Infosys | Moonlighting | ಎರಡೆರಡು ಕಡೆ ಕೆಲಸ ಮಾಡಿದ ಉದ್ಯೋಗಿಗಳನ್ನು ವಜಾಗೊಳಿಸಿದ ಇನ್ಫೋಸಿಸ್ - Vistara News

ಪ್ರಮುಖ ಸುದ್ದಿ

Infosys | Moonlighting | ಎರಡೆರಡು ಕಡೆ ಕೆಲಸ ಮಾಡಿದ ಉದ್ಯೋಗಿಗಳನ್ನು ವಜಾಗೊಳಿಸಿದ ಇನ್ಫೋಸಿಸ್

ಉದ್ಯೋಗಿಗಳು ಏಕಕಾಲಕ್ಕೆ ಎರಡೆರಡು ಕೆ ಕೆಲಸ ಮಾಡುವುದನ್ನು ಇನ್ಫೋಸಿಸ್‌ ಸಂಪೂರ್ಣ ವಿರೋಧಿಸುತ್ತದೆ ಎಂದು ಕಂಪನಿಯ ಸಿಇಒ ಸಲೀಲ್‌ ಪರೇಖ್‌ ತಿಳಿಸಿದ್ದಾರೆ.

VISTARANEWS.COM


on

Infoysis
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಪ್ರೊ ಬಳಿಕ ಇನ್ಫೋಸಿಸ್‌ (Infosys) ಮೂನ್‌ಲೈಟಿಂಗ್‌ (Moonlighting ) ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ಕಳೆದ 12 ತಿಂಗಳುಗಳಲ್ಲಿ ಏಕಕಾಲಕ್ಕೆ ಎರಡು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ ಎಂದು ಇನ್ಫೋಸಿಸ್‌ ಸಿಇಒ ಸಲೀಲ್‌ ಪರೇಖ್‌ ತಿಳಿಸಿದ್ದಾರೆ.

” ಮೂನ್‌ಲೈಟಿಂಗ್‌ ಪರಿಕಲ್ಪನೆಗೆ ಇನ್ಫೋಸಿಸ್‌ ಸಂಪೂರ್ಣ ವಿರೋಧಿಸುತ್ತದೆ. ಹೀಗಿದ್ದರೂ, ಅರೆ ಕಾಲಿಕ ಉದ್ಯೋಗಿಗಳಿಗೆ ಕಂಪನಿ ಬೆಂಬಲ ನೀಡುತ್ತದೆʼʼ ಎಂದು ತಿಳಿಸಿದರು. ವಿಪ್ರೊ ಕೂಡ ಉದ್ಯೋಗಿಗಳನ್ನು ಮೂನ್‌ಲೈಟಿಂಗ್‌ ನಡೆಸಿದ್ದಕ್ಕಾಗಿ ವಜಾಗೊಳಿಸಿತ್ತು. ಟಿಸಿಎಸ್‌ ಕೂಡ ಈ ಪದ್ಧತಿಯನ್ನು ವಿರೋಧಿಸಿದೆ.

ಇದನ್ನೂ ಓದಿ: Infosys | ಟೆಕ್ಕಿಗಳಿಗೆ ಕಚೇರಿ ಕೆಲಸ ಕಡ್ಡಾಯವಲ್ಲ: ಇನ್ಫೋಸಿಸ್‌ ಸಿಇಒ ಸಲೀಲ್‌ ಪರೇಖ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

HD Kumaraswamy: ದೇವರಾಜೇಗೌಡರಿಗೆ ಜೈಲಲ್ಲಿ ಜೀವ ಭಯ ಇದೆ; ಕಾರಣ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ

HD Kumaraswamy: ಜೈಲಿನಲ್ಲಿ ವಕೀಲ ದೇವೇರಾಜೇಗೌಡರಿಗೆ ಜೀವ ಭಯ ಇದೆ ಎಂಬ ಮಾಜಿ ಶಾಸಕ ಸುರೇಶ್ ಗೌಡ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ದೇವರಾಜೇಗೌಡ ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇರಬಹುದು. ಈ ಸರ್ಕಾರದಲ್ಲಿ ಇರುವ ಬಹಳ ಜನರು ಯಾವ ಹಿನ್ನೆಲೆಯಿಂದ ಬಂದಿದ್ದಾರೆ ಎನ್ನುವ ಹಿನ್ನೆಲೆಯನ್ನು ನೋಡಿದರೆ ನಿಜ ಇರಬಹುದು. ಹೀಗಾಗಿ ನಮ್ಮ ಪಕ್ಷದ ಮಾಜಿ ಶಾಸಕ ಸುರೇಶ್ ಗೌಡ ಅವರು ಹೇಳಿರಬಹುದು ಎಂದು ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡಿದ್ದಾರೆ.

VISTARANEWS.COM


on

HD Kumaraswamy attack on DK Shivakumar and he gives reason for Devaraje Gowda fears for his life in jail
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ (HD Devegowda) ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಕೂಡಲೇ ರಾಜೀನಾಮೆ ಕೊಡಬೇಕು. ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆಶಿಗೆ ಎಂದು ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು, ಜೈಲಿನಲ್ಲಿ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಜೀವ ಭಯ ಇದೆ ಎಂದು ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಅದಕ್ಕೆ ಏನು ಕಾರಣ ಎಂದೂ ಹೇಳಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಜೈಲಿನಲ್ಲಿ ವಕೀಲ ದೇವೇರಾಜೇಗೌಡರಿಗೆ ಜೀವ ಭಯ ಇದೆ ಎಂಬ ಮಾಜಿ ಶಾಸಕ ಸುರೇಶ್ ಗೌಡ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ದೇವರಾಜೇಗೌಡ ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇರಬಹುದು. ಈ ಸರ್ಕಾರದಲ್ಲಿ ಇರುವ ಬಹಳ ಜನರು ಯಾವ ಹಿನ್ನೆಲೆಯಿಂದ ಬಂದಿದ್ದಾರೆ ಎನ್ನುವ ಹಿನ್ನೆಲೆಯನ್ನು ನೋಡಿದರೆ ನಿಜ ಇರಬಹುದು. ಹೀಗಾಗಿ ನಮ್ಮ ಪಕ್ಷದ ಮಾಜಿ ಶಾಸಕ ಸುರೇಶ್ ಗೌಡ ಅವರು ಹೇಳಿರಬಹುದು ಎಂದು ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡರು.

