Interest rate | ಚಿಲ್ಲರೆ ಹಣದುಬ್ಬರ ಆರ್‌ಬಿಐ ಗುರಿಯ ವ್ಯಾಪ್ತಿಗೆ ಇಳಿಕೆ, ಬಡ್ಡಿ ದರ ಏರಿಕೆ ನಿಲ್ಲುವ ನಿರೀಕ್ಷೆ - Vistara News

ಪ್ರಮುಖ ಸುದ್ದಿ

Interest rate | ಚಿಲ್ಲರೆ ಹಣದುಬ್ಬರ ಆರ್‌ಬಿಐ ಗುರಿಯ ವ್ಯಾಪ್ತಿಗೆ ಇಳಿಕೆ, ಬಡ್ಡಿ ದರ ಏರಿಕೆ ನಿಲ್ಲುವ ನಿರೀಕ್ಷೆ

ಕಳೆದ ನವೆಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರ ಆರ್‌ಬಿಐ ಟಾರ್ಗೆಟ್‌ ಒಳಗೆ ಇಳಿದಿರುವ ಹಿನ್ನೆಲೆಯಲ್ಲಿ, ಬಡ್ಡಿ ದರ ಏರಿಕೆಯ ಟ್ರೆಂಡ್‌ಗೆ ಬ್ರೇಕ್‌ ಬೀಳಬಹುದು ಎಂಬ ಸಕಾರಾತ್ಮಕ ನಿರೀಕ್ಷೆ ಉಂಟಾಗಿದೆ. (Interest rate) ರೆಪೊ ದರ ಇಳಿದರೆ, ಸಾಲದ ಬಡ್ಡಿ ದರ ಕೂಡ ತಗ್ಗಲಿದೆ.

VISTARANEWS.COM


on

cash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕಳೆದ ನವೆಂಬರ್‌ನಲ್ಲಿ ಚಿಲ್ಲರೆ ಬಡ್ಡಿ ದರ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಗುರಿಯ ಒಳಗೆ ಬಂದಿರುವುದರಿಂದ, ಅಂದರೆ ಶೇ.6ಕ್ಕಿಂತ ಕಡಿಮೆ ಮಟ್ಟಕ್ಕೆ ತಗ್ಗಿರುವುದರಿಂದ ಬಡ್ಡಿ ದರ (Interest rate) ಏರಿಕೆ ನಿಲ್ಲುವ ನಿರೀಕ್ಷೆ ಉಂಟಾಗಿದೆ.

ರಿಸರ್ವ್‌ ಬ್ಯಾಂಕ್‌ ಪ್ರಕಾರ ಚಿಲ್ಲರೆ ಹಣದುಬ್ಬರದ ಪ್ರಮಾಣ ಶೇ.2ಕ್ಕಿಂತ ಕಡಿಮೆ ಆಗಬಾರದು. ಹಾಗೂ ಶೇ. 6 ಮೀರಕೂಡದು. ಕಳೆದ ನವೆಂಬರ್‌ನಲ್ಲಿ 5.85% ಕ್ಕೆ ಇಳಿಕೆಯಾಗಿದೆ. ಕಳೆದ 21 ತಿಂಗಳಿನಲ್ಲಿಯೇ ಇದು ಕನಿಷ್ಠ ಮಟ್ಟದ ಹಣದುಬ್ಬರ ಪ್ರಮಾಣವಾಗಿದೆ. ಸಗಟು ಹಣದುಬ್ಬರ ಕೂಡ ನವೆಂಬರ್‌ನಲ್ಲಿ 8.39%ಕ್ಕೆ ತಗ್ಗಿದೆ.

ಜಾಗತಿಕ ಆರ್ಥಿಕ ಹಿಂಜರಿತ ಹಾಗೂ ಅದರ ಪ್ರಭವದ ಬಗ್ಗೆ ಈಗ ಅಧ್ಯಯನ ನಡೆಯುತ್ತಿದೆ. ಆದ್ದರಿಂದ ಆರ್ಥಿಕ ಬೆಳವಣಿಗೆಗೆ ಧಕ್ಕೆಯಾಗದಂತೆ, ಬಡ್ಡಿ ದರಗಳನ್ನು ನಿಯಂತ್ರಿಸಬೇಕಾಗಿದೆ. ಉನ್ನತ ಮಟ್ಟದ ಬಡ್ಡಿ ದರ ಇದ್ದಾಗ ಹಣದುಬ್ಬರ ತಗ್ಗಿದರೂ, ಆರ್ಥಿಕ ಬೆಳವಣಿಗೆಗೆ ತೊಡಕಾಗುವ ಅಪಾಯವೂ ಇರುತ್ತದೆ. ಆದ್ದರಿಂದ ಆರ್‌ಬಿಐ ತನ್ನ ಟಾರ್ಗೆಟ್‌ ಒಳಗೆ ಹಣದುಬ್ಬರ ಇಳಿದಿರುವುದರಿಂದ, ರೆಪೊ ದರ ಏರಿಕೆಯನ್ನು ನಿಲ್ಲಿಸುವುದು ಸೂಕ್ತ ಎಂದು ಹಣಕಾಸು ತಜ್ಞರು ಹೇಳಿದ್ದಾರೆ.

ಚಳಿಗಾಲದ ಅವಧಿಯ ತರಕಾರಿಗಳು, ಧಾನ್ಯಗಳು ಮಾರುಕಟ್ಟೆಗೆ ಶೀಘ್ರ ಬರಲಿದ್ದು, ಹಣದುಬ್ಬರ ನಿಯಂತ್ರಣದ ದೃಷ್ಟಿಯಿಂದ ನಿರ್ಣಾಯಕವಾಗಲಿದೆ. ಈಗಾಗಲೇ ಅಕ್ಕಿ, ಆಲೂಗಡ್ಡೆ, ಖಾದ್ಯ ತೈಲಗಳ ದರದಲ್ಲಿ 25% ಇಳಿಕೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat kohli : ಐಪಿಎಲ್​ನಲ್ಲಿ 8000 ರನ್ ಬಾರಿಸಿ ದಾಖಲೆ ಬರೆದ ಕೊಹ್ಲಿ

Virat Kohli: ಅನುಭವಿ ಬ್ಯಾಟರ್​​ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಖ್ಯಾತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕೊಹ್ಲಿ 252 ಪಂದ್ಯಗಳಲ್ಲಿ ಆಡಿ ಈ ಸಾಧನೆ ಮಾಡಿದ್ದಾರೆ. ಐಪಿಎಲ್ ಆರಂಭದಿಂದ ಒಂದೇ ತಂಡದಲ್ಲಿ ಆಡುತ್ತಿರುವ ಅವರು ಈ ಅವಧಿಯಲ್ಲಿ ಬೃಹತ್​ ಸಾಧನೆ ಮಾಡಿದ್ದಾರೆ. ಅವರು 38.69 ರ ಪ್ರಭಾವಶಾಲಿ ಸರಾಸರಿ ಮತ್ತು 131.94 ಸ್ಟ್ರೈಕ್ ರೇಟ್​​ನಲ್ಲಿ ರನ್​ ಗಳಿಸಿದ್ದಾರೆ. ಇದರಲ್ಲಿ 8 ಶತಕಗಳು ಮತ್ತು 55 ಅರ್ಧಶತಕಗಳು ಸೇರಿವೆ.

