Business plan : ಬೆಸ್ಟ್ ಬಿಸಿನೆಸ್‌ ಪ್ಲಾನ್‌ ಸಿದ್ಧಪಡಿಸುವುದು ಹೇಗೆ? - Vistara News

ಮನಿ-ಗೈಡ್

Business plan : ಬೆಸ್ಟ್ ಬಿಸಿನೆಸ್‌ ಪ್ಲಾನ್‌ ಸಿದ್ಧಪಡಿಸುವುದು ಹೇಗೆ?

ಉದ್ಯಮಿಯಾಗುವುದು ಎಂದರೆ ಕೇವಲ ಗ್ಲಾಮರ್‌ ಅಲ್ಲ, ಅದಕ್ಕೆ ಸಾಕಷ್ಟು ‌( Business plan ) ತಯಾರಿ, ತ್ಯಾಗ ಮತ್ತು ಬಿಸಿನೆಸ್‌ ಪ್ಲಾನ್‌ ಬೇಕು. ಇಲ್ಲಿದೆ ಡಿಟೇಲ್ಸ್.

VISTARANEWS.COM


on

business plan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉದ್ಯಮಿ ಎಂದರೆ ಕೈ ತುಂಬಾ ದುಡ್ಡು, ಬ್ಯಾಂಕ್‌ ಬ್ಯಾಲೆನ್ಸ್‌, ಐಷಾರಾಮಿ ಕಾರುಗಳು, ಬಂಗಲೆಗಳು, ಕಂಪನಿ, ಕೆಲಸಗಾರಿಗೆ ಆದೇಶಿಸುವುದು, ಪಾರ್ಟಿ, ( Business plan ) ಬಿಸಿನೆಸ್‌ ಮೀಟಿಂಗ್‌ಗಳಲ್ಲಿ ಸೂಟು-ಬೂಟು ಹಾಕ್ಕೊಂಡು ಮಿಂಚುವುದು ಇತ್ಯಾದಿ ಗ್ಲಾಮರ್‌ ಅಂಶಗಳು ಗಮನ ಸೆಳೆಯುತ್ತವೆ. ಆದರೆ ಬಿಸಿನೆಸ್‌ ಒಂದನ್ನು ನಡೆಸುವುದು ಸಂಕೀರ್ಣ ಪ್ರಕ್ರಿಯೆ. ಇದು ಹಲವು ಸವಾಲುಗಳನ್ನೂ ಒಳಗೊಂಡಿರುತ್ತದೆ.

ಒಂದು ಕಂಪನಿಯನ್ನು ಕಟ್ಟಲು ಬಯಸುವವರು ಹಲವು ತ್ಯಾಗಗಳನ್ನು ಮಾಡಬೇಕಾಗುತ್ತದೆ. ಕುಟುಂಬದ ಸದಸ್ಯರೊಡನೆ ಕಾಲ ಕಳೆಯಲು ಅವರಿಗೆ ಸಮಯ ಸಿಗದು. ತಮಗೆ ಬೇಕಾದ ಹವ್ಯಾಸವನ್ನೂ ಕಾರ್ಯಗತಗೊಳಿಸಲು ಬಿಡುವು ದೊರೆಯದು. ತೀವ್ರ ಒತ್ತಡವನ್ನು ಎದುರಿಸಬೇಕಾಗುತ್ತದೆ. ಏಕೆಂದರೆ ಹಿನ್ನಡೆ ಮತ್ತು ವೈಫಲ್ಯಗಳೂ ಅಪ್ಪಳಿಸಬಹುದು. ಆಗ ಮಾನಸಿಕ ಸ್ಥಿಮಿತ ಕಳೆದುಕೊಳ್ಳದಂತೆ ತನ್ನನ್ನು ತಾನೆ ನೋಡಿಕೊಳ್ಳಬೇಕಾಗುತ್ತದೆ.

ನೀವು ಏನೋ ಅಂದುಕೊಂಡು ಒಂದು ಬಿಸಿನೆಸ್‌ ಅನ್ನು ಹುಮ್ಮಸ್ಸಿನಿಂದ ಶುರು ಮಾಡಬಹುದು. ಆದರೆ ಅದು ನಿಮಗೆ ಹೊಂದಿಕೊಳ್ಳುವ ಬಿಸಿನೆಸ್‌ ಆಗದೆಯೂ ಇರಬಹುದು. ಆಗ ಉಂಟಾಗುವ ಒತ್ತಡವನ್ನು ಎದುರಿಸಲಾಗದೆ ಹಲವಾರು ಮಂದಿ ಅರ್ಧದಲ್ಲಿಯೇ ಉದ್ಯಮವನ್ನು ಕೈಬಿಡುತ್ತಾರೆ. ಭಾರಿ ನಷ್ಟಗಳಿಗೆ ಕಂಗಾಲಾಗುತ್ತಾರೆ. ಹತಾಶರಾಗುತ್ತಾರೆ. ಹಾಗಂತ ಉದ್ಯಮಿಯಾಗುವುದು ಒಳ್ಳೆಯದು. ಉದ್ಯಮ ಶುರು ಮಾಡಲು ಒಂದು ಬಿಸಿನೆಸ್‌ ಪ್ಲಾನ್‌ ಅಗತ್ಯ.

ಬಿಸಿನೆಸ್‌ ಪ್ಲಾನ್‌ ಮಾಡುವುದು ಹೇಗೆ?

ನೀವು ನಿಮ್ಮ ಐಡಿಯಾವನ್ನು ಉದ್ಯಮವನ್ನಾಗಿಸಲು ಒಂದು ಬಿಸಿನೆಸ್‌ ಪ್ಲಾನ್‌ ಮಾಡಬೇಕಾಗುತ್ತದೆ. ಏಕೆಂದರೆ ಇದರಿಂದ ನಿಮ್ಮ ಉದ್ದೇಶಗಳು ಸ್ಪಷ್ಟವಾಗುತ್ತದೆ. ಕಾರ್ಯತಂತ್ರ ಗಟ್ಟಿಯಾಗುತ್ತದೆ. ಸಂಪನ್ಮೂಲಗಳು, ಮಾರುಕಟ್ಟೆಯಲ್ಲಿರುವ ಕಾಂಪಿಟೇಶನ್‌, ಹಣಕಾಸು ವ್ಯವಸ್ಥೆ ಮತ್ತು ಸಂಭವನೀಯ ಅಡಚಣೆಗಳನ್ನು ಗುರುತಿಸಲು ಬಿಸಿನೆಸ್‌ ಪ್ಲಾನ್‌ ಬೇಕು. ಅಗತ್ಯವಿರುವ ಫಂಡ್‌ ರೈಸ್‌ ಮಾಡಲು ಕೂಡ ಒಂದು ಒಳ್ಳೆಯ ಬಿಸಿನೆಸ್‌ ಪ್ಲಾನ್‌ ಮುಖ್ಯ.

