Repo rate hike effect | 25 ವರ್ಷದ ಗೃಹಸಾಲವನ್ನು 12 ವರ್ಷದಲ್ಲೇ ಸುಲಭವಾಗಿ ತೀರಿಸುವುದು ಹೇಗೆ? - Vistara News

ಪ್ರಮುಖ ಸುದ್ದಿ

Repo rate hike effect | 25 ವರ್ಷದ ಗೃಹಸಾಲವನ್ನು 12 ವರ್ಷದಲ್ಲೇ ಸುಲಭವಾಗಿ ತೀರಿಸುವುದು ಹೇಗೆ?

ಆರ್‌ಬಿಐ ಹಣದುಬ್ಬರವನ್ನು ನಿಯಂತ್ರಿಸಲು ರೆಪೊ ದರವನ್ನು ಏರಿಸಿದೆ. ಹೀಗಾಗಿ ಏರಿಕೆಯಾಗಲಿರುವ ಗೃಹಸಾಲದ ಹೊರೆಯನ್ನು ಗಣನೀಯವಾಗಿ ಇಳಿಸಿ, ಶೀಘ್ರ ಸಾಲಮುಕ್ತರಾಗುವುದು ಹೇಗೆ ಎನ್ನುತ್ತೀರಾ? (Repo rate hike effect) ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

loan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಶರತ್‌ ಎಂ.ಎಸ್, ಎಕ್ಸಿಕ್ಯುಟಿವ್‌ ಎಡಿಟರ್‌, ವಿಸ್ತಾರ ನ್ಯೂಸ್

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (RBI) ರೆಪೊ ದರವನ್ನು ಬುಧವಾರ 6.25%ಕ್ಕೆ ಏರಿಸಿದೆ. ರೆಪೊ ದರದಲ್ಲಿ ಕಳೆದ ಮೇ ಬಳಿಕ ಇಲ್ಲಿಯವರೆಗೆ ಒಟ್ಟು 2.25% ಹೆಚ್ಚಳವಾಗಿದ್ದು, 7%ರಿಂದ 9.25%ಕ್ಕೆ ವೃದ್ಧಿಸಿದೆ. (Repo rate hike effect) ಇದರ ಪರಿಣಾಮ ಗೃಹ ಸಾಲಗಾರರಿಗೆ ಸಮಾನ ಮಾಸಿಕ ಕಂತಿನ (EMI) ಹೊರೆ ಏರಿಕೆಯಾಗಿದೆ.

ನೀವು 30 ಲಕ್ಷ ರೂ. ಗೃಹ ಸಾಲ ಪಡೆದಿದ್ದೀರಿ ಎಂದಿಟ್ಟುಕೊಳ್ಳಿ. 20 ವರ್ಷಗಳಿಗೆ ಮೊದಲಿದ್ದ ಬಡ್ಡಿ ದರ 7% ಹಾಗೂ 23,258 ರೂ. ಇಎಂಐ ಇರುತ್ತದೆ. ಆದರೆ ರೆಪೊ ದರ ಪರಿಷ್ಕರಣೆಯಿಂದಾಗಿ ಇನ್ನು ಮುಂದೆ ಕಟ್ಟಬೇಕಾಗುವ ಸಾಲದ ಮೇಲಿನ ಬಡ್ಡಿ ದರ 27,387 ರೂ.ಗೆ ಏರಿಕೆಯಾಗುತ್ತದೆ. ಅಂದರೆ ಇಎಂಐ 27,387 ರೂ.ಗೆ ಏರಿಕೆಯಾಗುತ್ತದೆ. 4,129 ರೂ. ಹೆಚ್ಚಳವಾಗುತ್ತದೆ.

ನಿಮ್ಮಲ್ಲೂ ಅನೇಕ ಮಂದಿಗೆ ಸುದೀರ್ಘ ಗೃಹ ಸಾಲದ ಅವಧಿ ಇರಬಹುದು. ಹಾಗಾದರೆ, ಬಡ್ಡಿ ದರ ಏರಿಕೆಯ ಹೊರೆಯನ್ನು ಇಳಿಸಿ ಶೀಘ್ರ ಸಾಲ ಮುಕ್ತರಾಗುವುದು ಹೇಗೆ? 25 ವರ್ಷದ ಗೃಹ ಸಾಲವನ್ನು 12 ವರ್ಷಗಳಲ್ಲಿಯೇ ಮರು ಪಾವತಿಸಿ, ನಿಶ್ಚಿಂತೆಯಿಂದ ಸಾಲಮುಕ್ತರಾಗುವುದು ಹೇಗೆ? ಇಲ್ಲಿದೆ ವಿವರ

೨೦ ಲಕ್ಷ ರೂ. ಸಾಲ ತೀರಿಸಲು ಒಟ್ಟು 40 ಲಕ್ಷ ವೆಚ್ಚ!

ಗೃಹ ಸಾಲವನ್ನು ತೆಗೆದುಕೊಂಡ ಬಹುತೇಕ ಎಲ್ಲರೂ ಅದರ ಕಷ್ಟವನ್ನು ವಿವರಿಸಬಲ್ಲರು. ನಿಜ, ನಾವು ಸ್ವಂತ ಮನೆ ಕಟ್ಟಿ ಜೀವಮಾನದ ಸಾಧನೆ ಮಾಡಬೇಕು, ತಲೆಯ ಮೇಲೊಂದು ಸೂರು ಬೇಕು ಎನ್ನುವುದು ಒಪ್ಪತಕ್ಕದ್ದೇ. ಆದರೆ ಗೃಹ ಸಾಲ ತೆಗೆದುಕೊಳ್ಳುವುದರಿಂದ ಬ್ಯಾಂಕಿನವರನ್ನು ಉದ್ಧಾರ ಮಾಡುತ್ತಿರುತ್ತೇವೆ. ಉದಾಹರಣೆಗೆ ಒಬ್ಬ ವ್ಯಕ್ತಿ 20 ಲಕ್ಷ ರೂ. ಸಾಲವನ್ನು 8 ಪರ್ಸೆಂಟ್‌ ಬಡ್ಡಿಯಲ್ಲಿ 20 ವರ್ಷಕ್ಕೆ ತೆಗೆದುಕೊಂಡರೆ, 20 ಲಕ್ಷ ಅಸಲು ಮತ್ತು 20 ಲಕ್ಷ ಬಡ್ಡಿ ಸೇರಿ 40 ಲಕ್ಷ ರೂ. ಕಟ್ಟಬೇಕಾಗುತ್ತದೆ. ಹೀಗಾಗಿಯೇ ಗೃಹ ಸಾಲಗಾರರ ಆಯುಷ್ಯ ಸಾಲದ ಇಎಂಐ ಕಟ್ಟುವುದರಲ್ಲಿಯೇ ಮುಗಿಯುತ್ತದೆ. ಆದರೆ ಜಾಣ್ಮೆಯಿಂದ ಈ ಸಾಲದ ಶೂಲವನ್ನು ಪಕ್ಕಕ್ಕಿಡಬಹುದು! ಇನ್ನಿಲ್ಲದಂತೆ ಕಾಡುವ ಇಎಂಐ ಸುಳಿಯಿಂದ ಪಾರಾಗಬಹುದು! ಅದಕ್ಕಾಗಿ ಅಕ್ಷರಶಃ ಬುದ್ಧಿವಂತಿಕೆಯನ್ನು ಉಪಯೋಗಿಸಿದರೆ ಸಾಕು. ಖಡಾಖಂಡಿತವಾಗಿ ಕನಿಷ್ಠ 10ರಿಂದ 20 ಲಕ್ಷ ರೂ. ಉಳಿತಾಯದ ಲಾಭ ನಿಮ್ಮದಾಗುತ್ತದೆ!

