Interim bail : ವಿಡಿಯೊಕಾನ್‌ ಗ್ರೂಪ್‌ ಸ್ಥಾಪಕ ವೇಣುಗೋಪಾಲ್‌ ಧೂತ್‌ಗೆ ಮಧ್ಯಂತರ ಜಾಮೀನು - Vistara News

ವಾಣಿಜ್ಯ

Interim bail : ವಿಡಿಯೊಕಾನ್‌ ಗ್ರೂಪ್‌ ಸ್ಥಾಪಕ ವೇಣುಗೋಪಾಲ್‌ ಧೂತ್‌ಗೆ ಮಧ್ಯಂತರ ಜಾಮೀನು

ವಿಡಿಯೊಕಾನ್‌ ಗ್ರೂಪ್‌ ಸ್ಥಾಪಕ ವೇಣುಗೋಪಾಲ್‌ ಅವರು ಐಸಿಐಸಿಐ ಬ್ಯಾಂಕ್‌ ಸಾಲದ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ( Interim bail) ಅವರನ್ನು ಬಂಧಿಸಲಾಗಿತ್ತು.

VISTARANEWS.COM


on

dhooth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಐಸಿಐಸಿಐ ಬ್ಯಾಂಕ್‌ನಲ್ಲಿ ನಡೆದಿರುವ ಸಾಲದ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೊಕಾನ್‌ ಗ್ರೂಪ್‌ನ ಸ್ಥಾಪಕ ವೇಣುಗೋಪಾಲ್‌ ಧೂತ್‌ (72) ಅವರಿಗೆ (Interim bail ) ಬಾಂಬೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ.

2022 ರ ಡಿಸೆಂಬರ್‌ 26ರಂದು ಧೂತ್‌ ಅವರನ್ನು ಸಿಬಿಐ ಬಂಧಿಸಿತ್ತು. 2019 ರ ಜನವರಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿತ್ತು.

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ, ಪಿಕೆ ಚವಾಣ್‌ ಅವರನ್ನು ಒಳಗೊಂಡಿದ್ದ ಹೈಕೋರ್ಟ್‌ ಪೀಠವು, ಧೂತ್‌ ಅವರಿಗೆ 1 ಲಕ್ಷ ರೂ. ಭದ್ರತಾ ಠೇವಣಿಯನ್ನು ಇಡಲು ಸೂಚಿಸಿ ಜಾಮೀನು ನೀಡಿತು. ಚಂದಾ ಕೊಚ್ಚಾರ್‌ ಎಂಡಿ ಆಗಿದ್ದಾಗ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೊಕಾನ್‌ ಗ್ರೂಪ್‌ ಕಂಪನಿಗೆ ಅಕ್ರಮವಾಗಿ ಸಾಲ ವಿತರಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ಮುಂದುವರಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

VISTARANEWS.COM


on

India Economy
Koo

ಬೆಂಗಳೂರು: ಐಎಂಎಫ್​​ನ ಏಷ್ಯಾ ಮತ್ತು ಪೆಸಿಫಿಕ್ (ಎಪಿಎಸಿ) ಇಲಾಖೆಯ ನಿರ್ದೇಶಕ ಕೃಷ್ಣ ಶ್ರೀನಿವಾಸನ್ ಅವರ ಪ್ರಕಾರ, ಭಾರತದ ಆರ್ಥಿಕತೆ (Indian Economy) ಚೀನಾವನ್ನು ಹಿಂದಿಕ್ಕಿ ವೇಗವಾಗಿ ಬೆಳೆಯುತ್ತಿದ್ದು, ಗಾತ್ರದಲ್ಲಿ ಭಾರತದ ಆರ್ಥಿಕತೆ ಚಿಕ್ಕದಾಗಿದ್ದರೂ ಸಾಗುತ್ತಿರುವ ವೇಗ ಹೆಚ್ಚಿದೆ ಎಂಬುದಾಗಿ ವಿವರಿಸಿದ್ದಾರೆ. ಜತೆಗೆ ಇದು ನಿರೀಕ್ಷಿತ ಹಾಗೂ ಅಚ್ಚರಿಯ ಸಂಗತಿಯೇನೂ ಅಲ್ಲ ಎಂದು ಹೇಳಿದ್ದಾರೆ.

“ಚೀನಾದ ಆರ್ಥಿಕತೆಯ ಗಾತ್ರ ಭಾರತಕ್ಕಿಂತ ನಾಲ್ಕು ಪಟ್ಟು ದೊಡ್ಡದಾಗಿದೆ. ಆದರೆ ಭಾರತವು ಇಂದು ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದ್ದರೆ. ಇದು ಆಶ್ಚರ್ಯಕರವಲ್ಲ” ಎಂದು ಶ್ರೀನಿವಾಸನ್ ಎಎನ್ಐ ಜತೆ ಮಾತನಾಡುತ್ತಾ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಕೃಷ್ಣ ಶ್ರೀನಿವಾಸನ್ ಅವರು ಭಾರತದ ಆರ್ಥಿಕ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ್ದು, 2024-25ರ ಹಣಕಾಸು ವರ್ಷದಲ್ಲಿ ಭಾರತದ ಯೋಜಿತ ಬೆಳವಣಿಗೆಯ ದರ 6.8% ಎಂದು ನಿರೀಕ್ಷೆ ಮಾಡಿದ್ದಾರೆ.

ಇದನ್ನೂ ಓದಿ: China Missile : ಪಾಕಿಸ್ತಾನಕ್ಕೆ ಗುಟ್ಟಾಗಿ ಕ್ಷಿಪಣಿ ಕಳುಹಿಸಿದ ಚೀನಾದ ಎರಡು ಕಂಪನಿಗಳಿಗೆ ಅಮೆರಿಕದ ನಿರ್ಬಂಧ

ಕೋವಿಡ್ -19 ಸಾಂಕ್ರಾಮಿಕ ರೋಗ, ರಷ್ಯಾ-ಉಕ್ರೇನ್ ಯುದ್ಧ ಮತ್ತು ಗಲ್ಫ್ ಪ್ರದೇಶದಲ್ಲಿ ಇತ್ತೀಚಿನ ಉದ್ವಿಗ್ನತೆ ಸೇರಿದಂತೆ ಅನೇಕ ಆಘಾತಗಳನ್ನು ಪರಿಹರಿಸು ಭಾರತದ ಸಾಮರ್ಥ್ಯದ ಬಗ್ಗೆ ಮಾತನಾಡಿದ ಶ್ರೀನಿವಾಸನ್, ದೇಶದ ಸ್ಥಿತಿಸ್ಥಾಪಕತ್ವವನ್ನು ಶ್ಲಾಘಿಸಿದರು. “ಇತ್ತೀಚಿನ ದಿನಗಳಲ್ಲಿ ನಾವು ನೋಡಿದ ಅನೇಕ ಆಘಾತಗಳನ್ನು ಭಾರತವು ಯಶಸ್ವಿಯಾಗಿ ನಿಭಾಯಿಸಿದೆ” ಎಂದು ಅವರು ಎಎನ್ಐಗೆ ತಿಳಿಸಿದರು.

