SEBI : ಸೆಬಿಯಿಂದ ಐಪಿಒ ಕ್ಲಿಯರೆನ್ಸ್‌ ನಿಯಮಾವಳಿ ಬಿಗಿ, 6 ಕಂಪನಿಗಳ ಅರ್ಜಿ ವಾಪಸ್ - Vistara News

ಪ್ರಮುಖ ಸುದ್ದಿ

SEBI : ಸೆಬಿಯಿಂದ ಐಪಿಒ ಕ್ಲಿಯರೆನ್ಸ್‌ ನಿಯಮಾವಳಿ ಬಿಗಿ, 6 ಕಂಪನಿಗಳ ಅರ್ಜಿ ವಾಪಸ್

ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ ಐಪಿಒ ನಿಯಮಗಳನ್ನು ಬಿಗಿಗೊಳಿಸಿದ್ದು, ಇತ್ತೀಎಗೆ 6 ಕಂಪನಿಗಳ (SEBI) ಐಪಿಒ ಅರ್ಜಿಗಳನ್ನು ಹಿಂತಿರುಗಿಸಿದೆ.

VISTARANEWS.COM


on

bse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಪೇಟಿಎಂ ಐಪಿಒ ವೈಫಲ್ಯವಾದ ಬಳಿಕ ಮಾರುಕಟ್ಟೆ ನಿಯಂತ್ರಕ ಸೆಬಿ ಆರಂಭಿಕ ಷೇರು ಬಿಡುಗಡೆ (ಐಪಿಒ) ಕುರಿತ ನಿಯಮಾವಳಿಗಳನ್ನು ಬಿಗಿಗೊಳಿಸಿದೆ. (IPO) 6 ಕಂಪನಿಗಳ ಐಪಿಒ ಅರ್ಜಿಗಳನ್ನು ಹಿಂತಿರುಗಿಸಿದೆ. ಓಯೊ ಆನ್‌ಲೈನ್‌ ಹೋಟೆಲ್‌ ಸೇವೆ ಸರಣಿ ಕಂಪನಿಯ ಐಪಿಒ ಅರ್ಜಿಯನ್ನು ಎರಡು ತಿಂಗಳಿನ ಹಿಂದೆ ಹಿಂತಿರುಗಿಸಲಾಗಿತ್ತು. ಮತ್ತೊಮ್ಮೆ ಕರಡು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಓಯೋ ಹೊರತುಪಡಿಸಿ ಗೋ ಡಿಜಿಟ್‌ ಜನರಲ್‌ ಇನ್ಷೂರೆನ್ಸ್‌, ಲಾವಾ ಇಂಟರ್‌ನ್ಯಾಶನಲ್‌, ಪೇಮೇಟ್‌ ಇಂಡಿಯಾ, ಫಿನ್‌ಕೇರ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ ಇಂಡಿಯಾ, ಬಿವಿಜಹಿ ಲಿಸಿಸ್‌ ಅರ್ಜಿಯನ್ನು ಹಿಂತಿರುಗಿಸಲಾಗಿದೆ. ಈ ಕಂಪನಿಗಳು ಒಟ್ಟಾರೆ 12,500 ಕೋಟಿ ರೂ. ಐಪಿಒ ನಡೆಸಲು ಉದ್ದೇಶಿಸಿತ್ತು.

ಹೀಗಿದ್ದರೂ, ಹೂಡಿಕೆದಾರರು ಹಣ ಕಳೆದುಕೊಳ್ಳದಂತೆ ತಡೆಯಲು ಸೆಬಿ ಇದೀಗ ನಿಗಾ ವಹಿಸಿದೆ. ಐಪಿಒಗೆ ಅನುಮತಿ ನೀಡುವುದಕ್ಕೆ ಮುನ್ನ ಕೂಲಂಕಷ ಪರಿಶೀಲನೆಗೆ ಮುಂದಾಗಿದೆ. ಪೇಟಿಎಂ 2021ರಲ್ಲಿ 18300 ಕೋಟಿ ರೂ. ಗಾತ್ರದ ಐಪಿಒ ನಡೆಸಿತ್ತು. ಆದರೆ ಈಗಲೂ ಬಿಡುಗಡೆಯ ದರಲ್ಲಿಂತ 72% ಕಡಿಮೆ ದರದಲ್ಲಿ ಷೇರು ವಹಿವಾಟು ನಡೆಸುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Tamannaah Bhatia: ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ; ನಟಿ ತಮನ್ನಾಗೆ ಸಮನ್ಸ್‌!

