Highest Salary Paying Companies: ಎಂಜಿನಿಯರ್‌ಗಳಿಗೆ ಅತೀ ಹೆಚ್ಚು ಸಂಬಳ ಕೊಡುವ ಕಂಪನಿಗಳ ಪಟ್ಟಿ ಇಲ್ಲಿದೆ - Vistara News

ವಾಣಿಜ್ಯ

Highest Salary Paying Companies: ಎಂಜಿನಿಯರ್‌ಗಳಿಗೆ ಅತೀ ಹೆಚ್ಚು ಸಂಬಳ ಕೊಡುವ ಕಂಪನಿಗಳ ಪಟ್ಟಿ ಇಲ್ಲಿದೆ

ಗೂಗಲ್ ನಲ್ಲಿ ಅತ್ಯಧಿಕ ಪಾವತಿ ಮಾಡಲಾಗುತ್ತಿದ್ದು, ಇಲ್ಲಿನ ಎಂಜಿನಿಯರ್ ಗಳು ವಾರ್ಷಿಕವಾಗಿ 66 ಲಕ್ಷ ರೂ. ಸಂಬಳ ಪಡೆಯುತ್ತಿದ್ದಾರೆ. ಇದು ಅತ್ಯಂತ ಜನಪ್ರಿಯವಾದ ಕಂಪನಿಗಳಲ್ಲಿ ಅತ್ಯಧಿಕವಾಗಿದೆ. ವಿಶ್ವ
ಇತರ ಪ್ರಸಿದ್ಧ ಕಂಪನಿಗಳು ಭಾರತದಲ್ಲಿ ಎಂಜಿನಿಯರ್ ಗಳಿಗೆ ಎಷ್ಟು ಸಂಬಳ ಪಾವತಿ (Highest Salary Paying Companies) ಮಾಡುತ್ತಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

Highest Paying Companies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗೂಗಲ್ (Google), ಅಮೆಜಾನ್ (amazon), ಮೈಕ್ರೋ ಸಾಫ್ಟ್ (microsoft) ಸೇರಿದಂತೆ ವಿಶ್ವ ಪ್ರಸಿದ್ಧ ಕಂಪನಿಗಳ ಸ್ಯಾಲರಿ ಪ್ಯಾಕೇಜ್ (Highest Salary Paying Companies) ಎಷ್ಟಿರಬಹುದು ಎನ್ನುವ ಕುತೂಹಲ ಎಲ್ಲರಿಗೂ ಇದೆ. ಈ ಕುರಿತು ಇದೀಗ ಎಕ್ಸ್ ನಲ್ಲಿ (x) ಮಾಹಿತಿ ವೈರಲ್ (viral) ಆಗಿದ್ದು, ವಿಶ್ವ ಪ್ರಸಿದ್ಧ ಕಂಪನಿಗಳ ಎಂಜಿನಿಯರ್ ಗಳು ವಾರ್ಷಿಕ ಸರಾಸರಿ 26 ಸಾವಿರ ರೂ.ನಿಂದ 66 ಲಕ್ಷ ರೂ. ವರೆಗೆ ಸಂಬಳ ಪಡೆಯುತ್ತಿದ್ದಾರೆ ಎಂಬುದು ತಿಳಿದು ಬಂದಿದೆ.

ಗೂಗಲ್ ನಲ್ಲಿ ಅತ್ಯಧಿಕ ಪಾವತಿ ಮಾಡಲಾಗುತ್ತಿದ್ದು, ಇಲ್ಲಿನ ಎಂಜಿನಿಯರ್ ಗಳು ವಾರ್ಷಿಕವಾಗಿ 66 ಲಕ್ಷ ರೂ. ಸಂಬಳ ಪಡೆಯುತ್ತಿದ್ದಾರೆ. ಇದು ಅತ್ಯಂತ ಜನಪ್ರಿಯವಾದ ಕಂಪನಿಗಳಲ್ಲಿ ಅತ್ಯಧಿಕವಾಗಿದೆ. ಬಳಿಕ ಗೊಜೆಕ್, ಮೈಕ್ರೋಸಾಫ್ಟ್, ಝೀಟಾ, ಅಡೋಬ್ ಮತ್ತು ಸೇಲ್ಸ್‌ಫೋರ್ಸ್‌ನಲ್ಲಿ ಎಂಜಿನಿಯರ್‌ ಹೆಚ್ಚಿನ ಸಂಬಳ ಪಡೆಯುತ್ತಿದ್ದಾರೆ. ಇದರಲ್ಲಿ ಕ್ರಮವಾಗಿ 59.7 ಲಕ್ಷ, 58.5 ಲಕ್ಷ, 58 ಲಕ್ಷ, 56.3 ಲಕ್ಷ, ಮತ್ತು 56.1 ಲಕ್ಷ ಸಂಬಳ ಪಡೆಯುವ ಎಂಜಿನಿಯರ್ ಗಳು ಇದ್ದಾರೆ.

