Business Guide : ಮಾರುಕಟ್ಟೆಯಲ್ಲಿ ನಿಮ್ಮ ಪ್ರಾಡಕ್ಟ್‌ ಗೆಲ್ಲೋದು ಹೇಗೆ? - Vistara News

ವಾಣಿಜ್ಯ

Business Guide : ಮಾರುಕಟ್ಟೆಯಲ್ಲಿ ನಿಮ್ಮ ಪ್ರಾಡಕ್ಟ್‌ ಗೆಲ್ಲೋದು ಹೇಗೆ?

ಪ್ರತಿಯೊಂದು ಸ್ಟಾರ್ಟಪ್‌ ಕೂಡ ತನ್ನ ಉತ್ಪನ್ನ ಅಥವಾ ಸೇವೆಗಳು ಗ್ರಾಹಕರ ಅಗತ್ಯ ಮತ್ತು ಮಾರುಕಟ್ಟೆಯ ಬೇಡಿಕೆಯನ್ನು ಈಡೇರಿಸುತ್ತವೆಯೇ ಎಂಬ‌ ( Business Guide ) ಅಗ್ನಿ ಪರೀಕ್ಷೆಯನ್ನು ದಾಟಬೇಕಾಗುತ್ತದೆ. ಇದು ಹೇಗೆ? ಇಲ್ಲಿದೆ ಡಿಟೇಲ್ಸ್

VISTARANEWS.COM


on

business guide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಹುತೇಕ ಎಲ್ಲ ಸ್ಟಾರ್ಟಪ್‌ಗಳು, ಉದ್ಯಮಿಗಳು ಮೊದಲು ಈ ಪ್ರಶ್ನೆಗೆ ಉತ್ತರವನ್ನು ಕಂಡುಕೊಳ್ಳಲೇಬೇಕಾಗುತ್ತದೆ. ಇದುವೇ ಅವರ ಯಶಸ್ಸನ್ನು ನಿರ್ಧರಿಸುವ ಮಾನದಂಡ. (Business Guide ) ಮಾರುಕಟ್ಟೆಯಲ್ಲಿ ನಿಮ್ಮ ಪ್ರಾಡೆಕ್ಟ್‌ ಫಿಟ್‌ ಆಗುತ್ತದೆಯೇ? ಅದನ್ನು ಗೆಲ್ಲಿಸುವುದು ಹೇಗೆ? ಎಂಬುದನ್ನು ಅರಿತುಕೊಳ್ಳದಿದ್ದರೆ, ಯಶಸ್ಸು ಸಿಗುವುದಿಲ್ಲ. 80% ಸ್ಟಾರ್ಟಪ್‌ಗಳು ಇದನ್ನು ಅರಿತುಕೊಳ್ಳದೆ ವಿಫಲವಾಗುತ್ತವೆ.

ಸಾಮಾನ್ಯವಾಗಿ ಸ್ಟಾರ್ಟಪ್‌ಗಳು ಸಣ್ಣ ಮಟ್ಟಿನ ಬಂಡವಾಳದೊಂದಿಗೆ ಶುರುವಾಗುತ್ತವೆ. ಅದು ಒಳ್ಳೆಯದು ಕೂಡಾ. ತಮ್ಮದೇ ಉಳಿತಾಯ, ಸ್ನೇಹಿತರು, ಬಂಧು ಬಳಗದವರು ನೀಡಿದ ಕೈಸಾಲ, ಸಣ್ಣ ಪುಟ್ಟ ಸಾಲಗಳನ್ನು ಪಡೆದು ಪುಟ್ಟದಾಗಿ ಬಿಸಿನೆಸ್‌ ಆರಂಭಿಸುವವರೇ ಹೆಚ್ಚು. ನೀವು ಅಂಬೆಗಾಲಿಟ್ಟು ಬಿಸಿನೆಸ್‌ ಮಾಡುವ ಹೊತ್ತಿನಲ್ಲಿ ಎದುರಾಗುವ ಮೂಲಭೂತ ಪ್ರಶ್ನೆ ಏನೆಂದರೆ-ನಿಮ್ಮ ಪ್ರಾಡಕ್ಟ್‌ ಮಾರ್ಕೆಟ್‌ಗೆ ಫಿಟ್‌ ಆಗುತ್ತಾ? ಎಂಬುದು. ಅದಕ್ಕೆ ಉತ್ತರ ಕಂಡುಕೊಳ್ಳುವ ತನಕ ನೆಮ್ಮದಿ ಇರುವುದಿಲ್ಲ. ಒಂದು ಸಲ ಫಿಟ್‌ ಆಗುತ್ತದೆ ಎಂಬುದು ಸಾಬೀತಾದ ಬಳಿಕ ಹೆಚ್ಚುವರಿ ಫಂಡ್‌ ಸಂಗ್ರಹಿಸುತ್ತೀರಿ. ಬಿಸಿನೆಸ್‌ ಅನ್ನು ಮತ್ತಷ್ಟು ವಿಸ್ತರಿಸಲು ರೆಡಿಯಾಗುತ್ತೀರಿ. ಹಾಗಾದರೆ ನಿಮ್ಮ ಪ್ರಾಡಕ್ಟ್‌ ಮಾರುಕಟ್ಟೆಗೆ ಫಿಟ್‌ ಆಗುತ್ತದೆಯೇ, ಇಲ್ಲವೇ ಎಂಬುದನ್ನು ತಿಳಿಯುವುದು ಹೇಗೆ? ಇದಕ್ಕಾಗಿಯೇ ಕಾರ್ಯತಂತ್ರವಿದೆ. ಬಿಸಿನೆಸ್‌ ಭಾಷೆಯಲ್ಲಿ ಇದನ್ನು ಪ್ರಾಡಕ್ಟ್-ಮಾರ್ಕೆಟ್‌ ಫಿಟ್‌ ಎನ್ನುತ್ತಾರೆ. ಈ ಪ್ರಕ್ರಿಯೆ ಹೀಗಿರುತ್ತದೆ ನೋಡಿ.

