JioMart: ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಧೋನಿ ಜಿಯೋಮಾರ್ಟ್‌ನ ಬ್ರಾಂಡ್ ಅಂಬಾಸಿಡರ್ Vistara News

ದೇಶ

JioMart: ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಧೋನಿ ಜಿಯೋಮಾರ್ಟ್‌ನ ಬ್ರಾಂಡ್ ಅಂಬಾಸಿಡರ್

JioMart: ಜಿಯೋ ಮಾರ್ಟ್ ಹಬ್ಬದ ಕ್ಯಾಂಪೇನ್ ಅನ್ನು ಸೆಲೆಬ್ರೇಶನ್‌ ಆಫ್‌ ಇಂಡಿಯಾ(Celebration of India) ಎಂದು ಮರುನಾಮಕರಣ ಮಾಡಿದ್ದು, ಭಾನುವಾರದಿಂದ ಲೈವ್ ಆಗಲಿದೆ.

VISTARANEWS.COM


on

JioMarth and Dhoni
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ರಿಲಯನ್ಸ್ ರಿಟೇಲ್‌ನ (Reliance Retail) ಜಿಯೋಮಾರ್ಟ್ (JioMart) ದೇಶದ ಪ್ರಮುಖ ಇ-ಮಾರ್ಕೆಟ್‌ಪ್ಲೇಸ್‌ಗಳಲ್ಲಿ (e-Market place) ಒಂದಾಗಿದ್ದು, ಭಾರತೀಯ ಕ್ರಿಕೆಟ್ ಐಕಾನ್ ಮಹೇಂದ್ರ ಸಿಂಗ್ ಧೋನಿ (mahendra singh dhoni) ಅವರನ್ನು ಬ್ರಾಂಡ್ ಅಂಬಾಸಿಡರ್ (brand ambassador) ಆಗಿ ನೇಮಿಸಿಕೊಂಡಿದೆ. ಇದರ ಜೊತೆಗೆ, ತನ್ನ ಹಬ್ಬದ ಕ್ಯಾಂಪೇನ್ ಅನ್ನು ಜಿಯೋ ಉತ್ಸವ, ಸೆಲೆಬ್ರೇಶನ್‌ ಆಫ್‌ ಇಂಡಿಯಾ(Celebration of India) ಎಂದು ಮರುನಾಮಕರಣ ಮಾಡಿದ್ದು, 2023 ಅಕ್ಟೋಬರ್ 08 ರಿಂದ ಲೈವ್ ಆಗಲಿದೆ.

ದೇಶಕ್ಕೆ ಸಂಭ್ರಮಿಸುವ ಹಲವು ಅವಕಾಶಗಳನ್ನು ಧೋನಿ ಒದಗಿಸಿದ್ದಾರೆ. ಆದರೆ, ಆ ಸಂಭ್ರಮದಲ್ಲೇ ಒಂದು ಭಾಗವಾಗಿರಲಿಲ್ಲ ಎಂಬುದು ಜಿಯೋ ಉತ್ಸವದ ಅಭಿಯಾನವಾಗಿದೆ. ಹೀಗಾಗಿ, ಹೊಸ ಹುಮ್ಮಸ್ಸನ್ನು ಹೊಂದಿರುವ ಅವರು ಖುಷಿ, ಹಬ್ಬಗಳು ಮತ್ತು ವಿಶೇಷ ಸನ್ನಿವೇಶಗಳ ಎಲ್ಲ ಕ್ಷಣಗಳನ್ನೂ ಸಂಭ್ರಮಿಸಲು ಸಿದ್ಧವಾಗಿದ್ದಾರೆ. ಧೋನಿ 45 ಸೆಕೆಂಡ್ ಫಿಲಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜಿಯೋಮಾರ್ಟ್ ಸಿಇಒ ಸಂದೀಪ್ ವರಗಂಟಿ ಹೇಳುವಂತೆ “ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿ ಎಂಎಸ್ ಧೋನಿ ಅತ್ಯಂತ ಉತ್ತಮವಾಗಿ ಹೊಂದಿಕೆಯಾಗುತ್ತಾರೆ. ಅವರ ವ್ಯಕ್ತಿತ್ವವು ಜಿಯೋಮಾರ್ಟ್ ನ ಹಾಗೆಯೇ ವಿಶ್ವಾಸ, ನಂಬಿಕೆ ಮತ್ತು ಖಾತರಿಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ಪ್ರೀತಿ ಪಾತ್ರರ ಜೊತೆಗೆ ವಿಶೇಷ ಕ್ಷಣಗಳನ್ನು ಕಳೆಯುವುದಕ್ಕೆ ನಮ್ಮ ಹೊಸ ಅಭಿಯಾನವು ಅನುವು ಮಾಡುತ್ತದೆ. ಇದರಲ್ಲಿ ಶಾಪಿಂಗ್ ಎಂಬುದು ಒಂದು ಅವಿಭಾಜ್ಯ ಅಂಗ ಎಂಬುದನ್ನು ಇದು ಪ್ರತಿಬಿಂಬಿಸುತ್ತದೆ. ಮೆಟ್ರೋ ಹೊರತಾದ ಪ್ರದೇಶಗಳು ಒಟ್ಟಾರೆ ಸೇಲ್ ನಲ್ಲಿ ಸುಮಾರು 60% ಪಾಲು ಹೊಂದಿದೆ. ಇದು ದೇಶದ ರಿಟೇಲ್ ವಲಯ ವಿಕೇಂದ್ರೀಕರಣಗೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.”