ಡಿಕೆಶಿ ವಜಾಕ್ಕೆ ಆಗ್ರಹ

ಆಡಿಯೊ ಸಂಭಾಷಣೆಯಲ್ಲಿ ಡಿ.ಕೆ. ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಇದನ್ನೂ ಓದಿ: CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಪೆನ್ ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೊಗಳನ್ನು ತಂದು ಕೊಟ್ಟಿದ್ದೇ ಡಿಕೆ ಶಿವಕುಮಾರ್‌ಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು, ದುರಂತಕ್ಕೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ದೂರಿದರು.

ದೊಡ್ಡ ಬೆಲೆ ತೆರಬೇಕಾದೀತು ಎಚ್ಚರ

ರಾಜಕೀಯ ಸ್ವಾರ್ಥಕ್ಕಾಗಿ, ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಬೇಕೆಂಬ ಕಾರಣಕ್ಕೆ ಡಿಕೆಶಿ ಹೂಡಿರುವ ಸಂಚು ಏನು ಎಂಬುದು ಜಗಜ್ಜಾಹೀರಾಗಿದೆ. ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ. ನೊಂದ ಮಹಿಳೆಯರ ಜೀವನಕ್ಕೆ ಕೊಳ್ಳಿ ಇಟ್ಟ ಈ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಒಂದು ವೇಳೆ ಸರ್ಕಾರ ಈ ಕಳಂಕಿತ ಸಚಿವನನ್ನು ರಕ್ಷಣೆ ಮಾಡಿದರೆ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದರು.

ದೇವೇಗೌಡರ ಕುಟುಂಬ ನಿರ್ನಾಮಕ್ಕೆ ಸಂಚು

ದೇವರಾಜೇಗೌಡ, ಶಿವರಾಮೇಗೌಡ ನಡುವಿನ ಮೊಬೈಲ್ ಸಂಭಾಷಣೆ ಹೊರಬಂದಾಗಿನಿಂದ ಡಿಕೆಶಿ ಮಾತನಾಡುತ್ತಿಲ್ಲ. ಅದಕ್ಕೆ ನಾನು ಕೇಳಿದ್ದು, ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು. ಇದಕ್ಕೆ ನಾವು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇವೆ. ನಾನು ಮೊದಲಿನಿಂದಲೂ ಹೇಳಿದ್ದೇನೆ, ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗಬೇಕು ಎಂದಿದ್ದೇನೆ. ತಪ್ಪಿತಸ್ಥರನ್ನು ರಕ್ಷಣೆ ಮಾಡಲು ನಾವು ಹೋಗುವುದಿಲ್ಲ. ಆದರೆ, ಈ ವಿಷಯದಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ ದೇವೆಗೌಡರ ಕುಟುಂಬವನ್ನು ರಾಜಕೀಯವಾಗಿ ನಿರ್ನಾಮ ಮಾಡಬೇಕು ಎಂದು ಸಂಚು ನಡೆಯುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಆಡಿಯೊದಲ್ಲೇನಿದೆ?

ಪೆನ್ ಡ್ರೈವ್ ಸೃಷ್ಟಿ ಮಾಡಿ ಅದನ್ನೆಲ್ಲ ಹೊರಗೆ ತಂದು ಮಹಿಳೆಯರಿಗೆ ಕಂಟಕರಾದವರೇ ಇವತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಎನ್‌ಡಿಎ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷವನ್ನು ಯಾವಾಗ ಹೊರಕ್ಕೆ ಹಾಕುತ್ತೀರಿ ಎಂದು ಕೇಳುತ್ತಾರೆ. ಆಡಿಯೊ ಸಂಭಾಷಣೆಯಲ್ಲಿ ಈ ಅಂಶವೂ ಇದೆ. ಅಲ್ಲಿಗೆ ಇವರ ದುರುದ್ದೇಶ ಏನು ಎನ್ನುವುದು ಅರ್ಥ ಆಯಿತಲ್ಲವೇ ಎಂದು ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು.

ಡಿಕೆಶಿ ವಿರುದ್ಧ ನೇರ ಆರೋಪ

ಈ ಪ್ರಕರಣಕ್ಕೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಚಾರ ಕೊಡಿಸಿ ಅದನ್ನು ದೇಶ ವಿದೇಶದಲ್ಲಿಯೂ ಹರಡುವಂತೆ ಮಾಡಿದವರೇ ಕಾಂಗ್ರೆಸ್‌ನವರು. ಬಿಜೆಪಿ ಜೆಡಿಎಸ್ ಮೈತ್ರಿ ಆಗದೇ ಇದ್ದಿದ್ದರೆ ಅವರು ರಾಜ್ಯದಲ್ಲಿ 20 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಭ್ರಮೆಯಲ್ಲಿ ಇದ್ದರು. ಅವರ ಕನಸು ನುಚ್ಚು ನೂರಾಗಿದೆ. ಚುನಾವಣೆ ಫಲಿತಾಂಶ ಹೇಗೆ ಬರುತ್ತದೆ ಎನ್ನುವ ಹತಾಶೆಯಲ್ಲಿ ಅವರು ಇದ್ದಾರೆ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡ ದಿನವೇ ಅವರಿಗೆ ಅರ್ಥವಾಯಿತು, ನಮ್ಮ ಓಟಕ್ಕೆ ‌ಕಡಿವಾಣ ಬಿತ್ತು ಎಂದುಕೊಂಡರು. ಈ ಆತಂಕಕ್ಕೆ ಒಳಗಾಗಿ ಈ ಪ್ರಕರಣವನ್ನು ಸೃಷ್ಟಿಸಿ ಇಡೀ ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದ್ದೆ ಇದೇ ಡಿ.ಕೆ. ಶಿವಕುಮಾರ್ ಎಂದು ಅವರು ನೇರ ಆರೋಪ ಮಾಡಿದರು.

