India-Iraq trade : ತೈಲದಿಂದಾಚೆಗೂ ವ್ಯಾಪಾರ ವಿಸ್ತರಿಸಲು ಭಾರತ- ಇರಾಕ್ ಸಜ್ಜು - Vistara News

ಪ್ರಮುಖ ಸುದ್ದಿ

India-Iraq trade : ತೈಲದಿಂದಾಚೆಗೂ ವ್ಯಾಪಾರ ವಿಸ್ತರಿಸಲು ಭಾರತ- ಇರಾಕ್ ಸಜ್ಜು

ಭಾರತ ಮತ್ತು ಇರಾಕ್‌ ತೈಲದಿಂದಾಚೆಗೂ ದ್ವಿಪಕ್ಷೀಯ ವ್ಯಾಪಾರಗಳನ್ನು ವಿಸ್ತರಿಸಲು ಮುಂದಾಗಿವೆ. ( India-Iraq trade) ಎರಡು ಸುತ್ತಿನ ಮಾತುಕತೆ ನಡೆದಿದೆ.

VISTARANEWS.COM


on

oil price
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತ ಮತ್ತು ಇರಾಕ್‌ ತೈಲದಿಂದಾಚೆಗೂ ಇತರ ವಲಯಗಳಲ್ಲಿ ವ್ಯಾಪಾರ, ವಹಿವಾಟನ್ನು ಹೆಚ್ಚಿಸಲು ಉದ್ದೇಶಿಸಿವೆ. ಆರ್ಥಿಕ ಸಹಭಾಗಿತ್ವ ಮತ್ತು ತಂತ್ರಜ್ಞಾನಗಳ ವಿಚಾರದಲ್ಲಿಯೂ ಒಪ್ಪಂದ ಮಾಡಿಕೊಳ್ಳಲು ಚಿಂತನೆ ನಡೆದಿದೆ. ಬಾಗ್ದಾದ್‌ನಲ್ಲಿ ಉಭಯ ದೇಶಗಳ ವಿದೇಶಾಂಗಮಟ್ಟದ ಕಚೇರಿ ಮಟ್ಟದಲ್ಲಿ (India-Iraq trade) ಎರಡನೇ ಸುತ್ತಿನ ಮಾತುಕತೆ ನಡೆದಿದೆ. ಭಾರತೀಯ ನಿಯೋಗದ ನೇತೃತ್ವವನ್ನು ರಾಯಭಾರ ಕಚೇರಿಯ ಹಿರಿಯ ಅಧಿಕಾರಿ ಔಸುಫ್‌ ಸಯೀದ್‌ ಹಾಗೂ ಇರಾಕ್‌ ನಿಯೋಗದ ನೇತೃತ್ವವನ್ನು ಹಿಶಾಮ್‌ ಅಲ್ವಾಯಿ ವಹಿಸಿದ್ದರು.

ಉಭಯ ಬಣಗಳು ಸೌಹಾರ್ದಯುತ ಹಾಗೂ ಸಾಂಪ್ರದಾಯಿಕ ಬಾಂಧವ್ಯವನ್ನು ಸ್ಮರಿಸಿವೆ. ಜತೆಗೆ ಆರ್ಥಿಕತೆ, ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಅಭಿವೃದ್ಧಿ ವಿಚಾರಗಳಲ್ಲಿ ಪಾಲುದಾರಿಕೆಗೆ ಮುಂದಿನ ಹಂತದ ಮಾತುಕತೆ ನಡೆಸಲು ನಿರ್ಧರಿಸಿವೆ. ತೈಲ, ಅನಿಲ, ಮೂಲಸೌಕರ್ಯ, ಆರೋಗ್ಯ, ವಿದ್ಯುತ್‌, ಸಾರಿಗೆ, ಕೃಷಿ, ಜಲ ನಿರ್ವಹಣೆ, ಔಷಧ, ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೂಡಿಕೆಗೆ ಎರಡೂ ದೇಶಗಳು ಮುಂದಾಗಿವೆ.

ಕಳೆದ 2021-22ರಲ್ಲಿ 34 ಶತಕೋಟಿ ಡಾಲರ್‌ ಮೌಲ್ಯದ (ಅಂದಾಜು 2.78 ಲಕ್ಷ ಕೋಟಿ ರೂ.) ಮೌಲ್ಯದ ದ್ವಿಪಕ್ಷೀಯ ವಹಿವಾಟನ್ನು ಉಭಯ ರಾಷ್ಟ್ರಗಳು ನಡೆಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup : ಕೊಹ್ಲಿಯನ್ನು ಎದುರಿಸಲು ಪ್ಲ್ಯಾನ್​ ರೆಡಿ ಇದೆ ಎಂದ ಬಾಬರ್ ಅಜಮ್​

