ವಿಸ್ತಾರ Money Guide: Share Market : ಸ್ಟಾಕ್‌ ಮಾರ್ಕೆಟ್‌ನಲ್ಲಿ ಹೂಡಿಕೆಗೆ 10 ನಿಮಿಷದಲ್ಲೇ ಡಿಮ್ಯಾಟ್‌ ಖಾತೆ ತೆರೆಯುವುದು ಹೇಗೆ? Vistara News

ಪ್ರಮುಖ ಸುದ್ದಿ

ವಿಸ್ತಾರ Money Guide: Share Market : ಸ್ಟಾಕ್‌ ಮಾರ್ಕೆಟ್‌ನಲ್ಲಿ ಹೂಡಿಕೆಗೆ 10 ನಿಮಿಷದಲ್ಲೇ ಡಿಮ್ಯಾಟ್‌ ಖಾತೆ ತೆರೆಯುವುದು ಹೇಗೆ?

ಹಣದುಬ್ಬರ ಹೆಚ್ಚುತ್ತಿರುವ ಈ ದಿನಗಳಲ್ಲಿ ಸಂಪತ್ತನ್ನು ಉಳಿಸಿ ಬೆಳೆಸಲು ಷೇರುಗಳನ್ನು ಖರೀದಿಸುವುದು ಉತ್ತಮ ಹೂಡಿಕೆಯ ಆಯ್ಕೆಯಲ್ಲೊಂದು. ಆದರೆ ಅದಕ್ಕಾಗಿ ಮೊದಲು ಡಿಮ್ಯಾಟ್‌ ಖಾತೆ ಬೇಕು. ಅದನ್ನು ಪಡೆಯುವುದು ಹೇಗೆ? (Share Market) ಇಲ್ಲಿದೆ ವಿವರ.

VISTARANEWS.COM


on

demat account
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೀವು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಬಯಸುತ್ತಿದ್ದೀರಾ? ನಿಮ್ಮ ಸ್ನೇಹಿತರು ಸ್ಟಾಕ್‌ ಮಾರ್ಕೆಟ್‌ನಲ್ಲಿ ಸದ್ದಿಲ್ಲದೆ ಹೂಡಿಕೆ ಮಾಡಿ ದುಡ್ಡು ಗಳಿಸುತ್ತಿರುವುದನ್ನು ಕಂಡು, ನಿಮಗೂ ನಾನೇಕೆ ಇನ್ವೆಸ್ಟ್‌ ಮಾಡಬಾರದು ಎನ್ನಿಸಿದೆಯೇ? ಹಾಗೆ ಅನ್ನಿಸಿದ್ದರೂ, ಸರಿಯಾದ ಮಾಹಿತಿ ಸಿಗುತ್ತಿಲ್ಲ ಎಂದು ಕೊರಗುತ್ತಿದ್ದೀರಾ? ಹಾಗಾದರೆ ಈ ಲೇಖನವನ್ನು ಮಿಸ್‌ ಮಾಡದೆ ಓದಿ, ಪ್ರವರ್ಧಮಾನಕ್ಕೆ ಬರುತ್ತಿರುವ ಭಾರತೀಯ ಷೇರು ಮಾರುಕಟ್ಟೆಯಲ್ಲಿ (Share Market) ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಹೂಡಿಕೆ ಮಾಡಬಹುದು. ಹಾಗಾದರೆ ಎಲ್ಲಿಂದ ಆರಂಭಿಸುವುದು ಎನ್ನುತ್ತೀರಾ? ಅದಕ್ಕೆ ಉತ್ತರ ಡಿಮ್ಯಾಟ್‌ ಅಕೌಂಟ್ ಮತ್ತು ಟ್ರೇಡಿಂಗ್‌ ಅಕೌಂಟ್.‌‌ ಷೇರು, ಬಾಂಡ್‌, ಮ್ಯೂಚುವಲ್‌ ಫಂಡ್‌, ಇಟಿಎಫ್‌, ಆನ್‌ಲೈನ್‌ ಇನ್ಷೂರೆನ್ಸ್‌ಗಳನ್ನು ಹೊಂದಲು ಮತ್ತು ನಿರ್ವಹಿಸಲು ಡಿಮ್ಯಾಟ್‌ ಖಾತೆ ಅನುಕೂಲಕರ. ಡಿಮ್ಯಾಟ್‌ ಅಕೌಂಟ್‌ ನಂಬರ್‌ನಲ್ಲಿ 16 ಅಂಕಿಗಳು ಇರುತ್ತವೆ.

bse

ಒಂದಕ್ಕಿಂತ ಹೆಚ್ಚು ಡಿಮ್ಯಾಟ್‌ ತೆರೆಯಬಹುದೆ?

ಡಿಮ್ಯಾಟ್‌ ಖಾತೆ ತೆರೆಯಲು ವಯೋಮಿತಿ ಇರುವುದಿಲ್ಲ. ಅಪ್ರಾಪ್ತರೂ ಪೋಷಕರ ನೆರವಿನೊಂದಿಗೆ ಡಿಮ್ಯಾಟ್‌ ಖಾತೆ ತೆರೆಯಬಹುದು. ಒಂದಕ್ಕಿಂತ ಹೆಚ್ಚು ಡಿಮ್ಯಾಟ್‌ ಖಾತೆಯನ್ನು ತೆರೆಯಬಹುದು. ಬೇರೆ ಬೇರೆ ಡಿಮ್ಯಾಟ್‌ ಖಾತೆಯಲ್ಲಿ ಒಂದೇ ಕಂಪನಿಯ ಷೇರುಗಳನ್ನೂ ಖರೀದಿಸಬಹುದು. ಆದರೆ ಒಂದೇ ಬ್ರೋಕರೇಜ್‌ನಲ್ಲಿ ಒಬ್ಬ ವ್ಯಕ್ತಿ ಒಂದೇ ಖಾತೆಯನ್ನು ತೆರೆಯಬಹುದು.

ಡಿಮ್ಯಾಟ್‌ ಖಾತೆಯನ್ನು ಪಡೆಯುವುದು ಹೇಗೆ?

ಡಿಮ್ಯಾಟ್‌ ಖಾತೆಯನ್ನು ನ್ಯಾಶನಲ್‌ ಸೆಕ್ಯುರಿಟೀಸ್‌ ಡೆಪಾಸಿಟರಿ ಲಿಮಿಟೆಡ್‌ (NSDL), ಸೆಂಟ್ರಲ್‌ ಡಿಪಾಸಿಟರಿ ಸರ್ವೀಸ್‌ ಲಿಮಿಟೆಡ್‌ (CSDL) ಮೂಲಕ ಪಡೆಯಬೇಕು. ಈ ಸೆಂಟ್ರಲ್‌ ಡಿಪಾಸಿಟರಿಗಳು ಏಜೆಂಟ್‌ಗಳನ್ನು ಹೊಂದಿರುತ್ತವೆ. ಅವುಗಳನ್ನು ಡಿಪಾಸಿಟರಿ ಪಾರ್ಟಿಸಿಪೆಂಟ್‌ (Depository participants) ಎನ್ನುತ್ತಾರೆ. ಅವುಗಳು ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತವೆ. ಜೆರೋಧಾ, ಎಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಎಸ್‌ಬಿಐ ಇತ್ಯಾದಿಗಳು ಡಿಪಾಸಿಟರಿ ಪಾರ್ಟಿಸಿಪೆಂಟ್‌ ಆಗಿ ಡಿಮ್ಯಾಟ್‌ ಸೇವೆಯನ್ನು ಒದಗಿಸುತ್ತವೆ. ಅವುಗಳ ಮೂಲಕ ಡಿಮ್ಯಾಟ್‌ ಖಾತೆಯನ್ನು ಹೊಂದಬಹುದು.

