ಪ್ರಮುಖ ಸುದ್ದಿ
RBI Interest rate hike | ಆರ್ಬಿಐ ರೆಪೊ ದರ ಹೆಚ್ಚಳದಿಂದ ಸಾಲಗಳ ಇಎಂಐ ಎಷ್ಟು ಹೆಚ್ಚಲಿದೆ? ಇಲ್ಲಿದೆ ವಿವರ
ರಿಸರ್ವ್ ಬ್ಯಾಂಕ್ ಶುಕ್ರವಾರ ತನ್ನ ರೆಪೊ ದರದಲ್ಲಿ 0.50% ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಗೃಹ ಸಾಲ, ವೈಯಕ್ತಿಕ ಸಾಲ, ವಾಹನ ಸಾಲಗಳ ಬಡ್ಡಿ ದರ ಏರಿಕೆಯಾಗಲಿದೆ. (RBI Interest rate hike) ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ವಿವರ.
ಮುಂಬಯಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನ ರೆಪೊ ದರವನ್ನು ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲಗಳ ಬಡ್ಡಿ ದರಗಳಲ್ಲಿ ಏರಿಕೆಯಾಗಲಿದೆ. (RBI Interest rate hike) ಈ ಕುರಿತ ವಿವರ ಇಂತಿದೆ.
ಆರ್ಬಿಐ ರೆಪೊ ದರವನ್ನು 0.50% ಹೆಚ್ಚಿಸಿದ್ದು, 5.90%ಕ್ಕೆ ಏರಿಕೆಯಾಗಿದೆ. ಇದರ ಪರಿಣಾಮ ರೆಪೊ ದರ ಆಧಾರಿತ ಎಲ್ಲ ಸಾಲಗಳ ಮೇಲೂ ಆಗಲಿದೆ. ಸಾಮಾನ್ಯವಾಗಿ ಬ್ಯಾಂಕ್ಗಳು ಬಡ್ಡಿ ದರ ಹೆಚ್ಚಿಸುವ ವೇಳೆ ಇಎಂಐ ಬದಲಿಗೆ, ಇಎಂಐ ಸಂಖ್ಯೆಯನ್ನು ಹೆಚ್ಚಿಸುತ್ತವೆ. ಆರ್ಬಿಐ ತನ್ನ ರೆಪೊ ದರ ಹೆಚ್ಚಿಸಿರುವ ಪರಿಣಾಮ ನಾನಾ ಬಗೆಯ ಸಾಲಗಳು ದುಬಾರಿಯಾಗಲಿದೆ.
30 ಲಕ್ಷ ರೂ. ಗೃಹ ಸಾಲದ ಇಎಂಐನಲ್ಲಿ 957 ರೂ. ಏರಿಕೆ
ಉದಾಹರಣೆಗೆ ಒಬ್ಬ ವ್ಯಕ್ತಿ 30 ಲಕ್ಷ ರೂ. ಗೃಹ ಸಾಲ ಹೊಂದಿದ್ದು, 20 ವರ್ಷಗಳ ಅವಧಿಗೆ, ವಾರ್ಷಿಕ 8.5% ಬಡ್ಡಿ ದರವೂ ಇದ್ದರೆ, ಇಎಂಐನಲ್ಲಿ 957 ರೂ. ಹೆಚ್ಚಳವಾಗಲಿದೆ. ಅಂದರೆ ಇಎಂಐ 26,035 ರೂ.ಗಳಿಂದ 26,992 ರೂ.ಗೆ ಏರಿಕೆಯಾಗಲಿದೆ.
ವಾಹನ ಸಾಲ: ನೀವು 7 ವರ್ಷಗಳ ಅವಧಿಗೆ 8 ಲಕ್ಷ ರೂ. ವಾಹನ ಸಾಲವನ್ನು ಹೊಂದಿದ್ದರೆ, ಬಡ್ಡಿ ದರ 11.00% ಇದ್ದರೆ, ಅದು ಈಗ 11.5%ಕ್ಕೆ ಏರಿಕೆಯಾಗಲಿದೆ. ಇಎಂಐನಲ್ಲಿ 211 ರೂ. ಹೆಚ್ಚಳವಾಗಲಿದೆ. ಅಂದರೆ 13,698 ರೂ.ಗಳಿಂದ 13,909 ರೂ.ಗೆ ಇಎಂಐ ಹೆಚ್ಚಳವಾಗಲಿದೆ.
ವೈಯಕ್ತಿಕ ಸಾಲ: ಒಬ್ಬ ವ್ಯಕ್ತಿ 5 ವರ್ಷಗಳ ಅವಧಿಗೆ 5 ಲಕ್ಷ ರೂ. ವೈಯಕ್ತಿಕ ಸಾಲ ತೆಗೆದುಕೊಂಡಿದ್ದರೆ, ಬಡ್ಡಿ ದರ 15% ಇದ್ದರೆ 15.5%ಕ್ಕೆ ಹೆಚ್ಚಳವಾಗಲಿದೆ. ಇಎಂಐನಲ್ಲಿ 132 ರೂ. ಏರಿಕೆಯಾಗಲಿದೆ. ಅಂದರೆ 11,895 ರೂ.ಗಳಿಂದ 12,027 ರೂ.ಗೆ ಏರಿಕೆಯಾಗಲಿದೆ.
