ದಿನಸಿ ಪೇಟೆ | ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ: ಯಾವುದು ಅಗ್ಗ, ಯಾವುದು ದುಬಾರಿ? - Vistara News

ವಾಣಿಜ್ಯ

ದಿನಸಿ ಪೇಟೆ | ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ: ಯಾವುದು ಅಗ್ಗ, ಯಾವುದು ದುಬಾರಿ?

ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

market rate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

25/12/2022

ಸರಕು ದರ (ರೂಪಾಯಿ)
ಸಕ್ಕರೆ (50 ಕೆ.ಜಿ.)
1. ಉತ್ತಮ ದಪ್ಪ
2. ಮಧ್ಯಮ ಸಣ್ಣ

1780-1790
1760-1770
ಬೆಲ್ಲ
1. ಸಣ್ಣ ಅಚ್ಚು
2. ದಪ್ಪ
3. ಉಂಡೆ ಸೇಲಂ
4. ಕೊಲ್ಲಾಪುರ

4200-4300
3800-3900
4500-4800
4400-5400
ತೊಗರಿಬೇಳೆ ಹೊಸದು 50 ಕೆ.ಜಿ.
ದೇಸಿ ಶಿವಲಿಂಗ
ವಿದೇಶಿ ಶಿವಲಿಂಗ
ವಿದೇಶಿ ಮಧ್ಯಮ
ಪಟ್ಕ ಸಾರ್ಟೆಕ್ಸ್
ರೆಗ್ಯುಲರ್

5950-6000
4900-5000
4600-4700
5600-5650
5250-5350
ಕಡ್ಲೆ ಬೇಳೆ 50 ಕೆ.ಜಿ.
1. ಲಕನ್
2. ತ್ರಿಶೂಲ್
3. ಮಹಾರಾಜಾ
4. ಅಕೋಲ

3400-3450
3330-3350
3250-3280
3000-3100
ಕಡಲೆಕಾಯಿ ಬೀಜ 40 ಕೆಜಿ
ಉತ್ತಮ ದಪ್ಪ
ಮಧ್ಯಮ

5700-5800
4800-4900
ಹುರಿಕಡ್ಲೆ 30 ಕೆ.ಜಿ.
1. ಫೈನ್
2. ಮೀಡಿಯಂ

2300-2350
1900-2000
ಉದ್ದಿನ ಬೇಳೆ 50 ಕೆ.ಜಿ.
ಡಿ ಹಾರ್ಸ್
ಹನುಮಾನ್
ವೈಟ್ ಗೋಲ್ಡ್
ಸೂರ್ಯ
ಮಧ್ಯಮ
ಗೋಲಾ ಉತ್ತಮ
ಗೋಲಾ ಮದ್ಯಮ

6600-6650
5500-5550
5450-5500
5400-5450
4900-5000
5200-5300
4600-4700
ಹೆಸರು ಬೇಳೆ 50 ಕೆ.ಜಿ.
1. ಸೋಂ ಪರಿ
2. ಮಧ್ಯಮ

4900-5000
4700-4800
ಹೆಸರು ಕಾಳು
1. ಉತ್ತಮ
2. ಮಧ್ಯಮ

4900-5000
4400-4500
ಅಲಸಂದೆ
1. ಉತ್ತಮ
2. ಮಧ್ಯಮ

3700-3900
3600-3700
ಅವರೆ ಕಾಳು
1. ಉತ್ತಮ
2. ಮಧ್ಯಮ

ಅವರೆ ಬೇಳೆ
1. ಉತ್ತಮ
2. ಮಧ್ಯಮ

ಹುರುಳಿ ಕಾಳು
1. ಉತ್ತಮ
2. ಮಧ್ಯಮ

5400-5500
5200-5300


7200-7300
6900-7000


3300-3400
3000-3200
ರಾಗಿ 100 ಕೆ.ಜಿ.
1. ಕ್ಲೀನ್ಡ್‌ ಉತ್ತಮ
2. ಮಧ್ಯಮ

400-3500
3000-3200
ಅಕ್ಕಿ ಸೋನಾ ಮಸೂರಿ (100 ಕೆ. ಜಿ.)
1. ರಾ, ರೈಸ್ ಸೋನಾಮಸೂರಿ 2 ವರ್ಷ ಹಳೇದು
2. 1 ವರ್ಷ ಹಳೇದು
3. ರಾ ರೈಸ್ ನುಚ್ಚು
4. ಸ್ಟೀಮ್ ಉತ್ತಮ
5. ಸ್ಟೀಮ್ ಮಾಧ್ಯಮ
6. ಸ್ಟೀಮ್ ನುಚ್ಚು
7. ಆರ್ ಎನ್ ಆರ್ ಸ್ಟೀಮ್
8. ಹೆಚ್ ಎಂ ಟಿ ಸ್ಟಿಮ್
9. ಸೋನಾ ಬಾಯಿಲ್ಡ್
10. ಕೆಂಪು ಕುಚಲಕ್ಕಿ ಉತ್ತಮ
11. ಮಧ್ಯಮ
12. ಐ ಆರ್8(100 ಕೆಜಿ)
13. ಇಡ್ಲಿಕಾರ್ (100 ಕೆಜೆ)

5100-5200
4600-4700
2900-3000
4700-4800
3900-4000
2600-2700
4600-4700
4900-5000
4200-4400
4800-5000
3900-4000
3200-3300
3800-3850
ಬೆಳ್ಳುಳ್ಳಿ ಎಂಪಿ 100 ಕೆ.ಜಿ.
1. ಎಂಪಿ ಗೋಲಾ
2. ಲಡ್ಡು
3. ಮಧ್ಯಮ
4. 30 ಕೆಜಿ ಬಾಕ್ಸ್

4000-4500
3000-3500
1200-1800
1800-1900
ಈರುಳ್ಳಿ
1. ಮಹಾರಾಷ್ಟ್ರ ದಪ್ಪ
2. ಮದ್ಯ ಮ
3. ಕರ್ನಾಟ ದಪ್ಪ
4. ಮಧ್ಯಮ
5. ಗೋಲ್ಟಾ ಗೊಲ್ಟಿ

1100-1250
900-1000
1300-1400
1000-1100
500-1000
ಆಲೂಗಡ್ಡೆ (50 ಕೆ.ಜಿ.)
ಚೀಪ್ಸ್ ದಪ್ಪ
ಮಧ್ಯಮ
ಕೋಲಾರ ಉತ್ತಮ
ಮಧ್ಯಮ
ಆಗ್ರಾ ಉತ್ತಮ
ಮಧ್ಯಮ

1400- 1500
1200-1300
1300-1400
900-1000
1100-1200
800-900
ಹಸಿ ಶುಂಠಿ (60 ಕೆ.ಜಿ.)
1. ಹೈಟೆಕ್
2. ಮೀಡಿಯಂ

2200-2300
1400-1500
ಪರಿಶುದ್ಧ ಅಡುಗೆ ಎಣ್ಣೆ
ಸೂರ್ಯಕಾಂತಿ ಎಣ್ಣೆ
ಸನ್ ಪ್ಯೂರ್ 10 ಲೀ
ಸನ್ ಪ್ಯೂರ್ 15 ಕೆಜಿ
ಗೋಲ್ಡವಿನ್ನರ್ 10 ಲೀ.
ಗೋಲ್ಡ್ ವಿನ್ನರ್ 15 ಕೆಜಿ
ಜೆಮಿನಿ 10 ಲೀ.
ಜೆಮಿನಿ 15 ಕೆಜಿ
ಫ಼ಾರ್ಚು ನ್10 ಲೀ.
ಫ಼ಾರ್ಚು ನ್15 ಕೆಜಿ