10 ನಿಮಿಷದಲ್ಲೇ ಡಿಮ್ಯಾಟ್‌ ಖಾತೆ ನಿಮಗೆ ಲಭ್ಯ

ಸ್ಟಾಕ್‌ ಮಾರ್ಕೆಟ್‌ನಲ್ಲಿ ಹೂಡಿಕೆಗೆ ಡಿಮ್ಯಾಟ್‌ ಖಾತೆ ಕಡ್ಡಾಯ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗೆ ತೀರ ವಿಳಂಬವಾಯಿತು ಎನ್ನುವ ಕಾಲವೇ ಇಲ್ಲ. ಡಿಮ್ಯಾಟ್‌ ಖಾತೆಯನ್ನು ಹೊಂದುವುದು ಈಗ ಬಹಳ ಸುಲಭ. ಆನ್‌ಲೈನ್‌ನಲ್ಲಿ ಕೇವಲ 10 ನಿಮಿಷದೊಳಗೆ ಪಡೆಯಬಹುದು. 15 ನಿಮಿಷದೊಳಗೆ ಡಿಮ್ಯಾಟ್‌ ಮತ್ತು ಟ್ರೇಡಿಂಗ್‌ ಅಕೌಂಟ್‌ ಅನ್ನು ನೀವು ತೆರೆಯಬಹುದು ಎನ್ನುತ್ತದೆ ಎಸ್‌ಬಿಐ ಸೆಕ್ಯುರಿಟೀಸ್.‌ ಡಿಮ್ಯಾಟ್‌ ಖಾತೆಯಲ್ಲಿ ಎಲ್ಲವೂ ಆನ್‌ಲೈನ್‌ನಲ್ಲಿ ಇರುವುದರಿಂದ ಭೌತಿಕವಾಗಿ ಕಾಗದಪತ್ರಗಳ ಅವಶ್ಯತೆ ಇರುವುದಿಲ್ಲ. ಕಾಗದಪತ್ರಗಳಾದರೆ ಕಾಣೆಯಾಗುವ, ಕಳ್ಳತನವಾಗುವ ಅಪಾಯ ಕೂಡ ಇರುತ್ತದೆ. ಆದರೆ ಡಿಮ್ಯಾಟ್‌ನಲ್ಲಿ ಅಂಥ ಅಪಾಯ ಇರುವುದಿಲ್ಲ. ಹೀಗಾಗಿ ಅದು ಸಂಪೂರ್ಣ ಸುರಕ್ಷಿತ. ನೀವು ನಿಶ್ಚಿಂತೆಯಿಂದ ಡಿಮ್ಯಾಟ್‌ ಅಕೌಂಟ್‌ ತೆರೆಯಬಹುದು.

Adhaar Card

ತ್ರೀ-ಇನ್‌ ಒನ್‌ ಡಿಮ್ಯಾಟ್‌ ಅಕೌಂಟ್ ಅನುಕೂಲಕರ: ಡಿಮ್ಯಾಟ್‌ ಅಕೌಂಟ್‌, ಟ್ರೇಡಿಂಗ್‌ ಅಕೌಂಟ್‌ ಮತ್ತು ಬ್ಯಾಂಕ್‌ ಅಕೌಂಟ್‌ -ಇವು ಮೂರನ್ನೂ ಒಟ್ಟಿಗೆ ಒದಗಿಸುವ ತ್ರೀ-ಇನ್‌ ಒನ್‌ ಡಿಮ್ಯಾಟ್‌ ಅಕೌಂಟ್‌ಗಳನ್ನು ಒದಗಿಸುವ ಬ್ಯಾಂಕ್‌ಗಳು ಇವೆ. ಡಿಮ್ಯಾಟ್‌ ಖಾತೆಯನ್ನು ಮಾತ್ರ ನೀಡುವ ಖಾತೆಗಳಿವೆ. ಇವುಗಳ ಪ್ರಯೋಜನ ಏನೆಂದರೆ ಷೇರುಗಳನ್ನು ಇಡಲು ಡಿಮ್ಯಾಟ್‌ ಖಾತೆ, ಷೇರುಗಳನ್ನು ಕೊಳ್ಳಲು ಮತ್ತು ಮಾರಲು ಟ್ರೇಡಿಂಗ್‌ ಅಕೌಂಟ್‌ ಹಾಗೂ ಬ್ಯಾಂಕ್‌ ಉಳಿತಾಯ ಖಾತೆ ಒಟ್ಟಿಗೆ ಇರುತ್ತದೆ. ಮೂರೂ ಖಾತೆಗಳು ಒಟ್ಟಿಗೆ ಇರುವುದು ಅನುಕೂಲಕರ.

ಡಿಮ್ಯಾಟ್‌ ಖಾತೆ ಸೌಲಭ್ಯ ನೀಡುವ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳು:

ಜೆರೋಧಾ

ಐಸಿಐಸಿಐ ಡೈರೆಕ್ಟ್‌ (ಐಸಿಐಸಿಐ ಬ್ಯಾಂಕ್)‌

ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ (ಎಚ್‌ಡಿಎಫ್‌ಸಿ ಬ್ಯಾಂಕ್)‌

ಎಸ್‌ಬಿಐ ಕ್ಯಾಪ್‌ ಸೆಕ್ಯುರಿಟೀಸ್‌ (ಎಸ್‌ಬಿಐ ಬ್ಯಾಂಕ್)‌

ಎಕ್ಸಿಸ್‌ ಡೈರೆಕ್ಟ್‌ (ಎಕ್ಸಿಸ್‌ ಬ್ಯಾಂಕ್)‌

ಕೋಟಕ್‌ ಸೆಕ್ಯುರಿಟೀಸ್‌ (ಕೋಟಕ್‌ ಬ್ಯಾಂಕ್)

ಡಿಮ್ಯಾಟ್‌ ಖಾತೆ ತೆರೆಯುವ ಸುಲಭ ವಿಧಾನ: ಎಸ್‌ಬಿಐ ಸೆಕ್ಯುರಿಟೀಸ್‌, ಜೆರೋಧಾ, ಐಸಿಐಸಿಐ ಸೆಕ್ಯುರಿಟೀಸ್‌ ಮೊದಲಾದ ಸಂಸ್ಥೆಗಳ ವೆಬ್‌ಸೈಟ್‌ಗಳ ಮೂಲಕ ಲಾಗಿನ್‌ ಆಗಿ ಡಿಮ್ಯಾಟ್‌ ಖಾತೆಯನ್ನು ನೀವು ತೆರೆಯಬಹುದು. 10-15 ನಿಮಿಷಗಳಲ್ಲಿ ಇದು ಲಭ್ಯ.

