GST rate| ಲಕ್ಸುರಿ ಉತ್ಪನ್ನಗಳಿಗೆ 28% ಅಬಾಧಿತ, 5,12,18%ರ ಶ್ರೇಣಿ ಇಳಿಕೆ ನಿರೀಕ್ಷೆ - Vistara News

ಪ್ರಮುಖ ಸುದ್ದಿ

GST rate| ಲಕ್ಸುರಿ ಉತ್ಪನ್ನಗಳಿಗೆ 28% ಅಬಾಧಿತ, 5,12,18%ರ ಶ್ರೇಣಿ ಇಳಿಕೆ ನಿರೀಕ್ಷೆ

ಲಕ್ಸುರಿ ಉತ್ಪನ್ನಗಳ ಮೇಲೆ ಶೇ.28ರ ಜಿಎಸ್‌ಟಿ ಮುಂದುವರಿಯಲಿದೆ. ಆದರೆ ಇತರ ಶ್ರೇಣಿಗಳನ್ನು ಮೂರರಿಂದ ಎರಡಕ್ಕೆ ಇಳಿಸುವ ಸಾಧ್ಯತೆ ಇದೆ ಎಂದು ಕಂದಾಯ ಕಾರ್ಯದರ್ಶಿ ತರುಣ್‌ ಬಜಾಜ್ ತಿಳಿಸಿದ್ದಾರೆ.

VISTARANEWS.COM


on

GST Fraud
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಸರ್ಕಾರ ಲಕ್ಸುರಿ ಮತ್ತು ಹಾನಿಕಾರಕ ಉತ್ಪನ್ನಗಳ ಮೇಲೆ ೨೮% ಜಿಎಸ್‌ಟಿ ದರವನ್ನು ಮುಂದುವರಿಸುವ ಉದ್ದೇಶವನ್ನು ಹೊಂದಿದೆ. ಆದರೆ ೫,೧೨ ಮತ್ತು ೧೮%ರ ಶ್ರೇಣಿಗಳನ್ನು ಎರಡಕ್ಕೆ ಇಳಿಸುವ ಸಾಧ್ಯತೆ ಇದೆ ಎಂದು ಕಂದಾಯ ಕಾರ್ಯದರ್ಶಿ ತರುಣ್‌ ಬಜಾಜ್‌ ಸೋಮವಾರ ತಿಳಿಸಿದ್ದಾರೆ.

ಉದ್ದಿಮೆ ವಲಯದ ಮಂಡಳಿ ಅಸೊಚೆಮ್‌ನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಕಂದಾಯ ನಷ್ಟದ ಭೀತಿ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಕ್ಕಿದೆ. ಹೀಗಾಗಿ ಇದಕ್ಕಾಗಿ ನಾವು ಕೆಲ ಕಾಲ ಕಾಯಬೇಕಾಗಿದೆ ಎಂದರು. ಜಿಎಸ್‌ಟಿ ಅಡಿಯಲ್ಲಿ ತೆರಿಗೆ ದರದ ರೆವೆನ್ಯೂ ನ್ಯೂಟ್ರಲ್‌ ಮಟ್ಟವನ್ನು ೧೫.೫%ಕ್ಕಿಂತ ಮೇಲಕ್ಕೆ ಏರಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ತಿಳಿಸಿದರು.

ಭಾರತದಂಥ ಅಭಿವೃದ್ಧಿ ಹೊಂದುತ್ತಿರುವ ಹಾಗೂ ಆರ್ಥಿಕ ಅಸಮಾನತೆ ಇರುವ ಎಕಾನಮಿಯಲ್ಲಿ ಲಕ್ಸುರಿ ಮತ್ತು ಹಾನಿಕಾರಕ ಉತ್ಪನ್ನಗಳ ಮೇಲೆ ೨೮% ಜಿಎಸ್‌ಟಿ ದರ ವಿಧಿಸಬೇಕಾದ ಅನಿವಾರ್ಯತೆ ಇದೆ. ಆದರೆ ೫,೧೨ ಮತ್ತು ೧೮% ಎಂಬ ಮೂರು ತೆರಿಗೆಯ ಶ್ರೇಣಿಯನ್ನು ಎರಡಕ್ಕೆ ಇಳಿಸಲು ಸಾಧ್ಯವಿದೆ ಎಂದು ವಿವರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

Surrogacy Leaves: ಬಾಡಿಗೆ ತಾಯ್ತನದ ನಿಯಮಗಳಿಗೆ ಕೇಂದ್ರ ಸರ್ಕಾರವು ಮಹತ್ವದ ತಿದ್ದುಪಡಿ ಮಾಡಿದೆ. ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯುವ ಮಹಿಳೆ, ಆಕೆಯ ಪತಿ ಹಾಗೂ ಬಾಡಿಗೆ ತಾಯಿಯಾದವರು ಕೇಂದ್ರ ಸರ್ಕಾರಿ ನೌಕರರಾಗಿದ್ದರೆ, ಅವರು ರಜೆ ಪಡೆಯಬಹುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯುವವರು ಹಾಗೂ ಬಾಡಿಗೆ ತಾಯಿಯು 6 ತಿಂಗಳು ರಜೆ ಪಡೆಯಬಹುದಾಗಿದೆ.