ಪ್ರಾದೇಶಿಕ ಕಲಾಕಾರರನ್ನು ಪ್ರೋತ್ಸಾಹಿಸುವ ಕೆಲಸವನ್ನು ಜಿಯೋಮಾರ್ಟ್ ಎಂದಿಗೂ ಮಾಡುತ್ತಿದೆ. ಪ್ಲಾಟ್‌ಫಾರಂ ಪ್ರಸ್ತುತ 1000 ಕ್ಕೂ ಹೆಚ್ಚು ಕಲಾಕಾರರ ಜೊತೆಗೆ ಕೆಲಸ ಮಾಡುತ್ತಿದ್ದು, 1.5 ಲಕ್ಷ ವಿಶಿಷ್ಟ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ. ಅಷ್ಟಕ್ಕೂ, ಕ್ಯಾಂಪೇನ್ ಶೂಟಿಂಗ್‌ನ ಭಾಗವಾಗಿ, ಬಿಹಾರದ ಪ್ರಶಸ್ತಿ ಪುರಸ್ಕ್ರತ ಕಲಾವಿದೆ ಅಂಬಿಕಾ ದೇವಿಯವರ ಮಧುಬನಿ ಪೇಂಟಿAಗ್ ಅನ್ನು ಧೋನಿಯವರಿಗೆ ವರಗಂಟಿ ಪ್ರದಾನ ಮಾಡಿದ್ದಾರೆ. ಗ್ರಾಹಕರಿಗೆ ಉತ್ತಮ ಉತ್ಪನ್ನಗಳು ಮತ್ತು ಉತ್ತಮ ಅನುಭವವನ್ನು ಒದಗಿಸುವುದಷ್ಟೇ ಅಲ್ಲ, ಸರಾಗವಾಗಿ ಉದ್ಯಮವನ್ನು ನಡೆಸಲು ಲಕ್ಷಾಂತರ ಕಲಾಕಾರರು ಮತ್ತು ಎಸ್‌ಎಂಬಿಗಳಿಗೆ ಅನುವು ಮಾಡಿಕೊಡುತ್ತಿದೆ.

ಈ ಸುದ್ದಿಯನ್ನೂ ಓದಿ: WhatsApp JioMart | ಇನ್ನು ವಾಟ್ಸ್ಆ್ಯಪ್‌ನಿಂದಲೇ ತರಕಾರಿ, ಹಣ್ಣು ಖರೀದಿಸಿ!

ಮಹೇಂದ್ರ ಸಿಂಗ್ ಧೋನಿ ಹೇಳುವಂತೆ “ಜಿಯೋಮಾರ್ಟ್ ನ ಮೌಲ್ಯ ಮತ್ತು ಗುರುತಿಗೂ ನನಗೂ ಹೊಂದಿಕೆಯಾಗುತ್ತದೆ. ದೇಶೀಯ ಇ-ಕಾಮರ್ಸ್ ಬ್ರಾಂಡ್ ಆಗಿರುವ ಇದು ಭಾರತದಲ್ಲಿ ಡಿಜಿಟಲ್ ರಿಟೇಲ್ ಕ್ರಾಂತಿಯನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿದ್ದಾರೆ. ಭಾರತದು ವೈವಿಧ್ಯಮ ಸಂಸ್ಕೃತಿ, ಜನರು ಮತ್ತು ಹಬ್ಬಗಳಿಗೆ ಹೆಸರಾಗಿದೆ. ಭಾರತ ಮತ್ತು ಭಾರತೀಯರ ಸಂಭ್ರಮಕ್ಕೆ ಜಿಯೋಮಾರ್ಟ್ನ ಜಿಯೋ ಉತ್ಸವವು ಹೊಸ ಆಯಾಮವನ್ನು ನೀಡಿದೆ. ಜಿಯೋಮಾರ್ಟ್ ಜೊತೆಗೆ ಗುರುತಿಸಿಕೊಳ್ಳಲು ಮತ್ತು ಲಕ್ಷಾಂತರ ಭಾರತೀಯರ ಶಾಪಿಂಗ್ ಪಯಣದ ಭಾಗವಾಗುವುದಕ್ಕೆ ನನಗೆ ಹೆಮ್ಮೆಯಾಗುತ್ತಿದೆ.”

ಜಿಯೋಮಾರ್ಟ್ ನ ವಿಭಿನ್ನ ವಿಭಾಗೀಯ ಪರಿಣಿತಿ, ಹಬ್ಬದ ಉತ್ಸಾಹ ಮತ್ತು ಅದ್ಭುತ ಶಾಪಿಂಗ್ ಡೀಲ್‌ಗಳು ಮತ್ತು ರಿಯಾಯಿತಿಗಳನ್ನು ಹೈಲೈಟ್ ಮಾಡುವಂತೆ ಫಿಲಂ ಅನ್ನು ರೂಪಿಸಲಾಗಿದೆ. ಕಳೆದ ವರ್ಷ ಜಿಯೋಮಾರ್ಟ್ ವಿವಿಧ ವಿಭಾಗಗಳಲ್ಲಿ ಲಭ್ಯವಿರುವ ಉತ್ಪನ್ನಗಳನ್ನು ಪ್ರಚಾರ ಮಾಡುವ ವಿಧಾನವನ್ನು ಅಳವಡಿಸಿಕೊಂಡಿತ್ತು. ಎಲೆಕ್ಟಾನಿಕ್ಸ್, ಫ್ಯಾಷನ್, ಬ್ಯೂಟಿ, ಮನೆ ಅಲಂಕಾರ ಸೇರಿದಂತೆ ವಿವಿಧ ವಿಭಾಗಗಳಲ್ಲಿ ರಿಲಯನ್ಸ್ ಮಾಲೀಕತ್ವದ ಬ್ರಾಂಡ್‌ಗಳನ್ನು ಜಿಯೋಮಾರ್ಟ್ ಸೇರಿಸಿಕೊಂಡಿದೆ. ಇದರಲ್ಲಿ ಅರ್ಬನ್ ಲ್ಯಾಡರ್, ರಿಲಯನ್ಸ್ ಟ್ರೆಂಡ್ಸ್, ರಿಲಯನ್ಸ್ ಜ್ಯೂವೆಲ್ಸ್, ಹ್ಯಾಮ್ಲೇಸ್ ಸೇರಿದಂತೆ ಇತರೆ ಇವೆ. ಭಾರತದ ಅತಿದೊಡ್ಡ ದೇಶೀಯ ಇ-ಮಾರ್ಕೆಟ್‌ಪ್ಲೇಸ್ ಆಗುವ ಜಿಯೋಮಾರ್ಟ್ ನ ಧ್ಯೇಯಕ್ಕೆ ಅನುಗುಣವಾಗಿ ಈ ತ್ವರಿತ ವಿಸ್ತರಣೆ ನಡೆಯುತ್ತಿದೆ.

ವಾಣಿಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಹಳೆ ಬಂಡುಕೋರ ಗುಂಪು ಯುಎನ್ಎಲ್ಎಫ್!

peace accord: 1964ರಲ್ಲಿ ಆರಂಭವಾದ ಯುಎನ್ಎಲ್ಎಫ್ ಸಶಸ್ತ್ರ ಬಂಡಾಯದಲ್ಲಿ ತೊಡಿಕೊಂಡಿತ್ತು. ಕೇಂದ್ರ ಸರ್ಕಾರವನ್ನು ಈ ಸಂಘಟನೆಯನ್ನು ನಿಷೇಧಿಸಿತ್ತು.

VISTARANEWS.COM


on

peace accord between Manipur oldest armed group UNLF and Government
Koo

ನವದೆಹಲಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಶಾಂತಿ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರವು ಮಹತ್ವದ ಯಶಸ್ಸನ್ನು ಸಾಧಿಸಿದೆ. ಮಣಿಪುರದ ಅತ್ಯಂತ ಹಳೆಯ ಉಗ್ರಗಾಮಿ ಸಂಘಟನೆಯಾದ ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್ (United National Liberation Front – UNLF) ಕೇಂದ್ರ ಸರ್ಕಾರದೊಂದಿಗೆ (Central Government) ಶಾಂತಿ ಒಪ್ಪಂದಕ್ಕೆ (peace accord) ಸಹಿ ಹಾಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ(Union Home Minister Amit Shah).

ಕೇಂದ್ರ ಸರ್ಕಾರವು ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು ಮೋದಿ ಸರ್ಕಾರದ ಅವಿರತ ಪ್ರಯತ್ನಗಳು ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ (ಯುಎನ್‌ಎಲ್‌ಎಫ್) ಇಂದು ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರಿಂದ ಹೊಸ ಅಧ್ಯಾಯವನ್ನು ಆರಂಭಿಸಲಾಗಿದೆ ಎಂದು ಎಕ್ಸ್ ವೇದಿಕೆಯಲ್ಲಿ ಕೇಂದ್ರ ಗೃಹ ಸಚಿವ ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಮಣಿಪುರದ ಅತ್ಯಂತ ಹಳೆಯ ಮತ್ತು ಕಣಿವೆ ಮೂಲದ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಹಿಂಸಾಚಾರವನ್ನು ತ್ಯಜಿಸಲು ಮತ್ತು ಮುಖ್ಯವಾಹಿನಿಗೆ ಸೇರಲು ಒಪ್ಪಿಕೊಂಡಿದೆ. ನಾನು ಅವರನ್ನು ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಿಗೆ ಸ್ವಾಗತಿಸುತ್ತೇನೆ ಮತ್ತು ಶಾಂತಿ ಮತ್ತು ಪ್ರಗತಿಯ ಹಾದಿಯಲ್ಲಿ ಅವರ ಪ್ರಯಾಣದಲ್ಲಿ ಅವರಿಗೆ ಶುಭ ಹಾರೈಸುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಯುಎನ್‌ಎಲ್‌ಎಫ್ ಜೊತೆಗೆ ಹಲವಾರು ಇತರ ಉಗ್ರಗಾಮಿ ಸಂಘಟನೆಗಳನ್ನು ಗೃಹ ಸಚಿವಾಲಯ ನಿಷೇಧಿಸಿದ ದಿನಗಳ ನಂತರ ಈ ಶಾಂತಿ ಒಪ್ಪಂದವು ಏರ್ಪಟ್ಟಿದೆ. ಈ ಸಂಘಟನೆಗಳು ಮಣಿಪುರದಲ್ಲಿ ಭದ್ರತಾ ಪಡೆಗಳು, ಪೊಲೀಸರು ಮತ್ತು ನಾಗರಿಕರ ಮೇಲೆ ದಾಳಿಗಳು ಮತ್ತು ಹತ್ಯೆಗಳು ಮತ್ತು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಹಾನಿಯುಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿವೆ ಎಂದು ಕೇಂದ್ರ ಸರ್ಕಾರ ನಿಷೇಧ ಅಸ್ತ್ರವನ್ನು ಪ್ರಯೋಗಿಸಿತ್ತು.

1964ರ ನವೆಂಬರ್ 24ರಂದು ಅರೆಂಬಮ್ ಸಮ್ರೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ಯುಎನ್‌ಎಲ್‌ಎಫ್ ಜನ್ಮ ತಳೆಯಿತು. ಇದು ಮಣಿಪುರದ ಅತ್ಯಂತ ಹಳೆಯ ಬಂಡಾಯ ಗುಂಪು ಎನಿಸಿಕೊಂಡಿದೆ. 70 ಮತ್ತು 80 ರ ದಶಕಗಳಲ್ಲಿ ಈ ಗುಂಪು ಮುಖ್ಯವಾಗಿ ಸಿದ್ಧತೆ ಮತ್ತು ನೇಮಕಾತಿಯ ಮೇಲೆ ಹೆಚ್ಚು ಕೇಂದ್ರೀಕೃತವಾಗಿತ್ತು. 1990ರಲ್ಲಿ ಭಾರತದಿಂದ ಮಣಿಪುರದ ‘ವಿಮೋಚನೆ’ಗಾಗಿ ಸಶಸ್ತ್ರ ಹೋರಾಟವನ್ನು ಪ್ರಾರಂಭಿಸಲು ನಿರ್ಧರಿಸಿತು. ಅದೇ ವರ್ಷದಲ್ಲಿ, ಇದು ಮಣಿಪುರ ಪೀಪಲ್ಸ್ ಆರ್ಮಿ ಎಂಬ ಸಶಸ್ತ್ರ ವಿಭಾಗವನ್ನು ಕೂಡ ಆರಂಭಿಸಿತ್ತು. ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಕೇಂದ್ರ ಸರ್ಕಾರವು ಈ ಸಂಘಟನೆಯನ್ನೂ ನಿಷೇಧಿಸಿತ್ತು.

