Invest Karnataka 2022 | ಹೂಡಿಕೆ ಪ್ರಸ್ತಾಪಗಳ ಅನುಷ್ಠಾನದಲ್ಲಿ ಈ ಬಾರಿ ಪ್ರಗತಿ: ಸಿಎಂ ಬೊಮ್ಮಾಯಿ - Vistara News

ಇನ್ವೆಸ್ಟ್ ಕರ್ನಾಟಕ

Invest Karnataka 2022 | ಹೂಡಿಕೆ ಪ್ರಸ್ತಾಪಗಳ ಅನುಷ್ಠಾನದಲ್ಲಿ ಈ ಬಾರಿ ಪ್ರಗತಿ: ಸಿಎಂ ಬೊಮ್ಮಾಯಿ

ಈ ಹಿಂದಿನ ಹೂಡಿಕೆದಾರರ ಸಮಾವೇಶಗಳಿಗೆ ಹೋಲಿಸಿದರೆ ಈ ವರ್ಷ ಈಗಾಗಲೇ ಅನುಷ್ಠಾನದಲ್ಲಿ ಪ್ರಗತಿ ಸಂಭವಿಸಿದೆ (Invest Karnataka 2022) ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಅಂಕಿ ಅಂಶಗಳ ಸಹಿತ ವಿವರಿಸಿದ್ದಾರೆ.

VISTARANEWS.COM


on

CM basavaraj bommai tries to avoid escalation in rowdy issue
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಉದ್ಯಮ ಸಂಬಂಧಿತ ಹೂಡಿಕೆಯ ಪ್ರಸ್ತಾಪಗಳ ಅನುಷ್ಠಾನದಲ್ಲಿ (Invest Karnataka 2022 ) ನಮ್ಮ ಸರ್ಕಾರದ ಅವಧಿಯಲ್ಲಿ ಹಿಂದಿನ ಜಿಮ್‌ ಸಮಾವೇಶಕ್ಕಿಂತಲೂ ಹೆಚ್ಚು ಪ್ರಗತಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಮೊದಲ ಜಿಮ್ ಸಮಾವೇಶ 2000 ನೇ ಇಸವಿಯಲ್ಲಿ ನಡೆಯಿತು. ಈ ಸಮಾವೇಶದಲ್ಲಿ 27,057 ಕೋಟಿ ಒಪ್ಪಂದ ಪ್ರಸ್ತಾಪವಾಯಿತು. ಈ ಪೈಕಿ 12 ಸಾವಿರ ಕೋಟಿ ರೂ. ಹೂಡಿಕೆಯ ಅನುಷ್ಠಾನವಾಗಿದೆ. ಅಂದರೆ ಶೇ.೪೪% ಅನುಷ್ಠಾನವಾಗಿದೆ. 2010 ರಲ್ಲಿ 3,94,768 ಕೋಟಿ ಒಡಂಬಡಿಕೆಯಾಗಿದೆ. 14% ಮಾತ್ರ ಅನುಷ್ಠಾನವಾಗಿತ್ತು. 2012 ರಲ್ಲಿ 6,77,168 ಕೋಟಿ ಒಡಂಬಡಿಕೆಯಾಗಿತ್ತು. ಕೇವಲ 8% ಮಾತ್ರ ಕಾರ್ಯಗತವಾಗಿತ್ತು.

2016 ರಲ್ಲಿ 3 ಲಕ್ಷದ 5 ಸಾವಿರ ಕೋಟಿ ಒಡಂಬಡಿಕೆಯಾಗಿದೆ. ಶೇಕಡಾ 15% ಮಾತ್ರ ಕಾರ್ಯರೂಪಕ್ಕೆ ಬಂದಿದೆ. ಈ ರೀತಿ ಪುನಾರವರ್ತನೆಯಾಗಬಾರದು. ಈ ಬಾರಿ 9.08 ಲಕ್ಷ ಕೋಟಿ ಒಡಂಬಡಿಕೆಯಾಗಿದೆ. ಅದರಲ್ಲಿ ಈಗಾಗಲೇ 2.83 ಲಕ್ಷ ಕೋಟಿ ಹೂಡಿಕೆಯ ಒಡಂಬಡಿಕೆಗೆ ಅನುಮೋದನೆ ಸಿಕ್ಕಿದೆ. ಅಂದರೆ ಶೇ.19% ಗೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ ಎಂದು ಮುಖ್ಯಮಂತ್ರಿಯವರು ವಿವರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಇನ್ವೆಸ್ಟ್ ಕರ್ನಾಟಕ

Suicide Case : ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ

Suicide Case : ಹಲವು ಸಮಯದಿಂದ ಕಾಡುತ್ತಿದ್ದ ಹೊಟ್ಟೆ ನೋವನ್ನು ತಾಳಲಾರದೆ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಚನ್ನಗಿರಿ ಬಳಿ ಘಟನೆ ನಡೆದಿದೆ.

VISTARANEWS.COM


on

Dalit Woman Raped In Uttar Pradesh
Koo

ದಾವಣಗೆರೆ: ಕೆಲವೊಮ್ಮೆ ಕೆಲವು ಆರೋಗ್ಯ ಸಮಸ್ಯೆಗಳು ಎಷ್ಟು ತೀವ್ರವಾಗಿರುತ್ತವೆ ಎಂದರೆ ಇದರಿಂದ ಮುಕ್ತಿ ಸಿಗಬೇಕು ಎಂದರೆ ಸಾವೇ ದಾರಿ (Suicide Case) ಅನಿಸಿಬಿಡುತ್ತದೆ. ಬೇರೆ ದಾರಿಗಳನ್ನು ಕಂಡುಕೊಳ್ಳುವ ವ್ಯವಧಾನ, ಹಣಕಾಸಿನ ವ್ಯವಸ್ಥೆಗಳೂ ಕೆಲವೊಮ್ಮೆ ಕೈಕೊಟ್ಟಿರುತ್ತವೆ. ದಾವಣಗೆರೆ ಜಿಲ್ಲೆಯ (Davanagere News) ಚನ್ನಗಿರಿ ತಾಲೂಕಿನ ಈ ಶಿಕ್ಷಕನಿಗೆ ಅದೇನಾಗಿತ್ತೋ ಗೊತ್ತಿಲ್ಲ. ಆದರೆ, ದೀರ್ಘ ಕಾಲದಿಂದ ಕಾಡುತ್ತಿದ್ದ ಹೊಟ್ಟೆ ನೋವು (Stomach Pain) ತಾಳಲಾರದೆ ಅವರು ಕೆರೆಗೆ ಹಾರಿ ಅತ್ಮಹತ್ಯೆ (Teacher suicide) ಮಾಡಿಕೊಂಡಿದ್ದಾರೆ.