ಸಾಮಾನ್ಯವಾಗಿ ಬ್ಯಾಂಕ್‌ಗಳು ನಿಮ್ಮ ಅರ್ಜಿಯನ್ನು ಪರಿಗಣಿಸಿ ಗೃಹ ಸಾಲವನ್ನು ಮಂಜೂರು ಮಾಡುತ್ತವೆ. ಬಳಿಕ ಪ್ರತಿ ತಿಂಗಳು ಇಎಂಐ ಹೊರೆ ನಿಮ್ಮ ಹೆಗಲೇರುತ್ತದೆ. ಅದನ್ನು ಹೇಗೆ ನಿಗದಿತ ಅವಧಿಗಿಂತ ಮೊದಲೇ ತೀರಿಸಿ, ಸಾಲದ ಶೂಲದಿಂದ ಹೇಗೆ ಪಾರಾಗಬಹುದು ಎಂಬುದನ್ನು ಬ್ಯಾಂಕ್‌ಗಳು ಕಲಿಸುವುದಿಲ್ಲ. ಹೀಗಾಗಿ ಈ ಬಗ್ಗೆ ಹಣಕಾಸು ಸಾಕ್ಷರತೆ ಅತ್ಯಂತ ಮುಖ್ಯ. ಇಲ್ಲದಿದ್ದರೆ ಗೃಹಸಾಲದ ಬವಣೆ ತಪ್ಪದು.

ಗೃಹ ಸಾಲದ ಇಎಂಐ ಹೇಗೆ ಇರುತ್ತದೆ? ಅದರ ಅವಧಿ ಎಷ್ಟು? ಅದು ನಿಮ್ಮ ಸಾಲದ ಮೇಲೆ ಬೀರುವ ಪರಿಣಾಮವೇನು? ಸಾಲದ ಅವಧಿಯನ್ನು ಕಡಿಮೆ ಮಾಡುವು ಮೂಲಕ ಬಡ್ಡಿಯ ಹೊರೆಯನ್ನು ಮತ್ತು ಸಾಲದ ಕಂತುಗಳನ್ನು ಇಳಿಸುವುದು ಹೇಗೆ? ಲೋನ್‌ ಕ್ಯಾಲ್ಕುಲೇಟರ್‌ ಬಳಸಿಕೊಂಡು ಲೆಕ್ಕಾಚಾರ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳುವುದು ಅವಶ್ಯಕ.

ಕೆಲ ಹೆಚ್ಚುವರಿ ಕಂತುಗಳಿಂದ ಸಾಲದ ಬಾಕಿ, ಬಡ್ಡಿಯಲ್ಲಿ ಭಾರಿ ಇಳಿಕೆ : ಸಾಲದ ಇಎಂಐ ಇವತ್ತು ಕೇವಲ ಗೃಹ ಸಾಲಗಳಿಗೆ ಸೀಮಿತವಾಗಿಲ್ಲ. ಮನೆ, ಕಾರು, ಬೈಕ್‌, ಸ್ಕೂಟರ್, ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಇತ್ಯಾದಿಗಳನ್ನು ಇಎಂಐ ಮೂಲಕ ಖರೀದಿಸಬಹುದು. ಸಾಲದ ಮೊತ್ತ ಮತ್ತು ಬಡ್ಡಿ ದರ ವ್ಯತ್ಯಾಸ ಇರಬಹುದು. ಆದರೆ ಕೆಲವು ಪ್ರಾಥಮಿಕ ಸೂತ್ರಗಳು ಒಂದೇ. ವಾರ್ಷಿಕ ಹೆಚ್ಚುವರಿ ಕಂತುಗಳನ್ನು ಕಟ್ಟುವ ಮೂಲಕ ಗೃಹ ಸಾಲದ ಒಟ್ಟಾರೆ ಬಾಕಿ ಮತ್ತು ಬಡ್ಡಿಯಲ್ಲಿ ಲಕ್ಷಾಂತರ ರೂ.ಗಳನ್ನು ಕಡಿಮೆ ಮಾಡಬಹುದು! ಹೀಗಾಗಿ ಕೆಳ ಕಂಡ ಸೂತ್ರಗಳು ಅಥವಾ ಕಾರ್ಯತಂತ್ರಗಳು ಗೃಹಸಾಲ ಮಾತ್ರವಲ್ಲದೆ, ಇತರ ಸಾಲಗಳ ಮರು ಪಾವತಿಯಲ್ಲೂ, ಸಾಲದ ಹೊರೆಯನ್ನು ಶೀಘ್ರ ಇಳಿಸಿ ನಿಶ್ಚಿಂತೆಯಿಂದಿರಲು ಸಹಕಾರಿ. ಈಗ ಗೃಹ ಸಾಲದ ಹೊರೆಯಿಂದ ಶೀಘ್ರ ಪಾರಾಗುವುದು ಹೇಗೆ ಎಂಬುದನ್ನು ನೋಡೋಣ.

ಆರಂಭಿಕ ಹಂತದಲ್ಲಿ ಗೃಹ ಸಾಲದ ಇಎಂಐ ಕಟ್ಟುವಾಗ ಅಸಲಿಗಿಂತ ಹೆಚ್ಚಾಗಿ ಬಡ್ಡಿಗೆ ನಮ್ಮ ಮೊತ್ತ ಹೋಗುತ್ತದೆ.