Tamannaah Bhatia: ಏಪ್ರಿಲ್ 23ರಂದು ನಟ ಸಂಜಯ್ ದತ್ ಅವರಿಗೂ ಈ ಸಂಬಂಧ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಹಾಜರಾಗಿರಲಿಲ್ಲ. ತಾವು ಭಾರತದಲ್ಲಿ ಇಲ್ಲ ಎಂದು ವಿಚಾರಣೆಗೆ ಹಾಜಾರಾಗಲು ಹೊಸ ಡೇಟ್‌ ನೀಡಲು ಕೋರಿದ್ದರು. ಇದೀಗ ನಟಿ ತಮನ್ನಾಗೆ ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಆದೇಶ ನೀಡಲಾಗಿದೆ ಎನ್ನಲಾಗಿದೆ.

VISTARANEWS.COM


on

Tamannaah Bhatia Summoned in Illegal IPL Streaming Case
Koo

ಮುಂಬೈ: ಫೇರ್‌ಪ್ಲೇ ಆ್ಯಪ್‌ನಲ್ಲಿ ಅಕ್ರಮ ಐಪಿಎಲ್ ಪಂದ್ಯಗಳ ಸ್ಟ್ರೀಮಿಂಗ್ (Illegal IPL Streaming Case) ಪ್ರಕರಣದಲ್ಲಿ ಟಾಲಿವುಡ್‌ ನಟಿ ತಮನ್ನಾ ಭಾಟಿಯಾ (Tamannaah Bhatia) ಹೆಸರು ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯನ್ನು ಮಹಾರಾಷ್ಟ್ರ ಸೈಬರ್ ಸೆಲ್ (Maharashtra Cyber Cell ) ವಿಚಾರಣೆಗೆ ಕರೆಸಿದೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಆದೇಶ ನೀಡಲಾಗಿದೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಹೆಸರು ಕೂಡ ಈ ಮುಂಚೆ ಕೇಳಿಬಂದಿತ್ತು.

ಫೇರ್‌ಪ್ಲೇ ಆ್ಯಪ್‌ನಲ್ಲಿ (Fairplay App) ಐಪಿಎಲ್ 2023ರ ಅಕ್ರಮ ಸ್ಟ್ರೀಮಿಂಗ್‌ಗೆ ಸಂಬಂಧಿಸಿದಂತೆ ವಯಾಕಾಮ್‌ಗೆ ಕೋಟ್ಯಂತರ ರೂ. ನಷ್ಟ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸೈಬರ್ ಸೆಲ್‌ ನಟಿ ತಮನ್ನಾ ಭಾಟಿಯಾ ಅವರನ್ನು ವಿಚಾರಣೆಗೆ ಕರೆದಿದೆ. ಏಪ್ರಿಲ್ 29ರಂದು ಮಹಾರಾಷ್ಟ್ರ ಸೈಬರ್‌ಗೆ ಹಾಜರಾಗುವಂತೆ ನಟಿಗೆ ತಿಳಿಸಲಾಗಿದೆ ಎಂದು ಎಎನ್‌ಐ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಏಪ್ರಿಲ್ 23ರಂದು ನಟ ಸಂಜಯ್ ದತ್ ಅವರಿಗೂ ಈ ಸಂಬಂಧ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಹಾಜರಾಗಿರಲಿಲ್ಲ. ತಾವು ಭಾರತದಲ್ಲಿ ಇಲ್ಲ ಎಂದು ವಿಚಾರಣೆಗೆ ಹಾಜಾರಾಗಲು ಹೊಸ ಡೇಟ್‌ ನೀಡಲು ಕೋರಿದ್ದರು.