ಬಳಿಕದ ಸ್ಥಾನದಲ್ಲಿ ವಿಎಂ ವೇರ್, ಶೇರ್ ಚಾಟ್, ಗೋಲ್ಡ್ ಮನ್, ಪೇ ಪಾಲ್, ಮಿಂತ್ರಾ, ವಾಲ್ ಮಾರ್ಟ್, ಸರ್ವಿಸ್ ನೌ, ಫ್ಲಿಪ್ ಕಾರ್ಟ್, ರಝೋರ್ ಪೇ, ಒರಾಕಲ್, ಅಮೆಜಾನ್ ಕೂಡ ಸೇರಿದೆ. ಇದರಲ್ಲಿ ಬಹುತೇಕ ಎಂಜಿನಿಯರ್‌ಗಳ ಸಂಬಳ 51.4 ಲಕ್ಷ ರೂ. ವರೆಗೆ ಇದೆ. ಟೆಕೀವ್ನ್, ಸಿಸ್ಕೊ, ಪೇ ಟಿಎಂ, ಕ್ವ್ಯಾಲ್ ಕಾಮ್, ಸ್ಯಾಪ್, ಓಯೋ ಕಂಪೆನಿಗಳ ಎಂಜಿನಯರ್ ಗಳಿಗೆ 5೦ ಲಕ್ಷ ರೂ.ವರೆಗೆ ವಾರ್ಷಿಕ ಪಾವತಿ ಮಾಡಲಾಗುತ್ತದೆ.


ಉಳಿದಂತೆ ಐಬಿಎಂ, ಸ್ಯಾಮ್ ಸಂಗ್, ಅಕ್ವೆವೆಂಚರ್, ಕಾಗ್ನಿಜೆಂಟ್, ಇನ್ಫೋಸಿಸ್, ಕ್ಯಾಂಪ್ಗೆಮಿನಿ, ಟಿಸಿಎಸ್ ಕಂಪೆನಿಗಳಲ್ಲಿ ಎಂಜಿನಿಯರ್ ಗಳಿಗೆ ಗರಿಷ್ಠ ವಾರ್ಷಿಕ ಪಾವತಿ 30 ಲಕ್ಷ ರೂ.ವರೆಗೆ ನೀಡಲಾಗುತ್ತದೆ.

ಇದನ್ನೂ ಓದಿ: LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

ಹೆಚ್ಚು ಮತ್ತು ಕಡಿಮೆ ಪಾವತಿಸುವ ಕಂಪನಿಗಳ ಮಾಹಿತಿ ಸಂಗ್ರಹಕ್ಕಾಗಿ ಒಟ್ಟು 25,000 ಮಂದಿಯ ಸಂಬಳವನ್ನು ವಿಶ್ಲೇಷಿಸಲಾಗಿದೆ ಎಂದು ಎಕ್ಸ್ ಬಳಕೆದಾರರು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಸಂಬಳ ಪಾವತಿಯ ಬಗ್ಗೆ ಪಾರದರ್ಶಕತೆ ಬಹಳ ಮುಖ್ಯ ಎಂದಿರುವ ಅವರು ಇದರಲ್ಲಿ ಮೂಲ ವೇತನದಲ್ಲಿ ಕೊಂಚ ವ್ಯತ್ಯಾಸವಿರಬಹುದು ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಷ್ಟಿದೆ ಇಂದಿನ ಬೆಲೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ ಶನಿವಾರ ಬಂಗಾರದ ದರ ತುಸು ಏರಿಕೆಯಾಗಿತ್ತು. ಭಾನುವಾರ ಬೆಲೆ ಹೆಚ್ಚಳವಾಗದೆ ಗ್ರಾಹಕರು ನಿರಾಳರಾಗಿದ್ದರು. ಸೋಮವಾರ ಯಥಾಸ್ಥಿತಿಯಲ್ಲಿತ್ತು. ಮಂಗಳವಾರ ಬೆಲೆ ಹೆಚ್ಚಾಗಿತ್ತು. ಇಂದು ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,635 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,238 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜುಲೈ 3) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಶನಿವಾರ ಬಂಗಾರದ ದರ ತುಸು ಏರಿಕೆಯಾಗಿತ್ತು. ಭಾನುವಾರ ಬೆಲೆ ಹೆಚ್ಚಳವಾಗದೆ ಗ್ರಾಹಕರು ನಿರಾಳರಾಗಿದ್ದರು. ಸೋಮವಾರ ಯಥಾಸ್ಥಿತಿಯಲ್ಲಿತ್ತು. ಮಂಗಳವಾರ ಬೆಲೆ ಹೆಚ್ಚಾಗಿತ್ತು. ಇಂದು ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,635 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,238 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,080. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,350 ಮತ್ತು ₹ 6,63,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,904 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,380 ಮತ್ತು ₹ 7,23,800 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,650 ₹ 7,253
ಮುಂಬೈ₹ 6,635₹ 7,238
ಬೆಂಗಳೂರು₹ 6,635₹ 7,238
ಚೆನ್ನೈ₹ 6,695 ₹ 7,304

