ಪ್ರಮುಖ ಸುದ್ದಿ
Money Guide : ಸೆಪ್ಟೆಂಬರ್ ಅಂತ್ಯದೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ನಿಷ್ಕ್ರಿಯ ಖಚಿತ
ಮುಂಬಯಿ: ಆರ್ಥಿಕ ಚಟುವಟಿಕೆಗಳನ್ನು ವರ್ಷವಿಡೀ ಮಾಡಬೇಕು. ಆದರೆ, ಕೆಲವು ಕಡ್ಡಾಯ ಕೆಲಸಗಳನ್ನು (Money Guide ) ಸರಕಾರದ ಮತ್ತು ನಿರ್ದಿಷ್ಟ ಹಣಕಾಸು ಸಂಸ್ಥೆಗಳ ಸೂಚನೆಯನ್ನು ನಿಗದಿತ ಅವಧಿಯೊಳಗೆ ಮಾಡಲೇಬೇಕು. ಇಲ್ಲ ಎಂದಾದರೆ ನೀವು ಕೂಡಿಟ್ಟ ಹಣ ಅಥವಾ ನಿಮ್ಮ ಹಣವನ್ನು ಜೋಪಾನವಾಗಿ ಕಾಪಾಡುವ ಉಳಿತಾಯ ಖಾತೆಗಳು ವ್ಯತಿರಿಕ್ತ ಪರಿಣಾಮವನ್ನು ತಂದೊಡ್ಟಬಹುದು. ನಿಮ್ಮದೇ ಹಣವನ್ನು ಪಡೆಯುವುದಕ್ಕೆ ಮುಂದೆ ಕಷ್ಟ ಪಡಬೇಕಾಗಬಹುದು. ಹಣ ಇದ್ದರೂ ಬಳಕೆಗೆ ಬಾರದಿರಬಹುದು. ತುರ್ತು ಸಂದರ್ಭದಲ್ಲಿ ನಿಮ್ಮ ಉಳಿತಾಯ ಪ್ರಯೋಜನಕ್ಕೆ ಸಿಗದೇ ಇರಬಹುದು. ನೀವಿಗ ಸೆಪ್ಟೆಂಬರ್ ತಿಂಗಳಿನಲ್ಲಿದ್ದೀರಿ. ಈ ತಿಂಗಳು ಮುಗಿಯಲು ಇನ್ನು ಎರಡು ವಾರಗಳು ಮಾತ್ರ ಬಾಕಿ ಉಳಿದಿದೆ. ಈ ತಿಂಗಳ ಅಂತ್ಯಕ್ಕೆ ಕೆಲವೊಂದು ಹಣಕಾಸು ಗಡುವುಗಳಿವೆ ಎಂಬುದನ್ನು ನಾವಿಲ್ಲಿ ಸ್ಮರಿಸುತ್ತಿದ್ದೇವೆ. ಅವುಗಳು ಯಾವುದೆಂದು ನೋಡೋಣ.
ಸಣ್ಣ ಉಳಿತಾಯ ಯೋಜನೆಗೆ ಆಧಾರ್ ಜೋಡಣೆ
ಸೆಪ್ಟೆಂಬರ್ 30, 2023 ರೊಳಗೆ ತಮ್ಮ ಆಧಾರ್ ಸಂಖ್ಯೆಗಳನ್ನು ಒದಗಿಸದಿದ್ದರೆ ಅಕ್ಟೋಬರ್ 1, 2023 ರಂದು ಚಾಲ್ತಿಯಲ್ಲಿರುವ ಗ್ರಾಹಕರ ಖಾತೆಗಳನ್ನು ಅಮಾನತುಗೊಳ್ಳುತ್ತವೆ. ಹಿರಿಯ ನಾಗರಿಕರ ಉಳಿತಾಯ ಯೋಜನೆ (ಎಸ್ಸಿಎಸ್ಎಸ್), ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಎನ್ಎಸ್ಸಿ) ಅಥವಾ ಇತರ ಅಂಚೆ ಕಚೇರಿ ಯೋಜನೆಗಳಂತಹ ಸಣ್ಣ ಉಳಿತಾಯ ಯೋಜನೆಗಳನ್ನು ಹೊಂದಿರುವವರು ತಮ್ಮ ಆಧಾರ್ ಸಂಖ್ಯೆಯನ್ನು ಅಂಚೆ ಕಚೇರಿ ಅಥವಾ ತಮ್ಮ ಬ್ಯಾಂಕ್ ಶಾಖೆಗೆ ಸೆಪ್ಟೆಂಬರ್ 30ರೊಳಗೆ ಒದಗಿಸಲೇಬೇಕು.
ಕೊಡದಿದ್ದರೇ ಏನಾಗುತ್ತದೆ?
- ಸಂಗ್ರಹವಾಗಿರುವ ಬಡ್ಡಿಯನ್ನು ಹೂಡಿಕೆದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದಿಲ್ಲ.
- ಪಿಪಿಎಫ್ ಅಥವಾ ಸುಕನ್ಯಾ ಸಮೃದ್ಧಿ ಖಾತೆಗಳಿಗೆ ಠೇವಣಿ ಮಾಡಲು ಸಾಧ್ಯವಾಗುವುದಿಲ್ಲ.
- ಪಿಪಿಎಫ್ ಅಥವಾ ಸುಕನ್ಯಾ ಸಮೃದ್ಧಿ ಖಾತೆಗಳ ಮೊತ್ತವನ್ನು ಪಡೆಯಲು ಸಾಧ್ಯವಾಗುವುದಿಲ್ಲ. \
2,000 ರೂ ವಿನಿಮಯ ಮಾಡಿಕೊಳ್ಳಲು ಕೊನೆಯ ದಿನ
ಠೇವಣಿದಾರರು ಮತ್ತು ವಿನಿಮಯದಾರರಿಗೆ 2000 ರೂ.ಗಳ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಾಲ್ಕು ತಿಂಗಳ ಕಾಲಾವಕಾಶ ನೀಡಿತ್ತು. ಸೆಪ್ಟೆಂಬರ್ 30, 2023 ರೊಳಗೆ, ನೋಟುಗಳನ್ನು ವಿನಿಮಯ ಮಾಡಬೇಕು ಅಥವಾ ಬ್ಯಾಂಕ್ನಲ್ಲಿ ಠೇವಣಿ ಇಡಬೇಕು.
