Gold Rate Today: ಬೆಂಗಳೂರಲ್ಲಿ ಹೆಚ್ಚಿದ ಬೆಳ್ಳಿ ಬೆಲೆ; ಎಷ್ಟಿದೆ ಇಂದಿನ ಬಂಗಾರದ ದರ? - Vistara News

ವಾಣಿಜ್ಯ

Gold Rate Today: ಬೆಂಗಳೂರಲ್ಲಿ ಹೆಚ್ಚಿದ ಬೆಳ್ಳಿ ಬೆಲೆ; ಎಷ್ಟಿದೆ ಇಂದಿನ ಬಂಗಾರದ ದರ?

Silver Rate: ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಏರಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ನಿನ್ನೆಗಿಂತಲೂ 175 ರೂ. ಹೆಚ್ಚಿದೆ. 1 ಗ್ರಾಂ ಬೆಳ್ಳಿ ಬೆಲೆ 75.75 ರೂಪಾಯಿ ಇದೆ.

VISTARANEWS.COM


on

Gold Rate Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿನ್ನ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಭಾರತದಲ್ಲಂತೂ ಚಿನ್ನವನ್ನು ಹೂಡಿಕೆ, ಅಲಂಕಾರಕ್ಕಾಗಿ ಯತೇಚ್ಛವಾಗಿ ಬಳಕೆ ಮಾಡುತ್ತಾರೆ. ಮದುವೆ ಸಮಾರಂಭ, ಕೆಲವು ಹಬ್ಬಗಳಲ್ಲಿ ಈ ಲೋಹಕ್ಕೆ ವಿಶೇಷ ಪ್ರಾಶಸ್ತ್ಯ ಇದೆ. ಅಷ್ಟೇ ಅಲ್ಲ, ಚಿನ್ನ ಆಪತ್ಕಾಲದ ರಕ್ಷಕ. ಕೈಯಲ್ಲಿ ಹಣವಿದ್ದಾಗ ಬಂಗಾರ ಕೊಂಡು ಇಟ್ಟುಕೊಂಡರೆ, ಅದು ಮುಂದೆ ಯಾವುದೇ ಆರ್ಥಿಕ ಸಂಕಷ್ಟದಲ್ಲಿ ನಮ್ಮ ಕೈ ಹಿಡಿಯುತ್ತದೆ ಎಂಬ ನಂಬಿಕೆ ಭಾರತೀಯರದ್ದು. ಹೀಗಾಗಿ ಚಿನ್ನವನ್ನು ಕೊಳ್ಳಲು ಜನ ಆ ಕಾಲ, ಈ ಕಾಲ ಎಂದು ನೋಡುವುದಿಲ್ಲ. ಅಂಥ ಚಿನ್ನಪ್ರಿಯರು, ಬಂಗಾರ ಖರೀದಿಸಲು ಪ್ಲ್ಯಾನ್ ಮಾಡುತ್ತಿರುವವರಿಗೆ ಇಂದು ಗುಡ್​ನ್ಯೂಸ್​ ಇದೆ. ಇಂದು ಚಿನ್ನದ ದರ (Gold Rate Today) ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.

ಗುಡ್​ ರಿಟರ್ನ್ಸ್​ ವೆಬ್​ಸೈಟ್​ ಪ್ರಕಾರ ಭಾರತದಲ್ಲಿ ಇಂದು 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 100 ರೂಪಾಯಿ ಇಳಿಕೆಯಾಗಿದೆ. ನಿನ್ನೆ 55,600 ರೂಪಾಯಿ ಇತ್ತು. ಅದು ಇಂದು 55,500 ರೂ.ಗೆ ಇಳಿಕೆಯಾಗಿದೆ. ಹಾಗೇ, 22 ಕ್ಯಾರೆಟ್​ನ 1 ಗ್ರಾಂ ಚಿನ್ನದ ಬೆಲೆ ನಿನ್ನೆಗಿಂತಲೂ 10 ರೂ. ಇಳಿಕೆಯಾಗಿದ್ದ 5,550 ರೂ. ಆಗಿದೆ. 8 ಗ್ರಾಂ.ಗೆ 44,400 ರೂ., 100 ಗ್ರಾಂ.ಗೆ 5,55,000 ರೂ. ಇದೆ. ಹಾಗೇ, ದೇಶದಲ್ಲಿ 24 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ ಕೂಡ ನಿನ್ನೆಗಿಂತಲೂ 100 ರೂ.ಕಡಿಮೆಯಾಗಿದ್ದು, 60,550 ರೂ.ಕ್ಕೆ ಮಾರಾಟವಾಗುತ್ತಿದೆ. 1 ಗ್ರಾಂ.ಗೆ 6,055ರೂ., 8 ಗ್ರಾಂ.ಗೆ 48,440 ರೂ, 100 ಗ್ರಾಂ.ಗೆ 6,05,500 ರೂಪಾಯಿ ಇದೆ. ಇನ್ನು ಇಂದು ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. 1ಗ್ರಾಂ ಬೆಳ್ಳಿ ಬೆಲೆ 74.50 ರೂ., 8 ಗ್ರಾಂ-596 ರೂ., 10 ಗ್ರಾಂ.-745 ರೂ., 100 ಗ್ರಾಂ- 7,450 ರೂ. ಮತ್ತು 1 ಕೆಜಿಗೆ 74,500 ರೂ.ಇದೆ.

ಬೆಂಗಳೂರಿನಲ್ಲಿ ಎಷ್ಟಿದೆ ಚಿನ್ನ-ಬೆಳ್ಳಿ ದರ?