ಇದನ್ನೂ ಓದಿ : RBI Interest rate hike | ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಬಡ್ಡಿ ದರದಲ್ಲಿ 0.50% ಏರಿಕೆ ಘೋಷಣೆ
ಕರ್ನಾಟಕ
Karnataka Cabinet Expansion: ಸರ್ಕಾರ ಟೇಕಾಫ್ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು
Karnataka Cabinet Expansion: ಸಿದ್ದರಾಮಯ್ಯ ಅವರು ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಯಿತು ಎನ್ನುವಷ್ಟರಲ್ಲಿಯೇ ಸಚಿವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ಶುರುವಾಗಿದೆ. ಹಾಗಾಗಿ, ಕೆಲ ಖಾತೆಗಳನ್ನು ಸಿದ್ದರಾಮಯ್ಯ ಅವರು ಬದಲಾಯಿಸಿದ್ದಾರೆ.
ಬೆಂಗಳೂರು: ‘ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ’ ಎಂಬ ಮಾತಿನಂತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು, ಕಾಂಗ್ರೆಸ್ ಗೆಲುವು ಸಾಧಿಸಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಸಚಿವ ಸಂಪುಟ ಸಭೆ ವಿಸ್ತರಣೆಯಾದರೂ ಪಕ್ಷದಲ್ಲಿ ಆಂತರಿಕ ಗೊಂದಲ, ಅಸಮಾಧಾನ ಮಾತ್ರ ನಿಂತಿಲ್ಲ. ಖಾತೆ ಹಂಚಿಕೆ ಬಳಿಕವೂ ಸಚಿವರ ಮಧ್ಯೆಯೇ ಅಸಮಾಧಾನದ ಹೊಗೆ ಜಾಸ್ತಿಯಾದ ಕಾರಣ ರಾತ್ರೋರಾತ್ರಿ ಸಿದ್ದರಾಮಯ್ಯ ಅವರು ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.
ಹೌದು, ಎಂ.ಸಿ.ಸುಧಾಕರ್ ಅವರಿಗೆ ನೀಡಿದ್ದ ವೈದ್ಯಕೀಯ ಶಿಕ್ಷಣ ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಲಾಗಿದೆ. ಇನ್ನು ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಿದ್ದ ಉನ್ನತ ಶಿಕ್ಷಣ ಖಾತೆಯನ್ನು ಎಂ.ಸಿ.ಸುಧಾಕರ್ ಅವರಿಗೆ ನೀಡಿ ಸಮಾಧಾನ ಮಾಡಿದ್ದಾರೆ. ಹಾಗೆಯೇ, ಪ್ರಿಯಾಂಕ್ ಖರ್ಗೆ ಅವರಿಗೆ ಪಂಚಾಯತ್ ರಾಜ್ ಜತೆಗೆ ಐಟಿಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕಾನೂನು ಸಂಸದೀಯ ಜತೆಗೆ ಪ್ರವಾಸೋದ್ಯಮ ಖಾತೆಯನ್ನು ಎಚ್.ಕೆ.ಪಾಟೀಲ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಬೋಸರಾಜು ಅವರಿಗೆ ಸಣ್ಣ ನೀರಾವರಿ ಖಾತೆ ಜತೆಗೆ ವೈಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಮತ್ತೊಂದೆಡೆ, ಡಾ.ಜಿ.ಪರಮೇಶ್ವರ್ ಅವರಿಗೆ ಗೃಹ ಖಾತೆಯನ್ನು ನಿರ್ವಹಣೆ ಮಾಡಲು ಇಷ್ಟವಿಲ್ಲ. ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ಸುತಾರಾಂ ಬೇಕಾಗಿಲ್ಲ. ಇವರಿಬ್ಬರು ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವುದು ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿದೆ. ಹಾಗಾಗಿಯೇ, ಸಚಿವರು ಹಾಗೂ ಅವರ ಖಾತೆ ಕುರಿತ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿದೆ ಸಚಿವರು ಹಾಗೂ ಅವರ ಖಾತೆಗಳ ಅಂತಿಮ ಪಟ್ಟಿ
ಮೂಲ-ವಲಸಿಗ ಜಗಳ
ಸಚಿವ ಸಂಪುಟ ವಿಸ್ತರಣೆ ನಂತರ ಸಚಿವರಲ್ಲಿ ಅಸಮಾಧಾನದ ಜತೆಗೆ ಕಾಂಗ್ರೆಸ್ನಲ್ಲಿ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ. ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ
ಸಚಿವ ಸ್ಥಾನ ಮಿಸ್ ಆದ ಕುರಿತು ಮಾತನಾಡಿದ ಹರಿಪ್ರಸಾದ್, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು. ಮತ್ತೊಂದೆಡೆ, ಖಾತೆ ಸಿಗದ ಕಾರಣ ಟಿ.ಬಿ.ಜಯಚಂದ್ರ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇಶ
NITI Aayog Meeting: ವಿಕಸಿತ ಭಾರತದ ಕನಸು ಬಿತ್ತಿದ ಮೋದಿ; 11 ಸಿಎಂಗಳು ಗೈರಾದರೂ ಪ್ರಧಾನಿ ಅಭಿವೃದ್ಧಿ ಮಂತ್ರ
NITI Aayog Meeting: ಮುಖ್ಯಮಂತ್ರಿಗಳ ಗೈರು ಹಾಜರಿಯ ಮಧ್ಯೆಯೇ ನೀತಿ ಆಯೋಗದ ಸಭೆಯಲ್ಲಿ ನರೇಂದ್ರ ಮೋದಿ ಅವರು ಅಭಿವೃದ್ಧಿಯ ಮಂತ್ರ ಪಠಿಸಿದರು. ವಿಕಸಿತ ಭಾರತದ ಕನಸು ಬಿತ್ತಿದರು.