ಸಾಲದ ಮೊತ್ತಬಡ್ಡಿ ದರಅವಧಿಮಾಸಿಕ ಕಂತು ಇಎಂಐತಿಂಗಳುಅಸಲಿಗೆ ಜಮೆ ಆಗುವ ಮೊತ್ತಬಡ್ಡಿಗೆ ಜಮೆ ಆಗುವ ಮೊತ್ತಸಾಲದ ಬಾಕಿ ಮೊತ್ತ
35 ಲಕ್ಷಶೇ 825 ವರ್ಷರೂ. 27,0141ರೂ. 3,680ರೂ. 23,33334,96,320
35 ಲಕ್ಷಶೇ 825 ವರ್ಷರೂ. 27,0142ರೂ. 3,705ರೂ. 23,30934,92,615
35 ಲಕ್ಷಶೇ 825 ವರ್ಷರೂ. 27,0143ರೂ. 3,729ರೂ. 23,28434,88,886
35 ಲಕ್ಷಶೇ 825 ವರ್ಷರೂ. 27,0144ರೂ. 3,754ರೂ. 23,25934,85,131
35 ಲಕ್ಷಶೇ 825 ವರ್ಷರೂ. 27,0145ರೂ. 3,779ರೂ. 23,23434,81,352
35 ಲಕ್ಷಶೇ 825 ವರ್ಷರೂ. 27,0146ರೂ. 3,805ರೂ. 23,20934,77,547
35 ಲಕ್ಷಶೇ 825 ವರ್ಷರೂ. 27,0147ರೂ. 3,830ರೂ. 23,18434,73,717
35 ಲಕ್ಷಶೇ 825 ವರ್ಷರೂ. 27,0148ರೂ. 3,855ರೂ. 23,15834,69,862
35 ಲಕ್ಷಶೇ 825 ವರ್ಷರೂ. 27,0149ರೂ. 3,881ರೂ. 23,13234,65,981
35 ಲಕ್ಷಶೇ 825 ವರ್ಷರೂ. 27,01410ರೂ. 3,907ರೂ. 23,10734,62,074
35 ಲಕ್ಷಶೇ 825 ವರ್ಷರೂ. 27,01411ರೂ. 3,933ರೂ. 23,08034,58,141
35 ಲಕ್ಷಶೇ 825 ವರ್ಷರೂ. 27,01412ರೂ. 3,959ರೂ. 23,05434,54,181
ಒಟ್ಟು ಲೆಕ್ಕಚಾರ ರೂ. 3,24,168ರೂ. 45,817ರೂ.2,78,351  
  • ಮೊದಲ ವರ್ಷ ನೀವು ಪಾವತಿಸುವ ಮೊತ್ತ ರೂ. 3,24,168
  • ಮೊದಲ ವರ್ಷ ಬಡ್ಡಿಗೆ ಜಮೆ ಆಗುವ ಮೊತ್ತ ರೂ.2,78,351
  • ಮೊದಲ ವರ್ಷ ಅಸಲಿಗೆ ಜಮೆ ಆಗುವ ಮೊತ್ತ ರೂ. 45,817
ಸಾಲದ ಅವಧಿ ಹೆಚ್ಚಾದಂತೆ ನಾವು ಅಸಲು ಮೊತ್ತಕ್ಕಿಂತ ಹೆಚ್ಚಿನ ಬಡ್ಡಿ ಪಾವತಿಸಬೇಕಾಗುತ್ತದೆ
ಸಾಲದ ಮೊತ್ತಬಡ್ಡಿ ದರಅವಧಿಮಾಸಿಕ ಕಂತು ಇಎಂಐಪಾವತಿಸುವ ಅಸಲಿನ ಮೊತ್ತಪಾವತಿಸುವ ಬಡ್ಡಿ ಮೊತ್ತಅಸಲು+ ಬಡ್ಡಿ ಸೇರಿಸಿ ಪಾವತಿಸುವ ಒಟ್ಟು ಮೊತ್ತ
35 ಲಕ್ಷಶೇ 825 ವರ್ಷರೂ. 27,01435 ಲಕ್ಷರೂ. 46,04,070ರೂ. 81,04,070
35 ಲಕ್ಷಶೇ 820ವರ್ಷರೂ. 29,27535 ಲಕ್ಷರೂ. 35,26,097ರೂ. 70,26,097
35 ಲಕ್ಷಶೇ 815 ವರ್ಷರೂ. 33,44835 ಲಕ್ಷರೂ. 25,20,608ರೂ. 60,20,608
35 ಲಕ್ಷಶೇ 810 ವರ್ಷರೂ. 42,46535 ಲಕ್ಷರೂ. 15,95,759ರೂ. 50,95,759

25 ವರ್ಷದ ಅವಧಿಯ ಸಾಲವನ್ನು 12 ವರ್ಷಗಳಲ್ಲೇ ಪಾವತಿಸುವುದು ಹೇಗೆ?

ಸಾಲದ ಮೊತ್ತ ಸಾಲ ಪಡೆದಿರುವ ಅವಧಿಮಾಸಿಕ ಕಂತು (ಇಎಂಐ)ಪಾವತಿಸಬೇಕಿರುವ ಅಸಲಿನ ಮೊತ್ತಪಾವತಿಸಬೇಕಿರುವ ಬಡ್ಡಿ ಮೊತ್ತಅಸಲು+ ಬಡ್ಡಿ ಸೇರಿಸಿ ಪಾವತಿಸುವ ಒಟ್ಟು ಮೊತ್ತವಾರ್ಷಿಕ ಹೆಚ್ಚುವರಿ ಕಂತುಹೆಚ್ಚುವರಿ ಕಂತು ಪಾವತಿಸಿದಾಗ ಕಡಿಮೆಯಾಗುವ ಬಡ್ಡಿ ಹೊರೆಇಳಿಕೆಯಾಗವ ಸಾಲ ಮರುಪಾವತಿ ವರ್ಷಗಳು
35 ಲಕ್ಷ25 ವರ್ಷ27,01435 ಲಕ್ಷರೂ.46,04,070ರೂ.81,04,0027,014*1 (1ಹೆಚ್ಚುವರಿ ಕಂತು)34,80,93104
27,014*2 (ಹೆಚ್ಚುವರಿ ಕಂತು)  28,25,20707
27,014*3 (ಹೆಚ್ಚುವರಿ ಕಂತು)  23,85,13410
27,014*4 (ಹೆಚ್ಚುವರಿ ಕಂತು)  20,66,12011
27,014*5 (ಹೆಚ್ಚುವರಿ ಕಂತು)  18,22,20013
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

KEA: ಕೆಸೆಟ್-‌2023ರ ಪರಿಷ್ಕೃತ ಕೀ ಉತ್ತರ ಪ್ರಕಟ; ಹೀಗೆ ಪರಿಶೀಲಿಸಿ

KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ವರ್ಷದ ಜನವರಿ 13ರಂದು ನಡೆಸಿದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2023)ಯ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಅದನ್ನು ಪರಿಶೀಲಿಸುವ ವಿಧಾನ ಇಲ್ಲಿದೆ.

VISTARANEWS.COM


on

kea
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ವರ್ಷದ ಜನವರಿಯಲ್ಲಿ ನಡೆಸಿದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2023)ಯ ಪರಿಷ್ಕೃತ ಕೀ ಉತ್ತರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಜನವರಿ 13ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 42 ವಿವಿಧ ವಿಷಯಗಳ ಪರೀಕ್ಷೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದ ಕೀ ಉತ್ತರಗಳನ್ನು ಜನವರಿ 29ರಂದು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 7ರ ತನಕ ಅವಕಾಶ ನೀಡಿತ್ತು. ಬಳಿಕ ಕೆಲವು ಅಭ್ಯರ್ಥಿಗಳು ದಿನಾಂಕವನ್ನು ವಿಸ್ತರಿಸಬೇಕೆಂದು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕಾಲಾವಕಾಶವನ್ನು ಫೆಬ್ರವರಿ 17ರ ತನಕ ಮುಂದೂಡಲಾಗಿತ್ತು.