ಭಾರತದ ಪ್ರಭಾವಶಾಲಿ ಬೆಳವಣಿಗೆಗೆ ಖಾಸಗಿ ಮತ್ತು ಸಾರ್ವಜನಿಕ ಹೂಡಿಕೆ ಕಾರಣ ಎಂದು ಶ್ರೀನಿವಾಸನ್ ಹೇಳಿದರು, “ನಾನು ಮುಂದಿನ ದಿನಗಳಲ್ಲಿ ಯಾವುದೇ ಅಡೆತಡೆಗಳನ್ನು ನೋಡುವುದಿಲ್ಲ” ಎಂಬುದಾಗಿಯೂ ಹೇಳಿದರು. ಆದಾಗ್ಯೂ, ಭಾರತದ ವಿಸ್ತರಿಸುತ್ತಿರುವ ಕಾರ್ಮಿಕ ಶಕ್ತಿಯ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಗಮನಾರ್ಹ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಕಾರ್ಮಿಕ ಶಕ್ತಿಯ ಬಳಕೆ ಅಗತ್ಯ

“ಭಾರತವು ಯುವ, ಬೆಳೆಯುತ್ತಿರುವ ಜನಸಂಖ್ಯೆಯನ್ನು ಹೊಂದಿದೆ. ಇದು ಪ್ರತಿವರ್ಷ ಸುಮಾರು 15 ಮಿಲಿಯನ್ ಜನರನ್ನು ಕಾರ್ಮಿಕ ಬಲಕ್ಕೆ ಸೇರಿಸುವ ನಿರೀಕ್ಷೆಯಿದೆ” ಎಂದು ಶ್ರೀನಿವಾಸನ್ ಗಮನಸೆಳೆದರು. “ಈ ಜನಸಂಖ್ಯಾ ಅನುಕೂಲವನ್ನು ಬಳಸಿಕೊಳ್ಳಲು, ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯಲ್ಲಿ ಗಣನೀಯ ಹೂಡಿಕೆಗಳು ನಿರ್ಣಾಯಕ. ಇದರಿಂದಾಗಿ ಬೆಳೆಯುತ್ತಿರುವ ಕಾರ್ಮಿಕ ಶಕ್ತಿಯು ಆರ್ಥಿಕತೆಗೆ ನೆರವು ನೀಡಬಹುದು ಎಂದು ಹೇಳಿದ್ದಾರೆ.

ಸುಮಾರು 6.5% ಬೆಳವಣಿಗೆಯ ದರದೊಂದಿಗೆ ಭಾರತದ ಮಧ್ಯಮಾವಧಿಯ ನಿರೀಕ್ಷೆಗಳ ಬಗ್ಗೆ ಆಶಾವಾದ ವ್ಯಕ್ತಪಡಿಸಿದ ಶ್ರೀನಿವಾಸನ್, ಹಲವು ಸುಧಾರಣೆಗಳ ಮಹತ್ವವನ್ನು ಒತ್ತಿ ಹೇಳಿದರು. ಸಮಗ್ರ ಸುಧಾರಣೆಗಳನ್ನು ಶ್ರದ್ಧೆಯಿಂದ ಜಾರಿಗೆ ತಂದರೆ ಮುಂದಿನ ಹಲವಾರು ವರ್ಷಗಳಲ್ಲಿ ಭಾರತವು 6.5% ಅಥವಾ ಅದಕ್ಕಿಂತ ಹೆಚ್ಚಿನ ಬೆಳವಣಿಗೆಯ ದರ ಸಾಧಿಸಬಹುದು ಎಂದು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Electoral Bond : ಎನ್​ಡಿಎ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್​ ವ್ಯವಸ್ಥೆ ಮರುಜಾರಿ; ನಿರ್ಮಲಾ ಸೀತಾರಾಮನ್​

Electoral Bond: ಸುಪ್ರೀಂ ಕೋರ್ಟ್​​ ಈಗಷ್ಟೇ ಈ ಯೋಜನೆಯಲ್ಲಿ ಪಾರದರ್ಶಕತೆ ತಂದಿದೆ. ಈ ಮೊದಲು ಎಲ್ಲವೂ ಮೋಸದ ಜಾಲವಾಗಿತ್ತು ಎಂದು ಅವರು ಹೇಳಿದ್ದಾರೆ. ಯೋಜನೆಯ ಕೆಲವು ಅಂಶಗಳನ್ನು ಸುಧಾರಿಸುವ ಅಗತ್ಯವಿದೆ ಎಂದು ಒಪ್ಪಿಕೊಂಡ ಹಣಕಾಸು ಸಚಿವೆ ಸೀತಾರಾಮನ್ ಸಮಾಲೋಚನೆ ಯ ನಂತರ ಅವುಗಳನ್ನು ಮರಳಿ ತರುವ ಸಾಧ್ಯತೆಗಳಿವೆ ಎಂದು ಹೇಳಿದರು.