1475
2320
1495
2400
1570
2465
1485
2430
ಕಡ್ಲೆ ಹಿಟ್ಟು
1. ಶಂಕರ್ 30 ಕೆ.ಜಿ
2. ಶಂಕರ್ 10 ಕೆ.ಜಿ
3. ಶಂಕರ್ 20 ಕೆಜಿ ಪ್ಯಾಕೆಟ್

2185
755
1660
ಕಡ್ಲೆಕಾಳು (50 ಕೆಜಿ)
1. ಕ್ಲಿನ್ ಬೋಲ್ಡ್
2. ಮಧ್ಯಮ
3. ಕ್ಲಿನ್ ಗುಲಾಬಿ
4. ಕ್ಲಿನ್ ಮಧ್ಯಮ

2950-3000
2900-2950
2900-3000
2900-3000
ಚಕ್ಕಿ ಅಟ್ಟ (50 ಕೆ.ಜಿ)
1. ಐಸ್
2. ಆರೆಂಜ್‌
3. ಸಿಲ್ವರ್ ಕಾಯಿನ್
4. ಇಂದೂರ್
5. ಕೇಸರಿ ಪೀಚ್
6. ಅಂಬೆ

1760-1770
1810-1820
1740-1750
1670-1680
1720-1730
1690-1700
ರೆಗ್ಯುಲರ್ ಅಟ್ಟ 50 ಕೆ.ಜಿ
1. ಆರೆಂಜ್
2. ರಾಕ್ಷಿ
3. ಸುನೀಲ್

1710-1720
1720-1730
1680-1690
ತಂದೂರಿ ಅಟ್ಟ ( 50 ಕೆ.ಜಿ)
1. ರಾಕ್ಷಿ
2. ಸಿಲ್ವರ್ ಕಾಯಿನ್
3. ಮೋಹಿನಿ

1830-1840
1730-1740
1740-1750
ಸಾದಾ ಸೂಜಿ (50 ಕೆ.ಜಿ)
ಅರೇಂಜ್
ರಾಕ್ಷಿ
ಹೀರೊ
ಸುನಿಲ್
ಕ್ಯಾಂಡಿ

1980-1990
1950-1960
1890-1900
1880-1890
1800-1820
ಚಿರೋಟಿ ಸೂಜಿ (50 ಕೆ.ಜಿ)
1. ಮೋಹಿನಿ
2. ಆರೆಂಜ್ 30 ಕೆ.ಜಿ
3. ತುಳಸಿ

1950-1960
1850-1860
1760-1770
ಮೈದಾ (50 ಕೆ.ಜಿ)
1. ಐಸ್
2. ಸುನೀಲ್
3. ಆರೆಂಜ್
4. ಮೊಬೆಲ್
5. ಸಿಲ್ವರ್ ಕಾಯಿನ್
6. ಕೇಸರಿ ಪೀಚ್

1920-1930
1900-1910
1970-1980
1800-1890
1840-1850
1800-1810

ಮೀಡಿಯಂ ಕುಕಿಂಗ್ ಆಯಿಲ್ ೧ ಲೀಟರ್‌ನ ೧೦ ಪ್ಯಾಕೆಟ್

1.. ಸನ್ ಪ್ರಿಯಾ
2.. ಸನ್ ಪಾರ್ಕ್
3.. ಸನ್ ಪವರ್
4.. ಸೂರ್ಯ ಪವರ್
1040
1060
1020
1010
ದೀಪದೆಣ್ಣೆ 1 ಲೀ.ನ 10 ಪ್ಯಾಕೆಟ್
1.. ಆನಂದಮ್
2.. ಅಂದಮ್
3.. ಅಕ್ಷಯ
4.. ನಂದಿನಿ

1050
1040
1020
1030
ಕಡ್ಲೆಕಾಯಿ ಎಣ್ಣೆ
1. ಪ್ಯೂರ್ ನಟ್ 10 ಲೀ.
2. ಕೆ ಎನ್ ಜೆ 10 ಲೀ.
3. ನಟ್ ಗೋಲ್ಡ್ 10 ಲೀ.

1700
1550
1450
ಪಾಮ್ ಆಯಿಲ್ 1 ಲೀ.ನ 10 ಪ್ಯಾಕೆಟ್
1. ರುಚಿಗೋಲ್ಡ್ 10 ಲೀ.
2. ಲೀಡರ್ ಗೋಲ್ಡ್ 10 ಲೀ.
3. ರುಚಿಗೋಲ್ಡ್ 15 ಕೆ.ಜಿ

950
930
1670
ರಗ್ಯುಲರ್ ವನಸ್ಪತಿ
1. ರುಚಿ No1, 10 ಕೆ.ಜಿ
2. ರುಚಿ No1, 15 ಕೆ.ಜಿ
3. ಎಟೂಝೆಡ್ 15 ಕೆ.ಜಿ

930
1600
650
ಬೇಕರಿ ಸ್ಪೆಷಲ್ ವನಸ್ಪತಿ 15 ಕೆ.ಜಿ ಬಾಕ್ಸ್
1. ಗ್ರೀನ್ ಗೋಲ್ಡ್
2. ಗ್ರೇಟ್ ಚೆಫ್
3. ಬೆಸ್ ಪಫ್
4. ಬೆಸ್ ಕ್ರೀಮ್
5. ಬೆಸ್ ಬಿಸ್ಕೆಟ್
6. ಬೇಕರ್ ಕಿಂಗ್

1850
1880
1730
1750
1700
1680
ಮೆಣಸಿನಕಾಯಿ 100 ಕೆ.ಜಿ.: ಪಿ.ಸಿ.ಎನ್. ಟ್ರೇಡರ್ಸ್ [ಎಪಿಎಮ್‌ಸಿ ಬೆಂಗಳೂರು]
ಬ್ಯಾಡಗಿ ಸ್ಟೇಮ್
ಬ್ಯಾ, ಸ್ಟೇಮ್ಲೆಸ್
ಗುಂಟೂರಸ್ಟೇಮ್
ಗು, ಸ್ಟೇಮ್ ಲೆಸ್
ಮಣ್ ಕಟ್
ಕನಿಷ್ಠ ಗರಿಷ್ಠ

24,900 – 44,500
34,900 – 68,500
21,900 – 25,900
35,000 – 37,000
22,000 – 25,500
ಹುಣಸೆ ಹುಳಿ (100 ಕೆ.ಜಿ.)
ಉತ್ತಮ ಹಸಿರು
ಮಧ್ಯಮ ಹಸಿರು
ಮಧ್ಯಮ
ಬ್ರೋಕನ್
ಕನಿಷ್ಠ ಗರಿಷ್ಠ
6,400 – 8,200
4,700 – 5,900
4,200 – 4,600
4,400 – 4,500
ದನಿಯಾ (40 ಕೆ.ಜಿ.)
1. ಉತ್ತಮ ಹಸಿರು
2. ಮಧ್ಯಮ ಹಸಿರು
3. ಮಧ್ಯಮ
4. ಬ್ರೋಕನ್
ಕನಿಷ್ಠ ಗರಿಷ್ಠ
6,500 – 8,500
4,800 – 6,000
4,000 – 4,700
4,400 – 4,700
ಮಸಾಲ ದರ (1 ಕೆ.ಜಿ.)ಕನಿಷ್ಠಗರಿಷ್ಠ
ಅರಿಶಿಣ ಕೊಂಬು
1. ದಪ್ಪ
2. ಸಣ್ಣ
3. ಜೀರಿಗೆ ಸೂಪರ್ ಫೈನ್
4. ಜೀರಿಗೆ ಮೀಡಿಯಂ ಫೈನ್
5. ಜೀರಿಗೆ ಮೀಡಿಯಂ