VISTARANEWS.COM


on

Surrogacy Leaves
Koo

ನವದೆಹಲಿ: ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯುವವರು, ಬಾಡಿಗೆ ತಾಯಿಯಾಗುವವರಿಗೆ ಅನುಕೂಲವಾಗುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಮಹತ್ವದ ತಿದ್ದುಪಡಿ ಮಾಡಿದೆ. ಕೇಂದ್ರ ಸರ್ಕಾರವು (Central Government) ಕೇಂದ್ರೀಯ ನಾಗರಿಕ ಸೇವೆಗಳ (ರಜೆ) ನಿಯಮಗಳಿಗೆ (1972) ತಿದ್ದುಪಡಿ (Central Civil Services (Leave) Rules) ತಂದಿದ್ದು, ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದ ಮಹಿಳೆ, ಬಾಡಿಗೆ ತಾಯಿಯಾದವರು ಕೇಂದ್ರ ಸರ್ಕಾರಿ ನೌಕರರಾಗಿದ್ದರೆ, ಅವರಿಗೆ 180 ದಿನ ಅಂದರೆ, 6 ತಿಂಗಳು ರಜೆ (Surrogacy Leaves) ಪಡೆಯುವ ಅವಕಾಶವನ್ನು ನೀಡಿದೆ.

ಬಾಡಿಗೆ ತಾಯ್ತನದ ರಜೆ ಕುರಿತು ತಿದ್ದುಪಡಿ ತಂದಿರುವ ಬಗ್ಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಜೂನ್‌ 18ರಂದು ಅಧಿಸೂಚನೆ ಹೊರಡಿಸಿದೆ. ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯುವ ಮಹಿಳೆಯು ಕೇಂದ್ರ ಸರ್ಕಾರಿ ನೌಕರರಾಗಿದ್ದರೆ, ಅವರಿಗೆ ಇನ್ನು ಮುಂದೆ 6 ತಿಂಗಳು ಹೆರಿಗೆ ರಜೆ ಸಿಗಲಿದೆ. ಇನ್ನು, ಬಾಡಿಗೆ ತಾಯಿಯಾಗುವವರು ಕೇಂದ್ರ ಸರ್ಕಾರಿ ನೌಕರರಾಗಿದ್ದು, ಇಬ್ಬರು ಅಥವಾ ಒಂದೇ ಮಗು ಇದ್ದರೆ, ಅವರು ಕೂಡ 6 ತಿಂಗಳು ರಜೆ ಪಡೆಯಲಿದ್ದಾರೆ. ಅಷ್ಟೇ ಅಲ್ಲ, ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯುವ ವ್ಯಕ್ತಿಯು ಮಗು ಜನಿಸಿದ 6 ತಿಂಗಳೊಳಗೆ 15 ದಿನ ಪಿತೃತ್ವ ರಜೆ ಪಡೆಯಬಹುದಾಗಿದೆ.

ಬಾಡಿಗೆ ತಾಯ್ತನ ಎಂದರೇನು?