ಚನ್ನಗಿರಿ ತಾಲೂಕಿನ ಹಿರೇಉಡ ಗ್ರಾಮದ ನಿವಾಸಿ ಶಿಕ್ಷಕರಾಗಿರುವ ಕೃಷ್ಣ ನಾಯ್ಕ್ (42) ಅವರು ಹೆದ್ದಾರಿ ಪಕ್ಕದಲ್ಲಿರುವ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.

ಮೈಸೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಕೃಷ್ಣ ನಾಯ್ಕ್ ಅವರು ಅನೇಕ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ನಾಲ್ಕು ದಿನದ ಹಿಂದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಕೃಷ್ಣ ನಾಯ್ಕ್ ಅವರು ಬಳಿಕ ಮನೆಗೆ ಬಂದಿದ್ದರು.

ಗುರುವಾರ ಮುಂಜಾನೆ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಜನರಿಗೆ ಹೆದ್ದಾರಿ ಪಕ್ಕದ ಹೊಂಡದ ನೀರಿನಲ್ಲಿ ಕೃಷ್ಣನಾಯ್ಕ್ ಮೃತದೇಹ ಕಂಡಿತು. ಕೂಡಲೇ ಸಾರ್ವಜನಿಕರು ಚನ್ನಗಿರಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಬಸ್ಸಿನಿಂದ ಇಳಿಯುತ್ತಿದ್ದ ಮಹಿಳೆಗೆ ಗುದ್ದಿ ಸಾಯಿಸಿದ ಲಾರಿ

ಚಿತ್ರದುರ್ಗ: ಬಸ್‌ನಿಂದ ಕೆಳಗಿಳಿಯುವ ವೇಳೆ ಮಹಿಳೆಯೊಬ್ಬರಿಗೆ ಲಾರಿ ಡಿಕ್ಕಿಯಾಗಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿತ್ರದುರ್ಗದ ಹಿರಿಯೂರಿನ ಹೊರವಲಯದ ಎನ್‌ಎಚ್ 4 ರಸ್ತೆಯ ಮದ್ದೇರಹಳ್ಳ ಬಳಿ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಪಂಚರ್‌ ಆಗಿದ್ದ ಹಿನ್ನೆಲೆಯಲ್ಲಿ, ಎಲ್ಲರನ್ನು ಕೆಳಗಿಳಿಸಲಾಗುತ್ತಿತ್ತು. ಈ ವೇಳೆ ಮಲ್ಲಮ್ಮ ಎಂಬ ಮಹಿಳೆ ಕೆಳಗಿಳಿಯುತ್ತಿದ್ದಾಗ, ರಭಸವಾಗಿ ಬಂದ ಲಾರಿ ಗುದ್ದಿದೆ. ಲಾರಿ ಹೊಡೆದ ರಭಸಕ್ಕೆ ಮಲ್ಲಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ ಸವಾರನನ್ನು ಸಾಯಿಸಿ ಅಂಗಡಿಗೆ ನುಗ್ಗಿದ ಲಾರಿ

ಬೆಂಗಳೂರು: ನಗರದ ಬ್ಯಾಡರಹಳ್ಳಿ ಬಳಿ ಗೂಡ್ಸ್ ಲಾರಿ ಬೈಕ್‌ ಸವಾರನಿಗೆ ಡಿಕ್ಕಿ ಹೊಡೆದು ಸಾಯಿಸಿದ್ದು, ಘಟನೆಯ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಇದು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ವೇಗವಾಗಿ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಲಾರಿ ಡಿವೈಡರ್ ಮೇಲೆ ಹತ್ತಿ ಅಂಗಡಿಯೊಳಗೆ ನುಗ್ಗಿತ್ತು. ಅಂಗಡಿಗೆ ಅಪ್ಪಳಿಸುವ ಮುನ್ನ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ರಭಸಕ್ಕೆ ಬೈಕ್ ಸವಾರ 10 ಅಡಿಯಷ್ಟು ದೂರ ಹಾರಿ ಬಿದ್ದಿದ್ದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಇಳಿದು ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಲೆಮರೆಸಿಕೊಂಡಿರುವ ಚಾಲಕನಿಗಾಗಿ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ತಲಾಶೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Human Sacrifice: ತನ್ನ ತಾಯ್ತನಕ್ಕಾಗಿ 4 ವರ್ಷದ ಮಗನನ್ನು ನರಬಲಿ ಕೊಟ್ಟ ಮಲತಾಯಿ, ಮಾತೃಕುಲಕ್ಕೆ ಈಕೆ ಕಳಂಕ

Continue Reading

ಇನ್ವೆಸ್ಟ್ ಕರ್ನಾಟಕ

Karnataka Industries: ಕೈಗಾರಿಕಾ ಇಲಾಖೆಗೆ ಅರಣ್ಯ ಸೇವೆ ಅಧಿಕಾರಿ ನೇಮಕ: ಉದ್ಯಮಿಗಳಿಗೆ ಸರ್ಕಾರದ ಭರವಸೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆ ಉತ್ತೇಜಿಸಲು ಸರ್ಕಾರ ಆಯ್ದ 7 ವಲಯಗಳಲ್ಲಿ ವಿಷನ್ ಗ್ರೂಪ್‌ಗಳನ್ನು ರಚಿಸಲಾಗುವುದು ಎಂದು ಎಂ.ಬಿ. ಪಾಟೀಲ್‌ ಘೋಷಣೆ ಮಾಡಿದರು.