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಕೊಂಚ ಏರಿದೆ. ಬೆಳ್ಳಿ ಒಂದು ಗ್ರಾಂಗೆ ₹ 90.50 ಹಾಗೂ 8 ಗ್ರಾಂಗೆ ₹ 724 ಇದೆ. 10 ಗ್ರಾಂಗೆ ₹ 905 ಹಾಗೂ 1 ಕಿಲೋಗ್ರಾಂಗೆ ₹ 90,500 ಬೆಲೆ ಬಾಳುತ್ತದೆ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Stock Market: ಷೇರು ಪೇಟೆಯಲ್ಲಿ ಗೂಳಿ ನೆಗೆತ; 80,000 ಅಂಕಗಳ ಗಡಿ ತಲುಪಿದ ಸೆನ್ಸೆಕ್ಸ್‌

Continue Reading

ದೇಶ

Anant-Radhika Wedding: ಅನಂತ್‌ ಅಂಬಾನಿ ಮದುವೆಗೆ ಪೂರ್ವಭಾವಿಯಾಗಿ ಸಾಮೂಹಿಕ ವಿವಾಹ; ಪ್ರತಿ ವಧುವಿಗೆ ಚಿನ್ನಾಭರಣ, 1 ಲಕ್ಷ ರೂ.

Anant-Radhika Wedding: ಜುಲೈ 12ರಂದು ಮುಂಬೈಯಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ನಡೆಯಲಿದೆ. ಅದಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ. ಮುಂಬೈಯಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಫಾಲ್ಘರ್‌ನಲ್ಲಿ ಈ ಸಾಮೂಹಿಕ ವಿವಾಹ ನೆರವೇರಿತು. ರಿಲಯನ್ಸ್‌ ಕಾರ್ಪೋರೇಟ್‌ ಪಾರ್ಕ್‌ನಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಆರ್ಥಿಕವಾಗಿ ಹಿಂದುಳಿದ 50 ಜೋಡಿ ಹಸಮಣೆಗೇರಿತು.

VISTARANEWS.COM


on

Anant-Radhika Wedding
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ (Nita Ambani) ದಂಪತಿ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹಕ್ಕೆ ದಿನ ಗಣನೆ ಆರಂಭವಾಗಿದೆ. ಜುಲೈ 12ರಂದು ಮುಂಬೈಯಲ್ಲಿ ಈ ಅದ್ಧೂರಿ ಸಮಾರಂಭ ಆಯೋಜಿಸಲಾಗಿದೆ. ಅದಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ.

ಮುಂಬೈಯಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಫಾಲ್ಘರ್‌ನಲ್ಲಿ ಈ ಸಾಮೂಹಿಕ ವಿವಾಹ ನೆರವೇರಿತು. ರಿಲಯನ್ಸ್‌ ಕಾರ್ಪೋರೇಟ್‌ ಪಾರ್ಕ್‌ನಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಆರ್ಥಿಕವಾಗಿ ಹಿಂದುಳಿದ 50 ಜೋಡಿ ಹಸಮಣೆಗೇರಿತು.

ಈ ಸಾಮೂಹಿಕ ವಿವಾಹದಲ್ಲಿ ವಧು-ವರರ ಕುಟುಂಬದ ಸುಮಾರು 800 ಮಂದಿ ಪಾಲ್ಗೊಂಡಿದ್ದರು. ಸ್ವತಃ ಮುಕೇಶ್‌ ಅಂಬಾನಿ, ನೀತಾ ಅಂಬಾನಿ, ಆಕಾಶ್‌ ಅಂಬಾನಿ, ಶ್ಲೋಕ ಮೆಹ್ತಾ, ಇಶಾ ಅಂಬಾನಿ, ಆನಂದ್‌ ಪಿರಮಾಲ್‌ ಆಗಮಿಸಿ ನೂತನ ವಧು-ವರರನ್ನು ಹಾರೈಸಿದರು.

