Demat Account: ಡಿಮ್ಯಾಟ್ ಖಾತೆದಾರರಿಗೆ ಗುಡ್‌ ನ್ಯೂಸ್:‌ ನಾಮಿನಿ ಘೋಷಣೆಗೆ ಸಮಯ ವಿಸ್ತರಣೆ Vistara News

ಮನಿ ಗೈಡ್

Demat Account: ಡಿಮ್ಯಾಟ್ ಖಾತೆದಾರರಿಗೆ ಗುಡ್‌ ನ್ಯೂಸ್:‌ ನಾಮಿನಿ ಘೋಷಣೆಗೆ ಸಮಯ ವಿಸ್ತರಣೆ

ಸ್ಥಿರಾಸ್ತಿ ಭದ್ರತೆ ಹೊಂದಿರುವವರು ಪ್ಯಾನ್, ನಾಮಿನಿ, ಸಂಪರ್ಕ ವಿವರಗಳು, ಬ್ಯಾಂಕ್ ಖಾತೆ ವಿವರಗಳು ಮತ್ತು ಫೋಲಿಯೊ ಸಂಖ್ಯೆಗಳಿಗೆ ಮಾದರಿ ಸಹಿಯನ್ನು ಸಲ್ಲಿಸಲು ಸೆಬಿ ಡಿಸೆಂಬರ್ 31ರವರೆಗೆ ಸಮಯವನ್ನು ನೀಡಿದೆ.

VISTARANEWS.COM


on

demat account
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಡಿಮ್ಯಾಟ್ ಖಾತೆದಾರರು ನಾಮನಿರ್ದೇಶನ (ನಾಮಿನಿ) ಆಯ್ಕೆ ಮಾಡಲು ಅಥವಾ ನಾಮನಿರ್ದೇಶನ ಆಯ್ಕೆಯನ್ನು ಕೈಬಿಡಲು ಗಡುವನ್ನು ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸಿದೆ. ಇದಕ್ಕೆ ಡಿಸೆಂಬರ್ ಅಂತ್ಯದವರೆಗೆ ಸಮಯ ನೀಡಿದೆ.

ಈ ಹಿಂದೆ, ಅರ್ಹ ಟ್ರೇಡಿಂಗ್‌ ಮತ್ತು ಡಿಮ್ಯಾಟ್ ಖಾತೆದಾರರಿಗೆ ನಾಮನಿರ್ದೇಶನದ ಆಯ್ಕೆಯನ್ನು ಒದಗಿಸಲು ಗಡುವು ಸೆಪ್ಟೆಂಬರ್ 30ರವರೆಗೆ ಇತ್ತು. ವ್ಯವಹಾರವನ್ನು ಸುಲಭಗೊಳಿಸುವ ಉದ್ದೇಶದಿಂದ, ಟ್ರೇಡಿಂಗ್‌ ಖಾತೆಗಳಿಗೆ ʼನಾಮನಿರ್ದೇಶನದ ಆಯ್ಕೆ’ ಸಲ್ಲಿಕೆಯನ್ನು ಸ್ವಯಂಪ್ರೇರಿತ ಮಾಡಲಾಗಿದೆ. ಈ ಕ್ರಮವು ಹೂಡಿಕೆದಾರರಿಗೆ ತಮ್ಮ ಸ್ವತ್ತುಗಳನ್ನು ಸುರಕ್ಷಿತವಾಗಿರಿಸಲು ಮತ್ತು ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ವರ್ಗಾಯಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.

“ವ್ಯವಹಾರವನ್ನು ಸುಲಭಗೊಳಿಸುವುದಕ್ಕಾಗಿ, ಠೇವಣಿದಾರರು, ದಲ್ಲಾಳಿಗಳ ಸಂಘಗಳು ಮತ್ತು ಇತರ ವಿವಿಧ ಪಾಲುದಾರರಿಂದ ಪಡೆದ ಮಾಹಿತಿಯಂತೆ, ಟ್ರೇಡಿಂಗ್‌ ಖಾತೆಗಳಿಗೆ ನಾಮನಿರ್ದೇಶನದ ಆಯ್ಕೆಯ ಸಲ್ಲಿಕೆಯನ್ನು ಸ್ವಯಂಪ್ರೇರಿತ ಮಾಡಲಾಗಿದೆ. ಡಿಮ್ಯಾಟ್ ಖಾತೆಗಳಿಗೆ ಸಂಬಂಧಿಸಿದಂತೆ ನಾಮಿನಿ ಆಯ್ಕೆ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ್ 31, 2023ಕ್ಕೆ ವಿಸ್ತರಿಸಲಾಗಿದೆ” ಎಂದು ಸೆಬಿ ಸುತ್ತೋಲೆಯಲ್ಲಿ ತಿಳಿಸಿದೆ.

ಸ್ಥಿರಾಸ್ತಿ ಭದ್ರತೆ ಹೊಂದಿರುವವರು ಪ್ಯಾನ್, ನಾಮಿನಿ, ಸಂಪರ್ಕ ವಿವರಗಳು, ಬ್ಯಾಂಕ್ ಖಾತೆ ವಿವರಗಳು ಮತ್ತು ಫೋಲಿಯೊ ಸಂಖ್ಯೆಗಳಿಗೆ ಮಾದರಿ ಸಹಿಯನ್ನು ಸಲ್ಲಿಸಲು ಸೆಬಿ ಡಿಸೆಂಬರ್ 31ರವರೆಗೆ ಸಮಯವನ್ನು ನೀಡಿದೆ.

ಅಸ್ತಿತ್ವದಲ್ಲಿರುವ ಎಲ್ಲಾ ಅರ್ಹ ಟ್ರೇಡಿಂಗ್‌ ಮತ್ತು ಡಿಮ್ಯಾಟ್ ಖಾತೆದಾರರಿಗೆ ನಾಮಿನಿ ಆಯ್ಕೆಯನ್ನು ಒದಗಿಸುವಂತೆ ಜುಲೈ 2021ರಲ್ಲಿ ಸೆಬಿ ಹೇಳಿತ್ತು. ಮಾರ್ಚ್ 31, 2022ರ ಗಡುವು ನೀಡಿತ್ತು. ನಂತರ ಅದನ್ನು ಇನ್ನೂ ಒಂದು ವರ್ಷ ಅಂದರೆ ಮಾರ್ಚ್ 31, 2023ರವರೆಗೆ, ನಂತರ ಮತ್ತೆ ಸೆಪ್ಟೆಂಬರ್ 30, 2023ರವರೆಗೆ ವಿಸ್ತರಿಸಿತು.

ಸೆಬಿ ನಿಯಮಾವಳಿಗಳ ಪ್ರಕಾರ, ಹೊಸ ಹೂಡಿಕೆದಾರರು ಟ್ರೇಡಿಂಗ್ ಮತ್ತು ಡಿಮ್ಯಾಟ್ ಖಾತೆಗಳನ್ನು ತೆರೆದಾಗ, ತಮ್ಮ ಸೆಕ್ಯುರಿಟೀಸ್ ನಾಮಿನಿಯನ್ನು ಗೊತ್ತುಪಡಿಸಬೇಕು ಅಥವಾ ಡಿಕ್ಲರೇಶನ್ ಫಾರ್ಮ್ ಅನ್ನು ಸಲ್ಲಿಸುವ ಮೂಲಕ ನಾಮನಿರ್ದೇಶನವನ್ನು ಸ್ಪಷ್ಟವಾಗಿ ನಿರಾಕರಿಸಬೇಕು.

