ಮನಿ-ಗೈಡ್
Infrastructure funds : ಮೂಲಸೌಕರ್ಯ ಫಂಡ್ಗಳಲ್ಲಿ 1 ವರ್ಷಕ್ಕೆ 29% ಆದಾಯ, ಟಾಪ್ ಫಂಡ್ಗಳ ಡಿಟೇಲ್ಸ್
Infrastructure funds ಮೂಲಸೌಕರ್ಯ ವಲಯದ ಮ್ಯೂಚುವಲ್ ಫಂಡ್ಗಳಲ್ಲಿ ಕಳೆದ ಒಂದು ವರ್ಷದಿಂದೀಚೆಗೆ ಉತ್ತಮ ಆದಾಯ ಲಭಿಸುತ್ತಿದೆ. ವಿವರ ಇಲ್ಲಿದೆ.
ಮೂಲಸೌಕರ್ಯ ವಲಯದ ಫಂಡ್ ಕೆಟಗರಿಯು ಕಳೆದ ಮೂರು ವರ್ಷಗಳಲ್ಲಿ ಹೂಡಿಕೆದಾರರಿಗೆ 35.49% ಆದಾಯವನ್ನು ನೀಡಿದೆ. (Infrastructure fund) ಈ ಕೆಟಗರಿಯು ಕಳೆದ ಐದು ವರ್ಷಗಳಲ್ಲಿ 15.61% ವರಮಾನವನ್ನು ಕೊಟ್ಟಿದೆ.
ಟಾಪ್ ಫಂಡ್ಗಳಿಂದ ವಾರ್ಷಿಕ 40% ಆದಾಯ: ನಿಪ್ಪೋನ್ ಇಂಡಿಯಾ ಪವರ್ & ಇನ್ಫ್ರಾ ಫಂಡ್ & ಎಚ್ಡಿಎಫ್ಸಿ ಇನ್ಫ್ರಾಸ್ಟ್ರಕ್ಚರ್ ಫಂಡ್ ಒಂದು ವರ್ಷದಲ್ಲಿ ಅನುಕ್ರಮವಾಗಿ 42.53% ಮತ್ತು 41.08% ಆದಾಯ ನೀಡಿದೆ.
ಏಳು ಫಂಡ್ಗಳಲ್ಲಿ 30% ಕ್ಕೂ ಹೆಚ್ಚು ಆದಾಯ ಗಳಿಕೆ: ಮ್ಯೂಚುವಲ್ ಫಂಡ್ಗಳಲ್ಲಿ ಈ ಏಳು ಸ್ಕೀಮ್ಗಳು ಹೂಡಿಕೆದಾರರಿಗೆ 30%ಕ್ಕೂ ಹೆಚ್ಚು ಆದಾಯವನ್ನು ನೀಡಿದೆ. ಅವೆಂದರೆ ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಫ್ರಾಸ್ಟ್ರಕ್ಚರ್ ಫಂಡ್, ಐಸಿಐಸಿಐ ಪ್ರುಡೆನ್ಷಿಯಲ್ ಇನ್ಫ್ರಾಸ್ಟ್ರಕ್ಚರ್ ಫಂಡ್, ಬಂಧನ್ ಇನ್ಫ್ರಾಸ್ಟ್ರಕ್ಚರ್ ಫಂಡ್, ಎಚ್ಎಸ್ಬಿಸಿ ಇನ್ಫ್ರಾಸ್ಟ್ರಕ್ಚರ್ ಫಂಡ್, ಡಿಎಸ್ಪಿ ಇಂಡಿಯಾ ಟಿ.ಐ.ಜಿ.ಇ.ಆರ್ ಫಂಡ್, ಫ್ರಾಂಕ್ಲಿನ್ ಬಿಲ್ಡ್ ಇಂಡಿಯಾ ಫಂಡ್, ಕೋಟಕ್ ಇನ್ ಫ್ರಾ & ಇಕೊ ರಿಫಾರ್ಮ್ ಫಂಡ್ ಕಳೆದ ಒಂದು ವರ್ಷದಲ್ಲಿ 30% ಕ್ಕೂ ಹೆಚ್ಚು ಆದಾಯ ನೀಡಿದೆ.
ಟಾಪ್ ಫಂಡ್ಗಳಿಂದ 40% ಆದಾಯ: ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕ್ವಾಂಟ್ ಇನ್ಫ್ರಾಸ್ಟ್ರಕ್ಚರ್ ಫಂಡ್, ಐಸಿಐಸಿಐ ಪ್ರು ಇನ್ಫ್ರಾಸ್ಟ್ರಕ್ಚರ್ ಫಂಡ್, ಎಚ್ಡಿಎಫ್ಸಿ ಇನ್ಫ್ರಾಸ್ಟ್ರಕ್ಚರ್ ಫಂಡ್ ಮತ್ತು ಎಚ್ಡಿಎಫ್ಸಿ ಇನ್ಫ್ರಾಸ್ಟ್ರಕ್ಚರ್ ಫಂಡ್ 40%ಕ್ಕೂ ಹೆಚ್ಚು ಆದಾಯ ನೀಡಿದೆ.
ನೀವು ಈಗ ಹೂಡಿಕೆ ಮಾಡಬಹುದೇ?: ಹೈ ರಿಸ್ಕ್ ಟಾಲರೆನ್ಸ್ ಕೆಟಗರಿಯಲ್ಲಿ ಹೂಡಿಕೆ ಮಾಡಲು ಬಯಸುವವರು ಇನ್ಫ್ರಾಸ್ಟ್ರಕ್ಚರ್ ಫಂಡ್ಗಳಲ್ಲಿ ಹೂಡಿಕೆ ಮಾಡಬಹುದು. ದೀರ್ಘಕಾಲೀನ ಹೂಡಿಕೆಗೆ ಇದನ್ನು ಆಯ್ಕೆ ಮಾಡಿಕೊಳ್ಳಬಹುದು.
ಕೇಂದ್ರ ಸರ್ಕಾರ 2023-24ರಲ್ಲಿ ಮೂಲಸೌಕರ್ಯ ವಲಯಕ್ಕೆ ಬಜೆಟ್ ಅನುದಾನವನ್ನು ಗಣನೀಯವಾಗಿ ಇರಿಸಿರುವುದರಿಂದ ಇನ್ಫ್ರಾಸ್ಟ್ರಕ್ಚರ್ ಫಂಡ್ಗಳಿಗೆ ಉತ್ತಮ ಭವಿಷ್ಯ ಇದೆ ಎನ್ನುತ್ತಾರೆ ತಜ್ಞರು. ಪ್ರಸ್ತುತ 17 ಮ್ಯೂಚುವಲ್ ಫಂಡ್ ಯೋಜನೆಗಳು ಮೂಲಸೌಕರ್ಯ ಕೆಟಗರಿಯಲ್ಲಿ ಹೂಡಿವೆ.
ಏನಿದು ಇನ್ಫ್ರಾಸ್ಟ್ರಕ್ಚರ್ ಮ್ಯೂಚುವಲ್ ಫಂಡ್? ಮೂಲ ಸೌಕರ್ಯ ವಲಯದಲ್ಲಿ ತೊಡಗಿಸಿಕೊಂಡಿರುವ ಕಂಪನಿಗಳ ಈಕ್ವಿಟಿಗಳಲ್ಲಿ ಹೂಡಿಕೆ ಮಾಡುವ ಮ್ಯೂಚುವಲ್ ಫಂಡ್ಗಳನ್ನು ಇನ್ಫ್ರಾಸ್ಟ್ರಕ್ಚರ್ ಮ್ಯೂಚುವಲ್ ಫಂಡ್ಗಳೆನ್ನುತ್ತೇವೆ. ಇಂಧನ, ವಿದ್ಯುತ್, ಲೋಹ, ರಿಯಾಲ್ಟಿ ವಲಯದ ಕಂಪನಿಗಳು ಇದರಲ್ಲಿವೆ. ಉದಾಹರಣೆಗೆ ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಫ್ರಾಸ್ಟ್ರಕ್ಚರ್ ಫಂಡ್, ಲಾರ್ಸನ್ & ಟೂಬ್ರೊ, ಭಾರ್ತಿ ಏರ್ಟೆಲ್, ಅಲ್ಟ್ರಾ ಟೆಕ್ ಸಿಮೆಂಟ್, ಆರ್ಎಚ್ಐ ಮ್ಯಾಗ್ನೇಸ್ಟಿಯಾ ಇಂಡಿಯಾ, ಎಸ್ಬಿಐ, ಪಾಲಿಕ್ಯಾಬ್, ಎನ್ಸಿಸಿ ಲಿಮಿಟೆಡ್ ಇತ್ಯಾದಿ ಕಂಪನಿಗಳ ಈಕ್ವಿಟಿಗಳಲ್ಲಿ ಹೂಡಿಕೆ ಮಾಡಿದೆ.