VISTARANEWS.COM


on

Virat kohli
Koo

ಅಹಮದಾಬಾದ್​: ಆಧುನಿಕ ಕ್ರಿಕೆಟ್​​ನ ಅತ್ಯಂತ ಶ್ರೇಷ್ಠ ಬ್ಯಾಟರ್​ ವಿರಾಟ್​ ಕೊಹ್ಲಿ (Virat Khli) ವಿಶ್ವ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ಅವರು ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿಯಾಗಿರುವ ಐಪಿಎಲ್​ನಲ್ಲಿ ಒಟ್ಟು 8000 ರನ್​ಗಳನ್ನು ಬಾರಿಸಿದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್​ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 29 ರನ್​ ಬಾರಿಸಿದ ತಕ್ಷಣ ಅವರು ಈ ಮೈಲುಗಲ್ಲು ಸ್ಥಾಪಿಸಿದರು. ಪಂದ್ಯದಕ್ಕೆ ಮೊದಲು ಅವರು ಒಟ್ಟು 7971 ರನ್ ಹೊಂದಿದ್ದರು. ಪ್ರಮುಖ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಲು ಆರಂಭಿಸಿರುವ ಟೂರ್ನಿಯ ಇತಿಹಾಸದಲ್ಲಿ ಹೊಸ ದಾಖಲೆ ಬರೆದರು.

ಅನುಭವಿ ಬ್ಯಾಟರ್​​ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಖ್ಯಾತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕೊಹ್ಲಿ 252 ಪಂದ್ಯಗಳಲ್ಲಿ ಆಡಿ ಈ ಸಾಧನೆ ಮಾಡಿದ್ದಾರೆ. ಐಪಿಎಲ್ ಆರಂಭದಿಂದ ಒಂದೇ ತಂಡದಲ್ಲಿ ಆಡುತ್ತಿರುವ ಅವರು ಈ ಅವಧಿಯಲ್ಲಿ ಬೃಹತ್​ ಸಾಧನೆ ಮಾಡಿದ್ದಾರೆ. ಅವರು 38.69 ರ ಪ್ರಭಾವಶಾಲಿ ಸರಾಸರಿ ಮತ್ತು 131.94 ಸ್ಟ್ರೈಕ್ ರೇಟ್​​ನಲ್ಲಿ ರನ್​ ಗಳಿಸಿದ್ದಾರೆ. ಇದರಲ್ಲಿ 8 ಶತಕಗಳು ಮತ್ತು 55 ಅರ್ಧಶತಕಗಳು ಸೇರಿವೆ.

ಇದನ್ನೂ ಓದಿ: Virat kohli : ಕೊಹ್ಲಿಗೆ ಭಯೋತ್ಪಾದಕರ ಬೆದರಿಕೆ ಸುದ್ದಿ; ಸ್ಪಷ್ಟನೆ ನೀಡಿದ ಗುಜರಾತ್​ ಕ್ರಿಕೆಟ್​​ ಸಂಸ್ಥೆ

222 ಪಂದ್ಯಗಳಲ್ಲಿ 35.25ರ ಸರಾಸರಿಯಲ್ಲಿ 6769 ರನ್ ಗಳಿಸಿರುವ ಶಿಖರ್ ಧವನ್ ಎರಡನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ, ಡೇವಿಡ್ ವಾರ್ನರ್ ಮತ್ತು ಸುರೇಶ್ ರೈನಾ ನಂತರದ ಸ್ಥಾನದಲ್ಲಿದ್ದಾರೆ. ಈ ಬ್ಯಾಟ್ಸ್ಮನ್ಗಳು ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ದಾಖಲೆ ಮುರಿಯುವ ಸಾಧ್ಯತೆಯಿಲ್ಲ.

ವಿರಾಟ್ ಕೊಹ್ಲಿ ಮೂರು ಬಾರಿ (2009, 2011 ಮತ್ತು 2016 ರಲ್ಲಿ) ಐಪಿಎಲ್ ಫೈನಲ್ ತಲುಪಿದ್ದಾರೆ. 2016ರಲ್ಲಿ ಕೊಹ್ಲಿ 16 ಪಂದ್ಯಗಳಲ್ಲಿ 81ರ ಸರಾಸರಿಯಲ್ಲಿ 973 ರನ್ ಗಳಿಸಿದ್ದರು. 113 ಅವರ ಅತ್ಯುತ್ತಮ ಸ್ಕೋರ್ ನೊಂದಿಗೆ ನಾಲ್ಕು ಶತಕಗಳು ಮತ್ತು ಏಳು ಅರ್ಧಶತಕಗಳನ್ನು ಬಾರಿಸಿದ್ದರು.

ಐಪಿಎಲ್​​ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ತಮ್ಮದೇ ದಾಖಲೆಯನ್ನು ಮುರಿಯಲು ಏಸ್ ಬ್ಯಾಟರ್​ಗೆ ಇನ್ನೂ 266 ರನ್​ಗಳ ಅಗತ್ಯಿವಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಫೈನಲ್​ ತಲುಪಿದರೆ ಒಟ್ಟು ಮೂರು ಪಂದ್ಯಗಳು ಬಾಕಿ ಉಳಿದಿದ್ದು, ಫೈನಲ್ ತಲುಪಿದರೆ ಈ ಮೈಲಿಗಲ್ಲನ್ನು ತಲುಪುವ ಅವಕಾಶವಿದೆ.

ಆರ್​ಸಿಬಿ ಚೇತರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೊಹ್ಲಿ

ಸತತ ಆರು ಸೋಲುಗಳ ನಂತರ ಬೆಂಗಳೂರು ಮೂಲದ ತಂಡದ ಚೇತರಿಕೆಯಲ್ಲಿ 35 ವರ್ಷದ ಬ್ಯಾಟ್ಸ್ಮನ್ ನಿರ್ಣಾಯಕ ಪಾತ್ರ ವಹಿಸಿದ್ದರು. ಫಾಫ್ ಡು ಪ್ಲೆಸಿಸ್ ನೇತೃತ್ವದ ತಂಡವು ಸತತ ಆರು ಗೆಲುವುಗಳನ್ನು ಗಳಿಸಿ ಐಪಿಎಲ್ 2024 ರ ಪ್ಲೇಆಫ್ ಹಂತವನ್ನು ತಲುಪಿದೆ. ಬೆಂಗಳೂರು 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ ಮತ್ತು +0.459 ನೆಟ್ ರನ್ ರೇಟ್ (ಎನ್ಆರ್ಆರ್) ಹೊಂದಿದೆ.