ಉಡುಗೊರೆ

ಪ್ರತಿ ಜೋಡಿಗೆ ಚಿನ್ನದ ಉಂಗುರ, ಮಂಗಳ ಸೂತ್ರ, ಮೂಗುತ್ತಿ ಉಡುಗೊರೆಯಾಗಿ ನೀಡಲಾಯಿತು. ಜತೆಗೆ ಬೆಳ್ಳಿಯ ಆಭರಗಳನ್ನೂ ನೀಡಲಾಗಿದೆ. ಜತೆಗೆ ಸ್ತ್ರೀಧನವಾಗಿ ಪ್ರತಿ ವಧುವಿಗೆ 1.01 ಲಕ್ಷ ರೂ. ಚೆಕ್‌ ಅನ್ನು ಅಂಬಾನಿ ಕುಟುಂಬಸ್ಥರು ವಿತರಿಸಿದ್ದಾರೆ. ಮಾತ್ರವಲ್ಲ ಪ್ರತಿ ಜೋಡಿಗೆ ಒಂದು ವರ್ಷಕ್ಕೆ ಅಗತ್ಯವಾದ ದಿನಸಿ ಸಾಮಗ್ರಿಗಳನ್ನೂ ವಿತರಿಸಲಾಗಿದೆ. ಇದು ಪಾತ್ರೆ ಪರಿಕರಗಳು, ಗ್ಯಾಸ್‌ ಸ್ಟವ್‌, ಮಿಕ್ಸಿ, ಫ್ಯಾನ್‌, ಹಾಸಿಗೆ ಮತ್ತು ತಲೆ ದಿಂಬುಗಳನ್ನು ಒಳಗೊಂಡಿದೆ. ಅದ್ಧೂರಿ ಭೋಜನದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಈ ವೇಳೆ ವರ್ಲಿ ಬುಡಕಟ್ಟು ಜನಾಂಗದವರು ಪ್ರದರ್ಶಿಸಿದ ಸಾಂಪ್ರದಾಯಿಕ ತಾರ್ಪ ನೃತ್ಯವನ್ನು ಅತಿಥಿಗಳು ಮತ್ತು ಅಂಬಾನಿ ಕುಟುಂಬದ ಸದಸ್ಯರು ವೀಕ್ಷಿಸಿದರು.

ʼʼಜನ ಸೇವೆಯೇ ಜನಾರ್ದನ ಸೇವೆ ಎಂದು ಪರಿಗಣಿಸುವ ಅಂಬಾನಿ ಕುಟುಂಬ ಪ್ರತಿ ಶುಭ ಸಂದರ್ಭದಲ್ಲಿ ಸಮಾಜಕ್ಕೆ ನೆರವಾಗುವ ಉದ್ದೇಶದಿಂದ ಇಂತ ಜನ ಕಲ್ಯಾಣ ಕಾರ್ಯಕ್ರಮಗಳು ಆಯೋಜಿಸುತ್ತದೆʼʼ ಎಂದು ಆಪ್ತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

ಜುಲೈ 12ರಂದು ಮದುವೆ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಆಹ್ವಾನ ಪತ್ರಿಕೆ ರಿಲೀಸ್‌ ಆಗಿ, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಜುಲೈ 14ರವರೆಗೆ ಶುಭ ವಿವಾಹ, ಶುಭ ಆಶೀರ್ವಾದ ಮತ್ತು ಮಂಗಳ ಉತ್ಸವ ಎನ್ನುವ ಮೂರು ದಿನಗಳ ಕಾರ್ಯಕ್ರಮ ನಡೆಯಲಿದೆ. ಕೆಲವು ದಿನಗಳ ಹಿಂದೆ ಮೂರು ದಿನಗಳ ಅದ್ದೂರಿ ಮದುವೆ ಪೂರ್ವ ಸಮಾರಂಭ ನಡೆದಿತ್ತು. ದೇಶ-ವಿದೇಶಗಳ ವಿವಿಧ ಕ್ಷೇತ್ರಗಳ ಗಣ್ಯರು ಇದರಲ್ಲಿ ಪಾಲ್ಗೊಂಡಿದ್ದರು.

Continue Reading

ವಾಣಿಜ್ಯ

Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

Stock Market: ಭಾರತೀಯ ಷೇರು ಮಾರುಕಟ್ಟೆ ಬುಧವಾರ (ಜುಲೈ 3) ಹೊಸ ಇತಿಹಾಸ ಬರೆದಿದೆ. ವಹಿವಾಟು ಆರಂಭವಾದ ಕೂಡಲೇ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಇದೇ ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿದೆ. ಜತೆಗೆ ನಿಫ್ಟಿ ಕೂಡ 24,291.75 ಅಂಕಗಳ ಹೊಸ ಶಿಖರ ಏರಿದೆ. ಇಂದು ಸೆನ್ಸೆಕ್ಸ್ ಮೊದಲ ಬಾರಿಗೆ ಜೀವಮಾನದ ಗರಿಷ್ಠ ಪಾಯಿಂಟ್‌ 80,039 ಪಾಯಿಂಟ್‌ಗೆ ತಲುಪಿದರೆ, ನಿಫ್ಟಿ 169 ಪಾಯಿಂಟ್‌ಗಳ ಏರಿಕೆ ಕಂಡು 24,292ಕ್ಕೆ ತಲುಪಿದೆ.

