ವಿಸ್ತಾರ Money Guide | ಮ್ಯೂಚುಯಲ್‌ ಫಂಡ್‌ ಹೂಡಿಕೆ ಹೇಗೆ? ಎಷ್ಟು ಹೂಡಿಕೆ ಮಾಡಬಹುದು? - Vistara News

ಮನಿ ಗೈಡ್

ವಿಸ್ತಾರ Money Guide | ಮ್ಯೂಚುಯಲ್‌ ಫಂಡ್‌ ಹೂಡಿಕೆ ಹೇಗೆ? ಎಷ್ಟು ಹೂಡಿಕೆ ಮಾಡಬಹುದು?

ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆಯ ಲಾಭಗಳು ಹಲವು. ಷೇರು ಮಾರುಕಟ್ಟೆಯಲ್ಲಿ ನೇರವಾಗಿ ಹೂಡಿಕೆ ಮಾಡಲು ಸಮಯ ಮತ್ತು ಪರಿಣತಿ ಬೇಕು. ಇಲ್ಲದಿದ್ದರೆ ಮ್ಯೂಚುಯಲ್‌ ಫಂಡ್‌ ಹೂಡಿಕೆ ಸೂಕ್ತ. (ವಿಸ್ತಾರ Money Guide) ವಿವರ ಇಲ್ಲಿದೆ.

VISTARANEWS.COM


on

Mutual fund
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮನಿ ಗೈಡ್

Safe investment : ಸುರಕ್ಷಿತ ಹೂಡಿಕೆಯ ಆಯ್ಕೆ ಹೇಗೆ? ಲಿಕ್ವಿಡಿಟಿ ಎಂದರೇನು?

ಹಣಕಾಸು ಹೂಡಿಕೆಯ ( Safe investment ) ವಿಚಾರಕ್ಕೆ ಬಂದಾಗ ಸೇಫ್ಟಿ ಮತ್ತು ಲಿಕ್ವಿಡಿಟಿ ಪ್ರಮುಖವಾಗುತ್ತದೆ. ಹಾಗಾದರೆ ಏನಿದು? ಇಲ್ಲಿದೆ ವಿವರ.

VISTARANEWS.COM


on

cash
Koo

ಚಿನ್ನ, ರಿಯಲ್‌ ಎಸ್ಟೇಟ್‌, ಫಿಕ್ಸೆಡ್‌ ಡಿಪಾಸಿಟ್‌, ಷೇರು, ಮ್ಯೂಚುವಲ್‌ ಫಂಡ್‌, ಬಾಂಡ್‌ ಇತ್ಯಾದಿಗಳಲ್ಲಿ ಹೂಡಿಕೆ ಮಾಡುವ ಸಂದರ್ಭದಲ್ಲಿ, ಹೂಡಿಕೆಯ ಸುರಕ್ಷತೆ ಮತ್ತು ( Safe investment ) ಲಿಕ್ವಿಡಿಟಿ ನಿರ್ಣಾಯಕ ಅಂಶವಾಗಿರುತ್ತದೆ. ಸಹಜವಾಗಿ ಸರ್ಕಾರಿ ಮೂಲದ ಇನ್ವೆಸ್ಟ್‌ಮೆಂಟ್‌ ಅಸೆಟ್‌ಗಳು ಹೆಚ್ಚು ಸುರಕ್ಷಿತವಾಗಿರುತ್ತದೆ. ಉದಾಹರಣೆಗೆ ನ್ಯಾಶನಲ್‌ ಪೆನ್ಷನ್‌ ಸ್ಕೀಮ್‌, ಅಟಲ್‌ ಪೆನ್ಷನ್‌ ಸ್ಕೀಮ್‌, ನ್ಯಾಶನಲ್‌ ಸೇವಿಂಗ್ಸ್‌ ಸರ್ಟಿಫಿಕೇಟ್‌, ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌, ಸೀನಿಯರ್‌ ಸಿಟಿಜನ್ಸ್‌ ಸೇವಿಂಗ್ಸ್‌ ಸ್ಕೀಮ್‌, ಸುಕನ್ಯಾ ಸಮೃದ್ಧಿ ಇತ್ಯಾದಿಗಳು ಸರ್ಕಾರಿ ಮೂಲದ ಯೋಜನೆಗಳಾಗಿದ್ದು ಸುರಕ್ಷಿತವಾಗಿವೆ.

ಕಾರ್ಪೊರೇಟ್‌ ವಲಯದಲ್ಲಿ ಸಾರ್ವಜನಿಕ ವಲಯದ ಕಂಪನಿಗಳ ಫಿಕ್ಸೆಡ್‌ ಡಿಪಾಸಿಟ್‌ ಸ್ಕೀಮ್‌ಗಳು ಸೇಫ್‌ ಎನ್ನಿಸಿವೆ. ಡಿಬೆಂಚರ್‌ಗಳು ನಂತರದ ಸ್ಥಾನದಲ್ಲಿ ಸುರಕ್ಷಿತ ಎನ್ನಿಸಿವೆ. ಬಳಿಕ ಹೇಳುವುದಿದ್ದರೆ ಖಾಸಗಿ ಕಂಪನಿಗಳ ಫಿಕ್ಸೆಡ್‌ ಡಿಪಾಸಿಟ್‌ಗಳನ್ನು ಪರಿಗಣಿಸಬಹುದು. ಸುರಕ್ಷತೆಯ ನಿಟ್ಟಿನಲ್ಲಿ ಷೇರು ಕೊನೆಯ ಸ್ಥಾನದಲ್ಲಿದೆ.

ಷೇರುಗಳಲ್ಲಿ ಕೂಡ ಎಲ್ಲ ಕಂಪನಿಯ ಷೇರುಗಳೂ ಭಾರಿ ರಿಸ್ಕ್‌ ಹೊಂದಿರುವುದಿಲ್ಲ. ಬ್ಲೂ ಚಿಪ್‌ ಕಂಪನಿಗಳ ಷೇರುಗಳು ಉತ್ತಮ ಬೆಳವಣಿಗೆ ಮತ್ತು ಸುರಕ್ಷತೆಗೆ ಖ್ಯಾತಿ ಗಳಿಸಿವೆ. ಅಲ್ಪಕಾಲಿಕ ಇಳಿಕೆ ದಾಖಲಿಸಿದರೂ, ಇಂಥ ಷೇರುಗಳ ದರ ಬಳಿಕ ಏರಿಕೆಯಾಗುವುದನ್ನು ಗಮನಿಸಬಹುದು. ಬ್ಲೂ ಚಿಪ್‌ ಕಂಪನಿ ಎಂದರೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹೊಂದಿರುವ, ಆರ್ಥಿಕವಾಗಿ ಬಲಾಢ್ಯವಾಗಿರುವ, ಷೇರು ಮಾರುಕಟ್ಟೆಯಲ್ಲಿ ನೋಂದಾಯಿತ ಕಂಪನಿ.

