ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ - Vistara News

ವಾಣಿಜ್ಯ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

08/09/2022

ಸರಕು ದರ (ರೂಪಾಯಿ)
ಸಕ್ಕರೆ (50 ಕೆ.ಜಿ.)
1. ಉತ್ತಮ ದಪ್ಪ
2. ಮಧ್ಯಮ ಸಣ್ಣ

1910-1920
1880-1890
ಬೆಲ್ಲ
1. ಸಣ್ಣ ಅಚ್ಚು
2. ದಪ್ಪ ಅಚ್ಚು
3. ಉಂಡೆ [ಸೇಲಂ]
4. ಕೊಲ್ಲಾಪುರ

4700-4900
4200-4300
4800-4900
4200-5200
ತೊಗರಿಬೇಳೆ ಹೊಸದು 50 ಕೆ.ಜಿ.
1. ದೇಶಿ ಶಿವಲಿಂಗ (ಜಿಎಸ್ಟಿ)
2. ವಿದೇಶಿ ಶಿವಲಿಂಗ
5. ವಿದೇಶಿ ಮಧ್ಯಮ
3. ಗುಲ್ಬರ್ಗ ಪಟ್ಕ ಸಾರ್ಟೆಕ್ಸ್
4. ರೆಗ್ಯುಲರ್

5750- 5800
5100- 5150
4700- 4800
5600- 5650
5400- 5500
ಕಡ್ಲೆ ಬೇಳೆ 50 ಕೆ.ಜಿ.
1. ಲಕನ್
2. ತ್ರಿಶೂಲ್
3. ಮಹಾರಾಜಾ
4. ಅಕೋಲ

3450-3500
3430-3450
3250-3270
3100-3150
ಕಡಲೆಕಾಯಿ ಬೀಜ 40 ಕೆಜಿ
ಉತ್ತಮ ದಪ್ಪ
ಮಧ್ಯಮ

5400-5500
4400-4600
ಹುರಿಕಡ್ಲೆ 30 ಕೆ.ಜಿ.
1. ಫೈನ್
2. ಮೀಡಿಯಂ

2300 – 2320
2100 – 2150
ಉದ್ದಿನ ಬೇಳೆ 50 ಕೆ.ಜಿ.
1. ಡಬಲ್ ಹಾರ್ಸ್
2. ಹನುಮಾನ್
3. ವೈಟ್ ಗೋಲ್ಡ್
4. ಸೂರ್ಯ
4. ಮಧ್ಯಮ ದರ್ಜೆ
5. ಗೋಲಾ ಉತ್ತಮ
6. ಗೋಲಾ ಮಧ್ಯಮ

6900-6950
5650-5700
5550-5600
5600-5650
5400-5500
5700-5800
4500-4600
ಹೆಸರು ಬೇಳೆ 50 ಕೆ.ಜಿ.
1. ಸೋಂ ಪರಿ
2. ಮಧ್ಯಮ

4750-4800
4300-4500
ಹೆಸರು ಕಾಳು
1. ಉತ್ತಮ
2. ಮಧ್ಯಮ

4600-4700
4100-4200
ಅಲಸಂದೆ
1. ಉತ್ತಮ
2. ಮಧ್ಯಮ

3850-3900
3700-3750
ಅವರೆ ಕಾಳು
1. ಉತ್ತಮ
2. ಮಧ್ಯಮ

ಅವರೆ ಬೇಳೆ
1. ಉತ್ತಮ
2. ಮಧ್ಯಮ

ಹುರುಳಿ ಕಾಳು
1. ಉತ್ತಮ
2. ಮಧ್ಯಮ

4900-5000
4800-4900


6200-6300
5800-5900


3500-3600
3300-4000
ರಾಗಿ 100 ಕೆ.ಜಿ.
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

3200-3300
2800-3000
ಅಕ್ಕಿ ಸೋನಾ ಮಸೂರಿ (100 ಕೆ. ಜಿ.)
1. ರಾ ರೈಸ್ ಅಕ್ಕಿ 2ವರ್ಷ ಹಳೇದು
2. ರಾ ರೈಸ್ ಅಕ್ಕಿ 1ವರ್ಷ ಹಳೇದು
3. ರಾ ರೈಸ್ ನುಚ್ಚು ಹಳೇದು
4. 1 ವರ್ಷ ಹಳೇದು
5. ಸ್ಟೀಮ್ ಉತ್ತಮ
6. ಸ್ಟೀಮ್ ಮಧ್ಯಮ
7. ಸ್ಟಿಮ್ ನುಚ್ಚು
8. ಆರ್ ಎನ್ ಆರ್ ಸ್ಟೀಮ್
9. ಹೆಚ್ ಎಂ ಟಿ ಸ್ಟಿಮ್
10. ಸೋನಾ ಬೈಡ್‌
11. ಐಆರ್ 8 (100 ಕೆ.ಜಿ)
12. ಇಡ್ಲಿಕಾರ್ (100 ಕೆ.ಜಿ)
13. ಕೆಂಪು ಕುಚಲಕ್ಕಿ ಉತ್ತಮ
14. ಕೆಂಪು ಕುಚಲಕ್ಕಿ ಮಧ್ಯಮ
15. ಐ ಆರ್8 (100 ಕೆಜಿ)
16. ಕಾವೇರಿ ಸೊ,ಮ

5500-5600
4600-4700
2900-3000
4500-4700
4800-4900
4500-4600
2700-2800
4700-4800
5200-5300
4700-4800
3200-3300
3250-3300
4700-4900
4500-4600
3200-3300
4300-4500
ಬೆಳ್ಳುಳ್ಳಿ ಎಂಪಿ 100 ಕೆ.ಜಿ.
1. ಎಂಪಿ ಲಡ್ಡು
2. ಎಂಪಿ ಗೋಲಾ
3. ಮಧ್ಯಮ
4. 30 ಕೆ.ಜಿ. ಬಾಕ್ಸ್
5. ಗೋಲ್ಟಾ ಗೊಲ್ಟಿ

2500-3000
3000-3500
1500-2000
1900-2000
250-450
ಈರುಳ್ಳಿ
1. ಮಹಾರಾಷ್ಟ್ರ ದಪ್ಪ
2. ಮಧ್ಯಮ
3. ಕರ್ನಾಟಕ ದಪ್ಪ
4. ಮಧ್ಯಮ
5. ಗೋಲ್ಟಾ ಗೊಲ್ಟಿ

800-900
600-700
650-750
450-550
200-500
ಆಲೂಗಡ್ಡೆ (50 ಕೆ.ಜಿ.)
1. ಚಿಪ್ಸ್‌ ದಪ್ಪ
2. ಚಿಪ್ಸ್‌ ಮಧ್ಯಮ
3. ಆಗ್ರಾ ದಪ್ಪ
5. ಹಾಸನ್ ದಪ್ಪ
6. ಮಧ್ಯಮ

1500- 1550
1100-1150
1300-1350
1200-1250
800 – 1000
ಹಸಿ ಶುಂಠಿ (60 ಕೆ.ಜಿ.)
1. ಹೈಟೆಕ್
2. ಮಧ್ಯಮ
3. ಮೋಳ್ಕೆ

2900-3000
2000-2500
800-1200
ಪರಿಶುದ್ಧ ಅಡುಗೆ ಎಣ್ಣೆ
ಸೂರ್ಯಕಾಂತಿ ಎಣ್ಣೆ
1. ಸನ್‌ಪ್ಯೂರ್ 10 ಲೀ.
2. ಸನ್‌ಪ್ಯೂರ್ 15 ಕೆ.ಜಿ
3. ಗೋಲ್ಡ್‌ವಿನ್ನರ್ 10 ಲೀ.
4. ಗೋಲ್ಡ್‌ವಿನ್ನರ್ 15 ಕೆ.ಜಿ
4. ಫಾರ್ಚುನ್ 10 ಲೀ.
5. ಫಾರ್ಚುನ್ 15 ಕೆ.ಜಿ
6. ಜೆಮಿನಿ 10 ಲೀ.
7. ಜೆಮಿನಿ 15 ಕೆ.ಜಿ


1540
2450
1550
2550
1550
2550
1650
2650
ಕಡ್ಲೆ ಹಿಟ್ಟು
1. ಶಂಕರ್ 30 ಕೆ.ಜಿ
2. ಶಂಕರ್ 10 ಕೆ.ಜಿ
3. ಶಂಕರ್ 20 ಕೆಜಿ ಪ್ಯಾಕೆಟ್

2160
750
163
ಬೆಳೆ ಕಾಳು
1. ದೇಸಿ ಶಿವಲಿಂಗ
2. ಪಟ್ಕ ಸಾರ್ಟೆಕ್ಸ್
3. ರೆಗ್ಯುಲರ್
4. ವಿದೇಶಿ ಶಿವಲಿಂಗ
5. ವಿದೇಶಿ ಮಧ್ಯಮ