ನವದೆಹಲಿ: ನೀತಿ ಆಯೋಗದ ಎಂಟನೇ ಗವರ್ನಿಂಗ್ ಸಮಿತಿ ಸಭೆ ನಡೆದಿದ್ದು, 11 ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಉಳಿದ ಸಿಎಂಗಳು ಹಾಜರಾಗಿದ್ದು, ಇದೇ ವೇಳೆ ನರೇಂದ್ರ ಮೋದಿ ಅವರು 2047ರ ವೇಳೆಗೆ ಭಾರತದ ಅಭಿವೃದ್ಧಿಯ ನಕ್ಷೆ ಹಾಕಿದ್ದಾರೆ. “ಎಲ್ಲರೂ ಒಗ್ಗೂಡಿ ವಿಕಸಿತ ಭಾರತದ (ಅಭಿವೃದ್ಧಿ ಹೊಂದಿದ ಭಾರತ) ಕನಸು ನನಸು ಮಾಡೋಣ” ಎಂದು ಹೇಳಿದ್ದಾರೆ.
“ಭಾರತವು ಏಳಿಗೆ ಹೊಂದುತ್ತಿದ್ದು, ಸರ್ವ ಕ್ಷೇತ್ರಗಳಲ್ಲಿ ನಾವು ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಒಕ್ಕೂಟದ ವ್ಯವಸ್ಥೆಯ ಬೇರುಗಳು ಇನ್ನಷ್ಟು ಬಲವಾಗಬೇಕು. ದೇಶದ ಜನರಿಗೆ ಸಕಲ ಮೂಲ ಸೌಕರ್ಯಗಳು ಸಿಗುವಂತಾಗಬೇಕು. ಜಲ ಸಂರಕ್ಷಣೆ, ಪರಿಸರ ರಕ್ಷಣೆ, ಆರ್ಥಿಕ ಶಿಸ್ತಿನಲ್ಲಿ ನಾವು ಇನ್ನಷ್ಟು ನೈಪುಣ್ಯ ಸಾಧಿಸಬೇಕು. ಜಾಗತಿಕ ಮಟ್ಟದ ಸ್ಪರ್ಧೆಗೆ ನಾವು ಇನ್ನಷ್ಟು ಮುಕ್ತವಾಗಬೇಕು. ಸಣ್ಣ ಕೈಗಾರಿಕೆಗಳು, ಎಂಎಸ್ಎಂಇಗಳ ಏಳಿಗೆಯಾಗಬೇಕು. ಇದರಿಂದ ಮಾತ್ರ ಭಾರತ ಏಳಿಗೆ ಹೊಂದಲು ಸಾಧ್ಯ. ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಇಂತಹ ಮನೋಭಾವದೊಂದಿಗೆ 2047ರ ವೇಳೆಗೆ ವಿಕಸಿತ ಭಾರತದ ನಿರ್ಮಾಣ ಮಾಡಬೇಕು” ಎಂದು ಕರೆ ನೀಡಿದರು.
ನೀತಿ ಆಯೋಗದ ಸಭೆಯಲ್ಲಿ ದೇಶದ ಅಭಿವೃದ್ಧಿಯ ದೃಷ್ಟಿಯಿಂದ 100 ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ಗಳು, ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಿ ಅಭಿವೃದ್ಧಿ ವಿಚಾರಗಳನ್ನು ಚರ್ಚಿಸಲಾಗಿದೆ. ಎಂಎಸ್ಎಂಇ, ಮೂಲ ಸೌಕರ್ಯ, ಹೂಡಿಕೆ, ಮಹಿಳಾ ಸಬಲೀಕರಣ, ಆರೋಗ್ಯ, ಕೌಶಲಾಭಿವೃದ್ಧಿ ಸೇರಿ ವಿವಿಧ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ.