VISTARANEWS.COM


on

Stock Market
Koo

ಮುಂಬೈ: ಭಾರತೀಯ ಷೇರು ಮಾರುಕಟ್ಟೆ (Stock Market) ಬುಧವಾರ (ಜುಲೈ 3) ಹೊಸ ಇತಿಹಾಸ ಬರೆದಿದೆ. ಇಂದು ವಹಿವಾಟು ಆರಂಭವಾದ ಕೂಡಲೇ ಸೆನ್ಸೆಕ್ಸ್ (Sensex) 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಇದೇ ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿದೆ. ಜತೆಗೆ ನಿಫ್ಟಿ (Nifty) ಕೂಡ 24,291.75 ಅಂಕಗಳ ಹೊಸ ಶಿಖರ ಏರಿದೆ.

ಇಂದು ಸೆನ್ಸೆಕ್ಸ್ ಮೊದಲ ಬಾರಿಗೆ ಜೀವಮಾನದ ಗರಿಷ್ಠ ಪಾಯಿಂಟ್‌ 80,039 ಪಾಯಿಂಟ್‌ಗೆ ತಲುಪಿದರೆ, ನಿಫ್ಟಿ 169 ಪಾಯಿಂಟ್‌ಗಳ ಏರಿಕೆ ಕಂಡು 24,292ಕ್ಕೆ ತಲುಪಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಸೆನ್ಸೆಕ್ಸ್‌ನಲ್ಲಿ ಗರಿಷ್ಠ ಲಾಭ ಗಳಿಸಿದ್ದು, 1,791.90 ರೂ.ಗೆ ತಲುಪಿದೆ. ಸೆನ್ಸೆಕ್ಸ್‌ನಲ್ಲಿ ಕೋಟಕ್ ಬ್ಯಾಂಕ್, ಬಜಾಜ್ ಫೈನಾನ್ಸ್, ಬಜಾಜ್ ಫಿನ್‌ಸರ್ವ್‌ ಮತ್ತು ಎಂ & ಎಂ ಲಾಭ ಗಳಿಸಿದರೆ, ಟೆಕ್ ಮಹೀಂದ್ರಾ, ಟಿಸಿಎಸ್, ಸನ್ ಫಾರ್ಮಾ, ಇನ್ಫೋಸಿಸ್ ಮತ್ತು ಭಾರ್ತಿ ಏರ್‌ಟೆಲ್‌ ನಷ್ಟ ಅನುಭವಿಸಿವೆ.

ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ 52 ವಾರಗಳ ಗರಿಷ್ಠ ಬೆಲೆ

ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್ ಆಗಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ ಸುಮಾರು 52 ವಾರಗಳ ಬಳಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಷೇರುಗಳು ಇಂದು 60ಕ್ಕೂ ಹೆಚ್ಚು ರೂ. ಅಥವಾ ಶೇ. 3ಕ್ಕೂ ಅಧಿಕ ಮಟ್ಟದಲ್ಲಿ ವಹಿವಾಟು ನಡೆಸುತ್ತಿವೆ. ʼʼಇಂದು ಮಾರುಕಟ್ಟೆ ಚಟುವಟಿಕೆಯ ಕೇಂದ್ರಬಿಂದು ಎಚ್‌ಡಿಎಫ್‌ಸಿ ಬ್ಯಾಂಕ್ ಆಗಿದ್ದು, ತನ್ನ ಮೇಲ್ಮುಖ ಚಲನೆಯನ್ನು ಮುಂದುವರಿಸಿದೆ. ಇದು ಇನ್ನೂ ಕೆಲವು ದಿನಗಳವರೆಗೆ ಮುಂದುವರಿಯುವ ಸಾಮರ್ಥ್ಯ ಹೊಂದಿದೆʼʼ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಯುಎಸ್ ಫೆಡರಲ್ ರಿಸರ್ವ್ ಅಧ್ಯಕ್ಷ ಜೆರೋಮ್ ಪೊವೆಲ್ ಅವರು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಪ್ರಗತಿ ಸಾಧಿಸುದ್ದೇವೆ ಎಂದು ಹೇಳಿಕ ನೀಡಿದ ನಂತರ ಏಷ್ಯಾ-ಪೆಸಿಫಿಕ್ ಮಾರುಕಟ್ಟೆಗಳು ಬುಧವಾರ ಬೆಳಿಗ್ಗೆ ಧನಾತ್ಮಕ ಪ್ರದರ್ಶನ ತೋರಿದವು.

ಇದನ್ನೂ ಓದಿ: ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

ಮಂಗಳವಾರ ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿತ್ತು. ನಿಫ್ಟಿ (Nifty) ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿತ್ತು. ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿತ್ತು. ಐಟಿ ಕಂಪನಿಗಳ ಲಾಭ ಮತ್ತು ಯುಎಸ್ ಫೆಡರಲ್ ಸೆಪ್ಟೆಂಬರ್‌ನಲ್ಲಿ ರಿಸರ್ವ್ ಬಡ್ಡಿದರ ಕಡಿತದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ಷೇರುಗಳು ಈ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿವೆ.