ನೀವು ಬಿಸಿನೆಸ್‌ ಪ್ಲಾನ್‌ ಬರೆಯುವಾಗ, ಅದು ನಿಮ್ಮದೇ ಐಡಿಯಾ ಆಗಿರಲಿ. ಪ್ರಾಯೋಗಿಕವಾಗಿ ಜಾರಿಗೊಳಿಸಲು ಸಾಧ್ಯವಾಗುವಂತಿರಲಿ. ಅದು ಹೂಡಿಕೆದಾರರನ್ನು ಆಕರ್ಷಿಸುವಂತಿರಬೇಕು. ಸಂಕ್ಷಿಪ್ತ ಮತ್ತು ಸರಳವಾದ ಬಿಸಿನೆಸ್‌ ಪ್ಲಾನ್‌ ಹೂಡಿಕೆದಾರರನ್ನು ಆಕರ್ಷಿಸುತ್ತದೆ. ಅತ್ಯಂತ ಸಂಕೀರ್ಣ ಮತ್ತು ಗಹನವಾದ ಪ್ರಶ್ನೆಗಳಿಗೂ ಉತ್ತರ ನಿಮ್ಮಲ್ಲಿರಲಿ. ಬಿಸಿನೆಸ್‌ ಪ್ಲಾನ್‌ನಲ್ಲಿ ಮಿಶನ್‌ ಸ್ಟೇಟ್‌ಮೆಂಟ್‌ ಇರಬೇಕು. ಇದು ಸರಳ, ಸಂಕ್ಷಿಪ್ತ ಮತ್ತು ಮಹತ್ತ್ವಾಕಾಂಕ್ಷೆಯದ್ದಾಗಿರಬೇಕು. ಉದಾಹರಣೆಗೆ ಡಯಾಬಿಟಿಕ್‌ ಸ್ನೇಹಿ ಐಸ್‌ ಕ್ರೀಮ್‌, ಸಿರಿ ಧಾನ್ಯಗಳ ಐಸ್‌ ಕ್ರೀಂ, ವೀಳ್ಯದೆಲೆಯ ಚಹಾ ಇತ್ಯಾದಿಯಾಗಿ ಗಮನ ಸೆಳೆಯುವಂತಿರಲಿ.

ಇದನ್ನೂ ಓದಿ: Digital Payment: ಗಮನಿಸಿ; ಡಿಸೆಂಬರ್‌ 31ರಿಂದ ಈ ಯುಪಿಐ ಖಾತೆಗಳು ಬಂದ್!

ಬಿಸಿನೆಸ್‌ ಪ್ಲಾನ್‌ನಲ್ಲಿ ಎಕ್ಸಿಕ್ಯುಟಿವ್‌ ಸಮ್ಮರಿ ಇರಲಿ. ಈ ಸಾರಾಂಶದಲ್ಲಿ ನಿಮ್ಮ ಬಿಸಿನೆಸ್‌ ಬಗ್ಗೆ ಕೆಲವು ವಾಕ್ಯಗಳಲ್ಲಿ ಸಂಕ್ಷಿಪ್ತವಾಗಿ ಬರೆಯಿರಿ. ಸಮ್ಮರಿಯನ್ನು ಹೂಡಿಕೆದಾರರು ಮೊದಲು ಓದುತ್ತಾರೆ. ಅದು ಇಷ್ಟವಾದರೆ ಮುಂದುವರಿಯುತ್ತಾರೆ. ಅದುವೇ ಇಷ್ಟವಾಗದಿದ್ದರೆ ಮುಂದೆ ಓದುವುದು ಕಷ್ಟ. ಅಥವಾ ಕೆಲಸದ ಒತ್ತಡದಲ್ಲಿ ಸಮ್ಮರಿ ಬಿಟ್ಟು ಬೇರೆ ಓದಲು ಅವರಿಗೆ ಸಾಧ್ಯವಾಗದೆಯೂ ಇರಬಹುದು. ಆದ್ದರಿಂದ ಸಮ್ಮರಿಯನ್ನು ಒಂದು ಪುಟದೊಳಗೆ ಮುಕ್ತಾಯಗೊಳಿಸಿ.

ಪ್ರಾಡಕ್ಟ್/‌ ಸರ್ವೀಸ್‌ ವಿವರ: ನಿಮ್ಮ ಉತ್ಪನ್ನ ಅಥವಾ ಸೇವೆಯ ಬಗ್ಗೆ ಬರೆಯಿರಿ. ಮಾರುಕಟ್ಟೆ ಮತ್ತು ಪೈಪೋಟಿಯ ವಿಶ್ಲೇಷಣೆ: ನಿಮ್ಮ ಉತ್ಪನ್ನ ಮತ್ತು ಸೇವೆಗಳಿಗೆ ಹೇಗೆ ಮಾರುಕಟ್ಟೆ ಕಂಡುಕೊಳ್ಳುತ್ತೀರಿ. ನಿಮಗೆ ಪೈಪೋಟಿ ನೀಡಬ್ಲಲವರು ಯಾರು? ನಿಮ್ಮ ಡಿಸ್ಟ್ರಿಬ್ಯೂಷನ್‌ ನೆಟ್‌ ವರ್ಕ್‌ ಏನು? ಕಂಪನಿಯ ಸ್ವರೂಪ ಹೇಗಿರುತ್ತದೆ? ಕಚ್ಚಾ ಸಾಮಾಗ್ರಿಯನ್ನು ಎಲ್ಲಿಂದ ಹೊಂದಿಸುತ್ತೀರಿ. ಇತ್ಯಾದಿ ವಿವರಗಳು ಇರಲಿ.

ಹಣಕಾಸು ಮತ್ತು ಇತರ ಸಂಪನ್ಮೂಲ: ಉದ್ದಿಮೆ ಸ್ಥಾಪನೆಗೆ ಬೇಕಾದ ಸಂಪನ್ಮೂಲ ಮತ್ತು ಹಣಕಾಸು ವ್ಯವಸ್ಥೆಯನ್ನು ಬಿಸಿನೆಸ್‌ ಪ್ಲಾನ್‌ನಲ್ಲಿ ವಿವರಿಸಿ. ಆದಾಯ, ಮಾರುಕಟ್ಟೆ ಪಾಲು, ಲಾಭದ ಬಗ್ಗೆಯೂ ತಿಳಿಸಿರಿ. ನೀವು ಭಾರಿ ಲಾಭವನ್ನು ನಿರೀಕ್ಷಿಸುತ್ತಿದ್ದೀರಾ? ತ್ವರಿತ ಬೆಳವಣಿಗೆ ಅಥವಾ ಎರಡರ ಮಿಶ್ರಣವನ್ನು ಬಯಸುತ್ತೀರಾ? ಪ್ರಾಯೋಗಿಕವಾಗಿ ವಿವರಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಉಮಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಬಹುದು

Money Guide: ನೌಕರರ ಭವಿಷ್ಯ ನಿಧಿ ಉದ್ಯೋಗಿಗಳ ಪಾಲಿಗೆ ಅತ್ಯುತ್ತಮ ನಿವೃತ್ತಿ ಉಳಿತಾಯ ಆಯ್ಕೆ ಎನಿಸಿಕೊಂಡಿದೆ. ಉದ್ಯೋಗಿಗಳ ಪಾಲಿಗೆ ಅತ್ಯುತ್ತಮ ನಿವೃತ್ತಿ ಉಳಿತಾಯ ಆಯ್ಕೆ ಎನಿಸಿಕೊಂಡಿದೆ. ಈ ಯೋಜನೆಯಲ್ಲಿ ಉದ್ಯೋಗಿಗಳು ಮತ್ತು ಉದ್ಯೋಗದಾತರಿಂದ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ನೌಕರರ ಉಳಿತಾಯ ಮನೋಭಾವವನ್ನು ಉತ್ತೇಜಿಸಲಾಗುತ್ತದೆ. ಪ್ರತಿ ತಿಂಗಳು ತಮ್ಮ ಮೂಲ ವೇತನದ ಶೇ. 12ರಷ್ಟು ಕೊಡುಗೆ ನೀಡುವ ಉದ್ಯೋಗಿಗಳಿಗೆ ಈ ಯೋಜನೆಯು ಶೇ. 8.15 ಬಡ್ಡಿದರವನ್ನು ನೀಡುತ್ತದೆ. ಉದ್ಯೋಗಿಗಳು ನಿವೃತ್ತರಾದ ನಂತರ ತಮ್ಮ ಪಿಎಫ್‌ ಖಾತೆಯಲ್ಲಿ ಸಂಗ್ರಹವಾದ ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು. ಅದಕ್ಕಾಗಿ ನೀವು ಉಮಾಂಗ್ ಆ್ಯಪ್‌ ಬಳಸಬಹುದು. ಉಮಾಂಗ್ ಆ್ಯಪ್‌ ಬಳಕೆಯ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಪಿಎಫ್ (PF) ಎಂದೂ ಕರೆಯಲ್ಪಡುವ ನೌಕರರ ಭವಿಷ್ಯ ನಿಧಿ (Employees Provident Fund-EPFಉದ್ಯೋಗಿಗಳ ಪಾಲಿಗೆ ಅತ್ಯುತ್ತಮ ನಿವೃತ್ತಿ ಉಳಿತಾಯ ಆಯ್ಕೆ ಎನಿಸಿಕೊಂಡಿದೆ. ಈ ಯೋಜನೆಯಲ್ಲಿ ಉದ್ಯೋಗಿಗಳು ಮತ್ತು ಉದ್ಯೋಗದಾತರಿಂದ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ನೌಕರರ ಉಳಿತಾಯ ಮನೋಭಾವವನ್ನು ಉತ್ತೇಜಿಸಲಾಗುತ್ತದೆ. ಪ್ರತಿ ತಿಂಗಳು ತಮ್ಮ ಮೂಲ ವೇತನದ ಶೇ. 12ರಷ್ಟು ಕೊಡುಗೆ ನೀಡುವ ಉದ್ಯೋಗಿಗಳಿಗೆ ಈ ಯೋಜನೆಯು ಶೇ. 8.15 ಬಡ್ಡಿದರವನ್ನು ನೀಡುತ್ತದೆ. ಉದ್ಯೋಗಿಗಳು ನಿವೃತ್ತರಾದ ನಂತರ ತಮ್ಮ ಪಿಎಫ್‌ ಖಾತೆಯಲ್ಲಿ ಸಂಗ್ರಹವಾದ ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು. ಅದಾಗ್ಯೂ ಅನಾರೋಗ್ಯದಂತಹ ತುರ್ತು ಸಂದರ್ಭಗಳಲ್ಲಿ ಪಿಎಫ್ ಅಕೌಂಟ್‌ನಿಂದ ಒಂದಷ್ಟು ದುಡ್ಡು ಹಿಂಪಡೆಯಬಹುದು. ಹೀಗ ಹಣ ಹಿಂಪಡೆಯುವುದು ಈಗ ಸುಲಭ. ಕೂತಲ್ಲಿಯೇ, ಮೊಬೈಲ್‌ ಮೂಲಕವೇ ಅಪ್ಲೈ ಮಾಡಬಹುದು. ಆ ಕುರಿತಾದ ವಿವರ ಇಲ್ಲಿದೆ (Money Guide).

ಇ-ನಾಮಿನೇಷನ್‌ ಮಾಡಿಕೊಂಡಿರುವ ಪಿಎಫ್‌ ಸದಸ್ಯರು ತಮ್ಮ ಖಾತೆಯಿಂದ ಒಂದಷ್ಟು ಮೊತ್ತ, ಅಡ್ವಾನ್ಸ್‌ ಮತ್ತು ಪೆನ್ಶನ್‌ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಇಪಿಎಫ್‌ಒ ವೆಬ್‌ಸೈಟ್‌ ಅಥವಾ ಉಮಾಂಗ್ ಆ್ಯಪ್‌ ಬಳಸಬಹುದು. ಅದರಲ್ಲಿಯೂ ಉಮಂಗ್ ಆ್ಯಪ್‌ ಅನ್ನು ಹೆಚ್ಚು ಅನುಕೂಲ ಎಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಇದರ ಬಳಕೆಗೆ ತಜ್ಞರು ಶಿಫಾರಸ್ಸು ಮಾಡುತ್ತಾರೆ. ಹಣ ವಿತ್‌ಡ್ರಾ ಮಾತ್ರವಲ್ಲ ಉಮಾಂಗ್ ಆ್ಯಪ್‌ ಮೂಲಕ ಬ್ಯಾಲೆನ್ಸ್‌ ಕೂಡ ಚೆಕ್‌ ಮಾಡಬಹುದು ಎನ್ನುವುದು ವಿಶೇಷ.

ಉಮಾಂಗ್ ಆ್ಯಪ್‌ ಬಳಕೆಯ ವಿಧಾನ

  • ಗೂಗಲ್‌ ಪ್ಲೇ ಸ್ಟೋರ್‌ ಅಥವಾ ಆ್ಯಪಲ್‌ ಆ್ಯಪ್‌ ಸ್ಟೋರ್‌ನಿಂದ ಉಮಂಗ್ ಆ್ಯಪ್‌ ಡೌನ್‌ಲೋಡ್‌ ಮಾಡಿ.
  • ಆ್ಯಪ್‌ ಓಪನ್‌ ಮಾಡಿ ಆಧಾರ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಮೂಲಕ ಲಾಗಿನ್‌ ಆಗಿ.
  • ಲಾಗಿನ್‌ ಆದ ಬಳಿಕ ಸರ್ವಿಸ್‌ ಲಿಸ್ಟ್‌ನಲ್ಲಿನ EPFO ಆಯ್ಕೆ ಸೆಲೆಕ್ಟ್‌ ಮಾಡಿ.
  • ಈಗ ಪಿಎಫ್‌ ಬ್ಯಾಲನ್ಸ್‌, ನಾಮಿನೇಷನ್‌ ಅಥವಾ ಕೆವೈಸಿ ಅಪ್‌ಡೇಟ್‌ ಆಯ್ಕೆ ಕಾಣಿಸಿಕೊಳ್ಳಲಿದ್ದು, ನಿಮಗೆ ಅಗತ್ಯವಿರುವುದನ್ನು ಸೆಲೆಕ್ಟ್‌ ಮಾಡಿ.
  • ಬಳಿಕ ಸ್ಕ್ರೀನ್‌ನಲ್ಲಿ ಕಾಣಿಸುವ ಸ್ಟೆಪ್‌ ಫಾಲೋ ಮಾಡಿ.