VISTARANEWS.COM


on

electoral Bond
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ಈ ಎಲ್ಲ ಪಾಲುದಾರರ ಜತೆ ಸಮಾಲೋಚನೆಯ ಮಾಡಿ ಚುನಾವಣಾ ಬಾಂಡ್ (Electoral Bond) ಯೋಜನೆಯನ್ನು ಮರಳಿ ತರುವ ಸಾಧ್ಯತೆಯ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುಳಿವು ನೀಡಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ಜೊತೆ ಮಾತನಾಡಿದ ಅವರು “ನಾವು ಇನ್ನೂ ಮಧ್ಯಸ್ಥಗಾರರೊಂದಿಗೆ ಸಾಕಷ್ಟು ಸಮಾಲೋಚನೆ ನಡೆಸಬೇಕಾಗಿದೆ ಮತ್ತು ಎಲ್ಲರಿಗೂ ಸ್ವೀಕಾರಾರ್ಹವಾದ ಚೌಕಟ್ಟನ್ನು ರಚಿಸಲು ಅಥವಾ ತರಲು ನಾವು ಏನು ಮಾಡಬೇಕು ಎಂಬುದನ್ನು ಪರಿಶೀಲಿಸಬೇಕಾಗಿದೆ. ಮುಖ್ಯವಾಗಿ ಪಾರದರ್ಶಕತೆಯ ಮಟ್ಟವನ್ನು ಉಳಿಸಿಕೊಳ್ಳಬೇಕು. ಕಪ್ಪು ಹಣ ಇಲ್ಲಿಗೆ ಪ್ರವೇಶಿಸುವ ಸಾಧ್ಯತೆಯನ್ನು ಸಂಪೂರ್ಣವಾಗಿ ನಿವಾಳಿಸಬೇಕು ಎಂದು ಹೇಳಿದರು. ಆದಾಗ್ಯೂ, ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಮರುಪರಿಶೀಲಿಸಬೇಕೆ ಎಂದು ಕೇಂದ್ರ ಸರ್ಕಾರ ಇನ್ನೂ ನಿರ್ಧರಿಸಿಲ್ಲ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

ಸುಪ್ರೀಂ ಕೋರ್ಟ್​​ ಈಗಷ್ಟೇ ಈ ಯೋಜನೆಯಲ್ಲಿ ಪಾರದರ್ಶಕತೆ ತಂದಿದೆ. ಈ ಮೊದಲು ಎಲ್ಲವೂ ಮೋಸದ ಜಾಲವಾಗಿತ್ತು ಎಂದು ಅವರು ಹೇಳಿದ್ದಾರೆ. ಯೋಜನೆಯ ಕೆಲವು ಅಂಶಗಳನ್ನು ಸುಧಾರಿಸುವ ಅಗತ್ಯವಿದೆ ಎಂದು ಒಪ್ಪಿಕೊಂಡ ಹಣಕಾಸು ಸಚಿವೆ ಸೀತಾರಾಮನ್ ಸಮಾಲೋಚನೆ ಯ ನಂತರ ಅವುಗಳನ್ನು ಮರಳಿ ತರುವ ಸಾಧ್ಯತೆಗಳಿವೆ ಎಂದು ಹೇಳಿದರು.

ಹಿಂದೆಯೂ ಸಮರ್ಥಿಸಿಕೊಂಡಿದ್ದರು

ಚುನಾವಣಾ ಬಾಂಡ್ ಯೋಜನೆಯನ್ನು ಹಣಕಾಸು ಸಚಿವರು ಸಮರ್ಥಿಸಿಕೊಂಡಿರುವುದು ಇದೇ ಮೊದಲಲ್ಲ. ಈ ಹಿಂದೆ ಅವರು ಈ ಯೋಜನೆಯು “ಹಿಂದಿನ ಕಪ್ಪು ಹಣಕ್ಕಿಂತ ಒಂದು ಹೆಜ್ಜೆ ಉತ್ತಮ” ಎಂದು ಹೇಳಿದ್ದರು. ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್​​ಗೆ ನೀಡಿದ ಸಂದರ್ಶನದಲ್ಲಿ ನಿರ್ಮಲಾ ಸೀತಾರಾಮನ್ ಬಿಜೆಪಿ ಆಡಳಿತವು ಚುನಾವಣಾ ಹಣಕಾಸು ಶುದ್ಧೀಕರಣಕ್ಕಾಗಿ ಕಾನೂನನ್ನು ತಂದಿದೆ ಎಂದು ಹೇಳಿದ್ದರು. ಚುನಾವಣಾ ನಿಧಿಯು ಹೆಚ್ಚು ಪಾರದರ್ಶಕತೆಯನ್ನು ಹೊಂದಿದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

ರಾಜಕೀಯ ನಿಧಿಯಲ್ಲಿ ಪಾರದರ್ಶಕತೆ ತರಲು ರಾಜಕೀಯ ಪಕ್ಷಗಳಿಗೆ ನೀಡಿದ ನಗದು ದೇಣಿಗೆಗಳಿಗೆ ಪರ್ಯಾಯವಾಗಿ ಕೇಂದ್ರ ಸರ್ಕಾರವು ಜನವರಿ 2, 2018 ರಂದು ಚುನಾವಣಾ ಬಾಂಡ್ ಯೋಜನೆಯನ್ನು ಪರಿಚಯಿಸಿತ್ತು. ಫೆಬ್ರವರಿ 2024 ರಲ್ಲಿ, ಐದು ನ್ಯಾಯಾಧೀಶರ ಸಂವಿಧಾನ ಪೀಠವು ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯನ್ನು ಅಸಾಂವಿಧಾನಿಕ ಎಂದು ಘೋಷಿಸಿತು.

Continue Reading

ಮನಿ-ಗೈಡ್

Money Guide: ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇದರಲ್ಲಿನ ವಿಧಗಳ ಬಗ್ಗೆ ಇಲ್ಲಿದೆ ಮಾಹಿತಿ