#8thGCM | The Centre, States & UTs should work as Team 🇮🇳 & fulfil people's dreams & aspirations for a #VikasitBharat @ 2047. #NITIAayog can play a key role in helping them take a quantum leap towards achieving its vision of #AmritKaal: PM @narendramodi
— NITI Aayog (@NITIAayog) May 27, 2023
🔗https://t.co/2g1j5ywKZu pic.twitter.com/9EIJu9SebJ
ಗೈರಾದ ಸಿಎಂಗಳು ಯಾರು? ಏಕೆ?
ದೆಹಲಿಯಲ್ಲಿ ಆಡಳಿತ ಸೇವೆಗಳ ಮೇಲಿನ ನಿಯಂತ್ರಣ ಕುರಿತು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಭೆಗೆ ಹಾಜರಾಗಿಲ್ಲ. ಇನ್ನು, ಕೇಂದ್ರದಿಂದ ಅನುದಾನ ಸಿಗುತ್ತಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಕೂಡ ಗೈರಾಗಿದ್ದಾರೆ. ಕರ್ನಾಟಕದಲ್ಲಿ ಸಚಿವರ ಪ್ರಮಾಣವಚನ, ಖಾತೆ ಹಂಚಿಕೆ ಹಿನ್ನೆಲೆಯಲ್ಲಿ ನೂತನ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.
ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಬೇರೆ ಕಾರ್ಯಕ್ರಮದಿಂದಾಗಿ ಒಡಿಶಾ ಸಿಎಂ ನವೀನ್ ಪಾಟ್ನಾಯಕ್, ಕೇಂದ್ರದ ಮೇಲಿನ ಅಸಮಾಧಾನದಿಂದಾಗಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಬಿಹಾರದ ನಿತೀಶ್ ಕುಮಾರ್, ತೆಲಂಗಾಣದ ಕೆ.ಚಂದ್ರಶೇಖರ ರಾವ್ ಹಾಗೂ ಯಾವುದೇ ಕಾರಣ ನೀಡದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.
ಇದನ್ನೂ ಓದಿ: NITI Aayog Meeting: ಕೇಂದ್ರಕ್ಕೆ ಬಾಯ್ಕಾಟ್ ಬಿಸಿ; ದೀದಿ ಬಳಿಕ ನೀತಿ ಆಯೋಗದ ಸಭೆ ಬಹಿಷ್ಕರಿಸಿದ ಕೇಜ್ರಿವಾಲ್
ಪ್ರಮುಖ ಸುದ್ದಿ
ವಿಸ್ತಾರ ಸಂಪಾದಕೀಯ: ನೂತನ ಸಂಸತ್ ಕಟ್ಟಡ ಪ್ರಜಾತಂತ್ರವನ್ನು ಮತ್ತಷ್ಟು ಮೆರೆಸಲಿ
ನೂತನ ಹಾಗೂ ಸುಸಜ್ಜಿತ ಸಂಸತ್ ಭವನ ನಮ್ಮ ಈಗಿನ ಹಾಗೂ ಭವಿಷ್ಯದ ಅಗತ್ಯ. ಮುಂದೆ ಅದೇ ಭಾರತದ ಪ್ರಜಾತಂತ್ರದ ಭವ್ಯ ಲಾಂಛನವೂ ಆಗಿರಲಿದೆ.
ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಪೀಕರ್ ಓಂ ಬಿರ್ಲಾ ಭಾನುವಾರ ಉದ್ಘಾಟಿಸಲಿದ್ದಾರೆ. ಬದಲಾದ ಕಾಲಮಾನಕ್ಕೆ ತಕ್ಕಂತೆ ನೂತನ ಸಂಸತ್ ಭವನ ನಿರ್ಮಾಣ ಅಗತ್ಯವಾಗಿತ್ತು. ಈಗ ಬಳಕೆಯಾಗುತ್ತಿರುವ ಸಂಸತ್ ಭವನ ಶತಮಾನವನ್ನು ಸಮೀಪಿಸುತ್ತಿದ್ದು, ಅದರ ಗರಿಷ್ಠ ಬಳಕೆಯಾಗಿದೆ. ಮುಂದೆ ಸಂಸತ್ ಸದಸ್ಯರ ಸಂಖ್ಯೆ ಕೂಡ ಹೆಚ್ಚಾಗಲಿರುವುದರಿಂದ ಆಸನಗಳ ಸಂಖ್ಯೆಯೂ ಹೆಚ್ಚಿಸುವುದು ಅವಶ್ಯವಾಗಿತ್ತು. ಹಿಂದಿನ ಸಂಸತ್ ಭವನದಲ್ಲಿ ಲೋಕಸಭೆಯ ಆಸನಗಳ ಸಂಖ್ಯೆ 550 ಇದ್ದರೆ, ಹೊಸ ಕಟ್ಟಡದಲ್ಲಿ ಈ ಸಂಖ್ಯೆ 888ಕ್ಕೆ ಏರುತ್ತದೆ. ರಾಜ್ಯಸಭೆಯ ಆಸನಗಳ ಸಂಖ್ಯೆ 250ರಿಂದ 384ಕ್ಕೆ ಏರುತ್ತದೆ. ಪ್ರಾಕೃತಿಕ ಮತ್ತು ಭದ್ರತೆಯ ದೃಷ್ಟಿಯಿಂದ ಈಗಿನ ಕಟ್ಟಡ ಹಿಂದಿನ ಕಟ್ಟಡಕ್ಕಿಂತ ಹೆಚ್ಚು ಸುರಕ್ಷಿತವಾಗಿದೆ.