ಇದನ್ನೂ ಓದಿ: Demat Account: ಡಿಮ್ಯಾಟ್‌ ಖಾತೆಗೆ ಅಗತ್ಯವಿರುವ ದಾಖಲೆಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Money Guide : ನಿವೃತ್ತಿ ಬಳಿಕ ಹಣದ ಚಿಂತೆ; ಈ 10 ಟಿಪ್ಸ್​ ಪಾಲಿಸಿದರೆ ನೋ ಟೆನ್ಷನ್​!

Money Guide: ಹೂಡಿಕೆ ಮತ್ತು ಉಳಿತಾಯ ಯೋಜನೆಗಳನ್ನು ಎಷ್ಟು ಬೇಗ ಆರಂಭ ಮಾಡುತ್ತಿರೋ ಅಷ್ಟರ ಮಟ್ಟಿಗೆ ನಿವೃತ್ತಿ ಬಳಿಕದ ಹಣಕಾಸಿನ ಚಿಂತೆ ಕಡಿಮೆ.

VISTARANEWS.COM


on

Money Guide
Koo

ನಿವೃತ್ತಿ ಬಳಿಕ ಹಣದ ಸಮಸ್ಯೆ ಬಂದರೆ ಏನು ಮಾಡುವುದು ಎಂಬ ಚಿಂತೆ ಉದ್ಯೋಗಸ್ಥರಿಗೆ ಇದ್ದದ್ದೆ. ಯಾಕೆಂದರೆ ಸಂಬಳ ಬರುವ ಉದ್ಯೋಗವೊಂದು ಇಲ್ಲದಾದಾಗ ಎಲ್ಲವೂ ತಾಪತ್ರಯ ಎನಿಸಿಬಿಡುತ್ತದೆ. ದೈನಂದಿನ ಖರ್ಚಿಗೆ ಸೇರಿದಂತೆ ಎಲ್ಲ ಹಣಕಾಸಿನ ಅಗತ್ಯಗಳನ್ನು ಪೂರೈಸುವುದು ಹೇಗೆ ಎಂಬ ಆತಂಕ ಇರುತ್ತದೆ. ಆದರೆ, ಬಹುತೇಕ ಮಂದಿ ಚಿಂತೆ ಮಾತ್ರ ಮಾಡುತ್ತಾರೆಯೇ ಹೊರತು ಅದಕ್ಕೊಂದು ಯೋಜನೆ ಹಾಕಿಕೊಳ್ಳುವುದಿಲ್ಲ. ಆದರೆ, ದುಡಿಮೆಯ ಅವಧಿಯಲ್ಲಿ ದುಡ್ಡು ಉಳಿಸಲು (Money Guide) ಮನಸ್ಸು ಮಾಡಿದರೆ ಈ ಚಿಂತೆ ಎಂದಿಗೂ ಇರುವುದಿಲ್ಲ.

ದುಡಿದ ದುಡ್ಡಿನಲ್ಲಿ ಉಳಿತಾಯ (Money Saving) ಮಾಡುವುದೂ ಉತ್ತಮ ಕಲೆ. ದುಡಿಮೆಯ ದಿನಗಳಲ್ಲಿ ಒಂದಿಷ್ಟು ಮೊತ್ತವನ್ನು ಉಳಿತಾಯದ ಮಾಡಿದರೆ, ನಿವೃತ್ತಿಯ ದಿನಗಳನ್ನು (Retirement Life) ನೆಮ್ಮದಿಯಾಗಿ ಕಳೆಯಬಹುದು. ಇಲ್ಲದಿದ್ದರೆ, ದುಡಿಯುವ ಕಸುವು ಇಲ್ಲದ ಸಮಯದಲ್ಲಿ ಹಣಕ್ಕಾಗಿ ಪರದಾಡಬೇಕಾಗುತ್ತದೆ. ಹಾಗಾಗಿ, ನಿಮ್ಮ ವೃತ್ತಿಯ ಆರಂಭದ ದಿನಗಳಿಂದಲೇ ನಿವೃತ್ತಿಯ ಬಗ್ಗೆ ಪ್ಲ್ಯಾನ್ ಮಾಡಿ(Plan for Retirement life), ಹಣವನ್ನು ಉಳಿತಾಯ ಮಾಡಬೇಕು. ನಿವೃತ್ತಿಯ ಅಂಚಿಗೆ ಬರುವಷ್ಟರಲ್ಲಿ ದೊಡ್ಡ ಮೊತ್ತದ ಉಳಿತಾಯ ನಿಮಗಾಗಿ ಕಾಯುತ್ತಿರುತ್ತದೆ. ಹಾಗಾಗಿ, ಈಗನಿಂದಲೇ ನೀವು ಉಳಿತಾಯ ಮತ್ತು ನಿವೃತ್ತಿಯ ದಿನಗಳಿಗಾಗಿ ಹೂಡಿಕೆಯ ಪ್ಲ್ಯಾನ್ ಮಾಡುವುದು ಶುರು ಮಾಡಿ(Money Guide).

ನಿವೃತ್ತಿಗಾಗಿ ಹಣ ಉಳಿಸುವ ಮಾರ್ಗಗಳು….

1.ಉಳಿತಾಯ ಯೋಜನೆ ಬೇಗ ಆರಂಭಿಸಿ

ಉತ್ತಮ ನಿವೃತ್ತಿ ಜೀವನಕ್ಕಾಗಿ ವೃತ್ತಿ ಆರಂಭದ ದಿನಗಳಿಂದಲೇ ಉಳಿತಾಯವನ್ನು ಆರಂಭಿಸಬೇಕು. ಚಿಕ್ಕ ಮೊತ್ತದ ಸೇವಿಂಗ್ ಕೂಡ ನಿವೃತ್ತಿ ಹೊತ್ತಿಗೆ ಬಹುದೊಡ್ಡ ಮೊತ್ತವಾಗಿ ಬದಲಾಗಿರುತ್ತದೆ.

2.ಉಳಿತಾಯಕ್ಕೊಂದು ಗುರಿ ಇರಲಿ

ನಿಮ್ಮ ನಿರೀಕ್ಷಿತ ವೆಚ್ಚಗಳು ಮತ್ತು ಜೀವನಶೈಲಿಯ ಆಧಾರದ ಮೇಲೆ ನಿವೃತ್ತಿಗಾಗಿ ನಿಮಗೆ ಎಷ್ಟು ಹಣ ಬೇಕು ಎಂದು ನಿರ್ಧರಿಸಿ. ಹಣದುಬ್ಬರ ಮತ್ತು ಆರೋಗ್ಯ ವೆಚ್ಚಗಳಂತಹ ಅಂಶಗಳನ್ನು ಪರಿಗಣಿಸಿ ಸೇವಿಂಗ್ ಆರಂಭಿಸಿ. ಸ್ಪಷ್ಟವಾದ ನಿವೃತ್ತಿ ಗುರಿಯನ್ನು ಹಾಕಿಕೊಳ್ಳುವುದರಿಂದ ಹಣ ಉಳಿಕೆಯಲ್ಲಿ ಸ್ಪಷ್ಟತೆ ದೊರೆಯುತ್ತದೆ.

3. ನಿವೃತ್ತಿ ಬಳಿಕದ ಆಯವ್ಯಯ ಸಿದ್ದಪಡಿಸಿ

ನಿಮ್ಮ ಸದ್ಯದ ಆದಾಯ ಮತ್ತು ವೆಚ್ಚದ ಅನುಸಾರ ನಿಮ್ಮ ನಿವೃತ್ತಿಯ ಬಜೆಟ್ ತಯಾರಿಸಿ. ಅನವಶ್ಯವಾಗಿ ಎಲ್ಲೆಲ್ಲಿ ಹಣ ಪೋಲಾಗುತ್ತಿದೆ ಎಂದು ಗುರುತಿಸಿಕೊಳ್ಳಿ ಮತ್ತು ಅಂಥ ಹಣವನ್ನು ಉಳಿಕೆಯ ಪಟ್ಟಿಗೆ ಸೇರಿಸಿ. ಈ ಮೂಲಕ ರಿಟೈರ್ ಫಂಡ್ ಕ್ರೋಡೀಕರಿಸಬಹುದು.

