inflation in usa 20 of americans are in debt to buy groceriesInflation in USA : 20% ಅಮೆರಿಕನ್ನರಿಗೆ ಸಾಲದಲ್ಲಿ ದಿನಸಿ ಖರೀದಿಸಿ ಹೊಟ್ಟೆ ತುಂಬಿಸಿಕೊಳ್ಳಬೇಕಾದ ಸ್ಥಿತಿ - Vistara News

ಪ್ರಮುಖ ಸುದ್ದಿ

Inflation in USA : 20% ಅಮೆರಿಕನ್ನರಿಗೆ ಸಾಲದಲ್ಲಿ ದಿನಸಿ ಖರೀದಿಸಿ ಹೊಟ್ಟೆ ತುಂಬಿಸಿಕೊಳ್ಳಬೇಕಾದ ಸ್ಥಿತಿ

Inflation in USA ಅಮೆರಿಕದಲ್ಲಿ 20% ಮಂದಿ ನಾಗರಿಕರು ದಿನ ನಿತ್ಯದ ದಿನಸಿ ವಸ್ತುಗಳ ಖರೀದಿಗೂ ಸಾಲದ ಕಂತುಗಳಿಗೆ ಮೊರೆ ಹೋಗಿದ್ದಾರೆ ಎಂಬ ಸಮೀಕ್ಷೆ, ಅಲ್ಲಿನ ಹಣದುಬ್ಬರ ಜನಜೀವನದ ಮೇಲೆ ಹೇಗೆ ಪ್ರತಿಕೂಲ ಪ್ರಭಾವ ಬೀರಿದೆ ಎಂಬುದನ್ನು ಬಿಂಬಿಸಿದೆ.

VISTARANEWS.COM


on

Retail inflation hits four-month high
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್:‌ ಅಮೆರಿಕದಲ್ಲಿ ದಿನ ನಿತ್ಯದ ಆಹಾರ ವಸ್ತುಗಳ ಬೆಲೆ ಗಗನಕ್ಕೇರಿದೆ. ಅನೇಕ ಕುಟುಂಬಗಳು ದಿನಸಿ ವಸ್ತುಗಳನ್ನು ಕೊಳ್ಳಲು ಕೂಡ ಪರದಾಡುವಂತಾಗಿದೆ. ಹೀಗಾಗಿ ದಿನ ನಿತ್ಯದ ದಿನಸಿ ವಸ್ತುಗಳ ಖರೀದಿಗೂ ಇನ್‌ಸ್ಟಂಟ್‌ ಲೋನ್‌ ಆ್ಯಪ್‌ಗಳು ನೀಡುವ ಸಾಲದ ಕಂತುಗಳಿಗೆ (EMI) ಮೊರೆ ಹೋಗುತ್ತಿದ್ದಾರೆ. (Inflation in USA) ಹಾಗಾದರೆ ಅಲ್ಲಿ ಆಗಿದ್ದೇನು? ಇಲ್ಲಿದೆ ದಂಗುಬಡಿಸುವ ವಿವರ.

ಅಮೆರಿಕದಲ್ಲಿ ಇನ್‌ಸ್ಟಂಟ್‌ ಕ್ರೆಡಿಟ್ ಆ್ಯಪ್‌ಗಳು ಹೊಸತಲ್ಲ.‌ ನೀವು ಬೇಕಾದ್ದನ್ನು ಈಗಲೇ ಪಡೆಯಬಹುದು, ಬಳಿಕ ಸಾಲದ ಮೂಲಕ ಪಾವತಿಸಬಹುದು. ಬಿಲ್‌ನ ಒಟ್ಟು ಮೊತ್ತವನ್ನು ಕಂತುಗಳಲ್ಲಿ ಕೊಡಬಹುದು. ಅಮೆರಿಕದಲ್ಲಿ Buy now pay later apps -BNPL ಆ್ಯಪ್‌ಗಳ ಮೂಲಕ ( ಈಗ ಖರೀದಿಸಿ-ಬಳಿಕ ) ನಾನಾ ವಸ್ತುಗಳನ್ನು ಕೊಳ್ಳುವ ಟ್ರೆಂಡ್‌ ಹಿಂದಿನಿಂದಲೂ ಚಾಲ್ತಿಯಲ್ಲಿದೆ. ಆದರೆ ಇದರ ಮೂಲಕ ಮನೆ, ಕಾರು, ಬೈಕ್‌, ಸ್ಮಾರ್ಟ್‌ಫೋನ್‌, ಪ್ರವಾಸ ಸೇವೆ ಇತ್ಯಾದಿಗಳ ಖರೀದಿಗೆ ಹೆಚ್ಚಾಗಿ ಬಳಸುತ್ತಿದ್ದರು. ಆದರೆ ಈಗ ದಿನಸಿ ವಸ್ತುಗಳನ್ನು ಕೊಳ್ಳಲೂ ಬಳಸುತ್ತಿರುವುದು ಆತಂಕದ ವಿಚಾರವಾಗಿದೆ. ಕುಟುಂಬಗಳು ಸಾಲದ ಸುಳಿಗೆ ಬಿದ್ದಿರುವುದನ್ನು ಬಿಂಬಿಸಿದೆ ಎನ್ನುತ್ತಾರೆ ತಜ್ಞರು.

ಜನ ಒಂದು ತಟ್ಟೆ ಆಹಾರಕ್ಕೆ ಹೀಗೆ ಸಾಲದ ಮೊರೆ ಹೋಗುತ್ತಿರುವುದು ಕಳವಳಕಾರಿಯಾಗಿದೆ. ಅಮೆರಿಕದಲ್ಲಿ ಸಮೀಕ್ಷೆಯೊಂದರ ಪ್ರಕಾರ 2023 ರ ಮೊದಲ ಎರಡು ತಿಂಗಳುಗಳಲ್ಲಿ ಸರಾಸರಿ ಐವರಲ್ಲಿ ಒಬ್ಬರು ಕ್ರೆಡಿಟ್‌ ಆ್ಯಪ್‌ಗಳ ಮೂಲಕ ದಿನಸಿ ವಸ್ತುಗಳನ್ನು ಖರೀದಿಸಿದ್ದಾರೆ. 27% ಮಂದಿ ತಿಂಗಳಿನ ಕೊನೆಗೆ ಆಹಾರ ವಸ್ತುಗಳನ್ನು ಕೊಳ್ಳಲು ಸಾಲಕ್ಕೆ ಮೊರೆ ಹೋಗುತ್ತಿದ್ದಾರೆ. 2023ರ ಜನವರಿ-ಫೆಬ್ರವರಿಯಲ್ಲಿ ಕ್ರೆಡಿಟ್‌ ಆ್ಯಪ್‌ಗಳನ್ನು ಬಳಕೆದಾರರು 40% ದಿನಸಿ, 38% ಗೃಹೋಪಕರಣ, 8% ಜವಳಿ ಖರೀದಿಗೆ ಬಳಸಿದ್ದಾರೆ.