ಸೀಡಿ ಶಿವು ಇದನ್ನೆಲ್ಲ ಮಾಡಿದ್ದಾರೆ

ಡಿ.ಕೆ.ಶಿವಕುಮಾರ್ ಮತ್ತು ಇವರ ಪಟಾಲಂಗಳು ಇದನ್ನು ಮಾಡಿದ್ದಾರೆ. ‘ಸೀಡಿ ಶಿವು’ ಅವರೇ ಇದನ್ನೆಲ್ಲ ಮಾಡಿದ್ದಾರೆ. ಆದರೆ, ಇದುವರೆಗೂ ಯಾರ ಮೇಲೆಯೂ ಕ್ರಮ ಇಲ್ಲ. ಈ ನೆಲದ ಕಾನೂನಿನ ಪ್ರಕಾರ ಯಾರೇ ಆದರೂ ನ್ಯಾಯಕ್ಕೆ ತಲೆ ಬಾಗಲೇಬೇಕು. ನಿತ್ಯವೂ ಹಣ, ಅಧಿಕಾರದ ದುರುಪಯೋಗ ಮಾಡಿಕೊಂಡು ಮೆರೆಯುವ ವ್ಯಕ್ತಿಗಳು ಬಹಳ ದಿನ ಮೆರೆಯುವುದಕ್ಕೆ ಸಾಧ್ಯ ಇಲ್ಲ. ಪ್ರತಿಯೊಂದಕ್ಕೂ ಅಂತಿಮ ದಿನಗಳು ಬಂದೇ ಬರುತ್ತವೆ ಎಂದು ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ಪೆನ್ ಡ್ರೈವ್ ಹಂಚಿಕೆ ಪ್ರಕರಣದ ತನಿಖೆ ಸಿಬಿಐ ಕೊಡಲಿ ಎನ್ನುವ ಉದ್ದೇಶದಿಂದ ಯಾರೋ ಒಬ್ಬರು ಹೈಕೋರ್ಟ್ ಮೊರೆ ಹೋಗುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಈ ಬಗ್ಗೆ ಸಿಬಿಐ ತನಿಖೆ ನಡೆಯಬೇಕು. ನಾವು ಕೂಡ ಏನು ಮಾಡಬೇಕು ಎಂಬ ಬಗ್ಗೆ ಕಾನೂ‌ನು ತಜ್ಞರ ಜತೆ ಚರ್ಚೆ ಮಾಡುತ್ತೇವೆ. ಈ ವಿಷಯದಲ್ಲಿ ಕಾನೂನು ಚೌಕಟ್ಟಿನಲ್ಲಿ, ದೇಶದ ಕಾನೂನು ವ್ಯವಸ್ಥೆಯಲ್ಲಿ ಸತ್ಯಾಂಶ ಹೊರಗೆ ತರಲು ಏನೇನು ಕ್ರಮ ತೆಗೆದುಕೊಳ್ಳಬೇಕೋ ಕೈಗೊಳ್ಳುತ್ತೇವೆ ಎಂದು ಕುಮಾರಸ್ವಾಮಿ ‌ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ವಾಪಸ್ ಬರುವಂತೆ ಮತ್ತೆ ಪ್ರಜಲ್‌ಗೆ ಹೇಳಿದ ಎಚ್‌ಡಿಕೆ

ಪ್ರಜ್ವಲ್ ಗೆ ಈಗಾಗಲೇ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ. ಎಲ್ಲೇ ಇದ್ದರೂ ಬಂದು SIT ಮುಂದೆ ಹಾಜರಾಗು ಎಂದು ಸಂದೇಶ ನೀಡಿದ್ದೇನೆ ಎಂದ ಅವರು; ನನಗೆ ಪ್ರಜ್ವಲ್ ಸಂಪರ್ಕದಲ್ಲಿ ಇಲ್ಲ. ಆ ಕಾರಣಕ್ಕೆ ಸಾರ್ವಜನಿಕವಾಗಿ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದೇನೆ.ನಾನೂ ಕೂಡ ವಾಪಸ್ ಬರುತ್ತಾನೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದೇನೆ. ದೇವೇಗೌಡರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಗೌರವ ಎನ್ನುವುದು ಇದ್ದರೆ ವಾಪಸ್ ಬಾ.. ಎಂದು ಹೇಳಿದ್ದೇನೆ. ಈ ಕೂಡಲೇ ವಾಪಸ್ ಬಾ.. ಎಂದು ಮತ್ತೆ ನಿಮ್ಮ (ಮಾಧ್ಯಮಗಳು) ಮೂಲಕ ಮನವಿ ಮಾಡುತ್ತೇನೆ ಎಂದರು.

ಸಾಕ್ಷ್ಯ ಬೇಕೆಂದ ಸಿಎಂ ವಿರುದ್ಧ ಕಿಡಿ

ಪೆನ್ ಡ್ರೈವ್ ಕೇಸ್‌ನಲ್ಲಿ ಸಾಕ್ಷ್ಯ ಕೇಳಿದ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಮಾಧ್ಯಮಗಳಲ್ಲಿ ಬಿಡುಗಡೆ ಆಗಿರುವ ಶಿವರಾಮೇಗೌಡ, ದೇವರಾಜೇಗೌಡ, ಡಿ.ಕೆ.ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆಗಿಂತ ಬೇರೆ ಸಾಕ್ಷ್ಯ ಬೇಕಾ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಡಿ.ಕೆ.ಶಿವಕುಮಾರ್ ಅವರೇ ಅರ್ಧ ನಿಮಿಷ ಮಾತಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಷ್ಟು ಮಾತನಾಡಿರುವುದೇ ಸಾಲದೇ? ಆದರೆ, ಸಿಎಂ ಅವರು ಸಾಕ್ಷ್ಯ ಕೊಡಿ, ಸಾಕ್ಷ್ಯ ಕೊಡಿ ಎಂದು ಕೇಳುತ್ತಿದ್ದಾರೆ. SIT ತಂಡ 7-8 ಜನರನ್ನು ಬಂಧನ ಮಾಡಿ ಕರೆದುಕೊಂಡು ಬಂದಿದ್ದಾರೆ. ಯಾವ ಸಾಕ್ಷ್ಯಗಳ ಆಧಾರದಲ್ಲಿ ಅವರನ್ನು ಕರೆದುಕೊಂಡು ಬಂದಿದ್ದಾರೆ. ಅವರಿಗೂ ಪ್ರಕರಣಕ್ಕೂ ಏನು ಸಂಬಂಧ? ಸ್ಪಷ್ಟವಾಗಿ ಕಣ್ಣಿಗೆ ಕಟ್ಟಿದ ಹಾಗೇ ಇದೆ, ಇದೆಲ್ಲವನ್ನೂ ಡಿ.ಕೆ.ಶಿವಕುಮಾರ್ ಅವರೇ ಮಾಡಿರುವುದು ಎಂದು ಎಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಅವರೇ ಮೊಬೈಲ್ ಸಂಭಾಷಣೆಯಲ್ಲಿ ಇನ್ನು ಏನೇನು ಮಾಹಿತಿ, ಸಾಕ್ಷ್ಯ ಇದೆ ತೆಗೆದುಕೊಂಡು ಬಾ.. ಎಂದು ದೇವರಾಜೇ ಗೌಡನಿಗೆ ಹೇಳಿದ್ದಾರೆ. ಇದಕ್ಕಿಂತ ಇನ್ನೂ ಏನು ಸಾಕ್ಷ್ಯ ಬೇಕು? ಅವರ ಜತೆ ಮಾತನಾಡುವಾಗ ಡಿಕೆಶಿ, ಪೊಲೀಸ್ ದೂರನ್ನು ಕಷ್ಟ ಪಟ್ಟು ಕೊಡಿಸಿದ್ದೇವೆ ಎನ್ನುತ್ತಾರೆ. ಸಿಎಂಗೆ ಇದಕ್ಕಿಂತ‌ ಸಾಕ್ಷಿ ಬೇಕಾ? ಎಂದು ಸಿದ್ದರಾಮಯ್ಯ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ‌ಕಿಡಿಕಾರಿದರು.