VISTARANEWS.COM


on

MB Patil meeting industrialists
Koo

ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆಗೆ ಶೀಘ್ರ ಅನುಮತಿ ಸಿಗುವ ಹಾಗೆ ಮಾಡಲು ಭಾರೀ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯಲ್ಲೇ ಭಾರತೀಯ ಅರಣ್ಯ ಸೇವೆಯ ಅಧಿಕಾರಿಯನ್ನು ನಿಯೋಜಿಸಲು ಸರ್ಕಾರ ನಿರ್ಧರಿಸಿದೆ. ಖಾಸಗಿ ಹೋಟೆಲಿನಲ್ಲಿ ರಾಜ್ಯದ ಪ್ರಮುಖ ಕೈಗಾರಿಕೋದ್ಯಮಿಗಳೊಂದಿಗೆ ಸೋಮವಾರ ಸಂಜೆ ವಿಚಾರ ವಿನಿಮಯ ಸಂದರ್ಭದಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ಈ ಭರವಸೆ ನೀಡಿದ್ದಾರೆ.

ಪಿಸಿಸಿಎಫ್‌ ದರ್ಜೆಯ ಐಎಫ್‌ಎಸ್‌ ಅಧಿಕಾರಿಯನ್ನು ನೇಮಕ ಮಾಡುವುದರಿಂದ ಪರಿಸರ ಸಂಬಂಧಿ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಸಿಗಲಿದೆ. ಈ ಹಿಂದೆ ತಾವು ನೀರಾವರಿ ಸಚಿವರಾಗಿದ್ದಾಗ ಆ ಇಲಾಖೆಯಲ್ಲಿನ ಪರಿಸರ ಸಂಬಂಧಿ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಪಿಸಿಸಿಎಫ್ ದರ್ಜೆಯ ಅಧಿಕಾರಿಯನ್ನು ನೇಮಿಸಿ ಪರಿಹಾರ ಕೊಂಡುಕೊಳ್ಳಲಾಗಿತ್ತು. ಅದೇ ಮಾದರಿಯನ್ನು ಇಲ್ಲಿಯೂ ಅನುಸರಿಸಲಾಗುತ್ತದೆ ಎಂದು ಉದ್ಯಮಿಗಳ ಗಮನಕ್ಕೆ ಎಂ.ಬಿ. ಪಾಟೀಲ್‌ ತಂದಿದ್ದಾರೆ. ಇದಕ್ಕೆ ಉದ್ಯಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಲಯವಾರು 7 ವಿಷನ್ ಗ್ರೂಪ್‌ ರಚನೆ
ರಾಜ್ಯದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆ ಉತ್ತೇಜಿಸಲು ಸರ್ಕಾರ ಆಯ್ದ 7 ವಲಯಗಳಲ್ಲಿ ವಿಷನ್ ಗ್ರೂಪ್ ಗಳನ್ನು (ದೂರದರ್ಶಿ ತಂಡಗಳು) ರಚಿಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ ಘೋಷಣೆ ಮಾಡಿದರು.

ಉದ್ಯಮಿಗಳು, ಉನ್ನತಾಧಿಕಾರಿಗಳು ಮತ್ತು ಶಿಕ್ಷಣ ತಜ್ಞರು ಇರುವ ಈ ವಿಷನ್ ಗ್ರೂಪ್ ಗಳು ಸೂಕ್ತ ಮಾರ್ಗದರ್ಶನ ನೀಡಲಿವೆ. ಏರೋಸ್ಪೇಸ್‌ ಮತ್ತು ರಕ್ಷಣೆ, ಮಷೀನ್‌ ಟೂಲ್ಸ್, ಇಎಸ್‌ಡಿಎಂ, ಫಾರ್ಮಾ, ಕಬ್ಬಿಣ-ಉಕ್ಕು-ಸಿಮೆಂಟ್‌ ಉತ್ಪಾದನಾ ಕ್ಷೇತ್ರಗಳನ್ನೊಳಗೊಂಡ ಕೋರ್‌ ಮ್ಯಾನುಫ್ಯಾಕ್ಚರಿಂಗ್‌, ಸ್ಟಾರ್ಟಪ್ಸ್‌ (ಐ.ಟಿ‌.ಯೇತರ) ಮತ್ತು ಆಟೋ/ವಿದ್ಯುತ್‌ಚಾಲಿತ ಇವು ಹೊಸದಾಗಿ ವಿಷನ್ ಗ್ರೂಪ್ ರಚನೆಯಾಗಲಿರುವ ವಲಯಗಳಾಗಿವೆ.

ರಾಜ್ಯದಲ್ಲಿ ಈ ವಲಯಗಳಿಗಾಗಿ ವಿಷನ್ ಗ್ರೂಪ್‌ಗಳು ರಚನೆಯಾಗುತ್ತಿರುವುದು ಇದೇ ಮೊದಲು. ಇದಕ್ಕೆ ಮುಂಚೆ ಒಟ್ಟಾರೆ ಉದ್ಯಮದ ಅಭಿವೃದ್ಧಿಗೆ ವಿಷನ್ ಗ್ರೂಪ್ ಇತ್ತು. ಆದರೆ ಇದು ವಲಯವಾರು ಮಟ್ಟದಲ್ಲಿ ಇರಲಿಲ್ಲ. ಮೇಲೆ ತಿಳಿಸಿದ ವಲಯಗಳ ಜೊತೆಗೆ ಭವಿಷ್ಯದ ಸಂಚಾರ ವ್ಯವಸ್ಥೆ, ಗ್ರೀನ್‌ ಹೈಡ್ರೋಜನ್, ಆಹಾರ ಸಂಸ್ಕರಣೆ, ಜವಳಿ, ಉಗ್ರಾಣ ಮತ್ತು ಲಾಜಿಸ್ಟಿಕ್ಸ್‌ ಗಳನ್ನು ಆದ್ಯತೆಯ ವಲಯಗಳೆಂದು ಗುರುತಿಸಲಾಗಿದೆ ಎಂದು ಎಂ.ಬಿ. ಪಾಟೀಲ್‌ ಹೇಳಿದರು.