ಮಕ್ಕಳಾಗದ ದಂಪತಿ, ಪುರುಷ ಅಥವಾ ಮಹಿಳೆಗಾಗಿ ಇನ್ನೊಬ್ಬ ಮಹಿಳೆಯು ಗರ್ಭ ಧರಿಸಿ, ಮಕ್ಕಳಾಗದವರಿಗೆ ಮಗುವನ್ನು ಹೆತ್ತುಕೊಡುವ ಪ್ರಕ್ರಿಯೆಯನ್ನೇ ಬಾಡಿಗೆ ತಾಯ್ತನ ಎಂದು ಕರೆಯುತ್ತಾರೆ. ನಾನಾ ಕಾರಣಗಳಿಂದ ಮಕ್ಕಳಾಗದವರು ಮಗುವನ್ನು ಹೊಂದುವ ಆಸೆಯನ್ನು ಬಾಡಿಗೆ ತಾಯ್ತನದ ಮೂಲಕ ಈಡೇರಿಸಿಕೊಳ್ಳುತ್ತಾರೆ. ಬಾಡಿಗೆ ತಾಯಿಯ ಅಂಡಾಣು, ಮಗುವನ್ನು ಪಡೆಯಲು ಬಯಸಿದ ವ್ಯಕ್ತಿ ಅಥವಾ ವೀರ್ಯ ದಾನಿಯಿಂದ ಪಡೆದ ವೀರ್ಯವನ್ನು ಬಳಸಿ ಮಗುವನ್ನು ಪಡೆಯುತ್ತಾರೆ. ಅಲ್ಲದೆ, ಮಗುವನ್ನು ಬಯಸಿದ ತಂದೆ ಹಾಗೂ ತಾಯಿಯ ವೀರ್ಯಾಣು-ಅಂಡಾಣುವನ್ನು ಬಳಸಿ, ಬೇರೊಬ್ಬ ಮಹಿಳೆಯ ಗರ್ಭದಲ್ಲಿ ಭ್ರೂಣವನ್ನು ಬೆಳೆಸುವ ಪದ್ಧತಿಯೂ ಇದೆ. ಬಾಡಿಗೆ ತಾಯಿಯಾಗುವವರು ಹಣ ಸೇರಿ ಯಾವುದೇ ರೀತಿಯ ಲಾಭಕ್ಕಾಗಿ ಬೇರೆಯವರಿಗೆ ಮಗು ಹೆತ್ತು ಕೊಡಬಾರದು ಎಂಬ ನಿಯಮ ಇದೆ.

ದೇಶದಲ್ಲಿ ಬಾಡಿಗೆ ತಾಯ್ತನವನ್ನು 2002ರಲ್ಲಿ ಕಾನೂನುಬದ್ಧ ಎಂಬುದಾಗಿ ಘೋಷಿಸಲಾಗಿದೆ. ಆದರೆ, 2022ರಲ್ಲಿ ಬಾಡಿಗೆ ತಾಯ್ತನ (ನಿಯಂತ್ರಣ) ನಿಯಮಗಳನ್ನು ಜಾರಿಗೆ ತರುವವರೆಗೂ ಬಾಡಿಗೆ ತಾಯ್ತನಕ್ಕೆ ನಿಯಂತ್ರಣ ಎಂಬುದು ಇರಲಿಲ್ಲ. ಅಷ್ಟೇ ಅಲ್ಲ, 2024ರ ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರವು ನಿಯಮಗಳಿಗೆ ತಿದ್ದುಪಡಿ ಮಾಡಿದೆ. ವೈದ್ಯಕೀಯ ಕಾರಣಗಳಿಗಾಗಿ ದಾನಿಯ ವೀರ್ಯಾಣುವನ್ನು ಬಳಸಬಹುದು ಎಂಬ ನಿಯಮವನ್ನು ಸರ್ಕಾರ ಜಾರಿಗೆ ತಂದಿದೆ.

ಇದನ್ನೂ ಓದಿ: Surrogacy : 57-46 ವರ್ಷದ ದಂಪತಿ ಬಾಡಿಗೆ ತಾಯಿ ಮೂಲಕ ಮಗು ಪಡೆಯಲು 3 ಷರತ್ತು

Continue Reading

ಕ್ರೀಡೆ

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

T20 World Cup: ಮೊದಲು ಬ್ಯಾಟ್ ಮಾಡಿದ ಯುಎಸ್​ಎ ಬಳಗ 18.5 ಓವರ್​ಗಳಲ್ಲಿ 115 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಇನ್ನೂ 64 ಎಸೆತಗಳು ಬಾಕಿ ಇರುವಂತೆಯೇ ವಿಕೆಟ್ ನಷ್ಟವೇ ಇಲ್ಲದೆ 117 ರನ್​ ಗಳಿಸಿ ಗೆಲುವು ಸಾಧಿಸಿತು.