ಅಮೆರಿಕದಲ್ಲಿ ಈಗ ಹಣದುಬ್ಬರದ ಒತ್ತಡ ಕಡಿಮೆಯಾಗಿದೆ. ಹೀಗಿದ್ದರೂ ಸಾಲದ ಹೊರೆ ಕಡಿಮೆಯಾಗಿಲ್ಲ. ಅಮೆರಿಕದಲ್ಲಿರುವ ಕೆಲ ಬೈ ನೌ, ಪೇ ಲೇಟರ್‌ ಆ್ಯಪ್‌ಗಳು ಇಂತಿವೆ: Klarna, Affirm, Afterpay, Apple Pay, Sezzle. 2000ರಿಂದೇಚೆಗೆ ಇಂಥ ಆ್ಯಪ್‌ಗಳು ಜನಪ್ರಿಯವಾಗಿತ್ತು. ಕೋವಿಡ್‌ 19 ಬಿಕ್ಕಟ್ಟಿನ ಸಂದರ್ಭ ಈ ಆ್ಯಪ್‌ಗಳು ಭಾರಿ ಜನಪ್ರಿಯವಾಗಿತ್ತು. ಆರ್ಥಿಕ ಸಂಕಷ್ಟದ ಪರಿಣಾಮ ಇವುಗಳನ್ನು ಜನ ಆಶ್ರಯಿಸಿದ್ದರು. ಉದಾಹರಣೆಗೆ ಆಸ್ಟ್ರೇಲಿಯಾ ಮೂಲದ ಆಫ್ಟರ್‌ಪೇ (Afterpay) ಅಮರಿಕದಲ್ಲಿ 2019-20ರಲ್ಲಿ ಅಮೆರಿಕದಲ್ಲಿ ತನ್ನ ಗ್ರಾಹಕರ ಸಂಖ್ಯೆಯನ್ನು ಇಮ್ಮಡಿಗೊಳಿಸಿತ್ತು. ಅದು 65 ಲಕ್ಷಕ್ಕೆ ಏರಿತ್ತು. ಅಮೆರಿಕದಲ್ಲಿ ಆಹಾರ ಹಣದುಬ್ಬರ ನಂಬಲೂ ಕಷ್ಟವಾಗುವಷ್ಟು ಎತ್ತರಕ್ಕೆ ಜಿಗಿದಿದ್ದು, ಕಳೆದ ವರ್ಷ 11.4% ಕ್ಕೆ ವೃದ್ಧಿಸಿತ್ತು. ಇದು 1974ರಿಂದೀಚೆಗೆ ಗರಿಷ್ಠ ಮಟ್ಟ.

ಅಮೆರಿಕದಲ್ಲಿ ಆಹಾರ ವಸ್ತುಗಳ ದರ ಗಗನಕ್ಕೇರಿದ್ದೇಕೆ?

ಅಮೆರಿಕದಲ್ಲಿ ಆಹಾರ ವಸ್ತುಗಳ ದರ ಜಿಗಿತಕ್ಕೆ ಸಂಬಂಧಿಸಿ ಹಣಕಾಸು ಸಾಫ್ಟ್‌ವೇರ್‌ ಸಂಸ್ಥೆ ಪ್ರೊಪೆಲ್‌ ಇತ್ತೀಚೆಗೆ ಸಮೀಕ್ಷೆ ನಡೆಸಿದೆ. ಅದರ ಪ್ರಕಾರ ಸಮೀಕ್ಷೆಯಲ್ಲಿ ಸಂದರ್ಶನ ನೀಡಿದವರಲ್ಲಿ ಮೂರನೇ ಒಂದರಷ್ಟು ಮಂದಿ ಖರ್ಚು ಹೆಚ್ಚುತ್ತದೆ ಎಂದು ಕೆಲವೊಮ್ಮೆ ಊಟ ಮಾಡುತ್ತಿಲ್ಲ. ಮಾಡಿದರೂ ಕಡಿಮೆ ಸೇವಿಸುತ್ತಾರೆ. ಫುಡ್‌ ಬ್ಯಾಂಕ್‌ಗಳನ್ನು ಆಶ್ರಯಿಸುತ್ತಿದ್ದಾರೆ. ಆಟಿಕೆ, ಜವಳಿ ಉತ್ಪನ್ನಗಳ ಖರೀದಿಯನ್ನು ಕಡಿಮೆ ಮಾಡುತ್ತಿದ್ದಾರೆ.

ಹಾಗಾದರೆ ಆಹಾರ ದರ ಜಿಗಿದಿದ್ದೇಕೆ? ಇದಕ್ಕೆ ಹಲವು ಕಾರಣಗಳು ಇವೆ. ಆಹಾರ ವಸ್ತುಗಳ ಪೂರೈಕೆಯ ಜಾಲದಲ್ಲಿ ಉಂಟಾಗಿರುವ ಅಡಚಣೆ ( suply chain snags) ಕೋವಿಡ್‌ ಬಿಕ್ಕಟ್ಟಿನ ಪರಿಣಾಮ ಮೊಟ್ಟೆ ಮತ್ತಿತರ ದಿನ ಬಳಕೆ ಆಹಾರ ದರ ಹೆಚ್ಚಳ, ಕ್ಯಾಲಿಫೋರ್ನಿಯಾದಲ್ಲಿನ ಪ್ರವಾಹದಿಂದ ಬೆಳೆ ಹಾನಿ, ರಷ್ಯಾ-ಉಕ್ರೇನ್‌ ಸಮರದ ಪರಿಣಾಮಗಳಿಂದ ಕಚ್ಚಾ ವಸ್ತುಗಳ ದರ ಏರಿಕೆಯ ಎಫೆಕ್ಟ್‌ ಆಹಾರ ದರ ಹೆಚ್ಚಳಕ್ಕೂ ಕಾರಣವಾಗಿದೆ.

ಕಳೆದು ಹೋಗಿದೆಯೇ ಹಳೆಯ ಲೈಫ್‌ ಸ್ಟೈಲ್?