T20 World Cup: ಪಾಕಿಸ್ತಾನ ವಿರುದ್ಧ 16 ಏಕದಿನ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 52.15ರ ಸರಾಸರಿಯಲ್ಲಿ 678 ರನ್ ಗಳಿಸಿದ್ದಾರೆ. ಟಿ20ಐನಲ್ಲಿ ಪಾಕಿಸ್ತಾನ ವಿರುದ್ಧ ಕೊಹ್ಲಿಯ ಪ್ರಾಬಲ್ಯವು ಪರಿಣಾಮಕಾರಿಯಾಗಿದೆ. ಅವರು 10 ಪಂದ್ಯಗಳಲ್ಲಿ 81.33 ಸರಾಸರಿಯಲ್ಲಿ 488 ರನ್ ಗಳಿಸಿದ್ದಾರೆ ಮತ್ತು ಐದು ಅರ್ಧಶತಕಗಳೊಂದಿಗೆ 123.85 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

VISTARANEWS.COM


on

t20 world cup
Koo

ಬೆಂಗಳೂರು: ಆಧುನಿಕ ಯುಗದ ಶ್ರೇಷ್ಠ ಬ್ಯಾಟರ್​ಗಳಲ್ಲಿ ಒಬ್ಬರಾಗಿರುವ ವಿರಾಟ್ ಕೊಹ್ಲಿ ಯಾವಾಗಲೂ ಪಾಕಿಸ್ತಾನ ವಿರುದ್ಧ ಅದ್ಭುತ ಪ್ರದರ್ಶನ ನೀಡುತ್ತಾರೆ. ಹೀಗಾಗಿ ಅವರಿಗಾಗಿ ವಿಶೇಷ ರಣ ತಂತ್ರ ರೂಪಿಸುತ್ತಿದ್ದಾರೆ. ಕೊಹ್ಲಿ ಸಾಂಪ್ರದಾಯಿಕ ಎದುರಾಳಿಗಳ ವಿರುದ್ಧ ಇನ್ನೂ ಟೆಸ್ಟ್ ಪಂದ್ಯಗಳನ್ನು ಆಡಿಲ್ಲ. ಆದರೆ, ವೈಟ್-ಬಾಲ್ ಸ್ವರೂಪಗಳಲ್ಲಿ ಅದ್ಭುತ ದಾಖಲೆ ಹೊಂದಿದ್ದಾರೆ. ಹಾಗೆಯೇ ಮುಂದಿನ ಟಿ20 ವಿಶ್ವ ಕಪ್​ನಲ್ಲಿಯೂ (T20 World Cup) ಪಾರಮ್ಯ ಸಾಧಿಸುವ ಯೋಜನೆ ಹೊಂದಿದ್ದಾರೆ.

ಪಾಕಿಸ್ತಾನ ವಿರುದ್ಧ 16 ಏಕದಿನ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 52.15ರ ಸರಾಸರಿಯಲ್ಲಿ 678 ರನ್ ಗಳಿಸಿದ್ದಾರೆ. ಟಿ20ಐನಲ್ಲಿ ಪಾಕಿಸ್ತಾನ ವಿರುದ್ಧ ಕೊಹ್ಲಿಯ ಪ್ರಾಬಲ್ಯವು ಪರಿಣಾಮಕಾರಿಯಾಗಿದೆ. ಅವರು 10 ಪಂದ್ಯಗಳಲ್ಲಿ 81.33 ಸರಾಸರಿಯಲ್ಲಿ 488 ರನ್ ಗಳಿಸಿದ್ದಾರೆ ಮತ್ತು ಐದು ಅರ್ಧಶತಕಗಳೊಂದಿಗೆ 123.85 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಜೂನ್ 9 ರಂದು ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ರಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಮತ್ತೊಮ್ಮೆ ತಂಡಕ್ಕಾಗಿ ಪ್ರದರ್ಶನ ನೀಡುವ ಜವಾಬ್ದಾರಿ ಕೊಹ್ಲಿ ಹೆಗಲ ಮೇಲಿದೆ. ಇದು ಪಾಕಿಸ್ತಾನ ತಂಡದ ಚಿಂತೆಯನ್ನು ಹೆಚ್ಚಳ ಮಾಡಿದೆ. ಆದರೆ, ವಿರಾಟ್​ ತಮಗೆ ಏನೂ ಆಗಿಲ್ಲ ಎಂಬುದಾಗಿ ಹೇಳಿದ್ದಾರೆ. ಜತೆಗೆ ಕೊಹ್ಲಿಗಾಗಿ ರಣ ತಂತ್ರ ರೆಡಿಯಾಗಿದೆ ಎಂಬುದಾಗಿಯೂ ನುಡಿದಿದ್ದಾರೆ.