ಕಳೆದ ಜುಲೈನಲ್ಲಿ ಮ್ಯೂಚುವಲ್ ಫಂಡ್ ಯೋಜನೆಗಳಿಗೆ 15,242 ಕೋಟಿ ರೂ. ಸಿಪ್ ಹೂಡಿಕೆ ಹರಿದು ಬಂದಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. ದೇಶದಲ್ಲಿ ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಮಾಡುತ್ತಿರುವವರ ಸಂಖ್ಯೆ ದಿನೇದಿನೆ ಹೆಚ್ಚುತ್ತಿರುವುದನ್ನು ಇದು ಬಿಂಬಿಸಿದೆ.
ಪ್ರಮುಖ ಸುದ್ದಿ
₹2000 Notes Withdrawn: ಪಿಂಕ್ ನೋಟು ಮರಳಿಸಲು ಇನ್ನು ಐದೇ ದಿನ ಅವಕಾಶ; ನಿಮ್ಮಲ್ಲಿ ಇನ್ನೂ ಇದೆಯಾ?
ಇನ್ನೂ ಸುಮಾರು 240 ಶತಕೋಟಿ ರೂಪಾಯಿ ಮೌಲ್ಯದ ₹2000
ನೋಟುಗಳು (₹ 2000 Notes Withdrawn) ಚಲಾವಣೆಯಲ್ಲಿ ಇವೆ. ಇವು ಬ್ಯಾಂಕುಗಳಿಗೆ ಇನ್ನು ಐದು ದಿನಗಳಲ್ಲಿ ಮರಳಬೇಕಿವೆ.
ಹೊಸದಿಲ್ಲಿ: ₹ 2000 ಮುಖಬೆಲೆಯ ನೋಟುಗಳನ್ನು ಆರ್ಬಿಐ (RBI) ಹಿಂದೆಗೆದುಕೊಳ್ಳುವ (₹2000 Notes Withdrawn) ಪ್ರಕ್ರಿಯೆ ನಡೆಯುತ್ತಿದ್ದು, ನಿಮ್ಮಲ್ಲಿರುವ ನೋಟುಗಳನ್ನು ಬದಲಿಸಿಕೊಳ್ಳಲು ಇನ್ನೊಂದೇ ವಾರ ಅವಕಾಶವಿದೆ. ಇದರ ಅಂತಿಮ ಗಡು ಸೆಪ್ಟೆಂಬರ್ 30ರಂದು ಇದೆ.
ಸದ್ಯ ಇರುವುದರಲ್ಲಿ ಅತ್ಯಧಿಕ ಮುಖಬೆಲೆಯ ಈ ಕರೆನ್ಸಿಗಳನ್ನು ಆರ್ಬಿಐ ವಾಪಸ್ ಪಡೆಯುತ್ತಿದೆ. ಈಗಾಗಲೇ ಸಾಕಷ್ಟು ನೋಟುಗಳು ಬ್ಯಾಂಕುಗಳಿಗೆ ಮರಳಿ ಬಂದಿದ್ದು, ಇನ್ನೂ ಸುಮಾರು 240 ಶತಕೋಟಿ ರೂಪಾಯಿ ಮೌಲ್ಯದ ನೋಟುಗಳು ಚಲಾವಣೆಯಲ್ಲಿ ಇವೆ. ಇವು ಬ್ಯಾಂಕುಗಳಿಗೆ ಇನ್ನು ಐದು ದಿನಗಳಲ್ಲಿ ಮರಳಬೇಕಿವೆ.
ಭಾರತೀಯ ರಿಸರ್ವ್ ಬ್ಯಾಂಕ್ ಮೇ 19ರಂದು 2,000 ರೂಪಾಯಿ ನೋಟುಗಳನ್ನು ಹಿಂತೆಗೆದುಕೊಳ್ಳುವ ಆದೇಶ ನೀಡಿತು. ಜನರಿಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳಲು ಅಥವಾ ಬ್ಯಾಂಕ್ಗಳಲ್ಲಿ ಠೇವಣಿ ಮಾಡಲು ಸೆಪ್ಟೆಂಬರ್ ಅಂತ್ಯದವರೆಗೆ ಅವಕಾಶ ನೀಡಿದೆ. 3.56 ಲಕ್ಷ ಕೋಟಿ ರೂಪಾಯಿ ಮೌಲ್ಯದ ನೋಟುಗಳು ಮಾರುಕಟ್ಟೆಯಲ್ಲಿದ್ದವು. ಅವುಗಳಲ್ಲಿ ಬಹುಪಾಲು ಬ್ಯಾಂಕ್ಗೆ ಮರಳಿ ಬಂದಿವೆ. ಆದರೆ ಸೆ.1ರಿಂದ 7% ನೋಟುಗಳು ಚಲಾವಣೆಯಲ್ಲಿವೆ.
ಗುಲಾಬಿ ಬಣ್ಣದ ಈ 2,000 ರೂಪಾಯಿ ನೋಟನ್ನು ನವೆಂಬರ್ 2016ರಲ್ಲಿ ಮಾರುಕಟ್ಟೆಗೆ ಪರಿಚಯಿಸಲಾಯಿತು. ಭ್ರಷ್ಟಾಚಾರ ತಡೆಗಾಗಿ 1,000 ಮತ್ತು 500 ರೂಪಾಯಿಗಳ ನೋಟುಗಳನ್ನು ಡಿಮಾನಿಟೈಸೇಷನ್ ಮಾಡಿದಾಗ, ಅವುಗಳ ಬದಲಿಗೆ ಇದನ್ನು ತರಲಾಗಿತ್ತು. ನಂತರ ಇದು ದೊಡ್ಡ ಮೌಲ್ಯದ ನಗದು ವ್ಯವಹಾರಗಳ ಹೆಚ್ಚಾಗಿ ಬಳಕೆಯಾಗತೊಡಗಿತು.
ಈ ನೋಟುಗಳು ತಮ್ಮ ಉದ್ದೇಶವನ್ನು ಪೂರೈಸಿವೆ. ಇವು ಈಗ ಸಾಮಾನ್ಯವಾಗಿ ಬಳಕೆಯಲ್ಲಿಲ್ಲ ಎಂದು ಆರ್ಬಿಐ ಹೇಳಿದೆ. ನಾಲ್ಕರಿಂದ ಐದು ವರ್ಷಗಳ ಬಳಕೆಯಲ್ಲಿ ಹರಿದ, ಮುದ್ದೆಯಾದ ನೋಟುಗಳನ್ನು ಬದಲಿಸುವುದು ಆರ್ಬಿಐಯ “ಕ್ಲೀನ್ ನೋಟ್ ನೀತಿ”ಯಲ್ಲಿ ಒಂದು. ಮೇ ತಿಂಗಳಲ್ಲಿ ಇದರ ಪ್ರಕಟಣೆ ಬಂದಾಗ ಇದ್ದಕ್ಕಿದ್ದಂತೆ ₹2000 ಹೊರಗೆ ಬಂದವು; ಆಭರಣದ ಅಂಗಡಿಗಳಲ್ಲಿ ವ್ಯಾಪಾರ ಹೆಚ್ಚಿತು ಎಂದು ವರದಿಯಾಗಿದೆ.