ಜಾಹೀರಾತು ವಲಯದ ಎನ್‌ಸಿ ಸಲ್ಯೂಷನ್ಸ್‌ (NCSolutions) ಎಂಬ ಕಂಪನಿಯ ಸಮೀಕ್ಷೆ ಪ್ರಕಾರ, ಸಮೀಕ್ಷೆಯಲ್ಲಿ ಸಂದರ್ಶನ ನೀಡಿದವರಲ್ಲಿ 45% ಅಮೆರಿಕನ್ನರು ತಮ್ಮ ಗತಕಾಲದ ವೈಭವದ ಲೈಫ್‌ ಸ್ಟೈಲ್‌ ಮುಕ್ತಾಯವಾಗಿದೆ ಎಂದು ಭಾವಿಸಿದ್ದಾರೆ. ಮೂರನೇ ಎರಡರಷ್ಟು ಮಂದಿ, ಯೋಚಿಸಿ ಹಣ ಖರ್ಚು ಮಾಡುವ ಸ್ಥಿತಿಯಲ್ಲಿ ಇದ್ದೇವೆ ಎನ್ನುತ್ತಿದ್ದಾರೆ. ಈ ಸಮೀಕ್ಷೆಗಳು ಹಣದುಬ್ಬರ ಅಮೆರಿಕವನ್ನು ಕಾಡುತ್ತಿರುವುದನ್ನು ಬಿಂಬಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

CET 2024 Exam: ಗುರುವಾರ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ಸಂಬಂಧ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಇಎ, ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ (ಏಪ್ರಿಲ್‌ 24) ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡುವುದಾಗಿ ಹೇಳಿದೆ. ಈಗ ಎರಡನೇ ದಿನವೂ ಇದೇ ಗೊಂದಲವಾಗಿದೆ. ಹೀಗಾಗಿ ಈ ಎರಡೂ ಸಮಸ್ಯೆಗಳ ಬಗ್ಗೆ ಬುಧವಾರ ಚರ್ಚೆ ನಡೆಸಲಾಗುತ್ತದೆ.

VISTARANEWS.COM


on

Day 2 of CET 2024 Exam 26 out of syllabus question KEA asks to raise objections by April 27
Koo

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ಗುರುವಾರ ನಡೆದಿದ್ದ ಮೊದಲ ದಿನದ ಸಿಇಟಿ-2024 ಪರೀಕ್ಷೆಯಲ್ಲಿ (CET 2024 exam) ಗಣಿತ ಹಾಗೂ ಜೀವಶಾಸ್ತ್ರದ ವಿಷಯದಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿತ್ತು. ಈಗ ಎರಡನೇ ದಿನದ ಪರೀಕ್ಷೆಯಲ್ಲಿಯೂ ಈ ಸಮಸ್ಯೆ ಪುನರಾವರ್ತನೆಯಾಗಿದೆ. ಭೌತಶಾಸ್ತ್ರದಲ್ಲಿ 8 ಹಾಗೂ ರಸಾಯನಶಾಸ್ತ್ರ ವಿಷಯದಲ್ಲಿ 18 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲಾಗಿದೆ. ಇದು ವಿದ್ಯಾರ್ಥಿಗಳ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಗುರುವಾರ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ಸಂಬಂಧ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಇಎ, ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ (ಏಪ್ರಿಲ್‌ 24) ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡುವುದಾಗಿ ಹೇಳಿದೆ. ಈಗ ಎರಡನೇ ದಿನವೂ ಇದೇ ಗೊಂದಲವಾಗಿದೆ. ಹೀಗಾಗಿ ಈ ಎರಡೂ ಸಮಸ್ಯೆಗಳ ಬಗ್ಗೆ ಬುಧವಾರ ಚರ್ಚೆ ನಡೆಸಲಾಗುತ್ತದೆ.

ಏಪ್ರಿಲ್‌ 27ರವರೆಗೆ ಆಕ್ಷೇಪಣೆ ಸಲ್ಲಿಕೆಗೆ KEA ಅವಕಾಶ

ಈ ಬಾರಿ ಸಿಇಟಿಯಲ್ಲಿ ನೋಂದಣಿ ಮಾಡಿಕೊಂಡಿದ್ದ 3,49,637 ವಿದ್ಯಾರ್ಥಿಗಳ ಪೈಕಿ ಶೇ.92ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಅಲ್ಲದೆ, ಈಗ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳ ಬಗ್ಗೆ‌ ಆಕ್ಷೇಪಣೆಗಳು ಇದ್ದರೆ, ಇದೇ ಏಪ್ರಿಲ್ 27ರೊಳಗೆ ‌ದೂರು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿನ ಯಾವುದೇ ಪ್ರಶ್ನೆಗಳ ಬಗ್ಗೆ ಆಕ್ಷೇಪಣೆಗಳು ಇದ್ದರೆ, ವಿಷಯ, ವರ್ಷನ್‌ ಕೋಡ್, ಪ್ರಶ್ನೆ ಸಂಖ್ಯೆಗಳನ್ನು ನಮೂದಿಸಿ keaugcet24@gmail.com ಗೆ ಇ – ಮೇಲ್‌ ಮೂಲಕ ಸಂಜೆ 5.30ರ ಒಳಗೆ ದೂರು ಸಲ್ಲಿಸಲು ಕೆಇಎ ಸೂಚಿಸಿದೆ. ಇದಕ್ಕೆ ತಜ್ಞರ ಸಮಿತಿಯು ಪರಿಶೀಲಿಸಿ ಸೂಕ್ತ ಪರಿಹಾರವನ್ನು ನೀಡಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು

ಜೀವಶಾಸ್ತ್ರದ 11 ಪ್ರಶ್ನೆಗಳು ಹಾಗೂ ಗಣಿತದ 9 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ಕೆಇಎಗೆ ದೂರು ನೀಡಿದ್ದಾರೆ. ಇವುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಪಠ್ಯಪುಸ್ತಕದಲ್ಲಿ ಇಲ್ಲದ ಪ್ರಶ್ನೆಗಳು ಬಂದಿವೆ. ಒಟ್ಟು 14 ಮಾರ್ಕ್ಸ್ ಔಟ್ ಆಫ್ ಸಿಲೆಬಸ್ ಬಂದಿದೆ ಎಂದು ಗುರುವಾರ ವಿದ್ಯಾರ್ಥಿಗಳು ಆರೋಪ ಮಾಡಿದ್ದರು. ಈಗ 11 ಮಾರ್ಕ್ಸ್ ಬಗ್ಗೆ ದೂರಿದ್ದಾರೆ.

ಕೆಇಎ ಹೇಳೋದೇನು?

ಗ್ರೇಸ್ ಮಾರ್ಕ್ಸ್ ನೀಡುವ ಬಗ್ಗೆ ಕೆಇಎ ಈವರೆಗೆ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು. ನಂತರ ಗ್ರೇಸ್ ಮಾರ್ಕ್ಸ್ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ವಿಸ್ತಾರ ನ್ಯೂಸ್‌ಗೆ ಕೆಇಎ ಮಂಡಳಿ ಮಾಹಿತಿ ನೀಡಿದೆ. ಈ ಸಮಿತಿ ರಚನೆಯಾದ ಬಳಿಕ ಅಧ್ಯಯನ ಮಾಡಿ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗುವುದು.

ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದಿರುವ ವಿದ್ಯಾರ್ಥಿಗಳು

ಈ ವರ್ಷ ಸಿಇಟಿ ಪರೀಕ್ಷೆಗೆ ದಾಖಲೆಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಹಿಂದೆ ಯಾವತ್ತೂ ಇಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿರಲಿಲ್ಲ. ರಾಜ್ಯದಲ್ಲಿ 737 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ 167 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಯನ್ನು ನಡೆಸಲಾಗಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಭೇಟಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಗುರುವಾರ ಮಲ್ಲೇಶ್ವರಂ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಶುಕ್ರವಾರ ನಡೆಯುವ ಪರೀಕ್ಷೆಗೂ ಬಿಗಿ ಭದ್ರತೆ ಇರಲಿದೆ ಎಂದು ಹೇಳಿದ್ದರು.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೋಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ.

ಇದನ್ನೂ ಓದಿ: Neha Murder Case: ಐಸಿಸ್‌ ಮಾದರಿಯಲ್ಲಿ ನೇಹಾಗೆ ಚಾಕು ಇರಿತ; ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ಮಾತನಾಡಿ, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದ್ದಾರೆ.

Continue Reading

ಕ್ರೀಡೆ

IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

IPL 2024: ಕೊನೆಯ ಓವರ್ ಎಸೆಯುವ ಮೊದಲು, ಮಧ್ವಾಲ್ ತಮ್ಮ ಮೊದಲ ಮೂರು ಓವರ್​ಗಳಲ್ಲಿ 44 ರನ್​ ಬಿಟ್ಟುಕೊಟ್ಟಿದ್ದರು. ವಿಕೆಟ್ ಪಡೆದಿರಲಿಲ್ಲ. ರೊಮಾರಿಯೊ ಶೆಫರ್ಡ್​ಗೆ ಚೆಂಡನ್ನು ನೀಡುವ ಆಯ್ಕೆಯನ್ನು ಹಾರ್ದಿಕ್ ಹೊಂದಿದ್ದರು. ಆದರೆ, ರೋಹಿತ್​​ ಮಧ್ವಾಲ್ ಅವರನ್ನು ಆಯ್ಕೆ ಮಾಡಿದರು. ಬರೋಡಾ ಆಲ್​ರೌಂಡರ್​ ಬೌಲಿಂಗ್​ಗೆ ಮೊದಲು ರೋಹಿತ್ ಜತೆ ಸುದೀರ್ಘ ಚರ್ಚೆ ನಡೆಸಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ರೋಮಾಂಚಕ ಐಪಿಎಲ್​ 2024ರ (IPL 2024) ಪಂದ್ಯದ ಕೊನೆಯ ಓವರ್​​ನಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ತಮ್ಮ ತಂಡಕ್ಕೆ ಫೀಲ್ಡ್​ ಸೆಟ್ ಮಾಡುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಹಾಲಿ ನಾಯಕ ಪಾಂಡ್ಯ ಇದ್ದ ಹೊರತಾಗಿಯೂ ಅವರು ಬೌಲರ್​ ಜತೆ ಸೇರಿಕೊಂಡು ಫೀಲ್ಡ್​ ಸೆಟ್ ಮಾಡುವ ವಿಡಿಯೊ ವೈರಲ್ ಆಗಿದೆ ಯುವ ಬೌಲರ್ ಕೂಡ ಪಾಂಡ್ಯನ ಮಾತುಗಳಿಗೆ ಕಿಮ್ಮತ್ತು ಕೊಡದೇ ಕೇವಲ ರೋಹಿತ್​ ಮಾತುಗಳನ್ನು ಮಾತ್ರ ಕೇಳಿಸಿಕೊಳ್ಳುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ.

ಪಂದ್ಯವನ್ನು ಮುಂಬಯಿ ತಂಡ ಬಹುತೇಕ ಕಳೆದುಕೊಳ್ಳುವ ಹಂತದಲ್ಲಿ ಇತ್ತು. ಆದರೆ, ಕೊನೇ ಹಂತದಲ್ಲಿ ಗೆಲುವು ಲಭಿಸಿತು. ಮುಲ್ಲಾನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 193 ರನ್​ಗಳ ಗುರಿ ಬೆನ್ನತ್ತಿದ ಕಿಂಗ್ಸ್ ಎರಡನೇ ಓವರ್​​ನಲ್ಲಿ 4 ವಿಕೆಟ್ ನಷ್ಟಕ್ಕೆ 14 ರನ್ ಗಳಿಸಿತ್ತು. ಆದರೆ ಅಶುತೋಷ್ ಶರ್ಮಾ 28 ಎಸೆತಗಳಲ್ಲಿ 61 ರನ್ ಗಳಿಸಿ ಗೆಲುವು ಸಾಧಿಸುವ ಭರವಸೆ ಮೂಡಿಸಿದರು. ಕೊನೆಯ ಓವರ್​ನಲ್ಲಿ ಆತಿಥೇಯರಿಗೆ ಗೆಲ್ಲಲು 12 ರನ್​ಗಳ ಅವಶ್ಯಕತೆಯಿತ್ತು. ಆದರೆ ಕೇವಲ ಒಂದು ವಿಕೆಟ್ ಮಾತ್ರ ಉಳಿದಿತ್ತು. ಮುಂಬೈ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಜವಾಬ್ದಾರಿಯನ್ನು ಬೌಲರ್​​ ಆಕಾಶ್ ಮಧ್ವಾಲ್ ಅವರಿಗೆ ನೀಡಲಾಯಿತು.

ಕೊನೆಯ ಓವರ್ ಎಸೆಯುವ ಮೊದಲು, ಮಧ್ವಾಲ್ ತಮ್ಮ ಮೊದಲ ಮೂರು ಓವರ್​ಗಳಲ್ಲಿ 44 ರನ್​ ಬಿಟ್ಟುಕೊಟ್ಟಿದ್ದರು. ವಿಕೆಟ್ ಪಡೆದಿರಲಿಲ್ಲ. ರೊಮಾರಿಯೊ ಶೆಫರ್ಡ್​ಗೆ ಚೆಂಡನ್ನು ನೀಡುವ ಆಯ್ಕೆಯನ್ನು ಹಾರ್ದಿಕ್ ಹೊಂದಿದ್ದರು. ಆದರೆ, ರೋಹಿತ್​​ ಮಧ್ವಾಲ್ ಅವರನ್ನು ಆಯ್ಕೆ ಮಾಡಿದರು. ಬರೋಡಾ ಆಲ್​ರೌಂಡರ್​ ಬೌಲಿಂಗ್​ಗೆ ಮೊದಲು ರೋಹಿತ್ ಜತೆ ಸುದೀರ್ಘ ಚರ್ಚೆ ನಡೆಸಿದ್ದರು. ಆದರೆ, ನಾಯಕ ಪಾಂಡ್ಯನ ಬಳಿ ಒಂದೇ ಒಂದು ಮಾತು ಆಡಿರಲಿಲ್ಲ. ಮಾಜಿ ನಾಯಕ ಹಾಗೂ ಬೌಲರ್ ಫೀಲ್ಡ್​ ಸೆಟ್ ಮಾಡುವಾಗ ಪಾಂಡ್ಯ ಪೆಚ್ಚು ಮೋರೆ ಹಾಕಿ ನೋಡುತ್ತಿದ್ದರು.