ಅದರಂತೆ ಪರೀಕ್ಷಾ ಪ್ರಾಧಿಕಾರಕ್ಕೆ 23 ಪತ್ರಿಕೆಗಳ ಆಯ್ದ ಕೀ ಉತ್ತರಗಳಿಗೆ ಮಾತ್ರ ಆಕ್ಷೇಪಣೆ ಸಲ್ಲಿಕೆಯಾಗಿದ್ದವು. ಬಳಿಕ ವಿಷಯ ತಜ್ಞರು ಒಟ್ಟು 22 ಪತ್ರಿಕೆಗಳ ಕೆಲವು ಉತ್ತರಗಳಿಗೆ ಬದಲಾವಣೆ ಸೂಚಿಸಿದ್ದರು. ಇನ್ನು ಒಂದು ಪತ್ರಿಕೆಯಲ್ಲಿನ ಆಕ್ಷೇಪಣೆಗೆ ಯಾವುದೇ ಬದಲಾವಣೆ ತಂದಿಲ್ಲ. ಅಲ್ಲದೆ ಉಳಿದ 19 ಪತ್ರಿಕೆಗಳಿಗೆ ಯಾವುದೇ ಆಕ್ಷೇಪಣೆ ಕಂಡು ಬರದ ಹಿನ್ನೆಲೆಯಲ್ಲಿ ಕೀ ಉತ್ತರದಲ್ಲಿ ಯಾವುದೇ ಬದಲಾವಣೆ ಇಲ್ಲ.

”ಆಕ್ಷೇಪಣೆ ವ್ಯಕ್ತವಾದ 23 ಪತ್ರಿಕೆಗಳ ಪ್ರಶ್ನೆಗಳನ್ನು ವಿಷಯ ತಜ್ಞರು ಕೂಲಂಕುಷವಾಗಿ ಪರಿಶೀಲಿಸಿದ್ದಾರೆ. ಆ ಪೈಕಿ ಮನಃಶಾಸ್ತ್ರ ವಿಷಯವನ್ನು ಹೊರತುಪಡಿಸಿ ಉಳಿದ 22 ಪತ್ರಿಕೆಗಳ ಪರಿಷ್ಕೃತ ಕೀ ಉತ್ತರಗಳನ್ನು ಈಗ ಪಕ್ರಟಿಸಲಾಗಿದೆ” ಎಂದು ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಪರಿಷ್ಕೃತ ಕೀ ಉತ್ತರ ಹೀಗೆ ಪರಿಶೀಲಿಸಿ

  • ಪರಿಷ್ಕೃತ ಕೀ ಉತ್ತರ ಪರಿಶೀಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ವೆಬ್‌ಪೇಜ್‌ನ ಮೇಲ್ಭಾಗದಲ್ಲಿರುವ ‘ಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಬಳಿಕ ʼಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ 2023′ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ನಂತರ ತೆರೆದ ವೆಬ್‌ಪೇಜ್‌ನಲ್ಲಿ ಕಂಡುಬರುವ ‘KSET ಪರಿಷ್ಕೃತ ಕೀ ಉತ್ತರಗಳು’ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಆಗ ವಿಷಯವಾರು ಪರಿಷ್ಕೃತ ಕೀ ಉತ್ತರಗಳ ಲಿಂಕ್ ಕಂಡು ಬರುತ್ತದೆ.
  • ನೀವೂ ನೋಡಲು ಇಚ್ಛಿಸುವ ವಿಷಯದ ಕೀ ಉತ್ತರದ ಲಿಂಕ್‌ ಮೇಲೆ ಕ್ಲಿಕ್ ಮಾಡಿ.
  • ತೆರೆದುಕೊಳ್ಳುವ ಪಿಡಿಎಫ್‌ ಪುಟದಲ್ಲಿ ಕೀ ಉತ್ತರ ಪರಿಶೀಲಿಸಿಕೊಳ್ಳಬಹುದು.

ಬೆಂಗಳೂರು ನಗರ ಸೇರಿದಂತೆ ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಗೆ ಒಟ್ಟು 1,17,302 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. ಈ ಪೈಕಿ ವಾಣಿಜ್ಯಶಾಸ್ತ್ರದ ಪರೀಕ್ಷೆಯನ್ನು ಅತಿ ಹೆಚ್ಚು ಅಂದರೆ 16,000 ಜನ ತೆಗೆದುಕೊಂಡಿದ್ದರು. ಕನ್ನಡ ವಿಷಯವನ್ನು 11 ಸಾವಿರ ಮಂದಿ ಆಯ್ದುಕೊಂಡಿದ್ದರು. ಅತಿ ಕಡಿಮೆ ಅಂದರೆ 25 ಜನ ಭಾಷಾಶಾಸ್ತ್ರದ ವಿಷಯದಲ್ಲಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಬಿಗಿ ಭದ್ರತೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಪರೀಕ್ಷೆ ಬರೆದ ಒಟ್ಟು ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಅಂಕ ಪಡೆದ ಶೇ. 6 ಆಕಾಂಕ್ಷಿಗಳಿಗೆ ಅಂತಿಮವಾಗಿ ಕೆಸೆಟ್ ಪರೀಕ್ಷೆಯ ಅರ್ಹತೆ ಸಿಗಲಿದೆ. ಇದರಲ್ಲಿ ರೋಸ್ಟರ್ ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಇದನ್ನೂ ಓದಿ: KEA Exam Scam: ಸರ್ಕಾರಿ ನೌಕರಿಗೆ ಸೇರಿ ಒಂದೇ ತಿಂಗಳಲ್ಲಿ ಜೈಲು ಸೇರಿದ ವಾರ್ಡನ್!

Continue Reading

ದೇಶ

Viral News : ವೈರಲ್​ ವಿಡಿಯೊಗಾಗಿ ಅಸಭ್ಯವಾಗಿ ವರ್ತಿಸಿದ ಡೆಲ್ಲಿ ಯುವತಿಯರು ಅರೆಸ್ಟ್​!

Viral News: ಅಶ್ಲೀಲ ವಿಡಿಯೊ ಮಾಡುವ ಜತೆಗೆ ಹೆಲ್ಮೆಟ್ ಇಲ್ಲದೆ ನೊಯ್ದಾದ ರಸ್ತೆಗಳಲ್ಲಿ ನಿರ್ಲಕ್ಷ್ಯದಿಂದ ಸ್ಕೂಟರ್ ಸವಾರಿ ಮಾಡುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದ್ದವು

VISTARANEWS.COM


on

Viral News: Holi at delhi metro
Koo

ನೋಯ್ಡಾ: ಸಾಮಾಜಿಕ ಮಾಧ್ಯಮ ವೀಡಿಯೊಗಳು ವೈರಲ್ (Viral News) ಆದ ನಂತರ ಸಾರ್ವಜನಿಕ ಸ್ಥಳದಲ್ಲಿ ತೊಂದರೆ ಮತ್ತು ಅಶ್ಲೀಲತೆಯನ್ನು ಸೃಷ್ಟಿಸಿದ ಆರೋಪದ ಮೇಲೆ ನೋಯ್ಡಾ ಪೊಲೀಸರು ಗುರುವಾರ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಹೆಲ್ಮೆಟ್ ಇಲ್ಲದೆ ನಗರದ ರಸ್ತೆಯಲ್ಲಿ “ನಿರ್ಲಕ್ಷ್ಯದಿಂದ” ಸ್ಕೂಟರ್ ಸವಾರಿ ಮಾಡುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದ್ದವು. ಅದೇ ರೀತಿ ಡೆಲ್ಲಿ ಮೆಟ್ರೋದಲ್ಲಿ ರಂಗಿನ ಓಕುಳಿ ಆಡಿದವರೂ ಜೈಲು ಕಂಬಿ ಎಣಿಸುವಂತಾಗಿದೆ.