ಈ ಸುದ್ದಿಯನ್ನೂ ಓದಿ: Manipur Violence: ಮಣಿಪುರದಲ್ಲಿ ಪೊಲೀಸ್‌ ಅಧಿಕಾರಿಯ ಹತ್ಯೆ; ‘ಕುಕಿ’ ಜನರಿಂದ ದಾಳಿ

Continue Reading

ದೇಶ

Indian Railways : ಭಾರತ ಗೌರವ ಯಾತ್ರಾ ರೈಲಿನಲ್ಲಿ ಕಲುಷಿತ ಆಹಾರ ಸೇವಿಸಿ 90 ಮಂದಿ ಅಸ್ವಸ್ಥ

ಚೆನ್ನೈನಿಂದ ಗುಜರಾತ್​ನ ಪಾಲಿಟಾನಾಗೆ ತೆರಳುತ್ತಿದ್ದ ಭಾರತ್ ಗೌರವ್ ಯಾತ್ರಾ ವಿಶೇಷ ಪ್ಯಾಕೇಜ್ ರೈಲಿನಲ್ಲಿ (Indian Railways ) ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಮಂಗಳವಾರ ರಾತ್ರಿ ಖಾಸಗಿಯಾಗಿ ಖರೀದಿಸಿದ ಊಟ ಸೇವಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ.

VISTARANEWS.COM


on

Gauvarav Yatra
Koo

ನವದೆಹಲಿ: ಚೆನ್ನೈನಿಂದ ಗುಜರಾತ್​ನ ಪಾಲಿಟಾನಾಗೆ ತೆರಳುತ್ತಿದ್ದ ಭಾರತ್ ಗೌರವ್ ಯಾತ್ರಾ ವಿಶೇಷ ಪ್ಯಾಕೇಜ್ ರೈಲಿನಲ್ಲಿ (Indian Railways) ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಮಂಗಳವಾರ ರಾತ್ರಿ ಖಾಸಗಿಯಾಗಿ ಪೂರೈಕೆಯಾದ ಊಟವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇದಕ್ಕೆ ರೈಲ್ವೆ ಇಲಾಖೆಯ ಹೊಣೆಯಲ್ಲ ಎಂಬುದಾಗಿ ಇಲಾಖೆಯ ಸಾರ್ವಜನಿಕ ಸಂಪರ್ಕ ಇಲಾಖೆ ಹೇಳಿದೆ. ಇದೇ ವೇಳೆ ಪ್ರಯಾಣಿಕ ಹಿತರಕ್ಷಣೆಗಾಗಿ ಮಾಡಿದ್ದೇವೆ ಎಂಬುದಾಗಿಯೂ ಹೇಳಿದೆ.

ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುಜರಾತ್​ನ ಪಾಲಿಟಾನಾಗೆ ಖಾಸಗಿಯಾಗಿ ಕಾಯ್ದಿರಿಸಲಾಗಿದ್ದ ಭಾರತ್ ಗೌರವ್ ಯಾತ್ರಾ ವಿಶೇಷ ರೈಲಿನಲ್ಲಿ ಈ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.ಊಟ ಮಾಡಿದ ಬಳಿಕ ಪ್ರಯಾಣಿಕರು ಹೊಟ್ಟೆ ನೋವು, ವಾಂತಿ, ತಲೆತಿರುಗುವಿಕೆ ಮತ್ತು ಅತಿಸಾರದಿಂದ ಬಳಲಿದ್ದಾರೆ. ನಂತರ ಪುಣೆ ರೈಲ್ವೆ ನಿಲ್ದಾಣದಲ್ಲಿ ರೈಲಿನ ತುರ್ತು ನಿಲುಗಡೆ ಮಾಡಿದ್ದಾರೆ ಎಂದು ಕೇಂದ್ರ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಶಿವರಾಜ್ ಮನಸ್ಪುರೆ ತಿಳಿಸಿದ್ದಾರೆ.

ಸೋಲಾಪುರ ಮತ್ತು ಪುಣೆ ನಡುವೆ ಘಟನೆ ನಡೆದಿದೆ. ಬೋಗಿಯಲ್ಲಿದ್ದ ಸುಮಾರು 80 ರಿಂದ 90 ಪ್ರಯಾಣಿಕರು ಸೇವಿಸಿದ ಆಹಾರ ಕಲುಷಿತಗೊಂಡಿತ್ತ ಎಂದು ಅವರು ಹೇಳಿದ್ದಾರೆ. ಅವರು ಹೊಟ್ಟೆ ನೋವು, ವಾಕರಿಕೆ, ಭೇದಿ ಮತ್ತು ತಲೆನೋವಿನ ಬಗ್ಗೆ ಮಾಹಿತಿ ನೀಡಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

ವೈದ್ಯರಿಂದ ತುರ್ತು ನೆರವು

“ಪುಣೆ ನಿಲ್ದಾಣದಲ್ಲಿ, ಮೂರು ವೈದ್ಯಕೀಯ ತಂಡಗಳು, 15 ರೈಲ್ವೆ ವೈದ್ಯರು ಮತ್ತು ಸಿಬ್ಬಂದಿಯ, 13 ಖಾಸಗಿ ವೈದ್ಯರು ಮತ್ತು ಸಿಬ್ಬಂದಿ ಮತ್ತು ಎಂಟು ಎನ್​ಜಿಒ ಕಾರ್ಯಕರ್ತರು ನೆರವು ಕಾರ್ಯದಲ್ಲಿ ತೊಡಗಿದ್ದಾರೆ. ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ನಾಲ್ಕು ಮುಖ್ಯ ಆರೋಗ್ಯ ನಿರೀಕ್ಷಕರು ಸಹ ಕೆಲಸ ಮಾಡುತ್ತಿದ್ದಾರೆ” ಎಂದು ರೈಲ್ವೆ ಪಿಆರ್​ಒ ಮಾಹಿತಿ ನೀಡಿದ್ದಾರೆ.