ಇದನ್ನೂ ಓದಿ: Royal Challenges Bangalore : ಬೆಂಗಳೂರಿನ ಮೂರು ಕೆರೆಗಳನ್ನೂ ಅಭಿವೃದ್ಧಿ ಮಾಡಿದ ಆರ್​ಸಿಬಿ

ರೋಹಿತ್ ಶರ್ಮಾ ಅವರ ನಾಯಕತ್ವದ ಕೌಶಲ್ಯಗಳ ಬಗ್ಗೆ ಮುಕ್ತವಾಗಿ ಮೆಚ್ಚುಗೆ ವ್ಯಕ್ತಪಡಿಸಿರುವ ಆಕಾಶ್ ಮಧ್ವಾಲ್, ಮೈದಾನದ ಫೀಲ್ಡ್​ ಸೆಟಿಂಗ್​ನಲ್ಲಿ ಅವರ ನೆರವು ಕೇಳಿದ್ದಾರೆ. ಕೊನೆಯಲ್ಲಿ, ಹಾರ್ದಿಕ್ ರೋಹಿತ್​ ಹೇಳಿದ್ದನ್ನೇ ಒಪ್ಪಿಕೊಂಡರು.

ಪಂಜಾಬ್ ವಿರುದ್ಧ ಮುಂಬೈಗೆ ಗೆಲುವು

ಪಂಜಾಬ್ ಕಿಂಗ್ಸ್ ಇನ್ನಿಂಗ್ಸ್ ಮುಗಿಸಲು ಮುಂಬೈ ಇಂಡಿಯನ್ಸ್​​ 20 ನೇ ಓವರ್​ನಲ್ಲಿ ಕೇವಲ ಒಂದು ವಿಕೆಟ್​​ ಅಗತ್ಯವಿತ್ತು. ಕಗಿಸೊ ರಬಾಡ ಎರಡು ರನ್​ ಗಳಿಸುವ ಯೋಜನೆಯಲ್ಲಿ ಓಡಿದರು. ಅವರು ರನ್​ಔಟ್ ಆದರು. ಈ ಪಂದ್ಯವನ್ನು ಹಾರ್ದಿಕ್ ಬಳಗ 9 ರನ್ ಗಳಿಂದ ಗೆದ್ದುಕೊಂಡಿತು. 4 ಓವರ್​ಗಳಲ್ಲಿ 21 ರನ್​ಗೆ 3 ವಿಕೆಟ್ ಕಬಳಿಸಿದ ಜಸ್ಪ್ರೀತ್ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮತ್ತೊಂದು ಗಮನಾರ್ಹ ಪ್ರದರ್ಶನದಲ್ಲಿ, ದಕ್ಷಿಣ ಆಫ್ರಿಕಾದ ಜೆರಾಲ್ಡ್ ಕೊಟ್ಜೆ ಕೂಡ ಬುಮ್ರಾಗೆ ಉತ್ತಮ ಬೆಂಬಲ ನೀಡಿ 3 ವಿಕೆಟ್ ಪಡೆದರು. ಐಪಿಎಲ್ 2024 ರ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ಇನ್ನು ರಾಜಸ್ಥಾನ್ ರಾಯಲ್ಸ್ (ಆರ್​ಆರ್​ ವಿರುದ್ಧ ಆಡಲಿದೆ.

Continue Reading

ಕ್ರೀಡೆ

Royal Challenges Bangalore : ಬೆಂಗಳೂರಿನ ಮೂರು ಕೆರೆಗಳನ್ನೂ ಅಭಿವೃದ್ಧಿ ಮಾಡಿದ ಆರ್​ಸಿಬಿ

Royal Challenges Bangalore: ರಾಜಾನುಕುಂಟೆ ಸಮೀಪದ ಇಟ್ಟಗಲ್ಲಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯಲ್ಲಿ ಆರ್​ಸಿಬಿ ಹೂಳೆತ್ತುವ ಮತ್ತು ಅಭಿವೃದ್ಧಿಪಡಿಸುವ ಕೆಲಸ ಮಾಡಿದೆ. ಅಕ್ಟೋಬರ್ 2023 ರಲ್ಲಿ ಆರ್​ಸಿಬಿ ಈ ಯೋಜನೆ ಪ್ರಾರಂಭಿಸಿತ್ತು. ಈ ಪ್ರದೇಶದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು ಬೋರ್​ವೆಲ್​ಗಳನ್ನು 1000 ರಿಂದ 1500 ಅಡಿಗಳವರೆಗೆ ಕೊರೆಸಬೇಕಾಗಿದೆ. ಈ ಪ್ರದೇಶಗಳು ಕಾವೇರಿ ನದಿಯ ನೀರಿನ ಲಭ್ಯತೆಯನ್ನು ಹೊಂದಿಲ್ಲ. ಹೀಗಾಗಿ ಈ ಕೆರೆಗಳನ್ನು ಅಭಿವೃದ್ಧಿ ಮಾಡಲಾಗಿದೆ.

VISTARANEWS.COM


on

Royal Challengers Banaglore
Koo

ಬೆಂಗಳೂರು: ಇಂಡಿಯಾ ಕೇರ್ಸ್ ಫೌಂಡೇಶನ್​ನ ಇತ್ತೀಚಿನ ವರದಿಯ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challenges Bangalore) ಬೆಂಗಳೂರಿನ ಎರಡು ಪ್ರಮುಖ ಕೆರೆಗಳ ಪುನರುಜ್ಜೀವನ ಕಾರ್ಯವನ್ನು ಪೂರ್ಣಗೊಳಿಸಿದೆ, ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ ಮತ್ತು ಮೂರನೇ ಕೆರೆ ಪಕ್ಕದಲ್ಲಿ ನಾಗರಿಕ ಸೌಲಭ್ಯಗಳನ್ನು ಸೇರಿಸಿದೆ.