5750-5800
5400-5500
5250-5350
4900-5000
4600-4700
ಕಡ್ಲೆಕಾಳು (50 ಕೆಜಿ)
1. ಕ್ಲಿನ್ ಬೋಲ್ಡ್
2. ಮಧ್ಯಮ

3100-3150
3000-3050
ಚಕ್ಕಿ ಅಟ್ಟ (50 ಕೆ.ಜಿ)
1. ಐಸ್
2. ಆರೆಂಜ್‌
3. ಸಿಲ್ವರ್ ಕಾಯಿನ್
4. ಇಂದೂರ್
5. ಕೇಸರಿ ಪೀಚ್
6. ಅಂಬೆ

1700-1710
1730-1750
1600-1610
1580-1590
1600-1620
1600-1610
ರೆಗ್ಯುಲರ್ ಅಟ್ಟ 50 ಕೆ.ಜಿ
1. ಆರೆಂಜ್
2. ರಾಕ್ಷಿ
3. ಸುನೀಲ್

1600-1620
1600-1610
1560-1570
ತಂದೂರಿ ಅಟ್ಟ ( 50 ಕೆ.ಜಿ)
1. ರಾಕ್ಷಿ
2. ಸಿಲ್ವರ್ ಕಾಯಿನ್
3. ಮೋಹಿನಿ

1720-1730
1700-1710
1700-1710
ಸಾದಾ ಸೂಜಿ (50 ಕೆ.ಜಿ)
1. ಆರೆಂಜ್
2. ರಾಕ್ಷಿ
3. ಹೀರೊ
4. ಸುನೀಲ್
5. ಕ್ಯಾಂಡಿ

1880-1890
1860-1870
1740-1750
1850-1860
1650-1660
ಚಿರೋಟಿ ಸೂಜಿ (50 ಕೆ.ಜಿ)
1. ಮೋಹಿನಿ
2. ಆರೆಂಜ್ 30 ಕೆ.ಜಿ
3. ತುಳಸಿ

1740-1750
1150
1700-1710
ಮೈದಾ (50 ಕೆ.ಜಿ)
1. ಐಸ್
2. ಸುನೀಲ್
3. ಆರೆಂಜ್
4. ಮೊಬೆಲ್
5. ಸಿಲ್ವರ್ ಕಾಯಿನ್
6. ಕೇಸರಿ ಪೀಚ್

1830-1840
1780-1790
1880-1890
1820-1830
1810-1820
1750-1760

ಮೀಡಿಯಂ ಕುಕಿಂಗ್ ಆಯಿಲ್ ೧ ಲೀಟರ್‌ನ ೧೦ ಪ್ಯಾಕೆಟ್

1. ಸನ್ ಪ್ರಿಯಾ
2. ಸನ್ ಪಾರ್ಕ್
3. ಸನ್ ಪವರ್
4. ಸೂರ್ಯ ಪವರ್
1170
1180
1100
1090
ದೀಪದೆಣ್ಣೆ 1 ಲೀ.ನ 10 ಪ್ಯಾಕೆಟ್
1. ಆನಂದಂ
2. ಅಂದo
3. ಅಕ್ಷಯ
4. ನಂದಿನಿ

1180
1190
1130
1150
ಕಡ್ಲೆಕಾಯಿ ಎಣ್ಣೆ
1. ಪ್ಯೂರ್ ನಟ್ 10 ಲೀ.
2. ಕೆ ಎನ್ ಜೆ 10 ಲೀ.
3. ನಟ್ ಗೋಲ್ಡ್ 10 ಲೀ.

1600
1550
1450
ಪಾಮ್ ಆಯಿಲ್ 1 ಲೀ.ನ 10 ಪ್ಯಾಕೆಟ್
1. ರುಚಿಗೋಲ್ಡ್ 10 ಲೀ.
2. ಲೀಡರ್ ಗೋಲ್ಡ್ 10 ಲೀ.
3. ರುಚಿಗೋಲ್ಡ್ 15 ಕೆ.ಜಿ

1030
1010
1820
ರಗ್ಯುಲರ್ ವನಸ್ಪತಿ
1. ರುಚಿ No1, 10 ಕೆ.ಜಿ
2. ರುಚಿ No1, 15 ಕೆ.ಜಿ
3. ಎಟೂಝೆಡ್ 15 ಕೆ.ಜಿ

1050
1850
1950
ಬೇಕರಿ ಸ್ಪೆಷಲ್ ವನಸ್ಪತಿ 15 ಕೆ.ಜಿ ಬಾಕ್ಸ್
1. ಗ್ರೀನ್ ಗೋಲ್ಡ್
2. ಗ್ರೇಟ್ ಚೆಫ್
3. ಬೆಸ್ ಪಫ್
4. ಬೆಸ್ ಕ್ರೀಮ್
5. ಬೆಸ್ ಬಿಸ್ಕೆಟ್
6. ಬೇಕರ್ ಕಿಂಗ್

2250
2280
1950
1950
1900
2000
ಮೆಣಸಿನಕಾಯಿ 100 ಕೆ.ಜಿ.: ಪಿ.ಸಿ.ಎನ್. ಟ್ರೇಡರ್ಸ್ [ಎಪಿಎಮ್‌ಸಿ ಬೆಂಗಳೂರು]
1. ಬ್ಯಾಡಗಿ ಸ್ಟೆಮ್‌
2. ಬ್ಯಾಡಗಿ ಸ್ಟೆಮ್‌ ಲೆಸ್
3. ಗುಂಟೂರು ಸ್ಟೆಮ್‌
4. ಗುಂಟೂರು ಸ್ಟೆಮ್‌ಲೆಸ್
4. ಮಣ್‌ಕಟ್
ಕನಿಷ್ಠ ಗರಿಷ್ಠ
35,000 – 48,000
48,000 – 68,000
17,000 – 28,000
33,000 – 34,000
24,000 – 26,500
ಹುಣಸೆ ಹುಳಿ (100 ಕೆ.ಜಿ.)
1. ಸಿಲ್ವರ್‌
1. ರೌಂಡ್
2. ಪ್ಲವರ್
3. ಕರ್ಪುಳಿ
ಕನಿಷ್ಠ ಗರಿಷ್ಠ
18,000 – 25,000
6,000 – 12,000
6,000 – 10,000
11,000 – 17,000
ದನಿಯಾ (40 ಕೆ.ಜಿ.)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್
ಕನಿಷ್ಠ ಗರಿಷ್ಠ
6,800 – 9,000
5,800 – 6,500
5,300 – 5,700
5,000 – 5,300
ಮಸಾಲ ದರ (1 ಕೆ.ಜಿ.)ಕನಿಷ್ಠಗರಿಷ್ಠ
ಅರಿಶಿಣ ಕೊಂಬು
1. ದಪ್ಪ
2. ಮಧ್ಯಮ
3. ಜೀರಿಗೆ ಉತ್ತಮ
4. ಜೀರಿಗೆ ಮಧ್ಯಮ

120
90
320
270

150
110
340
275
ಗಸಗಸೆ
1. ಫೈನ್
2. ಮೀಡಿಯಂ
3. ಟರ್ಕಿ
4. ಇಂಡಿಯನ್

1200
1100
1450
1350

1250
1550
1510
1400
ಮೆಂತ್ಯೆ7585
ಸಾಸಿವೆ
1. ಸಾಸಿವೆ ಸಣ್ಣ
2. ಸಾಸಿವೆ ದಪ್ಪ

80
80

82
82
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

1550
1350
1300
1050

1650
1450
1450
1100
ಲವಂಗ
1. ಮಡಗಾಸ್ಕರ್
2. ಲಾಲ್ ಪರಿ
3. ಚಕ್ಕೆ
4. ಮರಾಠಿ ಮೊಗ್ಗು ಒರಿಜಿನಲ್
5. ಅನಾನಸ್ ಹೂ
6. ಒಣ ಕೊಬ್ಬರಿ
7. ಮಧ್ಯಮ

730
800
300
800
800
175
165

740
820
310
850
900
180
170
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

540
520

550
530
ಗೋಡಂಬಿ
1. ಜೆ ಎಚ್
3. ಡಬ್ಲ್ಯೂ 240
4. ಡಬ್ಲ್ಯೂ 240 ಪಾನ್ ರೊಟ್ಟಿ

690
795
650

750
800
700
ಬಾದಾಮಿ640650
ಗೋಧಿ 50 ಕೆಜಿ
1. ವಿಕ್ಟೋರಿ ರಾಣಿ 50 ಕೆಜಿ
2. ಲಾಲ್ ಪರಿ 30 ಕೆಜಿ
3. ಕೊಹಿನೂರ್ 50 ಕೆಜಿ

1950
1850
1550
ದ್ರಾಕ್ಷಿ200240
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

130
150
170

135
160
180

[ ಮೊಟ್ಟೆ (ಎನ್.ಇ.ಸಿ.ಸಿ) 100ಕ್ಕೆ 450 ರೂಪಾಯಿ]