120
90
360
330
300

130
100
370
340
320
ಗಸಗಸೆ
1. ಫೈನ್
2. ಮೀಡಿಯಂ
3. ಟರ್ಕಿ
4. ಇಂಡಿಯನ್

1200
1100
1450
1350

1250
1150
1510
1400
ಮೆಂತ್ಯೆ6872
ಸಾಸಿವೆ
1. ಸಾಸಿವೆ ಸಣ್ಣ
2. ಸಾಸಿವೆ ದಪ್ಪ

82
78

85
80
ಏಲಕ್ಕಿ
1. 8 ಎಂ.ಎಂ.
2. 7.5 ಎಂ.ಎಂ.
3. 7. ಎಂ.ಎಂ.
4. ಪಾನ್ ಬಹಾರ್‌

450
1350
1250
1000

1500
1400
1300
1100
ಲವಂಗ
1. ಮಡಗಾಸ್ಕರ್
2. ಲಾಲ್ ಪರಿ
3. ಚಕ್ಕೆ
4. ಮರಾಠಿ ಮೊಗ್ಗು ಒರಿಜಿನಲ್
5. ಅನಾನಸ್ ಹೂ
6. ಒಣ ಕೊಬ್ಬರಿ
7. ಮಧ್ಯಮ

740
750
190
850
750
140
125

750
760
200
900
800
135
135
ಕಾಳು ಮೆಣಸು
1. ಆಟೋಮ್
2. ಗಾರ್ಬಲ್ಡ್‌

540
520

550
530
ಗೋಡಂಬಿ
1. ಜೆ ಎಚ್
3. ಡಬ್ಲ್ಯೂ 240
4. ಡಬ್ಲ್ಯೂ 240 ಪಾನ್ ರೊಟ್ಟಿ

750
790
660

780
850
670
ಬಾದಾಮಿ650700
ಗೋಧಿ 50 ಕೆಜಿ
1. ಸೂಪರ್ ಫೈನ್
2. ಮೀಡಿಯಂ ಫೈನ್
3. ಮೀಡಿಯಂ

2200
2000
1800

2300
2100
1850
ದ್ರಾಕ್ಷಿ200240
ಎಳ್ಳು
1. ಕಪ್ಪು
2. ಬಿಳಿ
3. ನೈಲಾನ್

140
180
170

150
190
180

[ ಮೊಟ್ಟೆ (ಎನ್.ಇ.ಸಿ.ಸಿ) 100ಕ್ಕೆ 560 ರೂಪಾಯಿ]

ತರಕಾರಿಕನಿಷ್ಠಗರಿಷ್ಠ
ಟೊಮೇಟೊ810
ಹುರುಳಿಕಾಯಿ ನಾಟಿ           2530
ಹ್ಯಾರಿಕೊಟ್‌ ಬೀನ್ಸ್    3040
ಬದನೆಕಾಯಿ ಬಿಳಿ     1520
ಬದನೆಕಾಯಿ ಗುಂಡು  1520
ಬೀಟ್‌ರೂಟ್‌             1520
ಹಾಗಲಕಾಯಿ            2530
ಸೀಮೆ ಬದನೆಕಾಯಿ      810
ಸೌತೆಕಾಯಿ                  2530
ಗೊರಿಕಾಯಿ ಗೊಂಚಲು  3035
ಕ್ಯಾಪ್ಸಿಕಮ್‌ 3040
ಹಸಿ ಮೆಣಸಿನಕಾಯಿ ದಪ್ಪ2530
ಸಣ್ಣ ಮೆಣಸಿನಕಾಯಿ   3540
ಬಜ್ಜಿ ಮೆಣಸಿನಕಾಯಿ2530
ತೊಂಡೆಕಾಯಿ5060
ಕ್ಯಾರೆಟ್ ಉಟಿ 3540
ಕ್ಯಾರೆಟ್ ನಾಟಿ        2025
ಎಲೆಕೋಸು                58
ನವಿಲು ಕೋಸು2530
ಹೂ ಕೋಸು ಸಣ್ಣ     3040
ನುಗ್ಗೆಕಾಯಿ 120150
ಬೆಂಡೆಕಾಯಿ4045
ಹಿರೇಕಾಯಿ   3545
ಸೋರೆಕಾಯಿ     253030
ಚಪ್ಪರವರೇಕಾಯಿ4045
ಕಾರಮಣಿ                4050
ಮೂಲಂಗಿ            1520
ಈರುಳ್ಳಿ 2226
ಬೆಳ್ಳುಳ್ಳಿ 4045
ಆಲೂಗಡ್ಡೆ 3040

ಎಪಿಎಂಸಿ ತರಕಾರಿ ಸಗಟು ದರ (1 ಕೆ. ಜಿ.ಗೆ) 30 ಸೆಪ್ಟೆಂಬರ್ 2022

ಅಡಕೆ ಧಾರಣೆ: 28 ಜುಲೈ, 2022

ಕುಮಟಾಕನಿಷ್ಠಗರಿಷ್ಠ
1. ಕೋಕಾ
2. ಚಿಪ್ಪು
3. ಫ್ಯಾಕ್ಟರಿ
4. ಹಳೆ ಚಾಲಿ
5. ಹೊಸ ಚಾಲಿ
1.18089
2. 26089
3.10109
4. 43899
5. 36809
1. 29999
2. 31199
3. 19549
4. 46429
5. 39519
ಶಿರಸಿಕನಿಷ್ಠಗರಿಷ್ಠ
1. ಚಾಲಿ
2. ಬೆಟ್ಟೆ
3. ಬಿಳಿಗೋಟು
4. ರಾಶಿ
1. 33699
2.35196
3.21199
4. 40799
1. 39699
2.46518
3. 32289
4. 49899
ಚಿತ್ರದುರ್ಗಕನಿಷ್ಠಗರಿಷ್ಠ
1. ಅಪಿ
2. ಕೆಂಪುಗೋಟು
3. ಬೆಟ್ಟೆ
4. ರಾಶಿ
1.48922
2.29000
3. 38419
4. 48429
1. 49332
2. 29400
3.38859
4. 48869
ಶಿವಮೊಗ್ಗಕನಿಷ್ಠಗರಿಷ್ಠ
ಗೊರಬಲು
ಬೆಟ್ಟೆ
ರಾಶಿ
ಸರಕು
1. 17500
2. 49090
3. 47009
4. 57669
1. 37299
2.53486
3. 49459
4. 79596
ಸಾಗರಕನಿಷ್ಠಗರಿಷ್ಠ
ಕೆಂಪುಗೋಟು
ಕೋಕ
ಚಾಲಿ
ಬಿಳಿಗೋಟು
ರಾಶಿ
ಸಿಪ್ಪೆಗೋಟು
1. 22339
2.15022
3. 30000
4.20560
5. 37699
6. 13999
1. 37199
2. 34089
3. 37069
4. 27869
5. 49609
6. 21198

ಇದನ್ನೂ ಓದಿ | ದಿನಸಿ ಪೇಟೆ | ಸಗಟು ಮಾರುಕಟ್ಟೆಯಲ್ಲಿ ವಿವಿಧ ಸಾಮಗ್ರಿಗಳ ದರ ಹೀಗಿದೆ: ಯಾವುದು ಅಗ್ಗ, ಯಾವುದು ದುಬಾರಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಎಫ್‌ಡಿ V/S ಆರ್‌ಡಿ; ಯಾವುದು ಉತ್ತಮ? ಯಾವುದರಲ್ಲಿ ಹೂಡಿಕೆ ಮಾಡಬೇಕು?