ಹಣ ವಿತ್‌ಡ್ರಾ ಮಾಡುವ ವಿಧಾನ

  • ಉಮಂಗ್ ಆ್ಯಪ್‌ ಓಪನ್‌ ಮಾಡಿ ಆಧಾರ್‌ ನಂಬರ್‌, ಪಾಸ್‌ವರ್ಡ್‌ ನಮೂದಿಸಿ ಲಾಗಿನ್‌ ಆಗಿ.
  • ಸರ್ವಿಸ್‌ ಲಿಸ್ಟ್‌ನಲ್ಲಿನ EPFO ಆಯ್ಕೆ ಸೆಲೆಕ್ಟ್‌ ಮಾಡಿ.
  • Raise Claim ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ಈಗ UAN ನಂಬರ್‌ ನಮೂದಿಸಿ. ಅದಾದ ಬಳಿಕ ನಿಮ್ಮ ಮೊಬೈಲ್‌ ನಂಬರ್‌ಗೆ ಬರುವ ಒಟಿಪಿಯನ್ನು ನಮೂದಿಸಿ.
  • ಯಾವ ರೀತಿಯ ವಿತ್‌ಡ್ರಾ ಅಗತ್ಯ ಎನ್ನುವುದನ್ನು ಆಯ್ಕೆ ಮಾಡಿಕೊಳ್ಳಿ
  • ಅಗತ್ಯ ಮಾಹಿತಿಗಳನ್ನು ತುಂಬಿ.

ಉಮಾಂಗ್ ಆ್ಯಪ್‌ ಮೂಲಕ ನೀವು ಪಡೆಯಬಹುದಾದ ಇತರ ಸೇವೆಗಳು

  • ಪಿಎಫ್‌ ಬ್ಯಾಲನ್ಸ್‌ ಪರಿಶೀಲನೆ
  • ಕೆವೈಸಿ ಮಾಹಿತಿಯ ಅಪ್‌ಡೇಟ್‌
  • ಪಾಸ್‌ಬುಕ್‌ ಪರಿಶೀಲನೆ
  • ಜೀವನ್‌ ಪ್ರಮಾಣ್‌ ಸರ್ಟಿಫಿಕೆಟ್‌ ಪಡೆಯಲು
  • ಪೆನ್ಶನ್‌ ಪೇಮೆಂಟ್‌ ಆರ್ಡರ್‌ (PPO) ಡೌನ್‌ಲೋಡ್‌ ಮಾಡಲು

ಇಪಿಎಫ್‌ ಖಾತೆಯ ವೈಶಿಷ್ಟ್ಯ

  • ಉದ್ಯೋಗಿಗಳ ಕೊಡುಗೆ ಸಾಮಾನ್ಯವಾಗಿ ಮೂಲ ವೇತನದ ಶೇ. 12ರಷ್ಟಿರುತ್ತದೆ.
  • ಉದ್ಯೋಗದಾತರ ಕೊಡುಗೆ ನಿಮ್ಮ ಮೂಲ ವೇತನ ಮತ್ತು ತುಟ್ಟಿಭತ್ಯೆಯ ಶೇ. 12ಕ್ಕೆ ಸಮನಾಗಿರುತ್ತದೆ. ಉದ್ಯೋಗದಾತರ ಕೊಡುಗೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ: ಅವೆಂದರೆ- ಇಪಿಎಫ್ ಮತ್ತು ನೌಕರರ ಪಿಂಚಣಿ ಯೋಜನೆ(ಇಪಿಎಸ್).
  • ಹೀಗೆ ನಿಮ್ಮ ಮತ್ತು ಉದ್ಯೋಗದಾತರ ಕೊಡುಗೆಗಳೊಂದಿಗೆ ಪ್ರತಿ ತಿಂಗಳು ನಿವೃತ್ತಿಗಾಗಿ ಗಣನೀಯ ಮೊತ್ತವನ್ನು ಮೀಸಲಿಡಲಾಗುತ್ತದೆ. ಇದು ಭಾರತದಲ್ಲಿ ಕಡ್ಡಾಯ.

ಇದನ್ನೂ ಓದಿ: Money Guide: ಮೊಬೈಲ್‌ನಲ್ಲಿಯೇ ಪಿಎಫ್‌ ಮೊತ್ತ ಪರಿಶೀಲಿಸಬೇಕೆ?; ಜಸ್ಟ್‌ ಹೀಗೆ ಮಾಡಿ ಸಾಕು

Continue Reading

ಮನಿ-ಗೈಡ್

Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

Money Guide: ಭಾರತೀಯರಿಗೆ ಚಿನ್ನಾಭರಣ ಎಂದರೆ ಬಹು ಪ್ರಿಯ. ಪ್ರಪಂಚದಲ್ಲಿ ಅತೀ ಹೆಚ್ಚು ಚಿನ್ನ ಬಳಸುವ ದೇಶಗಳ ಪೈಕಿ ಭಾರತವೂ ಒಂದು. ನಾವು ಮನೆಯಲ್ಲಿ ದಾಖಲೆ ಇಲ್ಲದೆ ಎಷ್ಟು ಬೇಕಾದರೂ ಚಿನ್ನವನ್ನು ಸಂಗ್ರಹಿಸಿ ಇಡಬಹುದಾ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಕಾನೂನು ಪ್ರಕಾರ ನಾವು ಇಟ್ಟುಕೊಳ್ಳಬಹುದಾದ ಚಿನ್ನಕ್ಕೆ ಮಿತಿ ಇದೆ. ಮಿತಿಗಿಂತ ಹೆಚ್ಚು ಚಿನ್ನವನ್ನು ಇಟ್ಟುಕೊಳ್ಳುವುದಿದ್ದರೆ ಅದರ ಲೆಕ್ಕವನ್ನು ನಾವು ಆದಾಯ ಇಲಾಖೆಗೆ ನೀಡಬೇಕಾಗುತ್ತದೆ. ಈ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಭಾರತೀಯರಿಗೆ ಚಿನ್ನಾಭರಣ ಎಂದರೆ ಬಹು ಪ್ರಿಯ. ಪ್ರಪಂಚದಲ್ಲಿ ಅತೀ ಹೆಚ್ಚು ಚಿನ್ನ ಬಳಸುವ ದೇಶಗಳ ಪೈಕಿ ಭಾರತವೂ ಒಂದು. 2,000 ರೂ. ಮುಖಬೆಲೆಯ ನೋಟುಗಳನ್ನು ಆರ್‌ಬಿಐ ನಿಷೇಧಿಸಿದ ಬಳಿಕವಂತೂ ಚಿನ್ನದ ಆಭರಣಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಈ ಮಧ್ಯೆ ನಾವು ಮನೆಯಲ್ಲಿ ದಾಖಲೆ ಇಲ್ಲದೆ ಎಷ್ಟು ಬೇಕಾದರೂ ಚಿನ್ನವನ್ನು ಸಂಗ್ರಹಿಸಿ ಇಡಬಹುದಾ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಕಾನೂನು ಪ್ರಕಾರ ನಾವು ಇಟ್ಟುಕೊಳ್ಳಬಹುದಾದ ಚಿನ್ನಕ್ಕೆ ಮಿತಿ ಇದೆ. ಮಿತಿಗಿಂತ ಹೆಚ್ಚು ಚಿನ್ನವನ್ನು ಇಟ್ಟುಕೊಳ್ಳುವುದಿದ್ದರೆ ಅದರ ಲೆಕ್ಕವನ್ನು ನಾವು ಆದಾಯ ಇಲಾಖೆಗೆ ನೀಡಬೇಕಾಗುತ್ತದೆ. ಹಾಗಾದರೆ ಚಿನ್ನದ ಕುರಿತಾದ ಕಾನೂನು (Gold Tax) ಏನು ಹೇಳುತ್ತದೆ? ಎಷ್ಟು ಪ್ರಮಾಣದ ಚಿನ್ನ ಸಂಗ್ರಹಿಸಿ ಇಡಬಹುದು? ನಿಮ್ಮ ಎಲ್ಲ ಪ್ರಶ್ನೆಗಳಿಗೆ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ನಿಯಮ ಏನು ಹೇಳುತ್ತದೆ?