ರೈಲು ಮಂಗಳವಾರ ರಾತ್ರಿ 11.27 ಕ್ಕೆ ಪುಣೆ ಪ್ಲಾಟ್ ಫಾರ್ಮ್ ಸಂಖ್ಯೆ 2 ಕ್ಕೆ ಬಂದು 12.29 ಕ್ಕೆ ಹೊರಟಿತ್ತು. ಕೋಚ್ ನಂ. ಬಿ 11ರಲ್ಲಿ ವಾಂತಿ, ಹೊಟ್ಟೆ ನೋವು, ಭೇದಿ ಹೊಂದಿರುವ ಕೆಲವು ಪ್ರಯಾಣಿಕರನ್ನು ವೈದ್ಯರ ತಂಡವು ಗಮನಿಸಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ಗಂಡ ಹೆಂಡತಿ ಜಗಳದಿಂದಾಗಿ ರೇಮಂಡ್ ಕಂಪನಿಗೆ 1500 ಕೋಟಿ ರೂ. ನಷ್ಟ!

ರೈಲ್ವೆ ಪಿಆರ್​ಒ ಪ್ರಕಾರ, ಆಹಾರವನ್ನು ರೈಲ್ವೆ ಅಥವಾ ಐಆರ್​ಸಿಟಿಸಿ ಸಿಬ್ಬಂದಿ ಪೂರೈಸಿಲ್ಲ/ ಆದರೆ ಖಾಸಗಿಯಾಗಿ ಸಂಗ್ರಹಿಸಲಾಗಿದೆ ಎಂದು ಮನಸ್ಪುರೆ ಹೇಳಿದರು. ರೈಲ್ವೆ ಸಚಿವಾಲಯದ ಪ್ರಕಾರ, ಖಾಸಗಿ ಪೂರೈಕೆದಾರರೊಬ್ಬರು ಈ ಸೇವೆಯನ್ನು ನಿರ್ವಹಿಸುತ್ತಿದ್ದಾರೆ. ಸಚಿವಾಲಯವು ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ಎಲ್ಲಾ 90 ಪ್ರಯಾಣಿಕರಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆಯ ನಂತರ ಸಾಮಾನ್ಯ ಸುಧಾರಿಸಿಕೊಂಡಿದ್ದಾರೆ ಎಂದು ಮನಸ್ಪುರೆ ಭರವಸೆ ನೀಡಿದ್ದಾರೆ. ಯಾವುದೇ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ, ಅವರೆಲ್ಲರೂ ಅದೇ ರೈಲಿನಲ್ಲಿ ತಮ್ಮ ಪ್ರಯಾಣವನ್ನು ಮುಂದುವರೆಸಿದ್ದಾರೆ ಎಂದು ಹೇಳಿದ್ದಾರೆ. “ರೈಲು 50 ನಿಮಿಷಗಳ ನಂತರ ಹೊರಟಿತು. ಎಲ್ಲಾ ಪ್ರಯಾಣಿಕರ ಸ್ಥಿತಿ ಸ್ಥಿರವಾಗಿದೆ” ಎಂದು ಅವರು ಹೇಳಿದರು.

Continue Reading

ದೇಶ

ಗಂಡ-ಹೆಂಡತಿ ಜಗಳ ವಿಮಾನ ಹತ್ತಿದ್ರೂ ಮುಗಿಲಿಲ್ಲ! ಆ ಮೇಲೆ ಏನಾಯ್ತು?

Lufthansa flight: ವಿಮಾನದಲ್ಲೇ ದಂಪತಿ ಕಿತ್ತಾಡಿಕೊಂಡಿದ್ದಕ್ಕೆ ಜರ್ಮನಿಯಿಂದ ಥಾಯ್ಲೆಂಡ್‌ಗೆ ಹೊರಟಿದ್ದ ವಿಮಾನವನ್ನು ದಿಲ್ಲಿಯಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ.

VISTARANEWS.COM


on

fight between Couple in air and Lufthansa flight was diverted to Delhi and Viral News
Koo

ನವದೆಹಲಿ: ಜರ್ಮಿನಿಯ ಮ್ಯೂನಿಚ್ ನಗರದಿಂದ ಥಾಯ್ಲೆಂಡ್‌ನ ಬ್ಯಾಂಕಾಕ್‌ ನಗರಕ್ಕೆ ಹೊರಟಿದ್ದ ಲುಫ್ಥಾನ್ಸ ವಿಮಾನವು (Munich-Bangkok Lufthansa flight) ‘ವಿಚಿತ್ರ ಕಾರಣ’ಕ್ಕಾಗಿ ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Indira Gandhi International Airport) ಲ್ಯಾಂಡಿಂಗ್ ಮಾಡಿದೆ. ಈ ವಿಮಾನದಲ್ಲಿದಲ್ಲಿ ಪ್ರಯಾಣಿಸುತ್ತಿರುವ ಗಂಡ-ಹೆಂಡತಿ (Fight Between couple) ಜಗಳಕ್ಕೆ ಬೇಸತ್ತ ಪೈಲಟ್, ಅಂತಿಮವಾಗಿ ವಿಮಾನವನ್ನು ದಿಲ್ಲಿಯಲ್ಲಿ ಲ್ಯಾಂಡ್ ಮಾಡಿ, ಅವರನ್ನು ವಿಮಾನದಿಂದ ಹೊರಹಾಕಿದ್ದಾರೆ.

ನವೆಂಬರ್ 27, ಬುಧವಾರ ಮ್ಯೂನಿಚ್‌ನಿಂದ ಬ್ಯಾಂಕಾಕ್‌ಗೆ ಹೊರಟಿದ್ದ LH772 ವಿಮಾನವನ್ನು ಅಶಿಸ್ತಿನ ಪ್ರಯಾಣಿಕರ ಕಾರಣ ದೆಹಲಿಯತ್ತು ತರಲಾಯಿತು. ಜಗಳ ಮಾಡುತ್ತಿದ್ದ ದಂಪತಿಯ ಪೈಕಿ ಗಂಡನನ್ನು ದಿಲ್ಲಿಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಬ್ಯಾಂಕಾಕ್‌ಗೆ ವಿಮಾನವು ಸಣ್ಣ ವಿಳಂಬಗಳೊಂದಿಗೆ ನಂತರ ಮುಂದುವರಿಯುವ ನಿರೀಕ್ಷೆಯಿದೆ. ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ವಿಮಾನದಲ್ಲಿ ಸುರಕ್ಷತೆ ಮತ್ತು ಭದ್ರತೆ ನಮ್ಮ ಪ್ರಮುಖ ಆದ್ಯತೆಯಾಗಿದೆ ವಿಮಾನಯಾನ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ವಿಮಾನದಲ್ಲಿ ನಡೆದಿದ್ದೇನು?