VISTARANEWS.COM


on

T20 world Cup 2024
Koo

ಬಾರ್ಬಡೋಸ್​: ಟಿ20 ವಿಶ್ವ ಕಪ್​ 2024ರ (T20 world Cup 2024) ಬಿ ಗುಂಪಿನ ಸೂಪರ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಯುಎಸ್​ಎ ತಂಡ 10 ವಿಕೆಟ್​ಗಳ ಹೀನಾಯ ಸೋಲಿಗೆ ಒಳಗಾಗಿದೆ. ಈ ಮೂಲಕ ಯುಎಸ್​ಎ ತಂಡದ ಸೆಮಿಫೈನಲ್​ಗೇರುವ ಕಸನು ಕಮರಿದೆ. ಈ ಹಂತದಲ್ಲಿ ಆಡಿದ ಮೂರಕ್ಕೆ ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಆದಾಗ್ಯೂ ಮೊಟ್ಟ ಮೊದಲ ಬಾರಿಗೆ ವಿಶ್ವ ಕಪ್​ ವೇದಿಕೆ ಪ್ರವೇಶಿಸಿದ್ದ ಯುಎಸ್​ಎ ತಂಡ ಸೂಪರ್ 8 ಹಂತಕ್ಕೇರುವ ಮೂಲಕ ಮೂಲಕ ಅವಿಸ್ಮರಣೀಯ ಸಾಧನೆ ಮಾಡಿದೆ. ಅತ್ತ ಇಂಗ್ಲೆಂಡ್ ತಂಡ ಆಡಿರುವ ಮೂರರಲ್ಲಿ 2 ಪಂದ್ಯಗಳನ್ನು ಗೆದ್ದು ಸದ್ಯ ಬಿ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಇಲ್ಲಿನ ಕೆನ್ಸಿಂಗ್ಟನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್​ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಯುಎಸ್​ಎ ಬಳಗ 18.5 ಓವರ್​ಗಳಲ್ಲಿ 115 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಇನ್ನೂ 64 ಎಸೆತಗಳು ಬಾಕಿ ಇರುವಂತೆಯೇ ವಿಕೆಟ್ ನಷ್ಟವೇ ಇಲ್ಲದೆ 117 ರನ್​ ಗಳಿಸಿ ಗೆಲುವು ಸಾಧಿಸಿತು.

ಸಣ್ಣ ಮೊತ್ತವನ್ನು ಬೆನ್ನಟ್ಟಲು ಹೊರಟ ಇಂಗ್ಲೆಂಡ್ ತಂಡದ ಆರಂಭಿಕ ಬ್ಯಾಟರ್​ಗಳಾದ ಜೋಸ್​ ಬಟ್ಲರ್​ (83) ಹಾಗೂ ಫಿಲ್​ ಸಾಲ್ಟ್​ (25) ಯುಎಸ್​ಎ ಬೌಲರ್​ಗಳನ್ನು ಚೆಂಡಾಡಿದರು. ಆರಂಭದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಆಡಿದ ಈ ಜೋಡಿ ಬಳಿಕ ಏಕಾಏಕಿ ವೇಗ ವೃದ್ಧಿಸಿತು. ಯುಎಸ್​ಎ ತಂಡದ ರೂಪಿಸಿದ ಯಾವುದೇ ರಣತಂತ್ರಕ್ಕೆ ಬಗ್ಗದ ಅವರಿಬ್ಬರೂ ನಿರಾಯಾಸವಾಗಿ ಪಂದ್ಯ ಗೆಲ್ಲಿಸಿದರು.

ಇದನ್ನೂ ಓದಿ: IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

ಯುಎಸ್​​ಎ ಬ್ಯಾಟಿಂಗ್ ವೈಫಲ್ಯ

ಮೊದಲು ಬ್ಯಾಟಿಂಗ್ ಆಹ್ವಾನ ಪಡೆದ ಯುಎಸ್​ಎ ತಂಡ ಉತ್ತಮವಾಗಿ ಆಡಲಿಲ್ಲ. ಅಂಡ್ರೀಸ್ ಗೌಸ್​ 8 ರನ್​ಗೆ ವಿಕೆಟ್ ಒಪ್ಪಿಸಿದರೆ ಸ್ಟೀವನ್ ಟೈಲರ್​ 12 ರನ್​ಗಳಿಗೆ ಸೀಮಿತಗೊಂಡರು. ನಿತೀಶ್ ಕುಮಾರ್​ 30 ರನ್ ಬಾರಿಸಿದರೆ ಆ್ಯರೋನ್ ಜೋನ್ಸ್​ 10 ರನ್​ಗೆ ಔಟಾದರು. ಕೋರಿ ಆ್ಯಂಡರ್ಸನ್​​ 29 ರನ್ ಬಾರಿಸಿದರೆ ಮಿಲಿಂದ್ ಕುಮಾರ್ 4 ರನ್​ಗೆ ವಿಕೆಟ್​ ಒಪ್ಪಿಸಿದರು. ಹರ್ಮೀತ್​ ಸಿಂಗ್​ 21 ರನ್​ಗೆ ಔಟಾದಾಗ ಯುಎಸ್​ಎ 115 ರನ್​ಗೆ 6 ವಿಕೆಟ್ ಕಳೆದುಕೊಂಡಿತ್ತು. ಆದರೆ, ಅ ಬಳಿಕ ಬಂದ ಎಲ್ಲ ಬ್ಯಾಟರ್​​ಗಳು ಶೂನ್ಯಕ್ಕೆ ಔಟಾದರು. ಕ್ರಿಸ್​ ಜೋರ್ಡಾನ್​ ಸತತ ನಾಲ್ಕು ವಿಕೆಟ್ ಪಡೆದರು. ಹೀಗಾಗಿ ಯುಎಸ್​ಎ 115 ರನ್​ಗಳಿಗೆ ಆಲ್​ಔಟ್​ ಆಯಿತು.