ಸಾಮಾನ್ಯವಾಗಿ ಖಾತೆ ತೆರೆಯುವ ಹಂತಗಳು ಇಂತಿವೆ: ಸೈನ್‌ ಅಪ್‌, ಆಡ್‌ ಬ್ಯಾಂಕ್‌, ಅಪ್‌ಲೋಡ್‌ ಡಾಕ್ಯುಮೆಂಟ್ಸ್‌, ಇ-ಸೈನ್.‌

೧. ಸೈನ್‌ ಅಪ್‌ನಲ್ಲಿ ನಿಮ್ಮ ಆಯ್ಕೆಯ ಡಿಪಿಯನ್ನು ( ಡಿಪಾಸಿಟರಿ ಪಾರ್ಟಿಸಿಪೆಂಟ್‌) ಆಯ್ಕೆ ಮಾಡಿಕೊಳ್ಳಿ.

2. ಆಡ್‌ ಬ್ಯಾಂಕ್‌ನಲ್ಲಿ ಬ್ಯಾಂಕ್‌ ಖಾತೆ ವಿವರಗಳನ್ನು ಸಲ್ಲಿಸಿ. (ಜೆರೋಧಾ, ಎಸ್‌ಬಿಐ ಸೆಕ್ಯುರಿಟೀಸ್‌ ಇತ್ಯಾದಿ).

3. ಪ್ಯಾನ್‌ ಸಂಖ್ಯೆ, ವಿಳಾಸ ವಿವರವನ್ನು ಒಳಗೊಂಡ ಶಾರ್ಟ್‌ ವಿಡಿಯೊವನ್ನು ಸಲ್ಲಿಸಿ.

೪. ಆಧಾರ್‌ ಜತೆ ಲಿಂಕ್‌ ಆಗಿರುವ ಮೊಬೈಲ್‌ ಸಂಖ್ಯೆ ಬಳಸಿ ಇ-ಸೈನ್‌ ಪ್ರಕ್ರಿಯೆ ಪೂರ್ಣಗೊಳಿಸಿ. ಈ ಹಂತಗಳು ಪೂರ್ಣವಾದ ಬಳಿಕ ನಿಮಗೆ ಡಿಮ್ಯಾಟ್‌ ಖಾತೆ ಸಂಖ್ಯೆ, ಲಾಗಿನ್‌ ವಿವರಗಳು ಸಿಗುತ್ತವೆ.

ಅಗತ್ಯವಿರುವ ದಾಖಲೆಗಳು: ಪ್ಯಾನ್‌ ಕಾರ್ಡ್‌, ವಿಳಾಸದ ದಾಖಲೆಗಳು- ಡ್ರೈವಿಂಗ್‌ ಲೈಸೆನ್ಸ್‌, ಆಧಾರ್‌, ಓಟರ್‌ ಐಡಿ, ಪಾಸ್‌ಪೋರ್ಟ್‌ ಇತ್ಯಾದಿಗಳಲ್ಲಿ ಯಾವುದಾದರೂ ಒಂದು. ಕ್ಯಾನ್ಸಲ್ಡ್‌ ಚೆಕ್. ಖಾಲಿ ಪೇಪರ್‌ನಲ್ಲಿ ಸಹಿ ಹಾಕಿ ಕ್ಲಿಕ್ಕಿಸಿ ಇಟ್ಟುಕೊಳ್ಳಿ. ಬಳಿಕ ದಾಖಲಾತಿಗಳನ್ನು ಅಪ್‌ಲೋಡ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

ENGW vs INDW; ಅಂತಿಮ ಪಂದ್ಯದಲ್ಲಿ ಗೆದ್ದು ನಿಟ್ಟುಸಿರು ಬಿಟ್ಟ ಭಾರತ ಮಹಿಳಾ ಕ್ರಿಕೆಟ್​ ತಂಡ

ಭಾರತ(ENGW vs INDW) ಮಹಿಳಾ ತಂಡ ಇಂಗ್ಲೆಂಡ್​ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ 5 ವಿಕೆಟ್​ಗಳ ಜಯ ಸಾಧಿಸಿದೆ.

VISTARANEWS.COM


on

Saika Ishaque ran through the England middle order
Koo

ಮುಂಬಯಿ: ಮೂರನೇ ಹಾಗೂ ಅಂತಿಮ ಟಿ20 ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಹೀತರ್‌ ನೈಟ್‌ ಪಡೆಯ ಕನಸು ಭಗ್ನವಾಗಿದ್ದು, ಅಂತಿಮ ಪಂದ್ಯದಲ್ಲಿ ಭಾರತ(ENGW vs INDW) ಮಹಿಳಾ ತಂಡ 5 ವಿಕೆಟ್​ಗಳ ಜಯ ಸಾಧಿಸಿದೆ. 126 ರನ್​ಗಳ ಗುರಿ ಬೆನ್ನಟ್ಟಿದ ಹರ್ಮನ್​ಪ್ರೀತ್​ ಕೌರ್​ ಪಡೆ 5 ವಿಕೆಟ್​ ನಷ್ಟಕ್ಕೆ 127 ರನ್​ ಬಾರಿಸಿ ಇನ್ನೂ ಒಂದು ಓವರ್​ ಬಾಕಿ ಇರುವಂತೆಯೇ ಪಂದ್ಯವನ್ನು ಗೆದ್ದು ಬೀಗಿತು.

ಗುರಿ ಬೆನ್ನತ್ತಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಗಿತ್ತು. ಡ್ಯಾಶಿಂಗ್​ ಆಟಗಾರ್ತಿ ಶಫಾಲಿ ವರ್ಮ ಅವರು 6 ರನ್​ಗೆ ವಿಕೆಟ್​ ಕೈಚೆಲ್ಲಿದರು. ಆದರೆ ಎಡಗೈ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು ತಾಳ್ಮೆಯುತ ಬ್ಯಾಟಿಂಗ್​ ನಡೆಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಜತೆಗೆ ಕಳೆದ 2 ಪಂದ್ಯಗಳಲ್ಲಿ ಅನುಭವಿಸಿದ್ದ ಕಳಪೆ ಬ್ಯಾಟಿಂಗ್​ ಫಾರ್ಮ್​ನ್ನು ಈ ಪಂದ್ಯದಲ್ಲಿ ಸರಿಪಡಿಸಿಕೊಂಡರು.

ಸ್ಮೃತಿ ಅವರಿಗೆ ಮತ್ತೊಂದು ತುದಿಯಲ್ಲಿ ನಂಬುಗೆಯ ಬ್ಯಾಟರ್​ ಜೆಮಿಮಾ ರೋಡ್ರಿಗಸ್​ ಉತ್ತಮ ಸಾಥ್​ ನೀಡಿದರು. ಈ ಜೋಡಿ 2ನೇ ವಿಕಟ್​ಗೆ 57 ರನ್​ಗಳನ್ನು ಒಟ್ಟುಗೋಡಿಸಿ ತಂಡವನ್ನು ಆರಂಭಿಕ ಆಘಾತದಿಂದ ಮೇಲೆತ್ತಿತು. ಜೆಮಿಮಾ ಅವರು 33 ಎಸೆತಗಳನ್ನು ಎದುರಿಸಿ 4 ಬೌಂಡರಿ ನೆರವಿನಿಂದ 29 ರನ್​ ಬಾರಿಸಿದರು. ಮಂಧಾನ 48 ಸೆತಗಳಿಂದ 48 ರನ್​ ಬಾರಿಸಿ ಔಟಾಗುವ ಮೂಲಕ ಕೇವಲ 2 ರನ್​ ಅಂತರದಲ್ಲಿ ಅರ್ಧಶತಕದಿಂದ ವಂಚಿತರಾದರು.