ವಿದ್ಯುತ್‌ಚಾಲಿತ ವಾಹನ ತಯಾರಿಕೆ ಕ್ಷೇತ್ರದಲ್ಲಿ ಈಗಾಗಲೇ 40 ಸಾವಿರ ಕೋಟಿ ರೂ. ಹೂಡಿಕೆಯಾಗಿದೆ. ದೇಶದ ಪ್ರಪ್ರಥಮ ಗ್ರೀನ್‌ ಹೈಡ್ರೋಜನ್‌ ಕ್ಲಸ್ಟರ್ ಮಂಗಳೂರಿನಲ್ಲಿ ತಲೆಯೆತ್ತಲಿದ್ದು, ಆಸಕ್ತ ಉದ್ಯಮಿಗಳು ಇದಕ್ಕೆ 2.8 ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದು ಈಗಾಗಲೇ ಖಾತ್ರಿಗೊಂಡಿದೆ. ಇದಕ್ಕೆ ಬೇಕಿರುವ ಭೂಮಿ, ನೀರು ಮತ್ತಿತರ ಮೂಲಸೌಕರ್ಯ ಒದಗಿಸಲು ಸರ್ಕಾರ ಒತ್ತು ನೀಡಲಿದೆ.

ಏರೋಸ್ಪೇಸ್‌ ಮತ್ತು ರಕ್ಷಣಾ ಕ್ಷೇತ್ರಕ್ಕೆ ಉತ್ತೇಜನ ನೀಡಲು ದೇವನಹಳ್ಳಿಯ ಆರ್‌ & ಡಿ ಪಾರ್ಕ್‌ನಲ್ಲಿ ಕರ್ನಾಟಕ ಏರೋಸ್ಪೇಸ್‌ ತಂತ್ರಜ್ಞಾನ ಕೇಂದ್ರ ತೆರೆಯಲು ಯೋಜಿಸಲಾಗಿದೆ. ಜತೆಗೆ, ಸರ್ಕಾರವು ರಾಜ್ಯದಲ್ಲಿ 2.5 ಲಕ್ಷ ಕೋಟಿ ರೂ. ಹೂಡಿಕೆಗೆ ಇರುವ ಅವಕಾಶಗಳನ್ನು ಸಮರ್ಥ ರೀತಿಯಲ್ಲಿ ಬಳಸಿಕೊಳ್ಳಲಿದೆ.

ಸಭೆಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ಗೀತಾಂಜಲಿ ಕಿರ್ಲೋಸ್ಕರ್, ಟಾಟಾ ಮೋಟಾರ್‍ಸ್‌ನ ಸುಶಾಂತ್‌ ನಾಯಕ್‌, ಟೆಕ್ಸಾಸ್‌ ಇನ್‌ಸ್ಟ್ರುಮೆಂಟ್ಸ್‌ನ ರಾಜೀವ್‌ ಕುಶೂ, ಫಾಕ್ಸ್‌ಕಾನ್‌ ಕಂಪನಿಯ ಉನ್ನತಾಧಿಕಾರಿ ವಿನ್ಸೆಂಟ್‌, ಏಷ್ಯನ್‌ ಪೇಂಟ್ಸ್‌ನ ಅಮಿತ್‌ ಕುಮಾರ್‌ ಸಿಂಗ್‌ ಸೇರಿದಂತೆ 30ಕ್ಕೂ ಹೆಚ್ಚು ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಉದ್ಯಮ ವಲಯದ ಸಂಘಟನೆಗಳಾದ ಸಿಐಐ, ಎಫ್‌ಐಸಿಸಿಐ, ಎಫ್‌ಕೆಸಿಸಿಐ, ಬಿಸಿಐಸಿ, ಕಾಸಿಯಾ, ಲಘು ಉದ್ಯೋಗ ಭಾರತಿ, ಎಲೆಕ್ಟ್ರಾನಿಕ್‌ ಸಿಟಿ ಇಂಡಸ್ಟ್ರೀಸ್‌ ಅಸೋಸಿಯೇಷನ್‌, ಐಎಂಟಿಎಂಎ, ಅವೇಕ್‌, ಅಸೋಚಂ ಮುಂತಾದವುಗಳೂ ಭಾಗವಹಿಸಿದ್ದವು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್‌ ಕೃಷ್ಣ, ಕೆಐಎಡಿಬಿ ಸಿಇಒ ಗಿರೀಶ್ ಮುಂತಾದವರು ಉಪಸ್ಥಿತರಿದ್ದರು.

ಉದ್ಯಮಸ್ನೇಹಿ ವಾತಾವರಣ
ಒಟ್ಟಾರೆ ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಲು ಪೂರಕವಾದ ಕ್ರಮಗಳನ್ನು ವಹಿಸಲಾಗುವುದು. ಹೆಸರಿಗಷ್ಟೇ ಇರುವ ಏಕಗವಾಕ್ಷಿ ಯೋಜನೆಗೆ ನಿಜ ಅರ್ಥದಲ್ಲಿ ಬದಲಾವಣೆ ತಂದು ಅನಗತ್ಯ‌ ಅಡಚಣೆಗಳನ್ನು ನಿರ್ಮೂಲನೆ ಮಾಡಲಾಗುವುದು. ಬಹುಗವಾಕ್ಷಿಗೆ ಅವಕಾಶ ಇಲ್ಲದಂತೆ‌ ತ್ವರಿತವಾಗಿ ಅನುಮತಿಗಳು ಸಿಗುವ ಹಾಗೆ ಮಾಡಲಾಗುವುದು. ಕೈಗಾರಿಕೆ ಬೆಳವಣಿಗೆಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ತೆರೆದ ಮನಸ್ಸಿನಿಂದ ಪರಿಶೀಲಿಸಲಾಗುವುದು ಎಂದು ಉದ್ಯಮಿಗಳ ಪ್ರಶ್ನೆಗೆ ಸಚಿವ ಎಂ.ಬಿ. ಪಾಟೀಲ ಉತ್ತರಿಸಿದರು.