ಈ ಎರಡೂ ವಿಡಿಯೊಗಳನ್ನು ನೋಡಿರುವ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು “ಅಶ್ಲೀಲ” ಎಂದು ಟೀಕಿಸಿದರೆ, ನೋಯ್ಡಾ ಸಂಚಾರ ಪೊಲೀಸರು ರಸ್ತೆ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸ್ಕೂಟರ್ ಮಾಲೀಕರಿಗೆ ಒಟ್ಟು 80,500 ರೂ.ಗಳ ದಂಡವನ್ನು ವಿಧಿಸಿದ್ದರು.

ಐಪಿಸಿ ಸೆಕ್ಷನ್ 279 (ಮಾನವ ಜೀವಕ್ಕೆ ಅಪಾಯವನ್ನುಂಟು ಮಾಡುವ ಅತಿವೇಗದ / ನಿರ್ಲಕ್ಷ್ಯದ ಚಾಲನೆ), 290 (ಸಾರ್ವಜನಿಕ ಉಪದ್ರವ), 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲತೆ), 336 ಮತ್ತು 337 (ಇತರರ ಜೀವಕ್ಕೆ ಅಪಾಯವನ್ನುಂಟು ಮಾಡುವ ಅಥವಾ ಅದರಿಂದ ನೋವನ್ನುಂಟುಮಾಡುವ ಕೃತ್ಯಕ್ಕೆ ಸಂಬಂಧಿಸಿದ) ಅಡಿಯಲ್ಲಿ ಸೆಕ್ಟರ್ 113 ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಏನಿದು ಪ್ರಕರಣ?

ನೋಯ್ಡಾದಲ್ಲಿ ಕಳೆದ ಸೋಮವಾರ (ಮಾರ್ಚ್‌ 25) ಯುವಕನು ಸ್ಕೂಟರ್ ಚಾಲನೆ ಮಾಡುತ್ತಿದ್ದರೆ, ಹುಡುಗಿಯರು ಚಲಿಸುತ್ತಿರುವ ಸ್ಕೂಟರ್​ನಲ್ಲಿ ಪರಸ್ಪರ ಎದುರು ಬದುರಾಗಿ ಕುಳಿತು ಅಶ್ಲೀಲ ನೃತ್ಯ ಮಾಡಿದ್ದಾರೆ. ಇನ್ನೊಬ್ಬ ವ್ಯಕ್ತಿ ವಿಡಿಯೊವನ್ನು ಚಿತ್ರೀಕರಿಸಿದ್ದಾನೆ, ಆದಾಗ್ಯೂ, ವಿಡಿಯೊ ಚಿತ್ರೀಕರಿಸಿದ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಇದನ್ನೂ ಓದಿ : Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

ವೈರಲ್ ಆಗಿರುವ ವೀಡಿಯೊದಲ್ಲಿ, ಇಬ್ಬರು ಹುಡುಗಿಯರು ಸ್ಕೂಟರ್​ನ ಹಿಂಭಾಗ ಕುಳಿತು ಬಾಲಿವುಡ್ ಹಾಡು “ಮೊಹೆ ರಂಗ್ ಲಗಾಡೆ” ಗೆ ನೃತ್ಯ ಮಾಡಿದ್ದಾರೆ. ಹುಡುಗಿಯರು ನೃತ್ಯ ಮಾಡುತ್ತಿದ್ದಾರೆಯೇ, ಅಶ್ಲೀಲ ಕೆಲಸದಲ್ಲಿ ತೊಡಗಿದ್ದಾರೆಯೇ ಅಥವಾ ಪ್ರಣಯದಲ್ಲಿ ತೊಡಗಿದ್ದಾರೆಯೇ ಎಂದು ವಿವರಿಸುವುದು ಅಸಾಧ್ಯ. ವಿಡಿಯೊ ನೋಡಿಯೇ ನಿರ್ಧಾರ ಮಾಡಬೇಕಾಗುತ್ತದೆ. ಆದರೆ, ಯಾರು ಕೂಡ ಈ ಯುವತಿಯರ ವರ್ತನೆಯನ್ನು ಸಮರ್ಥನೆ ಮಾಡಿಕೊಳ್ಳಲು ಸಾಧ್ಯವಿಲ್ಲ.

ದೆಹಲಿ ಮೆಟ್ರೋದಲ್ಲೂ ಯುವತಿಯರ ಹುಚ್ಚಾಟ

ದೆಹಲಿಯ ಮೆಟ್ರೋದಲ್ಲಿಯೂ ಇಬ್ಬರು ಯುವತಿಯರು ಹೋಳಿ ಆಚರಣೆ ಮಾಡುವ ನೆಪದಲ್ಲಿ ರೊಮ್ಯಾನ್ಸ್‌ ಮಾಡಿದ ವಿಡಿಯೊ ವೈರಲ್‌ ಆಗಿದೆ. ಚಲಿಸುವ ಮೆಟ್ರೋದಲ್ಲಿಯೇ ಪರಸ್ಪರ ಬಣ್ಣ ಹಚ್ಚುವ ಯುವತಿಯರು, ತಬ್ಬಿ ಮುದ್ದಾಡಿದ ವಿಡಿಯೊ ವೈರಲ್‌ ಆಗುತ್ತಲೇ ಜನ ಆಕ್ರೋಶ ವ್ಯಕ್ತಪಡಿಸಿದ್ದರು.

ಇಬ್ಬರು ಯುವತಿಯರು ದೆಹಲಿ ಮೆಟ್ರೋ ಹತ್ತಿದ್ದಾರೆ. ರೈಲು ಚಲಿಸುತ್ತಲೇ ಕೆಳಗೆ ಕುಳಿತ ಅವರು ಪರಸ್ಪರ ಬಣ್ಣ ಹಚ್ಚಿಕೊಂಡಿದ್ದಾರೆ. ಆಕೆಯ ಕೆನ್ನೆಗೆ ಈಕೆ, ಈಕೆಯ ಕೆನ್ನೆಗೆ ಆಕೆ ಬಣ್ಣ ಹಚ್ಚುವುದು, ಇಬ್ಬರೂ ಮಲಗಿ ರೊಮ್ಯಾನ್ಸ್‌ ಮಾಡುವುದು, ಮುದ್ದಾಡುವುದು, ಮುತ್ತು ಕೊಡುವುದು ಸೇರಿ ಬಹಿರಂಗವಾಗಿಯೇ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹುಚ್ಚಾಟವನ್ನು ಕಂಡ ಪ್ರಯಾಣಿಕರು, ಮನಸ್ಸಲ್ಲೇ ಹಿಡಿ ಶಾಪ ಹಾಕಿದ್ದಾರೆ. ಆದರೆ, ಪ್ರಯಾಣಿಕರು ಏನೆಂದುಕೊಳ್ಳುತ್ತಾರೋ, ಅವರಿಗೆ ತೊಂದರೆಯಾಗುತ್ತದೆಯೋ ಎಂಬುದರ ಪರಿವೇ ಇಲ್ಲದೆ ಇಬ್ಬರು ಯುವತಿಯರು ಹುಚ್ಚಾಟ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ನೀರಿನ ಸಮಸ್ಯೆಗೆ ಜನರೇ ಉತ್ತರ ಕಂಡುಕೊಳ್ಳಬೇಕು