ಗಡುವಿನ ಒಳಗೆ ಮರಳಿಸದಿದ್ದರೆ ಏನಾಗುತ್ತದೆ?
ಈ ನೋಟುಗಳು ಸೆಪ್ಟೆಂಬರ್ 30ರ ನಂತರವೂ ಕಾನೂನುಬದ್ಧವಾದ ಕರೆನ್ಸಿಯಾಗಿಯೇ ಉಳಿಯಲಿವೆ. ಆದರೆ ಅವುಗಳನ್ನು ವಹಿವಾಟುಗಳಲ್ಲಿ ನೀಡುವಂತಿಲ್ಲ ಅಥವಾ ಸ್ವೀಕರಿಸುವಂತಿಲ್ಲ. ಇದನ್ನು RBIಯೊಂದಿಗೆ ಮಾತ್ರ ವಿನಿಮಯ ಮಾಡಿಕೊಳ್ಳಬಹುದು. ಯಾಕೆ ಗಡುವಿನ ಒಳಗೆ ಮರಳಿಸಿಲ್ಲ ಎಂದು ಅದನ್ನು ಹೊಂದಿರುವವರು ಬ್ಯಾಂಕ್ಗೆ ವಿವರಿಸಬೇಕಾಗುತ್ತದೆ.
ಇದನ್ನೂ ಓದಿ: ₹ 2000 Notes Withdrawn: ನೋಟ್ ವಾಪಸ್ ಉತ್ತಮ ನಡೆಯೆ? ಮಾಜಿ ಸಿಇಎ ನೀಡಿದ 6 ಕಾರಣ ಇಲ್ಲಿದೆ
ಮನಿ-ಗೈಡ್
Money Guide: ಹಣ ಉಳಿಸೋದು ಹೇಗೆ? ಮಿಲೇನಿಯಲ್ಸ್ಗಾಗಿ 10 ಟಿಪ್ಸ್ ಇಲ್ಲಿವೆ!
ನೀವು ಮಿಲೇನಿಯಲ್ಸ್ ಆಗಿದ್ದರೆ (1981- 1996 ನಡುವೆ ಜನಿಸಿದವರು) ಮತ್ತು ನಿಮ್ಮ ಭವಿಷ್ಯಕ್ಕಾಗಿ ಹಣವನ್ನು ಉಳಿಸುವ ಬಗೆಗಳನ್ನು ಆಲೋಚನೆ ಮಾಡುತ್ತಿದ್ದರೆ, ಹಣಕಾಸು ತಜ್ಞರು ನೀಡಿರುವ ಈ ಟಾಪ್ 10 ಸಲಹೆಗಳನ್ನು ಓದಿ.
1981ರಿಂದ 1996ರ ನಡುವೆ ಜನಿಸಿದವರನ್ನು ʼಮಿಲೇನಿಯಲ್ಸ್’ (millennials) ಎಂದು ಕರೆಯುತ್ತಾರೆ. ಇವರ ಆದಾಯ, ವೆಚ್ಚದ ಸಾಮರ್ಥ್ಯ ಹೆಚ್ಚು. ನಿರಂತರ ಏರಿಕೆಯನ್ನೂ ಕಾಣುತ್ತಿದೆ. ಕ್ರೆಡಿಟ್ ಕಾರ್ಡ್ಗಳು ಮತ್ತು ವಿವಿಧ ಆನ್ಲೈನ್ ಶಾಪಿಂಗ್ (Online shopping) ಇವರಿಗೆ ಸುಲಭ. ಮಿಲೇನಿಯಲ್ಗಳು ಖರ್ಚು ಮಾಡುವತ್ತ ಗಮನಹರಿಸುವುದು ಹೆಚ್ಚು. ಉಳಿತಾಯದ ಮೇಲೆ ಗಮನ ಹರಿಸುವುದು ಕಡಿಮೆ. ಆದರೆ ಮಿಲೇನಿಯಲ್ಗಳು (millennials saving) ಸಹ ತಮ್ಮ ಹಣವನ್ನು ಉತ್ತಮವಾಗಿ ನಿರ್ವಹಿಸುವುದು (money guide) ಅಗತ್ಯ.
ಹೆಚ್ಚಿನ ಮಿಲೇನಿಯಲ್ಗಳು ದೊಡ್ಡ ಮನೆಯನ್ನು ಹೊಂದುವ, ರಜೆಯಲ್ಲಿ ವಿದೇಶಗಳಿಗೆ ಹೋಗುವ ಕನಸು ಕಾಣುತ್ತಾರೆ. ಕಠಿಣ ಕಾರ್ಪೊರೇಟ್ ಉದ್ಯೋಗಗಳನ್ನು ನಿರ್ವಹಿಸುತ್ತಾರೆ. ಆದರೆ ಭವಿಷ್ಯದಲ್ಲಿ ತಮ್ಮ ಜೀವನಶೈಲಿಯನ್ನು ಉಳಿಸಿಕೊಳ್ಳಲು ಅವರು ಸಾಕಷ್ಟು ಉಳಿಸುತ್ತಾರೆಯೇ? ನೀವು ಮಿಲೇನಿಯಲ್ಸ್ ಆಗಿದ್ದರೆ, ಭವಿಷ್ಯಕ್ಕಾಗಿ ಹಣ ಉಳಿಸುವ ಯೋಚನೆ ಹೊಂದಿದ್ದರೆ ಈ ಟಿಪ್ಸ್ ಓದಿ.
1) ಸಣ್ಣ ಉಳಿತಾಯ ಅಭ್ಯಾಸ ರೂಢಿಸಿಕೊಳ್ಳಿ
ಉಳಿತಾಯಕ್ಕೆ (small savings) ಸಂಬಂಧಿಸಿ ಮಿಲೇನಿಯಲ್ಗಳ ಚಿಂತನೆ ವಿಭಿನ್ನ. ಪ್ರವಾಸ, ದುಬಾರಿ ಗ್ಯಾಜೆಟ್, ಫ್ಯಾಶನ್ ಟ್ರೆಂಡ್ಗಳನ್ನು ಅನುಸರಿಸುವುದು ಇತ್ಯಾದಿಗಳಿಂದಾಗಿ ದೀರ್ಘಾವಧಿಯ ಉಳಿತಾಯದ ಶಿಸ್ತನ್ನು ಅನುಸರಿಸುವಲ್ಲಿ ಅಡ್ಡಿಯಾಗುತ್ತದೆ. ಖರ್ಚು ಮಾಡುವ ಮೊದಲು ಮಾಸಿಕ ಆದಾಯದ ಒಂದು ಭಾಗವನ್ನು ಉಳಿಸುವುದು ಉಳಿತಾಯದ ಶಿಸ್ತನ್ನು ಬೆಳೆಸಲು ಅತ್ಯುತ್ತಮ ಸೂತ್ರ.
ಸ್ಮಾರ್ಟ್ ಸಲಹೆ: 50-20-30 ನಿಯಮವನ್ನು ಅನುಸರಿಸಿ. ಇದರ ಅಡಿಯಲ್ಲಿ, ಆದಾಯದ 50% ಜೀವನ ವೆಚ್ಚಕ್ಕಾಗಿ, 20% ಆಹಾರ, ಮನರಂಜನೆ ಮತ್ತು ಪ್ರಯಾಣಕ್ಕಾಗಿ ಮೀಸಲಿಡಬಹುದು. ಉಳಿದ ಶೇ.30ರಷ್ಟು ಹಣವನ್ನು ಉಳಿತಾಯವಾಗಿ ಇಡಬೇಕು.