ಎಸ್ ಬಿಐ ವೀಕೇರ್
ಹಿರಿಯ ನಾಗರಿಕರಿಗಾಗಿ ಎಸ್ಬಿಐನ ವಿಕೇರ್ ವಿಶೇಷ ಸ್ಥಿರ ಠೇವಣಿಗಳು ಹೂಡಿಕೆ ಮಾಡಲು ಸೆಪ್ಟೆಂಬರ್ 30, 2023 ಕೊನೆಯ ದಿನಾಂಕ. ಹೆಚ್ಚಿನ ಎಫ್ಡಿ ಬಡ್ಡಿದರಗಳನ್ನು ನೀಡುವ ಈ ಯೋಜನೆಗೆ ಹಿರಿಯ ನಾಗರಿಕರು ಮಾತ್ರ ಅರ್ಹರಾಗಿದ್ದಾರೆ. ಬ್ಯಾಂಕ್ ಸಾರ್ವಜನಿಕರಿಗೆ ನೀಡುವ ಕಾರ್ಡ್ ದರಕ್ಕಿಂತ 50 ಬೇಸಿಸ್ ಪಾಯಿಂಟ್ (ಬಿಪಿಎಸ್) ಹೆಚ್ಚುವರಿ ಪ್ರೀಮಿಯಂ ಅನ್ನು ಈ ಪ್ಲ್ಯಾನ್ ಒದಗಿಸುತ್ತದೆ. ವಿ ಕೇರ್ ಯೋಜನೆಯಲ್ಲಿ ಹಿರಿಯ ನಾಗರಿಕರು 7.50 ಬಡ್ಡಿಯನ್ನು ಪಡೆಯುತ್ತಾರೆ. ಇದು ಹೊಸ ಠೇವಣಿ ಮತ್ತು ಇರುವ ಠೇವಣಿಯ ನವೀಕರಣಕ್ಕೂ ಅನ್ವಯವಾಗುತ್ತದೆ.
ಐಡಿಬಿಐ ಅಮೃತ ಮಹೋತ್ಸವ ಎಫ್ಡಿ
375 ದಿನಗಳ ಅಮೃತ ಮಹೋತ್ಸವ್ ಎಫ್ಡಿ ಯೋಜನೆಯಡಿ, ಬ್ಯಾಂಕ್ ಸಾಮಾನ್ಯ ನಾಗರಿಕರಿಗೆ 7.10% ಬಡ್ಡಿದರವನ್ನು ನೀಡುತ್ತದೆ. ಹಿರಿಯ ನಾಗರಿಕರಿಗೆ, ಬ್ಯಾಂಕ್ 7.60% ನೀಡುತ್ತದೆ. 444 ದಿನಗಳ ಸ್ಕೀಮ್ನಲ್ಲಿ ಬ್ಯಾಂಕ್ ಸಾಮಾನ್ಯ ನಾಗರಿಕರಿಗೆ 7.15% ಮತ್ತು ಹಿರಿಯ ನಾಗರಿಕರಿಗೆ 7.65% ಬಡ್ಡಿದರವನ್ನು ನೀಡುತ್ತದೆ.
ಡೆಮಾಟ್, ಎಂಎಫ್ ನಾಮನಿರ್ದೇಶನ
ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಟ್ರೇಡಿಂಗ್ ಮತ್ತು ಡಿಮ್ಯಾಟ್ ಖಾತೆದಾರರಿಗೆ ನಾಮಿನಿಗಳನ್ನು ಸೂಚಿಸಲು ಅಥವಾ ನಾಮಿನಿಯಿಂದ ಹೊರಗುಳಿಯಲು ಸಮಯವನ್ನು ವಿಸ್ತರಿಸಿತ್ತು. ಪರಿಷ್ಕೃತ ಗಡುವು ಸೆಪ್ಟೆಂಬರ್ 30, 2023.
ಕರ್ನಾಟಕ
Cabinet Meeting: ವಾಹನಗಳ ಗುಜರಿ ನೀತಿ-2022 ಜಾರಿ ಮಾಡಲು ಸಚಿವ ಸಂಪುಟ ಒಪ್ಪಿಗೆ
Cabinet Meeting: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನೋಂದಾಯಿತ ವಾಹನಗಳ ಗುಜರಿ ನೀತಿ-2022 ಅನ್ನು ರಾಜ್ಯದಲ್ಲಿ ಜಾರಿ ಮಾಡಲು ಒಪ್ಪಿಗೆ ಸೂಚಿಸಲಾಗಿದೆ.
ಬೆಂಗಳೂರು: ಕಾವೇರಿ ವಿಚಾರದಲ್ಲಿ ಮುಂದಿನ ಕಾನೂನು ಹೋರಾಟ, ತಮಿಳುನಾಡಿಗೆ ನೀರು ಬಿಡುಗಡೆ ಮಾಡದಿರಲು ನಿರ್ಣಯ ಮಾಡಲು ವಿಶೇಷ ಅಧಿವೇಶನ ಕರೆಯುವುದು, ಬರ ಪರಿಹಾರ, ನೋಂದಾಯಿತ ವಾಹನಗಳ ಗುಜರಿ ನೀತಿ ಜಾರಿ (Vehicle Scrapping Policy) ಮಾಡುವುದು ಸೇರಿ ಹಲವು ಮಹತ್ವದ ವಿಷಯಗಳ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು.
ಸುಮಾರು ಎರಡು ಗಂಟೆ ನಡೆದ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು, ಬರ ಸ್ಥಿತಿಯಿಂದ 30,432 ಕೋಟಿ ರೂ. ನಷ್ಟ ಉಂಟಾಗಿದೆ. ಹೀಗಾಗಿ 4860 ಕೋಟಿ ರೂ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡುತ್ತಿದ್ದೇವೆ. ಸುಮಾರು 39,039 ಲಕ್ಷ ಹೆಕ್ಟೇರ್ ಕೃಷಿ ಬೆಳೆ ನಷ್ಟವಾಗಿದ್ದು, ಇದಕ್ಕಾಗಿ ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ 3824 ಕೋಟಿ ರೂ. ಪರಿಹಾರ ಕೋರುತ್ತಿದ್ದೇವೆ ಎಂದು ತಿಳಿಸಿದರು.
ತೋಟಗಾರಿಕೆ ಬೆಳೆ ನಷ್ಟ 2655 ಕೋಟಿ ಆಗಿದ್ದು, ಇದಕ್ಕಾಗಿ 206 ಕೋಟಿ ಪರಿಹಾರ ಕೋರಿಕೆಗೆ ನಿರ್ಧಾರ ಮಾಡಿದ್ದೇವೆ. 195 ಪಶು ಶಿಬಿರಕ್ಕಾಗಿ 104 ಕೋಟಿ ರೂ. , 624 ಮೇವು ಬ್ಯಾಂಕ್ ಸ್ಥಾಪನೆಗೆ 1063 ಕೋಟಿ ರೂ. ಔಷಧಗಳಿಗೆ 25 ಕೋಟಿ, ಆಹಾರ, ಮೇವು ಬೀಜಕ್ಕೆ 50 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಗುಜರಿ ನೀತಿ ಜಾರಿ ಮಾಡಲು ನಿರ್ಧಾರ: ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ನೋಂದಾಯಿತ ವಾಹನಗಳ ಗುಜರಿ ನೀತಿ-2022 (Vehicle Scrapping Policy-2022) ಜಾರಿ ಮಾಡಲು ಸಚಿವ ಸಂಪುಟದಲ್ಲಿ ನಿರ್ಧಾರ ಮಾಡಲಾಗಿದ್ದು, 15 ವರ್ಷಗಳ ಕಾಲ ಸಂಚರಿಸಿದ ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗುತ್ತದೆ. 15,295 ವಾಹನಗಳನ್ನು ಸ್ಕ್ರ್ಯಾಪ್ ಮಾಡಬೇಕಿದ್ದು, 2023-24ರ ಮೊದಲ ಹಂತದಲ್ಲಿ 5000 ವಾಹನ ನಾಶ ಪಡಿಸುತ್ತೇವೆ. ಇದಕ್ಕೆ ಒಂದು ನೂರು ಕೋಟಿ ರೂಪಾಯಿ ಪ್ರೋತ್ಸಾಹ ಧನ ಕೇಂದ್ರದಿಂದ ಬರಲಿದೆ ಎಂದು ತಿಳಿಸಿದರು.
