RBI Interest rate hike | ಆರ್‌ಬಿಐ ರೆಪೊ ದರ ಹೆಚ್ಚಳದಿಂದ ಸಾಲಗಳ ಇಎಂಐ ಎಷ್ಟು ಹೆಚ್ಚಲಿದೆ? ಇಲ್ಲಿದೆ ವಿವರ Vistara News
Connect with us

ಪ್ರಮುಖ ಸುದ್ದಿ

RBI Interest rate hike | ಆರ್‌ಬಿಐ ರೆಪೊ ದರ ಹೆಚ್ಚಳದಿಂದ ಸಾಲಗಳ ಇಎಂಐ ಎಷ್ಟು ಹೆಚ್ಚಲಿದೆ? ಇಲ್ಲಿದೆ ವಿವರ

ರಿಸರ್ವ್‌ ಬ್ಯಾಂಕ್‌ ಶುಕ್ರವಾರ ತನ್ನ ರೆಪೊ ದರದಲ್ಲಿ 0.50% ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಗೃಹ ಸಾಲ, ವೈಯಕ್ತಿಕ ಸಾಲ, ವಾಹನ ಸಾಲಗಳ ಬಡ್ಡಿ ದರ ಏರಿಕೆಯಾಗಲಿದೆ. (RBI Interest rate hike) ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ವಿವರ.

VISTARANEWS.COM


on

home loan
Koo

ಮುಂಬಯಿ: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ತನ್ನ ರೆಪೊ ದರವನ್ನು ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲಗಳ ಬಡ್ಡಿ ದರಗಳಲ್ಲಿ ಏರಿಕೆಯಾಗಲಿದೆ. (RBI Interest rate hike) ಈ ಕುರಿತ ವಿವರ ಇಂತಿದೆ.

ಆರ್‌ಬಿಐ ರೆಪೊ ದರವನ್ನು 0.50% ಹೆಚ್ಚಿಸಿದ್ದು, 5.90%ಕ್ಕೆ ಏರಿಕೆಯಾಗಿದೆ. ಇದರ ಪರಿಣಾಮ ರೆಪೊ ದರ ಆಧಾರಿತ ಎಲ್ಲ ಸಾಲಗಳ ಮೇಲೂ ಆಗಲಿದೆ. ಸಾಮಾನ್ಯವಾಗಿ ಬ್ಯಾಂಕ್‌ಗಳು ಬಡ್ಡಿ ದರ ಹೆಚ್ಚಿಸುವ ವೇಳೆ ಇಎಂಐ ಬದಲಿಗೆ, ಇಎಂಐ ಸಂಖ್ಯೆಯನ್ನು ಹೆಚ್ಚಿಸುತ್ತವೆ. ಆರ್‌ಬಿಐ ತನ್ನ ರೆಪೊ ದರ ಹೆಚ್ಚಿಸಿರುವ ಪರಿಣಾಮ ನಾನಾ ಬಗೆಯ ಸಾಲಗಳು ದುಬಾರಿಯಾಗಲಿದೆ.

30 ಲಕ್ಷ ರೂ. ಗೃಹ ಸಾಲದ ಇಎಂಐನಲ್ಲಿ 957 ರೂ. ಏರಿಕೆ

cash

ಉದಾಹರಣೆಗೆ ಒಬ್ಬ ವ್ಯಕ್ತಿ 30 ಲಕ್ಷ ರೂ. ಗೃಹ ಸಾಲ ಹೊಂದಿದ್ದು, 20 ವರ್ಷಗಳ ಅವಧಿಗೆ, ವಾರ್ಷಿಕ 8.5% ಬಡ್ಡಿ ದರವೂ ಇದ್ದರೆ, ಇಎಂಐನಲ್ಲಿ 957 ರೂ. ಹೆಚ್ಚಳವಾಗಲಿದೆ. ಅಂದರೆ ಇಎಂಐ 26,035 ರೂ.ಗಳಿಂದ 26,992 ರೂ.ಗೆ ಏರಿಕೆಯಾಗಲಿದೆ.

ವಾಹನ ಸಾಲ: ನೀವು 7 ವರ್ಷಗಳ ಅವಧಿಗೆ 8 ಲಕ್ಷ ರೂ. ವಾಹನ ಸಾಲವನ್ನು ಹೊಂದಿದ್ದರೆ, ಬಡ್ಡಿ ದರ 11.00% ಇದ್ದರೆ, ಅದು ಈಗ 11.5%ಕ್ಕೆ ಏರಿಕೆಯಾಗಲಿದೆ. ಇಎಂಐನಲ್ಲಿ 211 ರೂ. ಹೆಚ್ಚಳವಾಗಲಿದೆ. ಅಂದರೆ 13,698 ರೂ.ಗಳಿಂದ 13,909 ರೂ.ಗೆ ಇಎಂಐ ಹೆಚ್ಚಳವಾಗಲಿದೆ.