ಇದನ್ನೂ ಓದಿ: Tamannaah Bhatia : ಪಾಕ್​ ಕ್ರಿಕೆಟಿಗ ರಜಾಕ್ ಜತೆ ಚಿನ್ನದ ಮಳಿಗೆಗೆ ಹೋದ ಕಹಿ ಘಟನೆ ನೆನೆದ ತಮನ್ನಾ

ಫೇರ್ ಪ್ಲೇ ಪ್ಲಾಟ್‌ಫಾರ್ಮ್ ಬೆಟ್ಟಿಂಗ್‌ ಅಪ್ಲಿಕೇಶನ್‌ ಆಗಿದೆ. ವಯಾಕಾಮ್‌ 18 ಐಪಿಎಲ್‌ ಅಧಿಕೃತ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಬೆಟ್ಟಿಂಗ್ ಅಪ್ಲಿಕೇಶನ್ ಫೇರ್ ಪ್ಲೇ ಪ್ಲಾಟ್‌ಫಾರ್ಮ್ ಅಕ್ರಮವಾಗಿ ಪಂದ್ಯಗಳನ್ನು ಸ್ಟ್ರೀಮ್ ಮಾಡುತ್ತಿದೆ ಎಂದು ವಯಾಕಾಮ್‌ ಎಫ್‌ಐಆರ್‌ ದಾಖಲಿಸಿತ್ತು . ವಯಾಕಾಮ್‌ 18ಗೆ 100 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ವರದಿಯಾಗಿದೆ. ಎಫ್‌ಐಆರ್ ದಾಖಲಿಸಿದ ಬಳಿಕ ಬಾದ್‌ಶಾ, ಸಂಜಯ್ ದತ್, ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ತಮನ್ನಾ ಸೇರಿದಂತೆ ಹಲವಾರು ತಾರೆಯರನ್ನು ವಿಚಾರಣೆಗೆ ಕರೆಯಲಾಯಿದೆ ಎಂದು ವರದಿಯಾಗಿದೆ. ಡಿಸೆಂಬರ್ 2023 ರಲ್ಲಿ, ಬೆಟ್ಟಿಂಗ್ ಅಪ್ಲಿಕೇಶನ್‌ನ ಉದ್ಯೋಗಿಯನ್ನು ಬಂಧಿಸಲಾಯಿತ್ತು.

Continue Reading

ದೇಶ

Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Kotak Bank: ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಿಸುವುದು, ಅವರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸುವುದಕ್ಕೆ ಆರ್‌ಬಿಐ ನಿರ್ಬಂಧ ಹೇರಿರುವ ಕಾರಣ ಹಳೆಯ ಗ್ರಾಹಕರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಆರ್‌ಬಿಐ ತಿಳಿಸಿದೆ. ಆದರೆ, ಆರ್‌ಬಿಐ ನಿರ್ಬಂಧದ ಹಿನ್ನೆಲೆಯಲ್ಲಿ ಗುರುವಾರ ಕೊಟಕ್‌ ಮಹೀಂದ್ರಾ ಬ್ಯಾಂಕ್‌ನ ಷೇರುಗಳ ಮೌಲ್ಯವು ಶೇ.10ರಷ್ಟು ಕುಸಿತ ಕಂಡಿದೆ.