4. ನಿವೃತ್ತಿಯ ನಂತದ ಖಾತೆ ತೆರೆಯಿರಿ

ಭಾರತದಲ್ಲಿ ನಾನಾ ಅಕೌಂಟ್‌ಗಳು ಚಾಲ್ತಿಯಲ್ಲಿವೆ. ಅವುಗಳ ಮೂಲಕ ರಿಟೈರ್ಮೆಂಟ್ ಪ್ಲ್ಯಾನ್ ಮಾಡಬಹುದು. ಇಪಿಎಫ್, ಪಿಪಿಎಫ್, ಎನ್‌ಪಿಎಸ್, ಎಫ್‌ಡಿ ಇತ್ಯಾದಿ ಖಾತೆಗಳ ಮೂಲಕ ಸೇವಿಂಗ್‌ ಹೆಚ್ಚಿಸುತ್ತಾ ಹೋದಂತೆ ನಿವೃತ್ತಿ ಸಮಯದಯಲ್ಲಿ ತುಂಬಾ ಸಹಕಾರಿಯಾಗುತ್ತದೆ.

5.ಹೂಡಿಕೆ ಪ್ರಮಾಣ ಹೆಚ್ಚಲಿ

ಷೇರುಗಳು, ನಿರ್ದಿಷ್ಟ ಆದಾಯ ತರುವ ಹೂಡಿಕೆಗಳು, ರಿಯಲ್ ಎಸ್ಟೇಟ್ ಸೇರಿದಂತೆ ಇನ್ನಿತರ ಹೂಡಿಕೆಗಳನ್ನು ಆಯ್ದುಕೊಳ್ಳಬಹುದು. ನೀವು ಯಾವುದೇ ರೀತಿಯ ಹೂಡಿಕೆಯ ಸಾಧನವನ್ನು ಆಯ್ಕೆ ಮಾಡಿಕೊಳ್ಳಿ. ಆದರೆ, ಅದಕ್ಕಿಂತ ಮುಂಚೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಮುಂದುವರಿಯರಿ.

6.ಅನವಶ್ಯಕ ವೆಚ್ಚ ಬೇಡ

ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮವಾಗಿರಬೇಕು ಎಂದಾದರೆ, ಈಗಿನಿಂದಲೂ ಅನವಶ್ಯ ವೆಚ್ಚಗಳನ್ನು ದೂರ ಮಾಡಿ. ನಿಮ್ಮ ರಿಟೈರ್ಮೆಂಟ್‌ ಖಾತೆಗಳಿಗೆ ಆಟೋಮೆಟಿಕ್ ಆಗಿ ದುಡ್ಡು ಪೇ ಆಗುವ ಹಾಗೆ ಮಾಡಿ. ನಿಮ್ಮ ಸಂಬಳದಲ್ಲಿ ಇನ್‌ಕ್ರಿಮೆಂಟ್ ಆದಾಗಲೆಲ್ಲ. ಈ ರೀತಿಯ ಪರಿಹಾರವನ್ನು ಕಂಡುಕೊಳ್ಳಬಹುದು.

7.ಪರ್ಯಾಯ ಉಳಿತಾಯದ ಆಲೋಚನೆ ಇರಲಿ

ಮ್ಯೂಚವಲ್ ಫಂಡ್ಸ್, ಷೇರುಗಳು, ಬಾಂಡ್‌ಗಳಂಥ ಪರ್ಯಾಯ ಉಳಿತಾಯದ ಮಾರ್ಗಗಳನ್ನು ಹುಡುಕಿಕೊಳ್ಳಬಹುದು. ಕೇವಲ ಹಣವನ್ನು ಫಿಕ್ಸೆಡ್ ಡಿಪಾಸೆಟ್ ಮಾಡುವುದು ಮಾತ್ರವೇ ಉಳಿತಾಯದ ಮಾರ್ಗವಲ್ಲ. ಉಳಿತಾಯದ ಜತೆಗೆ ಹಣ ಹೆಚ್ಚಾಗುವ ಮಾರ್ಗಗಳಿವೆ. ಅವುಗಳನ್ನು ಶೋಧಿಸಬಹುದು. ಆದರೆ, ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ.

ಈ ಸುದ್ದಿಯನ್ನೂ ಓದಿ : Money Guide: ನಿಶ್ಚಿತ ಠೇವಣಿಗೆ ಯಾವ ಬ್ಯಾಂಕ್‌ನಲ್ಲಿ ಎಷ್ಟು ಬಡ್ಡಿದರ? ಇಲ್ಲಿದೆ ವಿವರ

8.ತೆರಿಗೆ ಕುರಿತ ಮಾಹಿತಿ ಇರಲಿ

ತೆರಿಗೆ ಕಾನೂನುಗಳು, ಹೂಡಿಕೆ ಆಯ್ಕೆಗಳು ಮತ್ತು ನಿವೃತ್ತಿ ಯೋಜನೆ ತಂತ್ರಗಳಲ್ಲಿನ ಬದಲಾವಣೆಗಳ ಬಗ್ಗೆ ನಿಮಗೆ ಅಪ್‌ಡೇಟೆಡ್ ಮಾಹಿತಿ ಇರುವುದು ಉತ್ತಮ. ತಿಳುವಳಿಕೆಯುಳ್ಳ ಹಣಕಾಸಿನ ನಿರ್ಧಾರಗಳನ್ನು ಮಾಡಲು ಈ ರೀತಿಯ ಅಪ್‌ಡೇಟೆಡ್ ಮಾಹಿತಿ ಇದ್ದರೆ ಬೆಸ್ಟ್ ಹೂಡಿಕೆ ಮಾಡಲು ಸಾಧ್ಯವಾಗುತ್ತದೆ.

9.ರಿಟೈರ್ಮೆಂಟ್ ಫಂಡ್ ವೆಚ್ಚ ಮಾಡಬೇಡಿ

ಯಾವುದೇ ಕಾರಣಕ್ಕೂ ನಿಮ್ಮ ನಿವೃತ್ತಿ ಉಳಿತಾಯವನ್ನು ಇತರ ವೆಚ್ಚಗಳಿಗಾಗಿ ಬಳಸಲು ಹೋಗಲೇಡಿ. ಉಳಿತಾಯದ ಹಣವನ್ನು ಬಳಸಲಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ಮತ್ತೆ ನೀವು ಹಣವಿಲ್ಲದೇ ಪರದಾಡಬೇಕಾಗುತ್ತದೆ. ಹಾಗಾಗಿ, ಎಂಥದ್ದೇ ಸಂದರ್ಭದಲ್ಲಿ ನಿವೃತ್ತಿಗಾಗಿ ತೆಗೆದಿಟ್ಟ ಅಥವಾ ಸೇವಿಂಗ್ ಮಾಡಿದ ಹಣವನ್ನು ಸದ್ಯದ ವೆಚ್ಚಕ್ಕೆ ಬಳಸಲು ಮುಂದಾಗಬೇಡಿ.