ಸಿದ್ದರಾಮಯ್ಯ ಅವರು 6 ಪ್ರಶ್ನೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ. ಆದರೆ, ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್‌ನನ್ನು ಮುಖ್ಯಮಂತ್ರಿಗಳು ಅಪರಾಧಿ ಮಾಡಿ ಬಿಟ್ಟಿದ್ದಾರೆ. ಇನ್ನು ಪ್ರಜ್ವಲ್ ಆರೋಪಿ ಸ್ಥಾನದಲ್ಲಿ ‌ಇದ್ದಾನೆ. ಅಪರಾಧಿ ಅಂತ‌ ಇನ್ನು ಎಲ್ಲಿ ಸಾಬೀತಾಗಿದೆ? ತನಿಖಾ ತಂಡದವರೇ ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಮಾಡಿದ್ದಾರೆ. ವಿಡಿಯೊಗಳಲ್ಲಿ ಪುರುಷನ ಮುಖವೇ ಕಾಣಲ್ಲ ಎಂದು ಹೇಳಲಾಗಿದೆ. ಇದು ಸಿಎಂಗೆ ಗೊತ್ತಿಲ್ಲವೇ? ನೈತಿಕತೆ ಉಳಿಸಬೇಕು ಎಂದೇ ಆತನ ವಿರುದ್ಧ ಕೇಳಿ ಬಂದ ತಕ್ಷಣ ಪಕ್ಷದಿಂದ ಅಮಾನತು ಮಾಡಿದ್ದೇವೆ. ನಾವು ಸಿದ್ದರಾಮಯ್ಯ ತರಹ ಭಂಡತನ ಮಾಡಿಲ್ಲ. ಆ ಭಂಡತನದಲ್ಲಿ ನಿಮ್ಮ ಮಗನದ್ದು ನಡೆಯಿತಲ್ಲ.. ಅಪ್ಪ..ಅಪ್ಪ.. ನಾನು ಕೊಟ್ಟಿದ್ದೇ 5 ಹೆಸರು, 6 ಹೆಸರು ಎಲ್ಲಿಂದ ಬಂತು ಹೇಳಿ ಎಂದು ಕಥೆ ಕಟ್ಟಿದಿರಲ್ಲ? ನಿಮ್ಮ ಮಗನ ಹೆಸರು ಬಂದ ಕೂಡಲೇ ಅದಕ್ಕೆ ಸಿಎಸ್‌ಆರ್‌ ಫಂಡ್ ಎಂದು ಬಣ್ಣ ಹಚ್ಚಿದ್ದು ಗೊತ್ತಿಲ್ಲವೇ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂಗೆ ತಿರುಗೇಟು ನೀಡಿದರು.

ಸಾಕ್ಷ್ಯ ನಾಶಕ್ಕೆ ನಿಮಗಿಂತ ಒಳ್ಳೆ ಉದಾಹರಣೆ ಬೇಕಾ?

ಸಾಕ್ಷ್ಯ ನಾಶ ಯಾವ ರೀತಿ ಮಾಡಬಹುದು ಎನ್ನುವುದಕ್ಕೆ ನಿಮಗಿಂತ ಒಳ್ಳೆಯ ಉದಾಹರಣೆ ಬೇಕಾ? ಅಧಿಕಾರ ದುರ್ಬಳಕೆ ಮಾಡಿಕೊಂಡು ಸಾಕ್ಷ್ಯಗಳನ್ನು ಯಾವ ರೀತಿ ತಿದ್ದಬಹುದು ಎಂದು ಸಾಬೀತು ಮಾಡಿದ್ದೀರಿ. ಈಗಲೂ ನೀವು ಮಾಡುತ್ತಿರುವುದು ಅದೇ ಕೆಲಸ. ಅಷ್ಟು ಸ್ಪಷ್ಟವಾಗಿ ಒಬ್ಬ ಡಿಸಿಎಂ ಮಾತನಾಡಿರುವುದು ಕಣ್ಣ ಮುಂದೆಯೇ ಇದೆ, ಆದರೂ ಸಾಕ್ಷ್ಯ ಕೇಳುತ್ತಿದ್ದೀರಿ ಎಂದು ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ಇದನ್ನೂ ಓದಿ: ‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

ಸಿಎಂ ಉತ್ತರ ಕೊಡಬೇಕು

ಕಾರ್ತಿಕ್ ಗೌಡ, ನವೀನ್ ಗೌಡ ಸೇರಿ ಪೆನ್ ಡ್ರೈವ್ ಹಂಚಿದ ಕಿಡಿಗೇಡಿಗಳನ್ನು ಇವತ್ತಿನವರೆಗೂ ಬಂಧಿಸಿಲ್ಲ. ಎಸ್‌ಐಟಿಗೆ ಹೇಳಿಕೆ ನೀಡಿದ್ದಾನೆ ಎನ್ನುತ್ತೀರಿ, ಹಾಗಾದರೆ ಅವನು ಯಾರ ವಶದಲ್ಲಿ ಇದ್ದಾನೆ. ಯಾವತ್ತೂ ಅವನು ತನಿಖಾ ತಂಡಕ್ಕೆ ಹೇಳಿಕೆ ಕೊಟ್ಟ? ಅವನನ್ನು ಯಾಕೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿಲ್ಲ? ಇದರಲ್ಲಿ‌ ಏನೋ ಹುನ್ನಾರ ಇದೆ. ಮುಖ್ಯಮಂತ್ರಿ ಇದಕ್ಕೆ ಉತ್ತರ ಕೊಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದರು.