ಎಲ್ಲರಿಗೂ ಇದೆ ಯೋಜನೆ

ಒಂದು ತಂಡವಾಗಿ ನೀವು ಯಾವಾಗಲೂ ವಿಭಿನ್ನ ತಂಡಗಳ ವಿರುದ್ಧ ಮತ್ತು ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಯೋಜಿಸುತ್ತೀರಿ. ನಾವು ಕೇವಲ ಒಬ್ಬ ಆಟಗಾರನ ವಿರುದ್ಧ ಏನನ್ನೂ ಯೋಜಿಸುವುದಿಲ್ಲ. ನಾವು ಎಲ್ಲಾ 11 ಆಟಗಾರರಿಗಾಗಿ ಯೋಜಿಸಿದ್ದೇವೆ. ನ್ಯೂಯಾರ್ಕ್​​ನ ಪರಿಸ್ಥಿತಿಗಳ ಬಗ್ಗೆ ನಮಗೆ ಹೆಚ್ಚು ತಿಳಿದಿಲ್ಲ ನಾವು ಅದಕ್ಕೆ ಅನುಗುಣವಾಗಿ ಯೋಜಿಸುತ್ತೇವೆ. ವಿರಾಟ್ ಕೊಹ್ಲಿ ಅತ್ಯುತ್ತಮ ಆಟಗಾರರಲ್ಲಿ ಒಬ್ಬರು. ನಾವು ಅವರ ವಿರುದ್ಧವೂ ಯೋಜನೆಗಳನ್ನು ಇಟ್ಟುಕೊಂಡಿದ್ದೇವೆ ಎಂದು ಐರ್ಲೆಂಡ್ ಪ್ರವಾಸಕ್ಕೆ ಮುಂಚಿತವಾಗಿ ಪತ್ರಿಕಾಗೋಷ್ಠಿಯಲ್ಲಿ ಬಾಬರ್ ಹೇಳಿದರು.

ಇದನ್ನೂ ಓದಿ: T20 World Cup : ಬುಮ್ರಾಗೆ ವಿಶ್ರಾಂತಿ ನೀಡಲು ನಿರಾಕರಿಸಿದ ಮುಂಬೈ ಇಂಡಿಯನ್ಸ್​; ವಿಶ್ವ ಕಪ್​ ಆಡಲು ಸಮಸ್ಯೆ

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ 2022 ರ ಆವೃತ್ತಿಯ ಟಿ 20 ವಿಶ್ವಕಪ್​ನ್ಲಲಿ ಪಾಕಿಸ್ತಾನ ವಿರುದ್ಧ ಭಾರತದ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಮುಂಚೂಣಿ ಪಾತ್ರ ವಹಿಸಿದ್ದರು. 160 ರನ್​ಗಳ ಗುರಿ ಬೆನ್ನತ್ತಿದ ಮೆನ್ ಇನ್ ಬ್ಲೂ ತಂಡ 6.1 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 31 ರನ್ ಗಳಿಸಿತು. ಒತ್ತಡದ ಪರಿಸ್ಥಿತಿಯ ನಡುವೆ, ಕೊಹ್ಲಿ 53 ಎಸೆತಗಳಲ್ಲಿ 82* ರನ್ ಗಳಿಸಿದ್ದರು. ಮತ್ತು ಹಾರ್ದಿಕ್ ಪಾಂಡ್ಯ (37 ಎಸೆತಗಳಲ್ಲಿ 40 ರನ್) ಅವರೊಂದಿಗೆ 113 ರನ್​ಗಳ ಜೊತೆಯಾಟವನ್ನು ಹಂಚಿಕೊಂಡಿದ್ದರು.

Continue Reading

ಪ್ರಮುಖ ಸುದ್ದಿ

Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

Lok Sabha Election 2024: ರಾಜ್ಯದ 14 ಕ್ಷೇತ್ರಗಳ ಪೈಕಿ ಚಿಕ್ಕೋಡಿ ಕ್ಷೇತ್ರದಲ್ಲಿ ಗರಿಷ್ಠ ಶೇ.72.75 ಮತದಾನವಾಗಿದ್ದು, ಕಲಬುರಗಿಯಲ್ಲಿ ಕನಿಷ್ಠ ಶೇ.57.20 ವೋಟಿಂಗ್‌ ಆಗಿದೆ.

VISTARANEWS.COM


on

Lok Sabha Election 2024
ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಹಳ್ಳಿ ಜೀವನದ ವಿಷಯಾಧಾರಿತ ಮತಗಟ್ಟೆ ಆಕರ್ಷಕವಾಗಿ ನಿರ್ಮಾಣಗೊಂಡಿದ್ದು, ಮತದಾರರ ಗಮನ ಸೆಳೆಯಿತು.
Koo

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ (lok sabha election 2024) ಮಂಗಳವಾರ ನಡೆದಿದ್ದು, ಮತದಾರರು ಉತ್ಸಾಹದಿಂದ ಹಕ್ಕು ಚಲಾವಣೆ ಮಾಡಿದ್ದಾರೆ. ಸಂಜೆ 5ಗಂಟೆವರೆಗೆ ಶೇ.66.05 ಮತದಾನ (Voter Turnout) ನಡೆದಿದೆ.