10.ತುರ್ತು ನಿಧಿ ಇರಲಿ

ಅನಿರೀಕ್ಷಿತ ವೆಚ್ಚಗಳಿಗಾಗಿ ತುರ್ತು ನಿಧಿಯನ್ನು ನಿರ್ವಹಣೆ ಮಾಡುವುದು ಉತ್ತಮ. ಯಾಕೆಂದರೆ, ತುರ್ತು ನಿಧಿ ನಿಮ್ಮ ಬಳಿ ಇದ್ದರೆ ನೀವು ನಿಮ್ಮ ಸೇವಿಂಗ್ಸ್‌ ಅನ್ನು ವೆಚ್ಚಗಳಿಗೆ ಬಳಸಲು ಮುಂದಾಗುವುದಿಲ್ಲ. ಇಲ್ಲದಿದ್ದರೆ, ಉಳಿತಾಯದ ಹಣವನ್ನೇ ನೀವು ತುರ್ತು ಅಗತ್ಯಗಳಿಗೆ ಬಳಸುತ್ತೀರಿ. ಆಗ ನಿಮ್ಮ ನಿವೃತ್ತಿಯ ಎಲ್ಲ ಪ್ಲ್ಯಾನ್ ಹಾಳಾಗುತ್ತದೆ.

Continue Reading

ಪ್ರಮುಖ ಸುದ್ದಿ

Money Guide: ಪಿಪಿಎಫ್‌, ಅಂಚೆ ಕಚೇರಿ; ಮಧ್ಯಮ ವರ್ಗದವರ ಹೂಡಿಕೆಗೆ ಇವು ಬೆಸ್ಟ್‌ ಪ್ಲಾನ್‌ಗಳು!

Money Guide: ಆಧುನಿಕ ಜಗತ್ತಿನಲ್ಲಿ ನಾವು ದುಡಿಯುವ ಜತೆಗೆ ದುಡ್ಡನ್ನೂ ದುಡಿಸಬೇಕು. ದುಡ್ಡನ್ನೂ ದುಡಿಸಬೇಕು ಎಂದರೆ ಹೂಡಿಕೆ ಮಾಡಬೇಕು. ಆದರೆ, ಹೆಚ್ಚು ಬಡ್ಡಿ ತಂದುಕೊಡುವ ಯೋಜನೆಗಳನ್ನು ಆಯ್ಕೆ ಮಾಡಿಕೊಂಡು ಹೂಡಿಕೆ ಮಾಡಬೇಕು. ಅಂತಹ ಯೋಜನೆಗಳ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

VISTARANEWS.COM


on

Best Investment Plans
Koo

ಬೆಂಗಳೂರು: ನಾವು ದುಡಿಯುವ ಜತೆಗೆ ದುಡ್ಡನ್ನೂ ದುಡಿಸಬೇಕು ಎಂಬುದು ಸರಿಯಾದ ನಿರ್ಧಾರ. ಆದರೆ, ಹೂಡಿಕೆಯ ಯೋಜನೆಗಳನ್ನು (Investment Plans) ಆಯ್ಕೆ ಮಾಡಿಕೊಳ್ಳುವಾಗ ಹೆಚ್ಚು ಬಡ್ಡಿ ತಂದುಕೊಡುವ, ಕಡಿಮೆ ಅವಧಿಯಲ್ಲಿಯೇ ನಮ್ಮ ಹೂಡಿಕೆಯ ದುಡ್ಡಿನ ಮೊತ್ತ ಹೆಚ್ಚಾಗುವ, ಸುದೀರ್ಘ ಅವಧಿಗೆ ಹೂಡಿಕೆ ಮಾಡಿದರೂ ಕೊನೆಯಲ್ಲಿ ಹೆಚ್ಚು ಹಣ ಪಡೆದ ಖುಷಿ ನಮ್ಮದಾಗಬೇಕು. ಅದಕ್ಕಾಗಿ ಹೆಚ್ಚು ಬಡ್ಡಿದರ ಇರುವ ಹೂಡಿಕೆ ಯೋಜನೆಗಳನ್ನೇ ಆಯ್ಕೆ ಮಾಡಿಕೊಳ್ಳಬೇಕು. ಹೂಡಿಕೆ ಮಾಡುವುದು ದೊಡ್ಡದಲ್ಲ, ಹೂಡಿಕೆ ಮಾಡುವಾಗ ಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳುವುದು ಜಾಣ್ಮೆ. ಸಣ್ಣ ಹೂಡಿಕೆದಾರರಿಗಂತೂ ಈ ನಿಯಮ ಕಡ್ಡಾಯ. ಹೀಗೆ ಹೆಚ್ಚು ಬಡ್ಡಿದರ ಇರುವ ಹೂಡಿಕೆ ಯೋಜನೆಗಳ ಕುರಿತ ಸಂಕ್ಷಿಪ್ತ ವಿವರಣೆ ಇಂದಿನ ವಿಸ್ತಾರ (Money Guide) ಮನಿ ಗೈಡ್‌ನಲ್ಲಿದೆ. ‌

ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ (PPF)

ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ ಯೋಜನೆಯು ಕೇಂದ್ರ ಸರ್ಕಾರ ಬೆಂಬಲಿತ ಪ್ಲಾನ್‌ ಆಗಿದೆ. ಹಾಗಾಗಿ, ಸಣ್ಣ ಹೂಡಿಕೆದಾರರು ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಸರ್ಕಾರಿ ಬೆಂಬಲಿತ ಪ್ಲಾನ್‌ ಆದ ಕಾರಣ ಇಲ್ಲಿ ಹೂಡಿಕೆ ಮಾಡುವುದು ಅಪಾಯಕಾರಿ ಅಲ್ಲ. ಪಿಪಿಎಫ್‌ ಖಾತೆ ತೆರೆಯುವವರಿಗೆ ವಾರ್ಷಿಕ ಶೇ.7.1ರಷ್ಟು ಬಡ್ಡಿ ದೊರೆಯಲಿದೆ. ಆದರೆ, ಈ ಯೋಜನೆಯು 15 ವರ್ಷ ಇರಲಿದೆ. ಮಗಳ ಮದುವೆ, ಮಕ್ಕಳ ಶಿಕ್ಷಣ ಸೇರಿ ಹಲವು ಮುಂದಾಲೋಚನೆ ಇರುವವರು 15 ವರ್ಷದ ಹೂಡಿಕೆ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು.

ಮ್ಯೂಚುವಲ್‌ ಫಂಡ್ಸ್‌

ಪಿಪಿಎಫ್‌ಗಿಂತ ಮ್ಯೂಚುವಲ್‌ ಫಂಡ್ಸ್‌ನಲ್ಲಿ ಹೂಡಿಕೆ ಮಾಡುವುದರಿಂದ ಹೆಚ್ಚಿನ ಬಡ್ಡಿ ಸಿಗುತ್ತದೆ. ಆದರೆ, ಇಲ್ಲಿ ಷೇರು ಮಾರುಕಟ್ಟೆಯ ನಿತ್ಯ ಹೂಡಿಕೆಗಿಂತ ಕಡಿಮೆ ಹಾಗೂ ಪಿಪಿಎಫ್‌ಗಿಂತ ಹೆಚ್ಚು ರಿಸ್ಕ್‌ ಇರುತ್ತದೆ. ಆದರೆ, ಮ್ಯೂಚುವಲ್‌ ಫಂಡ್ಸ್‌ ಹೂಡಿಕೆ ಪ್ಲಾನ್‌ಗಳನ್ನು ಒಂದು ವರ್ಷ, ಎರಡು ವರ್ಷ ಹಾಗೂ ಐದು ವರ್ಷದವರೆಗೆ ಆಯ್ಕೆ ಮಾಡಿಕೊಳ್ಳಬಹುದು. ಈಕ್ವಿಟಿಯಲ್ಲಿ ಹೂಡಿಕೆ ಮಾಡುವುದು ಒಳಿತು. ಅದರಲ್ಲೂ, ಅಪಾಯಕಾರಿ ಸನ್ನಿವೇಶದಲ್ಲಿ (ಷೇರು ಮಾರುಕಟ್ಟೆ ಕುಸಿತ, ಆರ್ಥಿಕ ದಿವಾಳಿ ಇತ್ಯಾದಿ) ನಿಮ್ಮ ಹೂಡಿಕೆಗಳನ್ನು ಮಾರಾಟ ಮಾಡುವ ಮೂಲಕ ಹೂಡಿಕೆಯ ಹಣವನ್ನು ಪಡೆಯಬಹುದು. ಎಸ್‌ಬಿಐ ಸೇರಿ ಯಾವುದೇ ಪರಿಚಿತ ಅಥವಾ ಹೆಚ್ಚು ಲಾಭ ತರುವಲ್ಲಿ ಹೂಡಿಕೆ ಮಾಡುವುದು ಜಾಣತನ ಎಂಬುದು ಹೂಡಿಕೆ ತಜ್ಞರ ಅಭಿಪ್ರಾಯವಾಗಿದೆ.