ಎಪಿಎಂಸಿ ತರಕಾರಿ ಸಗಟು ದರ (1 ಕೆ. ಜಿ.ಗೆ) 08 ಸೆಪ್ಟೆಂಬರ್ 2022

ತರಕಾರಿಕನಿಷ್ಠಗರಿಷ್ಠ
ಟೊಮೇಟೊ2030
ಹುರುಳಿಕಾಯಿ ನಾಟಿ           4050
ಹ್ಯಾರಿಕೊಟ್‌ ಬೀನ್ಸ್    5060
ಬದನೆಕಾಯಿ ಬಿಳಿ     2025
ಬದನೆಕಾಯಿ ಗುಂಡು  1520
ಬೀಟ್‌ರೂಟ್‌             4045
ಹಾಗಲಕಾಯಿ            2530
ಸೀಮೆ ಬದನೆಕಾಯಿ      2025
ಸೌತೆಕಾಯಿ                  1520
ಗೊರಿಕಾಯಿ ಗೊಂಚಲು  3540
ಕ್ಯಾಪ್ಸಿಕಮ್‌ 2530
ಹಸಿ ಮೆಣಸಿನಕಾಯಿ     3035
ಸಣ್ಣ ಮೆಣಸಿನಕಾಯಿ   4045
ಬಜ್ಜಿ ಮೆಣಸಿನಕಾಯಿ2530
ಊಟಿ ಕ್ಯಾರೆಟ್           6575
ನಾಟಿ ಕ್ಯಾರೆಟ್              5060
ತೆಂಗಿನಕಾಯಿ               2025
ಎಲೆಕೋಸು                1520
ನವಿಲು ಕೋಸು4050
ಹೂ ಕೋಸು ಸಣ್ಣ     3040
ನುಗ್ಗೆಕಾಯಿ             4050
ಮೂಲಂಗಿ 2020
ಹಿರೇಕಾಯಿ4045
ಬೆಂಡೆಕಾಯಿ               2530
ಈರುಳ್ಳಿ                   1420
ಚಪ್ಪರವರೇಕಾಯಿ5060
ಬೆಳ್ಳುಳ್ಳಿ                   5065
ಆಲೂಗಡ್ಡೆ               3035
ತೊಂಡೆಕಾಯಿ 2025
ಸೋರೆಕಾಯಿ 3035
ಕಾರಮಣಿ4555

ಅಡಕೆ ಧಾರಣೆ: 28 ಜುಲೈ, 2022

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18089
2. 26089
3.10109
4. 43899
5. 36809
1. 29999
2. 31199
3. 19549
4. 46429
5. 39519
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1. 33699
2.35196
3.21199
4. 40799
1. 39699
2.46518
3. 32289
4. 49899
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17500
2. 49090
3. 47009
4. 57669
1. 37299
2.53486
3. 49459
4. 79596
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198

ಇದನ್ನೂ ಓದಿ| ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Equity Market: ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ. ಜೂನ್‌ 4ರ ಬಳಿಕ ದೇಶದ ಷೇರು ಮಾರುಕಟ್ಟೆಯನ್ನು ನಿಯಂತ್ರಿಸುವುದು ಕಷ್ಟ ಎಂಬುದಾಗಿ ಮೋದಿ ಹೇಳಿರುವ ಬೆನ್ನಲ್ಲೇ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಇದು ಹೂಡಿಕೆದಾರರ ವಿಶ್ವಾಸ ಹೆಚ್ಚಿಸಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Equity Market
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶ ಪ್ರಕಟವಾಗುವ ಜೂನ್‌ 4ರ ಬಳಿಕ ಭಾರತದ ಷೇರು ಮಾರುಕಟ್ಟೆಯನ್ನು ಹಿಡಿಯಲು ಆಗುವುದಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಜೂನ್‌ 4ರ ಬಳಿಕ ಹೂಡಿಕೆದಾರರಿಗೆ ಭಾರಿ ಲಾಭವಾಗಲಿದೆ ಎಂಬುದಾಗಿ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಕಳೆದ 6 ತಿಂಗಳಲ್ಲಿ ಬಾಂಬ್‌ ಸ್ಟಾಕ್‌ ಎಕ್ಸ್‌ಚೇಂಜ್‌ (BSE) ಪಟ್ಟಿಯಲ್ಲಿರುವ ಕಂಪನಿಗಳು 1 ಲಕ್ಷ ಕೋಟಿ ಡಾಲರ್‌ ಗಳಿಸಿವೆ ಎಂಬುದಾಗಿ ತಿಳಿದುಬಂದಿದೆ. ಇದರೊಂದಿಗೆ ಭಾರತದ ಈಕ್ವಿಟಿ ಮಾರುಕಟ್ಟೆಯ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ.

ಹೌದು, 2023ರ ನವೆಂಬರ್‌ನಲ್ಲಿ ಬಿಎಸ್‌ಇ ಒಟ್ಟು ಮಾರುಕಟ್ಟೆ ಮೊತ್ತವು 4 ಲಕ್ಷ ಕೋಟಿ ಡಾಲರ್‌ ಇತ್ತು. ಬಿಎಸ್‌ಇನಲ್ಲಿ ಲಿಸ್ಟ್‌ ಆಗಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳವು ಕಳೆದ 6 ತಿಂಗಳಲ್ಲಿಯೇ 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ. ಬಿಎಸ್‌ಇ ಲಿಸ್ಟ್‌ ಆಗಿರುವ ಕಂಪನಿಯಗಳ ಮಾರುಕಟ್ಟೆ ಬಂಡವಾಳವು 2007ರ ಮೇ ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇದಾದ ಒಂದು ದಶಕದ ಬಳಿಕ ಅಂದರೆ, 2017ರ ಜುಲೈನಲ್ಲಿ 2 ಲಕ್ಷ ಕೋಟಿ ಡಾಲರ್‌ ತಲುಪಿತ್ತು. ಇನ್ನು 2021ರ ಮೇ ತಿಂಗಳಲ್ಲಿ 4 ಲಕ್ಷ ಕೋಟಿ ಡಾಲರ್‌ ಆಗಿತ್ತು. ಈಗ ಆರೇ ತಿಂಗಳಲ್ಲಿ ಮಾರುಕಟ್ಟೆ ಬಂಡವಾಳವು 1 ಲಕ್ಷ ಕೋಟಿ ಡಾಲರ್‌ ಜಾಸ್ತಿಯಾಗಿದೆ.

ಇದರೊಂದಿಗೆ ಮಾರುಕಟ್ಟೆ ಬಂಡವಾಳ ಮೌಲ್ಯವು 5 ಲಕ್ಷ ಕೋಟಿ ಡಾಲರ್‌ ತಲುಪಿರುವುದು ಐತಿಹಾಸಿಕ ಎಂದೇ ಹೇಳಲಾಗುತ್ತಿದೆ. ಇದರಿಂದ ಹೂಡಿಕೆದಾರರ ವಿಶ್ವಾಸವೂ ಹೆಚ್ಚಾಗಿದೆ ಎಂದು ವಿಶ್ಲೇಷಿಸಲಾಗಿದೆ. 5 ಲಕ್ಷ ಕೋಟಿ ಡಾಲರ್‌ ಎಂದರೆ ಭಾರತದ 414.75 ಲಕ್ಷ ಕೋಟಿ ರೂ. ಆಗಿದೆ. ಭಾರತದ ಈಕ್ವಿಟಿ ಮಾರುಕಟ್ಟೆಯಲ್ಲಿಯೇ ಮೊದಲ ಬಾರಿಗೆ ಇಷ್ಟೊಂದು ವೇಗದಲ್ಲಿ ಮಾರುಕಟ್ಟೆಯ ಬಂಡವಾಳವು ಏರಿಕೆಯಾಗಿದೆ ಎಂಬುದಾಗಿ ತಜ್ಞರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ನಿರೀಕ್ಷಿಸಲಾಗಿದೆ.

ಸದ್ಯ, ನಿಫ್ಟಿಯು ತನ್ನ ಗರಿಷ್ಠ ಪಾಯಿಂಟ್‌ಗಳಿಗಿಂತ 250 ಪಾಯಿಂಟ್‌ ಹಿಂದಿದೆ. ಆದರೂ, ಸಣ್ಣ ಹಾಗೂ ಮಧ್ಯಮ ಶ್ರೇಣಿಯ ಹೂಡಿಕೆಯು ಹೆಚ್ಚಾಗಿದೆ. ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಭಾರತದ ಷೇರುಪೇಟೆಯು ಮಹತ್ವದ ಸ್ಥಾನ ಪಡೆದಿದೆ. ಹಾಂಕಾಂಗ್‌, ಜಪಾನ್‌, ಚೀನಾ ಹಾಗೂ ಅಮೆರಿಕದ ನಂತರ ಭಾರತದ ಷೇರುಪೇಟೆಯು ಬೃಹತ್‌ ಷೇರು ಮಾರುಕಟ್ಟೆ ಎನಿಸಿದೆ. 2027ರ ವೇಳೆಗೆ ಭಾರತವು ವಿಶ್ವದಲ್ಲೇ ಮೂರನೇ ಬೃಹತ್‌ ಆರ್ಥಿಕತೆ ರಾಷ್ಟ್ರ ಎಂಬ ಖ್ಯಾತಿ ಗಳಿಸುವ ವಿಶ್ವಾಸ ಹೊಂದಿದೆ. 2030ರ ವೇಳೆಗೆ ಮಾರುಕಟ್ಟೆ ಬಂಡವಾಳವು 10 ಲಕ್ಷ ಡಾಲರ್‌ ತಲುಪಬೇಕು ಎಂಬ ಗುರಿ ಇದೆ. ಇದರ ದಿಸೆಯಲ್ಲಿ ಈಕ್ವಿಟಿ ಮೌಲ್ಯವು ಗಣನೀಯವಾಗಿ ಏರಿಕೆಯಾಗಿರುವುದು ಸಕಾರಾತ್ಮಕ ಸಂಗತಿಯಾಗಿದೆ.