2) ವೆಚ್ಚಗಳನ್ನು ಟ್ರ್ಯಾಕ್ ಮಾಡಿ
ಮಿಲೇನಿಯಲ್ಸ್ ಆದಾಯವನ್ನು ತಕ್ಷಣ ಖರ್ಚು ಮಾಡುವತ್ತಲೇ ಪರಿಗಣಿಸುತ್ತಾರೆ. ಮನೆ ಬಾಡಿಗೆ, ದಿನಸಿ, ಭೋಜನ ಇತ್ಯಾದಿಗಳಂತಹ ತಕ್ಷಣದ ಉದ್ದೇಶಗಳಿಗಾಗಿ ಅದನ್ನು ಬಳಸಲು ಬಯಸುತ್ತಾರೆ. ಸ್ಮಾರ್ಟ್ ಉಳಿತಾಯ ಅಭ್ಯಾಸ ಅಳವಡಿಸಿಕೊಳ್ಳುವ ಒಂದು ಹೆಜ್ಜೆಯೆಂದರೆ ಖರ್ಚುಗಳನ್ನು ಗುರುತಿಸುವುದು. ಒಂದು ನಿರ್ದಿಷ್ಟ ಅವಧಿಗೆ ಎಲ್ಲಾ ಖರ್ಚುಗಳನ್ನು ನಮೂದಿಸುವ ಮೂಲಕ ಇದನ್ನು ಮಾಡಬಹುದು. ಇದರಿಂದ ಅನಗತ್ಯ ಅಥವಾ ತಪ್ಪಿಸಬಹುದಾದ ವೆಚ್ಚವನ್ನು ಕಡಿತಗೊಳಿಸಬಹುದು.
ಸ್ಮಾರ್ಟ್ ಸಲಹೆ: ಖರ್ಚು ಟ್ರ್ಯಾಕರ್ ಅಪ್ಲಿಕೇಶನ್ಗಳನ್ನು ಬಳಸಿ. ಹೆಚ್ಚಿನ ಮಿಲೇನಿಯಲ್ಗಳು ಟೆಕ್ ಸೇವಿಗಳು. ಮೊಬೈಲ್ ಖರ್ಚು ಟ್ರ್ಯಾಕರ್ ಅಪ್ಲಿಕೇಶನ್ ಅನ್ನು ಬಳಸುವುದು ವೆಚ್ಚಗಳನ್ನು ಟ್ರ್ಯಾಕ್ ಮಾಡುಲು ಉತ್ತಮ ಆಹಾರ, ಶಾಪಿಂಗ್ ಮತ್ತು ಮನರಂಜನೆಯಂತಹ ವೆಚ್ಚಗಳನ್ನು ವರ್ಗೀಕರಿಸಲು ಈ ಅಪ್ಲಿಕೇಶನ್ಗಳು ಸಹಾಯ ಮಾಡುತ್ತವೆ. ತಡವಾಗಿ ಬಿಲ್ಗಳನ್ನು ಪಾವತಿಸುವುದನ್ನು ತಪ್ಪಿಸಲು ರಿಮೈಂಡರ್ ಬಳಸಬಹುದು.
3) ವಿವೇಚನೆಯಿಂದ ವೆಚ್ಚ ಮಾಡಿ
ತಮ್ಮ ವೃತ್ತಿಜೀವನವನ್ನು ಇತ್ತೀಚೆಗೆ ಪ್ರಾರಂಭಿಸಿರುವ ಮಿಲೇನಿಯಲ್ಗಳು ಉಳಿತಾಯ ಪ್ರಾರಂಭಿಸಲು ಅನಿವಾರ್ಯವಲ್ಲದ ವೆಚ್ಚಗಳನ್ನು ತಪ್ಪಿಸಬೇಕು. ಅಗತ್ಯ ಮತ್ತು ಅನಿವಾರ್ಯವಲ್ಲದ ವೆಚ್ಚವನ್ನು ಗುರುತಿಸುವುದು ಮುಖ್ಯ. ಅನಿಯಂತ್ರಿತವಾಗಿ ಬಿಟ್ಟರೆ ಈ ವೆಚ್ಚಗಳು ಸುಲಭವಾಗಿ ಆದಾಯವನ್ನು ಅಳಿಸಿಹಾಕಬಹುದು ಮತ್ತು ಭವಿಷ್ಯದ ಬಳಕೆಗಾಗಿ ಏನನ್ನೂ ಉಳಿಸದೇ ಇರಬಹುದು.
4) ಅನಗತ್ಯ ಸಾಲವನ್ನು ತಪ್ಪಿಸಿ
ಕ್ರೆಡಿಟ್ ಸೌಲಭ್ಯಗಳು ಸುಲಭವಾಗಿ ಲಭ್ಯವಿವೆ ಮತ್ತು ಸುಲಭವಾಗಿ ಪಡೆಯಬಹುದು. ಈ ಕಾರಣದಿಂದ ಅನೇಕ ಯುವಜನ ತಮ್ಮ ಜೀವನಶೈಲಿಯ ಅವಶ್ಯಕತೆಗಳನ್ನು ಪೂರೈಸಲು ಇವುಗಳ ಕಡೆಗೆ ಒಲವು ತೋರುತ್ತಾರೆ. ಆದರೆ ಇದು ಸಾಲದ ಬಲೆಗೆ ಕಾರಣವಾಗಬಹುದು. ಅಸುರಕ್ಷಿತ ವೈಯಕ್ತಿಕ ಸಾಲಗಳು ಅಥವಾ ಕ್ರೆಡಿಟ್ ಕಾರ್ಡ್ ಸಾಲಗಳಂತಹ ಅನಗತ್ಯ ಸಾಲವನ್ನು ತಪ್ಪಿಸುವುದು ಉತ್ತಮ. ಸಾಲದ ಉದ್ದೇಶ, ಮರುಪಾವತಿ ಯೋಜನೆ, ಮರುಪಾವತಿಗೆ ಹಣದ ಲಭ್ಯತೆ ಇತ್ಯಾದಿ ಅಂಶಗಳನ್ನು ಪರಿಗಣಿಸಿ.
5) ತುರ್ತು ನಿಧಿಯನ್ನು ಹೊಂದಿಸಿಡಿ
ಹೊಸ ಕಾರನ್ನು ಹೊಂದುವುದು, ಮದುವೆ ಅಥವಾ ಮನೆ ನವೀಕರಣಗಳಿಗೆಲ್ಲ ಸಾಕಷ್ಟು ಹಣದ ಅಗತ್ಯವಿರುತ್ತದೆ. ಈ ಗುರಿಗಳು ಉತ್ತಮವಾಗಿ ಉಳಿಸಲು ನಿಮ್ಮನ್ನು ಪ್ರೇರೇಪಿಸುತ್ತವೆ. ಆದರೆ ಹೆಚ್ಚಿನವರು ತುರ್ತು ನಿಧಿಯ (Emergency fund) ಅವಶ್ಯಕತೆಯನ್ನು ಕಡೆಗಣಿಸುತ್ತಾರೆ. ವೈದ್ಯಕೀಯ ಅಗತ್ಯಗಳಂತಹ ತುರ್ತು ಪರಿಸ್ಥಿತಿಗಳಿಗಾಗಿ ಉಳಿಸುವುದು ಯಾವಾಗಲೂ ಒಳ್ಳೆಯದು.
6) ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ
ಇನ್ನೂ ಹೂಡಿಕೆಯನ್ನು ಪ್ರಾರಂಭಿಸದ ಮಿಲೇನಿಯಲ್ಗಳು ತಮ್ಮ ಹೂಡಿಕೆಯ ಪ್ರಯಾಣವನ್ನು ಪ್ರಾರಂಭಿಸಲು ಸರಿಯಾದ ಸಮಯವಿದು. ದೀರ್ಘಾವಧಿಯ ಗುರಿಗಳನ್ನು ಸಾಧಿಸಲು ಹಣವನ್ನು ಉಳಿಸುವುದು ಹೂಡಿಕೆಯ ಮೂಲಕ ಮಾತ್ರ ಸಾಧ್ಯ. ನಿಮ್ಮ ಆದಾಯದ ಮಟ್ಟವನ್ನು ಲೆಕ್ಕಿಸದೇ ಮ್ಯೂಚುಯಲ್ ಫಂಡ್ ಹೂಡಿಕೆಗಳಿಗಾಗಿ ಕನಿಷ್ಠ 15-20% ಅನ್ನು ಮೀಸಲಿಡಬೇಕು. ಇವುಗಳು ನೀವು ಅನುಸರಿಸಿದ ಹೂಡಿಕೆಯ ಮಾದರಿ ಅವಲಂಬಿಸಿ ಧನಾತ್ಮಕ ಆದಾಯವನ್ನು ನೀಡಬಹುದು.