ಹಿಂದಿನ ಕಟ್ಟಡ ವಿಸ್ತೀರ್ಣ 24,281 ಚ.ಮೀ. ಇದ್ದರೆ, ಈಗಿನ ಕಟ್ಟಡ ವಿಸ್ತೀರ್ಣ 64,500 ಚ.ಮೀ ಇದೆ. ಪ್ರಜಾತಂತ್ರದ ದೇಗುಲ ಎನ್ನಲಾಗುವ ನೂತನ ಕಟ್ಟಡದ ಪಕ್ಷಿನೋಟವೇ ಅದ್ಭುತವಾಗಿದೆ. 971 ಕೋಟಿ ರೂ. ವೆಚ್ಚದ ಈ ಭವ್ಯ ಕಟ್ಟಡ ಕೇವಲ ಎರಡೇ ವರ್ಷದೊಳಗೆ ನಿರ್ಮಾಣ ಆಗಿರುವುದು ಅದ್ಭುತವೇ ಸರಿ. ಆಧುನಿಕ ತಂತ್ರಜ್ಞಾನವನ್ನೂ ಕಲಾಪಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಳಸಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು 60,000 ಕಾರ್ಮಿಕರನ್ನು ಸನ್ಮಾನಿಸಲಿರುವುದು ಕೂಡ ಅರ್ಥಪೂರ್ಣವಾಗಿದೆ. ಕ್ರಿ.ಶ. 3ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ್ದ ಚೋಳ ರಾಜರು ಬಳಸಿದ್ದ ಚಿನ್ನದ ಸೆಂಗೋಲ್ (ರಾಜದಂಡ) ಅನ್ನು ನೂತನ ಸಂಸತ್ ಭವನದಲ್ಲಿ ಭಾರತದ ಸ್ವಾತಂತ್ರ್ಯದ ಪ್ರತೀಕವಾಗಿ ಇರಿಸುತ್ತಿರುವುದು ಕೂಡ ಭಾರತೀಯ ಪರಂಪರೆಗೆ ನೀಡುತ್ತಿರುವ ಮಹತ್ವದ ಅಂಶ.
ಪ್ರತಿಯೊಂದು ರಾಷ್ಟ್ರವೂ ತನ್ನದೇ ಆದ ಮಹತ್ತು, ಭವ್ಯತೆಗಳನ್ನು ಹೊಂದಿರುವ ವಾಸ್ತುಶಿಲ್ಪಗಳನ್ನು ಸೃಷ್ಟಿಸುತ್ತದೆ. ಭಾರತದ ಹಳೆಯ ಸಂಸತ್ತು ಕೂಡ ಭವ್ಯವಾದುದು; ಆದರೆ ಅದು ಬ್ರಿಟಿಷರಿಂದ ನಿರ್ಮಿತವಾದುದು. ಬ್ರಿಟಿಷರಿಂದ ನಿರ್ಮಿತ ಎಂಬ ಕಾರಣಕ್ಕೇ ತ್ಯಾಜ್ಯವಾಗಬೇಕಿಲ್ಲ. ಆದರೆ, ನಮ್ಮನ್ನು ಆಳುವ ಸ್ವಾತಂತ್ರ್ಯ ಹಾಗೂ ಅಧಿಕಾರಗಳನ್ನು ನಾವೇ ಪಡೆದುಕೊಂಡಂತೆ, ಹಾಗೆ ಆಳುವ ಸರ್ಕಾರ ಕಾರ್ಯಾಚರಿಸುವ ಸಂಸತ್ ಭವನ ಕೂಡ ನಮ್ಮ ನಿರ್ಮಾಣವೇ ಆಗಿರಬೇಕು ಎಂಬ ಕನಸು ನಮಗಿರುವುದೂ ಸಹಜ. ನೂತನ ಹಾಗೂ ಸುಸಜ್ಜಿತ ಸಂಸತ್ ಭವನ ನಮ್ಮ ಈಗಿನ ಹಾಗೂ ಭವಿಷ್ಯದ ಅಗತ್ಯ. ಮುಂದೆ ಅದೇ ಭಾರತದ ಪ್ರಜಾತಂತ್ರದ ಭವ್ಯ ಲಾಂಛನವೂ ಆಗಿರಲಿದೆ.
ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ
ಈ ಮಧ್ಯೆ, ಉದ್ಘಾಟನೆ ಸಮಾರಂಭಕ್ಕೆ ಕೆಲವು ಪ್ರತಿಪಕ್ಷಗಳು ಬಹಿಷ್ಕಾರ ಹಾಕಿವೆ. ಲೋಕಸಭೆ- ರಾಜ್ಯಸಭೆ ನಡೆಯುತ್ತಿರುವಾಗ ನೆಪ ತೆಗೆದು ಮಾಡುವ ಸಭಾತ್ಯಾಗವೇ ಸಮಂಜಸವಲ್ಲ ಎಂದಾಗ, ದೇಶದ ಹೆಮ್ಮೆಯಾದ ನೂತನ ಸಂಸತ್ ಭವನದ ಉದ್ಘಾಟನೆಯನ್ನೇ ಬಹಿಷ್ಕರಿಸುವ ನಡೆ ಎಷ್ಟು ಸರಿ? ಇದು ಪ್ರಜಾಪ್ರಭುತ್ವದ ನೈಜ ಚೈತನ್ಯಕ್ಕೇ ಕೊಡಲಿಯೇಟು. ಪ್ರಧಾನಿ ಮೋದಿ, ನೂರ ಮೂವತ್ತು ಕೋಟಿ ಪ್ರಜೆಗಳ ಪ್ರತಿನಿಧಿಯಾಗಿ ಸಂಸತ್ತನ್ನು ಉದ್ಘಾಟಿಸುತ್ತಿದ್ದಾರೆ. ಇನ್ನೂ ನೂರಾರು ವರ್ಷಗಳ ಕಾಲ ಇದು ಅರ್ಥಪೂರ್ಣ ಕಲಾಪಗಳ ತಾಣವಾಗಬೇಕಿದೆ. ರಾಷ್ಟ್ರದ ವಿವೇಕಯುತ ಮುನ್ನಡೆಯನ್ನು ನಿರ್ಣಯಿಸುವ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಳವಾಗಿರಲಿದೆ. ಈ ನಿಟ್ಟಿನಲ್ಲಿ ಪ್ರತಿಪಕ್ಷಗಳು ತಮ್ಮ ನಿರ್ಧಾರ ಮರುಪರಿಶೀಲಿಸಿ ಸಮಾರಂಭದಲ್ಲಿ ಭಾಗವಹಿಸುವುದು ವಿವೇಕಯುತವಾಗಿರುತ್ತದೆ. ಅವರ ಸಮಾರಂಭ ಬಹಿಷ್ಕಾರದ ಕರೆಯ ನಡುವೆಯೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮುಂತಾದ ಪ್ರತಿಪಕ್ಷಗಳ ನಾಯಕರು ಭಾಗವಹಿಸುತ್ತಿರುವುದು ವಿವೇಕದ ನಿರ್ಧಾರ. ಅವರ ಈ ನಡೆ ಇತರರಿಗೆ ಮಾದರಿಯಾಗಲಿ. ನೂತನ ಸಂಸತ್ ಭವನ ಭಾರತದ ಪ್ರಜಾತಂತ್ರವನ್ನು ಮತ್ತಷ್ಟು ಮೆರೆಸಲಿ.
ದೇಶ
New Parliament Building: ಸೆಂಗೋಲ್ ಎಂಬ ರಾಜದಂಡ ಸ್ವಾತಂತ್ರ್ಯದ ಸಂಕೇತ; ಪ್ರತಿಷ್ಠಾಪನೆಗೆ ಕಾರಣ ತಿಳಿಸಿದ ಮೋದಿ
New Parliament Building: ನೂತನ ಸಂಸತ್ ಭವನದಲ್ಲಿರುವ ಸ್ಪೀಕರ್ ಪೀಠದ ಬಳಿ ಚೋಳರ ಕಾಲದ ಸೆಂಗೋಲ್ಅನ್ನು ಪ್ರತಿಷ್ಠಾಪಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದುವರೆಗೆ ಮ್ಯೂಸಿಯಂನಲ್ಲಿದ್ದ ಸೆಂಗೋಲ್ಅನ್ನು ನೂತನ ಸಂಸತ್ನಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ.