ಅಹ್ಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಆರ್​ಸಿಬಿ ತನ್ನ ಗೆಲುವಿನ ಹಾದಿಯನ್ನು ವಿಸ್ತರಿಸಲು ಮತ್ತು ಕ್ವಾಲಿಫೈಯರ್ 2 ಅನ್ನು ತಲುಪಲು ಯೋಜನೆ ರೂಪಿಸಿದೆ. ಸ್ಯಾಮ್ಸನ್ ನೇತೃತ್ವದ ತಂಡವು ಕಳೆದ ಐದು ಪಂದ್ಯಗಳಲ್ಲಿ ನಾಲ್ಕು ಸೋಲುಗಳನ್ನು ಅನುಭವಿಸಿದೆ ಮತ್ತು ಒಂದು ಮಳೆಯಿಂದಾಗಿ ರದ್ದಾಗಿದೆ.

Continue Reading

ರಾಜಕೀಯ

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾರನ್ನು ಅರೆಸ್ಟ್‌ ಮಾಡದೇ ವಾಪಸ್‌ ಹೋದ ಪೊಲೀಸರು!

Harish Poonja: ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಶಾಸಕ ಹರೀಶ್‌ ಪೂಂಜಾ ಅವರು ಬೆದರಿಕೆಯನ್ನು ಹಾಕಿದ್ದರು. ಈ ಸಂಬಂಧ ವಿಡಿಯೊಗಳು ಎಲ್ಲೆಡೆ ವೈರಲ್‌ ಆಗಿದ್ದವು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಇದೀಗ ಪೊಲೀಸರು ಬುಧವಾರ ಮಧ್ಯಾಹ್ನ ಶಾಸಕರ ನಿವಾಸಕ್ಕೆ ಆಗಮಿಸಿ ಬಂಧಿಸಲು ಮುಂದಾಗಿದ್ದರು. ಆದರೆ, ಬಿಜೆಪಿ ಕಾರ್ಯಕರ್ತರು, ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ಅಲ್ಲಿಂದ ತೆರಳಿದ್ದಾರೆ.

VISTARANEWS.COM


on

Harish Poonja case Belthangady BJP MLA Harish Poonja arrested for taunting police
Koo

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿರುವ ಬೆನ್ನಲ್ಲೇ ಅವರನ್ನು ಬಂಧಿಸಲು ಪೊಲೀಸರು ನಡೆಸಿದ ಪ್ರಹಸನ ವಿಫಲವಾಗಿದೆ. ಮಧ್ಯಾಹ್ನದಿಂದ ಅವರ ಮನೆಯಲ್ಲಿ ಠಿಕಾಣಿ ಹೂಡಿದ್ದ ಪೊಲೀಸರು, ಕೊನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ರಾತ್ರಿ 7.15ರ ಸುಮಾರಿಗೆ ವಾಪಸಾಗಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ (Illegal quarrying) ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ಮನೆಯಲ್ಲಿ ಬುಧವಾರ ಹೈಡ್ರಾಮಾವೇ ನಡೆಯಿತು.

ಈ ಸಂಬಂಧ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲದಲ್ಲಿರುವ ಶಾಸಕ ಹರೀಶ್ ಪೂಂಜಾ ಮನೆಗೆ ಬುಧವಾರ (ಮೇ 22) ಮಧ್ಯಾಹ್ನದ ವೇಳೆಗೆ ಪೊಲೀಸರು ಆಗಮಿಸಿದ್ದರು. ಸರ್ಕಲ್ ಇನ್ಸ್‌ಪೆಕ್ಟರ್‌ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ಆಗಮಿಸಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಧಾವಿಸಿ, ಆಕ್ರೋಶವನ್ನು ಹೊರಹಾಕಿದರು.

Harish Poonja case Belthangady BJP MLA Harish Poonja arrested for taunting police

ಮನೆ ಮುಂದೆ ಹೈಡ್ರಾಮಾ

ಹರೀಶ್ ಪೂಂಜ ಬಂಧನಕ್ಕೆ ಪೊಲೀಸರು ಬಂದಿದ್ದರಿಂದ ಗರ್ಡಡಿ ಹರೀಶ್ ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿತು. ಪೊಲೀಸರ ಜತೆ ವಕೀಲರ ತಂಡದಿಂದ ಮಾತುಕತೆ ನಡೆಸಲಾಯಿತು. ಈ ವೇಳೆ ನಿರಂತರವಾಗಿ ಚರ್ಚೆ ನಡೆದಿದ್ದು, ಪೊಲೀಸ್‌ ಕ್ರಮ ತಪ್ಪು ಎಂದು ವಕೀಲರು ವಾದಿಸಿದರು. ಈ ವೇಳೆ ಮನೆಯ ಹೊರಗಡೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದರು. ಅಲ್ಲದೆ, ಪೊಲೀಸರು ಹಾಗೂ ಕಾರ್ಯಕರ್ತರ ನಡುವಿನ ಹೈ ಡ್ರಾಮಾಕ್ಕೆ ಪೂಂಜ ನಿವಾಸವು ಸಾಕ್ಷಿಯಾಯಿತು. ಇನ್ನು ಪೂಂಜಾ ನಿವಾಸದತ್ತ ಸಂಸದ ನಳಿನ್ ಕುಮಾರ್ ಕಟೀಲ್, ಬ್ರಿಜೇಶ್ ಚೌಟ ದೌಡಾಯಿಸಿದರು. ರಾಜ್ಯ ಸರ್ಕಾರದ ನಡೆಯನ್ನು ಅವರು ತೀವ್ರವಾಗಿ ಖಂಡಿಸಿದರು. ಬಂಧನ ಮಾಡಿದ್ದೇ ಆದಲ್ಲಿ ಮಂಗಳೂರು ಬಂದ್‌ ಮಾಡುವ ಎಚ್ಚರಿಕೆಯನ್ನು ನೀಡಿದರು.

ನೋಟಿಸ್ ಇಲ್ಲದೇ ಅರೆಸ್ಟ್ ಮಾಡುವುದು ಅಪರಾಧ

ಈ ವೇಳೆ ಶಾಸಕ ಹರೀಶ್ ಪೂಂಜಾ ಪರ ವಕೀಲ ಶಂಭು ಶಂಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಿಚಾರಣೆಗೆ ಕರೆದುಕೊಂಡು ಹೋಗಲು ಬಂದಿದ್ದಾಗಿ ಪೊಲೀಸರು ಹೇಳಿದ್ದಾರೆ. ನಿಯಮ ಪ್ರಕಾರ ಆ ಕ್ರಮ ಇಲ್ಲ. ಪೊಲೀಸರು ಮನೆಗೆ ಒಳಗೆ ಕುಳಿತಿದ್ದಾರೆ. ನೋಟಿಸ್ ಈವರೆಗೆ ಕೊಟ್ಟಿಲ್ಲ. ಶಾಸಕರು ಅವರ ಕೆಲಸ ಮಾಡದ ಹಾಗೆ ಮಾಡಿದ್ದಾರೆ. ಮನೆಯಲ್ಲಿಯೇ ಕೂಡಿ ಹಾಕಿದ ಹಾಗೆ ಮಾಡಿದ್ದಾರೆ. ಒತ್ತಡಕ್ಕೆ ಮಣಿದು ಪೊಲೀಸರು ಇಲ್ಲಿಯೇ ಕುಳಿತಿದ್ದಾರೆ. ನೋಟಿಸ್ ಇಲ್ಲದೆ ಅರೆಸ್ಟ್ ಮಾಡುವುದು ಅಪರಾಧ ಎಂದು ಹೇಳಿದ್ದಾರೆ.