ಇದನ್ನೂ ಓದಿ: LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Continue Reading

ಮನಿ-ಗೈಡ್

Money Guide: ಉಮಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಬಹುದು

Money Guide: ನೌಕರರ ಭವಿಷ್ಯ ನಿಧಿ ಉದ್ಯೋಗಿಗಳ ಪಾಲಿಗೆ ಅತ್ಯುತ್ತಮ ನಿವೃತ್ತಿ ಉಳಿತಾಯ ಆಯ್ಕೆ ಎನಿಸಿಕೊಂಡಿದೆ. ಉದ್ಯೋಗಿಗಳ ಪಾಲಿಗೆ ಅತ್ಯುತ್ತಮ ನಿವೃತ್ತಿ ಉಳಿತಾಯ ಆಯ್ಕೆ ಎನಿಸಿಕೊಂಡಿದೆ. ಈ ಯೋಜನೆಯಲ್ಲಿ ಉದ್ಯೋಗಿಗಳು ಮತ್ತು ಉದ್ಯೋಗದಾತರಿಂದ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ನೌಕರರ ಉಳಿತಾಯ ಮನೋಭಾವವನ್ನು ಉತ್ತೇಜಿಸಲಾಗುತ್ತದೆ. ಪ್ರತಿ ತಿಂಗಳು ತಮ್ಮ ಮೂಲ ವೇತನದ ಶೇ. 12ರಷ್ಟು ಕೊಡುಗೆ ನೀಡುವ ಉದ್ಯೋಗಿಗಳಿಗೆ ಈ ಯೋಜನೆಯು ಶೇ. 8.15 ಬಡ್ಡಿದರವನ್ನು ನೀಡುತ್ತದೆ. ಉದ್ಯೋಗಿಗಳು ನಿವೃತ್ತರಾದ ನಂತರ ತಮ್ಮ ಪಿಎಫ್‌ ಖಾತೆಯಲ್ಲಿ ಸಂಗ್ರಹವಾದ ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು. ಅದಕ್ಕಾಗಿ ನೀವು ಉಮಾಂಗ್ ಆ್ಯಪ್‌ ಬಳಸಬಹುದು. ಉಮಾಂಗ್ ಆ್ಯಪ್‌ ಬಳಕೆಯ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಪಿಎಫ್ (PF) ಎಂದೂ ಕರೆಯಲ್ಪಡುವ ನೌಕರರ ಭವಿಷ್ಯ ನಿಧಿ (Employees Provident Fund-EPFಉದ್ಯೋಗಿಗಳ ಪಾಲಿಗೆ ಅತ್ಯುತ್ತಮ ನಿವೃತ್ತಿ ಉಳಿತಾಯ ಆಯ್ಕೆ ಎನಿಸಿಕೊಂಡಿದೆ. ಈ ಯೋಜನೆಯಲ್ಲಿ ಉದ್ಯೋಗಿಗಳು ಮತ್ತು ಉದ್ಯೋಗದಾತರಿಂದ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ನೌಕರರ ಉಳಿತಾಯ ಮನೋಭಾವವನ್ನು ಉತ್ತೇಜಿಸಲಾಗುತ್ತದೆ. ಪ್ರತಿ ತಿಂಗಳು ತಮ್ಮ ಮೂಲ ವೇತನದ ಶೇ. 12ರಷ್ಟು ಕೊಡುಗೆ ನೀಡುವ ಉದ್ಯೋಗಿಗಳಿಗೆ ಈ ಯೋಜನೆಯು ಶೇ. 8.15 ಬಡ್ಡಿದರವನ್ನು ನೀಡುತ್ತದೆ. ಉದ್ಯೋಗಿಗಳು ನಿವೃತ್ತರಾದ ನಂತರ ತಮ್ಮ ಪಿಎಫ್‌ ಖಾತೆಯಲ್ಲಿ ಸಂಗ್ರಹವಾದ ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು. ಅದಾಗ್ಯೂ ಅನಾರೋಗ್ಯದಂತಹ ತುರ್ತು ಸಂದರ್ಭಗಳಲ್ಲಿ ಪಿಎಫ್ ಅಕೌಂಟ್‌ನಿಂದ ಒಂದಷ್ಟು ದುಡ್ಡು ಹಿಂಪಡೆಯಬಹುದು. ಹೀಗ ಹಣ ಹಿಂಪಡೆಯುವುದು ಈಗ ಸುಲಭ. ಕೂತಲ್ಲಿಯೇ, ಮೊಬೈಲ್‌ ಮೂಲಕವೇ ಅಪ್ಲೈ ಮಾಡಬಹುದು. ಆ ಕುರಿತಾದ ವಿವರ ಇಲ್ಲಿದೆ (Money Guide).

ಇ-ನಾಮಿನೇಷನ್‌ ಮಾಡಿಕೊಂಡಿರುವ ಪಿಎಫ್‌ ಸದಸ್ಯರು ತಮ್ಮ ಖಾತೆಯಿಂದ ಒಂದಷ್ಟು ಮೊತ್ತ, ಅಡ್ವಾನ್ಸ್‌ ಮತ್ತು ಪೆನ್ಶನ್‌ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಇಪಿಎಫ್‌ಒ ವೆಬ್‌ಸೈಟ್‌ ಅಥವಾ ಉಮಾಂಗ್ ಆ್ಯಪ್‌ ಬಳಸಬಹುದು. ಅದರಲ್ಲಿಯೂ ಉಮಂಗ್ ಆ್ಯಪ್‌ ಅನ್ನು ಹೆಚ್ಚು ಅನುಕೂಲ ಎಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಇದರ ಬಳಕೆಗೆ ತಜ್ಞರು ಶಿಫಾರಸ್ಸು ಮಾಡುತ್ತಾರೆ. ಹಣ ವಿತ್‌ಡ್ರಾ ಮಾತ್ರವಲ್ಲ ಉಮಾಂಗ್ ಆ್ಯಪ್‌ ಮೂಲಕ ಬ್ಯಾಲೆನ್ಸ್‌ ಕೂಡ ಚೆಕ್‌ ಮಾಡಬಹುದು ಎನ್ನುವುದು ವಿಶೇಷ.

ಉಮಾಂಗ್ ಆ್ಯಪ್‌ ಬಳಕೆಯ ವಿಧಾನ

  • ಗೂಗಲ್‌ ಪ್ಲೇ ಸ್ಟೋರ್‌ ಅಥವಾ ಆ್ಯಪಲ್‌ ಆ್ಯಪ್‌ ಸ್ಟೋರ್‌ನಿಂದ ಉಮಂಗ್ ಆ್ಯಪ್‌ ಡೌನ್‌ಲೋಡ್‌ ಮಾಡಿ.
  • ಆ್ಯಪ್‌ ಓಪನ್‌ ಮಾಡಿ ಆಧಾರ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಮೂಲಕ ಲಾಗಿನ್‌ ಆಗಿ.
  • ಲಾಗಿನ್‌ ಆದ ಬಳಿಕ ಸರ್ವಿಸ್‌ ಲಿಸ್ಟ್‌ನಲ್ಲಿನ EPFO ಆಯ್ಕೆ ಸೆಲೆಕ್ಟ್‌ ಮಾಡಿ.
  • ಈಗ ಪಿಎಫ್‌ ಬ್ಯಾಲನ್ಸ್‌, ನಾಮಿನೇಷನ್‌ ಅಥವಾ ಕೆವೈಸಿ ಅಪ್‌ಡೇಟ್‌ ಆಯ್ಕೆ ಕಾಣಿಸಿಕೊಳ್ಳಲಿದ್ದು, ನಿಮಗೆ ಅಗತ್ಯವಿರುವುದನ್ನು ಸೆಲೆಕ್ಟ್‌ ಮಾಡಿ.
  • ಬಳಿಕ ಸ್ಕ್ರೀನ್‌ನಲ್ಲಿ ಕಾಣಿಸುವ ಸ್ಟೆಪ್‌ ಫಾಲೋ ಮಾಡಿ.