22 ಕ್ಯಾರೆಟ್​ ಚಿನ್ನ: 1 ಗ್ರಾಂ- 5,550 ರೂ., 8 ಗ್ರಾಂ-44,440 ರೂ., 10 ಗ್ರಾಂ-55,550 ರೂ., 100 ಗ್ರಾಂ-5,55,500 ರೂ.
24 ಕ್ಯಾರೆಟ್​ ಚಿನ್ನ: 1 ಗ್ರಾಂ-6,060 ರೂ., 8 ಗ್ರಾಂ-48,480 ರೂ., 10 ಗ್ರಾಂ-60,600 ರೂ., 100 ಗ್ರಾಂ-6,06,000 ರೂ.
ಬೆಳ್ಳಿ ದರ: ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆ ಏರಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ನಿನ್ನೆಗಿಂತಲೂ 175 ರೂ. ಹೆಚ್ಚಿದೆ. 1 ಗ್ರಾಂ ಬೆಳ್ಳಿ ಬೆಲೆ 75.75 ರೂ., 8 ಗ್ರಾಂ.-606 ರೂ., 10 ಗ್ರಾಂ-757.75 ರೂ., 100 ಗ್ರಾಂ-7,575 ರೂ., 1 ಕೆಜಿ-75,750 ರೂಪಾಯಿ ಆಗಿದೆ.

ಇದನ್ನೂ ಓದಿ: Gold price today : ಚಿನ್ನದ ದರದಲ್ಲಿ ಅಲ್ಪ ಇಳಿಕೆ, ಬೆಳ್ಳಿ 400 ರೂ. ಹೆಚ್ಚಳ

22 ಕ್ಯಾರೆಟ್​ ಚಿನ್ನಕ್ಕೂ-24 ಕ್ಯಾರೆಟ್​ ಚಿನ್ನಕ್ಕೂ ಇರುವ ವ್ಯತ್ಯಾಸ

ಸಾಮಾನ್ಯವಾಗಿ 22 ಕ್ಯಾರೆಟ್​ ಚಿನ್ನಕ್ಕೂ, 24 ಕ್ಯಾರೆಟ್​ ಚಿನ್ನಕ್ಕೂ ದರದಲ್ಲಿ ವ್ಯತ್ಯಾಸ ಇರುತ್ತದೆ. 22 ಕ್ಯಾರೆಟ್​ ಚಿನ್ನಕ್ಕೆ ಸ್ವಲ್ಪ ಕಡಿಮೆ ಬೆಲೆ ಇದ್ದರೆ, 24 ಕ್ಯಾರೆಟ್​ ಬಂಗಾರಕ್ಕೆ ಬೆಲೆ ಹೆಚ್ಚಿರುತ್ತದೆ. ಆದರೆ 22 ಕ್ಯಾರೆಟ್​ಗೂ, 24 ಕ್ಯಾರೆಟ್​ಗೂ ನಡುವಿನ ವ್ಯತ್ಯಾಸದ ಅರಿವು ಅನೇಕ ಗ್ರಾಹಕರಿಗೆ ಇರುವುದಿಲ್ಲ. ಇದು ಮತ್ತೇನಲ್ಲ, 22 ಕ್ಯಾರೆಟ್​ ಎಂದರೆ ಅದರಲ್ಲಿ ಶೇ.91ರಷ್ಟು ಶುದ್ಧ ಚಿನ್ನ ಇದ್ದರೆ, 24 ಕ್ಯಾರೆಟ್​ನಲ್ಲಿ ಶೇ.99.9ರಷ್ಟು ಶುದ್ಧ ಚಿನ್ನ ಇರುತ್ತದೆ. 22 ಕ್ಯಾರೆಟ್​ ಚಿನ್ನದ ಆಭರಣಗಳಲ್ಲಿ ಇನ್ನುಳಿದ ಶೇ.9ರಷ್ಟು ಭಾಗ ತಾಮ್ರ, ಬೆಳ್ಳಿ, ಸತುವಿನ ಅಂಶ ಇರುತ್ತದೆ. 24 ಕ್ಯಾರೆಟ್​​ನ ಚಿನ್ನವನ್ನು ಅಪರಂಜಿ ಎಂದೂ ಕರೆಯಲಾಗುತ್ತದೆ, ಇದನ್ನು ಆಭರಣಗಳಲ್ಲಿ ಬಳಕೆ ಮಾಡುವುದಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Money Guide: ಯಾವುದೇ ಬ್ಯಾಂಕ್‌ನಿಂದ ಸಾಲ ಪಡೆಯಲು ಸಿಬಿಲ್‌ ಸ್ಕೋರ್‌ ಮುಖ್ಯ. ಉತ್ತಮ ಸಿಬಿಲ್ ಸ್ಕೋರ್ ಅನ್ನು ನೀವು ಹೊಂದಿದ್ದರೆ ಸುಲಭವಾಗಿ ಸಾಲ ಪಡೆಯಬಹುದು. ಹೀಗಾಗಿ ಸಿಬಿಲ್ ಸ್ಕೋರ್‌ ಅನ್ನು 750ಕ್ಕಿಂತ ಹೆಚ್ಚು ಕಾಯ್ದುಕೊಳ್ಳುವುದು ಅನಿವಾರ್ಯ. ಹಾಗಾದರೆ ಹಾಗಾದರೆ ಸಿಬಿಲ್ ಸ್ಕೋರ್‌ ಪರಿಶೀಲಿಸುವುದು ಹೇಗೆ? ಸಿಬಿಲ್‌ ಸ್ಕೋರ್‌ ವಿಚಾರದಲ್ಲಿ ಯಾವೆಲ್ಲ ಅಂಶಗಳನ್ನು ಗಮನಿಸಬೇಕು? ಒಂದು ಪ್ಯಾನ್‌ ಕಾರ್ಡ್‌ ಇಲ್ಲದಿದ್ದರೆ ಏನು ಮಾಡಬೇಕು? ಚಿಂತಿಸಬೇಡಿ. ನಿಮ್ಮೆಲ್ಲ ಗೊಂದಲಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ಯಾವುದೇ ಬ್ಯಾಂಕ್‌ನಿಂದ ಸಾಲ ಪಡೆಯಲು ಸಿಬಿಲ್‌ ಸ್ಕೋರ್‌ (ಕ್ರೆಡಿಟ್ ಇನ್ಫರ್ಮೇಷನ್ ಬ್ಯೂರೋ (ಇಂಡಿಯಾ) ಲಿಮಿಟೆಡ್-CIBIL) ಮುಖ್ಯವಾಗುತ್ತದೆ. ಅಂದರೆ ಉತ್ತಮ ಸಿಬಿಲ್ ಸ್ಕೋರ್ ಅನ್ನು ನೀವು ಹೊಂದಿದ್ದರೆ ಸುಲಭವಾಗಿ ಸಾಲ ಪಡೆಯಬಹುದು. ಹೀಗಾಗಿ ಸಿಬಿಲ್ ಸ್ಕೋರ್‌ ಅನ್ನು 750ಕ್ಕಿಂತ ಹೆಚ್ಚು ಕಾಯ್ದುಕೊಳ್ಳುವುದು ಅನಿವಾರ್ಯ. ಸಿಬಿಲ್ ಸ್ಕೋರ್ ಇಲ್ಲದಿದ್ದರೆ ನಿಮ್ಮ ಸಾಲದ ಅರ್ಜಿ ತಿರಸ್ಕೃತಗೊಳ್ಳುವ ಸಾಧ್ಯತೆಯೂ ಇದೆ. 300ರಿಂದ 900ರ ನಡುವೆ ಇರುವ ಸಿಬಿಲ್ ಸ್ಕೋರ್ ಹೆಚ್ಚಾದಷ್ಟೂ ಒಳ್ಳೆಯದು. ಹಾಗಾದರೆ ಸಿಬಿಲ್ ಸ್ಕೋರ್‌ ಪರಿಶೀಲಿಸುವುದು ಹೇಗೆ? ಸಿಬಿಲ್‌ ಸ್ಕೋರ್‌ ವಿಚಾರದಲ್ಲಿ ಯಾವೆಲ್ಲ ಅಂಶಗಳನ್ನು ಗಮನಿಸಬೇಕು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Money Guide).