Money Guide: ಹೂಡಿಕೆಗೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿ ಬರುತ್ತಿರುವ ಹೆಸರೇ ಮ್ಯೂಚುವಲ್‌ ಫಂಡ್‌. ನೇರವಾಗಿ ಷೇರುಗಳು ಹಾಗೂ ಬಾಂಡ್‌ಗಳಲ್ಲಿ ಹೂಡಿಕೆ ಮಾಡಲು ಬಯಸದವರಿಗೆ ಇದು ಸೂಕ್ತ. ಹಾಗಾದರೆ ಮ್ಯೂಚುವಲ್‌ ಫಂಡ್‌ ಎಂದರೇನು? ಇದರಲ್ಲಿ ಹೂಡಿಕೆ ಮಾಡುವ ಮುನ್ನ ಯಾವೆಲ್ಲ ಅಂಶಗಳನ್ನು ಗಮನಿಸಬೇಕು? ವಿಧಗಳು ಯಾವುವು? ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಅನೇಕ ಮಂದಿ ಮ್ಯೂಚುವಲ್‌ ಫಂಡ್‌ (Mutual Fund)ನಲ್ಲಿ ಹೂಡಿಕೆ ಮಾಡಬೇಕು ಎಂದುಕೊಳ್ಳುತ್ತಾರೆ. ಇನ್ನು ಕೆಲವು ಮಂದಿ ನೇರವಾಗಿ ಷೇರುಗಳು ಹಾಗೂ ಬಾಂಡ್‌ಗಳಲ್ಲಿ ಹೂಡಿಕೆ ಮಾಡಲು ಬಯಸುವುದಿಲ್ಲ. ಸ್ಟಾಕ್‌ಗಳು ಮತ್ತು ಬಾಂಡ್‌ಗಳಲ್ಲಿ ಲಾಭ ಇದೆ ಎಂದು ಗೊತ್ತಿದ್ದರೂ, ಅದು ಹೇಗೆ ಎಂಬುದು ಕರಗತವಾಗಿರುವುದಿಲ್ಲ. ಅವರಿಗೆ ಮಾರುಕಟ್ಟೆ ಮತ್ತು ಕಂಪೆನಿಗಳ ಫಂಡಮೆಂಟಲ್‌ ಅನಾಲಿಸಿಸ್‌ ನಡೆಸಲು ಸಮಯದ ಅಭಾವ ಇರುವುದೂ ಇದಕ್ಕೆ ಕಾರಣ ಇರಬಹುದು. ಅಂತಹ ಮಂದಿ ಮ್ಯೂಚುವಲ್‌ ಫಂಡ್‌ ಮೂಲಕ ಷೇರುಗಳಲ್ಲಿ ಹೂಡಿಕೆ ಮಾಡಬಹುದು. ಹಾಗಾದರೆ ಮ್ಯೂಚುವಲ್‌ ಫಂಡ್‌ ಎಂದರೇನು? ಇದರಲ್ಲಿ ಹೂಡಿಕೆ ಮಾಡುವ ಮುನ್ನ ಯಾವೆಲ್ಲ ಅಂಶಗಳನ್ನು ಗಮನಿಸಬೇಕು? ವಿಧಗಳು ಯಾವುವು? ಎನ್ನುವ ವಿವರ ಮನಿಗೈಡ್‌ (Money Guide)ನಲ್ಲಿದೆ.

ಮ್ಯೂಚುವಲ್‌ ಫಂಡ್‌ ಎಂದರೇನು?

ಪ್ರಸ್ತುತ ಅತ್ಯುತ್ತಮ ಹೂಡಿಕೆ ವಿಧಾನಗಳಲ್ಲಿ ಮ್ಯೂಚುವಲ್ ಫಂಡ್ ಕೂಡ ಒಂದು ಎಂದು ಪರಿಗಣಿಸಲಾಗುತ್ತದೆ. ಮಾರುಕಟ್ಟೆಯ ಬಗ್ಗೆ ಸರಿಯಾದ ಮಾಹಿತಿ ಇದ್ದರೆ ವೈಯಕ್ತಿಕವಾಗಿ ಷೇರುಗಳಲ್ಲಿ ಹೂಡಿಕೆ ಮಾಡಬಹುದು. ಇಲ್ಲದಿದ್ದರೆ ಮ್ಯೂಚುವಲ್ ಫಂಡ್ ನಿಮಗಿರುವ ಅತ್ಯುತ್ತಮ ಮಾರ್ಗ ಎಂದು ಹಣಕಾಸು ತಜ್ಞರು ಹೇಳುತ್ತಾರೆ. ಮ್ಯೂಚುವಲ್ ಫಂಡ್​ಗಳನ್ನು ವೃತ್ತಿಪರರು ನಿಭಾಯಿಸುತ್ತಾರೆ. ವಿವಿಧ ಸ್ತರದ ಕಂಪೆನಿಗಳ ಷೇರುಗಳ ಮೇಲೆ ಮ್ಯೂಚುವಲ್ ಫಂಡ್​ನ ಹಣ ಹೂಡಿಕೆ ಆಗಿರುತ್ತದೆ. ಅಂದರೆ ನೀವು ಮ್ಯೂಚುವಲ್ ಫಂಡ್​ಗೆ ಹಾಕುವ ಹಣವನ್ನು ವಿವಿಧ ಷೇರುಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಲಾಭದ ಉದ್ದೇಶಕ್ಕಾಗಿ ಮ್ಯೂಚುವಲ್ ಫಂಡ್ ನಿರ್ವಾಹಕರು ಹೂಡಿಕೆಯನ್ನು ಅಲ್ಲಿಂದಿಲ್ಲಿಗೆ ಬದಲಾಯಿಸುತ್ತಿರುತ್ತಾರೆ. ಗಮನಿಸಿ, ದೀರ್ಘಾವಧಿ ದೃಷ್ಟಿಯಿಂದ ಇವು ಬಹಳ ಲಾಭಕಾರಿ ಎನಿಸುತ್ತದೆ. ಅಲ್ಪಾವಧಿಗೆ ಅಲ್ಲ.

ಆದಾಗ್ಯೂ ಮ್ಯೂಚುವಲ್ ಫಂಡ್ ಹೂಡಿಕೆಗಳು ಮಾರುಕಟ್ಟೆ ಅಪಾಯಗಳಿಗೆ ಒಳಪಟ್ಟಿರುತ್ತವೆ. ಹೂಡಿಕೆದಾರರು ಹೂಡಿಕೆ ಮಾಡುವ ಮೊದಲು ಯೋಜನೆಯ ಮಾಹಿತಿ ದಾಖಲೆಯನ್ನು ಎಚ್ಚರಿಕೆಯಿಂದ ಓದಬೇಕು. ಅಲ್ಲದೆ ಯೋಜನೆಯ ಹಿಂದಿನ ಕಾರ್ಯಕ್ಷಮತೆಯು ಭವಿಷ್ಯದ ಆದಾಯವನ್ನು ಸೂಚಿಸುವುದಿಲ್ಲ. ಯಾವುದೇ ಕನಿಷ್ಠ ಅಥವಾ ಗರಿಷ್ಠ ಆದಾಯದ ಭರವಸೆ ಅಥವಾ ಖಾತರಿ ಇರಲು ಸಾಧ್ಯವಿಲ್ಲ ಮುಂತಾದ ಅಂಶಗಳನ್ನು ಹೂಡಿಕೆ ಮೊದಲೇ ಗಮನಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