VISTARANEWS.COM


on

Kotak Bank
Koo

ಮುಂಬೈ: ಸುರಕ್ಷತಾ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಹೊಸ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆ ಒದಗಿಸಬಾರದು ಎಂದು ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ (Kotak Mahindra Bank) ಆರ್‌ಬಿಐ ನಿರ್ಬಂಧ ವಿಧಿಸಿದೆ. ಇದರ ಬೆನ್ನಲ್ಲೇ, ಕೊಟಕ್‌ ಮಹೀಂದ್ರಾ ಬ್ಯಾಂಕ್‌ನ ಷೇರುಗಳ (Kotak Bank Shares) ಮೌಲ್ಯವು ಗುರುವಾರ (ಏಪ್ರಿಲ್‌ 25) ಶೇ.10ರಷ್ಟು ಕುಸಿತವಾಗಿದೆ. ಇದರಿಂದ ಹೂಡಿಕೆದಾರರಿಗೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಗುರುವಾರ ಷೇರುಪೇಟೆಯಲ್ಲಿ ವಹಿವಾಟು ಆರಂಭವಾಗುತ್ತಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಷೇರುಗಳ ಮೌಲ್ಯವು ಕುಸಿಯುತ್ತ ಹೋಯಿತು. ಒಟ್ಟು ಶೇ.10ರಷ್ಟು ಮೌಲ್ಯ ಕುಸಿತ ಕಂಡಿದ್ದು, ಬಿಎಸ್‌ಇಯಲ್ಲಿ ಕೊಟಕ್‌ ಬ್ಯಾಂಕ್‌ನ ಒಂದು ಷೇರಿನ ಮೌಲ್ಯವು 1,658.75 ರೂ.ಗೆ ಕುಸಿತವಾಗಿದೆ. ಅಷ್ಟೇ ಅಲ್ಲ, ಆರ್‌ಬಿಐ ನಿರ್ಬಂಧದಿಂದ ಕೊಟಕ್‌ ಮಹಿಂದ್ರಾ ಬ್ಯಾಂಕ್‌ಗೆ ಮುಂದಿನ ದಿನಗಳಲ್ಲಿ ಭಾರಿ ನಷ್ಟವಾಗಲಿದೆ. ಬ್ಯಾಂಕ್‌ ಏಳಿಗೆ, ಹೊಸ ಗ್ರಾಹಕರನ್ನು ಸೆಳೆಯುವಲ್ಲಿಯೂ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಆರ್‌ಬಿಐ ನಿರ್ಬಂಧಕ್ಕೆ ಕಾರಣ ಏನು?

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಗ್ರಾಹಕರು ಆನ್‌ಲೈನ್‌ ಮೂಲಕ ವಹಿವಾಟು ನಡೆಸಲು ಬ್ಯಾಂಕ್‌ ಸರಿಯಾದ ಸುರಕ್ಷತೆ ಒದಗಿಸಿಲ್ಲ. 2022 ಹಾಗೂ 2023ರಲ್ಲಿ ಐಟಿ ಪರಿಶೀಲನೆ ಕುರಿತು ಆರ್‌ಬಿಐ ಆತಂಕ ವ್ಯಕ್ತಪಡಿಸಿದರೂ ಸುರಕ್ಷತೆ ನೀಡುವಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ವಿಫಲವಾಗಿದೆ. ಬ್ಯಾಂಕ್‌ನ ಐಟಿ ಮೂಲ ಸೌಕರ್ಯ, ಐಟಿ ನಿರ್ವಹಣೆ, ಪ್ಯಾಚ್‌ ಮತ್ತು ಚೇಂಜ್‌ ಮ್ಯಾನೇಜ್‌ಮೆಂಟ್‌, ಬಳಕೆದಾರರ ಅನುಮತಿ ನಿರ್ವಹಣೆ, ವೆಂಡರ್‌ ರಿಸ್ಕ್‌ ಮ್ಯಾನೇಜ್‌ಮೆಂಟ್, ಡೇಟಾ ಸೆಕ್ಯುರಿಟಿ ಸೇರಿ ಹಲವು ಸುರಕ್ಷತೆಗಳನ್ನು ಒದಗಿಸುವಲ್ಲಿ ಬ್ಯಾಂಕ್‌ ವಿಫಲವಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಇದೇ ಕಾರಣಕ್ಕಾಗಿ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Continue Reading

ದೇಶ

ಇದ್ದರೂ ಜತೆಗೆ, ಸತ್ತರೂ ಜತೆಗೆ; ಅಪಘಾತದಲ್ಲಿ ಪತ್ನಿ ಸಾವು, ನೊಂದ ಪತಿ ನೇಣಿಗೆ ಶರಣು

ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸೋಮವಾರ (ಏಪ್ರಿಲ್‌ 22) ಪತ್ನಿಯು ಅಪಘಾತದಲ್ಲಿ ತೀರಿಕೊಂಡಿದ್ದಳು. ಇದರಿಂದ ವ್ಯಕ್ತಿಯು ತೀವ್ರ ಆಘಾತಕ್ಕೊಳಗಾಗಿದ್ದ. ಪತ್ನಿಯೇ ಇಲ್ಲದ ಜೀವನ ಏಕೆ ಎಂದು ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

