ವಿಸ್ತಾರ Money Guide | PAN-Aadhaar link: ಆಧಾರ್‌ ಜತೆ ಮಾ. 31ರೊಳಗೆ ಲಿಂಕ್ ಮಾಡದಿದ್ದರೆ ಪ್ಯಾನ್‌ ನಿಷ್ಕ್ರಿಯ Vistara News
Connect with us

ಪ್ರಮುಖ ಸುದ್ದಿ

ವಿಸ್ತಾರ Money Guide | PAN-Aadhaar link: ಆಧಾರ್‌ ಜತೆ ಮಾ. 31ರೊಳಗೆ ಲಿಂಕ್ ಮಾಡದಿದ್ದರೆ ಪ್ಯಾನ್‌ ನಿಷ್ಕ್ರಿಯ

ಪ್ಯಾನ್‌ ಕಾರ್ಡ್‌ ಮತ್ತು ಆಧಾರ್‌ ನಡುವೆ 2023ರ ಮಾರ್ಚ್‌ 31ರೊಳಗೆ ಲಿಂಕ್‌ ಮಾಡದಿದ್ದರೆ, ಪ್ಯಾನ್‌ (PAN-Aadhaar link) ನಿಷ್ಕ್ರಿಯವಾಗಲಿದೆ ಎಂದು ಐಟಿ ಇಲಾಖೆ ತಿಳಿಸಿದೆ. ಲಿಂಕ್‌ ಮಾಡುವ ವಿಧಾನದ ಬಗ್ಗೆ ಇಲ್ಲಿದೆ ವಿವರ.

VISTARANEWS.COM


on

pan adhaar
Koo

ಆಧಾರ್‌ ಜತೆಗೆ 2023ರ ಮಾರ್ಚ್‌ 31ರೊಳಗೆ ಲಿಂಕ್‌ ಮಾಡದಿದ್ದರೆ, ಏಪ್ರಿಲ್‌ 1ರಿಂದ ಪ್ಯಾನ್‌ ಕಾರ್ಡ್ ನಿಷ್ಕ್ರಿಯವಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ (PAN-Aadhaar link) ತಿಳಿಸಿದೆ.‌ ಹೀಗಾಗಿ ನೀವು ಒಂದು ವೇಳೆ ಲಿಂಕ್‌ ಮಾಡಿರದಿದ್ದರೆ, ತಪ್ಪದೆ ಮಾಡಿಕೊಳ್ಳುವುದು ಸೂಕ್ತ. 1,000 ರೂ. ಶುಲ್ಕ ನೀಡಿ ಲಿಂಕ್‌ ಮಾಡಿಕೊಳ್ಳಬಹುದು.

ಬ್ಯಾಂಕ್‌ ಮೂಲಕ ಹಣಕಾಸು ವರ್ಗಾವಣೆಗಳನ್ನು ಯಾವುದೇ ಅಡಚಣೆ ಇಲ್ಲದೆ ನಡೆಸಲು ಪ್ಯಾನ್‌ ಕಾರ್ಡ್‌ ಮತ್ತು ಆಧಾರ್‌ ಕಾರ್ಡ್‌ ಮುಖ್ಯವಾಗುತ್ತದೆ. ಎಲ್ಲ ನಾಗರಿಕರು ಆಧಾರ್‌ ಕಾರ್ಡ್‌ ಮತ್ತು ಪ್ಯಾನ್‌ ಕಾರ್ಡ್‌ ಅನ್ನು ಲಿಂಕ್‌ ಮಾಡುವುದನ್ನು ಸರ್ಕಾರ ಕೆಲವು ವರ್ಷಗಳ ಹಿಂದೆಯೇ ಕಡ್ಡಾಯಗೊಳಿಸಿತ್ತು.

ಆಧಾರ್-ಪ್ಯಾನ್‌ ಲಿಂಕ್‌ ಮಾಡಲು ತಪ್ಪಿದರೆ ಏ.1ರಿಂದ ಪ್ಯಾನ್‌ ನಿಷ್ಕ್ರಿಯವಾಗುವುದರಿಂದ, ಐಟಿ ರಿಟನ್ಸ್‌ ಪ್ರಕ್ರಿಯೆ ಪೂರ್ಣವಾಗದು. ಬಾಕಿ ಇರುವ ರಿಫಂಡ್‌ ಸಿಗದು.

ಪ್ಯಾನ್-ಆಧಾರ್‌ ಲಿಂಕ್‌ ಹೇಗೆ?

  • ಆದಾಯ ತೆರಿಗೆ ಇಲಾಖೆಯು ಪ್ಯಾನ್‌ ಅನ್ನು ಆಧಾರ್‌ ಜತೆಗೆ ಲಿಂಕ್‌ ಮಾಡಲು ಹಲವು ವಿಧಾನಗಳನ್ನು ಕಲ್ಪಿಸಿದೆ.
  • ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್‌ ಪೋರ್ಟಲ್‌  https://incometaxindiaefiling.gov.in ಮೂಲಕ ಲಿಂಕ್‌ ಮಾಡಬಹುದು.
  • ಈ ವೆಬ್‌ ಸೈಟ್‌ನಲ್ಲಿ ರಿಜಿಸ್ಟರ್‌ ಆಗದಿದ್ದಲ್ಲಿ ರಿಜಿಸ್ಟರ್‌ ಆಗಿ. ನಿಮ್ಮ ಪ್ಯಾನ್‌ ನಂಬರ್‌ ಯೂಸರ್‌ ಐಡಿ ಆಗಿರುತ್ತದೆ. ಜನ್ಮ ದಿನಾಂಕ ಪಾಸ್‌ ವರ್ಡ್‌ ಆಗಿರುತ್ತದೆ.
  • ಲಾಗಿನ್‌ ಆದ ಬಳಿಕ ಪೇಜ್‌ನಲ್ಲಿ ಲಿಂಕ್‌ ಯುವರ್‌ ಪ್ಯಾನ್‌ ವಿತ್‌ ಆಧಾರ್‌ ಲಭಿಸುತ್ತದೆ. ಸಿಗದಿದ್ದರೆ ಪ್ರೊಫೈಲ್‌ ಸೆಟ್ಟಿಂಗ್ಸ್‌ಗೆ ಹೋಗಿ ಲಿಂಕ್‌ ಆಧಾರ್‌ ಮೇಲೆ ಕ್ಲಿಕ್ಕಿಸಿ.
  • ಪ್ಯಾನ್‌ ವಿವರಗಳನ್ನು ಪರಿಶೀಲಿಸಿ. ಹೊಂದಾಣಿಕೆ ಆಗದಿದ್ದರೆ ಸರಿಪಡಿಸಬೇಕಾಗುತ್ತದೆ. ಹೊಂದಾಣಿಕೆ ಆಗುವುದಿದ್ದರೆ ಲಿಂಕ್‌ ನೌ ಬಟನ್‌ ಒತ್ತಿರಿ.
  • ಯಶಸ್ವಿಯಾಗಿ ಲಿಂಕ್‌ ಆದ ಬಳಿಕ ಮೆಸೇಜ್‌ ಸಿಗುತ್ತದೆ.
  • NSDL/UTIIL ಕಚೇರಿಗೆ ತೆರಳಿ ಪ್ಯಾನ್- ಆಧಾರ್‌ ಲಿಂಕ್‌ ಮಾಡಬಹುದು.
  • ಪ್ಯಾನ್ -ಆಧಾರ್‌ ಲಿಂಕ್‌ ಮಾಡಲು ಗಡುವು ತಪ್ಪಿದರೆ ಬಳಿಕ ಪ್ಯಾನ್‌ ನಿಷ್ಕ್ರಿಯ ಎನ್ನಿಸುವುದು

ಲಿಂಕ್‌ ಆಗಿದೆಯೇ ಎಂದು ಪರಿಶೀಲಿಸುವುದು ಹೇಗೆ?