ಭಾರತದಲ್ಲಿ ಲಭ್ಯವಿರುವ ಮ್ಯೂಚುವಲ್‌ ಫಂಡ್‌ನ ವಿಧಗಳು

ಈಕ್ವಿಟಿ ಫಂಡ್‌ (Equity Funds): ಈ ಫಂಡ್‌ ಮುಖ್ಯವಾಗಿ ಕಂಪೆನಿಗಳ ಸ್ಟಾಕ್‌ಗಳು / ಷೇರುಗಳಲ್ಲಿ ಹೂಡಿಕೆ ಮಾಡುತ್ತದೆ. ಇದು ದೀರ್ಘಕಾಲೀನ ಹೂಡಿಕೆಗೆ ಸೂಕ್ತ ಮತ್ತು ಹೆಚ್ಚಿನ ಅಪಾಯವನ್ನು ಹೊಂದಿವೆ. ಇದರ ಮೂಲಕ ಕಂಪೆನಿಗಳ ಷೇರುಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಅವು ಹೆಚ್ಚಿನ ಆದಾಯವನ್ನು ನೀಡುವ ಜತೆಗೆ ಆದರೆ ಹೆಚ್ಚಿನ ಅಪಾಯವನ್ನು ಹೊಂದಿರುತ್ತವೆ. ಈಕ್ವಿಟಿ ಫಂಡ್‌ಗಳನ್ನು ಲಾರ್ಜ್ ಕ್ಯಾಪ್, ಮಿಡ್ ಕ್ಯಾಪ್, ಸ್ಮಾಲ್ ಕ್ಯಾಪ್, ಬ್ಯಾಂಕಿಂಗ್, ತಂತ್ರಜ್ಞಾನ, ಇತ್ಯಾದಿ ಆಧಾರದ ಮೇಲೆ ಮತ್ತಷ್ಟು ವರ್ಗೀಕರಿಸಬಹುದು.

ಡೆಬ್ಟ್ ಫಂಡ್ (Debt Fund): ಡೆಬ್ಟ್ ಫಂಡ್ ಪ್ರಾಥಮಿಕವಾಗಿ ಬಾಂಡ್‌ಗಳು, ಸರ್ಕಾರಿ ಸೆಕ್ಯುರಿಟಿಗಳಂತಹ ಸ್ಥಿರ-ಆದಾಯದ ಸೆಕ್ಯುರಿಟಿಗಳಲ್ಲಿ ಹೂಡಿಕೆ ಮಾಡುತ್ತದೆ. ಈಕ್ವಿಟಿ ಫಂಡ್‌ಗೆ ಹೋಲಿಸಿದರೆ ನಿಯಮಿತ ಆದಾಯ ಮತ್ತು ಕಡಿಮೆ ಅಪಾಯವನ್ನು ಬಯಸುವ ಹೂಡಿಕೆದಾರರಿಗೆ ಇದು ಸೂಕ್ತ.

ಹೈಬ್ರಿಡ್ ಫಂಡ್ (Hybrid Funds): ಬ್ಯಾಲೆನ್ಸ್ಡ್ ಫಂಡ್ (Balanced funds) ಎಂದೂ ಕರೆಯಲ್ಪಡುವ ಇದರಲ್ಲಿ ಈಕ್ವಿಟಿ ಮತ್ತು ಡೆಬ್ಟ್ ಫಂಡ್‌ಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ತುಲನಾತ್ಮಕವಾಗಿ ಕಡಿಮೆ ಅಪಾಯದೊಂದಿಗೆ ಮಧ್ಯಮ ಆದಾಯವನ್ನು ಬಯಸುವ ಹೂಡಿಕೆದಾರರು ಇದನ್ನು ಆಯ್ಕೆ ಮಾಡಬಹುದು.

ಇಂಡಕ್ಸ್‌ ಫಂಡ್‌ (Index Funds): ಇದು ನಿರ್ದಿಷ್ಟ ಮಾರುಕಟ್ಟೆ ಸೂಚ್ಯಂಕದಂತೆ ಅದೇ ಪ್ರಮಾಣದಲ್ಲಿ ಅದೇ ಸ್ಟಾಕ್ ಗಳಲ್ಲಿ ಹೂಡಿಕೆ ಮಾಡುವ ಯೋಜನೆ. ಸೂಚ್ಯಂಕಕ್ಕೆ ಹೋಲುವ ಆದಾಯವನ್ನು ನೀಡುವ ಗುರಿಯನ್ನು ಹೊಂದಿದೆ.

ಸೆಕ್ಟರಲ್‌ ಫಂಡ್‌ (Sectoral Funds): ಬ್ಯಾಂಕಿಂಗ್, ಐಟಿ, ಆರೋಗ್ಯ ರಕ್ಷಣೆ ಮುಂತಾದ ನಿರ್ದಿಷ್ಟ ಕ್ಷೇತ್ರಗಳ ಮೇಲೆ ಹೂಡಿಕೆ ಮಾಡುವ ವಿಧಾನ ಇದು. ಇದು ಹೆಚ್ಚಿನ ಅಪಾಯವನ್ನು ಹೊಂದಿದೆ.

ಥೀಮಾಟಿಕ್‌ ಫಂಡ್‌ (Thematic Funds): ಮೂಲಸೌಕರ್ಯ ಅಥವಾ ತಂತ್ರಜ್ಞಾನದಂತಹ ನಿರ್ದಿಷ್ಟ ವಿಷಯಗಳು ಅಥವಾ ಪ್ರವೃತ್ತಿಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಇದರಲ್ಲಿಯೂ ಅಪಾಯ ಸಾಧ್ಯತೆ ಅಧಿಕ.

ಟ್ಯಾಕ್ಸ್‌ ಸೇವಿಂಗ್‌ ಫಂಡ್‌ (Tax Saving Funds): ಈ ಈಕ್ವಿಟಿ ಲಿಂಕ್ಡ್ ಸೇವಿಂಗ್ಸ್ ಸ್ಕೀಮ್‌ (Equity Linked Savings Schemes) ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಸಿ ಅಡಿಯಲ್ಲಿ ತೆರಿಗೆ ಪ್ರಯೋಜನಗಳನ್ನು ನೀಡುತ್ತವೆ. ಇದರಲ್ಲಿ ಈಕ್ವಿಟಿಯಲ್ಲಿ ಹೂಡಿಕೆ ಮಾಡಲಾಗುತ್ತದೆ ಮತ್ತು ಮೂರು ವರ್ಷಗಳ ಲಾಕ್-ಇನ್ ಅವಧಿಯನ್ನು ಹೊಂದಿರುತ್ತದೆ.