ನಿಮ್ಮ ಬಳಿ ಪ್ಯಾನ್ ಕಾರ್ಡ್ ಲಭ್ಯವಿಲ್ಲದಿದ್ದರೆ ಸಿಬಿಲ್ ಸ್ಕೋರ್ ಪಡೆಯುವುದು ಬಹುದೊಡ್ಡ ಸವಾಲು. ಹೀಗಾಗಿ ಸುಲಭವಾಗಿ, ಪ್ಯಾನ್ ಕಾರ್ಡ್ ಇಲ್ಲದೆ ನಿಮ್ಮ ಸಿಬಿಲ್ ಸ್ಕೋರ್ ಅನ್ನು ಹೇಗೆ ಪರಿಶೀಲಿಸಬಹುದು ಎನ್ನುವುದರ ಹಂತ ಹಂತದ ಮಾಹಿತಿ ಇಲ್ಲಿದೆ.

  • ಅಧಿಕೃತ ಸಿಬಿಲ್ ವೆಬ್‌ಸೈಟ್‌ https://www.cibil.com/ಗೆ ಭೇಟಿ ನೀಡಿ.
  • ‘Personal CIBIL Score’ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಬಳಿಕ ‘Get Your Free CIBIL Score’ ಆಪ್ಶನ್‌ ಆಯ್ಕೆ ಮಾಡಿ ಸೂಚನೆಗಳನ್ನು ಅನುಸರಿಸಿ ಕೇಳಿದ ಮಾಹಿತಿಗಳನ್ನು ಭರ್ತಿ ಮಾಡಿ.
  • ಒಂದು ವೇಳೆ ನಿಮ್ಮ ಬಳಿ ಪ್ಯಾನ್‌ ಕಾರ್ಡ್‌ ಇಲ್ಲ ಎಂದಾದರೆ ಪರ್ಯಾಯ ಡಾಕ್ಯುಮೆಂಟ್‌ಗಳಾದ ಪಾಸ್‌ಪೋರ್ಟ್‌, ವೋಟರ್‌ ಐಡಿ, ಡ್ರೈವಿಂಗ್‌ ಲೈಸನ್ಸ್‌ ಅಥವಾ ರೇಷನ್‌ ಕಾರ್ಡ್‌ ಅನ್ನು ಆಯ್ಕೆ ಮಾಡಬಹುದು. ನೀವು ಆಯ್ಕೆ ಮಾಡಿಕೊಂಡ ಡಾಕ್ಯುಮೆಂಟ್‌ನ ನಂಬರ್‌ ಅನ್ನು ಇಲ್ಲಿ ನಮೂದಿಸಿ.
  • ಈಗ ನಿಮ್ಮ ಡೇಟ್‌ ಆಫ್‌ ಬರ್ತ್‌, ಪಿನ್‌ ಕೋಡ್‌ ಮತ್ತು ರಾಜ್ಯವನ್ನು ನಮೂದಿಸಿ. ಜತೆಗೆ ಮೊಬೈಲ್‌ ನಂಬರ್‌ ಎಂಟ್ರಿ ಮಾಡಿ ‘Accept and Continueʼ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಮೊಬೈಲ್‌ಗೆ ಬಂದ ಒಟಿಪಿಯನ್ನು ನಮೂದಿಸಿ ‘Continueʼ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ‘Yes’ ಅಥವಾ ‘No’ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಈಗ ನಿಮ್ಮ ಹೆಸರು ಯಶಸ್ವಿಯಾಗಿ ನೋಂದಣಿಯಾಗಿರುವ ಸಂದೇಶ ಪರದೆ ಮೇಲೆ ಮೂಡುತ್ತದೆ.
  • ಈಗ ‘Go to Dashboard’ ಆಯ್ಕೆಯನ್ನು ಕ್ಲಿಕ್‌ ಮಾಡಿದರೆ ನಿಮ್ಮ ಸಿಬಿಲ್‌ ಸ್ಕೋರ್‌ ಅನ್ನು ವೀಕ್ಷಿಸಬಹುದು.

ಗೂಗಲ್‌ ಪೇಯಲ್ಲಿ ಹೀಗೆ ಚೆಕ್‌ ಮಾಡಿ

  • ಮೊಬೈಲ್‌ ಫೋನ್‌ನಲ್ಲಿ ಗೂಗಲ್‌ ಪೇ ಅಪ್ಲಿಕೇಷನ್‌ ಓಪನ್‌ ಮಾಡಿ.
  • Manage your money ಆಯ್ಕೆಯನ್ನು ಕೆಳಗಡೆ ಕಾಣಿಸುವ ʼCheck your CIBIL score for freeʼ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ಪ್ಯಾನ್‌ ಕಾರ್ಡ್‌ನಲ್ಲಿ ಇರುವಂತೆ ನಿಮ್ಮ ಹೆಸರು ನಮೂದಿಸಿ.
  • ನಿಮ್ಮ ಗುರುತನ್ನು ಅಂಗಿಕರಿಸಿದರೆ ಪರದೆ ಮೇಲೆ ಸಿಬಿಲ್‌ ಸ್ಕೋರ್‌ ಕಂಡು ಬರುತ್ತದೆ.