ಜನ ಸ್ವಯಂಪ್ರೇರಿತರಾಗಿ ನೀರನ್ನು ಉಳಿಸಲು, ಹಿತಮಿತವಾಗಿ ಬಳಸಲು ಮುಂದಾಗುವುದೇ ನೀರಿನ ಕೊರತೆಗೆ ಸರಿಯಾದ ಪರಿಹಾರ. ವಾಹನ ತೊಳೆಯಲು ಕುಡಿಯುವ ನೀರನ್ನು ಬಳಸದಿರುವುದು, ಪಾತ್ರೆ ತೊಳೆದ ನೀರನ್ನು ಗಾರ್ಡನ್‌ಗೆ ಬಳಸುವುದು, ಮನೆ ಮತ್ತು ಕಚೇರಿಯಲ್ಲಿ ನೀರನ್ನು ದಕ್ಷವಾಗಿ ಬಳಸುವ ಸಲಕರಣೆಗಳ ಬಳಕೆ, ತ್ಯಾಜ್ಯ ನೀರಿನ ಮರುಬಳಕೆ ಹೀಗೆ ಹಲವು ಕ್ರಮಗಳ ಮೂಲಕ ಜನರೇ ಅಮೂಲ್ಯ ನೀರನ್ನು ಉಳಿಸಬೇಕಿದೆ.

VISTARANEWS.COM


on

Water Crisis
Koo

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ (Water Crisis) ಜೋರಾಗುತ್ತಿದೆ. ಇದೀಗ ಬೇಸಿಗೆಯ ಮೊದಮೊದಲ ತಿಂಗಳು ಎನ್ನಬಹುದು. ಬೇಸಿಗೆಯಲ್ಲಿ ಇನ್ನೂ ಎರಡು ತಿಂಗಳುಗಳು ಬಾಕಿ ಇವೆ, ಈಗಲೇ ಜನತೆ ಕುಡಿಯುವ ನೀರಿನ ಕೊರತೆಯಿಂದ ತತ್ತರಿಸುತ್ತಿದ್ದಾರೆ. ನಗರದಲ್ಲಿ ಕೆಲವೆಡೆ 6000 ಲೀ. ಟ್ಯಾಂಕರ್‌ನೀರನ್ನು 2500 ಕೊಟ್ಟು ಖರೀದಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಬೆಂಗಳೂರಿಗೆ ಕಾವೇರಿ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ಜಲಮಂಡಳಿ ಹೇಳುತ್ತಿದ್ದರೂ, ನೀರಿನ ಪೂರೈಕೆ ಸಾಕಷ್ಟು ಕಡಿಮೆಯಾಗಿದೆ ಎಂದು ನಗರವಾಸಿಗಳು ಆರೋಪಿಸುತ್ತಿದ್ದಾರೆ. ಇದರಿಂದಲೇ ಖಾಸಗಿ ಟ್ಯಾಂಕರ್‌ಗಳ ಮಾಫಿಯಾ ಶುರುವಾಗಿದೆ. ಬೆಂಗಳೂರಿನ ಆರ್‌.ಆರ್‌.ನಗರದಲ್ಲಿ 6000 ಲೀ. ಟ್ಯಾಂಕರ್‌ 2500 ರೂ., ಕೆ.ಆರ್‌.ಪುರದಲ್ಲಿ 1500 ರೂ., ನಾರಾಯಣಪುರದಲ್ಲಿ 1500 ರೂ., ಹಾಗೂ ವರ್ತೂರಿನಲ್ಲಿ 4000 ಲೀ.ಟ್ಯಾಂಕರ್ 800 ರೂ. ಇದೆ. ಟ್ಯಾಂಕರ್‌ಗಳ ನೋಂದಣಿಯನ್ನು ಜಲಮಂಡಳಿ ಕಡ್ಡಾಯ ಮಾಡಿದ್ದರೂ ಅರ್ಧದಷ್ಟೂ ನೋಂದಣಿಯಾಗಿಲ್ಲ. ಬೆಂಗಳೂರಿನ ಒಳಭಾಗಕ್ಕೇ ಹೆಚ್ಚಿನ ಕಾವೇರಿ ನೀರು ಬೇಕಾಗುವುದರಿಂದ ಹೊರಭಾಗಗಳಿಗೆ ಕಾವೇರಿ ನೀರು ಪೂರೈಸಲು ಸಾಧ್ಯವಿಲ್ಲ ಎಂದು ಜಲಮಂಡಳಿ ಹೇಳಿದೆ. ಕೆಆರ್‌ಎಸ್‍ನಲ್ಲಿ ಸಂಗ್ರಹವಾಗುವ ನೀರಿನಲ್ಲಿ ಬೆಂಗಳೂರು ನಗರ ಒಂದಕ್ಕೆ ಪ್ರತಿ ತಿಂಗಳು 1.6 ಟಿಎಂಸಿ ನೀರು ಬೇಕು. ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರಗಳಿಗೆ ಕಾವೇರಿ ನೀರೇ ಬೇಕು.

ನೀರಿನ ಪೋಲು ತಡೆಗಟ್ಟಲು ಜಲಮಂಡಳಿ ಸಾಕಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಸ್ವಿಮ್ಮಿಂಗ್‌ ಪೂಲ್‌ಗಳಿಗೆ ಕುಡಿಯುವ ನೀರಿನ ಬಳಕೆಗೆ ಕಡಿವಾಣ, ಬೇಕಾಬಿಟ್ಟಿ ಹೋಳಿ ಆಚರಣೆಗೆ ನಿರ್ಬಂಧ, ಐಷಾರಾಮಿ ರೆಸಾರ್ಟ್‌ಗಳಲ್ಲಿ ರೈನ್‌ ಡ್ಯಾನ್ಸ್‌ಗಳಿಗೆ ನಿಷೇಧ, ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತೆಗಾಗಿ ಬಳಸುವ ನಲ್ಲಿಗಳಲ್ಲಿ ಕಡ್ಡಾಯವಾಗಿ ಫ್ಲೋ ರಿಸ್ಟ್ರಿಕ್ಟರ್‌ ಅಳವಡಿಕೆ, ಬೃಹತ್‌ ಸಂಸ್ಥೆಗಳಿಗೆ ನೀರಿನ ಪೂರೈಕೆಯಲ್ಲಿ ಶೇ.20 ಕಡಿತ ಮುಂತಾದ ಕ್ರಮಗಳನ್ನು ಕೈಗೊಂಡಿದೆ. ವಾಹನಗಳ ಸ್ವಚ್ಛತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜನೆಗಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ ಕುಡಿಯುವ ನೀರು ಬಳಸಿದರೆ ಭಾರಿ ದಂಡ ವಿಧಿಸಲಾಗುತ್ತಿದೆ. ಈಗಾಗಲೇ ಹೀಗೆ 1 ಲಕ್ಷ ರೂಪಾಯಿಗೂ ಅಧಿಕ ದಂಡವನ್ನು ಜಲಮಂಡಳಿ ವಸೂಲಿ ಮಾಡಿದೆ. ನೀರಿನ ಸಮಸ್ಯೆ ಆಲಿಸಲು ಕಂಟ್ರೋಲ್ ರೂಮ್‌ಗಳ ಸಂಖ್ಯೆ ಹೆಚ್ಚಿಸುವ ಮೂಲಕ ದೂರು‌ಗಳು ಬಂದ ತಕ್ಷಣ ಸ್ಪಂದಿಸಿ, ನೀರು ಸರಬರಾಜು ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಭಾರತದ ನ್ಯಾಯಪ್ರಕ್ರಿಯೆಯಲ್ಲಿ ಅಮೆರಿಕದ ಹಸ್ತಕ್ಷೇಪ ಅಧಿಕ ಪ್ರಸಂಗತನ