ಹಿಂದಿನ ಸೆಷನ್‌ನಲ್ಲಿ ಶೇ. 2ರಷ್ಟು ಏರಿಕೆ ಕಂಡಿದ್ದ ಐಟಿ ಷೇರುಗಳು ಮತ್ತೆ ಶೇ. 0.7ರಷ್ಟು ಹೆಚ್ಚಳ ದಾಖಲಿಸಿದ್ದವು. ಎಲ್ಲ 13 ಪ್ರಮುಖ ವಲಯಗಳು ಲಾಭವನ್ನು ಕಂಡವು. ಅದರಲ್ಲಿಯೂ ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳು ಕ್ರಮವಾಗಿ ಶೇ. 0.4 ಮತ್ತು ಶೇ. 0.2 ಹೆಚ್ಚಳ ಕಂಡವು.

Continue Reading

ದೇಶ

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Nitin Gadkari: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಸಾರಿಗೆ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದಾರೆ. ”132 ಸೀಟುಗಳ ಬಸ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ವಿಮಾನದಲ್ಲಿರುವಂತೆ ಸಕಲ ಸೌಲಭ್ಯಗಳೂ ಇರಲಿದೆ. ಏರ್‌ ಹೋಸ್ಟೆಸ್‌ನಂತೆ ಬಸ್‌ ಹೋಸ್ಟೆಸ್‌ಗಳೂ ಕಾರ್ಯ ನಿರ್ವಹಿಸಲಿದ್ದು, ಈ ಬಸ್‌ನಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Nitin Gadkari
Koo

ಮುಂಬೈ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರು ಸಾರಿಗೆ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದಾರೆ. ”132 ಸೀಟುಗಳ ಬಸ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ವಿಮಾನದಲ್ಲಿರುವಂತೆ ಸಕಲ ಸೌಲಭ್ಯಗಳೂ ಇರಲಿದೆ. ಏರ್‌ ಹೋಸ್ಟೆಸ್‌ನಂತೆ ಬಸ್‌ ಹೋಸ್ಟೆಸ್‌ಗಳೂ ಕಾರ್ಯ ನಿರ್ವಹಿಸಲಿದ್ದು, ಈ ಬಸ್‌ನಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ” ಎಂದು ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ʼʼಪರಿಸರ ಮಾಲಿನ್ಯ ಎನ್ನುವುದು ಸದ್ಯ ದೇಶ, ಜಗತ್ತು ಎದುರಿಸುವ ಬಹುದೊಡ್ಡ ಸಮಸ್ಯೆ. ಹೀಗಾಗಿ ಸರ್ಕಾರ ಪರಿಸರಕ್ಕೆ ಹಾನಿ ಉಂಟು ಮಾಡದ ಪರ್ಯಾಯ ವ್ಯವಸ್ಥೆಗಳಿಗೆ ಒತ್ತು ನೀಡಲಿದೆ. ಅದರ ಭಾಗವಾಗಿ ಸಾರ್ವಜನಿಕ ಸಾರಿಗೆ ವಿಭಾಗದಲ್ಲಿಯೂ ಅಮೂಲಾಗ್ರ ಬದಲಾವಣೆ ಜಾರಿಗೆ ತರಲಾಗುವುದುʼʼ ಎಂದು ಹೇಳಿದ್ದಾರೆ.

ಕನಸಿನ ಯೋಜನೆ

ಈ ವೇಳೆ ಅವರು ತಮ್ಮ ಕನಸಿನ 132 ಸೀಟುಗಳ ಬಸ್‌ನ ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ. ʼʼ132 ಆಸನಗಳ ಬಸ್ ಅನ್ನು‌ ಪಚಯಿಸಲು ಮುಂದಾಗಿದ್ದೇವೆ. ಇದರ ಪ್ರಾಯೋಗಿಕ ಸಂಚಾರ ನಾಗ್ಪುರದಲ್ಲಿ ನಡೆಯಲಿದೆ. ಈ ಬಸ್‌ ವಿಮಾನದಂತಹ ಆಸನ ಮತ್ತು ಬಸ್ ಹೋಸ್ಟೆಸ್ ಅನ್ನು ಒಳಗೊಂಡಿದೆ. ಸಾಮಾನ್ಯ ಡೀಸೆಲ್ ಬಸ್‌ಗಳಿಗಿಂತ ಅಗ್ಗವಾಗಿರಲಿದೆ. ಮಾಲಿನ್ಯರಹಿತ ಶಕ್ತಿಯ ಮೂಲಗಳಲ್ಲಿ ಚಲಿಸಲಿದೆʼʼ ಎಂದು ವಿವರಿಸಿದ್ದಾರೆ. ʼʼಭಾರತವನ್ನು ಇಂಧನದ ಆಮದುದಾರ ದೇಶವನ್ನಾಗಿಸುವ ಬದಲು ಬದಲು ರಫ್ತುದಾರ ದೇಶವನ್ನಾಗಿಸುವುದೇ ನಮ್ಮ ಸರ್ಕಾರದ ಗುರಿʼʼ ಎಂದು ಅವರು ತಿಳಿಸಿದ್ದಾರೆ.