ಇದನ್ನೂ ಓದಿ: Aero India 2023: ಭಾರತದ ರಕ್ಷಣಾ ರಫ್ತು 2024ರಲ್ಲಿ 500 ಕೋಟಿ ಡಾಲರ್‌ ಗುರಿ: ಹೂಡಿಕೆದಾರರಿಗೆ ಸುವರ್ಣಾವಕಾಶ ಎಂದ ಪ್ರಧಾನಿ ಮೋದಿ

Continue Reading

ಇನ್ವೆಸ್ಟ್ ಕರ್ನಾಟಕ

Karnataka Election : ಬಿಜೆಪಿ ಶೀಘ್ರದಲ್ಲೇ ಕೋಮು ಗಲಭೆ ಮಾಡಿಸಲಿದೆ: ಸಂಸದ ಡಿ.ಕೆ. ಸುರೇಶ್‌ ಹೇಳಿಕೆ

ಕರ್ನಾಟಕ ಚುನಾವಣೆ (Karnataka Election) ಸಮಯದಲ್ಲಿ ರಾಜ್ಯದಲ್ಲಿ ಕೋಮುಗಲಭೆಗಳನ್ನು ಬಿಜೆಪಿ ಸೃಷ್ಟಿ ಮಾಡುವ ಸಾಧ್ಯತೆಯಿದೆ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿಕೆ ನೀಡಿದ್ದಾರೆ.

VISTARANEWS.COM


on

r ashok will defeated if dk suresh contests from padmanabhanagar
Koo

ಬೆಂಗಳೂರು: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಕೋಮುಗಲಭೆಯನ್ನು ನಡೆಸಲು ಬಿಜೆಪಿಯು ತಯಾರಿ ನಡೆಸುತ್ತಿದೆ ಎಂದು ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ತಿಳಿಸಿದ್ದಾರೆ. ಸಿ.ಟಿ. ರವಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ. ಸುರೇಶ್‌, ಚುನಾವಣೆಯಲ್ಲಿ ಗೆಲ್ಲುವುದಕ್ಕೋಸ್ಕರ (Karnataka Election) ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದರು.

ಸಿ.ಟಿ. ರವಿಯವರು ನಮ್ಮ ಸರ್ವೆ ವಿಚಾರದಲ್ಲಿ ವ್ಯಂಗ್ಯ ಮಾಡಿದ್ದಾರೆ ಎಂದ ಡಿ.ಕೆ. ಸುರೇಶ್‌, ಬಿಜೆಪಿ ಪಕ್ಷ ಶೀಘ್ರದಲ್ಲೇ ಕೋಮು ಗಲಭೆ ಮಾಡಿಸಲು ಸಿದ್ದವಾದಂತೆ ಕಾಣುತ್ತಿದೆ. ಕರಾವಳಿ ಬೆಂಗಳೂರು ಬೇರೆ ಕಡೆ ಕೋಮು ಗಲಭೆ ಮಾಡಿಸಲು ಸಿದ್ದತೆ ಮಾಡಿಕೊಂಡಂತೆ ಕಾಣ್ತಿದೆ. ರಾಜ್ಯದಲ್ಲಿ ಅಶಾಂತಿ ಮೂಡಿಸಲು ಸಿಟಿ ರವಿ ಪಾಕಿಸ್ತಾನ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಪದೇ ಪದೇ ಪಾಕಿಸ್ತಾನ ವಿಚಾರ ತರುವಂತಹ ಸಿಟಿ ರವಿ ವಿರುದ್ದ ಕ್ರಮ ಆಗಬೇಕು. ಬಿಜೆಪಿಯವರು ನೀಚರು, ಅವರು ಯಾವ ಹಂತಕ್ಕೆ ಬೇಕಾದರೂ ಹೋಗ್ತಾರೆ.

ರಾಜ್ಯದ ಬಗ್ಗೆ ಅವರ ಗಮನ ಇಲ್ಲ, ಅವರ ನಂಟು ಇರುವುದೆಲ್ಲ ಪಾಕಿಸ್ತಾನದ ವಿಚಾರಕ್ಕೆ ಮಾತ್ರ. ಮೋದಿ ಯಾಕೆ ಬರ್ತಾ ಇದಾರೆ ರಾಜ್ಯಕ್ಕೆ? ಅವರ ಮನ್ ಕಿ ಬಾತ್ ನಲ್ಲಿ ಭ್ರಷ್ಟಾಚಾರ ಕಾಣಸ್ತಾ ಇಲ್ವಾ? ಬಿಜೆಪಿಯವರಿಗೆ ನಾಚಿಕೆ ಆಗಬೇಕು, ಅವರ ಪಕ್ಷದ ನಾಯಕರನ್ನು ಕಂಟ್ರೋಲ್ ಮಾಡಲು ಆಗದವರು ಡಿಕೆಶಿವಕುಮಾರ್ ಬಗ್ಗೆ ಮಾತನಾಡ್ತಾರಾ? ಡಿ.ಕೆ. ಶಿವಕುಮಾರ್ ಬಗ್ಗೆ ಮಾತನಾಡೋ ಯಾವ ಹಕ್ಕಿದೆ ಅವರಿಗೆ. ಪಾಕಿಸ್ತಾನ ಬೇಕಿದ್ದರೆ ಇವರು ಸೇರಿಸಿಕೊಳ್ಳಲಿ. ಪಾಕಿಸ್ತಾನದ ಹೆಸರಿಟ್ಟುಕೊಂಡು ರಾಜಕಾರಣ ಮಾಡುವುದು ನಿಮ್ಮ ಪದ್ದತಿ. ಬಿಜೆಪಿಯವರು ಏನು ಬೇಕಾದರೂ ಮಾಡ್ತಾರೆ. ರಾಜಕಾರಣಕ್ಕಾಗಿ ಕೊಲೆಗಳನ್ನು ಮಾಡಿಸ್ತಾರೆ, ಯಾರನ್ನು ಬೇಕಾದರೂ ಹೊಡಿತಾರೆ, ಯಾವ ಆಪರೇಷನ್ ಬೇಕಾದರೂ ಮಾಡ್ತಾರೆ ಎಂದರು.

ಡಾ. ಜಿ. ಪರಮೇಶ್ವರ್‌ ಅಸಮಧಾನ ವಿಚಾರ ಕುರಿತು ಪ್ರತಿಕ್ರಿಯಿಸಿ, ಪರಮೇಶ್ವರ್ ಅಸಮಧಾನವೆಲ್ಲ ಏನೂ ಇಲ್ಲ. ಒಟ್ಟಾಗಿ ಕೆಲಸ ಮಾಡ್ತಾ ಇದ್ದಾರೆ. ರಾಜೀನಾಮೆ ಕೊಟ್ಟ ಬಗ್ಗೆ ಮಾಹಿತಿ ಇಲ್ಲ. ಡಿ. ಕೆ. ಶಿವಕುಮಾರ್, ಪರಮೇಶ್ವರ್ ಒಂದೆ ನಾಣ್ಯದ ಮುಖಗಳು ಎಂದರು.