ನಿಮ್ಮ ಮಾರುಕಟ್ಟೆಯನ್ನು ಗುರುತಿಸಿ: ಮೊದಲು ಸಮಾಜದ ಸಮಸ್ಯೆಗಳಿಗೆ ನಿಮ್ಮ ಉತ್ಪನ್ನ ಅಥವಾ ಸೇವೆಯಿಂದ ಪ್ರಯೋಜನ ಸಿಗುವುದೇ ಎಂಬುದನ್ನು ಖಾತರಿಪಡಿಸಿ. ಯಾವ ಗ್ರಾಹಕರನ್ನು ಗುರಿಯಾಗಿಟ್ಟುಕೊಂಡು ಉತ್ಪನ್ನವನ್ನು ತಯಾರಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿರಲಿ. ಯಾವ ಮಾರ್ಕೆಟ್‌ ನಿಮ್ಮ ಟಾರ್ಗೆಟ್‌ ಎಂಬುದು ಖಚಿತವಾಗಿರಬೇಕು. ಆಗ ನಿಮ್ಮ ಉತ್ಪನ್ನ ಅಥವಾ ಸೇವೆಯನ್ನು ನಿರ್ದಿಷ್ಟ ಗ್ರಾಹಕರಿಗೆ ತಲುಪಿಸುವುದು ಸುಲಭವಾಗುತ್ತದೆ. ಗ್ರಾಹಕರ ಸಮಸ್ಯೆಗಳಿಗೆ ಉತ್ಪನ್ನ ಅಥವಾ ಸೇವೆಗಳು ಸೂಕ್ತ ಪರಿಹಾರವಾಗುವುದು ಮುಖ್ಯ.

ಗ್ರಾಹಕರ ಪ್ರತಿಕ್ರಿಯೆಗಳನ್ನು ಪಡೆಯಿರಿ: ನಿಮ್ಮ ಉತ್ಪನ್ನ ಅಥವಾ ಸೇವೆಯನ್ನು ನಿಮ್ಮ ಸ್ನೇಹಿತರು ಅಥವಾ ಬಂಧುಗಳು ನಿಮ್ಮ ಮೇಲಿನ ಪ್ರೀತಿ- ಅಕ್ಕರೆ-ಮಮಕಾರಗಳಿಂದ ಖರೀದಿಸಬಹುದು. ಅದು ಆರಂಭಿಕ ಹಂತವಷ್ಟೇ. ಆದರೆ ಅಷ್ಟೇ ಸಾಕಾಗುವುದಿಲ್ಲ. ಮಾರುಕಟ್ಟೆಯಲ್ಲಿ ಅಪರಿಚಿತ ಗ್ರಾಹಕರ ದೊಡ್ಡ ವಲಯದಲ್ಲಿ ನಿಮ್ಮ ಪ್ರಾಡಕ್ಟ್‌ ಜನಪ್ರಿಯವಾಗಬೇಕು. ಆದ್ದರಿಂದ ನಿಮ್ಮ ಗ್ರಾಹಕರು ಏನನ್ನು ಬಯಸುತ್ತಾರೆ? ಎಂಬುದನ್ನು ತಿಳಿದುಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಾಹಕರ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳಬೇಕು. ನೀವು ಎಲ್ಲಿ ಸುಧಾರಿಸಿಕೊಳ್ಳಬೇಕು ಎಂಬುದನ್ನು ಅರಿಯಲು ಫೀಡ್‌ ಬ್ಯಾಕ್‌ ಅವಶ್ಯಕ.

ನಿಮ್ಮ ಪ್ರತಿಸ್ಪರ್ಧಿಗಳ ಬಗ್ಗೆ ಸಂಶೋಧನೆ ನಡೆಸಿ: ಮಾರುಕಟ್ಟೆಯಲ್ಲಿ ನಿಮ್ಮ ಪ್ರತಿಸ್ಪರ್ಧಿಗಳು ಯಾವೆಲ್ಲ ಉತ್ಪನ್ನಗಳು ಮತ್ತು ಸೇವೆಯನ್ನು ಕೊಡುತ್ತಿದ್ದಾರೆ? ಅದರ ಗುಣಮಟ್ಟ, ದರ ಎಷ್ಟು? ಎಂಬಿತ್ಯಾದಿ ವಿಚಾರಗಳನ್ನು ತಿಳಿಯಿರಿ. ನಿಮ್ಮ ಉತ್ಪನ್ನವನ್ನು ಸ್ಪರ್ಧಿಗಳದ್ದಕ್ಕೆ ಹೋಲಿಸಿ. ಎಲ್ಲಿ ಸುಧಾರಿಸಬಹುದು, ಭಿನ್ನವಾಗಿರಬಹುದು ಎಂಬುದು ಮನವರಿಕೆಯಾಗುತ್ತದೆ.

ಇದನ್ನೂ ಓದಿ: Suburban Rail: ಬೆಂಗಳೂರು ಉಪನಗರ ರೈಲು; ಜರ್ಮನಿಯ ಬ್ಯಾಂಕ್‌ ಜತೆ ಕೆ-ರೈಡ್‌ ಒಪ್ಪಂದ

ವ್ಯಾಪಾರ ಮತ್ತು ಬೆಳವಣಿಗೆಗೆ ವಿಶ್ಲೇಷಣೆ: ನಿಮ್ಮ ಸೇಲ್ಸ್‌ ಮತ್ತು ವ್ಯಾಪಾರದ ಬೆಳವಣಿಗೆ ಕುರಿತ ಅಂಕಿ ಅಂಶಗಳನ್ನು ನಿಯಮಿತವಾಗಿ ವಿಶ್ಲೇಷಣೆಗೆ ಒಳಪಡಿಸಿ. ನಿಮ್ಮ ಉತ್ಪನ್ನ ಮತ್ತು ಸೇವೆಯು ಉನ್ನತ ಮಟ್ಟದಲ್ಲಿ ಪ್ರಗತಿ ಸಾಧಿಸಿದ್ದರೆ, ಗ್ರಾಹಕರ ಮನಗೆದ್ದಿದೆ ಎಂದು ಅರ್ಥ. ಇದು ನಿಮ್ಮ ಪ್ರಾಡಕ್ಟ್‌ ಮಾರುಕಟ್ಟೆಗೆ ಫಿಟ್‌ ಆಗಿದೆ ಎಂಬುದನ್ನು ಸೂಚಿಸುತ್ತದೆ.

ನೀವು ಯಾವ ಉತ್ಪನ್ನವನ್ನು ಮಾರಾಟ ಮಾಡುತ್ತೀರೋ, ಅದಕ್ಕೊಂದು ಬೇಡಿಕೆ ಮಾರುಕಟ್ಟೆಯಲ್ಲಿ ಸೃಷ್ಟಿಯಾಗಬೇಕು. ಆಗ ಮಾತ್ರ ಯಶಸ್ಸು ನಿಮ್ಮದಾಗುತ್ತದೆ. ನಿಮ್ಮ ಪ್ರಾಡಕ್ಟ್‌ ಗೆಲ್ಲಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕೆಲವೊಂದು ಪ್ರಶ್ನೆಗಳನ್ನು ನಿಮಗೆ ನೀವೇ ಕೇಳಿಕೊಳ್ಳಿ.