14 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದ ಮತದಾನ ಸಂಜೆ 6ಗಂಟೆವರೆಗೆ ನಡೆಯಲಿದೆ. ಬೆಳಗ್ಗೆ ಮೊದಲ ಎರಡು ಗಂಟೆಗಳಲ್ಲಿ ಅಂದರೆ 9 ಗಂಟೆವರೆಗೆ ಶೇ.9.45% ಮತದಾನ ದಾಖಲಾಗಿತ್ತು. ಬಳಿಕ 11 ಗಂಟೆಗೆ ಶೇ.24.48 ಹಾಗೂ 1 ಗಂಟೆವರೆಗೆ ಶೇ.41.59 ಮತದಾನ ವರದಿಯಾಗಿತ್ತು. ಅದೇ ರೀತಿ ಮಧ್ಯಾಹ್ನ 3ಗಂಟೆವರೆಗೆ ಶೇ.54.20 ವೋಟಿಂಗ್‌ ನಡೆದಿದೆ. ಇನ್ನು ಸಂಜೆ 5 ಗಂಟೆ ವೇಳೆಗೆ ಶೇ. 66.05 ವೋಟಿಂಗ್‌ ದಾಖಲಾಗಿದೆ. ಚಿಕ್ಕೋಡಿ ಕ್ಷೇತ್ರದಲ್ಲಿ ಗರಿಷ್ಠ ಶೇ.72.75 ಮತದಾನವಾಗಿದ್ದು, ಕಲಬುರಗಿಯಲ್ಲಿ ಕನಿಷ್ಠ ಶೇ.57.20 ವೋಟಿಂಗ್‌ ಆಗಿದೆ.

ಕ್ಷೇತ್ರವಾರು ಮತದಾನ ಮಾಹಿತಿ

ಚಿಕ್ಕೋಡಿ-ಶೇ. 72.75
ಬೆಳಗಾವಿ- ಶೇ.65.67
ಬಾಗಲಕೋಟೆ- ಶೇ.65.55
ವಿಜಯಪುರ-ಶೇ.60.95
ಕಲಬುರಗಿ- ಶೇ. 57.20
ರಾಯಚೂರು-ಶೇ.59.48
ಬೀದರ್‌- ಶೇ.60.17
ಕೊಪ್ಪಳ- ಶೇ.66.05
ಬಳ್ಳಾರಿ-ಶೇ.68.94
ಹಾವೇರಿ-ಶೇ.71.90
ಧಾರವಾಡ-ಶೇ.67.15
ಉತ್ತರ ಕನ್ನಡ – 69.57
ದಾವಣಗೆರೆ-ಶೇ.70.90
ಶಿವಮೊಗ್ಗ-72.07

ಇದನ್ನೂ ಓದಿ Lok Sabha Election 2024: ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 54.20 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು?

Continue Reading

ಪ್ರಮುಖ ಸುದ್ದಿ

School Jobs: 25 ಸಾವಿರ ಶಿಕ್ಷಕರ ವಜಾ ಆದೇಶಕ್ಕೆ ಸುಪ್ರೀಂ ತಡೆ; ಮಮತಾ ಸರ್ಕಾರಕ್ಕೆ ಚಾಟಿ

School Jobs: 2016ರಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕ ಮಾಡಲಾಗಿತ್ತು. ಈ ಪ್ರಕ್ರಿಯೆಯನ್ನು ಕೋಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿತ್ತು. ನೇಮಕಗೊಂಡ 25,753 ಮಂದಿಯನ್ನು ವಜಾಗೊಳಿಸಬೇಕು ಹಾಗೂ ಅವರು ಇದುವರೆಗೆ ಪಡೆದ ವೇತನವನ್ನು ಶೇ.12ರಷ್ಟು ಬಡ್ಡಿಯೊಂದಿಗೆ ಹಂತಿರುಗಿಸಬೇಕು ಎಂದು ಆದೇಶ ಹೊರಡಿಸಲಾಗಿತ್ತು.

VISTARANEWS.COM


on

School Jobs
Koo

ನವದೆಹಲಿ: ಪಶ್ಚಿಮ ಬಂಗಾಳದ (West Bengal) ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು (School Jobs) ಕೆಲಸದಿಂದ ವಜಾಗೊಳಿಸಬೇಕು ಎಂದು ಕೋಲ್ಕೊತಾ ಹೈಕೋರ್ಟ್‌ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್‌ (Supreme Court) ತಡೆಯಾಜ್ಞೆ ನೀಡಿದೆ. ಹಾಗೆಯೇ, ನೇಮಕಾತಿ ವೇಳೆ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಪಶ್ಚಿಮ ಬಂಗಾಳದಲ್ಲಿ ನೇಮಕಗೊಂಡ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ 25,753 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ವಜಾಗೊಳಿಸಿ ಏಪ್ರಿಲ್‌ 22ರಂದು ಕೋಲ್ಕೊತಾ ಹೈಕೋರ್ಟ್‌ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿದರು. ಹಾಗೆಯೇ, “ನೇಮಕಾತಿ ಹಗರಣದ ಕುರಿತು ಸಿಬಿಐ ತನಿಖೆ ಮುಂದುವರಿಸಿ, ಅದನ್ನು ಪೂರ್ಣಗೊಳಿಸಬೇಕು. ಅಲ್ಲಿಯವರೆಗೆ ನೇಮಕಗೊಂಡವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು” ಎಂದು ಸೂಚಿಸಿದರು.