ರಾಮನಗರ ಜಿಲ್ಲೆ ರಾಜಕಾರಣದಲ್ಲಿ ಡಿ.ಕೆ. ಸಹೋದರರು ಹಾಗೂ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ನಡುವೆ ವಾಗ್ಯುದ್ಧ ಮುಂದುವರಿದಿದೆ. ಕಾಂಗ್ರೆಸ್‌ ಪಕ್ಷದ ಕುರಿತು ಅಶ್ವತ್ಥನಾರಾಯಣ ಟೀಕೆ ಮಾಡಿರುವ ಕುರಿತು ಖಾರವಾಗಿ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಸುರೇಶ್‌, ಕೆಲಸ ನೋಡೋಕೆ ಹೇಳಿ ಅವನಿಗೆ. ಅವನ ಬಗ್ಗೆ ಇನ್ನೊಂದು ದಿನ ಮಾತಾಡ್ತೀನಿ ಎಂದು ಏಕವಚನದಲ್ಲೇ ಹರಿಹಾಯ್ದಿದ್ದಾರೆ.

ಇದನ್ನೂ ಓದಿ : Karnataka Election: ಪ್ರಜಾಧ್ವನಿಗೆ ಇರುವುದು ಎರಡೇ ಬಸ್‌; 4 ಇದ್ದಿದ್ರೆ ನಾನೂ ಸಾರಥಿ ಆಗ್ತಿದ್ದೆ: ಡಾ.ಜಿ.ಪರಮೇಶ್ವರ್‌

ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ ಕುರಿತು ಪ್ರತಿಕ್ರಿಯೆ ನೀಡಿದ ಡಿ.ಕೆ. ಸುರೇಶ್‌, ಈಗಾಗಲೇ ಚುನಾವಣೆಗೆ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದೆ. ಚುನಾವಣಾ ಸಮಿತಿ ಕೂಡ ಸಭೆ ಸೇರಿ ರಾಜ್ಯದ ವರಿಷ್ಟರಿಗೆ ನಮ್ಮ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕೇಂದ್ರದ ಸ್ಕ್ರೀನಿಂಗ್ ಕಮೀಟಿ ಮುಂದೆ ಆದಷ್ಟು ಬೇಗ ಕಳಿಸುತ್ತೇವೆ. ಕ್ಷೇತ್ರದಲ್ಲಿ ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗಲು ಅನುಕೂಲ ಆಗಲಿದೆ. ಯಾವ ಶಿಫಾರಸುಗಳನ್ನು ಮಾಡಿದ್ದೇವೆ ಎಲ್ಲವೂ ಸ್ಕ್ರೀನಿಂಗ್ ಕಮಿಟಿ ಮುಂದೆ ಹೋಗಿ ನಿರ್ಧಾರ ಆಗಲಿದೆ ಎಂದರು.

ಬಿಜೆಪಿಯು ಭ್ರಮೆಯಲ್ಲಿ ರಾಜ್ಯವನ್ನು ಇಟ್ಟಿದೆ. ಸುಳ್ಳು ಆಶ್ವಾಸನೆ, ಸುಳ್ಳು ಭರವಸೆಗಳೆಲ್ಲವೂ ಕೂಡ ಹುಸಿಯಾಗಿದೆ. ಹಳ್ಳಿಗಳ ಮಟ್ಟದಲ್ಲಿ ಜನರು ಬಿಜೆಪಿಯಿಂದ ಬದಲಾವಣೆ ಬಯಸಿದ್ದಾರೆ. ಬಿಜೆಪಿ ಸರ್ಕಾರ ತೊಲಗಬೇಕು ಅಂತ ಜನ ಬಯಸ್ತಾ ಇದ್ದಾರೆ. ಪಕ್ಷದ ಅಧ್ಯಕ್ಷರು ಎಲ್ಲ ಕಡೆಯಿಂದಲೂ ಸರ್ವೆ ಮಾಡಿಸಿದ್ದಾರೆ ಎಂದರು.

Continue Reading

ಇನ್ವೆಸ್ಟ್ ಕರ್ನಾಟಕ

BTS 2022 | ತಂತ್ರಜ್ಞಾನ ರಾಜಧಾನಿ ಬೆಂಗಳೂರು ಕುರಿತು ದಿಗ್ಗಜರು ಹೇಳಿದ್ದೇನು?

25 ವರ್ಷದ ಬೆಂಗಳೂರು ಟೆಕ್‌ ಸಮ್ಮಿಟ್‌ (Bengaluru Tech Summit- BTS 2022) ಆಯೋಜನೆಗೊಂಡಿದ್ದು, ಅನೇಕ ದೇಶಗಳ ಪ್ರಮುಖರು ಭಾಗವಹಿಸಿ ಮಾತನಾಡಿದ್ದಾರೆ.

VISTARANEWS.COM


on

bts 2022 bengaluru tech summit 2022
Koo

ಬೆಂಗಳೂರು: ಅರಮನೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ಬೆಂಗಳೂರು ಟೆಕ್‌ ಸಮ್ಮಿಟ್‌-2022ರಲ್ಲಿ (BTS 2022) ಪ್ರಧಾನಿ ನರೇಂದ್ರ ಮೋದಿ ಉದ್ಘಾಟನಾ ಮಾತುಗಳನ್ನಾಡಿದ್ದಾರೆ. ಪ್ರಧಾನಿ ನಂತರದಲ್ಲಿ ಐಟಿಬಿಟಿ ಕ್ಷೇತ್ರಗಳ ಅನೇಕ ದಿಗ್ಗಜರು ಬೆಂಗಳೂರು, ಭಾರತದ ತಂತ್ರಜ್ಞಾನದ ಕುರಿತು ತಮ್ಮ ಅನಿಸಿಕೆಗಳಣ್ನು ಹಂಚಿಕೊಂಡಿದ್ದಾರೆ.