ಇದನ್ನು ಓದಿ IND vs SA: ಮಳೆಗೆ ಕೊಚ್ಚಿ ಹೋದ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ

ಹಠಾತ್​ ಕುಸಿತ

ಉತ್ತಮ ಸ್ಥಿತಿಯಲ್ಲಿದ್ದ ಭಾರತ ತಂಡ ಸ್ಮೃತಿ ಮತ್ತು ಜೆಮಿಮಾ ವಿಕೆಟ್​ ಪತನದ ಬಳಿಕ ಹಠಾತ್​ ಕುಸಿತ ಕಂಡಿತು. ಬಳಿಕ ಬಂದ ದೀಪ್ತಿ ಶರ್ಮ(12) ಮತ್ತು ರಿಚಾ ಘೋಷ್​(2) ವಿಕೆಟ್​ ಕೈಚೆಲ್ಲಿದರು. ಈ ವೇಳೆ ಭಾರತ ಗಲುವಿಗೆ ಬಾಲ್​ ಟು ಬಾಲ್​ ರನ್​ ಕೂಡ ಬೇಕಿತ್ತು. ಒಂದು ಕ್ಷಣ ಆತಂತ ಸೃಷ್ಟಿಯಾಯಿತು. ಆದರೆ ನಾಯಕ ಹರ್ಮನ್​ಪ್ರೀತ್​ ಕೌರ್​(6) ಮತ್ತು ಅಮನ್ಜೋತ್ ಕೌರ್(10) ಅಜೇಯ ಬ್ಯಾಟಿಂಗ್​ ನಡೆಸಿ ತಂಡವನ್ನು ಗಲುವಿನ ದಡ ಸೇರಿಸಿದರು.

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಇಂಗ್ಲೆಂಡ್​ ಪರ ನಾಯಕ ಹೀತರ್‌ ನೈಟ್‌ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಅರ್ಧಶತಕ ಬಾರಿಸಿ ತಂಡಕ್ಕೆ ನೆರವಾದರು. ಅವರು 42 ಎಸೆತಗಳಿಂದ ತಲಾ ಮೂರು ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ 52 ರನ್​ ಬಾರಿಸಿದರು. ವಿಕೆಟ್​ ಕೀಪರ್​ ಆ್ಯಮಿ ಜೋನ್ಸ್​(25) ರನ್​ ಗಳಿಸಿದರು. ಉಭಯ ಆಟಗಾರ್ತಿಯರನ್ನು ಹೊರತುಪಡಿಸಿ ಉಳಿದ ಎಲ್ಲ ಆಟಗಾರ್ತಿಯರು ನಿರೀಕ್ಷಿತ ಬ್ಯಾಟಿಂಗ್​ ನಡೆಸುವಲ್ಲಿ ವಿಫಲರಾದರು.

ಮಿಂಚಿದ ಕನ್ನಡತಿ

ಕಳೆದ ಎರಡು ಪಂದ್ಯಗಳಲ್ಲಿ ದುಬಾರಿ ಬೌಲಿಂಗ್​ ನಡೆಸಿದ್ದ ಕರ್ನಾಟಕದ 21 ವರ್ಷದ ಆಲ್​ರೌಂಡರ್​ ಆಟಗಾರ್ತಿ ಶ್ರೇಯಾಂಕಾ ಪಾಟೀಲ್​ ಈ ಪಂದ್ಯದಲ್ಲಿ ಉತ್ಕೃಷ್ಟ ಮಟ್ಟದ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಗಮನಸಳೆದರು. 4 ಓವರ್​ ಎಸೆದು ಕೇವಲ 19 ರನ್​ ವೆಚ್ಚದಲ್ಲಿ ಪ್ರಮುಖ 3 ವಿಕೆಟ್​ ಕಿತ್ತರು. ಅವರ ಈ ಸಾಧನಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಒಲಿಯಿತು.

Continue Reading

ದೇಶ

CLAT Result 2024: ಕಾನೂನು ಪ್ರವೇಶ ಪರೀಕ್ಷೆ ಸಿಎಲ್ಎಟಿ ರಿಸಲ್ಟ್ ಪ್ರಕಟ

CLAT Result 2024: ಕಾನೂನು ಪ್ರವೇಶ ಪರೀಕ್ಷೆಯ ಅಂತಿಮ ರಿಸಲ್ಟ್ ಪ್ರಕಟಿಸುವ ಮುನ್ನ ಫೈನಲ್ ಆನ್ಸರ್ ಕೀ ಪ್ರಕಟಿಸಲಾಗಿತ್ತು.

VISTARANEWS.COM


on

CLAT Result 2024 announced
Koo

ನವದೆಹಲಿ: ಕಾನೂನು ಪ್ರವೇಶ ಪರೀಕ್ಷೆ (Law entrance test) ಸಿಎಲ್‌ಎಟಿ 2024ರ ರಿಸಲ್ಟ್ (CLAT Result 2024) ಅನ್ನು ಡಿಸೆಂಬರ್ 10, ಭಾನುವಾರ ಪ್ರಕಟಿಸಲಾಗಿದೆ. ಈ ಪರೀಕ್ಷೆಯನ್ನು ಬರೆದಿರುವ ಅಭ್ಯರ್ಥಿಗಳು ಸಿಎಲ್ಎಟಿ ರಿಸಲ್ಟ್ ಅನ್ನು ಅಧಿತೃತ consortiumofnlus.ac.in ಜಾಲತಾಣಕ್ಕೆ ಭೇಟಿ ನೀಡಿ ತಿಳಿದುಕೊಳ್ಳಬಹುದು. ರಿಸಲ್ಟ್ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ರಿಸಲ್ಟ್ ಪ್ರಕಟಿಸುವ ಮುನ್ನ ಡಿಸೆಂಬರ್ 9ರಂದು ಫೈನಲ್ ಆನ್ಸರ್ ಕೀ ಪ್ರಕಟಿಸಲಾಗಿತ್ತು ಮತ್ತು ಡಿಸೆಂಬರ್ 4 ಪ್ರಾವಿಷನಲ್ ಆನ್ಸರ್ ತಿಳಿಸಲಾಗಿತ್ತು. ಫಲಿತಾಂಶಗಳ ನಂತರ, ಪ್ರವೇಶ ಕಮ್ ಕೌನ್ಸೆಲಿಂಗ್ ಪ್ರಕ್ರಿಯೆಯ ನೋಂದಣಿಗಳು ಡಿಸೆಂಬರ್ 12 ರಂದು ಪ್ರಾರಂಭವಾಗುತ್ತದೆ ಮತ್ತು ಡಿಸೆಂಬರ್ 22ಕ್ಕೆ ಕೊನೆಗೊಳ್ಳುತ್ತದೆ.

ಸಿಎಲ್ಎಟಿ-2024 ಅಂತಿಮ ಉತ್ತರದ ಕೀಗಳ ಬಗ್ಗೆ ಕುಂದುಕೊರತೆಗಳನ್ನು ಹೊಂದಿರುವ ಅಭ್ಯರ್ಥಿಗಳು ತಕರಾರು ಸಲ್ಲಿಸಬಹುದು. ದೂರು ಸಲ್ಲಿಸಲು ಪೋರ್ಟಲ್ 2023 ಡಿಸೆಂಬರ್ 11 ರಂದು ಮಧ್ಯಾಹ್ನ 12 ಗಂಟೆಗೆ ತೆರೆಯುತ್ತದೆ.