ವೈಯಕ್ತಿಕ ಸಾಲ: ಒಬ್ಬ ವ್ಯಕ್ತಿ 5 ವರ್ಷಗಳ ಅವಧಿಗೆ 5 ಲಕ್ಷ ರೂ. ವೈಯಕ್ತಿಕ ಸಾಲ ತೆಗೆದುಕೊಂಡಿದ್ದರೆ, ಬಡ್ಡಿ ದರ 15% ಇದ್ದರೆ 15.5%ಕ್ಕೆ ಹೆಚ್ಚಳವಾಗಲಿದೆ. ಇಎಂಐನಲ್ಲಿ 132 ರೂ. ಏರಿಕೆಯಾಗಲಿದೆ. ಅಂದರೆ 11,895 ರೂ.ಗಳಿಂದ 12,027 ರೂ.ಗೆ ಏರಿಕೆಯಾಗಲಿದೆ.

ಇದನ್ನೂ ಓದಿ : RBI Interest rate hike | ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಬಡ್ಡಿ ದರದಲ್ಲಿ 0.50% ಏರಿಕೆ ಘೋಷಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

Karnataka Cabinet Expansion: ಸರ್ಕಾರ ಟೇಕಾಫ್‌ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು

Karnataka Cabinet Expansion: ಸಿದ್ದರಾಮಯ್ಯ ಅವರು ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್‌ ಸರ್ಕಾರ ಟೇಕಾಫ್‌ ಆಯಿತು ಎನ್ನುವಷ್ಟರಲ್ಲಿಯೇ ಸಚಿವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ಶುರುವಾಗಿದೆ. ಹಾಗಾಗಿ, ಕೆಲ ಖಾತೆಗಳನ್ನು ಸಿದ್ದರಾಮಯ್ಯ ಅವರು ಬದಲಾಯಿಸಿದ್ದಾರೆ.

VISTARANEWS.COM


on

Edited by

Siddaramaiah
Koo

ಬೆಂಗಳೂರು: ‘ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ’ ಎಂಬ ಮಾತಿನಂತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು, ಕಾಂಗ್ರೆಸ್‌ ಗೆಲುವು ಸಾಧಿಸಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಸಚಿವ ಸಂಪುಟ ಸಭೆ ವಿಸ್ತರಣೆಯಾದರೂ ಪಕ್ಷದಲ್ಲಿ ಆಂತರಿಕ ಗೊಂದಲ, ಅಸಮಾಧಾನ ಮಾತ್ರ ನಿಂತಿಲ್ಲ. ಖಾತೆ ಹಂಚಿಕೆ ಬಳಿಕವೂ ಸಚಿವರ ಮಧ್ಯೆಯೇ ಅಸಮಾಧಾನದ ಹೊಗೆ ಜಾಸ್ತಿಯಾದ ಕಾರಣ ರಾತ್ರೋರಾತ್ರಿ ಸಿದ್ದರಾಮಯ್ಯ ಅವರು ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.

ಹೌದು, ಎಂ.ಸಿ.ಸುಧಾಕರ್‌ ಅವರಿಗೆ ನೀಡಿದ್ದ ವೈದ್ಯಕೀಯ ಶಿಕ್ಷಣ ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಲಾಗಿದೆ. ಇನ್ನು ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಿದ್ದ ಉನ್ನತ ಶಿಕ್ಷಣ ಖಾತೆಯನ್ನು ಎಂ.ಸಿ.ಸುಧಾಕರ್‌ ಅವರಿಗೆ ನೀಡಿ ಸಮಾಧಾನ ಮಾಡಿದ್ದಾರೆ. ಹಾಗೆಯೇ, ಪ್ರಿಯಾಂಕ್ ಖರ್ಗೆ ಅವರಿಗೆ ಪಂಚಾಯತ್ ರಾಜ್ ಜತೆಗೆ ಐಟಿಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕಾನೂನು ಸಂಸದೀಯ ಜತೆಗೆ ಪ್ರವಾಸೋದ್ಯಮ ಖಾತೆಯನ್ನು ಎಚ್‌.ಕೆ.ಪಾಟೀಲ್‌ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಬೋಸರಾಜು ಅವರಿಗೆ ಸಣ್ಣ ನೀರಾವರಿ ಖಾತೆ ಜತೆಗೆ ವೈಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಮತ್ತೊಂದೆಡೆ, ಡಾ.ಜಿ.ಪರಮೇಶ್ವರ್‌ ಅವರಿಗೆ ಗೃಹ ಖಾತೆಯನ್ನು ನಿರ್ವಹಣೆ ಮಾಡಲು ಇಷ್ಟವಿಲ್ಲ. ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ಸುತಾರಾಂ ಬೇಕಾಗಿಲ್ಲ. ಇವರಿಬ್ಬರು ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವುದು ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿದೆ. ಹಾಗಾಗಿಯೇ, ಸಚಿವರು ಹಾಗೂ ಅವರ ಖಾತೆ ಕುರಿತ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ.