Money Guide: ಉಳಿತಾಯವು ಅನಿರೀಕ್ಷಿತ ಆಘಾತ, ಆರ್ಥಿಕ ಸಮಸ್ಯೆಗಳಿಂದ ನಿಮ್ಮನ್ನು ಕುಗ್ಗದಂತೆ ಕಾಪಾಡುತ್ತದೆ. ಹೀಗಾಗಿ ನೀವು ಭವಿಷ್ಯದ ದೃಷ್ಟಿಯಿಂದ ವಿವಿಧ ಯೋಜನೆಗಳಲ್ಲಿ ನಿಮ್ಮ ಉಳಿತಾಯದ ಹಣವನ್ನು ಹೂಡಿಕೆ ಮಾಡುವತ್ತ ಗಮನ ಹರಿಸಬೇಕು. ಈ ಪೈಕಿ ನಿಶ್ಚಿತ ಠೇವಣಿ ಮತ್ತು ರಿಕರಿಂಗ್‌ ಠೇವಣಿ ಪ್ರಮುಖವಾದುದು. ಹಾಗಾದರೆ ಈ ಎರಡು ಯೋಜನೆಗಳ ವೈಶಿಷ್ಟ್ಯಗಳೇನು ಎನ್ನುವುದನ್ನು ನೋಡೋಣ. ಎಫ್‌ಡಿ ಮತ್ತು ಆರ್‌ಡಿ ಇವೆರಡೂ ಭಾರತದಲ್ಲಿನ ಅತ್ಯಂತ ಜನಪ್ರಿಯ ಹೂಡಿಕೆ ಯೋಜನೆಗಳು ಎನಿಸಿಕೊಂಡಿವೆ. ವಿಶೇಷವಾಗಿ ಯಾವುದೇ ರಿಸ್ಕ್‌ಗಳನ್ನು ತೆಗೆದುಕೊಳ್ಳದೆ ಇರುವ ಹೂಡಿಕೆದಾರರಿಗೆ ಇವು ಉತ್ತಮ ಆಯ್ಕೆ.

VISTARANEWS.COM


on

Money Guide
Koo

ಬೆಂಗಳೂರು: ಇಂದಿನ ಉಳಿತಾಯವೇ ನಾಳೆಯ ಆದಾಯ ಎನ್ನುವ ಮಾತಿದೆ. ಅಂದರೆ ನಾವು ಎಷ್ಟು ಉಳಿತಾಯ ಮಾಡುತ್ತೇವೆಯೋ ಭವಿಷ್ಯದಲ್ಲಿ ಅಷ್ಟು ನೆಮ್ಮದಿ ಇರುತ್ತದೆ ಎನ್ನುವುದು ಇದಕ್ಕೆ ಕಾರಣ. ಇದಕ್ಕಾಗಿಯೇ ಆರ್ಥಿಕ ತಜ್ಞರು ಉಳಿತಾಯದತ್ತ ಗಮನ ಹರಿಸುವಂತೆ ಸಲಹೆ ನೀಡುತ್ತಾರೆ. ಉಳಿತಾಯವು ಅನಿರೀಕ್ಷಿತ ಆಘಾತ, ಆರ್ಥಿಕ ಸಮಸ್ಯೆಗಳಿಂದ ನಿಮ್ಮನ್ನು ಕುಗ್ಗದಂತೆ ಕಾಪಾಡುತ್ತದೆ. ಹೀಗಾಗಿ ನೀವು ಭವಿಷ್ಯದ ದೃಷ್ಟಿಯಿಂದ ವಿವಿಧ ಯೋಜನೆಗಳಲ್ಲಿ ನಿಮ್ಮ ಉಳಿತಾಯದ ಹಣವನ್ನು ಹೂಡಿಕೆ ಮಾಡುವತ್ತ ಗಮನ ಹರಿಸಬೇಕು. ಈ ಪೈಕಿ ನಿಶ್ಚಿತ ಠೇವಣಿ (Fixed Deposits) ಮತ್ತು ರಿಕರಿಂಗ್‌ ಠೇವಣಿ (Recurring Deposits) ಪ್ರಮುಖವಾದುದು. ಹಾಗಾದರೆ ಈ ಎರಡು ಯೋಜನೆಗಳ ವೈಶಿಷ್ಟ್ಯಗಳೇನು ಎನ್ನುವುದನ್ನು ನೋಡೋಣ (Money Guide).

ಎಫ್‌ಡಿ ಮತ್ತು ಆರ್‌ಡಿ ಇವೆರಡೂ ಭಾರತದಲ್ಲಿನ ಅತ್ಯಂತ ಜನಪ್ರಿಯ ಹೂಡಿಕೆ ಯೋಜನೆಗಳು ಎನಿಸಿಕೊಂಡಿವೆ. ವಿಶೇಷವಾಗಿ ಯಾವುದೇ ರಿಸ್ಕ್‌ಗಳನ್ನು ತೆಗೆದುಕೊಳ್ಳದೆ ಇರುವ ಹೂಡಿಕೆದಾರರಿಗೆ ಇವು ಉತ್ತಮ ಆಯ್ಕೆ. ಇದರಿಂದ ಯಾವುದೇ ಅಪಾಯವಿಲ್ಲದೆ ಸ್ಥಿರ ಆದಾಯವನ್ನು ಗಳಿಸಬಹುದು ಎನ್ನುವ ಕಾರಣಕ್ಕೆ ಇದನ್ನು ಬಹುತೇಕರು ನೆಚ್ಚಿಕೊಂಡಿದ್ದಾರೆ.

ನಿಶ್ಚಿತ ಠೇವಣಿಯಲ್ಲಿ ಹೂಡಿಕೆಯ ಅವಧಿ ಮತ್ತು ಬಡ್ಡಿದರವನ್ನು ಮೊದಲೇ ನಿಗದಿಪಡಿಸಲಾಗಿರುತ್ತದೆ. ಸಾಮಾನ್ಯವಾಗಿ 7 ದಿನಗಳಿಂದ 10 ವರ್ಷಗಳವರೆಗಿನ ಅವಧಿಯಲ್ಲಿ ನೀವು ಒಂದು ಬಾರಿ ಹೂಡಿಕೆ ಮಾಡಬಹುದು. ಇದರ ಮೇಲಿನ ಬಡ್ಡಿಯನ್ನು ನಿಯಮಿತ ಮಧ್ಯಂತರಗಳಲ್ಲಿ ಪಡೆಯಬಹುದು ಅಥವಾ ನೀವು ಮುಕ್ತಾಯದ ಸಮಯದಲ್ಲಿ ಅದನ್ನು ಸ್ವೀಕರಿಸುವ ಆಯ್ಕೆಯನ್ನು ಆಯ್ದುಕೊಳ್ಳಬಹುದು. 

ರಿಕರಿಂಗ್ ಡೆಪಾಸಿಟ್ ಯೋಜನೆಯಲ್ಲಿ ನೀವು ನಿರ್ದಿಷ್ಟ ಮೊತ್ತಗಳನ್ನು ಠೇವಣಿ ಇಡಬಹುದು. ಇದು 6 ತಿಂಗಳಿಂದ 10 ವರ್ಷಗಳು ಅಥವಾ ಅದಕ್ಕಿಂತ ಹೆಚ್ಚಿನ ಶ್ರೇಣಿಯಲ್ಲಿರಬಹುದು. ರಿಕರಿಂಗ್ ಡೆಪಾಸಿಟ್‌ನಲ್ಲಿ ನೀವು ಹೂಡಿಕೆ ಮಾಡಬಹುದಾದ ಕನಿಷ್ಠ ಮೊತ್ತವು ಸಾಮಾನ್ಯವಾಗಿ ಕೇವಲ ರೂ. 100 ಅಥವಾ ಅದಕ್ಕೂ ಕಡಿಮೆ ಇರುತ್ತದೆ. ಮೆಚ್ಯೂರಿಟಿ ಸಮಯದಲ್ಲಿ ಬಡ್ಡಿಯೊಂದಿಗೆ ಅಸಲನ್ನು ಪಡೆಯಬಹುದು.