ಸ್ಮಾರ್ಟ್ ಸಲಹೆ: ಇಂದು ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಮ್ಯೂಚುವಲ್ ಫಂಡ್ಗಳು ಲಭ್ಯವಿದೆ. ಮ್ಯೂಚುವಲ್ ಫಂಡ್ಗಳ ರಿಸ್ಕ್ ರೇಟಿಂಗ್ ಅನ್ನು ನೋಡಿ ಹೂಡಿಕೆ ಮಾಡಲು ಪ್ರಾರಂಭಿಸಬೇಕು. ಹೆಚ್ಚಿನ ಸಂದರ್ಭಗಳಲ್ಲಿ ಮ್ಯೂಚುಯಲ್ ಫಂಡ್ನಲ್ಲಿ ಹೆಚ್ಚಿನ ರಿಸ್ಕ್ ಕೂಡಾ ಇರುತ್ತದೆ.
7) ಷೇರು ಮಾರುಕಟ್ಟೆಯಲ್ಲಿ ಹೂಡಿಕೆ
ಇಂದು ಷೇರು ಮಾರುಕಟ್ಟೆ ಎಲ್ಲರಿಗೂ ಸುಲಭವಾಗಿ ಲಭ್ಯವಿದೆ ಮತ್ತು ಪ್ರವೇಶಿಸಬಹುದಾಗಿದೆ. ಹೂಡಿಕೆಯ ಆಯ್ಕೆಗಳಿಗಾಗಿ ಸ್ಟಾಕ್ ಮಾರುಕಟ್ಟೆಯನ್ನು ಅನ್ವೇಷಿಸುವುದು, ಒಟ್ಟು ಆದಾಯದ ಒಂದು ನಿರ್ದಿಷ್ಟ ಭಾಗವನ್ನು ಹೂಡುವುದು ಒಳ್ಳೆಯದು. ಸ್ಟಾಕ್ ಮಾರುಕಟ್ಟೆಗಳು ಏರಿಳಿತಗೊಳ್ಳುತ್ತಲೇ ಇರುತ್ತವೆ. ಆದ್ದರಿಂದ ಇವುಗಳ ಬಗ್ಗೆ ಹೆಚ್ಚಿನ ಜ್ಞಾನವನ್ನೂ ಗಳಿಸಿಕೊಳ್ಳಬೇಕು.
ಇದನ್ನೂ ಓದಿ: Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!
8) ವಿಮೆ ಇರಲಿ
ಇಂದಿನ ಕಾಲದಲ್ಲಿ ಆರೋಗ್ಯ ವಿಮೆ ಬಹಳ ನಿರ್ಣಾಯಕ. ಆರೋಗ್ಯ ರಕ್ಷಣೆ, ಜೀವ ವಿಮೆಯಂತಹ ವಿಮೆಗಳನ್ನು ಆರಿಸಿಕೊಳ್ಳುವ ಮೂಲಕ ಮಿಲೇನಿಯಲ್ಗಳು ಹಣಕಾಸಿನ ಭದ್ರತೆಯನ್ನು ಹೊಂದಬೇಕು. ವಿಮೆಯು ನಿಮ್ಮ ಭವಿಷ್ಯಕ್ಕೆ ಮತ್ತು ನಿಮ್ಮ ಕುಟುಂಬ/ಅವಲಂಬಿತರ ಭವಿಷ್ಯಕ್ಕೆ ಆರ್ಥಿಕ ರಕ್ಷಣೆ ಒದಗಿಸುತ್ತದೆ. ವಿಮೆ ಯೋಜನೆ ಆರಿಸುವ ಮೊದಲು ನೀವು ವಿಮೆಯ ಕೆಲವು ಮೂಲಭೂತ ಅಂಶಗಳನ್ನು ಕಲಿಯಬೇಕು, ನಿಮ್ಮ ಅಗತ್ಯಗಳಿಗೆ ಅನುಗುಣವಾಗಿ ಸರಿಯಾದುದನ್ನು ಆರಿಸಿಕೊಳ್ಳಬೇಕು. ವಿಮೆಯು ಕೇವಲ ಹಿರಿಯರಿಗೆ ಮಾತ್ರ ಅಲ್ಲ.
9) ಲೈಫ್ಸ್ಟೈಲ್ ಬದಲಾವಣೆಗಳು
ಮಿಲೇನಿಯಲ್ಗಳ ಜೀವನಶೈಲಿಯು (lifestyle) ಹಿಂದಿನ ಪೀಳಿಗೆಗಿಂತ ಬಹಳ ಭಿನ್ನ. ಮಿಲೇನಿಯಲ್ಸ್ ಜೀವನದಲ್ಲಿ ಐಷಾರಾಮಿತನ ಬಯಸುತ್ತಾರೆ. ಐಷಾರಾಮಿ ಕೆಟ್ಟದ್ದಲ್ಲ. ಆದರೆ ಕೆಲವು ಜೀವನಶೈಲಿ ಹೊಂದಾಣಿಕೆಗಳು ದೀರ್ಘಾವಧಿಯಲ್ಲಿ ಗಮನಾರ್ಹ ಉಳಿತಾಯವನ್ನು ಸಂಗ್ರಹಿಸಲು ಸಹಾಯ ಮಾಡುತ್ತದೆ.
10) ಕ್ರೆಡಿಟ್ ಕಾರ್ಡ್ ಬಾಕಿ ಪಾವತಿ ತಪ್ಪಿಸಬೇಡಿ
ಕ್ರೆಡಿಟ್ ಕಾರ್ಡ್ಗಳು ಬಳಕೆದಾರರಿಗೆ ಪಾವತಿ (credit card payment) ಮುಂದೂಡಲು ಅವಕಾಶ ನೀಡುತ್ತವೆ. ಆದರೆ ಅಷ್ಟೇ ಪ್ರಮಾಣದ ಬಡ್ಡಿಯನ್ನೂ ಕಸಿಯುತ್ತವೆ. ನಿಗದಿತ ದಿನಾಂಕದಂದು ಬಾಕಿ ಕಟ್ಟದೆ ಮುಂದೂಡಿ ಅದೇ ಹಣವನ್ನು ಇತರ ವೆಚ್ಚಗಳಿಗೆ ಬಳಸುವುದು ಅಪಾಯಕಾರಿ. ನೀವು ಹಣ ಉಳಿಬಯಸಿದ್ದರೆ ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ ಪೂರ್ಣ ಪಾವತಿ ಮಾಡಿ. ಇದರಿಂದ ಲಾಭವೆಂದರೆ, ಒಂದು, ನಿಮ್ಮ ಕ್ರೆಡಿಟ್ ಸ್ಕೋರ್ ಮೇಲೆ ಧನಾತ್ಮಕ ಪರಿಣಾಮ ಮತ್ತು ಎರಡನೆಯದು, ನಿಮ್ಮ ಆದಾಯ-ವೆಚ್ಚದ ಮೇಲೆ ಉತ್ತಮ ನಿಯಂತ್ರಣ.
ಇದನ್ನೂ ಓದಿ: Money Guide: ಅಕ್ಟೋಬರ್ 1ರ ಮೊದಲೇ ಇದೆಲ್ಲ ಮಾಡಿಕೊಳ್ಳಿ… ಇಲ್ಲದಿದ್ದರೆ ಹಣ ಕಳೆದುಕೊಳ್ಳುವಿರಿ!
ಮನಿ ಗೈಡ್
Money Guide: ಅಕ್ಟೋಬರ್ 1ರ ಮೊದಲೇ ಇದೆಲ್ಲ ಮಾಡಿಕೊಳ್ಳಿ… ಇಲ್ಲದಿದ್ದರೆ ಹಣ ಕಳೆದುಕೊಳ್ಳುವಿರಿ!