ರಾಜಾನುಕುಂಟೆ ಸಮೀಪದ ಇಟ್ಟಗಲ್ಲಪುರ ಕೆರೆ ಮತ್ತು ಸಾದೇನಹಳ್ಳಿ ಕೆರೆಯಲ್ಲಿ ಆರ್​ಸಿಬಿ ಹೂಳೆತ್ತುವ ಮತ್ತು ಅಭಿವೃದ್ಧಿಪಡಿಸುವ ಕೆಲಸ ಮಾಡಿದೆ. ಅಕ್ಟೋಬರ್ 2023 ರಲ್ಲಿ ಆರ್​ಸಿಬಿ ಈ ಯೋಜನೆ ಪ್ರಾರಂಭಿಸಿತ್ತು. ಈ ಪ್ರದೇಶದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು ಬೋರ್​ವೆಲ್​ಗಳನ್ನು 1000 ರಿಂದ 1500 ಅಡಿಗಳವರೆಗೆ ಕೊರೆಸಬೇಕಾಗಿದೆ. ಈ ಪ್ರದೇಶಗಳು ಕಾವೇರಿ ನದಿಯ ನೀರಿನ ಲಭ್ಯತೆಯನ್ನು ಹೊಂದಿಲ್ಲ. ಹೀಗಾಗಿ ಈ ಕೆರೆಗಳನ್ನು ಅಭಿವೃದ್ಧಿ ಮಾಡಲಾಗಿದೆ.

ವರದಿಯ ಪ್ರಕಾರ, ಇಟ್ಟಗಲ್ಲಪುರ ರ ಕೆರೆ ಮತ್ತು ಸಾದೇನಹಳ್ಳಿ ಕೆರೆಯಿಂದ 1.20 ಲಕ್ಷ ಟನ್ ಹೂಳು ಮತ್ತು ಮರಳನ್ನು ತೆಗೆಯಲಾಗಿದೆ. ಇದನ್ನು ಕೆರೆಗಳಿಗೆ ಅಡ್ಡಲಾಗಿ ಕಟ್ಟೆಗಳು ಮತ್ತು ಮಾರ್ಗಗಳನ್ನು ನಿರ್ಮಿಸಲು ಬಳಸಲಾಗಿದೆ. 52 ರೈತರು ತಮ್ಮ ಹೊಲಗಳಿಗೆ ಮೇಲ್ಮಣ್ಣು ಬಳಸಲು ಮಣ್ಣನ್ನು ತೆಗೆದುಕೊಂಡಿದ್ದಾರೆ.

ಒಟ್ಟು ಒಂಬತ್ತು ಎಕರೆ ಕೆರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಪರಿಣಾಮವಾಗಿ ಕೊಳಗಳು ಮತ್ತು ಗದ್ದೆಗಳು ಸೃಷ್ಟಿಯಾಗಿವೆ. ಈ ವೈಶಿಷ್ಟ್ಯಗಳು ಸರೋವರಗಳಲ್ಲಿ ವಾಸಿಸುವ ಪಕ್ಷಿಗಳು ಮತ್ತು ಪ್ರಾಣಿಗಳಿಗೆ ಪ್ರಯೋಜನವನ್ನು ನೀಡುತ್ತಿವೆ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವೂ ೧೭ ಎಕರೆಗಳವರೆಗೆ ಹೆಚ್ಚಾಗಿದೆ.

ಇದನ್ನೂ ಓದಿ: IPL 2024 : ಆರ್​ಸಿಬಿ, ಕೊಹ್ಲಿಯ ನೆರವು ಸ್ಮರಿಸಿದ ಕೆ. ಎಲ್ ರಾಹುಲ್​

ಈ ಸರೋವರಗಳು ಅಂತರ್ಜಲ ಮರುಪೂರಣಕ್ಕೆ ಅನುಕೂಲವಾಗುವುದಲ್ಲದೆ, ಕುಡಿಯುವ ನೀರಿನ ಪ್ರಮುಖ ಮೂಲಗಳಾಗಿ ಕಾರ್ಯನಿರ್ವಹಿಸುತ್ತವೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳನ್ನು ಬೆಂಬಲಿಸುತ್ತವೆ. ಇದು ಎರಡು ಸರೋವರಗಳ ಮೀನುಗಾರರು ಮತ್ತು ರೈತರಿಗೆ ಹೆಚ್ಚುವರಿ ಜೀವನೋಪಾಯದ ಅವಕಾಶಗಳನ್ನು ನೀಡುತ್ತದೆ. ಈಗ ಮೊದಲಿಗಿಂತ ಮೂರು ಪಟ್ಟು ಹೆಚ್ಚು ಮೀನು ಪಡೆಯಬಹುದು. ಪ್ರಸ್ತುತ ಕೃಷಿಗಾಗಿ ಕೊಳವೆಬಾವಿಗಳನ್ನು ಅವಲಂಬಿಸಿರುವ ರೈತರು ಈಗ ಈ ಪುನರುಜ್ಜೀವನಗೊಂಡ ಸರೋವರಗಳನ್ನು ಕೃಷಿ ಮತ್ತು ಇತರ ಉದ್ದೇಶಗಳಿಗಾಗಿ ಬಳಸಬಹುದು.

ಕಣ್ಣೂರು ಕರೆಯ ವ್ಯಾಪ್ತಿಯಲ್ಲಿ ನಾಗರಿಕ ಸೌಲಭ್ಯಗಳನ್ನು ನೀಡಲಾಗಿದೆ. ಎಲ್ಲಾ ಮೂರು ಸರೋವರಗಳಲ್ಲಿ ಜನಾಂಗೀಯ-ಔಷಧೀಯ ಸಸ್ಯಗಳ ಉದ್ಯಾನವನಗಳು, ಬಿದಿರು ಉದ್ಯಾನಗಳು ಮತ್ತು ಚಿಟ್ಟೆ ಉದ್ಯಾನಗಳನ್ನು ನಿರ್ಮಿಸಲಾಗಿದೆ. ಏಕೆಂದರೆ ಈ ಉಪಕ್ರಮವು ಸರೋವರಗಳ ಜೀವವೈವಿಧ್ಯತೆಯನ್ನು ಸುಧಾರಿಸುವ ಮತ್ತು ಸುಸ್ಥಿರಗೊಳಿಸುವ ಗುರಿ ಹೊಂದಿದೆ, ಪರಿಸರ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಲು ಮಕ್ಕಳಿಗೆ ಶೈಕ್ಷಣಿಕ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತದೆ.

Continue Reading

ವೈರಲ್ ನ್ಯೂಸ್

Video Viral: ಬ್ಯಾಲೆಟ್‌ ಪೇಪರ್‌ ಕಳ್ಳ ಮತದಾನದ ರಹಸ್ಯ ಬಿಚ್ಚಿಟ್ಟ ಪರಮೇಶ್ವರ್;‌ ಕಾಂಗ್ರೆಸ್‌ EVM ಬೇಡ ಎನ್ನಲು ಇದೇ ಕಾರಣವೆಂದ ಜೆಡಿಎಸ್!