ಗಂಡ-ಹೆಂಡತಿ ಜಗಳ ಉಂಡು ಮಲಗೋತನಕ ಎಂಬುದು ಗಾದೆ ಮಾತು. ಆದರೆ, ಈ ದಂಪತಿಯ ಜಗಳ ವಿಮಾನ ಹತ್ತಿದ್ರೂ ಮುಗಿದಿಲ್ಲ. ಜರ್ಮನಿಯ ಗಂಡ ಮತ್ತು ಥಾಯ್ ಹೆಂಡತಿಯ ಮಧ್ಯೆ, ವಿಮಾನದಲ್ಲಿ ಜಗಳ ಶುರುವಾಗಿದೆ. ಈ ಜಗಳವನ್ನು ಸಿಬ್ಬಂದಿಯ ಸರಿಪಡಿಸಲು ಮುಂದಾಗಿದ್ದಾರೆ. ಜಗಳ ಮತ್ತಷ್ಟು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಪೈಲಟ್ ಅಂತಿಮವಾಗಿ ದಿಲ್ಲಿಯಲ್ಲಿ ವಿಮಾನ ಇಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ತನ್ನ ಗಂಡ ಜಗಳ ಮಾಡುತ್ತಿರುವ ಬಗ್ಗೆ ಹೆಂಡತಿಯ ಮೊದಲಿಗೆ ಪೈಲಟ್‌ಗೆ ದೂರು ನೀಡಿದ್ದಾಳೆ. ಗಂಡ ತನಗೆ ಬೆದರಿಕೆ ಹಾಕುತ್ತಿದ್ದಾನೆ. ದಯವಿಟ್ಟು ಮಧ್ಯ ಪ್ರವೇಶಿಸಿ ಎಂದು ಆಕೆ, ಪೈಲಟ್‌ಗೆ ಮನವಿ ಮಾಡಿಕೊಂಡಿದ್ದಾಳೆ. ಇಷ್ಟಾದರೂ 53 ವರ್ಷದ ಜರ್ಮನಿಯ ಗಂಡನ ಜಗಳದ ವರ್ತನೆ ನಿಂತಿಲ್ಲ. ಹೆಂಡತಿಯತ್ತ ಆಹಾರ ಎಸೆದಿದ್ದಾನೆ. ಅಲ್ಲದೇ, ಲೈಟರ್‌ ಮೂಲ ಬ್ಲಾಂಕೆಟ್‌ಗೆ ಬೆಂಕಿ ಹಚ್ಚಲು ಮುಂದಾಗಿದ್ದಾನೆ. ನಿರಂತರವಾಗಿ ಹೆಂಡತಿ ಮೇಲೆ ರೇಗಾಡಿದ್ದಾನೆ. ವಿಮಾನ ಸಿಬ್ಬಂದಿ ಜಗಳ ಬಿಡಿಸಲು ಎಷ್ಟೇ ಪ್ರಯತ್ನ ಮಾಡಿದರು, ಫಲಿ ಕೊಡಲಿಲ್ಲ.

ಈ ಕಾರಣಕ್ಕಾಗಿ, ಬ್ಯಾಂಕಾಕ್‌ಗೆ ಹೊರಟಿದ್ದ ವಿಮಾನವನ್ನು ಪೈಲಟ್‌ ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಿದ್ದಾರೆ. ಹೆಂಡತಿಯು ಪ್ರತ್ಯೇಕ ಪಿಎನ್ಆರ್ ಟಿಕೆಟ್ ಹೊಂದಿದ್ದು, ಅದೇ ವಿಮಾನದಲ್ಲಿ ಪ್ರಯಾಣ ಮುಂದುವರಿಸುವುದಾಗಿ ಹೇಳಿದ್ದಾಳೆ. ಆದರೆ, ಆಕೆಯ ಗಂಡನನ್ನು ದಿಲ್ಲಿಯ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಒಪ್ಪಿಸಲಾಗಿದೆ. ಆದರೆ, ತನ್ನ ವರ್ತನೆಗೆ ಆತ ಕ್ಷಮೆ ಕೇಳಿದ್ದಾನೆ ಎನ್ನಲಾಗಿದೆ. ಆದರೂ, ಆತನನ್ನು ವಾಪಸ್ ಜರ್ಮನಿಗೆ ಕಳುಹಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ ಎನ್ನಲಾಗಿದೆ. ಈ ಮಧ್ಯೆ, ಪೈಲಟ್ ಅವರು ಮೊದಲಿಗೆ ವಿಮಾನವನ್ನು ಪಾಕಿಸ್ತಾನದ ಹತ್ತಿರದ ಏರ್‌ಪೋರ್ಟ್‌ನತ್ತ ತಿರುಗಿಸಲು ಅನುಮತಿ ಕೇಳಿದ್ದರು. ಆದರೆ, ಕಾರಣ ನೀಡದೇ ಅನುಮತಿ ಸಿಗದಿದ್ದರಿಂದ ಅಂತಿಮವಾಗಿ ವಿಮಾನವನ್ನು ದಿಲ್ಲಿ ಏರ್‌ಪೋರ್ಟ್‌ಗೆ ತರಲಾಯಿತು ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ: Death in Flight : ಮಾರ್ಗ ಮಧ್ಯೆ ಪ್ರಯಾಣಿಕ ನಿಧನ; ದಿಲ್ಲಿಯಿಂದ ದೋಹಾಕ್ಕೆ ಹೊರಟಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

Continue Reading

ಗ್ಯಾಜೆಟ್ಸ್

ಡಿ.1ರಿಂದ ಸಿಮ್‌ ಕಾರ್ಡ್‌ ಹೊಸ ರೂಲ್ಸ್; ನಿಯಮ ಮೀರಿದ್ರೆ 10 ಲಕ್ಷ ರೂ. ದಂಡ!