ಆಧಾರ್‌ ಜತೆ ಪ್ಯಾನ್‌ ಕಾರ್ಡ್‌ ಲಿಂಕ್‌ ಆಗಿದೆಯೇ ಎಂದು ಆನ್‌ಲೈನ್‌ ಮೂಲಕ ಪರಿಶೀಲಿಸಬಹುದು. ಅದು ಹೀಗಿದೆ-

ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ಗೆ ತೆರಳಿ ಈ ಲಿಂಕ್‌ ಕ್ಲಿಕ್‌ ಮಾಡಿ (www.incometax.gov.in)

ಲಿಂಕ್‌ ಆಧಾರ್‌ ಸ್ಟೇಟಸ್‌ ಆಯ್ಕೆ ಮಾಡಿಕೊಳ್ಳಿ. ಪ್ಯಾನ್‌ ಮತ್ತು ಆಧಾರ್‌ ಸಂಖ್ಯೆ ನಮೂದಿಸಿ.

ವ್ಯೂ ಲಿಂಕ್‌ ಆಧಾರ್‌ ಸ್ಟೇಟಸ್‌ ಕ್ಲಿಕ್ಕಿಸಿ. (view link aadhaar status)

ಆಧಾರ್-ಪ್ಯಾನ್‌ ಸ್ಟೇಟಸ್‌ ಪೇಜ್‌ನಲ್ಲಿ ಕಾಣಿಸುತ್ತದೆ. ಉದಾಹರಣೆಗೆ ಆಧಾರ್-ಪ್ಯಾನ್‌ ಲಿಂಕ್‌ ಆಗಿದ್ದರೆ Your PAN is linked to Aadhaar number. ಎಂಬ ಸಂದೇಶ ಕಾಣಿಸುತ್ತದೆ.

Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ವಿಸ್ತಾರ TOP 10 NEWS: ಸಿದ್ದರಾಮಯ್ಯ ಕ್ಷೇತ್ರ ಗೊಂದಲದಿಂದ, ಕೇಂದ್ರ ಸರ್ಕಾರಕ್ಕೆ 155 ಲಕ್ಷ ಕೋಟಿ ರೂ. ಸಾಲದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Edited by

vistara top 10 news siddaramaiah constituency confusion continues to congress first list on wednesday and more news
Koo

1. Karnataka Elections : ಹೆಂಡ್ತಿ, ಮಗನ ಜತೆ ಕೇಳಿ ಹೇಳ್ತೇನೆ; ಕೋಲಾರದ ಜನರಿಗೆ ಸಿದ್ದರಾಮಯ್ಯ ಸಮಾಧಾನ!
ʻʻಕೋಲಾರ ಸುರಕ್ಷಿತ ಅಲ್ಲ ಎಂಬ ವರದಿಗಳಿವೆ. ಹೀಗಾಗಿ ಬೇರೆ ಕ್ಷೇತ್ರ ಆಯ್ಕೆ ಮಾಡಿಕೊಳ್ಳಿʼʼ ಎಂಬ ಹೈಕಮಾಂಡ್‌ ಸಂದೇಶದ ಬಳಿಕ ಅಡಕತ್ತರಿಯಲ್ಲಿ ಸಿಲುಕಿರುವ ಹಿರಿಯ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು ಕೋಲಾರದ ಅಭಿಮಾನಿಗಳನ್ನು ಸಮಾಧಾನ ಮಾಡಲು ʻಫ್ಯಾಮಿಲಿ ಅಸ್ತ್ರʼ ಪ್ರಯೋಗ ಮಾಡಿದ್ದಾರೆ. ನಾನು ಹೆಂಡತಿ ಮತ್ತು ಮಗನ ಜತೆ ಚರ್ಚೆ ಮಾಡಿ ಗುರುವಾರ ಅಂತಿಮ ತೀರ್ಮಾನ ಪ್ರಕಟಿಸುತ್ತೇನೆ (Karnataka Elections) ಎಂದು ಅವರು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Basavaraj Bommai: ಎರಡು ತಿಂಗಳಲ್ಲಿ 13 ಬಾರಿ ತವರು ಕ್ಷೇತ್ರಕ್ಕೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ: ಶಿಗ್ಗಾಂವಿಯಲ್ಲಿ ಪ್ರಬಲ ಸ್ಪರ್ಧೆ
ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಕಳೆದ ಎರಡು ತಿಂಗಳಲ್ಲಿ ಬರೊಬ್ಬರಿ 13 ಬಾರಿ ತಮ್ಮ ಕ್ಷೇತ್ರ ಶಿಗ್ಗಾಂವಿಗೆ ಪ್ರವಾಸ ಮಾಡಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ ಎಂಬ ಮುನ್ಸೂಚನೆಯನ್ನು ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!