ಆದಾಯ ತೆರಿಗೆ ಇಲಾಖೆಯ ತನಿಖೆಯ ಸಂದರ್ಭದಲ್ಲಿ ಖರೀದಿಸಲು ಅಥವಾ ಹೂಡಿಕೆ ಮಾಡಲು ನಿಮಗೆ ಅನುಮತಿಸಿದ ಆದಾಯದ ಮೂಲವನ್ನು ನೀವು ಹಾಜರುಪಡಿಸುವುದಾದರೆ ಮನೆಯಲ್ಲಿ ಎಷ್ಟು ಚಿನ್ನದ ಆಭರಣಗಳನ್ನು ಬೇಕಾದರೂ ಇಟ್ಟುಕೊಳ್ಳಬಹುದು. ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯ (CBDT) ನಿಯಮಗಳ ಪ್ರಕಾರ, ಮನೆಯಲ್ಲಿರುವ ಚಿನ್ನವು ನಿಗದಿತ ಮಿತಿಯಲ್ಲಿದ್ದರೆ, ಆದಾಯ ತೆರಿಗೆ ಅಧಿಕಾರಿಗಳು ಹುಡುಕಾಟದ ಸಮಯದಲ್ಲಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಂತಿಲ್ಲ (ಚಿನ್ನದ ಆಭರಣ ಸಂಗ್ರಹ ನಿಯಮ). ಆದರೆ ಮಿತಿಯನ್ನು ಮೀರಿದರೆ ಅದಕ್ಕೆ ದಾಖಲೆ ಒದಗಿಸಬೇಕು. ಹಾಗಾದರೆ ಮಿತಿಯ ಪ್ರಮಾಣವೆಷ್ಟು?

  • ಅವಿವಾಹಿತ ಮಹಿಳೆ: 250 ಗ್ರಾಂ. ಚಿನ್ನ.
  • ವಿವಾಹಿತ ಮಹಿಳೆ: 500 ಗ್ರಾಂ. ಚಿನ್ನ.
  • ವಿವಾಹಿತ / ಅವಿವಾಹಿತ ಪುರುಷ: 100 ಗ್ರಾಂ. ಚಿನ್ನ.

ʼʼವೈಯಕ್ತಿಕ ಬಳಕೆಗಾಗಿ ಅಥವಾ ಹೂಡಿಕೆಗಾಗಿ ಚಿನ್ನವು ಅತ್ಯಂತ ಜನಪ್ರಿಯ ಮತ್ತು ಬೇಡಿಕೆಯ ಲೋಹವಾಗಿ ಉಳಿದಿದೆ. ಚಿನ್ನ ಖರೀದಿಸುವಾಗ ಬೆಲೆಗಳ ಏರಿಳಿತವನ್ನು ನೋಡುವ ಜತೆಗೆ ತೆರಿಗೆಯನ್ನೂ ಗಮನಿಸಬೇಕು. ಹೂಡಿಕೆಯ ಆಯ್ಕೆಯಾಗಿ ಪರಿಗಣಿಸುವವರು ಚಿನ್ನವನ್ನು ನಾಣ್ಯಗಳು, ಆಭರಣಗಳಂತಹ ಭೌತಿಕ ರೂಪಗಳಲ್ಲಿ, ಚಿನ್ನದ ವಿನಿಮಯ-ವಹಿವಾಟು ನಿಧಿಗಳು (ಗೋಲ್ಡ್ ಇಟಿಎಫ್‌ಗಳು), ಭಾರತೀಯ ರಿಸರ್ವ್ ಬ್ಯಾಂಕ್ ನೀಡುವ ಸವರಿನ್ ಗೋಲ್ಡ್ ಬಾಂಡ್‌ಗಳು (ಎಸ್‌ಜಿಬಿ) ಮತ್ತು ಕಾಗದದ ರೂಪಗಳಲ್ಲಿ ಖರೀದಿಸಬಹುದುʼʼ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ.

ಚಿನ್ನ ಖರೀದಿಗೆ ಯಾವುದೇ ನೇರ ತೆರಿಗೆ ಇಲ್ಲ. ಆದಾಗ್ಯೂ ಪರೋಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಇದು ಚಿನ್ನದ ಪ್ರಕಾರ ಮತ್ತು ಸಂಬಂಧಿತ ಸೇವೆಯನ್ನು ಅವಲಂಬಿಸಿ ಬದಲಾಗುತ್ತದೆ. ಉದಾಹರಣೆಗೆ ಚಿನ್ನದ ಗಟ್ಟಿಗಳು, ನಾಣ್ಯಗಳು ಮತ್ತು ಆಭರಣಗಳ ಖರೀದಿಯ ಮೇಲೆ ಶೇ. 3ರಷ್ಟು ಜಿಎಸ್‌ಟಿ ಪಾವತಿಸಬೇಕಾಗುತ್ತದೆ. ಇನ್ನು ಆಭರಣ ಮತ್ತು ಅಕ್ಕಸಾಲಿಗ ಸೇವೆಗಳ ಜಿಎಸ್‌ಟಿ ದರವು ಶೇ. 5ರಷ್ಟಿರುತ್ತದೆ. ಇದಲ್ಲದೆ ಚಿನ್ನವನ್ನು ಆಮದು ಮಾಡಿಕೊಳ್ಳುವಾಗ ಕಸ್ಟಮ್ಸ್ ಸುಂಕ, ಕೃಷಿ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಮತ್ತು ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

ʼʼಚಿನ್ನಾಭರಣ ಖರೀದಿಗೆ ಸಂಬಂಧಿಸಿ ನೇರ ತೆರಿಗೆಗಳಿಲ್ಲ. ಆದರೆ ಚಿನ್ನ ಖರೀದಿಯ ವಿವರಗಳನ್ನು ನೀವು ಒದಗಿಸುವ ಪ್ಯಾನ್ ಕಾರ್ಡ್‌ನ ಮೂಲಕ ಅಧಿಕಾರಿಗಳು ಸಂಗ್ರಹಿಸುತ್ತಾರೆ. ಆದ್ದರಿಂದ ಚಿನ್ನವನ್ನು ಭಾರಿ ಪ್ರಮಾಣದಲ್ಲಿ ಖರೀದಿಸುವಾಗ ಅದಕ್ಕೆ ತಕ್ಕದಾದ ಆದಾಯದ ಮೂಲಗಳನ್ನು ಹೊಂದಿರುವುದು ಅಗತ್ಯ. ಇನ್ನು ತೆರಿಗೆದಾರರು ಒಟ್ಟು 50 ಲಕ್ಷ ರೂ.ಗಿಂತ ಹೆಚ್ಚಿನ ಆದಾಯವನ್ನು ಹೊಂದಿದ್ದರೆ ಆದಾಯ ತೆರಿಗೆ ರಿಟರ್ನ್ಸ್‌ನಲ್ಲಿ ಹೊಂದಿರುವ ದೇಶೀಯ ಸ್ವತ್ತುಗಳ ಭಾಗವಾಗಿ ಚಿನ್ನದ ಪ್ರಮಾಣವನ್ನು ಬಹಿರಂಗಪಡಿಸಬೇಕಾಗುತ್ತದೆ.