ಕುಂಚುಟಿಗ ಜಾತಿಯನ್ನು ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುತ್ತದೆ. ಕಾವೇರಿ ವಿಚಾರದಲ್ಲಿ ಅಡ್ವೋಕೇಟ್ ಜನರಲ್ ಅನ್ನು ಕರೆದು ಮಾಹಿತಿ ಪಡೆದುಕೊಂಡಿದ್ದೇವೆ. ಸದ್ಯ ಸರಿಸುಮಾರು 3.5 ಸಾವಿರ ಕ್ಯೂಸೆಕ್ ಹೋಗುತ್ತಿದೆ. ಸೆ.26 ವರೆಗೂ ನೀರು ಬಿಡಬೇಕು. ಅಲ್ಲಿಯವರೆಗೂ ನೀರು ಬಿಟ್ಟು, ಬಳಿಕ ನಾವು ಸಹ ತಂತ್ರಗಾರಿಕೆ ರೂಪಿಸುತ್ತೇವೆ ಎಂದರು.
ಮೇಕೆದಾಟು ವಿಚಾರದಲ್ಲಿ ಸುಪ್ರೀಂ ಮೌಖಿಕವಾಗಿ ಹೇಳಿದೆ. ಹೀಗಾಗಿ ಮೇಕೆದಾಟು ಯೋಜನೆ ಮುಂದುವರಿಸಲು ತೀರ್ಮಾನ ಮಾಡುತ್ತೇವೆ. ಇದಕ್ಕಾಗಿ ಪರಿಸರ ಇಲಾಖೆ ಸೇರಿ ಹಲವು ಇಲಾಖೆಗಳ ಅನುಮತಿ ಪಡೆಯಬೇಕಿದೆ ಎಂದ ಅವರು, ಐಪಿ ಸೆಟ್ ಸಕ್ರಮಕ್ಕೆ ಇಂದು ಕೊನೆ ದಿನ. ಅರ್ಜಿ ಹಾಕಿದವರನ್ನು ಸಕ್ರಮ ಎಂದು ಘೋಷಿಸುತ್ತೇವೆ. ಇನ್ನುಮುಂದೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವವರಿಗೆ ಅವಕಾಶ ಇಲ್ಲ ಎಂದು ತಿಳಿಸಿದರು.
ಇದನ್ನೂ ಓದಿ | Dakshin Bharat Utsav: ಪ್ರವಾಸೋದ್ಯಮ ಉತ್ತೇಜಿಸಲು ಖಾಸಗಿ ವಲಯಕ್ಕೆ 550 ಸ್ಮಾರಕ ದತ್ತು: ಸಚಿವ ಎಚ್.ಕೆ. ಪಾಟೀಲ್
ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು
- ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಲು ಸಂಬಂಧ ರಚಿಸಲಾಗಿದ್ದ ನ್ಯಾ. ಭಕ್ತವತ್ಸಲ ಆಯೋಗದ ಎರಡನೇ ವರದಿ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆದು ಅಂಗೀಕರಿಸಲಾಗಿದೆ. ಈ ವರದಿಯನ್ನು ಆಧರಿಸಿ ಸುಪ್ರಿಂಕೋರ್ಟ್ಗೆ ಅಫಿಡೆವಿಟ್ ಸಲ್ಲಿಸಲಾಗುತ್ತದೆ. ಈ ಹಿಂದೆ ಯಾವ ಆಧಾರದಲ್ಲಿ ರಾಜಕೀಯ ಮೀಸಲು ನೀಡಲಾಗುತ್ತಿದೆ ಎಂದು ಮಹಾರಾಷ್ಟ್ರ ಪ್ರಕರಣದಲ್ಲಿ ಸುಪ್ರಿಂಕೋರ್ಟ್ ಪ್ರಶ್ನಿಸಿತ್ತಲ್ಲದೇ ಎಲ್ಲ ರಾಜ್ಯಗಳಿಗೂ ಅನ್ವಯಿಸಿತ್ತು. ಇದರಿಂದ ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆ ಚುನಾವಣೆ ನೆನೆಗುದಿಗೆ ಬಿದ್ದಿತ್ತು. ಹೀಗಾಗಿ ಬಿಜೆಪಿ ಸರ್ಕಾರ ನ್ಯಾ. ಭಕ್ತವತ್ಸಲ ಸಮಿತಿ ರಚಿಸಿತ್ತು. ಈ ಸಮಿತಿ ಎರಡನೇ ಪೂರಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.
- ನೀರಾವರಿ ಪಂಪ್ ಸೆಟ್ ಸೌರೀಕರಣ: ನೀರಾವರಿ ಪಂಪ್ ಸೆಟ್ಗಳಿಗೆ ಸ್ಟಾಂಡ್ ಅಲೋನ್, ಆಫ್ ಗ್ರಿಡ್ ಸೋಲಾರ್ ಪಂಪ್ ಸೆಟ್ ಒದಗಿಸಲು ಬೆಂಬಲ ಹಾಗೂ ನೀರಾವರಿ ಪಂಪ್ ಸೆಟ್ ಫೀಡರ್ಗಳ ಸೌರೀಕರಣಕ್ಕೆ ಕೈಗೆತ್ತಿಕೊಳ್ಳಲು ಸಂಪುಟ ಒಪ್ಪಿಗೆ ನೀಡಿದೆ. ಅದೇ ರೀತಿ ರಾಜ್ಯದಲ್ಲಿ ನೀರಾವರಿ ಪಂಪ್ಸೆಟ್ಗಳನ್ನು 2015ರಿಂದ ಸಕ್ರಮ ಗೊಳಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ.
- ಏಳುಕಡೆ ಕೈಗಾರಿಕಾ ವಸಾಹತು: ಕೆಎಸ್ಎಸ್ಐಡಿಸಿ ವತಿಯಿಂದ ರಾಜ್ಯದ ಏಳು ಕೈಗಾರಿಕಾ ವಸಾಹತು ಸ್ಥಾಪನೆಗೆ ನಿರ್ಧರಿಸಲಾಗಿದೆ. ಚಿತ್ತಾಪುರ, ಕೋಡ್ಕಣಿ, ಕಣಗಾಲ, ಬದನಗುಪ್ಪೆ, ಇಂಡಿಯಲ್ಲಿ ವಸಾಹತು ಸ್ಥಾಪನೆಗೆ 166 ಕೋಟಿ ರೂ. ಹಾಗೂ ಹುಬ್ಬಳ್ಳಿ ಮತ್ತು ಶಹಪೂರದಲ್ಲಿ ಭೂ ಸ್ವಾಧೀನಕ್ಕೆ ಸಮ್ಮತಿ.