ಯಾವುದೇ ನೋಟಿಸ್ ನೀಡದೆ, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆಯುವಂತಿಲ್ಲ. ಅದು ಕಾನೂನು ಬಾಹಿರವಾಗುತ್ತದೆ. ಅಲ್ಲದೆ, ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಅದರಲ್ಲಿ ಕೆಲವು ಸೆಕ್ಷನ್ ನಾನ್ ಬೇಲಬಲ್ ಸೆಕ್ಷನ್‌ಗಳಿವೆ. ಸುಪ್ರೀಂ ಕೋರ್ಟ್‌ನ ಈ ಹಿಂದಿನ ಆದೇಶದ ಪ್ರಕಾರ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣಗಳಲ್ಲಿ ಬಂಧನ ಅನಿವಾರ್ಯವಲ್ಲ. ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಬಂಧನ ಮಾಡಲು ಅವಕಾಶವಿರುತ್ತದೆ. ಆದರೆ, ಎಲ್ಲ ಪ್ರಕರಣಗಳಲ್ಲೂ ಬಂಧನ ಅಗತ್ಯವಿಲ್ಲ. ವಿಚಾರಣೆಗೆ ಕರೆಯಲು ಪೇದೆಯ ಮೂಲಕ ನೋಟಿಸ್ ನೀಡಬಹುದು. ಆದರೆ ಹಿರಿಯ ಅಧಿಕಾರಿಗಳು ಬರುವ ಅಗತ್ಯತೆ ಏನಿದೆ? ಇದು ಶಾಸಕ ಪೂಂಜಾ ವಿರುದ್ಧ ಟಾರ್ಗೆಟ್ ಮಾಡಿ ಬಂಧಿಸುವ ಹುನ್ನಾರ ಆಗಿದೆ. ನೋಟಿಸ್ ನೀಡಲು ಕೇಳಿದ್ದೇವೆ. ಈ ವರೆಗೂ ನೋಟಿಸ್ ನೀಡಿಲ್ಲ ಎಂದು ವಕೀಲ ಶಂಭು ಶಂಕರ್ ಆಪಾದಿಸಿದರು.

Harish Poonja case Belthangady BJP MLA Harish Poonja arrested for taunting police

ವಿಡಿಯೊ ಸ್ಟೇಟಸ್‌ಗೆ ಹಾಕಿದ್ದ ಪೋಲಿಸ್‌ನನ್ನು ಆಚೆ ಕಳಿಸಿದ ಶಾಸಕ!

ಈ ವೇಳೆ ಪೊಲೀಸ್ ಠಾಣೆ ನಿಮ್ಮ ಅಪ್ಪಂದ ಎಂದು ಶಾಸಕ ಹರೀಶ್ ಪೂಂಜಾ ಅವಾಜ್‌ ಹಾಕುತ್ತಿದ್ದ ದೃಶ್ಯವನ್ನು ವಿಡಿಯೊ ಮಾಡಿ ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಲಾಗಿದ್ದ ಪೊಲೀಸ್‌ ಸಿಬ್ಬಂದಿ ಆನಂದ್‌ ಅವರು ಶಾಸಕರ ಮನೆಗೆ ಬಂದರು. ಅವರನ್ನು ನೋಡಿ ಕೆರಳಿದ ಶಾಸಕ ಹರೀಶ್‌ ಪೂಂಜಾ, ಆನಂದ್‌ಗೆ ಮನೆಯಿಂದ ಹೊರಗೆ ಹೋಗು ಎಂದು ಸೂಚಿಸಿದರು. ಅಲ್ಲಿಯೇ ಇದ್ದ ಹಿರಿಯ ಅಧಿಕಾರಿಗಳತ್ತ ತಿರುಗಿ, ಇವನನ್ನು ಹೊರಗೆ ಕಳುಹಿಸಿ, ಜನ ಇದ್ದಾರೆ. ಗಲಾಟೆ ಮಾಡ್ತಾರೆ ಅಂತಾ ಅಧಿಕಾರಿಗಳಿಗೆ ಹೇಳಿದರು. ಬಳಿಕ ಸೆಕ್ಯುರಿಟಿ ಕೊಟ್ಟು ಅಲ್ಲಿಂದ ಆನಂದ್ ಅವರನ್ನು ಪೊಲೀಸರು ಕರೆದೊಯ್ದರು.

ಹರೀಶ್ ಪೂಂಜಾಗೆ ನೋಟಿಸ್ ಜಾರಿ

ಶಾಸಕ ಹರೀಶ್ ಪೂಂಜಾ ಅವರಿಗೆ ಇನ್ನೂ ನೋಟಿಸ್‌ ಕೊಟ್ಟಿಲ್ಲ ಎಂದು ಅವರ ಪರ ವಕೀಲರು ಆರೋಪ ಮಾಡಿದ ಬೆನ್ನಲ್ಲೇ ವಿಟ್ಲ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ಮತ್ತು ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಅವರು ನೋಟಿಸ್ ಜಾರಿ ಮಾಡಿದ್ದಾರೆ. ತನಿಖಾಧಿಕಾರಿಗಳ ಜತೆ ಠಾಣೆಗೆ ಬರಲು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಹೀಗಾಗಿ ರಾತ್ರಿವರೆಗೂ ಬಂಧನಕ್ಕಾಗಿ ಪೊಲೀಸರು ಕಾದರು. ಈ ವೇಳೆ ಶಾಸಕರ ಮನೆಗೆ ಹೆಚ್ಚಿನ ಪೊಲೀಸರನ್ನು ಕರೆಸಿಕೊಳ್ಳಲಾಯಿತು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಮುಖಂಡರು ಇನ್ನಷ್ಟು ರೋಷಗೊಂಡರು. ಅಂತಿಮವಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಮೂಲಕ ಸೂಚಿಸಿ ಪೊಲೀಸರು ಅಲ್ಲಿಂದ ತೆರಳಿದರು.

ಏನಿದು ಕೇಸ್‌?