CLAT 2024: ತಕಾರರು ಸಲ್ಲಿಸುವುದು ಹೇಗೆ?

-ಮೊದಲಿಗೆ ನಿಮ್ಮ ಸಿಎಲ್ಎಟಿ ಅಕೌಂಟ್‌ಗೆ ಲಾಗಿನ್ ಆಗಿ
-Submit Grievance ಬಟನ್ ಮೇಲ ಕ್ಲಿಕ್ ಮಾಡಿ
-ನಿಮ್ಮ ತಕರಾರಿನ ಸ್ವರೂಪವನ್ನು ತಿಳಿಸಿ
-ಗರಿಷ್ಠ ಸಾವಿರ ಅಕ್ಷರಿಗಳಿಗೆ ಮೀರದಂತೆ ನಿಮ್ಮ ತಕರಾರು ವಿವರಿಸಿ
-ಸಂಬಂಧಿಸಿದ ದಾಖಲೆಗಳನ್ನು ಅಪ್‌ಲೋಡ್ ಮಾಡಿ
-ಘೋಷಣಾ ಪತ್ರವನ್ನು ಸಬ್‍ಮಿಟ್ ಮಾಡಿ
-ಇಷ್ಟಾದ ಮೇಲೆ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.

ಈ ಸುದ್ದಿಯನ್ನೂ ಓದಿ: UPSC Mains Result 2023: ಯುಪಿಎಸ್ಸಿ ಮುಖ್ಯ ಪರೀಕ್ಷೆಯ ರಿಸಲ್ಟ್ ಪ್ರಕಟ; ಚೆಕ್ ಮಾಡ್ಕೊಳ್ಳಿ

Continue Reading

ಕ್ರಿಕೆಟ್

IND vs SA: ಮಳೆಗೆ ಕೊಚ್ಚಿ ಹೋದ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ

ಇಂದು ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಮೊದಲ ಟಿ20 ಪಂದ್ಯ ಮಳೆಯಿಂದ ಒಂದೂ ಎಸೆತ ಕಾಣದೆ ರದ್ದುಗೊಂಡಿದೆ.

VISTARANEWS.COM


on

Fans brave the dampness, waiting for India's tour of South Africa to kick off
Koo

ಡಬಾರ್ನ್: ಭಾರತ(IND vs SA) ಮತ್ತು ದಕ್ಷಿಣ ಆಫ್ರಿಕಾ(South Africa vs India, 1st T20) ಪಂದ್ಯವನ್ನು ವೀಕ್ಷಿಸಲು ಭಾರಿ ನಿರೀಕ್ಷೆಯಲ್ಲಿದ್ದ ಕ್ರಿಕೆಟ್​ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಇಂದು ನಡೆಯಬೇಕಿದ್ದ ಮೊದಲ ಟಿ20 ಪಂದ್ಯ ಮಳೆಯಿಂದ ಒಂದೂ ಎಸೆತ ಕಾಣದೆ ರದ್ದುಗೊಂಡಿದೆ.

ಟಾಸ್​ ಆರಂಭಕ್ಕೂ ಮುನ್ನವೇ ಮಳೆ ಅಡ್ಡಿ ಪಡಿಸಿತು. ಪಂದ್ಯ ಆರಂಭಕ್ಕೆ ಸುಮಾರು 2 ಗಂಟೆಗಳ ಕಾಲ ಕಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಮಳೆ ಬಿಡುವ ಸೂಚನೆ ಕಂಡು ಬಾರದ ಕಾರಣ ಅಂತಿಮವಾಗಿ ಪಂದ್ಯದ ಅಂಪೈರ್​ಗಳು ಪಂದ್ಯವನ್ನು ರದ್ದು ಎಂದು ಘೋಷಿಸಿದರು. ಇತ್ತಂಡಗಳ ನಡುವಣ ದ್ವಿತೀಯ ಪಂದ್ಯ ಡಿ.12ರಂದು ನಡೆಯಲಿದೆ.

ಕವರ್​ನಿಂದ ಮುಚ್ಚಿದ ಮೈದಾನ

ಡರ್ಬಾನ್​ನ ಕಿಂಗ್ಸ್‌ಮೀಡ್ ಮೈದಾನವನ್ನು ಕವರ್​ನಿಂದ ಸಂಪೂರ್ಣವಾಗಿ ಮುಚ್ಚಲಾಗಿತ್ತು. ಆಟಗಾರರೆಲ್ಲ ಡ್ರೆಸಿಂಗ್​ ರೂಮ್​ನಲ್ಲಿ ಮಳೆ ಯಾವಾಗ ಬಿಡುತ್ತದೆ ಎಂದು ಕಾದು ಕುಳಿತಿದ್ದರು. ಆದರೆ ಇದಕ್ಕೆ ಮಳೆ ಅನುವು ಮಾಡಿಕೊಡಲಿಲ್ಲ. ಆರಂಭದಲ್ಲಿ ಇದು ಐಸಿಸಿ ಅಡಿಯಲ್ಲಿ ನಡೆಯುವ ಟೂರ್ನಿಯಾದ ಕಾರಣ ನಿಗದಿತ ಸಮಯಕ್ಕೆ ಮಳೆ ನಿಂತು ಆಟ ಪ್ರಾರಂಭವಾಗದ ಕಾರಣ ಪಂದ್ಯವನ್ನು ರದ್ದು ಎಂದು ಘೋಷಿಸಲಾಯಿತು.

ಇದನ್ನೂ ಓದಿ Gautam Gambhir : ಮೋದಿಯನ್ನು ಪನೌತಿ ಎಂದವರಿಗೆ ತಿರುಗೇಟು ಕೊಟ್ಟ ಗೌತಮ್​ ಗಂಭೀರ್​

ಸಮಯ ಬದಲಿಸಿದ್ದ ಬಿಸಿಸಿಐ

ಸರಣಿಯ ಮೂಲ ವೇಳಾಪಟ್ಟಿಯ ಪ್ರಕಾರ ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 9.30 ನಿಗದಿಯಾಗಿತ್ತು. ಪಂದ್ಯ ಮುಗಿಯುವಾಗ ಮಧ್ಯರಾತ್ರಿಯಾಗುದರಿಂದ ಭಾರತೀಯ ಕ್ರಿಕಟ್​ ಅಭಿಮಾನಿಗಳಿಗ ಇದು ತೊಂದರಯಾಗುತ್ತದೆ ಎನ್ನುವ ನಿಟ್ಟಿನಲ್ಲಿ ಬಿಸಿಸಿಐ ಪಂದ್ಯವನ್ನು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭಗೊಳ್ಳುವಂತೆ ಮಾಡಿತ್ತು. ಆದರೆ ಮಳೆ ಯಾವುದಕ್ಕೂ ಅನುವು ಮಾಡಿಕೊಡಲಿಲ್ಲ. ಒಂದೊಮ್ಮೆ ಪಂದ್ಯ ಮೂಲಕ ವೇಳಾಪಟ್ಟಿಯ ಪ್ರಕಾರ ನಡೆಯುತ್ತಿದ್ದರೆ ಮಳೆ ನಿಂತು ಪಂದ್ಯ ನಡೆಯುವ ಸಾಧ್ಯತೆ ಇತ್ತು.

ಟಿ20 ಮುಖಾಮುಖಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ಇದುವರೆಗೆ 24 ಟಿ20 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಭಾರತವು 13 ಪಂದ್ಯಗಳನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ 10 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ದಕ್ಷಿಣ ಆಫ್ರಿಕಾದಲ್ಲಿ, ‘ಮೆನ್ ಇನ್ ಬ್ಲೂ’ ಏಳು ಪಂದ್ಯಗಳನ್ನು ಆಡಿ ಐದರಲ್ಲಿ ಗೆದ್ದಿದ್ದರೆ, ಆತಿಥೇಯರು ಎರಡರಲ್ಲಿ ಗೆದ್ದಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಮೊದಲ ಬಾರಿ ಆಡಿದ ತಂಡವೆಂದರೆ ಅದು ಭಾರತ ಮತ್ತು ದಕ್ಷಿಣ ಆಫ್ರಿಕಾ. 2007ರಲ್ಲಿ ನಡೆದ ಚೊಚ್ಚಲ ಅಂತಾರಾಷ್ಟೀಯ ಟಿ20 ಪಂದ್ಯದಲ್ಲಿ ವೀರೇಂದ್ರ ಸೆಹವಾಗ್​ ಸಾರಥ್ಯದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 82 ರನ್​ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ್ದ ಭಾರತ 6 ವಿಕೆಟ್​ಗೆ 169 ರನ್​ ಬಾರಿಸಿತ್ತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೇವಲ 87 ರನ್​ಗೆ ಸರ್ವಪತನ ಕಂಡಿತ್ತು.

Continue Reading

ದೇಶ

ನಾಳೆ ಆರ್ಟಿಕಲ್ 370 ರದ್ದು ತೀರ್ಪು; ಅದಕ್ಕೂ ಮೊದಲು ಈ ಸಂಗತಿ ತಿಳಿದುಕೊಂಡಿರಿ

Article 370: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸುವ ಆರ್ಟಿಕಲ್ 370 ಅನ್ನು ಕೇಂದ್ರ ಸರ್ಕಾರವು 2019ರಲ್ಲಿ ರದ್ದು ಮಾಡಿತ್ತು. ಈ ನಿರ್ಧಾರವನ್ನು ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

VISTARANEWS.COM


on

Supreme Court verdict on Article 370 and Know about this article
Koo

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ವಿಶೇಷ ಸ್ಥಾನಮಾನ (Special Status) ಕಲ್ಪಿಸುವ ಆರ್ಟಿಕಲ್ 370 ರದ್ದು (Article 370) ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ (Supreme Court) ಡಿ.11, ಸೋಮವಾರ ತೀರ್ಪು ಪ್ರಕಟಿಸಲಿದೆ(Judgment Day). ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ ಸಾಂವಿಧಾನಿಕ ಪೀಠವು ದೀರ್ಘ ಅವಧಿಯಿಂದ ಈ ಅರ್ಜಿಗಳ ವಿಚಾರಣೆ ನಡೆಸಿದೆ.

ಸೆಪ್ಟೆಂಬರ್ 5 ರಂದು ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. 16 ದಿನಗಳ ಕಾಲ ಸಮಗ್ರ ವಿಚಾರಣೆಗೆ ಸಾಕ್ಷಿಯಾಯಿತು. ಅರ್ಜಿದಾರರು ಮತ್ತು ಸರ್ಕಾರ ಇಬ್ಬರೂ ತಮ್ಮ ವಾದಗಳನ್ನು ಮಂಡಿಸಿದರು, ಆರ್ಟಿಕಲ್ 370 ಅನ್ನು ರದ್ದುಗೊಳಿಸಲು ಬಳಸಿದ ಕಾರ್ಯವಿಧಾನದ ಸಾಂವಿಧಾನಿಕತೆಯನ್ನು ಮತ್ತು ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವವನ್ನು ನಂತರದ ರದ್ದತಿಯನ್ನು ಪರಿಶೀಲಿಸಲಾಯಿತು. ಅಂತಿಮವಾಗಿ ಸೋಮವಾರ ತೀರ್ಪು ಹೊರ ಬೀಳಲಿದೆ. ಈ ಆರ್ಟಿಕಲ್ 370 ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

ಏನಿದು ಆರ್ಟಿಕಲ್ 370?

ಆರ್ಟಿಕಲ್ 370 ಭಾರತೀಯ ಸಂವಿಧಾನದಲ್ಲಿ ಅವಿಭಜಿತ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಪ್ರಮುಖ ನಿಬಂಧನೆಯಾಗಿದೆ. 1949 ಜುಲೈ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಮಧ್ಯಂತರ ಪ್ರಧಾನ ಮಂತ್ರಿ ಶೇಖ್ ಅಬ್ದುಲ್ಲಾ ಅವರು ಭಾರತೀಯ ಸಂವಿಧಾನ ಸಭೆಯೊಂದಿಗೆ ಮಾತುಕತೆಗಳನ್ನು ನಡೆಸಿ, ಅಂತಿಮವಾಗಿ 370 ನೇ ವಿಧಿಯನ್ನು ಅಳವಡಿಸಲಾಯಿತು. ಆ ವಿಧಿಯ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಕೆಲವು ಸ್ವಾಯತ್ತತೆಯನ್ನು ನೀಡಲಾಯಿತು. ಉದಾಹರಣೆಗೆ ರಾಜ್ಯವು ತನ್ನದೇ ಆದ ಸಂವಿಧಾನವನ್ನು ಹೊಂದಲು ಅವಕಾಶ ನೀಡಿತು, ಪ್ರತ್ಯೇಕ ಧ್ವಜ ಮತ್ತು ಭಾರತ ಸರ್ಕಾರದ ಸೀಮಿತ ನ್ಯಾಯವ್ಯಾಪ್ತಿಯನ್ನು ಕಲ್ಪಿಸಿತು.

ಭಾರತೀಯ ಸಂವಿಧಾನ ಆರ್ಟಿಕಲ್ 1, ಜಮ್ಮು ಕಾಶ್ಮೀರಕ್ಕೆ ಆರ್ಟಿಕಲ್ 370 ರ ಮೂಲಕ ಜಾರಿ ಮಾಡಲು ಅವಕಾಶ ಕಲ್ಪಿಸುತ್ತಿದೆ ಎಂದು ಆರ್ಟಿಕಲ್ 370(1)(ಸಿ)ನಲ್ಲಿ ತಿಳಿಸಲಾಗಿದೆ. ಆರ್ಟಿಕಲ್ 1 ಒಕ್ಕೂಟ ಎಂದು ಹೇಳುತ್ತದೆ. ಅದರರ್ಥ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಭಾರತೀಯ ಒಕ್ಕೂಟಕ್ಕೆ ಬಂಧಿಸುವ ವಿಧಿ 370 ಆಗಿದೆ. ರಾಷ್ಟ್ರಪತಿಗಳ ಆದೇಶದ ಮೂಲಕ 370 ನೇ ವಿಧಿಯನ್ನು ತೆಗೆದುಹಾಕಬಹುದಾದರೂ, ಹೊಸ ಕಾನೂನುಗಳನ್ನು ಮಾಡದ ಹೊರತು ಅದು ರಾಜ್ಯವನ್ನು ಭಾರತದಿಂದ ಸ್ವತಂತ್ರವಾಗಿರುವಂತೆ ನೋಡಿಕೊಳ್ಳುತ್ತದೆ.