ಸಿಎಂ ಅವರು ಇಷ್ಟು ಲಘುವಾಗಿ ಮಾತಾಡೋದು ಬೇಡ. ಅವರು ನಮ್ಮ ‌ಪ್ರಶ್ನೆಗಳಿಗೆ ಉತ್ತರ ಕೊಡದೇ ನುಣಿಚಿಕೊಳ್ಳುತ್ತಿದ್ದಾರೆ. ಈ ಪ್ರಕರಣವನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಯಾರಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿಲ್ಲ. ಇದು SIT ತಂಡ ಅಲ್ಲ. ಇದು SIT ದಂಡ! ಸುಖಾಸುಮ್ಮನೆ ದಂಡಕ್ಕೆ ಇದನ್ನು ರಚನೆ ಮಾಡಲಾಗಿದೆ. SIT ದಂಡವನ್ನು ತಮಗೆ ಆಗದವರ ಮೇಲೆ ಪ್ರಯೋಗ ಮಾಡಲು ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ‌ಆಕ್ರೋಶ ವ್ಯಕ್ತಪಡಿಸಿದರು.

Continue Reading

ದೇಶ

‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

ದೇವರೇ ಮನುಷ್ಯನಿಗೆ ಭಕ್ತನಾಗಲು ಸಾಧ್ಯವಿಲ್ಲ. ನಾನು ಸುದ್ದಿ ವಾಹಿನಿ ಜತೆ ಮಾತನಾಡುವಾಗ ಬಾಯ್ತಪ್ಪಿನಿಂದಾಗಿ ಜಗನ್ನಾಥನೇ ಮೋದಿ ಅವರ ಭಕ್ತ ಎಂಬುದಾಗಿ ಹೇಳಿದೆ. ನಿಜವಾಗಿಯೂ, ಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶ ಆಗಿರಲಿಲ್ಲ ಎಂಬುದಾಗಿ ಬಿಜೆಪಿ ನಾಯಕ ಸಂಬಿತ್‌ ಪಾತ್ರಾ ಅವರು ಕ್ಷಮೆಯಾಚಿಸುವ ಜತೆಗೆ ಮೂರು ದಿನ ಉಪವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಆ ಮೂಲಕ ತಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಅವರು ಮುಂದಾಗಿದ್ದಾರೆ.

VISTARANEWS.COM


on

Sambit Patra
Koo

ಭುವನೇಶ್ವರ: “ಒಡಿಶಾದಲ್ಲಿರುವ ಐತಿಹಾಸಿಕ ಪುರಿ ಜಗನ್ನಾಥನೇ (Lord Jagannath) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭಕ್ತ” ಎಂಬುದಾಗಿ ಬಿಜೆಪಿ ನಾಯಕ, ಪುರಿ ಅಭ್ಯರ್ಥಿ ಸಂಬಿತ್‌ ಪಾತ್ರಾ (Sambit Patra) ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿವಾದ ಉಂಟಾದ ಬೆನ್ನಲ್ಲೇ, “ಸಂಬಿತ್‌ ಪಾತ್ರಾ ಅವರು ತಮ್ಮ ಹೇಳಿಕೆ ಕುರಿತಂತೆ ಕ್ಷಮೆ ಕೇಳಿದ್ದಾರೆ. ಹಾಗೆಯೇ, ಅಂತಹ ಹೇಳಿಕೆ ನೀಡಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಮೂರು ದಿನ ಉಪವಾಸ ಕೂಡ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎನ್‌ಐ ಸುದ್ದಿ ಸಂಸ್ಥೆ ಜತೆ ಮಾತನಾಡಿರುವ ಹಾಗೂ ವಿಡಿಯೊ ಹೇಳಿಕೆ ಕೂಡ ಬಿಡುಗಡೆ ಮಾಡಿರುವ ಸಂಬಿತ್‌ ಪಾತ್ರಾ ಅವರು, ಮೊದಲು ಕ್ಷಮೆಯಾಚಿಸಿದ್ದಾರೆ. “ದೇವರೇ ಮನುಷ್ಯನಿಗೆ ಭಕ್ತನಾಗಲು ಸಾಧ್ಯವಿಲ್ಲ. ನಾನು ಸುದ್ದಿ ವಾಹಿನಿ ಜತೆ ಮಾತನಾಡುವಾಗ ಬಾಯ್ತಪ್ಪಿನಿಂದಾಗಿ ಜಗನ್ನಾಥನೇ ಮೋದಿ ಅವರ ಭಕ್ತ ಎಂಬುದಾಗಿ ಹೇಳಿದೆ. ನಿಜವಾಗಿಯೂ, ಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾದರೆ ಕ್ಷಮೆ ಕೇಳುತ್ತೇನೆ. ಅಲ್ಲದೆ, ಪ್ರಾಯಶ್ಚಿತ್ತವಾಗಿ ನಾನು ಮೂರು ದಿನ ಉಪವಾಸ ಕೈಗೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

ಸಂಬಿತ್‌ ಪಾತ್ರಾ ಹೇಳಿದ್ದೇನು?

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಲಕ್ಷಾಂತರ ಜನ ಸೇರಿದ್ದಾರೆ. ಜಗನ್ನಾಥನೇ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ. ನಾವೆಲ್ಲರೂ ಮೋದಿ ಅವರ ಕುಟುಂಬಸ್ಥರು. ನಾನು ನನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಇದು ಒಡಿಶಾದ ಎಲ್ಲ ಜನರಿಗೂ ಐತಿಹಾಸಿಕ ದಿನವಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಂಬಿತ್‌ ಪಾತ್ರ ಹೇಳಿದ್ದರು. ನರೇಂದ್ರ ಮೋದಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಬಿತ್‌ ಪಾತ್ರಾ ಇಂತಹ ಹೇಳಿಕೆ ನೀಡಿದ್ದರು. ವಿವಾದದ ಬಳಿಕ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಇದು ಬಾಯ್ತಪ್ಪಿನಿಂದ ನೀಡಿದ ಹೇಳಿಕೆ ಎಂದು ಸ್ಪಷ್ಟನೆ ನೀಡಿದ್ದರು