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬುವವರನ್ನು ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ | Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

Continue Reading

ಪ್ರಮುಖ ಸುದ್ದಿ

Virat kohli : ಕೊಹ್ಲಿಗೆ ಭಯೋತ್ಪಾದಕರ ಬೆದರಿಕೆ ಸುದ್ದಿ; ಸ್ಪಷ್ಟನೆ ನೀಡಿದ ಗುಜರಾತ್​ ಕ್ರಿಕೆಟ್​​ ಸಂಸ್ಥೆ

Virat kohli :ಯಾವುದೇ ಭಯೋತ್ಪಾದಕ ಬೆದರಿಕೆ ಇರಲಿಲ್ಲ. ರಾಜಸ್ಥಾನ್ ರಾಯಲ್ಸ್ ಮತ್ತು ಆರ್​ಸಿಬಿ ತಂಡಗಳಿಗೆ ಗುಜರಾತ್ ಕಾಲೇಜು ಮೈದಾನದಲ್ಲಿ ಅಭ್ಯಾಸ ನಡೆಸಲು ನಾವು ಅವಕಾಶ ಕಲ್ಪಿಸಿದ್ದೆವು. ಅಹಮದಾಬಾದ್​ನಲ್ಲಿ ಬೇಸಿಗೆಯಲ್ಲಿ ಸಂಜೆ 6.30 ರವರೆಗೆ ಬೆಳಕು ಉತ್ತಮವಾಗಿರುತ್ತದೆ ಹೀಗಾಗಿ ಆರ್​ಸಿಬಿ ಮಧ್ಯಾಹ್ನ 2 ರಿಂದ 5 ರವರೆಗೆ ಅಭ್ಯಾಸ ಮಾಡಲು ಯೋಜಿಸಿತ್ತು. ಬಿಸಿಲಿನ ಕಾರಣಕ್ಕೆ ಅದನ್ನು ಮಧ್ಯಾಹ್ನ 3ರಿಂದ 6 ಕ್ಕೆ ಬದಲಾಯಿಸಲಾಯಿತು

VISTARANEWS.COM


on

Virat Kohli
Koo

ಬೆಂಗಳೂರು: ಆರ್​ಸಿಬಿ ಮತ್ತು ರಾಜಸ್ಥಾನ್​ ರಾಯಲ್ಸ್​ ತಂಡಗಳ ನಡುವಿನ ಐಪಿಎಲ್ 2024 ಎಲಿಮಿನೇಟರ್ ಪಂದ್ಯಕ್ಕೆ ಮೊದಲು ಅಹಮದಾಬಾದ್​ನಿಂದ ಆಘಾತಕಾರಿ ಸುದ್ದಿ ಬಂದಿತ್ತು. ಭದ್ರತಾ ಕಾರಣಗಳಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಕೌಟ್ ಪಂದ್ಯ ಪ್ರಾರಂಭವಾಗುವ ಮೊದಲು ತನ್ನ ಏಕೈಕ ಅಭ್ಯಾಸವನ್ನು ರದ್ದುಗೊಳಿಸಬೇಕಾಯಿತು ಎಂದು ಹೇಳಲಾಯಿತು. ಮುಖ್ಯವಾಗಿ ವಿರಾಟ್ ಕೊಹ್ಲಿ (Virat kohli ) ಅವರಿಗೆ ಭಯೋತ್ಪಾದಕರಿಂದ ಬೆದರಿಕೆಗಳು ಬಂದಿದ್ದು ಆರ್​ಸಿಬಿ ಅಭ್ಯಾಸ ಹಾಗೂ ಪತ್ರಿಕಾಗೋಷ್ಠಿ ನಡೆಸಲಿಲ್ಲ ಎಂದು ವರದಿಗಳು ಬಂದವು. ಆದರೆ, ಎಲ್ಲ ಊಹಾಪೋಹಗಳಿಗೆ ಕೊನೆ ಎಳೆಯಲಾಗಿದ್ದು ಬೆದರಿಕೆ ಇರಲಿಲ್ಲ ಹಾಗೂ ಅದಕ್ಕಾಗಿ ಅಭ್ಯಾಸ ಮೊಟಕುಗೊಳಿಸಿಲ್ಲ ಎಂದು ಹೇಳಲಾಗಿದೆ.

ಬುಧವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ಬಳಗ ಮಂಗಳವಾರ ಅಹಮದಾಬಾದ್​ ಗುಜರಾತ್ ಕಾಲೇಜು ಮೈದಾನದಲ್ಲಿ ಅಭ್ಯಾಸ ನಡೆಸಬೇಕಿತ್ತು. ಅದು ಸಮಯಕ್ಕೆ ಸರಿಯಾಗಿ ನಡೆದಿರಲಿಲ್ಲ. ಆದರೆ ಅಭ್ಯಾಸ ಅವಧಿ ಮತ್ತು ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸುವ ಹಿಂದಿನ ಪ್ರಾಥಮಿಕ ಕಾರಣ ವಿರಾಟ್ ಅವರ ಭದ್ರತೆ ಎಂದು ಗುಜರಾತ್ ಪೊಲೀಸರು ಸುಳಿವು ನೀಡಿದ್ದಾರೆ ಎಂಬುದಾಗಿ ಕೆಲವು ಪತ್ರಿಕೆಗಳು ವರದಿ ಮಾಡಿದವು. ಭಯೋತ್ಪಾದಕ ಚಟುವಟಿಕೆಯ ಶಂಕೆಯ ಮೇಲೆ ಅಹಮದಾಬಾದ್ ನಿಂದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ಬಂಧನ ಮತ್ತು ನಂತರದ ಘಟನೆಗಳಿಗೆ ಆರ್​ಸಿಬಿ ಅಭ್ಯಾಸ ನಡೆಸದಿರುವುದಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಲಾಗಿದೆ.

ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ (ಜಿಸಿಎ) ಉನ್ನತ ಅಧಿಕಾರಿಯೊಬ್ಬರು ನಡೆದ ಘಟನೆಗಳ ಕುರಿತು ಮಾಹಿತಿ ನೀಡಿದ್ದು ಬೆದರಿಕೆಯಂಥ ಘಟನೆಗಳು ನಡೆದಿಲ್ಲ ಎಂದು ಹೇಳಿದ್ದಾರೆ.