ಇಲ್ಲಿದೆ ಸಚಿವರು ಹಾಗೂ ಅವರ ಖಾತೆಗಳ ಅಂತಿಮ ಪಟ್ಟಿ

Karnataka Ministers List

ಮೂಲ-ವಲಸಿಗ ಜಗಳ

ಸಚಿವ ಸಂಪುಟ ವಿಸ್ತರಣೆ ನಂತರ ಸಚಿವರಲ್ಲಿ ಅಸಮಾಧಾನದ ಜತೆಗೆ ಕಾಂಗ್ರೆಸ್‌ನಲ್ಲಿ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ. ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ

ಸಚಿವ ಸ್ಥಾನ ಮಿಸ್‌ ಆದ ಕುರಿತು ಮಾತನಾಡಿದ ಹರಿಪ್ರಸಾದ್‌, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು. ಮತ್ತೊಂದೆಡೆ, ಖಾತೆ ಸಿಗದ ಕಾರಣ ಟಿ.ಬಿ.ಜಯಚಂದ್ರ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Continue Reading

ದೇಶ

NITI Aayog Meeting: ವಿಕಸಿತ ಭಾರತದ ಕನಸು ಬಿತ್ತಿದ ಮೋದಿ; 11 ಸಿಎಂಗಳು ಗೈರಾದರೂ ಪ್ರಧಾನಿ ಅಭಿವೃದ್ಧಿ ಮಂತ್ರ

NITI Aayog Meeting: ಮುಖ್ಯಮಂತ್ರಿಗಳ ಗೈರು ಹಾಜರಿಯ ಮಧ್ಯೆಯೇ ನೀತಿ ಆಯೋಗದ ಸಭೆಯಲ್ಲಿ ನರೇಂದ್ರ ಮೋದಿ ಅವರು ಅಭಿವೃದ್ಧಿಯ ಮಂತ್ರ ಪಠಿಸಿದರು. ವಿಕಸಿತ ಭಾರತದ ಕನಸು ಬಿತ್ತಿದರು.

VISTARANEWS.COM


on

Edited by

Narendra Modi Speech At NITI Aayog Meeting
Koo

ನವದೆಹಲಿ: ನೀತಿ ಆಯೋಗದ ಎಂಟನೇ ಗವರ್ನಿಂಗ್‌ ಸಮಿತಿ ಸಭೆ ನಡೆದಿದ್ದು, 11 ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಉಳಿದ ಸಿಎಂಗಳು ಹಾಜರಾಗಿದ್ದು, ಇದೇ ವೇಳೆ ನರೇಂದ್ರ ಮೋದಿ ಅವರು 2047ರ ವೇಳೆಗೆ ಭಾರತದ ಅಭಿವೃದ್ಧಿಯ ನಕ್ಷೆ ಹಾಕಿದ್ದಾರೆ. “ಎಲ್ಲರೂ ಒಗ್ಗೂಡಿ ವಿಕಸಿತ ಭಾರತದ (ಅಭಿವೃದ್ಧಿ ಹೊಂದಿದ ಭಾರತ) ಕನಸು ನನಸು ಮಾಡೋಣ” ಎಂದು ಹೇಳಿದ್ದಾರೆ.

“ಭಾರತವು ಏಳಿಗೆ ಹೊಂದುತ್ತಿದ್ದು, ಸರ್ವ ಕ್ಷೇತ್ರಗಳಲ್ಲಿ ನಾವು ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಒಕ್ಕೂಟದ ವ್ಯವಸ್ಥೆಯ ಬೇರುಗಳು ಇನ್ನಷ್ಟು ಬಲವಾಗಬೇಕು. ದೇಶದ ಜನರಿಗೆ ಸಕಲ ಮೂಲ ಸೌಕರ್ಯಗಳು ಸಿಗುವಂತಾಗಬೇಕು. ಜಲ ಸಂರಕ್ಷಣೆ, ಪರಿಸರ ರಕ್ಷಣೆ, ಆರ್ಥಿಕ ಶಿಸ್ತಿನಲ್ಲಿ ನಾವು ಇನ್ನಷ್ಟು ನೈಪುಣ್ಯ ಸಾಧಿಸಬೇಕು. ಜಾಗತಿಕ ಮಟ್ಟದ ಸ್ಪರ್ಧೆಗೆ ನಾವು ಇನ್ನಷ್ಟು ಮುಕ್ತವಾಗಬೇಕು. ಸಣ್ಣ ಕೈಗಾರಿಕೆಗಳು, ಎಂಎಸ್‌ಎಂಇಗಳ ಏಳಿಗೆಯಾಗಬೇಕು. ಇದರಿಂದ ಮಾತ್ರ ಭಾರತ ಏಳಿಗೆ ಹೊಂದಲು ಸಾಧ್ಯ. ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಇಂತಹ ಮನೋಭಾವದೊಂದಿಗೆ 2047ರ ವೇಳೆಗೆ ವಿಕಸಿತ ಭಾರತದ ನಿರ್ಮಾಣ ಮಾಡಬೇಕು” ಎಂದು ಕರೆ ನೀಡಿದರು.

ನೀತಿ ಆಯೋಗದ ಸಭೆಯಲ್ಲಿ ದೇಶದ ಅಭಿವೃದ್ಧಿಯ ದೃಷ್ಟಿಯಿಂದ 100 ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್‌ ಗವರ್ನರ್‌ಗಳು, ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಿ ಅಭಿವೃದ್ಧಿ ವಿಚಾರಗಳನ್ನು ಚರ್ಚಿಸಲಾಗಿದೆ. ಎಂಎಸ್‌ಎಂಇ, ಮೂಲ ಸೌಕರ್ಯ, ಹೂಡಿಕೆ, ಮಹಿಳಾ ಸಬಲೀಕರಣ, ಆರೋಗ್ಯ, ಕೌಶಲಾಭಿವೃದ್ಧಿ ಸೇರಿ ವಿವಿಧ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ.

ಗೈರಾದ ಸಿಎಂಗಳು ಯಾರು? ಏಕೆ?