ಲಿಕ್ವಿಡ್ ಫಂಡ್ (Liquid Funds): ಲಿಕ್ವಿಡ್ ಫಂಡ್‌ 91 ದಿನಗಳಲ್ಲಿ ಮುಕ್ತಾಯಗೊಳ್ಳುವ ಅಲ್ಪಾವಧಿಯ ಹೂಡಿಕೆಯಾಗಿದೆ. ಅಲ್ಪಾವಧಿಯ ಹೂಡಿಕೆದಾರರಿಗೆ ಇದು ಸೂಕ್ತ.

ಗಿಲ್ಟ್‌ ಫಂಡ್‌ (Gilt Funds): ಇದು ಉಳಿದ ಎಲ್ಲ ಹೂಡಿಕೆಗಳಿಗೆ ಹೋಲಿಸಿದರೆ ಅತ್ಯಂತ ಸುರಕ್ಷಿತ ಎಂದೇ ಹೇಳಬಹುದು. ಹೂಡಿಕೆ ಮಾಡಿದ ಹೆಚ್ಚಿನ ಹಣಗಳು ಸರ್ಕಾರ ಅಭಯವಿರುವ ಕಡೆಯೇ ಇರುತ್ತವೆ. ಇಲ್ಲಿ ಹಣ ಕಳೆದುಕೊಳ್ಳುವ ಆತಂಕ ಇರುವುದಿಲ್ಲ.

ಇಂಟರ್‌ನ್ಯಾಷನಲ್‌ ಫಂಡ್‌ (International Funds): ಈ ಸ್ಕೀಮ್‌ ಮೂಲಕ ಭಾರತದ ಹೊರಗಿನ ಸ್ವತ್ತುಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಇದು ಜಾಗತಿಕ ಮಾರುಕಟ್ಟೆಗಳಲ್ಲಿನ ವೈವಿಧ್ಯತೆಯನ್ನು ನೀಡುತ್ತದೆ. ಸ್ಟಾಕ್, ಬಾಂಡ್ ಅಥವಾ ವಿದೇಶಿ ಕಂಪನಿಗಳಲ್ಲಿ ಹೂಡಿಕೆ ಮಾಡಬಹುದು.

ಇದನ್ನೂ ಓದಿ: Money Guide: ನಿಮ್ಮ ಷೇರಿನಿಂದಲೂ ಸಾಲ ಪಡೆದುಕೊಳ್ಳಬಹುದು; ಹೇಗೆ ಎನ್ನುವ ವಿವರ ಇಲ್ಲಿದೆ

Continue Reading

ವಿದೇಶ

Workers protest: ಇಸ್ರೇಲ್​ ಜತೆಗಿನ ಒಪ್ಪಂದ ವಿರೋಧಿಸಿ ಪ್ರತಿಭಟಿಸಿದ್ದ ಗೂಗಲ್​​ನ 28​ ಉದ್ಯೋಗಿಗಳ ವಜಾ

Workers protest: ಸಿಯಾಟಲ್, ನ್ಯೂಯಾರ್ಕ್ ಮತ್ತು ಕ್ಯಾಲಿಫೋರ್ನಿಯಾದ ಸನ್ನಿವೇಲ್‌ನಲ್ಲಿರುವ ಗೂಗಲ್ ಕಂಪೆನಿಯ ಕಚೇರಿಗಳಲ್ಲಿ ಪ್ರತಿಭಟನೆ ನಡೆಸಿದ ಒಂಬತ್ತು ಉದ್ಯೋಗಿಗಳನ್ನು ಬಂಧಿಸಲಾಗಿದ್ದು, ಇದೀಗ 28 ಮಂದಿಯನ್ನು ವಜಾಗೊಳಿಸಲಾಗಿದೆ.

VISTARANEWS.COM


on

By

Workers protest
Koo

ನ್ಯೂಯಾರ್ಕ್: ಇಸ್ರೇಲ್ ನೊಂದಿಗಿನ (Israel) ಕಂಪೆನಿ ಒಪ್ಪಂದವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ 28 ಉದ್ಯೋಗಿಗಳನ್ನು (Workers protest) ಟೆಕ್ ದೈತ್ಯ ಗೂಗಲ್ (google) ವಜಾಗೊಳಿಸಿದೆ. ಇಸ್ರೇಲ್ ಸರ್ಕಾರ ಮತ್ತು ಸೇನೆಗೆ ಕ್ಲೌಡ್ ಮತ್ತು ಕೃತಕ ಬುದ್ಧಿಮತ್ತೆ ಸೇವೆಗಳನ್ನು ಒದಗಿಸಲು ಗೂಗಲ್ ಅಮೆಜಾನ್ ನೊಂದಿಗೆ (Amazon) ಸೇರಿ 1.2 ಬಿಲಿಯನ್ ಡಾಲರ್ ನ ಒಪ್ಪಂದ ಮಾಡಿಕೊಂಡಿತ್ತು.

ಇಸ್ರೇಲ್ ಸರ್ಕಾರದೊಂದಿಗೆ ಗೂಗಲ್ ಮಾಡಿರುವ 1.2 ಬಿಲಿಯನ್ ಡಾಲರ್ ಜಂಟಿ ಒಪ್ಪಂದವಾದ ಪ್ರಾಜೆಕ್ಟ್ ನಿಂಬಸ್‌ (Project Nimbus) ಅನ್ನು ವಿರೋಧಿಸಿ ಸಿಯಾಟಲ್, ನ್ಯೂಯಾರ್ಕ್ (New York) ಮತ್ತು ಕ್ಯಾಲಿಫೋರ್ನಿಯಾದ (California) ಸನ್ನಿವೇಲ್‌ನಲ್ಲಿರುವ ಕಂಪೆನಿಯ ಕಚೇರಿಗಳಲ್ಲಿ ಕಾರ್ಮಿಕರು ಏಪ್ರಿಲ್ 16 ರಂದು ಪ್ರತಿಭಟನೆ ನಡೆಸಿದ್ದರು.

ಸಿಯಾಟಲ್, ನ್ಯೂಯಾರ್ಕ್ ಮತ್ತು ಕ್ಯಾಲಿಫೋರ್ನಿಯಾದ ಸನ್ನಿವೇಲ್‌ನಲ್ಲಿರುವ ಕಂಪನಿಯ ಕಚೇರಿಗಳಲ್ಲಿ ಮಂಗಳವಾರ ರಾತ್ರಿ ಧರಣಿ ನಡೆಸಿದ ಒಂಬತ್ತು ಉದ್ಯೋಗಿಗಳನ್ನು ಬಂಧಿಸಲಾಗಿತ್ತು. ಇದೀಗ 28 ಮಂದಿಯನ್ನು ವಜಾ ಮಾಡಲಾಗಿದೆ.