ಮಾರಾಟ ಮಾಡುವಾಗ…

ಒಂದು ವೇಳೆ ಖರೀದಿ ಮಾಡಿದ ಬಳಿಕ ಮೂರು ವರ್ಷದ ಒಳಗೆ ಚಿನ್ನವನ್ನು ಮಾರಾಟ ಮಾಡುವುದಿದ್ದರೆ ಅದರಿಂದ ಪಡೆದ ಆದಾಯವನ್ನು ವೈಯಕ್ತಿಕ ಆದಾಯ ಎಂದು ಪರಿಗಣಿಸಲಾಗುತ್ತಿದೆ. ವೈಯಕ್ತಿಕ ಆದಾಯಕ್ಕೆ ನೀಡಬೇಕಿರುವ ತೆರಿಗೆಯೇ ಇದಕ್ಕೂ ಅನ್ವಯವಾಗುತ್ತದೆ. ಮೂರು ವರ್ಷಗಳ ನಂತರ ಚಿನ್ನವನ್ನು ಮಾರಾಟ ಮಾಡಿದರೆ, ದೀರ್ಘಾವಧಿಯ ಕ್ಯಾಪಿಟಲ್ ಗೇನ್ ತೆರಿಗೆಯನ್ನು ಪಾವತಿಸಬೇಕಾಗುತ್ತದೆ ಎನ್ನುವುದು ತಿಳಿದಿರಲಿ.

ಇದನ್ನೂ ಓದಿ: Money Guide: ಪ್ಯಾನ್‌ ಕಾರ್ಡ್‌ ಕಳೆದುಹೋದರೆ ಚಿಂತೆ ಬೇಡ; ಮನೆಯಲ್ಲೇ ಕೂತು ಡುಪ್ಲಿಕೇಟ್‌ ಪಡೆಯುವ ವಿಧಾನ ಇಲ್ಲಿದೆ

Continue Reading

ಮನಿ-ಗೈಡ್

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Money Guide: ಯಾವುದೇ ಬ್ಯಾಂಕ್‌ನಿಂದ ಸಾಲ ಪಡೆಯಲು ಸಿಬಿಲ್‌ ಸ್ಕೋರ್‌ ಮುಖ್ಯ. ಉತ್ತಮ ಸಿಬಿಲ್ ಸ್ಕೋರ್ ಅನ್ನು ನೀವು ಹೊಂದಿದ್ದರೆ ಸುಲಭವಾಗಿ ಸಾಲ ಪಡೆಯಬಹುದು. ಹೀಗಾಗಿ ಸಿಬಿಲ್ ಸ್ಕೋರ್‌ ಅನ್ನು 750ಕ್ಕಿಂತ ಹೆಚ್ಚು ಕಾಯ್ದುಕೊಳ್ಳುವುದು ಅನಿವಾರ್ಯ. ಹಾಗಾದರೆ ಹಾಗಾದರೆ ಸಿಬಿಲ್ ಸ್ಕೋರ್‌ ಪರಿಶೀಲಿಸುವುದು ಹೇಗೆ? ಸಿಬಿಲ್‌ ಸ್ಕೋರ್‌ ವಿಚಾರದಲ್ಲಿ ಯಾವೆಲ್ಲ ಅಂಶಗಳನ್ನು ಗಮನಿಸಬೇಕು? ಒಂದು ಪ್ಯಾನ್‌ ಕಾರ್ಡ್‌ ಇಲ್ಲದಿದ್ದರೆ ಏನು ಮಾಡಬೇಕು? ಚಿಂತಿಸಬೇಡಿ. ನಿಮ್ಮೆಲ್ಲ ಗೊಂದಲಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ಯಾವುದೇ ಬ್ಯಾಂಕ್‌ನಿಂದ ಸಾಲ ಪಡೆಯಲು ಸಿಬಿಲ್‌ ಸ್ಕೋರ್‌ (ಕ್ರೆಡಿಟ್ ಇನ್ಫರ್ಮೇಷನ್ ಬ್ಯೂರೋ (ಇಂಡಿಯಾ) ಲಿಮಿಟೆಡ್-CIBIL) ಮುಖ್ಯವಾಗುತ್ತದೆ. ಅಂದರೆ ಉತ್ತಮ ಸಿಬಿಲ್ ಸ್ಕೋರ್ ಅನ್ನು ನೀವು ಹೊಂದಿದ್ದರೆ ಸುಲಭವಾಗಿ ಸಾಲ ಪಡೆಯಬಹುದು. ಹೀಗಾಗಿ ಸಿಬಿಲ್ ಸ್ಕೋರ್‌ ಅನ್ನು 750ಕ್ಕಿಂತ ಹೆಚ್ಚು ಕಾಯ್ದುಕೊಳ್ಳುವುದು ಅನಿವಾರ್ಯ. ಸಿಬಿಲ್ ಸ್ಕೋರ್ ಇಲ್ಲದಿದ್ದರೆ ನಿಮ್ಮ ಸಾಲದ ಅರ್ಜಿ ತಿರಸ್ಕೃತಗೊಳ್ಳುವ ಸಾಧ್ಯತೆಯೂ ಇದೆ. 300ರಿಂದ 900ರ ನಡುವೆ ಇರುವ ಸಿಬಿಲ್ ಸ್ಕೋರ್ ಹೆಚ್ಚಾದಷ್ಟೂ ಒಳ್ಳೆಯದು. ಹಾಗಾದರೆ ಸಿಬಿಲ್ ಸ್ಕೋರ್‌ ಪರಿಶೀಲಿಸುವುದು ಹೇಗೆ? ಸಿಬಿಲ್‌ ಸ್ಕೋರ್‌ ವಿಚಾರದಲ್ಲಿ ಯಾವೆಲ್ಲ ಅಂಶಗಳನ್ನು ಗಮನಿಸಬೇಕು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Money Guide).

ನಿಮ್ಮ ಬಳಿ ಪ್ಯಾನ್ ಕಾರ್ಡ್ ಲಭ್ಯವಿಲ್ಲದಿದ್ದರೆ ಸಿಬಿಲ್ ಸ್ಕೋರ್ ಪಡೆಯುವುದು ಬಹುದೊಡ್ಡ ಸವಾಲು. ಹೀಗಾಗಿ ಸುಲಭವಾಗಿ, ಪ್ಯಾನ್ ಕಾರ್ಡ್ ಇಲ್ಲದೆ ನಿಮ್ಮ ಸಿಬಿಲ್ ಸ್ಕೋರ್ ಅನ್ನು ಹೇಗೆ ಪರಿಶೀಲಿಸಬಹುದು ಎನ್ನುವುದರ ಹಂತ ಹಂತದ ಮಾಹಿತಿ ಇಲ್ಲಿದೆ.