ದೆಹಲಿಯಲ್ಲಿ ಆಡಳಿತ ಸೇವೆಗಳ ಮೇಲಿನ ನಿಯಂತ್ರಣ ಕುರಿತು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಸಭೆಗೆ ಹಾಜರಾಗಿಲ್ಲ. ಇನ್ನು, ಕೇಂದ್ರದಿಂದ ಅನುದಾನ ಸಿಗುತ್ತಿಲ್ಲ ಎಂದು ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಅವರು ಕೂಡ ಗೈರಾಗಿದ್ದಾರೆ. ಕರ್ನಾಟಕದಲ್ಲಿ ಸಚಿವರ ಪ್ರಮಾಣವಚನ, ಖಾತೆ ಹಂಚಿಕೆ ಹಿನ್ನೆಲೆಯಲ್ಲಿ ನೂತನ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.

ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌, ಬೇರೆ ಕಾರ್ಯಕ್ರಮದಿಂದಾಗಿ ಒಡಿಶಾ ಸಿಎಂ ನವೀನ್‌ ಪಾಟ್ನಾಯಕ್‌, ಕೇಂದ್ರದ ಮೇಲಿನ ಅಸಮಾಧಾನದಿಂದಾಗಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಬಿಹಾರದ ನಿತೀಶ್‌ ಕುಮಾರ್‌, ತೆಲಂಗಾಣದ ಕೆ.ಚಂದ್ರಶೇಖರ ರಾವ್‌ ಹಾಗೂ ಯಾವುದೇ ಕಾರಣ ನೀಡದೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.

ಇದನ್ನೂ ಓದಿ: NITI Aayog Meeting:‌ ಕೇಂದ್ರಕ್ಕೆ ಬಾಯ್ಕಾಟ್‌ ಬಿಸಿ; ದೀದಿ ಬಳಿಕ ನೀತಿ ಆಯೋಗದ ಸಭೆ ಬಹಿಷ್ಕರಿಸಿದ ಕೇಜ್ರಿವಾಲ್

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ನೂತನ ಸಂಸತ್ ಕಟ್ಟಡ ಪ್ರಜಾತಂತ್ರವನ್ನು ಮತ್ತಷ್ಟು ಮೆರೆಸಲಿ

ನೂತನ ಹಾಗೂ ಸುಸಜ್ಜಿತ ಸಂಸತ್‌ ಭವನ ನಮ್ಮ ಈಗಿನ ಹಾಗೂ ಭವಿಷ್ಯದ ಅಗತ್ಯ. ಮುಂದೆ ಅದೇ ಭಾರತದ ಪ್ರಜಾತಂತ್ರದ ಭವ್ಯ ಲಾಂಛನವೂ ಆಗಿರಲಿದೆ.

VISTARANEWS.COM


on

New parliament Building
Koo

ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಪೀಕರ್ ಓಂ ಬಿರ್ಲಾ ಭಾನುವಾರ ಉದ್ಘಾಟಿಸಲಿದ್ದಾರೆ. ಬದಲಾದ ಕಾಲಮಾನಕ್ಕೆ ತಕ್ಕಂತೆ ನೂತನ ಸಂಸತ್ ಭವನ ನಿರ್ಮಾಣ ಅಗತ್ಯವಾಗಿತ್ತು. ಈಗ ಬಳಕೆಯಾಗುತ್ತಿರುವ ಸಂಸತ್‌ ಭವನ ಶತಮಾನವನ್ನು ಸಮೀಪಿಸುತ್ತಿದ್ದು, ಅದರ ಗರಿಷ್ಠ ಬಳಕೆಯಾಗಿದೆ. ಮುಂದೆ ಸಂಸತ್ ಸದಸ್ಯರ ಸಂಖ್ಯೆ ಕೂಡ ಹೆಚ್ಚಾಗಲಿರುವುದರಿಂದ ಆಸನಗಳ ಸಂಖ್ಯೆಯೂ ಹೆಚ್ಚಿಸುವುದು ಅವಶ್ಯವಾಗಿತ್ತು. ಹಿಂದಿನ ಸಂಸತ್ ಭವನದಲ್ಲಿ ಲೋಕಸಭೆಯ ಆಸನಗಳ ಸಂಖ್ಯೆ 550 ಇದ್ದರೆ, ಹೊಸ ಕಟ್ಟಡದಲ್ಲಿ ಈ ಸಂಖ್ಯೆ 888ಕ್ಕೆ ಏರುತ್ತದೆ. ರಾಜ್ಯಸಭೆಯ ಆಸನಗಳ ಸಂಖ್ಯೆ 250ರಿಂದ 384ಕ್ಕೆ ಏರುತ್ತದೆ. ಪ್ರಾಕೃತಿಕ ಮತ್ತು ಭದ್ರತೆಯ ದೃಷ್ಟಿಯಿಂದ ಈಗಿನ ಕಟ್ಟಡ ಹಿಂದಿನ ಕಟ್ಟಡಕ್ಕಿಂತ ಹೆಚ್ಚು ಸುರಕ್ಷಿತವಾಗಿದೆ.