ಆಧಾರ್ ಕಾರ್ಡ್ (Aadhar card) ವಿವರ ಬದಲಾವಣೆ, ಮ್ಯೂಚುವಲ್ ಫಂಡ್ (Mutual fund), ಡಿಮ್ಯಾಟ್ ಮತ್ತು ಟ್ರೇಡಿಂಗ್ ಖಾತೆಗಳಿಗೆ ನಾಮಿನಿಗಳ ನೇಮಕ ಅಥವಾ ಬದಲಾವಣೆ, ಟಿಸಿಎಸ್ ನಿಯಮಗಳು, ರೂ. 2000 ನೋಟುಗಳ ಬದಲಾವಣೆ, ಮತ್ತು ಜನನ ಪ್ರಮಾಣಪತ್ರ ಕಡ್ಡಾಯ- ಈ 6 ದೊಡ್ಡ ಬದಲಾವಣೆಗಳು ಅಕ್ಟೋಬರ್ 1ರಿಂದ ನಿಮ್ಮ ಆರ್ಥಿಕ ಜೀವನದ ಮೇಲೆ ಪರಿಣಾಮ ಬೀರಲಿವೆ.
ಬೆಂಗಳೂರು: ಅಕ್ಟೋಬರ್ 1ರಿಂದ ನಿಮ್ಮ ಹಣಕಾಸು ಸ್ಥಿತಿಗತಿಯ (Money Guide) ಮೇಲೆ ಪರಿಣಾಮ ಬೀರಬಲ್ಲ ಹಲವು ಸಂಗತಿಗಳು ವೈಯಕ್ತಿಕ ಹಣಕಾಸು (Personal Finance) ವಲಯದಲ್ಲಿ ನಡೆಯಲಿವೆ. ಹೀಗಾಗಿ ಅಕ್ಟೋಬರ್ 1ರ ಮೊದಲೇ ಇವುಗಳನ್ನು ನೀವು ಅಪ್ಡೇಟ್ ಮಾಡಿಕೊಳ್ಳಬೇಕಾದೀತು.
ಆಧಾರ್ ಕಾರ್ಡ್ (Aadhar card) ವಿವರ ಬದಲಾವಣೆ, ಮ್ಯೂಚುವಲ್ ಫಂಡ್ (Mutual fund), ಡಿಮ್ಯಾಟ್ ಮತ್ತು ಟ್ರೇಡಿಂಗ್ ಖಾತೆಗಳಿಗೆ ನಾಮಿನಿಗಳ ನೇಮಕ ಅಥವಾ ಬದಲಾವಣೆ, ಟಿಸಿಎಸ್ ನಿಯಮಗಳು, ರೂ. 2000 ನೋಟುಗಳ ಬದಲಾವಣೆ, ಮತ್ತು ಜನನ ಪ್ರಮಾಣಪತ್ರ ಕಡ್ಡಾಯ- ಈ 6 ದೊಡ್ಡ ಬದಲಾವಣೆಗಳು ಅಕ್ಟೋಬರ್ 1ರಿಂದ ನಿಮ್ಮ ಆರ್ಥಿಕ ಜೀವನದ ಮೇಲೆ ಪರಿಣಾಮ ಬೀರಲಿವೆ. ಇವುಗಳ ವಿವರ ಕೆಳಗಿದೆ.
1) ಮ್ಯೂಚುಯಲ್ ಫಂಡ್ಗಳಿಗೆ ನಾಮಿನಿ
ಅಸ್ತಿತ್ವದಲ್ಲಿರುವ ಎಲ್ಲಾ ಮ್ಯೂಚುಯಲ್ ಫಂಡ್ ಫೋಲಿಯೊಗಳಿಗೆ (ಜಂಟಿ ಹೆಸರು ಹೊಂದಿರುವುದನ್ನೂ ಸೇರಿಸಿ) ನಾಮನಿರ್ದೇಶಿತರನ್ನು (ನಾಮಿನಿ) ಸೇರಿಸಲು ಕೊನೆಯ ದಿನಾಂಕ 30 ಸೆಪ್ಟೆಂಬರ್ 2023 ಎಂದು ನಿಗದಿಪಡಿಸಲಾಗಿದೆ. ವಿಫಲವಾದರೆ ಫೋಲಿಯೊಗಳನ್ನು ಡೆಬಿಟ್ಗಳಿಗಾಗಿ ಫ್ರೀಜ್ ಮಾಡಲಾಗುತ್ತದೆ.
2) ಇತ್ತೀಚಿನ TCS ನಿಯಮಗಳು
ಕ್ರೆಡಿಟ್ ಕಾರ್ಡ್ಗಳ ಮೂಲಕ ನಿಮ್ಮ ಸಾಗರೋತ್ತರ ವೆಚ್ಚಗಳು ರೂ. 7 ಲಕ್ಷವನ್ನು ಮೀರಿದರೆ, ನೀವು ಅಕ್ಟೋಬರ್ 1ರಿಂದ 20 ಪ್ರತಿಶತ TCSಗೆ ಒಳಪಡುತ್ತೀರಿ. ಆದರೆ ವೈದ್ಯಕೀಯ ಅಥವಾ ಶೈಕ್ಷಣಿಕ ಉದ್ದೇಶಗಳಿಗಾಗಿ ಅಂತಹ ವೆಚ್ಚಗಳನ್ನು ಮಾಡಿದರೆ TCS ಅನ್ನು 5 ಶೇಕಡ ವಿಧಿಸಲಾಗುತ್ತದೆ. ಸಾಗರೋತ್ತರ ಶಿಕ್ಷಣಕ್ಕಾಗಿ ಸಾಲ ಪಡೆಯುವವರಿಗೆ 7 ಲಕ್ಷದ ನಂತರದ ಮೊತ್ತಕ್ಕೆ ಕೇವಲ 0.5 ಶೇಕಡಾ ಹೆಚ್ಚುವರಿ TCS ದರ ವಿಧಿಸಲಾಗುತ್ತದೆ. ಕೇಂದ್ರವು 2023-24ರ ಬಜೆಟ್ನಲ್ಲಿ ಸಾಗರೋತ್ತರ ಪ್ರವಾಸ ಪ್ಯಾಕೇಜ್ ಮತ್ತು LRS ಅಡಿಯಲ್ಲಿ ರವಾನೆಯಾಗುವ ಹಣಕ್ಕೆ (ಶಿಕ್ಷಣ ಮತ್ತು ವೈದ್ಯಕೀಯ ಉದ್ದೇಶ ಹೊರತುಪಡಿಸಿ) TCS ದರಗಳನ್ನು ಪ್ರಸ್ತುತದ ಶೇಕಡಾ 5ರಿಂದ ಶೇಕಡಾ 20ಕ್ಕೆ ಹೆಚ್ಚಿಸಿದೆ.
3) ಡಿಮ್ಯಾಟ್, ಟ್ರೇಡಿಂಗ್ ಖಾತೆಗಳಿಗೆ ನಾಮನಿರ್ದೇಶನ
ಅಸ್ತಿತ್ವದಲ್ಲಿರುವ ಟ್ರೇಡಿಂಗ್ ಮತ್ತು ಡಿಮ್ಯಾಟ್ ಖಾತೆದಾರರಿಗೆ ಫಲಾನುಭವಿಗಳನ್ನು ನಾಮನಿರ್ದೇಶನ ಮಾಡುವ ಗಡುವು ಸೆಪ್ಟೆಂಬರ್ 30ರಂದು ಕೊನೆಗೊಳ್ಳುತ್ತದೆ.
4) ಉಳಿತಾಯ ಖಾತೆಗೆ ಆಧಾರ್
ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ವೈ), ಅಂಚೆ ಕಚೇರಿ ಠೇವಣಿ ಮತ್ತು ಇತರ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಿದವರು ಈ ತಿಂಗಳ ಅಂತ್ಯದೊಳಗೆ ತಮ್ಮ ಆಧಾರ್ ಸಂಖ್ಯೆಯನ್ನು ಅಂಚೆ ಕಚೇರಿ ಅಥವಾ ಬ್ಯಾಂಕ್ ಶಾಖೆಗೆ ಸಲ್ಲಿಸಬೇಕು. ಸೆಪ್ಟೆಂಬರ್ 30ರಂದು ಗಡುವು ನೀಡಲಾಗಿದೆ. ಇಲ್ಲದಿದ್ದಲ್ಲಿ ಈ ಹೂಡಿಕೆಗಳನ್ನು ಫ್ರೀಜ್ ಮಾಡಬಹುದು.