ಫೋನ್‌ ಪೇ, ಪೇಟಿಎಂ ಅಪ್ಲಿಕೇಷನ್‌ನಲ್ಲಿಯೂ ಇದೇ ರೀತಿ ವೀಕ್ಷಿಸಬಹುದು.

ಸ್ಕೋರ್‌ ಹೆಚ್ಚಿಸುವುದು ಹೇಗೆ?

  • ನಿಮ್ಮ ಸಿಬಿಲ್ ಸ್ಕೋರ್ ಅನ್ನು ಆಗಾಗ ಪರಿಶೀಲಿಸಿ. ಇದರಿಂದ ನೀವು ಯಾವ ಮಟ್ಟದಲ್ಲಿದ್ದೀರಿ ಎಂಬುದು ತಿಳಿಯುತ್ತದೆ.
  • ನಿಮ್ಮ ಇಎಂಐಗಳು ಮತ್ತು ಕ್ರೆಡಿಟ್ ಕಾರ್ಡ್ ಬಿಲ್‌ಗಳನ್ನು ನಿಯಮಿತವಾಗಿ ಪಾವತಿಸಿ; ಯಾವುದೇ ಕಾರಣಕ್ಕೂ ತಪ್ಪಿಸಬೇಡಿ ಮತ್ತು ವಿಳಂಬ ಮಾಡಬೇಡಿ.
  • ನಿಮ್ಮ ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚು ಬಳಸಬೇಡಿ ಮತ್ತು ನಿಮ್ಮ ಕ್ರೆಡಿಟ್ ಬಳಕೆಯ ಅನುಪಾತವನ್ನು (ಸಿಯುಆರ್ ) 30% ಒಳಗೆ ಇರಿಸಿಕೊಳ್ಳಲು ಪ್ರಯತ್ನಿಸಿ.
  • ಕಡಿಮೆ ಅವಧಿಯಲ್ಲಿ ಬೇರೆ ಬೇರೆ ಸಾಲಗಳು ಅಥವಾ ಕ್ರೆಡಿಟ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಬೇಡಿ
  • ಅನಿವಾರ್ಯ ಆಗಿರದಿದ್ದರೆ, ನಿಮ್ಮ ಹಳೆಯ ಕ್ರೆಡಿಟ್ ಕಾರ್ಡ್‌ಗಳನ್ನು ರದ್ದುಗೊಳಿಸಬೇಡಿ
  • ಚೆಕ್‌ ಬೌನ್ಸ್‌ ಆಗದಂತೆ ನೋಡಿಕೊಳ್ಳಿ

ಪ್ರಯೋಜನಗಳೇನು?

ಹೆಚ್ಚಿನ ಸಿಬಿಲ್‌ ಸ್ಕೋರ್‌ ಇದ್ದರೆ ಪಡೆಯಬಹುದಾದ ಪ್ರಯೋಜನಗಳು:

  • ಸಾಲಗಳ ಮೇಲಿನ ಕಡಿಮೆ ಬಡ್ಡಿ ದರಗಳು
  • ಹೆಚ್ಚಿನ ಸಾಲದ ಮೊತ್ತಗಳು
  • ದೀರ್ಘ ಅಥವಾ ಹೆಚ್ಚು ಹೊಂದಿಕೊಳ್ಳುವ ಮರುಪಾವತಿ ಅವಧಿಯಂತಹ ನಿಯಮಗಳು
  • ತ್ವರಿತ ಸಾಲ ಮಂಜೂರಾತಿ ಪ್ರಕ್ರಿಯೆ
  • ಸಾಲ ನೀಡುವ ಸಂಸ್ಥೆಗಳ ಹೆಚ್ಚಿನ ಆಯ್ಕೆ

ಇದನ್ನೂ ಓದಿ: Money Guide: ಸಿಬಿಲ್‌ ಸ್ಕೋರ್‌ ಕಡಿಮೆ ಇದ್ದರೆ ಚಿಂತೆ ಬೇಡ; ಈ ಟಿಪ್ಸ್‌ ಫಾಲೋ ಮಾಡಿ ಹೆಚ್ಚಿಸಿಕೊಳ್ಳಿ

Continue Reading

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Gold Rate Today:ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,840ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,400 ಮತ್ತು ₹6,84,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,462 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,696 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,620 ಮತ್ತು ₹7,46,200 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ಅಕ್ಷಯ ತದಿಗೆಯ ಬಳಿಕ ಚಿನ್ನದ ಮಾರುಕಟ್ಟೆಯಲ್ಲಿ ದಿನೇ ದಿನೆ ಏರಿಳಿಕೆ ಸಾಮಾನ್ಯವಾಗಿದೆ. ನಿನ್ನೆ ದರ ಏರಿಕೆ ಆಗಿತ್ತು. ಬೆಲೆ ಯಥಾಸ್ಥಿತಿ ಕಾಪಾಡಿಕೊಂಡಿದೆ. ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ನಿನ್ನೆ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹80 ಹಾಗೂ ₹87 ಏರಿಕೆಯಾಗಿತ್ತು. ಇಂದು ನಿನ್ನೆಯಷ್ಟೇ ಬೆಲೆ ಯಥಾಸ್ಥಿತಿ ಕಾಪಾಡಿಕೊಂಡಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,840ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,400 ಮತ್ತು ₹6,84,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,462 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,696 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,620 ಮತ್ತು ₹7,46,200 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹89, ಎಂಟು ಗ್ರಾಂ ₹712 ಮತ್ತು 10 ಗ್ರಾಂ ₹890ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,900 ಮತ್ತು 1 ಕಿಲೋಗ್ರಾಂಗೆ ₹89,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,55074,770
ಮುಂಬಯಿ68,40074,620
ಬೆಂಗಳೂರು68,40074,620
ಚೆನ್ನೈ68,50074,730

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ಇದನ್ನೂ ಓದಿ: Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading

ಮನಿ-ಗೈಡ್

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

Money Guide: ಪಡಿತರ ಚೀಟಿ ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಪಡಿತರ ಚೀಟಿ (Ration Card) ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಜತೆಗೆ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪ್ಯಾನ್ ಕಾರ್ಡ್‌, ಚಾಲಕರ ಪರವಾನಗಿ ಇತ್ಯಾದಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಇದನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ‌ ವಿತರಿಸುತ್ತದೆ. ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ವಿವರ ಇಲ್ಲಿದೆ (Money Guide).