ಪರಿಸರ ಮಾಲಿನ್ಯ ಪ್ರಮುಖ ಸಮಸ್ಯೆ

ʼʼನಾವು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಪರಿಸರ ಮಾಲಿನ್ಯ ಮುಖ್ಯವಾದುದು. ದೇಶದಲ್ಲಿ ಅದರಲ್ಲಿಯೂ ರಾಜಧಾನಿ ದೆಹಲಿಯಲ್ಲಿ ವಾಯು, ಜಲ, ಶಬ್ದ ಮಾಲಿನ್ಯ ಮಿತಿ ಮೀರಿದೆ. ಹೀಗಾಗಿ ನಾವು ಮಾಲಿನ್ಯ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ಕಡಿಮೆ ವೆಚ್ಚದ, ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆ ಪರಿಚಯಿಸಲು ಚಿಂತನೆ ನಡೆಸಿದ್ದೇವೆ. ಅದರ ಭಾಗವಾಗಿ ಇಂಡಿಯನ್ ಆಯಿಲ್ 300 ಎಥೆನಾಲ್ ಪಂಪ್‌ಗಳನ್ನು ಸ್ಥಾಪಿಸಲಿದೆ. ಹೊಸ ಮಾದರಿಯ ವಾಹನ ನಿರ್ಮಾಣಕ್ಕೆ ತಯಾರಕರೂ ಮುಂದಾಗಿದ್ದಾರೆ. ಆದ್ದರಿಂದ 100 ರೂ. ಕೊಟ್ಟು ಒಂದು ಲೀಟರ್‌ ಪೆಟ್ರೋಲ್ ಖರೀದಿಸುವ ಬದಲು, 60 ರೂ. ಪಾವತಿಸಿ ಎಥೆನಾಲ್ ಖರೀದಿಸಬಹುದು. ಈ ಹೊಸ ಮಾದರಿಯ ವಾಹನವು ಶೇ. 60 ವಿದ್ಯುತ್ ಮತ್ತು ಶೇ. 40ರಷ್ಟು ಎಥೆನಾಲ್‌ನಲ್ಲಿ ಚಲಿಸಲಿದೆ. ಇದು ಮಾಲಿನ್ಯವನ್ನು ಸಹ ಕಡಿಮೆ ಮಾಡುತ್ತದೆ” ಎಂದು ಸಚಿವರು ಹೇಳಿದ್ದಾರೆ.

“ನಾವು ಟಾಟಾ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ನಾಗ್ಪುರದಲ್ಲಿ ಪ್ರಾಯೋಗಿಕ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ. ಜೆಕ್ ಗಣರಾಜ್ಯದಲ್ಲಿ ಮೂರು ಬಸ್ಸುಗಳನ್ನು ಸೇರಿಸಿ ಓಡಿಸುತ್ತಾರೆ. ಅದರಂತೆ ನಮ್ಮ ಈ ಯೋಜನೆ 132 ಸೀಟುಗಳ ಬಸ್‌ ಅನ್ನು ಹೊಂದಿದೆ. ಈ ಬಸ್‌ ರಿಂಗ್ ರಸ್ತೆಯಲ್ಲಿ 49 ಕಿ.ಮೀ. ಪ್ರಯಾಣಿಸುತ್ತದೆ. ಕೇವಲ 40 ಸೆಕೆಂಡು ಚಾರ್ಜ್ ಮಾಡಿದರೆ 40 ಕಿ.ಮೀ. ದೂರ ಸಂಚರಿಸಲಿದೆʼʼ ಎಂದು ಗಡ್ಕರಿ ತಿಳಿಸಿದ್ದಾರೆ.