ನಿಮ್ಮ ಉತ್ಪನ್ನ ಆರ್ಗಾನಿಕ್‌ ಆಗಿ ಬೆಳೆಯುತ್ತಿದೆಯೇ? ನಿಮ್ಮ ಪ್ರಾಡಕ್ಟ್‌ ಬಗ್ಗೆ ಜನ ಅವರಾಗಿಯೇ ಬೇರೆಯವರಿಗೆ ತಿಳಿಸುತ್ತಿದ್ದಾರೆಯೇ? ನಿಮ್ಮ ಉತ್ಪನ್ನವನ್ನು ಖರೀದಿಸಲು ಹಣ ಖರ್ಚು ಮಾಡುವುದು ಮೌಲ್ಯಯುತವಾದದ್ದು ಎಂದು ಜನ ಭಾವಿಸುತ್ತಿದ್ದಾರೆಯೇ ಎಂಬುದನ್ನು ತಿಳಿಯಿರಿ.

ಇದನ್ನೂ ಓದಿ: The rule of 72 : ನಿಮ್ಮ ಹಣ ಯಾವಾಗ ಡಬಲ್‌ ಆಗುತ್ತೆ ಅಂತ ಹೀಗೆ ತಿಳಿಯಿರಿ

ಅಂತರ್ಜಾಲ ದಿಗ್ಗಜ ಗೂಗಲ್‌ ಆರಂಭಿಕ ದಿನಗಳಲ್ಲಿ ಇತರ ಸರ್ಚ್‌ ಎಂಜಿನ್‌ಗಳ ಜತೆಗೆ ಸ್ಪರ್ಧಿಸುತ್ತಿತ್ತು. ಆದರೆ 2003ರಲ್ಲಿ ಹೊಸ ಪರಿಕಲ್ಪನೆಯಾದ ಆಡ್‌ಸೆನ್ಸ್‌ ಅನ್ನು ಅಭಿವೃದ್ಧಿಪಡಿಸಿ ಯಶಸ್ವಿಯಾಯಿತು. ಸ್ಪರ್ಧಿಗಳನ್ನು ಹಿಂದಿಕ್ಕಿತು. ಸರ್ಚ್‌ ಪೇಜ್‌ಗಿಂತ ಆಚೆಯೂ ಜಾಹೀರಾತುಗಳನ್ನು ಡಿಸ್‌ ಪ್ಲೇ ಮಾಡಿದರೆ ಲಾಭವಾದೀತು ಎಂದು ಗೂಗಲ್‌ನ ನಾಯಕರು ಭಾವಿಸಿದ್ದರು. ಆಡ್‌ ಸೆನ್ಸ್‌ ಈ ನಿಟ್ಟಿನಲ್ಲಿ ಸಹಕರಿಸಿತು. ಆಡ್‌ ಸೆನ್ಸ್‌ ಹೊಸ ತಂತ್ರಜ್ಞಾನವನ್ನು ಬಳಸಿ ವೆಬ್‌ ಪೇಜ್‌ ಅನ್ನು ಸ್ಕ್ಯಾನ್‌ ಮಾಡುತ್ತದೆ. ಹಾಗೂ ರಿಲೆವೆಂಟ್‌ ಆಗುವ ಜಾಹೀರಾತುಗಳನ್ನು ತನ್ನಿಂತಾನೆ ಪ್ರದರ್ಶಿಸುತ್ತದೆ. ಟಾಟಾ, ರಿಲಯನ್ಸ್‌, ಅದಾನಿ ಗ್ರೂಪ್‌, ಮಹೀಂದ್ರಾ & ಮಹೀಂದ್ರಾ, ಆಮೆಜಾನ್‌, ವಾಲ್‌ ಮಾರ್ಟ್‌ ಹೀಗೆ ದೇಶೀಯ ಹಾಗೂ ಅಂತಾರಾಷ್ಟ್ರೀಯ ಕಂಪನಿಗಳು ಮಾರುಕಟ್ಟೆಯಲ್ಲಿ ಯಶಸ್ವಿಯಾಗಲು ಪ್ರಮುಖ ಕಾರಣ ಅವುಗಳ ಉತ್ಪನ್ನ ಮತ್ತು ಸೇವೆಗಳು ಮಾರುಕಟ್ಟೆಗೆ ಫಿಟ್‌ ಆಗಿರುವುದೇ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Liquor Price Karnataka: ಶ್ರೀಮಂತರಿಗೆ ಮತ್ತು, ಬಡವರಿಗೆ ಕುತ್ತು! ಪ್ರೀಮಿಯಂ ಮದ್ಯ ದರ ಇಳಿಕೆ, ಬಡವರ ಎಣ್ಣೆ ರೇಟ್‌ ಏರಿಕೆ?

Liquor Price Karnataka: ಈ ಹಿಂದೆ ಜನವರಿ 1ರಂದು ಕಂಪನಿಗಳು ಮದ್ಯದ ದರ ಏರಿಕೆ ಮಾಡಿದ್ದವು. ಓಲ್ಡ್‌ ಟ್ಯಾವರ್ನ್‌(ಒಟಿ), ಬ್ಲೆಂಡರ್ಸ್‌ ಪ್ರೈಡ್‌ (ಬಿಪಿ), 8 ಪಿಎಂ ಲಿಕ್ಕರ್ ದರಗಳನ್ನು 20 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ ಮದ್ಯದ ದರಗಳನ್ನು ಸರ್ಕಾರ ಏರಿಸಲು ಮುಂದಾಗಿದೆ. ಅದರಲ್ಲೂ ರಾಜ್ಯದ ಕೂಲಿ ಕಾರ್ಮಿಕರು, ಬಡ ವರ್ಗದ ಜನ ಅತೀ ಹೆಚ್ಚು ಸೇವಿಸುವ ಎಣ್ಣೆಗಳ ದರವೇ ಏರಿಕೆಯಾಗಲಿದೆ.