ಹಣ ವಿತ್‌ಡ್ರಾ ಮಾಡುವ ವಿಧಾನ

  • ಉಮಂಗ್ ಆ್ಯಪ್‌ ಓಪನ್‌ ಮಾಡಿ ಆಧಾರ್‌ ನಂಬರ್‌, ಪಾಸ್‌ವರ್ಡ್‌ ನಮೂದಿಸಿ ಲಾಗಿನ್‌ ಆಗಿ.
  • ಸರ್ವಿಸ್‌ ಲಿಸ್ಟ್‌ನಲ್ಲಿನ EPFO ಆಯ್ಕೆ ಸೆಲೆಕ್ಟ್‌ ಮಾಡಿ.
  • Raise Claim ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ಈಗ UAN ನಂಬರ್‌ ನಮೂದಿಸಿ. ಅದಾದ ಬಳಿಕ ನಿಮ್ಮ ಮೊಬೈಲ್‌ ನಂಬರ್‌ಗೆ ಬರುವ ಒಟಿಪಿಯನ್ನು ನಮೂದಿಸಿ.
  • ಯಾವ ರೀತಿಯ ವಿತ್‌ಡ್ರಾ ಅಗತ್ಯ ಎನ್ನುವುದನ್ನು ಆಯ್ಕೆ ಮಾಡಿಕೊಳ್ಳಿ
  • ಅಗತ್ಯ ಮಾಹಿತಿಗಳನ್ನು ತುಂಬಿ.

ಉಮಾಂಗ್ ಆ್ಯಪ್‌ ಮೂಲಕ ನೀವು ಪಡೆಯಬಹುದಾದ ಇತರ ಸೇವೆಗಳು

  • ಪಿಎಫ್‌ ಬ್ಯಾಲನ್ಸ್‌ ಪರಿಶೀಲನೆ
  • ಕೆವೈಸಿ ಮಾಹಿತಿಯ ಅಪ್‌ಡೇಟ್‌
  • ಪಾಸ್‌ಬುಕ್‌ ಪರಿಶೀಲನೆ
  • ಜೀವನ್‌ ಪ್ರಮಾಣ್‌ ಸರ್ಟಿಫಿಕೆಟ್‌ ಪಡೆಯಲು
  • ಪೆನ್ಶನ್‌ ಪೇಮೆಂಟ್‌ ಆರ್ಡರ್‌ (PPO) ಡೌನ್‌ಲೋಡ್‌ ಮಾಡಲು

ಇಪಿಎಫ್‌ ಖಾತೆಯ ವೈಶಿಷ್ಟ್ಯ

  • ಉದ್ಯೋಗಿಗಳ ಕೊಡುಗೆ ಸಾಮಾನ್ಯವಾಗಿ ಮೂಲ ವೇತನದ ಶೇ. 12ರಷ್ಟಿರುತ್ತದೆ.
  • ಉದ್ಯೋಗದಾತರ ಕೊಡುಗೆ ನಿಮ್ಮ ಮೂಲ ವೇತನ ಮತ್ತು ತುಟ್ಟಿಭತ್ಯೆಯ ಶೇ. 12ಕ್ಕೆ ಸಮನಾಗಿರುತ್ತದೆ. ಉದ್ಯೋಗದಾತರ ಕೊಡುಗೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ: ಅವೆಂದರೆ- ಇಪಿಎಫ್ ಮತ್ತು ನೌಕರರ ಪಿಂಚಣಿ ಯೋಜನೆ(ಇಪಿಎಸ್).
  • ಹೀಗೆ ನಿಮ್ಮ ಮತ್ತು ಉದ್ಯೋಗದಾತರ ಕೊಡುಗೆಗಳೊಂದಿಗೆ ಪ್ರತಿ ತಿಂಗಳು ನಿವೃತ್ತಿಗಾಗಿ ಗಣನೀಯ ಮೊತ್ತವನ್ನು ಮೀಸಲಿಡಲಾಗುತ್ತದೆ. ಇದು ಭಾರತದಲ್ಲಿ ಕಡ್ಡಾಯ.

ಇದನ್ನೂ ಓದಿ: Money Guide: ಮೊಬೈಲ್‌ನಲ್ಲಿಯೇ ಪಿಎಫ್‌ ಮೊತ್ತ ಪರಿಶೀಲಿಸಬೇಕೆ?; ಜಸ್ಟ್‌ ಹೀಗೆ ಮಾಡಿ ಸಾಕು

Continue Reading

ದೇಶ

India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

India Skills: ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ ಸ್ಪರ್ಧಾ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಭಾನುವಾರ ದ್ವಾರಕಾದ ಯಶೋಭೂಮಿಯಲ್ಲಿ ನಡೆದಿದ್ದು, ಫ್ರಾನ್ಸ್‌ನ ಲಿಯಾನ್‌ನಲ್ಲಿ ಇದೇ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ವರ್ಲ್ಡ್ ಸ್ಕಿಲ್ಸ್‌ನಲ್ಲಿ 58 ವಿಜೇತರು ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಾಲ್ ಮತ್ತು ಫ್ಲೋರ್ ಟೈಲಿಂಗ್, ಬ್ರಿಕ್ಲೇಯಿಂಗ್, ಕಾರ್ಪೆಂಟ್ರಿ, ಫ್ಯಾಶನ್ ಟೆಕ್ನಾಲಜಿ, 3ಡಿ ಡಿಜಿಟಲ್ ಗೇಮ್ ಆರ್ಟ್, ಕ್ಲೌಡ್ ಕಂಪ್ಯೂಟಿಂಗ್, ಮೊಬೈಲ್ ಅಪ್ಲಿಕೇಶನ್‌ಗಳ ಅಭಿವೃದ್ಧಿ, ಸ್ವಾಯತ್ತ ಮೊಬೈಲ್ ರೊಬೋಟಿಕ್ಸ್, ಆರೋಗ್ಯ ಮತ್ತು ಸಾಮಾಜಿಕ ಕಾಳಜಿ ಸೇರಿದಂತೆ 61ಕ್ಕೂ ಅಧಿಕ ಕೌಶಲ್ಯಗಳಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 400ಕ್ಕೂ ಹೆಚ್ಚು ಉದ್ಯಮ ತಜ್ಞರು ಪಾಲ್ಗೊಂಡಿದ್ದರು.

VISTARANEWS.COM


on

India Skills National Competition 2024 Grand Finale 58 Winners to Represent India at World Skills
Koo

ಬೆಂಗಳೂರು: ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ (India Skills National Competition 2024) ಸ್ಪರ್ಧಾ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಭಾನುವಾರ ದ್ವಾರಕಾದ ಯಶೋಭೂಮಿಯಲ್ಲಿ ನಡೆದಿದ್ದು, ಫ್ರಾನ್ಸ್‌ನ ಲಿಯಾನ್‌ನಲ್ಲಿ ಇದೇ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ವರ್ಲ್ಡ್ ಸ್ಕಿಲ್ಸ್‌ನಲ್ಲಿ 58 ವಿಜೇತರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ನಾಲ್ಕು ದಿನಗಳ ಕಾಲ ನಡೆದ ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ ಸ್ಪರ್ಧೆಯಲ್ಲಿ ವಾಲ್ ಮತ್ತು ಫ್ಲೋರ್ ಟೈಲಿಂಗ್, ಬ್ರಿಕ್ಲೇಯಿಂಗ್, ಕಾರ್ಪೆಂಟ್ರಿ, ಫ್ಯಾಶನ್ ಟೆಕ್ನಾಲಜಿ, 3ಡಿ ಡಿಜಿಟಲ್ ಗೇಮ್ ಆರ್ಟ್, ಕ್ಲೌಡ್ ಕಂಪ್ಯೂಟಿಂಗ್, ಮೊಬೈಲ್ ಅಪ್ಲಿಕೇಶನ್‌ಗಳ ಅಭಿವೃದ್ಧಿ, ಸ್ವಾಯತ್ತ ಮೊಬೈಲ್ ರೊಬೊಟಿಕ್ಸ್, ಆರೋಗ್ಯ ಮತ್ತು ಸಾಮಾಜಿಕ ಕಾಳಜಿ ಸೇರಿದಂತೆ 61ಕ್ಕೂ ಅಧಿಕ ಕೌಶಲ್ಯಗಳಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 900ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 400ಕ್ಕೂ ಹೆಚ್ಚು ಉದ್ಯಮ ತಜ್ಞರು ಪಾಲ್ಗೊಂಡಿದ್ದರು.