5) ರೂ. 2000 ಕರೆನ್ಸಿ ನೋಟುಗಳ ವಿನಿಮಯ
ನಿಮ್ಮಲ್ಲಿ ಕೆಲವರು ಇನ್ನೂ ರೂ. 2000 ನೋಟುಗಳನ್ನು ಹೊಂದಿದ್ದರೆ, 30 ಸೆಪ್ಟೆಂಬರ್ 2023ರೊಳಗೆ ಖಂಡಿತವಾಗಿಯೂ ಬ್ಯಾಂಕ್ಗಳಲ್ಲಿ ಠೇವಣಿ ಮಾಡಿ. ರಿಸರ್ವ್ ಬ್ಯಾಂಕ್ ಸೆಪ್ಟೆಂಬರ್ 30 ಅನ್ನು ಈ ನೋಟುಗಳನ್ನು ಬದಲಾಯಿಸಲು ಗಡುವು ಎಂದು ನಿಗದಿಪಡಿಸಿದೆ.
6) ಸರ್ಕಾರಿ ಉದ್ಯೋಗಗಳಿಗೆ ಜನನ ಪ್ರಮಾಣ ಪತ್ರ ಕಡ್ಡಾಯ
ಹಣದ ವಿಷಯಗಳ ಹೊರತಾಗಿ, ಜನನ ಪ್ರಮಾಣಪತ್ರಗಳು ಮುಂದಿನ ತಿಂಗಳಿನಿಂದ ಆಧಾರ್ ಮತ್ತು ಸರ್ಕಾರಿ ಉದ್ಯೋಗಗಳಿಗೆ ಒಂದೇ ದಾಖಲೆಯಾಗಿ ಮಾರ್ಪಟ್ಟಿವೆ. ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯಿದೆ, 2023 ಅಕ್ಟೋಬರ್ 1, 2023 ರಿಂದ ದೇಶದಲ್ಲಿ ಜಾರಿಗೆ ಬರಲಿದೆ.
ಇದನ್ನೂ ಓದಿ: Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!
ದೇಶ
Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!
Money Guide: ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮ ಆಗಿರಬೇಕು ಎಂದಾದರೆ, ವೃತ್ತಿಯ ಆರಂಭದಿಂದಲೇ ಉಳಿತಾಯವನ್ನು ಆರಂಭಿಸಿ.
ಹಣವನ್ನು ಉಳಿತಾಯ (Money Saving) ಮಾಡುವುದೂ ಒಂದು ಕಲೆ. ದುಡಿಮೆಯ ದಿನಗಳಲ್ಲಿ ಒಂದಿಷ್ಟು ಹಣವನ್ನು ಉಳಿತಾಯದ ಮಾಡಿದರೆ, ನಿವೃತ್ತಿಯ ದಿನಗಳನ್ನು (Retirement Life) ನೆಮ್ಮದಿಯಾಗಿ ಕಳೆಯಬಹುದು. ಇಲ್ಲದಿದ್ದರೆ, ದುಡಿಯುವ ಕಸುವು ಇಲ್ಲದ ಸಮಯದಲ್ಲಿ ಹಣಕ್ಕಾಗಿ ಪರದಾಡಬೇಕಾಗುತ್ತದೆ. ಹಾಗಾಗಿ, ನಿಮ್ಮ ವೃತ್ತಿಯ ಆರಂಭದ ದಿನಗಳಿಂದಲೇ ನಿವೃತ್ತಿಯ ಬಗ್ಗೆ ಪ್ಲ್ಯಾನ್ ಮಾಡಿ(Plan for Retirement life), ಹಣವನ್ನು ಉಳಿತಾಯ ಮಾಡಬೇಕು. ನಿವೃತ್ತಿಯ ಅಂಚಿಗೆ ಬರುವಷ್ಟರಲ್ಲಿ ದೊಡ್ಡ ಮೊತ್ತದ ಉಳಿತಾಯ ನಿಮಗಾಗಿ ಕಾಯುತ್ತಿರುತ್ತದೆ. ಹಾಗಾಗಿ, ಈಗನಿಂದಲೇ ನೀವು ಉಳಿತಾಯ ಮತ್ತು ನಿವೃತ್ತಿಯ ದಿನಗಳಿಗಾಗಿ ಹೂಡಿಕೆಯ ಪ್ಲ್ಯಾನ್ ಮಾಡುವುದು ಶುರು ಮಾಡಿ(Money Guide).
ನಿವೃತ್ತಿಗಾಗಿ ಹಣ ಉಳಿಸುವ ಮಾರ್ಗಗಳು….
1.ಉಳಿತಾಯ ಬೇಗ ಆರಂಭಿಸಿ
ಉತ್ತಮ ನಿವೃತ್ತಿ ಜೀವನಕ್ಕಾಗಿ ವೃತ್ತಿ ಆರಂಭದ ದಿನಗಳಿಂದಲೇ ಉಳಿತಾಯವನ್ನು ಆರಂಭಿಸಬೇಕು. ಚಿಕ್ಕ ಮೊತ್ತದ ಸೇವಿಂಗ್ ಕೂಡ ನಿವೃತ್ತಿ ಹೊತ್ತಿಗೆ ಬಹುದೊಡ್ಡ ಮೊತ್ತವಾಗಿ ಬದಲಾಗಿರುತ್ತದೆ.
2.ಟಾರ್ಗೆಟ್ ಸೆಟ್ ಮಾಡಿಕೊಳ್ಳಿ
ನಿಮ್ಮ ನಿರೀಕ್ಷಿತ ವೆಚ್ಚಗಳು ಮತ್ತು ಜೀವನಶೈಲಿಯ ಆಧಾರದ ಮೇಲೆ ನಿವೃತ್ತಿಗಾಗಿ ನಿಮಗೆ ಎಷ್ಟು ಹಣ ಬೇಕು ಎಂದು ನಿರ್ಧರಿಸಿ. ಹಣದುಬ್ಬರ ಮತ್ತು ಆರೋಗ್ಯ ವೆಚ್ಚಗಳಂತಹ ಅಂಶಗಳನ್ನು ಪರಿಗಣಿಸಿ ಸೇವಿಂಗ್ ಆರಂಭಿಸಿ. ಸ್ಪಷ್ಟವಾದ ನಿವೃತ್ತಿ ಗುರಿಯನ್ನು ಹಾಕಿಕೊಳ್ಳುವುದರಿಂದ ಹಣ ಉಳಿಕೆಯಲ್ಲಿ ಸ್ಪಷ್ಟತೆ ದೊರೆಯುತ್ತದೆ.
3.ರಿಟೈರ್ಮೆಂಟ್ ಬಜೆಟ್ ತಯಾರಿಸಿ
ನಿಮ್ಮ ಸದ್ಯದ ಆದಾಯ ಮತ್ತು ವೆಚ್ಚದ ಅನುಸಾರ ನಿಮ್ಮ ನಿವೃತ್ತಿಯ ಬಜೆಟ್ ತಯಾರಿಸಿ. ಅನವಶ್ಯವಾಗಿ ಎಲ್ಲೆಲ್ಲಿ ಹಣ ಪೋಲಾಗುತ್ತಿದೆ ಎಂದು ಗುರುತಿಸಿಕೊಳ್ಳಿ ಮತ್ತು ಅಂಥ ಹಣವನ್ನು ಉಳಿಕೆಯ ಪಟ್ಟಿಗೆ ಸೇರಿಸಿ. ಈ ಮೂಲಕ ರಿಟೈರ್ ಫಂಡ್ ಕ್ರೋಡೀಕರಿಸಬಹುದು.
4.ರಿಟೈರ್ಮೆಂಟ್ ಅಕೌಂಟ್!