Mutual funds Good news for investors, SEBI proposes uniform expense ratio for mutual funds

ಇದನ್ನೂ ಓದಿ: Money Guide: ಎಫ್‌ಡಿಗಳಿಂದ ಹೆಚ್ಚಿನ ಆದಾಯ ಬೇಕೇ? ಲ್ಯಾಡರಿಂಗ್ ತಂತ್ರದಂತೆ ಹೂಡಿಕೆ ಮಾಡಿ ನೋಡಿ!

ಪೋಸ್ಟ್‌ ಆಫೀಸ್‌ ಹೂಡಿಕೆ ಯೋಜನೆಗಳು

ಪೋಸ್ಟ್‌ ಆಫೀಸ್‌ ಕೇಂದ್ರ ಸರ್ಕಾರದ ಅಧೀನದಲ್ಲಿ ಇರುವುದರಿಂದ ಹೂಡಿಕೆಗೆ ಯಾವುದೇ ಅಪಾಯವಿಲ್ಲ. ಅದರಲ್ಲೂ, ಬದಲಾದ ಕಾಲಘಟ್ಟದಲ್ಲಿ ಪೋಸ್ಟ್‌ ಆಫೀಸ್‌ ಬ್ಯಾಂಕ್‌ಗಳು ಹೂಡಿಕೆಗೆ ಹೆಚ್ಚಿನ ಬಡ್ಡಿ ನೀಡುತ್ತವೆ. ಹಾಗಾದರೆ, ಪೋಸ್ಟ್‌ ಆಫೀಸ್‌ನಲ್ಲಿ ಹೂಡಿಕೆ ಮಾಡಬಹುದಾದ ಪ್ಲಾನ್‌ಗಳು ಯಾವವು? ಅವುಗಳ ಇಂಟರೆಸ್ಟ್‌ ರೇಟ್‌ ಎಷ್ಟಿದೆ ಎಂಬುದರ ಮಾಹಿತಿ ಹೀಗಿದೆ…

  1. ಪೋಸ್ಟ್‌ ಆಫೀಸ್‌ ರೆಕರಿಂಗ್‌ ಡೆಪಾಸಿಟ್‌ (RD) ಪ್ಲಾನ್‌ ಅನ್ವಯ ಹೂಡಿಕೆ ಮಾಡಿದರೆ ಅಕ್ಟೋಬರ್‌ 1ರಿಂದ ಶೇ.6.7ರಷ್ಟು ಬಡ್ಡಿ ನೀಡಲಾಗುತ್ತಿದೆ. ಮೂರರಿಂದ ಐದು ವರ್ಷ ಮಾಸಿಕ ಇಂತಿಷ್ಟು ಹಣ ಠೇವಣಿ ಮಾಡಿದರೆ ಬಡ್ಡಿಯ ಲಾಭ ಸಿಗಲಿದೆ.
  2. ನ್ಯಾಷನಲ್‌ ಸೇವಿಂಗ್ಸ್‌ ಟೈಮ್‌ ಡೆಪಾಸಿಟ್‌ ಅಕೌಂಟ್‌ (TD) ತೆರೆದರೆ ಒಳ್ಳೆಯ ಬಡ್ಡಿ ಸಿಗಲಿದೆ. ಒಂದು ವರ್ಷದ ಅವಧಿಯ ಹೂಡಿಕೆಗೆ ಶೇ.6.9, 2 ವರ್ಷಕ್ಕೆ ಶೇ.7 ಹಾಗೂ 5 ವರ್ಷಕ್ಕೆ ಶೇ.7.5ರಷ್ಟು ಬಡ್ಡಿ ದೊರೆಯಲಿದೆ.
  3. ಹೆಣ್ಣುಮಕ್ಕಳ ತಂದೆಯರಿಗೆ ಸುಕನ್ಯಾ ಸಮೃದ್ಧಿ ಯೋಜನೆ ಒಳ್ಳೆಯ ಪ್ಲಾನ್‌ ಆಗಿದೆ. 10 ವರ್ಷದೊಳಗಿನ ಹೆಣ್ಣುಮಕ್ಕಳಿದ್ದರೆ ಅವರ ಪೋಷಕರು ಸುಕನ್ಯಾ ಸಮೃದ್ಧಿ ಯೋಜನೆ ಆಯ್ಕೆ ಮಾಡಿಕೊಳ್ಳಬಹುದು. ವರ್ಷಕ್ಕೆ 250 ರೂ.ನಿಂದ 1.5 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು. ಮಗಳು 18 ವರ್ಷ ತುಂಬಿದ ಬಳಿಕ ಶೇ.8ರಷ್ಟು ಬಡ್ಡಿಯೊಂದಿಗೆ ಹಣ ಪಡೆಯಬಹುದು. ಇದೇ ಹಣವನ್ನು ಮಗಳು 21 ವರ್ಷದ ದಾಟಿದ ಬಳಿಕ ಪಡೆದರೆ ಹೆಚ್ಚಿನ ಮೊತ್ತ ಸಿಗಲಿದೆ. ಆಕೆಯ ಉನ್ನತ ಶಿಕ್ಷಣ ಸೇರಿ ಹಲವು ಕಾರಣಗಳಿಗೆ ಇದು ಹೇಳಿ ಮಾಡಿಸಿದ ಯೋಜನೆ.
  4. ಪೋಸ್ಟ್‌ ಆಫೀಸ್‌ ಮಂತ್ಲಿ ಇನ್‌ಕಮ್‌ ಸ್ಕೀಮ್‌ ಅಕೌಂಟ್‌ ಕೂಡ ಸಣ್ಣ ಉಳಿತಾಯದಾರರಿಗೆ ಒಳ್ಳೆಯ ಯೋಜನೆ ಆಗಿದೆ. ಒಂದು, ಮೂರು, ಐದು ವರ್ಷದ ಯೋಜನೆ ಇದಾಗಿದ್ದು, ಒಬ್ಬ ವ್ಯಕ್ತಿಯು ಒಂದು ಖಾತೆಯಲ್ಲಿ 9 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು. ಈ ಯೋಜನೆಯ ಬಡ್ಡಿದರವು ಶೇ.7.4ರಷ್ಟು ಇದೆ. ಈ ಯೋಜನೆಯಲ್ಲಿ ಜಂಟಿ ಖಾತೆ ತೆರೆಯುವುದು ತುಂಬ ಒಳಿತು. ಜಂಟಿಯಾಗಿ ತೆರೆದ ಖಾತೆ (Joint Account)ಯಲ್ಲಿ 15 ಲಕ್ಷ ರೂಪಾಯಿವರೆಗೆ ಹೂಡಿಕೆ ಮಾಡಬಹುದು. ಇದರಿಂದ ಹೆಚ್ಚಿನ ಲಾಭವಾಗಲಿದೆ.
Continue Reading