New SIM Card rules: ಹೆಚ್ಚುತ್ತಿರುವ ಸೈಬರ್‌ ವಂಚನೆಗಳನ್ನು ತಡೆಯುವುದಕ್ಕಾಗಿ ಕೇಂದ್ರ ಸರ್ಕಾರವು ಡಿಸೆಂಬರ್ 1ರಿಂದ ಸಿಮ್‌ ಕಾರ್ಡ್ ಖರೀದಿ ಮತ್ತು ಮಾರಾಟ ಸಂಬಂಧ ಹೊಸ ರೂಲ್ಸ್ ಜಾರಿ ಮಾಡುತ್ತಿದೆ.

VISTARANEWS.COM


on

New SIM Card rules from december 1 and Check details
Koo

ನವದೆಹಲಿ: ಸೈಬರ್ ವಂಚನೆಯನ್ನು (Cyber Fraud) ತಡೆಯುವುದಕ್ಕಾಗಿ ಕೇಂದ್ರ ಸರ್ಕಾರವು (Central Government) ಸಿಮ್ ಕಾರ್ಡ್‌ಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ರೂಪಿಸಿದ್ದು(New SIM Card rules), ಡಿಸೆಂಬರ್ 1ರಿಂದ ಜಾರಿಗೆ ಬರಲಿವೆ. ಸಿಮ್ ಮಾರಾಟ (SIM Selling) ಮತ್ತು ಖರೀದಿಗೆ (SIM Buying) ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಕಳೆದ ಆಗಸ್ಟ್‌ ತಿಂಗಳಲ್ಲಿಯೇ ಕೇಂದ್ರ ಟೆಲಿಕಮ್ಯುನಿಕೇಷನ್ ಇಲಾಖೆಯು ಘೋಷಣೆ ಮಾಡಿತ್ತು. ವಂಚನೆಯ ಮೂಲಕ ಸಿಮ್ ಕಾರ್ಡ್ ಖರೀದಿ ಮತ್ತು ಬಳಕೆಯು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಈ ನಿಧಾರ್ವನ್ನು ಕೈಗೊಂಡಿದೆ. ಕೇಂದ್ರ ಸಂವಹನ ಸಚಿವ ಅಶ್ವಿನಿ ವೈಷ್ಣವ್ (Union Minister Ashwini Vaishnaw) ಅವರು, ವಂಚನೆಯ ಮೂಲಕ ಸಕ್ರಿಯವಾಗಿದ್ದ ಸುಮಾರು 52 ಲಕ್ಷ ಸಿಮ್ ಕಾರ್ಡ್‌ಗಳನ್ನು ಈಗಾಗಲೇ ನಿಷ್ಕ್ರಿಯಗೊಳಿಸಲಾಗಿದೆ ಎಂದು ನಿಯಮಗಳ ಘೋಷಣೆ ವೇಳೆ ಹೇಳಿದ್ದರು.

10 ಲಕ್ಷ ರೂ. ದಂಡ ಪಕ್ಕಾ

ಈ ಹೊಸ ನಿಯಮಗಳಡಿಯಲ್ಲಿ, ಸಿಮ್ ಮಾರಾಟ ಮಾಡುವ ಎಲ್ಲ ಡೀಲರ್‌ಗಳು ಕಡ್ಡಾಯವಾಗಿ ದೃಢೀಕರಣ ವ್ಯವಸ್ಥೆಗೆ ಒಳಪಡಬೇಕಾಗುತ್ತದೆ. ಒಂದು ವೇಳೆ, ಈ ನಿಮಯವನ್ನು ಪಾಲಿಸಲು ವಿಫಲರಾದರೆ ಸುಮಾರು 10 ಲಕ್ಷ ರೂ.ವರೆಗೂ ದಂಡವನ್ನು ತೆರಬೇಕಾಗುತ್ತದೆ.

ಸಿಮ್ ಕಾರ್ಡ್ ಡೀಲರ್‌ಗಳ ಪರಿಶೀಲನೆಯನ್ನು ಟೆಲಿಕಾಂ ಆಪರೇಟರ್‌ನಿಂದ ಕೈಗೊಳ್ಳಲಾಗುತ್ತದೆ. ಅಸ್ತಿತ್ವದಲ್ಲಿರುವ ಮಾರಾಟಗಾರರು ನೋಂದಣಿ ಮಾನದಂಡವನ್ನು ಅನುಸರಿಸಲು 12 ತಿಂಗಳ ಅವಧಿಯನ್ನು ಹೊಂದಿರುತ್ತಾರೆ. ಈ ರೀತಿಯ ದೃಢೀಕರಣ ಅಗತ್ಯದ ಬಗ್ಗೆ ವಿವರಿಸಿರುವ ಸರ್ಕಾರವು, ಈ ದೃಢೀಕರಣದ ಮೂಲಕ ವಂಚಕ ಸಿಮ್ ಮಾರಾಟಗಾರರನ್ನು ಗುರುತಿಸುವುದು, ಕಪ್ಪು ಪಟ್ಟಿಗೆ ಸೇರಿಸುವುದು ಮತ್ತು ಅವರನ್ನು ಸಿಸ್ಟಮ್‌ನಿಂದ ಕಿತ್ತು ಹಾಕುವುದು ಸಾಧ್ಯವಾಗಲಿದೆ.

ಬಲ್ಕ್ ಸಿಮ್ ಇಲ್ಲ

ಡಿಜಿಟಲ್ ಹಗರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಬೃಹತ್ ಸಂಪರ್ಕಗಳ ವಿತರಣೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಆದಾಗ್ಯೂ, ಒಂದು ಗುರುತಿನ ಆಧಾರದ ಮೇಲೆ ವ್ಯಕ್ತಿಗಳು ಇನ್ನೂ ಒಂಬತ್ತು ಸಿಮ್ ಕಾರ್ಡ್‌ಗಳನ್ನು ತೆಗೆದುಕೊಳ್ಳಬಹುದು.