ಭಾರತದಲ್ಲಿ ನಾನಾ ಅಕೌಂಟ್ಗಳು ಚಾಲ್ತಿಯಲ್ಲಿವೆ. ಅವುಗಳ ಮೂಲಕ ರಿಟೈರ್ಮೆಂಟ್ ಪ್ಲ್ಯಾನ್ ಮಾಡಬಹುದು. ಇಪಿಎಫ್, ಪಿಪಿಎಫ್, ಎನ್ಪಿಎಸ್, ಎಫ್ಡಿ ಇತ್ಯಾದಿ ಖಾತೆಗಳ ಮೂಲಕ ಸೇವಿಂಗ್ ಹೆಚ್ಚಿಸುತ್ತಾ ಹೋದಂತೆ ನಿವೃತ್ತಿ ಸಮಯದಯಲ್ಲಿ ತುಂಬಾ ಸಹಕಾರಿಯಾಗುತ್ತದೆ.
5.ಹೂಡಿಕೆ ಮಾಡಿ
ಷೇರುಗಳು, ನಿರ್ದಿಷ್ಟ ಆದಾಯ ತರುವ ಹೂಡಿಕೆಗಳು, ರಿಯಲ್ ಎಸ್ಟೇಟ್ ಸೇರಿದಂತೆ ಇನ್ನಿತರ ಹೂಡಿಕೆಗಳನ್ನು ಆಯ್ದುಕೊಳ್ಳಬಹುದು. ನೀವು ಯಾವುದೇ ರೀತಿಯ ಹೂಡಿಕೆಯ ಸಾಧನವನ್ನು ಆಯ್ಕೆ ಮಾಡಿಕೊಳ್ಳಿ. ಆದರೆ, ಅದಕ್ಕಿಂತ ಮುಂಚೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಮುಂದುವರಿಯರಿ.
6.ಅನವಶ್ಯ ವೆಚ್ಚ ಬೇಡ
ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮವಾಗಿರಬೇಕು ಎಂದಾದರೆ, ಈಗಿನಿಂದಲೂ ಅನವಶ್ಯ ವೆಚ್ಚಗಳನ್ನು ದೂರ ಮಾಡಿ. ನಿಮ್ಮ ರಿಟೈರ್ಮೆಂಟ್ ಖಾತೆಗಳಿಗೆ ಆಟೋಮೆಟಿಕ್ ಆಗಿ ದುಡ್ಡು ಪೇ ಆಗುವ ಹಾಗೆ ಮಾಡಿ. ನಿಮ್ಮ ಸಂಬಳದಲ್ಲಿ ಇನ್ಕ್ರಿಮೆಂಟ್ ಆದಾಗಲೆಲ್ಲ. ಈ ರೀತಿಯ ಪರಿಹಾರವನ್ನು ಕಂಡುಕೊಳ್ಳಬಹುದು.
7.ಪರ್ಯಾಯ ಉಳಿತಾಯ
ಮ್ಯೂಚವಲ್ ಫಂಡ್ಸ್, ಷೇರುಗಳು, ಬಾಂಡ್ಗಳಂಥ ಪರ್ಯಾಯ ಉಳಿತಾಯದ ಮಾರ್ಗಗಳನ್ನು ಹುಡುಕಿಕೊಳ್ಳಬಹುದು. ಕೇವಲ ಹಣವನ್ನು ಫಿಕ್ಸೆಡ್ ಡಿಪಾಸೆಟ್ ಮಾಡುವುದು ಮಾತ್ರವೇ ಉಳಿತಾಯದ ಮಾರ್ಗವಲ್ಲ. ಉಳಿತಾಯದ ಜತೆಗೆ ಹಣ ಹೆಚ್ಚಾಗುವ ಮಾರ್ಗಗಳಿವೆ. ಅವುಗಳನ್ನು ಶೋಧಿಸಬಹುದು. ಆದರೆ, ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ.
8.ತೆರಿಗೆ ಮಾಹಿತಿ ಇರಲಿ
ತೆರಿಗೆ ಕಾನೂನುಗಳು, ಹೂಡಿಕೆ ಆಯ್ಕೆಗಳು ಮತ್ತು ನಿವೃತ್ತಿ ಯೋಜನೆ ತಂತ್ರಗಳಲ್ಲಿನ ಬದಲಾವಣೆಗಳ ಬಗ್ಗೆ ನಿಮಗೆ ಅಪ್ಡೇಟೆಡ್ ಮಾಹಿತಿ ಇರುವುದು ಉತ್ತಮ. ತಿಳುವಳಿಕೆಯುಳ್ಳ ಹಣಕಾಸಿನ ನಿರ್ಧಾರಗಳನ್ನು ಮಾಡಲು ಈ ರೀತಿಯ ಅಪ್ಡೇಟೆಡ್ ಮಾಹಿತಿ ಇದ್ದರೆ ಬೆಸ್ಟ್ ಹೂಡಿಕೆ ಮಾಡಲು ಸಾಧ್ಯವಾಗುತ್ತದೆ.
9.ರಿಟೈರ್ಮೆಂಟ್ ಫಂಡ್ ಮುಟ್ಟಬೇಡಿ
ಯಾವುದೇ ಕಾರಣಕ್ಕೂ ನಿಮ್ಮ ನಿವೃತ್ತಿ ಉಳಿತಾಯವನ್ನು ಇತರ ವೆಚ್ಚಗಳಿಗಾಗಿ ಬಳಸಲು ಹೋಗಲೇಡಿ. ಉಳಿತಾಯದ ಹಣವನ್ನು ಬಳಸಲಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ಮತ್ತೆ ನೀವು ಹಣವಿಲ್ಲದೇ ಪರದಾಡಬೇಕಾಗುತ್ತದೆ. ಹಾಗಾಗಿ, ಎಂಥದ್ದೇ ಸಂದರ್ಭದಲ್ಲಿ ನಿವೃತ್ತಿಗಾಗಿ ತೆಗೆದಿಟ್ಟ ಅಥವಾ ಸೇವಿಂಗ್ ಮಾಡಿದ ಹಣವನ್ನು ಸದ್ಯದ ವೆಚ್ಚಕ್ಕೆ ಬಳಸಲು ಮುಂದಾಗಬೇಡಿ.
ಈ ಸುದ್ದಿಯನ್ನೂ ಓದಿ: Money Guide: ಪಿಪಿಎಫ್, ಎನ್ಎಸ್ಸಿ, ಎಸ್ಸಿಎಸ್ಎಸ್ ಖಾತೆ ಸ್ಥಗಿತವಾಗದಂತೆ ನೋಡಿಕೊಳ್ಳಿ
10.ತುರ್ತು ನಿಧಿ ಇರಲಿ
ಅನಿರೀಕ್ಷಿತ ವೆಚ್ಚಗಳಿಗಾಗಿ ತುರ್ತು ನಿಧಿಯನ್ನು ನಿರ್ವಹಣೆ ಮಾಡುವುದು ಉತ್ತಮ. ಯಾಕೆಂದರೆ, ತುರ್ತು ನಿಧಿ ನಿಮ್ಮ ಬಳಿ ಇದ್ದರೆ ನೀವು ನಿಮ್ಮ ಸೇವಿಂಗ್ಸ್ ಅನ್ನು ವೆಚ್ಚಗಳಿಗೆ ಬಳಸಲು ಮುಂದಾಗುವುದಿಲ್ಲ. ಇಲ್ಲದಿದ್ದರೆ, ಉಳಿತಾಯದ ಹಣವನ್ನೇ ನೀವು ತುರ್ತು ಅಗತ್ಯಗಳಿಗೆ ಬಳಸುತ್ತೀರಿ. ಆಗ ನಿಮ್ಮ ನಿವೃತ್ತಿಯ ಎಲ್ಲ ಪ್ಲ್ಯಾನ್ ಹಾಳಾಗುತ್ತದೆ.
-
ವಿದೇಶ19 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ17 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ12 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ಕರ್ನಾಟಕ13 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
South Cinema16 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ
-
ದೇಶ17 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!
-
ಅಂಕಣ20 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ದೇಶ9 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