- ಪೊಲೀಸ್ ಇಲಾಖೆಗೆ 1682 ಹೊಸ ವಾಹನ: ಪೊಲೀಸ್ ಮೊಬಿಲಿಟಿ ಯೋಜನೆಯಡಿ ಪೊಲೀಸ್ ಇಲಾಖೆಯು 1682 ವಾಹನಗಳನ್ನು 83.38 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ಅನುಮೋದನೆ.
- ಕೃಷಿ ನವೋದ್ಯಮ ಯೋಜನೆ ಜಾರಿ. ಕೃಷಿ ಪ್ರೋತ್ಸಾಹಿಸಲು ಕೃಷಿ ನವೋದ್ಯಮ ಯೋಜನೆ ಜಾರಿ ಮಾಡಲಾಗುತ್ತಿದೆ.
ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಹಾಗೂ ಕೃಷಿ ಪದವೀಧರರು, ಆಸಕ್ತ ಪ್ರಗತಿಪರ ರೈತರು ಕೃಷಿಯಲ್ಲಿ ನವೋದ್ಯಮ ಆರಂಭಿಸಲು ಮತ್ತು ಕೃಷಿಯಲ್ಲಿ ನವೀನ ಪರಿಕಲ್ಪನೆಗಳ ವಾಣಿಜ್ಯೀಕರಣ ಉತ್ತೇಜಿಸಲು ಕೃಷಿ ನವೋದ್ಯಮ ಯೋಜನೆ ಜಾರಿಗೆ ಅನುಮೋದನೆ. - ಒಂದು ವರ್ಷದ ದಂಡ ವಿನಾಯಿತಿ: ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ಪಾಲಿಸಿ 2022 ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸರ್ಕಾರಿ ಇಲಾಖೆಗಳು, ನಿಗಮಗಳು, ಮಂಡಳಿಗಳಲ್ಲಿರುವ 15 ವರ್ಷ ಪೂರೈಸಿರುವ ವಾಹನಗಳನ್ನು ನಾಶ ಪಡಿಸಲು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ನಾಶ ಪಡಿಸಲು ಉದ್ದೇಶಿಸಿರುವ ವಾಹನಗಳ ಮೇಲೆ ಕೊನೆಯ ಒಂದು ವರ್ಷದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿನ ಬಾಕಿ ದಂಡಗಳ ವಸೂಲಿಯಿಂದ ಒಂದು ವರ್ಷದವರೆಗೆ ಮಾತ್ರ ವಿನಾಯಿತಿ ನೀಡಲು ಅನುಮೋದನೆ.
- ಆಶಾಕಿರಣ ಯೋಜನೆಯಲ್ಲಿ ಕಣ್ಣಿನ ತಪಾಸಣೆ, ಕನ್ನಡಕ ವಿತರಣೆಗೆ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ, ಮಂಡ್ಯ ಜಿಲ್ಲೆಯಲ್ಲಿ ಜಾರಿಗೆ 29.14 ಕೋಟಿ ರೂ. ಯೋಜನೆಗೆ ಸಮ್ಮತಿ.
- ಮಂಗಳೂರು ಮೀನುಗಾರಿಕೆ ಬಂದರಿನ 3ನೇ ಹಂತದ ವಿಸ್ತರಣೆ ಕಾಮಗಾರಿ ಪೂರ್ಣಗೊಳಿಸಲು 49.50 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಅನುಮೋದನೆ.
- ಕೊಡಗರು ಎಂಬುದನ್ನು ಕೊಡವ ಎಂದು ಬದಲಾವಣೆ ಮಾಡಲು ನಿರ್ಣಯ.
- ಕೇಂದ್ರ ಹಿಂದುಳಿದ ವರ್ಗಗಳ (ಒಬಿಸಿ)ಪಟ್ಟಿಗೆ ಕುಂಚಿಟಿಗರ ಸಮುದಾಯ(ವರ್ಗ) ಸೇರ್ಪಡೆಗೆ ಶಿಫಾರಸು.
- ಕೆಪಿಎಸ್ಸಿ ಅಧ್ಯಕ್ಷ ಮತ್ತು ಸದಸ್ಯರಿಗೆ ನಿವೃತ್ತಿ ವೇತನಕ್ಕೆ ಕಾಯ್ದೆ ತಿದ್ದುಪಡಿ.
- ಕೆಪಿಎಸ್ಸಿ ವರದಿ ಮಂಡನೆ.
- ಕಾನೂನು ಮಾಪನ ಇಲಾಖೆಯ ನೇಮಕಾತಿ ನಿಯಮಗಳಿಗೆ ತಿದ್ದುಪಡಿ
- ಬೆಂಗಳೂರಿನ ಬಿಟಿಎಂ ಬಡಾವಣೆಯಲ್ಲಿ 2.17 ಎಕರೆಯಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಿಸಲು 67.62 ಕೋಟಿ ರೂ.ಮಂಜೂರು
- ರಾಷ್ಟ್ರೀಯ ವಿಧಿ ವಿಜ್ಞಾನಗಳ ವಿಶ್ವ ವಿದ್ಯಾಲಯ ಸ್ಥಾಪನೆಗೆ ಧಾರವಾಡದ ಕೃಷಿ ವಿಜ್ಞಾನಗಳ ವಿವಿ ಅಧೀನದಲ್ಲಿರುವ 45.19 ಎಕರೆ ಜಮೀನನ್ನು 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಸಮ್ಮತಿ
- ಲೋಕಾಯುಕ್ತ ಸಂಸ್ಥೆಯಲ್ಲಿ ಅಪರ ನಿಬಂಧಕರು (ವಿಚಾರಣೆಗಳು) ಹುದ್ದೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮೂವರು ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರುಗಳ ಸೇವೆ ಇನ್ನೊಂದು ವರ್ಷದ ಅವಧಿಗೆ ಮುಂದುವರಿಕೆ
- ರಾಯಚೂರು ಬಳಿಯ ಕಲ್ಮಲ ಜಂಕ್ಷನ್ನಿಂದ ಸಿಂಧನೂರು ಬಳಿಯ ಬಳ್ಳಾರಿ ಲಿಂಗಸಗೂರು ರಸ್ತೆ ವೃತ್ತದವವರೆಗೆ (78.45 ಕಿಮೀ) ರಸ್ತೆ ಅಭಿವೃದ್ಧಿಗೆ 1695.85 ಕೋಟಿ ರೂ. ಯೋಜನಾ ವೆಚ್ಚಕ್ಕೆ ಅನುಮತಿ. ಎಚ್ ಎಎಂ ಮಾದರಿಯಲ್ಲಿ ಕೈಗೊಳ್ಳವಲ್ಲಿ ಕೆ ಆರ್ ಡಿಸಿಎಲ್ ಗೆ ಅನುಮತಿ
- ಮೋಟಾರು ವಾಹನ ಕಾಯ್ದೆ 1988ರ ಕಲಂ 136ಎ ಮತ್ತು ಕೇಂದ್ರ ಮೋಟಾರು ವಾಹನ ನಿಯಮಾವಳಿಗಳ ನಿಯಮ 1989ರ ನಿಯಮ 167ಎ ಅಡಿಯಲ್ಲಿ ಎಲೆಕ್ಟ್ರಾನಿಕ್ ಮಾನಿಟರಿಂಗ್ ಮತ್ತು ಎನ್ ಫೋರ್ಸ್ ಮೆಂಟ್ ಆಫ್ ರೋಡ್ ಸೇಫ್ಟಿ ಯೋಜನೆಯನ್ನು 20 ಕೋಟಿ ರೂ.ವೆಚ್ಚದಲ್ಲಿ ಅನುಷ್ಠಾನ ಗೊಳಿಸಲು ಅನುಮೋದನೆ
ದೇಶ
‘ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ’! ಡ್ಯಾನಿಶ್ ಅಲಿಯನ್ನು ಭೇಟಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
Parliament Special Session: ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ಅವರಿಗೆ ಬಿಜೆಪಿಯ ಸಂಸದ ರಮೇಶ್ ಬಿಧುರಿ ಅವರು ಭಯೋತ್ಪಾದಕ ಎಂದು ಕರೆದಿದ್ದಾರೆ.