370ನೇ ವಿಧಿ ರದ್ದು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವು ರಾಷ್ಟ್ರಪತಿ ಆದೇಶದ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ 370 ನೇ ವಿಧಿಯನ್ನು 2019 ಆಗಸ್ಟ್ 5ರಂದು ರದ್ದು ಮಾಡಿತು. ಅಲ್ಲದೇ, ಜಮ್ಮು ಮತ್ತು ಕಾಶ್ಮೀರವನ್ನು ವಿಭಜಿಸಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಕೇಂದ್ರಾಡಳಿತ ಪ್ರದೇಶಗಳನ್ನು ಮಾಡಲಾಯಿತು. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ರಾಜ್ಯವು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವು ಶಾಸಕಾಂಗವನ್ನು ಹೊಂದಿದ್ದರೆ, ಲಡಾಖ್ ಶಾಸಕಾಂಗವನ್ನು ಹೊಂದಿರುವುದಿಲ್ಲ.

ಅರ್ಜಿದಾರರ ವಾದವೇನು?

ಆರ್ಟಿಕಲ್ 370 ರದ್ಧತಿ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ಗುರುತಿನ ಮೇಲೆ ಪ್ರಭಾರ ಬೀರಲಿದೆ. ಜೊತೆಗೆ ಈ ಪ್ರದೇಶದ ಪ್ರದೇಶದ ಸ್ವಾಯತ್ತತೆ ಮತ್ತು ಜನಸಂಖ್ಯಾ ಸಂಯೋಜನೆಗೆ ಅದರ ಸಂಭಾವ್ಯ ಪರಿಣಾಮಗಳ ಬಗ್ಗೆ ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಈ ನೆಲೆಯಲ್ಲೇ ಅರ್ಜಿದಾರರು ಆರ್ಟಿಕಲ್ 370 ರದ್ಧತಿಯು ಸಂವಿಧಾನಬಾಹಿರವಾಗಿದೆ ಎಂದು ವಾದಿಸಿದರು.

ಪೂರ್ಣ ಪ್ರಮಾಣದ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ಕೇಂದ್ರ ಸರ್ಕಾರವು ತನಗಿರುವ ಅಖಂಡ ಬಹುಮತ ಮತ್ತು ಕಾರ್ಯನಿರ್ವಾಹಕ ಆದೇಶಗಳನ್ನು ದುರುಪಯೋಗ ಮಾಡಿಕೊಂಡಿದೆ. ಇದು ಒಕ್ಕೂಟ ವ್ಯವಸ್ಥೆ ಮತ್ತು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾದ ನಡೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಮತ್ತೊಂದೆಡೆ, ಹಿರಿಯ ವಕೀಲ ಕಪಿಲ್ ಸಿಬಲ್, 1957ರಲ್ಲಿ ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಸಭೆಯನ್ನು ವಿಸರ್ಜನೆ ಮಾಡಿದ ಬಳಿಕ, ಆರ್ಟಿಕಲ್ 370ಗೆ ಶಾಶ್ವತ ಸ್ವರೂಪವನ್ನು ಪಡೆದುಕೊಂಡಿದೆ ಎಂಬ ಅಂಶವನ್ನು ಕೋರ್ಟ್ ಗಮನಕ್ಕೆ ತಂದರು. ಹಾಗಾಗಿಯೇ, ಸಂವಿಧಾನ ತಿದ್ದುಪಡಿಗೆ ಸಂಸತ್ತಿಗೆ ಅಧಿಕಾರ ನೀಡುವ ಆರ್ಟಿಕಲ್ 368 ಅನ್ನು, 370 ವಿಧಿ ರದ್ಧತಿಗೆ ಬಳಸಿದ ಕ್ರಮವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ವಾದವೇನು?

ಆರ್ಟಿಕಲ್ 370 ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಉಳಿದ ಭಾಗಗಳೊಂದಿಗೆ ಏಕೀಕರಣಕ್ಕೆ ಅಡ್ಡಿಪಡಿಸುತ್ತದೆ. ಈ ಪ್ರದೇಶದ ಅಭಿವೃದ್ಧಿಯನ್ನು ಸೀಮಿತಗೊಳಿಸುತ್ತದೆ ಎಂಬ ಕಾರಣಕ್ಕಾಗಿ ರದ್ದುಗೊಳಿಸಲಾಯಿತು ಎಂದು ಕೇಂದ್ರ ಸರಕಾರವು ತನ್ನ ವಾದವನ್ನು ಮಂಡಿಸಿತು. ರದ್ಧು ನಿರ್ಧಾರವು ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ, ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಉತ್ತೇಜಿಸಲು ಮತ್ತು ಪ್ರದೇಶದಲ್ಲಿ ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ವಾದಿಸಲಾಯಿತು. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣವಾಗಿ ಅನ್ವಯವಾಗದ ರಾಷ್ಟ್ರೀಯ ಕಾನೂನುಗಳು ಮತ್ತು ಕಾರ್ಯಕ್ರಮಗಳ ಅನ್ವಯಕ್ಕೆ ಇದು ಅನುಕೂಲವಾಗುತ್ತದೆ.

ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಏಕತೆಯ ಭಾಗವಾಗಿ ಮಾಡಲು 370 ಆರ್ಟಿಕಲ್ ರದ್ದು ಅಗತ್ಯವಾಗಿತ್ತು. ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆದುಕೊಂಡು ಬಳಿಕ ಅಂದರೆ, 2019ರ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ಭಾಗದಲ್ಲಿ ಚುನಾವಣೆ ನಡೆಸುವುದು ಬಾಕಿ ಇದೆ. ಪರಿಸ್ಥಿತಿ ಸುಧಾರಿಸಿದ ನಂತರ ಚುನಾವಣೆಯನ್ನು ನಡೆಸಲಾಗುವುದು ಮತ್ತು ರಾಜ್ಯದ ಸ್ಥಾನಮಾನಗಳನ್ನು ನೀಡಲಾಗುತ್ತದೆ ಎಂದು ವಾದಿಸಿತು.

370 ರದ್ದತಿ ಬಳಿಕ ಕಾಶ್ಮೀರದಲ್ಲಿ ಭಯೋತ್ಪಾದನೆ (ಶೇ. 45.2), ಒಳನುಸುಳುವಿಕೆ (ಶೇ. 90.2), ಕಲ್ಲು ತೂರಾಟದ ಘಟನೆಗಳು (ಶೇ. 97.2), ಮತ್ತು ಭದ್ರತಾ ಸಿಬ್ಬಂದಿ ಸಾವು (ಶೇ. 65.9) ಕಡಿಮೆಯಾಗಿವೆ ಅಂಶವನ್ನು ಕೇಂದ್ರ ಸರ್ಕಾರವು ಕೋರ್ಟ್‌ ಗಮನಕ್ಕೆ ತಂದಿದೆ.