ಇವೆಲ್ಲವೂ ಸರ್ಕಾರದ ಕಡೆಯಿಂದ ಆಗಿರುವ ಕ್ರಮಗಳು. ಆದರೆ ಇದು ಸಾಲದು ಜನ ಸ್ವಯಂಪ್ರೇರಿತರಾಗಿ ನೀರನ್ನು ಉಳಿಸಲು, ಹಿತಮಿತವಾಗಿ ಬಳಸಲು ಮುಂದಾಗುವುದೇ ನೀರಿನ ಕೊರತೆಗೆ ಸರಿಯಾದ ಪರಿಹಾರ. ವಾಹನ ತೊಳೆಯಲು ಕುಡಿಯುವ ನೀರನ್ನು ಬಳಸದಿರುವುದು, ಪಾತ್ರೆ ತೊಳೆದ ನೀರನ್ನು ಗಾರ್ಡನ್‌ಗೆ ಬಳಸುವುದು, ಮನೆ ಮತ್ತು ಕಚೇರಿಯಲ್ಲಿ ನೀರನ್ನು ದಕ್ಷವಾಗಿ ಬಳಸುವ ಸಲಕರಣೆಗಳ ಬಳಕೆ, ತ್ಯಾಜ್ಯ ನೀರಿನ ಮರುಬಳಕೆ, ಪಾತ್ರೆಗಳನ್ನು ತೊಳೆಯುವಾಗ ನಲ್ಲಿ ನೀರು ಆಫ್‌ ಮಾಡುವುದು, ಕಡಿಮೆ ಅವಧಿಯಲ್ಲಿ ಸ್ನಾನ ಮುಗಿಸುವುದು, ಬಳಕೆ ಮಾಡದಿದ್ದಾಗ ನಲ್ಲಿ ಆಫ್‌ ಮಾಡುವುದು, ಕಡಿಮೆ ಫ್ಲಶ್ ಮಾಡುವ ಟಾಯ್ಲೆಟ್‌ಗಳನ್ನು ಬಳಸುವುದು, ಫುಲ್‌ ಲೋಡ್‌ಗಳಿಗೆ ಮಾತ್ರ ಅಟೊಮ್ಯಾಟಿಕ್ ವಾಶಿಂಗ್ ಮಶಿನ್ ಬಳಸುವುದು, ಕೈತೋಟದಲ್ಲಿ ಕಡಿಮೆ ನೀರನ್ನು ಬಳಸುವ ಸಸ್ಯಗಳನ್ನು ಬೆಳೆಸುವುದು, ಮಳೆಕೊಯ್ಲು ವಿಧಾನಗಳನ್ನು ಮನೆಯಲ್ಲಿ ಅಳವಡಿಸಿಕೊಳ್ಳುವುದು- ಇನ್ನೂ ಮುಂತಾದ ಜಾಣ್ಮೆಯ ಕ್ರಮಗಳ ಮೂಲಕ ನೀರನ್ನು ಉಳಿಸಿಕೊಳ್ಳಬೇಕು.

ಇಂದು ಪ್ರತಿಯೊಬ್ಬರೂ ನೀರಿನ ಮಿತ ಬಳಕೆಯ ಬಗ್ಗೆ ಕೆಲಸ ಮಾಡಲೇಬೇಕಾದ ಕಾಲ ಬಂದಿದೆ. ಕಾಲ ಮಿಂಚಿ ಹೋದ ಮೇಲೆ ಚಿಂತಿಸಿ ಫಲವಿಲ್ಲ. ಈಗಲೇ ಎಚ್ಚೆತ್ತುಕೊಂಡರೆ ಬೆಂಗಳೂರಿನ ಭವಿಷ್ಯದ ದಿನಗಳು ಸುಖಕರವಾದಾವು. ಇಲ್ಲವಾದರೆ ನಮ್ಮ ಮುಂದಿನ ತಲೆಮಾರು ನೀರಿಲ್ಲದೆ ನರಳುವುದನ್ನು ಕಾಣುವ ದುರ್ಭರ ಸ್ಥಿತಿ ನಮ್ಮದಾಗಲಿದೆ.

Continue Reading

ಪ್ರಮುಖ ಸುದ್ದಿ

IPL 2024 : ರಾಯಲ್ಸ್​ಗೆ 2ನೇ ವಿಜಯ , ಡೆಲ್ಲಿಗೆ ಸತತ ಎರಡನೇ ಸೋಲು

IPL 2024 : ರಿಯಾನ್ ಪರಾಗ್​ ಬಾರಿಸಿದ ಅಮೋಘ ಅರ್ಧ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ತನ್ನದಾಗಿಸಿಕೊಂಡಿತು.

VISTARANEWS.COM


on

IPL 2024- Riyan Parag
Koo

ಜೈಪುರ: ರಿಯಾನ್ ಪರಾಗ್​ (84 ರನ್​, 45 ಎಸೆತ, 7 ಫೋರ್, 6 ಸಿಕ್ಸರ್​) ಅವರ ಸ್ಫೋಟಕ ಅರ್ಧ ಶತಕ ಹಾಗೂ ಬೌಲರ್​ಗಳ ಸಂಘಟಿತ ಬೌಲಿಂಗ್ ದಾಳಿಯ ಮೂಲಕ ಮಿಂಚಿದ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡ ಡೆಲ್ಲಿ ಕ್ಯಾಪಿಟಲ್ಸ್ (Delhi Capital) ವಿರುದ್ಧ 12 ರನ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಪ್ರಸಕ್ತ ಐಪಿಎಲ್​ನಲ್ಲಿ (IPL 2024) ಸತತವಾಗಿ ಎರಡನೇ ಜಯ ತನ್ನದಾಗಿಸಿಕೊಂಡಿದೆ. ಮೊದಲ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧ 20 ರನ್​ಗಳ ಗೆಲುವು ಸಾಧಿಸಿತ್ತು ಸಂಜು ಸ್ಯಾಮ್ಸನ್​ ಪಡೆ. ಇದೇ ವೇಳೆ ರಿಷಭ್ ಪಂತ್ ನೇತೃತ್ವದ ಡೆಲ್ಲಿ ತಂಡ ಮತ್ತೊಂದು ಸೋಲಿಗೆ ಒಳಗಾಗಿದೆ. ತನ್ನ ಮೊದಲ ಪಂದ್ಯದಲ್ಲಿ ಅದು ಪಂಜಾಬ್ ಕಿಂಗ್ಸ್​ಗೆ ಮಣಿದಿತ್ತು.