Break Up
Koo

ಲಖನೌ: ಮದುವೆಯಾದ ಎರಡು-ಮೂರು ತಿಂಗಳಿಗೇ ವಿಚ್ಛೇದನ (Divorce) ಪಡೆಯುವವರಿದ್ದಾರೆ. ಪ್ರೀತಿಸಿ ಮದುವೆಯಾದವರೇ ಅನುಸರಿಸಿಕೊಂಡು ಹೋಗದೆ, ದಾಂಪತ್ಯ ಮುರಿದುಕೊಳ್ಳುತ್ತಿದ್ದಾರೆ. ಬದಲಾದ ಕಾಲಘಟ್ಟ, ಯೋಚನೆ, ಸಂಪ್ರದಾಯ, ಅಹಂಕಾರ ಇದಕ್ಕೆ ಕಾರಣಗಳು ಇರಬಹುದು. ಆದರೆ, ಉತ್ತರ ಪ್ರದೇಶದಲ್ಲೊಬ್ಬ (Uttar Pradesh) ವ್ಯಕ್ತಿಯು, ಅಪಘಾತದಲ್ಲಿ ಪತ್ನಿ ತೀರಿಕೊಂಡ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್‌ನೋಟ್‌ ಬರೆದಿರುವ ಆತ, “ನಾವು ಇದ್ದರೂ ಜತೆಗೇ, ಸತ್ತರೂ ಜತೆಗೇ” ಎಂಬುದಾಗಿ ಬರೆದಿದ್ದಾರೆ.

ಆರು ತಿಂಗಳ ಹಿಂದೆ 36 ವರ್ಷದ ಯೋಗೇಶ್‌ ಕುಮಾರ್‌ ಹಾಗೂ 28 ವರ್ಷದ ಮಣಿಕರ್ಣಿಕಾ ಕುಮಾರಿ ಮದುವೆಯಾಗಿದ್ದರು. ಇಬ್ಬರೂ ಉತ್ತರ ಪ್ರದೇಶದ ಹರ್ದೋಯಿಯಲ್ಲಿ ನೆಲೆಸಿದ್ದರು. ಮಣಿಕರ್ಣಿಕಾ ಕುಮಾರಿ ನರ್ಸ್‌ ಆಗಿದ್ದರು. ಯೋಗೇಶ್‌ ಕುಮಾರ್‌ ಟೀಚರ್‌ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರ ದಾಂಪತ್ಯವೂ ಸುಮಧುರವಾಗಿತ್ತು. ಆದರೆ, ಕಳೆದ ಸೋಮವಾರ (ಏಪ್ರಿಲ್‌ 22) ಮಣಿಕರ್ಣಿಕಾ ಕುಮಾರಿ ಅವರು ತಡಿಯಾವಾಣ ಆರೋಗ್ಯ ಕೇಂದ್ರಕ್ಕೆ ತೆರಳುವಾಗ ಅಪರಿಚಿತ ವಾಹನವು ಮಣಿಕರ್ಣಿಕಾ ಕುಮಾರಿ ಅವರ ಸ್ಕೂಟಿಗೆ ಡಿಕ್ಕಿಯಾಗಿತ್ತು.

ಲಖನೌ-ಹರ್ದೋಯಿ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಣಿಕರ್ಣಿಕಾ ಕುಮಾರಿ ಮೃತಪಟ್ಟಿದ್ದರು. “ಸುರ್ಸಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಮಣಿಕರ್ಣಿಕಾ ಕುಮಾರಿ ಅವರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಇದಾದ ಬಳಿಕ ಅವರು ಮೃತಪಟ್ಟಿದ್ದರು. ಮಣಿಕರ್ಣಿಕಾ ಅವರ ಕಚೇರಿಯ ಗುರುತಿನ ಚೀಟಿ ಆಧಾರದ ಮೇಲೆ ಅವರ ಪತಿಗೆ ಕರೆ ಮಾಡಿ ವಿಷಯ ತಿಳಿಸಲಾಯಿತು” ಎಂದು ಸುರ್ಸಾ ಎಸ್‌ಎಚ್‌ಒ ಇಂದ್ರೇಶ್‌ ಕುಮಾರ್‌ ಯಾದವ್‌ ಮಾಹಿತಿ ನೀಡಿದ್ದಾರೆ.