VISTARANEWS.COM


on

Liquor Price karnataka
Koo

ಬೆಂಗಳೂರು: ಜುಲೈ 1ರಿಂದ ಮದ್ಯದ ಹೊಸ ದರಗಳನ್ನು (Liquor Price Karnataka) ಜಾರಿ ಮಾಡಲು ರಾಜ್ಯದ ಸಿಎಂ ಸಿದ್ದರಾಮಯ್ಯ (CM Siddaramaiah) ಸರಕಾರ ಮುಂದಾಗಿದೆ. ಗ್ಯಾರಂಟಿ ಯೋಜನೆಗಳಿಗೆ (Guarantee schemes) ಹಣ ಹೊಂಚಲು ಸಿಕ್ಕ ಸಿಕ್ಕಲ್ಲೆಲ್ಲಾ ದರ ಏರಿಕೆ (Price hike) ಮಾಡುತ್ತಿರುವ ಸರಕಾರ, ಇದೀಗ ಬಡವರ ಎಣ್ಣೆ ರೇಟ್‌ ಏರಿಸಲು ಯೋಚಿಸಿದೆ. ಅದೇ ಸಮಯಕ್ಕೆ, ಶ್ರೀಮಂತರು ಸೇವಿಸುವ ಪ್ರೀಮಿಯಂ ಬ್ರಾಂಡ್‌ಗಳ (Premium liquor) ಮದ್ಯಗಳ ಬೆಲೆ ಇಳಿಕೆಗೂ ಚಿಂತಿಸುತ್ತಿದೆ.

ಈ ಹಿಂದೆ ಜನವರಿ 1ರಂದು ಕಂಪನಿಗಳು ಮದ್ಯದ ದರ ಏರಿಕೆ ಮಾಡಿದ್ದವು. ಓಲ್ಡ್‌ ಟ್ಯಾವರ್ನ್‌(ಒಟಿ), ಬ್ಲೆಂಡರ್ಸ್‌ ಪ್ರೈಡ್‌ (ಬಿಪಿ), 8 ಪಿಎಂ ಲಿಕ್ಕರ್ ದರಗಳನ್ನು 20 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ ಮದ್ಯದ ದರಗಳನ್ನು ಸರ್ಕಾರ ಏರಿಸಲು ಮುಂದಾಗಿದೆ. ಅದರಲ್ಲೂ ರಾಜ್ಯದ ಕೂಲಿ ಕಾರ್ಮಿಕರು, ಬಡ ವರ್ಗದ ಜನ ಅತೀ ಹೆಚ್ಚು ಸೇವಿಸುವ ಎಣ್ಣೆಗಳ ದರವೇ ಏರಿಕೆಯಾಗಲಿದೆ.

ಹಾಲಿ ಒಟಿ ವಿಸ್ಕಿ 180 mlಗೆ 123 ರೂಪಾಯಿ ಇದೆ. ಜುಲೈ 1ರಿಂದ ಒಟಿ ಬೆಲೆ 130 ರೂಪಾಯಿ ನಿಗದಿಯಾಗಲಿದೆ. 8 ಪಿಎಂ ವಿಸ್ಕಿ 123 ರೂ. ಯಿಂದ 130ಕ್ಕೇರಿಕೆ ಸಾಧ್ಯತೆ ಇದೆ. ಚಾಯ್ಸ್ 80 ರೂಪಾಯಿ ಇದ್ದು ಜುಲೈನಿಂದ 83 ರೂಪಾಯಿ, ಹೈವರ್ಡ್ಸ್ 80 ರೂಪಾಯಿಯಿಂದ 83 ರೂಪಾಯಿ, ಬಿಪಿ ವಿಸ್ಕಿ ದರ ಹಾಲಿ 159 ರೂಪಾಯಿ ಇದ್ದು, ಜುಲೈನಿಂದ 154 ರೂಪಾಯಿ ಆಗುವ ಸಾಧ್ಯತೆ ಇದೆ.

ಇದೇ ವೇಳೆಗೆ ಬೆಲೆಬಾಳುವ ಪ್ರೀಮಿಯಂ ಮದ್ಯಗಳ ದರಗಳಲ್ಲಿ ಇಳಿಕೆಯಾಗುತ್ತಿದೆ. ಕ್ವಾರ್ಟರ್‌ಗೆ 300 ರೂಪಾಯಿ ಮೇಲಿರುವ ಬ್ರ್ಯಾಂಡ್‌ಗಳ ದರ 60ರಿಂದ 100 ರೂಪಾಯಿ ಇಳಿಕೆಯಾಗಲಿದೆ. 383 ರೂಪಾಯಿ ಬೆಲೆ ಬಾಳುವ ಮದ್ಯ 295 ರೂ.ಗೆ, 680 ರೂ. ಬೆಲೆ ಬಾಳುವ ಮದ್ಯ 595 ರೂಪಾಯಿಗೆ ಇಳಿಕೆ ಆಗುವ ಸಾಧ್ಯತೆ ಇದೆ.

ಈಗ 750 ಎಂ.ಎಲ್. ಗಾತ್ರದ ಬಾಟಲಿಗೆ ₹2,000 ದರ ಇರುವ ಬ್ರಾಂಡ್‌ಗಳ ಮದ್ಯದ ದರವು ಜುಲೈ 1ರಿಂದ ₹1,700ರಿಂದ ₹1,800ಕ್ಕೆ ಇಳಿಕೆಯಾಗಲಿದೆ. ಪ್ರತಿ ಬಾಟಲಿಗೆ ₹5,000 ದರ ಇರುವ ಬ್ರಾಂಡ್ ಮದ್ಯಗಳ ದರ ₹3,600ರಿಂದ 23,700ಕ್ಕೆ ಇಳಿಯಲಿದೆ. ಪ್ರತಿ ಬಾಟಲಿಗೆ 27,100 ಇರುವ ಮದ್ಯದ ದರ 5,200ರ ಅಸುಪಾಸಿಗೆ ಕಡಿಮೆಯಾಗುವ ಸಾಧ್ಯತೆಯೂ ಇದೆ.

ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್‌ಗಳ ಮದ್ಯದ ದರ ಸಾಕಷ್ಟು ದುಬಾರಿಯೇ ಇದೆ. ಈ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದ ಸರಕಾರ, ಜುಲೈ 1ರಿಂದ ಪರಿಷ್ಕೃತ ಮದ್ಯ ದರ ಅನ್ವಯಿಸಲಿದೆ ಎಂದು ಗೊತ್ತಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂಚಬೇಕಾದ ಸ್ಥಿತಿಯಲ್ಲಿರುವ ಸರಕಾರ, ವರಮಾನ ಹೆಚ್ಚಳಕ್ಕಾಗಿ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಇಳಿಕೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ಚಿನ್ನದ ದರ

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 26) ಚಿನ್ನದ ಬೆಲೆ ಇಳಿಕೆಯಾಗಿದೆ. ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ದರ ಇಳಿಕೆಯಾಗಿತ್ತು. ಮಂಗಳವಾರ ಅದೇ ದರ ಕಾಯ್ದುಕೊಂಡಿದ್ದರೆ ಇಂದು ಮತ್ತೆ ಇಳಿಕೆಯಾಗಿದೆ. ಹಾಗಾದರೆ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಜೂನ್‌ 26) ಚಿನ್ನದ ಬೆಲೆ ಇಳಿಕೆಯಾಗಿದೆ (Gold Rate Today). ಶನಿವಾರ ಬೆಲೆ ಇಳಿಕೆಯಾಗಿದ್ದರೆ ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಸೋಮವಾರ ಮತ್ತೆ ದರ ಇಳಿಕೆಯಾಗಿತ್ತು. ಮಂಗಳವಾರ ಅದೇ ದರ ಕಾಯ್ದುಕೊಂಡಿದ್ದರೆ ಇಂದು ಮತ್ತೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ₹ 25 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹ 23 ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,600 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,200 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,800. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,000 ಮತ್ತು ₹ 6,60,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,600 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,000 ಮತ್ತು ₹ 7,20,000 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,615 ₹ 7,215
ಮುಂಬೈ₹ 6,600 ₹ 7,200
ಬೆಂಗಳೂರು₹ 6,600₹ 7,200
ಚೆನ್ನೈ₹ 6,660 ₹ 7,266

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 90.95 ಹಾಗೂ 8 ಗ್ರಾಂಗೆ ₹ 727.60 ಇದೆ. 10 ಗ್ರಾಂಗೆ ₹ 909.50 ಹಾಗೂ 1 ಕಿಲೋಗ್ರಾಂಗೆ ₹ 90,950 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Nita Ambani: ಕಾಶಿಯಲ್ಲಿ ಮದುವೆ ಆಮಂತ್ರಣ ಪೂಜೆ; ಚಾಟ್‌ ಅಂಗಡಿಗೂ ಭೇಟಿ ನೀಡಿದ ನೀತಾ ಅಂಬಾನಿ

Continue Reading

ಬೆಂಗಳೂರು

Tata Motors: ಬಜಾಜ್ ಫೈನಾನ್ಸ್ ಜತೆ ಪಾಲುದಾರಿಕೆ ಮಾಡಿಕೊಂಡ ಟಾಟಾ ಮೋಟಾರ್ಸ್

Tata Motors: ಟಾಟಾ ಮೋಟಾರ್ಸ್, ದೇಶದ ಅತಿದೊಡ್ಡ ಹಣಕಾಸು ಸೇವಾ ಗುಂಪುಗಳಲ್ಲಿ ಒಂದಾದ ಬಜಾಜ್ ಫಿನ್‌ಸರ್ವ್ ಲಿಮಿಟೆಡ್‌ನ ಭಾಗವಾಗಿರುವ ಬಜಾಜ್ ಫೈನಾನ್ಸ್ ಲಿಮಿಟೆಡ್‌ನೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ (ಎಂಓಯು) ಸಹಿ ಹಾಕಿದೆ. ಈ ಮೂಲಕ ಬಜಾಜ್ ಫೈನಾನ್ಸ್ ಸಂಸ್ಥೆ ಟಾಟಾ ಮೋಟಾರ್ಸ್‌ನ ಸಂಪೂರ್ಣ ವಾಣಿಜ್ಯ ವಾಹನ ಉತ್ಪನ್ನಗಳಿಗೆ ಹಣಕಾಸು ವ್ಯವಸ್ಥೆ ಒದಗಿಸುತ್ತದೆ.

VISTARANEWS.COM


on

Tata Motors has partnered with Bajaj Finance
Koo

ಬೆಂಗಳೂರು: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್, ದೇಶದ ಅತಿದೊಡ್ಡ ಹಣಕಾಸು ಸೇವಾ ಗುಂಪುಗಳಲ್ಲಿ ಒಂದಾದ ಬಜಾಜ್ ಫಿನ್‌ಸರ್ವ್ ಲಿಮಿಟೆಡ್‌ನ ಭಾಗವಾಗಿರುವ ಬಜಾಜ್ ಫೈನಾನ್ಸ್ ಲಿಮಿಟೆಡ್‌ನೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಓಯು) ಸಹಿ ಹಾಕಿದೆ. ಈ ಮೂಲಕ ಬಜಾಜ್ ಫೈನಾನ್ಸ್ ಸಂಸ್ಥೆ ಟಾಟಾ ಮೋಟಾರ್ಸ್‌ನ (Tata Motors) ಸಂಪೂರ್ಣ ವಾಣಿಜ್ಯ ವಾಹನ ಉತ್ಪನ್ನಗಳಿಗೆ ಹಣಕಾಸು ವ್ಯವಸ್ಥೆ ಒದಗಿಸುತ್ತದೆ ಮತ್ತು ಗ್ರಾಹಕರು ಕಂಪನಿಯ ವಿಸ್ತಾರವಾದ ವ್ಯಾಪ್ತಿ, ಸ್ಪರ್ಧಾತ್ಮಕ ಬಡ್ಡಿ ದರಗಳು, ಫ್ಲೆಕ್ಸಿ ಲೋನ್ ಮತ್ತು ಡಿಜಿಟಲ್ ಆಧರಿತ ಸಾಲ ಪ್ರಕ್ರಿಯೆಗಳ ಪ್ರಯೋಜನಗಳನ್ನು ಪಡೆಯುತ್ತಾರೆ.