ಅಗತ್ಯ ದಾಖಲೆಗಳು

ಗ್ರಾಮಾಂತರ ಪ್ರದೇಶ

  • ನಿಮ್ಮ ಗ್ರಾಮ ಪಂಚಾಯಿತಿಯ ಹೆಸರು
  • ಈಗ ವಾಸ ಮಾಡುತ್ತಿರುವ ಮನೆ ವಿಳಾಸ
  • ಮನೆಯ ಆಸ್ತಿ ಸಂಖ್ಯೆ ವಿವರ
  • ಮನೆಯ ವಿದ್ಯುತ್‌ ಸಂಪರ್ಕದ ಬಿಲ್‌ ಪ್ರತಿ
  • ಕುಟುಂಬದ ಎಲ್ಲ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ನಿಮ್ಮ ಕುಟುಂಬಕ್ಕಿರುವ ಅಡುಗೆ ಅನಿಲದ ಸರಬರಾಜಿನ ಇತ್ತಿಚಿನ ಬಿಲ್/ರಶೀದಿ.

ನಗರ / ಪಟ್ಟಣ ಪ್ರದೇಶ

  • ನೀವು ವಾಸವಿರುವ ನಗರಸಭೆ / ಪುರಸಭೆ / ನಗರ ಪಾಲಿಕೆಯ ವಾರ್ಡ್ ಸಂಖ್ಯೆ
  • ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶದವರಾಗಿದ್ದಲ್ಲಿ (ಬಿಬಿಎಂಪಿ ಪ್ರದೇಶ) ನೀವು ಆಹಾರ ಇಲಾಖೆಯ ಯಾವ ವಲಯ ವ್ಯಾಪ್ತಿಯಲ್ಲಿದ್ದೀರಿ ಎಂಬ ಬಗ್ಗೆ ಮಾಹಿತಿ (ಇದನ್ನು ಸುಲಭವಾಗಿ ತಿಳಿಯಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯವರನ್ನು ಸಂಪರ್ಕಿಸಿ, ಇಲ್ಲವೇ ನಿಮ್ಮ ನೆರೆಹೊರೆಯವರಲ್ಲಿ ಈಗಾಗಲೇ ಲಭ್ಯವಿರುವ ಪಡಿತರ ಚೀಟಿಯನ್ನು ನೋಡಿ ತಿಳಿಯಿರಿ)
  • ನಿಮ್ಮ ಮನೆಯ ವಿದ್ಯುತ್ ಬಿಲ್
  • ನಿಮ್ಮ ನಿವಾಸದ ಪೂರ್ಣ ವಿಳಾಸ (ಅಂಚೆ ಪಿನ್ ಕೋಡ್‌ ಕಡ್ಡಾಯ). ಸ್ವಂತ ಮನೆಯಾಗಿದ್ದಲ್ಲಿ
  • ಮನೆಯ ಆಸ್ತಿ ಸಂಖ್ಯೆ ವಿವರ, ನಿಮ್ಮ ಮನೆ ವಿಳಾಸ ಹುಡುಕಲು ಸುಲಭವಾಗುವ ಹತ್ತಿರದ ಸ್ಥಳದ ಗುರುತು
  • ಕುಟುಂಬದ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ನಿಮ್ಮ ಸಂಪರ್ಕದ ಮೊಬೈಲ್ ನಂಬರ್ (ಕಡ್ಡಾಯ), ಸ್ವಂತ ಮೊಬೈಲ್ ಇಲ್ಲದಿದ್ದರೂ ನಿಮ್ಮನ್ನು ಸಂಪರ್ಕಿಸಬಹುದಾದ ಯಾವುದಾದರೂ ಮೊಬೈಲ್ ಸಂಖ್ಯೆಯನ್ನು ನೀಡುವುದು.
  • ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ
  • ನಿಮ್ಮ ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ

ಅರ್ಜಿ ಸಲ್ಲಿಸುವುದು ಹೇಗೆ?

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬೇಕಿದ್ದರೆ ನೀವು ಆಹಾರ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ಇ-ಸರ್ವಿಸ್‌ (ಇ-ಸೇವೆ) ಮೇಲೆ ಕ್ಲಿಕ್‌ ಮಾಡಬೇಕು. ಇದರಲ್ಲಿ ಕೆಳಗಡೆ ನಿಮಗೆ ಇ-ಪಡಿತರ ಚೀಟಿ ಆಯ್ಕೆ ಕಾಣುತ್ತದೆ. ಅದರಲ್ಲಿ ಕೆಳಗಿನ ಬಾಣದ ಗುರುತಿನ ಮೇಲೆ ಕ್ಲಿಕ್‌ ಮಾಡಿದರೆ ಹೊಸ ಪಡಿತರ ಚೀಟಿ ಎಂಬ ಆಯ್ಕೆ ತೋರಿಸುತ್ತದೆ. ಅಲ್ಲಿ ಎಪಿಎಲ್‌ ಹಾಗೂ ಬಿಪಿಎಲ್‌ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್‌ ಮಾಡಿದ ಬಳಿಕ ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕಾಗುತ್ತದೆ.

ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

Continue Reading

ದೇಶ

Reliance Jio: ಜಿಯೋ ಏರ್‌ಫೈಬರ್, ಜಿಯೋಫೈಬರ್, ಜಿಯೋ ಮೊಬಿಲಿಟಿ ಗ್ರಾಹಕರಿಗೆ ಫ್ಯಾನ್ ಕೋಡ್ ಒಟಿಟಿ ಸಬ್‌ಸ್ಕ್ರಿಪ್ಷನ್!