ನವದೆಹಲಿ: ತಮಿಳುನಾಡಿನ ಧರ್ಮಾಪುರಂ ಹಾಗೂ ತಿರುವಾವದುತುರೈಂನ ಶೈವ ಪರಂಪರೆಯ ಅಧೀನಾಮ್ ಮಠದ ಸ್ವಾಮೀಜಿಗಳು ನರೇಂದ್ರ ಮೋದಿ ಅವರ ನಿವಾಸದಲ್ಲಿ ಸೆಂಗೋಲ್ಅನ್ನು (ರಾಜದಂಡ) ಅವರಿಗೆ ಹಸ್ತಾಂತರಿಸಿದ್ದಾರೆ. ಇದಾದ ಬಳಿಕ ಮಾತನಾಡಿದ ನರೇಂದ್ರ ಮೋದಿ, “ಸೆಂಗೋಲ್ ಎಂಬುದು ಕೇವಲ ಧರ್ಮದಂಡವಲ್ಲ. ಇದು ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿಯನ್ನು ಅಂತ್ಯಗೊಳಿಸಿದ ಸಂಕೇತ” ಎಂದು ಹೇಳಿದರು.
“ದೇಶಕ್ಕೆ ಸ್ವಾತಂತ್ರ್ಯ ಸಿಗುವ ಸಂದರ್ಭ ಬಂದಾಗ, ಅಧಿಕಾರದ ಹಸ್ತಾಂತರದ ಪ್ರತೀಕವಾಗಿ ಸೆಂಗೋಲ್ಅನ್ನು ಬಳಸಲಾಯಿತು. ತಮಿಳು ಪರಂಪರೆಯಲ್ಲಿ ಅಧಿಕಾರ ಹಸ್ತಾಂತರದ ಸಂಕೇತವಾಗಿ ಸೆಂಗೋಲ್ಅನ್ನು ನೀಡಲಾಗುತ್ತದೆ. ಹಾಗೆಯೇ, ರಾಜಧರ್ಮ ಪಾಲನೆಯ ಜವಾಬ್ದಾರಿಯನ್ನೂ ಸೆಂಗೋಲ್ ತಿಳಿಸುತ್ತದೆ. 1947ರಲ್ಲಿ ಅಧಿಕಾರದ ಹಸ್ತಾಂತರದ ವೇಳೆ ಸೆಂಗೋಲ್ಅನ್ನು ನೀಡಿದ್ದು ಗುಲಾಮಗಿರಿಯ ಅಂತ್ಯದ ಸಂಕೇತವಾಗಿತ್ತು” ಎಂದು ಹೇಳಿದರು.
ಸೆಂಗೋಲ್ ಕುರಿತು ಮೋದಿ ಭಾಷಣದ ವಿಡಿಯೊ
“ಇಂತಹ ರಾಜದಂಡವನ್ನು ನಾವು ಸಂಸತ್ತಿನಲ್ಲಿ ಪ್ರತಿಷ್ಠಾಪಿಸುತ್ತಿದ್ದೇವೆ. ದೇಶದ ಜನರ ಏಳಿಗೆ, ರಾಜಧರ್ಮವನ್ನು ಪಾಲಿಸುವುದರ ದ್ಯೋತಕವಾಗಿ ಸಂಸತ್ತಿನಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ಆದರೆ, ರಾಜದಂಡವನ್ನು ಪ್ರಯಾಗರಾಜ್ನ ಮ್ಯೂಸಿಯಂನಲ್ಲಿ ಇರಿಸಲಾಗಿತ್ತು. ಆನಂದ ಭವನದಲ್ಲಿ ವಾಕಿಂಗ್ ಸ್ಟಿಕ್ (ಊರುಗೋಲು) ಎಂದು ಪ್ರದರ್ಶನಕ್ಕಾಗಿ ಇರಿಸಲಾಗಿತ್ತು. ಆದರೆ, ನಿಮ್ಮ ಈ ಸೇವಕ ಹಾಗೂ ನಮ್ಮ ಸರ್ಕಾರವು ಆನಂದ ಭವನದಿಂದ ಸೆಂಗೋಲ್ಅನ್ನು ತಂದಿದ್ದೇವೆ. ಸ್ವಾತಂತ್ರ್ಯದ ಮೊದಲ ಫಲದ ರೂಪದಲ್ಲಿರುವ ರಾಜದಂಡವನ್ನು ಸಂಸತ್ತಿನಲ್ಲಿ ಇರಿಸುತ್ತೇವೆ. ಪ್ರಜಾಪ್ರಭುತ್ವದ ಮಂದಿರದಲ್ಲಿ ಸೆಂಗೋಲ್ ಪ್ರತಿಷ್ಠಾಪನೆಯಾಗುತ್ತಿರುವುದು ಸಂತಸ ತಂದಿದೆ. ನಮಗೆ ಇದು ಕರ್ತವ್ಯಪಥ ತೋರಿಸುತ್ತದೆ, ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸುತ್ತದೆ. ಜನತಾ ಜನಾರ್ದನರ ಸೇವೆಗೆ ಸ್ಫೂರ್ತಿ ನೀಡುತ್ತದೆ” ಎಂದರು.