ಇದನ್ನೂ ಓದಿ: 2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಬಾಲಕಿಯರದೇ ಮೇಲುಗೈ

ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ ಸ್ಪರ್ಧಾ ಕಾರ್ಯಕ್ರಮದಲ್ಲಿ ಒಡಿಶಾ ಅತಿ ಹೆಚ್ಚು ವಿಜೇತರನ್ನು ಹೊಂದಿದ್ದು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ನಂತರದ ಸ್ಥಾನದಲ್ಲಿವೆ. 17 ಚಿನ್ನ, 13 ಬೆಳ್ಳಿ, 9 ಕಂಚಿನ ಪದಕಗಳನ್ನು ಮತ್ತು 12 ಸ್ಪರ್ಧಾಳುಗಳು ಶ್ರೇಷ್ಠತಾ ಪ್ರಶಸ್ತಿ ಪಡೆಯುವುದರೊಂದಿಗೆ ಒಡಿಶಾ ಅತಿ ಹೆಚ್ಚು ವಿಜೇತರನ್ನು ಹೊಂದಿದೆ. ಕರ್ನಾಟಕ ರಾಜ್ಯವು 13 ಚಿನ್ನ, 12 ಬೆಳ್ಳಿ, 3 ಕಂಚಿನ ಪದಕ ಮತ್ತು 19 ಶ್ರೇಷ್ಠತಾ ಪ್ರಶಸ್ತಿ, ತಮಿಳುನಾಡು 6 ಚಿನ್ನ, 8 ಬೆಳ್ಳಿ, 9 ಕಂಚು ಮತ್ತು 17 ಸ್ಪರ್ಧಾಳುಗಳು ಶ್ರೇಷ್ಠತಾ ಪ್ರಶಸ್ತಿಯನ್ನು ಪಡೆದಿದ್ದಾರೆ.

ಮಹಾರಾಷ್ಟ್ರ 3 ಚಿನ್ನ, 5 ಬೆಳ್ಳಿ, 6 ಕಂಚಿನ ಪದಕ ಮತ್ತು 14 ಶ್ರೇಷ್ಠತಾ ಪ್ರಶಸ್ತಿ, ಉತ್ತರ ಪ್ರದೇಶ ರಾಜ್ಯವು 3 ಚಿನ್ನ, 3 ಬೆಳ್ಳಿ, 6 ಕಂಚಿನ ಪದಕಗಳು ಮತ್ತು 16 ಶ್ರೇಷ್ಠತಾ ಪ್ರಶಸ್ತಿ, ದೆಹಲಿ 5 ಚಿನ್ನ, 3 ಬೆಳ್ಳಿ, 2 ಕಂಚಿನ ಪದಕಗಳು ಮತ್ತು 10 ಶ್ರೇಷ್ಠತಾ ಪ್ರಶಸ್ತಿ, ರಾಜಸ್ಥಾನ ರಾಜ್ಯವು 2 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕಗಳು, ಮತ್ತು 9 ಶ್ರೇಷ್ಠತಾ ಪ್ರಶಸ್ತಿ, ಹರಿಯಾಣ 2 ಚಿನ್ನ, 3 ಬೆಳ್ಳಿ, 3 ಕಂಚಿನ ಪದಕಗಳು ಮತ್ತು 13 ಶ್ರೇಷ್ಠತಾ ಪ್ರಶಸ್ತಿ, ಮಧ್ಯಪ್ರದೇಶ 1 ಚಿನ್ನ, 2 ಬೆಳ್ಳಿ, 4 ಕಂಚು, ಮತ್ತು 11 ಶ್ರೇಷ್ಠತಾ ಪ್ರಶಸ್ತಿ, ಬಿಹಾರ ರಾಜ್ಯವು 3 ಚಿನ್ನ, 1 ಬೆಳ್ಳಿ, 3 ಕಂಚು ಮತ್ತು 6 ಸ್ಪರ್ಧಾಳುಗಳು ಶ್ರೇಷ್ಠತಾ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

47 ಕೌಶಲ್ಯ ಸ್ಪರ್ಧೆಗಳನ್ನು ಆನ್‌ಸೈಟ್‌ನಲ್ಲಿ ನಡೆಸಿದರೆ, ಕರ್ನಾಟಕ, ಹರಿಯಾಣ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಲಭ್ಯವಿರುವ ಅತ್ಯುತ್ತಮ ಮೂಲಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ಆಫ್‌ಸೈಟ್‌ನಲ್ಲಿ 14 ಕೌಶಲ್ಯ ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಪರ್ಧಾ ಕಾರ್ಯಕ್ರಮದಲ್ಲಿ 86 ಸ್ಪರ್ಧಿಗಳೊಂದಿಗೆ ತಮಿಳುನಾಡು ಗರಿಷ್ಠ ಭಾಗವಹಿಸುವಿಕೆಗೆ ಸಾಕ್ಷಿಯಾಗಿದೆ, ನಂತರ ಒಡಿಶಾ (64), ಕರ್ನಾಟಕ (61), ಪಂಜಾಬ್ (53), ಮತ್ತು ಹರಿಯಾಣದಿಂದ 47 ಸ್ಪರ್ಧಿಗಳು ಭಾಗವಹಿಸಿದ್ದರು.

ಈ ವೇಳೆ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ ಮಾತನಾಡಿ, ಸ್ಪರ್ಧೆಯ ವಿನ್ಯಾಸ ಮತ್ತು ಕಾರ್ಯಗತಗೊಳಿಸುವಿಕೆಯು ನಿಖರವಾಗಿತ್ತು ಮಾತ್ರವಲ್ಲದೆ ಭಾಗವಹಿಸುವವರು, ಮಾರ್ಗದರ್ಶಕರು, ಉದ್ಯಮದ ವೃತ್ತಿಪರರು, ಸಾರ್ವಜನಿಕರಿಂದ ಹೆಚ್ಚಿನ ಮೆಚ್ಚುಗೆ ಗಳಿಸಿದ್ದಾರೆ. ʼಇಂಡಿಯಾ ಸ್ಕಿಲ್ಸ್ ನ್ಯಾಷನಲ್ ಕಾಂಪಿಟೇಶನ್ 2024ʼ ಅಭೂತಪೂರ್ವ ಯಶಸ್ಸನ್ನು ಕಂಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

ಈ ಸಂದರ್ಭದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ, ಖ್ಯಾತ ನಿರ್ಮಾಪಕ, ಪದ್ಮಶ್ರೀ ಪುರಸ್ಕೃತ ರಮೇಶ್ ಸಿಪ್ಪಿ, ವೃತ್ತಿಪರ ಶಿಕ್ಷಣ ಮತ್ತು ತರಬೇತಿ ರಾಷ್ಟ್ರೀಯ ಮಂಡಳಿ ಅಧ್ಯಕ್ಷ ಡಾ. ನಿರ್ಮಲಜೀತ್ ಸಿಂಗ್ ಕಲ್ಸಿ ವೇದ್ ಮಣಿ ತಿವಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ವಾಣಿಜ್ಯ

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಲಾಭಾಂಶ ಹೆಚ್ಚಳ

Ujjivan Small Finance Bank: ಮಾ.31ಕ್ಕೆ ಅಂತ್ಯಗೊಂಡ ತ್ರೈಮಾಸಿಕದಲ್ಲಿ ಕೈಗೆಟಕುವ ದರದಲ್ಲಿ ಒಟ್ಟು 730 ಕೋಟಿ ರೂ.ಗಳ ಗೃಹ ಸಾಲ ನೀಡಲಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಶೇ.66ರಷ್ಟು ಹೆಚ್ಚು ಸಾಲ ವಿತರಣೆಯಾಗಿದೆ. 2023-2024ನೇ ಹಣಕಾಸು ವರ್ಷದಲ್ಲಿ 2,284 ಕೋಟಿ ರೂ. ಗೃಹ ಸಾಲ ವಿತರಿಸಲಾಗಿದ್ದು, ಕಳೆದ ವಿತ್ತ ವರ್ಷಕ್ಕೆ ಹೋಲಿಸಿದರೆ ಶೇ.64ರಷ್ಟು ಹೆಚ್ಚಳ ಕಂಡಿದೆ ಎಂದು ಬ್ಯಾಂಕ್ ಹೇಳಿದೆ.

VISTARANEWS.COM


on

Ujjivan Small Finance Bank
Koo

ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿ. (Ujjivan Small Finance Bank) ತನ್ನ ಕಳೆದ ಹಣಕಾಸು ವರ್ಷದ ಮತ್ತು ಮಾರ್ಚ್ 31, 2024ಕ್ಕೆ ಅಂತ್ಯಗೊಂಡ 4ನೇ ತ್ರೈಮಾಸಿಕ ಅವಧಿಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಬ್ಯಾಂಕ್ ಮಾರ್ಚ್ 31ಕ್ಕೆ ಕೊನೆಯಾದ ತ್ರೈಮಾಸಿಕ ಅವಧಿಯಲ್ಲಿ 6,681 ಕೋಟಿ ರೂ. ಸಾಲವನ್ನು ವಿತರಿಸಿದ್ದು, ಕಳೆದ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಸಾಲ ವಿತರಣೆಯಲ್ಲಿ ಶೇ.11ರಷ್ಟು ಬೆಳವಣಿಗೆ ಸಾಧಿಸಲಾಗಿದೆ. ಅದೇ ರೀತಿ, 2023-2024ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ಒಟ್ಟಾರೆ 23,389 ಕೋಟಿ ರೂ. ಸಾಲ ವಿತರಿಸಿದ್ದು, ಕಳೆದ ವಿತ್ತೀಯ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚಳವಾಗಿದೆ ಎಂದು ಬ್ಯಾಂಕ್​ ಮೂಲಗಳು ತಿಳಿಸಿವೆ.