ಇಂಗ್ಲೆಂಡ್ ಪರ ಜೋರ್ಡಾನ್​ 4 ವಿಕೆಟ್ ಉರುಳಿಸಿದರೆ ಅದಿಲ್ ರಶೀದ್ ಹಾಗೂ ಸ್ಯಾಮ್​ ಕರ್ರನ್​ ತಲಾ 2 ವಿಕೆಟ್ ತಮ್ಮದಾಗಿಸಿಕೊಂಡರು. ರೀಸ್​ ಟೋಪ್ಲೆ ಹಾಗೂ ಲಿವಿಂಗ್​ಸ್ಟನ್​ ತಲಾ 1 ವಿಕೆಟ್ ತಮ್ಮದಾಗಿಸಿಕೊಂಡರು.

Continue Reading

ದೇಶ

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

SBI: ದೇಶಾದ್ಯಂತ ನಗರಗಳು ಹಾಗೂ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕ್‌ ಸೇವೆ ಒದಗಿಸುವ ನಿಟ್ಟಿನಲ್ಲಿ ಹೊಸ ಬ್ಯಾಂಕ್‌ ಶಾಖೆಗಳನ್ನು ತೆರೆಯಲು ಎಸ್‌ಬಿಐ ತೀರ್ಮಾನಿಸಿದೆ. ದೇಶಾದ್ಯಂತ 2024-25ನೇ ಹಣಕಾಸು ವರ್ಷದಲ್ಲಿ 400 ಹೊಸ ಶಾಖೆಗಳನ್ನು ತೆರೆಯಲು ನಿರ್ಧರಿಸಿದೆ. ಈ ಕುರಿತು ಎಸ್‌ಬಿಐ ಚೇರ್ಮನ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

SBI
Koo

ಮುಂಬೈ: ದೇಶದಲ್ಲೇ ಬೃಹತ್‌ ಬ್ಯಾಂಕ್‌ ಎನಿಸಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ (SBI) ಹೊಸ ಶಾಖೆಗಳನ್ನು (SBI New Branches) ಇನ್ನು ನಿಮ್ಮೂರಿಗೂ ಬರುವ ದಿನಗಳು ದೂರವಿಲ್ಲ. ಹೌದು, 2024-25ನೇ ಹಣಕಾಸು ವರ್ಷದಲ್ಲಿ ದೇಶಾದ್ಯಂತ ಗ್ರಾಮೀಣ ಭಾಗಗಳೂ ಸೇರಿ 400 ಹೊಸ ಶಾಖೆಗಳನ್ನು ತೆರೆಯಲು ಎಸ್‌ಬಿಐ ತೀರ್ಮಾನಿಸಿದೆ. ಇದರಿಂದಾಗಿ, ಗ್ರಾಮೀಣ ಪ್ರದೇಶಗಳಲ್ಲೂ ಜನ ಬ್ಯಾಂಕ್‌ಗಳನ್ನು ಹೊಂದಬಹುದಾಗಿದೆ. ಹೊಸ ಶಾಖೆಗಳನ್ನು ತೆರೆಯುವ ಕುರಿತು ಎಸ್‌ಬಿಐ ಚೇರ್ಮನ್‌ ದಿನೇಶ್‌ ಕುಮಾರ್‌ ಖಾರಾ (Dinesh Kumar Khara) ಅವರು ಮಾಹಿತಿ ನೀಡಿದ್ದಾರೆ.

ಪಿಟಿಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, “ದೇಶದಲ್ಲಿ ಶೇ.89ರಷ್ಟು ವಹಿವಾಟುಗಳು ಡಿಜಿಟಲ್‌ ಮೂಲಕ ಹಾಗೂ ಶೇ.98ರಷ್ಟು ವಹಿವಾಟು ಬ್ಯಾಂಕ್‌ ಹೊರತಾಗಿ ನಡೆಯುತ್ತಿವೆ. ಹೀಗಿರುವಾಗ ಬ್ಯಾಂಕ್‌ಗಳ ಬ್ರ್ಯಾಂಚ್‌ಗಳು ಏಕೆ ಬೇಕು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದರೆ, ದೇಶದ ಪ್ರತಿಯೊಂದು ಭಾಗದಲ್ಲೂ, ಹೊಸ ಹೊಸ ಪಟ್ಟಣ, ಗ್ರಾಮಗಳಿಗೂ ಬ್ಯಾಂಕ್‌ ಬ್ರ್ಯಾಂಚ್‌ಗಳ ಅವಶ್ಯಕತೆ ಇದೆ. ಇದೇ ಕಾರಣಕ್ಕಾಗಿಯೇ 2024-25ನೇ ಹಣಕಾಸು ವರ್ಷದಲ್ಲಿ ದೇಶದ ನಗರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಬ್ರ್ಯಾಂಚ್‌ಗಳನ್ನು ತೆರೆಯಲು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದರು.