“ಸರ್ಕಾರಿ ನೌಕರಿ ಸಿಗುವುದೇ ತುಂಬ ವಿರಳ. ಹಾಗಾಗಿ, ನೌಕರರನ್ನು ವಜಾಗೊಳಿಸಿದರೆ, ಸಾರ್ವಜನಿಕ ನಂಬಿಕೆ ಎಂಬುದೇ ಇರುವುದಿಲ್ಲ. ಇದು ವ್ಯವಸ್ಥಿತ ವಂಚನೆಯಾಗಿದೆ. ಸರ್ಕಾರಿ ಉದ್ಯೋಗವನ್ನು ಕಾನೂನು ಬಾಹಿರವಾಗಿ ಪಡೆದುಕೊಂಡರೆ, ಜನರಿಗೆ ವ್ಯವಸ್ಥೆ ಮೇಲೆ ನಂಬಿಕೆಯೇ ಇರುವುದಿಲ್ಲ. ಇನ್ನು ನೇಮಕಾತಿ ಪ್ರಕ್ರಿಯೆ ಸೇರಿ ಯಾವುದೇ ದಾಖಲೆಗಳು ಸರ್ಕಾರದ ಬಳಿ ಇಲ್ಲ. ಸರ್ಕಾರದ ಬಳಿ ದಾಖಲೆಯೇ ಇಲ್ಲ ಎಂದರೆ ಹೇಗೆ? ನೇಮಕಾತಿ ವೇಳೆ ಎಲ್ಲ ದಾಖಲೆಗಳನ್ನು ಕಂಪ್ಯೂಟರ್‌ನಲ್ಲಿ ದಾಖಲಿಸಿ ಇಡಬಹುದಿತ್ತಲ್ಲ” ಎಂದು ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಚಾಟಿ ಬೀಸಿತು.

2016ರಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕ ಮಾಡಲಾಗಿತ್ತು. ಈ ಪ್ರಕ್ರಿಯೆಯನ್ನು ಕೋಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿತ್ತು. ನೇಮಕಗೊಂಡ 25,753 ಮಂದಿಯನ್ನು ವಜಾಗೊಳಿಸಬೇಕು ಹಾಗೂ ಅವರು ಇದುವರೆಗೆ ಪಡೆದ ವೇತನವನ್ನು ಶೇ.12ರಷ್ಟು ಬಡ್ಡಿಯೊಂದಿಗೆ ಹಂತಿರುಗಿಸಬೇಕು ಎಂದು ಆದೇಶ ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಖಾಲಿ OMR ಹಾಳೆಗಳನ್ನು ಸಲ್ಲಿಸಿ, ಕಾನೂನುಬಾಹಿರವಾಗಿ ನೇಮಕಗೊಂಡ ಆರೋಪದಲ್ಲಿ ವಜಾಗೊಂಡ ಶಾಲಾ ಶಿಕ್ಷಕರು ನಾಲ್ಕು ವಾರಗಳಲ್ಲಿ ತಮ್ಮ ವೇತನವನ್ನು ಹಿಂದಿರುಗಿಸಬೇಕು ಎಂದು ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಾಕ್ ಮತ್ತು ಎಂಡಿ ಶಬ್ಬರ್ ರಶೀದಿ ಅವರ ವಿಭಾಗೀಯ ಪೀಠ ಹೇಳಿತ್ತು. ಈ ಶಿಕ್ಷಕರಿಂದ ಹಣ ವಸೂಲಿ ಮಾಡುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿತ್ತು.

ಇದನ್ನೂ ಓದಿ: Google Layoff: ಮತ್ತಷ್ಟು ಉದ್ಯೋಗ ಕಡಿತಗೊಳಿಸಿದ ಗೂಗಲ್‌; ಕಾರಣವೇನು?