ಯಾವುದೇ ಭಯೋತ್ಪಾದಕ ಬೆದರಿಕೆ ಇರಲಿಲ್ಲ. ರಾಜಸ್ಥಾನ್ ರಾಯಲ್ಸ್ ಮತ್ತು ಆರ್​ಸಿಬಿ ತಂಡಗಳಿಗೆ ಗುಜರಾತ್ ಕಾಲೇಜು ಮೈದಾನದಲ್ಲಿ ಅಭ್ಯಾಸ ನಡೆಸಲು ನಾವು ಅವಕಾಶ ಕಲ್ಪಿಸಿದ್ದೆವು. ಅಹಮದಾಬಾದ್​ನಲ್ಲಿ ಬೇಸಿಗೆಯಲ್ಲಿ ಸಂಜೆ 6.30 ರವರೆಗೆ ಬೆಳಕು ಉತ್ತಮವಾಗಿರುತ್ತದೆ ಹೀಗಾಗಿ ಆರ್​ಸಿಬಿ ಮಧ್ಯಾಹ್ನ 2 ರಿಂದ 5 ರವರೆಗೆ ಅಭ್ಯಾಸ ಮಾಡಲು ಯೋಜಿಸಿತ್ತು. ಬಿಸಿಲಿನ ಕಾರಣಕ್ಕೆ ಅದನ್ನು ಮಧ್ಯಾಹ್ನ 3ರಿಂದ 6 ಕ್ಕೆ ಬದಲಾಯಿಸಲಾಯಿತು. ಆದಾಗ್ಯೂ, ರಾಜಸ್ಥಾನ್ ರಾಯಲ್ಸ್ ತಮ್ಮ ಪೂರ್ಣ ತಂಡದೊಂದಿಗೆ ಗುಜರಾತ್ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ 3.30 ರಿಂದ 6.30 ರವರೆಗೆ ಅಭ್ಯಾಸ ನಡೆಸಿತು ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಅನಿಲ್ ಪಟೇಲ್ ಹೇಳಿದ್ದಾರೆ.

ಬಿಸಿಲಿನ ಹೊಡೆತದ ಭಯ

ನಗರದಲ್ಲಿ ಸದ್ಯ ಇರುವ ಬಿಸಿಲಿನ ತಾಪಮಾನದಿಂದಾಗಿ ಆರ್​ಸಿಬಿ ತನ್ನ ಅಭ್ಯಾಸವನ್ನು ತಪ್ಪಿಸಿಕೊಂಡಿದೆ. ಅವರು ಅಲ್ಲಿ ಒಳಾಂಗಣ ಅಭ್ಯಾಸ ಸೌಲಭ್ಯವನ್ನು ಬಳಸಬಹುದಾಗಿತ್ತು. ನರೇಂದ್ರ ಮೋದಿ ಕ್ರೀಡಾಂಗಣದ ಒಳಾಂಗಣ ಸೌಲಭ್ಯದಲ್ಲಿ ಆಡಬಹುದು ಎಂದು ಆರ್​ಸಿಬಿಗೆ ತಿಳಿಸಿದ್ದೆವು. ಆದಾಗ್ಯೂ, ಬಿಸಿಗಾಳಿಯ ಕಾರಣಕ್ಕೆ ಆರ್​ಸಿಬಿ ಅಭ್ಯಾಸ ಮಾಡಲು ಬಯಸಲಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Shah Rukh Khan : ಶಾರುಖ್​ ಖಾನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಕಾಲೇಜು ಮೈದಾನವು ಅವರ ನಿಯಂತ್ರಣಕ್ಕೆ ಬರುವುದರಿಂದ ನಾವು ಜಿಲ್ಲಾಧಿಕಾರಿ ಕಚೇರಿಯಿಂದ (ಕಾಲೇಜು ಮೈದಾನದಲ್ಲಿ ಟ್ರಾಮ್ ಗಳ ಮೂಲಕ ಅಭ್ಯಾಸ ಮಾಡಲು) ವಿಶೇಷ ಅನುಮತಿಯನ್ನು ಪಡೆದಿದ್ದೇವೆ. ಕಾಲೇಜು ಮೈದಾನದಲ್ಲಿ ಅಭ್ಯಾಸ ನಡೆಸಲು ಎರಡೂ ತಂಡಗಳಿಗೆ ಜಿಲ್ಲಾಧಿಕಾರಿ ವಿಶೇಷ ಅನುಮತಿ ನೀಡಿದ್ದರು. ಆದಾಗ್ಯೂ, ನಾನು ಮೊದಲೇ ಹೇಳಿದಂತೆ, ಬಿಸಿಗಾಳಿಯಿಂದಾಗಿ ಆರ್​ಸಿಬಿ ಅಭ್ಯಾಸ ಅವಧಿ ತಪ್ಪಿಸಿತು, “ಎಂದು ಪಟೇಲ್ ಹೇಳಿದರು.

ಪಂದ್ಯದ ಮೊದಲು ಯಾವುದೇ ಪತ್ರಿಕಾಗೋಷ್ಠಿ ಇರಲಿಲ್ಲ ಮತ್ತು ಅದು ಊಹಾಪೋಹಗಳನ್ನು ಹೆಚ್ಚಿಸಿತು. “ಈ ಪಂದ್ಯಕ್ಕೆ ಮೊದಲು ಪತ್ರಿಕಾಗೋಷ್ಠಿಯನ್ನು ನಿಗದಿಪಡಿಸಲಾಗಿಲ್ಲ, ಏಕೆಂದರೆ ಈಗಾಗಲೇ ಮೊದಲ ಕ್ವಾಲಿಫೈಯರ್ ಪಂದ್ಯ (ಕೋಲ್ಕತಾ ನೈಟ್ ರೈಡರ್ಸ್ ಮತ್ತು ಹೈದರಾಬಾದ್ ಸನ್​ರೈಸರ್ಸ್​ ನಡುವೆ) ನಡೆದಿದೆ. ಈ ಸಂದರ್ಭದಲ್ಲಿ ಅವಧಿಗಳನ್ನು ಹೊಂದಿಲ್ಲದಿರುವುದು ಹೊಸದೇನಲ್ಲ. ಆಟಗಾರರು ದೀರ್ಘ ಅಭಿಯಾನದ ನಂತರ ಪಂದ್ಯಕ್ಕೆ ತಾಜಾವಾಗಿರಲು ಪ್ರಯತ್ನಿಸುತ್ತಾರೆ ಎಂದು ಅವರು ಹೇಳಿದ್ದಾರೆ.

Continue Reading

ಗದಗ

Bus seized: ಆಂಧ್ರ ಸಿಎಂ ಕ್ಷೇತ್ರದ ಪ್ರವಾಸಿಗರು ಗದಗಿನಲ್ಲಿ ಲಾಕ್‌; ಇಡೀ ರಾತ್ರಿ ಆರ್‌ಟಿಒ ಕಚೇರಿಯಲ್ಲಿ ಕಳೆದ 49 ಮಂದಿ!