ಇದನ್ನೂ ಓದಿ: Term Insurance : 1 ಸಾವಿರಕ್ಕೆ 1 ಕೋಟಿ ಇನ್ಷೂರೆನ್ಸ್!‌ ಫುಲ್‌ ಡಿಟೇಲ್ಸ್‌, ವೀಕ್ಷಿಸಿ ವಿಸ್ತಾರ ಮನಿ ಪ್ಲಸ್‌

ಹೂಡಿಕೆ ಅಥವಾ ಇನ್ವೆಸ್ಟ್‌ಮೆಂಟ್‌ ವಿಚಾರಕ್ಕೆ ಬಂದಾಗ ಲಿಕ್ವಿಡಿಟಿ ಎನ್ನುವ ಪದವನ್ನು ನೀವು ಕೇಳಿರಬಹುದು. ಏನಿದು ಲಿಕ್ವಿಡಿಟಿ? ಉತ್ತಮ ಹೂಡಿಕೆಯ ಮಾನದಂಡದಲ್ಲಿ ಇದು ಮುಖ್ಯ. ನೀವು ಎಷ್ಟು ಬೇಗ ನಿಮ್ಮ ಹೂಡಿಕೆಯನ್ನು ನಗದೀಕರಿಸಿಕೊಳ್ಳಬಹುದು ಎಂಬುದನ್ನು ಲಿಕ್ವಿಡಿಟಿ ಪರಿಗಣಿಸುತ್ತದೆ. ಲಿಕ್ವಿಡಿಟಿ ಹೆಚ್ಚು ಇದೆ ಎಂದರೆ, ನಿಮ್ಮ ಅಸೆಟ್‌ ಅನ್ನು ಬೇಗ ಕ್ಯಾಶ್‌ ಆಗಿ ಪರಿವರ್ತಿಸಬಹುದು ಎಂದರ್ಥ. ಲಿಕ್ವಿಡಿಟಿ ಕಡಿಮೆ ಎಂದರೆ ಅಂಥ ಅಸೆಟ್‌ ಅನ್ನು ಬೇಗ ಕ್ಯಾಶ್‌ ಆಗಿ ಪರಿವರ್ತಿಸಲು ಆಗೋದಿಲ್ಲ ಎಂದರ್ಥ. ಉದಾಹರಣೆಗೆ ನಿಮ್ಮ ಬಳಿ ಚಿನ್ನ ಮತ್ತು ಸೈಟ್‌ ಇದೆ ಎಂದಿಟ್ಟುಕೊಳ್ಳಿ. ಸೈಟಿಗೆ ಹೋಲಿಸಿದರೆ ಚಿನ್ನವನ್ನು ಬೇಗ ಮಾರಾಟ ಮಾಡಿ ನಗದು ಪಡೆಯಬಹುದು. ಇಲ್ಲಿ ಚಿನ್ನದ ಲಿಕ್ವಿಡಿಟಿ ಹೆಚ್ಚು. ನಿಮ್ಮ ಕೈಯಲ್ಲಿರುವ ನಗದು ಹೆಚ್ಚು ಲಿಕ್ವಿಡಿಟಿ ಹೊಂದಿರುವ ಸಾಧನ. ಬ್ಯಾಂಕ್‌ ಖಾತೆಯಲ್ಲಿರುವ ಹಣ, ಫಿಕ್ಸೆಡ್‌ ಡಿಪಾಸಿಟ್‌ ಕೂಡ ಲಿಕ್ವಿಡಿಟಿಯನ್ನು ಹೆಚ್ಚು ಹೊಂದಿರುತ್ತವೆ. ಷೇರು ಕೂಡ ಹಾಗೆಯೇ. ಚಿನ್ನ, ಬೆಳ್ಳಿ ನಂತರದ ಸ್ಥಾನದಲ್ಲಿ ಬರುತ್ತವೆ. ಆದರೆ ರಿಯಲ್‌ ಎಸ್ಟೇಟ್‌ ಪ್ರಾಪರ್ಟಿಗಳು ಲಿಕ್ವಿಡಿಟಿಯ ವಿಷಯದಲ್ಲಿ ಕೊನೆಯಲ್ಲಿರುತ್ತವೆ. ಏಕೆಂದರೆ ಇದನ್ನು ಫಟಾಫಟ್‌ ಮಾರಾಟ ಮಾಡಿ ನಗದೀಕರಿಸಲು ಆಗುವುದಿಲ್ಲ.

ಹೂಡಿಕೆಗೆ ರಿಟರ್ನ್ ಯಾವಾಗ ಸಿಗುತ್ತದೆ? ಸಾಮಾನ್ಯವಾಗಿ ಹೂಡಿಕೆಗೆ ಮಾಸಿಕ, ತ್ರೈಮಾಸಿಕ, ಅರ್ಧ ವಾರ್ಷಿಕ ಅಥವಾ ವಾರ್ಷಿಕ ಲೆಕ್ಕದಲ್ಲಿ ರಿಟರ್ನ್‌ ಸಿಗುತ್ತದೆ. ಈಕ್ವಿಟಿ ಷೇರು, ಡಿಬೆಂಚರ್‌ಗಳಲ್ಲಿ ಬಂಡವಾಳ ವೃದ್ಧಿಯ ರೂಪದಲ್ಲೂ ಸಿಗುತ್ತದೆ. ಲಾಂಗ್ ಟರ್ಮ್‌ ಕ್ಯಾಪಿಟಲ್‌ ಗೇನ್ಸ್‌ಗೆ ತೆರಿಗೆ ವಿನಾಯಿತಿಗಳೂ ಸಿಗುತ್ತದೆ. ‌

ಹೂಡಿಕೆಗೆ ಆಯ್ಕೆಗಳು ಹಲವು:

ಹಾಗಾದರೆ ಎಲ್ಲಿ ಹೂಡಿಕೆ ಮಾಡಬೇಕು? ಉತ್ತಮ ಹೂಡಿಕೆಯ ಖಾತೆ ಹೇಗಿರುತ್ತದೆ? ಲಿಕ್ವಿಡ್‌ ಅಸೆಟ್ ಗಳು, ಈಕ್ವಿಟಿ, ರಿಯಲ್‌ ಎಸ್ಟೇಟ್‌, ಚಿನ್ನದಲ್ಲಿ ಹೂಡಿಕೆ ಮಾಡಬಹುದು. ನೀವು ತಕ್ಷಣ ಸಿಗುವಂಥ ಲಿಕ್ವಿಡ್‌ ಅಸೆಟ್‌ಗಳಲ್ಲಿ ಒಂದಷ್ಟು ಹಣವನ್ನು ಇಟ್ಟಿರಬೇಕು. ಅದು ಜತೆಗೆ ಬಡ್ಡಿ ಆದಾಯವನ್ನೂ ಕೊಡುತ್ತಿರಬೇಕು. ಉದಾಹರಣೆಗೆ ಬ್ಯಾಂಕ್‌ ಡಿಪಾಸಿಟ್.‌ ದೀರ್ಘಕಾಲೀನಕ್ಕೆ ಸಾರ್ವಜನಿಕ ಭವಿಷ್ಯನಿಧಿಕೂಡ ಸೇಫ್‌ ಇನ್ವೆಸ್ಟ್‌ ಮೆಂಟ್‌ ಆಗುತ್ತದೆ. ತುರ್ತು ಸಂದರ್ಭಗಳಲ್ಲಿ ತಕ್ಷಣ ಹಣ ಬೇಕಾಗುತ್ತದೆ. ಫಿಕ್ಸೆಡ್‌ ಡಿಪಾಸಿಟ್‌ ಇದ್ದರೆ ಅದರ ಮೇಲೆ ಸುಲಭವಾಗಿ ಹಾಗೂ ಶೀಘ್ರವಾಗಿ ಸಾಲ ಪಡೆಯಬಹುದು.