ಡೆತ್‌ನೋಟ್‌ನಲ್ಲಿ ಏನಿದೆ?

ಪತ್ನಿಯ ಸಾವಿನಿಂದ ನೊಂದ ಪತಿಯು ಮನೆಗೆ ಬಂದವರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಬಳಿ ಡೆತ್‌ನೋಟ್‌ ಪತ್ತೆಯಾಗಿದ್ದು, “ನಾವು ಇದ್ದರೂ ಜತೆಯಾಗಿಯೇ, ಸತ್ತರೂ ಜತೆಯಾಗಿಯೇ” ಎಂಬುದಾಗಿ ಬರೆದಿದ್ದಾರೆ. ಪತ್ನಿಯ ವಸ್ತುಗಳನ್ನು ಮನೆಗೆ ತೆಗೆದುಕೊಂಡು ಹೋದ ಯೋಗೇಶ್‌ ಕುಮಾರ್‌ ಬಾಗಿಲು ಹಾಕಿಕೊಂಡಿದ್ದಾರೆ. ಎಷ್ಟು ಹೊತ್ತಾದರೂ ಬಾಗಿಲು ತೆರೆಯದ ಕಾರಣ ಪಕ್ಕದ ಮನೆಯವರು ಹೋಗಿ ನೋಡಿದಾಗ ಯೋಗೇಶ್‌ ಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಇದನ್ನೂ ಓದಿ: Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

Continue Reading

ಕ್ರೀಡೆ

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾದ ಆರ್​ಸಿಬಿ

IPL 2024: ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ 250ನೇ ಐಪಿಎಲ್​ ಪಂದ್ಯವನ್ನಾಡಿದ ದ್ವಿತೀಯ ತಂಡ ಎಂಬ ದಾಖಲೆ ಬರೆಯಲಿದೆ. ಮುಂಬೈ ಇಂಡಿಯನ್ಸ್​ ಮೊದಲ ತಂಡ

VISTARANEWS.COM


on

IPL 2024
Koo

ಹೈದರಾಬಾದ್​: ಇಂದು(ಗುರುವಾರ) ನಡೆಯುವ ಐಪಿಎಲ್(IPL 2024)​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bangalore) ಮತ್ತು ಸನ್​ರೈಸರ್ಸ್​ ಹೈದರಾಬಾದ್​(Sunrisers Hyderabad ) ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯ ಆರ್​ಸಿಬಿಗೆ ಸ್ಮರಣೀಯವಾಗಿದೆ. ಇದು ಆರ್​ಸಿಗೆ(RCB) 250ನೇ ಐಪಿಎಲ್(RCB 250th IPL match)​ ಪಂದ್ಯವಾಗಿದೆ. ಈ ಸಾಧನೆ ಮಾಡಿದ ದ್ವಿತೀಯ ತಂಡ ಎಂಬ ಹೆಗ್ಗಳಿಕೆ ಆರ್​ಸಿಬಿ ಪಾತ್ರವಾಗಲಿದೆ.