Bus Siege: ಆಂಧ್ರಪ್ರದೇಶದ ಕಡಪಾ ಜಿಲ್ಲೆಯ‌ ಪುಲಿವೆಂದುಲಾ ಪಟ್ಟಣದ ನಿವಾಸಿಗಳು ಇವರಾಗಿದ್ದು, ಹೈದರಾಬಾದ್, ಕರ್ನಾಟಕ, ಗೋವಾ, ತಮಿಳುನಾಡು ರಾಜ್ಯ ಪ್ರವಾಸ ಮಾಡಲು ಮುಂದಾಗಿದ್ದರು. ಹೈದರಾಬಾದ್‌ನಿಂದ ರಾಯಚೂರು ಮಾರ್ಗವಾಗಿ ಗದಗ ನಗರಕ್ಕೆ ಈ ಬಸ್‌ ಎಂಟ್ರಿಯಾಗಿತ್ತು. ಹೆದ್ದಾರಿಯಲ್ಲಿ ಬಸ್‌ ನಿಲ್ಲಿಸಿದ ಆರ್‌ಟಿಒ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಆಗ ಚಾರ್ಸಿ, ಎಂಜಿನ್ ನಂಬರ್ ಅನ್ನೇ ತಿರುಚಿರುವ ಸಂಗತಿ ಗೊತ್ತಾಗಿದೆ. ಇದರ ಜತೆಗೆ ಉಳಿದ ದಾಖಲೆಗಳೂ ಸರಿ ಇರಲಿಲ್ಲ. ಹೀಗಾಗಿ ಬಸ್‌ ಅನ್ನು ಸೀಝ್‌ ಮಾಡಲಾಗಿದೆ.

VISTARANEWS.COM


on

Bus Siege Andhra Pradesh bus seized in Gadag and 49 tourists in trouble
Koo

ಗದಗ: ಇದೊಂದು ತಮ್ಮದಲ್ಲದ ತಪ್ಪಿಗೆ ಪರದಾಟ ನಡೆಸುತ್ತಿರುವ ಅಪರೂಪದ ಪ್ರಕರಣವಾಗಿದೆ. ಗದಗಿನಲ್ಲಿ ಆಂಧ್ರಪ್ರದೇಶ ಪ್ರವಾಸಿಗರು (Andhra Pradesh tourists) ಲಾಕ್‌ ಆಗಿದ್ದಾರೆ. ಒಂದಿಡೀ ರಾತ್ರಿ ಆರ್‌ಟಿಒ ಕಚೇರಿಯಲ್ಲಿಯೇ ಕಳೆಯುವಂತಾಗಿದೆ. ಇಷ್ಟಾದರೂ ಅವರಿಗೆ ಅಲ್ಲಿಂದ ಮುಕ್ತಿ ಸಿಕ್ಕಿಲ್ಲ. ಆಂಧ್ರಪ್ರದೇಶದ ಸಿಎಂ ಜಗನ್‌ ಮೋಹನ್‌ ರೆಡ್ಡಿ (Andhra Pradesh CM Jagan Mohan Reddy) ಅವರ ತವರು ಕ್ಷೇತ್ರದ ಮಂದಿ ಪ್ರವಾಸಕ್ಕೆಂದು ಬಂದಿದ್ದಾಗ ಗದಗ ಆರ್‌ಟಿಒ ಪೊಲೀಸರು ಬಸ್‌ ಅನ್ನು ತಡೆದಿದ್ದಾರೆ. ಈ ವೇಳೆ ಬಸ್‌ಗೆ ಸರಿಯಾದ ದಾಖಲೆಗಳು ಇಲ್ಲದೆ ಇದ್ದಿದ್ದರಿಂದ ಸೀಝ್‌ (Bus seized) ಮಾಡಿ ಆರ್‌ಟಿಒ ಕಚೇರಿಗೆ ತಂದಿದ್ದಾರೆ. ಅನಿವಾರ್ಯವಾಗಿ ಪ್ರವಾಸಿಗರೂ ಅಲ್ಲಿಗೆ ಬಂದು ಕೂರುವಂತಾಗಿದೆ.

ಈಗ ಗದಗ ಆರ್‌ಟಿಒ ಕಚೇರಿಯಲ್ಲಿ ಆಂಧ್ರ ಪ್ರದೇಶ ಪುಲುವೆಂದುಲಾ ವಿಧಾನಸಭಾ ಕ್ಷೇತ್ರದ 49 ಮಂದಿ ಗೋಳಾಡುವಂತಾಗಿದೆ. ಮಕ್ಕಳು, ಮಹಿಳೆಯರು ಸೇರಿದಂತೆ 49 ಪ್ರವಾಸಿಗರು ಆಂಧ್ರ ಪ್ರದೇಶದಿಂದ 10 ದಿನಗಳ ಕಾಲ ಪ್ರವಾಸವನ್ನು ಕೈಗೊಂಡಿದ್ದರು.

ಆಂಧ್ರಪ್ರದೇಶದ ಕಡಪಾ ಜಿಲ್ಲೆಯ‌ ಪುಲಿವೆಂದುಲಾ ಪಟ್ಟಣದ ನಿವಾಸಿಗಳು ಇವರಾಗಿದ್ದು, ಹೈದರಾಬಾದ್, ಕರ್ನಾಟಕ, ಗೋವಾ, ತಮಿಳುನಾಡು ರಾಜ್ಯ ಪ್ರವಾಸ ಮಾಡಲು ಮುಂದಾಗಿದ್ದರು. ಹೈದರಾಬಾದ್‌ನಿಂದ ರಾಯಚೂರು ಮಾರ್ಗವಾಗಿ ಗದಗ ನಗರಕ್ಕೆ ಈ ಬಸ್‌ ಎಂಟ್ರಿಯಾಗಿತ್ತು. ಹೆದ್ದಾರಿಯಲ್ಲಿ ಬಸ್‌ ನಿಲ್ಲಿಸಿದ ಆರ್‌ಟಿಒ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

Bus Siege Andhra Pradesh bus seized in Gadag and 49 tourists in trouble
ರಸ್ತೆ ಪಕ್ಕವೇ ಅಡುಗೆ ಮಾಡಿ ಊಟ ಮಾಡುತ್ತಿರುವ ಆಂಧ್ರಪ್ರದೇಶದ ಪ್ರವಾಸಿಗರು.

ದಾಖಲೆಗಳೇ ಸರಿ ಇಲ್ಲ!

AP03 TE8520 ನಂಬರ್ ಪ್ಲೇಟ್‌ವುಳ್ಳ ಬಸ್ ಇದಾಗಿದ್ದು, ದಾಖಲೆಗಳನ್ನು ಪರಿಶೀಲಿಸಿದಾಗ ಚಾರ್ಸಿ, ಎಂಜಿನ್ ನಂಬರ್ ಅನ್ನೇ ತಿರುಚಿರುವ ಸಂಗತಿ ಗೊತ್ತಾಗಿದೆ. ಇದರ ಜತೆಗೆ ಉಳಿದ ದಾಖಲೆಗಳೂ ಸರಿ ಇರಲಿಲ್ಲ. ಈ ಬಗ್ಗೆ ಬಸ್‌ ಚಾಲಕ, ನಿರ್ವಾಹಕರನ್ನು ಕೇಳಿದರೆ ಸರಿಯಾಗಿ ಉತ್ತರ ನೀಡಲಿಲ್ಲ. ಹೀಗಾಗಿ ಹೆದ್ದಾರಿಯಲ್ಲಿಯೇ ಬಸ್‌ ಅನ್ನು ಸೀಝ್‌ ಮಾಡಿದ ಅಧಿಕಾರಿಗಳು, ಆ ಬಸ್‌ ಅನ್ನು ಆರ್‌ಟಿಒ ಕಚೇರಿಗೆ ತಂದರು.