ದೀರ್ಘಾವಧಿ ಹೂಡಿಕೆಯ ನಿಟ್ಟಿನಲ್ಲಿ ಈಕ್ವಿಟಿ ಪೋರ್ಟ್ ಫೋಲಿಯೊ, ರಿಯಲ್‌ ಎಸ್ಟೇಟ್‌ ಹೂಡಿಕೆ ಉತ್ತಮ ಆಯ್ಕೆಯಾಗುತ್ತದೆ. ಷೇರುಗಳಲ್ಲಿ ಹೂಡಿಕೆ ಮಾಡುವ ಮುನ್ನ ಉತ್ತಮ ಬ್ರೋಕರ್‌ ಅನ್ನು ಕಂಡುಕೊಳ್ಳಿ. ನಿಮ್ಮ ಬ್ರೋಕಿಂಗ್‌ ಕಂಪನಿಯು ನಿಮ್ಮ ಪರ ಷೇರುಗಳ ಕೊಡು-ಕೊಳ್ಳುವಿಕೆಯನ್ನು ಮಾಡುವುದಲ್ಲದೆ, ಹೂಡಿಕೆಯ ಬಗ್ಗೆ ಉತ್ತಮ ಮಾರ್ಗದರ್ಶಕವೂ ಆಗಿರಬೇಕು. ಷೇರುಗಳನ್ನು ಖರೀದಿಸುವುದರಿಂದ ನಿಮ್ಮ ಸಂಪತ್ತು ಬೆಳೆಯುವುದರ ಜತೆಗೆ ಡಿವಿಡೆಂಡ್‌ ಕೂಡ ಸಿಗುತ್ತದೆ. ಉತ್ತಮ ಉದ್ಯಮಿಯ ಕಂಪನಿಯಲ್ಲಿ ಹೂಡಿಕೆ ಮಾಡುವುದರೊಂದ ರಾಷ್ಟ್ರ ನಿರ್ಮಾಣದಲ್ಲೂ ಕೈ ಜೋಡಿಸಿದಂತೆಯೂ ಆಗುತ್ತದೆ.

Continue Reading

ದೇಶ

Money Guide : ನಿವೃತ್ತಿ ಬಳಿಕ ಹಣದ ಚಿಂತೆ; ಈ 10 ಟಿಪ್ಸ್​ ಪಾಲಿಸಿದರೆ ನೋ ಟೆನ್ಷನ್​!

Money Guide: ಹೂಡಿಕೆ ಮತ್ತು ಉಳಿತಾಯ ಯೋಜನೆಗಳನ್ನು ಎಷ್ಟು ಬೇಗ ಆರಂಭ ಮಾಡುತ್ತಿರೋ ಅಷ್ಟರ ಮಟ್ಟಿಗೆ ನಿವೃತ್ತಿ ಬಳಿಕದ ಹಣಕಾಸಿನ ಚಿಂತೆ ಕಡಿಮೆ.

VISTARANEWS.COM


on

Money Guide
Koo

ನಿವೃತ್ತಿ ಬಳಿಕ ಹಣದ ಸಮಸ್ಯೆ ಬಂದರೆ ಏನು ಮಾಡುವುದು ಎಂಬ ಚಿಂತೆ ಉದ್ಯೋಗಸ್ಥರಿಗೆ ಇದ್ದದ್ದೆ. ಯಾಕೆಂದರೆ ಸಂಬಳ ಬರುವ ಉದ್ಯೋಗವೊಂದು ಇಲ್ಲದಾದಾಗ ಎಲ್ಲವೂ ತಾಪತ್ರಯ ಎನಿಸಿಬಿಡುತ್ತದೆ. ದೈನಂದಿನ ಖರ್ಚಿಗೆ ಸೇರಿದಂತೆ ಎಲ್ಲ ಹಣಕಾಸಿನ ಅಗತ್ಯಗಳನ್ನು ಪೂರೈಸುವುದು ಹೇಗೆ ಎಂಬ ಆತಂಕ ಇರುತ್ತದೆ. ಆದರೆ, ಬಹುತೇಕ ಮಂದಿ ಚಿಂತೆ ಮಾತ್ರ ಮಾಡುತ್ತಾರೆಯೇ ಹೊರತು ಅದಕ್ಕೊಂದು ಯೋಜನೆ ಹಾಕಿಕೊಳ್ಳುವುದಿಲ್ಲ. ಆದರೆ, ದುಡಿಮೆಯ ಅವಧಿಯಲ್ಲಿ ದುಡ್ಡು ಉಳಿಸಲು (Money Guide) ಮನಸ್ಸು ಮಾಡಿದರೆ ಈ ಚಿಂತೆ ಎಂದಿಗೂ ಇರುವುದಿಲ್ಲ.

ದುಡಿದ ದುಡ್ಡಿನಲ್ಲಿ ಉಳಿತಾಯ (Money Saving) ಮಾಡುವುದೂ ಉತ್ತಮ ಕಲೆ. ದುಡಿಮೆಯ ದಿನಗಳಲ್ಲಿ ಒಂದಿಷ್ಟು ಮೊತ್ತವನ್ನು ಉಳಿತಾಯದ ಮಾಡಿದರೆ, ನಿವೃತ್ತಿಯ ದಿನಗಳನ್ನು (Retirement Life) ನೆಮ್ಮದಿಯಾಗಿ ಕಳೆಯಬಹುದು. ಇಲ್ಲದಿದ್ದರೆ, ದುಡಿಯುವ ಕಸುವು ಇಲ್ಲದ ಸಮಯದಲ್ಲಿ ಹಣಕ್ಕಾಗಿ ಪರದಾಡಬೇಕಾಗುತ್ತದೆ. ಹಾಗಾಗಿ, ನಿಮ್ಮ ವೃತ್ತಿಯ ಆರಂಭದ ದಿನಗಳಿಂದಲೇ ನಿವೃತ್ತಿಯ ಬಗ್ಗೆ ಪ್ಲ್ಯಾನ್ ಮಾಡಿ(Plan for Retirement life), ಹಣವನ್ನು ಉಳಿತಾಯ ಮಾಡಬೇಕು. ನಿವೃತ್ತಿಯ ಅಂಚಿಗೆ ಬರುವಷ್ಟರಲ್ಲಿ ದೊಡ್ಡ ಮೊತ್ತದ ಉಳಿತಾಯ ನಿಮಗಾಗಿ ಕಾಯುತ್ತಿರುತ್ತದೆ. ಹಾಗಾಗಿ, ಈಗನಿಂದಲೇ ನೀವು ಉಳಿತಾಯ ಮತ್ತು ನಿವೃತ್ತಿಯ ದಿನಗಳಿಗಾಗಿ ಹೂಡಿಕೆಯ ಪ್ಲ್ಯಾನ್ ಮಾಡುವುದು ಶುರು ಮಾಡಿ(Money Guide).