ಇಲ್ಲಿನ ಸವಾಯ್​ ಮಾನ್​ಸಿಂಗ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಟಾಸ್​ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 185 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಪಾಲಿನ ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 175 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಹಂತದಲ್ಲಿ ಡೆಲ್ಲಿ ತಂಡದ ಟ್ರಿಸ್ಟಾನ್​ ಸ್ಟಬ್ಸ್ 23 ಎಸೆತಕ್ಕೆ 44 ರನ್ ಬಾರಿಸಿದರೂ ಜಯ ತಂದುಕೊಡಲು ಸಾಧ್ಯವಾಗಲಿಲ್ಲ.

ದೊಡ್ಡ ಗುರಿ ಬೆನ್ನಟ್ಟಲು ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಉತ್ತಮ ಆರಂಭವನ್ನೇ ಪಡೆಯಿತು. ಡೇವಿಡ್​ ವಾರ್ನರ್ ಅಬ್ಬರದ ಬ್ಯಾಟಿಂಗ್ ಮೂಲಕ 34 ಎಸೆತಗಳಲ್ಲಿ 49 ರನ್ ಬಾರಿಸಿದರು. ಮಿಚೆ್ಲ್ ಮಾರ್ಷ್​ ಕೂಡ 12 ಎಸೆತಗಳಲ್ಲಿ 23 ರನ್​ ಬಾರಿಸಿ ಮಿಂಚಿದರು. ಈ ಜೋಡಿ ಮೊದಲ ವಿಕೆಟ್​ಗೆ 30 ರನ್ ಬಾರಿಸಿತು. ಆದರೆ, ಆ ಬಳಿಕ ಆಡಲು ಬಂದ ರಿಕಿ ಭುಯಿ ಶೂನ್ಯಕ್ಕೆ ಔಟಾದರು.

ಬಳಿಕ ನಾಯಕ ರಿಷಭ್ ಪಂತ್​ 28 ರನ್​ಗಳ ಕೊಡುಗೆ ಕೊಟ್ಟರು. ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್​ 44 ಹಾಗೂ ಅಕ್ಷರ್ ಪಟೇಲ್​ 15 ರನ್ ಬಾರಿಸಿದರು.

ರಾಜಸ್ಥಾನ್​ ಕೆಟ್ಟ ಆರಂಭ

ಅದಕ್ಕಿಂತ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್​ ತಂಡದ ಆರಂಭ ಚೆನ್ನಾಗಿರಲಿಲ್ಲ. ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್​ 5 ರನ್​ಗೆ ಔಟಾದರೆ ಮತ್ತೊಬ್ಬ ಆರಂಭಿಕ ಆಟಗಾರ ಜೋಸ್ ಬಟ್ಲರ್​ 11 ರನ್​ಗೆ ವಿಕೆಟ್​ ಒಪ್ಪಿಸಿದರು. ನಾಯಕ ಸಂಜ ಸ್ಯಾಮ್ಸನ್ ಕೊಡುಗೆಯೂ 15 ರನ್. 36 ರನ್​ಗೆ 3 ವಿಕೆಟ್​ ಕಳೆದುಕೊಂಡ ರಾಜಸ್ಥಾನ್​ ಪೇಚಿಗೆ ಸಿಲುಕಿತು.

ರಿಯಾನ್​ ಅಬ್ಬರದ ಆಟ

ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ರಿಯಾನ್ ಪರಾಗ್​ ಅಮೋಘ ಇನಿಂಗ್ಸ್ ಆಡಿದರು. ಆರಂಭದಲ್ಲಿ ನಿಧಾನಗತಿಯಲ್ಲಿ ಆಡಿದ ಅವರು ಕೊನೇ ಹಂತದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ತಂಡದ ವಿಕೆಟ್​ಗಳು ಸತತವಾಗಿ ಬೀಳುತ್ತಿದ್ದ ಕಾರಣ ಅತಿ ವೇಗದಲ್ಲಿ ರನ್ ಗಳಿಸಲು ಆರಂಭದಲ್ಲಿ ತಿಣುಕಾಡಿದ ಅವರು ಕೊಣೇ ಹಂತದಲ್ಲಿ ಸ್ಪರ್ಧಾತ್ಮಕ ಮೊತ್ತ ಪೇರಿಸಲು ನೆರವಾದರು. ಅವರು 45 ಎಸೆತದಲ್ಲಿ 7 ಫೋರ್​ ಹಾಗೂ 6 ಸಿಕ್ಸರ್​ ಸಮೇತ 84 ರನ್ ಬಾರಿಸಿದರು.

ಇದನ್ನೂ ಓದಿ : IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

ರವಿಚಂದ್ರನ್ ಅಶ್ವಿನ್​ ಸ್ಫೋಟಕ 29 ರನ್ ಬಾರಿಸಿದರೆ ದ್ರುವ್ ಜುರೆಲ್ 20 ರನ್ ಕೊಡುಗೆ ಕೊಟ್ಟರು. ಶಿಮ್ರೋನ್ ಹೆಟ್ಮಾಯರ್ ಅಂತಿಮವಾಗಿ ಅಜೇಯ 14 ರನ್ ಬಾರಿಸಿದರು.

Continue Reading
Advertisement
kea
ಕರ್ನಾಟಕ4 hours ago

KEA: ಕೆಸೆಟ್-‌2023ರ ಪರಿಷ್ಕೃತ ಕೀ ಉತ್ತರ ಪ್ರಕಟ; ಹೀಗೆ ಪರಿಶೀಲಿಸಿ

Viral News: Holi at delhi metro
ದೇಶ4 hours ago

Viral News : ವೈರಲ್​ ವಿಡಿಯೊಗಾಗಿ ಅಸಭ್ಯವಾಗಿ ವರ್ತಿಸಿದ ಡೆಲ್ಲಿ ಯುವತಿಯರು ಅರೆಸ್ಟ್​!

Water Crisis
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ನೀರಿನ ಸಮಸ್ಯೆಗೆ ಜನರೇ ಉತ್ತರ ಕಂಡುಕೊಳ್ಳಬೇಕು

IPL 2024- Riyan Parag
ಪ್ರಮುಖ ಸುದ್ದಿ5 hours ago

IPL 2024 : ರಾಯಲ್ಸ್​ಗೆ 2ನೇ ವಿಜಯ , ಡೆಲ್ಲಿಗೆ ಸತತ ಎರಡನೇ ಸೋಲು

Dolly Chaiwala
ವೈರಲ್ ನ್ಯೂಸ್5 hours ago

Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಆಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು

Mukthar Ansari
ಪ್ರಮುಖ ಸುದ್ದಿ6 hours ago

Mukhtar Ansari : ಗ್ಯಾಂಗ್​ಸ್ಟರ್​ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

Former DCM Govinda Karajola pressmeet
ಬೆಂಗಳೂರು6 hours ago

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

crime news
ಕ್ರೈಂ6 hours ago

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Women Slapped
ಪ್ರಮುಖ ಸುದ್ದಿ6 hours ago

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Tata Ace vehicle overturned Two persons dead five seriously injured
ಕರ್ನಾಟಕ6 hours ago

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202415 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202416 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ23 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