electoral bonds

“ದೇಶಾದ್ಯಂತ ಹೊಸ ಹೊಸ ಪ್ರದೇಶಗಳಲ್ಲಿ ಬ್ಯಾಂಕ್‌ ಶಾಖೆಗಳನ್ನು ಸ್ಥಳಗಳ ಹುಡುಕಾಟ ನಡೆಯುತ್ತಿದೆ. ಜನರಿಗೆ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕ್‌ ಸೇವೆಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ಸ್ಥಳಗಳನ್ನು ನಿರ್ಧರಿಸುವ ಕೆಲಸ ನಡೆಯುತ್ತಿದೆ. ದೇಶದ ಜನರಿಗೆ ಬ್ಯಾಂಕ್‌ಗಳ ಅವಶ್ಯಕತೆ ಹೆಚ್ಚಿಲ್ಲ ಎಂಬ ವಾದವನ್ನು ನಾನು ಒಪ್ಪುವುದಿಲ್ಲ. ದೇಶದ ಪ್ರತಿಯೊಂದು ಭಾಗದಲ್ಲಿ ಬ್ಯಾಂಕ್‌ ಬ್ರ್ಯಾಂಚ್‌ಗಳ ಅವಶ್ಯಕತೆ ಇದೆ. ಆ ಅವಶ್ಯಕತೆಯನ್ನು ಪೂರೈಸುವುದು ನಮ್ಮ ಆದ್ಯತೆಯಾಗಿದೆ” ಎಂದು ಪಿಟಿಐಗೆ ವಿವರಿಸಿದರು.

2023-24ನೇ ಹಣಕಾಸು ವರ್ಷದಲ್ಲಿ ದೇಶಾದ್ಯಂತ 59 ಗ್ರಾಮಗಳು ಸೇರಿ 137 ಕಡೆ ಹೊಸ ಶಾಖೆಗಳನ್ನು ಎಸ್‌ಬಿಐ ತೆರೆದಿದೆ ಹಾಗೂ ಅವುಗಳಲ್ಲಿ ವಹಿವಾಟು ನಡೆಯುತ್ತಿದೆ. 2024ರ ಮಾರ್ಚ್‌ ಅಂತ್ಯಕ್ಕೆ ದೇಶಾದ್ಯಂತ ಎಸ್‌ಬಿಐ 22,542 ಬ್ರ್ಯಾಂಚ್‌ಗಳನ್ನು ಹೊಂದಿರುವ ಬೃಹತ್‌ ನೆಟ್‌ವರ್ಕ್‌ ಎನಿಸಿದೆ. ದೇಶದ ವಿಶ್ವಾಸಾರ್ಹ, ಗ್ರಾಹಕರನ್ನು ಸೆಳೆಯುವ ಬ್ಯಾಂಕ್‌ ಎಂಬ ಖ್ಯಾತಿಯನ್ನೂ ಎಸ್‌ಬಿಐ ಗಳಿಸಿದೆ.

ಇದನ್ನೂ ಓದಿ: SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

Continue Reading

ಪ್ರಮುಖ ಸುದ್ದಿ

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

ದೀಪ್ತಿ ಶರ್ಮಾ ಮತ್ತು ಅರುಂಧತಿ ರೆಡ್ಡಿ ತಲಾ ಎರಡು ವಿಕೆಟ್​ ಕಬಳಿಸಿ ಎದುರಾಳಿ ತಂಡ ರನ್​ ಗಳಿಕೆಗೆ ಕಡಿವಾಣ ಹಾಕಿದರು. ಪರಿಣಾಮವಾಗಿ ದಕ್ಷಿಣ ಆಫ್ರಿಕಾ 50 ಓವರ್​​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಇನ್ನೂ 56 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್​ ನಷ್ಟಕ್ಕೆ 220 ರನ್ ಬಾರಿಸಿ ಗೆಲುವು ಸಾಧಿಸಿತು.