ಪ್ರಮುಖ ಸುದ್ದಿ

Small Savings: ಸೆ.30ರೊಳಗೆ ಇದಕ್ಕೆಲ್ಲಾ ಆಧಾರ್ ಕಾರ್ಡ್ ಸಲ್ಲಿಸದಿದ್ದರೆ ಬಡ್ಡಿ ಕಳೆದುಕೊಳ್ಳುವಿರಿ! ಯಾವುದಕ್ಕೆಲ್ಲ? ಇಲ್ಲಿದೆ ವಿವರ

ನೀವು ಸಾರ್ವಜನಿಕ ಭವಿಷ್ಯ ನಿಧಿ (PPF), ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS), ಅಥವಾ ಪೋಸ್ಟ್ ಆಫೀಸ್ ಸಮಯ ಠೇವಣಿಗಳ (POTD) ಇಂತಹ ಸಣ್ಣ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ ಸೆಪ್ಟೆಂಬರ್ 30, 2023ರೊಳಗೆ ನಿಮ್ಮ ಆಧಾರ್ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

VISTARANEWS.COM


on

september 30
Koo

ಬೆಂಗಳೂರು: ಸೆಪ್ಟೆಂಬರ್ 30ರೊಳಗೆ ನಿಮ್ಮ PPF, SCSS, NSC ಸೇರಿದಂತೆ ಹಲವು ಸಣ್ಣ ಉಳಿತಾಯ (Small savings) ಯೋಜನೆಗಳಿಗೆ ಆಧಾರ್‌ ವಿವರಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಇದನ್ನು ಸಲ್ಲಿಸಲು ನೀವು ವಿಫಲರಾದರೆ ನಿಮ್ಮ ಖಾತೆಗೆ ಬರಬೇಕಾದ ಬಡ್ಡಿ ಹಣದ (Interest rate) ಪಾವತಿ ನಿಲ್ಲಬಹುದು. ಯಾವ್ಯಾವ ಉಳಿತಾಯ ಯೋಜನೆಗಳು? ಇಲ್ಲಿದೆ ವಿವರ.

ನೀವು ಸಾರ್ವಜನಿಕ ಭವಿಷ್ಯ ನಿಧಿ (PPF), ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS), ಅಥವಾ ಪೋಸ್ಟ್ ಆಫೀಸ್ ಸಮಯ ಠೇವಣಿಗಳ (POTD) ಇಂತಹ ಸಣ್ಣ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ ಸೆಪ್ಟೆಂಬರ್ 30, 2023ರೊಳಗೆ ನಿಮ್ಮ ಆಧಾರ್ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

PPF, SCSS, NSC ಮತ್ತು ಇತರ ಪೋಸ್ಟ್ ಆಫೀಸ್ ಉಳಿತಾಯ

ನಿಮ್ಮ PPF, ಸುಕನ್ಯಾ ಸಮೃದ್ಧಿ ಯೋಜನೆ (SSY), ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (NSC), ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS) ಅಥವಾ ಯಾವುದೇ ಇತರ ಸಣ್ಣ ಉಳಿತಾಯ ಯೋಜನೆಯ ಜತೆಗೆ ಮುಂದಿನ ತಿಂಗಳಿನಿಂದ ನಿಮ್ಮ ಆಧಾರ್‌ ಸಂಖ್ಯೆ ಜೋಡಣೆಯಾಗಿರುವುದು ಕಡ್ಡಾಯವಾಗಿದೆ. ಒಂದು ವೇಳೆ ಖಾತೆಯನ್ನು ತೆರೆಯುವಾಗ ನಿಮ್ಮ ಆಧಾರ್ ಕಾರ್ಡ್ ಅನ್ನು ನೀವು ಸಲ್ಲಿಸಿರದಿದ್ದರೆ, ನೀವು ಅದನ್ನು ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕು.

ಆತಂಕ ಪಡುವ ಅಗತ್ಯವಿಲ್ಲ

ನೀವು ಏಪ್ರಿಲ್ 1, 2023ರಂದು ಅಥವಾ ನಂತರ ನಿಮ್ಮ ಸಣ್ಣ ಉಳಿತಾಯ ಖಾತೆಗಳನ್ನು ತೆರೆದಿದ್ದರೆ, ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಆಧಾರ್ ಮತ್ತು ಪ್ಯಾನ್ ವಿವರಗಳು ಈಗಾಗಲೇ ದಾಖಲೆಗೆ ಜೋಡಣೆಯಾಗಿರುತ್ತವೆ.

ಆಧಾರ್‌ ಸಲ್ಲಿಸಲು ವಿಫಲವಾದರೆ ಏನಾಗುತ್ತದೆ?

ಸೆಪ್ಟೆಂಬರ್ 30, 2023ರೊಳಗೆ ನಿಮ್ಮ ಪೋಸ್ಟ್ ಆಫೀಸ್ ಯೋಜನೆಗೆ ಆಧಾರ್ ಅನ್ನು ಸಲ್ಲಿಸಲು ನೀವು ವಿಫಲರಾದರೆ, ನಿಮ್ಮ ಸಣ್ಣ ಉಳಿತಾಯ ಯೋಜನೆಯ ಖಾತೆಯು ನಿಷ್ಕ್ರಿಯವಾಗಬಹುದು. ಅಂದರೆ PPF, NSC ಅಥವಾ SCSSನಂತಹ ಸಣ್ಣ ಉಳಿತಾಯ ಯೋಜನೆ ಖಾತೆಯಲ್ಲಿರುವ ನಿಮ್ಮ ಹಣಕ್ಕೆ ಸಂಚಿತ ಬಡ್ಡಿಯನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದಿಲ್ಲ.

ನಿಮ್ಮ ಸಣ್ಣ ಉಳಿತಾಯ ಯೋಜನೆಯಿಂದ ಬರುವ ಬಡ್ಡಿ ಆದಾಯವನ್ನು ನೀವು ಅವಲಂಬಿಸಿದ್ದರೆ, ಖಂಡಿತವಾಗಿಯೂ ಆದಷ್ಟು ಬೇಗನೆ ಗಡುವಿನ ಮೊದಲು ನಿಮ್ಮ ಆಧಾರ್ ವಿವರಗಳನ್ನು ಸಲ್ಲಿಸಬೇಕು.

ಇದನ್ನೂ ಓದಿ: Money Guide: ಅಕ್ಟೋಬರ್ 1ರ ಮೊದಲೇ ಇದೆಲ್ಲ ಮಾಡಿಕೊಳ್ಳಿ… ಇಲ್ಲದಿದ್ದರೆ ಹಣ ಕಳೆದುಕೊಳ್ಳುವಿರಿ!

Continue Reading

ದೇಶ

Interest Rates: ಈ ವಾರ ಬದಲಾಗಲಿದೆ ಉಳಿತಾಯ ಖಾತೆ ಬಡ್ಡಿ ದರ; ತಜ್ಞರು ಹೇಳೋದೇನು?

Interest Rates: ಈ ವಾರ ಸಣ್ಣ ಉಳಿತಾಯ ಖಾತೆಗಳ (small savings schemes) ಬಡ್ಡಿ ದರ (Interest Rates) ಪರಿಷ್ಕರಣೆಯಾಗಲಿದೆ. ಬಡ್ಡಿ ದರ ಯಥಾ ಸ್ಥಿತಿ ಮುಂದುವರಿಯುವ ನಿರೀಕ್ಷೆ ಇದೆ.