ನಿವೃತ್ತಿಗಾಗಿ ಹಣ ಉಳಿಸುವ ಮಾರ್ಗಗಳು….

1.ಉಳಿತಾಯ ಯೋಜನೆ ಬೇಗ ಆರಂಭಿಸಿ

ಉತ್ತಮ ನಿವೃತ್ತಿ ಜೀವನಕ್ಕಾಗಿ ವೃತ್ತಿ ಆರಂಭದ ದಿನಗಳಿಂದಲೇ ಉಳಿತಾಯವನ್ನು ಆರಂಭಿಸಬೇಕು. ಚಿಕ್ಕ ಮೊತ್ತದ ಸೇವಿಂಗ್ ಕೂಡ ನಿವೃತ್ತಿ ಹೊತ್ತಿಗೆ ಬಹುದೊಡ್ಡ ಮೊತ್ತವಾಗಿ ಬದಲಾಗಿರುತ್ತದೆ.

2.ಉಳಿತಾಯಕ್ಕೊಂದು ಗುರಿ ಇರಲಿ

ನಿಮ್ಮ ನಿರೀಕ್ಷಿತ ವೆಚ್ಚಗಳು ಮತ್ತು ಜೀವನಶೈಲಿಯ ಆಧಾರದ ಮೇಲೆ ನಿವೃತ್ತಿಗಾಗಿ ನಿಮಗೆ ಎಷ್ಟು ಹಣ ಬೇಕು ಎಂದು ನಿರ್ಧರಿಸಿ. ಹಣದುಬ್ಬರ ಮತ್ತು ಆರೋಗ್ಯ ವೆಚ್ಚಗಳಂತಹ ಅಂಶಗಳನ್ನು ಪರಿಗಣಿಸಿ ಸೇವಿಂಗ್ ಆರಂಭಿಸಿ. ಸ್ಪಷ್ಟವಾದ ನಿವೃತ್ತಿ ಗುರಿಯನ್ನು ಹಾಕಿಕೊಳ್ಳುವುದರಿಂದ ಹಣ ಉಳಿಕೆಯಲ್ಲಿ ಸ್ಪಷ್ಟತೆ ದೊರೆಯುತ್ತದೆ.

3. ನಿವೃತ್ತಿ ಬಳಿಕದ ಆಯವ್ಯಯ ಸಿದ್ದಪಡಿಸಿ

ನಿಮ್ಮ ಸದ್ಯದ ಆದಾಯ ಮತ್ತು ವೆಚ್ಚದ ಅನುಸಾರ ನಿಮ್ಮ ನಿವೃತ್ತಿಯ ಬಜೆಟ್ ತಯಾರಿಸಿ. ಅನವಶ್ಯವಾಗಿ ಎಲ್ಲೆಲ್ಲಿ ಹಣ ಪೋಲಾಗುತ್ತಿದೆ ಎಂದು ಗುರುತಿಸಿಕೊಳ್ಳಿ ಮತ್ತು ಅಂಥ ಹಣವನ್ನು ಉಳಿಕೆಯ ಪಟ್ಟಿಗೆ ಸೇರಿಸಿ. ಈ ಮೂಲಕ ರಿಟೈರ್ ಫಂಡ್ ಕ್ರೋಡೀಕರಿಸಬಹುದು.

4. ನಿವೃತ್ತಿಯ ನಂತದ ಖಾತೆ ತೆರೆಯಿರಿ

ಭಾರತದಲ್ಲಿ ನಾನಾ ಅಕೌಂಟ್‌ಗಳು ಚಾಲ್ತಿಯಲ್ಲಿವೆ. ಅವುಗಳ ಮೂಲಕ ರಿಟೈರ್ಮೆಂಟ್ ಪ್ಲ್ಯಾನ್ ಮಾಡಬಹುದು. ಇಪಿಎಫ್, ಪಿಪಿಎಫ್, ಎನ್‌ಪಿಎಸ್, ಎಫ್‌ಡಿ ಇತ್ಯಾದಿ ಖಾತೆಗಳ ಮೂಲಕ ಸೇವಿಂಗ್‌ ಹೆಚ್ಚಿಸುತ್ತಾ ಹೋದಂತೆ ನಿವೃತ್ತಿ ಸಮಯದಯಲ್ಲಿ ತುಂಬಾ ಸಹಕಾರಿಯಾಗುತ್ತದೆ.

5.ಹೂಡಿಕೆ ಪ್ರಮಾಣ ಹೆಚ್ಚಲಿ

ಷೇರುಗಳು, ನಿರ್ದಿಷ್ಟ ಆದಾಯ ತರುವ ಹೂಡಿಕೆಗಳು, ರಿಯಲ್ ಎಸ್ಟೇಟ್ ಸೇರಿದಂತೆ ಇನ್ನಿತರ ಹೂಡಿಕೆಗಳನ್ನು ಆಯ್ದುಕೊಳ್ಳಬಹುದು. ನೀವು ಯಾವುದೇ ರೀತಿಯ ಹೂಡಿಕೆಯ ಸಾಧನವನ್ನು ಆಯ್ಕೆ ಮಾಡಿಕೊಳ್ಳಿ. ಆದರೆ, ಅದಕ್ಕಿಂತ ಮುಂಚೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಮುಂದುವರಿಯರಿ.

6.ಅನವಶ್ಯಕ ವೆಚ್ಚ ಬೇಡ

ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮವಾಗಿರಬೇಕು ಎಂದಾದರೆ, ಈಗಿನಿಂದಲೂ ಅನವಶ್ಯ ವೆಚ್ಚಗಳನ್ನು ದೂರ ಮಾಡಿ. ನಿಮ್ಮ ರಿಟೈರ್ಮೆಂಟ್‌ ಖಾತೆಗಳಿಗೆ ಆಟೋಮೆಟಿಕ್ ಆಗಿ ದುಡ್ಡು ಪೇ ಆಗುವ ಹಾಗೆ ಮಾಡಿ. ನಿಮ್ಮ ಸಂಬಳದಲ್ಲಿ ಇನ್‌ಕ್ರಿಮೆಂಟ್ ಆದಾಗಲೆಲ್ಲ. ಈ ರೀತಿಯ ಪರಿಹಾರವನ್ನು ಕಂಡುಕೊಳ್ಳಬಹುದು.

7.ಪರ್ಯಾಯ ಉಳಿತಾಯದ ಆಲೋಚನೆ ಇರಲಿ

ಮ್ಯೂಚವಲ್ ಫಂಡ್ಸ್, ಷೇರುಗಳು, ಬಾಂಡ್‌ಗಳಂಥ ಪರ್ಯಾಯ ಉಳಿತಾಯದ ಮಾರ್ಗಗಳನ್ನು ಹುಡುಕಿಕೊಳ್ಳಬಹುದು. ಕೇವಲ ಹಣವನ್ನು ಫಿಕ್ಸೆಡ್ ಡಿಪಾಸೆಟ್ ಮಾಡುವುದು ಮಾತ್ರವೇ ಉಳಿತಾಯದ ಮಾರ್ಗವಲ್ಲ. ಉಳಿತಾಯದ ಜತೆಗೆ ಹಣ ಹೆಚ್ಚಾಗುವ ಮಾರ್ಗಗಳಿವೆ. ಅವುಗಳನ್ನು ಶೋಧಿಸಬಹುದು. ಆದರೆ, ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ.