ಫಿನ್ಲೆಂಡ್‌ ವಿಜ್ಞಾನ ಮತ್ತು ಸಂಸ್ಕೃತಿ ಸಚಿವ ಪಿಟ್ರಿ ಹಂಕನೆನ್‌

BTS 2022

ಬೆಂಗಳೂರು ಮತ್ತೊಮ್ಮೆ ವಿಶ್ವದ ಅನ್ವೇಷಣಾ ನಗರ ಪಟ್ಟಿಯಲ್ಲಿ ಸ್ಥಾನ ಪಡೆದದ್ದಕ್ಕೆ ಅಭಿನಂದನೆಗಳು. ನೋಕಿಯಾ ಸಂಸ್ಥೆಯು ತನ್ನ ಅತಿ ದೊಡ್ಡ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಭಾರತದಲ್ಲಿ ಹೊಂದಿದೆ. ಸಮಾಜ ಹಾಗೂ ಉದ್ಯಮದಲ್ಲಿ ಬದಲಾವಣೆ ಆಘುತ್ತಿರುವಾಗ ತಂತ್ರಜ್ಞಾನ ಅತ್ಯವಶ್ಯ. ಜಾಗತಿಕ ತಾಪಮಾನವನ್ನೂ ಡಿಜಿಟಲೀಕರಣದಿಂದ ಸಶಕ್ತವಾಗಿ ಎದುರಿಸಬಹುದು. ಮಾನವ ಕೇಂದ್ರಿತ ದತ್ತಾಂಶ ಆರ್ಥಿಕತೆಯತ್ತ ನಾವು ಗಮನ ಹರಿಸಬೇಕು. ಹಾಗೂ ಅವುಗಳನ್ನು ಜವಾಬ್ದಾರಿಯುತವಾಗಿ ಬಳಕೆ ಮಾಡಬೇಕು. ಈ ನಿಟ್ಟಿನಲ್ಲಿ ಫಿನ್ಲೆಂಡ್‌ ಹಾಗೂ ಭಾರತದ ಪಾಲುದಾರಿಕೆ ಮುಖ್ಯವಾಗಿದೆ.

ಸಾಫ್ಟ್‌ವೇರ್‌ ಪಾರ್ಕ್ಸ್‌ ಆಫ್‌ ಇಂಡಿಯಾ ಮಹಾ ನಿರ್ದೇಶಕ ಅರವಿಂದ್‌ ಕುಮಾರ್‌

BTS 2022

ಎಸ್‌ಟಿಪಿಐ ಹಾಗೂ ಕರ್ನಾಟಕ ಸರ್ಕಾರ ಅನೇಕ ದಶಕಗಳಿಂದಲೂ ಜತೆಗೆ ಕೆಲಸ ಮಾಡುತ್ತಿವೆ. ಅದರಿಂದಾಗಿ ಇಂದು ಐಟಿ ವಲಯದಲ್ಲಿ ಬಹುದೊಡ್ಡ ಆರ್ಥಿಕ ಕೊಡುಗೆ ಲಭಿಸುತ್ತಿದೆ. ದೇಶದ ಐಟಿ ಆದಾಯದಲ್ಲಿ ಕರ್ನಾಟಕ ಶೇ.40 ಪಾಲು ಹೊಂದಿದ್ದು, ಉಳಿದ ರಾಜ್ಯಗಳು ಬಹಳ ಹಿಂದೆ ಇವೆ. ಮುಂದಿನ ದಿನಗಳಲ್ಲಿ ಸ್ಟಾರ್ಟಪ್‌, ಐಒಟಿ ಸೇರಿ ಅನೇಕ ಕ್ಷೇತ್ರಗಳತ್ತ ಎಸ್‌ಟಿಪಿಐ ಗಮನ ನೀಡಲಿದೆ.

ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ ಅಧ್ಯಕ್ಷ ಬಿ.ವಿ. ನಾಯ್ಡು

BTS 2022

ಇಷ್ಟು ಪ್ರಮಾಣದಲ್ಲಿ ವಿಶ್ವದ ಯಾವುದೇ ಉತ್ಸವ ನಿರಂತರವಾಗಿ ನಡೆದಿಲ್ಲ. ಇಷ್ಟು ಸುದೀರ್ಘ ಸಮಯದ ನಂತರವೂ ಅದೇ ಉತ್ಸಾಹ ಉಳಿಸಿಕೊಳ್ಳಲು ಸಚಿವರಾದ ಡಾ. ಸಿ.ಎನ್‌. ಅಶ್ವತ್ಥನಾರಾಯಣ, ಮುರುಗೇಶ್‌ ನಿರಾಣಿ ಜತೆಗೆ ಎಲ್ಲ ಅಧಿಕಾರಿಗಳೂ ಕಾರಣರಾಗಿದ್ದಾರೆ. ಕರ್ನಾಟಕದಿಂದ ಸುಮಾರು 40% ಕೊಡುಗೆ ಐಟಿ ಕ್ಷೇತ್ರಕ್ಕೆ ಲಭಿಸುತ್ತಿದ್ದು, ಈ ಬೆಳವಣಿಗೆಯನ್ನು ಬೆಂಗಳೂರನ್ನು ಹೊರತುಪಡಿಸಿ ಉಳಿದೆಡೆಗೆ ಪಸರಿಸಬೇಕಿದೆ. ಇದಕ್ಕಾಗಿ ಎಲ್ಲರೂ ಕಾರ್ಯಪ್ರವೃತ್ತರಾಗಿದ್ದೇವೆ.