Reliance Jio: ಜಿಯೋದಿಂದ ದೇಶದಾದ್ಯಂತ ಇರುವ ಕ್ರೀಡಾ ಉತ್ಸಾಹಿಗಳಿಗೆ ಹೊಸ ಹಾಗೂ ರೋಮಾಂಚಕ ಡಿಜಿಟಲ್ ಅನುಭವವನ್ನು ಪರಿಚಯಿಸಲಾಗಿದ್ದು, ಜಿಯೋ ಏರ್‌ಫೈಬರ್, ಜಿಯೋಫೈಬರ್ ಹಾಗೂ ಜಿಯೋ ಮೊಬಿಲಿಟಿ ಪ್ರೀಪ್ರೇಯ್ಡ್ ಗ್ರಾಹಕರು ಇದೀಗ ‘ಫ್ಯಾನ್ ಕೋಡ್’ಎಂಬ ಪ್ರೀಮಿಯಂ ಕ್ರೀಡಾ ಒಟಿಟಿ ಅಪ್ಲಿಕೇಷನ್‌ಗೆ ಕಾಂಪ್ಲಿಮೆಂಟರಿ ಸಬ್‌ಸ್ಕ್ರಿಪ್ಷನ್ ಪಡೆಯಬಹುದಾಗಿದೆ. ಇದರಲ್ಲಿ ಫ್ಯಾನ್ ಕೋಡ್‌ನ ಎಕ್ಸ್‌ಕ್ಲೂಸಿವ್‌ ಫಾರ್ಮುಲಾ ಒನ್ ಪ್ರಸಾರದ ಕಂಟೆಂಟ್ ಸಂಪರ್ಕ ಸಹ ಪಡೆಯಬಹುದಾಗಿದ್ದು, ಜಿಯೋ ಏರ್‌ಫೈಬರ್, ಜಿಯೋಫೈಬರ್ ಮತ್ತು ಜಿಯೋ ಮೊಬಿಲಿಟಿಯ ಆಯ್ದ ಅರ್ಹ ಗ್ರಾಹಕರಿಗೆ ಮಾತ್ರ ಈ ಕಾಂಪ್ಲಿಮೆಂಟರಿ ಪ್ಲಾನ್ ಅನ್ವಯಿಸುತ್ತವೆ.

VISTARANEWS.COM


on

Fan Code OTT Subscription Now for Jio AirFiber JioFiber Jio Mobility Customers
Koo

ಮುಂಬೈ: ದೇಶದಾದ್ಯಂತ ಇರುವ ಕ್ರೀಡಾ ಉತ್ಸಾಹಿಗಳಿಗೆ ಜಿಯೋದಿಂದ ಹೊಸ ಹಾಗೂ ರೋಮಾಂಚಕ ಡಿಜಿಟಲ್ ಅನುಭವವನ್ನು ಪರಿಚಯಿಸಲಾಗಿದ್ದು, ಜಿಯೋ ಏರ್‌ಫೈಬರ್, ಜಿಯೋಫೈಬರ್ ಹಾಗೂ ಜಿಯೋ ಮೊಬಿಲಿಟಿ (Reliance Jio) ಪ್ರೀಪ್ರೇಯ್ಡ್ ಗ್ರಾಹಕರು ಇದೀಗ ‘ಫ್ಯಾನ್ ಕೋಡ್’ ಎಂಬ ಪ್ರೀಮಿಯಂ ಕ್ರೀಡಾ ಒಟಿಟಿ ಅಪ್ಲಿಕೇಷನ್‌ಗೆ ಕಾಂಪ್ಲಿಮೆಂಟರಿ ಸಬ್‌ಸ್ಕ್ರಿಪ್ಷನ್ ಪಡೆಯಬಹುದಾಗಿದೆ.

ಈ ಆಫರ್ ಮೂಲಕ ಜಿಯೋ ಗ್ರಾಹಕರು ರೋಮಾಂಚಕವಾದ ಮತ್ತು ಕ್ರೀಡೆಯಲ್ಲಿಯೇ ಅತ್ಯುತ್ತಮವಾದ ನೇರಪ್ರಸಾರದ ಅನುಭವವನ್ನು ಪಡೆಯಬಹುದು. ಇದರಲ್ಲಿ ಫ್ಯಾನ್ ಕೋಡ್‌ನ ಎಕ್ಸ್‌ಕ್ಲೂಸಿವ್‌ ಫಾರ್ಮುಲಾ ಒನ್ ಪ್ರಸಾರದ ಕಂಟೆಂಟ್ ಸಂಪರ್ಕ ಸಹ ಪಡೆಯಬಹುದಾಗಿದ್ದು, ಜಿಯೋ ಏರ್‌ಫೈಬರ್, ಜಿಯೋಫೈಬರ್ ಮತ್ತು ಜಿಯೋ ಮೊಬಿಲಿಟಿಯ ಆಯ್ದ ಅರ್ಹ ಗ್ರಾಹಕರಿಗೆ ಮಾತ್ರ ಈ ಕಾಂಪ್ಲಿಮೆಂಟರಿ ಪ್ಲಾನ್ ಅನ್ವಯಿಸುತ್ತವೆ.