ಸಂಬಿತ್‌ ಪಾತ್ರ ಹೇಳಿಕೆಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ತಿರುಗೇಟು ನೀಡಿದ್ದರು. “ಭಗವಾನ್‌ ಶ್ರೀ ಜಗನ್ನಾಥನು ಇಡೀ ಸೃಷ್ಟಿಗೆ ದೇವರಾಗಿದ್ದಾನೆ. ದೇವರನ್ನೇ ಮನುಷ್ಯನ ಭಕ್ತ ಎಂದು ಕರೆದಿರುವುದು ಅಪಸವ್ಯ ಹಾಗೂ ದೇವರಿಗೆ ಮಾಡಿದ ಅವಮಾನವಾಗಿದೆ. ಇದು ಒಡಿಶಾ ಹಾಗೂ ಜಗತ್ತಿನಾದ್ಯಂತ ಇರುವ ಜಗನ್ನಾಥನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಯಾಗಿದೆ” ಎಂದು ಟೀಕಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು.

ಇದನ್ನೂ ಓದಿ: Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Continue Reading

ಪ್ರಮುಖ ಸುದ್ದಿ

2024 Bajaj Pulsar F250 : ಬೆಲೆ ಏರಿಕೆ ಮಾಡದೇ ಹೊಸ ಪಲ್ಸರ್​ 250 ರಸ್ತೆಗಿಳಿಸಲಿದೆ ಬಜಾಜ್​​

2024 Bajaj Pulsar F250: ಹಲವಾರು ಅಪ್​ಡೇಟ್​ಗಳೊಂದಿಗೆ ಎಫ್​250 ಪಲ್ಸರ್​ ರಸ್ತೆಗೆ ಇಳಿದಿದೆ. ಸ್ಟ್ರೀಟ್ ನೇಕೆಡ್ ಎನ್​ 250ಯಷ್ಟು ಅಪ್​ಡೇಟ್ ಪಡೆದಿಲ್ಲವಾದರೂ ಪಲ್ಸರ್ ಎಫ್ 250 ಬೈಕಿನಲ್ಲಿ ಗಮನಾರ್ಹ ಬದಲಾವಣೆ ಮಾಡಲಾಗಿದೆ. ಎಲ್ಲಾ ಪಲ್ಸರ್ ಗಳಲ್ಲಿ ಕಂಡುಬರುವ ಹೊಸ ಸಂಪೂರ್ಣ ಡಿಜಿಟಲ್ ಇನ್​ಸ್ಟ್ರುಮೆಂಟ್​ ಕ್ಲಸ್ಟರ್ ದೊಡ್ಡ ಬದಲಾವಣೆಯಾಗಿದೆ.

VISTARANEWS.COM


on

2024 Bajaj Pulsar F250
Koo

ಬೆಂಗಳೂರು: ಭಾರತದ ಜನಪ್ರಿಯ ಹಾಗೂ ಜನಸ್ನೇಹಿ ಕಂಪನಿಯಾಗಿರುವ ಬಜಾಜ್ ಆಟೋ ತನ್ನ ಸಂಪೂರ್ಣ ಪಲ್ಸರ್ ವೇರಿಯೆಂಟ್​ಗಳನ್ನು ಅಪ್​ಗ್ರೇಡ್​ ಮಾಡುವ ಪ್ರಕ್ರಿಯೆಯಲ್ಲಿದೆ. ಈ ತಿಂಗಳ ಆರಂಭದಲ್ಲಿ ಕಂಪನಿಯು ತನ್ನ ಅತಿದೊಡ್ಡ ಪಲ್ಸರ್ ಬೈಕ್​​ ಎನ್ ಎಸ್ 400 ಝಡ್ ಅನ್ನು ಬಿಡುಗಡೆ ಮಾಡಿತ್ತು. ಇದರ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.1.85 ಲಕ್ಷಗಳಾಗಿತ್ತು. ಅದಕ್ಕಿಂತ ಹಿಂದಿನ ತಿಂಗಳು ಅಪ್​ಡೇಟೆಡ್​​ ಪಲ್ಸರ್ ಎನ್ 250 ಬೈಕ್ ಅನಾವರಣ ಮಾಡಿತ್ತು. ಇದೀಗ ಅದರ ಜತೆಗಾರ ಎಫ್​ 250 ಬೈಕ್​ (2024 Bajaj Pulsar F250) ಅನ್ನು ಬಜಾಜ್ ಕಂಪನಿಗೆ ಮಾರುಕಟ್ಟೆಗೆ ಇಳಿಸಿದೆ.

ಈ ಮೂಲಕ ಬಜಾಜ್​​ ಕಂಪನಿಯು ಪಲ್ಸರ್​ ಬೈಕ್​ಗಳಿಗೆ ಬೇಡಿಕೆ ಕಡಿಮೆಯಾಗುತ್ತಿದೆ ಎಂಬ ವ್ಯಾಖ್ಯಾನ ಸುಳ್ಳು ಎಂದು ಹೇಳಿದೆ. ಪಲ್ಸರ್​ನ ನಾನಾ ವೇರಿಯೆಂಟ್​ಗಳ ಉತ್ಪಾದನೆಯು ಸೀಮಿತ ರೂಪದಲ್ಲಿ ಮುಂದುವರಿಯುತ್ತದೆ ಎಂದು ಬಜಾಜ್ ಹೇಳಿಕೊಂಡಿದೆ. ಅಂತೆಯೇ ಹಲವಾರು ಅಪ್​ಡೇಟ್​ಗಳೊಂದಿಗೆ ಎಫ್​250 ಪಲ್ಸರ್​ ರಸ್ತೆಗೆ ಇಳಿದಿದೆ. ಸ್ಟ್ರೀಟ್ ನೇಕೆಡ್ ಎನ್​ 250ಯಷ್ಟು ಅಪ್​ಡೇಟ್ ಪಡೆದಿಲ್ಲವಾದರೂ ಪಲ್ಸರ್ ಎಫ್ 250 ಬೈಕಿನಲ್ಲಿ ಗಮನಾರ್ಹ ಬದಲಾವಣೆ ಮಾಡಲಾಗಿದೆ. ಎಲ್ಲಾ ಪಲ್ಸರ್ ಗಳಲ್ಲಿ ಕಂಡುಬರುವ ಹೊಸ ಸಂಪೂರ್ಣ ಡಿಜಿಟಲ್ ಇನ್​ಸ್ಟ್ರುಮೆಂಟ್​ ಕ್ಲಸ್ಟರ್ ದೊಡ್ಡ ಬದಲಾವಣೆಯಾಗಿದೆ.