3. Nitin Gadkari : ಕೇಂದ್ರ ಸಚಿವ ನಿತಿನ್‌ ಗಡ್ಕರಿ ಕಚೇರಿಗೆ ಮತ್ತೆ ಜೀವ ಬೆದರಿಕೆ ಕರೆ; ಏನಾಗುತ್ತಿದೆ ಹಿಂಡಲಗಾ ಜೈಲಿನಲ್ಲಿ?
ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಕರೆ ಮಾಡಲಾಗಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿರುವ ನಿತಿನ್ ಗಡ್ಕರಿ ಅವರ ಜನಸಂಪರ್ಕ ಕಚೇರಿಯ ಲ್ಯಾಂಡ್‌ಲೈನ್‌ಗೆ ಕರೆ ಮಾಡಿದ ವ್ಯಕ್ತಿ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾನೆ ಎಂದು ಹೇಳಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Amritpal Singh: 80 ಸಾವಿರ ಪೊಲೀಸರು ಏನು ಮಾಡುತ್ತಿದ್ದಾರೆ? ಪಂಜಾಬ್‌ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ
ಖಲಿಸ್ತಾನಿಗಳ ಪರ ನಾಯಕ, ಪಂಜಾಬ್‌ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿರುವ ಅಮೃತ್‌ಪಾಲ್‌ ಸಿಂಗ್‌ (Amritpal Singh) ಬಂಧನಕ್ಕಾಗಿ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಆತನನ್ನು ಬಂಧಿಸಲು ರಾಜ್ಯದ ಪೊಲೀಸರು ಹರಸಾಹಸಪಡುತ್ತಿದ್ದರೂ ಇದುವರೆಗೆ ಬಂಧನ ಸಾಧ್ಯವಾಗಿಲ್ಲ. ಆತನ ಆಪ್ತರ ಬಂಧನ, ಕಾರು ವಶ, ಶಸ್ತ್ರಾಸ್ತ್ರಗಳ ಜಪ್ತಿ ಮಾತ್ರ ಸಾಧ್ಯವಾಗಿದೆ. ಇನ್ನು ಬಂಧನ ಕಾರ್ಯಾಚರಣೆ ಕುರಿತು ಪಂಜಾಬ್‌ ಹಾಗೂ ಹರಿಯಾಣ ಹೈಕೋರ್ಟ್‌ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, “ಪಂಜಾಬ್‌ನ 80 ಸಾವಿರ ಪೊಲೀಸರು ಏನು ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Karnataka Election: ಯುಗಾದಿಗೆ ಕಾಂಗ್ರೆಸ್‌ ರಣಕಹಳೆ: ಮೊದಲ ಪಟ್ಟಿ ಬುಧವಾರ ಬಿಡುಗಡೆ ಎಂದ ಕೆ.ಜೆ. ಜಾರ್ಜ್‌
ಈಗಾಗಲೆ ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಎರಡು ಸಭೆಗಳನ್ನು ನಡೆಸಿರುವ ಕಾಂಗ್ರೆಸ್‌ ಪಕ್ಷ ವಿಧಾನಸಭೆ ಚುನಾವಣೆಯ ಮೊದಲ ಪಟ್ಟಿಯನ್ನು ಯುಗಾದಿ ದಿನವಾದ ಬುಧವಾರ ಬಿಡುಗಡೆ ಮಾಡಲಿದೆ ಎನ್ನಲಾಗುತ್ತಿದೆ. ಮಾಜಿ ಸಚಿವ ಹಾಗೂ ಚುನಾವಣಾ ಸಮಿತಿಯ ಸದಸ್ಯರೂ ಆಗಿರುವ ಕೆ.ಜೆ. ಜಾರ್ಜ್‌ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. ಒಟ್ಟು 155 ಲಕ್ಷ ಕೋಟಿ ರೂ. ಸಾಲ ಇದೆ ಎಂದ ಸೀತಾರಾಮನ್, ಮೋದಿ ಸರ್ಕಾರದಿಂದಲೇ 100 ಲಕ್ಷ ಕೋಟಿ ಸಾಲ?
ಭಾರತ ಸರ್ಕಾರ (Indian Government) ಮಾಡಿರುವ ಒಟ್ಟು ಸಾಲ ಎಷ್ಟಾಗಿದೆ ಗೊತ್ತಾ? ಬರೋಬ್ಬರಿ 155.8 ಲಕ್ಷ ಕೋಟಿ ರೂಪಾಯಿ. ಅಂದರೆ, ನಮ್ಮ ಒಟ್ಟು ಜಿಡಿಪಿಯ ಶೇ.57.3ರಷ್ಟಾಗುತ್ತದೆ ಈ ಮೊತ್ತ! ಅಂದ ಹಾಗೆ, ಈ ಮಾಹಿತಿಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಸೋಮವಾರ ಲೋಕಸಭೆಗೆ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Zakir Naik: ಒಮಾನ್‌ನಿಂದ ಜಾಕೀರ್‌ ನಾಯ್ಕ್‌ ಗಡಿಪಾರು, ಮೂಲಭೂತವಾದಿಯ ಬಂಧನಕ್ಕೆ ಭಾರತ ಮುಹೂರ್ತ ಫಿಕ್ಸ್‌?
ಇಸ್ಲಾಮಿಕ್‌ ಮೂಲಭೂತವಾದವನ್ನು ಪಸರಿಸುವುದು, ಉಗ್ರರಿಗೆ ಹಣಕಾಸು ನೆರವು ನೀಡುವುದು, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಭಾಷಣಗಳಿಂದ ಸಂಕಷ್ಟಕ್ಕೆ ಸಿಲುಕಿ, ವಿದೇಶಕ್ಕೆ ಪರಾರಿಯಾಗಿರುವ ವಿವಾದಿತ ಧರ್ಮಗುರು ಜಾಕೀರ್‌ ನಾಯ್ಕ್‌ನನ್ನು (Zakir Naik) ಬಂಧಿಸಲು ಭಾರತ ಮುಹೂರ್ತ ಫಿಕ್ಸ್‌ ಮಾಡಿದೆ. ಇಸ್ಲಾಮಿಕ್‌ ಮೂಲಭೂತವಾದಿಯನ್ನು ಗಡಿಪಾರು ಮಾಡಲು ಒಮಾನ್‌ ಸರ್ಕಾರದ ಜತೆ ಭಾರತ ಮಾತುಕತೆ ನಡೆಸುತ್ತಿದೆ. ಅಲ್ಲಿಯೇ ಈತನ ಬಂಧನಕ್ಕೆ ಸಂಬಂಧಿಸಿದಂತೆ ಭಾರತದ ಅಧಿಕಾರಿಗಳು ಒಮಾನ್‌ ಅಧಿಕಾರಿಗಳ ಜತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. Modi in Karnataka: ಬೈಯಪ್ಪನಹಳ್ಳಿ-ಕೆ.ಆರ್‌. ಪುರ ಕಾಮಗಾರಿ ಮುಗಿದಿಲ್ಲ: ಮೋದಿಯಿಂದ ಅಪೂರ್ಣ ಮೆಟ್ರೊ ಕಾಮಗಾರಿ ಉದ್ಘಾಟನೆ ಎಂದ ಕಾಂಗ್ರೆಸ್‌
ಪ್ರಧಾನಿ ನರೇಂದ್ರ ಮೋದಿ ಮಾರ್ಚ್‌ 25 ರಂದು ಬೆಂಗಳೂರಿನಲ್ಲಿ ಕೆ.ಆರ್.‌ ಪುರದಿಂದ ವೈಟ್‌ಫೀಲ್ಡ್‌ವರೆಗಿನ ಮೆಟ್ರೊ ರೈಲು ಮಾರ್ಗವನ್ನು ಉದ್ಘಾಟಿಸುವ ಕಾರ್ಯಕ್ರಮವಿದೆ. ಆದರೆ ಈ ಮಾರ್ಗ ಇನ್ನೂ ಅಪೂರ್ಣವಾಗಿದೆ ಹಾಗೂ ಹಿಂದಿನ ನಿಲ್ದಾಣದೊಂದಿಗೆ ಸಂಪರ್ಕವೇ ಸಾಧ್ಯವಾಗಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Actor Chetan Ahimsa : ಹಿಂದು ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್‌; ನಟ ಚೇತನ್‌ ಅಹಿಂಸಾ ಅರೆಸ್ಟ್‌
ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ನಟ ಚೇತನ್‌ ಅಹಿಂಸಾ (Actor Chetan Ahimsa) ಅವರನ್ನು ಮಂಗಳವಾರ ಮುಂಜಾನೆ ಮತ್ತೆ ಬಂಧನಕ್ಕೆ ಒಳಗಾಗಿದ್ದಾರೆ. ಅವರು ಹಿಂದು ಧರ್ವವನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದಡಿ ಸೋಮವಾರ ರಾತ್ರಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಶೇಷಾದ್ರಿಪುರಂ ಪೊಲೀಸರು ಮಂಗಳವಾರ ಬೆಳಗ್ಗಿನ ಜಾವ ಮನೆಯಿಂದ ಬಂಧಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Brave daughter : ಹಾವು ಕಡಿತಕ್ಕೆ ಒಳಗಾದ ತಾಯಿಯನ್ನು ಬಾಯಿಯಿಂದ ವಿಷ ಹೊರಗೆಳೆದು ರಕ್ಷಿಸಿದ ಮಗಳು
ತಾಯಿಗೆ ವಿಷದ ಹಾವು ಕಚ್ಚಿದ ಸಂದರ್ಭದಲ್ಲಿ ಮಗಳು ಧೃತಿಗೆಡದೆ, ಆ ವಿಷವನ್ನು ಚೀಪಿ ಹೊರ ತೆಗೆದು ಸಿನಿಮೀಯ ರೀತಿಯಲ್ಲಿ ಅಮ್ಮನನ್ನು ರಕ್ಷಿಸಿದ ಘಟನೆ (Brave daughter) ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಸಾಹಸ ಮೆರೆದ ಯುವತಿಗೆ ಸಾರ್ವಜನಿಕ ವಲಯದಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದ್ದು, ತಾಯಿಗೆ ಮರು ಜನ್ಮ ನೀಡಿದ ಮಗಳು ಎಂದು ಜನರು ಕೊಂಡಾಡುತ್ತಿದ್ದಾರೆ. ಮತ್ತಷ್ಟು ವೈರಲ್‌ ನ್ಯೂಸ್‌ಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. Rupert Murdoch: 92ನೇ ವಯಸ್ಸಲ್ಲಿ ಕೊನೇ ಪ್ರೀತಿ ಕಂಡುಕೊಂಡ ಮಾಧ್ಯಮ ಉದ್ಯಮಿ ರೂಪರ್ಟ್ ಮುರ್ಡೋಕ್; ಶೀಘ್ರದಲ್ಲೇ 5ನೇ ಮದುವೆ
  2. WPL 2023: ಸೋಲಿನೊಂದಿಗೆ ಅಭಿಯಾನ ಮುಗಿಸಿದ ಆರ್​ಸಿಬಿ
  3. Pathaan Film: ಒಟಿಟಿಯಲ್ಲೂ ತೆರೆಕಾಣಲು ಸಜ್ಜಾಗಿದೆ ಪಠಾಣ್​​; ಅಮೇಜಾನ್​ ಪ್ರೈಮ್​​ನಲ್ಲಿ ಈ ದಿನಾಂಕದಂದು ಬಿಡುಗಡೆ
  4. BJP Important Party: ಜಗತ್ತಿನಲ್ಲೇ ಬಿಜೆಪಿ ಪ್ರಮುಖ ಪಕ್ಷ, 2024ರಲ್ಲೂ ಗೆಲುವು; ವಾಲ್‌ಸ್ಟ್ರೀಟ್‌ ಜರ್ನಲ್‌ ವರದಿ
  5. ಪಾಟ್ನಾ ರೈಲ್ವೆ ಸ್ಟೇಶನ್​​ನಲ್ಲಿ ಅಶ್ಲೀಲ ವಿಡಿಯೊ ಪ್ರಸಾರ ಆಗಿದ್ದಕ್ಕೆ ಫುಲ್ ಖುಷಿಯಾದ ಪೋರ್ನ್​ ಸ್ಟಾರ್​; ಅದು ನಂದೇ ಎಂದ ಕೇಂದ್ರಾ ಲಸ್ಟ್​
  6. Tipu Sultan: ಕಾಂಗ್ರೆಸ್ ನನ್ನನ್ನು ನಂಜೇಗೌಡರಿಗೆ ಹೋಲಿಕೆ ಮಾಡಿರುವುದು ಹೆಮ್ಮೆಯ ವಿಚಾರ: ಸಿ.ಟಿ. ರವಿ
Continue Reading