ಇದನ್ನೂ ಓದಿ: Infosys Q4 Result: ಇನ್ಫೋಸಿಸ್‌ಗೆ 7,969 ಕೋಟಿ ರೂ. ನಿವ್ವಳ ಲಾಭ; 28 ರೂ.ಗಳ ಡಿವಿಡೆಂಡ್‌ ಘೋಷಣೆ

ಒಂಬತ್ತು ಮಂದಿ ಬಂಧನ

ಪ್ರಾಜೆಕ್ಟ್ ನಿಂಬಸ್ ವಿರುದ್ಧ ನೋ ಟೆಕ್ ಫಾರ್ ಅಪಾರ್ತೀಡ್ ಸಂಘಟನೆಯ ನೇತೃತ್ವದಲ್ಲಿ ಗೂಗಲ್ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದರು. ಗೂಗಲ್ ಕ್ಲೌಡ್ ಸಿಇಒ ಥಾಮಸ್ ಕುರಿಯನ್ ಅವರ ನ್ಯೂಯಾರ್ಕ್ ಕಚೇರಿ ಹಾಗೂ ಕ್ಯಾಲಿಫೋರ್ನಿಯಾದ ಸನ್ನಿವೇಲ್‌ನಲ್ಲಿರುವ ಕಂಪೆನಿಯ ಕಚೇರಿಗಳಲ್ಲಿ ನಡೆದ ಪ್ರತಿಭಟನೆ ವೇಳೆ ಒಂಬತ್ತು ಗೂಗಲ್ ಉದ್ಯೋಗಿಗಳು ಅತಿಕ್ರಮಣ ಮಾಡಿದ್ದಾರೆ ಎಂದು ಆರೋಪಿಸಿ ಬಂಧಿಸಲಾಗಿದೆ.

ಇಸ್ರೇಲ್ ಜೊತೆಗಿನ ಒಪ್ಪಂದ ಏನು ?

ಇಸ್ರೇಲ್ ಸರ್ಕಾರ ಮತ್ತು ಮಿಲಿಟರಿಗೆ ಕ್ಲೌಡ್ ಕಂಪ್ಯೂಟಿಂಗ್ ಸೇವೆಗಳನ್ನು ನೀಡಲು ಗೂಗಲ್ ಮತ್ತು ಅಮೆಜಾನ್ ಜಂಟಿಯಾಗಿ 1.2 ಶತಕೋಟಿ ಡಾಲರ್ ಒಪ್ಪಂದ ಮಾಡಿಕೊಂಡಿತ್ತು. ಇದರಲ್ಲಿ ಕೃತಕ ಬುದ್ಧಿಮತ್ತೆ ಉಪಕರಣಗಳು, ಡೇಟಾ ಕೇಂದ್ರಗಳು ಮತ್ತು ಇತರ ಕ್ಲೌಡ್ ಮೂಲಸೌಕರ್ಯಗಳು ಸೇರಿವೆ.

ತನಿಖೆ ಮುಂದುವರಿಯಲಿದೆ

ಗೂಗಲ್ ಉದ್ಯೋಗಿಗಳ ಪ್ರತಿಭಟನೆ ಬಳಿಕ ಸಂದೇಶ ಕಳುಹಿಸಿರುವ ಗ್ಲೋಬಲ್ ಸೆಕ್ಯುರಿಟಿಯ ಗೂಗಲ್‌ನ ಉಪಾಧ್ಯಕ್ಷ ಕ್ರಿಸ್ ರಾಕೋವ್, ಪ್ರಕರಣದ ತನಿಖೆಯ ಬಳಿಕ ಇದೀಗ ಇಪ್ಪತ್ತೆಂಟು ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ. ಈ ಕುರಿತು ತನಿಖೆಯನ್ನು ಮುಂದುವರಿಸುತ್ತೇವೆ ಮತ್ತು ಅಗತ್ಯವಿರುವಂತೆ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಬಂಧಿತರಾಗಿರುವ ಕೆಲವರನ್ನು ಆಡಳಿತಾತ್ಮಕ ರಜೆಯಲ್ಲಿ ಇರಿಸಲಾಗಿದೆ. ಮುಂದೆ ಅವರು ಕೆಲಸಕ್ಕೆ ಮರಳಲು ಹೆಚ್ ಆರ್ ಮೂಲಕ ಸಂಪರ್ಕಿಸುವವರೆಗೆ ಕಾಯಲು ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ನಡುವೆ ನೋ ಟೆಕ್ ಫಾರ್ ವರ್ಣಭೇದ ನೀತಿಯು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಗೂಗಲ್ 28 ಮಂದಿ ಉದ್ಯೋಗಿಗಳನ್ನು ನಿರ್ದಾಕ್ಷಿಣ್ಯವಾಗಿ ವಜಾ ಮಾಡಿದೆ. 10 ಗಂಟೆಗಳ ಧರಣಿಯಲ್ಲಿ ನೇರವಾಗಿ ಭಾಗವಹಿಸದೇ ಇರುವವರೂ ಇದರಲ್ಲಿ ಇದ್ದಾರೆ. ಕಳೆದ ಮೂರು ವರ್ಷಗಳಿಂದ ಪ್ರಾಜೆಕ್ಟ್ ನಿಂಬಸ್ ವಿರುದ್ಧ ಗುಂಪು ಸಂಘಟಿಸಲಾಗುತ್ತಿದೆ. ಅವರ ಕಾಳಜಿಗಳ ಬಗ್ಗೆ ಎಕ್ಸಿಕ್ಯೂಟಿವ್‌ನಿಂದ ಇದುವರೆಗೂ ಏನೂ ಕೇಳಿಲ್ಲ ಎಂದು ಅದು ಹೇಳಿದೆ.

ಗೂಗಲ್ ಏನು ಹೇಳಿದೆ?