Continue Reading

ಫ್ಯಾಷನ್

Akshaya Tritiya 2024: ಅಕ್ಷಯ ತೃತೀಯದಂದು ಬಂಗಾರ ಖರೀದಿಸುವವರಿಗೆ ಇಲ್ಲಿದೆ ಉಪಯುಕ್ತ ಟಿಪ್ಸ್‌

ಅಕ್ಷಯ ತೃತೀಯ (Akshaya Tritiya 2024) ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಎಲ್ಲೆಡೆ ಬೆಳ್ಳಿ-ಬಂಗಾರ ಜ್ಯುವೆಲರಿಗಳ ಶಾಪಿಂಗ್‌ ಶುರುವಾಗಿದೆ. ಬ್ರಾಂಡೆಡ್‌ ಜ್ಯುವೆಲರಿ ಶಾಪ್‌ಗಳಲ್ಲಿ ಮಾತ್ರವಲ್ಲ, ಚಿಕ್ಕ-ಪುಟ್ಟ ಅಂಗಡಿಗಳಲ್ಲೂ ಬಂಗಾರದ ಖರೀದಿದಾರರು, ಆ ದಿನದಂದೇ ಖರೀದಿಸಲು ಹಾಗೂ ಮುನ್ನವೇ ಸೆಲೆಕ್ಟ್‌ ಮಾಡಿ, ಅಡ್ವಾನ್ಸ್‌ ಬುಕ್ಕಿಂಗ್‌ ಮಾಡುವ ಕೆಲಸದಲ್ಲಿ ಮುಂದಾಗಿದ್ದಾರೆ. ಈ ಕುರಿತಂತೆ ಇಲ್ಲಿದೆ ವರದಿ.

VISTARANEWS.COM


on

Akshaya Tritiya 2024
ಚಿತ್ರಗಳು: ಮಿಂಚು
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಅಕ್ಷಯ ತೃತೀಯ (Akshaya Tritiya) ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಎಲ್ಲೆಡೆ ಬೆಳ್ಳಿ-ಬಂಗಾರದ ಆಭರಣಗಳ ಶಾಪಿಂಗ್‌ ಶುರುವಾಗಿದೆ. ಮಾಲ್‌ಗಳು ಹಾಗೂ ನಗರಗಳಲ್ಲಿರುವ ದೊಡ್ಡ ದೊಡ್ಡ ಬ್ರಾಂಡೆಡ್‌ ಜ್ಯುವೆಲರಿ ಶಾಪ್‌ಗಳಲ್ಲಿ ಮಾತ್ರವಲ್ಲ, ರಸ್ತೆಯಲ್ಲಿರುವ ಚಿಕ್ಕ-ಪುಟ್ಟ ಚಿನ್ನಾಭರಣ ಅಂಗಡಿಗಳಲ್ಲೂ ಅಕ್ಷಯ ತೃತೀಯ ಶಾಪಿಂಗ್‌ ಮೇನಿಯಾ ಹೆಚ್ಚಾಗಿದೆ. ಆ ವಿಶೇಷ ದಿನದಂದು ಬಂಗಾರ ಖರೀದಿಸಲು ಮುನ್ನವೇ ಅಡ್ವಾನ್ಸ್‌ ನೀಡಿ ಅಥವಾ ಜ್ಯುವೆಲರಿ ಬುಕ್‌ ಮಾಡುವ ಗ್ರಾಹಕರು ಇಂದು ಹೆಚ್ಚಾಗಿದ್ದಾರೆ.

Akshaya Tritiya 2024

ಅಕ್ಷಯ ತೃತೀಯದಂದು ಬಂಗಾರದ ಖರೀದಿ

ಪುರಾಣ ಕಾಲದಿಂದಲೂ ಅಕ್ಷಯ ತೃತೀಯಾದಂದು ಶುಭ ಕೆಲಸ ಮಾಡುವುದರೊಂದಿಗೆ ಬೆಳ್ಳಿ-ಬಂಗಾರ ಖರೀದ ಮಾಡುವ ಪ್ರತೀತಿ ಇದೆ. ಆ ದಿನದಂದು ಖರೀದಿಸಿದಲ್ಲಿ ಅಥವಾ ಕೊಂಡು ಮನೆಗೆ ತಂದಲ್ಲಿ, ದುಪಟ್ಟು ಆಗುವುದೆಂಬ ನಂಬಿಕೆಯಿದೆ. ಅಷ್ಟು ಮಾತ್ರವಲ್ಲ, ಅಂದು ಬಂಗಾರ ಖರೀದಿ ಮಾಡಿದರೇ, ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿಂದಾಗಿ ವರ್ಷದಿಂದ ವರ್ಷಕ್ಕೆ ಬಂಗಾರ ಖರೀದಿಸುವವರ ಸಂಖ್ಯೆ ಅಧಿಕಗೊಂಡಿದೆ ಎನ್ನುತ್ತಾರೆ ಜ್ಯುವೆಲರಿ ಮಾರಾಟಗಾರರು.