ದೇಶ

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

Viral Video: ಬಾಡಿದ ತರಕಾರಿಯನ್ನು ರಾಸಾಯನಿಕಯುಕ್ತ ನೀರಿನಲ್ಲಿ ಮುಳುಗಿಸಿ, ಅದನ್ನು ಫ್ರೆಶ್‌ ಆಗಿ ಮಾಡಲಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದೇ ಹೇಳಲಾಗುತ್ತಿದೆ.

VISTARANEWS.COM


on

Edited by

Man Dips Leafy Vegetables In Chemical Solution Here is a video
Koo

ನವದೆಹಲಿ: ಸಾಯಂಕಾಲ ಕಚೇರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ, ವಾಕಿಂಗ್‌ ಮುಗಿಸಿ ಹಿಂತಿರುಗುವಾಗ, ಹೆಂಡತಿ ಒತ್ತಾಯ ಮಾಡಿದಳೋ ಎಂದು ಮನೆಗೆ ತರಕಾರಿ ತೆಗೆದುಕೊಂಡು ಹೋಗುತ್ತೀರಿ. ತರಕಾರಿ ಮಾರುವವರೂ ಅಷ್ಟೇ, ಈಗಷ್ಟೇ ತೋಟದಿಂದ ಮಾರುಕಟ್ಟೆಗೆ ಬಂದಿದೆ, ತರಕಾರಿ ಫ್ರೆಶ್‌ ಇದೆ ಎಂದು ಕೊಡುತ್ತಾರೆ. ನೀವೂ ನೋಡುತ್ತೀರಿ, ಫ್ರೆಶ್‌ ಇರುವುದನ್ನು ದೃಢಪಡಿಸಿಕೊಳ್ಳುತ್ತೀರಿ ಹಾಗೂ ಖರೀದಿಸುತ್ತೀರಿ. ಆದರೆ, ಹುಷಾರ್‌, ಬಹುತೇಕ ಸಂದರ್ಭಗಳಲ್ಲಿ ನೀವು ಖರೀದಿಸಿದ ತರಕಾರಿ ನೈಸರ್ಗಿಕವಾಗಿ ಫ್ರೆಶ್‌ ಆಗಿದ್ದಲ್ಲ, ಅದು ರಾಸಾಯನಿಕದಿಂದ (Viral Video) ಫ್ರೆಶ್‌ ಆಗಿರುತ್ತದೆ.

ಹೌದು, ಬೆಳಗ್ಗೆಯೇ ಮಾರುಕಟ್ಟೆಗೆ ಬಂದ, ಸಂಜೆಯಾಗುತ್ತಲೇ ಬಾಡಿದ ತರಕಾರಿಯನ್ನು ಫ್ರೆಶ್‌ ಆಗಿ ಕಾಣುವ, ಯಾರು ನೋಡಿದರೂ, ಒಂದೇ ನೋಟಕ್ಕೆ ಖರೀದಿಸುವ ರೀತಿಯಲ್ಲಿ ಕೆಮಿಕಲ್‌ ಮಿಶ್ರಿತ ನೀರಿನಲ್ಲಿ ಮುಳುಗಿಸಿ ತೆಗೆಯಲಾಗುತ್ತದೆ. ರಾಸಾಯನಿಕದ ಪರಿಣಾಮದಿಂದಾಗಿ, ಯಾವುದೇ ಬಾಡಿದ ಸೊಪ್ಪು, ತರಕಾರಿ ಫ್ರೆಶ್‌ ಆಗಿ ಕಾಣುತ್ತದೆ. ಹೀಗೆ ರಾಸಾಯನಿಕದಿಂದ ತರಕಾರಿಯನ್ನು ಫ್ರೆಶ್‌ ಆಗಿ ಮಾಡುವ ವಿಡಿಯೊವನ್ನು ಅಮಿತ್‌ ತಧಾನಿ ಎಂಬುವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ವಿಡಿಯೊ ವೈರಲ್‌ ಆಗಿದೆ.