ಈ ಸುದ್ದಿಯನ್ನೂ ಓದಿ : Money Guide: ನಿಶ್ಚಿತ ಠೇವಣಿಗೆ ಯಾವ ಬ್ಯಾಂಕ್‌ನಲ್ಲಿ ಎಷ್ಟು ಬಡ್ಡಿದರ? ಇಲ್ಲಿದೆ ವಿವರ

8.ತೆರಿಗೆ ಕುರಿತ ಮಾಹಿತಿ ಇರಲಿ

ತೆರಿಗೆ ಕಾನೂನುಗಳು, ಹೂಡಿಕೆ ಆಯ್ಕೆಗಳು ಮತ್ತು ನಿವೃತ್ತಿ ಯೋಜನೆ ತಂತ್ರಗಳಲ್ಲಿನ ಬದಲಾವಣೆಗಳ ಬಗ್ಗೆ ನಿಮಗೆ ಅಪ್‌ಡೇಟೆಡ್ ಮಾಹಿತಿ ಇರುವುದು ಉತ್ತಮ. ತಿಳುವಳಿಕೆಯುಳ್ಳ ಹಣಕಾಸಿನ ನಿರ್ಧಾರಗಳನ್ನು ಮಾಡಲು ಈ ರೀತಿಯ ಅಪ್‌ಡೇಟೆಡ್ ಮಾಹಿತಿ ಇದ್ದರೆ ಬೆಸ್ಟ್ ಹೂಡಿಕೆ ಮಾಡಲು ಸಾಧ್ಯವಾಗುತ್ತದೆ.

9.ರಿಟೈರ್ಮೆಂಟ್ ಫಂಡ್ ವೆಚ್ಚ ಮಾಡಬೇಡಿ

ಯಾವುದೇ ಕಾರಣಕ್ಕೂ ನಿಮ್ಮ ನಿವೃತ್ತಿ ಉಳಿತಾಯವನ್ನು ಇತರ ವೆಚ್ಚಗಳಿಗಾಗಿ ಬಳಸಲು ಹೋಗಲೇಡಿ. ಉಳಿತಾಯದ ಹಣವನ್ನು ಬಳಸಲಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ಮತ್ತೆ ನೀವು ಹಣವಿಲ್ಲದೇ ಪರದಾಡಬೇಕಾಗುತ್ತದೆ. ಹಾಗಾಗಿ, ಎಂಥದ್ದೇ ಸಂದರ್ಭದಲ್ಲಿ ನಿವೃತ್ತಿಗಾಗಿ ತೆಗೆದಿಟ್ಟ ಅಥವಾ ಸೇವಿಂಗ್ ಮಾಡಿದ ಹಣವನ್ನು ಸದ್ಯದ ವೆಚ್ಚಕ್ಕೆ ಬಳಸಲು ಮುಂದಾಗಬೇಡಿ.

10.ತುರ್ತು ನಿಧಿ ಇರಲಿ

ಅನಿರೀಕ್ಷಿತ ವೆಚ್ಚಗಳಿಗಾಗಿ ತುರ್ತು ನಿಧಿಯನ್ನು ನಿರ್ವಹಣೆ ಮಾಡುವುದು ಉತ್ತಮ. ಯಾಕೆಂದರೆ, ತುರ್ತು ನಿಧಿ ನಿಮ್ಮ ಬಳಿ ಇದ್ದರೆ ನೀವು ನಿಮ್ಮ ಸೇವಿಂಗ್ಸ್‌ ಅನ್ನು ವೆಚ್ಚಗಳಿಗೆ ಬಳಸಲು ಮುಂದಾಗುವುದಿಲ್ಲ. ಇಲ್ಲದಿದ್ದರೆ, ಉಳಿತಾಯದ ಹಣವನ್ನೇ ನೀವು ತುರ್ತು ಅಗತ್ಯಗಳಿಗೆ ಬಳಸುತ್ತೀರಿ. ಆಗ ನಿಮ್ಮ ನಿವೃತ್ತಿಯ ಎಲ್ಲ ಪ್ಲ್ಯಾನ್ ಹಾಳಾಗುತ್ತದೆ.

Continue Reading

ಪ್ರಮುಖ ಸುದ್ದಿ

Money Guide: ಪಿಪಿಎಫ್‌, ಅಂಚೆ ಕಚೇರಿ; ಮಧ್ಯಮ ವರ್ಗದವರ ಹೂಡಿಕೆಗೆ ಇವು ಬೆಸ್ಟ್‌ ಪ್ಲಾನ್‌ಗಳು!

Money Guide: ಆಧುನಿಕ ಜಗತ್ತಿನಲ್ಲಿ ನಾವು ದುಡಿಯುವ ಜತೆಗೆ ದುಡ್ಡನ್ನೂ ದುಡಿಸಬೇಕು. ದುಡ್ಡನ್ನೂ ದುಡಿಸಬೇಕು ಎಂದರೆ ಹೂಡಿಕೆ ಮಾಡಬೇಕು. ಆದರೆ, ಹೆಚ್ಚು ಬಡ್ಡಿ ತಂದುಕೊಡುವ ಯೋಜನೆಗಳನ್ನು ಆಯ್ಕೆ ಮಾಡಿಕೊಂಡು ಹೂಡಿಕೆ ಮಾಡಬೇಕು. ಅಂತಹ ಯೋಜನೆಗಳ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

VISTARANEWS.COM


on

Best Investment Plans
Koo

ಬೆಂಗಳೂರು: ನಾವು ದುಡಿಯುವ ಜತೆಗೆ ದುಡ್ಡನ್ನೂ ದುಡಿಸಬೇಕು ಎಂಬುದು ಸರಿಯಾದ ನಿರ್ಧಾರ. ಆದರೆ, ಹೂಡಿಕೆಯ ಯೋಜನೆಗಳನ್ನು (Investment Plans) ಆಯ್ಕೆ ಮಾಡಿಕೊಳ್ಳುವಾಗ ಹೆಚ್ಚು ಬಡ್ಡಿ ತಂದುಕೊಡುವ, ಕಡಿಮೆ ಅವಧಿಯಲ್ಲಿಯೇ ನಮ್ಮ ಹೂಡಿಕೆಯ ದುಡ್ಡಿನ ಮೊತ್ತ ಹೆಚ್ಚಾಗುವ, ಸುದೀರ್ಘ ಅವಧಿಗೆ ಹೂಡಿಕೆ ಮಾಡಿದರೂ ಕೊನೆಯಲ್ಲಿ ಹೆಚ್ಚು ಹಣ ಪಡೆದ ಖುಷಿ ನಮ್ಮದಾಗಬೇಕು. ಅದಕ್ಕಾಗಿ ಹೆಚ್ಚು ಬಡ್ಡಿದರ ಇರುವ ಹೂಡಿಕೆ ಯೋಜನೆಗಳನ್ನೇ ಆಯ್ಕೆ ಮಾಡಿಕೊಳ್ಳಬೇಕು. ಹೂಡಿಕೆ ಮಾಡುವುದು ದೊಡ್ಡದಲ್ಲ, ಹೂಡಿಕೆ ಮಾಡುವಾಗ ಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳುವುದು ಜಾಣ್ಮೆ. ಸಣ್ಣ ಹೂಡಿಕೆದಾರರಿಗಂತೂ ಈ ನಿಯಮ ಕಡ್ಡಾಯ. ಹೀಗೆ ಹೆಚ್ಚು ಬಡ್ಡಿದರ ಇರುವ ಹೂಡಿಕೆ ಯೋಜನೆಗಳ ಕುರಿತ ಸಂಕ್ಷಿಪ್ತ ವಿವರಣೆ ಇಂದಿನ ವಿಸ್ತಾರ (Money Guide) ಮನಿ ಗೈಡ್‌ನಲ್ಲಿದೆ. ‌

ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ (PPF)

ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ ಯೋಜನೆಯು ಕೇಂದ್ರ ಸರ್ಕಾರ ಬೆಂಬಲಿತ ಪ್ಲಾನ್‌ ಆಗಿದೆ. ಹಾಗಾಗಿ, ಸಣ್ಣ ಹೂಡಿಕೆದಾರರು ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಸರ್ಕಾರಿ ಬೆಂಬಲಿತ ಪ್ಲಾನ್‌ ಆದ ಕಾರಣ ಇಲ್ಲಿ ಹೂಡಿಕೆ ಮಾಡುವುದು ಅಪಾಯಕಾರಿ ಅಲ್ಲ. ಪಿಪಿಎಫ್‌ ಖಾತೆ ತೆರೆಯುವವರಿಗೆ ವಾರ್ಷಿಕ ಶೇ.7.1ರಷ್ಟು ಬಡ್ಡಿ ದೊರೆಯಲಿದೆ. ಆದರೆ, ಈ ಯೋಜನೆಯು 15 ವರ್ಷ ಇರಲಿದೆ. ಮಗಳ ಮದುವೆ, ಮಕ್ಕಳ ಶಿಕ್ಷಣ ಸೇರಿ ಹಲವು ಮುಂದಾಲೋಚನೆ ಇರುವವರು 15 ವರ್ಷದ ಹೂಡಿಕೆ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು.

ಮ್ಯೂಚುವಲ್‌ ಫಂಡ್ಸ್‌

ಪಿಪಿಎಫ್‌ಗಿಂತ ಮ್ಯೂಚುವಲ್‌ ಫಂಡ್ಸ್‌ನಲ್ಲಿ ಹೂಡಿಕೆ ಮಾಡುವುದರಿಂದ ಹೆಚ್ಚಿನ ಬಡ್ಡಿ ಸಿಗುತ್ತದೆ. ಆದರೆ, ಇಲ್ಲಿ ಷೇರು ಮಾರುಕಟ್ಟೆಯ ನಿತ್ಯ ಹೂಡಿಕೆಗಿಂತ ಕಡಿಮೆ ಹಾಗೂ ಪಿಪಿಎಫ್‌ಗಿಂತ ಹೆಚ್ಚು ರಿಸ್ಕ್‌ ಇರುತ್ತದೆ. ಆದರೆ, ಮ್ಯೂಚುವಲ್‌ ಫಂಡ್ಸ್‌ ಹೂಡಿಕೆ ಪ್ಲಾನ್‌ಗಳನ್ನು ಒಂದು ವರ್ಷ, ಎರಡು ವರ್ಷ ಹಾಗೂ ಐದು ವರ್ಷದವರೆಗೆ ಆಯ್ಕೆ ಮಾಡಿಕೊಳ್ಳಬಹುದು. ಈಕ್ವಿಟಿಯಲ್ಲಿ ಹೂಡಿಕೆ ಮಾಡುವುದು ಒಳಿತು. ಅದರಲ್ಲೂ, ಅಪಾಯಕಾರಿ ಸನ್ನಿವೇಶದಲ್ಲಿ (ಷೇರು ಮಾರುಕಟ್ಟೆ ಕುಸಿತ, ಆರ್ಥಿಕ ದಿವಾಳಿ ಇತ್ಯಾದಿ) ನಿಮ್ಮ ಹೂಡಿಕೆಗಳನ್ನು ಮಾರಾಟ ಮಾಡುವ ಮೂಲಕ ಹೂಡಿಕೆಯ ಹಣವನ್ನು ಪಡೆಯಬಹುದು. ಎಸ್‌ಬಿಐ ಸೇರಿ ಯಾವುದೇ ಪರಿಚಿತ ಅಥವಾ ಹೆಚ್ಚು ಲಾಭ ತರುವಲ್ಲಿ ಹೂಡಿಕೆ ಮಾಡುವುದು ಜಾಣತನ ಎಂಬುದು ಹೂಡಿಕೆ ತಜ್ಞರ ಅಭಿಪ್ರಾಯವಾಗಿದೆ.

Mutual funds Good news for investors, SEBI proposes uniform expense ratio for mutual funds

ಇದನ್ನೂ ಓದಿ: Money Guide: ಎಫ್‌ಡಿಗಳಿಂದ ಹೆಚ್ಚಿನ ಆದಾಯ ಬೇಕೇ? ಲ್ಯಾಡರಿಂಗ್ ತಂತ್ರದಂತೆ ಹೂಡಿಕೆ ಮಾಡಿ ನೋಡಿ!

ಪೋಸ್ಟ್‌ ಆಫೀಸ್‌ ಹೂಡಿಕೆ ಯೋಜನೆಗಳು

ಪೋಸ್ಟ್‌ ಆಫೀಸ್‌ ಕೇಂದ್ರ ಸರ್ಕಾರದ ಅಧೀನದಲ್ಲಿ ಇರುವುದರಿಂದ ಹೂಡಿಕೆಗೆ ಯಾವುದೇ ಅಪಾಯವಿಲ್ಲ. ಅದರಲ್ಲೂ, ಬದಲಾದ ಕಾಲಘಟ್ಟದಲ್ಲಿ ಪೋಸ್ಟ್‌ ಆಫೀಸ್‌ ಬ್ಯಾಂಕ್‌ಗಳು ಹೂಡಿಕೆಗೆ ಹೆಚ್ಚಿನ ಬಡ್ಡಿ ನೀಡುತ್ತವೆ. ಹಾಗಾದರೆ, ಪೋಸ್ಟ್‌ ಆಫೀಸ್‌ನಲ್ಲಿ ಹೂಡಿಕೆ ಮಾಡಬಹುದಾದ ಪ್ಲಾನ್‌ಗಳು ಯಾವವು? ಅವುಗಳ ಇಂಟರೆಸ್ಟ್‌ ರೇಟ್‌ ಎಷ್ಟಿದೆ ಎಂಬುದರ ಮಾಹಿತಿ ಹೀಗಿದೆ…