Akshaya Tritiya 2024

ಅಕ್ಷಯ ತೃತೀಯಗೆ ಚಿನ್ನದ ಶಾಪಿಂಗ್‌

ಅಕ್ಷಯಾ ತೃತೀಯದಂದು ಶ್ರೀಮಂತರಿಂದ ಹಿಡಿದು ಶ್ರೀಸಾಮಾನ್ಯರು ಕೂಡ ಚಿನ್ನ ಖರೀದಿ ಮಾಡುತ್ತಾರೆ. ಹಾಗಾಗಿ ಚಿನ್ನದ ಶಾಪಿಂಗ್‌ ಮಾಡುವವರ ಸಂಖ್ಯೆ ಮೊದಲಿಗಿಂತ ಹೆಚ್ಚಾಗತೊಡಗಿದೆ. ಇದಕ್ಕೆ ಪೂರಕ ಎಂಬಂತೆ, ಸಾಕಷ್ಟು ಆಭರಣಗಳ ಅಂಗಡಿಯವರು ಕೂಡ ಖುದ್ದು ಕರೆ ಮಾಡಿ ಅಥವಾ ಜಾಹೀರಾತಿನ ಮೂಲಕ ಈಗಾಗಲೇ ಶಾಪಿಂಗ್‌ ಮಾಡುವವರಿಗೆ ಆಹ್ವಾನ ನೀಡುತ್ತಿದ್ದಾರೆ. ಜೊತೆಗೆ ನಾನಾ ಬಗೆಯ ಆಕರ್ಷಕ ಆಫರ್‌ ಕೂಡ ನೀಡುತಿದ್ದಾರೆ. ಅದರಲ್ಲೂ ರೆಗ್ಯುಲರ್‌ ಕಸ್ಟಮರ್‌ಗಳಿಗಂತೂ ಡಿಸ್ಕೌಂಟ್ಸ್‌ ಸೇರಿದಂತೆ ಮೇಕಿಂಗ್‌ ಚಾರ್ಜ್‌ ರಹಿತ, ವೆಸ್ಟೇಜ್‌ ರಹಿತವಾದ ಬೆಲೆಯಲ್ಲಿ ನೀಡುವ ಆಫರ್‌ಗಳನ್ನು ನೀಡುತ್ತಿದ್ದಾರೆ.

Akshaya Tritiya 2024

ಜ್ಯುವೆಲರಿಗಳ ಚೀಟಿ

ಇನ್ನು, ಸಾಕಷ್ಟು ಆಭರಣ ಶಾಪ್‌ಗಳು ಪ್ರತಿ ವರ್ಷವೂ ಗ್ರಾಹಕರನ್ನು ಸೆಳೆಯಲು ನಾನಾ ಬಗೆಯ ಬಂಗಾರ ಕೊಳ್ಳಲು ಸೇವಿಂಗ್ಸ್‌ ಚೀಟಿಗಳನ್ನು ಹಾಕಿಸಿಕೊಂಡು, ವರ್ಷಕ್ಕೊಮ್ಮೆ ಅಕ್ಷಯಾ ತೃತೀಯಾದಂದು ಬೇಕಾದ ಚಿನ್ನಾಭರಣಗಳನ್ನು ಖರೀದಿಸುವ ಸೌಲಭ್ಯವನ್ನು ನೀಡಿವೆ. ಇದರೊಂದಿಗೆ ಹೊಸ ಹೊಸ ಗ್ರಾಹಕರನ್ನು ಸೆಳೆದು ಅವರನ್ನೂ ಬಂಗಾರದ ಖರೀದಿಗೆ ಪ್ರೋತ್ಸಾಹಿಸುತ್ತಿವೆ ಎನ್ನುತ್ತಾರೆ ಜ್ಯುವೆಲರಿ ಶಾಪ್‌ವೊಂದರ ಮ್ಯಾನೇಜರ್‌.

Akshaya Tritiya 2024

ಬಂಗಾರ ಖರೀದಿಗೂ ಬಂತು ಇಎಮ್‌ಐ ಸೌಲಭ್ಯ

ಚಿನ್ನ ಖರೀದಿಸಲು ಸದ್ಯ ಹಣವಿಲ್ಲ! ಆದರೆ, ಖರೀದಿಸಬೇಕು ಎನ್ನುವವರಿಗೆ, ಒಂದಿಷ್ಟು ಡೌನ್‌ ಪೇಮೆಂಟ್‌ ತೆಗೆದುಕೊಂಡು, ಉಳಿದ ಹಣವನ್ನು ಇಎಮ್‌ಐ ಮೂಲಕ ಕಟ್ಟುವ ಸೌಲಭ್ಯವನ್ನು ನೀಡುತ್ತಿವೆ. ದೊಡ್ಡ ದೊಡ್ಡ ಬ್ರಾಂಡ್‌ಗಳಲ್ಲಿ ಈ ವ್ಯವಸ್ಥೆಯನ್ನು ಕಾಣಬಹುದು ಎನ್ನುತ್ತಾರೆ ಶಾಪಿಂಗ್‌ ಎಕ್ಸ್‌ಪರ್ಟ್‌ ನೀರಜ್‌. ಅವರ ಪ್ರಕಾರ, ಇಂತಹ ಸೌಲಭ್ಯಗಳು ಇತ್ತೀಚೆಗೆ ಮಹಿಳಾ ಖರೀದಿದಾರರನ್ನು ಹೆಚ್ಚಿಸಿವೆಯಂತೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಅಕ್ಷಯ ತೃತೀಯ ಶಾಪಿಂಗ್‌ ಟಿಪ್ಸ್‌