VISTARANEWS.COM


on

IND vs SA
Koo

ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ (IND VS SA) ಹರ್ಮನ್​ಪ್ರೀತ್ ಕೌರ್ ನೇತೃತ್ವದ ಭಾರತದ ಮಹಿಳೆಯರ ತಂಡ 3-0 ಕ್ಲೀನ್ ಸ್ವೀಪ್​ ಸಾಧನೆ ಮಾಡಿದೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಮೂರನೇ ಹಾಗೂ ಕೊನೇ ಪಂದ್ಯದಲ್ಲಿ 6 ವಿಕೆಟ್​ ವಿಜಯ ಸಾಧಿಸಿದ ಭಾರತದ ವನಿತೆಯರು ಅವಿಸ್ಮರಣೀಯ ಸಾಧನೆ ಮಾಡಿದರು. ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ 143 ರನ್​ಗಳ ಗೆಲುವು ಸಾಧಿಸಿದ್ದ ಮಹಿಳೆಯರು ಎರಡನೇ ಪಂದ್ಯದಲ್ಲಿ 4 ರನ್​ಗಳ ವಿಜಯ ತಮ್ಮದಾಗಿಸಿಕೊಂಡಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೂರು ಪಂದ್ಯಗಳು ಆಯೋಜನೆಗೊಂಡಿದ್ದವು. ಮೂರನೇ ಪಂದ್ಯದಲ್ಲಿ ಆರಂಭಿಕ ಎಡಗೈ ಬ್ಯಾಟರ್​ ಸ್ಮೃತಿ ಮಂಧಾನ ಮತ್ತೊಮ್ಮೆ ಭರ್ಜರಿ ಇನ್ನಿಂಗ್ಸ್ ಕಟ್ಟುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅವರು ಈ ಹಿಂದಿನ ಎರಡೂ ಪಂದ್ಯಗಳಲ್ಲಿ ಶತಕ ಬಾರಿಸಿ ಮಿಂಚಿದ್ದರು. ಮೂರನೇ ಶತಕವನ್ನು 10 ರನ್​ಗಳ ಕೊರತೆಯಿಂದ ಕಳೆದುಕೊಂಡಿದ್ದಾರೆ.ಒಂದು ವೇಳೆ ಶತಕ ಬಾರಿಸಿದ್ದರೆ ಪುರುಷರ ತಂಡದ ವಿರಾಟ್ ಕೊಹ್ಲಿಯ ಸಾಧನೆಯನ್ನು ಸರಿಗಟ್ಟುವ ಅವಕಾಶ ಇತ್ತು. ಅದನ್ನವರು ನಷ್ಟ ಮಾಡಿಕೊಂಡರು.

ಮೊದಲೆರಡು ಪಂದ್ಯಗಳು ಗೆದ್ದ ಕಾರಣ ಸರಣಿ ಭಾರತದ ಕೈವಶವಾಗಿತ್ತು. ಹೀಗಾಗಿಔಪಚಾರಿಕ ಎನಿಸಿದ್ದ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಸೌತ್ ಆಫ್ರಿಕಾ, ಉತ್ತಮ ಪ್ರದರ್ಶನ ನೀಡುವ ಉದ್ದೇಶ ಹೊಂದಿತ್ತು. ಆದರೆ ಭಾರತೀಯ ಬೌಲರ್​ಗಳು ಅದಕ್ಕೆ ಅವಕಾಶ ನೀಡಲಿಲ್ಲ. ಮೊದಲ ವಿಕೆಟ್​ಗೆ ಶತಕದ ಜೊತೆಯಾಟ ಬಂದರೂ ಉಳಿದ ಬ್ಯಾಟರ್​​ಗಳು ವೈಫಲ್ಯ ಕಂಡರು. ದೀಪ್ತಿ ಶರ್ಮಾ ಮತ್ತು ಅರುಂಧತಿ ರೆಡ್ಡಿ ತಲಾ ಎರಡು ವಿಕೆಟ್​ ಕಬಳಿಸಿ ಎದುರಾಳಿ ತಂಡ ರನ್​ ಗಳಿಕೆಗೆ ಕಡಿವಾಣ ಹಾಕಿದರು. ಪರಿಣಾಮವಾಗಿ ದಕ್ಷಿಣ ಆಫ್ರಿಕಾ 50 ಓವರ್​​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಇನ್ನೂ 56 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್​ ನಷ್ಟಕ್ಕೆ 220 ರನ್ ಬಾರಿಸಿ ಗೆಲುವು ಸಾಧಿಸಿತು.

ಸ್ಮೃತಿ ಮಂಧಾನ ಭರ್ಜರಿ ಬ್ಯಾಟಿಂಗ್​

219 ರನ್​ಗಳ ಗುರಿ ಬೆನ್ನಟ್ಟಿದ ಭಾರತ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ 61 ರನ್​ ಪೇರಿಸಿತು. ಶಫಾಲಿ ವರ್ಮಾ 25 ರನ್​ಗೆ ಔಟಾಗಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಬಳಿಕ ಪ್ರಿಯಾ ಪೂನಿಯಾ ಅವರು ಸ್ಮೃತಿ ಮಂಧಾನ ಜೊತೆಗೂಡಿ ಇನಿಂಗ್ಸ್​ ಕಟ್ಟಿದರು. ಈ ಜೋಡಿಯೂ 2ನೇ ವಿಕೆಟ್​​ಗೆ ಅರ್ಧ ಶತಕದ ಜತೆಯಾಟ ನೀಡಿತು.