  1. ಪೋಸ್ಟ್‌ ಆಫೀಸ್‌ ರೆಕರಿಂಗ್‌ ಡೆಪಾಸಿಟ್‌ (RD) ಪ್ಲಾನ್‌ ಅನ್ವಯ ಹೂಡಿಕೆ ಮಾಡಿದರೆ ಅಕ್ಟೋಬರ್‌ 1ರಿಂದ ಶೇ.6.7ರಷ್ಟು ಬಡ್ಡಿ ನೀಡಲಾಗುತ್ತಿದೆ. ಮೂರರಿಂದ ಐದು ವರ್ಷ ಮಾಸಿಕ ಇಂತಿಷ್ಟು ಹಣ ಠೇವಣಿ ಮಾಡಿದರೆ ಬಡ್ಡಿಯ ಲಾಭ ಸಿಗಲಿದೆ.
  2. ನ್ಯಾಷನಲ್‌ ಸೇವಿಂಗ್ಸ್‌ ಟೈಮ್‌ ಡೆಪಾಸಿಟ್‌ ಅಕೌಂಟ್‌ (TD) ತೆರೆದರೆ ಒಳ್ಳೆಯ ಬಡ್ಡಿ ಸಿಗಲಿದೆ. ಒಂದು ವರ್ಷದ ಅವಧಿಯ ಹೂಡಿಕೆಗೆ ಶೇ.6.9, 2 ವರ್ಷಕ್ಕೆ ಶೇ.7 ಹಾಗೂ 5 ವರ್ಷಕ್ಕೆ ಶೇ.7.5ರಷ್ಟು ಬಡ್ಡಿ ದೊರೆಯಲಿದೆ.
  3. ಹೆಣ್ಣುಮಕ್ಕಳ ತಂದೆಯರಿಗೆ ಸುಕನ್ಯಾ ಸಮೃದ್ಧಿ ಯೋಜನೆ ಒಳ್ಳೆಯ ಪ್ಲಾನ್‌ ಆಗಿದೆ. 10 ವರ್ಷದೊಳಗಿನ ಹೆಣ್ಣುಮಕ್ಕಳಿದ್ದರೆ ಅವರ ಪೋಷಕರು ಸುಕನ್ಯಾ ಸಮೃದ್ಧಿ ಯೋಜನೆ ಆಯ್ಕೆ ಮಾಡಿಕೊಳ್ಳಬಹುದು. ವರ್ಷಕ್ಕೆ 250 ರೂ.ನಿಂದ 1.5 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು. ಮಗಳು 18 ವರ್ಷ ತುಂಬಿದ ಬಳಿಕ ಶೇ.8ರಷ್ಟು ಬಡ್ಡಿಯೊಂದಿಗೆ ಹಣ ಪಡೆಯಬಹುದು. ಇದೇ ಹಣವನ್ನು ಮಗಳು 21 ವರ್ಷದ ದಾಟಿದ ಬಳಿಕ ಪಡೆದರೆ ಹೆಚ್ಚಿನ ಮೊತ್ತ ಸಿಗಲಿದೆ. ಆಕೆಯ ಉನ್ನತ ಶಿಕ್ಷಣ ಸೇರಿ ಹಲವು ಕಾರಣಗಳಿಗೆ ಇದು ಹೇಳಿ ಮಾಡಿಸಿದ ಯೋಜನೆ.
  4. ಪೋಸ್ಟ್‌ ಆಫೀಸ್‌ ಮಂತ್ಲಿ ಇನ್‌ಕಮ್‌ ಸ್ಕೀಮ್‌ ಅಕೌಂಟ್‌ ಕೂಡ ಸಣ್ಣ ಉಳಿತಾಯದಾರರಿಗೆ ಒಳ್ಳೆಯ ಯೋಜನೆ ಆಗಿದೆ. ಒಂದು, ಮೂರು, ಐದು ವರ್ಷದ ಯೋಜನೆ ಇದಾಗಿದ್ದು, ಒಬ್ಬ ವ್ಯಕ್ತಿಯು ಒಂದು ಖಾತೆಯಲ್ಲಿ 9 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು. ಈ ಯೋಜನೆಯ ಬಡ್ಡಿದರವು ಶೇ.7.4ರಷ್ಟು ಇದೆ. ಈ ಯೋಜನೆಯಲ್ಲಿ ಜಂಟಿ ಖಾತೆ ತೆರೆಯುವುದು ತುಂಬ ಒಳಿತು. ಜಂಟಿಯಾಗಿ ತೆರೆದ ಖಾತೆ (Joint Account)ಯಲ್ಲಿ 15 ಲಕ್ಷ ರೂಪಾಯಿವರೆಗೆ ಹೂಡಿಕೆ ಮಾಡಬಹುದು. ಇದರಿಂದ ಹೆಚ್ಚಿನ ಲಾಭವಾಗಲಿದೆ.
Continue Reading

ಪ್ರಮುಖ ಸುದ್ದಿ

Small Savings: ಸೆ.30ರೊಳಗೆ ಇದಕ್ಕೆಲ್ಲಾ ಆಧಾರ್ ಕಾರ್ಡ್ ಸಲ್ಲಿಸದಿದ್ದರೆ ಬಡ್ಡಿ ಕಳೆದುಕೊಳ್ಳುವಿರಿ! ಯಾವುದಕ್ಕೆಲ್ಲ? ಇಲ್ಲಿದೆ ವಿವರ

ನೀವು ಸಾರ್ವಜನಿಕ ಭವಿಷ್ಯ ನಿಧಿ (PPF), ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS), ಅಥವಾ ಪೋಸ್ಟ್ ಆಫೀಸ್ ಸಮಯ ಠೇವಣಿಗಳ (POTD) ಇಂತಹ ಸಣ್ಣ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ ಸೆಪ್ಟೆಂಬರ್ 30, 2023ರೊಳಗೆ ನಿಮ್ಮ ಆಧಾರ್ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

VISTARANEWS.COM


on

september 30
Koo

ಬೆಂಗಳೂರು: ಸೆಪ್ಟೆಂಬರ್ 30ರೊಳಗೆ ನಿಮ್ಮ PPF, SCSS, NSC ಸೇರಿದಂತೆ ಹಲವು ಸಣ್ಣ ಉಳಿತಾಯ (Small savings) ಯೋಜನೆಗಳಿಗೆ ಆಧಾರ್‌ ವಿವರಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಇದನ್ನು ಸಲ್ಲಿಸಲು ನೀವು ವಿಫಲರಾದರೆ ನಿಮ್ಮ ಖಾತೆಗೆ ಬರಬೇಕಾದ ಬಡ್ಡಿ ಹಣದ (Interest rate) ಪಾವತಿ ನಿಲ್ಲಬಹುದು. ಯಾವ್ಯಾವ ಉಳಿತಾಯ ಯೋಜನೆಗಳು? ಇಲ್ಲಿದೆ ವಿವರ.