  • ಅಧಿಕೃತ ಸಿಬಿಲ್ ವೆಬ್‌ಸೈಟ್‌ https://www.cibil.com/ಗೆ ಭೇಟಿ ನೀಡಿ.
  • ‘Personal CIBIL Score’ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಬಳಿಕ ‘Get Your Free CIBIL Score’ ಆಪ್ಶನ್‌ ಆಯ್ಕೆ ಮಾಡಿ ಸೂಚನೆಗಳನ್ನು ಅನುಸರಿಸಿ ಕೇಳಿದ ಮಾಹಿತಿಗಳನ್ನು ಭರ್ತಿ ಮಾಡಿ.
  • ಒಂದು ವೇಳೆ ನಿಮ್ಮ ಬಳಿ ಪ್ಯಾನ್‌ ಕಾರ್ಡ್‌ ಇಲ್ಲ ಎಂದಾದರೆ ಪರ್ಯಾಯ ಡಾಕ್ಯುಮೆಂಟ್‌ಗಳಾದ ಪಾಸ್‌ಪೋರ್ಟ್‌, ವೋಟರ್‌ ಐಡಿ, ಡ್ರೈವಿಂಗ್‌ ಲೈಸನ್ಸ್‌ ಅಥವಾ ರೇಷನ್‌ ಕಾರ್ಡ್‌ ಅನ್ನು ಆಯ್ಕೆ ಮಾಡಬಹುದು. ನೀವು ಆಯ್ಕೆ ಮಾಡಿಕೊಂಡ ಡಾಕ್ಯುಮೆಂಟ್‌ನ ನಂಬರ್‌ ಅನ್ನು ಇಲ್ಲಿ ನಮೂದಿಸಿ.
  • ಈಗ ನಿಮ್ಮ ಡೇಟ್‌ ಆಫ್‌ ಬರ್ತ್‌, ಪಿನ್‌ ಕೋಡ್‌ ಮತ್ತು ರಾಜ್ಯವನ್ನು ನಮೂದಿಸಿ. ಜತೆಗೆ ಮೊಬೈಲ್‌ ನಂಬರ್‌ ಎಂಟ್ರಿ ಮಾಡಿ ‘Accept and Continueʼ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಮೊಬೈಲ್‌ಗೆ ಬಂದ ಒಟಿಪಿಯನ್ನು ನಮೂದಿಸಿ ‘Continueʼ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ‘Yes’ ಅಥವಾ ‘No’ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಈಗ ನಿಮ್ಮ ಹೆಸರು ಯಶಸ್ವಿಯಾಗಿ ನೋಂದಣಿಯಾಗಿರುವ ಸಂದೇಶ ಪರದೆ ಮೇಲೆ ಮೂಡುತ್ತದೆ.
  • ಈಗ ‘Go to Dashboard’ ಆಯ್ಕೆಯನ್ನು ಕ್ಲಿಕ್‌ ಮಾಡಿದರೆ ನಿಮ್ಮ ಸಿಬಿಲ್‌ ಸ್ಕೋರ್‌ ಅನ್ನು ವೀಕ್ಷಿಸಬಹುದು.

ಗೂಗಲ್‌ ಪೇಯಲ್ಲಿ ಹೀಗೆ ಚೆಕ್‌ ಮಾಡಿ

  • ಮೊಬೈಲ್‌ ಫೋನ್‌ನಲ್ಲಿ ಗೂಗಲ್‌ ಪೇ ಅಪ್ಲಿಕೇಷನ್‌ ಓಪನ್‌ ಮಾಡಿ.
  • Manage your money ಆಯ್ಕೆಯನ್ನು ಕೆಳಗಡೆ ಕಾಣಿಸುವ ʼCheck your CIBIL score for freeʼ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ಪ್ಯಾನ್‌ ಕಾರ್ಡ್‌ನಲ್ಲಿ ಇರುವಂತೆ ನಿಮ್ಮ ಹೆಸರು ನಮೂದಿಸಿ.
  • ನಿಮ್ಮ ಗುರುತನ್ನು ಅಂಗಿಕರಿಸಿದರೆ ಪರದೆ ಮೇಲೆ ಸಿಬಿಲ್‌ ಸ್ಕೋರ್‌ ಕಂಡು ಬರುತ್ತದೆ.

ಫೋನ್‌ ಪೇ, ಪೇಟಿಎಂ ಅಪ್ಲಿಕೇಷನ್‌ನಲ್ಲಿಯೂ ಇದೇ ರೀತಿ ವೀಕ್ಷಿಸಬಹುದು.

ಸ್ಕೋರ್‌ ಹೆಚ್ಚಿಸುವುದು ಹೇಗೆ?

  • ನಿಮ್ಮ ಸಿಬಿಲ್ ಸ್ಕೋರ್ ಅನ್ನು ಆಗಾಗ ಪರಿಶೀಲಿಸಿ. ಇದರಿಂದ ನೀವು ಯಾವ ಮಟ್ಟದಲ್ಲಿದ್ದೀರಿ ಎಂಬುದು ತಿಳಿಯುತ್ತದೆ.
  • ನಿಮ್ಮ ಇಎಂಐಗಳು ಮತ್ತು ಕ್ರೆಡಿಟ್ ಕಾರ್ಡ್ ಬಿಲ್‌ಗಳನ್ನು ನಿಯಮಿತವಾಗಿ ಪಾವತಿಸಿ; ಯಾವುದೇ ಕಾರಣಕ್ಕೂ ತಪ್ಪಿಸಬೇಡಿ ಮತ್ತು ವಿಳಂಬ ಮಾಡಬೇಡಿ.
  • ನಿಮ್ಮ ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚು ಬಳಸಬೇಡಿ ಮತ್ತು ನಿಮ್ಮ ಕ್ರೆಡಿಟ್ ಬಳಕೆಯ ಅನುಪಾತವನ್ನು (ಸಿಯುಆರ್ ) 30% ಒಳಗೆ ಇರಿಸಿಕೊಳ್ಳಲು ಪ್ರಯತ್ನಿಸಿ.
  • ಕಡಿಮೆ ಅವಧಿಯಲ್ಲಿ ಬೇರೆ ಬೇರೆ ಸಾಲಗಳು ಅಥವಾ ಕ್ರೆಡಿಟ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಬೇಡಿ
  • ಅನಿವಾರ್ಯ ಆಗಿರದಿದ್ದರೆ, ನಿಮ್ಮ ಹಳೆಯ ಕ್ರೆಡಿಟ್ ಕಾರ್ಡ್‌ಗಳನ್ನು ರದ್ದುಗೊಳಿಸಬೇಡಿ
  • ಚೆಕ್‌ ಬೌನ್ಸ್‌ ಆಗದಂತೆ ನೋಡಿಕೊಳ್ಳಿ

ಪ್ರಯೋಜನಗಳೇನು?

ಹೆಚ್ಚಿನ ಸಿಬಿಲ್‌ ಸ್ಕೋರ್‌ ಇದ್ದರೆ ಪಡೆಯಬಹುದಾದ ಪ್ರಯೋಜನಗಳು:

  • ಸಾಲಗಳ ಮೇಲಿನ ಕಡಿಮೆ ಬಡ್ಡಿ ದರಗಳು
  • ಹೆಚ್ಚಿನ ಸಾಲದ ಮೊತ್ತಗಳು
  • ದೀರ್ಘ ಅಥವಾ ಹೆಚ್ಚು ಹೊಂದಿಕೊಳ್ಳುವ ಮರುಪಾವತಿ ಅವಧಿಯಂತಹ ನಿಯಮಗಳು
  • ತ್ವರಿತ ಸಾಲ ಮಂಜೂರಾತಿ ಪ್ರಕ್ರಿಯೆ
  • ಸಾಲ ನೀಡುವ ಸಂಸ್ಥೆಗಳ ಹೆಚ್ಚಿನ ಆಯ್ಕೆ

ಇದನ್ನೂ ಓದಿ: Money Guide: ಸಿಬಿಲ್‌ ಸ್ಕೋರ್‌ ಕಡಿಮೆ ಇದ್ದರೆ ಚಿಂತೆ ಬೇಡ; ಈ ಟಿಪ್ಸ್‌ ಫಾಲೋ ಮಾಡಿ ಹೆಚ್ಚಿಸಿಕೊಳ್ಳಿ

Continue Reading

ಮನಿ-ಗೈಡ್

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

Money Guide: ಪಡಿತರ ಚೀಟಿ ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಪಡಿತರ ಚೀಟಿ (Ration Card) ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಜತೆಗೆ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪ್ಯಾನ್ ಕಾರ್ಡ್‌, ಚಾಲಕರ ಪರವಾನಗಿ ಇತ್ಯಾದಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಇದನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ‌ ವಿತರಿಸುತ್ತದೆ. ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ವಿವರ ಇಲ್ಲಿದೆ (Money Guide).