ಇದನ್ನೂ ಓದಿ:T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

ಕಳೆದ ಎರಡು ಪಂದ್ಯಗಳಲ್ಲಿ ಶತಕ ಸಿಡಿಸಿದ್ದ ಸ್ಮೃತಿ, ಈ ಪಂದ್ಯದಲ್ಲೂ ಶತಕ ಸಿಡಿಸುವ ಭರವಸೆ ಮೂಡಿಸಿದ್ದರು. ಆದರೆ 90 ರನ್ ಗಳಿಸಿದ್ದ ಆತುರ ಮಾಡಿ ವಿಕೆಟ್ ಒಪ್ಪಿಸಿದರು. 83 ಎಸೆತಗಳಲ್ಲಿ 11 ಬೌಂಡರಿ ಸಹಿತ 90 ರನ್ ಗಳಿಸಿ ಮಿಂಚಿದರು. ಸರಣಿಯಯ ಹಿಂದಿನ 2 ಪಂದ್ಯಗಳಲ್ಲಿ ಕ್ರಮವಾಗಿ 117 ಮತ್ತು 135 ರನ್ ಗಳಿಸಿದ್ದರು. ಹರ್ಮನ್​ಪ್ರೀತ್​ ಕೌರ್ಕೂ 42 ರನ್ ಗಳಿಸಿದರು. ಜೆಮಿಮಾ ರೊಡ್ರಿಗಸ್ (19) ಮತ್ತು ರಿಚಾ ಘೋಷ್​ (6) ಗೆಲುವು ತಂದುಕೊಟ್ಟು.

ಭಾರತದ ಮಾರಕ ಬೌಲಿಂಗ್


ಮೊದಲು ಬ್ಯಾಟಿಂಗ್ ಮಾಡಿದ ಸೌತ್ ಆಫ್ರಿಕಾ ಉತ್ತಮ ಆರಂಭ ಪಡೆಯಿತು ನಾಯಕಿ ಲಾರಾ ವೊಲ್ವಾರ್ಡ್ಟ್ ಅರ್ಧಶತಕ ಸಿಡಿಸಿ ಮಿಂಚಿದರು. ತಜ್ಮಿನ್ ಬ್ರಿಟ್ಸ್ ಕೂಡ 38 ರನ್​ಗಳ ಉಪಯುಕ್ತ ಕಾಣಿಕೆ ನೀಡಿದರು. ಹೀಗಾಗಿ 100 ರನ್​ಗಳ ಆರಂಭಿಕ ಜತೆಯಾಟ ಸಿಕ್ಕಿತು. ನಂತರ ಮರಿಜಾನ್ನೆ ಕಪ್ 7, ಆನ್ನೆಕೆ ಬೋಷ್ 5, ಸುನೆ ಲೂಸ್ 13 ರನ್ ಗಳಿಸಿ ವಿಕೆಟ್​ ಒಪ್ಪಿಸಿ ನಿರಾಸೆ ಮೂಡಿಸಿದರು. ಶಂಗಾಸೆ (16) ನಾಡಿನ್ ಡಿ ಕ್ಲರ್ಕ್ (26) ಕೂಡ ಔಟಾದರು. ಭಾರತೀಯ ಬೌಲರ್​ಗಳು ಪ್ರಭಾವ ಬೀರಿದರು. ಮೈಕೆ ಡಿ ರಿಡ್ಡರ್ ಕೊನೆ ಹಂತದಲ್ಲಿ ಅಜೇಯ 26 ರನ್ ಪೇರಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ದೀಪ್ತಿ , ಅರುಂಧತಿ ಜತೆಗೆ ಶ್ರೇಯಾಂಕಾ ಪಾಟೀಲ್, ಪೂಜಾ ವಸ್ತ್ರಾಕರ್ ತಲಾ 1 ವಿಕೆಟ್ ಉರುಳಿಸಿದರು.

Continue Reading
Advertisement
Surrogacy Leaves
ಪ್ರಮುಖ ಸುದ್ದಿ40 mins ago

Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

T20 world Cup 2024
ಕ್ರೀಡೆ1 hour ago

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

SBI
ದೇಶ1 hour ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ2 hours ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ3 hours ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ3 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ4 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ4 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ4 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು7 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