ಕಚೇರಿಗಳಲ್ಲಿ ನಡೆದ ಪ್ರತಿಭಟನೆಗಳ ವರದಿಗಳ ಬಗ್ಗೆ ನೋಡಿದ್ದೀರಿ, ಕೇಳಿದ್ದೀರಿ. ದುರದೃಷ್ಟವಶಾತ್ ಹಲವಾರು ಉದ್ಯೋಗಿಗಳು ನ್ಯೂಯಾರ್ಕ್ ಮತ್ತು ಸನ್ನಿವೇಲ್‌ನಲ್ಲಿರುವ ಕಟ್ಟಡಗಳಿಗೆ ಸೇರಿದ ಆಸ್ತಿಗೆ ಹಾನಿಗೊಳಿಸಿದ್ದಾರೆ. ಇತರ ಸಿಬ್ಬಂದಿಯ ಕೆಲಸಕ್ಕೆ ಅಡ್ಡಿ ಮಾಡಿದ್ದಾರೆ. ಅವರ ನಡವಳಿಕೆಯು ಸ್ವೀಕಾರಾರ್ಹವಲ್ಲ. ಇದು ಇತರ ಸಹೋದ್ಯೋಗಿಗಳಲ್ಲಿ ಬೆದರಿಕೆಯನ್ನುಂಟು ಮಾಡಿತು. ಹೀಗಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಉದ್ಯೋಗಿಗಳನ್ನು ತನಿಖೆಯ ಅಡಿಯಲ್ಲಿ ಇರಿಸಿದ್ದೇವೆ. ನಮ್ಮ ಸಿಸ್ಟಮ್‌ಗಳಿಗೆ ಅವರ ಪ್ರವೇಶವನ್ನು ಕಡಿತಗೊಳಿಸಿದ್ದೇವೆ. ತನಿಖೆಯ ಬಳಿಕ ಇಪ್ಪತ್ತೆಂಟು ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ. ಇನ್ನೂ ತನಿಖೆ ಮುಂದುವರಿಯಲಿದೆ. ಅಗತ್ಯವಿರುವಂತೆ ಕ್ರಮ ತೆಗೆದುಕೊಳ್ಳುತ್ತೇವೆ.

ಈ ರೀತಿಯ ವರ್ತನೆಗೆ ನಮ್ಮ ಕೆಲಸದ ಸ್ಥಳದಲ್ಲಿ ಸ್ಥಾನವಿಲ್ಲ ಮತ್ತು ನಾವು ಅದನ್ನು ಸಹಿಸುವುದಿಲ್ಲ. ನಮ್ಮ ನೀತಿ ಸಂಹಿತೆ ಮತ್ತು ಕಿರುಕುಳ, ತಾರತಮ್ಯ, ಪ್ರತೀಕಾರ, ನಡವಳಿಕೆಯ ಮಾನದಂಡಗಳು ಮತ್ತು ಕಾರ್ಯಸ್ಥಳದ ಕಾಳಜಿಗಳನ್ನು ಒಳಗೊಂಡಂತೆ ಎಲ್ಲಾ ಉದ್ಯೋಗಿಗಳು ಅನುಸರಿಸಬೇಕಾದ ಬಹು ನೀತಿಗಳನ್ನು ಇದು ಸ್ಪಷ್ಟವಾಗಿ ಉಲ್ಲಂಘಿಸುತ್ತದೆ. ನೀತಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಂಪೆನಿಯು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದೆ.

Continue Reading
Advertisement
Modi in Karnataka PM Modi to address rally in Bengaluru Here live video
Lok Sabha Election 202419 mins ago

Modi in Karnataka: ಬೆಂಗಳೂರಲ್ಲಿ ಮೋದಿ ಸಮಾವೇಶ; ಇಲ್ಲಿದೆ LIVE ವಿಡಿಯೊ

Narendra Modi
ದೇಶ20 mins ago

Narendra Modi: ಅಮೇಥಿಯಂತೆ ವಯನಾಡಿನಲ್ಲೂ ರಾಹುಲ್‌ ಗಾಂಧಿಗೆ ಸೋಲು; ಮೋದಿ ಭವಿಷ್ಯ!

Horseshoe Septum Ring Fashion
ಫ್ಯಾಷನ್21 mins ago

Horseshoe Septum Ring Fashion: ಅಲ್ಟ್ರಾ ಮಾಡರ್ನ್‌ ಸ್ಟೈಲಿಂಗ್‌ ಪ್ರಿಯರ ಮನಗೆದ್ದ ಹಾರ್ಸ್‌ ಶೂ ಸೆಪ್ಟಮ್‌ ರಿಂಗ್‌

Mrunal Thakur and Siddhant Chaturvedi to start shoot
ಟಾಲಿವುಡ್21 mins ago

Mrunal Thakur: ಸಿದ್ಧಾಂತ್ ಚತುರ್ವೇದಿ ಜತೆ ಮೃಣಾಲ್ ಠಾಕೂರ್ ರೊಮ್ಯಾನ್ಸ್‌!

IPL 2024
ಕ್ರೀಡೆ23 mins ago

IPL 2024: ‘ಕ್ಯಾಚ್ ಆಫ್ ದಿ ಐಪಿಎಲ್ 2024’; ಜಡೇಜಾ ಫ್ಲೈಯಿಂಗ್ ಕ್ಯಾಚ್​ಗೆ ಶಬ್ಬಾಶ್ ಎಂದ ರವಿಶಾಸ್ತ್ರಿ

Viral Video
ವೈರಲ್ ನ್ಯೂಸ್23 mins ago

Viral Video: ಯುವತಿ ತಲೆಗೆ ಬಲವಂತವಾಗಿ ಹಿಜಾಬ್‌ ಹಾಕಿದ ಪಾಕ್‌ ಯುವಕ; ಮುಂದೇನಾಯ್ತು?

Murder Case
ಬೆಂಗಳೂರು24 mins ago

Murder case : ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

Lok Sabha Election 2024
ಕರ್ನಾಟಕ27 mins ago

Lok Sabha Election 2024: ನಾಚಿಗೆ ಇಲ್ಲದೆ 3 ಸೀಟಿಗಾಗಿ ಬಿಜೆಪಿ ಜತೆ ಹೋಗಿದ್ದಾರೆ: ದೇವೇಗೌಡರ ವಿರುದ್ಧ ಸಿಎಂ ವಾಗ್ದಾಳಿ

Lok Sabha Election 2024
Lok Sabha Election 202439 mins ago

Lok Sabha Election 2024: ಮೊದಲ ಹಂತದ ಮತದಾನ ವೇಳೆ ಗುಂಡಿನ ದಾಳಿ ನಡೆಸಿದ್ದ ಮೂವರ ಬಂಧನ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ45 mins ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ45 mins ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20241 hour ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ5 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ6 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