ಇಲ್ಲಿದೆ ಭಯಾನಕ ವಿಡಿಯೊ

ಪೂರ್ತಿಯಾಗಿ ಬಾಡಿದ, ತಿನ್ನಲು ಸಾಧ್ಯವಾಗದ ತರಕಾರಿಯನ್ನು ಮಾರಾಟಗಾರರು ರಾಸಾಯನಿಕದಲ್ಲಿ ಮುಳುಗಿಸಿ ತೆಗೆಯುತ್ತಾರೆ. ಕೆಲವೇ ಸೆಕೆಂಡ್‌ಗಳಲ್ಲಿ ಆ ತರಕಾರಿ ಹಸಿರಾಗಿ, ತಾಜಾ ತರಕಾರಿಯಂತೆ ಕಾಣುತ್ತದೆ. ಇಂತಹ ತರಕಾರಿಯನ್ನು ತಿಂದರೆ, ರಾಸಾಯನಿಕ ದೇಹ ಸೇರಿ ಅನಾರೋಗ್ಯಕ್ಕೀಡಾಗುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ. ಹಾಗಾಗಿ, ತರಕಾರಿ ಖರೀದಿಸುವಾಗ ಜನ ಎಚ್ಚರಿಕೆಯಿಂದ ಇರಬೇಕು ಎಂದೂ ಸಲಹೆ ನೀಡಲಾಗುತ್ತಿದೆ. ಆದರೆ, ಯಾವುದೇ ತರಕಾರಿಯನ್ನು ರಾಸಾಯನಿಕಯುಕ್ತವೋ, ಅಲ್ಲವೋ ಎಂಬುದನ್ನು ಹೇಗೆ ಗುರುತಿಸಬೇಕು ಎಂಬುದೇ ಗೊಂದಲ ಮೂಡಿಸಿದೆ.

ಅಮಿತ್‌ ತಧಾನಿ ಅವರು ಶೇರ್‌ ಮಾಡಿದ ವಿಡಿಯೊವನ್ನು 4.76 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ. ನೂರಾರು ಜನ ಪ್ರತಿಕ್ರಿಯಿಸಿದ್ದಾರೆ. “ಇದು ತುಂಬ ಭಯ ಹುಟ್ಟಿಸುವ ವಿಡಿಯೊ. ಇಂತಹ ನಕಲಿ ತರಕಾರಿಯನ್ನು ಗುರುತಿಸುವುದು ಹೇಗೆ? ಸಾಮಾನ್ಯವಾಗಿ ಮನೆಯಲ್ಲಿ ತರಕಾರಿಯನ್ನು ತೊಳೆದು ಅಡುಗೆ ಮಾಡುತ್ತೇವೆ. ಆದರೆ, ಇನ್ನು ಮುಂದೆ ಸಾಬೂನು ಹಾಕಿ ತೊಳೆಯಬೇಕೆ” ಎಂಬುದಾಗಿ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ತರಕಾರಿ ಯಾವುದರಲ್ಲಿ ತೊಳೆಯಬೇಕು?

ಮತ್ತೊಬ್ಬರು ಪ್ರತಿಕ್ರಿಯಿಸಿ, “ನಿಮಗೆ ಪರಿಚಯ ಇದ್ದವರಲ್ಲಿ ಮಾತ್ರ ತರಕಾರಿ ಖರೀದಿಸಿ. ಅದನ್ನೂ ಮನೆಗೆ ತಂದಾಗ ಚೆನ್ನಾಗಿ ತೊಳೆಯಿರಿ. ಮನೆಯಲ್ಲಿ ಸ್ವಲ್ಪ ಜಾಗವಿದ್ದರೂ ನೀವೇ ತರಕಾರಿ ಬೆಳೆಯಿರಿ. ಇದರಿಂದ ಆರೋಗ್ಯ ಸುಧಾರಿಸುತ್ತದೆ” ಎಂದು ಸಲಹೆ ನೀಡಿದ್ದಾರೆ. ಇದುವರೆಗೆ ರಾಸಾಯನಿಕ ಬಳಸಿ ಬಾಳೆ ಸೇರಿ ಹಲವು ರೀತಿಯ ಕಾಯಿಗಳನ್ನು ಹಣ್ಣು ಮಾಡಲಾಗುತ್ತಿತ್ತು. ಈಗ ತರಕಾರಿಗೂ ಇದೇ ಪದ್ಧತಿ ರೂಢಿಯಾಗಿರುವುದು ಜನರ ಆತಂಕ ಹೆಚ್ಚಿಸಿದೆ.

ಇದನ್ನೂ ಓದಿ: Viral Video : ಮಾರುದ್ದದ ವಿಷಕಾರಿ ಹಾವನ್ನು ಕೈನಲ್ಲಿ ಹಿಡಿದು ವಿಡಿಯೊ ಮಾಡಿದ ವ್ಯಕ್ತಿ; ಇಲ್ಲಿದೆ ನೋಡಿ ವೈರಲ್‌ ವಿಡಿಯೊ

Continue Reading

ಗ್ಯಾಜೆಟ್ಸ್

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

ಭಾರತೀಯ ಮಾರುಕಟ್ಟೆಗೆ ಮತ್ತೊಂದು ಹೊಸ ಲ್ಯಾಪ್‌ಟಾಪ್ ಲಾಂಚ್ ಆಗಿದೆ. ಸಾಕಷ್ಟು ಹೊಸ ಫೀಚರ್ಸ್‌ಗಳೊಂದಿಗೆ HP Pavilion Aero 13 ಲ್ಯಾಪ್‌ಟ್ಯಾಪ್ ಗಮನ ಸೆಳೆಯುತ್ತಿದೆ.