ಈ ಯೂನಿಟ್​​ ಫೋನ್​ ಕಾಲ್​​ ಮತ್ತು ಟೆಕ್ಟ್​​ ಅಲರ್ಟ್​ಗಳಿಗಾಗಿ ಬ್ಲೂಟೂತ್ ಸಂಪರ್ಕ ಮತ್ತು ಬಜಾಜ್ ರೈಡ್ ಕನೆಕ್ಟ್ ಅಪ್ಲಿಕೇಶನ್ ಮೂಲಕ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ನೊಂದಿಗೆ ಬರುತ್ತದೆ. ಕನ್ಸೋಲ್ ಮೆನುವಿನ ಮೂಲಕ ಟಾಗಲ್ ಮಾಡಲು ಇದು ಪರಿಷ್ಕೃತ ಸ್ವಿಚ್ ಗೇರ್ ಅನ್ನೂ ನೀಡಲಾಗಿದೆ. ಇದು ರೇನ್, ರೋಡ್ ಮತ್ತು ಸ್ಪೋರ್ಟ್ ಎಂಬ ಮೂರು ಎಬಿಎಸ್ ಮೋಡ್ ಗಳನ್ನು ಪಡೆದುಕೊಂಡಿದೆ.

ಹಾರ್ಡ್​ವೇರ್ ಬದಲಾವಣೆ ಏನು?

ಪಲ್ಸರ್ ಎಫ್ 250 ಬೈಕ್ ಮುಂಭಾಗ ಮತ್ತು ಹಿಂಭಾಗದಲ್ಲಿ ಹೊಸ ಪೆಟಲ್ ಡಿಸ್ಕ್ ಬ್ರೇಕ್ ಗಳ ರೂಪದಲ್ಲಿ ಕೆಲವು ಹಾರ್ಡ್ ವೇರ್ ಬದಲಾವಣೆಗಳನ್ನು ಮಾಡಲಾಗಿದೆ. ಆದರೂ ಡಿಸ್ಕ್ ಗಳ ಗಾತ್ರಗಳು ಕ್ರಮವಾಗಿ 300 ಎಂಎಂ ಮತ್ತು 230 ಎಂಎಂ ನಷ್ಟೇ ಇದೆ. ಎನ್ 250 ನಂತೆಯೇ, ನವೀಕರಿಸಿದ ಪಲ್ಸರ್ ಎಫ್ 250 110-ಸೆಕ್ಷನ್ ಮುಂಭಾಗ ಮತ್ತು 140-ಸೆಕ್ಷನ್ ಹಿಂಭಾಗದ ಟೈರ್ ಸೆಟಪ್ ಅನ್ನು ಪಡೆದಿದೆ. ಹಿಂದಿನ ಮಾದರಿಯ 110-ಸೆಕ್ಷನ್ ಮುಂಭಾಗ ಮತ್ತು 130-ಸೆಕ್ಷನ್ ಹಿಂಭಾಗದ ಸೆಟಪ್ ಹೊಂದಿತ್ತು. ಇಲ್ಲಿ ಸಣ್ಣ ಬದಲಾವಣೆಯಾಗಿದೆ.

2024ರ ಬಜಾಜ್ ಪಲ್ಸರ್ ಎಫ್250 ಬೈಕ್​ನಲ್ಲಿ ಏನಿಲ್ಲ?

ಮೂಲ ವಿನ್ಯಾಸವು ಅದರ ಹಿಂದಿನ ಬೈಕ್​ನಂತೆಯೇ ಉಳಿದಿದೆ, ಅರೆ-ಫೇರ್ಡ್ ಸ್ಟೈಲಿಂಗ್, ಆಕ್ರಮಣಕಾರಿ ವಿ-ಆಕಾರದ ಎಲ್ಇಡಿ ಹೆಡ್ ಲ್ಯಾಂಪ್ ಕ್ಲಸ್ಟರ್, ಸ್ಪ್ಲಿಟ್-ಸೀಟ್ ಗಳು, ಸ್ಟೂಬಿ ಟ್ವಿನ್-ಬ್ಯಾರೆಲ್ ಎಕ್ಸಾಸ್ಟ್ ಮಫ್ಲರ್ ಮತ್ತು ಕ್ಲಿಪ್-ಆನ್ ಹ್ಯಾಂಡಲ್ ಬಾರ್ ನೀಡಲಾಘಿದೆ ಬಜಾಜ್ ಪಲ್ಸರ್ ಎಫ್ 250 ಬೈಕಿನೊಂದಿಗೆ ಕೆಂಪು ಮತ್ತು ಕಪ್ಪು ಎಂಬ ಎರಡು ಬಣ್ಣಗಳ ಆಯ್ಕೆಗಳನ್ನು ನೀಡುವ ನಿರಿಕ್ಷೆಯಿದೆ.

ಪಲ್ಸರ್ ಎನ್ 250 ರೀತಿ , ಎಫ್ 250 ಚಿನ್ನದ ಬಣ್ಣದ ತಲೆಕೆಳಗಾಗಿರುವ ಮುಂಭಾಗದ ಫೋರ್ಕ್ ಗಳನ್ನು ಪಡೆದಿಲ್ಲ. ಹಿಂಭಾಗದ ಸಸ್ಪೆಂಷನ್ ಮೊನೊ-ಶಾಕ್ ಆಗಿದೆ ಎರಡೂ ತುದಿಗಳಲ್ಲಿ 17-ಇಂಚಿನ ವ್ಹೀಲ್ ಸೆಟಪ್ ಮತ್ತು ಅದರ ವಿನ್ಯಾಸವು ಒಂದೇ ಆಗಿದೆ. ನವೀಕರಿಸಿದ ಪಲ್ಸರ್ ಎನ್ 250 ನಲ್ಲಿ ಕಂಡುಬರುವಂತೆ ಇದು ‘250’ ಬಾಡಿ ಗ್ರಾಫಿಕ್ಸ್ ಹೊಂದಿಲ್ಲ.

ಇದನ್ನೂ ಓದಿ: Used Car Sale : ನಿಮ್ಮ ಕಾರನ್ನು ಜಾಸ್ತಿ ಬೆಲೆಗೆ ಮಾರಬೇಕೇ? ಈ ಕೆಲವು ತಂತ್ರಗಳನ್ನು ಅನುಸರಿಸಿ

ಎಂಜಿನ್ ಪವರ್​ ಏನು?