ಹಿಂದಿನ ಕಟ್ಟಡ ವಿಸ್ತೀರ್ಣ 24,281 ಚ.ಮೀ. ಇದ್ದರೆ, ಈಗಿನ ಕಟ್ಟಡ ವಿಸ್ತೀರ್ಣ 64,500 ಚ.ಮೀ ಇದೆ. ಪ್ರಜಾತಂತ್ರದ ದೇಗುಲ ಎನ್ನಲಾಗುವ ನೂತನ ಕಟ್ಟಡದ ಪಕ್ಷಿನೋಟವೇ ಅದ್ಭುತವಾಗಿದೆ. 971 ಕೋಟಿ ರೂ. ವೆಚ್ಚದ ಈ ಭವ್ಯ ಕಟ್ಟಡ ಕೇವಲ ಎರಡೇ ವರ್ಷದೊಳಗೆ ನಿರ್ಮಾಣ ಆಗಿರುವುದು ಅದ್ಭುತವೇ ಸರಿ. ಆಧುನಿಕ ತಂತ್ರಜ್ಞಾನವನ್ನೂ ಕಲಾಪಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಳಸಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು 60,000 ಕಾರ್ಮಿಕರನ್ನು ಸನ್ಮಾನಿಸಲಿರುವುದು ಕೂಡ ಅರ್ಥಪೂರ್ಣವಾಗಿದೆ. ಕ್ರಿ.ಶ. 3ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ್ದ ಚೋಳ ರಾಜರು ಬಳಸಿದ್ದ ಚಿನ್ನದ ಸೆಂಗೋಲ್ (ರಾಜದಂಡ) ಅನ್ನು ನೂತನ ಸಂಸತ್ ಭವನದಲ್ಲಿ ಭಾರತದ ಸ್ವಾತಂತ್ರ್ಯದ ಪ್ರತೀಕವಾಗಿ ಇರಿಸುತ್ತಿರುವುದು ಕೂಡ ಭಾರತೀಯ ಪರಂಪರೆಗೆ ನೀಡುತ್ತಿರುವ ಮಹತ್ವದ ಅಂಶ.

ಪ್ರತಿಯೊಂದು ರಾಷ್ಟ್ರವೂ ತನ್ನದೇ ಆದ ಮಹತ್ತು, ಭವ್ಯತೆಗಳನ್ನು ಹೊಂದಿರುವ ವಾಸ್ತುಶಿಲ್ಪಗಳನ್ನು ಸೃಷ್ಟಿಸುತ್ತದೆ. ಭಾರತದ ಹಳೆಯ ಸಂಸತ್ತು ಕೂಡ ಭವ್ಯವಾದುದು; ಆದರೆ ಅದು ಬ್ರಿಟಿಷರಿಂದ ನಿರ್ಮಿತವಾದುದು. ಬ್ರಿಟಿಷರಿಂದ ನಿರ್ಮಿತ ಎಂಬ ಕಾರಣಕ್ಕೇ ತ್ಯಾಜ್ಯವಾಗಬೇಕಿಲ್ಲ. ಆದರೆ, ನಮ್ಮನ್ನು ಆಳುವ ಸ್ವಾತಂತ್ರ್ಯ ಹಾಗೂ ಅಧಿಕಾರಗಳನ್ನು ನಾವೇ ಪಡೆದುಕೊಂಡಂತೆ, ಹಾಗೆ ಆಳುವ ಸರ್ಕಾರ ಕಾರ್ಯಾಚರಿಸುವ ಸಂಸತ್‌ ಭವನ ಕೂಡ ನಮ್ಮ ನಿರ್ಮಾಣವೇ ಆಗಿರಬೇಕು ಎಂಬ ಕನಸು ನಮಗಿರುವುದೂ ಸಹಜ. ನೂತನ ಹಾಗೂ ಸುಸಜ್ಜಿತ ಸಂಸತ್‌ ಭವನ ನಮ್ಮ ಈಗಿನ ಹಾಗೂ ಭವಿಷ್ಯದ ಅಗತ್ಯ. ಮುಂದೆ ಅದೇ ಭಾರತದ ಪ್ರಜಾತಂತ್ರದ ಭವ್ಯ ಲಾಂಛನವೂ ಆಗಿರಲಿದೆ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ

ಈ ಮಧ್ಯೆ, ಉದ್ಘಾಟನೆ ಸಮಾರಂಭಕ್ಕೆ ಕೆಲವು ಪ್ರತಿಪಕ್ಷಗಳು ಬಹಿಷ್ಕಾರ ಹಾಕಿವೆ. ಲೋಕಸಭೆ- ರಾಜ್ಯಸಭೆ ನಡೆಯುತ್ತಿರುವಾಗ ನೆಪ ತೆಗೆದು ಮಾಡುವ ಸಭಾತ್ಯಾಗವೇ ಸಮಂಜಸವಲ್ಲ ಎಂದಾಗ, ದೇಶದ ಹೆಮ್ಮೆಯಾದ ನೂತನ ಸಂಸತ್‌ ಭವನದ ಉದ್ಘಾಟನೆಯನ್ನೇ ಬಹಿಷ್ಕರಿಸುವ ನಡೆ ಎಷ್ಟು ಸರಿ? ಇದು ಪ್ರಜಾಪ್ರಭುತ್ವದ ನೈಜ ಚೈತನ್ಯಕ್ಕೇ ಕೊಡಲಿಯೇಟು. ಪ್ರಧಾನಿ ಮೋದಿ, ನೂರ ಮೂವತ್ತು ಕೋಟಿ ಪ್ರಜೆಗಳ ಪ್ರತಿನಿಧಿಯಾಗಿ ಸಂಸತ್ತನ್ನು ಉದ್ಘಾಟಿಸುತ್ತಿದ್ದಾರೆ. ಇನ್ನೂ ನೂರಾರು ವರ್ಷಗಳ ಕಾಲ ಇದು ಅರ್ಥಪೂರ್ಣ ಕಲಾಪಗಳ ತಾಣವಾಗಬೇಕಿದೆ. ರಾಷ್ಟ್ರದ ವಿವೇಕಯುತ ಮುನ್ನಡೆಯನ್ನು ನಿರ್ಣಯಿಸುವ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಳವಾಗಿರಲಿದೆ. ಈ ನಿಟ್ಟಿನಲ್ಲಿ ಪ್ರತಿಪಕ್ಷಗಳು ತಮ್ಮ ನಿರ್ಧಾರ ಮರುಪರಿಶೀಲಿಸಿ ಸಮಾರಂಭದಲ್ಲಿ ಭಾಗವಹಿಸುವುದು ವಿವೇಕಯುತವಾಗಿರುತ್ತದೆ. ಅವರ ಸಮಾರಂಭ ಬಹಿಷ್ಕಾರದ ಕರೆಯ ನಡುವೆಯೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮುಂತಾದ ಪ್ರತಿಪಕ್ಷಗಳ ನಾಯಕರು ಭಾಗವಹಿಸುತ್ತಿರುವುದು ವಿವೇಕದ ನಿರ್ಧಾರ. ಅವರ ಈ ನಡೆ ಇತರರಿಗೆ ಮಾದರಿಯಾಗಲಿ. ನೂತನ ಸಂಸತ್ ಭವನ ಭಾರತದ ಪ್ರಜಾತಂತ್ರವನ್ನು ಮತ್ತಷ್ಟು ಮೆರೆಸಲಿ.

Continue Reading

ದೇಶ

New Parliament Building: ಸೆಂಗೋಲ್‌ ಎಂಬ ರಾಜದಂಡ ಸ್ವಾತಂತ್ರ್ಯದ ಸಂಕೇತ; ಪ್ರತಿಷ್ಠಾಪನೆಗೆ ಕಾರಣ ತಿಳಿಸಿದ ಮೋದಿ

New Parliament Building: ನೂತನ ಸಂಸತ್‌ ಭವನದಲ್ಲಿರುವ ಸ್ಪೀಕರ್‌ ಪೀಠದ ಬಳಿ ಚೋಳರ ಕಾಲದ ಸೆಂಗೋಲ್ಅನ್ನು ಪ್ರತಿಷ್ಠಾಪಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದುವರೆಗೆ ಮ್ಯೂಸಿಯಂನಲ್ಲಿದ್ದ ಸೆಂಗೋಲ್‌ಅನ್ನು ನೂತನ ಸಂಸತ್‌ನಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ.

VISTARANEWS.COM


on

Edited by

Narendra Modi Speech On Sengol
Koo

ನವದೆಹಲಿ: ತಮಿಳುನಾಡಿನ ಧರ್ಮಾಪುರಂ ಹಾಗೂ ತಿರುವಾವದುತುರೈಂನ ಶೈವ ಪರಂಪರೆಯ ಅಧೀನಾಮ್‌ ಮಠದ ಸ್ವಾಮೀಜಿಗಳು ನರೇಂದ್ರ ಮೋದಿ ಅವರ ನಿವಾಸದಲ್ಲಿ ಸೆಂಗೋಲ್‌ಅನ್ನು (ರಾಜದಂಡ) ಅವರಿಗೆ ಹಸ್ತಾಂತರಿಸಿದ್ದಾರೆ. ಇದಾದ ಬಳಿಕ ಮಾತನಾಡಿದ ನರೇಂದ್ರ ಮೋದಿ, “ಸೆಂಗೋಲ್‌ ಎಂಬುದು ಕೇವಲ ಧರ್ಮದಂಡವಲ್ಲ. ಇದು ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿಯನ್ನು ಅಂತ್ಯಗೊಳಿಸಿದ ಸಂಕೇತ” ಎಂದು ಹೇಳಿದರು.

“ದೇಶಕ್ಕೆ ಸ್ವಾತಂತ್ರ್ಯ ಸಿಗುವ ಸಂದರ್ಭ ಬಂದಾಗ, ಅಧಿಕಾರದ ಹಸ್ತಾಂತರದ ಪ್ರತೀಕವಾಗಿ ಸೆಂಗೋಲ್‌ಅನ್ನು ಬಳಸಲಾಯಿತು. ತಮಿಳು ಪರಂಪರೆಯಲ್ಲಿ ಅಧಿಕಾರ ಹಸ್ತಾಂತರದ ಸಂಕೇತವಾಗಿ ಸೆಂಗೋಲ್‌ಅನ್ನು ನೀಡಲಾಗುತ್ತದೆ. ಹಾಗೆಯೇ, ರಾಜಧರ್ಮ ಪಾಲನೆಯ ಜವಾಬ್ದಾರಿಯನ್ನೂ ಸೆಂಗೋಲ್‌ ತಿಳಿಸುತ್ತದೆ. 1947ರಲ್ಲಿ ಅಧಿಕಾರದ ಹಸ್ತಾಂತರದ ವೇಳೆ ಸೆಂಗೋಲ್‌ಅನ್ನು ನೀಡಿದ್ದು ಗುಲಾಮಗಿರಿಯ ಅಂತ್ಯದ ಸಂಕೇತವಾಗಿತ್ತು” ಎಂದು ಹೇಳಿದರು.