ಹೊಸ ಸಿಮ್‌ಗಳನ್ನು ಖರೀದಿಸುವ ಸಂದರ್ಭದಲ್ಲಿ ಅಥವಾ ಅಸ್ತಿತ್ವದಲ್ಲಿರುವ ಸಂಖ್ಯೆಯಲ್ಲಿ ಹೊಸದಕ್ಕೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ, ಕೆವೈಸಿ ಅಡಿಯಲ್ಲಿ ಗ್ರಾಹಕರು ಅಗತ್ಯ ಜನಸಂಖ್ಯಾ ವಿವರಗಳನ್ನು ಒದಗಿಸಬೇಕಾಗುತ್ತದೆ. ಮುದ್ರಿತ ಆಧಾರ್ ಕಾರ್ಡ್‌ನ ಕ್ಯೂಆರ್‌ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ವಿವರಗಳನ್ನು ಪಡೆಯಲಾಗುತ್ತದೆ.

90 ದಿನಗಳು ಬೇಕು

ಈ ಹಿಂದಿನ ಬಳಕೆದಾರರ ಮೊಬೈಲ್ ನಂಬರ್ ‌ನಿಷ್ಕ್ರಿಯಗೊಂಡ 90 ದಿನಗಳು ಅಂದರೆ 3 ತಿಂಗಳ ಬಳಿಕವಷ್ಟೇ, ಆ ನಂಬರ್ ಅನ್ನು ಹೊಸ ಗ್ರಾಹಕರಿಗೆ ನೀಡಲು ಅವಕಾಶವಿರುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಸಿಮ್ ಬದಲಿ ಸಂದರ್ಭದಲ್ಲಿ ಕೆವೈಸಿ ಪ್ರಕ್ರಿಯೆಯನ್ನು ಚಂದಾದಾರರು ಪೂರ್ಣಗೊಳಿಸಬೇಕು.

ಈ ವರ್ಷಾದರಂಭದಲ್ಲಿ ಸುಧಾರಣೆಯ ಭಾಗವಾಗಿ ಕೇಂದ್ರ ಸರ್ಕಾರವು ಸಂಚಾರಿ ಸಾಥಿ ವೆಬ್‌ಸೈಟ್ ಅನ್ನು ಆರಂಭಿಸಿತ್ತು. ಕಳ್ಳತನವಾದ ಅಥವಾ ಕಳೆದು ಹೋದ ಮೊಬೈಲ್‌ ಫೋನ್‌ಗಳ ಬಗ್ಗೆ ಈ ಪೋರ್ಟಲ್‌ನಲ್ಲಿ ಗ್ರಾಹಕರು ವರಿದ ಮಾಡಬಹುದು. ಅಕ್ರಮ ಮೊಬೈಲ್‌ ಸಂಪರ್ಕಗಳನ್ನು ಪತ್ತೆ ಹಚ್ಚುವ ಕೃತಕ ಬುದ್ಧಿಮತ್ತೆ ಆಧರಿತ ಸಾಫ್ಟ್‌ವೇರ್ ಅಸ್ತ್ರದ ಜತೆಗೆ ಈ ಪೋರ್ಟಲ್ ಕೂಡ ಆರಂಭಿಸಲಾಗಿತ್ತು.

ಈ ಸುದ್ದಿಯನ್ನೂ ಓದಿ: Digital KYC For SIM Cards: ಸಿಮ್‌ ಕಾರ್ಡ್‌ ಕೆವೈಸಿ ಆಗಲಿದೆ ಸಂಪೂರ್ಣ ಡಿಜಿಟಲ್‌, ಒಂದು ಐಡಿಗೆ ಸಿಗಲಿದೆ ಐದೇ ಸಿಮ್

Continue Reading
Advertisement
peace accord between Manipur oldest armed group UNLF and Government
ದೇಶ3 mins ago

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಹಳೆ ಬಂಡುಕೋರ ಗುಂಪು ಯುಎನ್ಎಲ್ಎಫ್!

Gauvarav Yatra
ದೇಶ18 mins ago

Indian Railways : ಭಾರತ ಗೌರವ ಯಾತ್ರಾ ರೈಲಿನಲ್ಲಿ ಕಲುಷಿತ ಆಹಾರ ಸೇವಿಸಿ 90 ಮಂದಿ ಅಸ್ವಸ್ಥ

Actress Ramya
ಕರ್ನಾಟಕ21 mins ago

Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

fight between Couple in air and Lufthansa flight was diverted to Delhi and Viral News
ದೇಶ31 mins ago

ಗಂಡ-ಹೆಂಡತಿ ಜಗಳ ವಿಮಾನ ಹತ್ತಿದ್ರೂ ಮುಗಿಲಿಲ್ಲ! ಆ ಮೇಲೆ ಏನಾಯ್ತು?

life certificate
ಉದ್ಯೋಗ44 mins ago

ಜೀವನ ಪ್ರಮಾಣ ಪತ್ರ ಇನ್ನೂ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ! ಇಲ್ದಿದ್ರೆ ಸಿಗಲ್ಲ ಪೆನ್ಶನ್

pain
ಆರೋಗ್ಯ55 mins ago

Home Remedies: ಚಳಿಗಾಲದಲ್ಲಿ ಪಾದ ನೋವೇ? ಇಲ್ಲಿದೆ ಮನೆಮದ್ದು

BPO Employee Bangalore Nude Photos
ಕರ್ನಾಟಕ1 hour ago

ಬಾಯ್‌ಫ್ರೆಂಡ್‌ ಮೊಬೈಲ್‌ ತೆರೆದಾಗ ಅವಳಿಗೆ ಕಂಡಿದ್ದು 13000 ಹುಡುಗಿಯರ ನಗ್ನಲೋಕ!

Finger Ring
ಫ್ಯಾಷನ್1 hour ago

Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

siri bbk
ಕಿರುತೆರೆ1 hour ago

BBK SEASON 10: ಸ್ಪರ್ಧಿಗಳ ಕಾಲಿಗೆ ಹಗ್ಗ; ಕಣ್ಣೀರಿಟ್ಟ ಸಿರಿ

Mandya Ramesh
ಕಿರುತೆರೆ1 hour ago

Mandya Ramesh: ಶೂಟಿಂಗ್ ವೇಳೆ ಮಂಡ್ಯ ರಮೇಶ್‌ಗೆ ಗಾಯ; ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ15 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