ಈ ಕುರಿತು ಟಾಟಾ ಮೋಟಾರ್ಸ್ ಕಮರ್ಷಿಯಲ್ ವೆಹಿಕಲ್ಸ್ ಟ್ರಕ್ಸ್ ವೈಸ್ ಪ್ರೆಸಿಡೆಂಟ್ ಮತ್ತು ಬಿಸಿನೆಸ್ ಹೆಡ್ ರಾಜೇಶ್ ಕೌಲ್ ಮಾತನಾಡಿ, ಗ್ರಾಹಕರ ಸಂತೋಷಕ್ಕಾಗಿ ಉನ್ನತ ದರ್ಜೆಯ ಉತ್ಪನ್ನಗಳನ್ನು ಒದಗಿಸುವ ನಮ್ಮ ದೃಷ್ಟಿಯನ್ನು ಹೊಂದಿರುವ ಕಂಪನಿಯಾದ ಬಜಾಜ್ ಫೈನಾನ್ಸ್ ಜತೆ ಪಾಲುದಾರಿಕೆ ಹೊಂದಲು ನಾವು ಸಂತೋಷ ಪಡುತ್ತೇವೆ. ವಾಣಿಜ್ಯ ವಾಹನಗಳ ಫೈನಾನ್ಸಿಂಗ್‌ ಕ್ಷೇತ್ರದ ಅವರ ಈ ಆರಂಭಿಕ ಹೆಜ್ಜೆಯು ಸಾರಿಗೆ ವಲಯದ ಅಗಾಧ ಸಾಮ್ರಾಜ್ಯವನ್ನು ಅವರದನ್ನಾಗಿ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ನಾವಂದು ಕೊಂಡಿದ್ದೇವೆ.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ಜತೆಗೆ ಈ ಪಾಲುದಾರಿಕೆಯು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಜಾಜ್ ಫೈನಾನ್ಸ್‌ನ ದೊಡ್ಡ ನೆಟ್‌ವರ್ಕ್‌ನ ಪ್ರಯೋಜನವನ್ನು ನೀಡುತ್ತದೆ. ಗ್ರಾಹಕರು ಅವಶ್ಯಕತೆಗಳಿಗೆ ಅನುಗುಣವಾಗಿ ಹಣಕಾಸು ಪರಿಹಾರಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ನಮ್ಮ ಮೌಲ್ಯಯುತ ಗ್ರಾಹಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಬಜಾಜ್ ಫೈನಾನ್ಸ್‌ನ ಉಪ ವ್ಯವಸ್ಥಾಪಕ ನಿರ್ದೇಶಕ ಅನುಪ್ ಸಹಾ ಮಾತನಾಡಿ, ಬಜಾಜ್ ಫೈನಾನ್ಸ್‌ನಲ್ಲಿನ ನಮ್ಮ ವ್ಯವಹಾರದ ನೀತಿಯಲ್ಲಿ ಗ್ರಾಹಕರ ಕೇಂದ್ರಿತತೆ ಬೇರೂರಿದೆ. ನಾವು ಗ್ರಾಹಕರಿಗೆ ಅನುಕೂಲಕರ ಹಣಕಾಸು ಪರಿಹಾರಗಳನ್ನು ಒದಗಿಸುತ್ತೇವೆ. ಆ ಮೂಲಕ ಅವರು ಮಾಲೀಕತ್ವದ ಸಂತೋಷಕರ ಅನುಭವವನ್ನು ಹೊಂದುತ್ತಾರೆ. ಟಾಟಾ ಮೋಟಾರ್ಸ್ ಜತೆಗಿನ ನಮ್ಮ ಪಾಲುದಾರಿಕೆಯು ಈ ಬದ್ಧತೆಗೆ ಪುರಾವೆಯಾಗಿದೆ. ಇಂಡಿಯಾ ಸ್ಟಾಕ್ ಅನ್ನು ಬಳಸಿಕೊಂಡು ನಮ್ಮ ಅತ್ಯುತ್ತಮ- ದರ್ಜೆಯ ವ್ಯವಸ್ಥೆಯ ಮೂಲಕ ಗ್ರಾಹಕರಿಗೆ ವಾಣಿಜ್ಯ ವಾಹನವನ್ನು ಖರೀದಿಸುವ ಪ್ರಕ್ರಿಯೆಯನ್ನು ಸುಲಭ ಮತ್ತು ತೊಂದರೆ- ಮುಕ್ತಗೊಳಿಸುವ ಗುರಿಯನ್ನು ಹೊಂದಿದ್ದೇವೆ. ಪಾಲುದಾರಿಕೆಯು ಹೆಚ್ಚಿನ ವಾಣಿಜ್ಯ ವಾಹನ ಮಾಲೀಕರಿಗೆ ಹಣಕಾಸು ಪರಿಹಾರಗಳನ್ನು ಒದಗಿಸಿ ಸಶಕ್ತಗೊಳಿಸುತ್ತದೆ ಎಂದು ನಮಗೆ ವಿಶ್ವಾಸವಿದೆ ಎಂದು ಹೇಳಿದರು.

ಟಾಟಾ ಮೋಟಾರ್ಸ್ 1-ಟನ್‌ನಿಂದ 55-ಟನ್ ತೂಕದ ಸರಕು ವಾಹನಗಳು ಮತ್ತು 10-ಆಸನಗಳಿಂದ 51-ಆಸನಗಳ ಸಮೂಹ ಚಲನಶೀಲತೆ ಪರಿಹಾರಗಳು ಅಂದರೆ ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳನ್ನು ಒದಗಿಸುತ್ತದೆ. ಸಣ್ಣ ವಾಣಿಜ್ಯ ವಾಹನಗಳು ಮತ್ತು ಪಿಕಪ್‌ಗಳು, ಟ್ರಕ್‌ಗಳು ಮತ್ತು ಬಸ್‌ಗಳನ್ನು ಒದಗಿಸುವ ಮೂಲಕ ಸರಕು ಸಾಗಣೆ ಮತ್ತು ಪ್ರಯಾಣಿಕರ ಪ್ರಯಾಣ ವಿಭಾಗದ ಅಗತ್ಯತೆಗಳನ್ನು ಪೂರೈಸುತ್ತದೆ. ಕಂಪನಿಯು ತನ್ನ 2500+ ಟಚ್‌ಪಾಯಿಂಟ್‌ಗಳ ವ್ಯಾಪಕ ನೆಟ್‌ವರ್ಕ್ ಮೂಲಕ ಅತ್ಯುತ್ತಮ ಗುಣಮಟ್ಟ ಮತ್ತು ಸರ್ವೀಸ್ ಅನ್ನು ಒದಗಿಸುತ್ತದೆ. ಈ ಟಚ್ ಪಾಯಿಂಟ್‌ಗಳು ತರಬೇತಿ ಪಡೆದ ಪರಿಣಿತರಿಂದ ನಿರ್ವಹಿಸಲ್ಪಡುತ್ತದೆ ಮತ್ತು ಅಲ್ಲಿ ಟಾಟಾದ ಅಸಲಿ ಭಾಗಗಳು ಲಭ್ಯವಾಗುತ್ತವೆ.