ಮಾ.31ಕ್ಕೆ ಅಂತ್ಯಗೊಂಡ ತ್ರೈಮಾಸಿಕದಲ್ಲಿ ಕೈಗೆಟಕುವ ದರದಲ್ಲಿ ಒಟ್ಟು 730 ಕೋಟಿ ರೂ.ಗಳ ಗೃಹ ಸಾಲ ನೀಡಲಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಶೇ.66ರಷ್ಟು ಹೆಚ್ಚು ಸಾಲ ವಿತರಣೆಯಾಗಿದೆ. 2023-2024ನೇ ಹಣಕಾಸು ವರ್ಷದಲ್ಲಿ 2,284 ಕೋಟಿ ರೂ. ಗೃಹ ಸಾಲ ವಿತರಿಸಲಾಗಿದ್ದು, ಕಳೆದ ವಿತ್ತ ವರ್ಷಕ್ಕೆ ಹೋಲಿಸಿದರೆ ಶೇ.64ರಷ್ಟು ಹೆಚ್ಚಳ ಕಂಡಿದೆ ಎಂದು ಬ್ಯಾಂಕ್ ಹೇಳಿದೆ.

23-24ರ ಒಟ್ಟಾರೆ ಸಾಲದ ಮೊತ್ತವು ಶೇ.24ರಷ್ಟು ಏರಿಕೆಯಾಗಿ, 29,780 ಕೋಟಿ ರೂ.ಗಳಾಗಿವೆ. ಹಿಂದಿನ ತ್ರೈಮಾಸಿಕ ಅವಧಿಗೆ ಹೋಲಿಸಿದರೆ ಮಾರ್ಚ್ ಗೆ ಕೊನೆಯಾದ ತ್ರೈಮಾಸಿಕದಲ್ಲಿ ಒಟ್ಟಾರೆ ಸಾಲದ ಪ್ರಮಾಣವು ಶೇ.7ರಷ್ಟು ಏರಿಕೆಯಾಗಿದೆ. ಇನ್ನು, 2024ರ ಮಾರ್ಚ್ ನಲ್ಲಿ ಸೆಕ್ಯೂರ್ಡ್ ಬುಕ್ ಶೇ.30.2ರಷ್ಟಿದ್ದರೆ, 2023ರ ಡಿಸೆಂಬರ್ ನಲ್ಲಿ ಇದು ಶೇ.28.4ರಷ್ಟಿತ್ತು ಎಂದು ಅಂಕಿ ಅಂಶಗಳು ತಿಳಿಸಿವೆ.

ಸಾಲ ವಸೂಲಿ ಮುಂದುವರಿಕೆ

ಮಾರ್ಚ್ ಗೆ ಅಂತ್ಯವಾದ ತ್ರೈಮಾಸಿಕದಲ್ಲಿ ಸಾಲ ವಸೂಲಾತಿ ಪ್ರಕ್ರಿಯೆಯೂ ಉತ್ತಮವಾಗಿ ಮುಂದುವರಿದಿದ್ದು, ಶೇ.99ರಷ್ಟು ದಕ್ಷತೆಯನ್ನು ಕಾಯ್ದುಕೊಳ್ಳಲಾಗಿದೆ. ಎನ್ ಡಿಎ ಸಂಗ್ರಹ ಶೇ.100ರಷ್ಟಾಗಿದೆ. ಮರುಪಾವತಿಗೆ ಬಾಕಿಯಿರುವ ಸಾಲವು(ಪೋರ್ಟ್ ಫೋಲಿಯೋ ಅಟ್ ರಿಸ್ಕ್) ಶೇ.3.5ರಷ್ಟಿದ್ದು, ಒಟ್ಟು ಅನುತ್ಪಾದಕ ಆಸ್ತಿ (ಜಿಎನ್ ಪಿಎ) ಸ್ಥಿರವಾಗಿದ್ದು, ಶೇ.2.1 ರಷ್ಟಿದೆ. 2023ರ ಡಿಸೆಂಬರ್ ಗೆ ಅಂತ್ಯಗೊಂಡ ತ್ರೈಮಾಸಿಕದಲ್ಲಿ ಇದು ಶೇ.2.1 ರಷ್ಟಿತ್ತು. ಮಾರ್ಚ್ ಗೆ ಕೊನೆಯಾದ ತ್ರೈಮಾಸಿಕದಲ್ಲಿ ಎನ್ಎನ್ ಪಿಎ(ನಿವ್ವಳ ಅನುತ್ಪಾದಕ ಆಸ್ತಿ) ಕೇವಲ ಶೇ.0.3ರಲ್ಲಿ ಮುಂದುವರಿದಿದೆ. ಈ ಅವಧಿಯಲ್ಲಿ ಒಟ್ಟು 65 ಕೋಟಿ ರೂ.ಗಳ ಸಾಲವನ್ನು ರೈಟ್ ಆಫ್ ಮಾಡಲಾಗಿದೆ ಎಂದು ಬ್ಯಾಂಕ್​ ಮೂಲಗಳು ತಿಳಿಸಿವೆ.

ಮಾರ್ಚ್ ಗೆ ಅಂತ್ಯವಾದ ತ್ರೈಮಾಸಿಕದಲ್ಲಿ 31,462 ಕೋಟಿ ರೂ. ಠೇವಣಿ ಸಂಗ್ರಹವಾಗಿದ್ದು, ಕಳೆದ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇ.6 ಹಾಗೂ ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ.23ರಷ್ಟು ಹೆಚ್ಚಳವಾಗಿದೆ. ಸಿಎಎಸ್ಎ(ಚಾಲ್ತಿ ಖಾತೆ ಉಳಿತಾಯ ಖಾತೆ) ಮೊತ್ತವು ಕಳೆದ ವಿತ್ತೀಯ ವರ್ಷಕ್ಕೆ ಹೋಲಿಸಿದರೆ ಶೇ.24ರಷ್ಟು ಮತ್ತು ಕಳೆದ ತ್ರೈಮಾಸಿಕಕ್ಕೆ ಹೋಲಿಸದರೆ ಶೇ.10ರಷ್ಟು ಏರಿಕೆಯಾಗಿದ್ದು, ಮಾರ್ಚ್ ತ್ರೈಮಾಸಿಕದಲ್ಲಿ ಒಟ್ಟು 8,335 ಕೋಟಿ ರೂ. ಸಂಗ್ರಹವಾಗಿದೆ. ಸಿಎಎಸ್ಎ ಅನುಪಾತವು ಈ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಶೇ.26.5ರಷ್ಟಿದ್ದರೆ, ಅದರ ಹಿಂದಿನ ತ್ರೈಮಾಸಿಕ ಅವಧಿಯಲ್ಲಿ ಶೇ.25.5ರಷ್ಟಿತ್ತು. ಚಿಲ್ಲರೆ ಅವಧಿ ಠೇವಣಿ (ರಿಟೇಲ್ ಟಿಡಿ) ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ 2023-24ರ ಹಣಕಾಸು ವರ್ಷದಲ್ಲಿ ಶೇ.36ರಷ್ಟು ಮತ್ತು ಕಳೆದ ತ್ರೈಮಾಸಿಕಕ್ಕೆ ಹೋಲಿಸಿದರೆ ಮಾರ್ಚ್ ಗೆ ಅಂತ್ಯವಾದ ತ್ರೈಮಾಸಿಕದಲ್ಲಿ ಶೇ.7ರಷ್ಟು ಬೆಳವಣಿಗೆ ದಾಖಲಿಸಿದೆ.

ಇದನ್ನೂ ಓದಿ: Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

ನಿವ್ವಳ ಬಡ್ಡಿ ಆದಾಯ(ಎನ್ಐಐ)ವು 4ನೇ ತ್ರೈಮಾಸಿಕದಲ್ಲಿ 934 ಕೋಟಿ ರೂ. ಆಗಿದ್ದು, ಕಳೆದ ತ್ರೈಮಾಸಿಕಕ್ಕಿಂತ ಶೇ.27ರಷ್ಟು ಹೆಚ್ಚಳವಾಗಿದೆ. 2023-24ರ ವಿತ್ತ ವರ್ಷದಲ್ಲಿ ಇದು 3,409 ಕೋಟಿ ರೂ.ಗಳಾಗಿದ್ದು ಕಳೆದ ವಿತ್ತ ವರ್ಷಕ್ಕಿಂತ ಶೇ.26ರಷ್ಟು ಬೆಳವಣಿಗೆ ಸಾಧಿಸಿದೆ. ಇದೇ ವೇಳೆ, ಬ್ಯಾಂಕಿನ ನಿವ್ವಳ ಬಡ್ಡಿ ಅಂತರ(ಎನ್ಐಎಂ)ವು 4ನೇ ತ್ರೈಮಾಸಿಕದಲ್ಲಿ ಶೇ.9.4ರಷ್ಟು, ಇಡೀ ವಿತ್ತ ವರ್ಷದಲ್ಲಿ ಶೇ.9.1ರಷ್ಟು ಇತ್ತು. ವೆಚ್ಚದಿಂದ ಆದಾಯ ಅನುಪಾತವು 4ನೇ ತ್ರೈಮಾಸಿಕದಲ್ಲಿ ಶೇ.55.7 ಆಗಿದ್ದು, 2024ನೇ ಹಣಕಾಸು ವರ್ಷದಲ್ಲಿ ಶೇ.54.3ರಷ್ಟಾಗಿದೆ.