ನವದೆಹಲಿ: ಲೋಕಸಭೆಯಲ್ಲಿ (Lok Sabha) ಬಿಜೆಪಿ ಸಂಸದ ರಮೇಶ್ ಬಿಧುರಿ (BJP MP Ramesh Bidhuri) ಅವರಿಂದ ‘ಉಗ್ರ’ (Terrorist) ಎಂದು ಕರೆಯಿಸಿಕೊಂಡಿದ್ದ ಬಿಎಸ್ಪಿ ಸಂಸದ ಕುನ್ವರ್ ಡ್ಯಾನಿಶ್ ಅಲಿ(BSP MP Danish Ali) ಅವರನ್ನು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ (Congress Leader Rahul Gandhi) ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು. ಲೋಕಸಭೆಯಲ್ಲಿ ಚಂದ್ರಯಾನ-3 (Chandrayaan 3) ಯಶಸ್ಸಿನ ಕುರಿತಾದ ಚರ್ಚೆ ನಡೆಯುತ್ತಿತ್ತು. ಈ ವೇಳೆ, ಭಾರತೀಯ ಜನತಾ ಪಾರ್ಟಿಯ ಸಂಸದ ರಮೇಶ್ ಬಿಧುರಿ ಅವರು, ಡ್ಯಾನಿಶ್ ಅಲಿ ಅವರನ್ನು ಇಸ್ಲಾಮೋಫೋಬಿಕ್ ಆಗಿ ನಿಂದಿಸುತ್ತಿದ್ದರು. ಒಂದು ಹಂತದಲ್ಲಿ ಅವರನ್ನು ಭಯೋತ್ಪಾದಕ ಎಂದು ಕೂಡ ಕರೆದರು. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ಸಂಜೆ, ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು, ಬಿಜೆಪಿ ಸಂಸದರಿಂದ ನಿಂದನೆಗೊಳಗಾದ ಡ್ಯಾನಿಶ್ ಅಲಿಯನ್ನು ಭೇಟಿ ಮಾಡಿ, ಸಮಾಧಾನಪಡಿಸಿದರು. ಈ ಕುರಿತಾದ ಫೋಟೋಗಳನ್ನು ಎಕ್ಸ್ ವೇದಿಕೆಯಲ್ಲಿ ಹಂಚಿಕೊಂಡಿದ್ದು, ನಫ್ರತ್ ಕೆ ಬಜಾರ್ ಮೇ, ಮೊಹಬ್ಬತ್ ಕಿ ದುಕಾನ್(ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ) ಎಂದು ಬರೆಯಲಾಗಿದೆ(Parliament Special Session).
नफ़रत के बाज़ार में मोहब्बत की दुकान pic.twitter.com/3IqLMFU0dx
— Rahul Gandhi (@RahulGandhi) September 22, 2023
ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರು, ಭಾರತೀಯ ಜನತಾ ಪಾರ್ಟಿ ಹುಟ್ಟು ಹಾಕಿರುವ ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿಯನ್ನು ತೆರೆಯಲಿದ್ದೇನೆ ಎಂದು ಹೇಳಿದ್ದರು. ಬಳಿಕ ಭಾರತ್ ಜೋಡೋ ಯಾತ್ರೆಯ ವೇಳೆ, ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ ಘೋಷಣೆಯಾಗಿ ಹೊರ ಹೊಮ್ಮಿತು. ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ವೇಳೆ ಈ ಘೋಷವಾಕ್ಯವನ್ನು ಬಳಸುತ್ತಾರೆ.
Shri Rahul Gandhi reached to meet MP Danish Ali at his residence.
— Gautam Nautiyal (@Gnukpcc) September 22, 2023
Where BJP spreads hatred,
we will spread love there. 👍#ArrestRameshBidhuri | "दानिश अली" | #DanishAli | #RameshBidhuri | pic.twitter.com/K7qPQG7c6r
ರಾಹುಲ್ ಗಾಂಧಿ ಅವರು ಭೇಟಿಯಾಗುವ ಮುಂಚೆ ಡ್ಯಾನಿಶ್ ಅಲಿ ಅವರು, ಬಿಜೆಪಿ ಸಂಸದರಿಂದ ನಿಂದನೆಗೊಳಗಾದ ಬಳಿಕ ರಾತ್ರಿ ನಿದ್ದೆ ಮಾಡಲಾಗುತ್ತಿಲ್ಲ ಎಂದು ಎನ್ಡಿ ಟಿವಿ ಮುಂದೆ ಕಣ್ಣೀರಿಟ್ಟಿದ್ದರು.