ಪಲ್ಸರ್ ಎಫ್250 ಬೈಕ್ 249.07 ಸಿಸಿ ಆಯಿಲ್ ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದಿಂದ 8,750 ಆರ್ ಪಿಎಂನಲ್ಲಿ 24.1 ಬಿಹೆಚ್ ಪಿ ಪವರ್ ಮತ್ತು 6,500 ಆರ್ ಪಿಎಂನಲ್ಲಿ 21.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5 ಸ್ಪೀಡ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

2024 ಬಜಾಜ್ ಪಲ್ಸರ್ ಎಫ್250 ಬೆಲೆ ಎಷ್ಟು?

ನವೀಕರಿಸಿದ ಪಲ್ಸರ್ ಎಫ್ 250 ಬಿಡುಗಡೆಯನ್ನು ಬಜಾಜ್ ಅಧಿಕೃತವಾಗಿ ಘೋಷಿಸಿಲ್ಲ. ಹೀಗಾಗಿ ಬೆಲೆ ಬಗ್ಗೆ ಮಾಹಿತಿ ಇಲ್ಲ. ಬಜಾಜ್ ವೆಬ್ಸೈಟ್ನಲ್ಲಿ ಅಧಿಕೃತ ಬೆಲೆಯನ್ನು ಇನ್ನೂ ಉಲ್ಲೇಖಿಸಲಾಗಿಲ್ಲ. ಆದರೆ, ಬಜಾಜ್​ ಕಂಪನಿಯ ಮೂಲಗಳ ಪ್ರಕಾರ ರೂ.1.51 ಲಕ್ಷ (ಎಕ್ಸ್ ಶೋರೂಂ) ರೂಪಾಯಿಗೆ ಸಿಗುತ್ತದೆ. ಹೀಗಾಗಿ ಬೆಲೆಯಲ್ಲಿ ಹಿಂದಿನ ಆವೃತ್ತಿಗಿಂತ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ.

Continue Reading

ಕರ್ನಾಟಕ

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Cauvery Dispute: ತಮಿಳುನಾಡಿಗೆ ಮೇ ತಿಂಗಳ ಪಾಲಿನ 2.5 ಟಿಎಂಸಿ ಹರಿಸುವಂತೆ ಕರ್ನಾಟಕಕ್ಕೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಿರ್ದೇಶನ ನೀಡಿದೆ.

VISTARANEWS.COM


on

Cauvery Dispute
Koo

ಬೆಂಗಳೂರು: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು (Cauvery Dispute) ಹರಿಸುವಂತೆ ಕರ್ನಾಟಕಕ್ಕೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚನೆ ನೀಡಿದೆ. ಮೇ ತಿಂಗಳ ಪಾಲಿನ 2.5 ಟಿಎಂಸಿ ಹರಿಸಲು ರಾಜ್ಯಕ್ಕೆ ಸಿಡಬ್ಲ್ಯುಎಂಎ ನಿರ್ದೇಶನ ನೀಡಿದೆ.

ಇತ್ತೀಚೆಗೆ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಮಿತಿ ಸಭೆಯಲ್ಲಿ ಕರ್ನಾಟಕದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸಮಿತಿಯು ತಮಿಳುನಾಡಿಗೆ ಸೂಚಿಸಿತ್ತು. ಆದರೆ, ಇದೀಗ ಮಂಗಳವಾರ ನಡೆದ ಸಭೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.

ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು. ಆದರೆ, ಮೇ ಅಂತ್ಯದವರೆಗೂ ನೀರು ಬಿಡಬೇಕು ಎಂಬುದು ತಮಿಳುನಾಡಿನ ವಾದವಾಗಿತ್ತು. ಇದನ್ನು ಸಿಡಬ್ಲ್ಯೂಆರ್‌ಸಿ ನಿರಾಕರಿಸಿತ್ತು. ಆದರೆ, ಈಗ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಮೇ 21ರಂದು ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
HD Kumaraswamy attack on DK Shivakumar and he gives reason for Devaraje Gowda fears for his life in jail
ರಾಜಕೀಯ10 mins ago

HD Kumaraswamy: ದೇವರಾಜೇಗೌಡರಿಗೆ ಜೈಲಲ್ಲಿ ಜೀವ ಭಯ ಇದೆ; ಕಾರಣ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ

Wedding Fashion
ಫ್ಯಾಷನ್32 mins ago

Wedding Fashion: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾಗಿವೆ ಈ ಮಿರಮಿರ ಮಿನುಗುವ ಲೆಹೆಂಗಾಗಳು!

Sambit Patra
ದೇಶ32 mins ago

‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

2024 Bajaj Pulsar F250
ಪ್ರಮುಖ ಸುದ್ದಿ36 mins ago

2024 Bajaj Pulsar F250 : ಬೆಲೆ ಏರಿಕೆ ಮಾಡದೇ ಹೊಸ ಪಲ್ಸರ್​ 250 ರಸ್ತೆಗಿಳಿಸಲಿದೆ ಬಜಾಜ್​​

Karnataka Rain
ಮಳೆ39 mins ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Cauvery Dispute
ಕರ್ನಾಟಕ57 mins ago

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Brand Bangalore and BJP Slams DK Shivakumar and Congress Government
ರಾಜಕೀಯ58 mins ago

Brand Bangalore: ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ; ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಕುಟುಕಿದ ಬಿಜೆಪಿ

Eye Care Tips
ಆರೋಗ್ಯ1 hour ago

Eye Care Tips: ಕಣ್ಣಿನ ಸುಸ್ತಿಗೆ ನೀವು ಇಷ್ಟಾದರೂ ಮಾಡಿ, ಕಣ್ಣಿಗೆ ಅಗತ್ಯ ವಿಶ್ರಾಂತಿ ನೀಡಿ!

Turbulence
ಪ್ರಮುಖ ಸುದ್ದಿ1 hour ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

Used Car Sale
ಪ್ರಮುಖ ಸುದ್ದಿ1 hour ago

Used Car Sale : ನಿಮ್ಮ ಕಾರನ್ನು ಜಾಸ್ತಿ ಬೆಲೆಗೆ ಮಾರಬೇಕೇ? ಈ ಕೆಲವು ತಂತ್ರಗಳನ್ನು ಅನುಸರಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ39 mins ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