“ಇಂದು ಆರ್​ಸಿಬಿಗೆ ಪ್ರಮುಖ ದಿನ. ನಮ್ಮ 250ನೇ ನೇ ಐಪಿಎಲ್​ ಪಂದ್ಯ! ಇದನ್ನು ಸ್ಮರಣೀಯವಾಗಿಸಲು ನಿಮ್ಮೆಲ್ಲರ ಹಾರೈಕೆಗಳು ಮತ್ತು ಬೆಂಬಲವನ್ನು ನಾವು ನಿರೀಕ್ಷಿಸುತ್ತಿದ್ದೇವೆ” ಎಂದು ಆರ್​ಸಿಬಿ ಫ್ರಾಂಚೈಸಿ ಇದುವರೆ ಆರ್​ಸಿಬಿ ತಂಡದ ಪರ ಆಡಿದ ಕೆಲ ಸ್ಟಾರ್​ ಆಟಗಾರರ ಫೋಟೊ ಕೊಲಾಜ್​ ಮಾಡಿ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್​ ಮಾತ್ರ 250 ಪಂದ್ಯಗಳನ್ನಾಡಿದ ಸಾಧನೆ ಮಾಡಿದೆ. ಅಲ್ಲದೆ ಅತ್ಯಧಿಕ ಐಪಿಎಲ್​ ಪಂದ್ಯವನ್ನಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಯನ್ನು ಕೂಡ ಹೊಂದಿದೆ. ಮುಂಬೈ ಇದುವರೆಗೆ 255* ಐಪಿಎಲ್​ ಪಂದ್ಯಗಳನ್ನಾಡಿದೆ. ಆರ್​ಸಿಬಿ 250 ಪಂದ್ಯಗಳನ್ನಾಡಿದ 2ನೇ ತಂಡ ಎನಿಸಿಕೊಳ್ಳಲಿದೆ. ದುರಾದೃಷ್ಟವೆಂದರೆ ಇಷ್ಟು ಪಂದ್ಯಗಳನ್ನಾಡಿದರೂ ಕೂಡ ತಂಡ ಒಮ್ಮೆಯೂ ಕಪ್​ ಗೆಲ್ಲುವಲ್ಲಿ ಯಶಸ್ವಿಯಾಗಿಲ್ಲ. ಪ್ರತಿ ಐಪಿಎಲ್‌(IPL 2024) ಆರಂಭದ ಸಂದರ್ಭದಲ್ಲಿಯೂ ಆರ್‌ಸಿಬಿ ಒಂದು ಕ್ರೇಜ್‌ ಹುಟ್ಟಿಸುತ್ತದೆ. ದುರಾದೃಷ್ಟವಶಾತ್‌ ಈ ಕ್ರೇಜ್‌ ಬಹುಕಾಲ ಉಳಿಯುವುದಿಲ್ಲ. ಈ ಬಾರಿಯೂ ಅದೇ ರಾಗ ಅದೇ ಹಾಡು. ಅದರಲ್ಲಿಯೂ ಈ ಬಾರಿ ಹೊಸ ಅಧ್ಯಾಯ ಎಂದು ಆರ್‌ಸಿಬಿ ಹವಾ ಸೃಷ್ಟಿಸಿತ್ತು. ಆದರೆ ಇದೀಗ ಕ್ಷಮಿಸಿ ನಮ್ಮದು ಮುದಿದು ಹೋದ ಅಧ್ಯಾಯ ಎನ್ನುವ ಹಂತಕ್ಕೆ ತಲುಪಿದೆ.

ಇದನ್ನೂ ಓದಿ IPL 2024: ದುಬಾರಿ ರನ್​ ನೀಡಿ ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ಮೋಹಿತ್​ ಶರ್ಮ