ಈ ಸುದ್ದಿಯನ್ನೂ ಓದಿ: Parliament Special Session: ಬಿಎಸ್ಪಿ ಸಂಸದ ಡ್ಯಾನಿಶ್ ಅಲಿಗೆ ‘ಉಗ್ರ’ ಎಂದು ಜರಿದ ಬಿಜೆಪಿ ಎಂಪಿ ಬಿಧುರಿ! ಕ್ರಮಕ್ಕೆ ಪ್ರತಿಪಕ್ಷಗಳ ಆಗ್ರಹ
ಚುನಾಯಿತ ಸಂಸದರನ್ನು ಅವರ ಸಮುದಾಯಕ್ಕೆ ಸೇರಿಸುವ ಮೂಲಕ ಅವರ ಮೇಲೆ ದಾಳಿ ಮಾಡಲು ಈ ವಿಶೇಷ ಅಧಿವೇಶನವನ್ನು ಕರೆಯಲಾಗಿದೆಯೇ? ಇದರಿಂದ ಇಡೀ ದೇಶವೇ ತಲೆತಗ್ಗಿಸಿದೆ. ಆ ಸಂಸದ ವಿರುದ್ಧ ಬಿಜೆಪಿ ಕ್ರಮ ಕೈಗೊಳ್ಳುತ್ತದೆಯೇ ಅಥವಾ ಉತ್ತೇಜನ ನೀಡುತ್ತದೆಯೋ ಕಾದು ನೋಡಬೇಕು. ಬಿಧುರಿಯದ್ದು ಸಂಪೂರ್ಣವಾಗಿ ದ್ವೇಷ ಭಾಷಣವಾಗಿದೆ ಎಂದು ಡ್ಯಾನಿಶ್ ಅಲಿ ಹೇಳಿದ್ದಾರೆ. ಈ ಮಧ್ಯೆ, ನಿಂದನೆಯ ಮಾತುಗಳನ್ನಾಡಿರುವ ಬಿಜೆಪಿ ಸಂಸದ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಾರ್ಟಿಯು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದೆ. ಹಾಗೆಯೇ, ಕಲಾಪದ ಕಡಿತದಿಂದ ಉಗ್ರ ಪದವನ್ನು ತೆಗೆದ ಹಾಕಲಾಗಿದೆ. ಪ್ರತಿಪಕ್ಷಗಳ ತೀವ್ರ ಒತ್ತಡಕ್ಕೆ ಒಳಗಾಗಿರುವ ಬಿಜೆಪಿಯು, ಸಂಸದ ರಮೇಶ್ ಬಿಧುರಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ತಮ್ಮ ಈ ನಡವಳಿಕೆ ಕುರಿತು ವಿವರಣೆ ನೀಡುವಂತೆ ಕೋರಿದೆ.
I ask my friends particularly from the BJP & my friends in media – how is this language by BJP MP #RameshBidhuri calling a fellow Member of Parliament Danish Ali a “Bharwa”, “Mull@h At@nkw@d¡” ,“Mull@h Ugr@wad¡” & “K@tw@” acceptable? This was
— Tehseen Poonawalla Official 🇮🇳 (@tehseenp) September 22, 2023
ON RECORD in the Lok Sabha ! Just… pic.twitter.com/ewVy0WCqqU
ಕರ್ನಾಟಕ
VISTARA TOP 10 NEWS: ಬಿಜೆಪಿ-ಜೆಡಿಎಸ್ ಮೈತ್ರಿ ಸೆಟ್ಟಾಯ್ತು, ಸೆ. 26ರವರೆಗೆ ನೀರು ಬಿಡೋದೂ ಫಿಕ್ಸಾಯ್ತು!
VISTARA TOP 10 NEWS: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಹೊಸ ರಾಜಕೀಯ ಶಕೆ ಆರಂಭವಾಗಿದೆ. ಕಾವೇರಿ ನೀರು ಬಿಡುಗಡೆ ಮುಂದುವರಿಸಲು ತೀರ್ಮಾನವಾಗಿದೆ. ಹೀಗೆ ದಿನದ ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್ 10 ನ್ಯೂಸ್
1.ಬಿಜೆಪಿ-ಜೆಡಿಎಸ್ ಮೈತ್ರಿ ಘೋಷಣೆ; ಕಾಂಗ್ರೆಸ್ ಮಣಿಸಲು ಅಮಿತ್ ಶಾ-ಕುಮಾರಸ್ವಾಮಿ ಪಣ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ದೃಷ್ಟಿಯಿಂದ ಕೊನೆಗೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ (BJP-JDS Alliance) ಅಧಿಕೃತ ಮುದ್ರೆ ಬಿದ್ದಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎರಡೂ ಪಕ್ಷಗಳ ಮೈತ್ರಿಗೆ ಅಧಿಕೃತ ಮುದ್ರೆ ಒತ್ತಿದರು. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ ಶಕೆ ಆರಂಭ!
2. ಸೆ.26ರವರೆಗೆ ಕಾವೇರಿ ನೀರು ಬಿಡುಗಡೆ ಫಿಕ್ಸ್; ಬಳಿಕ ಬಿಡುವುದಿಲ್ಲ ಎಂದು ಅಧಿವೇಶನ ಕರೆದು ನಿರ್ಣಯ?
ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಕಾವೇರಿ ಬಿಕ್ಕಟ್ಟು ಚರ್ಚೆಯಾಗಿದೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಸೆ. 26ರವರೆಗೆ ನೀರು ಬಿಡುಗಡೆ ಮಾಡುವುದು, ಮುಂದೆ ಮತ್ತೊಮ್ಮೆ ಆದೇಶ ನೀಡದಂತೆ ಅಧಿವೇಶನ ಕರೆದು ನೀರು ಬಿಡುವುದಿಲ್ಲ ಎಂಬ ನಿರ್ಣಯ ತೆಗೆದುಕೊಳ್ಳುವುದೆಂದು ಚರ್ಚೆ ನಡೆದಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ಕಾವೇರಿ ಹೋರಾಟಕ್ಕೆ ಧುಮುಕಿದ ಚುಂಚಶ್ರೀ, ರೈತ ಪರ ನಿರ್ಧಾರ ತೆಗೆದುಕೊಳ್ಳಲು ಹಕ್ಕೊತ್ತಾಯ
3. ಏಷ್ಯನ್ ಗೇಮ್ಸ್ಗೆ ಅರುಣಾಚಲದ ಅಥ್ಲಿಟ್ಗೆ ಚೀನಾ ಪ್ರವೇಶ ನಿರಾಕರಣೆ: ಏನಿದು ಹೊಸ ವಿವಾದ?