Video Viral: ತುಮಕೂರಿನಲ್ಲಿ ಏಪ್ರಿಲ್‌ 16ರಂದು ನಡೆದಿದ್ದ ಯಾದವ ಸಮುದಾಯದ ಸಭೆಯಲ್ಲಿ ಮಾತನಾಡಿದ್ದ ಡಾ. ಜಿ. ಪರಮೇಶ್ವರ್, ಇವಿಎಂ ಬರುವ ಮೊದಲು ಚುನಾವಣೆ ಹೇಗೆ ನಡೆಯುತ್ತಿತ್ತು ಎಂಬುದನ್ನು ವಿವರಿಸಿದ್ದರು. ಯಾದವ ಸಮುದಾಯ ತಮ್ಮ ಮೇಲೆ ಇಟ್ಟಿದ್ದ ಪ್ರೀತಿಯ ಬಗ್ಗೆ ಹೇಳುವ ಸಂದರ್ಭದಲ್ಲಿ ಈ ಹೇಳಿಕೆಯನ್ನು ನೀಡಿ ಈಗ ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ ಬ್ಯಾಲೆಟ್‌ ಪೇಪರ್‌ ಇದ್ದಾಗ ಒಬ್ರೋ ಇಬ್ರೋ ಕುಳಿತುಕೊಂಡು ಊರವರೆಲ್ಲರ ವೋಟು ಹಾಕುತ್ತಿದ್ದರು ಎಂದು ಹೇಳಿರುವ ವಿಡಿಯೊ ಸಖತ್‌ ವೈರಲ್‌ ಆಗಿದೆ.

VISTARANEWS.COM


on

Video Viral Parameshwara statement on ballot paper bogus voting
Koo

ಬೆಂಗಳೂರು/ತುಮಕೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ತುಮಕೂರಿನಲ್ಲಿ ನಡೆದ ಯಾದವ ಸಮುದಾಯದ ಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Dr G Parameshwara) ಅವರು ಈ ಹಿಂದಿನ ಬ್ಯಾಲೆಟ್‌ ಮತದಾನ (Ballot paper voting) ಹಾಗೂ ಈಗಿನ ಇವಿಎಂ ಮತದಾನದ (EVM Voting) ಬಗ್ಗೆ ಸ್ಮರಿಸುತ್ತಾ ಆಡಿದ ಮಾತುಗಳು ಈಗ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಈಡು ಮಾಡಿದ್ದಲ್ಲದೆ, ವೈರಲ್‌ (Video Viral) ಆಗಿದೆ. ಜತೆಗೆ, ಕಾಂಗ್ರೆಸ್‌ ಪಕ್ಷವನ್ನು ಮುಜುಗರಕ್ಕೀಡು ಮಾಡಿದೆ. “ಈ ಹಿಂದೆ ಬ್ಯಾಲೆಟ್‌ ಪೇಪರ್‌ ಇದ್ದಾಗ ಒಬ್ರೋ ಇಬ್ರೋ ಕುಳಿತುಕೊಂಡು ಊರವರೆಲ್ಲರ ವೋಟು ಹಾಕುತ್ತಿದ್ದರು” ಎಂಬ ಪರಮೇಶ್ವರ್‌ ಹೇಳಿಕೆ ಈಗ ಸಖತ್‌ ವೈರಲ್‌ ಆಗಿದೆ. ಈ ವಿಡಿಯೊವನ್ನು ಜೆಡಿಎಸ್‌ ರಾಜ್ಯ ಘಟಕವು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅಪ್ಲೋಡ್‌ ಮಾಡಿದ್ದು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆ ಜಾರಿ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತಿರುವುದು ಇದೇ ಕಾರಣಕ್ಕೆ ಎಂದು ಕಿಡಿಕಾರಿದೆ.

ವೈರಲ್‌ ಆಯ್ತು ಗೃಹ ಸಚಿವರ ಹೇಳಿಕೆ!

ತುಮಕೂರಿನಲ್ಲಿ ಏಪ್ರಿಲ್‌ 16ರಂದು ನಡೆದಿದ್ದ ಯಾದವ ಸಮುದಾಯದ ಸಭೆಯಲ್ಲಿ ಮಾತನಾಡಿದ್ದ ಡಾ. ಜಿ. ಪರಮೇಶ್ವರ್, ಇವಿಎಂ ಬರುವ ಮೊದಲು ಚುನಾವಣೆ ಹೇಗೆ ನಡೆಯುತ್ತಿತ್ತು ಎಂಬುದನ್ನು ವಿವರಿಸಿದ್ದರು. ಯಾದವ ಸಮುದಾಯ ತಮ್ಮ ಮೇಲೆ ಇಟ್ಟಿದ್ದ ಪ್ರೀತಿಯ ಬಗ್ಗೆ ಹೇಳುವ ಸಂದರ್ಭದಲ್ಲಿ ಈ ಹೇಳಿಕೆಯನ್ನು ನೀಡಿ ಈಗ ವಿವಾದಕ್ಕೆ ಸಿಲುಕಿದ್ದಾರೆ.

ಪರಮೇಶ್ವರ್‌ ಹೇಳಿದ್ದೇನು?

ಮೊದಲೆಲ್ಲ ಮತದಾನಕ್ಕಾಗಿ ಎಲ್ಲವೂ ಒತ್ತೋದು. ಈ ಇವಿಎಂ ಇರಲಿಲ್ಲ. ಅವಾಗ ಒಬ್ಬರೋ ಇಬ್ಬರೋ ಸೇರಿಕೊಂಡು ಒತ್ತಿಬಿಡ್ರೋ ಅತ್ಲಾಗೆ ಅನ್ನೋರು. ಅನೇಕ ಸಂದರ್ಭದಲ್ಲಿ ನಾನು ಅದನ್ನು ಜ್ಞಾಪಿಸಿಕೊಳ್ಳುತ್ತೇನೆ. ನಮ್ಮ ಮಧುಚಂದ್ರ ಇವಾಗಲೂ ಇದ್ದಾನೆ. ನಮ್ಮ ಹಟ್ಟಿ ಒಳಗೆ ಒಬ್ರೋ ಇಬ್ರೋ ಕುಳಿತುಕೊಂಡು ಮತಕ್ಕೆ ಸಂಬಂಧಿಸಿ ಸೀಲ್‌ ಒತ್ತಿ ಅಂತಾ ಕಳುಹಿಸೋರು. ಇವತ್ತಿಗೂ ಸಹ ಯಾದವ ಸಮುದಾಯದವರು ನನ್ನನ್ನು ಕರೆಯೋದು ನಮ್ಮಯಪ್ಪ ಅಂತಲೇ. ಅದಕ್ಕಾಗಿ ನಾನು ಯಾದವ ಸಮುದಾಯದ ಖುಣ ತೀರಿಸುವ ಕೆಲಸವನ್ನು ಮಾಡಬೇಕಿದೆ. ಆ ಕೆಲಸವನ್ನು ನಾನು ಮಾಡಿಯೇ ತೀರುತ್ತೇನೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ಸಖತ್‌ ವೈರಲ್‌ ಆಗಿದೆ.