  • ಮೊದಲೇ ಪ್ಲಾನ್‌ ಮಾಡಿ ನಂತರ ಖರೀದಿಸಿ.
  • ಸೇವಿಂಗ್ಸ್‌ ಚೀಟಿಯ ಸದುಪಯೋಗಪಡಿಸಿಕೊಳ್ಳಿ.
  • ಸೌಲಭ್ಯಗಳ ಬಗ್ಗೆ ಅರಿತು, ಖರೀದಿಸಿ.
  • ಹಾಲ್‌ಮಾರ್ಕ್‌ ನೋಡಿ ಖರೀದಿ ಮಾಡಿ.
  • ವೆಸ್ಟೇಜ್‌ಗೆ ಹೆಚ್ಚು ಹಣ ಸುರಿಯಬೇಡಿ.

( ಲೇಖಕಿ ಫ್ಯಾಷನ್‌ ಪತ್ರಕರ್ತೆ )

Continue Reading
Advertisement
t20 world cup
ಕ್ರೀಡೆ12 mins ago

T20 World Cup : ಕೊಹ್ಲಿಯನ್ನು ಎದುರಿಸಲು ಪ್ಲ್ಯಾನ್​ ರೆಡಿ ಇದೆ ಎಂದ ಬಾಬರ್ ಅಜಮ್​

Lok Sabha Election 2024
ಪ್ರಮುಖ ಸುದ್ದಿ20 mins ago

Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

School Jobs
ಪ್ರಮುಖ ಸುದ್ದಿ26 mins ago

School Jobs: 25 ಸಾವಿರ ಶಿಕ್ಷಕರ ವಜಾ ಆದೇಶಕ್ಕೆ ಸುಪ್ರೀಂ ತಡೆ; ಮಮತಾ ಸರ್ಕಾರಕ್ಕೆ ಚಾಟಿ

Karnataka Weather Forecast
ಮಳೆ29 mins ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Akshaya Tritiya 2024
ಫ್ಯಾಷನ್31 mins ago

Akshaya Tritiya 2024: ಅಕ್ಷಯ ತೃತೀಯದಂದು ಬಂಗಾರ ಖರೀದಿಸುವವರಿಗೆ ಇಲ್ಲಿದೆ ಉಪಯುಕ್ತ ಟಿಪ್ಸ್‌

T20 world Cup
ಪ್ರಮುಖ ಸುದ್ದಿ39 mins ago

T20 World Cup : ಬುಮ್ರಾಗೆ ವಿಶ್ರಾಂತಿ ನೀಡಲು ನಿರಾಕರಿಸಿದ ಮುಂಬೈ ಇಂಡಿಯನ್ಸ್​; ವಿಶ್ವ ಕಪ್​ ಆಡಲು ಸಮಸ್ಯೆ

Lok Sabha Election 2024
ಬೀದರ್‌50 mins ago

Lok Sabha Election 2024: ಭಾಲ್ಕಿಯಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಮತದಾನ

lok sabha Election 2024 Actor Rishb Shetty
Lok Sabha Election 202452 mins ago

Lok Sabha Election 2024: ಓದಿದ ಶಾಲೆಯಲ್ಲಿ ಮತ ಹಾಕಿದ ನಟ ರಿಷಬ್‌ ಶೆಟ್ಟಿ; ಕಾಂತಾರ 2 ಸೀಕ್ರೆಟ್‌ ರಿವೀಲ್‌!

Prajwal Revanna Case Victim found at relative house Not in a farmhouse Sa Ra Mahesh Explosive Information
ರಾಜಕೀಯ1 hour ago

Prajwal Revanna Case: ಸಂತ್ರಸ್ತ ಮಹಿಳೆ ಸಿಕ್ಕಿದ್ದು ಸಂಬಂಧಿಕರ ಮನೆಯಲ್ಲಿ! ತೋಟದ ಮನೆಯಲ್ಲಲ್ಲ; ಸಾ.ರಾ. ಮಹೇಶ್‌ ಸ್ಫೋಟಕ ಮಾಹಿತಿ

MS Dhoni
ಪ್ರಮುಖ ಸುದ್ದಿ1 hour ago

MS Dhoni : ಮಹೇಂದ್ರ ಸಿಂಗ್​ ಧೋನಿಗೆ ಗಾಯ, ಆಂತರಿಕ ಮಾಹಿತಿ ಬಹಿರಂಗ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ29 mins ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ23 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

ಟ್ರೆಂಡಿಂಗ್‌