ಚೀನಾದ ಆತಿಥ್ಯದಲ್ಲಿ ನಡೆಯುವ ಏಷ್ಯನ್ ಗೇಮ್ಸ್ನಲ್ಲಿ (Asian Games 2023) ಗಡಿ ರಾಜಕೀಯ ಮುನ್ನೆಲೆಗೆ ಬಂದಿದೆ. ಅರುಣಾಚಲ ಪ್ರದೇಶದ ಮೂವರು ವುಶ್ ಸ್ಪರ್ಧಿಗಳಿಗೆ ಚೀನಾದ ಅಧಿಕಾರಿಗಳು ಪ್ರವೇಶ ನಿರಾಕರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಏನಿದು ವಿವಾದ? ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
4. ಸ್ತ್ರೀ ಸಬಲೀಕರಣಕ್ಕೆ ಮಹಿಳಾ ಮೀಸಲಾತಿ ಶಕ್ತಿ, ಇದು ಐತಿಹಾಸಿಕ; ಮೋದಿ ಸಂತಸ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲು ಕಲ್ಪಿಸುವ ವಿಧೇಯಕಕ್ಕೆ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ. ಆಗ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಸಂತಸ ಹಂಚಿಕೊಂಡರು. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. ಸನಾತನ ಧರ್ಮ; ಉದಯನಿಧಿ ಸ್ಟಾಲಿನ್ಗೆ ಸುಪ್ರೀಂ ನೋಟಿಸ್, ಎದುರಾಯ್ತು ಸಂಕಷ್ಟ
“ಸನಾತನ ಧರ್ಮವು ಕೊರೊನಾ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ತಮಿಳುನಾಡು ಸರ್ಕಾರ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ಬಿಎಸ್ಪಿ ಸಂಸದ ಡ್ಯಾನಿಷ್ ಅಲಿ ಉಗ್ರ ಎಂದು ಜರಿದ ಬಿಜೆಪಿ ಎಂಪಿ, ಕ್ರಮಕ್ಕೆ ಪ್ರತಿಪಕ್ಷಗಳ ಆಗ್ರಹ
ಬಿಎಸ್ಪಿಯ ಸಂಸದ ಡ್ಯಾನಿಶ್ ಅಲಿ (BSP MP Danish Ali) ಅವರಿಗೆ ಭಾರತೀಯ ಜನತಾ ಪಾರ್ಟಿಯ ಸಂಸದ ರಮೇಶ್ ಬಿಧುರಿ (BJP MP Ramesh Bidhuri) ಅವರು ಸಂಸತ್ತಿನಲ್ಲಿ ‘ಉಗ್ರ’ (Terrorist) ಎಂದು ಕರೆದಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
7. ಮೊದಲ ಏಕದಿನ ಶುಭಾರಂಭ: ಆಸ್ಟ್ರೇಲಿಯಾಕ್ಕೆ ಸೋಲುಣಿಸಿ ನಂ. 1 ಪಟ್ಟಕ್ಕೇರಿದ ಭಾರತ
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳ ಸುಲಭ ಗೆಲುವು ಸಾಧಿಸಿದೆ. ಬೌಲಿಂಗ್ನಲ್ಲಿ ಮೊಹಮ್ಮದ್ ಶಮಿ, ಬ್ಯಾಟಿಂಗ್ನಲ್ಲಿ ಶುಭಮನ್ ಗಿಲ್, ಕೆ.ಎಲ್ ರಾಹುಲ್, ಋತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್ ಸಖತ್ತಾಗಿ ಮಿಂಚಿದರು. ಈ ಗೆಲುವಿನಿಂದ ಭಾರತ ಏಕದಿನ ಕ್ರಿಕೆಟ್ನಲ್ಲೂ ನಂಬರ್ ಒನ್ ಸ್ಥಾನಕ್ಕೆ ಬಂತು. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ: ಏಕದಿನ ವಿಶ್ವಕಪ್ ಬಹುಮಾನ ಎಷ್ಟು ಗೊತ್ತೆ? ಇಲ್ಲಿದೆ ಎಲ್ಲ ವಿವರ
8 ಯೋಗಿ ರಾಜ್ಯದಲ್ಲಿ ಎನ್ಕೌಂಟರ್ಗೆ ಮತ್ತೊಬ್ಬ ಪಾತಕಿ ಬಲಿ, ದುಷ್ಕರ್ಮಿಗಳಿಗೆ ನಡುಕ
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ (Yogi Adityanath) ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕ್ರಿಮಿನಲ್ಗಳ ಎನ್ಕೌಂಟರ್ ಜಾಸ್ತಿಯಾಗಿವೆ. ಇದೀಗ ಮಹಿಳಾ ಪೊಲೀಸ್ ಪೇದೆಯೊಬ್ಬರ ಹತ್ಯೆಯ ಪ್ರಮುಖ ಆರೋಪಿಯಾದ ಅನೀಶ್ ಖಾನ್ ಎಂಬುವನನ್ನು ಎನ್ಕೌಂಟರ್ ಮಾಡಲಾಗಿದೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
9. ಮುಂದಿನ ಆಸ್ಕರ್ ರೇಸ್ನಲ್ಲಿ ಯಾವೆಲ್ಲ ಚಿತ್ರಗಳು ಇರಲಿವೆ?
2024ರ ಆಸ್ಕರ್ (Oscars 2024) ರೇಸ್ನಲ್ಲಿ ಯಾವೆಲ್ಲ ಭಾರತೀಯ ಸಿನಿಮಾಗಳು ಬರಬಹುದು ಎಂಬ ಚರ್ಚೆ ಶುರುವಾಗಿವೆ. ʻರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ (Rocky Aur Rani Kii Prem Kahaani), ʻಜ್ವಿಗಾಟೊʼ (Zwigato), ʻದಿ ಕೇರಳ ಸ್ಟೋರಿʼ ಹೆಸರು ಜೋರಾಗಿ ಕೇಳಿಬರುತ್ತಿದೆ ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳ ಪರಾರಿ, ಕತ್ತೆ ಕಾಯುತ್ತಿದ್ದ ಪೊಲೀಸರು!
ಉತ್ತರ ಪ್ರದೇಶದಲ್ಲಿ ಮೂವರು ಆರೋಪಿಗಳು ಪೊಲೀಸ್ ವ್ಯಾನ್ನಿಂದ ತಪ್ಪಿಸಿಕೊಂಡು ಓಡಿಹೋದ ವಿಡಿಯೊ ಈಗ ಭಾರಿ ವೈರಲ್ ಆಗಿದೆ. ಹಾಗೆಯೇ, ಉತ್ತರ ಪ್ರದೇಶ ಪೊಲೀಸರ ಕಾರ್ಯವೈಖರಿ ಕುರಿತು ಜನರಿಂದ ಅಸಮಾಧಾನ ವ್ಯಕ್ತವಾಗಿದೆ. ಅವರೇನು ಕತ್ತೆ ಕಾಯ್ತಿದ್ರಾ ಎಂದು ಜನ ಕೇಳ್ತಿದಾರೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿ
Happiest Employees: ಅಮೆರಿಕದ ಹ್ಯಾಪಿಯೆಸ್ಟ್ ಕಂಪನಿಗಳ ಟಾಪ್ 20 ಪಟ್ಟಿಯಲ್ಲಿ ಭಾರತದ 3 ಕಂಪನಿ!
Happiest Employees: ಇನ್ಡೀಡ್ ಜಾಬ್ ಸೈಟ್ ನಡೆಸಿದ ಸಮೀಕ್ಷೆಯಲ್ಲಿ ಅಮೆರಿಕ ಟಾಪ್ 20 ಸಂತೋಷದಾಯಕ ಕಂಪನಿಗಳ ಪಟ್ಟಿಯಲ್ಲಿ ಟಿಸಿಎಸ್, ವಿಪ್ರೋ ಮತ್ತು ಇನ್ಫೋಸಿಸ್ ಸ್ಥಾನಪಡೆದುಕೊಂಡಿವೆ.