ಕಾಂಗ್ರೆಸ್‌ ಗೆಲುವಿನ ಫಾರ್ಮುಲಾ ಈ ಕಳ್ಳವೋಟು; ಜೆಡಿಎಸ್‌ ಕಿಡಿ

ಈ ಬಗ್ಗೆ ಜೆಡಿಎಸ್‌ ರಾಜ್ಯ ಘಟಕವು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದೆ. ಡಾ. ಜಿ. ಪರಮೇಶ್ವರ್‌ ಅವರು ಕಾರ್ಯಕ್ರಮದಲ್ಲಿ ಮಾತನಾಡಿದ ವಿಡಿಯೊವನ್ನು ಸಹ ಅಪ್ಲೋಡ್‌ ಮಾಡಿದೆ. ಕಾಂಗ್ರೆಸ್‌ ಗೆಲುವಿನ ಫಾರ್ಮೂಲಾದ ಸೀಕ್ರೆಟ್‌ ಇದೇ ಆಗಿದೆ ಎಂದು ಕಿಡಿಕಾರಿದೆ. ಅಂದಹಾಗೆ ಇದನ್ನು ನಾವು ಹೇಳುತ್ತಿರುವುದಲ್ಲ, ಸ್ವತಃ ರಾಜ್ಯದ ಗೃಹ ಮಂತ್ರಿ ಪರಮೇಶ್ವರ್‌ ಅವರು ನೀಡಿರುವ ಹೇಳಿಕೆ ಇದಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Neha Murder Case: ಕಾಂಗ್ರೆಸ್‌ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್. ಅಶೋಕ್‌ ಗುಡುಗು

ಜೆಡಿಎಸ್‌ ಪೋಸ್ಟ್‌ನಲ್ಲೇನಿದೆ?

“ಕಳ್ಳ ವೋಟು was the secret Winning Formula of @INCIndia!” ಇದನ್ನು ನಾವು ಹೇಳಿದಲ್ಲ, ಸ್ವತಃ ನಮ್ಮ ರಾಜ್ಯದ ಗೃಹಮಂತ್ರಿಗಳಾದ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ. ಇದು ಅವರು ಬಯಲು ಮಾಡಿರುವ ಸತ್ಯ. ಈ ಹೇಳಿಕೆಯು ಕಾಂಗ್ರೆಸ್‌ ಪಕ್ಷದ ಅಸಲಿ ಮುಖವನ್ನು ಬಯಲು ಮಾಡಿದೆ.

ಇವಿಎಂ ಬರುವ ಮುಂಚೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದವರು ಒಬ್ಬರೋ ಇಬ್ಬರನ್ನೋ ಕೂರಿಸಿ ಕಳ್ಳ ಮತದಾನ ಮಾಡಿಸಿಕೊಂಡು, ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುತ್ತಿತ್ತು. ಈ ಸತ್ಯವನ್ನು ಸಚಿವರೇ ಒಪ್ಪಿಕೊಂಡಿದ್ದಾರೆ.

ಇವಿಎಂ ಬದಲು ಮರಳಿ ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆ ಜಾರಿ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತಿರುವುದು ಇದೇ ಕಾರಣಕ್ಕೆ!!” ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

Continue Reading
Advertisement
Day 2 of CET 2024 Exam 26 out of syllabus question KEA asks to raise objections by April 27
ಶಿಕ್ಷಣ4 mins ago

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

Maldives Tourism
ವಿದೇಶ7 mins ago

Maldives Tourism: ಪರಿಣಾಮ ಬೀರಿದ ಮಾಲ್ಡೀವ್ಸ್ ಬಹಿಷ್ಕಾರದ ಕೂಗು; ಭೇಟಿ ನೀಡುವ ಭಾರತೀಯರ ಸಂಖ್ಯೆಯಲ್ಲಿ ಭಾರೀ ಕುಸಿತ

IPL 2024
ಕ್ರೀಡೆ10 mins ago

IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

Party symbols
ರಾಜಕೀಯ13 mins ago

Party Symbols: ವಿವಿಧ ಪಕ್ಷಗಳ ಚುನಾವಣಾ ಚಿಹ್ನೆ ಹಿಂದೆ ಹೇಗಿತ್ತು, ಈಗ ಏನಾಗಿದೆ? ಸಂಗ್ರಹಯೋಗ್ಯ ಮಾಹಿತಿ

letter to President
ಕರ್ನಾಟಕ15 mins ago

letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

Surapura assembly constituency by election Congress candidate Rajavenugopal Nayaka filed nomination
ಯಾದಗಿರಿ32 mins ago

Yadgiri News: ರಾಜಾವೇಣುಗೋಪಾಲ ನಾಯಕಗೆ ಬೆಂಬಲಿಸಿ, ಗೆಲ್ಲಿಸಿ: ಸಚಿವ ದರ್ಶನಾಪುರ

Royal Challengers Banaglore
ಕ್ರೀಡೆ36 mins ago

Royal Challenges Bangalore : ಬೆಂಗಳೂರಿನ ಮೂರು ಕೆರೆಗಳನ್ನೂ ಅಭಿವೃದ್ಧಿ ಮಾಡಿದ ಆರ್​ಸಿಬಿ

Video Viral Parameshwara statement on ballot paper bogus voting
ವೈರಲ್ ನ್ಯೂಸ್38 mins ago

Video Viral: ಬ್ಯಾಲೆಟ್‌ ಪೇಪರ್‌ ಕಳ್ಳ ಮತದಾನದ ರಹಸ್ಯ ಬಿಚ್ಚಿಟ್ಟ ಪರಮೇಶ್ವರ್;‌ ಕಾಂಗ್ರೆಸ್‌ EVM ಬೇಡ ಎನ್ನಲು ಇದೇ ಕಾರಣವೆಂದ ಜೆಡಿಎಸ್!

Money Guide
ಮನಿ-ಗೈಡ್1 hour ago

Money Guide: ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇದರಲ್ಲಿನ ವಿಧಗಳ ಬಗ್ಗೆ ಇಲ್ಲಿದೆ ಮಾಹಿತಿ

‌Assault Case
ಕರ್ನಾಟಕ1 hour ago

‌Assault Case: ಮೋದಿ ಹಾಡು ಬರೆದ ಯುವಕನ ಮೇಲೆ ಹಲ್ಲೆ; ಐವರ ವಿರುದ್ಧ ಎಫ್ಐಆರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ5 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ16 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