ಎಫ್‌ಡಿಯ ವೈಶಿಷ್ಟ್ಯ

  • ಒಟ್ಟು ಮೊತ್ತದ ಹೂಡಿಕೆ: ಎಫ್‌ಡಿಗಳಿಗೆ ಒಂದು ಬಾರಿಯ ದೊಡ್ಡ ಮೊತ್ತದ ಠೇವಣಿ ಅಗತ್ಯ.
  • ಸ್ಥಿರ ಬಡ್ಡಿದರ: ಬಡ್ಡಿದರವನ್ನು ಹೂಡಿಕೆಯ ಸಮಯದಲ್ಲಿ ನಿಗದಿಪಡಿಸಲಾಗುತ್ತದೆ ಮತ್ತು ಅವಧಿಯುದ್ದಕ್ಕೂ ಸ್ಥಿರವಾಗಿರುತ್ತದೆ.
  • ಬಡ್ಡಿ ಪಾವತಿ ಆಯ್ಕೆಗಳು: ನಿಮ್ಮ ಆದ್ಯತೆಯನ್ನು ಅವಲಂಬಿಸಿ ಬಡ್ಡಿಯನ್ನು ಸಂಯೋಜಿಸಬಹುದು ಮತ್ತು ಮರುಹೂಡಿಕೆ ಮಾಡಬಹುದು.
  • ಕಡಿಮೆ ದ್ರವ್ಯತೆ: ಗಮನಿಸಿ ಅವಧಿ ಮುಕ್ತಾಯಗೊಳ್ಳುವ ಮೊದಲು ಎಫ್‌ಡಿಯನ್ನು ಹಿಂಪಡೆಯುವುದು ದಂಡಕ್ಕೆ ಮತ್ತು ಬಡ್ಡಿ ನಷ್ಟಕ್ಕೆ ಕಾರಣವಾಗಬಹುದು.

ಆರ್‌ಡಿಯ ವೈಶಿಷ್ಟ್ಯ

  • ನಿಯಮಿತ ಉಳಿತಾಯ: ಆರ್‌ಡಿ ನಿಮಗೆ ನಿಯಮಿತವಾಗಿ ಸಾಮಾನ್ಯವಾಗಿ ಮಾಸಿಕವಾಗಿ ನಿಗದಿತ ಮೊತ್ತವನ್ನು ಉಳಿಸಲು ಅನುವು ಮಾಡಿಕೊಡುತ್ತದೆ.
  • ಫ್ಲೆಕ್ಸಿಬಲ್ ಡೆಪಾಸಿಟ್ ಮೊತ್ತ: ನೀವು ಪ್ರತಿ ತಿಂಗಳು ಠೇವಣಿ ಮಾಡಬೇಕಾದ ಮೊತ್ತವನ್ನು ಆಯ್ಕೆ ಮಾಡಬಹುದು.
  • ಸ್ಥಿರ ಬಡ್ಡಿದರ: ಎಫ್‌ಡಿಯಂತೆಯೇ ಆರ್‌ಡಿ ಕೂಡ ಇಡೀ ಅವಧಿಗೆ ಸ್ಥಿರ ಬಡ್ಡಿದರವನ್ನು ನೀಡುತ್ತದೆ.
  • ನಿಗದಿತ ಅವಧಿ: ಆರ್‌ಡಿ ನಿಗದಿತ ಅವಧಿಯನ್ನು ಹೊಂದಿರುತ್ತದೆ. ಮೆಚ್ಯೂರಿಟಿ ಮೊತ್ತವನ್ನು ಮೊದಲೇ ನಿರ್ಧರಿಸಲಾಗುತ್ತದೆ.
  • ಹೆಚ್ಚಿನ ದ್ರವ್ಯತೆ: ಎಫ್‌ಡಿಗೆ ಹೋಲಿಸಿದರೆ ಆರ್‌ಡಿ ಉತ್ತಮ ದ್ರವ್ಯತೆಯನ್ನು ನೀಡುತ್ತವೆ. ನೀವು ಸಂಗ್ರಹಿಸಿಟ್ಟ ಮೊತ್ತವನ್ನು ಯಾವಾಗ ಬೇಕಾದರೂ ಹಿಂಪಡೆಯಬಹುದು ಅಥವಾ ತುರ್ತು ಸಂದರ್ಭಗಳಲ್ಲಿ ಅದರ ಮೇಲೆ ಸಾಲವನ್ನು ತೆಗೆದುಕೊಳ್ಳಬಹುದು.

ಯಾವುದು ಉತ್ತಮ?

ಮೊದಲೇ ಹೇಳಿದಂತೆ ಎಫ್‌ಡಿ ಮತ್ತು ಆರ್‌ಡಿ ಎರಡೂ ಉತ್ತಮ ಉಳಿತಾಯ ಯೋಜನೆ ಎನಿಸಿಕೊಂಡಿದೆ. ಎಫ್‌ಡಿಯಲ್ಲಿ ಹೂಡಿಕೆ ಮಾಡಲು ದೊಡ್ಡ ಮೊತ್ತವನ್ನು ಹೊಂದಿರಬೇಕಾಗುತ್ತದೆ. ಆದರೆ ಮಾಸಿಕ ಆದಾಯದಿಂದ ಸಣ್ಣ ಭಾಗವನ್ನು ಹೂಡಿಕೆ ಮಾಡುವವರಿಗೆ ಆರ್‌ಡಿ ಉತ್ತಮ. ಆರ್‌ಡಿ ಮತ್ತು ಎಫ್‌ಡಿ ಎರಡೂ ಕಡಿಮೆ ತೆರಿಗೆ ಸ್ಲ್ಯಾಬ್‌ನಲ್ಲಿರುವ ರಿಸ್ಕ್‌ಗಳನ್ನು ತೆಗೆದುಕೊಳ್ಳದ ಹೂಡಿಕೆದಾರರಿಗೆ ಹೆಚ್ಚು ಸೂಕ್ತವಾಗಿವೆ. ನಿಮಗೆ ಯಾವುದು ಉತ್ತಮ ಎಂಬುದು ನಿಮ್ಮ ಆರ್ಥಿಕ ಗುರಿಗಳು ಮತ್ತು ಆದ್ಯತೆಗಳನ್ನು ಅವಲಂಬಿಸಿರುತ್ತದೆ. ನೀವು ಹೂಡಿಕೆ ಮಾಡಲು ದೊಡ್ಡ ಮೊತ್ತವನ್ನು ಹೊಂದಿದ್ದರೆ ಮತ್ತು ದ್ರವ್ಯತೆ ಅಗತ್ಯವಿಲ್ಲದಿದ್ದರೆ ಎಫ್‌ಡಿ ಸೂಕ್ತವಾಗಬಹುದು. ಮತ್ತೊಂದೆಡೆ ನೀವು ನಿಯಮಿತವಾಗಿ ಉಳಿತಾಯ ಮಾಡಲು ಮತ್ತು ದ್ರವ್ಯತೆಗೆ ಆದ್ಯತೆ ನೀಡಲು ಬಯಸಿದರೆ ಆರ್‌ಡಿ ಉತ್ತಮ ಆಯ್ಕೆಯಾಗಿದೆ. ನಿರ್ಧಾರ ತೆಗೆದುಕೊಳ್ಳುವ ಮೊದಲು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ನಿರ್ಣಯಿಸುವುದು ಮತ್ತು ಹಣಕಾಸು ಸಲಹೆಗಾರರೊಂದಿಗೆ ಸಮಾಲೋಚನೆ ನಡೆಸಿ.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Continue Reading

ಚಿನ್ನದ ದರ

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Gold Rate Today: ಚಿನ್ನದ ಬೆಲೆಯು ಯಥಾಸ್ಥಿತಿಯಾಗಿರುವ ಕಾರಣ ವಾರಾಂತ್ಯದಲ್ಲಿ ಬಂಗಾರ ಖರೀದಿಸುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6,725 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಬೆಲೆಯು 7,336 ರೂ. ಇದೆ.