ಸೆಂಗೋಲ್‌ ಕುರಿತು ಮೋದಿ ಭಾಷಣದ ವಿಡಿಯೊ

“ಇಂತಹ ರಾಜದಂಡವನ್ನು ನಾವು ಸಂಸತ್ತಿನಲ್ಲಿ ಪ್ರತಿಷ್ಠಾಪಿಸುತ್ತಿದ್ದೇವೆ. ದೇಶದ ಜನರ ಏಳಿಗೆ, ರಾಜಧರ್ಮವನ್ನು ಪಾಲಿಸುವುದರ ದ್ಯೋತಕವಾಗಿ ಸಂಸತ್ತಿನಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ಆದರೆ, ರಾಜದಂಡವನ್ನು ಪ್ರಯಾಗರಾಜ್‌ನ ಮ್ಯೂಸಿಯಂನಲ್ಲಿ ಇರಿಸಲಾಗಿತ್ತು. ಆನಂದ ಭವನದಲ್ಲಿ ವಾಕಿಂಗ್‌ ಸ್ಟಿಕ್‌ (ಊರುಗೋಲು) ಎಂದು ಪ್ರದರ್ಶನಕ್ಕಾಗಿ ಇರಿಸಲಾಗಿತ್ತು. ಆದರೆ, ನಿಮ್ಮ ಈ ಸೇವಕ ಹಾಗೂ ನಮ್ಮ ಸರ್ಕಾರವು ಆನಂದ ಭವನದಿಂದ ಸೆಂಗೋಲ್‌ಅನ್ನು ತಂದಿದ್ದೇವೆ. ಸ್ವಾತಂತ್ರ್ಯದ ಮೊದಲ ಫಲದ ರೂಪದಲ್ಲಿರುವ ರಾಜದಂಡವನ್ನು ಸಂಸತ್ತಿನಲ್ಲಿ ಇರಿಸುತ್ತೇವೆ. ಪ್ರಜಾಪ್ರಭುತ್ವದ ಮಂದಿರದಲ್ಲಿ ಸೆಂಗೋಲ್‌ ಪ್ರತಿಷ್ಠಾಪನೆಯಾಗುತ್ತಿರುವುದು ಸಂತಸ ತಂದಿದೆ. ನಮಗೆ ಇದು ಕರ್ತವ್ಯಪಥ ತೋರಿಸುತ್ತದೆ, ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸುತ್ತದೆ. ಜನತಾ ಜನಾರ್ದನರ ಸೇವೆಗೆ ಸ್ಫೂರ್ತಿ ನೀಡುತ್ತದೆ” ಎಂದರು.

ಇದನ್ನೂ ಓದಿ: New Parliament Building: ಮೋದಿಗೆ ಸೆಂಗೋಲ್‌ ಹಸ್ತಾಂತರಿಸಿದ ಸ್ವಾಮೀಜಿಗಳು; ಭಾನುವಾರ ಸಂಸತ್‌ನಲ್ಲಿ ಪ್ರತಿಷ್ಠಾಪನೆ

“ತಮಿಳುನಾಡಿನ ಸಂಸ್ಕೃತಿ ಇಂದಿಗೂ ಸಮೃದ್ಧಿಯಾಗಿದೆ ಎಂದರೆ ಅದಕ್ಕೆ ಅಧೀನಮ್‌ ಸ್ವಾಮೀಜಿಗಳಂತಹ ಸಂತರ ಕೊಡುಗೆ ಇದೆ. ಇಂತಹ ಸಂಸ್ಥಾನಗಳಿಂದಲೇ ತಮಿಳುನಾಡಿನಲ್ಲಿ ಪರಂಪರೆ ಶ್ರೀಮಂತವಾಗಿದೆ” ಎಂದು ಬಣ್ಣಿಸಿದರು. ಪ್ರಧಾನಿ ಭಾಷಣಕ್ಕೂ ಮೊದಲು ಮೋದಿ ಅವರ ಹಣೆಗೆ ತಿಲಕ ಇಟ್ಟು, ಹಾರ ಹಾಕಿ, ಶಾಲು ಹೊದಿಸಿದ ಸ್ವಾಮೀಜಿಗಳು ಬಳಿಕ ಮೋದಿ ಅವರಿಗೆ ಸೆಂಗೋಲ್‌ಅನ್ನು ನೀಡಿದರು. ಮೋದಿ ಅವರು ರಾಜದಂಡಕ್ಕೆ ನಮಸ್ಕಾರ ಮಾಡಿದರು. ಇದೇ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