ಜಿಯೋ ಏರ್‌ಫೈಬರ್ ಮತ್ತು ಜಿಯೋಫೈಬರ್ ಗ್ರಾಹಕರು 1199 ರೂಪಾಯಿ ಮತ್ತು ಮೇಲ್ಪಟ್ಟ ಪ್ಲಾನ್‌ಗೆ ಸಬ್‌ಸ್ಕ್ರಿಪ್ಷನ್ ಪಡೆದಾಗ ಕಾಂಪ್ಲಿಮೆಂಟರಿ ಆಗಿ ಫ್ಯಾನ್ ಕೋಡ್ ಪಡೆಯುವುದಕ್ಕೆ ಅರ್ಹರು. ಅದೇ ರೀತಿ ಜಿಯೋ ಮೊಬಿಲಿಟಿ ಪ್ರಿಪೇಯ್ಡ್ ಗ್ರಾಹಕರು ತಮ್ಮ ಈಗಿರುವ ರೂ. 398, ರೂ. 1198, ರೂ. 4498 ಪ್ಲಾನ್‌ಗಳ ಮೂಲಕ ಅಥವಾ ಹೊಚ್ಚ ಹೊಸದಾದ 3333 ರೂಪಾಯಿಯ ವಾರ್ಷಿಕ ಪ್ಲಾನ್ ಬಳಸುತ್ತಿದ್ದಲ್ಲಿ ಈ ಕಾಂಪ್ಲಿಮೆಂಟರಿ ಫ್ಯಾನ್ ಕೋಡ್ ಪಡೆಯಬಹುದು. ಯಾವುದೇ ಹೆಚ್ಚುವರಿಯಾದ ಶುಲ್ಕ ಇಲ್ಲದೆ ಈ ಕಾಂಪ್ಲಿಮೆಂಟರಿ ಯೋಜನೆ ಸೇರ್ಪಡೆ ಆಗುತ್ತದೆ. ಹೊಸ ಹಾಗೂ ಈಗಾಗಲೇ ಗ್ರಾಹಕರಾದವರಿಗೆ ಈ ಪ್ಲಾನ್ ದೊರೆಯುತ್ತದೆ.

ಇದನ್ನೂ ಓದಿ: Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

ಫ್ಯಾನ್ ಕೋಡ್ ಎಂಬುದು ಪ್ರಮುಖ ಕ್ರೀಡಾ ಸ್ಟ್ರೀಮಿಂಗ್ ಪ್ಲಾಟ್ ಫಾರ್ಮ್. ಇದು ಇಂಟರ್ ಆಕ್ಟಿವ್ ನೇರ ಪ್ರಸಾರವನ್ನು ತರುತ್ತದೆ. ಪ್ರೀಮಿಯರ್ ಕ್ರಿಕೆಟ್ ಪಂದ್ಯಾವಳಿಗಳು, ಮಹಿಳಾ ಕ್ರಿಕೆಟ್, ಫುಟ್‌ಬಾಲ್ ನೇರಪ್ರಸಾರ, ಬ್ಯಾಸ್ಕೆಟ್ ಬಾಲ್, ಬೇಸ್ ಬಾಲ್, ಕುಸ್ತಿ, ಬ್ಯಾಡ್ಮಿಂಟನ್ ಮತ್ತು ಇತರ ಪ್ರಮುಖ ಕ್ರೀಡಾ ಕಾರ್ಯಕ್ರಮಗಳು ಪ್ರಸಾರ ಆಗುತ್ತವೆ. ಫಾರ್ಮುಲಾ 1 ಉತ್ಸಾಹಿಗಳ ಮಧ್ಯೆ ಇದು ಬಹಳ ಖ್ಯಾತಿಯನ್ನು ಪಡೆದಿದೆ. 2024 ಮತ್ತು 2025ನೇ ಇಸವಿಗೆ ಫಾರ್ಮುಲಾ 1 ಭಾರತದ ಪ್ರಸಾರ ಹಕ್ಕುಗಳನ್ನು ತನ್ನದಾಗಿಸಿಕೊಂಡಿದೆ. ಬಳಕೆದಾರರು ನೈಜ ಸಮಯದ ಪಂದ್ಯದ ಮುಖ್ಯಾಂಶಗಳು, ಸಂಪೂರ್ಣ ಮ್ಯಾಚ್ ವಿಡಿಯೋಗಳು, ಭಾರತೀಯ ಕ್ರಿಕೆಟ್ ಪ್ರಮುಖಾಂಶಗಳು, ದತ್ತಾಂಶ, ಅಂಕಿ-ಅಂಶಗಳು, ಗಹನವಾದ ವಿಶ್ಲೇಷಣೆ, ಫ್ಯಾಂಟಸಿ ಸ್ಪೋರ್ಟ್ಸ್ ಒಳನೋಟಗಳು, ಮತ್ತು ವಿಶ್ವ ಮಟ್ಟದ ಕ್ರೀಡೆಗೆ ಸಂಬಂಧಿಸಿದ ಬ್ರೇಕಿಂಗ್ ಸುದ್ದಿ ಇವೆಲ್ಲವೂ ದೊರೆಯುತ್ತವೆ.

ಕಾಂಪ್ಲಿಮೆಂಟರಿ ಸಂಪರ್ಕದಿಂದ ಏನೇನು ದೊರೆಯಲಿದೆ?

ಪ್ರೀಮಿಯಂ ಫ್ಯಾನ್ ಕೋಡ್ ಕಂಟೆಂಟ್

ಫ್ಯಾನ್ ಕೋಡ್‌ನ ಎಕ್ಸ್‌ಕ್ಲೂಸಿವ್ ಆದ ಕ್ರೀಡಾ ಕಂಟೆಂಟ್‌ಗಳನ್ನು ಯಾವುದೇ ಅಡೆತಡೆಗಳಿಲ್ಲದೆ ಜಿಯೋಟಿವಿ+ ಅಥವಾ ಜಿಯೋಟಿವಿ ಅಪ್ಲಿಕೇಷನ್ ಮೂಲಕ ವೀಕ್ಷಣೆ ಮಾಡಬಹುದು.

ಇದನ್ನೂ ಓದಿ: Delhi Airport: ಹಾರುತ್ತಿದ್ದ ವಿಮಾನದಲ್ಲಿ ಅಗ್ನಿ ಅವಘಡ; ದೆಹಲಿ ಏರ್‌ಪೋರ್ಟ್‌ನಲ್ಲಿ ಎಮರ್ಜನ್ಸಿ ಘೋಷಣೆ!