ಅಗತ್ಯ ದಾಖಲೆಗಳು

ಗ್ರಾಮಾಂತರ ಪ್ರದೇಶ

  • ನಿಮ್ಮ ಗ್ರಾಮ ಪಂಚಾಯಿತಿಯ ಹೆಸರು
  • ಈಗ ವಾಸ ಮಾಡುತ್ತಿರುವ ಮನೆ ವಿಳಾಸ
  • ಮನೆಯ ಆಸ್ತಿ ಸಂಖ್ಯೆ ವಿವರ
  • ಮನೆಯ ವಿದ್ಯುತ್‌ ಸಂಪರ್ಕದ ಬಿಲ್‌ ಪ್ರತಿ
  • ಕುಟುಂಬದ ಎಲ್ಲ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ನಿಮ್ಮ ಕುಟುಂಬಕ್ಕಿರುವ ಅಡುಗೆ ಅನಿಲದ ಸರಬರಾಜಿನ ಇತ್ತಿಚಿನ ಬಿಲ್/ರಶೀದಿ.

ನಗರ / ಪಟ್ಟಣ ಪ್ರದೇಶ

  • ನೀವು ವಾಸವಿರುವ ನಗರಸಭೆ / ಪುರಸಭೆ / ನಗರ ಪಾಲಿಕೆಯ ವಾರ್ಡ್ ಸಂಖ್ಯೆ
  • ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶದವರಾಗಿದ್ದಲ್ಲಿ (ಬಿಬಿಎಂಪಿ ಪ್ರದೇಶ) ನೀವು ಆಹಾರ ಇಲಾಖೆಯ ಯಾವ ವಲಯ ವ್ಯಾಪ್ತಿಯಲ್ಲಿದ್ದೀರಿ ಎಂಬ ಬಗ್ಗೆ ಮಾಹಿತಿ (ಇದನ್ನು ಸುಲಭವಾಗಿ ತಿಳಿಯಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯವರನ್ನು ಸಂಪರ್ಕಿಸಿ, ಇಲ್ಲವೇ ನಿಮ್ಮ ನೆರೆಹೊರೆಯವರಲ್ಲಿ ಈಗಾಗಲೇ ಲಭ್ಯವಿರುವ ಪಡಿತರ ಚೀಟಿಯನ್ನು ನೋಡಿ ತಿಳಿಯಿರಿ)
  • ನಿಮ್ಮ ಮನೆಯ ವಿದ್ಯುತ್ ಬಿಲ್
  • ನಿಮ್ಮ ನಿವಾಸದ ಪೂರ್ಣ ವಿಳಾಸ (ಅಂಚೆ ಪಿನ್ ಕೋಡ್‌ ಕಡ್ಡಾಯ). ಸ್ವಂತ ಮನೆಯಾಗಿದ್ದಲ್ಲಿ
  • ಮನೆಯ ಆಸ್ತಿ ಸಂಖ್ಯೆ ವಿವರ, ನಿಮ್ಮ ಮನೆ ವಿಳಾಸ ಹುಡುಕಲು ಸುಲಭವಾಗುವ ಹತ್ತಿರದ ಸ್ಥಳದ ಗುರುತು
  • ಕುಟುಂಬದ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ನಿಮ್ಮ ಸಂಪರ್ಕದ ಮೊಬೈಲ್ ನಂಬರ್ (ಕಡ್ಡಾಯ), ಸ್ವಂತ ಮೊಬೈಲ್ ಇಲ್ಲದಿದ್ದರೂ ನಿಮ್ಮನ್ನು ಸಂಪರ್ಕಿಸಬಹುದಾದ ಯಾವುದಾದರೂ ಮೊಬೈಲ್ ಸಂಖ್ಯೆಯನ್ನು ನೀಡುವುದು.
  • ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ
  • ನಿಮ್ಮ ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ

ಅರ್ಜಿ ಸಲ್ಲಿಸುವುದು ಹೇಗೆ?

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬೇಕಿದ್ದರೆ ನೀವು ಆಹಾರ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ಇ-ಸರ್ವಿಸ್‌ (ಇ-ಸೇವೆ) ಮೇಲೆ ಕ್ಲಿಕ್‌ ಮಾಡಬೇಕು. ಇದರಲ್ಲಿ ಕೆಳಗಡೆ ನಿಮಗೆ ಇ-ಪಡಿತರ ಚೀಟಿ ಆಯ್ಕೆ ಕಾಣುತ್ತದೆ. ಅದರಲ್ಲಿ ಕೆಳಗಿನ ಬಾಣದ ಗುರುತಿನ ಮೇಲೆ ಕ್ಲಿಕ್‌ ಮಾಡಿದರೆ ಹೊಸ ಪಡಿತರ ಚೀಟಿ ಎಂಬ ಆಯ್ಕೆ ತೋರಿಸುತ್ತದೆ. ಅಲ್ಲಿ ಎಪಿಎಲ್‌ ಹಾಗೂ ಬಿಪಿಎಲ್‌ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್‌ ಮಾಡಿದ ಬಳಿಕ ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕಾಗುತ್ತದೆ.

ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

Continue Reading
Advertisement
Robert Vadra
ದೇಶ6 mins ago

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

IPL 2024
ಕ್ರೀಡೆ26 mins ago

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Talking Digital Safety for Teens programme by Meta in Bengaluru
ಕರ್ನಾಟಕ36 mins ago

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ39 mins ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Artificially ripened fruits
ಕರ್ನಾಟಕ39 mins ago

Artificially Ripened Fruits: ಬಾಳೆ, ಮಾವಿನ ಹಣ್ಣಿನಿಂದ ಕ್ಯಾನ್ಸರ್: ದೂರು ಸಲ್ಲಿಕೆ

Legal action if drought relief money is credited to farmers loans says Dr Sushila
ಯಾದಗಿರಿ41 mins ago

Yadgiri News: ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ: ಡಿಸಿ

Shree Bevinalamma Devi Jaladhi Mahotsav celebration in koratagere taluk
ತುಮಕೂರು43 mins ago

Tumkur News: ವಿಜೃಂಭಣೆಯಿಂದ ನಡೆದ ಶ್ರೀ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

udupi Shree Bhandarakeri math annual award programme in bengaluru
ಕರ್ನಾಟಕ45 mins ago

Bengaluru News: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪೇಜಾವರ ಶ್ರೀ

5 foreign coins found in anjanadri temple hundi counting
ಕರ್ನಾಟಕ47 mins ago

Koppala News: ಅಂಜನಾದ್ರಿ ದೇಗುಲ ಹುಂಡಿ ಎಣಿಕೆ; 5‌ ವಿದೇಶಿ ನಾಣ್ಯಗಳು ಪತ್ತೆ

IPL 2024
ಪ್ರಮುಖ ಸುದ್ದಿ1 hour ago

IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು10 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು11 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