ಸ್ಟಾರ್ಟಪ್‌ ವಿಷನ್‌ ಗ್ರೂಪ್‌ ಅಧ್ಯಕ್ಷ ಪ್ರಶಾಂತ್‌ ಪ್ರಕಾಶ್‌

BTS 2022

ಇಲ್ಲಿವರೆಗೆ ದೇಶದ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಕಾರ್ಯನಿರ್ವಹಿಸುತ್ತಿರುವ ಸ್ಟಾರ್ಟಪ್‌ಗಳು ಮುಂದಿನ 3-5 ವರ್ಷದಲ್ಲಿ ವಿಶ್ವದ ಅನೇಕ ಸಮಸ್ಯೆಗಳನ್ನು ಪರಿಹರಿಸುತ್ತವೆ. ಇದೀಗ ಹೆಚ್ಚಿನ ಸಂಖ್ಯೆಯಲ್ಲಿರುವ ಸ್ಟಾರ್ಟಪ್‌ಗಳು ಮುಂದಿನ 3-5 ವರ್ಷದಲ್ಲಿ ಲಾಭದಾಯಕವಾಗಲಿವೆ. ನೂರು ಯೂನಿಕಾರ್ನ್‌ಗಳಲ್ಲಿ ಕನಿಷ್ಟ 25 ಐಪಿಒಗೆ ತೆರಳುತ್ತವೆ. ಹೂಡಿಕೆದಾರರಿಗೆ ಇವುಗಳು ಹಣವನ್ನು ಹಿಂದಿರುಗಿಸಿ ನೀಡುತ್ತವೆ. ಇಲ್ಲಿವರೆಗೆ ಸ್ಟಾರ್ಟಪ್‌ಗಳು ಹೆಚ್ಚಾಗಿ ನಗರದ ವಿಚಾರಗಳನ್ನೇ ಕೇಂದ್ರೀಕೃತವಾಗಿಸಿವೆ. ಮುಂದಿನ ಐದು ವರ್ಷದಲ್ಲಿ, ನಮ್ಮ ರೈತರು ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಲು ಸ್ಟಾರ್ಟಪ್‌ಗಳು ಸಹಾಯಕವಾಗಲಿವೆ.

ಐಟಿ ವಿಷನ್‌ ಗ್ರೂಪ್‌ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣನ್‌

BTS 2022

ಕೋವಿಡ್‌ ಸಮಯದಲ್ಲಿ ಡಿಜಿಟಲೀಕರಣ ವೇಗ ಪಡೆಯಿತು. ತಾವು ಯಾವುದೇ ಆಘಾತವನ್ನೂ ಎದುರಿಸಬಲ್ಲೆವು ಎನ್ನುವುದನ್ನು ಭಾರತೀಯ ತಂತ್ರಜ್ಞಾನ ಕಂಪನಿಗಳು ಸಾಬೀತುಪಡಿಸಿದವು. ಈಗಾಗಲೆ ಐಟಿ ಸೇವಾ ಸಂಸ್ಥೆಗಳು ಬೆಂಗಳೂರಿನಿಂದ ಹೊರಗೆ ಕೇಂದ್ರಗಳನ್ನು ಆರಂಭಿಸುತ್ತಿವೆ. ಮುಂದಿನ ದಿನಗಳಲ್ಲಿ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿರಲಿವೆ. ಐಟಿ ಕಂಪನಿಯು 8-10% ವೇಗದಲ್ಲಿ ಬೆಳವಣಿಗೆ ಕಾಣಲಿದೆ, ಇದು ಸಣ್ಣ ವಿಚಾರವಲ್ಲ

ಬಿಟಿ ವಿಷನ್‌ ಗ್ರೂಪ್‌ ಅಧ್ಯಕ್ಷೆ ಕಿರಣ್‌ ಮಜುಮ್‌ದಾರ್‌ ಷಾ

BTS 2022

2025ರ ವೇಳೆಗೆ 10 ಸಾವಿರ ಕೋಟಿ ಡಾಲರ್‌ ಗಾತ್ರದ ಬಯೋ ಟೆಕ್ನಾಲಜಿ ಆರ್ಥಿಕತೆಯಾಗುವತ್ತ ಮುನ್ನುಗ್ಗುತ್ತಿದ್ದೇವೆ. ಕೃಷಿಯಲ್ಲಿ ಸುಸ್ಥಿರತೆ ತರುವುದೇ ಬಯೋ ಆರ್ಥಿಕತೆ. ಇಂದು ಬಯೋ ಟೆಕ್ನಾಲಜಿಯಿಂದಾಗಿ ಅನೇಕ ಸಮಸ್ಯೆಗಳಿಗೆ ಪರಿಹಾರ ದೊರಕುತ್ತಿದೆ. ಕೃತಕ ಬುದ್ಧಿಮತ್ತೆಯ ಬಳಕೆಯಿಂದಾಗಿ ಮತ್ತಷ್ಟು ವಿಸ್ತಾರವಾದ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಐಟಿ ಹಾಗೂ ಬಿಟಿ ಒಟ್ಟೊಟ್ಟಿಗೆ ಕಾರ್ಯನಿರ್ವಹಿಸುತ್ತಿರುವುದು ವಿಶೇಷ.

ಇದನ್ನೂ ಓದಿ | BTS 2022 | ಭಾರತದ ತಂತ್ರಜ್ಞಾನ ಅಭಿವೃದ್ಧಿಗೆ ಬೆಂಗಳೂರಿನ ಕೊಡುಗೆ ಗಣನೀಯ: ಪ್ರಧಾನಿ ಮೋದಿ ಶ್ಲಾಘನೆ

Continue Reading
Advertisement
Dog Attack in raichur
ರಾಯಚೂರು2 mins ago

Dog Attack: ಆಟವಾಡುತ್ತಿದ್ದವಳ ಕಿತ್ತು ತಿಂದ ಬೀದಿ ನಾಯಿ; ರಕ್ತಸ್ರಾವವಾಗಿ 4 ವರ್ಷದ ಬಾಲಕಿ ಸಾವು

jain monk samadhi sena chikkodi sallekhana
ಚಿಕ್ಕೋಡಿ9 mins ago

Sallekhana: ಸಲ್ಲೇಖನ ವ್ರತ ಸ್ವೀಕರಿಸಿ ಸಮಾಧಿಸೇನ ಮುನಿ ಜಿನೈಕ್ಯ

Viral Video
ವೈರಲ್ ನ್ಯೂಸ್15 mins ago

Viral Video: ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌; ವಿಡಿಯೋ ವೈರಲ್‌

Prashant Kishor
Lok Sabha Election 202421 mins ago

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Cannes 2024 Sonam Kapoor dubs this outfit the best at Cannes this year
ಬಾಲಿವುಡ್40 mins ago

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

cisf soldier death raichur
ಕ್ರೈಂ58 mins ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್1 hour ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್1 hour ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ1 hour ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ2 hours ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