VISTARANEWS.COM


on

Edited by

HP Pavilion Aero 13 Laptop Launched and Check details
Koo

ಬೆಂಗಳೂರು: ಎಚ್‌ಪಿ ಕಂಪನಿಯು ಭಾರತದಲ್ಲಿ ತನ್ನ ಹೊಸ ಪೆವಿಲಿಯನ್ ಏರೋ 13 (HP Pavilion Aero 13) ಲ್ಯಾಪ್‌ಟ್ಯಾಪ್‌ಗಳನ್ನು ಮಂಗಳಾರ ಬಿಡುಗಡೆ ಮಾಡಿದೆ. ಶಕ್ತಿಯುತ ಕಾರ್ಯಕ್ಷಮತೆಗಾಗಿ AMD Ryzen™ 7 ಪ್ರೊಸೆಸರ್ ಮತ್ತು Radeon™ ಗ್ರಾಫಿಕ್ಸ್‌ ಒಳಗೊಂಡಿದೆ. GenZ ಮತ್ತು ಈ ಸಹಸ್ರಮಾನದ ಆಧುನಿಕ ಗ್ರಾಹಕರಿಗಾಗಿ ಈ ಸಾಧನವನ್ನು ನಿರ್ಮಿಸಲಾಗಿದೆ. ಯಾವುದೇ ಸಮಯ ಅಥವಾ ಸ್ಥಳದಲ್ಲಿ ಉತ್ಪಾದಕವಾಗಿ ಕೆಲಸ ಮಾಡಲು ಮತ್ತು ಕಲಿಯಲು ಅನುವು ಮಾಡಿಕೊಡುತ್ತದೆ.

ಆಧುನಿಕ ಜಗತ್ತಿನಲ್ಲಿ, ಬಹುಮುಖವಾದ ಹಲವು ಕಾರ್ಯಗಳನ್ನು ಮಾಡಬಲ್ಲ, ಕೆಲಸ ಮತ್ತು ಕಲಿಕೆ ಎರಡನ್ನೂ ನಿಭಾಯಿಸಬಲ್ಲ ಸಾಧನಗಳನ್ನು ಗ್ರಾಹಕರು ಅರಸುತ್ತಿರುತ್ತಾರೆ. ಹೈಬ್ರಿಡ್ ಕಾರ್ಯಶೈಲಿಗೆ ಸರಿಹೊಂದುವಂತೆ ಈ ಸಾಧನಗಳು ಹಗುರವಾಗಿರಬೇಕು ಮತ್ತು ಯುವ ಪೀಳಿಗೆಯ ಆದ್ಯತೆಗಳನ್ನು ಪೂರೈಸುವಂತೆ ಆಕರ್ಷಕವಾಗಿರಬೇಕು. ಹೊಚ್ಚ-ಹೊಸ HP ಪೆವಿಲಿಯನ್ ಏರೋ 13 ಲ್ಯಾಪ್‌ಟಾಪ್ Wi-Fi6 ಜತೆಗೆ ವೇಗದ ಮತ್ತು ವಿಶ್ವಾಸಾರ್ಹ ಸಂಪರ್ಕವನ್ನು ಹೊಂದಿದೆ. 10.5 ಗಂಟೆಗಳವರೆಗೆ ಬ್ಯಾಟರಿ ಬಾಳಿಕೆ ಇದ್ದು, ಯಾವುದೇ ಸ್ಥಳದಿಂದ ಕೆಲಸ, ಬ್ರೌಸಿಂಗ್ ಮತ್ತು ಸ್ಟ್ರೀಮಿಂಗ್ ಮಾಡಲು ಸೂಕ್ತವಾಗಿದೆ.

400 ನಿಟ್ಸ್ ಪ್ರಕಾಶಮಾನವಾದ ಮತ್ತು 16:10 ಆಕಾರ ಅನುಪಾತದಗ ಸ್ಕ್ರೀನ್ ಬಳಕೆದಾರರಿಗೆ ತಲ್ಲೀನಗೊಳಿಸುವ ವೀಕ್ಷಣೆಯ ಅನುಭವವನ್ನು ನೀಡುತ್ತದೆ. HP ಪೆವಿಲಿಯನ್ ಏರೋ 13 ಕೇವಲ 970 ಗ್ರಾಂ ಭಾರವಿದ್ದು, GenZ ಗಳು ಮತ್ತು ಈ ಸಹಸ್ರಮಾನದ ಯುವಜನರಿಗೆ ಪೋರ್ಟಬಿಲಿಟಿಯನ್ನು ಸಕ್ರಿಯಗೊಳಿಸುತ್ತದೆ. ಇದು ಅವರ ಶೈಲಿ ಮತ್ತು ಜೀವನಶೈಲಿಗೆ ಹೊಂದಿಕೊಳ್ಳಲು ಮೂರು ವಿಶಿಷ್ಟ ಬಣ್ಣಗಳಲ್ಲಿದೆ – ಪೇಲ್ ರೋಸ್ ಗೋಲ್ಡ್, ವಾರ್ಮ್ ಗೋಲ್ಡ್ ಮತ್ತು ನ್ಯಾಚುರಲ್ ಸಿಲ್ವರ್.

HP ಇಂಡಿಯಾ ಪರ್ಸನಲ್ ಸಿಸ್ಟಮ್ಸ್ ಹಿರಿಯ ನಿರ್ದೇಶಕ ವಿಕ್ರಮ್ ಬೇಡಿ ಮಾತನಾಡಿ, “ಪಿಸಿಗಳು ಹೈಬ್ರಿಡ್ ಪರಿಸರದಲ್ಲಿ ಜನರ ಜೀವನದ ಪ್ರಮುಖ ಅಂಶಗಳಾಗುತ್ತಿವೆ. ಆಧುನಿಕ ಜಗತ್ತಿನಲ್ಲಿ ಬಹುಮುಖ ಮತ್ತು ಶಕ್ತಿಯುತ ಕಂಪ್ಯೂಟಿಂಗ್ ಪರಿಹಾರಗಳಿಗಾಗಿ ವೃದ್ಧಿಸುತ್ತಿರುವ ಬೇಡಿಕೆಯನ್ನು ಪೂರೈಸಲು HP ವಿನ್ಯಾಸಗೊಳಿಸಿದ ಹೊಸ ಪೆವಿಲಿಯನ್ ಏರೋ 13 ಲ್ಯಾಪ್‌ಟಾಪ್ ಪರಿಚಯಿಸಲು ನಾವು ಹೆಮ್ಮೆಪಡುತ್ತೇವೆ. ಇದು ಅಸಾಧಾರಣ ಕಾರ್ಯಕ್ಷಮತೆ ಮತ್ತು ಚಲನಶೀಲತೆಯನ್ನು ನೀಡುತ್ತದೆ, ಬಳಕೆದಾರರು ಪ್ರಯಾಣಿಸುತ್ತಿರುವಾಗಲೂ ಉತ್ಪಾದಕವಾಗಿರಲು ಮತ್ತು ಮನೋರಂಜನೆಯನ್ನು ಪಡೆಯಲು ಅನುವು ಮಾಡಿಕೊಡುತ್ತದೆ. HP ಪೆವಿಲಿಯನ್ ಏರೋ 13 ಆಕರ್ಷಕವಾದ ಪ್ರೀಮಿಯಂ ಲ್ಯಾಪ್‌ಟಾಪ್ ಆಗಿದೆ. ಕೆಲಸ ಮತ್ತು ಗೇಮಿಂಗ್ – ಎರಡೂ ವಿಷಯಗಳಲ್ಲಿ ಬಳಕೆದಾರರಿಗೆ ಅಸಾಧಾರಣವಾಗಿ ಆಪ್ತವಾಗುತ್ತದೆ.