VISTARANEWS.COM


on

Mamitha Baiju
Koo

ಬೆಂಗಳೂರು: ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬೆಂಗಳೂರು (Bengaluru) ಸೇರಿ ಕರ್ನಾಟಕದಾದ್ಯಂತ (Karnataka) ಭಾರಿ ಏರಿಕೆ ಕಂಡು, ಬಳಿಕ ಇಳಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ (Gold Rate Today) ಭಾನುವಾರ (ಮೇ 11) ಯಾವುದೇ ಬದಲಾವಣೆಯಾಗಿಲ್ಲ. ಚಿನ್ನದ ಬೆಲೆಯು ಯಥಾಸ್ಥಿತಿಯಾಗಿರುವ ಕಾರಣ ವಾರಾಂತ್ಯದಲ್ಲಿ ಬಂಗಾರ ಖರೀದಿಸುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6,725 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಬೆಲೆಯು 7,336 ರೂ. ಇದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) 87.10 ರೂ., ಎಂಟು ಗ್ರಾಂ 696.80 ರೂ. ಮತ್ತು 10 ಗ್ರಾಂ 871 ರೂ. ಇದೆ. 100 ಗ್ರಾಂಗೆ ಗ್ರಾಹಕರು 8,710 ರೂ. ಮತ್ತು 1 ಕಿಲೋಗ್ರಾಂಗೆ 87,100 ರೂ. ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,40073,510
ಮುಂಬಯಿ67,25073,360
ಬೆಂಗಳೂರು67,25073,360
ಚೆನ್ನೈ67,50072,640

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

Akshaya Tritiya 2024

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಯೊಂದೇ ಅಲ್ಲ! ಹೀಗೆ ಮಾಡಿಯೂ ಸಮೃದ್ಧಿ ಹೊಂದಬಹುದು!

Continue Reading

ಕರ್ನಾಟಕ

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Selco India: ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ವಾರ್ಷಿಕ ಪ್ರಶಸ್ತಿಗೆ ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ ಭಾಜನರಾಗಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

VISTARANEWS.COM


on

Richard Hansen
Koo

ಬೆಂಗಳೂರು: ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ ಮೂಲಕ ಬೆಸೆದು ಪ್ರಸರಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೆರಿಕಾದ ರಿಚರ್ಡ್ ಹ್ಯಾನ್ಸೆನ್ ಅವರಿಗೆ ಸೆಲ್ಕೋ ಸಂಸ್ಥೆಯು (Selco India) 2023ನೇ ಸಾಲಿನ ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ.

ಬೆಂಗಳೂರಿನ ವೈಯಾಲಿ ಕಾವಲ್‌ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇದೇ ಮೇ 27ರಂದು ಸೂರ್ಯಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ತಿಳಿಸಿದ್ದಾರೆ.

ರಿಚರ್ಡ್ ಹ್ಯಾನ್ಸೆನ್ ಅವರು 1984ರಿಂದ ಮೊದಲ ಬಾರಿಗೆ ಉತ್ತರ ಅಮೇರಿಕಾದ ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಮೈಕ್ರೋಫೈನಾನ್ಸ್ ಪರಿಹಾರಗಳೊಂದಿಗೆ ಪಿವಿ ತಂತ್ರಜ್ಞಾನವನ್ನು ಪರಿಚಯಿಸಲು ಲಾಭರಹಿತ ಕಾರ್ಯಕ್ರಮವನ್ನು ಮುನ್ನೆಡೆಸಿದರು. ನಂತರ ಅವರು 1989 ರಲ್ಲಿ ಇದೇ ಮಾದರಿಯನ್ನು ಹೊಂಡುರಾಸ್‌ನಲ್ಲಿ ಅಮೆರಿಕದ ಇಂಧನ ಇಲಾಖೆ ಜತೆಗೆ ಒಪ್ಪಂದ ಮಾಡಿಕೊಂಡು ಪುನರಾವರ್ತಿಸಿದರು. ಈ ಕಾರ್ಯವು ಜಾಗತಿಕವಾಗಿ ಗಮನಾರ್ಹ ಪುನರಾವರ್ತನೆಗೆ ಕಾರಣವಾಯಿತು.

ಇದನ್ನೂ ಓದಿ: Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

ಪ್ರಸ್ತುತ ಎನರ್ಜಿ ಅಕ್ಸೆಸ್‌ ಫೌಂಡೇಷನ್ (www.energyaccessfoundation.org) ನ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ರಿಚರ್ಡ್ ಹ್ಯಾನ್ಸೆನ್, ಜಾಗತಿಕವಾಗಿ ಸುಸ್ಥಿರ ಶಕ್ತಿಯೆಡೆಗಿನ ಪರಿವರ್ತನೆಗೆ ಸಹಾಯ ಮಾಡುವ ಉದ್ದೇಶದಿಂದ 1993 ರಲ್ಲಿ ರಿಚರ್ಡ್ ಸೋಲುಜ್ ಇಂಕ್ (Soluz Inc.,) ಎಂಬ ಸಾಮಾಜಿಕ ಉದ್ಯಮವನ್ನು ಸ್ಥಾಪಿಸಿದರು. ಇದು ಪಿವಿ ಉತ್ಪನ್ನಗಳು ಮತ್ತು ಸಂಬಂಧಿತ ಮೈಕ್ರೋಫೈನಾನ್ಸ್ ಪರಿಹಾರಗಳನ್ನು ಪೂರೈಸುವ ಒಂದು ಅಂಗಸಂಸ್ಥೆಯಾಗಿ ಕೆಲಸ ಮಾಡುತ್ತಿದೆ.

ರಿಚರ್ಡ್ ಹ್ಯಾನ್ಸೆನ್, ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್‌ ನ್ಯಾಷನಲ್ ಡೆವಲಪ್ಮೆಂಟ್ (ಯುಎಸ್‌ಎಐಡಿ), ವಿಶ್ವ ಬ್ಯಾಂಕ್ ಮತ್ತು ಇಂಟರ್-ಅಮೆರಿಕನ್ ಅಭಿವೃದ್ಧಿ ಬ್ಯಾಂಕ್ ಸೇರಿದಂತೆ ಬಾಂಗ್ಲಾದೇಶ, ಬೊಲಿವಿಯಾ, ಡೊಮಿನಿಕನ್ ರಿಪಬ್ಲಿಕ್, ಇಥಿಯೋಪಿಯಾ, ಹೈಟಿ, ಭಾರತ, ನೇಪಾಳ, ನಿಕರಾಗುವಾ, ಫಿಲಿಪೈನ್ಸ್ ದೇಶಗಳು ಮತ್ತು ಪ್ರಮುಖ ಸಂಸ್ಥೆಗಳಿಗೆ ಸಲಹಾ ಸೇವೆಗಳನ್ನು ಒದಗಿಸಿದ್ದಾರೆ ಎಂದು ಸೆಲ್ಕೋ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಭಾಸ್ಕರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನಿಗದಿಗಿಂತ ಹೆಚ್ಚಿನ ಫೀಸ್ ತೆಗೆದುಕೊಂಡರೆ ಕ್ರಮ; ಖಾಸಗಿ ಶಾಲೆಗಳಿಗೆ ಮಧು ಬಂಗಾರಪ್ಪ ಖಡಕ್‌ ಎಚ್ಚರಿಕೆ

ಸೂರ್ಯಮಿತ್ರ ಪ್ರಶಸ್ತಿ

ಪ್ರತಿಷ್ಠಿತ ರಾಮೋನ್‌ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತರಾಗಿರುವ ಡಾ. ಎಚ್. ಹರೀಶ್ ಹಂದೆ ಅವರು ಸ್ಥಾಪಿಸಿ ಮುನ್ನಡೆಸುತ್ತಿರುವ ಸೆಲ್ಕೋ ಸಂಸ್ಥೆಯು ಪ್ರತಿಷ್ಠಿತ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿಯನ್ನು 2012ರಿಂದ ಕೊಡಮಾಡುತ್ತಾ ಬಂದಿದೆ. ಈ ಪ್ರಶಸ್ತಿಯನ್ನು, ಸುಸ್ಥಿರ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುವ ಹರಿಕಾರರು ಮತ್ತು ಗ್ರಾಮೀಣ ಜನತೆಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತಂದ ಅಸಾಧಾರಣ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ನೀಡಲಾಗುತ್ತದೆ.