ಇದನ್ನೂ ಓದಿ: Prajwal Revanna Case: ನಿಖಿಲ್ ಎಲ್ಲಿದ್ದೀಯಪ್ಪಾ ಎಂದಿದ್ದಾಯ್ತು, ಈಗ ಪ್ರಜ್ವಲ್ ಎಲ್ಲಿದ್ದೀಯಪ್ಪಾ ಎನ್ನುತ್ತಿದ್ದಾರೆ ಬ್ರದರ್ ಸ್ವಾಮಿಗಳು!

ಪ್ರವಾಸಿಗರ ಪರದಾಟ

ಈ ಎಲ್ಲ ಬೆಳವಣಿಗೆ ನಡುವೆ ಅಕ್ಷರಶಃ ನಲುಗಿರುವುದು ಆಂಧ್ರ ಪ್ರದೇಶದ ಪ್ರವಾಸಿಗರು. ಅವರು ಖುಷಿ ಖುಷಿಯಿಂದ ಪ್ರವಾಸಕ್ಕೆ ಹೊರಟಿದ್ದರು. ಆದರೆ, ಬಸ್‌ ದಾಖಲೆ ಸರಿ ಇಲ್ಲದಿರುವ ಬಗ್ಗೆ ಮಾಹಿತಿ ಇಲ್ಲದೇ ಇದ್ದರಿಂದ ಈಗ ಫಜೀತಿಗೆ ಸಿಲುಕಿದ್ದಾರೆ. ಬಸ್‌ಗೆ ಬಾಡಿಗೆ ಕೊಟ್ಟು ಬುಕ್‌ ಮಾಡಲಾಗಿದೆ. ಈಗ ಬೇರೆ ರಾಜ್ಯದಲ್ಲಿ ಬಸ್‌ ಸೀಜ್‌ ಆದರೆ ತಾವು ಏನು ಮಾಡುವುದು ಎಂಬ ಯೋಚನೆ ಎದುರಾಯಿತು. ಹೀಗಾಗಿ ಮಂಗಳವಾರ ಮಧ್ಯಾಹ್ನವೇ ಬಸ್‌ ಅನ್ನು ಸೀಜ್‌ ಮಾಡಲಾಗಿದ್ದರೂ ಬಸ್‌ ಜತೆಗೆ ಪ್ರಯಾಣಿಕರೂ ಆರ್‌ಟಿಒ ಕಚೇರಿಗೆ ಬಂದು ಕುಳಿತಿದ್ದರು. ನಮಗೆ ಬಸ್‌ ಅನ್ನು ಬಿಟ್ಟುಕೊಡಿ, ಇಲ್ಲವೇ ಬೇರೆ ಬಸ್‌ ಅನ್ನು ವ್ಯವಸ್ಥೆ ಮಾಡಿ ಎಂದು ಆರ್‌ಟಿಒ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ. ಆದರೆ, ಆರ್‌ಟಿಒ ಅಧಿಕಾರಿಗಳು ಇದ್ಯಾವುದಕ್ಕೂ ಜಗ್ಗುತ್ತಿಲ್ಲ. ದಾಖಲೆಗಳನ್ನು ತಿರುಚುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಹೀಗಾಗಿ ಈ ಬಸ್‌ ಅನ್ನು ಸೀಝ್‌ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ.

Continue Reading
Advertisement
Virat kohli
ಕ್ರೀಡೆ1 min ago

Virat kohli : ಐಪಿಎಲ್​ನಲ್ಲಿ 8000 ರನ್ ಬಾರಿಸಿ ದಾಖಲೆ ಬರೆದ ಕೊಹ್ಲಿ

Harish Poonja case Belthangady BJP MLA Harish Poonja arrested for taunting police
ರಾಜಕೀಯ20 mins ago

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾರನ್ನು ಅರೆಸ್ಟ್‌ ಮಾಡದೇ ವಾಪಸ್‌ ಹೋದ ಪೊಲೀಸರು!

MLC Election South West Graduate Constituency bjp Candidate Dr Dhananjaya Sarji pressmeet
ರಾಜಕೀಯ24 mins ago

MLC Election: ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವೆ: ಡಾ. ಧನಂಜಯ ಸರ್ಜಿ

Fodder Bank inauguration at kasaba
ತುಮಕೂರು25 mins ago

Tumkur News: ಮೇವು ಬ್ಯಾಂಕ್ ಸದುಪಯೋಗಪಡಿಸಿಕೊಳ್ಳಿ: ತಹಸೀಲ್ದಾರ್ ಮಂಜುನಾಥ್

YIPP co founder Nikhil Kamath
ಕರ್ನಾಟಕ27 mins ago

Bengaluru News: ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮುಂದಾದ ವೈಐಪಿಪಿ ಸಹ ಸಂಸ್ಥಾಪಕ ನಿಖಿಲ್ ಕಾಮತ್

Virat Kohli
ಪ್ರಮುಖ ಸುದ್ದಿ34 mins ago

Virat kohli : ಕೊಹ್ಲಿಗೆ ಭಯೋತ್ಪಾದಕರ ಬೆದರಿಕೆ ಸುದ್ದಿ; ಸ್ಪಷ್ಟನೆ ನೀಡಿದ ಗುಜರಾತ್​ ಕ್ರಿಕೆಟ್​​ ಸಂಸ್ಥೆ

Jayashree Gurannavar
ಕ್ರೈಂ53 mins ago

Jayashree Gurannavar: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ನಿಧನ

CGI Technology In Film
ಸಿನಿಮಾ54 mins ago

CGI Technology In Film: ʼವೆಸ್ಟ್‌ವರ್ಲ್ಡ್‌ʼನಿಂದ ʼಅವತಾರ್‌ʼ ಚಿತ್ರದವರೆಗೆ ಸಿಜಿಐ ತಂತ್ರಜ್ಞಾನದ ರೋಚಕ ಹಾದಿ! ವಿಡಿಯೊಗಳಿವೆ

Bus Siege Andhra Pradesh bus seized in Gadag and 49 tourists in trouble
ಗದಗ56 mins ago

Bus seized: ಆಂಧ್ರ ಸಿಎಂ ಕ್ಷೇತ್ರದ ಪ್ರವಾಸಿಗರು ಗದಗಿನಲ್ಲಿ ಲಾಕ್‌; ಇಡೀ ರಾತ್ರಿ ಆರ್‌ಟಿಒ ಕಚೇರಿಯಲ್ಲಿ ಕಳೆದ 49 ಮಂದಿ!

Shah Rukh Khan
ಪ್ರಮುಖ ಸುದ್ದಿ1 hour ago

Shah Rukh Khan : ಶಾರುಖ್​ ಖಾನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ14 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ6 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