ವಿಶೇಷವೆಂದರೆ ಸಂಸತ್‌ ಭವನದಲ್ಲಿ ನಡೆಯಲಿರುವ ಉದ್ಘಾಟನೆ ಸಂಬಂಧಿತ ಪೂಜಾ ಕೈಂಕರ್ಯಗಳನ್ನು ನಡೆಸುವ ಜವಾಬ್ದಾರಿಯನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಪುರೋಹಿತರಿಗೆ ನೀಡಲಾಗಿದೆ. ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸುವುದಕ್ಕಾಗಿ ಶೃಂಗೇರಿಯ ಪುರೋಹಿತರ ತಂಡ ಆಗಲೇ ದಿಲ್ಲಿ ತಲುಪಿಸಿದ್ದು ಶನಿವಾರ ಸಂಜೆಯಿಂದಲೇ ಕಾರ್ಯಕ್ರಮಗಳು ನಡೆಯಲಿವೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಈ ಭವನವನ್ನು ಉದ್ಘಾಟಿಸಲಿದ್ದು, ಅದಕ್ಕೆ ಸಂಬಂಧಿಸಿದ ಪೂಜೆಗಳನ್ನು ಶೃಂಗೇರಿಯ ವೇದಪಾರಂಗತ ಪುರೋಹಿತರಾದ ಸೀತಾರಾಮ ಶರ್ಮ, ಶ್ರೀರಾಮ ಶರ್ಮ ಹಾಗೂ ಲಕ್ಷ್ಮೀಶ ತಂತ್ರಿ ಅವರು ನೆರವೇರಿಸಲಿದ್ದಾರೆ.

Continue Reading
Advertisement
Bengalurus CBSE class 12 topper SS Akanksh felicitated
ಕರ್ನಾಟಕ4 hours ago

CBSE Exam Results: ಸಿಬಿಎಸ್‌ಸಿಯಲ್ಲಿ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಸಂಸ್ಥೆಯ ಅಮೋಘ ಸಾಧನೆ

Siddaramaiah
ಕರ್ನಾಟಕ5 hours ago

Karnataka Cabinet Expansion: ಸರ್ಕಾರ ಟೇಕಾಫ್‌ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು

Government employees with CM Siddaramaiah
ಕರ್ನಾಟಕ5 hours ago

DA Hike: ಶೇ.4 ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ; ಸಿಎಂ ಸಿದ್ದರಾಮಯ್ಯಗೆ ಸರ್ಕಾರಿ ನೌಕರರ ಅಭಿನಂದನೆ

MLA N Ravikumar
ಕರ್ನಾಟಕ5 hours ago

New Parliament Building: ಸಂಸತ್ ಭವನ ಉದ್ಘಾಟನೆ ಬಹಿಷ್ಕಾರ ನಾಚಿಕೆಗೇಡಿನ ಸಂಗತಿ: ಎನ್. ರವಿಕುಮಾರ್‌

Nissan Magnite Geza Special Edition
ಆಟೋಮೊಬೈಲ್5 hours ago

Nissan Magnite : ನಿಸ್ಸಾನ್​ ಮ್ಯಾಗ್ನೈಟ್ ಗೆಜಾ ಬೆಲೆ 7.39 ಲಕ್ಷ ರೂ.ಗಳಿಂದ ಆರಂಭ

vistara kathaspardhe prize distribution1
ಕರ್ನಾಟಕ5 hours ago

ವಿಸ್ತಾರ ಯುಗಾದಿ ಕಥಾಸ್ಪರ್ಧೆ: ನೋಡುಗನನ್ನು ಓದುಗನನ್ನಾಗಿಸುವ ಪ್ರಯತ್ನ: ನಾಗತಿಹಳ್ಳಿ‌ ಚಂದ್ರಶೇಖರ್

BCCI MEETING
ಕ್ರಿಕೆಟ್5 hours ago

World Cup 2023 : ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ

Narendra Modi Speech At NITI Aayog Meeting
ದೇಶ5 hours ago

NITI Aayog Meeting: ವಿಕಸಿತ ಭಾರತದ ಕನಸು ಬಿತ್ತಿದ ಮೋದಿ; 11 ಸಿಎಂಗಳು ಗೈರಾದರೂ ಪ್ರಧಾನಿ ಅಭಿವೃದ್ಧಿ ಮಂತ್ರ

New parliament Building
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ನೂತನ ಸಂಸತ್ ಕಟ್ಟಡ ಪ್ರಜಾತಂತ್ರವನ್ನು ಮತ್ತಷ್ಟು ಮೆರೆಸಲಿ

person injured in bee attack
ಕರ್ನಾಟಕ6 hours ago

Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Laxmi Hebbalkar oath taking as a minister
ಕರ್ನಾಟಕ11 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ1 day ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ1 day ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ2 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

karnataka politics it takes time to implement guarantee schemes says minister priyank kharge
ಕರ್ನಾಟಕ4 days ago

Saffronisation issue : ಬಿಜೆಪಿಯವರಿಗೆ ತೊಂದರೆ ಇದ್ರೆ ಪಾಕಿಸ್ತಾನಕ್ಕೆ ಹೋಗಲಿ; ಪ್ರಿಯಾಂಕ್‌ ಖರ್ಗೆ ವಿವಾದಿತ ಹೇಳಿಕೆ

horoscope today
ಪ್ರಮುಖ ಸುದ್ದಿ4 days ago

Horoscope Today : ಪಂಚಮಿಯ ದಿನ ಪಂಚ ರಾಶಿಯವರಿಗೆ ಶುಭ ಫಲ; ಇಲ್ಲಿದೆ ಇಂದಿನ ದಿನ ಭವಿಷ್ಯ

ಟ್ರೆಂಡಿಂಗ್‌

error: Content is protected !!