತದಾನ; ಮಂಡ್ಯ ಕ್ಷೇತ್ರದಲ್ಲಿ ಗರಿಷ್ಠ!

Flower Crown Trend
ಫ್ಯಾಷನ್2 hours ago

Flower Crown Trend: ಬಣ್ಣಬಣ್ಣದ ಫಂಕಿ ಫ್ಲವರ್‌ ಕ್ರೌನ್‌ಗೆ ಯುವತಿಯರು ಫಿದಾ

Rinku Singh
ಕ್ರೀಡೆ2 hours ago

Rinku Singh : ಹಠ ಹಿಡಿದು ಕೊಹ್ಲಿಯಿಂದ ಮತ್ತೊಂದು ಬ್ಯಾಟ್ ಪಡೆದುಕೊಂಡ ರಿಂಕು ಸಿಂಗ್​​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ8 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20249 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20249 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ15 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