ಬಸ್‌ನ ವೈಶಿಷ್ಟ್ಯ

“ಬಸ್‌ನಲ್ಲಿ ಎಲ್ಲ ಸೌಲಭ್ಯಗಳನ್ನು ಅಳವಡಿಸುವಂತೆ ಸೂಚಿಸಿದ್ದೇನೆ. ಸೀಟಿನ ಮುಂದೆ ಲ್ಯಾಪ್‌ಟಾಪ್‌ ಇಡಲು ಸ್ಥಳಾವಕಾಶ, ಹವಾನಿಯಂತ್ರಣ ವ್ಯವಸ್ಥೆ, ಆರಾಮದಾಯಕ ಕುರ್ಚಿಗಾಗಿ ಬೇಡಿಕೆ ಇಟ್ಟಿದ್ದೇನೆ. ಏರ್ ಹೋಸ್ಟೆಸ್‌ಗಳಂತೆ ಪ್ರಯಾಣಿಕರಿಗೆ ಹಣ್ಣು, ಪ್ಯಾಕ್ ಮಾಡಿದ ಆಹಾರ ಮತ್ತು ಪಾನೀಯಗಳನ್ನು ನೀಡಲು ಬಸ್ ಹೋಸ್ಟೆಸ್‌ಗಳು ಇರಲಿದ್ದಾರೆ. ನನ್ನ ಲೆಕ್ಕಾಚಾರದ ಪ್ರಕಾರ ಈ ಬಸ್‌ನ ವೆಚ್ಚ ಡೀಸೆಲ್ ಬಸ್‌ಗಿಂತ ಶೇ. 30ರಷ್ಟು ಕಡಿಮೆ ಇರಲಿದೆ. ಸೌರಶಕ್ತಿಯನ್ನು ಬಳಸಿದರೆ, ವೆಚ್ಚ ಇನ್ನೂ ಕಡಿಮೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಸಲಹೆಯನ್ನು ಸ್ವೀಕರಿಸಿದ್ದಕ್ಕಾಗಿ ಪೆಟ್ರೋಲಿಯಂ ಸಚಿವ ಹರ್ದೀಪ್ ಪುರಿ ಅವರಿಗೆ ಧನ್ಯವಾದ ಅರ್ಪಿಸಿದ ಗಡ್ಕರಿ, ʼʼಇಂಡಿಯನ್ ಆಯಿಲ್ ಕಸದಿಂದ 1 ಲಕ್ಷ ಲೀಟರ್ ಎಥೆನಾಲ್ ಮತ್ತು ಜೈವಿಕ ಬಿಟುಮೆನ್ ಉತ್ಪಾದಿಸುವ ಯೋಜನೆಯನ್ನು ಪ್ರಾರಂಭಿಸಿದೆ. 76,000 ಟನ್ ಜೈವಿಕ ವಾಯುಯಾನ ಇಂಧನವನ್ನು ಸಹ ಉತ್ಪಾದಿಸುತ್ತದೆʼʼ ಎಂದಿದ್ದಾರೆ.

ಇದನ್ನೂ ಓದಿ: Nitin Gadkari : ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

Continue Reading
Advertisement
BJP Protest
ಕರ್ನಾಟಕ2 mins ago

BJP Protest: ಪ್ರತಿಭಟನೆ ವೇಳೆ ಶಾಸಕ ವೇದವ್ಯಾಸ್ ಕಾಮತ್ ಧಮ್ಕಿ; ಕೆರಳಿದ ಪೊಲೀಸ್‌!

Narendra Modi
ದೇಶ8 mins ago

Narendra Modi: ಲೋಕಸಭಾ ಚುನಾವಣೆಯ ಫಲಿತಾಂಶದಿಂದ ದೇಶೀಯ ಮಾರುಕಟ್ಟೆಗೆ ಉತ್ತೇಜನ; ಮೋದಿ ಬಣ್ಣನೆ

Viral Video
Latest29 mins ago

Viral Video: ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

sudha murthy pm narendra modi
ಪ್ರಮುಖ ಸುದ್ದಿ37 mins ago

Sudha Murthy: ʼಹೆಣ್ಣುಮಕ್ಕಳಿಗೆ ಇದೊಂದು ಕೊಟ್ಟುಬಿಡಿ, ಪ್ಲೀಸ್‌ʼ ಎಂದ ಸುಧಾ ಮೂರ್ತಿ; ರಾಜ್ಯಸಭೆಯಲ್ಲಿ ಭಾಷಣಕ್ಕೆ ಮೋದಿ ಮೆಚ್ಚುಗೆ

James Anderson
ಕ್ರೀಡೆ42 mins ago

James Anderson: 41ನೇ ವಯಸ್ಸಿನಲ್ಲಿಯೂ 7 ವಿಕೆಟ್​ ಕಿತ್ತ ಜೇಮ್ಸ್ ಆಂಡರ್ಸನ್

Mangalore News
ಕರ್ನಾಟಕ52 mins ago

Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

Parliament Sessions
ದೇಶ1 hour ago

Parliament Sessions: “ಕಾಂಗ್ರೆಸ್‌ನದ್ದು ರಿಮೋಟ್‌ ಕಂಟ್ರೋಲ್‌ ಸರ್ಕಾರ”-ಸೋನಿಯಾ ವಿರುದ್ಧ ಮೋದಿ ವಾಗ್ಬಾಣ

Physical Abuse
ಕರ್ನಾಟಕ2 hours ago

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Narendra Modi
ದೇಶ2 hours ago

Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Double Ismart Steppa Maar electrifies with mass beats
ಟಾಲಿವುಡ್2 hours ago

Double Ismart: ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’: ಮೊದಲ ಹಾಡು ರಿಲೀಸ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ20 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