ಮಾರ್ಚ್ ಗೆ ಅಂತ್ಯಗೊಂಡ 4ನೇ ತ್ರೈಮಾಸಿಕದಲ್ಲಿ ಬ್ಯಾಂಕಿನ ಕಾರ್ಯಾಚರಣೆಯಿಂದ ಬಂದ ಆದಾಯ(ಪಿಪಿಒಪಿ) 519 ಕೋಟಿ ರೂ.ಗಳಾಗಿದ್ದು, ಕಳೆದ ತ್ರೈಮಾಸಿಕಕ್ಕಿಂತ ಶೇ.26ರಷ್ಟು ಪ್ರಗತಿ ಸಾಧಿಸಲಾಗಿದೆ. ಅದೇ ರೀತಿ, 24ನೇ ಹಣಕಾಸು ವರ್ಷದಲ್ಲಿ ಕಾರ್ಯಾಚರಣೆಯಲ್ಲಿ ಬಂದ ಆದಾಯವು 1,917 ಕೋಟಿ ರೂ.ಗಳಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.29ರ ಏರಿಕೆ ಕಂಡಿದೆ. ತೆರಿಗೆ ನಂತರದ ಲಾಭ (ಪಿಎಟಿ)ವು 4ನೇ ತ್ರೈಮಾಸಿಕದಲ್ಲಿ 330 ಕೋಟಿ ರೂ.ಗಳಾಗಿದ್ದು (3ನೇ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇ.7ರಷ್ಟು ಹೆಚ್ಚಳ), 24ನೇ ಹಣಕಾಸು ವರ್ಷದಲ್ಲಿ 1,281 ಕೋಟಿ ರೂ.ಗಳಷ್ಟಾಗಿದೆ (ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17 ಹೆಚ್ಚಳ).

ಷೇರುದಾರರ ಅನುಮತಿಗೆ ಒಳಪಟ್ಟು, ಬ್ಯಾಂಕಿನ ಆಡಳಿತ ಮಂಡಳಿಯು ಪ್ರತಿ ಷೇರಿಗೆ 1.5 ರೂ.ಗಳಂತೆ ಅಂತಿಮ ಲಾಭಾಂಶ ನೀಡಲು ಶಿಫಾರಸು ಮಾಡಿದೆ.

ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಾರ್ಯನಿರ್ವಹಣಾಧಿಕಾರಿ ಶ್ರೀ. ಇಟ್ಟಿರಾ ಡೇವಿಸ್ ರವರು ಮಾತನಾಡಿ, 2024ರ ಹಣಕಾಸು ವರ್ಷದ 4ನೇ ತ್ರೈಮಾಸಿಕವು ಮತ್ತೊಂದು ಯಶಸ್ವಿ ವಿತ್ತ ವರ್ಷಕ್ಕೆ ಉತ್ತಮ ಮುನ್ನುಡಿ ಬರೆದಿದೆ. ಈ  ಅವಧಿಯಲ್ಲಿ ನಮಗೆ ಗುಣಮಟ್ಟದ ಬೆಳವಣಿಗೆಯನ್ನು ಸಾಧಿಸಲು ಸಾಧ್ಯವಾಗಿದೆ. ನಾವು ಬ್ಯಾಂಕ್ ಮತ್ತು ಅದರ ಹೋಲ್ಡಿಂಗ್ ಕಂಪನಿ ನಡುವಿನ ವಿಲೀನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ. ನಮ್ಮ ಸೆಕ್ಯೂರ್ಡ್ ಬುಕ್ (ಸುರಕ್ಷಿತ ಪುಸ್ತಕ) ಈ ತ್ರೈಮಾಸಿಕದಲ್ಲಿ 177 ಮೂಲಾಂಕ (ಬಿಪಿಎಸ್) ನಷ್ಟು ಸುಧಾರಣೆ ಕಂಡು, 30.2%ಕ್ಕೆ ತಲುಪಿದೆ. 4ನೇ ತ್ರೈಮಾಸಿಕದಲ್ಲಿ ₹ 6,681 ಕೋಟಿ ರೂ. ಮತ್ತು ವಾರ್ಷಿಕವಾಗಿ ₹ 23,389 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ.  ಕೈಗೆಟುಕುವ ಗೃಹ (ಸೂಕ್ಷ್ಮ ಅಡಮಾನಗಳು ಸೇರಿದಂತೆ) ಸಾಲ ವಿತರಣೆಯಲ್ಲೂ ಪ್ರಗತಿ ಸಾಧಿಸಲಾಗಿದ್ದು, 4ನೇ ತ್ರೈಮಾಸಿಕದಲ್ಲಿ  ₹730 ಕೋಟಿ ಮತ್ತು ವಾರ್ಷಿಕ ₹ 2,284 ಕೋಟಿ ಸಾಲ ವಿತರಿಸಲಾಗಿದೆ. ಈ ಮೂಲಕ 2023-24ರ ಹಣಕಾಸು ವರ್ಷದಲ್ಲಿ ಗೃಹ ಸಾಲ ವಿತರಣೆಯಲ್ಲಿ ಶೇ.45ರ ಬೆಳವಣಿಗೆ ಸಾಧಿಸಲಾಗಿದೆ. ಈ ವೇಗವು ಮುಂದಿನ ವರ್ಷವೂ ಮುಂದುವರಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಹೇಳಿದರು. ಹೆಚ್ಚುವರಿಯಾಗಿ, ನಾವು ಪರಿಷ್ಕೃತ ಎಲ್ಒಎಸ್ ಅನ್ನು ಪರಿಚಯಿಸುವ ಅಂತಿಮ ಹಂತದಲ್ಲಿರುತ್ತೇವೆ, ಒಮ್ಮೆ ಸಂಪೂರ್ಣವಾಗಿ ಕಾರ್ಯನಿರ್ವಹಿಸಿದರೆ ಅದು ವ್ಯವಹಾರ ದಕ್ಷತೆಯನ್ನು ಮತ್ತಷ್ಟು ಸುಧಾರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಕಳೆದ ತ್ರೈಮಾಸಿಕದಲ್ಲಿ ಪೂರ್ವ-ಅರ್ಹ ಟಾಪ್-ಅಪ್ ಸಾಲಗಳನ್ನು ನಮ್ಮ ಉತ್ಪನ್ನ ಸೂಟ್ ಗೆ ಸೇರಿಸಲಾಗಿದೆ, ಇದು ನಮ್ಮ ಅಸ್ತಿತ್ವದಲ್ಲಿರುವ ಕೈಗೆಟುಕುವ ವಸತಿ ಗ್ರಾಹಕರಿಗೆ ಪ್ರಯೋಜನಕಾರಿಯಾಗಿದೆ ಎಂದು ನುಡಿದರು.

Continue Reading
Advertisement
Mobile
ದೇಶ42 mins ago

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

Rameshwaram Cafe Blast
ಕರ್ನಾಟಕ45 mins ago

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

LPL 2024
ಪ್ರಮುಖ ಸುದ್ದಿ1 hour ago

LPL 2024 : ಐಪಿಎಲ್ ಎಫೆಕ್ಟ್​, ಸಿಕ್ಕಾಪಟ್ಟೆ ದುಡ್ಡು ಬಾಚಿದ ಮಹೀಶ್ ಪತಿರಾನಾ

Porsche
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

Hajj pilgrimage
ಬೆಂಗಳೂರು1 hour ago

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

IPL 2024
ಕ್ರೀಡೆ1 hour ago

IPL 2024 : ಕೆಕೆಆರ್​ 4ನೇ ಬಾರಿ ಐಪಿಎಲ್​​ನ​ ಫೈನಲ್​ಗೆ, ಎಸ್ಆರ್​ಎಚ್​ಗೆ ಇನ್ನೊಂದು ಅವಕಾಶ

Robert Vadra
ದೇಶ2 hours ago

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

IPL 2024
ಕ್ರೀಡೆ2 hours ago

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Talking Digital Safety for Teens programme by Meta in Bengaluru
ಕರ್ನಾಟಕ2 hours ago

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ3 hours ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು12 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು13 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