ನೀವು ಸಾರ್ವಜನಿಕ ಭವಿಷ್ಯ ನಿಧಿ (PPF), ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS), ಅಥವಾ ಪೋಸ್ಟ್ ಆಫೀಸ್ ಸಮಯ ಠೇವಣಿಗಳ (POTD) ಇಂತಹ ಸಣ್ಣ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ ಸೆಪ್ಟೆಂಬರ್ 30, 2023ರೊಳಗೆ ನಿಮ್ಮ ಆಧಾರ್ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

PPF, SCSS, NSC ಮತ್ತು ಇತರ ಪೋಸ್ಟ್ ಆಫೀಸ್ ಉಳಿತಾಯ

ನಿಮ್ಮ PPF, ಸುಕನ್ಯಾ ಸಮೃದ್ಧಿ ಯೋಜನೆ (SSY), ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (NSC), ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS) ಅಥವಾ ಯಾವುದೇ ಇತರ ಸಣ್ಣ ಉಳಿತಾಯ ಯೋಜನೆಯ ಜತೆಗೆ ಮುಂದಿನ ತಿಂಗಳಿನಿಂದ ನಿಮ್ಮ ಆಧಾರ್‌ ಸಂಖ್ಯೆ ಜೋಡಣೆಯಾಗಿರುವುದು ಕಡ್ಡಾಯವಾಗಿದೆ. ಒಂದು ವೇಳೆ ಖಾತೆಯನ್ನು ತೆರೆಯುವಾಗ ನಿಮ್ಮ ಆಧಾರ್ ಕಾರ್ಡ್ ಅನ್ನು ನೀವು ಸಲ್ಲಿಸಿರದಿದ್ದರೆ, ನೀವು ಅದನ್ನು ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕು.

ಆತಂಕ ಪಡುವ ಅಗತ್ಯವಿಲ್ಲ

ನೀವು ಏಪ್ರಿಲ್ 1, 2023ರಂದು ಅಥವಾ ನಂತರ ನಿಮ್ಮ ಸಣ್ಣ ಉಳಿತಾಯ ಖಾತೆಗಳನ್ನು ತೆರೆದಿದ್ದರೆ, ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಆಧಾರ್ ಮತ್ತು ಪ್ಯಾನ್ ವಿವರಗಳು ಈಗಾಗಲೇ ದಾಖಲೆಗೆ ಜೋಡಣೆಯಾಗಿರುತ್ತವೆ.

ಆಧಾರ್‌ ಸಲ್ಲಿಸಲು ವಿಫಲವಾದರೆ ಏನಾಗುತ್ತದೆ?

ಸೆಪ್ಟೆಂಬರ್ 30, 2023ರೊಳಗೆ ನಿಮ್ಮ ಪೋಸ್ಟ್ ಆಫೀಸ್ ಯೋಜನೆಗೆ ಆಧಾರ್ ಅನ್ನು ಸಲ್ಲಿಸಲು ನೀವು ವಿಫಲರಾದರೆ, ನಿಮ್ಮ ಸಣ್ಣ ಉಳಿತಾಯ ಯೋಜನೆಯ ಖಾತೆಯು ನಿಷ್ಕ್ರಿಯವಾಗಬಹುದು. ಅಂದರೆ PPF, NSC ಅಥವಾ SCSSನಂತಹ ಸಣ್ಣ ಉಳಿತಾಯ ಯೋಜನೆ ಖಾತೆಯಲ್ಲಿರುವ ನಿಮ್ಮ ಹಣಕ್ಕೆ ಸಂಚಿತ ಬಡ್ಡಿಯನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದಿಲ್ಲ.

ನಿಮ್ಮ ಸಣ್ಣ ಉಳಿತಾಯ ಯೋಜನೆಯಿಂದ ಬರುವ ಬಡ್ಡಿ ಆದಾಯವನ್ನು ನೀವು ಅವಲಂಬಿಸಿದ್ದರೆ, ಖಂಡಿತವಾಗಿಯೂ ಆದಷ್ಟು ಬೇಗನೆ ಗಡುವಿನ ಮೊದಲು ನಿಮ್ಮ ಆಧಾರ್ ವಿವರಗಳನ್ನು ಸಲ್ಲಿಸಬೇಕು.

ಇದನ್ನೂ ಓದಿ: Money Guide: ಅಕ್ಟೋಬರ್ 1ರ ಮೊದಲೇ ಇದೆಲ್ಲ ಮಾಡಿಕೊಳ್ಳಿ… ಇಲ್ಲದಿದ್ದರೆ ಹಣ ಕಳೆದುಕೊಳ್ಳುವಿರಿ!

Continue Reading
Advertisement
viral video
ವೈರಲ್ ನ್ಯೂಸ್3 mins ago

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನಿಗೆ ʼಪಾಠʼ ಕಲಿಸಿದ ವಿದ್ಯಾರ್ಥಿಗಳು; ಹೇಗೆಂದು ನೀವೇ ನೋಡಿ

BJP State Vice President Malavika Avinash latest statement
ಬೆಂಗಳೂರು7 mins ago

Bengaluru News: ಭಯೋತ್ಪಾದನೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್ ಟೀಕೆ

Lok Sabha Election 2024 Prajwal Revanna gets Rs 40 crore worth asset
Lok Sabha Election 20247 mins ago

Lok Sabha Election 2024: ಪ್ರಜ್ವಲ್‌ ರೇವಣ್ಣ 40 ಕೋಟಿ ರೂ. ಒಡೆಯ; ಇದೆ ಕೆಜಿಗಟ್ಟಲೆ ಚಿನ್ನ!

Uttara Kannada Lok Sabha constituency Congress candidate Dr Anjali Nimbalkar latest statement
ಉತ್ತರ ಕನ್ನಡ11 mins ago

Uttara Kannada News: ಚುನಾವಣೆಯನ್ನು ಸುಲಭವಾಗಿ ಪರಿಗಣಿಸದಿರಿ: ನಿಂಬಾಳ್ಕರ್

Rameswaram cafe bomb blast case
ಬೆಂಗಳೂರು36 mins ago

Rameswaram cafe: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್; ಮುಖ್ಯ ಸಂಚುಕೋರ NIA ಬಲೆಗೆ

Rajasthan Royals
ಪ್ರಮುಖ ಸುದ್ದಿ48 mins ago

IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

SBI Debit Cards
ವಾಣಿಜ್ಯ50 mins ago

SBI Debit Cards: ಎಸ್‌ಬಿಐ ಡೆಬಿಟ್‌ ಕಾರ್ಡ್‌ದಾರರಿಗೆ ಬ್ಯಾಡ್‌ ನ್ಯೂಸ್‌; ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

Rishabh Pant -IPL 2024
ಕ್ರೀಡೆ1 hour ago

Rishabh Pant : ಡೆಲ್ಲಿ ಪರ 100ನೇ ಪಂದ್ಯವಾಡಿದ ರಿಷಭ್ ಪಂತ್​!

Parliament Flashback
ಕರ್ನಾಟಕ2 hours ago

Parliament Flashback: ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಗೆದ್ದು, ಬಿಜೆಪಿಯಿಂದ ಸ್ಪರ್ಧಿಸಿದಾಗ ಸೋತು ಹೋಗಿದ್ದ ಒಡೆಯರ್‌!

Lok Sabha Election 2024 HD Kumaraswamy to file nomination for Mandya Lok Sabha seat on April 4
ಕರ್ನಾಟಕ2 hours ago

Lok Sabha Election 2024: ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಮುಖಂಡರ ಸಮನ್ವಯ ಸಭೆ ಯಶಸ್ವಿ; ಏ. 4ಕ್ಕೆ ಹೆಚ್ಡಿಕೆ ನಾಮಪತ್ರ ಸಲ್ಲಿಕೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20247 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20249 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ16 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