ಅತಿ ಹೆಚ್ಚು ಐಪಿಎಲ್​ ಪಂದ್ಯವನ್ನಾಡಿದ ಟಾಪ್​ 5 ತಂಡಗಳು


ಮುಂಬೈ ಇಂಡಿಯನ್ಸ್​-255* ಪಂದ್ಯ

ರಾಯಲ್​ ಚಾಲೆಂಜರ್ಸ್​ ಬೆಂಗಳೂರು-249* ಪಂದ್ಯ

ಡೆಲ್ಲಿ ಕ್ಯಾಪಿಟಲ್ಸ್​-247*ಪಂದ್ಯ

ಕೋಲ್ಕತ್ತಾ ನೈಟ್​ ರೈಡರ್ಸ್​-244 ಪಂದ್ಯ

ಪಂಜಾಬ್​ ಕಿಂಗ್ಸ್​-240* ಪಂದ್ಯ

ಆರ್​ಸಿಬಿ(RCB) ಈ ಆವೃತ್ತಿಯಲ್ಲಿ ಇದುವರೆಗೆ ಆಡಿದ 8 ಪಂದ್ಯಗಳಲ್ಲಿ 7 ಸೋಲು ಕಂಡು ಪ್ಲೇ ಆಫ್​ ರೇಸ್​ನಿಂದ ಬಹುತೇಕ ಹೊರಬಿದ್ದಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಇಂದು ನಡೆಯವ ಪಂದ್ಯ ಕೇವಲ ಔಪಚಾರಿಕ ಪಂದ್ಯ ಎಂದರೂ ತಪ್ಪಾಗಲಾರದು. ಇನ್ನುಳಿದ ಎಲ್ಲ ಪಂದ್ಯಗಳನ್ನು ಗೆದ್ದರೂ ಕೂಡ ಪ್ಲೇ ಆಫ್​ಗೇರಲು ಸಾಧ್ಯವಿಲ್ಲ. ಪವಾಡ ಸಂಭಿಸಿದರೆ ಮಾತ್ರ ಸಾಧ್ಯ.

ಸಂಭಾವ್ಯ ತಂಡಗಳು


ಆರ್​ಸಿಬಿ:
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜ್ಯಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್,ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಸಿರಾಜ್.

ಸನ್​ರೈಸರ್ಸ್​ ಹೈದರಾಬಾದ್​: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್​, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ , ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್.

Continue Reading
Advertisement
Madhavi Latha
Lok Sabha Election 202449 seconds ago

Kompella Madhavi Latha: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಆಸ್ತಿ ಎಷ್ಟಿದೆ ನೋಡಿ!

Tamannaah Bhatia Summoned in Illegal IPL Streaming Case
South Cinema5 mins ago

Tamannaah Bhatia: ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ; ನಟಿ ತಮನ್ನಾಗೆ ಸಮನ್ಸ್‌!

Kotak Bank
ದೇಶ13 mins ago

Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Samsung India launched the 2nd edition of Samsung Innovation Campus
ದೇಶ22 mins ago

Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

physical abuse women
ಬೆಂಗಳೂರು23 mins ago

Physical abuse : ಬೆಂಗಳೂರಲ್ಲಿ ಯುವತಿ ಕಿಡ್ನ್ಯಾಪ್; ಐವರು ಕಾಮುಕರಿಂದ ಅತ್ಯಾಚಾರ

Voter ID
Lok Sabha Election 202426 mins ago

Voter ID: ವೋಟರ್‌ ಐಡಿ ಕಾರ್ಡ್‌ ಸಿಕ್ಕಿಲ್ಲವೆ? ಡೋಂಟ್‌ ವರಿ. ಈ 12 ದಾಖಲೆಗಳಲ್ಲಿ ಒಂದಿದ್ದರೆ ಸಾಕು!

sahakara nagar robbery case
ಕ್ರೈಂ29 mins ago

Robbery Case: ಮನೆ ಮಾಲೀಕರಿಗೆ ಪಿಸ್ತೂಲ್ ತೋರಿಸಿ 40 ಲಕ್ಷ ರೂ. ದರೋಡೆ

Kiara Advani Joins Salaar 2
ಟಾಲಿವುಡ್38 mins ago

Kiara Advani: ಪ್ರಭಾಸ್ ನಟನೆಯ ʻಸಲಾರ್ 2ʼ ಸಿನಿಮಾದಲ್ಲಿ ಕಿಯಾರಾ ಆಡ್ವಾಣಿ?

IPL 2024
ಕ್ರೀಡೆ54 mins ago

IPL 2024: ಧೋನಿ, ಚೆನ್ನೈ ಪಂದ್ಯ ನೋಡಲು ದೆಹಲಿ ವರೆಗೂ ನಡೆದುಕೊಂಡು ಹೋಗುವೆ ಎಂದ ಶತಾಯುಷಿ ಅಭಿಮಾನಿ; ವಿಡಿಯೊ ವೈರಲ್​

Break Up
ದೇಶ1 hour ago

ಇದ್ದರೂ ಜತೆಗೆ, ಸತ್ತರೂ ಜತೆಗೆ; ಅಪಘಾತದಲ್ಲಿ ಪತ್ನಿ ಸಾವು, ನೊಂದ ಪತಿ ನೇಣಿಗೆ ಶರಣು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