ಸೆಲ್ಕೋ ಇಂಡಿಯಾ ಸಂಸ್ಥೆ

1995ರಲ್ಲಿ ಸ್ಥಾಪಿತವಾದ ಸೆಲ್ಕೋ ಇಂಡಿಯಾ ಸಂಸ್ಥೆಯು, ಮಾನ್ಯತೆ ಪಡೆದ ಸಾಮಾಜಿಕ ಉದ್ಯಮವಾಗಿದ್ದು, ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ನವೀಕರಿಸಬಹುದಾದ ಇಂಧನ ಆಧಾರಿತ ಪರಿಹಾರಗಳನ್ನು ಒದಗಿಸುವ ಮೂಲಕ ಬಡತನ ನಿರ್ಮೂಲನೆಯಲ್ಲಿ ವಿಶಿಷ್ಟ ಮಾದರಿಯ ಕೆಲಸ ಮಾಡುತ್ತಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸೆಲ್ಕೋ ಇಂಡಿಯಾ, ದೇಶಾದ್ಯಂತ ಏಳು ರಾಜ್ಯಗಳಲ್ಲಿ ಸೌರ ಇಂಧನದ ಮೂಲಕ ಶಿಕ್ಷಣ, ಆರೋಗ್ಯ ರಕ್ಷಣೆ, ಜೀವನೋಪಾಯ ಮತ್ತು ಗ್ರಾಮೀಣಾಭಿವೃದ್ಧಿಗೆ ಪೂರಕವಾದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

ಈ ವಲಯಗಳ ಸುಸ್ಥಿರ ಅಭಿವೃದ್ಧಿಗೆ ಬೇಕಾದ ಹಣಕಾಸು, ಕೌಶಲ್ಯಾಭಿವೃದ್ಧಿ, ಪೂರೈಕೆ ಸರಪಳಿ ಮತ್ತು ನೀತಿ-ನಿರೂಪಗಳ ಚೌಕಟ್ಟನ್ನು ಬಲಪಡಿಸುವ ಕೆಲಸಗಳ ಮೂಲಕ ಎಲ್ಲರೂ ಬಳಸಲು ಸಾಧ್ಯವಾಗುವಂತೆ ವಿಕೇಂದ್ರೀಕೃತ ಇಂಧನ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಭಾರತವು ಹೊಂದಿರುವ, ಹವಾಮಾನ ಬದಲಾವಣೆ ತಗ್ಗಿಸುವಿಕೆ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ತಲುಪುವ ಬದ್ಧತೆಯ ಸಂದರ್ಭದಲ್ಲಿ ಸೆಲ್ಕೋದ ಈ ಕಾರ್ಯವು ಹೆಚ್ಚು ಪ್ರಸ್ತುತವಾಗಿದೆ. ಸೆಲ್ಕೋದ ಈ ಎಲ್ಲ ಸಮಾಜಮುಖಿ ಕೆಲಸಗಳಿಗಾಗಿ ಆಶ್ಡೆನ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಮನಿ-ಗೈಡ್

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌: ಈ ಅಮ್ಮಂದಿರ ದಿನ ನೀವು ನೀಡಬಹುದಾದ ಅತ್ಯುತ್ತಮ ಉಡುಗೊರೆ

Money Guide: ಈ ಅಮ್ಮಂದಿರ ದಿನ ನಿಮ್ಮ ತಾಯಿಗೆ ಉಡುಗೊರೆ ಕೊಡಬೇಕೆಂಬ ಯೋಜನೆಯಲ್ಲಿದ್ದೀರಾ? ಹಾಗಾದರೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರದಲ್ಲಿ ಹೂಡಿಕೆ ಮಾಡುವುದು ಅತ್ಯುತ್ತಮ ಮಾರ್ಗ. ಮಹಿಳೆಯರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ ಜಾರಿಗೆ ತಂದ ವಿಶೇಷ ಉಳಿತಾಯ ಯೋಜನೆಯೇ ಈ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ. ಈ ಯೋಜನೆಯ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ನಾಳೆ (ಮೇ 12) ವಿಶ್ವ ಅಮ್ಮಂದಿರ ದಿನ (Mother’s Day 2024). ಜೀವನಪೂರ್ತಿ ನಮಗಾಗಿ ನಿಸ್ವಾರ್ಥವಾಗಿ ಮಿಡಿಯುವ ಜೀವಕ್ಕೆ ಚಿಕ್ಕದೊಂದು ಧನ್ಯವಾದ ಹೇಳುವ ದಿನ ಇದು. ಅಮ್ಮಂದಿರ ಋಣವನ್ನು ತೀರಿಸಲು ಸಾಧ್ಯವಿಲ್ಲವಾದರೂ ಒಂದು ಚಿಕ್ಕ ಉಡುಗೊರೆ ಕೊಡುವ ಮೂಲಕ ಅವರ ಮೊಗದಲ್ಲಿ ನಗು ಅರಳಿಸಬಹುದು. ಈ ಅಮ್ಮಂದಿರ ದಿನದಲ್ಲಿ ನಿಮ್ಮ ಅಮ್ಮನಿಗೆ ನೀಡಬಹುದಾದ ಅತ್ಯುತ್ತಮ ಉಡುಗೊರೆಯ ಪೈಕಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ (Mahila Samman Saving Certificate Scheme)ವೂ ಒಂದು. ಏನಿದು ಯೋಜನೆ? ಈ ಯೋಜನೆ ಮಹಿಳೆಯರಿಗೆ ಹೇಗೆ ಪ್ರಯೋಜಕಾರಿ? ಮುಂತಾದ ನಿಮ್ಮ ಸಂದೇಹಕ್ಕೆ ಇಲ್ಲಿದೆ ಉತ್ತರ (Money Guide).

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ ಎಂದರೇನು?

ಮಹಿಳೆಯರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ ಜಾರಿಗೆ ತಂದ ವಿಶೇಷ ಉಳಿತಾಯ ಯೋಜನೆಯೇ ಈ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ. ಈ ವಿಶೇಷ ಉಳಿತಾಯ ಯೋಜನೆ ಮಹಿಳೆಯರನ್ನು ಆರ್ಥಿಕವಾಗಿ ಮುಖ್ಯವಾಹಿನಿಗೆ ತರುವ ಗುರಿಯನ್ನು ಹೊಂದಿದ್ದು, ಅವರ ಭವಿಷ್ಯಕ್ಕಾಗಿ ಉಳಿತಾಯವನ್ನು ಮಾಡಲು ಪ್ರೋತ್ಸಾಹಿಸುತ್ತದೆ.