VISTARANEWS.COM


on

savings
Koo

ನವ ದೆಹಲಿ: 2023ರ ಅಕ್ಟೋಬರ್‌-ಡಿಸೆಂಬರ್‌ ತ್ರೈ ಮಾಸಿಕದ (October-December 2023 quarter) ಪಿಪಿಎಫ್‌(PPF), ಎನ್‌ಎಸ್‌ಸಿ(NSC), ಕೆವಿಪಿ(KVP) ಮತ್ತು ಪೋಸ್ಟ್‌ ಆಫೀಸ್‌(Post office) ಮುಂತಾದ ಸಣ್ಣ ಉಳಿತಾಯ ಯೋಜನೆಗಳ(small savings schemes) ಹೂಡಿಕೆ ಮೇಲಿನ ಬಡ್ಡಿದರಗಳ ಪರಿಷ್ಕರಣೆ ಸೆಪ್ಟೆಂಬರ್‌ 30ರಂದು ನಡೆಯಲಿದೆ. ಹಿಂದಿನ ತ್ರೈಮಾಸಿಕ(ಜುಲೈ-ಸೆಪ್ಟೆಂಬರ್ 2023)ದ ದರವನ್ನು ಜಿ-ಸೆಕ್ ಇಳುವರಿಯ ಆಧಾರದ ಮೇಲೆ ನಿರ್ಧರಿಸಲಾಗುವುದರಿಂದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳನ್ನು ಈ ಬಾರಿ ಬದಲಾಯಿಸುವ ಸಾಧ್ಯತೆಯಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಸಾಮಾನ್ಯವಾಗಿ ಸಣ್ಣ ಉಳಿತಾಯ ಖಾತೆಗಳ ಬಡ್ಡಿ ದರವನ್ನು ಹಿಂದಿನ ತ್ರೈ ಮಾಸಿಕದ ಟ್ರೆಂಡ್‌ಗೆ ಅನುಗುಣವಾಗಿ ನಿರ್ಧರಿಸಲಾಗುತ್ತದೆ.

ತಜ್ಞರು ಏನು ಹೇಳುತ್ತಾರೆ?

ಪ್ರತಿ ತ್ರೈಮಾಸಿಕದ ಕೊನೆಯಲ್ಲಿ ಸಣ್ಣ ಉಳಿತಾಯ ಖಾತೆಗಳ ಬಡ್ಡಿ ದರವನ್ನು ಪರಿಷ್ಕರಿಸಲಾಗುತ್ತದೆ ಮತ್ತು ಅದಕ್ಕನುಗುಣವಾಗಿ ಮುಂದಿನ ತ್ರೈ ಮಾಸಿಕ ದರವನ್ನು ನಿರ್ಧರಿಸಲಾಗುತ್ತದೆ. 10 ವರ್ಷಗಳ ಜಿ-ಸೆಕ್ ಶೇಕಡಾ 7.0 ರಿಂದ 7.2ರ ನಡುವೆ ಇದೆ ಮತ್ತು ಮುಂದೆ ಶೇಕಡಾ 7.1-7.2ರಷ್ಟು ಮುಂದುವರಿಯುವ ನಿರೀಕ್ಷೆಯಿದೆ. ಈ ವರ್ಷದ ಸೆಪ್ಟಂಬರ್ ನಂತರ ಹಣದುಬ್ಬರ ದರವು ಶೇಕಡಾ 5-6ರ ಆಸುಪಾಸಿನಲ್ಲಿರಲಿದೆ ಎಂದು ನಿರೀಕ್ಷಿಸಲಾಗಿದೆ. ಆದ್ದರಿಂದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು ಬದಲಾಗುವ ಸಾಧ್ಯತೆ ಇಲ್ಲ ಎಂದು ಆರ್ಥಿಕ ಪರಿಣತರು ಹೇಳಿದ್ದಾರೆ.

ಪ್ರಸಕ್ತ ಬಡ್ಡಿ ದರ ಎಷ್ಟಿದೆ?

ಪ್ರಸ್ತುತ ಸಣ್ಣ ಉಳಿತಾಯ ಖಾತೆಗಳ ಬಡ್ಡಿ ದರಗಳ ವಿವರ ನೋಡುವುದಾದರೆ, ವಾರ್ಷಿಕವಾಗಿ ಪೋಸ್ಟ್‌ ಆಫೀಸ್‌ ಉಳಿತಾಯ ಖಾತೆಗಳಿಗೆ 4%, ಸೀನಿಯರ್‌ ಸಿಟಿಜನ್ಸ್‌ ಸೇವಿಂಗ್ಸ್‌ ಸ್ಕೀಮ್‌-SCSSಗೆ 8.2% ಮತ್ತು ಸಾರ್ವಜನಿಕ ಭವಿಷ್ಯ ನಿಧಿ-PPFಗೆ 7.1% ಬಡ್ಡಿ ದರವಿದೆ.

ಹಣಕಾಸು ಸಚಿವಾಲಯವು ಅಕ್ಟೋಬರ್-ನವೆಂಬರ್ ತ್ರೈಮಾಸಿಕದಲ್ಲಿ ಸಾರ್ವಜನಿಕ ಭವಿಷ್ಯ ನಿಧಿ ಖಾತೆಗಳ ಬಡ್ಡಿದರವನ್ನು 2023ರ ಸೆಪ್ಟಂಬರ್ ವೇಳೆಗೆ ವಾರ್ಷಿಕವಾಗಿ ಶೇಕಡಾ 7.10ಕ್ಕೆ ಉಳಿಸಿಕೊಳ್ಳಬಹುದು ಎಂಬ ಸಲಹೆ ವ್ಯಕ್ತವಾಗಿದೆ.

ಕಳೆದ ವರ್ಷದಲ್ಲಿ ದರ ಏರಿಕೆಯೊಂದಿಗೆ, ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳು ಪ್ರಸ್ತುತ ದೀರ್ಘಾವಧಿಯ ಸ್ಥಿರ ಠೇವಣಿ(FD)ಗಳಿಗೆ ಸಮಾನವಾಗಿವೆ ಎಂದು ಬ್ಯಾಂಕಿಂಗ್‌ ಪರಿಣತರು ಅಭಿಪ್ರಾಯಪಟ್ಟಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಏಪ್ರಿಲ್‌ನಿಂದ ದರ ಏರಿಕೆಯನ್ನು ಸ್ಥಗಿತಗೊಳಿಸಿದೆ. ಅಲ್ಲದೆ ಜಾಗತಿಕವಾಗಿ ಹಣದುಬ್ಬರವು ನಿಧಾನವಾಗಿ ಕಡಿಮೆಯಾಗುತ್ತಿರುವುದರಿಂದ ರೆಪೊ ದರವು ಇದೇ ರೀತಿ ಮುಂದುವರಿಯುವ ನಿರೀಕ್ಷೆಯಿದೆ. ಆದ್ದರಿಂದ ಹೆಚ್ಚಿನ ಪರಿಷ್ಕರಣೆಗೆ ಯಾವುದೇ ಸಾಧ್ಯತೆ ಇಲ್ಲ. ಜೊತೆಗೆ SCSSನಲ್ಲಿ ಗಮನಾರ್ಹ ದರ ಏರಿಕೆಯ ಸಾಧ್ಯತೆಗಳು ಕಡಿಮೆ ಎಂದೂ ಅವರು ಹೇಳಿದ್ದಾರೆ.

ಜೂನ್‌ 30, 2023ರಲ್ಲಿ ಸರ್ಕಾರ ಅನೇಕ ಸಣ್ಣ ಉಳಿತಾಯ ಖಾತೆಗಳ ಬಡ್ಡಿ ದರವನ್ನು ಹೆಚ್ಚಿಸಿತ್ತು. 2020-21ರ ಎರಡನೇ ತ್ರೈ ಮಾಸಿಕದಿಂದ 2022-23ರ ಎರಡನೇ ತ್ರೈಮಾಸಿಕದವರೆಗೆ ಸತತ ಒಂಬತ್ತು ತ್ರೈ ಮಾಸಿಕಗಳಲ್ಲಿ ಯಾವುದೇ ಬದಲಾವಣೆಯಾಗದ ನಂತರ, ಅಕ್ಟೋಬರ್-ಡಿಸೆಂಬರ್ 2022ರ ತ್ರೈಮಾಸಿಕದಲ್ಲಿ ಸರ್ಕಾರವು ಕೆಲವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಿದ ನಂತರ ಇದು ನಾಲ್ಕನೇ ಹೆಚ್ಚಳವಾಗಿತ್ತು.