ಎಫ್1 ಸಂಪರ್ಕ

2024 ಮತ್ತು 2025ನೇ ಋತುವಿಗೆ ಫಾರ್ಮುಲಾ 1 ಭಾರತದ ಪ್ರಸಾರ ಹಕ್ಕುಗಳನ್ನು ಫ್ಯಾನ್ ಕೋಡ್ ತನ್ನದಾಗಿಸಿಕೊಂಡಿದೆ. ಭಾರತೀಯ ಅಭಿಮಾನಿಗಳು ರೇಸ್‌ಗಳನ್ನು ಫ್ಯಾನ್ ಕೋಡ್ ಮೂಲಕ ಸ್ಮಾರ್ಟ್ ಟೀವಿಗಳು, ಮೊಬೈಲ್ ಫೋನ್ ಮತ್ತು ಟ್ಯಾಬ್ಲೆಟ್ ಗಳಲ್ಲಿ ವೀಕ್ಷಿಸಬಹುದು. ಇನ್ನು ಕವರೇಜ್‌ನಲ್ಲಿ ಅಭ್ಯಾಸ, ಅರ್ಹತಾ ಸೆಷನ್‌ಗಳು, ಸ್ಪ್ರಿಂಟ್ ರೇಸ್‌ಗಳು ಹಾಗೂ ಗ್ರಾಂಡ್ ಪ್ರಿಕ್ಸ್ ಒಳಗೊಂಡಿರುತ್ತದೆ.

ವಿಸ್ತೃತವಾದ ಕವರೇಜ್

ಪ್ರಮುಖ ಕ್ರೀಡಾ ಪಂದ್ಯಾವಳಿಗಳ ನೇರಪ್ರಸಾರ, ಆಳವಾದ ವಿಶ್ಲೇಷಣೆ ಮತ್ತು ರಿಯಲ್ ಟೈಮ್ ವಿಶ್ಲೇಷಣೆ ಇರುತ್ತದೆ.

ಸಮಗ್ರವಾದ ಸ್ಪೋರ್ಟ್ಸ್ ಲೈಬ್ರರಿ

ಪಂದ್ಯಾವಳಿಯ ಪ್ರಮುಖಾಂಶಗಳು, ಸಂಪೂರ್ಣವಾದ ಅಂಕಿ- ಅಂಶ, ಮತ್ತು ಕ್ರೀಡಾ ಒಳನೋಟಕ್ಕೆ ಸಂಪರ್ಕ ದೊರೆಯುತ್ತದೆ.

ತಾಜಾ ಸುದ್ದಿ ಬಗ್ಗೆ ಅಪ್‌ಡೇಟ್

ಭಾರತೀಯ ಕ್ರಿಕೆಟ್ ಮತ್ತು ಜಾಗತಿಕ ಕ್ರೀಡೆಗಳ ತಾಜಾ ಸುದ್ದಿ ಬಗ್ಗೆ ಅಪ್‌ಡೇಟ್ ದೊರೆಯುತ್ತದೆ.

ಹೊಸ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್

ಜಿಯೋದಿಂದ ಹೊಸದಾಗಿ 3333 ರೂ. ಪ್ಲಾನ್ ಇದ್ದು, ಇದರಲ್ಲಿ 2.5 ಜಿಬಿ/ದಿನಕ್ಕೆ ನೀಡುತ್ತಿದೆ, ಈ ಪ್ಲ್ಯಾನ್ ಜತೆಗೆ ಕಾಂಪ್ಲಿಮೆಂಟರಿ ಆಗಿ ಫ್ಯಾನ್‌ಕೋಡ್ ಚಂದಾದಾರಿಕೆ ದೊರೆಯುತ್ತದೆ.

ಇದನ್ನೂ ಓದಿ: SSLC 2024 Exam 2: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

ಜಿಯೋ ಏರ್‌ಫೈಬರ್, ಜಿಯೋಫೈಬರ್ ಮತ್ತು ಮತ್ತು ಪ್ರಿಪೇಯ್ಡ್ ಮೊಬಿಲಿಟಿ ಪ್ಲಾನ್ ಬಳಕೆದಾರರು ಅರ್ಹ ಯೋಜನೆಗಳನ್ನು ಹೊಂದಿದ್ದಲ್ಲಿ ಈಗ ಕ್ರೀಡಾ ಜಗತ್ತಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಹುದು, ಅದರಲ್ಲೂ ವಿಶೇಷವಾಗಿ ಎಫ್ 1ಗೆ ಸಂಬಂಧಿಸಿದಂತೆ ಈ ಹಿಂದೆಂದಿಗಿಂತಲೂ ಹೆಚ್ಚು ತೊಡಗಿಸಿಕೊಳ್ಳಬಹುದು. ಈ ಕೊಡುಗೆಯು ಜಿಯೋ ಬಳಕೆದಾರರಿಗೆ ಹೆಚ್ಚಿನ ಗುಣಮಟ್ಟದ ಕ್ರೀಡಾ ಕಂಟೆಂಟ್‌ಗೆ ಸಂಪರ್ಕ ಹೊಂದಿದ್ದು, ಮನರಂಜನೆ, ಸುದ್ದಿ, ಆಧ್ಯಾತ್ಮಿಕ ಇತ್ಯಾದಿ ಕಂಟೆಂಟ್‌ಗಳು ಸಹ ಇದ್ದು, ಇತರ ಪ್ರಕಾರಗಳಲ್ಲಿ ಕಂಟೆಂಟ್‌ನ ವಿಶಾಲವಾದ ಲೈಬ್ರರಿಯನ್ನು ಹೊಂದಿದೆ ಎಂದು ಖಚಿತಪಡಿಸುತ್ತದೆ. ಇದರಿಂದಾಗಿ ಬಳಕೆದಾರರ ವೀಕ್ಷಣೆಯ ಅನುಭವವನ್ನು ಹೆಚ್ಚಿಸುತ್ತದೆ ಮತ್ತು ಅವರ ನೆಚ್ಚಿನ ಆನ್-ಡಿಮಾಂಡ್ ವಿಡಿಯೋಗಳೊಂದಿಗೆ ಯಾವಾಗಲೂ ಸಂಪರ್ಕದಲ್ಲಿ ಇರಿಸುತ್ತದೆ ಎಂದು ತಿಳಿಸಿದೆ.

Continue Reading
Advertisement
Pralhad Joshi
ಕರ್ನಾಟಕ19 mins ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ38 mins ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ42 mins ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ1 hour ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ1 hour ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ2 hours ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ2 hours ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ2 hours ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ3 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ3 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ9 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ11 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