ಇದನ್ನೂ ಓದಿ: Kannada New Movie: ಅದ್ಧೂರಿಯಾಗಿ ನಡೆದ ’ದ ಪ್ರಸೆಂಟ್’ ಚಿತ್ರದ ಮುಹೂರ್ತ

ಬಜಾಜ್ ಫೈನಾನ್ಸ್ ಭಾರತದಲ್ಲಿನ ಅತ್ಯಂತ ವೈವಿಧ್ಯಮಯ ಎನ್‌ಬಿಎಫ್‌ಸಿಗಳಲ್ಲಿ ಒಂದಾಗಿದೆ. ಇದು ಸಾಲ, ಠೇವಣಿ (ಡಿಪಾಸಿಟ್) ಮತ್ತು ಪಾವತಿ ವಿಭಾಗಗಳಲ್ಲಿ 83.64 ಮಿಲಿಯನ್ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ. ಮಾರ್ಚ್ 31, 2024ರ ಪ್ರಕಾರ ಕಂಪನಿಯ ಅಸೆಟ್ ಅಂಡರ್ ಮ್ಯಾನೇಜ್ಮೆಂಟ್ (ಎಯುಎಂ) ₹3,30,615 ಕೋಟಿಗಳಷ್ಟಿದೆ.

Continue Reading

ಪ್ರಮುಖ ಸುದ್ದಿ

Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

share market : 30 ಕಂಪನಿಗಳ ಷೇರುಗಳ ಬಿಎಸ್ಇ ಸೆನ್ಸೆಕ್ಸ್ 712.44 ಪಾಯಿಂಟ್ಸ್ ಅಥವಾ ಶೇಕಡಾ 0.92 ರಷ್ಟು ಏರಿಕೆ ಕಂಡು, 78,053.52ರಲ್ಲಿತ್ತು . ದಿನದ ವಹಿವಾಟಿನ ಬೆಂಚ್ ಮಾರ್ಕ್ 823.63 ಪಾಯಿಂಟ್ ಅಥವಾ ಶೇಕಡಾ 1 ರಷ್ಟು ಏರಿಕೆಯಾಗಿ 78,164.71 ಅಂಕಗಳಿಗೆ ತಲುಪಿದೆ.

VISTARANEWS.COM


on

share market
Koo

ಬೆಂಗಳೂರು ; ಏಷ್ಯಾದ ಷೇರು ಮಾರುಕಟ್ಟೆಗಳಲ್ಲಿನ (Share Market ) ಸದೃಢ ಪ್ರವೃತ್ತಿಯ ನಡುವೆ ಬ್ಲೂ-ಚಿಪ್ ಬ್ಯಾಂಕ್ ಷೇರುಗಳು ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳಿಗೆ ಮಂಗಳವಾರ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಚ್ ಮಾರ್ಕ್ ಸೆನ್ಸೆಕ್ಸ್ ಮೊದಲ ಬಾರಿಗೆ ಐತಿಹಾಸಿಕ 78,000 ಮಟ್ಟವನ್ನು ದಾಟಿದರೆ, ನಿಫ್ಟಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿತ್ತು.

30 ಕಂಪನಿಗಳ ಷೇರುಗಳ ಬಿಎಸ್ಇ ಸೆನ್ಸೆಕ್ಸ್ 712.44 ಪಾಯಿಂಟ್ಸ್ ಅಥವಾ ಶೇಕಡಾ 0.92 ರಷ್ಟು ಏರಿಕೆ ಕಂಡು, 78,053.52ರಲ್ಲಿತ್ತು . ದಿನದ ವಹಿವಾಟಿನ ಬೆಂಚ್ ಮಾರ್ಕ್ 823.63 ಪಾಯಿಂಟ್ ಅಥವಾ ಶೇಕಡಾ 1 ರಷ್ಟು ಏರಿಕೆಯಾಗಿ 78,164.71 ಅಂಕಗಳಿಗೆ ತಲುಪಿದೆ. ನಿಫ್ಟಿ 183.45 ಪಾಯಿಂಟ್ ಅಥವಾ ಶೇಕಡಾ 0.78 ರಷ್ಟು ಏರಿಕೆ ಕಂಡು 23,721.30 ಕ್ಕೆ ತಲುಪಿದೆ. ದಿನದ ವಹಿವಾಟಿನಲ್ಲಿ ಇದು 216.3 ಪಾಯಿಂಟ್ ಅಥವಾ ಶೇಕಡಾ 0.91 ರಷ್ಟು ಏರಿಕೆಯಾಗಿ ಹೊಸ ಸಾರ್ವಕಾಲಿಕ ಗರಿಷ್ಠ 23,754.15 ಅಂಕಗಳಿಗೆ ತಲುಪಿದೆ.

ಇದನ್ನೂ ಓದಿ: Karnataka Weather: ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರಿ ಮಳೆ; ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ!

ಸೆನ್ಸೆಕ್ಸ್ ನ 30 ಕಂಪನಿಗಳಲ್ಲಿ ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಚ್ ಡಿಎಫ್ ಸಿ ಬ್ಯಾಂಕ್, ಟೆಕ್ ಮಹೀಂದ್ರಾ, ಲಾರ್ಸನ್ ಆ್ಯಂಡ್​ ಟರ್ಬೋ, ಬಜಾಜ್ ಫಿನ್ ಸರ್ವ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಇನ್ಫೋಸಿಸ್ ಅತಿ ಹೆಚ್ಚು ಲಾಭ ಗಳಿಸಿದ ಷೇರುಗಳಾಗಿವೆ. ಪವರ್ ಗ್ರಿಡ್, ಏಷ್ಯನ್ ಪೇಂಟ್ಸ್, ಟಾಟಾ ಸ್ಟೀಲ್, ನೆಸ್ಲೆ, ಮಾರುತಿ ಮತ್ತು ಜೆಎಸ್​​ಡಬ್ಲ್ಯೂ ಸ್ಟೀಲ್ ನಷ್ಟ ಅನುಭವಿಸಿದವು.