ಹೈಬ್ರಿಡ್ ಪರಿಸರಕ್ಕೆ ಅನುಗುಣವಾಗಿ ಉನ್ನತ ದರ್ಜೆಯ ಕಾರ್ಯಕ್ಷಮತೆಯನ್ನು ನೀಡುವಂತೆ ಹಗುರವಾದ ಆದರೆ ಶಕ್ತಿಶಾಲಿಯಾದ HP ಪೆವಿಲಿಯನ್ ಏರೋ 13 ರೂಪಿಸಲಾಗದೆ. ಕೆಲಸ ಮಾಡಲು ಅಥವಾ ಸ್ನೇಹಿತರ ಜತೆಗೆ ಸ್ಪಷ್ಟವಾದ ವೀಡಿಯೋ ಕರೆಗಳನ್ನು ಮಾಡಲು ಮತ್ತು ಅನಗತ್ಯವಾದ ಹಿನ್ನೆಲೆಯ ಗದ್ದಲವನ್ನು ನಿವಾರಿಸುವ ಸೌಕರ್ಯವನ್ನು ಹೊಂದಿದೆ. 100% sRGB ಸಹಿತವಾದ ವಿಶಾಲವಾದ ಕಲರ್‌ ಪ್ಯಾಲೆಟ್ ವೆಬ್‌ನಲ್ಲಿ ಸರ್ಫ್ ಮಾಡುವಾಗ ಮತ್ತು ವೀಡಿಯೋಗಳನ್ನು ಸ್ಟ್ರೀಮ್ ಮಾಡುವಾಗ ಹೆಚ್ಚು ರೋಮಾಂಚಕ ಚಿತ್ರಗಳ ವೀಕ್ಷಣೆಗೆ ಅವಕಾಶ ಮಾಡಿಕೊಡುತ್ತದೆ. ಫ್ಲಿಕರ್-ರಹಿತವಾದ ಪರದೆಯು ದಿನವಿಡೀ ಕೆಲಸ ಮಾಡಲು ಮತ್ತು ರಾತ್ರಿಯಿಡೀ ಆಟವಾಡಲು ಸೌಕರ್ಯ ನೀಡುವುದು HP ಪೆವಿಲಿಯನ್ ಏರೋ ವಿಶೇಷತೆಯಾಗಿದೆ. ಹೆಚ್ಚುವರಿಯಾಗಿ, 2.5k ರೆಸಲ್ಯೂಶನ್ ಸ್ಕ್ರೀನ್ ಮೇಲೆ ತೀಕ್ಷ್ಣವಾದ ಚಿತ್ರಗಳು ಮತ್ತು ಪಠ್ಯಗಳನ್ನು ಮೂಡಿಸುತ್ತದೆ. ಇದನ್ನು 4-ಬದಿಗಳ ಕಿರಿದಾದ ಅಂಚಿನ ಸ್ಕ್ರೀನ್ ವೀಕ್ಷಣೆಗೆ ಇರುವ ಎಲ್ಲ ಅಡ್ಡಿಗಳನ್ನೂ ನಿವಾರಿಸುತ್ತದೆ.

ಸುಸ್ಥಿರತೆ ಮತ್ತು ಪರಿಸರ ರಕ್ಷಣೆಗೆ HP ಯ ಬದ್ಧತೆಗೆ ಅನುಗುಣವಾಗಿ HP ಪೆವಿಲಿಯನ್ ಏರೋ 13 ವಿನ್ಯಾಸಗೊಳಿಸಲಾಗಿದೆ. ಗ್ರಾಹಕರು ಬಳಸಿದ ಮರುಬಳಕೆಯ ಮತ್ತು ಸಾಗರದಿಂದ ಸಂಗ್ರಹಿಸಿದ ಪ್ಲಾಸ್ಟಿಕ್‌ನಿಂದ ನಿರ್ಮಿಸಲಾಗಿದೆ. VOC ಹೊರಸೂಸುವಿಕೆ ತಗ್ಗಿಸಲು ನೀರು-ಆಧಾರಿತ ಬಣ್ಣವನ್ನು ಬಳಸಲಾಗಿದೆ.

HP ಪೆವಿಲಿಯನ್ ಏರೋ 13 ವಿಶೇಷತೆಗಳೇನು?

ಡಿಸ್‌ಪ್ಲೇ ಹೇಗಿದೆ?

• 16:10 ಆಕಾರ ಅನುಪಾತದೊಂದಿಗೆ HP ಯ ಪ್ರಥಮ ಪೆವಿಲಿಯನ್ ಲ್ಯಾಪ್‌ಟಾಪ್
• ತಡೆರಹಿತ ಬ್ರೌಸಿಂಗ್ ಅನುಭವಕ್ಕಾಗಿ 400 ನಿಟ್‌ಗಳಷ್ಟು ಪ್ರಕಾಶಮಾನ ಡಿಸ್‌ಪ್ಲೇ
• ಫ್ಲಿಕರ್-ರಹಿತ ಪರದೆ
• ವೀಕ್ಷಣೆಯ ಅಡ್ಡಿಗಳನ್ನು ನಿವಾರಿಸಲು 4-ಬದಿ ಕಿರಿದಾದ ಅಂಚಿನ ಡಿಸ್‌ಪ್ಲೇ
• ತೀಕ್ಷ್ಣವಾದ ಚಿತ್ರಗಳು ಮತ್ತು ಪಠ್ಯಕ್ಕಾಗಿ 2.5k ರೆಸಲ್ಯೂಶನ್
• ಬಿಸಿಲಿನಲ್ಲೂ ಬ್ರೌಸಿಂಗ್ ಮಾಡುವುದಕ್ಕಾಗಿ 400 ನಿಟ್ಸ್ ಪ್ರಕಾಶ
• 100% sRGB ಯೊಂದಿಗೆ ವಿಶಾಲ ಕಲರ್ ಪ್ಯಾಲೆಟ್

ಕಾರ್ಯಕ್ಷಮತೆ

• ಸುಗಮ ಕಾರ್ಯಕ್ಷಮತೆಗಾಗಿ AMD Ryzen™ 7000 ಸರಣಿಯ ಪ್ರೊಸೆಸರ್, Radeon™ ಗ್ರಾಫಿಕ್ಸ್
• Wi-Fi 6 ಜೊತೆಗೆ ವಿಶ್ವಾಸಾರ್ಹ ಮತ್ತು ವೇಗದ ಸಂಪರ್ಕ
• ತಡೆರಹಿತ ಕಲಿಕೆ ಮತ್ತು ಕೆಲಸಕ್ಕಾಗಿ 10.5 ಗಂಟೆಗಳ ಬ್ಯಾಟರಿ ಬಾಳಿಕೆ
• ಉತ್ತಮ ವೀಡಿಯೊ ಕರೆಗಳಿಗಾಗಿ AI ನಾಯ್ಸ್ ರಿಮೂವಲ್ ಸೌಕರ್ಯ
• ಕಾರ್ಯಗಳ ಬೇಡಿಕೆಯನ್ನು ನಿರ್ವಹಿಸಲು DDR5 RAM

ವಿನ್ಯಾಸ

• ಕೇವಲ 970 ಗ್ರಾಂ ಭಾರವಿದ್ದು, ಪೋರ್ಟಬಿಲಿಟಿಯನ್ನು ಖಚಿತಪಡಿಸುತ್ತದೆ.
• ಮೂರು ಬಣ್ಣಗಳಲ್ಲಿ ಲಭ್ಯವಿದೆ – ರೋಸ್ ಪೇಲ್ ಗೋಲ್ಡ್, ವಾರ್ಮ್ ಗೋಲ್ಡ್ ಮತ್ತು ನ್ಯಾಚುರಲ್ ಸಿಲ್ವರ್

ಬೆಲೆ ಮತ್ತು ಲಭ್ಯತೆ

• HP Pavilion Aero 13 (Ryzen 5 ಸಹಿತ) 72,999 ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ
• HP Pavilion Aero 13 (Ryzen 7 ಸಹಿತ) 1TB SSD 82,999 ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ.