ಸಂವಿಧಾನ ಪೀಠದ ಪರಿಶೀಲನೆ ಏನು?

ಆರ್ಟಿಲ್ 370 ರದ್ಧತಿಯ ಕುರಿತಾದ ಎಲ್ಲ ಆಯಾಮಗಳನ್ನು, ಸಾಂವಿಧಾನಿಕ ನಿಲುವುಗಳನ್ನು ಪೀಠ ಪರಿಶೀಲಿಸಿದೆ. ಅಂದರೆ, ಜಮ್ಮು ಮತ್ತು ಕಾಶ್ಮೀರದ ಮೇಲೆ ರಾಷ್ಟ್ರಪತಿ ಆಡಳಿತ, ಸಂಸತ್ತಿನ ಒಪ್ಪಿಗೆ, ರಾಜ್ಯ ಮರು ಸಂಘಟನೆಯಂಥ ಘಟನೆಗಳನ್ನು ಸಂವಿಧಾನ ಪೀಠವು ಪರಿಶೀಲಿಸಿದೆ.

ಡಿ.11ಕ್ಕೆ ತೀರ್ಪು ಪ್ರಕಟ

ಆರ್ಟಿಕಲ್ 370 ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ 23 ಅರ್ಜಿಗಳನ್ನು ದಾಖಲಾಗಿದ್ದವು. ದೂರಗಾಮಿ ಪರಿಣಾಮಗಳನ್ನು ಬೀರು ಮತ್ತು ಹೆಗ್ಗುರಾತಾಗಬಹುದಾದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೀರ್ಘ ಸಮಯದಿಂದ ನಡೆಸುತ್ತಾ ಬಂದಿದೆ. 16 ಮ್ಯಾರಥಾನ್ ದಿನಗಳ ವಿಚಾರಣೆಗಳು ಮತ್ತು ಎರಡೂ ಕಡೆಯವರು ಮಂಡಿಸಿದ ವಾದಗಳ ನಂತರ, ನ್ಯಾಯಾಲಯವು ಸೆಪ್ಟೆಂಬರ್ 5 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಸೋಮವಾರ ತೀರ್ಪು ಪ್ರಕಟಿಸಲಿದೆ. 370 ನೇ ವಿಧಿಯ ರದ್ದತಿಯನ್ನು ಸಂವಿಧಾನ ಮತ್ತು ಕಾನೂನು ತತ್ವಗಳಿಗೆ ಅನುಗುಣವಾಗಿ ನಡೆಸಲಾಗಿದೆಯೇ ಎಂದು ನಿರ್ಧರಿಸುವ ಅವರ ಈ ತೀರ್ಮಾನವು ಭಾರೀ ಮಹತ್ವವನ್ನು ಪಡೆದುಕೊಳ್ಳಲಿದೆ.

ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣ್ಯಂ, ದುಶ್ಯಂತ್ ದವೆ ಮತ್ತು ರಾಜೀವ್ ಧವನ್ ಸೇರಿದಂತೆ 18 ವಕೀಲರು ಕೇಂದ್ರದ ನಿರ್ಧಾರದ ಸಿಂಧುತ್ವವನ್ನು ಪ್ರಶ್ನಿಸಿ ವಾದ ಮಂಡಿಸಿದರೆ, ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಇತರ ಕಾನೂನು ತಜ್ಞರು ಕೇಂದ್ರವನ್ನು ಪ್ರತಿನಿಧಿಸಿ, ಕೇಂದ್ರದ ನಿರ್ಧಾರವು ಸಂಪೂರ್ಣವಾಗಿ ತಾರ್ಕಿಕ ಮತ್ತು ಸೂಕ್ತವಾಗಿದೆ ಎಂದು ವಾದ ಮಂಡಿಸಿದ್ದರು.

ಈ ಸುದ್ದಿಯನ್ನೂ ಓದಿ: Article 370: ರಾಷ್ಟ್ರಪತಿಯವರೇ ರಾಜ್ಯದ ಸ್ಥಾನ ನೀಡಬಹುದು; ಕಾಶ್ಮೀರ ವಿಷಯದಲ್ಲಿ ಸುಪ್ರೀಂ ಮಹತ್ವದ ಪ್ರಸ್ತಾಪ

Continue Reading
Advertisement
Nagamurthy Swamy
ಕರ್ನಾಟಕ8 mins ago

Ayodhya Ram Mandir: ರಾಮಮಂದಿರ ನಿರ್ಮಾಣಕ್ಕೆ ತೆರಳಿದ ಗದಗದ ಯುವ ಶಿಲ್ಪಿ

Saika Ishaque ran through the England middle order
ಕ್ರಿಕೆಟ್21 mins ago

ENGW vs INDW; ಅಂತಿಮ ಪಂದ್ಯದಲ್ಲಿ ಗೆದ್ದು ನಿಟ್ಟುಸಿರು ಬಿಟ್ಟ ಭಾರತ ಮಹಿಳಾ ಕ್ರಿಕೆಟ್​ ತಂಡ

CLAT Result 2024 announced
ದೇಶ23 mins ago

CLAT Result 2024: ಕಾನೂನು ಪ್ರವೇಶ ಪರೀಕ್ಷೆ ಸಿಎಲ್ಎಟಿ ರಿಸಲ್ಟ್ ಪ್ರಕಟ

girl students fall ill
ಕರ್ನಾಟಕ57 mins ago

Raichur News: ಮಾನ್ವಿ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

Fans brave the dampness, waiting for India's tour of South Africa to kick off
ಕ್ರಿಕೆಟ್1 hour ago

IND vs SA: ಮಳೆಗೆ ಕೊಚ್ಚಿ ಹೋದ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ

Gautam Gambhir
ಕ್ರಿಕೆಟ್2 hours ago

Gautam Gambhir: ಮತ್ತೆ ಪಾಕ್​ ಆಟಗಾರನ ಬೆಂಬಲಕ್ಕೆ ನಿಂತ ಗೌತಮ್​ ಗಂಭೀರ್

Shakti Scheme
ಕರ್ನಾಟಕ2 hours ago

Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

Supreme Court verdict on Article 370 and Know about this article
ದೇಶ2 hours ago

ನಾಳೆ ಆರ್ಟಿಕಲ್ 370 ರದ್ದು ತೀರ್ಪು; ಅದಕ್ಕೂ ಮೊದಲು ಈ ಸಂಗತಿ ತಿಳಿದುಕೊಂಡಿರಿ

WPL 2024 Auction
ಕ್ರಿಕೆಟ್3 hours ago

ಬಿಡ್ಡಿಂಗ್​ ಹಣದಲ್ಲಿ ತಂದೆ-ತಾಯಿಗೆ ವಿಶೇಷ ಉಡುಗೊರೆ ನೀಡಲು ಮುಂದಾದ ಕರ್ನಾಟಕದ ​ ವೃಂದಾ ದಿನೇಶ್​

Naveen Ammembala
ದಕ್ಷಿಣ ಕನ್ನಡ3 hours ago

ಹೈಪರ್ ಲೋಕಲ್ ಸುದ್ದಿಗೂ ಅಭ್ಯುದಯ ಪತ್ರಿಕೋದ್ಯಮಕ್ಕೂ ಅವಿನಾಭಾವ ಸಂಬಂಧ: ನವೀನ್ ಅಮ್ಮೆಂಬಳ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ7 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ10 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ18 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