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ ಯೋಜನೆಯನ್ನು ಕೇಂದ್ರ ಬಜೆಟ್ ತನ್ನ 2023ರ ಬಜೆಟ್‌ನಲ್ಲಿ ಘೋಷಿಸಿದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರವು ಮಾರ್ಚ್ 2025ರವರೆಗೆ ಲಭ್ಯವಿದೆ. ಇದು 2 ವರ್ಷಗಳ ಅವಧಿಗೆ ಮಹಿಳೆಯರು ಅಥವಾ ಹುಡುಗಿಯರ ಹೆಸರಿನಲ್ಲಿ 2 ಲಕ್ಷ ರೂ.ವರೆಗೆ ಠೇವಣಿ ಇಡುವ ಸೌಲಭ್ಯವನ್ನು ಒದಗಿಸುತ್ತದೆ. ಈ ಯೋಜನೆಯ ಅಡಿಯಲ್ಲಿ ಕೇವಲ ಮಹಿಳೆಯರು ಹಾಗೂ ಯುವತಿಯರು ಮಾತ್ರ ಹೂಡಿಕೆ ಮಾಡಬಹುದಾಗಿದೆ. ಮಹಿಳೆಯರು ಸ್ವತಃ ತಾವೇ ಹಾಗೂ ಅಪ್ರಾಪ್ತ ಬಾಲಕಿಯರ ಪರವಾಗಿ ಅವರ ಪೋಷಕರು ಈ ಖಾತೆಯನ್ನು ನಿರ್ವಹಿಸಬಹುದಾಗಿದೆ. ಹೀಗಾಗಿ ಈ ಬಾರಿ ನೀವು ತಾಯಿಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡುವಂತೆ ಉತ್ತೇಜನ ನೀಡಿ.

ಅರ್ಹತೆ

  • ಯಾವುದೇ ಭಾರತೀಯ ಮಹಿಳೆ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಇದಕ್ಕೆ ವಯಸ್ಸಿನ ನಿರ್ಬಂಧವಿಲ್ಲ.
  • ಅಪ್ರಾಪ್ತ ವಯಸ್ಸಿನ ಬಾಲಕಿಯ ಸ್ವಾಭಾವಿಕ ಅಥವಾ ಕಾನೂನುಬದ್ಧ ಪೋಷಕರು ಖಾತೆ ತೆರೆಯಬಹುದು.
  • ಗಮನಿಸಿ ವೈಯಕ್ತಿಕ ಖಾತೆಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ.
  • ಹೂಡಿಕೆಯ ಕನಿಷ್ಠ ಮೊತ್ತ 1,000 ರೂ. ಮತ್ತು ಗರಿಷ್ಠ ಮೊತ್ತ 2,00,000.

ಬಡ್ಡಿ ದರ

ಈ ಖಾತೆಯನ್ನು ಹೊಂದಿರುವವರಿಗೆ ವಾರ್ಷಿಕ 7.5 ಪ್ರತಿಶತ ನಿಶ್ಚಿತ ಬಡ್ಡಿ ದರವನ್ನು ನೀಡಲಾಗುತ್ತದೆ. ಬ್ಯಾಂಕ್‌ನ ಸ್ಥಿರ ಠೇವಣಿ ಹಾಗೂ ಇತರ ಸಣ್ಣ ಉಳಿತಾಯ ಯೋಜನೆಗಳಿಗೆ ಹೋಲಿಕೆ ಮಾಡಿದರೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರದ ಅಡಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಬಡ್ಡಿದರ ಸಿಗಲಿದೆ.

ಅವಧಿ

ಈ ಯೋಜನೆಯ ಮೆಚ್ಯೂರಿಟಿ ಅವಧಿ 2 ವರ್ಷ. ಈ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಖಾತೆದಾರರಿಗೆ ಮೆಚ್ಯೂರಿಟಿ ಮೊತ್ತ ಪಾವತಿಯಾಗುತ್ತದೆ. ಒಂದು ವೇಳೆ ಅವಧಿ ಮೀರುವ ಮುನ್ನ ಹಿಂಪಡೆಯಬೇಕೆಂದರೆ ಖಾತೆಯಲ್ಲಿರುವ ಒಟ್ಟು ಮೊತ್ತದ ಶೇ. 40ರಷ್ಟು ಹಿಂಪಡೆಯಬಹುದು. ಆದರೆ ಖಾತೆಯನ್ನು ತೆರೆದು ಒಂದು ವರ್ಷ ಆಗಿರಬೇಕು. ಜತೆಗೆ ಆಯ್ದ ಸಂದರ್ಭಗಳಲ್ಲಿ ಖಾತೆಗಳನ್ನು ಅಕಾಲಿಕವಾಗಿ ಬಂದ್ ಮಾಡಬಹುದು.

ಖಾತೆ ತೆರೆಯುವುದು ಹೇಗೆ?

ಈ ಖಾತೆಯನ್ನು ಅಂಚೆ ಕಚೇರಿ ಅಥವಾ ಆಯ್ದ ಬ್ಯಾಂಕ್‌ಗಳಲ್ಲಿ ತೆರೆಯಬಹುದು. ನಿರ್ದಿಷ್ಟ ಅರ್ಜಿಯನ್ನು ಭರ್ತಿ ಮಾಡಿ, ಕೆವೈಸಿ ದಾಖಲೆಗಳನ್ನು ಒದಗಿಸಿ ಆರಂಭಿಕ ಠೇವಣಿ ಮೊತ್ತವನ್ನು ಇಡುವ ಮೂಲಕ ಖಾತೆಯನ್ನು ತೆರೆಯಬಹುದಾಗಿದೆ. ಇದಕ್ಕಾಗಿ ನೀವು ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್ ನೀಡಬೇಕಾಗುತ್ತದೆ.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Continue Reading
Advertisement
Metro Penalty
ಬೆಂಗಳೂರು3 mins ago

Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

IPL 2024
ಪ್ರಮುಖ ಸುದ್ದಿ5 mins ago

IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

Chandrayaan 4
ದೇಶ8 mins ago

Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

CBSE Class 10 Results
ಮಂಡ್ಯ10 mins ago

CBSE Class 10 Results: ಸತತ 9ನೇ ಬಾರಿಗೆ ಶೇ.100 ಫಲಿತಾಂಶ; ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಅಮೋಘ ಸಾಧನೆ

Climate Plan
ಕರ್ನಾಟಕ21 mins ago

Climate Plan: ರಾಜ್ಯ ಸರ್ಕಾರದ ಹವಾಮಾನ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಒಪ್ಪಿಗೆ; ಏನಿದು ಯೋಜನೆ?

Namma Metro green line
ಬೆಂಗಳೂರು36 mins ago

Namma Metro : ಜುಲೈ ಅಂತ್ಯಕ್ಕೆ ನಾಗಸಂದ್ರ-ಮಾದಾವರ ಮೆಟ್ರೋ ಕಾಮಗಾರಿ ಪೂರ್ಣ!

Rohit Sharma
ಕ್ರೀಡೆ38 mins ago

Rohit Sharma : ಭಾರತ ತಂಡದ ಹೊಸ ಜೆರ್ಸಿ ಬಿಡುಗಡೆ ಮಾಡಿದ ರೋಹಿತ್​ ಶರ್ಮಾ, ಇಲ್ಲಿದೆ ವಿಡಿಯೊ

Abdu Rozik
Latest45 mins ago

Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ!

Song Release
ಸಿನಿಮಾ50 mins ago

Song Release: ‘ಇದು ನಮ್ ಶಾಲೆ’ ಚಿತ್ರದ ಹಾಡಿನ ಅನಾವರಣ

Prajwal Revanna Case
ಕರ್ನಾಟಕ51 mins ago

Prajwal Revanna Case: ರೇವಣ್ಣಗೆ ಜಾಮೀನು; ಹೊಳೆನರಸೀಪುರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು ವಶಕ್ಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ1 hour ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ1 hour ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ2 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ2 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ3 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ9 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ14 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ15 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