ಸದ್ಯದ ಬಡ್ಡಿ ದರಗಳ ವಿವರ

ಜುಲೈ ಮತ್ತು ಸೆಪ್ಟೆಂಬರ್‌ 2023ರ ತ್ರೈ ಮಾಸಿಕದಲ್ಲಿರುವ ಬಡ್ಡಿ ದರಗಳ ವಿವರ ಇಲ್ಲಿದೆ.

  • ಉಳಿತಾಯ ಠೇವಣಿ-4%
  • 1 ವರ್ಷದ ಪೋಸ್ಟ್‌ ಆಫೀಸ್‌ ಠೇವಣಿ-6.9%
  • 1 ವರ್ಷದ ಪೋಸ್ಟ್‌ ಆಫೀಸ್‌ ಟೈಮ್‌ ಡೆಪಾಸಿಟ್‌-6.9%
  • 2 ವರ್ಷದ ಪೋಸ್ಟ್‌ ಆಫೀಸ್‌ ಡೆಪಾಸಿಟ್-‌ 7.0%
  • 3 ವರ್ಷದ ಪೋಸ್ಟ್‌ ಆಫೀಸ್‌ ಟೈಮ್‌ ಡೆಪಾಸಿಟ್‌-7%
  • 5 ವರ್ಷದ ಪೋಸ್ಟ್‌ ಆಫೀಸ್‌ ಡೆಪಾಸಿಟ್-7.5‌%
  • 5 ವರ್ಷದ ರಿಕರಿಂಗ್‌ ಡೆಪಾಸಿಟ್‌-6.5%
  • ನ್ಯಾಷನಲ್‌ ಸೇವಿಂಗ್‌ ಸರ್ಟಿಫಿಕೆಟ್ಸ್‌(NCS)-7.7%
  • ಕಿಸಾನ್‌ ವಿಕಾಸ್‌ ಪತ್ರ: 7.5%(ಇದು 115 ತಿಂಗಳಲ್ಲಿ ಮೆಚ್ಯುರ್‌ ಆಗಲಿದೆ)
  • ಪಬ್ಲಿಕ್‌ ಪ್ರೊವಿಡೆಂಟ್‌ ಫಂಡ್‌-7.1%
  • ಸುಕನ್ಯಾ ಸಮೃದ್ದಿ ಖಾತೆ- 8.0%
  • ಸೀನಿಯರ್‌ ಸಿಟಿಸನ್‌ ಸೇವಿಂಗ್‌ ಸ್ಕೀಮ್‌-8.2%
  • ಮಾಸಿಕ ಆದಾಯ ಖಾತೆ-7.4%

ಸಣ್ಣ ಉಳಿತಾಯ ಯೋಜನೆಗಳಲ್ಲಿ 3 ವಿಧಗಳಿವೆ – ಉಳಿತಾಯ ಠೇವಣಿ, ಸಾಮಾಜಿಕ ಭದ್ರತಾ ಯೋಜನೆ ಮತ್ತು ಮಾಸಿಕ ಆದಾಯ ಯೋಜನೆ. ಉಳಿತಾಯ ಠೇವಣಿಗಳಲ್ಲಿ 1-3 ವರ್ಷಗಳ ಟೈಮ್ ಡೆಪಾಸಿಟ್ ಮತ್ತು 5 ವರ್ಷಗಳ ರಿಕರಿಂಗ್ ಡಿಪಾಸಿಟ್ ಗಳು ಸೇರಿವೆ. ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಸಾರ್ವಜನಿಕ ಭವಿಷ್ಯ ನಿಧಿ (PPF), ಸುಕನ್ಯಾ ಸಮೃದ್ಧಿ ಖಾತೆ ಮತ್ತು ಹಿರಿಯ ನಾಗರಿಕರ ಉಳಿತಾಯ ಯೋಜನೆ ಸೇರಿವೆ. ಮಾಸಿಕ ಆದಾಯ ಯೋಜನೆ ಮಾಸಿಕ ಆದಾಯ ಖಾತೆಯನ್ನು ಒಳಗೊಂಡಿದೆ.

ಇದನ್ನೂ ಓದಿ: Server Hack : ಆಸ್ತಿ ನೋಂದಣಿಗಾಗಿ ರಿಜಿಸ್ಟ್ರಾರ್ ಕಚೇರಿಗೆ ಹೋದವರ ಬ್ಯಾಂಕ್ ಖಾತೆಯಿಂದ ಹಣ ಮಾಯ!

Continue Reading
Advertisement
Mysore people
ಕರ್ನಾಟಕ5 mins ago

Congress Guarantee: ಸಿಎಂ ಸಿದ್ದರಾಮಯ್ಯ ತವರಲ್ಲೇ ಸಿಗದ ಗ್ಯಾರಂಟಿ ಯೋಜನೆಗಳು; ಸ್ಲಂ ನಿವಾಸಿಗಳ ಪರದಾಟ

Winter Food Tips
ಆಹಾರ/ಅಡುಗೆ21 mins ago

Winter Food Tips: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವ ದೇಸೀ ಸಿಹಿತಿಂಡಿಗಳಿವು!

ipl fans
ಕ್ರಿಕೆಟ್50 mins ago

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

Moral policing
ಕರ್ನಾಟಕ1 hour ago

Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

Akash anand is BSP Leader mayawati's political heir
ದೇಶ1 hour ago

Akash Anand: ಯಾರಿವರು ಮಾಯಾವತಿ ಉತ್ತರಾಧಿಕಾರಿ ಆಕಾಶ್ ಆನಂದ್?

Cloudy weather in Bengaluru for the entire day Rain Forecast
ಉಡುಪಿ1 hour ago

Karnataka weather: ಬೆಂಗಳೂರಲ್ಲಿ ನಾಳೆ ಇಡೀ ದಿನ ಮೋಡ ಕವಿದ ವಾತಾವರಣ; ಇಲ್ಲಷ್ಟೇ ಮಳೆ ಸೂಚನೆ

money guide
ಮನಿ-ಗೈಡ್1 hour ago

Money Guide: ನಿವೃತ್ತಿಯ ನಂತರವೂ ಆರ್ಥಿಕವಾಗಿ ಸದೃಢರಾಗಬೇಕೆ?; ಈ ಯೋಜನೆಗಳಲ್ಲಿ ಹೂಡಿಕೆ ಮಾಡಿ

rohit sharma jay shah
ಕ್ರಿಕೆಟ್2 hours ago

Rohit Sharma: ಜಯ್​ ಶಾ ಕೈಯಲ್ಲಿದೆ ರೋಹಿತ್​ ಟಿ20 ವಿಶ್ವಕಪ್ ಭವಿಷ್ಯ!

Model Fashion Life
ಫ್ಯಾಷನ್2 hours ago

Model Fashion Life: ರೆಟ್ರೊ ಫ್ಯಾಷನ್ ಪ್ರಿಯೆ ಮಾಡೆಲ್ ಲುಸಿ ಸರೆರಿಯಾ ಚಳಿಗಾಲದ ಟಿಪ್ಸ್‌ ಹೀಗಿದೆ

Retired clerk jagadish sexually abuses girl
ಕರ್ನಾಟಕ2 hours ago

Physical Abuse : 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟ ನಿವೃತ್ತ ಕ್ಲರ್ಕ್!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ3 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ5 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ13 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