#WATCH | Prime Minister Narendra Modi says, "…It would have been good if the holy #Sengol would have been given its due respect after independence and given an honourable position. But this Sengol was kept on display as a walking stick in Anand Bhawan, Prayagraj. Your 'sevak'… pic.twitter.com/Z4vKmsRQ7r
— ANI (@ANI) May 27, 2023
ಇದನ್ನೂ ಓದಿ: New Parliament Building: ಮೋದಿಗೆ ಸೆಂಗೋಲ್ ಹಸ್ತಾಂತರಿಸಿದ ಸ್ವಾಮೀಜಿಗಳು; ಭಾನುವಾರ ಸಂಸತ್ನಲ್ಲಿ ಪ್ರತಿಷ್ಠಾಪನೆ
“ತಮಿಳುನಾಡಿನ ಸಂಸ್ಕೃತಿ ಇಂದಿಗೂ ಸಮೃದ್ಧಿಯಾಗಿದೆ ಎಂದರೆ ಅದಕ್ಕೆ ಅಧೀನಮ್ ಸ್ವಾಮೀಜಿಗಳಂತಹ ಸಂತರ ಕೊಡುಗೆ ಇದೆ. ಇಂತಹ ಸಂಸ್ಥಾನಗಳಿಂದಲೇ ತಮಿಳುನಾಡಿನಲ್ಲಿ ಪರಂಪರೆ ಶ್ರೀಮಂತವಾಗಿದೆ” ಎಂದು ಬಣ್ಣಿಸಿದರು. ಪ್ರಧಾನಿ ಭಾಷಣಕ್ಕೂ ಮೊದಲು ಮೋದಿ ಅವರ ಹಣೆಗೆ ತಿಲಕ ಇಟ್ಟು, ಹಾರ ಹಾಕಿ, ಶಾಲು ಹೊದಿಸಿದ ಸ್ವಾಮೀಜಿಗಳು ಬಳಿಕ ಮೋದಿ ಅವರಿಗೆ ಸೆಂಗೋಲ್ಅನ್ನು ನೀಡಿದರು. ಮೋದಿ ಅವರು ರಾಜದಂಡಕ್ಕೆ ನಮಸ್ಕಾರ ಮಾಡಿದರು. ಇದೇ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.
ವಿಶೇಷವೆಂದರೆ ಸಂಸತ್ ಭವನದಲ್ಲಿ ನಡೆಯಲಿರುವ ಉದ್ಘಾಟನೆ ಸಂಬಂಧಿತ ಪೂಜಾ ಕೈಂಕರ್ಯಗಳನ್ನು ನಡೆಸುವ ಜವಾಬ್ದಾರಿಯನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಪುರೋಹಿತರಿಗೆ ನೀಡಲಾಗಿದೆ. ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸುವುದಕ್ಕಾಗಿ ಶೃಂಗೇರಿಯ ಪುರೋಹಿತರ ತಂಡ ಆಗಲೇ ದಿಲ್ಲಿ ತಲುಪಿಸಿದ್ದು ಶನಿವಾರ ಸಂಜೆಯಿಂದಲೇ ಕಾರ್ಯಕ್ರಮಗಳು ನಡೆಯಲಿವೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಈ ಭವನವನ್ನು ಉದ್ಘಾಟಿಸಲಿದ್ದು, ಅದಕ್ಕೆ ಸಂಬಂಧಿಸಿದ ಪೂಜೆಗಳನ್ನು ಶೃಂಗೇರಿಯ ವೇದಪಾರಂಗತ ಪುರೋಹಿತರಾದ ಸೀತಾರಾಮ ಶರ್ಮ, ಶ್ರೀರಾಮ ಶರ್ಮ ಹಾಗೂ ಲಕ್ಷ್ಮೀಶ ತಂತ್ರಿ ಅವರು ನೆರವೇರಿಸಲಿದ್ದಾರೆ.
-
ಕರ್ನಾಟಕ15 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ18 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ15 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ14 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ9 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕಿರುತೆರೆ16 hours ago
Weekend With Ramesh: ಈ ವಾರದ ವೀಕೆಂಡ್ ವಿತ್ ರಮೇಶ್ ಅತಿಥಿಗಳು ಇವರು!
-
ಕ್ರಿಕೆಟ್19 hours ago
IPL 2023: ಶತಕ ಬಾರಿಸಿ ಸೆಹವಾಗ್ ದಾಖಲೆ ಮುರಿದ ಶುಭಮನ್ ಗಿಲ್
-
ಕರ್ನಾಟಕ13 hours ago
Karnataka Cabinet: ಸಂಪುಟದಲ್ಲಿ ಸೋತರೂ ಖಾತೆಯಲ್ಲಿ ಗೆದ್ದ ಡಿ.ಕೆ. ಶಿವಕುಮಾರ್: ಇಲ್ಲಿದೆ ಎಲ್ಲ ಸಚಿವರ ಖಾತೆಗಳ ಪಟ್ಟಿ