ಏಷ್ಯಾದ ಮಾರುಕಟ್ಟೆಗಳಾದ ಸಿಯೋಲ್, ಟೋಕಿಯೊ ಮತ್ತು ಹಾಂಗ್ ಕಾಂಗ್ ನಲ್ಲಿಯೂ ಏರಿಕೆ ಕಂಡು ಬಂದಿದ್ದರೆ ಶಾಂಘೈ ಮಾರಕಟ್ಟೆಯಲ್ಲಿ ಕಡಿಮೆ ವಹಿವಾಟು ನಡೆಯಿತು. ಇವೆಲ್ಲದರ ನಡುವೆ ಯುರೋಪಿಯನ್ ಮಾರುಕಟ್ಟೆಗಳು ನಕಾರಾತ್ಮಕ ವಹಿವಾಟು ನಡೆಸಿವೆ. ಇನ್ನು ಯುಎಸ್ ಮಾರುಕಟ್ಟೆಗಳು ಮಿಶ್ರ ಫಲ ಉಂಡವು.

ಮಾರ್ಚ್ ತ್ರೈಮಾಸಿಕದಲ್ಲಿ ಭಾರತವು 5.7 ಬಿಲಿಯನ್ ಡಾಲರ್ ಅಥವಾ ಜಿಡಿಪಿಯ ಶೇಕಡಾ 0.6 ರಷ್ಟು ಆಮದು ಮತ್ತು ರಪ್ತು ವಹಿವಾಟಿನಲ್ಲಿ (ಚಾಲ್ತಿ ಖಾತೆ) ಮಿಗತೆಯಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೋಮವಾರ ತಿಳಿಸಿದೆ. ಹತ್ತು ತ್ರೈಮಾಸಿಕಗಳಲ್ಲಿ ಇದೇ ಮೊದಲ ಬಾರಿಗೆ ಈ ಸರ್​​ಪ್ಲಸ್​ ಮೋಡ್​ಗೆ ಬದಲಾಗಿದೆ ಎಂದು ಆರ್​ಬಿಐ ಹೇಳಿದೆ.

“ಮಾರುಕಟ್ಟೆ ದೃಷ್ಟಿಕೋನದಿಂದ ಸಕಾರಾತ್ಮಕ ಸುದ್ದಿಯೆಂದರೆ ಚಾಲ್ತಿ ಖಾತೆಯು 2024 ರ ನಾಲ್ಕನೇ ತ್ರೈಮಾಸಿಕದಲ್ಲಿ ಸರ್​​ಪ್ಲಸ್​ ಆಗಿದೆ. ಇದು ರೂಪಾಯಿ ಮೇಲಿನ ಒತ್ತಡ ಕಡಿಮೆ ಮಾಡಲಿದೆ. ಮತ್ತು ಫೆಡ್ ದರ ಕಡಿತದ ಬಗ್ಗೆ ಸ್ಪಷ್ಟತೆ ಇದ್ದಾಗ ಎಫ್ಐಐ (ವಿದೇಶಿ ಸಾಂಸ್ಥಿಕ ಹೂಡಿಕೆದಾರರು ) ಆಸಕ್ತಿಗೆ ದಾರಿ ಮಾಡಿಕೊಡುತ್ತದೆ “ಎಂದು ಮುಖ್ಯ ಹೂಡಿಕೆ ತಂತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಂಚ್​ಮಾರ್ಕ್ ದರವು 0.44 ರಷ್ಟು ಇಳಿದು ಬ್ಯಾರೆಲ್​​ಗೆ 85.63 ಡಾಲರ್​ಗೆ ತಲುಪಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಸೋಮವಾರ 653.97 ಕೋಟಿ ರೂ.ಗಳ ಈಕ್ವಿಟಿಗಳನ್ನು ಮಾರಾಟ ಮಾಡಿದ್ದಾರೆ ಎಂದು ಷೇರು ವಿನಿಮಯ ದಾಖಲೆಗಳು ತಿಳಿಸಿವೆ.

ಬಿಎಸ್ಇ ಬೆಂಚ್ ಮಾರ್ಕ್ ಸೋಮವಾರ 131.18 ಪಾಯಿಂಟ್ ಅಥವಾ ಶೇಕಡಾ 0.17 ರಷ್ಟು ಏರಿಕೆ ಕಂಡು 77,341.08 ಕ್ಕೆ ತಲುಪಿತ್ತು. ನಿಫ್ಟಿ 36.75 ಪಾಯಿಂಟ್ ಅಥವಾ ಶೇಕಡಾ 0.16 ರಷ್ಟು ಏರಿಕೆ ಕಂಡು 23,537.85 ಕ್ಕೆ ತಲುಪಿತ್ತು.

Continue Reading
Advertisement
ಕಿರುತೆರೆ31 seconds ago

Shri Devi Mahathme: ಬರ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ”; ವೀಕ್ಷಣೆ ಎಲ್ಲಿ?

Renuka Swamy Murder
ಕರ್ನಾಟಕ8 mins ago

Renuka Swamy Murder: ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ ನಾಲ್ವರು ಆರೋಪಿಗಳು

IND vs ENG Semi Final
ಕ್ರೀಡೆ8 mins ago

IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

Lok Sabha Speaker
ದೇಶ11 mins ago

Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

actor producer and Cow lover Mahendra Munnoth donated 51 lakh rupees to cow shelter
ಬೆಂಗಳೂರು12 mins ago

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bhaavaramayana Ramavatarana book release programme on June 29 in Bengaluru
ಕರ್ನಾಟಕ14 mins ago

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Varthur Santhosh Animal Transport Rules Violation Allegation
ಕ್ರೈಂ18 mins ago

Varthur Santhosh: ಹಳ್ಳಿಕಾರ್ ರೇಸ್ ನಡೆಸಲು ಸಜ್ಜಾಗುತ್ತಿದ್ದ ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

Hijab Ban
ದೇಶ18 mins ago

Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

honey trap harish gowda
ಕ್ರೈಂ24 mins ago

Honey Trap: ಎಂಎಲ್‌ಎ ಹರೀಶ್‌ ಗೌಡಗೆ ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್‌ ಸೆರೆ, ಇವರ ಖತರ್‌ನಾಕ್‌ ಐಡಿಯಾ ನೋಡಿ!

Kangana Ranaut Chirag Paswan In Parliament
ಬಾಲಿವುಡ್36 mins ago

Kangana Ranaut: ಸಂಸತ್ತಿನ ಹೊರಗೆ ಕೈ ಕುಲುಕಿ ಸಂತಸದ ಕ್ಷಣ ಹಂಚಿಕೊಂಡ ಚಿರಾಗ್ ಪಾಸ್ವಾನ್-ಕಂಗನಾ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