ನವದೆಹಲಿ: ಉದ್ಯೋಗ ಹುಡುಕಲು ನೆರವು ನೀಡುವ ಜಾಲತಾಣ ಇನ್ಡೀಡ್ (Indeed Survey) ನಡೆಸಿದ ಉದ್ಯೋಗಿಗಳು ಯೋಗಕ್ಷೇಮ ಸಮೀಕ್ಷೆಯಲ್ಲಿ ಭಾರತೀಯ ಮೂಲದ ಮೂರು ಕಂಪನಿಗಳು ಸ್ಥಾನ ಪಡೆದುಕೊಂಡಿವೆ(Indian Company). ಅಮೆರಿಕದ ಉದ್ಯೋಗಿಗಳ ಯೋಗಕ್ಷೇಮ ಕೈಗೊಳ್ಳುವ ಕಂಪನಿಗಳ ಪಟ್ಟಿಯಲ್ಲಿ ಲವ್ಸ್ ಟ್ರಾವೆಲ್ ಸ್ಟಾಪ್ಸ್ ಆ್ಯಂಡ್ ಸ್ಟೋರ್ಸ್(Love’s Travel Stops & County Stores) ಮೊದಲ ಸ್ಥಾನದಲ್ಲಿದೆ. ಅತ್ಯಂತ ಸಂತೋಷದಾಯಕ ಉದ್ಯೋಗಿಗಳನ್ನು ಹೊಂದಿರುವ ಈ ಪಟ್ಟಿಯಲ್ಲಿ ಟೆಕ್ ದೈತ್ಯ ಕಂಪನಿಗಳಾದ ಟಿಸಿಎಸ್(TCS), ಇನ್ಫೋಸಿಸ್ (Infosys) ಮತ್ತು ವಿಪ್ರೋ (Wipro) ಕ್ರಮವಾಗಿ, 4, 8 ಮತ್ತು 9 ಸ್ಥಾನವನ್ನು ಪಡೆದುಕೊಂಡಿವೆ.
ಪ್ರಥಮ ಸ್ಥಾನದಲ್ಲಿರುವ ಲವ್ಸ್ ಟ್ರಾವೆಲ್ ಸ್ಟಾಪ್ಸ್ ಆ್ಯಂಡ್ ಕಂಟ್ರಿ ಸ್ಟೋರ್, 100 ಅಂಕಗಳ ಪೈಕಿ 83 ಅಂಕವನ್ನು ಸಂಪಾದಿಸಿದೆ. ಸಾವಿರಾರು ಅನಾಮಧೇಯ ಉದ್ಯೋಗಿಗಳ ವಿಮರ್ಶೆ, ಸಂತೋಷ, ಒತ್ತಡದ ಹಂತಗಳು, ಉದ್ಯೋಗ ಸಂತೃಪ್ತಿ ಮತ್ತು ಉದ್ದೇಶ ಸೇರಿ ಅನೇಕ ಸಂಗತಿಗಳ ಆಧಾರದ ಮೇಲೆ ಜಪಾನ್ ಮೂಲದ ಇನ್ಡೀಡ್ ಜಾಬ್ ಸೈಟ್ ಸಮೀಕ್ಷೆಯನ್ನು ಪೂರ್ತಿಗೊಳಿಸಿದೆ.
ಸಾವಿರಕ್ಕಿಂತಲೂ ಹೆಚ್ಚು ಉದ್ಯೋಗಿಗಳು ಇರುವ ಕಂಪನಿಗಳನ್ನು ಸಮೀಕ್ಷೆಗೆ ಪರಿಗಣಿಸಲಾಗಿದೆ. ಏರ್ಲೈನ್ಸ್ನಿಂದ ಕನ್ಸಲ್ಟನ್ಸೀಸ್, ಫಾಸ್ಟ್ ಫುಡ್ ಚೈನ್ ಕಂಪನಿಗಳವರೆಗೆ ಹಲವು ವಿಧದ ಕಂಪನಿಗಳನ್ನು ಸಮೀಕ್ಷೆಗೆ ಪರಿಗಣಿಸಲಾಗಿದೆ.
ಈ ಸುದ್ದಿಯನ್ನೂ ಓದಿ: Best Company of 2023: ‘ಟೈಮ್’ 100 ಬೆಸ್ಟ್ ಕಂಪನಿಗಳ ಲಿಸ್ಟ್ನಲ್ಲಿ ಭಾರತದ ಏಕೈಕ ಬೆಂಗಳೂರಿನ ಕಂಪನಿ!
ಆ 20 ಕಂಪನಿಗಳು ಯಾವವು?
ಲವ್ಸ್ ಟ್ರಾವೆಲ್ ಸ್ಟಾಪ್ಸ್ ಆ್ಯಂಡ್ ಕಂಟ್ರಿ ಸ್ಟೋರ್ಸ್, ಎಚ್ ಆ್ಯಂಡ್ ಆರ್ ಬ್ಲಾಕ್, ಡೆಲ್ಟಾ ಏರ್ ಲೈನ್ಸ್, ಟಾಟಾ ಕನ್ಸಲ್ಟನ್ಸಿ ಸರ್ವೀಸಸ್, ಅಕ್ಸೆಂಚರ್, ಐಬಿಎಂ, ಎಲ್3ಹ್ಯಾರಿಸ್, ವಿಪ್ರೋ, ಇನ್ಫೋಸಿಸ್, ನೈಕ್, ವ್ಯಾನ್ಸ್, ಇನ್-ಎನ್-ಔಟ್ ಬರ್ಗರ್, ಕಾಗ್ನಿಜಂಟ್ ಟೆಕ್ನಾಲಜಿ ಸಲೂಷನ್ಸ್, ಹಾಲ್ಮಾರ್ಕ್, ಮೈಕ್ರೋಸಾಫ್ಟ್, ನಾರ್ತ್ರಾಪ್ ಗ್ರುಮ್ಮನ್, ಫೆಡ್ಎಕ್ಸ್ ಫ್ರೈಟ್, ಡಚ್ ಬ್ರದರ್ಸ್ ಕಾಫಿ, ಆ್ಯಪಲ್.
-
ಪ್ರಮುಖ ಸುದ್ದಿ14 hours ago
Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ!
-
ಪ್ರಮುಖ ಸುದ್ದಿ5 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ11 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಕರ್ನಾಟಕ24 hours ago
Honey Bee Attack: ಶವ ಸಂಸ್ಕಾರಕ್ಕೆಂದು ಹೋದವರ ಮೇಲೆ ಹೆಜ್ಜೇನು ದಾಳಿ; 10 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
-
ಗ್ಯಾಜೆಟ್ಸ್8 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ಆರೋಗ್ಯ17 hours ago
Health Tips: ಎಳನೀರು ಒಳ್ಳೆಯದೆಂದು ಕುಡಿಯುವ ಮೊದಲು ಅದರ ಅವಗುಣಗಳೂ ಗೊತ್ತಿರಲಿ!
-
Live News10 hours ago
ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ
-
ದೇಶ11 hours ago
Udhayanidhi Stalin: ಸನಾತನ ಧರ್ಮ; ಉದಯನಿಧಿ ಸ್ಟಾಲಿನ್ಗೆ ಸುಪ್ರೀಂ ನೋಟಿಸ್, ಎದುರಾಯ್ತು ಸಂಕಷ್ಟ