Continue Reading

ಕರ್ನಾಟಕ

Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

ನಿರುದ್ಯೋಗಿ ಯುವಕರಿಗೆ ಮಾಸಿಕೆ ಭತ್ಯೆ ನೀಡುವ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಯನ್ನು ಮೊದಲಿಗೆ ರಾಹುಲ್‌ ಗಾಂಧಿಯವರಿಂದಲೇ ಆರಂಭಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದರು.

VISTARANEWS.COM


on

Edited by

congress says cm basavraj bommai will not get chance to contest inkarnataka election
Koo

ಬೆಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಯುವಕರಿಗೆ ಮಾಸಿಕ ನುರುದ್ಯೋಗ ಭತ್ಯೆ ನೀಡುವ ಗ್ಯಾರಂಟಿ ಯೋಜನೆಯನ್ನು ಟೀಕಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೇ ಚುನಾವಣೆ ಟಿಕೆಟ್‌ ಸಿಗುವುದು ಅನುಮಾನ ಎಂದು ಕಾಂಗ್ರೆಸ್‌ ಹೇಳಿದೆ.

ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ಮೂರು ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ ಮಾಸಿಕ ಒಂದೂವರೆ ಸಾವಿರ ರೂ. ನೀಡುವುದಾಗಿ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಘೋಷಣೆ ಮಾಡಿದ್ದರು. ಈ ಕುರಿತು ಬಾಗಲಕೋಟೆಯಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ್ದ ಬೊಮ್ಮಾಯಿ, ಈ ಯೋಜನೆಯನ್ನು ಮೊದಲಿಗೆ ರಾಹುಲ್‌ ಗಾಂಧಿಯವರಿಂದಲೇ ಆರಂಭಿಸಬೇಕು. ನಿರುದ್ಯೋಗಿಗಳಿಗೆ ಭತ್ಯೆ ಬಗ್ಗೆ ರಾಜಸ್ಥಾನ, ಛತ್ತೀಸ್‌ಗಢದಲ್ಲಿಯೂ ಹೇಳಿದ್ದರು. ಆದರೆ ಅನುಷ್ಠಾನವಾಗಿಲ್ಲ. ಅವರು ಹತಾಶರಾಗಿದ್ದಾರೆ. ಅವರಿಗೆ ಆಂತರಿಕ ಸಮೀಕ್ಷೆಯಲ್ಲಿ ಗೆಲ್ಲುವುದಿಲ್ಲ ಎಂದು ತಿಳಿದಿದೆ. ಶೇ 3-4 ರಷ್ಟು ಮತ ಗೆಲ್ಲಲು ಈ ರೀತಿಯ ಆಗಲಾರದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜಸ್ಥಾನ ಅಥವಾ ಛತ್ತೀಸ್‌ಗಢ ಅಲ್ಲ. ಕರ್ನಾಟಕದ ಜನ ಬಹಳ ಪ್ರಬುದ್ಧರಿದ್ದಾರೆ. ಯಾರು ಯಾಕೆ ಮಾತನಾಡುತ್ತಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದಿದ್ದರು.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಸ್ವತಃ ತಮಗೇ ಬಿಜೆಪಿಯ ಟಿಕೆಟ್ ಸಿಗುವ ಭರವಸೆ ಇಲ್ಲದ, ಟಿಕೆಟ್ ಸಿಕ್ಕರೂ ಗೆಲ್ಲುವ ಭರವಸೆ ಇಲ್ಲದ, ಗೆದ್ದರೂ ತಾವೇ ಸಿಎಂ ಹುರಿಯಾಳು ಎಂಬ ಭರವಸೆ ಇಲ್ಲದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನೀಡಿದ ಯುವನಿಧೀ ಯೋಜನೆಯ ಭರವಸೆಯನ್ನು ಟೀಕಿಸುವುದು ಹಾಸ್ಯಾಸ್ಪದ. ಬೊಮ್ಮಾಯಿಯವರೇ, ನೀವು ಕೈಲಾಗದವರಿರಬಹುದು, ಕಾಂಗ್ರೆಸ್‌ಗೆ ಎಲ್ಲವೂ ಸಾಧ್ಯ” ಎಂದಿದೆ.

Continue Reading
Advertisement
smartphone
ವಾಣಿಜ್ಯ10 seconds ago

Smartphone Export : ಭಾರತದಿಂದ 2 ತಿಂಗಳಲ್ಲಿ ದಾಖಲೆಯ 16,500 ಕೋಟಿ ರೂ. ಮೌಲ್ಯದ ಸ್ಮಾರ್ಟ್‌ಫೋನ್‌ ರಫ್ತು

vistara-top-10-news-siddaramaiah-constituency-confusion-continues-to-congress-first-list-on-wednesday-and-more-news
ಕರ್ನಾಟಕ6 mins ago

ವಿಸ್ತಾರ TOP 10 NEWS: ಸಿದ್ದರಾಮಯ್ಯ ಕ್ಷೇತ್ರ ಗೊಂದಲದಿಂದ, ಕೇಂದ್ರ ಸರ್ಕಾರಕ್ಕೆ 155 ಲಕ್ಷ ಕೋಟಿ ರೂ. ಸಾಲದವರೆಗಿನ ಪ್ರಮುಖ ಸುದ್ದಿಗಳಿವು

Jio True 5G service launched in 41 cities including KGF's robertsonpet
ಕರ್ನಾಟಕ14 mins ago

ಕೆಜಿಎಫ್‌ನ ರಾಬರ್ಟಸನ್ ಪೇಟೆ ಸೇರಿ 41 ನಗರಗಳಲ್ಲಿ Jio True 5G ಸೇವೆ ಶುರು

Had Kohli not appealed, he would not have applied for the post of head coach
ಕ್ರಿಕೆಟ್28 mins ago

Team India : ಕೊಹ್ಲಿ ಮನವಿ ಮಾಡದೇ ಹೋಗಿದ್ದರೆ ಹೆಡ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ​

Man Dips Leafy Vegetables In Chemical Solution, Here is a video
ದೇಶ35 mins ago

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

ಸಿನಿಮಾ41 mins ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

inflation
ವಾಣಿಜ್ಯ43 mins ago

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

Delhi team won the toss against UP and chose fielding
ಕ್ರಿಕೆಟ್44 mins ago

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

savadatti accident
ಕರ್ನಾಟಕ49 mins ago

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

HP Pavilion Aero 13 Laptop Launched and Check details
ಗ್ಯಾಜೆಟ್ಸ್51 mins ago

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ7 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ8 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!